Tag: hindi films

  • ನಿರ್ಮಾಪಕ ಯಶ್ ಚೋಪ್ರಾ ಪತ್ನಿ ಪಮೇಲಾ ನಿಧನ

    ನಿರ್ಮಾಪಕ ಯಶ್ ಚೋಪ್ರಾ ಪತ್ನಿ ಪಮೇಲಾ ನಿಧನ

    ಬಾಲಿವುಡ್ (Bollywood) ನಿರ್ಮಾಪಕ- ನಿರ್ದೇಶಕ ದಿವಂಗತ ಯಶ್ ಚೋಪ್ರಾ (Yash Chopra) ಮಡದಿ ಪಮೇಲಾ ಚೋಪ್ರಾ (Pamela Chopra) ಅವರು ನಿಧನರಾಗಿದ್ದಾರೆ. ಚಿತ್ರರಂಗದಲ್ಲಿ ಗಾಯಕಿಯಾಗಿ ಪಮೇಲಾ ಚೋಪ್ರಾ ಗುರುತಿಸಿಕೊಂಡಿದ್ದರು. ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ದಾಖಲಾಗಿ ಕಳೆದ 15 ದಿನಗಳಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು (ಏಪ್ರಿಲ್ 20) ಬೆಳಗ್ಗೆ ಪಮೇಲಾ ಅವರು ನಿಧನರಾಗಿದ್ದಾರೆ. ಇದನ್ನೂ ಓದಿ:ಲಿಫ್ಟ್‌ನಲ್ಲಿ ಪತಿ ನಿಕ್ ಜೋನಸ್ ಜೊತೆ ಪ್ರಿಯಾಂಕಾ ಚೋಪ್ರಾ ರೊಮ್ಯಾನ್ಸ್

    1970ರಲ್ಲಿ ಯಶ್ ಚೋಪ್ರಾ ಜೊತೆ ಪಮೇಲಾ ಚೋಪ್ರಾ ಮದುವೆ ನಡೆದಿತ್ತು. ಈ ದಂಪತಿಗೆ ಆದಿತ್ಯ- ಉದಯ್ ಇಬ್ಬರು ಮಕ್ಕಳಿದ್ದಾರೆ. ಅವರು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಗಾಯಕಿಯಾಗಿದ್ದ ಪಮೇಲಾ ಪತಿ ಯಶ್ ಚೋಪ್ರಾ ಸಿನಿಮಾಗಳಿಗೆ ಹಾಡಿದ್ದರು. ‘ಕಬಿ ಕಬೀ’ ಚಿತ್ರದಿಂದ ‘ಮುಜ್‌ಸೇ ದೋಸ್ತಿ ಕರೊಗೆ’ ಚಿತ್ರಗಳವರೆಗೆ ಪಮೇಲಾ ಹಾಡಿದ್ದರು.

    ಇದೀಗ ಮುಂಬೈನ ಪಮೇಲಾ ನಿವಾಸದಲ್ಲಿ ಪಮೇಲಾ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಚಿತ್ರರಂಗದ ಸ್ನೇಹಿತರು, ಆಪ್ತರು ಗಾಯಕಿ ಪಮೇಲಾ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಅವರ ಅಂತ್ಯಕ್ರಿಯೆ ಬಗ್ಗೆ ಹೆಚ್ಚಿನ ಮಾಹಿತಿ ಸಿಗಬೇಕಿದೆ.

  • ನಟಿ ಮಾಧುರಿ ದೀಕ್ಷಿತ್‌ಗೆ ಮಾತೃ ವಿಯೋಗ

    ನಟಿ ಮಾಧುರಿ ದೀಕ್ಷಿತ್‌ಗೆ ಮಾತೃ ವಿಯೋಗ

    ಬಾಲಿವುಡ್ (Bollywood) ನಟಿ ಮಾಧುರಿ ದೀಕ್ಷಿತ್, ತಾಯಿ ಸ್ನೇಹಲತಾ ದೀಕ್ಷಿತ್ (Snehalatha Dixit) ಅವರು ನಿಧನರಾಗಿದ್ದಾರೆ. ಸಾಕಷ್ಟು ತಿಂಗಳುಗಳಿಂದ ವಯೋಸಹಜ ಕಾಯಿಲೆಯಿಂದ ಮಾಧುರಿ ತಾಯಿ ಬಳಲುತ್ತಿದ್ದರು. ಇದನ್ನೂ ಓದಿ: ಬಾಲಿವುಡ್ ನಂತರ ತಮಿಳಿನಲ್ಲೂ ಹವಾ ಸೃಷ್ಟಿಸಿದ ‘ಕಬ್ಜ’ ಸಿನಿಮಾ

    ಹಿಂದಿ ಚಿತ್ರರಂಗದಲ್ಲಿ ಸ್ಟಾರ್ ನಟಿಯಾಗಿ ಮಾಧುರಿ ದೀಕ್ಷಿತ್ (Madhuri Dixit) ಗೆಲ್ಲಲು, ತಾಯಿ (Mother) ಸ್ನೇಹಲತಾ ಅವರ ಬೆಂಬಲ ಸಾಕಷ್ಟಿದೆ. ನಟಿ ಮಾಧುರಿಗೆ ತಾಯಿಯೇ ಶಕ್ತಿಯಾಗಿದ್ದರು.

    ಮಾಧುರಿ ತಾಯಿ ಸ್ನೇಹಲತಾ ದೀಕ್ಷಿತ್ ಅವರಿಗೆ 90 ವರ್ಷ ವಯಸ್ಸಾಗಿತ್ತು. ಮುಂಬೈನ ತಮ್ಮ ನಿವಾಸದಲ್ಲಿ ಭಾನುವಾರದಂದು (ಮಾ.12) ಬೆಳಿಗ್ಗೆ 8:30ರ ಸುಮಾರಿಗೆ ನಿಧನರಾಗಿದ್ದಾರೆ. ಮುಂಬೈನ ವರ್ಲಿಯಲ್ಲಿ ಮಧ್ಯಾಹ್ನ 3 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ. ಸ್ನೇಹಲತಾ ಅವರ ನಿಧನಕ್ಕೆ ಅನೇಕರು ಸಂತಾಪ ಸೂಚಿಸಿದ್ದಾರೆ.

  • ಮದುವೆಯ ಬಳಿಕ ಮ್ಯಾಂಗೋ ಬಣ್ಣದ ಡ್ರೆಸ್‌ನಲ್ಲಿ ಮಿಂಚಿದ ಕಿಯಾರಾ ಅಡ್ವಾಣಿ

    ಮದುವೆಯ ಬಳಿಕ ಮ್ಯಾಂಗೋ ಬಣ್ಣದ ಡ್ರೆಸ್‌ನಲ್ಲಿ ಮಿಂಚಿದ ಕಿಯಾರಾ ಅಡ್ವಾಣಿ

    ಬಾಲಿವುಡ್‌ನ (Bollywood) ಕ್ಯೂಟ್ ಕಪಲ್ ಸಿದ್ಧಾರ್ಥ್ ಮಲ್ಹೋತ್ರಾ (Siddarth Malhotra) ಮತ್ತು ಕಿಯಾರಾ ಅಡ್ವಾಣಿ (Kiara Advani) ಇತ್ತೀಚಿಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಹನಿಮೂನ್ ಮುಗಿಸಿ ಇದೀಗ ಮತ್ತೆ ಕೆಲಸದಲ್ಲಿ ಆಕ್ಟೀವ್ ಆಗಿರುವ ಕಿಯಾರಾ ಹೊಸ ಫೋಟೋಶೂಟ್‌ನಲ್ಲಿ ಮಿಂಚಿದ್ದಾರೆ.

    `ಶೇರ್ಷಾ’ ಚಿತ್ರದ ಮೂಲಕ ಜನಪ್ರಿಯ ಜೋಡಿಯಾಗಿ ಸಿದ್-ಕಿಯಾರಾ ಹೈಲೆಟ್ ಆದರು. ಈ ಸಿನಿಮಾದ ಚಿತ್ರೀಕರಣದಲ್ಲಿಯೇ ಇಬ್ಬರಿಗೂ ಪ್ರೇಮಾಂಕುರವಾಗಿತ್ತು. ಫೆಬ್ರವರಿಯಲ್ಲಿ ದಾಂಪತ್ಯ ಜೀವನಕ್ಕೆ ಈ ಜೋಡಿ ಕಾಲಿಟ್ಟರು. ರಾಜಸ್ಥಾನದಲ್ಲಿ ಅದ್ದೂರಿಯಾಗಿ ಮದುವೆಯಾದರು. ಇದನ್ನೂ ಓದಿ: ದೇಶ ಗೆದ್ದ ಗೃಹಿಣಿಯ ಕಥೆ ಹೇಳಲು ಬರುತ್ತಿದ್ದಾರೆ ಅನುಪಮ

    ಬಿಟೌನ್ ಬೆಡಗಿ ಕಿಯಾರಾ -ಸಿದ್ ಹನಿಮೂನ್ ಮುಗಿಸಿ ಮುಂಬೈ ಮನೆಗೆ ಬಂದಿದ್ದಾರೆ. ಇಬ್ಬರೂ ತಮ್ಮ ಕೆಲಸದತ್ತ ಬ್ಯುಸಿಯಾಗಿದ್ದಾರೆ. ಸದ್ಯ ಮ್ಯಾಂಗೋ ಬಣ್ಣದ ಡ್ರೆಸ್‌ನಲ್ಲಿ ನಟಿ ಮಿಂಚಿದ್ದಾರೆ. ಫೋಟೋ ಬ್ಯಾಕ್‌ಗ್ರೌಂಡ್ ಕೂಡ ಮ್ಯಾಂಗೋ ಬಣ್ಣದಲ್ಲಿ ಇದೆ. ಜ್ಯೂಸ್ ಕಂಪನಿಯ ಜಾಹಿರಾತಿಗಾಗಿ ಕಿಯಾರಾ ಈ ರೀತಿಯ ಡ್ರೆಸ್ ಧರಿಸಿದ್ದಾರೆ.

    ಇನ್ನೂ ರಾಮ್ ಚರಣ್ ನಟನೆಯ 15ನೇ ಸಿನಿಮಾಗೆ ಕಿಯಾರಾ (Kiara Advani) ನಾಯಕಿಯಾಗಿದ್ದಾರೆ. ಕರಣ್ ಜೋಹರ್ (Karan Johar) ನಿರ್ಮಾಣ ಬ್ಯಾಕ್ ಟು ಬ್ಯಾಕ್ ಮೂರು ಸಿನಿಮಾಗಳಿಗೆ ಸಿದ್ಧಾರ್ಥ್ ಮಲ್ಹೋತ್ರಾಗೆ ಕಿಯಾರಾ ನಾಯಕಿ ಎಂದು ಹೇಳಲಾಗುತ್ತಿದೆ.

  • ಬಿಟ್ಟು ಬಿಡದೇ ರಿಷಬ್ ಪಂತ್‌ನ ಕಾಡುತ್ತಿರುವ ಊರ್ವಶಿ ರೌಟೇಲಾ: ನೆಟ್ಟಿಗರಿಂದ ನಟಿಗೆ ಕ್ಲಾಸ್

    ಬಿಟ್ಟು ಬಿಡದೇ ರಿಷಬ್ ಪಂತ್‌ನ ಕಾಡುತ್ತಿರುವ ಊರ್ವಶಿ ರೌಟೇಲಾ: ನೆಟ್ಟಿಗರಿಂದ ನಟಿಗೆ ಕ್ಲಾಸ್

    ಹುಭಾಷಾ ನಟಿಯಾಗಿ ಮಿಂಚ್ತಿರುವ ಊರ್ವಶಿ ರೌಟೇಲಾ (Uravashi Rautela) ಮತ್ತೆ ರಿಷಬ್ ಪಂತ್  (Rishab Pant) ವಿಷ್ಯವಾಗಿ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆಷ್ಟೇ ರಿಷಬ್ ಪಂತ್ ಅವರಿಗೆ ಕಾರು ಅಪಘಾತವಾಗಿತ್ತು. ಮುಂಬೈನ(Mumbai)  ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಿಷಬ್ ಹಿಂದೆ ಊರ್ವಶಿ ಬಿದ್ದಿದ್ದಾರೆ. ನಟಿಯ ವರ್ತನೆಗೆ ಅನೇಕರು ಛೀಮಾರಿ ಹಾಕಿದ್ದಾರೆ.

    ಕನ್ನಡ, ತೆಲುಗು, ಹಿಂದಿ ಸಿನಿಮಾಗಳಲ್ಲಿ ಮಿಂಚ್ತಿರುವ ಊರ್ವಶಿ ಈಗ ಮತ್ತೆ ರಿಷಬ್ ಪಂತ್ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ತಮ್ಮ ಪಾಡಿಗೆ ರಿಷಬ್ ಇದ್ದರೂ ಕೂಡ ಅವರಿಗೆ ಬಿಟ್ಟು ಬಿಡದೇ ಕಾಡ್ತಿದ್ದಾರೆ ನಟಿ ಊರ್ವಶಿ ರೌಟೇಲಾ. ರಿಷಬ್ ಪಂತ್ ಜೊತೆ ಊರ್ವಶಿ ಈ ಮೊದಲು ಡೇಟಿಂಗ್ ಮಾಡುತ್ತಿದ್ದರು ಎನ್ನಲಾಗಿತ್ತು. ಆದರೆ, ಇದನ್ನು ಇಬ್ಬರೂ ಒಪ್ಪಿಕೊಂಡಿರಲಿಲ್ಲ. ಈ ಮಧ್ಯೆ ಇಬ್ಬರ ನಡುವೆ ಬ್ರೇಕಪ್ ಆಗಿದೆ ಎನ್ನಲಾಗಿದೆ. ನಟಿ ಊರ್ವಶಿ ಈ ಹಿಂದೆ ಅವರು ಮಾಧ್ಯಮವೊಂದಕ್ಕೆ ಹೇಳಿಕೆ ನೀಡುವಾಗ ರಿಷಬ್ ಪಂತ್ ನನ್ನ ಭೇಟಿ ಮಾಡಲು ಹಲವು ಗಂಟೆ ಕಾದಿದ್ದರು ಎಂದಿದ್ದರು. ಇದು ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿತ್ತು. ಈ ಬಗ್ಗೆ ಕ್ರಿಕೆಟಿಗ ರಿಷಬ್ ಕೂಡ ನಟಿಗೆ ಖಡಕ್ ಆಗಿ ತಿರುಗೇಟು ನೀಡಿದ್ದರು.

    ಇತ್ತೀಚೆಗೆ ಇಬ್ಬರ ಮಧ್ಯೆ ಕಿತ್ತಾಟ ನಡೆಯುತ್ತಲೇ ಇತ್ತು. ಈಗ ರಿಷಬ್ ಪಂತ್ ಕಾರು ಅಪಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಚಿಕಿತ್ಸೆ ನೀಡುವ ಕೆಲಸ ಆಗುತ್ತಿದೆ. ಈಗಲೂ ಊರ್ವಶಿ ಅವರು ರಿಷಬ್ ಅವರನ್ನು ಹಿಂಬಾಲಿಸಿದಂತಿದೆ. ರಿಷಬ್‌ಗೆ ಅಪಘಾತದ ವಿಚಾರ ತಿಳಿದಾಗ ʻಪ್ರಾರ್ಥನೆʼ (Prayer) ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಇದು ರಿಷಬ್‌ಗಾಗಿ ಹೇಳಿದ ಮಾತು ಎನ್ನಲಾಗಿತ್ತು. ಊರ್ವಶಿ ತಾಯಿ, ರಿಷಬ್ ಬೇಗ ಚೇತರಿಕೆ ಕಾಣಲಿ ಎಂದು ಬರೆದುಕೊಂಡಿದ್ದರು. ಇದಕ್ಕಾಗಿ ಊರ್ವಶಿಯನ್ನು ನೆಟ್ಟಿಗರು ಟೀಕೆ ಮಾಡಿದ್ದರು. ಇದನ್ನೂ ಓದಿ: ಬಾಲಯ್ಯನ ಸಿನಿಮಾ ಪ್ರೀರಿಲೀಸ್ ಇವೆಂಟ್‌ಗೆ ಬ್ರೇಕ್ ಹಾಕಿದ ಸರ್ಕಾರ

    ಕ್ರಿಕೆಟಿಗ ರಿಷಬ್ ಪಂತ್ (Rishab Pant) ಅವರಿಗೆ ಮುಂಬೈನ `ಕೋಕಿಲಾಬೇನ್ ಧೀರುಬಾಯ್ ಅಂಬಾನಿ’ (Kokilaben Dhirubhai Ambani Hospital) ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಆಸ್ಪತ್ರೆಯ ಫೋಟೋವನ್ನ ನಟಿ ಊರ್ವಶಿ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದರು. ನಟಿಯ ಈ ನಡೆಗೆ ಟೀಕೆ ಮಾಡಿದ್ದಾರೆ. ಪ್ರಚಾರಕ್ಕಾಗಿ ಊರ್ವಶಿ ಹೀಗೆಲ್ಲಾ ಮಾಡ್ತಿದ್ದಾರೆ ಎಂದು ನೆಟ್ಟಿಗರು ನಟಿಯ ವಿರುದ್ಧ ಕಿಡಿಕಾರಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಾಕು ನಾಯಿ ನಿಧನಕ್ಕೆ ಕಂಬನಿ ಮಿಡಿದ ಅಮಿತಾಭ್ ಬಚ್ಚನ್

    ಸಾಕು ನಾಯಿ ನಿಧನಕ್ಕೆ ಕಂಬನಿ ಮಿಡಿದ ಅಮಿತಾಭ್ ಬಚ್ಚನ್

    ಬಾಲಿವುಡ್ (Bollywood) ಸ್ಟಾರ್ ಅಮಿತಾಭ್ ಬಚ್ಚನ್ (Amitabh Bachchan) ಇದೀಗ ತಮ್ಮ ಸಾಕು ನಾಯಿ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಮುದ್ದು ನಾಯಿ ಜೊತೆಗಿನ ಫೋಟೋ ಹಂಚಿಕೊಂಡು ಬಿಗ್ ಬಿ ಭಾವುಕರಾಗಿದ್ದಾರೆ. ಸದ್ಯ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

    ಬಿಟೌನ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಲಿಸ್ಟ್ನಲ್ಲಿ ಸಾಲು ಸಾಲು ಸಿನಿಮಾಗಳಿವೆ. ಸದಾ ಶೂಟಿಂಗ್‌ನಲ್ಲಿ ಬ್ಯುಸಿಯಿರುವ ನಟ ಈಗ ಸೋಷಿಯಲ್ ಮೀಡಿಯಾದಲ್ಲಿ ಎಮೋಷನಲ್ ಆಗಿ ಪೋಸ್ಟ್ ಮಾಡಿದ್ದಾರೆ. ಸಾಕು ನಾಯಿ ನಿಧನಕ್ಕೆ ಬಿಗ್ ಬಿ(Big B) ಭಾವುಕರಾಗಿದ್ದಾರೆ.


    ನನಗೆ ಒಬ್ಬರು ಚಿಕ್ಕ ಸ್ನೇಹಿತರು ಇದ್ದರು. ಕೆಲಸ ಸಮಯದಲ್ಲಿ ಜೊತೆಯಲ್ಲಿದ್ದರು. ಹಾಗೆಯೇ ಬೆಳೆಯುತ್ತಿದ್ದರು. ಒಂದು ದಿನ ಹೇಳದೇ ಹೊರಟು ಬಿಡುತ್ತಾರೆ ಎಂದು ಮುದ್ದಿನ ನಾಯಿ ಬಗ್ಗೆ ಅಮಿತಾಭ್ ಕಣ್ಣೀರಿಟ್ಟಿದ್ದಾರೆ. ಬಿಗ್ ಬಿ ಭಾವುಕರಾಗಿರೋದನ್ನ ನೋಡಿ, ಫ್ಯಾನ್ಸ್ ಕೂಡ ಕಂಬನಿ ಮಿಡಿದಿದ್ದಾರೆ. ಇದನ್ನೂ ಓದಿ:ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಸುದೀಪ್‌ ದಂಪತಿ ಭೇಟಿ

    ಇತ್ತೀಚೆಗೆ ಅಮಿತಾಭ್ ಬಚ್ಚನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದ `ಗುಡ್ ಬೈ’ ಕಾಂತಾರ ಮುಂದೆ ನೆಲಕಚ್ಚಿತ್ತು. ರಶ್ಮಿಕಾ ಮಂದಣ್ಣ ಮತ್ತು ಬಿಗ್ ಬಿ ಜೋಡಿ ಕಮಾಲ್ ಮಾಡುವಲ್ಲಿ ಫ್ಲಾಪ್ ಆಗಿತ್ತು. ಸದ್ಯ ಅಮಿತಾಭ್ ನಟನೆಯ ಬ್ಯಾಕ್ ಟು ಬ್ಯಾಕ್ ಸಿನಿಮಾಗಳು ತೆರೆಗೆ ಅಪ್ಪಳಿಸಲಿದೆ.

    Live Tv
    [brid partner=56869869 player=32851 video=960834 autoplay=true]

  • ಆಮೀರ್‌ ಖಾನ್‌ ತಾಯಿಗೆ ಹೃದಯಾಘಾತ

    ಆಮೀರ್‌ ಖಾನ್‌ ತಾಯಿಗೆ ಹೃದಯಾಘಾತ

    ಬಾಲಿವುಡ್ ಸ್ಟಾರ್ ಆಮೀರ್ ಖಾನ್(Aamir Khan), ತಾಯಿ ಜೀನತ್ ಹುಸೇನ್(Zeenat Hussain) ಇತ್ತೀಚೆಗೆ ಹೃದಯಾಘಾತಕ್ಕೆ ಒಳಗಾಗಿದ್ದರು. ಬಳಿಕ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಇದೀಗ ಆಮೀರ್ ತಾಯಿಯ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.

    `ಲಾಲ್ ಸಿಂಗ್ ಚಡ್ಡಾ'(Lal Singh Chaddha) ಚಿತ್ರದ ಸೋಲಿನ ನಂತರ ನಟ ಆಮೀರ್ ಖಾನ್ ಮತ್ತೊಂದು ಶಾಕ್ ಎದುರಾಗಿತ್ತು. ದೀಪಾವಳಿ ಹಬ್ಬದಂದು ಆಮೀರ್ ಖಾನ್ ತಾಯಿ ಜೀನತ್ ಅವರಿಗೆ ಹೃದಯಾಘಾತವಾಗಿತ್ತು. ತಕ್ಷಣವೇ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಇದೀಗ ವೈದ್ಯರ ಚಿಕಿತ್ಸೆಯ ನಂತರ ಜೀನತ್ ಹುಸೇನ್ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ:ಹಿಂದಿಯಲ್ಲಿ 50 ಕೋಟಿ ಗಳಿಸಿದ ‘ಕಾಂತಾರ’ ಸಿನಿಮಾ

    ಇನ್ನೂ ಕಳೆದ ಜೂನ್ 13ರಂದು ತಾಯಿಯ ಹುಟ್ಟುಹಬ್ಬವನ್ನ ಮಾಜಿ ಪತ್ನಿ ಕಿರಣ್(Kiran Rao) ಮತ್ತು ಕುಟುಂಬದ ಜೊತೆ ಅದ್ದೂರಿಯಾಗಿ ಆಚರಿಸಿದ್ದರು. ನಂತರ ಆಮೀರ್ ತಾಯಿಯ ಹೃದಯಾಘಾತ ಮನೆಮಂದಿಗೆ ಶಾಕ್ ಕೊಟ್ಟಿತ್ತು. ಈಗ ಚಿಕಿತ್ಸೆ ನಂತರ ಜೀನತ್ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ ಎನ್ನಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • `ಬಿಗ್ ಬಾಸ್’ ಖ್ಯಾತಿಯ ವೈಶಾಲಿ ಠಕ್ಕರ್ ಆತ್ಮಹತ್ಯೆ

    `ಬಿಗ್ ಬಾಸ್’ ಖ್ಯಾತಿಯ ವೈಶಾಲಿ ಠಕ್ಕರ್ ಆತ್ಮಹತ್ಯೆ

    ಸಾಕಷ್ಟು ಸೀರಿಯಲ್, ಬಿಗ್ ಬಾಸ್ (Bigg Boss Hindi) ಮೂಲಕ ಮೋಡಿ ಮಾಡಿದ್ದ ಯುವ ನಟಿ ವೈಶಾಲಿ ಠಕ್ಕರ್ (Vaishali Thakkar) (ಅ.16)ರಂದು ಆತ್ಮಹತ್ಯೆಗೆ ಶರಣಾಗಿದ್ದಾರೆ . ವೈಯಕ್ತಿಕ ಕಾರಣಗಳಿಂದ ಯುವ ನಟಿ ವೈಶಾಲಿ ನೇಣಿಗೆ ಶರಣಾಗಿದ್ದಾರೆ. ಶವದ ಪಕ್ಕದಲ್ಲೇ ಡೆತ್ ನೋಟ್ ಕೂಡ ಸಿಕ್ಕಿದ್ದು, ಇಂದೋರ್‌ನ ತೇಜಾಜಿ ನಗರ(Tejaji Nagar) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    `ಬಿಗ್ ಬಾಸ್’ ಖ್ಯಾತಿಯ ವೈಶಾಲಿ ಠಕ್ಕರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿದ್ದರು. ಇತ್ತೀಚೆಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಖುಷಿ ಖುಷಿಯಾಗಿ ಇರುವಂತಹ ರೀಲ್ಸ್ ಹಂಚಿಕೊಂಡಿದ್ದರು. ಅವರು ಈಗ ಆತ್ಮಹತ್ಯೆ(Suicide) ಮಾಡಿಕೊಂಡಿದ್ದಕ್ಕೆ ಕಾರಣ ಏನು ಎಂಬ ಪ್ರಶ್ನೆ ಮೂಡಿದೆ. ಪೊಲೀಸರ ತನಿಖೆ ಬಳಿಕ ಸತ್ಯ ಹೊರಬರಬೇಕಿದೆ. ವೈಶಾಲಿ ಸಾವು ಅವರ ಕುಟುಂಬಕ್ಕೆ, ಆಪ್ತರಿಗೆ ಆಘಾತವುಂಟು ಮಾಡಿದೆ. ನಟಿಯ ಸಾವಿಗೆ ಚಿತ್ರರಂಗ(Film Industry) ಕಂಬನಿ ಮಿಡಿದಿದ್ದಾರೆ. ಇದನ್ನೂ ಓದಿ:ನಯನತಾರಾ- ವಿಘ್ನೇಶ್ ಶಿವನ್ ಬಾಡಿಗೆ ತಾಯ್ತನದ ಕೇಸ್‌ಗೆ ಬಿಗ್ ಟ್ವಿಸ್ಟ್

    ಹಿಂದಿ ಕಿರುತೆರೆಯಲ್ಲಿ ವೈಶಾಲಿ ಅವರು ಸಾಕಷ್ಟು ಖ್ಯಾತಿ ಗಳಿಸಿದ್ದರು. `ಸಸುರಾಲ್ ಸಿಮರ್ ಕಾ’ ಧಾರಾವಾಹಿಯಲ್ಲಿ ಅವರು ಅಂಜಲಿ ಭಾರದ್ವಾಜ್ ಎಂಬ ಪಾತ್ರ ಮಾಡಿದ್ದರು. `ಯೇ ರಿಷ್ತಾ ಕ್ಯಾ ಕೆಹಲಾತಾ ಹೈ’, ʻರಕ್ಷಾ ಬಂಧನ್ʼ ಮುಂತಾದ ಧಾರಾವಾಹಿಗಳಲ್ಲಿ ವೈಶಾಲಿ ಠಕ್ಕರ್ ನಟಿಸಿದ್ದರು. `ಬಿಗ್ ಬಾಸ್'(Bigg Boss) ಮೂಲಕ ನಟಿ ಮೋಡಿ ಮಾಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ಜೈಲಿನಿಂದ ಬಿಡುಗಡೆಯಾಗಿ ಒಂದು ವರ್ಷ: ಕೊನೆಗೂ ಮೌನ ಮುರಿದ ಶಿಲ್ಪಾ ಶೆಟ್ಟಿ ಪತಿ

    ಜೈಲಿನಿಂದ ಬಿಡುಗಡೆಯಾಗಿ ಒಂದು ವರ್ಷ: ಕೊನೆಗೂ ಮೌನ ಮುರಿದ ಶಿಲ್ಪಾ ಶೆಟ್ಟಿ ಪತಿ

    ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ (Shilpa Shetty) ಕಳೆದ ವರ್ಷ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದರು. ಅಶ್ಲೀಲ ಚಿತ್ರ ಮಾರಾಟ, ವಿತರಣೆ ವಿಚಾರದಲ್ಲಿ ಮುಂಬೈ ಪೊಲೀಸರು ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ (Raj Kundra) ಅವರನ್ನು ಬಂಧಿಸಿ, ಜೈಲುಗಟ್ಟಿದ್ದರು. ಇದೀಗ ಒಂದು ವರ್ಷಗಳ ನಂತರ ರಾಜ್ ಕುಂದ್ರಾ ಮೊದಲ ಬಾರಿಗೆ ಮೌನ ಮುರಿದಿದ್ದಾರೆ.

    ಅಶ್ಲೀಲ ವೀಡಿಯೋ ಕೇಸ್ ವಿಷ್ಯವಾಗಿ ಜೈಲಿನಿಂದ ಬಿಡುಗಡೆಯಾಗಿ ಬಂದ ಬಳಿಕ ಸಾರ್ವಜನಿಕವಾಗಿ ದೂರ ಉಳಿದಿದ್ದರು. ಮುಖ ಮುಚ್ಚುವಂತೆ ಮಾಸ್ಕ್ ಧರಿಸಿ ರಾಜ್ ಕುಂದ್ರಾ ಓಡಾಡುತ್ತಿದ್ದರು. ಇದೀಗ ಒಂದು ವರ್ಷಗಳ ನಂತರ ರಾಜ್ ಕುಂದ್ರಾ ಮೌನ ಮುರಿದಿದ್ದಾರೆ. ಟ್ರೋಲಿಗರಿಗೆ ತಿರುಗೇಟು ನೀಡಿದ್ದಾರೆ.

    ಒಂದು ವರ್ಷದ ಬಳಿಕ ರಾಜ್‌ ಕುಂದ್ರಾ ಮಾತನಾಡಿದ್ದಾರೆ. ಸತ್ಯ ಶೀಘ್ರದಲ್ಲೇ ಹೊರ ಬೀಳಲಿದೆ. ನನ್ನ ಆತ್ಮೀಯರಿಗೆ ಧನ್ಯವಾದಗಳು ಮತ್ತು ನನ್ನನ್ನು ಮತ್ತಷ್ಟು ಬಲಿಷ್ಠವಾಗುವಂತೆ ಮಾಡಿದ ಟ್ರೋಲಿಗರಿಗೆ ದೊಡ್ಡ ಧನ್ಯವಾದಗಳು. `ನಿಮಗೆ ಪೂರ್ತಿ ಸತ್ಯ ಗೊತ್ತಿಲ್ಲವೆಂದೆರೆ ಬಾಯಿಮುಚ್ಚಿಕೊಂಡಿರಿ’ ರಾಜ್ ಕುಂದ್ರಾ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ:‘ಲವ್ ಲಿ’ ಸಿನಿಮಾದ ಶೂಟಿಂಗ್ ನಲ್ಲಿ ಮತ್ತೆ ಬ್ಯುಸಿಯಾದ ವಸಿಷ್ಠ ಸಿಂಹ

    ರಾಜ್ ಕುಂದ್ರಾ ಅವರ ಖಡಕ್ ಪ್ರತಿಕ್ರಿಯೆಗೆ ಕೆಲ ನೆಟ್ಟಿಗರು ಸಾಥ್ ನೀಡಿದ್ದಾರೆ. ಸ್ಟ್ರಾಂಗ್ ಆಗಿರಿ, ಕಾಲವೇ ಎಲ್ಲದಕ್ಕೂ ಉತ್ತರ ಕೊಡಲಿದೆ ಎಂದು ಕಾಮೆಂಟ್ ಮೂಲಕ ರಾಜ್ ಕುಂದ್ರಾ ಬೆಂಬಲ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬಾಲಿವುಡ್‌ನಲ್ಲಿ ಮಿಂಚಲು ರೆಡಿಯಾದ ಮಂಗಳೂರು ಚೆಲುವೆ ಅಯ್ಯೋ ಶ್ರದ್ಧಾ

    ಬಾಲಿವುಡ್‌ನಲ್ಲಿ ಮಿಂಚಲು ರೆಡಿಯಾದ ಮಂಗಳೂರು ಚೆಲುವೆ ಅಯ್ಯೋ ಶ್ರದ್ಧಾ

    ಬಹುಮುಖ ಪ್ರತಿಭೆ ಶ್ರದ್ಧಾ, ಸೋಷಿಯಲ್ ಮೀಡಿಯಾದಲ್ಲಿ ಪಟ ಪಟ ಮಾತಿನ ಮೂಲಕ `ಅಯ್ಯೋ ಶ್ರದ್ಧಾ’ (Aiyyo Shraddha) ಆಗಿ ಖ್ಯಾತಿಯಾಗಿದ್ದಾರೆ. ಮಂಗಳೂರು ಬ್ಯೂಟಿ ಶ್ರದ್ಧಾ ಪ್ರತಿಭೆ ಇದೀಗ ಬಿಟೌನ್‌ವೆರೆಗೂ ಮುಟ್ಟಿದೆ. ಬಾಲಿವುಡ್‌ನ ಸ್ಟಾರ್‌ ನಟನ ಜೊತೆ ಕನ್ನಡತಿ ಶ್ರದ್ಧಾಗೆ ನಟಿಸಲು ಚಾನ್ಸ್ ಸಿಕ್ಕಿದೆ.

    ಮಂಗಳೂರು ಚೆಲುವೆ ಶ್ರದ್ಧಾ ಇದೀಗ ಬಾಲಿವುಡ್‌ನತ್ತ (Bollywood) ಮುಖ ಮಾಡಿದ್ದಾರೆ. ನಾವು ನಿತ್ಯ ನೋಡುವ ವಿಚಾರವನ್ನೇ ನಮ್ಮ ಕಣ್ಣಿಗೆ ಕಟ್ಟುವಂತೆ ವಿಡಿಯೋ ಮೂಲಕ ತೋರಿಸೋ ಶ್ರದ್ಧಾ ಅವರ ಪ್ರತಿಭೆಗೆ ಕನ್ನಡಿಗರು ಮಾತ್ರವಲ್ಲ, ಹೊರ ರಾಜ್ಯದ ಮಂದಿಯೂ ಫಿದಾ ಆಗಿದ್ದಾರೆ. ಸೋಷಿಯಲ್ ಮೀಡಿಯಾ ಸ್ಟಾರ್ ಆಗಿ ಗುರುತಿಸಿಕೊಂಡಿರುವ ಶ್ರದ್ಧಾ ಬಿಟೌನ್‌ನಲ್ಲಿ ಅದೃಷ್ಟ ಪರೀಕ್ಷಗೆ ಇಳಿದಿದ್ದಾರೆ. ಇದನ್ನೂ ಓದಿ: ರಕ್ಷಿತಾ ಪ್ರೇಮ್ ಸಹೋದರನ ಮತ್ತೊಂದು ಸಿನಿಮಾ: ಪ್ರೇಮ್ ಶಿಷ್ಯನೇ ನಿರ್ದೇಶಕ

    ಬಾಲಿವುಡ್ ನಟ ಆಯುಷ್ಮಾನ್ ಖುರಾನ(Ayushman khurran) ಜೊತೆ `ಡಾಕ್ಟರ್ ಜಿ’ (Doctor G) ಸಿನಿಮಾದಲ್ಲಿ ಶ್ರದ್ಧಾ ನಟಿಸುತ್ತಿದ್ದಾರೆ. ಈ ವಿಚಾರವನ್ನ ಸ್ವತಃ ಅವರೇ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹೇಳಿದ್ದಾರೆ. ಆಯುಷ್ಮಾನ್ ಮತ್ತು ರಾಕುಲ್ ಪ್ರೀತ್ ಸಿಂಗ್ ಜತೆ ಶ್ರದ್ಧಾ ಕೂಡ ಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಡಾಕ್ಟರ್ ಪಾತ್ರಕ್ಕೆ ಕನ್ನಡದ ನಟಿ ಕಾಣಿಸಿಕೊಳ್ಳುತ್ತಿದ್ದಾರೆ.

     

    View this post on Instagram

     

    A post shared by Shraddha (@aiyyoshraddha)

    ಅನುಭೂತಿ ನಿರ್ದೇಶನದ ʻಡಾಕ್ಟರ್‌ ಜಿʼ ಚಿತ್ರದಲ್ಲಿ  ಕನ್ನಡದ ನಟಿರೊಬ್ಬರು ಬಾಲಿವುಡ್‌ನಲ್ಲಿ ಮಿಂಚಲು ಸಜ್ಜಾಗಿರೋದು ಅಯ್ಯೋ ಶ್ರದ್ಧಾ ಫ್ಯಾನ್ಸ್‌ಗೆ ಖುಷಿ ಕೊಟ್ಟಿದೆ. ಅವರ ಸಿನಿಮಾಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸೀರಿಯಲ್‌ನಲ್ಲಿ ಕೆಲಸ ಸಿಗದೇ ಕಾಲ್ ಸೆಂಟರ್ ಉದ್ಯೋಗಕ್ಕೆ ಸೇರಿದ ನಟಿ ಏಕ್ತಾ

    ಸೀರಿಯಲ್‌ನಲ್ಲಿ ಕೆಲಸ ಸಿಗದೇ ಕಾಲ್ ಸೆಂಟರ್ ಉದ್ಯೋಗಕ್ಕೆ ಸೇರಿದ ನಟಿ ಏಕ್ತಾ

    ಚಿತ್ರರಂಗದಲ್ಲಿ ನಟಿ ಗಟ್ಟಿಯಾಗಿ ನೆಲೆ ನಿಲ್ಲುವುದು ತುಂಬಾ ಕಷ್ಟ. ಕೊರೊನಾ ಸಂದರ್ಭದಲ್ಲಿ ಸಾಕಷ್ಟು ಕಲಾವಿದರು ಮತ್ತು ತೆರೆಯ ಹಿಂದೆ ಕೆಲಸ ಮಾಡುವವರು ಸಂಕಷ್ಟ ಎದುರಿಸಿದ್ದರು. ಕೆಟ್ಟ ಸಮಯವನ್ನ ಎದುರಿಸಲಾಗದೇ ಕೆಲ ನಟಿಯರು ಆತ್ಮಹತ್ಯೆ ಮಾಡಿಕೊಂಡಿದ್ದೂ ಇದೆ. ಜೊತೆಗೆ ಹಲವರು ಕೆಟ್ಟ ದಾರಿ ತುಳಿದ ನಿದರ್ಶನವೂ ಇದೆ. ಇದೀಗ ಹಿಂದಿ ಕಿರುತೆರೆ ನಟಿ ಏಕ್ತಾ ಶರ್ಮಾ (Ekta Sharma) ತಮಗೆ ನಟಿಸಲು ಅವಕಾಶವಿಲ್ಲದೇ ಇದ್ದಾಗ ಧೈರ್ಯಗೆಡದೇ ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡ್ತಿದ್ದಾರೆ.

    ಏಕ್ತಾ ಶರ್ಮಾ(Ekta Sharma) ಕಳೆದ ಸಾಕಷ್ಟು ವರ್ಷಗಳಿಂದ ಹಿಂದಿ ಕಿರುತೆರೆ(Hindi Serials) ಮತ್ತು ಚಿತ್ರರಂಗದಲ್ಲಿ ಆಕ್ಟೀವ್ ಆಗಿರುವ ನಟಿ, ಲಾಕ್‌ಡೌನ್‌ನಿಂದ(Lockdown) ಕೆಲಸವಿಲ್ಲದೇ 1 ವರ್ಷ ಮನೆಯಲ್ಲಿಯೇ ಕುಳಿತ ನಟಿ ಏಕ್ತಾ, ಬಳಿಕ ಕಾಲ್ ಸೆಂಟರ್‌ನಲ್ಲಿ ಕೆಲಸ ಆರಂಭಿಸಿದ್ದರು. ನಟನೆಯ ಜೊತೆಗೆ ಶಿಕ್ಷಣ ಕೂಡ ಪಡೆದಿರುವ ಏಕ್ತಾ ಕಾಲ್ ಸೆಂಟರ್ ಉದ್ಯೋಗಕ್ಕೆ ಜಾಯಿನ್ ಆಗಿದ್ದಾರೆ. ಇದನ್ನೂ ಓದಿ:ನೆಗೆಟಿವ್ ಕಾಮೆಂಟ್ ಗೆ ಹೆದರಲ್ಲ, ತುಂಬಾ ಜನ ನನ್ನನ್ನು ಪ್ರೀತಿಸ್ತಾರೆ ಎಂದ ಸೋನು ಶ್ರೀನಿವಾಸ್ ಗೌಡ

    ಕಿರುತೆರೆಯಿಂದ ಯಾವುದೇ ಅವಕಾಶ ಬರದಿದ್ದಾಗ ತಮ್ಮ ಬಂಗಾರ ಮಾರಿ ಒಂದು ವರ್ಷ ಜೀವನ ನಡೆಸಿದ್ದರು. ಬಳಿಕ ಹೊಸ ಉದ್ಯೋಗಕ್ಕೆ ಸೇರಿಕೊಂಡರು. ಸಾಕಷ್ಟು ಸಂಕಷ್ಟದ ನಡುವೆ ನಟನೆಗೆ ಅವಕಾಶ ಸಿಗದಿದ್ದರೂ ಜೀವಿಸಬಲ್ಲೆ ಎಂಬ ಆತ್ಮವಿಶ್ವಾಸದಿಂದ ನಟಿ ಜೀವನ ಸಾಗಿಸುತ್ತಿದ್ದಾರೆ. ಏಕ್ತಾ ಶರ್ಮಾ ನಡೆಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]