Tag: Himanta Sarma

  • ರಾಹುಲ್‌ನ ಜೈಲಿಗಟ್ಟುತ್ತೀನಿ, ದೇಶದ ಅನೇಕ ಜೈಲುಗಳು ಗಾಂಧಿ ಕುಟುಂಬಕ್ಕೆ ಕಾಯ್ತಿವೆ: ಅಸ್ಸಾಂ ಸಿಎಂ

    ರಾಹುಲ್‌ನ ಜೈಲಿಗಟ್ಟುತ್ತೀನಿ, ದೇಶದ ಅನೇಕ ಜೈಲುಗಳು ಗಾಂಧಿ ಕುಟುಂಬಕ್ಕೆ ಕಾಯ್ತಿವೆ: ಅಸ್ಸಾಂ ಸಿಎಂ

    ಗುವಾಹಟಿ: ರಾಹುಲ್ ಗಾಂಧಿ ಮತ್ತು ಅಸ್ಸಾಂ ಸಿಎಂ ಹಿಮಾಂತ ಬಿಸ್ವಾ ಶರ್ಮಾ (Himanta Sarma) ನಡುವಿನ ವಾಕ್ಸಮರ ತಾರಕಕ್ಕೇರಿದೆ. ಭ್ರಷ್ಟಾಚಾರ ಮಾಡಿರುವ ನಿಮ್ಮನ್ನ ಜೈಲಿಗೆ ಹಾಕಬೇಕು ಎಂದಿದ್ದ ರಾಹುಲ್ ಹೇಳಿಕೆಗೆ ಶರ್ಮಾ ಕೆಂಡಾಮಂಡಲರಾಗಿದ್ದಾರೆ.

    ನಿಮ್ಮ ಹಾಗೆ ಬಾಟೆಲ್ ಹಾಲು ಕುಡಿದು ಬೆಳೆದವನಲ್ಲ. ತಾಯಿ ಎದೆಹಾಲು ಕುಡಿದ ಮಗ ನಾನು. ಪೈಕಾನ್ ಮೀಸಲು ಅರಣ್ಯದಲ್ಲಿ ತೆರವು ಕಾರ್ಯಾಚರಣೆಯ ಸಂದರ್ಭದಲ್ಲಿ ಭುಗಿಲೆದ್ದ ಹಿಂಸಾತ್ಮಕ ಘರ್ಷಣೆಗೆ ರಾಹುಲ್ ಗಾಂಧಿ ದ್ವೇಷಭಾಷಣ ಕಾರಣ. ರಾಹುಲ್ (Rahul Gandhi), ಖರ್ಗೆ ಅಸ್ಸಾಂಗೆ ಭೇಟಿ ನೀಡಿದ ವೇಳೆ ಮಾಡಿರುವ ಭಾಷಣಗಳನ್ನು ಅಧಿಕಾರಿಗಳು ಪರಿಶೀಲಿಸ್ತಿದ್ದಾರೆ. ಸಾಕ್ಷ್ಯಾಧಾರ ಸಿಕ್ಕರೆ ನಿಮ್ಮನ್ನ ಜೈಲಿಗಟ್ಟುತ್ತೇನೆ ಅಂತ ಗುಡುಗಿದ್ದಾರೆ. ಅಲ್ಲದೇ ದೇಶದಲ್ಲಿ ಅನೇಕ ಜೈಲುಗಳು ಗಾಂಧಿ ಕುಟುಂಬಕ್ಕಾಗಿ ಕಾಯುತ್ತಿವೆ ಅಂದಿದ್ದಾರೆ. ಇದನ್ನೂ ಓದಿ: ಇಂಡಿಯಾ ಒಕ್ಕೂಟದಿಂದ ಹೊರಬಂದ ಆಪ್‌ – ಎಎಪಿ ನಾಯಕ ಸಂಜಯ್‌ ಸಿಂಗ್‌ ಹೇಳಿಕೆ

    ಇನ್ನೂ, ರಾಬರ್ಟ್ ವಾದ್ರಾ (Robert Vadra) ಭೂ ಅವ್ಯವಹಾರ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಚಾರ್ಜ್‌ಶೀಟ್‌ಗೆ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ. ಇದನ್ನೂ ಓದಿ: ಶಿಕೋಹ್‌ಪುರ ಭೂ ವ್ಯವಹಾರ ಕೇಸ್‌ – ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ವಿರುದ್ಧ ED ಚಾರ್ಜ್‌ಶೀಟ್

    ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ನನ್ನ ಬಾವನಿಗೆ ಕಳೆದ 10 ವರ್ಷಗಳಿಂದ ಕೇಂದ್ರ ಸರ್ಕಾರ ಹಿಂಸಿಸುತ್ತಿದೆ. ಇದೀಗ ದಾಖಲಾಗಿರುವ ಚಾರ್ಜ್ಶೀಟ್ ಕೂಡ ಅದರ ಮುಂದುವರಿದ ಭಾಗವಾಗಿದೆ ಅಂದಿದ್ದಾರೆ. ರಾಬರ್ಟ್, ಪ್ರಿಯಾಂಕಾ ಮತ್ತು ಅವರ ಮಕ್ಕಳು ಮತ್ತೊಂದು ದುರುದ್ದೇಶಪೂರಿತ, ರಾಜಕೀಯ ಪ್ರೇರಿತ ಅಪಪ್ರಚಾರ, ಕಿರುಕುಳವನ್ನು ಎದುರಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ನಾನು ಅವರೊಂದಿಗೆ ನಿಲ್ಲುತ್ತೇನೆ. ಸತ್ಯ ಎಂದಿಗೂ ಮೇಲುಗೈ ಸಾಧಿಸುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್‌ ದಾಳಿಯ ಹೊಣೆ ಹೊತ್ತಿದ್ದ ಟಿಆರ್‌ಎಫ್‌ನ್ನು ಉಗ್ರ ಸಂಘಟನೆ ಪಟ್ಟಿಗೆ ಸೇರಿಸಿದ ಅಮೆರಿಕ

  • ಬಾಂಗ್ಲಾದಿಂದ ಭಾರತಕ್ಕೆ ಹಿಂದೂಗಳೇ ಬರ್ತಿಲ್ಲ, ಆದ್ರೆ 35 ಮುಸ್ಲಿಂ ನುಸುಳುಕೋರರನ್ನು ಬಂಧಿಸಿದ್ದೇವೆ: ಅಸ್ಸಾಂ ಸಿಎಂ

    ಬಾಂಗ್ಲಾದಿಂದ ಭಾರತಕ್ಕೆ ಹಿಂದೂಗಳೇ ಬರ್ತಿಲ್ಲ, ಆದ್ರೆ 35 ಮುಸ್ಲಿಂ ನುಸುಳುಕೋರರನ್ನು ಬಂಧಿಸಿದ್ದೇವೆ: ಅಸ್ಸಾಂ ಸಿಎಂ

    ಗುವಾಹಟಿ: ಬಾಂಗ್ಲಾದೇಶದಿಂದ ಭಾರತಕ್ಕೆ ಹಿಂದೂಗಳು ಪ್ರವೇಶಿಸುವ ಪ್ರಯತ್ನ ಮಾಡಿಲ್ಲ. ಆದರೆ ನಾವು ಇದುವರೆಗೂ 35 ಮುಸ್ಲಿಂ ನುಸುಳುಕೋರರನ್ನು ಬಂಧಿಸಿದ್ದೇವೆ ಎಂದು ಬಾಂಗ್ಲಾ ಬಿಕ್ಕಟ್ಟಿನ ಕುರಿತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Sarma) ಹೇಳಿದ್ದಾರೆ.

    ಬಾಂಗ್ಲಾದೇಶದ ಬಿಕ್ಕಟ್ಟಿನ ಕುರಿತು ಟ್ವೀಟ್‌ ಮಾಡಿರುವ ಅವರು, ಬಾಂಗ್ಲಾದೇಶದಲ್ಲಿ ಹಿಂದೂಗಳು (Hindus) ಹೋರಾಡುತ್ತಿದ್ದಾರೆ. ಅಲ್ಲೇ ಉಳಿದುಕೊಂಡಿದ್ದಾರೆ. ಕಳೆದ ಒಂದು ತಿಂಗಳಲ್ಲಿ, ನಾವು ಒಬ್ಬ ಹಿಂದೂ ವ್ಯಕ್ತಿ ಭಾರತಕ್ಕೆ ಬಂದಿದ್ದನ್ನು ಪತ್ತೆ ಮಾಡಿಲ್ಲ. ಆದರೆ ಕಳೆದ ತಿಂಗಳಲ್ಲಿ ನಾವು 35 ಮುಸ್ಲಿಂ ನುಸುಳುಕೋರರನ್ನು ಬಂಧಿಸಿದ್ದೇವೆ. ಇಂದು ಕೂಡ ನಾವು ಕರೀಂಗಂಜ್‌ನಲ್ಲಿ ಇಬ್ಬರನ್ನು ಬಂಧಿಸಿದ್ದೇವೆ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರಕ್ಕೆ ಬರೋಬ್ಬರಿ 2,100 ಕೋಟಿ ರೂ. ಚೆಕ್‌ ಕೊಟ್ಟ ದಾನಿ

    ಬಾಂಗ್ಲಾದೇಶದಿಂದ ಹಿಂದೂಗಳು ಅಸ್ಸಾಂಗೆ ಪ್ರವೇಶಿಸಿದ ಬಗ್ಗೆ ಯಾವುದೇ ದಾಖಲೆಗಳಿಲ್ಲ ಎಂದು ತಿಳಿಸಿದ್ದಾರೆ. ನಾವು ಅವರನ್ನು ತಡೆದು ವಾಪಸ್‌ ಕಳಿಸಿದ್ದೇವೆ. ಅದೃಷ್ಟವಶಾತ್ ಅಥವಾ ದುರದೃಷ್ಟವಶಾತ್, ಅವರು ಒಂದೇ ಸಮುದಾಯಕ್ಕೆ ಸೇರಿದವರು. ಅವರ‍್ಯಾರು ಹಿಂದೂ ಅಲ್ಲ. ಯಾವುದೇ ಹಿಂದೂಗಳು ಭಾರತಕ್ಕೆ ಬರಲು ಪ್ರಯತ್ನಿಸುತ್ತಿಲ್ಲ. ಬಾಂಗ್ಲಾದಲ್ಲೇ ಇದ್ದು ಹೋರಾಟ ಮಾಡುತ್ತಿದ್ದಾರೆ. ಹಿಂದೂಗಳು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಬಾಂಗ್ಲಾದೇಶದ ಸರ್ಕಾರದ ಮೇಲೆ ಪ್ರಭಾವ ಬೀರಲು ನಮ್ಮ ಪ್ರಧಾನಿಯನ್ನು ವಿನಂತಿಸುತ್ತಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.

    ಅಸ್ಸಾಂ ಮುಖ್ಯಮಂತ್ರಿ ಇಬ್ಬರು ಬಾಂಗ್ಲಾದೇಶಿ ಪ್ರಜೆಗಳನ್ನು ಅಸ್ಸಾಂ ಪೊಲೀಸರು ಬದರ್‌ಪುರ ರೈಲು ನಿಲ್ದಾಣದಲ್ಲಿ ಬಂಧಿಸಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: J&K Poll Manifesto | ಪಿಡಿಪಿ ಅಧಿಕಾರಕ್ಕೆ ಬಂದ್ರೆ 200 ಯೂನಿಟ್ ವಿದ್ಯುತ್‌ ಉಚಿತ – ಮೆಹಬೂಬಾ ಮುಫ್ತಿ

  • ಸಿಎಂ ಕೆಸಿಆರ್‌ಗೆ ಸರ್ಜಿಕಲ್ ಸ್ಟ್ರೈಕ್ ವೀಡಿಯೋ ಪುರಾವೆ ನೀಡಿದ ಅಸ್ಸಾಂ ಸಿಎಂ

    ಸಿಎಂ ಕೆಸಿಆರ್‌ಗೆ ಸರ್ಜಿಕಲ್ ಸ್ಟ್ರೈಕ್ ವೀಡಿಯೋ ಪುರಾವೆ ನೀಡಿದ ಅಸ್ಸಾಂ ಸಿಎಂ

    ನವದೆಹಲಿ: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಹಾಗೂ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ನಡುವಿನ ರಾಜಕೀಯ ಕಿತ್ತಾಟ ಮುದುವರಿದಿದ್ದು, ಹಿಮಂತ ಬಿಸ್ವಾ ಅವರು ಸರ್ಜಿಕಲ್ ಸ್ಟ್ರೈಕ್‍ನ ವೀಡಿಯೋ ಪುರಾವೆಯನ್ನು ನೀಡಿ ತಿರುಗೇಟು ನೀಡಿದ್ದಾರೆ.

    ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ಕೆಸಿಆರ್ ಅವರಿಗೆ ನಮ್ಮ ವೀರ ಸೇನೆಯ ಸರ್ಜಿಕಲ್ ಸ್ಟ್ರೈಕ್‍ನ ಪುರಾವೆ ಇಲ್ಲಿದೆ. ನೀವು ನಮ್ಮ ಸಶಸ್ತ್ರ ಪಡೆಗಳ ಶೌರ್ಯವನ್ನು ಪ್ರಶ್ನಿಸಿ ಅವರನ್ನು ಅವಮಾನಿಸುತ್ತಿದ್ದಿರಿ. ನವ ಭಾರತವು ನಮ್ಮ ಸೇನೆಗೆ ಅವಮಾನವಾದರೆ ಸಹಿಸುವುದಿಲ್ಲ ಎಂದು ಪೋಸ್ಟ್ ಮಾಡಿದ್ದಾರೆ.

    2016ರಲ್ಲಿ ಪಾಕಿಸ್ತಾನದಲ್ಲಿ ಭಾರತ ನಡೆಸಿದ ಸರ್ಜಿಕಲ್ ಸ್ಟ್ರೈಕ್ ಮತ್ತು 2019ರಲ್ಲಿ ನಡೆದ ವೈಮಾನಿಕ ದಾಳಿಯ ಪುರಾವೆಗಳನ್ನು ಕೇಂದ್ರವು ಪ್ರಸ್ತುತಪಡಿಸಬೇಕೆಂದು ರಾಹುಲ್ ಗಾಂಧಿ ಒತ್ತಾಯಿಸಿದ್ದರು. ಇದು ಭಾರೀ ಟೀಕೆಗೆ ಒಳಗಾಗಿತ್ತು. ಆದರೆ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರು ನಿನ್ನೆ ಪತ್ರಿಕಾಗೋಷ್ಠಿ ಮಾಡಿ ರಾಹುಲ್ ಗಾಂಧಿ ಅವರ ಪರ ವಹಿಸಿದ್ದರು.

    ರಾಹುಲ್ ಗಾಂಧಿ ಸರ್ಜಿಕಲ್ ಸ್ಟ್ರೈಕ್‍ನ ಪುರಾವೆ ಕೇಳಿದ್ದರಲ್ಲಿ ತಪ್ಪನಿಲ್ಲ, ಸರ್ಜಿಕಲ್ ಸ್ಟ್ರೈಕ್‍ನ ಪುರಾವೆಯನ್ನು ನನಗೂ ತೋರಿಸಿ. ಇದು ಭಾರತ ಸರ್ಕಾರದ ಜವಾಬ್ದಾರಿಯಾಗಿದೆ. ಜನರಲ್ಲಿ ಆತಂಕವಿದೆ. ಬಿಜೆಪಿ ಸುಳ್ಳು ಪ್ರಚಾರ ಮಾಡುತ್ತಿದೆ. ಅದಕ್ಕಾಗುಯೇ ಜನರು ಸಾಕ್ಷಿಯನ್ನು ಕೇಳುತ್ತಿದ್ದಾರೆ ಎಂದ ಅವರು ಇದು ಪ್ರಜಾಪ್ರಜಾಭುತ್ವ ವ್ಯವಸ್ಥೆ ನೀವು ರಾಜನಲ್ಲ ಎಂದು ಕಿಡಿಕಾರಿದ್ದರು. ಇದನ್ನೂ ಓದಿ: ರಾಹುಲ್ ಗಾಂಧಿ ಟ್ವೀಟ್ ವಿರುದ್ಧ ಒಂದು ಸಾವಿರಕ್ಕೂ ಹೆಚ್ಚು ಕೇಸ್ ದಾಖಲು

    ಈ ಬಗ್ಗೆ ಮಾತನಾಡಿದ ಹಿಮಂತ ಬಿಸ್ವಾ ಕೆಸಿಆರ್ ಭಾರತ ಸೇನೆಯನ್ನು ಅನುಮಾನಿಸಿದ್ದಕ್ಕಾಗಿ ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದ್ದರು. ಇದನ್ನೂ ಓದಿ: 7 ರಾಜ್ಯಗಳಲ್ಲಿ 14 ಮಹಿಳೆಯರನ್ನು ಮದುವೆಯಾಗಿದ್ದ ಭೂಪ ಅರೆಸ್ಟ್