Tag: Higher Education Minister GT Deve Gowda

  • ಸರಿಯಾಗಿ ಕೆಲ್ಸ ಮಾಡಿಲ್ಲ ಅಂದ್ರೆ ಬಳ್ಳಾರಿಗೆ ಕಳಿಸ್ತೀನಿ – ಉನ್ನತ ಶಿಕ್ಷಣ ಸಚಿವರ ಖಡಕ್ ಎಚ್ಚರಿಕೆ

    ಸರಿಯಾಗಿ ಕೆಲ್ಸ ಮಾಡಿಲ್ಲ ಅಂದ್ರೆ ಬಳ್ಳಾರಿಗೆ ಕಳಿಸ್ತೀನಿ – ಉನ್ನತ ಶಿಕ್ಷಣ ಸಚಿವರ ಖಡಕ್ ಎಚ್ಚರಿಕೆ

    ಮೈಸೂರು: ಸರಿಯಾಗಿ ಕೆಲಸ ಮಾಡದೆ ಇದ್ದರೆ ಎಲ್ಲರನ್ನೂ ಒಟ್ಟಾಗಿ ಬಳ್ಳಾರಿಗೆ ವರ್ಗಾಯಿಸಿ ಬಿಡುತ್ತೇನೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ.

    ಮೈಸೂರಿನ ಮಹಾರಾಣಿ ಕಾಲೇಜಿಗೆ ಭೇಟಿ ನೀಡಿದ್ದ ಸಚಿವರು, ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳ ಸಮಸ್ಯೆಯನ್ನು ಆಲಿಸಿಲ್ಲ. ಇದೇ ವೇಳೆ ಕಾಲೇಜನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ ಎಂದು ಗರಂ ಆದ್ರು. ಮಹಾರಾಣಿ ಕಾಲೇಜು ಪ್ರತಿಷ್ಠಿತ ಕಾಲೇಜಾಗಿದೆ. ನೀವು ಜವಾಬ್ದಾರಿಯುತ ಅಧಿಕಾರಿಗಳಾಗಿದ್ದೀರಿ ಎಂದು ತರಾಟೆಗೆ ತೆಗೆದು ಕೊಂಡರು.

    ಇದೇ ವೇಳೆ ಅಧಿಕಾರಿಗಳು ಕರ್ತವ್ಯ ನಿರ್ವಹಣೆಯಲ್ಲಿ ಲೋಪವೆಸಗಿದರೆ ಕಠಿಣ ಕ್ರಮಕೈಗೊಳ್ಳುವುದಾಗಿ ತಿಳಿಸಿ, ನೀವು ಹೀಗೆ ಇದ್ದರೆ ಒಬ್ಬರನ್ನು ಬಿಡದಂತೆ ಎಲ್ಲರನ್ನು ಬಳ್ಳಾರಿಗೆ ಕಳುಹಿಸಿ ಬಿಡುತ್ತೇನೆ ಎಂದರು. ಸಚಿವರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆಯನ್ನು ರವಾನಿಸುತ್ತಿದ್ದಂತೆ ಕಾಲೇಜಿನಲ್ಲಿದ್ದ ವಿದ್ಯಾರ್ಥಿನಿಯರು ಚಪ್ಪಾಳೆ ತಟ್ಟಿದರು.

    ಕಾಲೇಜು ವಿದ್ಯಾರ್ಥಿಗಳ ಕುಂದು ಕೊರತೆಗಳನ್ನು ಸ್ವತಃ ಆಲಿಸಿದ ಸಚಿವರು, ಸ್ಥಳದಲ್ಲೇ ಇದಕ್ಕೆ ಕಾರಣರಾದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿ ಸಮಸ್ಯೆ ಬಗೆಹರಿಸುವಂತೆ ಸೂಚಿಸಿದರು. ಅಲ್ಲದೇ ಸರ್ಕಾರ ಕಲ್ಪಿಸಿರುವ ಸೌಲಭ್ಯಗಳನ್ನೇ ಸರಿಯಾಗಿ ನಿರ್ವಹಣೆ ಮಾಡಿಲ್ಲ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

  • ಜಿಟಿಡಿ ಬಾಯಲ್ಲಿ ಅಶ್ಲೀಲ ಪದ ಪ್ರಯೋಗ – ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ

    ಜಿಟಿಡಿ ಬಾಯಲ್ಲಿ ಅಶ್ಲೀಲ ಪದ ಪ್ರಯೋಗ – ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ

    ಮೈಸೂರು: ಉನ್ನತ ಶಿಕ್ಷಣ ಸಚಿವ ಜಿಟಿ ದೇವೇಗೌಡ ಅವರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ಅವ್ಯಾಚ ಶಬ್ದ ಪ್ರಯೋಗ ಮಾಡಿದ್ದು, ನಿಯಮಗಳ ಅನುಸಾರ ಕಾರ್ಯನಿರ್ವಹಿಸಿ ಎಂದು ಎಚ್ಚರಿಕೆ ನೀಡಿದ್ದಾರೆ.

    ಚಾಮುಂಡೇಶ್ವರಿ ಕ್ಷೇತ್ರದ ಲಿಂಗದೇವರಕೊಪ್ಪಲಿನ ಮೈದಾನದಲ್ಲಿ ಏರ್ಪಡಿಸಿದ್ದ ಕೃತಜ್ಞತಾ ಸಮಾವೇಶದಲ್ಲಿ ಅಧಿಕಾರಿಗಳ ಭ್ರಷ್ಟಾಚಾರದ ಕುರಿತು ತಮ್ಮ ಅನುಭವ ಬಿಚ್ಚಿಟ್ಟ ಅವರು, ಅಧಿಕಾರಿಗಳು ಸಾರ್ವಜನಿಕರ ಜಮೀನು ಖಾತೆ ಮಾಡಿಲು ಮನವಿ ಮಾಡಿದರೆ ಸಾವಿರ ಕಥೆ ಹೇಳಿ ಲಂಚ ಕೇಳುತ್ತಾನೆ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಹ ಒಂದು ಖಾತೆಗಾಗಿ ಒಂದು ಲಕ್ಷ ರೂ. ಲಂಚ ಕೇಳಿದ್ದಾನೆ ಎಂದು ಏಕವಚನ ಪ್ರಯೋಗ ಮಾಡಿದರು.

    ಇದೇ ವೇಳೆ ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಅಧಿಕಾರಿಗಳ ವರ್ತನೆ ಬಗ್ಗೆ ಕಿಡಿಕಾರಿದ ಅವರು, ಹಿಂದಿನ ಸರ್ಕಾರ ಇದ್ದಾಗ ಅವರು ಹೇಳಿದಂತೆ ಕುಣಿದಿದ್ದೀರಿ, ತಪ್ಪುಗಳನ್ನು ಮಾಡಿದ್ದೀರಿ. ಈಗ ನಿಮ್ಮ ವರ್ತನೆ ಬದಲಾಗದಿದ್ದರೆ ನಿಮಗೆ ಉಳಿಗಾಲವಿಲ್ಲ. ನಾನೂ ನಿಮಗೆ ತೊಂದರೆ ಕೊಡುವುದಿಲ್ಲ. ನೀವು ಬದಲಾಗಬೇಕು ಅಷ್ಟೆ. ಕ್ಷೇತ್ರ ವ್ಯಾಪ್ತಿಯಲ್ಲಿ ವಸತಿ ಇಲ್ಲದ ಎಲ್ಲಾ ಜನರ ಸರ್ವೇ ಕಾರ್ಯವನ್ನ ಈ ತಿಂಗಳ ಕೊನೆ ವೇಳೆಗೆ ಪಟ್ಟಿ ತಯಾರಿಸಿ ಮಾಹಿತಿ ನೀಡಿ ಎಂದು ವೇದಿಕೆಯಲ್ಲೇ ಸೂಚನೆ ನೀಡಿದರು.

    ತಮಗೆ ನೀಡಿರುವ ಉನ್ನತ ಶಿಕ್ಷಣ ಇಲಾಖೆ ಖಾತೆ ಸಮುದ್ರದಂತಹ ಖಾತೆ. ಈ ಖಾತೆಯಲ್ಲಿ ನಾನೂ ಪಾಸಾಗ ಬೇಕಾದರೆ ಕ್ಷೇತ್ರದ ಜನರ ಸಹಕಾರ ಬೇಕು. ಮೊದಲಿನಂತೆ ಮದುವೆ, ಸಾವು, ನಾಮಕರಣ ಎಲ್ಲಾ ಕಾರ್ಯಕ್ರಮಕ್ಕೆ ಬರುವುದಕ್ಕೆ ಆಗುವುದಿಲ್ಲ. ಎಲ್ಲಾ ಕಾರ್ಯಕ್ರಮಕ್ಕೆ ಬರುತ್ತ ಕುಳಿತರೆ ಖಾತೆಯಲ್ಲಿ ನಾನೂ ಫೇಲ್ ಆಗುತ್ತೇನೆ. ನಿಮ್ಮ ಕಾರ್ಯಕ್ರಮಗಳಿಗೆ ನನ್ನ ಮಗ ಅಥವಾ ಪತ್ನಿ ಬರುತ್ತಾರೆ. ನನಗೆ ಸಹಕಾರ ಕೊಡಿ ಎಂದು ಮನವಿ ಮಾಡಿದರು.

    https://www.youtube.com/watch?v=jVEnumeRcKA

    https://www.youtube.com/watch?v=Je5bZkJ7vf4

  • ಕುಲಪತಿಗಳು, ವಿಶ್ರಾಂತ ಕುಲಪತಿಗಳು ಎಲ್ಲರು ನನಗೆ ಸಲಹೆಗಾರರು-ಪ್ರತ್ಯೇಕ ಹುದ್ದೆ ಏನೂ ಇಲ್ಲ: ಜಿಟಿಡಿ

    ಕುಲಪತಿಗಳು, ವಿಶ್ರಾಂತ ಕುಲಪತಿಗಳು ಎಲ್ಲರು ನನಗೆ ಸಲಹೆಗಾರರು-ಪ್ರತ್ಯೇಕ ಹುದ್ದೆ ಏನೂ ಇಲ್ಲ: ಜಿಟಿಡಿ

    ಮೈಸೂರು: ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಅವರು ಕುಟುಂಬ ಸಮೇತರಾಗಿ ಇಂದು ಮೈಸೂರು ಚಾಮುಂಡೇಶ್ವರಿ ದೇವಿ ಸೇರಿದಂತೆ ಉತ್ತನಹಳ್ಳಿಯ ತ್ರಿಪುರ ಸುಂದರಿ ದೇವಾಲಯ ಹಾಗೂ ನಂಜನಗೂಡಿನ ನಂಜುಂಡೇಶ್ವರನ ದೇವಾಲಯ, ನನ್ನೇಶ್ವರ ದೇಗುಲಕ್ಕೆ ಭೇಟಿ ನೀಡಿ ದರ್ಶನ ಪಡೆದರು.

    ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಕುಲಪತಿಗಳು ವಿಶ್ರಾಂತ ಕುಲಪತಿಗಳು ಎಲ್ಲರೂ ನನಗೆ ಸಲಹೆಗಾರರು. ಅದಕ್ಕೆಂದು ಪ್ರತ್ಯೇಕ ಹುದ್ದೆ ಏನೂ ಇಲ್ಲ ಎಂದು ಹೇಳುವ ಮೂಲಕ ಉನ್ನತ ಶಿಕ್ಷಣ ಇಲಾಖೆಗೆ ಸಲಹೆಗಾರ ಹುದ್ದೆ ಸೃಷ್ಟಿ ಇಲ್ಲ ಎಂದು ಸ್ಪಷ್ಟಪಡಿಸಿದರು.

    ಇದೇ ವೇಳೆ ಮೈಸೂರು ವಿವಿ ಕುಲಪತಿ ಹುದ್ದೆ ಸೇರಿದಂತೆ ಇತರೆ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳ ಭರ್ತಿಗೆ ಶೀಘ್ರದಲ್ಲೇ ಕ್ರಮ ಕೈಗೊಳ್ಳುತ್ತೇನೆ. ಇಲಾಖೆಯನ್ನು ಬಡವರ ಬಳಿಗೆ ಗ್ರಾಮಾಂತರಕ್ಕೆ ಕೊಂಡೊಯ್ಯುತ್ತೇನೆ ಎಂದರು.

    ಗುರುವಾರ ಬೆಂಗಳೂರಿನಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಸಭೆಯಲ್ಲಿ ಮೈಸೂರು ಭಾಗದ ಜೆಡಿಎಸ್ ಮುಖಂಡರ ನಡುವೆ ಉಂಟಾದ ಅಸಮಾಧಾನ ವಿಚಾರದ ಪ್ರಶ್ನೆಗೆ ಉತ್ತರಿಸಿದ, ನಾನೂ ಆ ವೇಳೆ ಸಭೆಯಲ್ಲಿ ಇರಲಿಲ್ಲ. ಮೇಲ್ಮನೆ ಪ್ರಶ್ನೋತ್ತರ ಕಲಾಪದಲ್ಲಿ ಭಾಗಿಯಾಗಿದ್ದೆ. ಆ ವಿಚಾರ ನನಗೆ ಗೊತ್ತಿಲ್ಲ ಎಂದರು.

    ಕೆಆರ್‌ಎಸ್‌ ನಲ್ಲಿ ಬಾಗಿನ: ಜುಲೈ20ರ ಮೊದಲ ಆಷಾಢ ಶುಕ್ರವಾರಕ್ಕೆ ಮೈಸೂರಿಗೆ ಸಿಎಂ ಕುಮಾರಸ್ವಾಮಿ ಆಗಮಿಸುತ್ತಾರೆ. ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಲಿರುವ ಸಿಎಂ ಬಳಿಕ ಕೆಆರ್‍ರಸ್ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡುತ್ತಾರೆ. ತದನಂತರ ಕಬಿನಿ ಜಲಾಶಕ್ಕೂ ಬಾಗಿನ ಅರ್ಪಿಸಲಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.