Tag: Hindu God

  • ಶಿವಮೊಗ್ಗ | ರಾಗಿಗುಡ್ಡದಲ್ಲಿ ಅನ್ಯಕೋಮಿನ ಯುವಕರ ದುಷ್ಕೃತ್ಯ – ಗಣಪತಿ ವಿಗ್ರಹ, ನಾಗರ ಕಲ್ಲಿಗೆ ಅಪಮಾನ ಆರೋಪ

    ಶಿವಮೊಗ್ಗ | ರಾಗಿಗುಡ್ಡದಲ್ಲಿ ಅನ್ಯಕೋಮಿನ ಯುವಕರ ದುಷ್ಕೃತ್ಯ – ಗಣಪತಿ ವಿಗ್ರಹ, ನಾಗರ ಕಲ್ಲಿಗೆ ಅಪಮಾನ ಆರೋಪ

    ಶಿವಮೊಗ್ಗ: ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ಅನ್ಯಕೋಮಿನ ಯುವಕರಿಂದ ಗಣಪತಿ ವಿಗ್ರಹ ಹಾಗೂ ನಾಗರ ಕಲ್ಲಿಗೆ ಅಪಮಾನ ಮಾಡಿರುವ ಆರೋಪ ಕೇಳಿಬಂದಿದೆ.

    ಬಡಾವಣೆಯ ಮುಖ್ಯರಸ್ತೆಯಲ್ಲಿ ಇತ್ತೀಚೆಗೆ ಪ್ರತಿಷ್ಠಾಪನೆ ಮಾಡಿದ್ದ ಗಣಪತಿ ವಿಗ್ರಹಕ್ಕೆ ಒದ್ದು, ನಾಗರ ಕಲ್ಲನ್ನು ಚರಂಡಿಗೆ ಎಸೆದಿರುವ ಆರೋಪ ಕೇಳಿಬಂದಿದೆ. ಅನ್ಯಕೋಮಿನ ಯುವಕರಿಂದ ದುಷ್ಕೃತ್ಯ ನಡೆದಿದೆ ಎನ್ನಲಾಗಿದ್ದು, ಹಿಂದೂ ಮುಖಂಡರು ಕೆರಳಿದ್ದಾರೆ. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

    ಹಿಂದೂ ದೇವರುಗಳಿಗೆ ಅವಮಾನ ಮಾಡಿದ್ದಾರೆ ಎಂದು ಸ್ಥಳೀಯರ ಆಕ್ರೋಶ ಹೊರಹಾಕಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಸ್ಪಿ ಜಿ.ಕೆ ಮಿಥುನ್ ಕುಮಾರ್, ಶಿವಮೊಗ್ಗ ಸಬ್ ಡಿವಿಜನ್-2 ಡಿವೈಎಸ್ಪಿ ಸಂಜೀವ್ ಕುಮಾರ್ ದೌಡಾಯಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ.

    ಸ್ಥಳೀಯರ ಜೊತೆ ಮಾತುಕತೆ ನಡೆಸಿದ್ದು, ದೂರು ನೀಡುವಂತೆ ಮನವಿ ಮಾಡಿದ್ದಾರೆ. ದೂರು ನೀಡಿ ತಪ್ಪಿತಸ್ಥರನ್ನು ಬಂಧಿಸುತ್ತೇವೆಂದು ಭರವಸೆ ನೀಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳದಲ್ಲಿ ಪೊಲೀಸ್ ಬಿಗಿ-ಭದ್ರತೆ ನಿಯೋಜಿಸಲಾಗಿದೆ.

  • ಹಿಂದೂ ದೇವರನ್ನು ನಂಬಬೇಡಿ, ಬೌದ್ಧ ಧರ್ಮ ಅಳವಡಿಸಿಕೊಳ್ಳಿ ಎಂದಿದ್ದ ಮುಖ್ಯಶಿಕ್ಷಕ ಅರೆಸ್ಟ್

    ಹಿಂದೂ ದೇವರನ್ನು ನಂಬಬೇಡಿ, ಬೌದ್ಧ ಧರ್ಮ ಅಳವಡಿಸಿಕೊಳ್ಳಿ ಎಂದಿದ್ದ ಮುಖ್ಯಶಿಕ್ಷಕ ಅರೆಸ್ಟ್

    ರಾಯ್ಪುರ್:‌ ಹಿಂದೂ ದೇವರನ್ನು (Hindu God) ನಂಬಬೇಡಿ, ಬೌದ್ಧ ಧರ್ಮ ಅಳವಡಿಸಿಕೊಳ್ಳಿ ಅಂತ ಶಿಕ್ಷಕರೊಬ್ಬರು ಮಕ್ಕಳಿಗೆ ಪ್ರಮಾಣ ವಚನ ಬೋಧಿಸಿದ ಘಟನೆ ಛತ್ತೀಸ್‍ಘಡದ ಬಿಲಾಸ್‍ಪುರದಲ್ಲಿರುವ ಸರ್ಕಾರಿ ಶಾಲೆಯಲ್ಲಿ ನಡೆದಿದೆ.

    ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಶಿಕ್ಷಕ ರತನ್‍ಲಾಲ್ ಸರೋವರ್ ರನ್ನು ಬಂಧಿಸಲಾಗಿದೆ. ಮುಖ್ಯ ಶಿಕ್ಷಕನ ಸ್ಥಾನದಿಂದಲೂ ಅಮಾನತುಗೊಳಿಸಲಾಗಿದೆ.

    ನಡೆದಿದ್ದೇನು..?: ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ಸಂದರ್ಭದಲ್ಲಿ ಆರೋಪಿ ಮುಖ್ಯಸ್ಥರು ಮೊಹ್ತರಾಯ್ ಗ್ರಾಮದಲ್ಲಿ ಮಕ್ಕಳು ಮತ್ತು ಜನರ ಗುಂಪನ್ನು ಒಟ್ಟುಗೂಡಿಸಿದ್ದಾರೆ. ಬಳಿಕ ಅವರಿಗೆ ಹಿಂದೂ ದೇವರುಗಳನ್ನು ನಾವು ಪೂಜಿಸುವುದಿಲ್ಲ. ಬೌದ್ಧ ಧರ್ಮವನ್ನು ಅನುಸರಿಸುತ್ತೇವೆ ಎಂದು ಪ್ರತಿಜ್ಞೆ ಮಾಡಲಾಯಿತು.

    ಈ ಸಂಬಂಧ ಹಿಂದೂ ಸಂಘಟನೆಯೊಂದರ ಪದಾಧಿಕಾರಿ ರೂಪೇಶ್ ಶುಕ್ಲಾ ಎಂಬವರು ಹೆಡ್ ಮಾಸ್ಟರ್ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನಲ್ಲಿ ಶಿವ, ರಾಮ, ಕೃಷ್ಣ ಸೇರಿದಂತೆ ಹಿಂದೂ ದೇವತೆಗಳನ್ನು ಪೂಜಿಸುವುದಿಲ್ಲ ಮತ್ತು ಬೌದ್ಧ ಧರ್ಮವನ್ನು ಅನುಸರಿಸುವುದಾಗಿ ಪ್ರಮಾಣ ಮಾಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಅವರ ಈ ಕ್ರಮ ಸನಾತನ ಧರ್ಮದಲ್ಲಿ ನಂಬಿಕೆ ಇರುವ ಜನರ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

    ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗತೊಡಗಿತು. ಸದ್ಯ ದೂರಿನ ಆಧಾರದ ಮೇಲೆ ಹೆಡ್‌ಮಾಸ್ಟರ್ ವಿರುದ್ಧ ಐಪಿಸಿ ಸೆಕ್ಷನ್ 153A (ಧರ್ಮ, ಜಾತಿ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 295A (ಧಾರ್ಮಿಕ ಭಾವನೆಗಳಿಗೆ ಧಕ್ಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.‌

  • ಬುರ್ಕಾ ಧರಿಸಿ ಮಹದೇಶ್ವರನ ಭಕ್ತಿಗೀತೆ ಹಾಡಿದ ವಿದ್ಯಾರ್ಥಿನಿ – ಗೀತೆಗೆ ಶಿಳ್ಳೆ, ಚಪ್ಪಾಳೆ

    ಬುರ್ಕಾ ಧರಿಸಿ ಮಹದೇಶ್ವರನ ಭಕ್ತಿಗೀತೆ ಹಾಡಿದ ವಿದ್ಯಾರ್ಥಿನಿ – ಗೀತೆಗೆ ಶಿಳ್ಳೆ, ಚಪ್ಪಾಳೆ

    ಚಾಮರಾಜನಗರ: ಇಲ್ಲಿನ ಮುಸ್ಲಿಂ ವಿದ್ಯಾರ್ಥಿನಿಯೊಬ್ಬರು (Muslim Student) ಬುರ್ಕಾ ಧರಿಸಿ ಮಹದೇಶ್ವರನ ಭಕ್ತಿಗೀತೆ (Mahadeshwara Devotional Song) ಹಾಡುವ ಮೂಲಕ ಸಾಮರಸ್ಯ ಬೆಸೆಯುವ ಕೆಲಸ ಮಾಡಿದ್ದಾರೆ.

    ನಗರದ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಭಾರತೀಯ ಪರಿವರ್ತನ ಸಂಘದಿಂದ ಆಯೋಜನೆ ಮಾಡಿದ್ದ ಸ್ಪರ್ಧಾತ್ಮಕ ಪರೀಕ್ಷೆ ಕಾರ್ಯಾಗಾರದಲ್ಲಿ ವಿದ್ಯಾರ್ಥಿನಿ ಪ್ರಾರ್ಥನಾ ಗೀತೆ ಹಾಡಿ ಸಭಿಕರ ಮನಗೆದ್ದಿದ್ದಾರೆ. ಇದನ್ನೂ ಓದಿ: ಜಿಲ್ಲಾ ಕೇಂದ್ರಗಳಲ್ಲಿ ಉದ್ಯಮಿಯಾಗು-ಉದ್ಯೋಗ ನೀಡು ಕಾರ್ಯಾಗಾರ: ಸಚಿವ ನಿರಾಣಿ

    ಚಾಮರಾಜನಗರ (Chamarajanagar) ಮಹಿಳಾ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಉಮ್ಮೆ ಬಸೀರಾ, `ಸೋಜುಗಾದ ಸೂಜು ಮಲ್ಲಿಗೆ.. ಮಾದೇವಾ ನಿಮ್ಮ ಮಂಡೆ ಮ್ಯಾಗೆ ದುಂಡು ಮಲ್ಲಿಗೆ’ ಭಕ್ತಿ ಗೀತೆ ಹಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ವಿದ್ಯಾರ್ಥಿನಿ ಹಾಡಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರು ಮನಸೋತು ಶಿಳ್ಳೆ-ಚಪ್ಪಾಳೆಯ ಮಳೆಗರೆದಿದ್ದಾರೆ. ಇದನ್ನೂ ಓದಿ: ಪ್ರಧಾನಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ – 33 ಲಕ್ಷ ಚಂದಾದಾರರಿದ್ದ 3 ಯೂಟ್ಯೂಬ್ ಚಾನೆಲ್ ಪತ್ತೆ

    ಈ ಹಿಂದೆ ಸರಿಗಮಪ ಆಡಿಷನ್‌ನಲ್ಲಿ ಮುಸ್ಲಿಂ ಮಹಿಳಾ ಗಾಯಕಿ ಸುಹಾನಾ ಸೈಯದ್ (Suhana Syed) ಅವರು, `ಮುಕುಂದ ಮುರಾರಿ’ ಸಿನಿಮಾದ `ನೀನೆ ರಾಮ, ನೀನೆ ಶಾಮ, ನೀನೆ ಅಲ್ಲಾ, ನೀನೆ ಏಸು’ ಗೀತೆ ಹಾಡುವ ಮೂಲಕ ರಾಜ್ಯಾದ್ಯಂತ ಜನರ ಮನ ಗೆದ್ದಿದ್ದರು.

    Live Tv
    [brid partner=56869869 player=32851 video=960834 autoplay=true]

  • ಕಾಳಿ ದೇವಿ ಕೈಯಲ್ಲಿ ಸಿಗರೇಟು: ಇದು ಹಿಂದೂಗಳ ದೌರ್ಬಲ್ಯ – ಪ್ರಮೋದ್ ಮುತಾಲಿಕ್ ಕಿಡಿ

    ಕಾಳಿ ದೇವಿ ಕೈಯಲ್ಲಿ ಸಿಗರೇಟು: ಇದು ಹಿಂದೂಗಳ ದೌರ್ಬಲ್ಯ – ಪ್ರಮೋದ್ ಮುತಾಲಿಕ್ ಕಿಡಿ

    ಧಾರವಾಡ: ತಮ್ಮದೇ ಸಾಕ್ಷ್ಯಾಚಿತ್ರವೊಂದರಲ್ಲಿ ತಮಿಳುನಾಡಿನ ಕಾಳಿ ದೇವತೆಯ ಕೈಯಲ್ಲಿ ಸಿಗರೇಟು ಇರಿಸಿದ ಪೋಸ್ಟರ್ ಬಿಡುಗಡೆ ಮಾಡಲಾಗಿದ್ದು, ಖ್ಯಾತ ನಿರ್ಮಾಪಕಿ ಲೀನಾ ಮಣಿಮೇಕಲೈ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.

    ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸಹ ಇದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಈ ಕುರಿತಂತೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ್ದಾರೆ. ಇದನ್ನೂ ಓದಿ: ಕಾಳಿ ಕೈಲಿ ಸಿಗರೇಟು ವಿವಾದ : ಲೀನಾ ಮೇಲೆ ಹಲವು ದೂರು ದಾಖಲು

    ಇದಕ್ಕೆ ಕಾರಣ ಹಿಂದೂಗಳ ದೌರ್ಬಲ್ಯ. ಹಿಂದೂ ಸಮಾಜ ಒಗ್ಗಟ್ಟಾಗಿ ಪ್ರತಿಕ್ರಿಯೆ ಮಾಡದೇ ಇರುವುದೇ ಇದಕ್ಕೆ ಕಾರಣ. ಈ ರೀತಿಯ ಘಟನೆ ಇದೇ ಮೊದಲೇನಲ್ಲ. ಈ ಹಿಂದೆಯೂ ಅವಮಾನಕರ ಚಿತ್ರೀಕರಣ ಮಾಡಿದ್ದಾರೆ. ಚಪ್ಪಲಿ, ಬನಿಯನ್, ಶೌಚಾಲಯಗಳಲ್ಲಿ ಅಶ್ಲೀಲವಾಗಿ ಚಿತ್ರೀಕರಿಸಿ ಅವಮಾನ ಮಾಡಿದ್ದಾರೆ. ಮುಂದೆಯೂ ಈ ರೀತಿ ಆಗಬಹುದು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ‘ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2022’ ಸುಂದರಿ ಸಿನಿ ಶೆಟ್ಟಿಯ ಸಂಪೂರ್ಣ ಪರಿಚಯ : ನಮ್ಮೂರು, ನಮ್ಮೂರು ಹುಡುಗಿ

    ಹಿಂದೂಗಳಾದ್ರೆ ಬೇಕಾದ್ದು ಮಾಡಬಹುದಾ?
    ಕಾನೂನು ದುರ್ಬಲವಾಗಿವೆ. ತಕ್ಷಣ ಕ್ರಮ ಕೈಗೊಳ್ಳುವುದಿಲ್ಲ. ಮುಸ್ಲಿಮರಾದರೆ ತಕ್ಷಣ ಕ್ರಮ ತೆಗೆದುಕೊಳ್ಳುತ್ತದೆ. ಒಬ್ಬ ನ್ಯಾಯಮೂರ್ತಿ ಇಡೀ ದೇಶದಲ್ಲಿ ನೂಪುರ್ ಶರ್ಮಾ ಅವರಿಂದ ಗಲಭೆ ಆಗಿದೆ ಎಂದು ಹೇಳುತ್ತಾರೆ. ಹಾಗಾದ್ರೆ ಕಾಳಿಕಾ ಮಾತೆಯ ಕೈಯಲ್ಲಿ ಸಿಗರೇಟ್ ಇಟ್ಟು ಹಿಂದೂ ಸಮಾಜಕ್ಕೆ ಅವಮಾನ ಮಾಡಿದ್ದಾರೆ. ಅವರಿಂದಲೂ ಗಲಾಟೆ ಆಗುತ್ತದೆ ಎಂದು ಹೇಳಿ, ಒದ್ದು ಒಳಗೆ ಹಾಕೋಕಾಗಲ್ವಾ? ಹಿಂದೂಗಳಾದರೆ ಬೇಕಾದ್ದು ಮಾಡಬಹುದಾ? ಎಂದು ಪ್ರಶ್ನಿಸಿದ್ದಾರೆ.

    https://twitter.com/manu_cm_342/status/1543900026174259200

    ಈ ಬೆಳವಣಿಯಿಂದ ನ್ಯಾಯಾಂಗ ವ್ಯವಸ್ಥೆಯೂ ಕಡೆಗಣನೆಯಾಗುತ್ತಿದೆ. ಎಂ.ಎಫ್.ಹುಸೇನ್ ಹಿಂದೂ ದೇವತೆಗಳನ್ನು ವಿರೂಪಗೊಳಿಸಿದ ಚಿತ್ರೀಕರಣ ಮಾಡಿದ್ದರು. ಆ ಸಂದರ್ಭದಲ್ಲಿಯೂ ಹಿಂದೂ ಸಮಾಜ ನ್ಯಾಯ ಸಮ್ಮತವಾಗಿಯೇ ಹೋರಾಟ ಮಾಡಿತ್ತು. 1 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿತ್ತು. ಇದರಿಂದ ಎಂ.ಎಫ್.ಹುಸೇನ್ ಓಡಿಯೇ ಹೋದ. ಇವತ್ತು ಸ್ವಯಂಪ್ರೇರಿತವಾಗಿ ದಾಖಲಿಸಬೇಕಿತ್ತು. ಸರ್ಕಾರ ಹಾಗೂ ಪೊಲೀಸ್ ಇಲಾಖೆ ದುರ್ಬಲವಾಗಿರುವುದರಿಂದಲೇ ಇದೆಲ್ಲವೂ ಆಗುತ್ತಿದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಸಿಧು ಮೂಸೆವಾಲಾ ಹತ್ಯಾ ಪ್ರಕರಣ – ದೆಹಲಿಯಲ್ಲಿ ಗುಂಡು ಹಾರಿಸಿದವನ ಬಂಧನ

    ಹಿಂದೂ ಸಮಾಜದ ಇನ್ಮುಂದೆ ಸಹನೆ ಮಾಡದೇ ತಕ್ಕ ಉತ್ತರ ಕೊಡಬೇಕಾಗುತ್ತದೆ. ಈಗಾಗಲೇ ನಿರ್ದೇಶಕಿ ವಿರುದ್ಧ ಪ್ರಕರಣ ದಾಖಲಿಸಲು ಮುಂದಾಗಿದ್ದೇನೆ. ತಮಿಳುನಾಡಿನಲ್ಲೂ ಪ್ರತಿಭಟನೆ ನಡೆಸಲಾಗುವುದು. ಎಲ್ಲ ಮಾಹಿತಿ ಕಲೆಹಾಕಿ ಹೈಕೋರ್ಟ್ನಲ್ಲಿ ಕೇಸ್ ದಾಖಲು ಮಾಡಲಿದ್ದೇವೆ ಎಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಶ್ರೀ ಕೃಷ್ಣನ ವಿರುದ್ಧ ಅವಹೇಳನಕಾರಿ ಪೋಸ್ಟ್  – ಆರೋಪಿ ಅರೆಸ್ಟ್

    ಶ್ರೀ ಕೃಷ್ಣನ ವಿರುದ್ಧ ಅವಹೇಳನಕಾರಿ ಪೋಸ್ಟ್ – ಆರೋಪಿ ಅರೆಸ್ಟ್

    ಚಿಕ್ಕೋಡಿ: ಹಿಂದೂ ದೇವರಾದ ಶ್ರೀ ಕೃಷ್ಣನ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿಯನ್ನು ಚಿಕ್ಕೋಡಿ ಪೊಲೀಸರು ಬಂಧಿಸಿದ್ದಾರೆ.

    ಚಿಕ್ಕೋಡಿ ನ್ಯಾಯಾಲಯದಿಂದ ಜಾಮೀನು ರಹಿತ ವಾರಂಟ್ ಜಾರಿಯಾದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ವರುಣಾ ಗ್ರಾಮದಲ್ಲಿ ರವೀಂದ್ರ ಹಾರೋಹಳ್ಳಿ ಅನ್ನು ಬಂಧಿಸಿದ್ದಾರೆ. ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ. ಇದನ್ನೂ ಓದಿ: ರಷ್ಯಾ ಪಡೆ ನನ್ನನ್ನು ಸೆರೆ ಹಿಡಿಯಲು ಭಾರೀ ಹತ್ತಿರದಲ್ಲಿತ್ತು: ಝೆಲೆನ್ಸ್ಕಿ

    ಏನಿದು ಘಟನೆ?
    ಶ್ರೀ ಕೃಷ್ಣನ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದಕ್ಕೆ ರವೀಂದ್ರ ಹಾಗೂ ಕರೋಶಿ ಗ್ರಾಮದ ಚೇತನ್ ಹೊನ್ನಗೋಳ ವಿರುದ್ಧ 2017 ಡಿಸೆಂಬರ್‌ನಲ್ಲಿ ಚಿಕ್ಕೋಡಿ  ಪೊಲೀಸ್ ಠಾಣೆಯಲ್ಲಿ ಚಂದ್ರಶೇಖರ್ ಮುಂಡೆ ದೂರು ದಾಖಲಿಸಿದ್ದರು. ಇದನ್ನೂ ಓದಿ: ಚೀನಿಗಳಿಗೆ ವೀಸಾ ಬಂದ್ ಮಾಡಿದ ಬೆನ್ನಲ್ಲೇ ಭಾರತೀಯ ವಿದ್ಯಾರ್ಥಿಗಳಿಗೆ ಬನ್ನಿ ಎಂದ ಚೀನಾ

    ಈ ಹಿಂದೆ ಚೇತನ್ ಹೊನ್ನಗೋಳ ಕೋರ್ಟ್‍ಗೆ ಹಾಜರಾಗಿದ್ದನು. ಆದರೆ 2019ರಿಂದ ಇದುವರೆಗೂ ರವೀಂದ್ರ ಕೋರ್ಟ್‍ಗೆ ಹಾಜರಾಗಿರಲಿಲ್ಲ. 2019 ರಿಂದಲು ಚಿಕ್ಕೋಡಿ ಪೊಲೀಸರ ಕೈಗೆ ಸಿಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಚಿಕ್ಕೋಡಿ ಪೊಲೀಸರು ಬಂಧಿಸಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್‍ನ ವಿರೋಧ ಪಕ್ಷದ ನಾಯಕ ಬಿಕೆ ಹರಿಪ್ರಸಾದ್, ಮೊನ್ನೆ ಜಿಗ್ನೇಶ್ ಮೇವಾನಿ ಇಂದು ಹಾರೋಹಳ್ಳಿ ರವೀಂದ್ರ. ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿದ ಕಾರಣಕ್ಕಾಗಿ ದಲಿತ ಪರ ಹೋರಾಟಗಾರರ ಬಂಧನ ಆಗಿದೆ. ಹೋರಾಟಗಾರರು ಬರಹಗಾರರನ್ನು ಗುರಿಯಾಗಿಸಿಕೊಂಡು ಬಂಧಿಸುತ್ತಿರುವ ಬಿಜೆಪಿ ಸರ್ಕಾರದ ಫ್ಯಾಸಿಸ್ಟ್ ನಡೆಯನ್ನು ಖಂಡಿಸುತ್ತೇನೆ. ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ನಡೆಸುತ್ತಿರುವ ದಾಳಿ. ಕೂಡಲೇ ರವೀಂದ್ರನನ್ನ ಬಿಡುಗಡೆ ಮಾಡಬೇಕು ಎಂದು ಟ್ವೀಟ್ ಮಾಡುವ ಮೂಲಕ ವಿರೋಧ ವ್ಯಕ್ತಪಡಿಸಿದ್ದಾರೆ.