Tag: hindi

  • ಒಂದು ಭಾಷೆ ಬಿಟ್ಟು 4 ಭಾಷೆಗಳಲ್ಲಿ ಅ.31ಕ್ಕೆ ಅಮೆಜಾನ್‌ ಪ್ರೈಮ್‌ನಲ್ಲಿ ಕಾಂತಾರ ರಿಲೀಸ್‌

    ಒಂದು ಭಾಷೆ ಬಿಟ್ಟು 4 ಭಾಷೆಗಳಲ್ಲಿ ಅ.31ಕ್ಕೆ ಅಮೆಜಾನ್‌ ಪ್ರೈಮ್‌ನಲ್ಲಿ ಕಾಂತಾರ ರಿಲೀಸ್‌

    ಕಾಂತಾರ: ಚಾಪ್ಟರ್‌ 1 (Kantara Chapter 1) ಒಟಿಟಿಯಲ್ಲಿ ಯಾವಾಗ ಬಿಡುಗಡೆಯಾಗಲಿದೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ರಿಷಬ್‌ ಶೆಟ್ಟಿ (Rishab Shetty) ನಟಿಸಿ, ನಿರ್ದೇಶಿಸಿದ ಈ ವರ್ಷದ ಸೂಪರ್‌ ಹಿಟ್‌ ಚಲನಚಿತ್ರ ಅಕ್ಟೋಬರ್‌ 31 ರಂದು ಅಮೇಜಾನ್‌ ಪ್ರೈಮ್‌ನಲ್ಲಿ ಬಿಡುಗಡೆಯಾಗಲಿದೆ.

    ಕನ್ನಡ, ತಮಿಳು, ತೆಲುಗು, ಮಲಯಾಳಂ ಭಾಷೆಯಲ್ಲಿ ಸಿನಿಮಾ ಬಿಡುಗಡುಗಡೆ ಮಾಡಲಾಗುವುದು ಎಂದು ಅಮೆಜಾನ್‌ ಪ್ರೈಮ್‌ (Amazon Prime) ಅಧಿಕೃತವಾಗಿ ತಿಳಿಸಿದೆ.

    ಕಾಂತಾರದ ಎಲ್ಲಾ ಭಾಷೆಗಳ ಒಟಿಟಿ ಹಕ್ಕುಗಳನ್ನು (OTT Rights) ಅಮೆಜಾನ್‌ ಪಡೆದುಕೊಂಡಿದ್ದರೂ ಹಿಂದಿ ಭಾಷೆಗೆ ಡಬ್‌ ಆಗಿರುವ ಸಿನಿಮಾ ರಿಲೀಸ್‌ ಆಗುತ್ತಿಲ್ಲ. ಉತ್ತರ ಭಾರತದ ಮಾರುಕಟ್ಟೆಯಲ್ಲಿ ಈಗಲೂ ಕಾಂತಾರ ಟಿಕೆಟ್‌ಗಳು ಸೇಲ್‌ ಆಗುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್‌ ಕೊನೆಯಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ.

     

    ಬಿಡುಗಡೆಯಾಗಿ 25 ದಿನ ಕಳೆದರೂ ಕಾಂತಾರ ಕ್ರೇಜ್‌ ಇನ್ನೂ ಕಡಿಮೆಯಾಗಿಲ್ಲ. ನಾಲ್ಕನೇ ವಾರಕ್ಕೆ ಕಾಲಿಟ್ಟರೂ ಈಗಲೂ ಬುಕ್‌ಮೈಶೋದಲ್ಲಿ ಟಿಕೆಟ್‌ ಮಾರಾಟವಾಗುತ್ತಿದೆ. ಹಿಂದಿಯಲ್ಲಿ ಮೊದಲ ವಾರ 110.10 ಕೋಟಿ ರೂ. ಗಳಿಸಿದರೆ ಎರಡನೇ ವಾರದಲ್ಲಿ 54.57 ಕೋಟಿ ರೂ., ಮೂರನೇ ವಾರದಲ್ಲಿ 28.95 ಕೋಟಿ ರೂ., ನಾಲ್ಕನೇ ವಾರದಲ್ಲಿ 11.94 ಕೋಟಿ ರೂ. ಗಳಿಸುವ ಮೂಲಕ ಒಟ್ಟು 205.56 ಕೋಟಿ ರೂ. ಗಳಿಸಿದೆ.

    ಇಲ್ಲಿಯವರೆಗೆ ಬಾಕ್ಸ್‌ ಆಫೀಸ್‌ನಲ್ಲಿ ಕಾಂತಾರ 809 ಕೋಟಿ ರೂ. ಅಧಿಕ ಕಲೆಕ್ಷನ್‌ ಮಾಡಿ ಮುನ್ನುಗ್ಗುತ್ತಿದೆ. ಈ ಮೂಲಕ ಈ ವರ್ಷ ಅತಿ ಹೆಚ್ಚು ಕಲೆಕ್ಷನ್‌ ಮಾಡಿದ ಚಾವಾ ಸಿನಿಮಾವನ್ನು ಮೀರಿಸಿದೆ. ಚಾವಾ ಸಿನಿಮಾ 807 ಕೋಟಿ ರೂ. ಕಲೆಕ್ಷನ್‌ ಮಾಡಿತ್ತು.

    ಕಾಂತಾರ ಸಿನಿಮಾ ನಿರ್ಮಾಣಕ್ಕೆ ಅಂದಾಜು 125 ಕೋಟಿ ರೂ. ವೆಚ್ಚವಾಗಿದೆ ಎಂದು ಹೇಳಲಾಗುತ್ತಿದೆ. ಒಟಿಟಿ ಹಕ್ಕುಗಳನ್ನು ಅಮೇಜಾನ್‌ ಪ್ರೈಮ್‌ 125 ಕೋಟಿ ರೂ. ನೀಡಿ ಖರೀದಿಸಿದೆ ಎನ್ನಲಾಗುತ್ತಿದೆ. ಕೆಜಿಎಫ್‌ ನಂತರ ಅತಿದೊಡ್ಡ ಮೊತ್ತಕ್ಕೆ ಡಿಜಿಟಲ್ ರೈಟ್ಸ್ ಮಾರಾಟವಾದ ಎರಡನೇ ಕನ್ನಡ ಚಿತ್ರ ಕಾಂತಾರವಾಗಿದೆ.

    2022 ರಲ್ಲಿ ಬಿಡುಗಡೆಯಾದ ಕಾಂತಾರ ಸಿನಿಮಾ ಬಜೆಟ್‌ ಅಂದಾಜು 16 ಕೋಟಿ ರೂ. ಆಗಿದ್ದರೆ ಬಾಕ್ಸ್‌ ಆಫೀಸ್‌ನಲ್ಲಿ 450 ಕೋಟಿ ರೂ. ಕಲೆಕ್ಷನ್‌ ಮಾಡಿತ್ತು.

  • ಉತ್ತರ ಭಾರತದಲ್ಲಿ ಕಾಂತಾರ ಸಿನಿಮಾ ಹವಾ: ಬಾಕ್ಸಾಫೀಸ್‌ನಲ್ಲಿ 200 ಕೋಟಿ ಕ್ಲಬ್!

    ಉತ್ತರ ಭಾರತದಲ್ಲಿ ಕಾಂತಾರ ಸಿನಿಮಾ ಹವಾ: ಬಾಕ್ಸಾಫೀಸ್‌ನಲ್ಲಿ 200 ಕೋಟಿ ಕ್ಲಬ್!

    ಕಾಂತಾರ ಚಾಪ್ಟರ್-1 (Kantara Chapter 1) ಸಿನಿಮಾ ಬಿಡುಗಡೆ ಆಗಿ 25 ದಿನಗಳಾಗಿವೆ. ಸಿನಿಮಾ ಬಾಕ್ಸಾಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಸಿನಿಮಾದ ನಿರ್ಮಾಣ ಸಂಸ್ಥೆ ಹೊಂಬಾಳೆ ನೀಡಿರುವ ಲೆಕ್ಕಾಚಾರದ ಪ್ರಕಾರ `ಕಾಂತಾರ: ಚಾಪ್ಟರ್ 1′ ಸಿನಿಮಾ ವಿಶ್ವದಾದ್ಯಂತ ಬಾಕ್ಸಾಫೀಸ್‌ನಲ್ಲಿ 818 ಕೋಟಿಗೂ ಹೆಚ್ಚು ಮೊತ್ತವನ್ನು ಈಗಾಗಲೇ ಗಳಿಕೆ ಮಾಡಿದೆ. ಇದೀಗ ವಿಶ್ವ ಬಾಕ್ಸಾಫೀಸ್‌ನಲ್ಲಿ ಮಾತ್ರವಲ್ಲದೆ ಭಾರತೀಯ ಬಾಕ್ಸಾಫೀಸ್‌ನಲ್ಲಿಯೂ ಸಿನಿಮಾದ ಕಲೆಕ್ಷನ್ ಬಲು ಜೋರಾಗಿದೆ. ಅದರಲ್ಲೂ ಸಿನಿಮಾದ ಹಿಂದಿ ಆವೃತ್ತಿ ಗಳಿಕೆಯಲ್ಲಿ ದಾಖಲೆಯನ್ನೇ ಬರೆಯುತ್ತಿದೆ.

    `ಕಾಂತಾರ ಚಾಪ್ಟರ್ 1′ ಸಿನಿಮಾ ಈ ವರ್ಷ ಈವರೆಗೆ ಬಿಡುಗಡೆ ಆದ ಯಾವುದೇ ಸಿನಿಮಾಕ್ಕಿಂತಲೂ ಹೆಚ್ಚಿನ ಗಳಿಕೆಯನ್ನು ಬಾಕ್ಸಾಫೀಸ್‌ನಲ್ಲಿ ಈಗಾಗಲೇ ಮಾಡಿದೆ. ಈ ವರ್ಷ ಬಿಡುಗಡೆ ಆಗಿ ಅತಿ ಹೆಚ್ಚು ಮೊತ್ತ ಗಳಿಸಿದ ಸಿನಿಮಾ ಎನಿಸಿಕೊಂಡಿದೆ `ಕಾಂತಾರ: ಚಾಪ್ಟರ್ 1′. ಸಿನಿಮಾ ಅತಿ ಶೀಘ್ರದಲ್ಲಿಯೇ ವಿಶ್ವ ಬಾಕ್ಸಾಫೀಸ್‌ನಲ್ಲಿ 1,000 ಕೋಟಿ ಕಲೆಕ್ಷನ್ ಮಾಡಲಿರುವುದು ಪಕ್ಕಾ ಆಗಿದೆ.

    ಇನ್ನು ಸಿನಿಮಾದ ಹಿಂದಿ ಆವೃತ್ತಿಯ ಕಲೆಕ್ಷನ್ ಸಹ ಬಲು ಜೋರಾಗಿದೆ. ಸಿನಿಮಾದ ಹಿಂದಿ ಆವೃತ್ತಿ ಮಾತ್ರವೇ 200 ಕೋಟಿಗೂ ಹೆಚ್ಚು ಮೊತ್ತವನ್ನು ಬಾಕ್ಸಾಫೀಸ್‌ನಲ್ಲಿ ಈಗಾಗಲೇ ದೋಚಿದೆ. ಪರಭಾಷಾ ಸಿನಿಮಾ ಒಂದು ಹಿಂದಿ ಪ್ರದೇಶದಲ್ಲಿ 200 ಕೋಟಿ ಗಳಿಸುವುದು ಅದೂ ಒಂದು ತಿಂಗಳ ಮುಂಚೆಯೇ ಸಾಮಾನ್ಯ ಸಾಧನೆಯಲ್ಲ. `ಪುಷ್ಪ 2′ ಹೊರತುಪಡಿಸಿದರೆ ಇತ್ತೀಚೆಗಿನ ಇನ್ಯಾವ ಸಿನಿಮಾ ಸಹ ಈ ಸಾಧನೆ ಮಾಡಿಲ್ಲ. ಇದೀಗ ಕಾಂತಾರ ಸಿನಿಮಾ ಆ ಸಾಧನೆಯನ್ನ ಮಾಡಿರೋದು ಇಡೀ ಸ್ಯಾಂಡಲ್‌ವುಡ್ ಹೆಮ್ಮೆಪಡುವ ವಿಚಾರ. ಇನ್ನು ಇದೇ ಅಕ್ಟೋಬರ್ 31ರಂದು ಕಾಂತಾರ ಚಾಪ್ಟರ್-1 ಇಂಗ್ಲೀಷ್ ವರ್ಷನ್ ರಿಲೀಸ್ ಆಗಲಿದೆ.

  • ಹಿಂದಿ ಸಿನಿಮಾ, ಹಾಡುಗಳನ್ನು ನಿಷೇಧಿಸುವ ಮಸೂದೆಗೆ ವಿರೋಧ- ಯೂಟರ್ನ್‌ ಹೊಡೆದ ತಮಿಳುನಾಡು ಸರ್ಕಾರ

    ಹಿಂದಿ ಸಿನಿಮಾ, ಹಾಡುಗಳನ್ನು ನಿಷೇಧಿಸುವ ಮಸೂದೆಗೆ ವಿರೋಧ- ಯೂಟರ್ನ್‌ ಹೊಡೆದ ತಮಿಳುನಾಡು ಸರ್ಕಾರ

    ಚೆನ್ನೈ: ಭಾರೀ ವಿರೋಧ ವ್ಯಕ್ತವಾದ ಬೆನ್ನಲ್ಲೇ ಹಿಂದಿ ಹೇರಿಕೆಯನ್ನು (Hindi Impostion) ನಿಷೇಧಿಸುವ ಮಸೂದೆಯನ್ನು ಮಂಡನೆ ಮಾಡದೇ ಇರಲು ತಮಿಳುನಾಡು (Tamil Nadu) ಸರ್ಕಾರ ನಿರ್ಧರಿಸಿದೆ.

    ರಾಜ್ಯದ್ಯಂತ ಹಿಂದಿ ಹೋರ್ಡಿಂಗ್‌ಗಳು, ಬೋರ್ಡ್‌ಗಳು, ಚಲನಚಿತ್ರಗಳು ಮತ್ತು ಹಾಡುಗಳನ್ನು ನಿಷೇಧಿಸುವ ಮಸೂದೆ ಮಂಡಿಸಲು ತಮಿಳುನಾಡು ಸರ್ಕಾರ ಮುಂದಾಗಿತ್ತು.

    ಈ ಪ್ರಸ್ತಾವಿತ ಮಸೂದೆ ಸಂವಿಧಾನ ವ್ಯಾಪ್ತಿಯ ಒಳಗಡೆ ಇರಲಿದೆ. ಮಸೂದೆಯ ಬಗ್ಗೆ ಮಂಗಳವಾರ ರಾತ್ರಿ ಕಾನೂನು ತಜ್ಞರೊಂದಿಗೆ ತುರ್ತು ಸಭೆ ನಡೆಸಲಾಗಿತ್ತು ಎಂದು ಸರ್ಕಾರ ಮೂಲಗಳು ಮಾಧ್ಯಮಗಳಿಗೆ ತಿಳಿಸಿದ್ದವು.

    ಮಸೂದೆಯ ಕುರಿತು ಪ್ರತಿಕ್ರಿಯಿಸಿದ ಹಿರಿಯ ಡಿಎಂಕೆ ನಾಯಕ ಟಿಕೆಎಸ್ ಇಳಂಗೋವನ್, ನಾವು ಸಂವಿಧಾನಕ್ಕೆ ವಿರುದ್ಧವಾಗಿ ಏನನ್ನೂ ಮಾಡುವುದಿಲ್ಲ. ನಾವು ಅದನ್ನು ಪಾಲಿಸುತ್ತೇವೆ. ಹಿಂದಿ ಹೇರಿಕೆಯನ್ನು ನಾವು ವಿರೋಧಿಸುತ್ತೇವೆ ಎಂದು ಹೇಳಿದರು. ಇದನ್ನೂ ಓದಿ:  ಕರ್ನಾಟಕದಲ್ಲಿ ಮೂಲಸೌಕರ್ಯ ಕೆಟ್ಟದಾಗಿದೆ, ಪವರ್‌ ಕಟ್‌ ಸಮಸ್ಯೆಯಿದೆ: ಆಂಧ್ರ ಐಟಿ ಸಚಿವ

    ತಮಿಳುನಾಡು ಬಿಜೆಪಿಯೂ (BJP) ಸರ್ಕಾರದ ನಿರ್ಧಾರಕ್ಕೆ ಭಾರೀ ವಿರೋಧ ವ್ಯಕ್ತಪಡಿಸಿದೆ.ಬಿಜೆಪಿಯ ವಿನೋಜ್ ಸೆಲ್ವಂ ಸರ್ಕಾರದ ಕ್ರಮವನ್ನು ಇದೊಂದು ಮೂರ್ಖತನ ಮತ್ತು ಅಸಂಬದ್ಧ ನಿರ್ಧಾರ. ಭಾಷೆಯನ್ನು ರಾಜಕೀಯ ಸಾಧನವಾಗಿ ಬಳಸಬಾರದು ಎಂದಿದ್ದಾರೆ.  ಇದನ್ನೂ ಓದಿ:  ಬೆಂಗಳೂರು | ಆರೋಗ್ಯ ಸಮಸ್ಯೆ ಮುಚ್ಚಿಟ್ಟು ಮದುವೆಯಾದ ಪತ್ನಿಗೆ ಇಂಜೆಕ್ಷನ್‌ ಕೊಟ್ಟು ಕೊಂದ ಕಿಲ್ಲರ್‌ ಡಾಕ್ಟರ್‌

    ತಿರುಪರಾನುಕುಂದ್ರಂ, ಕರೂರ್ ಸಿಬಿಐ ತನಿಖೆ ಮತ್ತು ಆರ್ಮ್‌ಸ್ಟ್ರಾಂಗ್ ವಿಷಯಗಳು ಸೇರಿದಂತೆ ಇತ್ತೀಚಿನ ನ್ಯಾಯಾಲಯದ ಪ್ರಕರಣಗಳಲ್ಲಿ ಆಡಳಿತಾರೂಢ ಡಿಎಂಕೆಗೆ ಹಿನ್ನಡೆಯಾಗಿದೆ. ವಿವಾದಾತ್ಮಕ ಫಾಕ್ಸ್‌ಕಾನ್ ಹೂಡಿಕೆ ವಿಷಯದಿಂದ ಗಮನವನ್ನು ಬೇರೆಡೆ ಸೆಳೆಯಲು ಸರ್ಕಾರ ಈ ವಿಚಾರವನ್ನು ಮುನ್ನೆಲೆಗೆ ತಂದಿದೆ ಪ್ರತಿಪಕ್ಷಗಳು ದೂರಿವೆ. ಇದನ್ನೂ ಓದಿ:  ತಮಿಳುನಾಡಿನಲ್ಲಿ ಹಿಂದಿ ಹೋರ್ಡಿಂಗ್ಸ್‌, ಸಿನಿಮಾ, ಹಾಡುಗಳ ನಿಷೇಧ?

    ಈ ವರ್ಷದ ಮಾರ್ಚ್‌ನಲ್ಲಿ ಎಂಕೆ ಸ್ಟಾಲಿನ್ ಸರ್ಕಾರವು 2025–26 ರ ರಾಜ್ಯ ಬಜೆಟ್ ಲೋಗೋದಲ್ಲಿ ರಾಷ್ಟ್ರೀಯ ರೂಪಾಯಿ ಚಿಹ್ನೆಅನ್ನು ತಮಿಳು ಅಕ್ಷರ ರೂ.ನೊಂದಿಗೆ ಬದಲಾಯಿಸಿತ್ತು. ಈ ಬದಲಾವಣೆಯನ್ನು ಬಿಜೆಪಿ ನಾಯಕರು ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಟೀಕಿಸಿದ್ದರು. ಆದರೂ ಡಿಎಂಕೆ ತಮಿಳು ಭಾಷೆಯನ್ನು ಉತ್ತೇಜಿಸಿಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಮರ್ಥಿಸಿಕೊಂಡಿತ್ತು.

  • ಮೂರು ದಿನದಲ್ಲಿ 52 ಕೋಟಿ – ಹಿಂದಿಯಲ್ಲೂ ಕಮಾಲ್‌ ಆರಂಭಿಸಿದ ಕಾಂತಾರ

    ಮೂರು ದಿನದಲ್ಲಿ 52 ಕೋಟಿ – ಹಿಂದಿಯಲ್ಲೂ ಕಮಾಲ್‌ ಆರಂಭಿಸಿದ ಕಾಂತಾರ

    ಹಿಂದಿಯಲ್ಲೂ ಕಾಂತರ: ಚಾಪ್ಟರ್‌ 1 (Kantara Chapter 1) ಈಗ ಕಮಾಲ್‌ ಮಾಡಲು ಆರಂಭಿಸಿದೆ. ಬಿಡುಗಡೆಯಾದ ಮೂರು ದಿನದಲ್ಲಿ 52 ಕೋಟಿ ರೂ. ಗಳಿಸಿದೆ.

    ಗುರುವಾರ 18.50 ಕೋಟಿ, ಶುಕ್ರವಾರ 13.50 ಕೋಟಿ ರೂ., ಶನಿವಾರ 20 ಕೋಟಿ ರೂ. ಗಳಿಸಿದೆ. ಮೊದಲ ವಾರದಲ್ಲಿ 70 ಕೋಟಿ ರೂ. ಗಳಿಸುವ ಸಾಧ್ಯತೆಯಿದೆ.

    ದಸರಾ ರಜೆ ಇದ್ದ ಕಾರಣ ಶುಕ್ರವಾರ ಕಲೆಕ್ಷನ್‌ ಕಡಿಮೆಯಾಗಿತ್ತು. ಆದರೆ ಶನಿವಾರ ಭರ್ಜರಿ ಕಲೆಕ್ಷನ್‌ ಮಾಡಿತ್ತು ಭಾನುವಾರವೂ ಉತ್ತಮ ಕಲೆಕ್ಷನ್‌ ಮಾಡುವ ಸಾಧ್ಯತೆಯಿದೆ.  ಇದನ್ನೂ ಓದಿ:  ರಾಷ್ಟ್ರಪತಿ ಭವನದಲ್ಲಿ ‘ಕಾಂತಾರ’ ಪ್ರದರ್ಶನ – ರಿಷಬ್‌ ಚಿತ್ರತಂಡದ ಜೊತೆ ದ್ರೌಪದಿ ಮುರ್ಮು ಸಿನಿಮಾ ವೀಕ್ಷಣೆ

     

    2022ರಲ್ಲಿ ಬಿಡುಗಡೆಯಾದ ಕಾಂತಾರ ಆರಂಭದಲ್ಲಿ ಹಿಂದಿಯಲ್ಲಿ (Hindi) ಕಡಿಮೆ ಸಂಖ್ಯೆಯಲ್ಲಿ ಜನ ವೀಕ್ಷಣೆ ಮಾಡಿದ್ದರು. ನಂತರ ನಿಧಾನವಾಗಿ ಪ್ರಚಾರ ಪಡೆಯುತ್ತಿದ್ದಂತೆ ಅಂತಿಮವಾಗಿ ಅಂದಾಜು 96 ಕೋಟಿ ರೂ. ಗಳಿಸಿತ್ತು. ಎಲ್ಲಾ ಭಾಷೆಗಿಂತಲೂ ಅತಿ ಹೆಚ್ಚು ಕಲೆಕ್ಷನ್‌ ಹಿಂದಿಯಲ್ಲಿ ಆಗಿತ್ತು. ಟ್ರೆಂಡ್‌ ಗಮನಿಸಿದರೆ ಈ ಬಾರಿಯೂ ಇದೇ ಪುನಾರವರ್ತನೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ:  ಭಾನುವಾರವೂ ಹೌಸ್‌ಫುಲ್‌ – ಬೆಂಗಳೂರಿನಲ್ಲಿ ದಾಖಲೆ ಬರೆದ ಕಾಂತಾರ

    ಮೊದಲ ಕಾಂತಾರ  ಸಿನಿಮಾ ಸುಮಾರು 16 ಕೋಟಿ ರೂ.ನಲ್ಲಿ ನಿರ್ಮಾಣಗೊಂಡರೆ ಅಂದಾಜು 400 ಕೋಟಿ ರೂ. ಗಳಿಸಿತ್ತು. ಕಾಂತರ: ಚಾಪ್ಟರ್‌ 1 ಸಿನಿಮಾವನ್ನು ಅಂದಾಜು 125 ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಾಣ ಮಾಡಲಾಗಿದೆ. ಇದನ್ನೂ ಓದಿ: ಕೇರಳದಲ್ಲಿ ‌ಕಾಂತಾರ ಭರ್ಜರಿ ಪ್ರದರ್ಶನ – ಅತಿ ಹೆಚ್ಚು ಗಳಿಕೆ ಮಾಡಿದ 2ನೇ ಕನ್ನಡ ಸಿನಿಮಾ ದಾಖಲೆ

  • Maharashtra | ʻತ್ರಿಭಾಷಾ ಸೂತ್ರʼ ಆದೇಶ ಹಿಂಪಡೆದ ʻಮಹಾʼ ಸರ್ಕಾರ

    Maharashtra | ʻತ್ರಿಭಾಷಾ ಸೂತ್ರʼ ಆದೇಶ ಹಿಂಪಡೆದ ʻಮಹಾʼ ಸರ್ಕಾರ

    ಮುಂಬೈ: ರಾಜಕೀಯ ಗದ್ದಲ ಹಾಗೂ ಸಾರ್ವಜನಿಕರ ವಿರೋಧದ ನಡುವೆ ಮಹಾರಾಷ್ಟ್ರ ಸರ್ಕಾರ (Maharashtra government) ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಿಂದಿಯನ್ನು ಮೂರನೇ ಭಾಷೆಯನ್ನಾಗಿ (Third language) ಪರಿಚಯಿಸುವ ನಿರ್ಧಾರವನ್ನು (ತ್ರಿಭಾಷಾ ಸೂತ್ರ) ಹಿಂತೆಗೆದುಕೊಂಡಿದೆ.

    ರಾಜ್ಯ ವಿಧಾನಸಭೆಯ ಮಳೆಗಾಲ ಅಧಿವೇಶನಕ್ಕೂ ಮುನ್ನವೇ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ (Devendra Fadnavis) ಈ ನಿರ್ಧಾರ ಪ್ರಕಟಿಸಿದ್ದಾರೆ. ಭಾನುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಗೊಂಡಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಪುರಿ ಕಾಲ್ತುಳಿತದಲ್ಲಿ ಮೂವರ ಸಾವು ಪ್ರಕರಣ – ಸಂತ್ರಸ್ತರ ಕುಟುಂಬಗಳಿಗೆ ತಲಾ 25 ಲಕ್ಷ ಪರಿಹಾರ

    ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಹಾರಾಷ್ಟ್ರದ ಶಾಲೆಗಳಲ್ಲಿ ತ್ರಿಭಾಷಾ ಸೂತ್ರ ಅಳವಡಿಕೆಯ ಭಾಗವಾಗಿ 1ರಿಂದ 5ನೇ ತರಗತಿವರೆಗೆ ಹಿಂದಿಯನ್ನು ಭಾಷೆಯಾಗಿ ಪರಿಚಯಿಸಿದ್ದ ಆದೇಶವನ್ನು ಹಿಂಪಡೆದಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: 3 ರಫೇಲ್‌ ಸೇರಿ 5 ಯುದ್ಧ ವಿಮಾನಗಳನ್ನ ಪಾಕ್‌ ಹೊಡೆದಿದೆ – ಐಎಎಫ್‌ ಅಧಿಕಾರಿ ಹೇಳಿಕೆ ಉಲ್ಲೇಖಿಸಿ ಕಾಂಗ್ರೆಸ್‌ ವಾಗ್ದಾಳಿ

    ರಾಜ್ಯದಲ್ಲಿ 1ನೇ ತರಗತಿಯಿಂದ ತ್ರಿಭಾಷಾ ಸೂತ್ರ ಅಳವಡಿಕೆ ಕುರಿತು ಸರ್ಕಾರ ಈ ವರ್ಷದ ಏಪ್ರಿಲ್ ಮತ್ತು ಜೂನ್‌ನಲ್ಲಿ ಹೊರಡಿಸಿದ್ದ ಆದೇಶಗಳನ್ನು ಹಿಂಪಡೆಯಲು ಸಂಪುಟ ನಿರ್ಧರಿಸಿದೆ. ಅಲ್ಲದೇ ತ್ರಿಭಾಷಾ ಸೂತ್ರ ಅಳವಡಿಕೆ ಕುರಿತು ಪರಿಶೀಲಿಸಲು ಶಿಕ್ಷಣ ತಜ್ಞ ನರೇಂದ್ರ ಜಾಧವ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅರ್ಧಶತಕ ಗಳಿಸುವ ಮುನ್ನವೇ ಬಂದ ಜವರಾಯ – ಸಿಕ್ಸರ್ ಹೊಡೆದ ಹತ್ತೇ ಸೆಕೆಂಡ್‌ನಲ್ಲಿ ಹಾರಿತು ಪ್ರಾಣಪಕ್ಷಿ

    ಯಾವ ತರಗತಿಯಿಂದ ತ್ರಿಭಾಷಾ ಸೂತ್ರವನ್ನು ಜಾರಿಗೊಳಿಸಬಹುದು ಎಂಬುದರ ಕುರಿತು ಈ ಸಮಿತಿ ಮೂರು ತಿಂಗಳಲ್ಲಿ ಶಿಫಾರಸು ಮಾಡಲಿದೆ. ಸಮಿತಿಯ ಇತರ ಸದಸ್ಯರನ್ನು ಶೀಘ್ರವೇ ನೇಮಿಸಲಾಗುವುದು. ಉದ್ಧವ್‌ ಠಾಕ್ರೆ ಅವರು ಮುಖ್ಯಮಂತ್ರಿ ಆಗಿದ್ದಾಗ ನೇಮಿಸಲಾಗಿದ್ದ ಡಾ. ರಘುನಾಥ್ ಮಶೇಲ್ಕರ್ ಸಮಿತಿಯು ತ್ರಿಭಾಷಾ ನೀತಿಯ ಭಾಗವಾಗಿ ಮರಾಠಿ, ಇಂಗ್ಲಿಷ್ ಮತ್ತು ಹಿಂದಿಯನ್ನು 1ರಿಂದ 12ನೇ ತರಗತಿ ವರೆಗೆ ಜಾರಿಗೊಳಿಸಬೇಕು ಎಂದು ಶಿಫಾರಸು ಮಾಡಿತ್ತು. ಅದನ್ನು ಠಾಕ್ರೆ ಸ್ವೀಕರಿಸಿದ್ದರು. ಸಂಪುಟದ ಮುಂದೆಯೂ ಇಡಲಾಗಿತ್ತು. ಆಗ ಈ ವರದಿ ತಿರಸ್ಕರಿಸದ ಅವರು, ಈ ನೀತಿಯನ್ನು ಜಾರಿಗೊಳಿಸಲು ಸಮಿತಿಯೊಂದನ್ನೂ ರಚಿಸಿದ್ದರು’ ಎಂದು ಫಡಣವೀಸ್ ವಿವರಿಸಿದರು.

    ಈಗ ಠಾಕ್ರೆ ಅವರು ತ್ರಿಭಾಷಾ ಸೂತ್ರವನ್ನು ವಿರೋಧಿಸುತ್ತಿದ್ದಾರೆ. ಹೀಗೆ ಅವರು ಭಾಷೆ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಅವರು ದೂರಿದರು.

  • ಉರ್ದು, ಪರ್ಷಿಯನ್‌ ಬದಲಿಗೆ ಹಿಂದಿಯಲ್ಲಿ ಮಾತನಾಡಿ: ಪೊಲೀಸರಿಗೆ ರಾಜಸ್ಥಾನ ಸಚಿವ ಸೂಚನೆ

    ಉರ್ದು, ಪರ್ಷಿಯನ್‌ ಬದಲಿಗೆ ಹಿಂದಿಯಲ್ಲಿ ಮಾತನಾಡಿ: ಪೊಲೀಸರಿಗೆ ರಾಜಸ್ಥಾನ ಸಚಿವ ಸೂಚನೆ

    ಜೈಪುರ: ಉರ್ದು, ಪರ್ಷಿಯನ್‌ ಭಾಷೆ (Urdu and Persian) ಮಾತನಾಡಬೇಡಿ. ಬದಲಿಗೆ ಹಿಂದಿ (Hindi), ಇಂಗ್ಲಿಷ್‌ನಲ್ಲಿ ಮಾತನಾಡಿ ಎಂದು ರಾಜಸ್ಥಾನ ಪೊಲೀಸರಿಗೆ ಸಚಿವ ಜವಾಹರ್‌ ಸಿಂಗ್‌ ಬೆಧಮ್‌ (Jawahar Singh Bedham) ನಿರ್ದೇಶನ ನೀಡಿದ್ದಾರೆ.

    ಅಧಿಕೃತ ಪೊಲೀಸ್ ದಾಖಲೆಗಳು, ವರದಿಗಳು, ಸೂಚನಾ ಫಲಕಗಳನ್ನು ಉರ್ದು ಮತ್ತು ಪರ್ಷಿಯನ್‌ ಬದಲಿಗೆ ಹಿಂದಿ ಭಾಷೆಯನ್ನು ಒಳಗೊಂಡಿರಬೇಕು ಎಂದು ಪೊಲೀಸ್ ಮಹಾನಿರ್ದೇಶಕರಿಗೆ ಬರೆದ ಪತ್ರದಲ್ಲಿ ಸಚಿವರು ಸೂಚಿಸಿದ್ದಾರೆ.

    ಮೊಘಲ್ ಯುಗದಿಂದಲೂ ಪೊಲೀಸ್ ವ್ಯವಸ್ಥೆಯಲ್ಲಿ ಉರ್ದು ಮತ್ತು ಪರ್ಷಿಯನ್ ಪದಗಳ ಬಳಕೆಯಾಗುತ್ತಿದೆ. ಪ್ರಸ್ತುತ ಪೀಳಿಗೆಯ ಪೊಲೀಸ್ ಸಿಬ್ಬಂದಿ ಮತ್ತು ಸಾರ್ವಜನಿಕರಿಗೆ ಈ ಭಾಷೆಗಳ ಪರಿಚಯವಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    ಈ ಭಾಷಾ ಅಂತರವು ಹೆಚ್ಚಾಗಿ ತಪ್ಪು ವ್ಯಾಖ್ಯಾನಕ್ಕೆ ಕಾರಣವಾಗುತ್ತದೆ. ನ್ಯಾಯ ನೀಡುವಲ್ಲಿ ವಿಳಂಬವಾಗುತ್ತದೆ. ಪೊಲೀಸ್ ಸಿಬ್ಬಂದಿ, ದೂರುದಾರರು ಮತ್ತು ಸಾರ್ವಜನಿಕರಲ್ಲಿ ಉರ್ದು/ಪರ್ಷಿಯನ್ ಭಾಷೆಯ ಜ್ಞಾನದ ಕೊರತೆಯಿಂದಾಗಿ ಈ ಪದಗಳನ್ನು ಹೆಚ್ಚಾಗಿ ತಪ್ಪಾಗಿ ಅರ್ಥೈಸಿಕೊಳ್ಳಲಾಗುತ್ತದೆ. ಇದು ನ್ಯಾಯದಲ್ಲಿ ವಿಳಂಬಕ್ಕೆ ಕಾರಣವಾಗುತ್ತದೆ ಎಂದು ತಿಳಿಸಿದ್ದಾರೆ.

    ಭಾರತದಲ್ಲಿ ಎಲ್ಲಾ ಭಾಷೆಗಳನ್ನು ಗೌರವಿಸಲಾಗುತ್ತದೆ. ಆದರೆ, ರಾಜಸ್ಥಾನವು ಪ್ರಾಥಮಿಕವಾಗಿ ಹಿಂದಿ ಮಾತನಾಡುವ ರಾಜ್ಯವಾಗಿದೆ. ಆಡಳಿತ ಭಾಷೆಯಲ್ಲಿ ಹಿಂದಿಗೆ ಆದ್ಯತೆ ನೀಡುವುದರಿಂದ ಕಾನೂನು ದಾಖಲೆಗಳು, ಸರ್ಕಾರಿ ಆದೇಶಗಳು ಮತ್ತು ಪೊಲೀಸ್ ದಾಖಲೆಗಳು ಈ ಭಾಷೆಯಲ್ಲಿ ಇರಬೇಕು ಎಂದಿದ್ದಾರೆ.

  • ಮಹಾರಾಷ್ಟ್ರದಲ್ಲಿ ಹೊಸ ಶಿಕ್ಷಣ ನೀತಿ ಜಾರಿ – ಹಿಂದಿ 3ನೇ ಕಡ್ಡಾಯ ಭಾಷೆ

    ಮಹಾರಾಷ್ಟ್ರದಲ್ಲಿ ಹೊಸ ಶಿಕ್ಷಣ ನೀತಿ ಜಾರಿ – ಹಿಂದಿ 3ನೇ ಕಡ್ಡಾಯ ಭಾಷೆ

    ಮುಂಬೈ: ಮಹಾರಾಷ್ಟ್ರ (Maharashtra) ಸರ್ಕಾರವು ಹೊಸ ಶಿಕ್ಷಣ ನೀತಿ ಜಾರಿಗೊಳಿಸಲಾಗಿದೆ ಎಂದು ಘೋಷಿಸಿದೆ. ಹಿಂದಿಯನ್ನು ಮೂರನೇ ಕಡ್ಡಾಯ ಭಾಷೆಯಾಗಿ ಅನುಷ್ಠಾನ ಮಾಡುವುದು ಯೋಜನೆಯ ಪ್ರಮುಖ ಅಂಶವಾಗಿದೆ.

    2025-26ನೇ ಶೈಕ್ಷಣಿಕ ವರ್ಷದಿಂದ ಎನ್‌ಇಪಿ (New Education Policy) ಜಾರಿಯಾಗಿದೆ. ಮರಾಠಿ ಮತ್ತು ಇಂಗ್ಲಿಷ್‌ ಬಳಿಕ 3ನೇ ಕಡ್ಡಾಯ ಭಾಷೆಯಾಗಿದೆ. 1ನೇ ತರಗತಿಯಿಂದ ಪ್ರಾರಂಭವಾಗಿ 2028-29 ರ ವೇಳೆಗೆ ಎಲ್ಲಾ ಶ್ರೇಣಿಗಳಿಗೆ ವಿಸ್ತರಿಸುತ್ತದೆ. ಹೊಸ ನೀತಿಯಡಿಯಲ್ಲಿ, ಮಹಾರಾಷ್ಟ್ರವು 5+3+3+4 ಶೈಕ್ಷಣಿಕ ರಚನೆಯನ್ನು ಅಳವಡಿಸಿಕೊಳ್ಳಲಿದೆ. ಇದನ್ನೂ ಓದಿ: ಖಾಸಗಿ ಶಾಲೆಗಳ ದಾಖಲಾತಿಗೆ ಸರ್ಕಾರದಿಂದ ರೂಲ್ಸ್ – ಪೋಷಕರ ಸಂದರ್ಶನ, ಮನಸೋ ಇಚ್ಛೆ ಫೀಸ್‌ಗೆ ಬ್ರೇಕ್

    ಮಹಾರಾಷ್ಟ್ರ ಸರ್ಕಾರವು 2025-26ರ ಶೈಕ್ಷಣಿಕ ವರ್ಷದಿಂದ ಪ್ರಾರಂಭವಾಗುವ ರಾಷ್ಟ್ರೀಯ ಶಿಕ್ಷಣ ನೀತಿ (NEP) 2020 ಅನ್ನು ಜಾರಿಗೆ ತರಲು ವಿವರವಾದ ಯೋಜನೆಯನ್ನು ಘೋಷಿಸಿದೆ. ಈ ಯೋಜನೆಯ ಪ್ರಮುಖ ಅಂಶವೆಂದರೆ ಮರಾಠಿ ಮತ್ತು ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿ ಓದುತ್ತಿರುವ 1 ರಿಂದ 5 ನೇ ತರಗತಿಯ ವಿದ್ಯಾರ್ಥಿಗಳಿಗೆ ಹಿಂದಿಯನ್ನು ಕಡ್ಡಾಯ ಮೂರನೇ ಭಾಷೆಯಾಗಿ ಪರಿಚಯಿಸಲಾಗಿದೆ.

    2025-26 ಶೈಕ್ಷಣಿಕ ವರ್ಷದಲ್ಲಿ 1 ನೇ ತರಗತಿಯಿಂದ ಪ್ರಾರಂಭವಾಗಿ 2028-29 ರ ವೇಳೆಗೆ ಎಲ್ಲಾ ಶ್ರೇಣಿಗಳಿಗೆ ವಿಸ್ತರಿಸುತ್ತದೆ. ಭಾಷಾ ನೀತಿಯ ಭಾಗವಾಗಿ, ಆರಂಭಿಕ ತರಗತಿಯ ವಿದ್ಯಾರ್ಥಿಗಳಿಗೆ ಹಿಂದಿಯನ್ನು ಕಡ್ಡಾಯ ಮೂರನೇ ಭಾಷೆಯಾಗಿ ಪರಿಚಯಿಸಲಾಗುವುದು. ಈ ಪರಿವರ್ತನೆಯನ್ನು ಬೆಂಬಲಿಸಲು, ರಾಜ್ಯ ಸರ್ಕಾರವು 2025 ರ ವೇಳೆಗೆ 80% ಶಿಕ್ಷಕರಿಗೆ ಹೊಸ ಶಿಕ್ಷಣ ವಿಧಾನಗಳು ಮತ್ತು ಡಿಜಿಟಲ್ ಪರಿಕರಗಳಲ್ಲಿ ತರಬೇತಿ ನೀಡಲು ಯೋಜಿಸಿದೆ. ಇದನ್ನೂ ಓದಿ: UK | ರಾಯಲ್ ಕಾಲೇಜ್ ಆಫ್ ಫಿಸಿಶಿಯನ್ಸ್‌ನ 123ನೇ ಅಧ್ಯಕ್ಷರಾಗಿ ಭಾರತೀಯ ಮೂಲದ ಮುಮ್ತಾಜ್‌ ಆಯ್ಕೆ

    ಹೊಸ ನೀತಿಯಡಿಯಲ್ಲಿ, ಮಹಾರಾಷ್ಟ್ರವು 5+3+3+4 ಶೈಕ್ಷಣಿಕ ರಚನೆಯನ್ನು ಅಳವಡಿಸಿಕೊಳ್ಳಲಿದ್ದು, ಪಠ್ಯಕ್ರಮ ಅಭಿವೃದ್ಧಿಯನ್ನು ಸ್ಥಳೀಯವಾಗಿ SCERT ಮತ್ತು ಬಾಲಭಾರತಿ ನಿರ್ವಹಿಸುತ್ತವೆ.

  • ಹಿಂದಿ ವಿರೋಧಿ ಪ್ರತಿಜ್ಞೆ ವೇಳೆ ಮಹಿಳೆಯ ಕೈ ಬಳೆ ಎಳೆದ ಡಿಎಂಕೆ ಕೌನ್ಸಿಲರ್‌

    ಹಿಂದಿ ವಿರೋಧಿ ಪ್ರತಿಜ್ಞೆ ವೇಳೆ ಮಹಿಳೆಯ ಕೈ ಬಳೆ ಎಳೆದ ಡಿಎಂಕೆ ಕೌನ್ಸಿಲರ್‌

    – ಕ್ಷೇತ್ರ ವಿಂಗಡಣೆ 30 ವರ್ಷಗಳ ಕಾಲ ಮುಂದೂಡಿ 
    – ತಮಿಳುನಾಡು ಸರ್ವಪಕ್ಷಗಳ ಸಭೆ ನಿರ್ಣಯ

    ಚೆನ್ನೈ: ಕೇಂದ್ರ ಸರ್ಕಾರದ ವಿರುದ್ಧ ಲೋಕಸಭೆ (Lok Sabha) ಕ್ಷೇತ್ರಗಳ ಪುನರ್‌ವಿಂಗಡಣೆ ಮತ್ತು ತ್ರಿಭಾಷಾ ಸೂತ್ರ (Three Language Formula) ಜಾರಿ ವಿಚಾರದಲ್ಲಿ ತಮಿಳುನಾಡು (Tamil Nadu) ಸರ್ಕಾರ ನಿರ್ಣಾಯಕ ಸಮರ ಸಾರಿದೆ.

    ಇಂದು ಸಿಎಂ ಸ್ಟಾಲಿನ್ (CM Stalin) ಕರೆದಿದ್ದ ತಮಿಳುನಾಡು ಸರ್ವ ಪಕ್ಷ ಸಭೆಯಲ್ಲಿ ಮಹತ್ವದ ತೀರ್ಮಾನ ಪ್ರಕಟವಾಗಿದೆ. 2026ರ ಜನಗಣತಿ ಆಧಾರದಡಿ ಲೋಕಸಭೆ ಕ್ಷೇತ್ರಗಳ ಪುನರ್‌ವಿಂಗಡಣೆ ಮಾಡಬಾರದು. ಈ ಪ್ರಕ್ರಿಯೆಯನ್ನು ಮುಂದಿನ 30 ವರ್ಷಕ್ಕೆ ಮುಂದೂಡಬೇಕು. ಅಲ್ಲಿಯವರೆಗೂ 1971ರ ಜನಗಣತಿ ಆಧಾರದ ಮೇಲೆ ಹಾಲಿ ಇರುವ ಲೋಕಸಭೆ ಕ್ಷೇತ್ರಗಳೇ ಮುಂದುವರೆಯಬೇಕು ಎಂದು ಒತ್ತಾಯಿಸಿ ನಿರ್ಣಯ ಕೈಗೊಳ್ಳಲಾಗಿದೆ.

    ಈಗ ಏನಾದರೂ ಕ್ಷೇತ್ರಗಳ ಪುನರ್‌ವಿಂಗಡಣೆ ಆದರೆ ತಮಿಳುನಾಡು 12 ಸ್ಥಾನ ಕಳೆದುಕೊಳ್ಳುತ್ತದೆ ಎಂಬ ಆತಂಕನ್ನು ವ್ಯಕ್ತಪಡಿಸಿದೆ. ತ್ರಿಭಾಷಾ ಸೂತ್ರವನ್ನು ತೀವ್ರವಾಗಿ ವಿರೋಧಿಸಿದ ಡಿಎಂಕೆ ತಮಿಳುನಾಡಿನ ಎಲ್ಲಾ ಕೇಂದ್ರ ಕಚೇರಿಗಳಲ್ಲಿ ಹಿಂದಿಯನ್ನು (Hindi) ತೊಲಗಿಸಬೇಕು. ರೈಲುಗಳಿಗೆ ಹಿಂದಿಯಲ್ಲಿ ಹೆಸರಿಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದೆ.  ಇದನ್ನೂ ಓದಿ: ಕುಂಭಮೇಳ | ಯುಪಿಯ ಮೂರು ಹೆದ್ದಾರಿಗಳಲ್ಲಿ 40 ಲಕ್ಷ ದಾಖಲೆಯ ವಾಹನಗಳ ಸಂಚಾರ

    ಹಿಂದಿ ಹೇರಿಕೆ ಖಂಡಿಸಿ ನಡೆಸಲಾದ ಪ್ರತಿಭಟನೆಯಲ್ಲಿ ಡಿಎಂಕೆ ಕೌನ್ಸಿಲರ್ ಜಾಕೀರ್ ಹುಸೇನ್ (DMK Councillor Zakir Hussain) ತಮ್ಮ ಪಕ್ಕ ನಿಂತಿದ್ದ ಮಹಿಳೆಯ ಕೈ ಬಳೆ ಎಳೆಯುತ್ತಿರುವ ವಿಡಿಯೋ ವೈರಲ್ ಆಗಿದೆ.

    ಈ ವಿಡಿಯೋವನ್ನು ಇಟ್ಟುಕೊಂಡು ಬಿಜೆಪಿ ಡಿಎಂಕೆ ವಿರುದ್ಧ ಕಿಡಿಕಾರಿದೆ. ಹಿಂದಿ ವಿರೋಧಿ ಪ್ರತಿಜ್ಞೆ ಹೆಸರಲ್ಲಿ ಬಳೆ ಕಳ್ಳತನಕ್ಕೆ ಇಳಿದಿದ್ದಾರೆ..ಕಳ್ಳರಿಗೂ ಡಿಎಂಕೆಗೂ ವ್ಯತ್ಯಾಸವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಟೀಕಿಸಿದ್ದಾರೆ.

     

  • ಮನಮೋಹನ್‌ ಸಿಂಗ್‌ಗೆ ಹಿಂದಿ ಓದಲು ಬರುತ್ತಿರಲಿಲ್ಲ!

    ಮನಮೋಹನ್‌ ಸಿಂಗ್‌ಗೆ ಹಿಂದಿ ಓದಲು ಬರುತ್ತಿರಲಿಲ್ಲ!

    ಪ್ರಧಾನಿಯಾಗಿದ್ದ ಮನಮೋಹನ್‌ ಸಿಂಗ್‌ (Manmohan Singh) ಅವರಿಗೆ ಹಿಂದಿ (Hindi) ಓದಲು ಬರುತ್ತಿರಲಿಲ್ಲ. ಅವಿಭಜಿತ ಪಂಜಾಬ್‌ನಲ್ಲಿ (ಈಗಿನ ಪಾಕಿಸ್ತಾನ ಪಂಜಾಬ್‌ನಲ್ಲಿರುವ ಗಾಹ್‌) ಸೆಪ್ಟೆಂಬರ್‌ 26, 1932 ರಲ್ಲಿ ಜನಿಸಿದರೂ ಸಿಂಗ್‌ ಅವರಿಗೆ ಹಿಂದಿ ಭಾಷೆಯನ್ನು ಓದಲು ಬರುತ್ತಿರಲಿಲ್ಲ.

    ಚಿಕ್ಕವಯಸ್ಸಿನಲ್ಲಿಯೇ ತಾಯಿಯನ್ನು ಕಳೆದುಕೊಂಡ ಅವರು ಅಜ್ಜಿಯ ಆಶ್ರಯದಲ್ಲಿ ಬೆಳೆದರು. ಅವರ ಜೀವನದ ಮೊದಲ ಹನ್ನೆರಡು ವರ್ಷಗಳಲ್ಲಿ ಅವರ ಹಳ್ಳಿಗೆ ವಿದ್ಯುತ್ ಇರಲಿಲ್ಲ. ಅವರು ದೀಪದ ಬೆಳಕಿನಲ್ಲಿ ಅಧ್ಯಯನ ಮಾಡಿದ್ದರು. 14 ನೇ ವಯಸ್ಸಿನಲ್ಲಿ, ಸಿಂಗ್ ಅವರ ಕುಟುಂಬವು ವಿಭಜನೆಯ ನಂತರ ಭಾರತಕ್ಕೆ ವಲಸೆ ಬಂದು ಅಮೃತಸರದಲ್ಲಿ ವಾಸಿಸುತ್ತಿತ್ತು. ಇದನ್ನೂ ಓದಿ: ಮನಮೋಹನ್‌ ಸಿಂಗ್‌ ಪ್ರಧಾನಿಯಾಗಿದ್ದು ಹೇಗೆ? 2004 ರಲ್ಲಿ ಏನಾಯ್ತು?

    ಪ್ರಾಥಮಿಕ ಶಿಕ್ಷಣವನ್ನು ಉರ್ದುವಿನಲ್ಲಿ (Urdu) ಓದಿದ ಕಾರಣ ಸಿಂಗ್‌ ಅವರಿಗೆ ಹಿಂದಿ ಮಾತನಾಡಲು ಮಾತ್ರ ಬರುತ್ತಿತ್ತು, ವಿನಾ: ಬರೆಯಲು ಮತ್ತು ಓದಲು ಬರುತ್ತಿರಲಿಲ್ಲ. ಇದನ್ನೂ ಓದಿ: ನಾನು ಮನಮೋಹನ್ ಸಿಂಗ್‌ ದೊಡ್ಡ ಅಭಿಮಾನಿ ಎಂದಿದ್ದ ಒಬಾಮಾ!

    ಪ್ರಧಾನಿಯಾಗಿದ್ದ ಸಮಯದಲ್ಲೂ ಅವರು ತಮ್ಮ ಭಾಷಣವನ್ನು ಉರ್ದುವಿನಲ್ಲಿ ಬರೆದು ಓದುತ್ತಿದ್ದರು. ಕೆಲ ಸಂದರ್ಭಗಳಲ್ಲಿ ತಮ್ಮ ಮಾತೃ ಭಾಷೆ ಪಂಜಾಬಿಯನ್ನು ಬರೆಯುವ ಲಿಪಿ ಗುರ್ಮುಖಿಯಲ್ಲಿ ಬರೆದುಕೊಳ್ಳುತ್ತಿದ್ದರು. ಮನಮೋಹನ್‌ ಸಿಂಗ್‌ ಉರ್ದು ಸಾಹಿತ್ಯ ಮತ್ತು ಕವಿತೆಯನ್ನು ಇಷ್ಟ ಪಡುತ್ತಿದ್ದರು.

    ಪ್ರಧಾನಿಯಾಗಿದ್ದ ಸಮಯದಲ್ಲಿ ಸಿಂಗ್‌ ಅವರು ತಮ್ಮ ಜನ್ಮಸ್ಥಳಕ್ಕೆ ಭೇಟಿ ನೀಡುವ ಬಯಕೆಯನ್ನು ವ್ಯಕ್ತಪಡಿಸಿದ್ದರು. ಆದರೆ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದರಿಂದ ಈ ಕನಸು ನನಸಾಗಿರಲಿಲ್ಲ.

    ಮನಮೋಹನ್‌ ಸಿಂಗ್‌ ಅವರ 2012ರ ಸ್ವಾತಂತ್ರ್ಯ ದಿನದ ಭಾಷಣದ 17 ನಿಮಿಷ 58 ಸೆಕೆಂಡ್‌ನಲ್ಲಿ ಉರ್ದುನಲ್ಲಿ ಬರೆದಿರುವ ಪುಟವನ್ನು ನೋಡಬಹುದು

  • ಆರ್‌ಸಿಬಿ ಹಿಂದಿ ಒಲವಿಗೆ ಕನ್ನಡ ಅಭಿಮಾನಿಗಳ ಆಕ್ರೋಶ

    ಆರ್‌ಸಿಬಿ ಹಿಂದಿ ಒಲವಿಗೆ ಕನ್ನಡ ಅಭಿಮಾನಿಗಳ ಆಕ್ರೋಶ

    ಬೆಂಗಳೂರು: ಐಪಿಎಲ್‌ನಲ್ಲಿ (IPL) ಬೆಂಗಳೂರನ್ನು (Bengaluru) ಪ್ರತಿನಿಧಿಸುತ್ತಿರುವ ಆರ್‌ಸಿಬಿಗೂ (RCB) ಕನ್ನಡ-ಹಿಂದಿ ಭಾಷಾ ಬಿಸಿ ತಟ್ಟಿದೆ.

    ಸೀಸನ್ 18 ಹರಾಜಿನ ವೇಳೆ ಆರ್‌ಸಿಬಿ ಮ್ಯಾನೇಜ್‌ಮೆಂಟ್ ಹಿಂದಿ ಸೋಷಿಯಲ್ ಮೀಡಿಯಾ ಓಪನ್ ಮಾಡಿದೆ. ವಿರಾಟ್ ಕೊಹ್ಲಿ ಹಿಂದಿಯಲ್ಲಿ ಆರ್‌ಸಿಬಿ ಬಗ್ಗೆ ಮಾತಾಡಿರುವ ವಿಡಿಯೋವನ್ನು ಹಂಚಿಕೊಂಡಿದೆ. ಆರ್‌ಸಿಬಿ ಹಿಂದಿ (Hindi) ಪ್ರೀತಿಗೆ ಕನ್ನಡ ಫ್ಯಾನ್ಸ್ ಸಿಡಿದೆದ್ದಿದ್ದಾರೆ.

    ಇದು ಬೆಂಗಳೂರಿನ ಕನ್ನಡ (Kannada) ಸಂಸ್ಕೃತಿಗೆ ಮಾಡಿರುವ ಅವಮಾನ. ಈ ಕ್ಷಣವೇ ಹಿಂದಿ ಪೇಜ್ ಅನ್ನು ರದ್ದು ಮಾಡಿ ಡಿಲೀಟ್ ಮಾಡಿ ಎಂದು ಆಗ್ರಹಿಸಿದ್ದಾರೆ. ಆದರೆ ಆರ್‌ಸಿಬಿ ಕನ್ನಡ ಅಭಿಮಾನಿಗಳ ಆಕ್ಷೇಪಕ್ಕೆ ಇತರೇ ಭಾಷಿಕರಿಂದಲೂ ಆಕ್ಷೇಪ ವ್ಯಕ್ತವಾಗಿದೆ.


    ವಿವಾದದ ಬೆನ್ನಲ್ಲೇ ಬಳಿಕ ಎಚ್ಚೆತ್ತ ಆರ್‌ಸಿಬಿ ಮ್ಯಾನೇಜ್‌ಮೆಂಟ್ ಸ್ಪಷ್ಟನೆ ಕೊಟ್ಟಿದೆ. ಮತ್ತಷ್ಟು ಜನರನ್ನು ತಲುಪುವ ಗುರಿ ಹೊಂದಿದ್ದು, ಕನ್ನಡ, ಹಿಂದಿ ಪೇಜ್ ಓಪನ್ ಮಾಡಿದ್ದೇವೆ. ಜೊತೆಗೆ ಮತ್ತಷ್ಟು ಭಾಷೆಗಳಲ್ಲೂ ಸೋಷಿಯಲ್ ಮೀಡಿಯಾ ಪೇಜ್ ಆರಂಭಿಸುತ್ತೇವೆ ಎಂದು ಸ್ಪಷ್ಟನೆ ಕೊಟ್ಟಿದೆ.  ಇದನ್ನೂ ಓದಿ: ನನ್ನ ಪ್ರೀತಿಯ RCBಗೆ…: ತಂಡದಿಂದ ಕೈಬಿಟ್ಟ ಆರ್‌ಸಿಬಿಗೆ ಸಿರಾಜ್‌ ಭಾವುಕ ವಿದಾಯ

    ಆರ್‌ಸಿಬಿ ಮ್ಯಾನೇಜ್‌ಮೆಂಟ್ ಸಮರ್ಥನೆಗೂ ಅಭಿಮಾನಿಗಳು ಕಿಡಿಕಾರಿದ್ದಾರೆ. ಬೇರೆ ತಂಡಗಳು ಕನ್ನಡದಲ್ಲಿ ಪೇಜ್ ಓಪನ್ ಮಾಡುತ್ತಾರಾ? ಸಂವಹನಕ್ಕೆ ಬೇಕಾದರೆ ಕನ್ನಡ-ಇಂಗ್ಲಿಷ್ ಸಾಲದೇ ಅಂತ ಪ್ರಶ್ನಿಸಿದ್ದಾರೆ.

    ಇನ್ನು ಕೆಲವರು ಆರ್‌ಸಿಬಿ ಏನು ರಣಜಿ ಟೀಮ್ ಅಲ್ಲ, ದೇಶಾದ್ಯಂತ ಅಭಿಮಾನಿಗಳನ್ನು ಹೊಂದಿದೆ. ಹಿಂದಿ ಸೇರಿದಂತೆ ಬೇರೆ ಭಾಷೆಗಳಲ್ಲಿ ಪೋಸ್ಟ್ ಮಾಡಿದರೆ ತಪ್ಪಲ್ಲ. ಕೆಎಂಎಫ್‌ನವರು (KMF) ನಂದಿನಿ ಹಾಲಿನ (Nandini Milk) ಬಗ್ಗೆ ದೆಹಲಿಯಲ್ಲಿ ಹಿಂದಿಯಲ್ಲಿ ಪೋಸ್ಟ್ ಮಾಡಿದರೆ ಇದಕ್ಕೆ ಆಕ್ಷೇಪಿಸ್ತೀರಾ ಎಂದು ವಾದಿಸುತ್ತಿದ್ದಾರೆ.