Tag: Hindu Mahasabha

  • ಉದ್ಯಮಿ ಕೊಲೆ ಪ್ರಕರಣ ಹಿಂದೂ ಮಹಾಸಭಾ ನಾಯಕಿ ಪೂಜಾ ಪಾಂಡೆ ಅರೆಸ್ಟ್‌

    ಉದ್ಯಮಿ ಕೊಲೆ ಪ್ರಕರಣ ಹಿಂದೂ ಮಹಾಸಭಾ ನಾಯಕಿ ಪೂಜಾ ಪಾಂಡೆ ಅರೆಸ್ಟ್‌

    ಜೈಪುರ್‌: ಉತ್ತರ ಪ್ರದೇಶದ (Uttar Pradesh) ಉದ್ಯಮಿ ಅಭಿಷೇಕ್ ಗುಪ್ತಾ ಅವರ ಕೊಲೆ ಪ್ರಕರಣದಲ್ಲಿ ಹಿಂದೂ ಮಹಾಸಭಾ (Hindu Mahasabha) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪೂಜಾ ಶಕುನ್ ಪಾಂಡೆಯನ್ನು ಪೊಲೀಸರು ಬಂಧಿಸಿದ್ದಾರೆ.

    ರಾಜಸ್ಥಾನದ (Rajasthan) ಭರತ್‌ಪುರ ಜಿಲ್ಲೆಯ ಆಗ್ರಾ-ಜೈಪುರ ಹೆದ್ದಾರಿಯ ಲೋಧಾ ಬೈಪಾಸ್ ಬಳಿ ಶುಕ್ರವಾರ ತಡರಾತ್ರಿ ಪಾಂಡೆ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಸೆಪ್ಟೆಂಬರ್ 26 ರಂದು ಅಲಿಗಢ ನಗರದ ಹೊರವಲಯದಲ್ಲಿ ಬಸ್ ಹತ್ತುತ್ತಿದ್ದಾಗ ಅಭಿಷೇಕ್ ಗುಪ್ತಾ ಅವರಿಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೂಜಾ ಅವರ ಪತಿ ಅಶೋಕ್ ಪಾಂಡೆ ಮತ್ತು ಶಾರ್ಪ್ ಶೂಟರ್‌ ಮೊಹಮ್ಮದ್ ಫಜಲ್ ಮತ್ತು ಆಸಿಫ್ ಎಂಬವರನ್ನು ಪೊಲೀಸರು ಬಂಧಿಸಿದ್ದರು. ವಿಚಾರಣೆ ವೇಳೆ ಪೂಜಾ ದಂಪತಿ ಸೂಚನೆಯ ಮೇರೆಗೆ ಹತ್ಯೆ ಮಾಡಿದ್ದಾಗಿ ಶಾರ್ಪ್‌ ಶೂಟರ್‌ಗಳು ತಿಳಿಸಿದ್ದರು. ಈ ಮಾಹಿತಿ ಆಧಾರದ ಮೇಲೆ ಅವರನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ – ಮೂವರು ಅರೆಸ್ಟ್‌

    ಬಹಳ ಸಮಯದಿಂದ ಉದ್ಯಮಿಗೆ ದಂಪತಿ ಕಿರುಕುಳ ನೀಡುತ್ತಿದ್ದರು. ಅವರ ಜೊತೆ ಹಣಕಾಸಿನ ವಿವಾದದಿಂದ ಪಾಂಡೆ ದಂಪತಿ ಕೊಲೆಗೆ ಸುಪಾರಿ ನೀಡಿದ್ದರು. ಇನ್ನೂ ಶೂಟರ್‌ಗಳಿಬ್ಬರೂ ಪಾಂಡೆ ದಂಪತಿಗೆ ಪರಿಚಿತರಾದ್ದು, ಆಗಾಗ ಅವರ ಮನೆಗೆ ಭೇಟಿ ನೀಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

    ಪೂಜಾ ಪಾಂಡೆ ಬಂಧನಕ್ಕೆ 50,000 ರೂ. ಬಹುಮಾನ ಘೋಷಿಸಲಾಗಿತ್ತು. ಅವರನ್ನು ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ ಜೈಲಿಗೆ ಕಳುಹಿಸಲಾಗಿದೆ. ಇದನ್ನೂ ಓದಿ: ಶಿವಮೊಗ್ಗ ಜೈಲಿಗೆ ಬಿಸ್ಕೆಟ್​ ಪ್ಯಾಕ್​ನಲ್ಲಿ ಗಾಂಜಾ ಸಾಗಾಟ – ಇಬ್ಬರು ಅರೆಸ್ಟ್‌

  • ಚಂದ್ರನನ್ನು ಹಿಂದೂ ರಾಷ್ಟ್ರವೆಂದು ಘೋಷಿಸಿ ಭಯೋತ್ಪಾದಕರು ತಲುಪದಂತೆ ನೋಡಿಕೊಳ್ಳಿ: ಚಕ್ರಪಾಣಿ ಮಹಾರಾಜ್

    ಚಂದ್ರನನ್ನು ಹಿಂದೂ ರಾಷ್ಟ್ರವೆಂದು ಘೋಷಿಸಿ ಭಯೋತ್ಪಾದಕರು ತಲುಪದಂತೆ ನೋಡಿಕೊಳ್ಳಿ: ಚಕ್ರಪಾಣಿ ಮಹಾರಾಜ್

    ಲಕ್ನೋ: ಚಂದ್ರನನ್ನು (Moon) ಹಿಂದೂ ರಾಷ್ಟ್ರವೆಂದು ಘೋಷಿಸಿ, ಭಯೋತ್ಪಾದಕರು ಅಲ್ಲಿಗೆ ತಲುಪದಂತೆ ನೋಡಿಕೊಳ್ಳಬೇಕು ಎಂದು ಅಖಿಲ ಭಾರತ ಹಿಂದೂ ಮಹಾಸಭಾದ (Hindu Mahasabha) ರಾಷ್ಟ್ರೀಯ ಅಧ್ಯಕ್ಷ ಸ್ವಾಮಿ ಚಕ್ರಪಾಣಿ ಮಹಾರಾಜ್ (Swami Chakrapani Maharaj) ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದಾರೆ.

    ಈ ಬಗ್ಗೆ ಟ್ವಿಟ್ಟರ್‌ನಲ್ಲಿ ವೀಡಿಯೋ ಹಂಚಿಕೊಂಡಿರುವ ಅವರು, ಚಂದ್ರನನ್ನು ಹಿಂದೂ ಸನಾತನ ರಾಷ್ಟ್ರ ಎಂದು ಸಂಸತ್ತಿನಲ್ಲಿ ಘೋಷಿಸಬೇಕು. ಚಂದ್ರಯಾನ-3 (Chandrayaan-3) ಇಳಿದಿರುವ ಶಿವಶಕ್ತಿ ಪಾಯಿಂಟ್‍ನ್ನು ಅದರ ರಾಜಧಾನಿಯಾಗಿ ಅಭಿವೃದ್ಧಿಪಡಿಸಬೇಕು. ಆದ್ದರಿಂದ ಯಾವುದೇ ಭಯೋತ್ಪಾದಕ ಜಿಹಾದಿ ಮನಸ್ಥಿತಿಗಳು ಅಲ್ಲಿಗೆ ತಲುಪಬಾರದು ಎಂದಿದ್ದಾರೆ. ಇದನ್ನೂ ಓದಿ: ಅನಾರೋಗ್ಯದಿಂದ ಮೃತಪಟ್ಟರೂ ಬಾರದ ವಿದೇಶದಲ್ಲಿರೋ ಮಕ್ಕಳು – ಅಂತ್ಯಕ್ರಿಯೆ ಮಾಡಿ ಮಾನವೀಯತೆ ಮೆರೆದ ಪೊಲೀಸರು

    ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದ ಜಾಗಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಶಿವಶಕ್ತಿ ಎಂದು ಹೆಸರಿಟ್ಟಿದ್ದರು. ಅಲ್ಲದೇ ಚಂದ್ರಯಾನ-2 ಪತನಗೊಂಡ ಜಾಗಕ್ಕೆ ತಿರಂಗ ಎಂದು ಹೆಸರಿಟ್ಟಿದ್ದರು. ಇದಾದ ಬಳಿಕ ಕಾಂಗ್ರೆಸ್ ನಾಯಕ ರಶಿದ್ ಅಲ್ವಿ ಮೋದಿ ಹೆಸರಿಟ್ಟಿರುವುದನ್ನು ವ್ಯಂಗ್ಯ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಬಿಜೆಪಿ ನಾಯಕ ಶೆಹಜಾದ್ ಪೂನವಾಲ ತಿರುಗೇಟು ನೀಡಿ ಕಾಂಗ್ರೆಸ್ ಹಿಂದೂ ವಿರೋಧಿ ತನವನ್ನು ಪ್ರದರ್ಶಿಸುತ್ತಿದೆ ಎಂದಿದ್ದರು.

    ಇದಾದ ಬಳಿಕ ಇಸ್ರೋ ಅಧ್ಯಕ್ಷ ಸೋಮನಾಥ್ ಅವರು ಈ ಹೆಸರಿನ ಬಗ್ಗೆ ವಿವಾದದ ಅಗತ್ಯವಿಲ್ಲ. ಹೊರಗಿನ ಹುಡುಕಾಟಕ್ಕೆ ವಿಜ್ಞಾನ ಹಾಗೂ ಅಂತರಂಗದ ಹುಡುಕಾಟಕ್ಕೆ ಆಧ್ಯಾತ್ಮದ ಅಗತ್ಯವಿದೆ ಎಂದಿದ್ದರು. ಇದನ್ನೂ ಓದಿ: ಪಾಲಿಕೆ ಸದಸ್ಯನಿಂದ ಸ್ನೇಹಿತನಿಗೆ ಜೀವ ಬೆದರಿಕೆ – ಆತ್ಮಹತ್ಯೆಗೆ ಯತ್ನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿಎಂಗೆ ಕೊಲೆ ಬೆದರಿಕೆ ಹಾಕಿದ್ದ ಧರ್ಮೇಂದ್ರ ಬಂಧನ

    ಸಿಎಂಗೆ ಕೊಲೆ ಬೆದರಿಕೆ ಹಾಕಿದ್ದ ಧರ್ಮೇಂದ್ರ ಬಂಧನ

    ಮಂಗಳೂರು: ಮೈಸೂರು ದೇಗುಲ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ಅಖಿಲ ಭಾರತೀಯ ಹಿಂದೂ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಅವರನ್ನು ಬಂಧಿಸಲಾಗಿದೆ.

    Karnataka administered 29.5 Lakh covid vaccine doses in a single day CM Bommai Thanks Modi

    ಮಂಗಳೂರಿನಲ್ಲಿ ನಿನ್ನೆ ಮಾಧ್ಯಮ ಗೋಷ್ಠಿಯಲ್ಲಿ ಧರ್ಮೇಂದ್ರ, ಹಿಂದೂಗಳ ಮೇಲೆ ದಾಳಿಯಾದಾಗ ಗಾಂಧೀಜಿಯನ್ನೇ ಬಿಟ್ಟಿಲ್ಲ ನಾವು. ಹಿಂದೂಗಳ ಮೇಲೆ ದಾಳಿಯಾದಾಗ ಗಾಂಧೀಜಿಯನ್ನೇ ಹತ್ಯೆ ಮಾಡಲಾಗಿದೆ. ಅಂತಹ ಸಂದರ್ಭದಲ್ಲಿ ನೀವು ಯಾವ ಲೆಕ್ಕ ಬೊಮ್ಮಾಯಿಯವರೇ. ನಿಮ್ಮ ವಿಚಾರದಲ್ಲಿ ಅಲೋಚನೆ ಮಾಡಲು ಸಾಧ್ಯವಿಲ್ಲ ಅಂದುಕೊಳ್ಳಬೇಡಿ ದೇಗುಲ ಧ್ವಂಸ ಮಾಡಿರೋದು ಒಂದು ಕೊಲೆಗೆ ಸಮಾನ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಸಿಎಂ ಬಸವರಾಜ ಬೊಮ್ಮಾಯಿಗೆ ಕೊಲೆ ಬೆದರಿಕೆ

    ದೇವಾಲಯ ಕೆಡವಿದ ವಿಚಾರದಲ್ಲಿ ಸಿಎಂಗೆ ಕೊಲೆ ಬೆದರಿಕೆ ಹಾಕಿರುವ ತನ್ನ ಹೇಳಿಕೆಗೆ ಧರ್ಮೇಂದ್ರ ಅವರು ಕ್ಷಮೆಯಾಚಿಸಿದ್ದರು. ಆದರೆ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಲೋಹಿತ್ ಕುಮಾರ್ ಸುವರ್ಣ ಎಂಬವರು ದೂರು ದಾಖಲಿಸಿದ್ದರು. ಈ ಸಂಬಂಧ ಧರ್ಮೇಂದ್ರ ಅವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಬಾಲಕಿ ಕೆನ್ನೆ ಕಚ್ಚಿದ್ದ ಶಿಕ್ಷಕನಿಗೆ ಪೊಲೀಸರ ಮುಂದೆಯೇ ಥಳಿಸಿದ ಸ್ಥಳೀಯರು

  • ಡಿಂಪಲ್ ಕ್ವೀನ್ ದೀಪಿಕಾಗೆ ಕರ್ನಾಟಕದಲ್ಲಿ ಸಂಕಷ್ಟ

    ಡಿಂಪಲ್ ಕ್ವೀನ್ ದೀಪಿಕಾಗೆ ಕರ್ನಾಟಕದಲ್ಲಿ ಸಂಕಷ್ಟ

    ಬೆಂಗಳೂರು: ನಟಿ ದೀಪಿಕಾ ಪಡುಕೋಣೆ ಚಿತ್ರವನ್ನು ಕರ್ನಾಟಕದಲ್ಲಿ ನಿಷೇಧಿಸಬೇಕೆಂದು ಅಖಿಲ ಭಾರತ ಹಿಂದೂ ಮಹಾಸಭಾದಿಂದ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಲಾಗಿದೆ.

    ಜೆಎನ್‍ಯು ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡಿದ್ದ ದೀಪಿಕಾ ಪರ-ವಿರೋಧ ಮಾತುಗಳು ಕೇಳಿ ಬರ್ತಿವೆ. ಈ ಮಧ್ಯೆ ಕರ್ನಾಟಕದಲ್ಲಿ ವಾಣಿಜ್ಯ ಮಂಡಳಿಗೆ ದೂರು ನೀಡಲಾಗಿದೆ. ದೀಪಿಕಾ ಪಡುಕೋಣೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು ದೇಶವಿರೋಧಿ ಕೃತ್ಯ. ದೀಪಿಕಾ ಹಾಗೂ ಆಕೆಯ ಪತಿ ರಣವೀರ್ ಸಿಂಗ್ ಚಲನಚಿತ್ರ ನಿಷೇಧಿಸಿ, ಛಪಾಕ್ ಸಿನಿಮಾವೂ ರಿಲೀಸ್ ಆಗಬಾರದು ಅಂತಾ ಹಿಂದೂ ಮಹಾಸಭಾದಿಂದ ಪತ್ರ ಬರೆಯಲಾಗಿದೆ.

    ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಮತ್ತು ಅಲ್ಲಿನ ಶಿಕ್ಷಕರ ಮೇಲೆ ದಾಳಿಯಾದ ನಂತರ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಜೆಎನ್‍ಯುಗೆ ಮಂಗಳವಾರ ಸಂಜೆ ಸುಮಾರು 7.45 ಕ್ಕೆ ಜೆಎನ್‍ಯು ವಿಶ್ವವಿದ್ಯಾಲಯಕ್ಕೆ ಆಗಮಿಸಿದ್ದರು. 10 ನಿಮಿಷಗಳ ಕಾಲ ಯೂನಿವರ್ಸಿಟಿಯಲ್ಲಿ ಇದ್ದ ದೀಪಿಕಾ, ಬಳಿಕ ಏನೂ ಪ್ರತಿಕ್ರಿಯೆನೀಡದೆ ವಾಪಸ್ ಆಗಿದ್ದರು.

  • ಅಯೋಧ್ಯೆ ತೀರ್ಪು- ಹಿಂದೂ ಮಹಾಸಭಾದಿಂದಲೂ ಮರು ಪರಿಶೀಲನಾ ಅರ್ಜಿ ಸಲ್ಲಿಕೆ

    ಅಯೋಧ್ಯೆ ತೀರ್ಪು- ಹಿಂದೂ ಮಹಾಸಭಾದಿಂದಲೂ ಮರು ಪರಿಶೀಲನಾ ಅರ್ಜಿ ಸಲ್ಲಿಕೆ

    ನವದೆಹಲಿ: ಅಯೋಧ್ಯೆ ತೀರ್ಪು ಪ್ರಶ್ನಿಸಿ ಜಮಿಯತ್-ಉಲಮಾ-ಎ ಹಿಂದ್ ಸೇರಿದಂತೆ ಐದು ಜನರ ನಂತರ ಇದೀಗ ಹಿಂದೂ ಮಹಾಸಭಾ ಮರುಪರಿಶೀಲನಾ ಅರ್ಜಿ ಸಲ್ಲಿಸಿದೆ.

    ಹಿಂದೂಗಳ ಪರವಾಗಿ ಸಲ್ಲಿಸಿದ ಮೊದಲ ಮರುಪರಿಶೀಲನಾ ಅರ್ಜಿ ಇದಾಗಿದ್ದು, ಮುಸ್ಲಿಮರಿಗೆ ಮಸೀದಿ ನಿರ್ಮಾಣ ಮಾಡಲು ಪ್ರತ್ಯೇಕ ಸ್ಥಳದಲ್ಲಿ 5 ಎಕರೆ ಜಾಗವನ್ನು ಕೊಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಇದೀಗ ಇದನ್ನು ವಿರೋಧಿಸಿ ಹಿಂದೂ ಮಹಾಸಭಾ ಮರುಪರಿಶೀಲನಾ ಅರ್ಜಿ ಸಲ್ಲಿಸಿದೆ.

    ನವೆಂಬರ್ 9ರಂದು ಸುಪ್ರೀಂ ಕೋರ್ಟ್ ನೀಡಿದ ಐತಿಹಾಸಿಕ ತೀರ್ಪನ್ನು ಪ್ರಶ್ನಿಸಿ ಮುಸ್ಲಿಂ ಪರ ಸಂಘಟನೆಗಳು ಈಗಾಗಲೇ 6 ಮರು ಪರಿಶೀಲನಾ ಅರ್ಜಿಗಳನ್ನು ಸಲ್ಲಿಸಿವೆ. ವಿವಾದಿತ ಸ್ಥಳದಲ್ಲಿ ರಾಮ ಮಂದಿರ ನಿರ್ಮಿಸುವಂತೆ ಹಾಗೂ ಮುಸ್ಲಿಮರಿಗೆ ಪ್ರತ್ಯೇಕವಾಗಿ 5 ಎಕರೆ ಜಾಗವನ್ನು ನೀಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

    ಹಿಂದೂ ಮಹಾಸಭಾ ಪರ ವಕೀಲ ವಿಷ್ಣು ಶಂಕರ್ ಜೈನ್ ಅವರು ಈ ಕುರಿತು ಪ್ರತಿಕ್ರಿಯಿಸಿ, ಸುಪ್ರೀಂ ಕೋರ್ಟಿಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

    ವಿವಾದಿತ ಸ್ಥಳದ ಹೊರ ಭಾಗ ಹಾಗೂ ಒಳ ಭಾಗ ಹಿಂದೂಗಳಿಗೆ ಸೇರಿದ್ದು ಎಂದು ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಹೀಗಿರುವಾಗ ಮುಸ್ಲಿಮರಿಗೆ 5 ಎಕರೆ ಜಾಗವನ್ನು ಬೇರೆ ಕಡೆ ನೀಡುವ ಅಗತ್ಯವೇನಿದೆ ಎಂದು ಹಿಂದೂ ಮಹಾಸಭಾ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಮುಸ್ಲಿಮರ ಆರು ಅರ್ಜಿಗಳು ಸೇರಿದಂತೆ ಇದು ಏಳನೇ ಮರು ಪರಿಶೀಲನಾ ಅರ್ಜಿಯಾಗಿದೆ.

    ಐದು ಅರ್ಜಿಗಳನ್ನು ಮೌಲಾನಾ ಮುಫ್ತಿ ಹಸ್ಬುಲ್ಲಾ, ಮೌಲಾನಾ ಮಹಫೂಜೂರ್, ವಿಶ್ಬಾಹುದ್ದೀನ್, ಮೊಹಮ್ಮದ್ ಉಮರ್ ಹಾಗೂ ಹಾಜಿ ಹಬೂಬ್ ಎಂಬ ಐದು ಜನ ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಬೆಂಬಲದಿಂದ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದಾರೆ.

    ಜಮಿಯತ್- ಉಲಮಾ-ಎ ಹಿಂದ್ 217 ಪುಟಗಳ ಮೇಲ್ಮನವಿ ಸಲ್ಲಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಜಮಿಯತ್-ಉಲಮಾ-ಎ ಹಿಂದ್ ಪರ ವಕೀಲರೊಬ್ಬರು, ಅಯೋಧ್ಯೆ ಪ್ರಕರಣದ ಬಗ್ಗೆ ಸೂಕ್ಷ್ಮವಾಗಿ ಯೋಚನೆ ಮಾಡಿದ್ದೇವೆ ಹಾಗೂ ಅರ್ಥ ಮಾಡಿಕೊಂಡಿದ್ದೇವೆ. ದೇಶದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಂಡಿದ್ದೇವೆ. ಸುಪ್ರೀಂಕೋರ್ಟ್ ನೀಡಿದ ತೀರ್ಪಿನಲ್ಲಿ ಮುಸ್ಲಿಂ ಸಮುದಾಯಕ್ಕೆ ನ್ಯಾಯ ಸಿಕ್ಕಿಲ್ಲ. ಹೀಗಾಗಿ ಮೇಲ್ಮನವಿ ಸಲ್ಲಿಸಿದ್ದೇವೆ ಎಂದು ಹೇಳಿದ್ದರು.

    ಸುಪ್ರೀಂಕೋರ್ಟ್ ಬಾಬ್ರಿ ಮಸೀದಿಯ ನಾಶಕ್ಕೆ ಅವಕಾಶ ನೀಡಿದೆ. ಮುಸ್ಲಿಮರಿಗೆ 5 ಎಕರೆ ಜಾಗವನ್ನು ನೀಡುವ ನಿಟ್ಟಿನಲ್ಲಿ ಸಂವಿಧಾನದ 142 ವಿಧಿಯನ್ನು ತಪ್ಪಾಗಿ ಬಳಸಲಾಗಿದೆ. ಹೀಗೆ ಅನೇಕ ವಿಚಾರವಾಗಿ ಒಟ್ಟು 217 ಪುಟಗಳ ಮೇಲ್ಮನವಿ ಸಲ್ಲಿಸಿದ್ದೇವೆ ಎಂದು ತಿಳಿಸಿದ್ದರು.

  • ಸಾಧ್ವಿ ಪ್ರಜ್ಞಾ ಸಿಂಗ್ ಕ್ಷಮೆಯಾಚಿಸುವ ಅಗತ್ಯವಿರಲಿಲ್ಲ- ಹಿಂದೂ ಮಹಾಸಭಾ

    ಸಾಧ್ವಿ ಪ್ರಜ್ಞಾ ಸಿಂಗ್ ಕ್ಷಮೆಯಾಚಿಸುವ ಅಗತ್ಯವಿರಲಿಲ್ಲ- ಹಿಂದೂ ಮಹಾಸಭಾ

    ನವದೆಹಲಿ: ನಾಥೂರಾಮ್ ಗೋಡ್ಸೆ ದೇಶಭಕ್ತ ಎಂಬ ಹೇಳಿಕೆ ನೀಡಿದ್ದ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಬೆಂಬಲಕ್ಕೆ ಹಿಂದೂ ಮಹಾಸಭಾ ನಿಂತಿದೆ.

    ಹಿಂದೂ ಮಹಾಸಭಾ ವಕ್ತಾರ ಅಶೋಕ್ ಪಾಂಡೆ ಈ ಕುರಿತು ಹೇಳಿಕೆ ನೀಡಿದ್ದು, ಸಂಸದೆ ಸಾಧ್ವಿ ಪಜ್ಞಾ ಸಿಂಗ್ ಠಾಕೂರ್ ಅವರು ಕ್ಷಮೆಯಾಚಿಸುವ ಅಗತ್ಯವಿರಲಿಲ್ಲ. ರಾಜಕೀಯದ ಒತ್ತಡಕ್ಕೆ ಮಣಿದು ಅವರು ಕ್ಷಮೆಯಾಚಿಸಬೇಕಾಯಿತು ಎಂದು ಅಭಿಪ್ರಾಯ ಪಟ್ಟಿದ್ದಾರೆ.

    ಸಾಧ್ವಿ ಅವರು ಹೇಳಿದಂತೆ ನಾಥೂರಾಮ್ ಗೋಡ್ಸೆ ನಿಜವಾದ ದೇಶ ಭಕ್ತ. ಏಕೆಂದರೆ ಭಾರತ ಮತ್ತೆ ವಿಭಜನೆಯಾಗುವುದನ್ನು ತಪ್ಪಿಸಿದರು ಎಂದು ಸಮರ್ಥಿಸಿಕೊಂಡರು.

    ಲೋಕಸಭೆಯಲ್ಲಿ ಪ್ರಜ್ಞಾ ಸಿಂಗ್ ಠಾಕೂರ್ ಅವರು ಗೋಡ್ಸೆ ದೇಶಭಕ್ತ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ವಿರೋಧ ಪಕ್ಷಗಳ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ಸದನದಲ್ಲಿ ಪ್ರತಿಭಟನೆ ನಡೆಸಿ ತೀವ್ರ ಗದ್ದಲ ಎಬ್ಬಿಸಿದ್ದರು. ಬಿಜೆಪಿ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಪ್ರತಾಪ್‍ಚಂದ್ರ ಸಾರಂಗಿ, ಜಗದಂಬಿಕಾ ಪಾಲ್ ಹಾಗೂ ಪ್ರಹ್ಲಾದ್ ಜೋಶಿ ಸೇರಿದಂತೆ ವಿವಿಧ ಬಿಜೆಪಿ ನಾಯಕರು ಸಹ ಸಾಧ್ವಿ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

    ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿ, ಸಾಧ್ವಿ ಪ್ರಜ್ಞಾ ಟೆರರಿಸ್ಟ್. ಪ್ರಜ್ಞಾ ಅವರು ಟೆರರಿಸ್ಟ್ ಗೋಡ್ಸೆಯನ್ನು ದೇಶಭಕ್ತ ಎಂದು ಕರೆದಿದ್ದಾರೆ ಎಂದು ಕಿಡಿಕಾರಿದ್ದರು.

    ಈ ಹೇಳಿಕೆ ವಿಚಾರವಾಗಿ ಸ್ವಪಕ್ಷ ಬಿಜೆಪಿ ಕೂಡ ಸಾಧ್ವಿ ಪ್ರಜ್ಞಾಗೆ ತಪರಾಕಿ ಹಾಕಿ ಕ್ಷಮೆ ಕೋರುವಂತೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಶುಕ್ರವಾರ ಸಂಸತ್ತಿನಲ್ಲಿ ಮಾತನಾಡಿದ್ದ ಸಾಧ್ವಿ ಪ್ರಜ್ಞಾ, ನನ್ನ ಹೇಳಿಕೆಯಿಂದ ಯಾರಿಗಾದರು ನೋವಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ. ಆದರೆ ನಾನು ಸಂಸತ್ತಿನಲ್ಲಿ ಹೇಳಿದ ಹೇಳಿಕೆಯನ್ನು ತಿರುಚಿ ಅದಕ್ಕೆ ಬೇರೆ ರೂಪ ನೀಡಿದ್ದಾರೆ. ನಾನು ಗಾಂಧೀಜಿ ಅವರು ದೇಶಕ್ಕಾಗಿ ಮಾಡಿರುವ ತ್ಯಾಗವನ್ನು ಗೌರವಿಸುತ್ತೇನೆ ಎಂದಿದ್ದರು.

    ಈ ಸಂಸತ್ತಿನ ಒಬ್ಬ ಸದಸ್ಯರು ನನ್ನನ್ನು ಭಯೋತ್ಪಾದಕರಿಗೆ ಹೋಲಿಸಿದ್ದಾರೆ. ಅದು ನನ್ನ ಘನತೆಗೆ ಮತ್ತು ವ್ಯಕ್ತಿತ್ವಕ್ಕೆ ಧಕ್ಕೆ ತಂದಿದೆ. ನನ್ನ ವಿರುದ್ಧ ನ್ಯಾಯಾಲಯದಲ್ಲಿ ಯಾವುದೇ ಆರೋಪಗಳು ಸಾಬೀತಾಗದೆ ಇದ್ದರೂ ಅವರು ಹೀಗೆ ಹೇಳಿರುವುದು ಒಬ್ಬ ಮಹಿಳಾ ಸಂಸದೆ ಮತ್ತು ಸನ್ಯಾಸಿಗೆ ಮಾಡಿರುವ ಅವಮಾನ ಎಂದು ಹೇಳುವ ಮೂಲಕ ರಾಹುಲ್ ಗಾಂಧಿ ಮೇಲೆ ವಾಗ್ದಾಳಿ ಮಾಡಿದ್ದರು.

    ಏನಿದು ವಿವಾದ?
    ಬುಧವಾರ ಸಂಸತಿನಲ್ಲಿ ಡಿಎಂಕೆ ಸಂಸದ ಎ.ರಾಜಾ ಅವರು ವಿಶೇಷ ಭದ್ರತಾ ಪಡೆ (ಎಸ್‍ಪಿಜಿ) ತಿದ್ದುಪಡಿ ಮಸೂದೆಯ ಕುರಿತು ಚರ್ಚೆ ನಡೆಯುತ್ತಿದ್ದ ವೇಳೆ ಗೋಡ್ಸೆ ಮಹಾತ್ಮಾ ಗಾಂಧಿಯವರನ್ನು ಏಕೆ ಕೊಲೆ ಮಾಡಿದರು ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಸಾಧ್ವಿ ಪ್ರಜ್ಞಾ ಸಿಂಗ್ ಮಧ್ಯೆ ಪ್ರವೇಶಿಸಿ, ದೇಶಭಕ್ತನ ಉದಾಹರಣೆಯನ್ನು ನೀವು ಈ ಸಂದರ್ಭದಲ್ಲಿ ಕೊಡಬೇಡಿ ಎಂದು ಕಿಡಿಕಾರಿದ್ದರು.

    ಇದನ್ನು ಸ್ವತಃ ಗೋಡ್ಸೆ ಒಪ್ಪಿಕೊಂಡಿದ್ದಾರೆ. 32 ವರ್ಷಗಳಿಂದ ಗಾಂಧಿ ಮೇಲೆ ದ್ವೇಷ ಇತ್ತು ಹೀಗಾಗಿ ಹತ್ಯೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಮಹಾತ್ಮಾ ಗಾಂಧಿಯವರ ವಿಚಾರಧಾರೆಗಳು ಪ್ರತ್ಯೇಕವಾಗಿದ್ದರಿಂದ ಗೋಡ್ಸೆ ಅವರನ್ನು ಹತ್ಯೆ ಮಾಡಿದ ಎಂದು ರಾಜಾ ಅವರು ಲೋಕಸಭೆಯ ಕಲಾಪದಲ್ಲಿ ತಿಳಿಸಿದ್ದರು. ರಾಜಾ ಅವರು ಮಾತನಾಡುತ್ತಿದ್ದ ವೇಳೆ ಸಾಧ್ವಿ ಪ್ರಜ್ಞಾ ಸಿಂಗ್ ಮಧ್ಯ ಪ್ರವೇಶಿಸಿದ್ದಕ್ಕೆ ವಿರೋಧ ಪಕ್ಷಗಳ ಸಂಸದರು ಪ್ರತಿಭಟನೆ ನಡೆಸಲು ಪ್ರಾರಂಭಿಸಿದರು. ಆಗ ಬಿಜೆಪಿ ಸಂಸದರು ಸಾಧ್ವಿಯವರಿಗೆ ಕುಳಿತುಕೊಳ್ಳುವಂತೆ ಸೂಚಿಸಿದ್ದರು.

  • ಉಡುಗೊರೆ ನೀಡುವ ನೆಪದಲ್ಲಿ ಬಂದು ಹಿಂದೂ ಮಹಾಸಭಾ ನಾಯಕನನ್ನು ಗುಂಡಿಕ್ಕಿ ಹತ್ಯೆ

    ಉಡುಗೊರೆ ನೀಡುವ ನೆಪದಲ್ಲಿ ಬಂದು ಹಿಂದೂ ಮಹಾಸಭಾ ನಾಯಕನನ್ನು ಗುಂಡಿಕ್ಕಿ ಹತ್ಯೆ

    ಲಕ್ನೋ: ಹಿಂದೂ ಮಹಾಸಭಾ ನಾಯಕ ಕಮಲೇಶ್ ತಿವಾರಿ ಅವರಿಗೆ ಗುಂಡಿಕ್ಕಿ ದುಷ್ಕರ್ಮಿಗಳು ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ಶುಕ್ರವಾರ ನಡೆದಿದೆ.

    ಗುಂಡು ತಗುಲಿ ಹಾಗೂ ಮಾರಣಾಂತಿಕ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಕಮಲೇಶ್ ತಿವಾರಿ ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ತಿವಾರಿ ಮೃತಪಟ್ಟಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

    ಕೇಸರಿ ಬಟ್ಟೆಯನ್ನು ಧರಿಸಿದ್ದ ದುಷ್ಕರ್ಮಿಗಳು ದೀಪಾವಳಿ ಉಡುಗೊರೆ ನೀಡುವ ನೆಪದಲ್ಲಿ ಕಮಲೇಶ್ ತಿವಾರಿ ಅವರ ಕಚೇರಿಗೆ ಬಂದಿದ್ದರು. ಕಚೇರಿಯಲ್ಲಿ ಚಹಾ ಕುಡಿದು ಹತ್ಯೆಗೆ ಪ್ಲ್ಯಾನ್ ರೂಪಿಸಿದ್ದ ದುಷ್ಕರ್ಮಿಗಳು, ಕಮಲೇಶ್ ತಿವಾರಿ ತಮ್ಮ ಬಳಿಗೆ ಬರುತ್ತಿದ್ದಂತೆ ಸ್ವೀಟ್ ಬಾಕ್ಸ್ ನಲ್ಲಿ ತಂದಿದ್ದ ಗನ್‍ನಿಂದ ಗುಂಡು ಹಾರಿಸಿದ್ದಾರೆ. ಬಳಿಕ ಮಾರಕಾಸ್ತ್ರಗಳಿಂದ ಕುತ್ತಿಗೆ, ಎದೆ, ಮುಖದ ಮೇಲೆ ಹಲ್ಲೆ ಮಾಡಿದ್ದಾರೆ. ಗುಂಡಿನ ಶಬ್ದ ಕೇಳಿದ ಸ್ಥಳೀಯರು ತಕ್ಷಣವೇ ಕಚೇರಿಯೊಳಗೆ ಬರುತ್ತಿದ್ದಂತೆ ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿದ್ದಾರೆ.

    ಕಮಲೇಶ್ ತಿವಾರಿ ಅವರ ಮೇಲಿನ ಹಳೆಯ ದ್ವೇಷದಿಂದ ದುಷ್ಕರ್ಮಿಗಳ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ. ಘಟನೆಯನ್ನು ಖಂಡಿಸಿ ಹಿಂದೂ ಮಹಾಸಭಾ ಸದಸ್ಯರು ಪ್ರತಿಭಟನೆ ಆರಂಭಿಸಿದ್ದು, ಆರೋಪಿಗಳನ್ನು ಬಂಧಿಸಿ ಸೂಕ್ತ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದೆ. ಈ ಸಂಬಂಧ ತನಿಖೆ ಆರಂಭಿಸಿರುವ ಪೊಲೀಸರು ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ನಡೆಸಿದ್ದಾರೆ ಎಂದು ವರದಿಯಾಗಿದೆ.

    ಕಮಲೇಶ್ ತಿವಾರಿ ಅವರು ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದು ಭಾರೀ ಸುದ್ದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಕಮಲೇಶ್ ತಿವಾರಿ ಅವರಿಗೆ ಹಾಕಿದ್ದ ರಾಷ್ಟ್ರೀಯ ಭದ್ರತಾ ಕಾಯ್ದೆಯನ್ನು ಇತ್ತೀಚೆಗೆ ಅಲಹಾಬಾದ್ ಹೈಕೋರ್ಟ್ ನ ಲಕ್ನೋ ನ್ಯಾಯಪೀಠವು  ರದ್ದುಪಡಿಸಿದೆ.

  • ಅಯೋಧ್ಯೆ ಸಂಧಾನ: ಯಾರು ಏನು ಹೇಳಿದ್ರು?

    ಅಯೋಧ್ಯೆ ಸಂಧಾನ: ಯಾರು ಏನು ಹೇಳಿದ್ರು?

    -ಅಯೋಧ್ಯೆಯಲ್ಲಿ ರಾಮ ಮಂದಿರವೇ ಆಗ್ಬೇಕು: ಉಮಾ ಭಾರತಿ

    ನವದೆಹಲಿ: ಅಯೋಧ್ಯೆ ವಿವಾದವನ್ನು ಸಂಧಾನದ ಮೂಲಕವೇ ಬಗೆಹರಿಸಿಕೊಳ್ಳಿ ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ರಾಜಕೀಯ ನಾಯಕರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ರಾಮ ಜನ್ಮಭೂಮಿಯಲ್ಲಿ ಮಂದಿರ ನಿರ್ಮಾಣ ಆಗಬೇಕೆ ಹೊರತು ಬೇರೆ ಧಾರ್ಮಿಕ ಕೇಂದ್ರಗಳು ಆಗಬಾರದು ಎಂದು ಕೇಂದ್ರ ಸಚಿವೆ ಉಮಾ ಭಾರತಿ ಹೇಳಿದ್ದಾರೆ.

    ನಾವು ನ್ಯಾಯಾಲಯವನ್ನು ಗೌರವಿಸುತ್ತೇವೆ. ಇದರ ಜೊತೆಗೆ ನಾವು ರಾಮನ ಭಕ್ತರೂ ಹೌದು. ವೆಟಿಕನ್ ಸಿಟಿಯಲ್ಲಿ ಮಸೀದಿ ನಿರ್ಮಾಣ ಆಗಲ್ಲ. ಮಕ್ಕಾ-ಮದೀನಾದಲ್ಲಿ ದೇವಾಲಯ ನಿರ್ಮಿಸಲು ಅವಕಾಶವಿಲ್ಲ. ಅದರಂತೆಯೇ ರಾಮಜನ್ಮಭೂಮಿಯಲ್ಲಿ ಬೇರೆ ಧಾರ್ಮಿಕ ಕೇಂದ್ರ ನಿರ್ಮಿಸಲು ಸಾಧ್ಯವಿಲ್ಲ ಎಂದು ಉಮಾ ಭಾರತಿ ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

    ಇದೊಂದು ಭೂಮಿ ವಿವಾದವಾಗಿದ್ದು, ಎರಡೂ ಪಾರ್ಟಿಗಳು ಸಂಧಾನ ಮಾಡಿಕೊಂಡರೆ ನ್ಯಾಯಾಲಯ ಸಮ್ಮತಿ ಸೂಚಿಸುತ್ತದೆ. ಅದರಂತೆ ನ್ಯಾಯಾಲಯ ಸಹ ಕೆಲಸ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಒಳ್ಳೆಯದು ಆಗಲಿದ್ದು, ಎಲ್ಲರೂ ಸೇರಿ ರಾಮಮಂದಿರವನ್ನು ನಿರ್ಮಾಣ ಮಾಡೋಣ ಎಂದು ಅವರು ಹೇಳಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ, ನಾವು ನ್ಯಾಯಾಲಯದ ಆದೇಶವನ್ನು ಪ್ರಶ್ನೆ ಮಾಡಲ್ಲ. ಈ ಮೊದಲು ನಡೆದ ಸಂಧಾನಗಳು ಫಲಪ್ರದವಾಗಿರಲಿಲ್ಲ. ಭಗವಾನ್ ರಾಮನ ಮಂದಿರ ನಿರ್ಮಾಣಕ್ಕೆ ವಿಳಂಬ ಮಾಡಬಾರದು ಎಂಬುದು ಭಕ್ತರ ವಾದವಾಗಿದೆ ಎಂದರು.

    ಆಲ್ ಇಂಡಿಯಾ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಸದಸ್ಯ ಮತ್ತು ಬಾಬರಿ ಮಸೀದಿ ಆ್ಯಕ್ಷನ್ ಕಮೀಟಿಯ ಸಂಯೋಜಕ ಜಫರಾಯಬ್ ಜಿಲಾನಿ, ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದು ಎಂಬ ವಾದ ನಮ್ಮದಾಗಿತ್ತು. ನಮ್ಮ ಅಭಿಪ್ರಾಯಗಳನ್ನು ನಾವು ಸಂಧಾನದ ಕಮಿಟಿ ಮುಂದೆಯೇ ಹೇಳುತ್ತೇವೆ. ಹಾಗಾಗಿ ಹೆಚ್ಚು ಮಾತನಾಡಲಾರೆ ಎಂದು ತಿಳಿಸಿದ್ದಾರೆ.

    ಹಿಂದೂ ಮಹಾಸಭಾದ ಮುಖಂಡ ಸ್ವಾಮಿ ಚಕ್ರಪಾಣಿ ಮಾತನಾಡಿ, ಸುಪ್ರೀಂ ಆದೇಶವನ್ನು ಸ್ವಾಗತಿಸುತ್ತೇವೆ. ನಾವು ಸಕಾರಾತ್ಮಕ ಯೋಚನೆಗಳನ್ನು ಹೊಂದಿದ್ದು, ನ್ಯಾಯಾಲಯ ನೇಮಿಸಿದ ಕಮಿಟಿಯಲ್ಲಿ ರವಿಶಂಕರ್ ಗೂರೂಜಿಗಳ ಹೆಸರನ್ನು ನಿರ್ದೇಶನ ಮಾಡಿದ್ದಕ್ಕೆ ಖುಷಿಯಾಗಿದೆ. ಹಿಂದೂ ಮತ್ತು ಮುಸ್ಲಿಮರು ಜೊತೆಯಾಗಿ ಕೆಲಸ ಮಾಡುತ್ತೇವೆ ಎಂಬ ವಿಶ್ವಾಸ ನನಗಿದೆ ಎಂದರು.

    ನಿರ್ಮೋಹಿ ಅಖಾರದ ಮಹಾಂತ ಸೀತಾರಾಮ ದಾಸ್ ಪ್ರತಿಕ್ರಿಯಿಸಿ, ಈ ನಿರ್ಣಯದ ಮೇಲೆ ಯಾವುದೇ ರಾಜಕೀಯ ಪ್ರಭಾವ ಬೀರದರಲಿ ಎಂದು ನ್ಯಾಯಾಲಯ ನಿರ್ದೇಶನ ಮಾಡಿರುವ ಸಮಿತಿಯಲ್ಲಿ ಸಾಂವಿಧಾನಿಕ ಸದಸ್ಯರ ನೇಮಕವಾಗಲಿ ಎಂಬ ಆಶಯ ನಮ್ಮದಿತ್ತು. ಆದರೆ ನ್ಯಾಯಾಲಯ ಶ್ರೀ ರವಿಶಂಕರ್ ಗೂರೂಜಿ ಅವರನ್ನು ನೇಮಿಸಿದ್ದರಿಂದ ಕೆಲವು ತೊಡಕಗಳು ಉಂಟಾಗುವ ಸಾಧ್ಯತೆಗಳಿವೆ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಗಾಂಧೀಜಿ ಪ್ರತಿಕೃತಿಗೆ ಗುಂಡಿಕ್ಕಿದ್ದ ಹಿಂದೂ ಮಹಾಸಭಾ ನಾಯಕಿ ಅರೆಸ್ಟ್

    ಗಾಂಧೀಜಿ ಪ್ರತಿಕೃತಿಗೆ ಗುಂಡಿಕ್ಕಿದ್ದ ಹಿಂದೂ ಮಹಾಸಭಾ ನಾಯಕಿ ಅರೆಸ್ಟ್

    ಅಲಿಘಡ: ಮಹಾತ್ಮ ಗಾಂಧೀಜಿಯವರ ಪ್ರತಿಕೃತಿಗೆ ಗುಂಡಿಟ್ಟು ಸಂಭ್ರಮಾಚರಣೆ ನಡೆಸಿದ್ದ ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆರನ್ನು ಪೊಲೀಸರು ಬಂಧಿಸಿದ್ದಾರೆ.

    ಘಟನೆ ನಡೆದ ದಿನದ ಬಳಿಕ ನಾಪತ್ತೆಯಾಗಿದ್ದ ಹಿಂದೂ ಮಹಾಸಭಾ ನಾಯಕಿ ಶಕುನ್ ಪಾಂಡೆಯನ್ನು ಪೊಲೀಸರು ಪತ್ತೆ ಮಾಡಿ ಬಂಧನ ಮಾಡಿದ್ದಾರೆ. ಅಲ್ಲದೇ ಆಕೆಯ ಪತಿ ಅಶೋಕ್ ಪಾಂಡ್ಯರನ್ನು ಕೂಡ ಪ್ರಕರಣದಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಜನವರಿ 30 ರಂದು ನಾಥೂರಾವ್ ಗೋಡ್ಸೆ ಗಾಂಧೀಜಿ ಅವರನ್ನು ಹತ್ಯೆ ಮಾಡಿದ್ದ ಸನ್ನಿವೇಶವನ್ನು ಮರು ನಿರ್ಮಿಸಿದ್ದರು, ಅಲ್ಲದೇ ಆಟಿಕೆ ಗನ್ ಮೂಲಕ ಗಾಂಧೀಜಿ ಅವರ ಪ್ರತಿಕೃತಿಗೆ ಗುಂಡಿಟ್ಟು ಪೋಸ್ ಕೊಟ್ಟಿದ್ದರು. ಅಲ್ಲದೇ ಮಾಧ್ಯಮಗಳೊಂದಿಗೆ ಮಾತನಾಡಿ, ನಾನು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದು, ದಸರಾ ದಿನದಂದು ರಾವಣನನ್ನು ಸುಟ್ಟು ಸಂಭ್ರಮ ಪಡುವಂತೆ ಇಂದು ಕೂಡ ನಡೆಸಲಾಯಿತು ಎಂದು ತಿಳಿಸಿದ್ದರು. ಈ ವೇಳೆ ಸಂಘಟನೆಯ ಕಾರ್ಯಕರ್ತರಿಗೆ ಗಾಂಧೀಜಿ ಅವರ ಸಾವನ್ನಪ್ಪಿದ ದಿನವನ್ನು ಶೌರ್ಯ ದಿನ ಎಂದು ಆಚರಣೆ ಮಾಡಿ ಸಿಹಿ ಕೂಡ ಹಂಚಿದ್ದರು.

    ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು 12 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದರು. ಅಲ್ಲದೇ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದ ಮೂವರನ್ನು ಕೂಡಲೇ ವಶಕ್ಕೆ ಪಡೆದಿದ್ದರು.

    ಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಗಾಂಧೀಜಿ ಭಾವಚಿತ್ರಕ್ಕೆ ಗುಂಡಿಟ್ಟು ಗೋಡ್ಸೆ ಅಮರ್ ರಹೇ ಎಂದ ಹಿಂದೂ ಮಹಾಸಭಾ ನಾಯಕಿ!

    ಗಾಂಧೀಜಿ ಭಾವಚಿತ್ರಕ್ಕೆ ಗುಂಡಿಟ್ಟು ಗೋಡ್ಸೆ ಅಮರ್ ರಹೇ ಎಂದ ಹಿಂದೂ ಮಹಾಸಭಾ ನಾಯಕಿ!

    ಆಗ್ರಾ: ಹಿಂದೂ ಮಹಾಸಭಾ ಸಂಘಟನೆಯ ರಾಷ್ಟ್ರೀಯ ಕಾರ್ಯದರ್ಶಿ ಪೂಜಾ ಶಕುನ್ ಪಾಂಡೆ ಮಹಾತ್ಮ ಗಾಂಧೀಜಿ ಭಾವಚಿತ್ರಕ್ಕೆ ಅಟಿಕೆ ಗನ್ ಮೂಲಕ ಗುಂಡಿಟ್ಟಿದ್ದು, ಈ ಮೂಲಕ ಗಾಂಧೀಜಿ ಅವರು ಸಾವನ್ನಪ್ಪಿದ ದಿನದಂದು ಸಂಭ್ರಮಿಸಿದ್ದಾರೆ.

    ಗಾಂಧೀಜಿ ಅವರ ಸಾವನ್ನಪ್ಪಿದ ದಿನವನ್ನು ಶೌರ್ಯ ದಿನ ಎಂದು ಆಚರಣೆ ಮಾಡಿ ಸಂಭ್ರಮಿಸಿದ ಹಿಂದೂ ಮಹಾಸಭಾ ಸಂಘಟನೆಯ ಕಾರ್ಯಕರ್ತರು ಎಲ್ಲರಿಗೂ ಸಿಹಿ ನೀಡಿ ಸಂತಸ ಹಂಚಿಕೊಂಡಿದ್ದಾರೆ.

    ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಪಾಂಡೆ, ನಾನು ಇಂದು ಹೊಸ ಸಾಂಪ್ರದಾಯಕ್ಕೆ ನಾಂದಿ ಹಾಡಿದ್ದು, ದಸರಾ ದಿನದಂದು ರಾವಣನನ್ನು ಸುಟ್ಟು ಸಂಭ್ರಮ ಪಡುವಂತೆ, ಇಂದು ಕೂಡ ನಡೆಸಲಾಯಿತು ಎಂದು ತಿಳಿಸಿದ್ದಾರೆ. ಅಲ್ಲದೇ ಇದೇ ವೇಳೆ ನಾಥೂರಾಮ್ ಗೋಡ್ಸೆಯ ಭಾವಚಿತ್ರಕ್ಕೆ ಮಾಲಾರ್ಪಣೆ ಕೂಡ ಮಾಡಿ `ಗೋಡ್ಸೆ ಅಮರ್ ರಹೇ’ ಎಂದು ಘೋಷಣೆ ಕೂಗಿದ್ದಾರೆ.

    1948 ಜನವರಿ 30 ರಂದು ನಾಥೂರಾವ್ ಗೋಡ್ಸೆ ಮಹಾತ್ಮ ಗಾಂಧೀಜಿ ಅವರಿಗೆ ಗುಂಡಿಟ್ಟಂತೆ ಪೂಜ ಶಕುನ್ ಪಾಂಡೆ ಕೂಡ ಘಟನೆಯನ್ನ ಅನುಕರಣೆ ಮಾಡಿದರು. ಕೇಸರಿ ಬಟ್ಟೆಯನ್ನು ಧರಿಸಿ ಗಾಂಧೀಜಿ ಅವರ ಭಾವಚಿತ್ರಕ್ಕೆ ಶೂಟ್ ಮಾಡುತ್ತಿರುವ ದೃಶ್ಯ ಕಾಣಬಹುದಾಗಿದೆ. ದೇಶಾದ್ಯಂತ ಗಾಂಧೀಜಿ ಅವರ 71ನೇ ಹುತಾತ್ಮ ದಿನಾಚರಣೆಯ ಸಂದರ್ಭದಲ್ಲಿ ಹಿಂದೂ ಮಹಾಸಭಾ ದೇಶ ವಿಭಜನೆ ಆಗಲು ಗಾಂಧೀಜಿಯೇ ಎಂದು ಆರೋಪಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv