Tag: Himavad Gopalaswamy Betta

  • 1 ಲಕ್ಷ ಪಾವತಿಸಿ ಶೂಟಿಂಗ್‌ | ಗೋಪಾಲಸ್ವಾಮಿ ಬೆಟ್ಟದ ಜಾಗ ಯಾರಿಗೆ ಸೇರಿದ್ದು? ಈಗ ಮತ್ತೊಂದು ವಿವಾದ

    1 ಲಕ್ಷ ಪಾವತಿಸಿ ಶೂಟಿಂಗ್‌ | ಗೋಪಾಲಸ್ವಾಮಿ ಬೆಟ್ಟದ ಜಾಗ ಯಾರಿಗೆ ಸೇರಿದ್ದು? ಈಗ ಮತ್ತೊಂದು ವಿವಾದ

    – ಸ್ಥಳ ಮುಜುರಾಯಿ ಇಲಾಖೆಗೆ ಸೇರಿದ್ದಾ? ಅರಣ್ಯ ಇಲಾಖೆಗೆ ಸೇರಿದ್ದಾ?

    ಚಾಮರಾಜನಗರ: ಬಂಡೀಪುರದ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ (Himavad Gopalaswamy Betta) ನಡೆದ ಮಲಯಾಳಂ ಚಿತ್ರದ (Malayalam Film) ಶೂಟಿಂಗ್ ವಿಚಾರ ವಿವಾದ ಸ್ವರೂಪ ಪಡೆದಿದೆ. ಚಿತ್ರೀಕರಣ ನಡೆದ ಸ್ಥಳ ಮುಜುರಾಯಿ ಇಲಾಖೆಗೆ (Muzrai) ಸೇರಿದ್ದಾ ಅಥವಾ ಅರಣ್ಯ (Forest) ಇಲಾಖೆಗೆ ಸೇರಿದ್ದಾ ಎಂಬ ಪ್ರಶ್ನೆ ಎದ್ದಿದೆ.

    ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತಾರಣ್ಯದ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಕೇರಳದ ಪೆಣ್ಣು ಕೇಸ್ (Pennu Case) ಸಿನಿಮಾ ಚಿತ್ರೀಕರಣ ನಡೆದಿತ್ತು. ಇದನ್ನೂ ಓದಿ: ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಚಿತ್ರೀಕರಣಕ್ಕೆ ಅವಕಾಶ ನೀಡಿದ್ದು ಹೇಗೆ?- ಬಂಡೀಪುರದ ಎಸಿಎಫ್ ಸ್ಪಷ್ಟನೆ

    ಶೂಟಿಂಗ್‌ಗೆ ಅವಕಾಶ ಕೊಡುವ ವೇಳೆ ಸರ್ಕಾರದ ಅಧೀನ ಕಾರ್ಯದರ್ಶಿಯವರು ಅರಣ್ಯ ಪರಿಸ್ಥಿತಿ ಮತ್ತು ಜೀವಿಶಾಸ್ತ್ರ ಇಲಾಖೆಯ ಪತ್ರದ ಸೂಚನೆ ಮೇರೆಗೆ ನಿಷೇಧಿತ ಪ್ರದೇಶ ಹೊರತುಪಡಿಸಿ ಜೊತೆಗೆ ವನ್ಯಜೀವಿ ಸಂರಕ್ಷಣೆ ಕಾಯ್ದೆಯಡಿ ವನ್ಯ ಪ್ರಾಣಿಗಳಿಗೆ ಧಕ್ಕೆಯಾಗದಂತೆ ವಲಯ ಅರಣ್ಯಾಧಿಕಾರಿಗಳ ಸಮ್ಮುಖದಲ್ಲಿ ಷರತ್ತಿಗೆ ಒಳಪಟ್ಟು ಚಿತ್ರೀಕರಿಸುವಂತೆ ಅನುಮತಿ ಕೊಟ್ಟಿದ್ದಾರೆ. ಅಲ್ಲದೇ ಚಿತ್ರೀಕರಣ ತಂಡದ ಬಳಿ ಒಂದು ಲಕ್ಷ ರೂ. ಶುಲ್ಕವನ್ನು ಸಹ ಕಟ್ಟಿಸಿಕೊಂಡಿದ್ದಾರೆ. ಇದನ್ನೂ ಓದಿ:ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಮಲಯಾಳಂ ಸಿನಿಮಾ ಚಿತ್ರೀಕರಣಕ್ಕೆ ಅನುಮತಿ – ಸರ್ಕಾರದ ವಿರುದ್ಧ ಸ್ಥಳೀಯರ ಆಕ್ರೋಶ

    ಅರಣ್ಯಾಧಿಕಾರಿಗಳ ಸಾರ್ವಜನಿಕ ಪ್ರಕಟಣೆ ಅನ್ವಯ ಶೂಟಿಂಗ್ ನಡೆದಿದ್ದು ನಿಷೇಧಿತ ಪ್ರದೇಶ ಅಲ್ಲದಿದ್ದರೆ ಅದು ಮುಜರಾಯಿ ಇಲಾಖೆಯ ಸ್ಥಳವೇ ಎಂಬ ಅನುಮಾನ ಹುಟ್ಟಿಸಿದೆ. ಈ ಬಗ್ಗೆ ಗುಂಡ್ಲುಪೇಟೆ ತಹಶೀಲ್ದಾರ್ ರಮೇಶ್ ಬಾಬು ಅವರನ್ನು ಕೇಳಿದ್ರೆ ಮುಜರಾಯಿ ಇಲಾಖೆಯಿಂದ ಯಾವುದೇ ಅನುಮತಿ ಕೊಟ್ಟಿಲ್ಲ. ಯಾರೂ ಕೂಡ ನಮ್ಮ ಅನುಮತಿಯನ್ನು ಕೇಳಿಲ್ಲ. ಸದ್ಯ ನಮ್ಮನ್ನು ಎಳೆದು ತರುವ ಪ್ರಯತ್ನವಾಗುತ್ತಿದೆ ಎಂದಿದ್ದಾರೆ.

    ಒಟ್ಟಿನಲ್ಲಿ ಅರಣ್ಯ ಇಲಾಖೆ ಯಾರದೋ ಮಾತಿಗೆ ಕಟ್ಟು ಬಿದ್ದು ಅನುಮತಿ ನೀಡಿ ಈಗ ವಿವಾದವನ್ನು ಮೈಮೇಲೆ ಎಳೆದುಕೊಂಡಿದೆ. ನಾವು ನಿಷೇಧಿತ ಪ್ರದೇಶದಲ್ಲಿ ಶೂಟಿಂಗ್ ನಡೆಸಲು ಅನುಮತಿ ಕೊಟ್ಟಿಲ್ಲ ಎಂಬ ಸಮರ್ಥನೆ ಬೇರೆ ಮಾಡಿಕೊಳ್ಳುತ್ತಿದೆ. ಶೂಟಿಂಗ್ ನಡೆದ ಸ್ಥಳ ನಿಷೇಧಿತ ಸ್ಥಳ ಅಲ್ಲವಾದರೆ ಆ ಜಾಗ ಮುಜರಾಯಿ ಇಲಾಖೆ ವ್ಯಾಪ್ತಿಗೆ ಸೇರಿದ್ದಾ ಅಥವಾ ಅರಣ್ಯ ಇಲಾಖೆಗೆ ಸೇರಿದ್ದ ಜಾಗ ಎಂಬ ಹೊಸ ಚರ್ಚೆ ಹುಟ್ಟುಹಾಕಿದೆ.

     

  • ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಚಿತ್ರೀಕರಣಕ್ಕೆ ಅವಕಾಶ ನೀಡಿದ್ದು ಹೇಗೆ?- ಬಂಡೀಪುರದ ಎಸಿಎಫ್ ಸ್ಪಷ್ಟನೆ

    ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಚಿತ್ರೀಕರಣಕ್ಕೆ ಅವಕಾಶ ನೀಡಿದ್ದು ಹೇಗೆ?- ಬಂಡೀಪುರದ ಎಸಿಎಫ್ ಸ್ಪಷ್ಟನೆ

    ಚಾಮರಾಜನಗರದ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ (Himavad Gopalaswamy Betta) ಮಲಯಾಳಂ (Mollywood0 ಚಿತ್ರೀಕರಣಕ್ಕೆ ಸ್ಥಳೀಯರಿಂದ ಭಾರೀ ವಿರೋಧ ವ್ಯಕ್ತವಾದ ಬೆನ್ನಲ್ಲೇ ಬಂಡೀಪುರ ಎಸಿಎಫ್ ನವೀನ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ. ಚಿತ್ರತಂಡಕ್ಕೆ ರಾಜ್ಯ ಸರ್ಕಾರದಿಂದ ಅನುಮತಿ ಸಿಕ್ಕಿದೆ. ಆದರೆ ನಿಯಮ ಉಲ್ಲಂಘಿಸಿದ್ದರೆ ಕಾನೂನು ಕ್ರಮ ಆಗಲಿದೆ ಎಂದು ಎಸಿಎಫ್ ನವೀನ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ:ಏ.22ರಿಂದ ಜ್ಯೂ.ಎನ್‌ಟಿಆರ್, ಪ್ರಶಾಂತ್ ನೀಲ್ ಸಿನಿಮಾದ ಶೂಟಿಂಗ್ ಶುರು

    ನಮ್ಮಿಂದ ಚಿತ್ರತಂಡ ಅನುಮತಿ ಪಡೆದಿಲ್ಲ. ಏ.8ರಂದೇ ರಾಜ್ಯ ಸರ್ಕಾರದಿಂದ ನೇರವಾಗಿ ಅನುಮತಿ ಪಡೆದು ಮಲಯಾಳಂ ಚಿತ್ರತಂಡ ಚಿತ್ರೀಕರಣ (Shooting) ಮಾಡಿದ್ದಾರೆ. ಸಿನಿಮಾ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಎರಡು ವಾಹನಗಳಿಗೆ ಮಾತ್ರ ಸರ್ಕಾರದಿಂದ ಅನುಮತಿ ನೀಡಲಾಗಿದೆ. ಚಿತ್ರತಂಡ ನಿಯಮ ಉಲ್ಲಂಘಿಸಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತೀವ್ರ ವಿವಾದದ ಬೆನ್ನಲ್ಲೇ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ:ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಮಲಯಾಳಂ ಸಿನಿಮಾ ಚಿತ್ರೀಕರಣಕ್ಕೆ ಅನುಮತಿ – ಸರ್ಕಾರದ ವಿರುದ್ಧ ಸ್ಥಳೀಯರ ಆಕ್ರೋಶ

    ಬಂಡೀಪುರವು ರಾಜ್ಯದ ಪ್ರಸಿದ್ಧ ಹುಲಿ ಸಂರಕ್ಷಿತ ಅರಣ್ಯವಾಗಿದೆ. ಪರಿಸರ ಸೂಕ್ಷ್ಮ ವಲಯದಲ್ಲಿ ಸಿನಿಮಾ ಶೂಟಿಂಗ್‌ಗೆ ಸರ್ಕಾರ ಹಾಗೂ ಅರಣ್ಯ ಇಲಾಖೆ ಅನುಮತಿ ನೀಡಿದ್ದು, ಮಲಯಾಳಂ ಸಿನಿಮಾದ ಚಿತ್ರೀಕರಣ ನಡೆದಿದೆ. ಇದೀಗ ಪರಿಸರ ಸೂಕ್ಷ್ಮ ವಲಯದಲ್ಲಿ ಹೇಗೆ ಚಿತ್ರೀಕರಣಕ್ಕೆ ಅವಕಾಶ ಕೊಟ್ಟಿದ್ದಾರೆ? ರಾಜ್ಯ ಸರ್ಕಾರ, ಬಂಡೀಪುರವನ್ನು ಕೇರಳ ಸರ್ಕಾರಕ್ಕೆ ಒತ್ತೆ ಇಡ್ತಿದ್ಯಾ ಎಂದು ಪ್ರಶ್ನಿಸುವ ಮೂಲಕ ಸ್ಥಳೀಯರು ಸರ್ಕಾರದ ವಿರುದ್ಧ ಮುಗಿಬಿದ್ದಿದ್ದರು. ಈ ಬೆನ್ನಲ್ಲೇ ಎಸಿಎಫ್ ನವೀನ್ ಕುಮಾರ್ ಕ್ಲ್ಯಾರಿಟಿ ನೀಡಿದ್ದಾರೆ.

  • ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಮಲಯಾಳಂ ಸಿನಿಮಾ ಚಿತ್ರೀಕರಣಕ್ಕೆ ಅನುಮತಿ – ಸರ್ಕಾರದ ವಿರುದ್ಧ ಸ್ಥಳೀಯರ ಆಕ್ರೋಶ

    ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಮಲಯಾಳಂ ಸಿನಿಮಾ ಚಿತ್ರೀಕರಣಕ್ಕೆ ಅನುಮತಿ – ಸರ್ಕಾರದ ವಿರುದ್ಧ ಸ್ಥಳೀಯರ ಆಕ್ರೋಶ

    – ಹಸು ಹೋದ್ರೆ ನಮ್ಮ ಮೇಲೆ  ಕೇಸ್ ಹಾಕ್ತಾರೆ, ಶೂಟಿಂಗ್‌ಗೆ ಅನುಮತಿ ನೀಡಿದ್ದು ಹೇಗೆ?
    – 9 ವರ್ಷದ ಹಿಂದೆ ಖಾಸಗಿ ವಾಹನ ಪ್ರವೇಶಕ್ಕೆ ನಿರ್ಬಂಧ

    ಚಾಮರಾಜನಗರ: ಇಲ್ಲಿನ ಬಂಡೀಪುರ ಅಭಯಾರಣ್ಯದ (Bandipur Sanctuary) ಹಿಮವದ್ ಗೋಪಾಲಸ್ವಾಮಿ ಬೆಟ್ಟ (Himavad Gopalaswamy Betta) ಪರಿಸರ ಸೂಕ್ಷ್ಮ ವಲಯದಲ್ಲಿ ಮಲಯಾಳಂ ಸಿನಿಮಾ ಚಿತ್ರೀಕರಣಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡುವ ಮೂಲಕ ರೈತರ ಹಾಗೂ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದೆ.

    ಬಂಡೀಪುರವು ರಾಜ್ಯದ ಪ್ರಸಿದ್ಧ ಹುಲಿ ಸಂರಕ್ಷಿತ ಅರಣ್ಯವಾಗಿದೆ. ಪರಿಸರ ಸೂಕ್ಷ್ಮ ವಲಯದಲ್ಲಿ ಸಿನಿಮಾ ಶೂಟಿಂಗ್‌ಗೆ ಸರ್ಕಾರ ಹಾಗೂ ಅರಣ್ಯ ಇಲಾಖೆಯ ಅನುಮತಿ ನೀಡಿದ್ದು ಮಲಯಾಳಂ ಸಿನಿಮಾದ ಚಿತ್ರೀಕರಣ ನಡೆದಿದೆ. ಇದೀಗ ಪರಿಸರ ಸೂಕ್ಷ್ಮ ವಲಯದಲ್ಲಿ ಹೇಗೆ ಚಿತ್ರೀಕರಣಕ್ಕೆ ಅವಕಾಶ ಕೊಟ್ಟಿದ್ದಾರೆ? ರಾಜ್ಯ ಸರ್ಕಾರ, ಬಂಡೀಪುರವನ್ನು ಕೇರಳ ಸರ್ಕಾರಕ್ಕೆ ಒತ್ತೆ ಇಡ್ತಿದ್ಯಾ ಎಂದು ಪ್ರಶ್ನಿಸುವ ಮೂಲಕ ಸ್ಥಳೀಯರು ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ. ಇದನ್ನೂ ಓದಿ: Exclusive |  ಕ್ಯಾಬಿನೆಟ್ ಕ್ಲೈಮ್ಯಾಕ್ಸ್, ಜಾತಿ ಗಣತಿ ಮಂಡನೆಗೆ ಪ್ಲ್ಯಾನ್‌ – ಮಾಸ್ಟರ್‌ಸ್ಟ್ರೋಕ್‌ ಕೊಡ್ತಾರಾ ಸಿಎಂ?

    ಇಡೀ ದೇಶದಲ್ಲಿ ಪ್ರಸಿದ್ಧಿ ಪಡೆದಿರುವ ಹಲಿ ಸಂರಕ್ಷಿತ ಅರಣ್ಯಗಳಲ್ಲಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಕೂಡ ಒಂದು. ಈಗ ಕರ್ನಾಟಕ ಸರ್ಕಾರ ಹಾಗೂ ಪಿಸಿಸಿಎಫ್ ಕೇರಳದ ಮಲಯಾಳಂ ಸಿನಿಮಾ ಚಿತ್ರೀಕರಣಕ್ಕೆ ಬಂಡೀಪುರದ ಪರಿಸರ ಸೂಕ್ಷ್ಮ ವಲಯದಲ್ಲಿ ಬರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಅವಕಾಶ ನೀಡುವ ಮೂಲಕ ಹುಬ್ಬೇರುವಂತೆ ಮಾಡಿದೆ. ಇದನ್ನೂ ಓದಿ: ಡೀಸೆಲ್ ಬೆಲೆ ಏರಿಕೆ – ಖಾಸಗಿ ಬಸ್ ಪ್ರಯಾಣ ದರ ದುಬಾರಿ!

    ಹಿಮವದ್ ಗೋಪಾಲಸ್ವಾಮಿ ಬೆಟ್ಟ ಪರಿಸರ ಸೂಕ್ಷ್ಮ ವಲಯ ವ್ಯಾಪ್ತಿಗೆ ಬರುವ ಹಿನ್ನಲೆ ಕಾಡು ಪ್ರಾಣಿಗಳಿಗೆ ತೊಂದರೆಯಾಗುವ ನಿಟ್ಟಿನಲ್ಲಿ 2016ರಲ್ಲಿ ಖಾಸಗಿ ವಾಹನಗಳಿಗೆ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು. ಯಾವುದೇ ಶೂಟಿಂಗ್‌ಗಳು ಸಹ ಬೆಟ್ಟದಲ್ಲಿ ನಡೆದಿಲ್ಲ. ಆದರೆ ಇದೀಗ ಶೂಟಿಂಗ್‌ಗೆ ಅವಕಾಶ ಕೊಟ್ಟಿರುವುದು ಏಕೆ ಎಂದು ಆಕ್ರೋಶ ಹೊರಹಾಕಿದ್ದಾರೆ.

    ಒಂದು ದಿನದ ಮಟ್ಟಿಗೆ ಸರ್ಕಾರ ಮಲಯಾಳಂ ಸಿನಿಮಾ ಶೂಟಿಂಗ್‌ಗೆ ಅವಕಾಶ ಕೊಟ್ಟಿತ್ತು. ಸ್ಥಳೀಯ ಕಾಂಗ್ರೆಸ್ ಶಾಸಕ ಗಣೇಶ್ ಪ್ರಸಾದ್ ಕೂಡ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರಾಗಿದ್ದಾರೆ. ಸರ್ಕಾರ, ಸಚಿವರಿಗೆ ಪರಿಸರ ಸೂಕ್ಷ್ಮ ವಲಯದ ಅರಿವಿಲ್ಲದಿದ್ದರೂ ಪರವಾಗಿಲ್ಲ, ಸ್ಥಳೀಯ ಶಾಸಕರಿಗಿಲ್ವಾ ಎನ್ನುವ ಪ್ರಶ್ನೆ ಮಾಡುತ್ತಾರೆ. ಅರಣ್ಯದಲ್ಲಿ ನಮ್ಮ ಹಸು ಮೇಯಲು ಹೋದರೆ ಅವಕಾಶ ಕೊಡುವುದಿಲ್ಲ. ನಮ್ಮ ಮೇಲೆ ಕೇಸ್ ಹಾಕಿದ ನಿದರ್ಶನ ಕೂಡ ಇದೆ. ಹೀಗಿರುವಾಗ ಶೂಟಿಂಗ್‌ಗೆ ಸರ್ಕಾರ ಪರ್ಮಿಷನ್ ಕೊಟ್ಟು ಅದರಿಂದ ಬಂಡೀಪುರದ ಆದಾಯ ಹೆಚ್ಚಿಸುವ ಅಗತ್ಯವಿಲ್ಲ ಸ್ಥಳೀಯರು ಕಿಡಿಕಾರಿದ್ದಾರೆ. ಇದನ್ನೂ ಓದಿ: ಭಾರತದ ಉದ್ಯಮಿಗೆ ಅಮೆರಿಕದಲ್ಲಿ ಕಹಿ ಅನುಭವ – ಏರ್‌ಪೋರ್ಟ್‌ನಲ್ಲಿ 8 ಗಂಟೆ ಕೂರಿಸಿದ ಆರೋಪ

    ಈ ಬಗ್ಗೆ ಆರಣ್ಯ ಇಲಾಖೆ ಡಿಸಿಎಫ್ ಪ್ರಭಾಕರನ್ ಮಾತ್ರ ರಾಜ್ಯ ಸರ್ಕಾರದಿಂದಲೇ ಮಲಯಾಳಂ ಸಿನಿಮಾ ಚಿತ್ರಿಕರಣಕ್ಕೆ ಅನುಮತಿ ನೀಡಲಾಗಿದೆ. ಅನುಮತಿಯ ಅದೇಶ ಪ್ರತಿ ನಮಗೂ ಬಂದಿದೆ. ಅಗ್ರಿಮೆಂಟ್ ಮಾಡ್ಕೊಂಡಿದ್ದೇವೆಂದು ಪಬ್ಲಿಕ್ ಟಿವಿಗೆ ಡಿಸಿಎಫ್ ಪ್ರಭಾಕರ್ ದೂರವಾಣಿಯಲ್ಲಿ ಮೂಲಕ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಚೀನಾ ಮೇಲಿನ ಟ್ಯಾರಿಫ್‌ ಅನ್ನು 104% ಹೆಚ್ಚಿಸಿದ ಅಮೆರಿಕ

    ಈಗಾಗ್ಲೇ ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ ತೆರವು ಬೇಡ ಎಂಬ ಕಾವು ಹೊತ್ತಿದೆ. ಈ ಸಮಯದಲ್ಲಿ ಮಲಯಾಳಂ ಸಿನಿಮಾಗೆ ಸರ್ಕಾರ ಅವಕಾಶ ಕಲ್ಪಿಸಿದ್ದು, ರೈತರು ಹಾಗೂ ಪರಿಸರವಾದಿಗಳ ಕಣ್ಣು ಕೆಂಪಾಗಿಸಿದೆ.

  • ಚುಮು ಚುಮು ಚಳಿಯಲ್ಲಿ ಓಡಾಡಿದ ಬೆಟ್ಟದ ಹುಲಿ

    ಚುಮು ಚುಮು ಚಳಿಯಲ್ಲಿ ಓಡಾಡಿದ ಬೆಟ್ಟದ ಹುಲಿ

    ಚಾಮರಾಜನಗರ: ದಟ್ಟ ಮಂಜು ತಂಪು ತಂಪು ವಾತಾವರಣವಷ್ಟೇ ಅಲ್ಲದೇ ಗೋಪಾಲಸ್ವಾಮಿ ಬೆಟ್ಟದಲ್ಲಿ ಇತ್ತೀಚಿಗೆ ಹುಲಿರಾಯ ಕೂಡ ಪ್ರವಾಸಿಗರಿಗೆ ಆಗಾಗ ದರ್ಶನ ನೀಡುತ್ತಿದ್ದು ಭಕ್ತರು ಸಖತ್ ಖುಷಿಯಾಗುತ್ತಿದ್ದಾರೆ.

    ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಹುಲಿಯೊಂದು ಬೆಟ್ಟದ ಸುತ್ತಮುತ್ತಲಿನ ಕಾಡನ್ನು ತನ್ನ ಸರಹದ್ದನ್ನಾಗಿ ಮಾಡಿಕೊಂಡಿದ್ದು ಆಗಾಗ ಪ್ರವಾಸಿಗರ ಕಣ್ಣಿಗೆ ಕಾಣಿಸಿಕೊಳ್ಳುವ ಮೂಲಕ ಬೆಟ್ಟದ ಹುಲಿ ಅಂತಲೇ ಕರೆಸಿಕೊಳ್ಳುತ್ತಿವೆ.

    ದಟ್ಟ ಮಂಜಿನ ಆನಂದ ಅನುಭವಿಸುತ್ತಿದ್ದ ಪ್ರವಾಸಿಗರು ಈಗ ಬೆಟ್ಟದ ಹುಲಿಯನ್ನು ಕಂಡು ಖುಷಿಯಾಗುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಕೂಡ ವೈರಲ್ ಆಗಿದೆ.