Tag: hindi

  • ಹಿಂದಿ ಅಥವಾ ಯಾವುದೋ ಭಾಷೆಯನ್ನು ಹೇರುವ ಪ್ರಶ್ನೆಯೇ ಇಲ್ಲ: TN ರಾಜ್ಯಪಾಲ ಆರ್.ಎನ್.ರವಿ

    ಹಿಂದಿ ಅಥವಾ ಯಾವುದೋ ಭಾಷೆಯನ್ನು ಹೇರುವ ಪ್ರಶ್ನೆಯೇ ಇಲ್ಲ: TN ರಾಜ್ಯಪಾಲ ಆರ್.ಎನ್.ರವಿ

    ಚೆನ್ನೈ: ಹಿಂದಿ ಅಥವಾ ಯಾವುದೋ ಭಾಷೆಯನ್ನು ಹೇರುವ ಪ್ರಶ್ನೆಯೇ ಇಲ್ಲ ಎಂದು ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಹೇಳಿದ್ದಾರೆ.

    ಇತ್ತೀಚೆಗಷ್ಟೇ ತಮಿಳುನಾಡು ಉನ್ನತ ಶಿಕ್ಷಣ ಸಚಿವ ಪೊನ್ಮುಡಿ ಅವರು ಹಿಂದಿ ಹೇರಿಯನ್ನು ಖಂಡಿಸಿ, ಹಿಂದಿ ಮಾತನಾಡುವವರು ಪಾನಿಪುರಿ ಮಾರಾಟ ಮಾರುತ್ತಿದ್ದಾರೆ ಎಂದು ವಿವಾದತ್ಮಕ ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಹಿಂದಿಯಲ್ಲಿ ಮಾತನಾಡುವವರು ಪಾನಿಪೂರಿ ಮಾರುತ್ತಿದ್ದಾರೆ: TN ಸಚಿವ ಪೊನ್ಮುಡಿ

    ಈ ಕುರಿತಂತೆ ಪ್ರತಿಕ್ರಿಯಿಸಿದ ರಾಜ್ಯಪಾಲ ಆರ್.ಎನ್.ರವಿ ಅವರು, ಕೇಂದ್ರ ಸರ್ಕಾರ ತಮಿಳುನಾಡಿನಲ್ಲಿ ಬೇರೆ ಯಾವುದೋ ಭಾಷೆಯನ್ನು ಹೇರಲಾಗುತ್ತಿದೆ ಎಂಬ ಭಾವನೆ ಕೆಲವರಿಂದ ಸೃಷ್ಟಿಯಾಗುತ್ತಿದೆ. ಆದರೆ ಇದು ಸತ್ಯಕ್ಕೆ ದೂರವಾದ ಮಾತು ಎಂದು ನಾನು ಭಾವಿಸುತ್ತೇನೆ. ರಾಷ್ಟ್ರೀಯ ಶೈಕ್ಷಣಿಕ ನೀತಿಯ ಸಂಪೂರ್ಣ ಉದ್ದೇಶ ಪ್ರಾದೇಶಿಕ ಭಾಷೆಗಳಲ್ಲಿ ಅಥವಾ ಮಾತೃಭಾಷೆಯಲ್ಲಿ ಕಲಿಕೆಗೆ ಒತ್ತು ನೀಡುವುದಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೊಲ್ಲೂರಮ್ಮನ ದರ್ಶನದಿಂದ ಮನಸ್ಸಿಗೆ ಖುಷಿಯಾಗಿದೆ: ನಿರ್ಮಲಾ ಸೀತಾರಾಮನ್

    ಇತ್ತೀಚೆಗೆ ನಡೆದ ಸಮ್ಮೇಳನವೊಂದರಲ್ಲಿ ಮುಖ್ಯ ನ್ಯಾಯಮೂರ್ತಿಗಳು ಮತ್ತು ಮುಖ್ಯಮಂತ್ರಿಗಳ ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಅವರು ಪ್ರಾದೇಶಿಕ ಭಾಷೆಗಳನ್ನು ಉಚ್ಚ ನ್ಯಾಯಾಲಯದ ಭಾಷೆಯನ್ನಾಗಿ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಸಾಮಾನ್ಯವಾಗಿ ನ್ಯಾಯ ಕೇಳಲು ಹೋದವರಿಗೆ ಅರ್ಥವಾಗುವ ಭಾಷೆಯಲ್ಲಿ ನ್ಯಾಯ ಸಿಗಬೇಕು ಎಂದಿದ್ದಾರೆ.

  • ಹಿಂದಿಯಲ್ಲಿ ಮಾತನಾಡುವವರು ಪಾನಿಪೂರಿ ಮಾರುತ್ತಿದ್ದಾರೆ: TN ಸಚಿವ ಪೊನ್ಮುಡಿ

    ಹಿಂದಿಯಲ್ಲಿ ಮಾತನಾಡುವವರು ಪಾನಿಪೂರಿ ಮಾರುತ್ತಿದ್ದಾರೆ: TN ಸಚಿವ ಪೊನ್ಮುಡಿ

    ಚೆನ್ನೈ: ಹಿಂದಿ ಮಾತನಾಡುವವರು ಕೀಳು ಕೆಲಸಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ಹಿಂದಿ ಮಾತನಾಡುವವರು ಕೊಯಮತ್ತೂರಿನಲ್ಲಿ ಪಾನಿಪುರಿ ಮಾರುತ್ತಿದ್ದಾರೆ ಎಂದು ತಮಿಳುನಾಡಿನ ಉನ್ನತ ಶಿಕ್ಷಣ ಸಚಿವ ಪೊನ್ಮುಡಿ ಪರೋಕ್ಷವಾಗಿ ಹೇಳಿದ್ದಾರೆ.

    ಕೊಯಮತ್ತೂರಿನ ಭಾರತಿಯಾರ್ ವಿಶ್ವವಿದ್ಯಾನಿಲಯದಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಪೊನ್ಮುಡಿ ಅವರು, ತಮಿಳು ವಿದ್ಯಾರ್ಥಿಗಳು ಯಾವುದೇ ಭಾಷೆಯನ್ನು ಕಲಿಯಲು ಸಿದ್ಧರಿದ್ದಾರೆ. ಆದರೆ ಹಿಂದಿ ಐಚ್ಛಿಕವಾಗಿರಬೇಕೆ ಹೊರತು ಕಡ್ಡಾಯವಾಗಿರಬಾರದು ಎಂದರು. ಇದೇ ವೇಳೆ ರಾಷ್ಟ್ರೀಯ ಶಿಕ್ಷಣ ನೀತಿ 2020ರ ಪ್ರಯೋಜನಕಾರಿ ಅಂಶಗಳನ್ನು ಜಾರಿಗೆ ತರುವುದಾಗಿ ಭರವಸೆ ನೀಡಿದರು. ಆದರೆ ರಾಜ್ಯ ಸರ್ಕಾರವು ಕೇವಲ ದ್ವಿಭಾಷಾ ವ್ಯವಸ್ಥೆಯನ್ನು ಜಾರಿಗೆ ತರಲು ನಿರ್ಧರಿಸಿದೆ ಎಂದು ಪ್ರತಿಪಾದಿಸಿದರು. ಇದನ್ನೂ ಓದಿ: ಕಾಳಿ ಸ್ವಾಮಿಗೆ ಮಸಿ ಬಳೆದಿದ್ದು ಅಕ್ಷಮ್ಯ ಅಪರಾಧ: ಮುತಾಲಿಕ್

    ಈಗಾಗಲೇ ಅಂತರಾಷ್ಟ್ರೀಯ ಭಾಷೆಯಾದ ಇಂಗ್ಲಿಷ್ ಕಲಿಯುತ್ತಿರುವಾಗ ಹಿಂದಿಯನ್ನು ಏಕೆ ಕಲಿಯಬೇಕು? ಭಾರತದ ಶಿಕ್ಷಣ ವ್ಯವಸ್ಥೆಯಲ್ಲಿ ತಮಿಳುನಾಡು ಮುಂಚೂಣಿಯಲ್ಲಿದೆ. ತಮಿಳು ವಿದ್ಯಾರ್ಥಿಗಳು ಯಾವುದೇ ಭಾಷೆಯನ್ನು ಕಲಿಯಲು ಸಿದ್ಧರಿದ್ದಾರೆ. ಆದರೆ, ಹಿಂದಿ ಐಚ್ಛಿಕ ಭಾಷೆಯಾಗಿರಬೇಕೇ ಹೊರತು ಕಡ್ಡಾಯವಲ್ಲ. ಹಿಂದಿಗಿಂತ ಇಂಗ್ಲಿಷ್‍ಗೆ ಹೆಚ್ಚು ಬೆಲೆಯಿದೆ. ಆದರೆ ಹಿಂದಿ ಭಾಷೆಯನ್ನು ಮಾತನಾಡುವವರು ಕೀಳು ಕೆಲಸ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

    ಅದು ಒಂದು ಕಾಲದಲ್ಲಿ ಹಿಂದಿ ಕಲಿತರೆ ಉದ್ಯೋಗ ಸಿಗುತ್ತದೆ ಎಂದು ಹೇಳುತ್ತಿದ್ದರು, ಆದರೆ ಅದು ನಿಜ ನಾ? ಕೊಯಮತ್ತೂರಿನಲ್ಲಿ ಈಗ ಯಾರು ಪಾನಿ ಪುರಿ ಮಾರುತ್ತಿರುವವರನ್ನು ನೋಡಿದ್ದೀರಾ? ಈಗ ಇಂಗ್ಲಿಷ್ ಅಂತಾರಾಷ್ಟ್ರೀಯ ಭಾಷೆಯಾಗಿದೆ ಎಂದು ಹೇಳಿದರು. ಇದನ್ನೂ ಓದಿ: ರಮ್ಯಾಗೆ ಕೋಪ ಇದ್ರೆ ಬೈಯಲಿ ಆದ್ರೆ ಟ್ವೀಟ್‍ನಲ್ಲಿ ಬೇಡ: ನಲಪಾಡ್

  • ತಮಿಳು ಅತ್ಯಂತ ಪ್ರಾಚೀನ ಭಾಷೆ : ದೇಶದಲ್ಲಿ ಅರಾಜಕತೆ ಸೃಷ್ಟಿಯಾಗುತ್ತಿದೆ ಎಂದ ಸೋನು ನಿಗಮ್

    ತಮಿಳು ಅತ್ಯಂತ ಪ್ರಾಚೀನ ಭಾಷೆ : ದೇಶದಲ್ಲಿ ಅರಾಜಕತೆ ಸೃಷ್ಟಿಯಾಗುತ್ತಿದೆ ಎಂದ ಸೋನು ನಿಗಮ್

    ಬಾಲಿವುಡ್ ಗಾಯಕ ಮತ್ತು ಪದ್ಮಶ್ರೀ ಪುರಸ್ಕೃತ ಸೋನು ನಿಗಮ್ ಈಗ ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದ್ದಾರೆ. ಅಜಯ್ ದೇವಗನ್ ಮತ್ತು ಕಿಚ್ಚ ಸುದೀಪ್ ಅವರ ಹಿಂದಿ ರಾಷ್ಟ್ರ ಭಾಷಾ ಚರ್ಚೆಯ ವಿಚಾರವಾಗಿ ದೇಶದಲ್ಲಿ ಅರಾಜಕತೆಯನ್ನು ಏಕೆ ಸೃಷ್ಟಿಸಬೇಕು ಎಂದು ಸೋನು ಕಿಡಿಕಾರಿದ್ದಾರೆ.

    ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ‘ನನ್ನ ಜ್ಞಾನದ ಪ್ರಕಾರ, ಭಾರತದ ಸಂವಿಧಾನದಲ್ಲಿ ಹಿಂದಿಯನ್ನು ರಾಷ್ಟ್ರೀಯ ಭಾಷೆ ಎಂದು ದಾಖಲಿಸಿಲ್ಲ. ಈ ಬಗ್ಗೆ ನಾನು ತಜ್ಞರನ್ನೂ ಸಂಪರ್ಕಿಸಿದ್ದೇನೆ. ಹಿಂದಿ ದೇಶದಲ್ಲಿ ಹೆಚ್ಚು ಮಾತನಾಡುವ ಭಾಷೆಯಾಗಿದೆ. ನಾನು ಅದನ್ನು ಅರ್ಥಮಾಡಿಕೊಂಡಿದ್ದೇನೆ. ತಮಿಳು ಭಾಷೆಯು ಅತ್ಯಂತ ಹಳೆಯ ಭಾಷೆ ಎಂದು ನಮಗೆ ತಿಳಿದಿದೆ. ಸಂಸ್ಕೃತ ಮತ್ತು ತಮಿಳು ನಡುವೆ ಚರ್ಚೆ ನಡೆಯುತ್ತಿದೆ. ಇಡೀ ಪ್ರಪಂಚದಲ್ಲಿ ತಮಿಳು ಅತ್ಯಂತ ಹಳೆಯ ಭಾಷೆ ಆಗಿದೆ ಎಂದು ಜನರು ಹೇಳುತ್ತಾರೆ’ ಎಂದಿದ್ದಾರೆ ಸೋನು. ಇದನ್ನೂ ಓದಿ: ಭಾಷಾ ವಿಚಾರದಲ್ಲಿ ದೇಶ ಒಡೆಯಲಾಗುತ್ತಿದೆ : ಗಾಯಕ ಸೋನು ನಿಗಂ ಕಿಡಿಕಿಡಿ

    ಮುಂದುವರೆದು ಮಾತನಾಡಿರುವ ಅವರು, ‘ನೀವು ತಮಿಳಿಗರು, ನೀವು ಹಿಂದಿಯಲ್ಲಿ ಮಾತನಾಡಬೇಕು ಎಂದು ಇತರರ ಮೇಲೆ ಭಾಷೆಯನ್ನು ಹೇರುವ ಮೂಲಕ ನಾವು ದೇಶದಲ್ಲಿ ಅಸಮಾನತೆಯನ್ನು ಸೃಷ್ಟಿಸುತ್ತಿದ್ದೇವೆ ಎಂದ ಅವರು, ಪಂಜಾಬಿಗರು ಪಂಜಾಬಿ ಮಾತನಾಡಬೇಕು, ತಮಿಳಿಗರು ತಮಿಳು ಮಾತನಾಡಬೇಕು. ಇಂಗ್ಲಿಷಿನಲ್ಲಿ ಮಾತನಾಡಲು ಇಚ್ಚಿಸುವುದಾದರೆ ಅವರು ಆ ಭಾಷೆಯಲ್ಲಿ ಮಾತನಾಡಲಿ ಬಿಟ್ಟುಬಿಡಿ. ನಮ್ಮ ನ್ಯಾಯಾಲಯಗಳಲ್ಲಿಯೂ ತೀರ್ಪುಗಳು ಇಂಗ್ಲಿಷ್‍ನಲ್ಲಿಯೇ ಬರುತ್ತವೆ’ ಎಂದು ಮಾರ್ಮಿಕವಾಗಿ ಅವರು ಮಾತನಾಡಿದ್ದಾರೆ. ಇದನ್ನೂ ಓದಿ : ಬೆಳ್ಳಿತೆರೆಯಲ್ಲಿ ಕಾಯಕಯೋಗಿ ಬಸವಣ್ಣ: ಯಾರೆಲ್ಲ ಪಾತ್ರ ಮಾಡಿದ್ದಾರೆ ಗೊತ್ತಾ?

     

  • ಭಾಷಾ ವಿಚಾರದಲ್ಲಿ ದೇಶ ಒಡೆಯಲಾಗುತ್ತಿದೆ : ಗಾಯಕ ಸೋನು ನಿಗಂ ಕಿಡಿಕಿಡಿ

    ಭಾಷಾ ವಿಚಾರದಲ್ಲಿ ದೇಶ ಒಡೆಯಲಾಗುತ್ತಿದೆ : ಗಾಯಕ ಸೋನು ನಿಗಂ ಕಿಡಿಕಿಡಿ

    ರಾಷ್ಟ್ರ ಭಾಷೆಯ ವಿಚಾರವಾಗಿ ಒಂದಿಲ್ಲೊಂದು ಹೇಳಿಕೆ ನಿತ್ಯವೂ ಬರುತ್ತಿದೆ. ಕಿಚ್ಚ ಸುದೀಪ್ ‘ಹಿಂದಿ ಭಾಷೆಯನ್ನು ರಾಷ್ಟ್ರ ಭಾಷೆ ಎಂದು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ’ ಎಂದು ಹೇಳುತ್ತಿದ್ದಂತೆಯೇ ಅತ್ತ ಬಾಲಿವುಡ್ ನಟ ಅಜಯ್ ದೇವಗನ್ ‘ಹಿಂದಿ ರಾಷ್ಟ್ರ ಭಾಷೆ ಅಂತ ಒಪ್ಪದೇ ಇದ್ದರೆ ಹಿಂದಿಯಲ್ಲಿ ನಿಮ್ಮ ಸಿನಿಮಾಗಳನ್ನು ಡಬ್ ಮಾಡಿ ಏಕೆ ರಿಲೀಸ್ ಮಾಡುತ್ತೀರಿ? ಎಂದು ಕೇಳಿದರು. ಇಲ್ಲಿಗೆ ರಾಷ್ಟ್ರ ಭಾಷೆ ಮತ್ತು ಇತರ ಭಾಷೆಗಳ ಮಧ್ಯೆ ದೊಡ್ಡ ಚರ್ಚೆಯೇ ಶುರುವಾಗಿದೆ. ಇದನ್ನೂ ಓದಿ : ಬೆಳ್ಳಿತೆರೆಯಲ್ಲಿ ಕಾಯಕಯೋಗಿ ಬಸವಣ್ಣ: ಯಾರೆಲ್ಲ ಪಾತ್ರ ಮಾಡಿದ್ದಾರೆ ಗೊತ್ತಾ?

    ರಾಷ್ಟ್ರ ಭಾಷೆ ಹಿಂದಿ ಎಂದು ಅಜಯ್ ದೇವಗನ್ ಹೇಳಿದರೆ, ಅದನ್ನು ಒಪ್ಪುವುದಕ್ಕೆ ಸಾಧ್ಯವೇ ಇಲ್ಲ. ನಮ್ಮ ಭಾಷೆಯೇ ನಮಗೆ ರಾಷ್ಟ್ರ ಭಾಷೆ ಎನ್ನುವಂತೆ ಕನ್ನಡ ಪರ ಬ್ಯಾಟಿಂಗ್ ಬೀಸಿದರು ಸುದೀಪ್. ಇತ್ತ ಕಂಗನಾ ರಣಾವತ್ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಸಂಸ್ಕೃತವನ್ನು ರಾಷ್ಟ್ರ ಭಾಷೆ ಮಾಡಿ ಎಂದು ಕರೆಕೊಟ್ಟರು. ಇದೀಗ ಖ್ಯಾತ ಗಾಯಕ ಸೋನು ನಿಗಂ ಕೂಡ ಈ ಕುರಿತು ಮಾತನಾಡಿದ್ದಾರೆ. ಇದನ್ನೂ ಓದಿ : ಚಲಿಸುವ ಬೋಟ್ ನಲ್ಲಿ ಚೆಲುವೆ ರಾಧಿಕಾ ಕುಮಾರಸ್ವಾಮಿ

    ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಸೋನಂ, ‘ಭಾಷಾ ವಿಚಾರದಲ್ಲಿ ದೇಶವನ್ನು ಒಡೆಯುವಂತೆ ಕೆಲಸ ಮಾಡುತ್ತಿದ್ದಾರೆ. ಹಿಂದಿಗಿಂತಲೂ ಹೆಚ್ಚು ಪುರಾತನ ಭಾಷೆ ತಮಿಳು. ಹಾಗಾದರೆ, ತಮಿಳು ರಾಷ್ಟ್ರ ಭಾಷೆ ಎನ್ನುವುದಕ್ಕೆ ಆಗತ್ತಾ? ನಾವು ಎಲ್ಲಿಯೇ ಹೋದರೂ ಇಂಗ್ಲಿಷ್ ಬಳಕೆ ಆಗುತ್ತಿದೆ. ಕೋರ್ಟ್ ನಲ್ಲೂ ಇಂಗ್ಲಿಷ್ ಅನ್ನೇ ಬಳುಸುತ್ತಾರೆ. ಹಾಗಾಗಿ ಹಾಗಾಗಿ ಇಲ್ಲಿ ರಾಷ್ಟ್ರ ಭಾಷೆ ಎನ್ನುವುದೇ ಉದ್ಭವಿಸಲ್ಲ ಎಂದಿದ್ದಾರೆ. ಇದನ್ನೂ ಓದಿ: ಗ್ರ್ಯಾಮಿ ಅವಾರ್ಡ್ ಮ್ಯೂಸಿಕ್ ಕೇಳಿದಾಗ ಬಹಳ ಖುಷಿ ಆಯ್ತು: ಸಿಎಂ ಬೊಮ್ಮಾಯಿ

    ದೇಶದಲ್ಲಿ ಬಹಳಷ್ಟು ಸಮಸ್ಯೆಗಳು ಇವೆ. ಆ ಸಮಸ್ಯೆಗಳ ಬಗ್ಗೆ ಮಾತನಾಡದೇ ಭಾಷಾ ವಿಚಾರವನ್ನು ಮುನ್ನೆಲೆಗೆ ತಂದು ಸುಖಾಸುಮ್ಮನೆ ದಿಕ್ಕು ತಪ್ಪಿಸುವಂತಹ ಕೆಲಸ ನಡೆಯುತ್ತಿದೆ. ಅದರ ಬದಲು ಸಮಸ್ಯೆಗಳನ್ನು ಇಟ್ಟುಕೊಂಡು ಚರ್ಚೆ ಮಾಡಿ ಎಂದು ಅವರು ಸಲಹೆಯನ್ನೂ ನೀಡಿದ್ದಾರೆ.

  • ನಿಮಗೆ ಹಿಂದಿ ಬರದಿದ್ದರೆ ದೇಶ ಬಿಟ್ಟು ತೊಲಗಿ: ಯುಪಿ ಸಚಿವ

    ನಿಮಗೆ ಹಿಂದಿ ಬರದಿದ್ದರೆ ದೇಶ ಬಿಟ್ಟು ತೊಲಗಿ: ಯುಪಿ ಸಚಿವ

    ಲಕ್ನೋ: ಹಿಂದಿಯನ್ನು ಇಷ್ಟಪಡದವರು ವಿದೇಶಿಯರೆಂದು ನಾನು ಭಾವಿಸುತ್ತೇನೆ. ಭಾಷೆ ಬಾರದವರು ದೇಶವನ್ನು ಬಿಟ್ಟು ಹೋಗಬಹುದು ಎಂದು ಹೇಳುವ ಮೂಲಕ ಉತ್ತರ ಪ್ರದೇಶದ ಮೀನುಗಾರಿಕೆ ಸಚಿವ ಸಂಜಯ್ ನಿಶಾದ್ ವಿವಾದಕ್ಕೆ ಸಿಕ್ಕಿಕೊಂಡಿದ್ದಾರೆ.

    ಬಾಲಿವುಡ್ ನಟ ಅಜಯ್ ದೇವಗನ್ ಮತ್ತು ಕನ್ನಡ ನಟ ಕಿಚ್ಚ ಸುದೀಪ್ ಅವರ ಟ್ವೀಟ್ ವಾರ್ ಈಗ ಎಲ್ಲಕಡೆ ದೊಡ್ಡ ಸುದ್ದಿಯಾಗಿದೆ. ಈ ವಾರ್ ಸಿನಿರಂಗದಲ್ಲಿ ಮಾತ್ರವಲ್ಲ ರಾಜಕೀಯಕ್ಕೂ ಪ್ರವೇಶ ಮಾಡಿದ್ದು ಭಾಷಾ ಚರ್ಚೆ ನಡೆಯುತ್ತಿದೆ. ಪರಿಣಾಮ ಈ ಕುರಿತು ನಿಶಾದ್ ಅವರನ್ನು ಮಾಧ್ಯಮಗಳು ಪ್ರಶ್ನಿಸಿದಾಗ ಅವರು, ಭಾರತದಲ್ಲಿ ವಾಸಿಸಲು ಬಯಸುವವರು ಹಿಂದಿಯನ್ನು ಪ್ರೀತಿಸಬೇಕಾಗುತ್ತದೆ. ನೀವು ಹಿಂದಿಯನ್ನು ಪ್ರೀತಿಸದಿದ್ದರೆ, ನೀವು ವಿದೇಶಿ ಅಥವಾ ವಿದೇಶಿ ಶಕ್ತಿಗಳೊಂದಿಗೆ ಸಂಬಂಧ ಹೊಂದಿದ್ದೀರಿ ಎಂದು ಭಾವಿಸಲಾಗುತ್ತದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಜಮೀನು ಹಣ ನೀಡಲ್ಲ ಎಂದು ತಂದೆಯ 13 ಲಕ್ಷ ರೂ. ಕದ್ದ ಮಗ 

    ನಾವು ಪ್ರಾದೇಶಿಕ ಭಾಷೆಗಳನ್ನು ಗೌರವಿಸುತ್ತೇವೆ. ಆದರೆ ಈ ದೇಶ ಒಂದೇ ಮತ್ತು ಭಾರತದ ಸಂವಿಧಾನವು ಭಾರತವು ಹಿಂದೂಸ್ಥಾನ್‌ ಎಂದು ಹೇಳುತ್ತದೆ. ಅಂದರೆ ಹಿಂದಿ ಮಾತನಾಡುವವರಿಗೆ ಒಂದು ಸ್ಥಳ. ಹಿಂದೂಸ್ಥಾನವು ಹಿಂದಿ ಮಾತನಾಡದವರಿಗೆ ಇರುವ ಸ್ಥಳವಲ್ಲ. ಅವರು ಈ ದೇಶವನ್ನು ಬಿಟ್ಟು ಬೇರೆಡೆ ಹೋಗಬೇಕು ಎಂದು ಆಕ್ರೋಶ ಹೊರಹಾಕಿದರು.

    ಕಾನೂನಿನ ಪ್ರಕಾರ ಹಿಂದಿ ರಾಷ್ಟ್ರೀಯ ಭಾಷೆಯಾಗಿದೆ. ಕಾನೂನನ್ನು ಉಲ್ಲಂಘಿಸುವ ಯಾರಾದರೂ ಅವರು ಎಷ್ಟೇ ದೊಡ್ಡ ರಾಜಕಾರಣಿ ಅಥವಾ ಶಕ್ತಿಶಾಲಿಯಾಗಿದ್ದರೂ ಅವರನ್ನು ಕಂಬಿ ಹಿಂದೆ ಹಾಕಬೇಕು. ಕೆಲವರು ಹಿಂದಿ ಮಾತನಾಡಲು ನಿರಾಕರಿಸುವ ಮೂಲಕ ದೇಶದ ವಾತಾವರಣವನ್ನು ಹಾಳು ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು. ಇಂತಹ ಅಂಶಗಳು ದೇಶದಲ್ಲಿ ಉದ್ವಿಗ್ನತೆಯನ್ನು ಸೃಷ್ಟಿಸುತ್ತೆ. ಆದರೆ ಇದಕ್ಕೆ ತಕ್ಕ ಉತ್ತರವನ್ನು ನೀಡುತ್ತಾರೆ ಎಂದು ಹೇಳಿದರು.

    ಸಂಜಯ್ ನಿಶಾದ್ ಅವರು ನಿರ್ಬಲ್ ಇಂಡಿಯನ್ ಶೋಷಿತ್ ಹಮಾರಾ ಆಮ್(NISHAD) ದಳದ ಮುಖ್ಯಸ್ಥರಾಗಿದ್ದಾರೆ. ಈ ಪಕ್ಷವನ್ನು ಸಾಮಾನ್ಯವಾಗಿ ಎಲ್ಲರೂ ನಿಶಾದ್ ಪಕ್ಷ ಎಂದೇ ಕರೆಯುತ್ತಾರೆ. ಈ ಪಕ್ಷವು ಆಡಳಿತಾರೂಢ ಬಿಜೆಪಿಯೊಂದಿಗೆ ಮಿತ್ರ ಪಕ್ಷವಾಗಿ ಉತ್ತರಪ್ರದೇಶದಲ್ಲಿ ಕೆಲಸ ಮಾಡುತ್ತಿದೆ. ಇದನ್ನೂ ಓದಿ:  ವಿದ್ಯುತ್ ಸಮಸ್ಯೆಗೆ ಮೋದಿ ಸರ್ಕಾರವನ್ನು ದೂಷಿಸಲು ಸಾಧ್ಯವಿಲ್ಲ: ಚಿದಂಬರಂ ವ್ಯಂಗ್ಯ

    ಸಂವಿಧಾನವು ಯಾವುದೇ ಭಾಷೆಗೆ ‘ರಾಷ್ಟ್ರೀಯ ಭಾಷೆ’ ಸ್ಥಾನಮಾನವನ್ನು ನೀಡುವುದಿಲ್ಲ. ಎಂಟನೇ ಶೆಡ್ಯೂಲ್ 22 ‘ಅಧಿಕೃತ ಭಾಷೆಗಳನ್ನು’ ಪಟ್ಟಿ ಮಾಡಲಾಗಿದೆ. ಅಧಿಕೃತ ಭಾಷೆಗಳ ಕಾಯಿದೆ, 1963, ಕೇಂದ್ರ ಸರ್ಕಾರದ ಅಧಿಕೃತ ಉದ್ದೇಶಗಳಿಗಾಗಿ ಬಳಸಲು ಇಂಗ್ಲಿಷ್ ಮತ್ತು ಹಿಂದಿ ಭಾಷೆಯನ್ನು ಗೊತ್ತುಪಡಿಸಲಾಗಿದೆ.

  • ಹಿಂದಿ ರಾಷ್ಟ್ರ ಭಾಷೆ : ನಾನು ಕನ್ನಡ ಪಂಡಿತನೂ, ಹಿಂದಿ ಪಂಡಿತನೂ ಹೌದು -ಯೋಗರಾಜ್ ಭಟ್

    ಹಿಂದಿ ರಾಷ್ಟ್ರ ಭಾಷೆ : ನಾನು ಕನ್ನಡ ಪಂಡಿತನೂ, ಹಿಂದಿ ಪಂಡಿತನೂ ಹೌದು -ಯೋಗರಾಜ್ ಭಟ್

    ಹಿಂದಿ ರಾಷ್ಟ್ರ ಭಾಷೆಗೆ ಸಂಬಂಧಿಸಿದಂತೆ ಬಾಲಿವುಡ್ ಮತ್ತು ದಕ್ಷಿಣದ ಸಿನಿಮಾಗಳ ನಟರ ನಡುವೆ ಕೋಲ್ಡ್ ವಾರ್ ಶುರುವಾಗಿದೆ. ಹಿಂದಿ ರಾಷ್ಟ್ರ ಭಾಷೆ ಎನ್ನುವುದನ್ನು ನಾನು ಒಪ್ಪಿಕೊಳ್ಳುವುದಿಲ್ಲ ಎಂದು ಸುದೀಪ್ ಖಡಕ್ ಸಂದೇಶ ರವಾನಿಸಿದ್ದರು. ಅದಕ್ಕೆ ಪ್ರತಿಯಾಗಿ ಬಾಲಿವುಡ್ ನಟ ಅಜಯ್ ದೇವಗನ್ ಕೂಡ ಟ್ವಿಟ್ ಮಾಡಿ ‘ರಾಷ್ಟ್ರ ಭಾಷೆ ಹಿಂದಿ ಅಲ್ಲ ಅಂದಮೇಲೆ ಹಿಂದಿಯಲ್ಲಿ ನಿಮ್ಮ ಸಿನಿಮಾಗಳನ್ನು ಡಬ್ ಮಾಡಿ ಯಾಕೆ ಬಿಡುಗಡೆ ಮಾಡುತ್ತೀರಿ?’ ಎಂದು ಪ್ರಶ್ನೆ ಮಾಡಿದ್ದರು. ಇದನ್ನೂ ಓದಿ : ಪುನೀತ್‌ಗೆ ಅವಮಾನ: ತಿರುಪತಿ ತಿರುಮಲ ದೇವಸ್ಥಾನಕ್ಕೆ ಅಭಿಮಾನಿಗಳು ಮುತ್ತಿಗೆ

    ಅಜಯ್ ದೇವಗನ್ ಆ ರೀತಿಯಲ್ಲಿ ಪ್ರಶ್ನೆ ಮಾಡುತ್ತಿದ್ದಂತೆಯೇ ಇಡೀ ದಕ್ಷಿಣ ಭಾರತದ ಕಲಾವಿದರೇ ಅಜಯ್ ದೇವಗನ್ ವಿರುದ್ಧ ತಿರುಗಿ ಬಿದ್ದರು. ‘ಅನುವಾದದ ಕೊರತೆಯಿಂದ ಆದ ಪ್ರಮಾದ’ ಎಂದು ಅಜಯ್ ದೇವಗನ್ ಸ್ಪಷ್ಟನೆ ಕೊಟ್ಟರೂ, ದಕ್ಷಿಣದ ನಟರು ಮಾತ್ರ ಸುಮ್ಮನಾಗಲಿಲ್ಲ. ಹಿಂದಿಯನ್ನು ರಾಷ್ಟ್ರ ಭಾಷೆ ಎಂದು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ ಎಂದು ಸ್ಪಷ್ಟ ಸಂದೇಶ ಕಳುಹಿಸಿದರು. ಇದನ್ನೂ ಓದಿ : ಖ್ಯಾತ ನಿರ್ದೇಶಕ ಅರವಿಂದ್ ಕೌಶಿಕ್ ಅರೆಸ್ಟ್

    ಈ ಕುರಿತು ರಾಮ್ ಗೋಪಾಲ್ ವರ್ಮಾ, ನಟಿ ರಮ್ಯಾ, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ನಟ ಸತೀಶ್ ನೀನಾಸಂ, ನಿರ್ದೇಶಕ ಸುನಿ ಹೀಗೆ ಹತ್ತು ಹಲವು ತಾರೆಯರು ಸುದೀಪ್ ಬೆನ್ನಿಗೆ ನಿಂತರು. ಈ ಕುರಿತು ಮಾಧ್ಯಮಗಳು ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಪ್ರತಿಕ್ರಿಯೆ ಕೇಳಿದಾಗ ಅಚ್ಚರಿ ಎನ್ನುವಂತಹ ಉತ್ತರ ನೀಡಿದ್ದಾರೆ ಯೋಗರಾಜ್ ಭಟ್. ‘ನನ್ನ ಬಗ್ಗೆ ಕೇಳಿದರೆ ನೆಟ್ಟಗೆ ನನಗೆ ಉತ್ತರ ಕೊಡುವುದಕ್ಕೆ ಆಗುವುದಿಲ್ಲ. ರಾಷ್ಟ್ರದ ಸಮಸ್ಯೆ ಬಗ್ಗೆ ಕೇಳಿದರೆ ಏನು ಹೇಳಲಿ? ಎನ್ನುತ್ತಾರೆ. ಮುಂದುವರೆದು ನಾನು ಕನ್ನಡದ ಪಂಡಿತನೂ ಹೌದು, ಹಿಂದಿ ಪಂಡಿತನೂ ಹೌದು ಎನ್ನುತ್ತಾರೆ. ಈ ಮಾತು ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. ಇದನ್ನೂ ಓದಿ : ವಾಮನ ತೆಕ್ಕೆಗೆ ತುಳುನಾಡ ಬೆಡಗಿ ರಚನಾ ರೈ

    ಕೆಲವರು ಯೋಗರಾಜ್ ಭಟ್ಟ ಅವರಿಗೆ ಯಾಕೆ ಸ್ಪಷ್ಟತೆ ಇಲ್ಲ ಎಂದು ಕೇಳಿದ್ದರೆ, ಮತ್ತಷ್ಟು ಜನ ಭಾಷಾ ವಿಚಾರದಲ್ಲಿ ಯಾಕೆ ಹಿಂದೇಟು? ಎನ್ನುವ ಮಾತುಗಳನ್ನೂ ಆಡಿದ್ದಾರೆ. ರಾಷ್ಟ್ರ ಭಾಷೆಯ ವಿಚಾರದಲ್ಲಿ ಕನ್ನಡ ಸಂಘಟನೆಗಳು, ಕನ್ನಡದ ನಟರು ಧೈರ್ಯದಿಂದ ಹಿಂದಿ ಹೇರಿಕೆಯ ವಿರುದ್ಧ ಮಾತನಾಡುತ್ತಿದ್ದರೆ, ಯೋಗರಾಜ್ ಭಟ್ ಈ ಕುರಿತು ಯಾವುದೇ ಹೇಳಿಕೆ ದಾಖಲಿಸದೇ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಮಾತನಾಡಿದ್ದಾರೆ.

  • ಅಜಯ್ ದೇವಗನ್ ವಿರುದ್ಧವೇ ನಿಂತ ಬಾಲಿವುಡ್ ಇಬ್ಬರೂ ಸ್ಟಾರ್ ನಟರು

    ಅಜಯ್ ದೇವಗನ್ ವಿರುದ್ಧವೇ ನಿಂತ ಬಾಲಿವುಡ್ ಇಬ್ಬರೂ ಸ್ಟಾರ್ ನಟರು

    ಹಿಂದಿ ರಾಷ್ಟ್ರ ಭಾಷೆ ಅಂತ ಒಪ್ಪಿಕೊಳ್ಳದಿದ್ದರೆ ಹಿಂದಿಯಲ್ಲಿ ನಿಮ್ಮ ಸಿನಿಮಾಗಳನ್ನು ಡಬ್ ಮಾಡಿ ರಿಲೀಸ್ ಮಾಡಬೇಡಿ ಎಂದು ನಿನ್ನೆಯಷ್ಟೇ ಬಾಲಿವುಡ್ ನಟ ಅಜಯ್ ದೇವಗನ್ ಹೇಳಿದ್ದರು. ಈ ಹೇಳಿಕೆಗೆ ಕಾರಣ ಸುದೀಪ್ ಅವರು ಆಡಿದ ಮಾತುಗಳಾಗಿತ್ತು. ಆದರೆ, ಅದರ ಹಿಂದೆ ಬೇರೆಯೇ ಕಾರಣವಿದೆ ಎಂದಿದ್ದಾರೆ ಬಾಲಿವುಡ್ ನ ಇಬ್ಬರು ಸ್ಟಾರ್ ನಟರು.  ಇದನ್ನೂ ಓದಿ: ರಾಷ್ಟ್ರ ಭಾಷೆ ಹಿಂದಿ: ಅಜಯ್ ದೇವಗನ್ ಪ್ರಶ್ನೆಗೆ ಕಿಚ್ಚ ಸುದೀಪ್ ಖಡಕ್ ಉತ್ತರ

    ಈ ಕುರಿತು ಪ್ರತಿಕ್ರಿಯೆ ನೀಡಿರುವ ರಿಯಲ್ ಹೀರೋ ಸೋನು ಸೂದ್, ‘ಸಿನಿಮಾಗಳಿಗೆ ಯಾವುದೇ ಭಾಷೆಯಿಲ್ಲ. ರಂಜಿಸುವುದಷ್ಟೇ ಅದರ ಭಾಷೆ. ಸಿನಿಮಾಗಳ ವಿಷಯದಲ್ಲಿ ಭಾಷೆಯನ್ನು ಎಳೆದು ತರಬಾರದು. ನಾವೆಲ್ಲರೂ ಒಂದೇ ಎಂದು ರಂಜಿಸಬೇಕು’ ಎಂದು ಅಜಯ್ ದೇವಗನ್ ಗೆ ಕಿವಿ ಹಿಂಡುವಂತೆ ಹೇಳಿಕೆ ಕೊಟ್ಟಿದ್ದಾರೆ. ಕಲಾವಿದರು ಯಾವುದೇ ಕಾರಣಕ್ಕೂ ಈ ರೀತಿ ಕಿತ್ತಾಟ ಮಾಡಬಾರದು ಎಂದು ಸಲಹೆ ಕೂಡ ಕೊಟ್ಟಿದ್ದಾರೆ. ಇದನ್ನೂ ಓದಿ: ರಾಷ್ಟ್ರ ಭಾಷೆ ಹಿಂದಿ : ಸುದೀಪ್ ಸರಣಿ ಟ್ವಿಟ್ ಗೆ ತಪ್ಪಾಗಿ ತಿಳ್ಕೊಂಡಿದ್ದೆ ಎಂದ ಅಜಯ್ ದೇವಗನ್

    ಫ್ಯಾಮಿಲಿ ಮ್ಯಾನ್ ಸಿನಿಮಾದ ಮೂಲಕ ಸಾಕಷ್ಟು ಅಭಿಮಾನಿ ಬಳಗ ಹೊಂದಿರುವ ಮನೋಜ್ ಬಾಜಪೇಯಿ ಕೂಡ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ದಕ್ಷಿಣದವರ ಸಿನಿಮಾಗಳ ಹಿಂದಿಯಲ್ಲಿ ಗೆಲ್ಲುತ್ತಿವೆ. ನೂರಾರು ಕೋಟಿ ವ್ಯವಹಾರ ಮಾಡಲಾಗುತ್ತಿದೆ. ಹಾಗಾಗಿ ಭಾಷೆಯನ್ನು ಮುಂದಿಟ್ಟುಕೊಂಡು ವಾತಾವರಣವನ್ನು ಹಾಳು ಮಾಡುವ ಕೆಲಸ ಮಾಡುತ್ತಿದ್ದಾರೆ ಬಾಲಿವುಡ್ ನಟರು ಎಂದು ಪರೋಕ್ಷವಾಗಿ ಅಜಯ್ ದೇವಗನ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ : ನಟ ಶಾರುಖ್ ಖಾನ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಿದ ಗುಜರಾತ್ ಹೈಕೋರ್ಟ್

    ಅಲ್ಲದೇ, ಹಿಂದಿ ರಾಷ್ಟ್ರ ಭಾಷೆಯ ವಿಚಾರ ಸಿನಿಮಾಗಳಿಗೆ ಸಂಬಂಧಿಸಿದ್ದಲ್ಲ. ಅದನ್ನು ಕಲಾವಿದರು ಈ ರೀತಿಯಲ್ಲಿ ಎಳೆದಾಡುವುದು ಸರಿಯಾದದ್ದು ಅಲ್ಲ. ಮನರಂಜನೆಯ ಇಂಡಸ್ಟ್ರಿ ಒಂದೇ ಎಂದು ಎಲ್ಲರೂ ಕೆಲಸ ಮಾಡಬೇಕು ಎಂದು ಕೆಲವರು ಸಲಹೆ ಕೊಟ್ಟಿದ್ದಾರೆ. ಈ ಚರ್ಚೆ ಈಗ ಕೇವಲ ಸುದೀಪ್ ಮತ್ತು ಅಜಯ್ ದೇವಗನ್ ನಡುವೆ ಮಾತ್ರ ಉಳಿದುಕೊಂಡಿಲ್ಲ, ರಾಜಕಾರಣಿಗಳು ಮತ್ತು ಕನ್ನಡ ಪರ ಹೋರಾಟಗಾರರು ಕೂಡ ಅಜಯ್ ದೇವಗನ್ ವಿರುದ್ಧ ಕಿಡಿಕಾರಿದ್ದಾರೆ.

  • ನಮ್ಮ ಸಿನೆಮಾ ರಾಷ್ಟ್ರಮೀರಿ ಹೋಗೋದನ್ನು ಹಿಂದಿವಾಲಾಗಳಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ: ಕರವೇ ಪ್ರವೀಣ್ ಶೆಟ್ಟಿ

    ನಮ್ಮ ಸಿನೆಮಾ ರಾಷ್ಟ್ರಮೀರಿ ಹೋಗೋದನ್ನು ಹಿಂದಿವಾಲಾಗಳಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ: ಕರವೇ ಪ್ರವೀಣ್ ಶೆಟ್ಟಿ

    ಉಡುಪಿ: ಕನ್ನಡದ ಸಿನಿಮಾಗಳು ರಾಷ್ಟ್ರವನ್ನು ಮೀರಿ ಹೋಗುತ್ತಿದೆ. ಇದನ್ನು ಅರಗಿಸಿಕೊಳ್ಳಲು ಹಿಂದಿವಾಲಾಗಳಿಗೆ ಆಗುತ್ತಿಲ್ಲ. ಆದ್ದರಿಂದ ನಮ್ಮ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ ಎಂದು ಮಾತೃಭಾಷೆ ಕನ್ನಡ ಕುರಿತಾಗಿ ಬಾಲಿವುಡ್ ನಟ ಅಜಯ್ ದೇವಗನ್ ಮತ್ತು ಕಿಚ್ಚ ಸುದೀಪ್ ಟ್ವೀಟ್ ವಾರ್ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಖಾರವಾಗಿ ಪ್ರತಿಕ್ರಿಯೆ ನೀಡಿದರು.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಸುದೀಪ್ ಗಂಡಸ್ತನದ ಧ್ವನಿಯಲ್ಲಿ ಮಾತನಾಡಿದ್ದಾರೆ. ತನ್ನ ಗಟ್ಟಿಯಾದ ನಿಲುವು ಪ್ರಕಟಿಸಿದ್ದಾರೆ. ಹಿಂದಿ ರಾಷ್ಟ್ರ ಭಾಷೆ ಅಲ್ಲ ಎಂದು ಹೇಳಿದ್ದಾರೆ. ಇಡೀ ಕನ್ನಡಿಗರು ಅವರ ಬೆಂಬಲಕ್ಕೆ ನಿಂತಿದ್ದೇವೆ. ಅಜಯ್ ದೇವಗನ್ ಮೊದಲು ಆಲೋಚನೆ ಮಾಡಬೇಕು, 22 ಭಾಷೆಗಳಿಗೆ ರಾಷ್ಟ್ರೀಯ ಭಾಷೆಯ ಸ್ಥಾನಮಾನ ಇದೆ. ಅದರಲ್ಲಿ ಹಿಂದಿಯೂ ಕೂಡ ಒಂದು ಅಷ್ಟೇ. ಯಾವುದೇ ಕಾರಣಕ್ಕೆ ಹಿಂದಿಯನ್ನು ರಾಷ್ಟ್ರಭಾಷೆ ಎಂದು ಒಪ್ಪಲು ಸಾಧ್ಯವಿಲ್ಲ ಎಂದರು. ಇದನ್ನೂ ಓದಿ: ಹಿಂದಿ ರಾಷ್ಟ್ರ ಭಾಷೆ : ಕಿಚ್ಚ ಸುದೀಪ್ ಮಾತಿಗೆ ದನಿಗೂಡಿಸಿದ ಸಿಎಂ ಬೊಮ್ಮಾಯಿ

    ಕನ್ನಡಕ್ಕೂ ರಾಷ್ಟ್ರೀಯ ಭಾಷೆಯ ಸ್ಥಾನಮಾನ ಇದೆ. ನಮಗೆ ಕನ್ನಡವೇ ರಾಷ್ಟ್ರೀಯ ಭಾಷೆ. ಅಜಯ್ ದೇವಗನ್‍ಗೆ ನಾವು ಎಚ್ಚರಿಕೆ ಕೊಡುತ್ತೇವೆ. ಹಿಂದಿಯಲ್ಲಿ ಡಬ್ ಮಾಡಿ ಬಿಡ್ತೀರಾ ಎಂದು ಅಜಯ್ ದೇವಗನ್ ಕೇಳಿದ್ದಾರೆ. ಒಕ್ಕೂಟ ವ್ಯವಸ್ಥೆಯಲ್ಲಿ ಕರ್ನಾಟಕದ ಕೊಡುಗೆ ಅಪಾರ. ಕರ್ನಾಟಕ ಕನ್ನಡಿಗರನ್ನು ಬಿಟ್ಟು ಯಾವತ್ತೂ ಭಾರತದೇಶ ಆಗಿಲ್ಲ. ಕನ್ನಡಿಗರನ್ನು ಕೆಣಕಲು ಬಂದರೆ ರಕ್ಷಣಾ ವೇದಿಕೆ ಕೈಕಟ್ಟಿ ಕೊರಲ್ಲ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಹಿಂದಿ ರಾಷ್ಟ್ರ ಭಾಷೆ : ಕರ್ನಾಟಕದಲ್ಲಿ ಅಜಯ್ ದೇವಗನ್ ಸಿನಿಮಾ ರಿಲೀಸ್ ಅಡ್ಡಿ : ಕರವೇಯಿಂದ ಪ್ರತಿಭಟನೆ

    ಅಜಯ್ ದೇವಗನ್ ವಿರುದ್ಧ ತೀವ್ರ ಹೋರಾಟ ಮಾಡುತ್ತೇವೆ, ಅಜಯ್ ದೇವಗನ್ ಕನ್ನಡಿಗರಲ್ಲಿ ಕ್ಷಮೆ ಕೇಳಬೇಕು. ಅವರ ಸಿನಿಮಾ ಕರ್ನಾಟಕಕ್ಕೆ ಕಾಲಿಡಲು ಬಿಡಲ್ಲ. ಸರ್ಕಾರ ಕನ್ನಡಿಗರ ಪರವಾಗಿ ಗಮನಹರಿಸಬೇಕು. ನಾವೆಲ್ಲ ಕನ್ನಡಿಗರು ಒಗ್ಗಟಾಗಿ ಹಿಂದಿಯನ್ನು ವಿರೋಧಿಸುವ ಕೆಲಸ ಮಾಡುತ್ತಿದ್ದೇವೆ. ಹಿಂದಿಯನ್ನು ನಮ್ಮ ಮೇಲೆ ಹೇರಿ ಉದ್ಯೋಗ ಬದುಕು ಕಿತ್ತುಕೊಳ್ಳುವ ಕೆಲಸ ಮಾಡಬಾರದು. ಎಲ್ಲಾ ರಾಜಕೀಯ ಮುಖಂಡರು, ನಟರು ಧ್ವನಿ ಎತ್ತಬೇಕು ಎಂದು ಕರೆ ನೀಡಿದರು.

  • ಹಿಂದಿಯನ್ನ ರಾಷ್ಟ್ರೀಯ ಭಾಷೆಯನ್ನಾಗಿ ಮಾಡಿದ್ರೆ ತಪ್ಪೇನಿಲ್ಲ: ಮುರುಗೇಶ್ ನಿರಾಣಿ

    ಹಿಂದಿಯನ್ನ ರಾಷ್ಟ್ರೀಯ ಭಾಷೆಯನ್ನಾಗಿ ಮಾಡಿದ್ರೆ ತಪ್ಪೇನಿಲ್ಲ: ಮುರುಗೇಶ್ ನಿರಾಣಿ

    ಮೈಸೂರು/ಚಿಕ್ಕಮಗಳೂರು/ ವಿಜಯಪುರ: ಹಿದಿಯನ್ನು ರಾಷ್ಟ್ರೀಯ ಭಾಷೆಯನ್ನಾಗಿ ಮಾಡಿದರೆ ತಪ್ಪೇನಿಲ್ಲ ಎಂದು ಸಚಿವ ಮುರುಗೇಶ್ ನಿರಾಣಿ ಹೇಳುವ ಮೂಲಕ ವಿವಾದಕ್ಕೀಡಾಗಿದ್ದಾರೆ.

    ಸುದೀಪ್, ಅಜಯ್ ದೇವಗನ್ ಮಧ್ಯೆ ಹಿಂದಿವಾರ್ ಸಂಬಂಧ ಪ್ರತಿಕ್ರಿಯಿಸಿದ ಅವರು, ಕನ್ನಡ ಪ್ರಾದೇಶಿಕ ಭಾಷೆ, ಹಿಂದಿ ರಾಷ್ಟ್ರೀಯ ಭಾಷೆ. ಹಿಂದಿ ಭಾಷೆಯೂ ನಮಗೆ ಬೇಕು. ಬೇರೆ ಭಾಷೆ ಕಲಿಯುವುದರಲ್ಲಿ ತಪ್ಪೇನಿಲ್ಲ. ಹಿಂದಿಯನ್ನ ರಾಷ್ಟ್ರೀಯ ಭಾಷೆಯನ್ನಾಗಿ ಮಾಡಬೇಕು ಎಂಬುದು ಮೊದಲಿನಿಂದಲೂ ಇದೆ, ಇದರಿಂದ ತಪ್ಪೇನಿಲ್ಲ ಎಂದರು.

    ಹೆಚ್ಚು ಭಾಷೆ ಕಲಿಯೋದ್ರಿಂದ ನಾವು ಶ್ರೀಮಂತರಾಗುತ್ತೇವೆ. ನಾವು ಕನ್ನಡಿಗರು, ಕನ್ನಡಕ್ಕೆ ಮೊದಲ ಆದ್ಯತೆ. ಆ ಬಳಿಕ ಬೇರೆ ಬೇರೆ ಭಾಷೆಗಳಿಗನ್ನು ಕಲಿಯಬೇಕು. ನಾನು ಗ್ರಾಮೀಣ ಪ್ರದೇಶದವನಾಗಿರೋದ್ರಿಂದ ಕನ್ನಡವನ್ನ ಪ್ರೀತಿಸುತ್ತೇನೆ. ಇತರ ಭಾಷಣಗಳನ್ನೂ ಪ್ರೀತಿಸ್ತೀನಿ ಎಂದು ನಿರಾಣಿ ತಿಳಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಭಾಷಾವಾರು ಪ್ರಾಂತ್ಯಗಳನ್ನು ರಚಿಸಿರುವುದನ್ನು ನೆನಪಿಸಬಯಸುತ್ತೇನೆ: ಡಿಕೆಶಿ

    ಇತ್ತ ಚಿಕ್ಕಮಗಳೂರಿನಲ್ಲಿ ಮಾತನಾಡಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಮಾತನಾಡಿ, ಇನ್ನೊಂದು ಭಾಷೆಯನ್ನು ಆಕ್ರಮಿಸಲ್ಲ, ಗೌರವಿಸ್ತೇವೆ. ಶೇ.48 ರಷ್ಟು ನಮ್ಮ ದೇಶದ ಜನರಿಗೆ ಹಿಂದಿ ಮಾತೃ ಭಾಷೆ. ಸಂಪರ್ಕ ಭಾಷೆಯಾಗಿ ಹಿಂದಿಯನ್ನು ಬಳಸಿಕೊಳ್ಳಬಹುದು ಎಂದಿದ್ದಾರೆ. ಇದನ್ನೂ ಓದಿ: ಹಿಂದಿ ರಾಷ್ಟ್ರ ಭಾಷೆ : ಕಿಚ್ಚ ಸುದೀಪ್ ಮಾತಿಗೆ ದನಿಗೂಡಿಸಿದ ಸಿಎಂ ಬೊಮ್ಮಾಯಿ

    ವಿಜಯಪುರದಲ್ಲಿ ಕೇಂದ್ರದ ಮಾಜಿ ಸಚಿವ, ಸಂಸದ ರಮೇಶ್ ಜಿಗಜಿಣಗಿ ಪ್ರತಿಕ್ರಿಯಿಸಿ, ನಾನು ಇಬ್ಬರು ಪರವಾಗಿಯೂ ಇಲ್ಲ. ಸರ್ಕಾರದ ನೀತಿ ಪರವಾಗಿ ಇದ್ದೇನೆ. ಹಿಂದಿ ಬೇಕು ಅಂದ್ರೇ ಹಿಂದಿ ಪರ ಇರುತ್ತೇನೆ. ಬೇಡ ಅಂದ್ರೇ ಬೇಡವಾದ ಪರವಾಗಿ ಇರುತ್ತೇನೆ. ಕೇಂದ್ರ ಸರ್ಕಾರದ ಪರ ನಾನು ಇರುತ್ತೇನೆ ಅಷ್ಟೆ ಎಂದು ಹೇಳಿದ್ದಾರೆ. ಈ ಮೂಲಕ ಇದೀಗ ಈ ಇಬ್ಬರು ಕೆಂಗಣ್ಣಿಗೆ ಗುರಿಯಾಗಿದ್ದಾರೆ.

    ಒಟ್ಟಿನಲ್ಲಿ ಮಾತೃಭಾಷೆ ಬಗ್ಗೆ ಬಿಜೆಪಿಯಲ್ಲಿ ದ್ವಂದ್ವ ಹೇಳಿಕೆ ನೀಡಲಾಗುತ್ತಿದೆ. ನಿರಾಣಿ, ಜಿಗಜಿಣಗಿಯದ್ದು ಕನ್ನಡದ್ರೋಹಿ ಹೇಳಿಕೆಯಾದ್ರೆ, ಸಿಟಿ ರವಿ ಅವರು ದ್ವಂದ್ವ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಚಿತ್ರನಟರ ಮಾತಿಗೆ ನಾವು ಚರ್ಚೆ ಮಾಡುವ ಅಗತ್ಯವಿಲ್ಲ: ಡಿಕೆಶಿ

  • ಕಾಂಗ್ರೆಸ್ ಭಾಷಾವಾರು ಪ್ರಾಂತ್ಯಗಳನ್ನು ರಚಿಸಿರುವುದನ್ನು ನೆನಪಿಸಬಯಸುತ್ತೇನೆ: ಡಿಕೆಶಿ

    ಕಾಂಗ್ರೆಸ್ ಭಾಷಾವಾರು ಪ್ರಾಂತ್ಯಗಳನ್ನು ರಚಿಸಿರುವುದನ್ನು ನೆನಪಿಸಬಯಸುತ್ತೇನೆ: ಡಿಕೆಶಿ

    ಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ಬಾಲಿವುಡ್ ನಟ ಅಜಯ್ ದೇವಗನ್ ನಡುವೆ ಟ್ವೀಟ್ ವಾರ್ ಪ್ರಾರಂಭವಾಗಿತ್ತು. ಮೊದಲು ಅಜಯ್, ಹಿಂದಿ ರಾಷ್ಟ್ರ ಭಾಷೆ. ನೀವು ಒಪ್ಪಿಕೊಳ್ಳದೇ ಇದ್ದರೆ ನಿಮ್ಮ ಸಿನಿಮಾವನ್ನು ಹಿಂದಿಯಲ್ಲಿ ಡಬ್ ಮಾಡಿ ಏಕೆ ರಿಲೀಸ್ ಮಾಡುತ್ತೀರಿ ಎಂದು ಕಿಚ್ಚ ಸುದೀಪ್ ಅವರನ್ನು ಟ್ವೀಟ್‍ನಲ್ಲಿ ನೇರವಾಗಿ ಕೇಳಿದ್ದಾರೆ. ಈ ಟ್ವೀಟ್‍ಗೆ ಚಂದನವನದ ನಟ-ನಟಿಯರು ಸೇರಿದಂತೆ ಅನೇಕರು ವಿರೋಧಿಸಿದ್ದು, ಸುದೀಪ್‌ಗೆ ಬೆಂಬಲ ವ್ಯಕ್ತಪಡಿಸಿದ್ದರು. ಈ ಬೆನ್ನಲ್ಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯೆ ನೀಡಿ ಬೆಂಬಲ ವ್ಯಕ್ತಪಡಿಸಿದ್ದಾರೆ.

    ಡಿಕೆಶಿ ಇಂದು ಟ್ವೀಟ್‍ನಲ್ಲಿ, ಭಾರತದಲ್ಲಿ ಸರಿಸುಮಾರು 19,500 ಮಾತೃಭಾಷೆಗಳಿವೆ. ಭಾರತದೆಡೆಗಿನ ಪ್ರೀತಿ ಪ್ರತಿಯೊಂದು ಭಾಷೆಯಲ್ಲಿಯೂ ಏಕರೀತಿಯಲ್ಲಿ ವ್ಯಕ್ತವಾಗುತ್ತದೆ. ಯಾವುದೇ ಭಾಷೆಯು ಮತ್ತೊಂದರ ಮೇಲೆ ಪ್ರಾಬಲ್ಯ ಸಾಧಿಸದಂತೆ ಕಾಂಗ್ರೆಸ್ ಭಾಷಾವಾರು ಪ್ರಾಂತ್ಯಗಳನ್ನು ರಚಿಸಿರುವುದನ್ನು ಹೆಮ್ಮೆಯ ಕನ್ನಡಿಗನಾಗಿ ಮತ್ತು ಕಾಂಗ್ರೆಸ್ಸಿಗನಾಗಿ ನೆನಪಿಸಬಯಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹಿಂದಿ ರಾಷ್ಟ್ರ ಭಾಷೆ : ಕಿಚ್ಚ ಸುದೀಪ್ ಮಾತಿಗೆ ಧ್ವನಿಗೂಡಿಸಿದ ಸಿಎಂ ಬಸವರಾಜ ಬೊಮ್ಮಾಯಿ

    ಕನ್ನಡ ಮತ್ತು ಆಂಗ್ಲ ಎರಡು ಭಾಷೆಯಲ್ಲಿಯೂ ಟ್ವೀಟ್ ಮಾಡಿರುವ ಡಿಕೆಶಿ, ತಮ್ಮ ಕಾಂಗ್ರೆಸ್ ಪಕ್ಷ ಎಲ್ಲ ಭಾಷೆಯನ್ನು ಒಟ್ಟಿಗೆ ತಂದು, ಏಕತೆ ಸಾಧಿಸಿತ್ತು ಎಂದು ಬರೆದುಕೊಂಡಿದ್ದಾರೆ. ಅಜಯ್ ಅವರ ಟ್ವೀಟ್ ಖಂಡಿಸಿ ರಾಜಕೀಯ ಗಣ್ಯರು ಸೇರಿದಂತೆ ದಕ್ಷಿಣ ಭಾರತದ ಸಿನಿತಾರೆಯರು ಸುದೀಪ್ ಬೆಂಬಲಕ್ಕೆ ನಿಂತಿದ್ದಾರೆ.