Tag: Hiking

  • ದಲಿತರ ಮನೆಗೆ ಭೇಟಿ ನೀಡಿದ ಪೇಜಾವರ ಶ್ರೀಗಳು

    ದಲಿತರ ಮನೆಗೆ ಭೇಟಿ ನೀಡಿದ ಪೇಜಾವರ ಶ್ರೀಗಳು

    – ಅನಾರೋಗ್ಯದ ನಡುವೆಯೂ ಪಾದಯಾತ್ರೆ

    ಮೈಸೂರು: ದಲಿತರ ಮೇಲಿನ ಶೋಷಣೆ ಕುಗ್ಗಿಸಲು ಪಾದಯಾತ್ರೆ ಮಾಡುತ್ತಿರುವ ಪೇಜಾವರ ಶ್ರೀಗಳು ದಲಿತ ಕೇರಿಯಲ್ಲಿ ಸಾಮರಸ್ಯದ ಪಾದಯಾತ್ರೆ ಮಾಡಿ ದಲಿತರ ಕುಟುಂಬಗಳಿಗೆ ಆಶೀರ್ವಾದ ಮಾಡಿದ್ದಾರೆ.

    ಇಂದು ಪೇಜಾವರ ಶ್ರೀಗಳು ಮೈಸೂರಿನ ಮಂಜುನಾಥಪುರ ಬಡಾವಣೆಯ ದಲಿತರ ಮನೆಗೆ ಭೇಟಿ ನೀಡಿದರು. ದಲಿತ ದಂಪತಿ ಚೌಡಪ್ಪ, ರಾಜಮ್ಮ ಅವರ ಮನೆಗೆ ಬಂದು ಆಶೀರ್ವಾದ ಮಾಡಿದರು. ಅನಾರೋಗ್ಯದ ಹಿನ್ನೆಲೆಯಲ್ಲಿ ವೀಲ್ ಚೇರ್‍ ನಲ್ಲಿ ಕುಳಿತು ಪಾದಯಾತ್ರೆ ಮಾಡುತ್ತಾ ಮನೆಗೆ ಬಂದ ಶ್ರೀಗಳನ್ನು ಗೌರವಿಸಿದ ದಂಪತಿ ಶ್ರೀಗಳ ಕೃಪೆಗೆ ಪಾತ್ರರಾದರು.

    ಈ ವೇಳೆ ಡಿಕೆಶಿ ಪರ ಮಠಾಧೀಶರ ಪ್ರತಿಭಟನೆ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿ ಶ್ರೀಗಳು, ನಾನು ಈ ವಿಚಾರದ ಬಗ್ಗೆ ಮಾತನಾಡುವುದಿಲ್ಲ, ತಟಸ್ಥವಾಗಿರುತ್ತೇನೆ. ಅವರಿಗೆ ಡಿಕೆಶಿ ನಿರಪರಾಧಿ ಎಂದು ತೋರಿದೆ. ಆ ಕಾರಣದಿಂದ ಅವರು ಬೆಂಬಲಿಸುತ್ತಿರಬಹುದು. ಈ ವಿಚಾರದಲ್ಲಿ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ನಿರಾಕಾರಿಸಿದರು.

  • ಕೇರಳದಲ್ಲಿ ಬಿಜೆಪಿಯ ಜನರಕ್ಷಾ ಯಾತ್ರೆಗೆ ಅಮಿತ್ ಶಾ ಚಾಲನೆ

    ಕೇರಳದಲ್ಲಿ ಬಿಜೆಪಿಯ ಜನರಕ್ಷಾ ಯಾತ್ರೆಗೆ ಅಮಿತ್ ಶಾ ಚಾಲನೆ

    ತಿರುವನಂತಪುರ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೇರಳದಲ್ಲಿ ಮಂಗಳವಾರ ಜನರಕ್ಷಾ ಯಾತ್ರೆಗೆ ಚಾಲನೆ ನೀಡಿ, ಆಡಳಿತರೂಢ ಸಿಪಿಎಂ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಸಿಪಿಎಂ ಸರ್ಕಾರ `ಹತ್ಯೆ ರಾಜಕೀಯ’ ನಡೆಸುತ್ತಿದೆ ಎಂದು ಬಿಜೆಪಿ ಆರೋಪಿಸಿದ್ದು, ಕಣ್ಣೂರಿನ ಪಯ್ಯನ್ನೂರಿನಲ್ಲಿ ಅಮಿತ್ ಶಾ ಜನರಕ್ಷಾ ಯಾತ್ರೆಗೆ ಚಾಲನೆ ನೀಡಿದರು.

    ನಾಲ್ಕು ಕಿಲೋ ಮೀಟರ್ ಯಾತ್ರೆ ನಡೆಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, 2001ರಿಂದ ಇಲ್ಲಿಯವರಗೆ 120ಕ್ಕೂ ಹೆಚ್ಚು ಮಂದಿ ಬಿಜೆಪಿ ಮತ್ತು ಆರ್‍ಎಸ್‍ಎಸ್ ಕಾರ್ಯಕರ್ತರ ಹತ್ಯೆ ನಡೆದಿದೆ. ಅದರಲ್ಲೂ ಪಿಣರಾಯಿ ಅಧಿಕಾರಕ್ಕೆ ಏರಿದ ಬಳಿಕ 14 ಹತ್ಯೆಗಳು ಕಣ್ಣೂರಿನಲ್ಲಿ ನಡೆದಿದೆ. ಈ ಹತ್ಯೆಗೆ ಕಾರಣ ಯಾರು ಎನ್ನುವುದನ್ನು ತಿಳಿಸಲಿ. ಈ ಪ್ರಶ್ನೆಗೆ ಅವರು ಉತ್ತರ ನೀಡದೇ ಇದ್ದರೆ, ಅವರೇ ಈ ಹತ್ಯೆಗಳಿಗೆ ನೇರ ಹೊಣೆ ಎಂದು ವಾಗ್ದಾಳಿ ನಡೆಸಿದರು.

    ರಾಜಧಾನಿ ತಿರುವನಂತಪುರದ ವರೆಗೆ ಸುಮಾರು 15 ದಿನಗಳ ಕಾಲ ನಡೆಯಲಿರುವ ಯಾತ್ರೆಯಲ್ಲಿ ಬಿಜೆಪಿಯ ಹಲವು ನಾಯಕರು ಪಾಲ್ಗೊಳ್ಳಲಿದ್ದಾರೆ. ಈ ಯಾತ್ರೆಯಲ್ಲಿ ಪಾಲ್ಗೊಳ್ಳಲು ಬುಧವಾರ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಕಣ್ಣೂರಿಗೆ ಆಗಮಿಸಲಿದ್ದಾರೆ.