Tag: hijab row

  • ಹೈಕೋರ್ಟ್‌ ಮಧ್ಯಂತರ ಆದೇಶ ಪ್ರಶ್ನಿಸಿ ಸುಪ್ರೀಂ ಮೊರೆ ಹೋದವರಿಗೆ ತಲೆಕೆಟ್ಟಿದೆ: ಅಪ್ಪಚ್ಚು ರಂಜನ್‌

    ಹೈಕೋರ್ಟ್‌ ಮಧ್ಯಂತರ ಆದೇಶ ಪ್ರಶ್ನಿಸಿ ಸುಪ್ರೀಂ ಮೊರೆ ಹೋದವರಿಗೆ ತಲೆಕೆಟ್ಟಿದೆ: ಅಪ್ಪಚ್ಚು ರಂಜನ್‌

    ಮಡಿಕೇರಿ: ಹಿಜಬ್‌-ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ನೀಡಿರುವ ಸೂಚನೆ ಮತ್ತು ಮೇಲ್ವಿಚಾರಣೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟಿಗೆ ಹೋಗಿರುವವರಿಗೆ ತಲೆ ಕೆಟ್ಟಿದೆ ಎಂದು ಶಾಸಕ ಅಪ್ಪಚ್ಚು ರಂಜನ್‌ ವಾಗ್ದಾಳಿ ನಡೆಸಿದರು.

    ಹಿಜಬ್, ಕೇಸರಿ ಶಾಲು ಕುರಿತು ಹೈಕೋರ್ಟ್ ಸೂಚನೆ ನೀಡಿರುವುದು ಸ್ವಾಗತಾರ್ಹ. ಆದರೆ ಹೈಕೋರ್ಟ್‌ನಲ್ಲಿ ನೀಡಿರುವ ಸೂಚನೆ ಮತ್ತು ಮೇಲ್ವಿಚಾರಣೆ ಪ್ರಶ್ನಿಸಿ ಸುಪ್ರೀಂ ಕೋರ್ಟಿಗೆ ಹೋಗಿರುವವರಿಗೆ ತಲೆಕೆಟ್ಟಿರಬಹುದು. ಸುಪ್ರೀಂ ಕೋರ್ಟಿಗೆ ಹೋಗಿರುವವರಿಗೆ ತಮ್ಮ ವಿದ್ಯಾರ್ಥಿಗಳ ಉತ್ತಮ ಭವಿಷ್ಯ ಬೇಕಾಗಿಲ್ಲ ಎಂದು ಟೀಕಿಸಿದರು. ಇದನ್ನೂ ಓದಿ: ಮಂಡ್ಯ ವಿದ್ಯಾರ್ಥಿನಿಗೆ ಐ ಫೋನ್, ಸ್ಮಾರ್ಟ್‍ವಾಚ್ ಗಿಫ್ಟ್ ಕೊಟ್ಟ ಕಾಂಗ್ರೆಸ್ ಶಾಸಕ

    ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟಿನಲ್ಲಿ ರಿಟ್ ಸಲ್ಲಿಸಿರಬಹುದು. ಹಿಜಬ್ ಅಥವಾ ಕೇಸರಿ ಶಾಲು ಎರಡನ್ನೂ ಧರಿಸಿ ಶಾಲಾ-ಕಾಲೇಜಿಗೆ ಬರೋದು ತಪ್ಪು. ನಾವು ಶಾಲಾ-ಕಾಲೇಜಿಗೆ ಹೋಗುವಾಗ ಯಾವ ಧರ್ಮ, ಜಾತಿಯವರೆಂದೇ ಗೊತ್ತಾಗುತ್ತಿರಲಿಲ್ಲ. ಅವರ ಹೆಸರನ್ನು ಕೇಳುವಾಗ ಅವರು ಮುಸ್ಲಿಂ ಎಂದು ಗೊತ್ತಾಗುತಿತ್ತು ಎಂದು ತಿಳಿಸಿದರು.

    SUPREME COURT

    ಶಾಲಾ-ಕಾಲೇಜಿಗೆ ಬರೋದು ನಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವುದಕ್ಕಾಗಿಯೇ ಹೊರತು ಬೇರೆ ಯಾವುದಕ್ಕೂ ಅಲ್ಲ. ಬೇಕಾದರೆ ಹಿಜಬ್ ಧರಿಸಿ ಮಸೀದಿ, ಮದರಸಾಗಳಿಗೆ ಹೋಗಲಿ. ಕೇಸರಿ ಶಾಲು ಧರಿಸಿ ದೇವಾಲಯಗಳಿಗೆ ಹೋಗಲಿ. ಅದಕ್ಕೆ ನಮ್ಮ ಯಾವ ತಕರಾರು ಇಲ್ಲ. ಭಾರತ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶ. ಯಾವ ಧರ್ಮ ಆಚರಣೆ ಬೇಕಾದರೂ ಅವರ ಮನೆಗಳಲ್ಲಿ ಆಚರಿಸಿಕೊಳ್ಳಲಿ. ಆದರೆ ಶಾಲಾ-ಕಾಲೇಜಿಗೆ ಸಮವಸ್ತ್ರಗಳಲ್ಲೇ ವಿದ್ಯಾರ್ಥಿಗಳು ಬರಲಿ ಎಂದು ಹೇಳಿದರು. ಇದನ್ನೂ ಓದಿ: ತಲೆ ಮೇಲೆ ಸೆರಗು ಹಾಕಿಕೊಳ್ಳೋದನ್ನ ಬೇಡ ಅನ್ನೋದು ಎಷ್ಟು ಸರಿ: ಸಿಎಂ ಇಬ್ರಾಹಿಂ

  • ಹಿಜಬ್‌- ಕೇಸರಿ ಫೈಟ್‌ಗೆ ತಾತ್ಕಾಲಿಕ ಬ್ರೇಕ್‌ – ಹೈಕೋರ್ಟ್‌ ಕಲಾಪದ ಪೂರ್ಣ ಪಾಠ ಇಲ್ಲಿದೆ

    ಹಿಜಬ್‌- ಕೇಸರಿ ಫೈಟ್‌ಗೆ ತಾತ್ಕಾಲಿಕ ಬ್ರೇಕ್‌ – ಹೈಕೋರ್ಟ್‌ ಕಲಾಪದ ಪೂರ್ಣ ಪಾಠ ಇಲ್ಲಿದೆ

    ಬೆಂಗಳೂರು: ರಾಜ್ಯದಲ್ಲಿ ಹಿಜಬ್-ಕೇಸರಿ ಫೈಟ್‍ಗೆ ಹೈಕೋರ್ಟ್ ತಾತ್ಕಾಲಿಕವಾಗಿ ಬ್ರೇಕ್ ಹಾಕಿದೆ. ಇವತ್ತು ಎರಡೂವರೆ ಗಂಟೆ ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್ ತ್ರಿಸದಸ್ಯ ಪೀಠ, ಮುಂದಿನ ಮುಂದಿನ ಆದೇಶ ನೀಡುವವರೆಗೆ ಕಾಲೇಜು ವಿದ್ಯಾರ್ಥಿಗಳು ಯಾವುದೇ ಧಾರ್ಮಿಕ ವಸ್ತ್ರ ಬಳಸಬಾರದೆಂದು ಸೂಚನೆ ನೀಡಿದೆ.

    ಇಂದು ಹಿಜಬ್ ವಿವಾದಕ್ಕೆ ಸಂಬಂಧಿಸಿ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ.ಕೃಷ್ಣ ದೀಕ್ಷಿತ್ ಮತ್ತು ನ್ಯಾ. ಖಾಜಿ ಜೈಬುನ್ನಿಸಾ ಅವರ ತ್ರಿಸದಸ್ಯ ಪೀಠ ಐದು ಅರ್ಜಿಗಳ ವಿಚಾರಣೆ ನಡೆಸಿತು.

    ಹೈಕೋರ್ಟ್ ಸೂಚನೆ ಅನ್ವಯ, ಹಿಜಬ್ ಅಥವಾ ಕೇಸರಿ ಶಾಲುಗಳನ್ನು ಧರಿಸಿ ತರಗತಿಗಳಿಗೆ ಹಾಜರಾಗುವಂತಿಲ್ಲ. ಸದ್ಯಕ್ಕೆ ಯಥಾಸ್ಥಿತಿ ಕಾಪಾಡಲು ಕೋರ್ಟ್ ಸೂಚಿಸಿದ್ದು, ಸಮವಸ್ತ್ರ ಧರಿಸಿಯೇ ಕಾಲೇಜಿಗೆ ಹಾಜರಾಗಬೇಕಿದೆ. ಮಕ್ಕಳ ಹಿತದೃಷ್ಟಿಯಿಂದ ಶಾಲೆ-ಕಾಲೇಜು ಪುನಾರಂಭ ಮಾಡುವಂತೆ ಸರ್ಕಾರಕ್ಕೆ ಪೀಠ ನಿರ್ದೇಶನ ನೀಡಿದೆ. ಇದು ಅಂತಿಮ ಆದೇಶವಲ್ಲ ಅಂತ ಕೋರ್ಟ್ ಸ್ಪಷ್ಟಪಡಿಸಿದ್ದು, ಸೋಮವಾರದಿಂದ ಪ್ರತಿನಿತ್ಯ ವಿಚಾರಣೆ ನಡೆಸಿ ಆದೇಶ ನೀಡುವುದಾಗಿಯೂ ತಿಳಿಸಿದೆ. ಇದನ್ನೂ ಓದಿ: ರಾಷ್ಟ್ರವೋ ಅಥವಾ ಧರ್ಮ ಯಾವುದು ಮುಖ್ಯ: ಹಿಜಬ್ ವಿವಾದಕ್ಕೆ ಮದ್ರಾಸ್ ಹೈಕೋರ್ಟ್ ಪ್ರಶ್ನೆ

    ನ್ಯಾಯಪೀಠದ ಮೌಖಿಕ ಸೂಚನೆಗೆ ಅರ್ಜಿದಾರರ ಪರ ವಕೀಲ ದೇವದತ್‌ ಕಾಮತ್ ಆಕ್ಷೇಪ ವ್ಯಕ್ತಪಡಿಸಿದರು. ಕೂಡಲೇ ನ್ಯಾಯಪೀಠ, ಈ ವಿವಾದ ಇತ್ಯರ್ಥ ಆಗಬೇಕು ಎಂದಿದ್ದರೆ ನಮಗೆ ಸಹಕರಿಸಿ. ಸೋಮವಾರದ ವಿಚಾರಣೆ ವೇಳೆ ನಿಮ್ಮ ಆಕ್ಷೇಪಗಳನ್ನು ದಾಖಲಿಸಿ ಎಂದು ಹೇಳಿತು.

    ಬುಧವಾರ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ನೇತೃತ್ವದ ಏಕಸದಸ್ಯ ಪೀಠ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಿತ್ತು. ಮುಖ್ಯ ನ್ಯಾಯಮೂರ್ತಿಗಳು ಪರಿಸ್ಥಿತಿ ಅರಿತು ಕೂಡಲೇ ತಮ್ಮನ್ನು ಒಳಗೊಂಡಂತೆ ಮೂವರು ನ್ಯಾಯಮೂರ್ತಿಗಳ ವಿಸ್ತೃತ ಪೀಠವನ್ನು ರಚಿಸಿದ್ದರು.

    ಮೌಖಿಕ ಸೂಚನೆ ಏನು?
    ಸದ್ಯಕ್ಕೆ ಶಾಲೆ ಕಾಲೇಜು ಆರಂಭವಾಗಲಿ. ಆದರೇ ತೀರ್ಪು ಬರುವವರೆಗೂ ವಿದ್ಯಾರ್ಥಿಗಳು ಧಾರ್ಮಿಕ ವಸ್ತ್ರ ಧರಿಸಿ ತರಗತಿಗೆ ಹಾಜರಾಗುಂತಿಲ್ಲ. ಕೇಸರಿ ಶಾಲು, ಹೆಡ್ ಸ್ಕಾರ್ಫ್, ಇನ್ನಿತರೇ ಧಾರ್ಮಿಕ ಅಸ್ತ್ರ ಧರಿಸಬಾರದು.

    ಯಾರೂ ಕೂಡ ಧಾರ್ಮಿಕತೆ ಬಿಂಬಿಸುವ ವಸ್ತ್ರ ಧರಿಸುತ್ತೇವೆ ಎಂದು ಪಟ್ಟು ಹಿಡಿಯುವಂತಿಲ್ಲ. ನಾವು ಎರಡು ಕಡೆಯವರಿಗೂ ಈ ಸೂಚನೆ ನೀಡುತ್ತಿದ್ದೇವೆ. ನಮಗೆ ಶಾಂತಿ ಸೌಹಾರ್ದತೆ ಕಾಪಾಡುವುದು ಮುಖ್ಯ. ಆದಷ್ಟು ಬೇಗ ನಾವು ಈ ಪ್ರಕರಣವನ್ನು ಇತ್ಯರ್ಥ ಮಾಡುತ್ತೇವೆ. ವಿಚಾರಣೆ ನಡೆಯುವಾಗ ಶಿಕ್ಷಣ ಸಂಸ್ಥೆಗಳಿಗೆ ಧಾರ್ಮಿಕ ಉಡುಪು ಧರಿಸಲು ನಿರ್ಬಂಧ ವಿಧಿಸುತ್ತಿದ್ದೇವೆ. ಇದನ್ನೂ ಓದಿ: ಡಿಕೆಶಿ ಪಾಕಿಸ್ತಾನ ಪರ ಹೇಳಿಕೆ ಕೊಡುವವರ ಪರವೋ ಅಥವಾ ಭಾರತ ಮಾತೆಯ ಪರವೋ: ರೇಣುಕಾಚಾರ್ಯ

    ವಕೀಲ ದೇವದತ್ ಕಾಮತ್, ಸಂಜಯ್ ಹೆಗ್ಡೆ ವಾದ ಏನಿತ್ತು?
    ಕರ್ನಾಟಕ ಶಿಕ್ಷಣ ಕಾಯ್ದೆ 1983ರ ಪ್ರಕಾರ ಸಮವಸ್ತ್ರ ಕಡ್ಡಾಯ ಅಲ್ಲ. ಪ್ರಾಥಮಿಕ ಶಾಲೆಗಳಲ್ಲಿ ಸಮವಸ್ತ್ರ ಇರಬೇಕು. ಕಾಲೇಜಿಗೆ ಅಗತ್ಯವಿಲ್ಲ. 2 ವರ್ಷದಿಂದ ನಮ್ಮ ವಿದ್ಯಾರ್ಥಿಗಳು ಹಿಜಬ್ ಧರಿಸಿ ಕಾಲೇಜಿಗೆ ಹೋಗುತ್ತಿದ್ದರು. ಕಾಲೇಜಿನಲ್ಲಿ ಸಮವಸ್ತ್ರ ಎನ್ನುವುದು ಇತ್ತೀಚಿನ ಬೆಳವಣಿಗೆ ಅಷ್ಟೇ.

    ವಿವಾದ ಆದ ಮೇಲೆ ಸರ್ಕಾರ ಆದೇಶ ಹೊರಡಿಸಿದೆ.ಇದರ ಉದ್ದೇಶ ಏನು? ಆದೇಶದಲ್ಲಿ ಸುಪ್ರೀಂಕೋರ್ಟ್ ಆದೇಶವನ್ನು ಉಲ್ಲೇಖಿಸಿದ್ದಾರೆ. ಈ ವೇಳೆ ಮುಖ್ಯ ನ್ಯಾಯಮೂರ್ತಿಗಳು ಸರ್ಕಾರ ಕೋರ್ಟ್ ಆದೇಶ ಉಲ್ಲೇಖಿಸುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಕ್ಕೆ ನಮ್ಮ ಮನವಿ ಇಷ್ಟೇ. ಸರ್ಕಾರಕ್ಕೆ ಆದೇಶ ಮಾಡುವ ಅಧಿಕಾರ ಇಲ್ಲ. ತಮಿಳುನಾಡು ಶಿಕ್ಷಣ ಕಾಯ್ದೆಯನ್ನು ಇಲ್ಲಿಗೆ ತರುವ ಪ್ರಯತ್ನ ನಡೆದಿದೆ ಎಂದು ಉತ್ತರಿಸಿದರು.

    ಈ ವಿವಾದ ಶುರುವಾದ ಮೇಲೆ ಶಾಲು ಹಾಕೋಕೆ ಶುರು ಮಾಡಿದ್ದಾರೆ. ಮಕ್ಕಳು ಸಮವಸ್ತ್ರ ಬಣ್ಣದ ಹಿಜಬ್ ಧರಿಸುತ್ತಿದ್ದಾರೆ. ಇದರಿಂದ ಯಾರಿಗೂ ತೊಂದರೆ ಇಲ್ಲ. ಆದರೂ, ಕಳೆದ ವಾರದಿಂದ ವಿದ್ಯಾರ್ಥಿನಿಯರನ್ನು ಕಾಲೇಜಿಗೆ ಬಿಟ್ಟುಕೊಳ್ಳುತ್ತಿಲ್ಲ. ನಮಗೆ ಆ ಮಕ್ಕಳ ಹೋರಾಟ ನೋಡಲು ಆಗುತ್ತಿಲ್ಲ. ಮಕ್ಕಳು ಶಾಲೆಯಿಂದ ಹೊರಗೆ ಇದ್ದಾರೆ. ಮಧ್ಯಂತರ ಆದೇಶ ನೀಡಿ ಎಂದು ಮನವಿ ಮಾಡಿದರು.

  • ಕಾಲೇಜುಗಳಿಗೆ ಯಾರೂ ಧಾರ್ಮಿಕ ಬಟ್ಟೆಗಳನ್ನು ಧರಿಸಿ ಹೋಗುವಂತಿಲ್ಲ: ಹೈಕೋರ್ಟ್‌

    ಕಾಲೇಜುಗಳಿಗೆ ಯಾರೂ ಧಾರ್ಮಿಕ ಬಟ್ಟೆಗಳನ್ನು ಧರಿಸಿ ಹೋಗುವಂತಿಲ್ಲ: ಹೈಕೋರ್ಟ್‌

    ಬೆಂಗಳೂರು: ಕಾಲೇಜುಗಳಿಗೆ ವಿದ್ಯಾರ್ಥಿಗಳು ಯಾವುದೇ ಧಾರ್ಮಿಕ ವಸ್ತ್ರಗಳನ್ನು ಧರಿಸಿ ಹೋಗುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಮೌಖಿಕ ಆದೇಶ ಪ್ರಕಟಿಸಿದೆ.

    ಕಾಲೇಜುಗಳಲ್ಲಿ ಹಿಜಬ್‌ ಧರಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಮುಖ್ಯ ನ್ಯಾ. ರಿತುರಾಜ್ ಅವಸ್ಥಿ, ನ್ಯಾ.ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಒಳಗೊಂಡ ತ್ರಿಸದ್ಯ ಪೀಠದಲ್ಲಿ ನಡೆಯಿತು. ಇದನ್ನೂ ಓದಿ: ಡಿಕೆಶಿ ಪಾಕಿಸ್ತಾನ ಪರ ಹೇಳಿಕೆ ಕೊಡುವವರ ಪರವೋ ಅಥವಾ ಭಾರತ ಮಾತೆಯ ಪರವೋ: ರೇಣುಕಾಚಾರ್ಯ

    ಮುಂದಿನ ಆದೇಶ ಬರುವವರೆಗೂ ಕಾಲೇಜಿಗೆ ಯಾರೂ ಸಹ ಹಿಜಬ್‌ ಮತ್ತು ಕೇಸರಿ ಶಾಲನ್ನು ಧರಿಸಿ ಹೋಗುವಂತಿಲ್ಲ. ಕಾಲೇಜು ನಡೆಯಲೇಬೇಕು. ಹೀಗಾಗಿ ಮಧ್ಯಂತರ ಆದೇಶ ನೀಡಿದ್ದೇವೆ ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ.

    ಸಾಂವಿಧಾನತ್ಮಕ ಪ್ರಶ್ನೆಗಳು ಎದ್ದಿರುವ ಕಾರಣ ವಿಚಾರಣೆಯನ್ನು ಗಂಭೀರವಾಗಿ ನಡೆಸಲಾಗುವುದು ಎಂದು ಹೇಳಿರುವ ಪೀಠ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ. ಇದನ್ನೂ ಓದಿ: ಹಿಜಬ್ ನಮ್ಮ ಕುಟುಂಬದ ವಿವಾದ ಪಾಕಿಸ್ತಾನ ತಲೆಹಾಕಬಾರದು: ಫಾತಿಮಾ ಹುಸೇನ್ ಆಕ್ರೋಶ

    ಮುಂದಿನ ಆದೇಶ ಬರುವವರೆಗೂ ವಿದ್ಯಾರ್ಥಿಗಳು ಯಾರೂ ಸಹ ಧಾರ್ಮಿಕ ಬಟ್ಟೆ ಧರಿಸಿ ಕಾಲೇಜಿಗೆ ಹೋಗುವಂತಿಲ್ಲ. ಶಾಂತಿ, ಸುವ್ಯವಸ್ಥೆ ಕಾಪಾಡಲು ಸಹಕಾರ ನೀಡಬೇಕು ಎಂದು ಹೈಕೋರ್ಟ್‌ ಸೂಚನೆ ನೀಡಿದೆ.

    ಸಾಂವಿಧಾನಾತ್ಮಕ ಪ್ರಶ್ನೆಗಳು ಎದ್ದಿರುವ ಕಾರಣ ವಿಚಾರಣೆಯನ್ನು ಗಂಭೀರವಾಗಿ ನಡೆಸಲಾಗುವುದು ಎಂದು ಹೇಳಿರುವ ಪೀಠ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ. ಅಷ್ಟೇ ಅಲ್ಲದೇ ಪ್ರತಿನಿತ್ಯ ವಿಚಾರಣೆ ನಡೆಸಲಾಗುವುದು ಎಂದು ಹೇಳಿದೆ.

  • ಸುಪ್ರೀಂ ಅಂಗಳಕ್ಕೆ ಹಿಜಬ್‌ ವಿವಾದ –  ತುರ್ತು ವಿಚಾರಣೆ ಇಲ್ಲ

    ಸುಪ್ರೀಂ ಅಂಗಳಕ್ಕೆ ಹಿಜಬ್‌ ವಿವಾದ – ತುರ್ತು ವಿಚಾರಣೆ ಇಲ್ಲ

    ನವದೆಹಲಿ: ಕರ್ನಾಟಕದಲ್ಲಿ ತಲೆದೋರಿರುವ ಹಿಜಬ್‌-ಕೇಸರಿ ಶಾಲು ವಿವಾದ ಈಗ ಸುಪ್ರೀಂ ಕೋರ್ಟ್‌ ಕದ ತಟ್ಟಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಹಿಜಬ್‌ ವಿವಾದ ಪ್ರಕರಣವನ್ನು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸಬೇಕು ಎಂದು ಹಿರಿಯ ವಕೀಲ ಕಪಿಲ್‌ ಸಿಬಲ್‌ ಅವರು ಮನವಿ ಮಾಡಿದ್ದಾರೆ.

    ಈ ಕುರಿತು ಮನವಿ ಸಲ್ಲಿಸಿರುವ ಅವರು, ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಬ್ ವಿವಾದವನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಬೇಕು. ಇನ್ನೆರಡು ತಿಂಗಳಲ್ಲಿ ಪರೀಕ್ಷೆ ಇದೆ. ಆದರೆ ವಿವಾದ ಕಾಡ್ಗಿಚ್ಚಿನಂತೆ ಎಲ್ಲ ಜಿಲ್ಲೆಗಳಿಗೆ ಹಬ್ಬುತ್ತಿದೆ. ಇದು ಒಂಭತ್ತು ನ್ಯಾಯದೀಶರ ಸಾಂವಿಧಾನಿಕ ಪೀಠದಲ್ಲಿ ವಿಚಾರಣೆಯಾಗಬೇಕು ಎಂದು ಕೇಳಿಕೊಂಡಿದ್ದಾರೆ. ಇದನ್ನೂ ಓದಿ: ರಾಜ್ಯದ ಶಾಂತಿಗೆ ಭಂಗ ತರುವ ಕೆಲಸವಾಗದಿರಲಿ: ಬೊಮ್ಮಾಯಿ

    ಕೋರ್ಟ್ ಈ ವಿಚಾರವನ್ನು ಮೊದಲು ವಿಚಾರಣೆ ಅರ್ಜಿಗಳ ಪಟ್ಟಿಯಲ್ಲಿ ಸೇರಿಸಿ. ಯಾವುದೇ ಮಧ್ಯಂತರ ಆದೇಶ ನೀಡುವುದು ನಿಮಗೆ ಬಿಟ್ಟಿದ್ದು. ಶಾಲೆ ಕಾಲೇಜು ಬಂದ್ ಆಗಿವೆ, ವಿದ್ಯಾರ್ಥಿನಿಯರ ಮೇಲೆ‌ ಕಲ್ಲು ಎಸೆಯಲಾಗುತ್ತಿದೆ. ಇದು ಇಡೀ ದೇಶಕ್ಕೆ ವ್ಯಾಪಿಸುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

    ಸಿಬಲ್‌ ಅವರ ಮನವಿ ಕುರಿತು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್‌, ಹೈಕೋರ್ಟ್ ಈ ಅರ್ಜಿ ವಿಚಾರಣೆ ನಡೆಸುತ್ತಿದೆ. ನಾವು ಪಟ್ಟಿ ಮಾಡಿದರೆ ಹೈಕೋರ್ಟ್ ವಿಚಾರಣೆ ನಡೆಸುವುದಿಲ್ಲ. ನಾವು ಇದನ್ನು ಮುಂದೆ ನೋಡುತ್ತೇವೆ. ಮೊದಲು ಹೈಕೋರ್ಟ್ ವಿಚಾರಣೆ ಮುಗಿಸಲಿ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಮುಸ್ಲಿಂ ಮಹಿಳೆ ಬೆನ್ನ ಮೇಲೆ ಎಸ್‍ಪಿ ಸ್ಟಿಕ್ಕರ್ ಅಂಟಿಸಿದ ವೀಡಿಯೋ ವೈರಲ್ – ಮಹಿಳೆ ಹೇಳಿದ್ದೇನು?

  • ದಲಿತರ ಮಕ್ಕಳು, ಮುಸ್ಲಿಮ್‌ ಮಹಿಳೆಯರು ಶಿಕ್ಷಣದಿಂದ ವಂಚಿತವಾಗಬಹುದಾದ ಸೂಚನೆಯಿದು: ಹನುಮಂತಯ್ಯ

    ದಲಿತರ ಮಕ್ಕಳು, ಮುಸ್ಲಿಮ್‌ ಮಹಿಳೆಯರು ಶಿಕ್ಷಣದಿಂದ ವಂಚಿತವಾಗಬಹುದಾದ ಸೂಚನೆಯಿದು: ಹನುಮಂತಯ್ಯ

    ನವದೆಹಲಿ: ದಲಿತರ ಮಕ್ಕಳು ಮತ್ತು ಮುಸ್ಲಿಮ್‌ ಮಹಿಳೆಯರು ಶಿಕ್ಷಣದಿಂದ ವಂಚಿತವಾಗಬಹುದಾದ ಸೂಚನೆಯಿದು ಎಂದು ಸಂಸದ ಎಲ್‌ ಹನುಮಂತಯ್ಯ ಕಳವಳ  ವ್ಯಕ್ತಪಡಿಸಿದ್ದಾರೆ.

    ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಬ್‌ ವಿವಾದಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಕಾಂಗ್ರೆಸ್‌ ಸಂಸದರಾದ ಎಲ್‌ ಹನುಮಂತಯ್ಯ, ನಾಸೀರ್‌ ಹುಸೇನ್‌, ಮಾಜಿ ಸಚಿವ ಆರ್‌.ಬಿ ತಿಮ್ಮಾಪುರ್ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

    ನೀಲಿ ಶಾಲು ಹಾಕಿ ದಲಿತ ವಿದ್ಯಾರ್ಥಿಗಳು ಶಾಲೆಗೆ ಬರುತ್ತಿದ್ದಾರೆ. ಹೀಗೆ ಎಲ್ಲರೂ ಅವರವರ ಧರ್ಮ ಲಾಂಛನ ಹಾಕಿಕೊಂಡು ಬರಲು ಶುರು ಮಾಡಿದ್ರೆ ನಮ್ಮ ಶಿಕ್ಷಣ ಎಲ್ಲಿಗೆ ತಲುಪುತ್ತದೆ? ವಿವಾದವನ್ನು ಆರಂಭದಲ್ಲಿ ತಡೆಯಬೇಕಿತ್ತು. ಬಿಜೆಪಿ ಇದರ ನೈತಿಕ ಹೊಣೆ ಹೊರಬೇಕು ಎಂದು ಹೇಳಿದರು.

    ಕರಾವಳಿ ಬಲಪಂಥಿಯ ರಾಜಕಾರಣದ ಪ್ರಯೋಗ ಶಾಲೆ. ಅಲ್ಲಿಂದ ಬೇರೆ ಜಿಲ್ಲೆಗಳಿಗೆ ಈಗ ಹರಡುತ್ತಿದೆ. ಈಗ ಶಾಂತಿ ಸಂಧಾನ ಸಭೆಗಳನ್ನು ನಡೆಸಿ, ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರಿಗೆ ತಿಳುವಳಿಕೆ ನೀಡಬೇಕು ಎಂದು ಹನುಮಂತಯ್ಯ ಆಗ್ರಹಿಸಿದರು.

    ಹಿಜಬ್‌ ಧಾರಣೆ ಹಲವು ವರ್ಷಗಳಿಂದ ನಡೆದುಕೊಂಡು ಬಂದಿದೆ. ಆದರೆ ಇದು ಕಳೆದು ಒಂದು ವಾರದಿಂದ ವಿವಾದ ಆಗಿರೋದ್ಯಾಕೆ ಎನ್ನುವುದು ಪ್ತಶ್ನಿಸಿಕೊಳ್ಳಬೇಕಿದೆ. ಸಂವಿಧಾನ ಧರ್ಮ ಪಾಲನೆಗೆ ಅವಕಾಶ ನೀಡಿದೆ. ಇನ್ನೊಂದು ಧರ್ಮಕ್ಕೆ ಧಕ್ಕೆ ಆಗದಂತೆ ಧರ್ಮಾಚರಣೆಗೆ ಅವಕಾಶ ಇದೆ. ಆದರೆ ಈ ವಿವಾದಕ್ಕೆ ಕಾರಣಕ್ಕೆ ರಾಜಕೀಯ ಹಿತಾಸಕ್ತಿ ಇದೆ. ಒಡೆದು ಆಳುವ ನಾಯಕರು ಇದನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ದೂರಿದರು.
    ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದುಬಿಟ್ರೆ ಇಡೀ ರಾಜ್ಯದ ಜನರಿಗೆ ಹಿಜಬ್ ಹಾಕಿಸುತ್ತಾರೆ: ಸುನಿಲ್ ಕುಮಾರ್

    ಮಕ್ಕಳಲ್ಲಿ ತಿಳುವಳಿಕೆ ಮಟ್ಟ ಕಡಿಮೆಯಿದ್ದು ಹಿಜಬ್‌ ಧರಿಸಿದ್ರೆ ನಾವು ಶಾಲು ಧರಿಸುತ್ತೇವೆ ಎನ್ನುತ್ತಿದ್ದಾರೆ. ಹೀಗಾಗಿ ಇದರ ಹಿಂದೆ ದೊಡ್ಡ ಚಿತಾವಣೆ ಇದೆ. ಮಕ್ಕಳ ಮನಸ್ಸಿನಲ್ಲಿ ವಿಷ ಬಿತ್ತಬಾರದು. ಸಿಖ್ಬರ್‌ ಟರ್ಬನ್‌ ಧರಿಸಬಾರದು. ಹಿಂದೂಗಳು ಮಾಂಗಲ್ಯ, ಬಿಂದಿ, ಬಳೆ ಹಾಕಿದವರು ಶಾಲೆ ಬರಬಾರದು ಎಂದು ಶುರುವಾದರೆ ಏನು ಆಗಬಹುದು? ಹಿಜಬ್‌ ಒಂದು ಮುನ್ಸೂಚನೆ. ಇದು ದೇಶದ ಸಮಗ್ರತೆಗೆ ದೊಡ್ಡ ಪೆಟ್ಟು ನೀಡಲಿದೆ ಎಂದರು. ದನ್ನೂ ಓದಿ: ಬಿಕಿನಿ, ಜೀನ್ಸ್, ಹಿಜಬ್ ಹೀಗೆ ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು : ಪ್ರಿಯಾಂಕಾ ಗಾಂಧಿ

    ಪ್ರಕರಣ ಕೋರ್ಟ್‌ನಲ್ಲಿದ್ದು ಕೋರ್ಟ್ ಆದೇಶಕ್ಕೆ ನಾವೆಲ್ಲ ಬದ್ಧ. ಅಲ್ಲಿಯವರೆಗೂ ರಾಜಕಾರಣಿಗಳು ನೀಡುತ್ತಿರುವ ಹೇಳಿಕೆ ಗಮನಿಸಬೇಕು. ಕೆಲವು ಸಂಸದರು ಶಾಸಕರು ದೇಶ ಒಡೆಯುವ ಮಾತುಗಳನ್ನು ಆಡುತ್ತಿದ್ದಾರೆ. ರಾಜಕಾರಣಿಗಳು ಕೂಡಲೇ ಈ ರೀತಿಯ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಬೇಕು ಎಂದು ಹೇಳಿದರು.