Tag: hindi

  • ಹಿಂದಿಯಲ್ಲಿ 50 ಕೋಟಿ ಗಳಿಸಿದ ‘ಕಾಂತಾರ’ ಸಿನಿಮಾ

    ಹಿಂದಿಯಲ್ಲಿ 50 ಕೋಟಿ ಗಳಿಸಿದ ‘ಕಾಂತಾರ’ ಸಿನಿಮಾ

    ಬಾಲಿವುಡ್ ನಲ್ಲಿ ಕಾಂತಾರ (Kantara) ಹವಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಾಕ್ಸ್ ಆಫೀಸಿನಲ್ಲೂ ಕೂಡ ಅದು ಹಿಂದೆ ಬಿದ್ದಿಲ್ಲ. ಈವರೆಗೂ ಚಿತ್ರದಿಂದ ಅಂದಾಜು 50 ಕೋಟಿ ಬಂದಿದೆ ಎಂದು ಹೇಳಲಾಗುತ್ತಿದೆ. ಸಿನಿ ಪಂಡಿತರ ಲೆಕ್ಕಾಚಾರದಲ್ಲೂ 45 ರಿಂದ 50 ಕೋಟಿ ಬಂದಿರಬಹುದು ಎನ್ನಲಾಗುತ್ತಿದೆ. ಆದರೆ, ನಿರ್ಮಾಪಕರಾಗಲಿ ಅಥವಾ ವಿತರಕರಾಗಲಿ ಈ ಕುರಿತು ಅಧಿಕೃತ ಹೇಳಿಕೆ ನೀಡಿಲ್ಲ.

    ಕನ್ನಡದಲ್ಲೂ ಅಂದಾಜು ನೂರೈವತ್ತು ಕೋಟಿಗೂ ಅಧಿಕ ಹಣ ಮಾಡಿದರೆ, ಇತರ ಭಾಷೆಗಳಲ್ಲೂ ನೂರಾರು ಕೋಟಿ ಬಾಚಿದೆ. ಪ್ರತಿ ಭಾಷೆಯಲ್ಲೂ ಕನ್ನಡದ ಸಿನಿಮಾವನ್ನು ಕೊಂಡಾಡುತ್ತಿದ್ದಾರೆ. ಬಾಕ್ಸ್ ಆಫೀಸ್ ಕೂಡ ಧೂಳಿಪಟವಾಗಿದೆ. ಈ ಹೊತ್ತಿನಲ್ಲಿ ರಿಷಬ್ ಶೆಟ್ಟಿ  (Rishabh Shetty) ವಿಮಾನದಲ್ಲಿ ಓಡಾಡುತ್ತಿರುವ ಫೋಟೋವನ್ನು ಹೊಂಬಾಳೆ ಫಿಲ್ಮ್ಸ್ ಹಂಚಿಕೊಂಡಿದೆ. ಇದನ್ನೂ ಓದಿ:ಖಾಸಗಿ ವಿಮಾನ ಖರೀದಿಸಿದ್ರಾ ರಿಷಬ್ ಶೆಟ್ಟಿ? ‘ಬಡವ್ರ ಮಕ್ಕಳು ಬೆಳಿಬೇಕು’ ಟ್ರೋಲ್

    ಇತ್ತೀಚೆಗಷ್ಟೇ ರಿಷಬ್ ಆಡಿ ಕಾರು ತಗೆದುಕೊಂಡಿದ್ದರು. ಆ ಫೋಟೋ ಕೂಡ ಸಖತ್ ವೈರಲ್ ಆಗಿತ್ತು. ಇದೀಗ ರಿಷಬ್ ಅವರು ವಿಮಾನದಲ್ಲಿ ಅದರಲ್ಲೂ ಖಾಸಗಿ ವಿಮಾನದಲ್ಲಿ ಪ್ರಯಾಣ ಮಾಡುತ್ತಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಕ್ರಿಯೇಟ್ ಮಾಡಿದೆ. ‘ಬಡವ್ರ ಮಕ್ಕಳು ಬೆಳಿಬೇಕು’ ಹೆಸರಿನಲ್ಲಿ ಟ್ರೋಲ್ ಕೂಡ ಮಾಡಲಾಗುತ್ತಿದೆ. ಸಾಕಷ್ಟು ಜನರು ಈ ಫೋಟೋವನ್ನು ಹಂಚಿಕೊಂಡಿದ್ದಾರೆ.

    ಬಡವರ ಮಕ್ಕಳು ಬೆಳಿಬೇಕು ಎನ್ನುವ ಮಾತು ಡಾಲಿ ಧನಂಜಯ್ ಅವರದ್ದು. ಆ ಮಾತನ್ನು ರಿಷಬ್ ಶೆಟ್ಟಿಗೆ ಬಳಸಿಕೊಂಡು ಡಾಲಿಗೆ ಟಾಂಗ್ ಕೊಡಲಾಗುತ್ತಿದೆ. ವಿಮಾನದಲ್ಲಿ ಪ್ರಯಾಣದ ಮಾಡುತ್ತಿರುವ ರಿಷಬ್ ಶೆಟ್ಟಿ ಫೋಟೋಗೆ ಡಾಲಿ ಹೊಡೆದ ಡೈಲಾಗ್ ಅನ್ನು ಸೇರಿಸಿ ಟ್ರೋಲ್ ಮಾಡಲಾಗುತ್ತಿದೆ.

    ಕಾಂತಾರ ಸಿನಿಮಾ ಮಾಡುತ್ತಿರುವ ಮೋಡಿ ಅಷ್ಟಿಷ್ಟಲ್ಲ. ರಿಷಬ್ ಶೆಟ್ಟಿ ಭಾರತದಾದ್ಯಂತ ಸುತ್ತುವಂತಾಗಿದೆ. ಎಲ್ಲ ಕಡೆ ಪ್ರಯಾಣ ಮಾಡಲು ಅವರಲ್ಲಿ ವೇಳೆಯಿಲ್ಲ. ಹಾಗಾಗಿ ಹೊಂಬಾಳೆ ಫಿಲ್ಮ್ಸ್ (Hombale Films) ನವರು ಬಾಡಿಗೆ ಖಾಸಗಿ ವಿಮಾನ ಬುಕ್ ಮಾಡಿ, ರಿಷಬ್ ಪ್ರಯಾಣಕ್ಕೆ ಅನುಕೂಲ ಕಲ್ಪಿಸಿದ್ದಾರೆ ಎನ್ನಲಾಗುತ್ತಿದೆ. ಈ ಹಿಂದೆ ಯಶ್ ಅವರಿಗೂ ಹಾಗೆಯೇ ಮಾಡಿತ್ತು ಹೊಂಬಾಳೆ ಫಿಲ್ಮ್ಸ್. ಹಾಗಾಗಿ ಇದು ರಿಷಬ್ ಖರೀದಿಸಿದ ವಿಮಾನವಲ್ಲ ಎನ್ನುವುದು ಸ್ಪಷ್ಟನೆ ವಿಚಾರ.

    Live Tv
    [brid partner=56869869 player=32851 video=960834 autoplay=true]

  • ಹಿಂದಿಯನ್ನು ವಿಶ್ವಸಂಸ್ಥೆಯ ಅಧಿಕೃತ ಭಾಷೆಯನ್ನಾಗಿಸಲು ಪ್ರಯತ್ನಿಸಲಾಗುತ್ತಿದೆ: ಎಸ್. ಜೈಶಂಕರ್

    ಹಿಂದಿಯನ್ನು ವಿಶ್ವಸಂಸ್ಥೆಯ ಅಧಿಕೃತ ಭಾಷೆಯನ್ನಾಗಿಸಲು ಪ್ರಯತ್ನಿಸಲಾಗುತ್ತಿದೆ: ಎಸ್. ಜೈಶಂಕರ್

    ನವದೆಹಲಿ: ಹಿಂದಿಯನ್ನು ಅಧಿಕೃತ ಭಾಷೆಯನ್ನಾಗಿ ಗುರುತಿಸಲು ವಿಶ್ವಸಂಸ್ಥೆಯಲ್ಲಿ (United Nations) ಪ್ರಯತ್ನಗಳನ್ನು ನಡೆಸಲಾಗುತ್ತಿದೆ ಮತ್ತು ಈ ನಿಟ್ಟಿನಲ್ಲಿ ಪ್ರಗತಿ ಸಾಧಿಸಲಾಗುತ್ತಿದೆ. ಆದರೆ ಇದಕ್ಕಾಗಿ ಕೊಂಚ ಸಮಯ ಬೇಕಾಗುತ್ತದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ (S. Jaishankar) ಗುರುವಾರ ಹೇಳಿದ್ದಾರೆ.

    ದೆಹಲಿಯಲ್ಲಿ (Delhi) ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಎಸ್. ಜೈಶಂಕರ್ ಅವರು, ಮುಂದಿನ ವರ್ಷ ಫೆಬ್ರವರಿ 15-17 ರವರೆಗೆ ಫಿಜಿಯ ನಾಡಿನಲ್ಲಿ 12ನೇ ವಿಶ್ವ ಹಿಂದಿ ಸಮ್ಮೇಳನವನ್ನು (World Hindi Conference) ಆಯೋಜಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಮೆರಿಕದಲ್ಲಿ ಭೀಕರ ರಸ್ತೆ ಅಪಘಾತ – ಮೂವರು ಭಾರತೀಯರು ಸೇರಿದಂತೆ 20 ಮಂದಿ ಸಾವು

    ಯುನೈಟೆಡ್ ನೆಷನ್‍ನ ಅಧಿಕೃತ ಭಾಷೆಗಳಲ್ಲಿ ಹಿಂದಿಯನ್ನು ಸೇರಿಸುವ ಪ್ರಯತ್ನಗಳು ನಡೆಯುತ್ತಿದೆ. ಹಿಂದಿಯನ್ನು ಯುನೆಸ್ಕೋದಲ್ಲಿ ಈಗಾಗಲೇ ಬಳಸಲಾಗುತ್ತಿದೆ ಎಂಬ ವಿಚಾರ ಎಲ್ಲರಿಗೂ ತಿಳಿದಿದೆ. ಯುನೆಸ್ಕೋ ಪ್ರಧಾನ ಕಛೇರಿಯಲ್ಲಿ ಹಿಂದಿ ಭಾಷೆ ಬಳಕೆ ವಿಚಾರಕ್ಕೆ ಸಂಬಂಧಿಸಿದಂತೆ (ಎಂಒಯು) ಒಪ್ಪಂದ ಮಾಡಿಕೊಂಡಿದ್ದೇವೆ. ಸೋಶಿಯಲ್ ಮೀಡಿಯಾದ ಮತ್ತು ಸುದ್ದಿಪತ್ರಗಳಲ್ಲಿ ಹಿಂದಿಯನ್ನು ಈಗಾಗಲೇ ಬಳಸಲಾಗುತ್ತಿದೆ. ಇದನ್ನು ವಿಸ್ತರಿಸಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಯುನೈಟೆಡ್ ನೆಷನ್‍ನ ಪ್ರಕ್ರಿಯೆಯಲ್ಲಿ ಭಾಷೆಯನ್ನು ಪರಿಚಯಿಸುವುದು ಅಷ್ಟು ಸುಲಭವಲ್ಲ ಎಂದಿದ್ದಾರೆ.

    ಇಂಗ್ಲಿಷ್, ರಷ್ಯನ್, ಸ್ಪ್ಯಾನಿಷ್, ಚೈನೀಸ್, ಅರೇಬಿಕ್ ಮತ್ತು ಫ್ರೆಂಚ್ ಎಂಬ ಆರು ಅಧಿಕೃತ ಭಾಷೆಗಳನ್ನು ಯುಎನ್ ಹೊಂದಿದೆ. ಇದನ್ನೂ ಓದಿ: ‘ಹೆಂಡ್ತಿ ಮಕ್ಳನ್ನು ಬಿಟ್ ಬಂದಿದ್ದೀನಿ, ಸೇಫ್ ಆಗಿ ಮನೆಗೆ ಹೋಗ್ತೀನಾ?’: ಗಂಧದ ಗುಡಿಯಲ್ಲಿ ಕಣ್ಣೀರು ತರಿಸುತ್ತೆ ಅಪ್ಪು ಡೈಲಾಗ್

    Live Tv
    [brid partner=56869869 player=32851 video=960834 autoplay=true]

  • ‘ಕಾಂತಾರ’ ಬಾಕ್ಸ್ ಆಫೀಸ್ ರಿಪೋರ್ಟ್: ಬಾಲಿವುಡ್ ನಲ್ಲಿ ಗಳಿಸಿದ್ದು ಎಷ್ಟು ಕೋಟಿ?

    ‘ಕಾಂತಾರ’ ಬಾಕ್ಸ್ ಆಫೀಸ್ ರಿಪೋರ್ಟ್: ಬಾಲಿವುಡ್ ನಲ್ಲಿ ಗಳಿಸಿದ್ದು ಎಷ್ಟು ಕೋಟಿ?

    ರಿಷಬ್ ಶೆಟ್ಟಿ (Rishabh Shetty) ನಿರ್ದೇಶನದ ಕಾಂತಾರ ಸಿನಿಮಾದ ಒಟ್ಟು ಗಳಿಕೆ 200 ಕೋಟಿ ಎಂದು ಅಂದಾಜಿಸಲಾಗಿದೆ. ಕನ್ನಡದಲ್ಲೇ ಅದು ನೂರು ಕೋಟಿ ಗಳಿಕೆ ಮಾಡಿದೆ. ಬಾಲಿವುಡ್ ನಲ್ಲೂ ಕಾಂತಾರ (Kantara, )ಹಿಂದೆ ಬಿದ್ದಿಲ್ಲ. ಹಿಂದಿಯಲ್ಲಿ ಈವರೆಗೂ 22.25 ಕೋಟಿ ಹಣ ಹರಿದು ಬಂದಿದೆಯಂತೆ. ಕೆಜಿಎಫ್ 2 ಸಿನಿಮಾದ ನಂತರ ಕನ್ನಡ ಸಿನಿಮಾವೊಂದು ಈ ಪರಿ ಗಳಿಕೆ (Collection)ಮಾಡಿದ ಹೆಗ್ಗಳಿಕೆ ಕಾಂತಾರದ್ದು.

    ಒಂದು ಕಡೆ ಬಾಕ್ಸ್ (Box Office) ಆಫೀಸಿನಲ್ಲಿ ಸಿನಿಮಾ ಸದ್ದು ಮಾಡುತ್ತಿದ್ದರೆ, ಮತ್ತೊಂದು ಕಡೆ ಹಿಂದೂ ಸಂಸ್ಕೃತಿಗೆ ಸಂಬಂಧಿಸಿದಂತೆ ಈ ಸಿನಿಮಾ ವಿವಾದಕ್ಕೆ ಕಾರಣವಾಗಿದೆ. ಚೇತನ್ ಮತ್ತು ಬೆಂಬಲಿಗರು ಸಿನಿಮಾದ ಬಗ್ಗೆ ಅಪಸ್ವರ ಎತ್ತಿದ್ದಾರೆ. ಹಿಂದೂಪರ ಸಂಘಟನೆಯ ಕಾರ್ಯಕರ್ತರು ಚೇತನ್ ವಿರುದ್ಧ ದಂಗೆ ಎದ್ದಿದ್ದಾರೆ. ಕೆಲವು ಕಡೆ ಚೇತನ್ ಮೇಲೆ ದೂರು ಕೂಡ ದಾಖಲಾಗಿವೆ. ಇದನ್ನೂ ಓದಿ: ಹಿಂದುತ್ವದಲ್ಲೇ ಬ್ರಾಹ್ಮಣತ್ವವಿದೆ; ಪಬ್ಲಿಸಿಟಿಗೋಸ್ಕರ ನಟ ಚೇತನ್ ವಿವಾದಿತ ಹೇಳಿಕೆ – ಪೇಜಾವರ ಶ್ರೀ

    ಪ್ರಗತಿಪರ ನಟ ಎಂದೇ ಗುರುತಿಸಿಕೊಂಡಿರುವ ಹಾಗೂ ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿರುವ ಕಿಶೋರ್, ಈ ವಿವಾದದ ಕುರಿತು ಭಿನ್ನ ಹೇಳಿಕೆ ನೀಡಿದ್ದಾರೆ.  ಎಲ್ಲ ಒಳ್ಳೆಯ ಸಿನಿಮಾಗಳಂತೆ “ಕಾಂತಾರ” ಜಾತಿ, ಧರ್ಮ, ಭಾಷೆಗಳನ್ನು ಮೀರಿ ದೇಶದ ಜನಗಳನ್ನು ಬೆಸೆಯುತ್ತಿದೆ. ಮನರಂಜನೆಯ ಮೂಲಕವೇ ಹಲವು ಸಾಮಾಜಿಕ ಸಮಸ್ಯೆಗಳ ಬಗ್ಗೆ ಜನರನ್ನು ಜಾಗೃತಗೊಳಿಸುತ್ತಿದೆ. ಅಂಥ ಸಿನಿಮಾವನ್ನು ಬಳಸಿ ಮೂಢನಂಬಿಕೆಯನ್ನೊ ಧರ್ಮಾಂಧತೆಯನ್ನೊ ಪ್ರಚೋದಿಸಿ ಜನಗಳನ್ನು ವಿಭಜಿಸುವ ಮಟ್ಟಕ್ಕೆ ಇಳಿದು ಬಿಟ್ಟರೆ ಇಂಥಾ ದೊಡ್ಡ ಗೆಲುವೂ ಮನುಷ್ಯತ್ವದ ದೊಡ್ಡ ಸೋಲಾಗಿ ಹೋದೀತು ಎಂದು ಫೇಸ್ ಬುಕ್ ನಲ್ಲಿ ಅವರು ಬರೆದುಕೊಂಡಿದ್ದಾರೆ.

    ಅಲ್ಲದೇ, ಕೇವಲ ಓಟಿಗಾಗಿ ಪಟೇಲ್ ಗಾಂಧಿ ಬೋಸ್ ನೆಹ್ರೂ ಸಹಿತ ಕೋಟಿ ಕೋಟಿ ಸ್ವತಂತ್ರ್ಯ ಹೋರಾಟಗಾರರನ್ನೂ ಬಳಸುವ, ಬೈಯ್ಯುವ.. ರಾಷ್ಟ್ರ ಗೀತೆ, ಧ್ವಜ,ಲಾಂಛನ, ಕವಿಗಳನ್ನೂ ಬಿಡದೆ ಕಬಳಿಸಿದ ದ್ವೇಷದ ದಲ್ಲಾಳಿಗಳು ಸಿನಿಮಾಗಳನ್ನೂ ಕಬಳಿಸುವ ಮುನ್ನಒಂದು ಕ್ಷಣ ಯೋಚಿಸಿ. ನಮ್ಮ ಸಿನಿಮಾಗಳು ನಮ್ಮ ಹೆಮ್ಮೆ. ಅವುಗಳನ್ನು ಧರ್ಮಾಂಧ ರಾಜಕಾರಣದ ದಾಳಗಳಾಗುವುದು ಬೇಡ ಎಂದು ಕಿಶೋರ್ ಸುದೀರ್ಘ ಬರಹವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಾತೃಭಾಷೆಯಲ್ಲಿ ವೃತ್ತಿಪರ ಶಿಕ್ಷಣ ಸಿಗಬೇಕು ಹಾಗಾಗಿ ಹಿಂದಿ ಭಾಷೆಯಲ್ಲಿ ಪ್ರಯತ್ನ: ಧರ್ಮೇಂದ್ರ ಪ್ರಧಾನ್

    ಮಾತೃಭಾಷೆಯಲ್ಲಿ ವೃತ್ತಿಪರ ಶಿಕ್ಷಣ ಸಿಗಬೇಕು ಹಾಗಾಗಿ ಹಿಂದಿ ಭಾಷೆಯಲ್ಲಿ ಪ್ರಯತ್ನ: ಧರ್ಮೇಂದ್ರ ಪ್ರಧಾನ್

    ಮಂಗಳೂರು: ಭಾರತೀಯ ಐಐಟಿಗಳು (IIT) ವಿಶ್ವಮಟ್ಟದಲ್ಲಿ ಬ್ರ್ಯಾಂಡ್ ಆಗಿದ್ದು, ಮುಂದಿನ ಎರಡು ವರ್ಷಗಳಲ್ಲಿ ವಿದೇಶಗಳಲ್ಲಿಯೂ ಸ್ಥಾಪನೆಯಾಗಲಿವೆ. ಹಿಂದಿ (Hindi) ಭಾಷೆಯಲ್ಲಿ ವೈದ್ಯಕೀಯ ಶಿಕ್ಷಣ ನೀಡುವ ನಿಟ್ಟಿನಲ್ಲಿ ಮಧ್ಯಪ್ರದೇಶದಲ್ಲಿ ಆರಂಭಿಕ ಪ್ರಯತ್ನಗಳನ್ನು ಮಾಡಲಾಗಿದೆ. ಮಾತೃಭಾಷೆಯಲ್ಲಿ ವೃತ್ತಿಪರ ಶಿಕ್ಷಣ ಲಭಿಸಬೇಕು ಎಂಬುದು ಶಿಕ್ಷಣ ನೀತಿಯ ಸಾರವಾಗಿದೆ ಎಂದು ಕೇಂದ್ರದ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲ ಸಚಿವರಾದ ಧರ್ಮೇಂದ್ರ ಪ್ರಧಾನ್ (Dharmendra Pradhan) ಅವರು ತಿಳಿಸಿದರು.

    ಸುರತ್ಕಲ್‍ನ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ (NITK) ಕೇಂದ್ರೀಯ ಸಂಶೋಧನಾ ಸೌಲಭ್ಯ (CRF) ಕೇಂದ್ರವನ್ನು ಲೋಕಾರ್ಪಣೆಗೊಳಿಸಿದ ನಂತರ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿ ಮೂಲಕ ಶಿಕ್ಷಣ ಸಂಸ್ಥೆಗಳಲ್ಲಿ ಹಿಂದಿ ಹೇರಿಕೆಯ ಯಾವ ಉದ್ದೇಶವೂ ಇಲ್ಲ. ಎಲ್ಲ ಭಾಷೆಗಳು ಮುಖ್ಯ. ಎಲ್ಲ ಭಾಷೆಗಳಂತೆ ಹಿಂದಿಯೂ ಒಂದಾಗಿದೆ. ಎಲ್ಲ ರಾಜ್ಯಗಳೂ ಆಯಾ ರಾಜ್ಯದ ಸ್ಥಳೀಯ ಹಾಗೂ ಮಾತೃ ಭಾಷೆಗೆ ಆದ್ಯತೆ ನೀಡಲಿವೆ ಎಂದರು. ಇದನ್ನೂ ಓದಿ: ದೇಶದಲ್ಲಿ ಹಿಂದಿ ಶಿಕ್ಷಣ ಜಾರಿ – ನಾಳೆ 13 ಕಾಲೇಜುಗಳಲ್ಲಿ MBBS ಪಠ್ಯ ರಿಲೀಸ್

    ಭಾರತದ ಅಂತಃಸತ್ವವನ್ನು ಹೊಂದಿರುವ ಐಐಟಿ ಮತ್ತು ಐಐಟಿಗಳು ಕೇವಲ ಶಿಕ್ಷಣ ಸಂಸ್ಥೆಗಳಲ್ಲ. ಅವು ಜ್ಞಾನದ ದೇಗುಲಗಳು. ಬರುವ ದಿನಗಳಲ್ಲಿ 10ಕ್ಕೂ ಹೆಚ್ಚಿನ ದೇಶಗಳಲ್ಲಿ ಐಐಟಿಗಳ ಸ್ಥಾಪನೆಯಾಗಲಿವೆ. ಕೇಂದ್ರ ಶಿಕ್ಷಣ ಸಚಿವಾಲಯದ ನೆರವಿನಿಂದ ಹೊರದೇಶಗಳಲ್ಲಿ ಐಐಟಿಗಳನ್ನು ಸ್ಥಾಪನೆ ಮಾಡಲಾಗುತ್ತಿದೆ. ಆ ಪರಿಣಾಮ ಭವಿಷ್ಯದಲ್ಲಿ ಸಾಗರೋತ್ತರ ಐಐಟಿ ಕ್ಯಾಂಪಸ್‍ಗಳು ತಲೆ ಎತ್ತಲಿವೆ ಎಂದು ತಿಳಿಸಿದರು.


    ಭವಿಷ್ಯದಲ್ಲಿ ಹೈಡ್ರೋಜನ್ ಸುಸ್ಥಿರ ಇಂಧನ ಮೂಲವಾಗಲಿದೆ. ಉತ್ತಮ ಮಾರುಕಟ್ಟೆಯೂ ಇದೆ. ಉತ್ಪಾದನೆಯಿಂದ ವಿತರಣೆಯವರೆಗೆ ಬಹಳಷ್ಟು ಅವಕಾಶಗಳಿವೆ. ಎನ್ಐಟಿಕೆಯಂತಹ ಸಂಸ್ಥೆಗಳು ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿರುವುದು ಸಂತಸದ ವಿಚಾರ ಎಂದ ಅವರು ಇಪ್ಪತ್ತೊಂದನೇ ಶತಮಾನದಲ್ಲಿ ಸಾಮರ್ಥ್ಯವರ್ಧನೆಯ ಜೊತೆ ಜಾಗತಿಕ ಸವಾಲುಗಳನ್ನು ಎದುರಿಸಿ ಬೆಳೆಯಲು ಎನ್ಐಟಿಕೆ ಸಮರ್ಥವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಎತ್ತು ಏರಿಗೆಳೀತು ಕೋಣ ನೀರಿಗಿಳೀತು: ಬಿಜೆಪಿ ವ್ಯಂಗ್ಯ

    ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಾ.ಭರತ್ ಶೆಟ್ಟಿ, ವೈ. ಎ. ನಾರಾಯಣ ಸ್ವಾಮಿ, ಎನ್‍ಐಟಿಕೆ ನಿರ್ದೇಶಕ ಪ್ರೊ. ಪ್ರಸಾದ್ ಕೃಷ್ಣ, ಕುಲಸಚಿವ ಪ್ರೊ.ಕೆ.ರವೀಂದ್ರನಾಥ್, ಕೇಂದ್ರೀಯ ಸಂಶೋಧನಾ ಸೌಲಭ್ಯದ ಅಧ್ಯಕ್ಷ ಪ್ರೊ. ಎಂ.ಎನ್. ಸತ್ಯನಾರಾಯಣ ಜೊತೆಗಿದ್ದರು.

    Live Tv
    [brid partner=56869869 player=32851 video=960834 autoplay=true]

  • ತಮಿಳು, ತೆಲುಗಿನಲ್ಲಿ ಇಂದು ‘ಕಾಂತಾರ’ದ ಅಬ್ಬರ: ಬಾಲಿವುಡ್ ಈಗಾಗಲೇ ಫಿದಾ

    ತಮಿಳು, ತೆಲುಗಿನಲ್ಲಿ ಇಂದು ‘ಕಾಂತಾರ’ದ ಅಬ್ಬರ: ಬಾಲಿವುಡ್ ಈಗಾಗಲೇ ಫಿದಾ

    ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸಿರುವ ಕಾಂತಾರ (Kantara) ಸಿನಿಮಾ ಇಂದಿನಿಂದ ತಮಿಳು ಮತ್ತು ತೆಲುಗಿನಲ್ಲಿ ಪ್ರದರ್ಶನ ಕಾಣುತ್ತಿದೆ. ನೂರಾರು ಚಿತ್ರಮಂದಿರಗಳಲ್ಲಿ ರಿಲೀಸ್ (Release) ಆಗಿರುವ ಚಿತ್ರವನ್ನು ಕಣ್ತುಂಬಿಕೊಳ್ಳಲು ತೆಲುಗು ಹಾಗೂ ತಮಿಳು ಪ್ರೇಕ್ಷಕರು ತುದಿಗಾಲಲ್ಲಿ ಕಾಯುತ್ತಿದ್ದರು. ಎರಡೂ ಸಿನಿಮಾ ರಂಗದ ಅನೇಕ ಕಲಾವಿದರು ಚಿತ್ರದ ಬಗ್ಗೆ ಮೆಚ್ಚುಗೆ ಸೂಚಿಸಿದ್ದರಿಂದ ಸಹಜವಾಗಿಯೇ ಸಿನಿಮಾದ ಬಗ್ಗೆ ಕ್ರೇಜ್ ಕ್ರಿಯೇಟ್ ಆಗಿತ್ತು. ಇಂದು ಕುತೂಹಲಕ್ಕೆ ತೆರೆ ಬಿದ್ದಿದೆ.

    ಕನ್ನಡದಲ್ಲಿ ಕಾಂತಾರ ನಿರೀಕ್ಷೆಗೂ ಮೀರಿ ಯಶಸ್ಸು ಗಳಿಸಿದೆ. ಸಿನಿಮಾ ಬಿಡುಗಡೆಯಾಗಿ ಎರಡು ವಾರಗಳು ಕಳೆಯುತ್ತಿದ್ದರೂ, ಇವತ್ತಿಗೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಸದ್ಯದಲ್ಲೇ ನೂರು ಕೋಟಿ ಕ್ಲಬ್ ಸೇರುವ ಸಿನಿಮಾವಾಗಿಯೂ ಹೊರ ಹೊಮ್ಮಲಿದೆ. ಈ ಹೊತ್ತಿನಲ್ಲಿ ನಿನ್ನೆ ಹಿಂದಿಯಲ್ಲಿ (Hindi), ಇಂದು ತಮಿಳು ಮತ್ತು ತೆಲುಗಿನಲ್ಲಿ ಈ ಸಿನಿಮಾ ರಿಲೀಸ್ ಆಗಿದೆ. ತಮಿಳು ಮತ್ತು ತೆಲುಗಿಗಿಂತ ಹಿಂದಿಯಲ್ಲೇ ಅಧಿಕ ಸಂಖ್ಯೆಯಲ್ಲಿ ಚಿತ್ರಮಂದಿರಗಳು ಸಿಕ್ಕಿವೆ. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ ರೂಪೇಶ್ ರಾಜಣ್ಣ ಮೇಲೆ ಪ್ರಶಾಂತ್ ಸಂಬರ್ಗಿ ವಾಗ್ದಾಳಿ

    ತನ್ನ ಇಡೀ ಟೀಮ್ ಕಟ್ಟಿಕೊಂಡು ರಿಷಬ್ ಶೆಟ್ಟಿ ಬಾಲಿವುಡ್ ಮತ್ತು ತೆಲುಗು ಸಿನಿಮಾ ರಂಗದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಈಗಾಗಲೇ ಭಾರತೀಯ ಸಿನಿಮಾ ರಂಗದ ಬಹುತೇಕ ನಟರು ಕಾಂತಾರದ ಬಗ್ಗೆ ಮಾತನಾಡುತ್ತಿರುವುದರಿಂದ ದಕ್ಷಿಣದ ಅಷ್ಟೂ ಭಾಷೆಗಳಲ್ಲೂ ಸಿನಿಮಾ ಗೆಲ್ಲಲಿದೆ ಎನ್ನುವುದು ಸದ್ಯಕ್ಕಿರುವ ಲೆಕ್ಕಾಚಾರ. ಅದರಲ್ಲೂ ಮಲಯಾಳಂನಲ್ಲಿ ದೈವಾರಾಧನೆ, ಭೂತಕೋಲ ಸೇರಿದಂತೆ ಇತರ ಆಚರಣೆಗಳು ಇರುವುದರಿಂದ ಅಲ್ಲಿಗೆ ಈ ಸಿನಿಮಾ ಇನ್ನೂ ಹತ್ತಿರವಾಗಲಿದೆ.

    ನಿರ್ಮಾಪಕ ವಿಜಯ್ ಕಿರಗಂದೂರು (Vijay Kiraganduru) ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಹಿಂದಿಯಲ್ಲೂ ಚಿತ್ರ ಮಾಡುವ ಇಂಗಿತವನ್ನು ವ್ಯಕ್ತ ಪಡಿಸಿದ್ದಾರೆ. ಈ ಎಲ್ಲ ಸಿನಿಮಾಗಳಿಗೆ ಕೆಜಿಎಫ್ ಯಶಸ್ಸು ಮುನ್ನುಡಿ ಬರೆದಿತ್ತು. ಕಾಂತಾರದ ಮೂಲಕ ಆ ನಂಬಿಕೆ ಇನ್ನಷ್ಟು ಗಟ್ಟಿಯಾಗಲಿದೆ.

    Live Tv
    [brid partner=56869869 player=32851 video=960834 autoplay=true]

  • ತುಳು ಭಾಷೆಯಲ್ಲೂ ಬರಲಿದೆ ‘ಕಾಂತಾರ’: ಶೆಟ್ರೇ ಉಡಲ್ ಗೆಂದಿಯರ್

    ತುಳು ಭಾಷೆಯಲ್ಲೂ ಬರಲಿದೆ ‘ಕಾಂತಾರ’: ಶೆಟ್ರೇ ಉಡಲ್ ಗೆಂದಿಯರ್

    ನ್ನಡದಲ್ಲಿ ಸೂಪರ್ ಹಿಟ್ ಆಗಿ, ಸದ್ಯ ಹಿಂದಿಯಲ್ಲಿ (Hindi) ಬಿಡುಗಡೆ ಆಗಿರುವ, ನಾಳೆ ತಮಿಳು ಮತ್ತು ತೆಲುಗಿನಲ್ಲೂ ಅಬ್ಬರಿಸಲಿರುವ ಕಾಂತಾರ (Kantara) ಸಿನಿಮಾ ತುಳು ಭಾಷೆಗೂ ಡಬ್ ಆಗಲಿದೆ. ಇಂಥದ್ದೊಂದು ಖುಷಿ ಸಂಗತಿಯನ್ನು ಕೊಡಲು ಚಿತ್ರತಂಡ ನಿರ್ಧರಿಸಿದೆ. ಕರಾವಳಿಯ ಭಾಷೆ, ಆಚಾರ ವಿಚಾರ, ಅಲ್ಲಿನ ಸಂಸ್ಕೃತಿಯನ್ನು ಈ ಸಿನಿಮಾದ ಮೂಲಕ ಎಳೆ ಎಳೆಯಾಗಿ ಬಿಚ್ಚಿಡಲಾಗಿದೆ. ಅಲ್ಲದೇ ಕೆಲ ಕಡೆ ತುಳು (Tulu) ಭಾಷೆಯನ್ನೂ ಬಳಸಲಾಗಿದೆ. ಹೀಗಾಗಿ ಕಾಂತಾರ ಮುಂದಿನ ದಿನಗಳಲ್ಲಿ ತುಳು ಭಾಷೆಯಲ್ಲೇ ನೋಡಬಹುದಾಗಿದೆ.

    ಕನ್ನಡದಲ್ಲಿ ಕಾಂತಾರ ನಿರೀಕ್ಷೆಗೂ ಮೀರಿ ಯಶಸ್ಸು ಗಳಿಸಿದೆ. ಸಿನಿಮಾ ಬಿಡುಗಡೆಯಾಗಿ ಎರಡು ವಾರಗಳು ಕಳೆಯುತ್ತಿದ್ದರೂ, ಇವತ್ತಿಗೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಸದ್ಯದಲ್ಲೇ ನೂರು ಕೋಟಿ ಕ್ಲಬ್ ಸೇರುವ ಸಿನಿಮಾವಾಗಿಯೂ ಹೊರ ಹೊಮ್ಮಲಿದೆ. ಈ ಹೊತ್ತಿನಲ್ಲಿ ಇಂದು ಹಿಂದಿಯಲ್ಲಿ, ನಾಳೆ ತಮಿಳು ಮತ್ತು ತೆಲುಗಿನಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿದೆ. ತಮಿಳು ಮತ್ತು ತೆಲುಗಿಗಿಂತ ಹಿಂದಿಯಲ್ಲೇ ಅಧಿಕ ಸಂಖ್ಯೆಯಲ್ಲಿ ಚಿತ್ರಮಂದಿರಗಳು ಸಿಕ್ಕಿವೆ. ಇದನ್ನೂ ಓದಿ:ಮೊನ್ನೆ ತುಟಿ, ಈಗ ಮಚ್ಚೆ ನೋಡಿ ಭವಿಷ್ಯ ಹೇಳಿದ ಆರ್ಯವರ್ಧನ್ ಗುರೂಜಿ

    ತನ್ನ ಇಡೀ ಟೀಮ್ ಕಟ್ಟಿಕೊಂಡು ರಿಷಬ್ ಶೆಟ್ಟಿ (Rishabh Shetty) ಬಾಲಿವುಡ್ ಮತ್ತು ತೆಲುಗು ಸಿನಿಮಾ ರಂಗದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಈಗಾಗಲೇ ಭಾರತೀಯ ಸಿನಿಮಾ ರಂಗದ ಬಹುತೇಕ ನಟರು ಕಾಂತಾರದ ಬಗ್ಗೆ ಮಾತನಾಡುತ್ತಿರುವುದರಿಂದ ದಕ್ಷಿಣದ ಅಷ್ಟೂ ಭಾಷೆಗಳಲ್ಲೂ ಸಿನಿಮಾ ಗೆಲ್ಲಲಿದೆ ಎನ್ನುವುದು ಸದ್ಯಕ್ಕಿರುವ ಲೆಕ್ಕಾಚಾರ. ಅದರಲ್ಲೂ ಮಲಯಾಳಂನಲ್ಲಿ ದೈವಾರಾಧನೆ, ಭೂತಕೋಲ ಸೇರಿದಂತೆ ಇತರ ಆಚರಣೆಗಳು ಇರುವುದರಿಂದ ಅಲ್ಲಿಗೆ ಈ ಸಿನಿಮಾ ಇನ್ನೂ ಹತ್ತಿರವಾಗಲಿದೆ.

    ನಿರ್ಮಾಪಕ ವಿಜಯ್ ಕಿರಗಂದೂರು (Vijay Kiraganduru) ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಹಿಂದಿಯಲ್ಲೂ ಚಿತ್ರ ಮಾಡುವ ಇಂಗಿತವನ್ನು ವ್ಯಕ್ತ ಪಡಿಸಿದ್ದಾರೆ. ಈ ಎಲ್ಲ ಸಿನಿಮಾಗಳಿಗೆ ಕೆಜಿಎಫ್ ಯಶಸ್ಸು ಮುನ್ನುಡಿ ಬರೆದಿತ್ತು. ಕಾಂತಾರದ ಮೂಲಕ ಆ ನಂಬಿಕೆ ಇನ್ನಷ್ಟು ಗಟ್ಟಿಯಾಗಲಿದೆ.

    Live Tv
    [brid partner=56869869 player=32851 video=960834 autoplay=true]

  • ಕಾಂತಾರ: ಬಾಲಿವುಡ್‌ನಲ್ಲಿ ಧೂಳ್, ತಮಿಳಿನ ಟ್ರೇಲರ್‌ಗೂ ಸಖತ್ ರೆಸ್ಪಾನ್ಸ್

    ಕಾಂತಾರ: ಬಾಲಿವುಡ್‌ನಲ್ಲಿ ಧೂಳ್, ತಮಿಳಿನ ಟ್ರೇಲರ್‌ಗೂ ಸಖತ್ ರೆಸ್ಪಾನ್ಸ್

    ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸಿರುವ ‘ಕಾಂತಾರ’ (Kantara) ಸಿನಿಮಾ ಇಂದಿನಿಂದ ಹಿಂದಿಯಲ್ಲಿ (Hindi) ರಿಲೀಸ್ ಆಗಿದೆ. ನಾಳೆ ತೆಲುಗು ಮತ್ತು ತಮಿಳಿನಲ್ಲೂ ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ತಮಿಳಿನಲ್ಲಿ ಟ್ರೇಲರ್ ರಿಲೀಸ್ ಆಗಿದ್ದು, ಸಖತ್ ರೆಸ್ಪಾನ್ಸ್ ಸಿಕ್ಕಿದೆ. ಹಿಂದಿಯಲ್ಲಿ 2500ಕ್ಕೂ ಹೆಚ್ಚು ಥಿಯೇಟರ್ ನಲ್ಲಿ ಕಾಂತಾರ ಪ್ರದರ್ಶನ ಕಾಣುತ್ತಿದ್ದು, ತೆಲುಗು ಮತ್ತು ತಮಿಳಿನಲ್ಲೂ ನೂರಾರು ಚಿತ್ರಮಂದಿರಗಳು ಕಾಂತಾರಗಾಗಿ ಕಾಯುತ್ತಿವೆ.

    ಕೆಜಿಎಫ್ ನಂತರ ಕನ್ನಡ ಮತ್ತೊಂದು ಸಿನಿಮಾ ಈ ಪ್ರಮಾಣದ ಸಂಖ್ಯೆಯಲ್ಲಿ ರಿಲೀಸ್ ಆಗುತ್ತಿರುವುದು ಸಹಜವಾಗಿಯೇ ಬಿಟೌನ್ ನಿದ್ದೆ ಕೆಡಿಸಿದೆ. ಸತತ ಸೋಲಿನಿಂದ ಕಂಗೆಟ್ಟಿರುವ ಬಾಲಿವುಡ್ (Bollywood), ದಕ್ಷಿಣದ ಸಿನಿಮಾಗಳ ಆರ್ಭಟಕ್ಕೆ ಸುಸ್ತಾಗಿದೆ. ಈಗಾಗಲೇ ಕೆಜಿಎಫ್ ಸಿನಿಮಾದ ಮೂಲಕ ಗೆಲುವಿನ ರುಚಿಕಂಡಿರುವ ಹೊಂಬಾಳೆ ಫಿಲ್ಮಸ್, ಕಾಂತಾರದ ಮೂಲಕ ಮತ್ತೊಂದು ಗೆಲುವಿಗೆ ಸಿದ್ಧತೆ ಮಾಡಿಕೊಂಡಿದೆ. ಇದನ್ನೂ ಓದಿ:ಟ್ರೋಲಿಗರಿಗೆ ಖಡಕ್ ಉತ್ತರ ಕೊಟ್ಟ ಜಾಹ್ನವಿ ಕಪೂರ್

    ಕನ್ನಡದಲ್ಲಿ ಕಾಂತಾರ ನಿರೀಕ್ಷೆಗೂ ಮೀರಿ ಯಶಸ್ಸು ಗಳಿಸಿದೆ. ಸಿನಿಮಾ ಬಿಡುಗಡೆಯಾಗಿ ಎರಡು ವಾರಗಳು ಕಳೆಯುತ್ತಿದ್ದರೂ, ಇವತ್ತಿಗೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಸದ್ಯದಲ್ಲೇ ನೂರು ಕೋಟಿ ಕ್ಲಬ್ ಸೇರುವ ಸಿನಿಮಾವಾಗಿಯೂ ಹೊರ ಹೊಮ್ಮಲಿದೆ. ಈ ಹೊತ್ತಿನಲ್ಲಿ ಇಂದು ಹಿಂದಿಯಲ್ಲಿ, ನಾಳೆ ತಮಿಳು ಮತ್ತು ತೆಲುಗಿನಲ್ಲಿ ಈ ಸಿನಿಮಾ ರಿಲೀಸ್ (Release) ಆಗುತ್ತಿದೆ. ತಮಿಳು ಮತ್ತು ತೆಲುಗಿಗಿಂತ ಹಿಂದಿಯಲ್ಲೇ ಅಧಿಕ ಸಂಖ್ಯೆಯಲ್ಲಿ ಚಿತ್ರಮಂದಿರಗಳು ಸಿಕ್ಕಿವೆ.

    ತನ್ನ ಇಡೀ ಟೀಮ್ ಕಟ್ಟಿಕೊಂಡು ರಿಷಬ್ ಶೆಟ್ಟಿ ಬಾಲಿವುಡ್ ಮತ್ತು ತೆಲುಗು ಸಿನಿಮಾ ರಂಗದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಈಗಾಗಲೇ ಭಾರತೀಯ ಸಿನಿಮಾ ರಂಗದ ಬಹುತೇಕ ನಟರು ಕಾಂತಾರದ ಬಗ್ಗೆ ಮಾತನಾಡುತ್ತಿರುವುದರಿಂದ ದಕ್ಷಿಣದ ಅಷ್ಟೂ ಭಾಷೆಗಳಲ್ಲೂ ಸಿನಿಮಾ ಗೆಲ್ಲಲಿದೆ ಎನ್ನುವುದು ಸದ್ಯಕ್ಕಿರುವ ಲೆಕ್ಕಾಚಾರ. ಅದರಲ್ಲೂ ಮಲಯಾಳಂನಲ್ಲಿ ದೈವಾರಾಧನೆ, ಭೂತಕೋಲ ಸೇರಿದಂತೆ ಇತರ ಆಚರಣೆಗಳು ಇರುವುದರಿಂದ ಅಲ್ಲಿಗೆ ಈ ಸಿನಿಮಾ ಇನ್ನೂ ಹತ್ತಿರವಾಗಲಿದೆ.

    ನಿರ್ಮಾಪಕ ವಿಜಯ್ ಕಿರಗಂದೂರು ಕನ್ನಡ, ತೆಲುಗು (Telugu), ತಮಿಳು (Tamil) ಮತ್ತು ಮಲಯಾಳಂನಲ್ಲಿ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಹಿಂದಿಯಲ್ಲೂ ಚಿತ್ರ ಮಾಡುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಈ ಎಲ್ಲ ಸಿನಿಮಾಗಳಿಗೆ ಕೆಜಿಎಫ್ ಯಶಸ್ಸು ಮುನ್ನುಡಿ ಬರೆದಿತ್ತು. ಕಾಂತಾರದ ಮೂಲಕ ಆ ನಂಬಿಕೆ ಇನ್ನಷ್ಟು ಗಟ್ಟಿಯಾಗಲಿದೆ.

    Live Tv
    [brid partner=56869869 player=32851 video=960834 autoplay=true]

  • ಹಿಂದಿಯಲ್ಲಿ ಕಾಂತಾರ ಸಿನಿಮಾಗೆ 2500 ಥಿಯೇಟರ್ : ಬೆಚ್ಚಿಬಿತ್ತು ಬಾಲಿವುಡ್

    ಹಿಂದಿಯಲ್ಲಿ ಕಾಂತಾರ ಸಿನಿಮಾಗೆ 2500 ಥಿಯೇಟರ್ : ಬೆಚ್ಚಿಬಿತ್ತು ಬಾಲಿವುಡ್

    ನ್ನಡದ ಕಾಂತಾರ (Kantara) ಸಿನಿಮಾ ನಾಳೆಯಿಂದ ಹಿಂದಿಯಲ್ಲಿ (Hindi) 2500 ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗುತ್ತಿದೆ. ಕೆಜಿಎಫ್ ನಂತರ ಕನ್ನಡ ಮತ್ತೊಂದು ಸಿನಿಮಾ ಈ ಪ್ರಮಾಣದ ಸಂಖ್ಯೆಯಲ್ಲಿ ರಿಲೀಸ್ ಆಗುತ್ತಿರುವುದು ಸಹಜವಾಗಿಯೇ ಬಿಟೌನ್ ನಿದ್ದೆ ಕೆಡಿಸಿದೆ. ಸತತ ಸೋಲಿನಿಂದ ಕಂಗೆಟ್ಟಿರುವ ಬಾಲಿವುಡ್, ದಕ್ಷಿಣದ ಸಿನಿಮಾಗಳ ಆರ್ಭಟಕ್ಕೆ ಸುಸ್ತಾಗಿದೆ. ಈಗಾಗಲೇ ಕೆಜಿಎಫ್ ಸಿನಿಮಾದ ಮೂಲಕ ಗೆಲುವಿನ ರುಚಿಕಂಡಿರುವ ಹೊಂಬಾಳೆ ಫಿಲ್ಮಸ್, ಕಾಂತಾರದ ಮೂಲಕ ಮತ್ತೊಂದು ಗೆಲುವಿಗೆ ಸಿದ್ಧತೆ ಮಾಡಿಕೊಂಡಿದೆ.

    ಕನ್ನಡದಲ್ಲಿ ಕಾಂತಾರ ನಿರೀಕ್ಷೆಗೂ ಮೀರಿ ಯಶಸ್ಸು ಗಳಿಸಿದೆ. ಸಿನಿಮಾ ಬಿಡುಗಡೆಯಾಗಿ ಎರಡು ವಾರಗಳು ಕಳೆಯುತ್ತಿದ್ದರೂ, ಇವತ್ತಿಗೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಸದ್ಯದಲ್ಲೇ ನೂರು ಕೋಟಿ ಕ್ಲಬ್ ಸೇರುವ ಸಿನಿಮಾವಾಗಿಯೂ ಹೊರ ಹೊಮ್ಮಲಿದೆ. ಈ ಹೊತ್ತಿನಲ್ಲಿ ಅಕ್ಟೋಬರ್ 14 ರಂದು ಹಿಂದಿಯಲ್ಲಿ, 15 ರಂದು ತೆಲುಗಿನಲ್ಲಿ ಈ ಸಿನಿಮಾ ರಿಲೀಸ್ (Release) ಆಗುತ್ತಿದೆ. ತೆಲುಗಿಗಿಂತ ಹಿಂದಿಯಲ್ಲೇ ಅಧಿಕ ಸಂಖ್ಯೆಯಲ್ಲಿ ಚಿತ್ರಮಂದಿರಗಳು ಸಿಕ್ಕಿವೆ. ಇದನ್ನೂ ಓದಿ:ತಮಿಳು ಬಿಗ್ ಬಾಸ್‌ಗೆ ಕಾಲಿಟ್ಟ ಕನ್ನಡತಿ ರಚಿತಾ ಮಹಾಲಕ್ಷ್ಮಿ

    ತನ್ನ ಇಡೀ ಟೀಮ್ ಕಟ್ಟಿಕೊಂಡು ರಿಷಬ್ ಶೆಟ್ಟಿ (Rishabh Shetty) ಬಾಲಿವುಡ್ (Bollywood) ಮತ್ತು ತೆಲುಗು ಸಿನಿಮಾ ರಂಗದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಈಗಾಗಲೇ ಭಾರತೀಯ ಸಿನಿಮಾ ರಂಗದ ಬಹುತೇಕ ನಟರು ಕಾಂತಾರದ ಬಗ್ಗೆ ಮಾತನಾಡುತ್ತಿರುವುದರಿಂದ ದಕ್ಷಿಣದ ಅಷ್ಟೂ ಭಾಷೆಗಳಲ್ಲೂ ಸಿನಿಮಾ ಗೆಲ್ಲಲಿದೆ ಎನ್ನುವುದು ಸದ್ಯಕ್ಕಿರುವ ಲೆಕ್ಕಾಚಾರ. ಅದರಲ್ಲೂ ಮಲಯಾಳಂನಲ್ಲಿ ದೈವಾರಾಧನೆ, ಭೂತಕೋಲ ಸೇರಿದಂತೆ ಇತರ ಆಚರಣೆಗಳು ಇರುವುದರಿಂದ ಅಲ್ಲಿಗೆ ಈ ಸಿನಿಮಾ ಇನ್ನೂ ಹತ್ತಿರವಾಗಲಿದೆ.

    ನಿರ್ಮಾಪಕ ವಿಜಯ್ ಕಿರಗಂದೂರು (Vijay Kirgandur) ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಹಿಂದಿಯಲ್ಲೂ ಚಿತ್ರ ಮಾಡುವ ಇಂಗಿತವನ್ನು ವ್ಯಕ್ತ ಪಡಿಸಿದ್ದಾರೆ. ಈ ಎಲ್ಲ ಸಿನಿಮಾಗಳಿಗೆ ಕೆಜಿಎಫ್ ಯಶಸ್ಸು ಮುನ್ನುಡಿ ಬರೆದಿತ್ತು. ಕಾಂತಾರದ ಮೂಲಕ ಆ ನಂಬಿಕೆ ಇನ್ನಷ್ಟು ಗಟ್ಟಿಯಾಗಲಿದೆ.

    Live Tv
    [brid partner=56869869 player=32851 video=960834 autoplay=true]

  • ಬಾಲಿವುಡ್‌ನ 2,500 ಸ್ಕ್ರೀನ್‌ಗಳಲ್ಲಿ ಹಿಂದಿಯ ಕಾಂತಾರ ರಿಲೀಸ್

    ಬಾಲಿವುಡ್‌ನ 2,500 ಸ್ಕ್ರೀನ್‌ಗಳಲ್ಲಿ ಹಿಂದಿಯ ಕಾಂತಾರ ರಿಲೀಸ್

    ಳ್ಳೆಯ ಕಥಾವಸ್ತುವುಳ್ಳ ಚಿತ್ರವನ್ನು ಚಿತ್ರರಸಿಕರು ಮೆಚ್ಚಿಕೊಳ್ಳುತ್ತಾರೆ ಎನ್ನುವುದಕ್ಕೆ “ಕಾಂತಾರ” (Kantara) ಚಿತ್ರದ ಯಶಸ್ಸೇ ಸಾಕ್ಷಿ. ನಮ್ಮ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಮನಮುಟ್ಟುವಂತೆ ಈ ಚಿತ್ರದಲ್ಲಿ ತೋರಿಸಲಾಗಿದೆ. ಇಂತಹ ಉತ್ತಮ ಚಿತ್ರವನ್ನು ನಿರ್ಮಾಣ ಮಾಡಿರುವ ಹೊಂಬಾಳೆ ಫಿಲ್ಮ್ಸ್‌ನ ವಿಜಯ್ ಕಿರಗಂದೂರು  ಹಾಗೂ ನಿರ್ದೇಶಿಸಿರುವ ರಿಷಬ್ ಶೆಟ್ಟಿ (Rishabh Shetty) ಅವರಿಗೆ ನಿಜಕ್ಕೂ ಅಭಿನಂದನೆ ಸಲ್ಲಬೇಕು.

    ಸ್ಯಾಂಡಲ್‌ವುಡ್‌ನಲ್ಲಿ ಈಗ ಎಲ್ಲಿ ನೋಡಿದರೂ “ಕಾಂತಾರ”ದ್ದೇ ಮಾತು. ನಿರೀಕ್ಷೆಗೂ ಮೀರಿದ ಯಶಸ್ಸು ಕೂಡ. ಇಂತಹ ಅದ್ಭುತ ಚಿತ್ರ ಬೇರೆ ಬೇರೆ ರಾಜ್ಯಗಳಲ್ಲಿ, ಅಯಾ ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಇದೇ ಅಕ್ಟೋಬರ್ 14ರ ಶುಕ್ರವಾರ ಹಿಂದಿ (Hindi) ಭಾಷೆಯಲ್ಲೂ “ಕಾಂತಾರ” ಚಿತ್ರ ತೆರೆ ಕಾಣುತ್ತಿದೆ. ಮುಂಬೈ ಸೇರಿದಂತೆ ವಿವಿಧೆಡೆ ಸುಮಾರು 2,500ಕ್ಕೂ ಅಧಿಕ ಸ್ಕೀನ್‌ಗಳಲ್ಲಿ “ಕಾಂತಾರ” ಪ್ರದರ್ಶನವಾಗಲಿದೆ. ಇದನ್ನೂ ಓದಿ:`ಪುನೀತ ಪರ್ವ’ ಕಾರ್ಯಕ್ರಮಕ್ಕೆ ಸಿಎಂಗೆ ಆಹ್ವಾನ ನೀಡಿದ ಅಣ್ಣಾವ್ರ ಕುಟುಂಬ

    ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣದ “ಕೆ.ಜಿ.ಎಫ್ 2” ಬಾಲಿವುಡ್ (Bollywood) ನಲ್ಲಿ ದಾಖಲೆ ಮಟ್ಟದ ಯಶಸ್ಸು ಗಳಿಸಿದ್ದು ಗಮನಾರ್ಹ. ಈಗ “ಕಾಂತಾರ” ಚಿತ್ರವನ್ನು ಅಧಿಕ ಸಂಖ್ಯೆಯ ಚಿತ್ರಮಂದಿಗಳಲ್ಲಿ ಬಿಡುಗಡೆ ಮಾಡುವ ಮೂಲಕ ಇಡೀ ದೇಶವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವ ಹಾಗೆ ಮಾಡುತ್ತಿದ್ದಾರೆ ಕನ್ನಡದ ಹೆಮ್ಮೆಯ ನಿರ್ಮಾಪಕ (Vijay Kirgandur) ವಿಜಯ್ ಕಿರಗಂದೂರು.

    Live Tv
    [brid partner=56869869 player=32851 video=960834 autoplay=true]

  • ತ್ರಿಭಾಷಾ ಸೂತ್ರಕ್ಕೆ ಸಮಾಧಿ ಕಟ್ಟಲು ಕೇಂದ್ರ ಸರ್ಕಾರ ಹೊರಟಿದೆ – ಹೆಚ್‌ಡಿಕೆ ಆಕ್ರೋಶ

    ತ್ರಿಭಾಷಾ ಸೂತ್ರಕ್ಕೆ ಸಮಾಧಿ ಕಟ್ಟಲು ಕೇಂದ್ರ ಸರ್ಕಾರ ಹೊರಟಿದೆ – ಹೆಚ್‌ಡಿಕೆ ಆಕ್ರೋಶ

    ಬೆಂಗಳೂರು: ಕೇಂದ್ರದ ಸಿಬ್ಬಂದಿ ಆಯ್ಕೆ ಆಯೋಗ (SSC) 20,000 ಹುದ್ದೆ ಆಯ್ಕೆಗೆ ಹಿಂದಿ-ಇಂಗ್ಲೀಷ್‌ನಲ್ಲಿ ಮಾತ್ರ ಪರೀಕ್ಷೆ ನಡೆಸುತ್ತಿದೆ. ಆಯ್ಕೆಯಾದ ಅಭ್ಯರ್ಥಿಯನ್ನು ಯಾವ ರಾಜ್ಯಕ್ಕಾದರೂ ಕಳುಹಿಸಬಹುದು. ಕನ್ನಡ ಸೇರಿ ಯಾವುದೇ ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆಗೆ ಅವಕಾಶವಿಲ್ಲ. ಹಿಂದಿ ಹೇರಿಕೆ (Hindi Imposition), ಭಾಷಾ ತಾರತಮ್ಯಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ (H.D.Kumaraswamy) ಪ್ರಶ್ನಿಸಿದ್ದಾರೆ.

    ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕೇಂದ್ರ ಸರ್ಕಾರಕ್ಕೆ ಪ್ರಾದೇಶಿಕ ಭಾಷೆಗಳನ್ನು ಹತ್ತಿಕ್ಕಲೇಬೇಕು ಎನ್ನುವ ಕೆಟ್ಟ ಹಠವಿದ್ದಂತೆ ಇದೆ. ಕನ್ನಡವೂ ಸೇರಿ ದಕ್ಷಿಣದ ಪ್ರಾದೇಶಿಕ ಭಾಷೆಗಳ ಬಗ್ಗೆ ಇನ್ನಿಲ್ಲದ ಅಸಹನೆ, ದ್ವೇಷ ಮೈಗೂಡಿಸಿಕೊಂಡಿದೆ ಎನಿಸುತ್ತಿದೆ. ತ್ರಿಭಾಷಾ ಸೂತ್ರಕ್ಕೆ ಹೇಗಾದರೂ ಸಮಾಧಿ ಕಟ್ಟಲೇಬೇಕೆಂದು ಹೊರಟಂತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಎಸ್‌.ಎಂ ಕೃಷ್ಣ ಸರ್ಕಾರದ ಸಂಪುಟದಲ್ಲಿ ಸಚಿವರಾಗಿದ್ದ ಜಬ್ಬಾರ್ ಖಾನ್ ಹೊನ್ನಳ್ಳಿ ನಿಧನ

    ಒಕ್ಕೂಟ ತತ್ವದಲ್ಲಿ ಆಡಳಿತ ನಡೆಸುವ ಪಕ್ಷಕ್ಕೇ ಒಪ್ಪಿಗೆ ಇಲ್ಲ ಎನ್ನುವುದನ್ನು ಇದು ತೋರಿಸುತ್ತಿದೆ. ಹಿಂದಿ ಭಾಷಿಗರನ್ನು ಕರ್ನಾಟಕ ಹಾಗೂ ದಕ್ಷಿಣ ಭಾರತದಲ್ಲಿ ತುಂಬುವ ದುಸ್ಸಾಹಸವಷ್ಟೇ ಇದು ಎಂದು ಕಿಡಿಕಾರಿದ್ದಾರೆ.

    ಈ ವಿಷಯದಲ್ಲಿ ನಮ್ಮ 2 ಬೇಡಿಕೆಗಳಿವೆ. ಕನ್ನಡದಲ್ಲೂ ಪರೀಕ್ಷೆ ನಡೆಸಬೇಕು. ಕರ್ನಾಟಕದ ಹುದ್ದೆಗಳಿಗೆ ಕನ್ನಡಿಗರನ್ನೇ ನೇಮಿಸಬೇಕು. ಈ ಬದಲಾವಣೆ ನಂತರವಷ್ಟೇ ಸಿಬ್ಬಂದಿ ಆಯ್ಕೆ ಆಯೋಗ ಪರೀಕ್ಷೆ ನಡೆಸಬೇಕು ಎಂದು ಹೆಚ್‌ಡಿಕೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಭಾರತ್ ಜೋಡೋ ಪಾದಯಾತ್ರೆಯಲ್ಲಿ ರಾಹುಲ್-ಸಿದ್ದು ರನ್ನಿಂಗ್ ರೇಸ್

    ಕನ್ನಡದಲ್ಲೇ ಪರೀಕ್ಷೆ ನಡೆಸಿದರೆ ಕರ್ನಾಟಕದ ಅನೇಕ ಪ್ರತಿಭಾವಂತ ಯುವಜನರು ಆಯ್ಕೆ ಆಗಲು ಅನುಕೂಲವಾಗುತ್ತದೆ. ಕರ್ನಾಟಕದ ಹುದ್ದೆಗಳಿಗೆ ಕನ್ನಡಿಗರ ನೇಮಕವಾದರೆ, ಕರ್ನಾಟಕದ ಜನರಿಗೆ ಕನ್ನಡದಲ್ಲಿ ಸೇವೆ ದೊರೆಯುತ್ತದೆ. ತಪ್ಪಿದರೆ ಕೇಂದ್ರವು ಕನ್ನಡಿಗರ ಆಗ್ರಹಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]