Tag: highcourt

  • ಇನ್ನಾದ್ರೂ ಕನ್ನಡ ಕಲಿಯಮ್ಮ – ಮಹಿಳೆಗೆ ಕನ್ನಡ ಕಲಿಯಲು ಹೈಕೋರ್ಟ್ ಜಡ್ಜ್ ಸಲಹೆ

    ಇನ್ನಾದ್ರೂ ಕನ್ನಡ ಕಲಿಯಮ್ಮ – ಮಹಿಳೆಗೆ ಕನ್ನಡ ಕಲಿಯಲು ಹೈಕೋರ್ಟ್ ಜಡ್ಜ್ ಸಲಹೆ

    ಬೆಂಗಳೂರು: ಇಲ್ಲೇ ಹುಟ್ಟಿ, ಬೆಳೆದು ಕನ್ನಡ ಕಲಿಯದ ಮುಸ್ಲಿಂ ಮಹಿಳೆಯೊಬ್ಬರಿಗೆ ಕನ್ನಡ ಕಲಿಯುವಂತೆ ಹೈಕೋರ್ಟ್ ನ್ಯಾಯಮೂರ್ತಿ ಸಲಹೆ ನೀಡಿದ್ದಾರೆ.

    ಕೌಟುಂಬಿಕ ಪ್ರಕರಣ ಸಂಬಂಧ ವಿಚಾರಣೆ ವೇಳೆ ಮಹಿಳೆ ಉರ್ದುವಿನಲ್ಲೇ ಉತ್ತರಿಸುತ್ತಿದ್ದರಿಂದ ಬೇಸರ ವ್ಯಕ್ತಪಡಿಸಿದ ಹೈಕೋರ್ಟ್ ನ್ಯಾಯಮೂರ್ತಿ ಅರವಿಂದ ಕುಮಾರ್, `ಕಳೆದ 30 ವರ್ಷಗಳಿಂದ ಕರ್ನಾಟಕದಲ್ಲಿಯೇ ನೆಲೆಸಿದ್ರೂ ಕನ್ನಡ ಭಾಷೆ ಯಾಕೆ ಮಾತನಾಡೋದಿಲ್ಲ..? ಬೇರೆ ರಾಜ್ಯಗಳಿಗೆ ಹೋಗುವ ಕರ್ನಾಟಕದ ಜನ ಅಲ್ಲಿನ ಭಾಷೆ ಕಲಿಯುತ್ತಾರೆ ಅಂತ ವಿಷಾದ ವ್ಯಕ್ತಪಡಿಸಿದರು.

    ಏನಿದು ಪ್ರಕರಣ?: ಬ್ಯಾಟರಾಯನಪುರ ನಿವಾಸಿ ಸಬಿಹಾಬಾನು ಎಂಬವರು ತನ್ನ ಪತಿ ಮತ್ತು ಆತನ ಸಂಬಂಧಿಕರು ವರದಕ್ಷಿಣೆ ಕಿರುಕುಳ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಅಂತ ಕಳೆದ ಮೇ 8ರಂದು ದೂರು ನೀಡಿದ್ದರು. ಮಹಿಳೆಯ ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ವಿರುದ್ಧ ಎಫ್‍ಐಆರ್ ದಾಖಲಿಸಿದ್ದರು.

    ಆದ್ರೆ ಸಬಿಹಾಬಾನು ಅವರ ಪತಿ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿ, ತಮ್ಮ ವಿರುದ್ಧದ ಎಫ್‍ಐಆರ್ ರದ್ದು ಪಡಿಸಲು ಕೋರಿದ್ದರು. ಅಂತೆಯೇ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕ ಸದಸ್ಯ ಪೀಠ ಶುಕ್ರವಾರ ಅರ್ಜಿ ವಿಚಾರಣೆ ನಡೆಸಿತ್ತು. ವಿಚಾರಣೆ ವೇಳೆ ಸಬಿಹಾಬಾನು ಪರ ವಕೀಲ ಬೈರೇಶ್ ಮತ್ತು ಆಕೆಯ ಪತಿ ಪರ ವಕೀಲ ಲಕ್ಷ್ಮೀಕಾಂತ್ ಜಂಟಿಯಾಗಿ ಪ್ರಮಾಣ ಪತ್ರ ಸಲ್ಲಿಸಿ, ದಂಪತಿ ನಡುವಿನ ಕಲಹ ಬಗೆಹರಿದಿದ್ದು, ಒಟ್ಟಿಗೆ ಜೀವನ ನಡೆಸುತ್ತಿದ್ದಾರೆ. ಹೀಗಾಗಿ ದೂರು ನೀಡಿದ್ದ ಸಬಿಹಾಬಾನು ದೂರು ವಾಪಸ್ ಪಡೆಯಲು ತೀರ್ಮಾನಿಸಿದ್ದಾರೆ. ಆದ್ದರಿಂದ ಪತಿ ವಿರುದ್ಧದ ಎಫ್‍ಐಆರ್ ಮತ್ತು ಹೈಕೋರ್ಟ್ ನಲ್ಲಿ ನಡೆಯೋ ವಿಚಾರಣೆ ರದ್ದುಪಡಿಸುವಂತೆ ಮನವಿ ಮಾಡಿದ್ರು.

    ಅಂತೆಯೇ ಪ್ರಮಾಣಪತ್ರ ಪರಿಶೀಲಿಸಿದ ನ್ಯಾಯಮೂರ್ತಿ ಅರವಿಂದ ಕುಮಾರ್, ಕೋರ್ಟ್‍ನಲ್ಲಿ ಹಾಜರಿದ್ದ ಸಬಿಹಾಬಾನು ಅವರನ್ನು ಕರೆದು, ಪತಿ ಹಾಗೂ ಸಂಬಂಧಿಕರ ವಿರುದ್ಧ ದಾಖಲಿಸಿರುವ ದೂರು ಹಿಂಪಡೆಯುತ್ತೀರಾ ಎಂದು ಕನ್ನಡದಲ್ಲಿ ಪ್ರಶ್ನಿಸಿದ್ರು. ಈ ವೇಳೆ ಮಹಿಳೆ ಮರು ಮಾತನಾಡದೆ ಸುಮ್ಮನಿದ್ದರು. ನಾನು ಹೇಳುತ್ತಿರುವುದು ಅರ್ಥವಾಗುತ್ತಿದೆಯೇ ಎಂದು ಮತ್ತೆ ಹಿಂದಿಯಲ್ಲಿ ಪ್ರಶ್ನಿಸಿದ್ರು. ಈ ಸಂದರ್ಭದಲ್ಲಿಯೂ ಮಹಿಳೆ ಸುಮ್ಮನಾಗಿರೋದನ್ನು ಕಂಡ ಜಡ್ಜ್, ನಿಮಗೆ ಯಾವ ಭಾಷೆ ಬರುತ್ತದೆ ಎಂದು ಮತ್ತೂಮ್ಮೆ ಪ್ರಶ್ನಿಸಿದಾಗ ಉರ್ದು ಮಾತ್ರ ಬರುವುದಾಗಿ ಉತ್ತರಿಸಿದ್ರು.

    ಇದರಿಂದ ಬೇಸರಗೊಂಡ ಜಡ್ಜ್, ನೀವು ಇಲ್ಲಿಯೇ ಹುಟ್ಟಿ, ಇಲ್ಲಿಯೇ ಬೆಳೆದು ಕನ್ನಡ ಯಾಕೆ ಕಲಿತಿಲ್ಲ ಅಂತ ಪ್ರಶ್ನಿಸಿದ್ರು. ಈ ವೇಳೆ ಉರ್ದು ತಿಳಿದ ವಕೀಲರೊಬ್ಬರು ನ್ಯಾಯಾಮೂರ್ತಿಗಳು ಏನು ಹೇಳಿದ್ದಾರೆ ಎನ್ನುವುದನ್ನು ಆಕೆಗೆ ತಿಳಿಸಿದರು. ಪ್ರಶ್ನೆಗೆ ಉತ್ತರಿಸಿದ ಮಹಿಳೆ, ನನಗೆ ಕನ್ನಡ ಮಾತನಾಡಲು ಬರೋದಿಲ್ಲ, ಉರ್ದು ಮಾತ್ರ ಬರುತ್ತೆ ಅಂತ ಉರ್ದುವಿನಲ್ಲಿ ಉತ್ತರಿಸಿದ್ದಾರೆ.

    ಕೊನೆಗೆ ನ್ಯಾಯಮೂರ್ತಿ ಅವರು ಮುಸ್ಲಿಂ ಮಹಿಳೆಗೆ ಇನ್ನಾದರೂ ಕನ್ನಡ ಕಲಿಯುವಂತೆ ಮೌಖಿಕ ಸೂಚನೆ ನೀಡಿ ಪ್ರಕರಣವನ್ನು ವಿಲೇವಾರಿ ಮಾಡಿದರು.

  • ಉಡುಪಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಆರೋಪಿಗಳ ಜಾಮೀನಿಗೆ ಸುಪ್ರೀಂ ನಕಾರ

    ಉಡುಪಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಆರೋಪಿಗಳ ಜಾಮೀನಿಗೆ ಸುಪ್ರೀಂ ನಕಾರ

    ನವದೆಹಲಿ: ಉಡುಪಿ ಮೂಲದ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಜಾಮೀನು ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.

    ತನಿಖೆ ಪೂರ್ಣಗೊಳ್ಳುವ ತನಕ ಜಾಮೀನು ನೀಡಲು ಸಾಧ್ಯವಿಲ್ಲ. ಆರು ತಿಂಗಳೊಳಗೆ ತನಿಖೆ ಪುರ್ಣಗೊಳ್ಳದಿದ್ರೆ ಮತ್ತೊಮ್ಮೆ ಜಾಮೀನಿಗೆ ಅರ್ಜಿ ಸಲ್ಲಿಸುವಂತೆ ನ್ಯಾ. ಎಸ್.ಎ. ಬೊಬ್ಡೆ, ನ್ಯಾ ನಾಗೇಶ್ವರ ರಾವ್ ನೇತೃತ್ವದ ದ್ವಿಸದಸ್ಯ ಪೀಠ ಆದೇಶಿಸಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ನೀಡುವ ಕುರಿತು ಆರೋಪಿ ರಾಜೇಶ್ವರಿ, ನವನೀತ್ ಶೆಟ್ಟಿ ಹಾಗೂ ನಿರಂಜನ್ ಭಟ್ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಆದ್ರೆ ಕೋಟ ಇವರ ಅರ್ಜಿಯನ್ನು ವಜಾಗೊಳಿಸಿತ್ತು. ಹೀಗಾಗಿ ಆರೋಪಿಗಳು ಸುಪ್ರೀಂ ಕೋರ್ಟ್ ಗೆ ಜಾಮೀನು ನೀಡುವಂತೆ ಅರ್ಜಿ ಸಲ್ಲಿಸಿದ್ದರು.

    ಏನಿದು ಪ್ರಕರಣ?: ದುಬೈನಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಉಡುಪಿಯ ಭಾಸ್ಕರ್ ಶೆಟ್ಟಿ(52) ಕಳೆದ ವರ್ಷ ಜುಲೈ 28ರಿಂದ ಕಾಣೆಯಾಗಿದ್ದರು. ಈ ಕುರಿತು ಜುಲೈ 29ರಂದು ಭಾಸ್ಕರ್ ಶೆಟ್ಟಿ ತಾಯಿ ಮಣಿಪಾಲ ಪೊಲಿಸರಿಗೆ ದೂರು ನೀಡಿದ್ದರು. ಆದ್ರೆ ಪತಿ ನಾಪತ್ತೆಯಾಗರೋ ಕುರಿತು ಪತ್ನಿ ರಾಜೇಶ್ವರಿ ಹಾಗೂ ಪುತ್ರ ನವನೀತ್ ಶೆಟ್ಟಿ ಯಾವುದೇ ದೂರು ನೀಡದಿರುವುದರಿಂದ ಅನುಮಾನಗೊಂಡ ಪೊಲೀಸರು ಅವರಿಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಪತ್ನಿ ಮಗ ಹಾಗೂ ಮಗನ ಸ್ನೇಹಿತ ನಿರಂಜನ್ ಕೊಲೆ ಮಾಡಿರುವ ಬಗ್ಗೆ ಬೆಳಕಿಗೆ ಬಂದಿತ್ತು.

    ಭಾಸ್ಕರ್ ಶೆಟ್ಟಿ ಅವರನ್ನು ಕೊಲೆಗೈದು ನಂದಳಿಕೆ ಎಂಬಲ್ಲಿ ಹೋಮ ಕುಂಡದಲ್ಲಿ ಹಾಕಿ ಸುಟ್ಟಿದ್ದರು.

    https://www.youtube.com/watch?v=K8JuJykqi_A

    https://www.youtube.com/watch?v=3WMLludJRRU

    https://www.youtube.com/watch?v=VUjoxc2emNs

    https://www.youtube.com/watch?v=kWyQttGrIRc

    https://www.youtube.com/watch?v=2IlEl29Jy7E

    https://www.youtube.com/watch?v=BIdqA1X-RUQ

     

  • ಜಂತಕಲ್ ಮೈನಿಂಗ್ ಕೇಸ್- ಹೈಕೋರ್ಟ್‍ನಲ್ಲಿಂದು ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ

    ಜಂತಕಲ್ ಮೈನಿಂಗ್ ಕೇಸ್- ಹೈಕೋರ್ಟ್‍ನಲ್ಲಿಂದು ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ

    – ಕುಮಾರಸ್ವಾಮಿ ಕಸ್ಟಡಿಗೆ ಎಸ್‍ಐಟಿ ಪ್ಲಾನ್

    ಬೆಂಗಳೂರು: ಜಂತಕಲ್ ಅಕ್ರಮ ಮೈನಿಂಗ್ ಪ್ರಕರಣ ಸಂಬಂಧ ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್‍ನಲ್ಲಿಂದು ನಡೆಯಲಿದೆ.

    ಜಂತಕಲ್ ಅಕ್ರಮ ಮೈನಿಂಗ್ ಪ್ರಕರಣದಲ್ಲಿ ನನ್ನ ಆರೋಪ ಸಾಬೀತುಪಡಿಸಿದ್ರೆ ಆತ್ಮಹತ್ಯೆ ಮಾಡ್ಕೊತೀನಿ ಅಂತ ಎಸ್‍ಐಟಿಗೆ ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಸವಾಲು ಹಾಕಿದ್ರು.

    ಪ್ರಕರಣ ಸಂಬಂಧ ಕುಮಾರಸ್ವಾಮಿಗೆ ನಿರೀಕ್ಷಣಾ ಜಾಮೀನು ನೀಡಲೇಬೇಕು. ಈಗಾಗಲೇ ಇಂತಹದ್ದೇ ಪ್ರಕರಣಗಳಿಗೆ ಕುಮಾರಸ್ವಾಮಿ ಜಾಮೀನಿನ ಮೇಲೆ ಆಚೆ ಇದ್ದಾರೆ. ಇದು ಕೂಡ ಅದೇ ಪ್ರಕರಣ ಹೊಸ ಎಫ್ ಐಆರ್. ಹಾಗಾಗಿ ಜಾಮೀನು ನೀಡಲೇಬೇಕು ಅಂತ ಎಚ್‍ಡಿಕೆ ಪರ ವಕೀಲರು ಪ್ರಬಲ ವಾದ ಮಂಡನೆ ಮಾಡಿದ್ರು.

    ಇದನ್ನೂ ಓದಿ: ಜಂತಕಲ್ ಕೇಸ್: ಆರೋಪ ಸಾಬೀತಾದರೆ ನಾನು ಸಾರ್ವಜನಿಕವಾಗಿ ನೇಣು ಹಾಕಿಕೊಳ್ತೀನಿ: ಎಚ್‍ಡಿಕೆ

    ಇನ್ನು ಕಸ್ಟಡಿಗೆ ತೆಗೆದುಕೊಳ್ಳದೆ ಪ್ರಕರಣದ ವಿಚಾರಣೆಯನ್ನು ಪ್ರಬಲವಾಗಿ ಮುಗಿಸಲು ಸಾಧ್ಯವಿಲ್ಲ. ಆದ್ರಿಂದ ಜಾಮೀನು ಮಂಜೂರು ಮಾಡ್ಬೇಡಿ. ಸುಪ್ರೀಂ ಆದೇಶಕ್ಕೆ ಗೌರವ ಕೊಡಿ ಅಂತಾ ಪಬ್ಲಿಕ್ ಪ್ರಾಸಿಕ್ಯೂಟರ್ ಮನವಿ ಮಾಡಿದ್ರು.

    ಇಂದು ಎಸ್‍ಐಟಿಯಿಂದ ಕುಮಾರಸ್ವಾಮಿಗೆ ಜಾಮೀನು ನೀಡದಂತೆ ಪ್ರಬಲವಾದ ವಾದ ಮಂಡನೆ ಸಾಧ್ಯತೆ ಇದೆ. ಹಾಗಾಗಿ, ಇಂದಿನ ಹೈಕೋರ್ಟ್ ವಿಚಾರಣೆಯತ್ತ ಎಲ್ಲರ ಚಿತ್ತ ನೆಟ್ಟಿದೆ. ಇನ್ನು, ಈ ಎಲ್ಲಾ ಸಂಕಷ್ಟದಿಂದ ಪಾರಾಗುವ ಸಲುವಾಗಿಯೇ ಕುಮಾರಸ್ವಾಮಿ ಧರ್ಮಸ್ಥಳದಲ್ಲಿ ತುಲಾಭಾರ ಮಾಡಿಸಿಕೊಂಡಿದ್ದಾರೆ ಎನ್ನಲಾಗ್ತಿದೆ.

    ಇದನ್ನೂ ಓದಿ: ಜಂತಕಲ್ ಮೈನಿಂಗ್ ಪ್ರಕರಣ- ಹೆಚ್‍ಡಿಕೆಯ ನಿರೀಕ್ಷಣಾ ಜಾಮೀನು ಅವಧಿ ಅಂತ್ಯ

  • ಸ್ಯಾಂಡಲ್‍ವುಡ್ ಮಂದಿಗೆ ನಿನ್ನೆ ಸಿಹಿ, ಇಂದು ಕಹಿ ಸುದ್ದಿ: ಮಲ್ಟಿಪ್ಲೆಕ್ಸ್ ನಲ್ಲಿ ಟಿಕೆಟ್ ದರ ಕಡಿಮೆಯಾಗಿದ್ದು ಯಾಕೆ?

    ಸ್ಯಾಂಡಲ್‍ವುಡ್ ಮಂದಿಗೆ ನಿನ್ನೆ ಸಿಹಿ, ಇಂದು ಕಹಿ ಸುದ್ದಿ: ಮಲ್ಟಿಪ್ಲೆಕ್ಸ್ ನಲ್ಲಿ ಟಿಕೆಟ್ ದರ ಕಡಿಮೆಯಾಗಿದ್ದು ಯಾಕೆ?

    ಬೆಂಗಳೂರು: ಸ್ಯಾಂಡಲ್‍ವುಡ್‍ಗೆ ನಿನ್ನೆ ಸಿಹಿ, ಇಂದು ಕಹಿ ಸುದ್ದಿ ಸಿಕ್ಕಿದೆ. ರಾಜ್ಯ ಸರ್ಕಾರದ ವಿರುದ್ಧ ಮಲ್ಟಿಪ್ಲೆಕ್ಸ್ ಮಾಲೀಕರು ಗರಂ ಆಗಿದ್ದು ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ.

    ಮಲ್ಟಿಪ್ಲೆಕ್ಸ್ ಗಳ ಒಂದು ಸ್ಕ್ರೀನ್‍ನಲ್ಲಿ ಮಧ್ಯಾಹ್ನ 1:30 ರಿಂದ ಸಂಜೆ 7:30 ವರೆಗೆ ಕಡ್ಡಾಯ ಕನ್ನಡ ಸಿನಿಮಾ ಪ್ರದರ್ಶನವಾಗಬೇಕು. ಅಷ್ಟೇ ಅಲ್ಲದೇ ಗರಿಷ್ಠ 200 ರೂ. ಟಿಕೆಟ್ ನಿಗದಿ ಮಾಡಬೇಕೆಂಬ ಸರ್ಕಾರದ ನಿರ್ಧಾರವನ್ನು ಹೈಕೋರ್ಟ್‍ನಲ್ಲಿ ಪ್ರಶ್ನಿಸಲು ಇಂಡಿಯನ್ ಮಲ್ಟಿಪ್ಲೆಕ್ಸ್ ಅಸೋಶಿಯೇಷನ್ ಮುಂದಾಗಿದೆ.

    ರಾಜ್ಯ ಸರ್ಕಾರದ ಬಜೆಟ್‍ನಲ್ಲಿ ಈ ವಿಚಾರ ಪ್ರಸ್ತಾಪವಾದ ಬಳಿಕ ಬುಧವಾರ ಸಂಜೆಯೇ ಮುಂಬೈನಲ್ಲಿ ಸಭೆ ನಡೆಸಿದ ಮಲ್ಟಿಪ್ಲೆಕ್ಸ್ ಮಾಲೀಕರು ಹೈಕೋರ್ಟ್‍ನಲ್ಲಿ ರಿಟ್ ಅರ್ಜಿ ಸಲ್ಲಿಸಿ ಕಾನೂನು ಸಮರ ನಡೆಸಲು ಮುಂದಾಗಿದ್ದಾರೆ.

    ದರ ಕಡಿಮೆಯಾಗಿದ್ದು ಯಾಕೆ?
    ಕರ್ನಾಟಕದಲ್ಲಿ ಮಲ್ಟಿಪ್ಲೆಕ್ಸ್ ಥಿಯೇಟರ್ ಮಾಲೀಕರು ಸಿನಿಮಾಗೆ ಹೆಚ್ಚು ದರದ ಟಿಕೆಟ್ ನಿಗದಿ ಮಾಡುವ ಕಾರಣ ಜನ ಥಿಯೇಟರ್‍ಗೆ ಬರುತ್ತಿಲ್ಲ. ಒಂದೊಂದು ಥಿಯೇಟರ್‍ನಲ್ಲಿ ಬೇರೆ ಬೇರೆ ರೀತಿಯ ದರವಿದೆ. ಹೀಗಾಗಿ ಟಿಕೆಟ್ ದರವನ್ನು ಕಡಿಮೆ ಮಾಡಿ ಏಕರೂಪದ ದರವನ್ನು ತರಬೇಕು ಎಂದು ಆಗ್ರಹಿಸಿ ಜನ ಮತ್ತು ಸಿನಿಮಾ ಕಲಾವಿದರು ಸಾಮಾಜಿಕ ಜಾಲತಾಣದಲ್ಲಿ ಕಳೆದ ವರ್ಷ ಆಂದೋಲನವನ್ನು ನಡೆಸಿದ್ದರು. ತಮಿಳುನಾಡಿನಲ್ಲಿ ಗರಿಷ್ಠ 120 ರೂ. ಟಿಕೆಟ್ ನಿಗದಿಯಾಗಿರುವಾಗ ನಮ್ಮಲ್ಲಿ ಯಾಕೆ ದರವನ್ನು ನಿಗದಿ ಮಾಡಬಾರದು ಎಂದು ಸರ್ಕಾರವನ್ನು ಪ್ರಶ್ನಿಸಿದ್ದರು.

    ಒತ್ತಡ ಜಾಸ್ತಿ ಆಗುತ್ತಿದ್ದಂತೆ ಸರ್ಕಾರ ಈ ಸಮಸ್ಯೆಯ ಬಗ್ಗೆ ಅಧ್ಯಯನ ನಡೆಸಲು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ರಾಜೇಂದ್ರ ಸಿಂಗ್ ಬಾಬು ನೇತೃತ್ವದಲ್ಲಿ ಗಿರೀಶ್ ಕಾಸರವಳ್ಳಿ, ಭಾರತಿ ವಿಷ್ಣುವರ್ಧನ್, ರಾಘವೇಂದ್ರ ರಾಜ್‍ಕುಮಾರ್, ರಾಕ್‍ಲೈನ್ ವೆಂಕಟೇಶ್, ಭಾಷಾ, ಜಯಮಾಲ, ಥಾಮಸ್ ಡಿಸೋಜಾ, ಕೆ ವಿ ಚಂದ್ರಶೇಖರ್ ಮತ್ತು ಗಂಗಾಧರ್ ಮೊದಲಿಯಾರ್ ಅವರುಗಳನ್ನು ಒಳಗೊಂಡ 17 ಜನರ ಸದಸ್ಯರ ಸಮಿತಿಯೊಂದನ್ನು ರಚಿಸಿತ್ತು. ಈ ಸಮಿತಿ ಟಿಕೆಟ್ ದರಕ್ಕೆ ಗರಿಷ್ಠ ಮಿತಿಯನ್ನು ನಿಗದಿಪಡಿಸಬೇಕು ಹಾಗೂ ಪ್ರೈಮ್ ಟೈಂನಲ್ಲಿ ಪ್ರತಿ ಮಲ್ಟಿಪ್ಲೆಕ್ಸ್ ನಲ್ಲಿ ಎರಡು ಕನ್ನಡ ಸಿನೆಮಾಗಳನ್ನು ಕಡ್ಡಾಯವಾಗಿ ತೋರಿಸಲು ನಿಯಮ ಹೇರುವಂತೆ ಸರ್ಕಾರಕ್ಕೆ ವರದಿ ನೀಡಿತ್ತು. ಈ ವರದಿಯನ್ನು ಅನುಷ್ಠಾನಗೊಳಿಸಲು ಸರ್ಕಾರ ಈಗ ಮುಂದಾಗಿದೆ.

    ಸರ್ಕಾರದ ನಿರ್ಧಾರವನ್ನು ಸ್ಯಾಂಡಲ್‍ವುಡ್ ಮಂದಿ ಮತ್ತು ಚಿತ್ರ ವೀಕ್ಷಕರು ಸ್ವಾಗತಿಸಿದ್ದಾರೆ.