Tag: Hindu-Muslim

  • ಮಳೆಯಿಂದ ಅಡ್ಡಿ – ಒಂದೇ ವೇದಿಕೆಯಲ್ಲಿ ನೆರವೇರಿತು ಹಿಂದೂ-ಮುಸ್ಲಿಂ ಜೋಡಿಯ ವಿವಾಹ

    ಮಳೆಯಿಂದ ಅಡ್ಡಿ – ಒಂದೇ ವೇದಿಕೆಯಲ್ಲಿ ನೆರವೇರಿತು ಹಿಂದೂ-ಮುಸ್ಲಿಂ ಜೋಡಿಯ ವಿವಾಹ

    ಮದುವೆ ಅಂದ್ರೆ ಕೇವಲ ಎರಡು ಜೀವಗಳು ಒಂದಾಗುವುದಲ್ಲ, ಎರಡು ಕುಟುಂಬ, ಎರಡು ಹೃದಯಗಳು, ಎರಡು ಭಿನ್ನ ಪರಂಪರೆಗಳು ಒಂದಾಗುವ ಕ್ಷಣ. ಇಂತಹ ವಿವಾಹ ಇದೀಗ ಹಿಂದೂ-ಮುಸ್ಲಿಮರ (Hindu Muslims) ಸಾಮರಸ್ಯ ಬೆಸೆಯುವ ವೇದಿಕೆಯಾಗಿ ಗುರುತಿಸಿಕೊಂಡ ಅಪರೂಪದ ಘಟನೆ ಪುಣೆಯಲ್ಲಿ ನಡೆದಿದೆ.

    ಹೌದು. ಭಾರಿ ಮಳೆ ಹಿನ್ನೆಲೆಯಲ್ಲಿ ಮುಸ್ಲಿಂ ಆರತಕ್ಷತೆ ಸಮಾರಂಭದ ವೇದಿಕೆಯಲ್ಲೇ ಹಿಂದೂ (Hindu) ದಂಪತಿಯೂ ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ಘಟನೆ ನಡೆದಿದ್ದು, ಮಾನವೀಯತೆಗೆ ಸಾಕ್ಷಿಯಾಗಿದೆ. ಇದನ್ನೂ ಓದಿ: ಬ್ರಿಜೇಶ್ ಚೌಟ ಸೇರಿ ಭಾರತ ಸಂಸದರ ನಿಯೋಗ ಆಗಮಿಸುವ ಹೊತ್ತಲ್ಲೇ ಮಾಸ್ಕೋ ಏರ್‌ಪೋರ್ಟ್‌ನಲ್ಲಿ ಡ್ರೋನ್‌ ದಾಳಿ!

    ಪುಣೆಯ ಅಲಂಕಾರನ್ ಲಾನ್ಸ್ ಎಂಬ ಬಯಲು ಮೈದಾನದಲ್ಲಿ ಮಂಗಳವಾರ ಸಂಜೆ 6.56ಕ್ಕೆ ನಡೆಯಬೇಕಿದ್ದ ಹಿಂದೂ ಕುಟುಂಬದ ಸಂಕ್ರತಿ ಕವಡೆ ಮತ್ತು ನರೇಂದ್ರ ಗಲಾಂಡೆ ಅವರ ವಿವಾಹ (Hindu Weddin) ಸಂಭ್ರಮಕ್ಕೆ ಎಲ್ಲ ಸಿದ್ಧತೆಗಳು ನಡೆದಿತ್ತು. ಹಿಂದೂ ಸಂಪ್ರದಾಯದಂತೆ ಮದುವೆ ನಡೆಯಲು ವೇದಿಕೆ ಸಜ್ಜಾಗಿತ್ತು, ಮಂತ್ರಗಳು ಘೋಷಗಳಷ್ಟೆ ಬಾಕಿ ಇತ್ತು. ಮದುವೆಗೆ ಬಂದ ಅತಿಥಿಗಳು ಕೂಡ ಮದುವೆ ಮನೆಯಲ್ಲಿ ಸಂತಸದಿಂದ ಇದ್ದರು.

    ಅಷ್ಟರಲ್ಲಿ ಸಂಭವಿಸಿದ ಭಾರೀ ಮಳೆಯಿಂದ ಬಂಧುಗಳಲ್ಲಿ ಗೊಂದಲ ಸೃಷ್ಟಿಯಾಯಿತು. ಅಲ್ಲದೇ ಮದುವೆ ಸಂಪ್ರದಾಯಗಳಿಗೂ ಮಳೆ ಅಡ್ಡಿಯಾಯ್ತು. ಇದರಿಂದ ಮದುವೆ ನಿಂತೇ ಹೋಯ್ತು ಅನ್ನೋ ಆತಂಕ ಶುರುವಾಗಿತ್ತು. ಆದ್ರೆ ಮುಸ್ಲಿಂ ಕುಟುಂಬವೊಂದರ ನೆರವಿನಿಂದ ಹಿಂದೂ ವಧು-ವರ ದಾಂಪತ್ಯ ಜೀವನಕ್ಕೆ ಕಾಲಿಡುವಂತಾಯಿತು. ಇದನ್ನೂ ಓದಿ: ಸಂತ್ರಸ್ತೆ ಜೊತೆ ವಿವಾಹ; ಪೋಕ್ಸೊ ಕೇಸ್‌ ಅಪರಾಧಿಯನ್ನು ಜೈಲು ಶಿಕ್ಷೆಯಿಂದ ಪಾರು ಮಾಡಿದ ಸುಪ್ರೀಂ

    ಮಳೆ ಶುರುವಾದ ತಕ್ಷಣ ಅಲಂಕಾರನ್ ಲಾನ್ಸ್ ಎಂಬ ಬಯಲು ಮೈದಾನದ ಸಮೀಪದಲ್ಲಿದ್ದ ಸಭಾಂಗಣವೊಂದರಲ್ಲಿ ಮುಸ್ಲಿಂ ಕುಟುಂಬದ ಮಾಹೀನ್ ಮತ್ತು ಮೊಹ್ಸಿನ್ ಕಾಜಿ ಅವರ ವಿವಾಹ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಗಲಾಂಡೆ ಪಾಟೀಲ್ ಕುಟುಂಬದ ಸದಸ್ಯರೊಬ್ಬರು ಸಪ್ತಪದಿ ಆಚರಣೆ ಪೂರ್ಣಗೊಳಿಸಲು ಸ್ವಲ್ಪ ಸಮಯದವರೆಗೆ ಸಭಾಂಗಣ ಬಳಸಲು ಅವಕಾಶ ಕೊಡುವಂತೆ ಕೇಳಿಕೊಂಡರು. ಇದಕ್ಕೆ ಮುಸ್ಲಿಂ ಕುಟುಂಬಸ್ಥರೂ ಒಪ್ಪಿ ಮದುವೆ ಆಚರಣೆಗೆ ಅವಕಾಶ ಮಾಡಿಕೊಟ್ಟರು.

    ಬಳಿಕ ಪರಸ್ಪರ ಸಂಪ್ರದಾಯ ಮತ್ತು ಪೂರ್ಣ ಗೌರವದ ಆಚರಣೆಗಳೊಂದಿಗೆ ಹಿಂದೂ – ಮುಸ್ಲಿಂ ಜೋಡಿಯ ವಿವಾಹ ನೆರವೇರಿತು. ಬಳಿಕ ಎರಡೂ ಸಮುದಾಯದ ಜನರು ಜಂಟಿಯಾಗಿ ಔತಣ ಕೂಟ ನಡೆಸಿದರು. ಇದನ್ನೂ ಓದಿ: Delhi Election| ಆಪ್‌ಗಿಂತ ಮೂರು ಪಟ್ಟು ಹೆಚ್ಚು ಖರ್ಚು ಮಾಡಿತ್ತು ಕಾಂಗ್ರೆಸ್‌ – 68 ಮಂದಿಗೆ ಬಿಜೆಪಿಯಿಂದ ತಲಾ 25 ಲಕ್ಷ

  • ಹಿಂದೂ ಯುವಕ, ಮುಸ್ಲಿಂ ಯುವತಿಯ ಪ್ರೇಮವಿವಾಹ – ರಕ್ಷಣೆ ಕೋರಿ ಪೊಲೀಸ್ ಮೊರೆ ಹೋದ ನವಜೋಡಿ

    ಹಿಂದೂ ಯುವಕ, ಮುಸ್ಲಿಂ ಯುವತಿಯ ಪ್ರೇಮವಿವಾಹ – ರಕ್ಷಣೆ ಕೋರಿ ಪೊಲೀಸ್ ಮೊರೆ ಹೋದ ನವಜೋಡಿ

    ಚಿಕ್ಕಬಳ್ಳಾಪುರ: ಪ್ರೀತಿಗೆ ಜಾತಿ, ಧರ್ಮದ ಗಡಿ ಇಲ್ಲ ಎಂಬಂತೆಯೇ ಇಲ್ಲೊಂದು ಜೋಡಿ ಜಾತಿ ಧರ್ಮಗಳ ಎಲ್ಲೆ ಮೀರಿ ಪ್ರೇಮ ವಿವಾಹವಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ(Chikkaballapura) ನಡೆದಿದೆ.

    ಮುಸ್ಲಿಂ(Muslim) ಯುವತಿಯು ಹಿಂದೂ(Hindu) ಯುವಕನನ್ನು ಪ್ರೀತಿಸಿ ಪ್ರೇಮವಿವಾಹವಾಗಿದ್ದು(Love Marriage), ಈ ವಿವಾಹಕ್ಕೆ ಸಹಜವಾಗಿಯೇ ಪೋಷಕರ ವಿರೋಧ ವ್ಯಕ್ತವಾಗಿದೆ. ಇದೀಗ ರಕ್ಷಣೆ ಕೋರಿ ನವಜೋಡಿಯು ಪೊಲೀಸರ ಮೊರೆ ಹೋಗಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನವ್ರಿಗೆ ಪಾಕ್‌ ಫ್ರೀ ವೀಸಾ ಕೊಡುತ್ತೆ, ಮಂಜುನಾಥ್ ನೋಡ್ಕೊಂಡು ಬರಲಿ: ಯತ್ನಾಳ್ ಕಿಡಿ

    ಯಾಪಲಹಳ್ಳಿಯ(Yapalahalli) ನಿವಾಸಿ ಹರೀಶ್ ಬಾಬು ಹಾಗೂ ಗುಡಿಬಂಡೆ ತಾಲೂಕಿನ ಸೋಮೇಶ್ವರ(Someshwara) ಗ್ರಾಮದ ಯುವತಿ ನಜ್ಮಾ ಪ್ರೀತಿಸಿ ಮದುವೆಯಾಗಿದ್ದಾರೆ. ಇಬ್ಬರದ್ದು ಬೇರೆ ಬೇರೆ ತಾಲೂಕಾದರೂ ಚಿಕ್ಕಬಳ್ಳಾಪುರ ನಗರದಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುವಾಗ ಪರಿಚಯ ಆಗಿದೆ. ಪರಿಚಯ ಸ್ನೇಹಕ್ಕೆ ತಿರುಗಿ, ಸ್ನೇಹ ಪ್ರೀತಿಯಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ಭಯೋತ್ಪಾದನಾ ಕೇಂದ್ರಗಳಿಗೆ ನೀರು ಗೊಬ್ಬರ ಹಾಕಿ ಪೋಷಿಸ್ತಿದೆ: ಸಿಟಿ ರವಿ

    ಇಬ್ಬರು ಪ್ರೀತಿಯ ವಿಚಾರವನ್ನು ಮನೆಯವರಿಗೆ ತಿಳಿಸಿದ್ದರು. ಇಬ್ಬರದ್ದೂ ಬೇರೆ ಬೇರೆ ಧರ್ಮವಾದ ಕಾರಣ ಮನೆಯವರು ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಪ್ರೀತಿ ವಿಚಾರ ತಿಳಿಯುತ್ತಿದ್ದಂತೆ ಯುವತಿಯನ್ನ ಕೆಲಸಕ್ಕೆ ಕಳುಹಿಸದೇ ಮನೆಯಲ್ಲೇ ಉಳಿಸಿಕೊಂಡಿದ್ದಾರೆ. ವಿರೋಧದ ನಡುವೆಯೇ ಮನೆಯಿಂದ ಹೊರಬಂದ ನಜ್ಮಾ, ಹರೀಶ್ ಬಾಬು ಜೊತೆ ವಿವಾಹವಾಗಿದ್ದಾರೆ. ಇದನ್ನೂ ಓದಿ: ಚಿನ್ನಸ್ವಾಮಿ ಮೈದಾನದಲ್ಲಿ ಮಕ್ಕಳಂತೆ ಈಜಾಡಿದ ಡೇವಿಡ್‌!

    ಕಳೆದ 4 ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದು, ಇಬ್ಬರಿಗೂ ವ್ಯಕ್ತಿತ್ವ ಇಷ್ಟವಾಗಿ ಮದುವೆ ಆಗಲು ತೀರ್ಮಾನಿಸಿದ್ದರು. ಮದುವೆಗೆ ಮನೆಯವರು ಒಪ್ಪದ ಕಾರಣ ಇಬ್ಬರು ಪ್ರೇಮವಿವಾಹವಾಗಿದ್ದರು. ಈ ಮದುವೆಗೆ ಯುವತಿ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ.

    ವಿರೋಧದ ಬೆನ್ನಲ್ಲೇ ನವಜೋಡಿ ರಕ್ಷಣೆ ಕೋರಿ ಚಿಕ್ಕಬಳ್ಳಾಪುರ ಎಸ್ಪಿ ಕುಶಲ್ ಚೌಕ್ಸಿ ಮೊರೆ ಹೋಗಿದ್ದಾರೆ. ಅಂತರ್ ಧರ್ಮ ಪ್ರೇಮವಿವಾಹದ ಸೂಕ್ಷ್ಮತೆಯನ್ನ ಅರಿತ ಎಸ್ಪಿ ಕುಶಲ್ ಚೌಕ್ಸಿ ಇಬ್ಬರನ್ನ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಕಳುಹಿಸಿದ್ದು, ಯುವಕ ಯುವತಿಯ ತಂದೆ ತಾಯಿಯನ್ನ ಕರೆಸಿ ವಿಚಾರ ಮಾಡುವಂತೆ ತಿಳಿಸಿದ್ದರು. ಇದನ್ನೂ ಓದಿ: ಮನೆಗಳ್ಳತನ ಮಾಡುತ್ತಿದ್ದ ಕುಖ್ಯಾತ ಕಳ್ಳ ಅರೆಸ್ಟ್ – ಚಿನ್ನಾಭರಣ ಸೇರಿ 7.89 ಲಕ್ಷ ಮೌಲ್ಯದ ವಸ್ತು ಜಪ್ತಿ

    ಠಾಣೆಗೆ ಬಂದ ಯುವತಿ ಪೋಷಕರು ಹಾಗೂ ಸಂಬಂಧಿಕರು ಯುವಕನನ್ನ ಬಿಟ್ಟು ಬರುವಂತೆ ಬೇಡಿಕೊಂಡಿದ್ದರು. ಇದಕ್ಕೆ ಯುವತಿ ಒಪ್ಪಿರಲಿಲ್ಲ. ಹೀಗಾಗಿ ಎರಡು ಕಡೆಯವರನ್ನ ಕರೆಸಿ ಪೊಲೀಸರು ವಿಚಾರಣೆ ಮಾಡಿದ್ದು, ಯುವತಿ ಪೋಷಕರಿಂದ ಮುಚ್ಚಳಿಕೆ ಬರೆಸಿಕೊಂಡು ನವಜೋಡಿಗೆ ಯಾವುದೇ ತೊಂದರೆ ಮಾಡದಂತೆ ತಿಳಿ ಹೇಳಿ ಕಳುಹಿಸಿದ್ದಾರೆ.

  • ಮಸೀದಿ ಆವರಣದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ; ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರಿದ ಹಬ್ಬ

    ಮಸೀದಿ ಆವರಣದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ; ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರಿದ ಹಬ್ಬ

    ಕೊಪ್ಪಳ: ರಾಜ್ಯದಲ್ಲಿ ಗಣೇಶ ಹಬ್ಬದ (Ganesha Festival) ಸಂಭ್ರಮ ಮನೆ ಮಾಡಿದೆ. ಈ ನಡುವೆ ಕೊಪ್ಪಳದಲ್ಲಿ ಮಸೀದಿ ಆವರಣದಲ್ಲೇ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವ ಮೂಲಕ ಸಾರ್ವಜನಿಕರು ಭಾವೈಕ್ಯತೆ ಸಂದೇಶ ಸಾರಿದ್ದಾರೆ.

    ಕೊಪ್ಪಳ (Koppala) ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮಸಾಗರ ಗ್ರಾಮದಲ್ಲಿ ಹಿಂದೂ-ಮುಸ್ಲಿಮರು (Hindu Muslim) ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಿದ್ದಾರೆ. ಮಸೀದಿ ಆವರಣದಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡುವ ಮೂಲಕ ಭಾವೈಕ್ಯತೆ ಸಾರಿದ್ದಾರೆ. ಇದನ್ನೂ ಓದಿ: Manipur Violence | ಎರಡು ಸಮುದಾಯಗಳ ಗುಂಪಿನ ನಡುವೆ ಗುಂಡಿನ ಚಕಮಕಿ – ಐವರು ಸಾವು

    ಕಳೆದ ಮೂರು ವರ್ಷಗಳಿಂದ ಇಲ್ಲಿ ಹಿಂದೂ-ಮುಸ್ಲಿಂ ಸಮುದಾಯದ ಜನ ಒಟ್ಟಿಗೆ ಸೇರಿ ಮಸೀದಿ ಆವರಣದಲ್ಲಿ ಮೂರ್ತಿ ಪ್ರತಿಷ್ಠಾಪಿಸಿ ಹಬ್ಬ ಆಚರಿಸುತ್ತಾ ಬರುತ್ತಿದ್ದಾರೆ. ಮುಸ್ಲಿಂ ಬಾಂಧವರೇ 5 ದಿನಗಳ ಕಾಲ ಪೂಜಾ ಕೈಂಕರ್ಯವನ್ನು ನೆರವೇರಿಸಲಿದ್ದಾರೆ. ಗಣೇಶ ವಿಸರ್ಜನೆಗೂ ಮುನ್ನಾ ದಿನ ಅನ್ನಸಂತರ್ಪಣೆ ನಡೆಯಲಿದ್ದು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೂ ನೆರವೇರಲಿವೆ ಎಂದು ಆಯೋಜಕರು ತಿಳಿಸಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಗಣೇಶೋತ್ಸವದ ದಿನ ನಡೆಯಬೇಕಿದ್ದ ಈದ್ ಮಿಲಾದ್ ಮೆರವಣಿಗೆ ಮೂಂದೂಡಿಕೆ!

    ಬೆಳಗಾವಿ: 2.21 ಲಕ್ಷ ಹುಣಸೆ ಬೀಜ ಬಳಸಿ ಮೂರ್ತಿ ತಯಾರು
    ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ತಯಾರಿಕೆಯಲ್ಲಿ ಹೆಸರುವಾಸಿಯಾಗಿರುವ ಬೆಳಗಾವಿ ಹಳೇ ಗಾಂಧಿನಗರದ ಸೃಜನಶೀಲ ಶಿಲ್ಪಿ ಸುನೀಲ್ ಸಿದ್ದಪ್ಪ ಆನಂದಚೆ ಈ ವರ್ಷ 2,21,111 ಹುಣಸೆ ಬೀಜಗಳನ್ನು ಬಳಸಿ ಭವ್ಯ ಪರಿಸರ ಸ್ನೇಹಿ ಗಣೇಶ ಮೂರ್ತಿ ರಚಿಸಿದ್ದು ವಿಶೇಷ ಆಕರ್ಷಣೆಗೆ ಕಾರಣವಾಗಿದೆ. ಸುನೀಲ್‌, ಕಳೆದ ಅನೇಕ ವರ್ಷಗಳಿಂದ ಜೇಡಿ ಮಣ್ಣು, ಹುಲ್ಲಿನಿಂದ ಗಣೇಶನ ವಿಗ್ರಹಗಳನ್ನು ತಯಾರಿಸುವಲ್ಲಿ ಹೆಸರುವಾಸಿಯಾಗಿದ್ದಾರೆ. ಈ ವರ್ಷ ಮತ್ತೊಂದು ಹೆಜ್ಜೆ ಮುಂದಿಟ್ಟು ಮರುಬಳಕೆಯ ದಿನಪತ್ರಿಕೆಗಳು ಮತ್ತು ಕಾರ್ಡ್ಬೋರ್ಡ್, ಹುಲ್ಲಿನ ಸಹಾಯದಿಂದ ಹೆರಳವಾದ ಹುಣಸೆ ಬೀಜಗಳನ್ನು ಉಪಯೋಗಿಸಿ 8 ಅಡಿ ಎತ್ತರದ ಗಣೇಶ ಮುರ್ತಿ ನಿರ್ಮಿಸಿದ್ದಾರೆ.

    ದಿನ ನಿತ್ಯದ ತನ್ನ ಇತರೆ ಕೆಲಸಗಳ ಮಧ್ಯ ಒಂದೆರಡು ಗಂಟೆ ಬಿಡುವ ಮಾಡಿಕೊಂಡು ಮನೆಯವರ ಹಾಗೂ ಇತರರ ಸಹಕಾರಿಂದ ಒಂದು ತಿಂಗಳು ಕಾಲಾವಧಿಯಲ್ಲಿ ಸಾರ್ವಜನಿಕ ವೇದಿಕೆಯ ಭವ್ಯ ಮೂರ್ತಿ‌ ನಿರ್ಮಿಸಿದ್ದಾರೆ. ಇಂತಹ ಮೂರ್ತಿಗಳ ಬೇಡಿಕೆ ಹೆಚ್ಚಿದ್ದರೂ ಬಿಡುವಿಲ್ಲದ ಕಾರಣ ಪ್ರತಿವರ್ಷ ಒಂದು ಮಾತ್ರ ಮೂರ್ತಿ ರಚಿಸುತ್ತಿದ್ದಾರೆ. ಪರಿಸರ ಸ್ನೇಹಿ ಈ ವರ್ಷದ ಸುಂದರ ಮೂರ್ತಿಯನ್ನು ಬೆಳಗಾವಿ ಮಾಳಿಗಲ್ಲಿ ಪರಿಸರ ಸ್ನೇಹಿ ಯುವಕರು ಸೇರಿ ತಮ್ಮ ಓಣಿಯಲ್ಲಿ ಪ್ರತಿಷ್ಠಾಣೆ ಮಾಡಿ ಪರಿಸರ ಕಾಳಜಿ ಸಂದೇಶ ರವಾನಿಸಿದ್ದಾರೆ. ಇದನ್ನೂ ಓದಿ: ಗಣೇಶ ಹಬ್ಬದ ಪ್ರಯುಕ್ತ ಮೈಸೂರಿನಲ್ಲಿ ದಸರಾ ಆನೆಗಳಿಗೆ ವಿಶೇಷ ಪೂಜೆ

  • ಶಿವಮೊಗ್ಗವನ್ನ ಮತ್ತೊಂದು ಪಾಕಿಸ್ತಾನ ಮಾಡಲು ಸಂಚು ಮಾಡಿದ್ದಾರೆ: ಸಿ.ಟಿ ರವಿ

    ಶಿವಮೊಗ್ಗವನ್ನ ಮತ್ತೊಂದು ಪಾಕಿಸ್ತಾನ ಮಾಡಲು ಸಂಚು ಮಾಡಿದ್ದಾರೆ: ಸಿ.ಟಿ ರವಿ

    ಬೆಂಗಳೂರು: ಶಿವಮೊಗ್ಗವನ್ನು (Shivamogga) ಮತ್ತೊಂದು ಪಾಕಿಸ್ತಾನ (Pakistan) ಮಾಡಲು ಸಂಚು ಮಾಡಿದ್ದಾರೆ. ಇದನ್ನ ಖಂಡಿಸುತ್ತೇನೆ. ಕೋಮು ಶಕ್ತಿಗಳನ್ನು ರಾಜಕೀಯವಾಗಿ ಬಳಸಿಕೊಂಡು ವಿಭಜನೆ ಮಾಡಲು ಪ್ರಯತ್ನ ನಡೀತಿದೆ. ಇಂತಹ ದೇಶ ವಿರೋಧಿ ಶಕ್ತಿಗಳ ವಿರುದ್ಧ ನಾವೆಲ್ಲ ಒಂದಾಗಿ ನಿಲ್ಲಬೇಕು ಎಂದು ಬಿಜೆಪಿ ಮಾಜಿ ಸಚಿವ ಸಿ.ಟಿ ರವಿ (CT Ravi) ಕರೆ ನೀಡಿದ್ದಾರೆ.

    ಶಿವಮೊಗ್ಗದ ಗಲಭೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಶಿವಮೊಗ್ಗದ ಘಟನೆ ದುರಾದೃಷ್ಟಕರ. ಅಮಾಯಕರನ್ನು ಗುರಿಯಾಗಿಸಿಕೊಂಡು ಗಲಭೆ ಉಂಟು ಮಾಡಬೇಕೆಂಬ ಉದ್ದೇಶ ಪೂರ್ವಯೋಜಿತ ಘಟನೆ ಅನ್ನೋದು ಸ್ಪಷ್ಟವಾಗಿದೆ. ಶಿವಮೊಗ್ಗ ಜಿಲ್ಲೆ ಸೂಕ್ಷ್ಮ ಜಿಲ್ಲೆಯಾಗಿದೆ. ಇದು ಗೊತ್ತಿದ್ದೂ ಅಲ್ಲಿ ಹಿಂದೂಗಳ ಮಾರಣ ಹೋಮ ನಡೆಸಿದವನ ಆರಾಧನೆಗೆ, ಪ್ರತಿಕೃತಿ ಹಾಕುವುದಕ್ಕೆ ಜಿಲ್ಲಾಡಳಿತ ಮತ್ತು ಪೊಲೀಸರು ಯಾಕೆ ಅವಕಾಶ ಕೊಟ್ರು? ಶಿವಮೊಗ್ಗದಲ್ಲಿ ನಡೆದಿದ್ದು ಈದ್ ಮೀಲಾದೋ? ಟಿಪ್ಪು ಜಯಂತಿಯೋ? ಔರಂಗಜೇಬ್ ಜಯಂತಿಯೋ? ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ ಸ್ಲೀಪರ್ ಸೆಲ್‌ಗಳ ಅಡ್ಡವಾಗ್ತಿದೆ, ಹಿಂದೂಗಳು ಭಯದಲ್ಲಿ ಬದುಕುವಂತಾಗಿದೆ: ವೇದವ್ಯಾಸ್ ಕಾಮತ್

    ಟಿಪ್ಪು, ಔರಂಗಜೇಬ್ ಹಿಂದೂಗಳ ಮಾರಣ ಹೋಮ ನಡೆಸಿದವರು. ಟಿಪ್ಪು ಮೈಸೂರು ಒಡೆಯರ್ ಆಡಳಿತ ಒತನ ಮಾಡಿದವನು. ಕನ್ನಡ ಭಾಷೆಯ ಬದಲು, ಪರ್ಶಿಯನ್ ಭಾಷೆ ಆಡಳಿತ ಭಾಷೆಯಾಗಿ ಹೇರಿದವನು. ಅವನನ್ನು ವಿಜೃಂಭಿಸಲು ಅವಕಾಶ ಕೊಟ್ಟಿದ್ದಾರೆ. ಅಲ್ಲದೇ ಹಾಡಹಗಲೇ ತಲ್ವಾರ್ ಹಿಡಿದು ಬೆದರಿಸುವ ಕೆಲಸ ಮಾಡಿದ್ದಾರೆ. ಕಲ್ಲು ತೂರಾಟ ನಡೆಸಿದ್ದಾರೆ, ಅಲ್ಲಿ ಹಾಕಿದ್ದ ಜಿಹಾದ್ ಬರವಣಿಗೆಗಳು ಇವೆಲ್ಲವೂ ಪ್ರಚೋದಿಸುವ ಸಂಗತಿಗಳೇ ಆಗಿವೆ. ಇದೆಲ್ಲವನ್ನೂ ಮೊದಲೇ ಜಿಲ್ಲಾಡಳಿತ ತೆರವು ಮಾಡಬೇಕಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬಿಹಾರ ಜಾತಿ ಸಮೀಕ್ಷೆ ವರದಿ ಬಿಡುಗಡೆ; ಜಾತಿ ಹೆಸರಲ್ಲಿ ದೇಶ ವಿಭಜಿಸುವ ಪ್ರಯತ್ನವೆಂದು ಮೋದಿ ವಾಗ್ದಾಳಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Shivamogga: ಈದ್ ಮಿಲಾದ್ ಹಬ್ಬದ ಸಭೆಯಲ್ಲಿ ಗಲಾಟೆ – ಓರ್ವನ ಕೊಲೆಯಲ್ಲಿ ಅಂತ್ಯ

    Shivamogga: ಈದ್ ಮಿಲಾದ್ ಹಬ್ಬದ ಸಭೆಯಲ್ಲಿ ಗಲಾಟೆ – ಓರ್ವನ ಕೊಲೆಯಲ್ಲಿ ಅಂತ್ಯ

    ಶಿವಮೊಗ್ಗ: ಈದ್ ಮಿಲಾದ್ ಹಬ್ಬದ (Eid Milad Festival) ಸಂಬಂಧ ಸಮಿತಿ ರಚನೆ ವಿಚಾರದಲ್ಲಿ ಇಬ್ಬರ ನಡುವೆ ಗಲಾಟೆ ನಡೆದು, ಓರ್ವ ಯುವಕನನ್ನ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಶಿಕಾರಿಪುರದ (Shikaripura) ಕೆಹೆಚ್‌ಬಿ ಬಡಾವಣೆಯಲ್ಲಿ ನಡೆದಿದೆ.

    ಕೊಲೆಯಾದ ಯುವಕನನ್ನು ಜಾಫರ್ (32) ಎಂದು ಗುರುತಿಸಲಾಗಿದೆ. ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಭಾನುವಾರ ಮುಸ್ಲಿಂ ಮುಖಂಡರು ಸಭೆ ಕರೆದಿದ್ದರು. ಸಭೆಯಲ್ಲಿ ‌ಹಲವರು‌ ಭಾಗವಹಿಸಿದ್ದರು. ಹಬ್ಬದ ವಿಷಯ ಕುರಿತು ಚರ್ಚೆ ನಡೆಯುತ್ತಿದ್ದ ವೇಳೆ ಗಲಾಟೆ ನಡೆದಿದೆ. ಗಲಾಟೆಯಾದ ಕಾರಣ ಸಭೆಯನ್ನ ಅರ್ಧಕ್ಕೆ ಮೊಟುಕುಗೊಂಡಿದೆ. ಇದನ್ನೂ ಓದಿ: ಹೊಳೆಹೊನ್ನೂರು ಗಾಂಧಿ ಸರ್ಕಲ್‌ನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ- ಸ್ಥಳೀಯರ ಪ್ರತಿಭಟನೆ

    ಸೋಮವಾರ ಮಧ್ಯಾಹ್ನ ಗಲಾಟೆ ನಡೆದ ಯುವಕರ ನಡುವೆ ರಾಜಿ ಸಂಧಾನ ನಡೆಸಲು ಎರಡು ಗುಂಪಿನ ಯುವಕರನ್ನ ಕರೆಸಿದ್ದರು. ಆದರೆ ಮತ್ತೆ ಪುನಃ ಗಲಾಟೆ ನಡೆದು, ಜಾಫರ್ ಎಂಬಾತನ ಎದೆಗೆ ಚಾಕು ಇರಿದು‌ ಕೊಲೆ ಮಾಡಿದ್ದಾರೆ. ಇನ್ನೂ ಘಟನೆ ನಂತರ ಶಿಕಾರಿಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಸ್ನೇಹಿತನ ಮಗನನ್ನು ಅಪಹರಿಸಿ ಕೊಲೆ- ಅಪರಾಧಿಗೆ ಜೀವಾವಧಿ ಶಿಕ್ಷೆ, 3.25 ಲಕ್ಷ ರೂ. ದಂಡ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದಿನದ 24 ಗಂಟೆಯೂ ಹಿಂದೂ-ಮುಸ್ಲಿಂ ದ್ವೇಷ ಹರಡಲಾಗ್ತಿದೆ – ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ಕಿಡಿ

    ದಿನದ 24 ಗಂಟೆಯೂ ಹಿಂದೂ-ಮುಸ್ಲಿಂ ದ್ವೇಷ ಹರಡಲಾಗ್ತಿದೆ – ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ಕಿಡಿ

    ನವದೆಹಲಿ: ನಿಜವಾದ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿ ದಿನದ 24 ಗಂಟೆಯೂ ಹಿಂದೂ-ಮುಸ್ಲಿಮರ (Hindu-Muslim ನಡುವೆ ದ್ವೇಷವನ್ನು ಹರಡುತ್ತಿದೆ ಎಂದು ಕಾಂಗ್ರೆಸ್‌ (Congress) ನಾಯಕ ರಾಹುಲ್‌ ಗಾಂಧಿ (Rahul Gandhi) ವಾಗ್ದಾಳಿ ನಡೆಸಿದ್ದಾರೆ.

    ದೆಹಲಿಯ (New Delhi) ಕೆಂಪು ಕೋಟೆಯಲ್ಲಿ ʼಭಾರತ್‌ ಜೋಡೋ ಯಾತ್ರೆʼಯ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಧಾರ್ಮಿಕ ಭಿನ್ನಾಭಿಪ್ರಾಯಗಳನ್ನು ಅಸ್ತ್ರವನ್ನಾಗಿ ಬಳಸಿಕೊಂಡು ದ್ವೇಷವನ್ನು ಹರಡುತ್ತಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆಯಲ್ಲಿ ಸ್ಟಾರ್ ನಟ ಕಮಲ್ ಹಾಸನ್ ಭಾಗಿ

    ನಾನು 2,800 ಕಿಮೀ ನಡೆದಿದ್ದೇನೆ. ಆದರೆ ಯಾವುದೇ ದ್ವೇಷವನ್ನು ನೋಡಲಿಲ್ಲ. ಆದರೆ ಟಿವಿ ಆನ್ ಮಾಡಿದಾಗ, ನಾನು ಹಿಂಸೆಯನ್ನು ನೋಡುತ್ತಿದ್ದೇನೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಇದು ನರೇಂದ್ರ ಮೋದಿಯವರ ಸರ್ಕಾರವಲ್ಲ. ಇದು ಅಂಬಾನಿ ಮತ್ತು ಅದಾನಿ ಸರ್ಕಾರ. ಇಂದು ಪದವಿ ಪಡೆದ ಯುವಕರು ಪಕೋಡಾಗಳನ್ನು ಮಾರುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಶ್ರೀಕೃಷ್ಣ ಜನ್ಮಭೂಮಿ ವಿವಾದ – ಶಾಹಿ ಈದ್ಗಾ ಮಸೀದಿ ಸಮೀಕ್ಷೆಗೆ ಮಥುರಾ ಕೋರ್ಟ್ ಆದೇಶ

    ದೆಹಲಿಯಲ್ಲಿ ನಡೆದ ಭಾರತ್‌ ಜೋಡೋ ಯಾತ್ರೆಯಲ್ಲಿ ನಟ ಕಮಲ್‌ ಹಾಸನ್‌ ಕೂಡ ಪಾಲ್ಗೊಂಡಿದ್ದರು. “ದೇಶವನ್ನು ಒಗ್ಗೂಡಿಸಲು ಸಹಾಯ ಮಾಡಿ, ಒಡೆಯಬೇಡಿ” ಎಂದು ಇದೇ ವೇಳೆ ಹಾಸನ್‌ ಮನವಿ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕರ್ನಾಟಕದಲ್ಲೀಗ ಲವ್ ಜಿಹಾದ್ ಹೋರಾಟದ ಕಾವು

    ಕರ್ನಾಟಕದಲ್ಲೀಗ ಲವ್ ಜಿಹಾದ್ ಹೋರಾಟದ ಕಾವು

    ಬೆಂಗಳೂರು: ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ, ಹಲಾಲ್ ಫೈಟ್, ಹಿಜಬ್ ವಿವಾದ ಹಾಗೂ ಧರ್ಮ ದಂಗಲ್ ಕುಲುಮೆಯಲ್ಲಿರುವ ಕರ್ನಾಟಕದಲ್ಲಿ ಈಗ ಲವ್ ಜಿಹಾದ್ ಮೆಗಾ ಕ್ಯಾಂಪೇನ್ ಶುರುವಾಗಿದೆ. ಈ ಬಾರಿ ಹಿಂದೂ ಸಂಘಟನೆಗಳು (Hindu Organisations) ವಿಭಿನ್ನವಾಗಿ ಲವ್ ಜಿಹಾದ್ (Love Jihad) ವಿರುದ್ಧ ಹೋರಾಟಕ್ಕೆ ಅಖಾಡ ಸಿದ್ಧಮಾಡಿಕೊಂಡಿದೆ.

    ದೆಹಲಿಯ ಶ್ರದ್ಧಾ ವಾಕರ್ (Shraddha Walker) ಅಮಾನುಷ ಹತ್ಯೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಅಫ್ತಾಬ್ ಅಮೀನ್ ಪೂನಾವಾಲನ (Aftab Amin Poonawala) ಕ್ರೂರ ವರ್ತನೆ, ಶ್ರದ್ಧಾ ದೇಹವನ್ನು 35 ಪೀಸ್‌ಗಳಾಗಿ ಕತ್ತರಿಸಿದ್ದು ಇವೆಲ್ಲವೂ ಜನಾಕ್ರೋಶಕ್ಕೆ ಕಾರಣವಾಗಿದೆ. ಈಗ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಜಾಗೃತಿ ಮೂಡಿಸುವ ಸಲುವಾಗಿ ಹಿಂದೂ ಸಂಘನೆಗಳು ಹೊಸ ಅಭಿಯಾನ ಶುರು ಮಾಡಿವೆ. ಇದನ್ನೂ ಓದಿ: ಕುಕ್ಕೆಯಲ್ಲಿ ಮೊದಲ ಬಾರಿಗೆ ವ್ಯಾಪಾರದಿಂದ ದೂರ ಉಳಿದ ಮುಸ್ಲಿಂ ವ್ಯಾಪಾರಿಗಳು- ಸಂಘರ್ಷವಿಲ್ಲದೆ ಜಾತ್ರೆ ಸಂಪನ್ನ

    ಕರಾವಳಿ ಭಾಗದಲ್ಲಿ ಈಗಾಗಲೇ ನಾನಾ ಕಡೆ ಲವ್ ಜಿಹಾದ್ (Love Jihad) ಜಾಗೃತಿಗಾಗಿ ಪೋಸ್ಟರ್ ಬ್ಯಾನರ್ ಅಳವಡಿಕೆ ಮಾಡಲಾಗಿದೆ. ಹಿಂದೂ ಹುಡುಗಿ ಶ್ರದ್ಧಾ ವಾಕಾರ್ ದೇಹವನ್ನು 35 ಪೀಸ್ ಮಾಡಲಾಯ್ತು. ಇದಕ್ಕೆ ಕಾರಣ ಲವ್ ಜಿಹಾದ್. ನೀವು ಈಕೆಯಂತೆ ಈ ಜಾಲಕ್ಕೆ ಬಲಿಯಾಗಬೇಡಿ ಅಂತಾ ಪೋಸ್ಟರ್ ಅಳವಡಿಸಲಾಗಿದೆ. ಇದನ್ನೂ ಓದಿ: ಶ್ರದ್ಧಾ ಹತ್ಯೆ ಮಾಡಿದ್ದು ನಾನೇ, ಆ ಬಗ್ಗೆ ಯಾವುದೇ ಪಶ್ಚಾತ್ತಾಪವಿಲ್ಲ – ಪಾಲಿಗ್ರಾಫ್ ಪರೀಕ್ಷೆಯಲ್ಲಿ ಅಫ್ತಾಬ್ ಹೇಳಿಕೆ

    ಲವ್ ಜಿಹಾದ್ ಜಾಗೃತಿ ಮೂಡಿಸಲು ಇದೇ ವಿಚಾರವಾಗಿ ಹೋರಾಟದ ರೂಪುರೇಷೆಗೂ ಹಿಂದೂ ಸಂಘಟನೆಗಳು ಅಖಾಡ ಸಿದ್ಧಪಡಿಸಿಕೊಂಡಿವೆ. ರಾಜ್ಯದ ನಾನಾ ಕಡೆಗಳಲ್ಲಿ ಪೋಸ್ಟರ್ ಅಳವಡಿಸಲು ಚಿಂತನೆ ನಡೆಸಿವೆ. ಲವ್ ಜಿಹಾದ್ ವಿರುದ್ಧ ವ್ಯಾಪಕ ಹೋರಾಟ ನಡೆಸುವ ಬಗ್ಗೆಯೂ ಸಂಘಟನೆಗಳು ಪ್ಲ್ಯಾನ್‌ ಮಾಡಿವೆ.

    Live Tv
    [brid partner=56869869 player=32851 video=960834 autoplay=true]

  • ಬ್ರಿಟನ್‌ನಲ್ಲಿ ಹಿಂದೂ-ಮುಸ್ಲಿಂ ಉದ್ವಿಗ್ನತೆಗೆ ಭಾರತದ 500 ಟ್ವಿಟ್ಟರ್‌ ಖಾತೆಗಳು ಕಾರಣ!

    ಬ್ರಿಟನ್‌ನಲ್ಲಿ ಹಿಂದೂ-ಮುಸ್ಲಿಂ ಉದ್ವಿಗ್ನತೆಗೆ ಭಾರತದ 500 ಟ್ವಿಟ್ಟರ್‌ ಖಾತೆಗಳು ಕಾರಣ!

    ಬ್ರಿಟನ್: ಯುಕೆಯಲ್ಲಿ ಹಿಂದೂ-ಮುಸ್ಲಿಂ (Hindu-Muslim) ಉದ್ವಿಗ್ನತೆ ಸೃಷ್ಟಿಗೆ ಭಾರತದ 500 ಟ್ವಿಟ್ಟರ್‌ ಖಾತೆಗಳು ಕಾರಣವಾಗಿವೆ ಎಂದು ಸಂಶೋಧನೆಯ ರಿಪೋರ್ಟ್‌ವೊಂದನ್ನು ಉಲ್ಲೇಖಿಸಿ ಬ್ಲೂಮ್‌ಬರ್ಗ್‌ ನ್ಯೂಸ್‌ ವರದಿ ಮಾಡಿದೆ.

    ರಟ್ಜರ್ಸ್ ವಿಶ್ವವಿದ್ಯಾನಿಲಯ ಪ್ರಕಾರ, ಲೀಸೆಸ್ಟರ್‌ನಲ್ಲಿ ಗಲಭೆಗಳ ಸಂದರ್ಭದಲ್ಲಿ 500 ಟ್ವಿಟ್ಟರ್‌ (Twitter) ಖಾತೆಗಳಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಮೀಮ್‌ಗಳು ಮತ್ತು ಬೆಂಕಿಯಿಡುವ ಚಿತ್ರಗಳನ್ನು ಹರಿಬಿಡಲಾಗಿತ್ತು ಎಂದು ತಿಳಿಸಿದೆ. ಇದನ್ನೂ ಓದಿ: ಇರಾನ್‍ನಲ್ಲಿ ಹೆಚುತ್ತಿರುವ ಹಿಜಬ್ ವಿರೋಧಿ ಪ್ರತಿಭಟನೆ- ಮೆಟ್ರೋದಲ್ಲಿ ಮಹಿಳೆಯರನ್ನು ಥಳಿಸಿದ ಪೊಲೀಸರು

    ಆಗಸ್ಟ್ 27 ರಂದು ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯದ ನಂತರದ ದಿನಗಳಲ್ಲಿ ನೂರಾರು ಜನರು ಬೀದಿಗಿಳಿದರು. ಕೆಲವು ಗಲಭೆಕೋರರು ಕೋಲುಗಳು ಮತ್ತು ಲಾಠಿಗಳನ್ನು ಹಿಡಿದು ಗಾಜಿನ ಬಾಟಲಿಗಳನ್ನು ಎಸೆದರು. ಘರ್ಷಣೆಯ ಸಮಯದಲ್ಲಿ ಮನೆಗಳು, ಕಾರುಗಳು ಮತ್ತು ಧಾರ್ಮಿಕ ಕಲಾಕೃತಿಗಳನ್ನು ಧ್ವಂಸಗೊಳಿಸಲಾಯಿತು. ಇದು ವಾರಗಳವರೆಗೆ ನಡೆಯಿತು. ಗಲಭೆ ಪ್ರಕರಣದಲ್ಲಿ 47 ಮಂದಿಯನ್ನು ಬಂಧಿಸಲಾಗಿತ್ತು ಎಂದು ಲೀಸೆಸ್ಟರ್‌ಶೈರ್ ಪೊಲೀಸರು ತಿಳಿಸಿದ್ದಾರೆ.

    ಮಸೀದಿಗಳಿಗೆ ಬೆಂಕಿ ಹಚ್ಚುತ್ತಿರುವ ವೀಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡಿವೆ. ಅಶಾಂತಿ ವಾತಾವರಣ ಸೃಷ್ಟಿಸುವ ಅನೇಕ ಟ್ವಿಟ್ಟರ್‌ ಖಾತೆಗಳು ಭಾರತದಲ್ಲಿ ಹುಟ್ಟಿಕೊಂಡಿವೆ ಎಂದು ಸಂಶೋಧಕರು ಹೇಳಿದ್ದಾರೆ. ಇದನ್ನೂ ಓದಿ: ಪೋಲೆಂಡ್‌ಗೆ ಕ್ಷಿಪಣಿ ಹಾರಿಸಿ ಉಕ್ರೇನ್ ಎಡವಟ್ಟು

    ಗೂಗಲ್‌ (Google), ಯೂಟ್ಯೂಬ್‌ (YouTube), ಮೆಟಾ ಪ್ಲಾಟ್‌ಫಾರ್ಮ್‌, ಇನ್‌ಸ್ಟಾಗ್ರಾಂ (Instagram), ಟ್ವಿಟ್ಟರ್‌, ಟಿಕ್‌ಟಾಕ್‌ನಿಂದ ಸಂಗ್ರಹಿಸಿದ ಡೇಟಾವನ್ನು ಬಳಸಿಕೊಂಡು ಎನ್‌ಸಿಆರ್‌ಐ ವರದಿಯನ್ನು ಪ್ರಕಟಿಸಿದೆ. ವಿದೇಶಿ ಪ್ರಭಾವಿಗಳು ಸ್ಥಳೀಯ ಮಟ್ಟದಲ್ಲಿ ತಪ್ಪು ಮಾಹಿತಿಗಳನ್ನು ಹರಡುತ್ತಿವೆ ಎಂದು ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಮುಸ್ಲಿಮರ ಮತಕ್ಕಾಗಿ ಹಿಂದೂಗಳ ಅವಹೇಳನ ಮಾಡ್ತಿರೋದು ನೀಚ ಕೆಲಸ – ಜಾರಕಿಹೊಳಿ ವಿರುದ್ಧ ಮುತಾಲಿಕ್ ಆಕ್ರೋಶ

    ಮುಸ್ಲಿಮರ ಮತಕ್ಕಾಗಿ ಹಿಂದೂಗಳ ಅವಹೇಳನ ಮಾಡ್ತಿರೋದು ನೀಚ ಕೆಲಸ – ಜಾರಕಿಹೊಳಿ ವಿರುದ್ಧ ಮುತಾಲಿಕ್ ಆಕ್ರೋಶ

    ಶಿವಮೊಗ್ಗ: ಮುಸ್ಲಿಮರ ಮತಕ್ಕಾಗಿ (Muslims Vote) ಹಿಂದೂಗಳಿಗೆ ಅವಹೇಳನ ಮಾಡುತ್ತಿರುವುದು ಅತ್ಯಂತ ನೀಚ ಕೆಲಸ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ಎಂದು ಕಿಡಿ ಕಾರಿದ್ದಾರೆ.

    ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುತಾಲಿಕ್, ಹಿಂದೂ ಎಂಬ ಪದ ಜಗತ್ತಿನ ತುಂಬ ಹರಡಿಕೊಂಡಿದೆ. ಭಾರತದ ಮುಸ್ಲಿಮರು ಯಾವುದೇ ದೇಶಕ್ಕೆ ಹೋದರೂ, ಹಿಂದೂ ಮುಸ್ಲಿಂ ಎಂದು ಕರೆಯುತ್ತಾರೆ. ಹೀಗಿರುವಾಗ ಜಾರಕಿಹೊಳಿ (SatishJarkiholi) ಅವರ ಹೇಳಿಕೆ ಅವರ ಅಜ್ಞಾನವನ್ನು ಪ್ರದರ್ಶನ ಮಾಡಿದೆ ಎಂದರು. ಇದನ್ನೂ ಓದಿ: ಸತೀಶ್ ಜಾರಕಿಹೊಳಿ ವಿರುದ್ಧ ಕೆರಳಿದ ಕೇಸರಿಪಡೆ- ಸುನಿಲ್ ಕುಮಾರ್‌ರಿಂದ ಸ್ವಾಭಿಮಾನಿ ಹಿಂದು ಅಭಿಯಾನ

    ಹಿಂದೂ ಪದ ಅಶ್ಲೀಲ ಅಂತಾ ಜಾರಕಿಹೊಳಿ ಯಾವ ಅರ್ಥದಲ್ಲಿ ಹೇಳಿದರೋ ಗೊತ್ತಿಲ್ಲ. ಸಿದ್ದರಾಮಯ್ಯ (Siddaramaiah), ಡಿಕೆಶಿ (DK Shivakumar) ಹಾಗೂ ಜಾರಕಿಹೊಳಿ ಅವರು ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಹೀಗಾಗಿಯೇ ಇಡೀ ದೇಶದಲ್ಲಿ ಹಿಂದೂಗಳು ಇವರನ್ನು ತುಳಿದಿದ್ದಾರೆ. ಇದೇ ರೀತಿ ಮಾತನಾಡಿದರೆ ಇನ್ನು ಪಕ್ಕಕ್ಕೆ ಹೋಗುತ್ತಾರೆ. ಮುಸ್ಲಿಮರ ಮತಕ್ಕಾಗಿ ಹಿಂದೂಗಳಿಗೆ ಅವಹೇಳನ ಮಾಡುತ್ತಿರುವುದು ಅತ್ಯಂತ ನೀಚ ಕೆಲಸ. ಹಿಂದೂ ಎಂದರೆ ಒಂದು ಜೀವನ ಕಲೆ ಎಂಬುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಹಾಗಾದರೆ ಸುಪ್ರೀಂ ಕೋರ್ಟ್ (Supreme Court) ಮೂರ್ಖ ಅಂತಾ ಹೇಳಲು ಆಗುತ್ತಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಒಬ್ಬ ಹಿಂದೂವಾಗಿ ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ನಾನೂ ಒಪ್ಪಲ್ಲ: ಡಿಕೆಶಿ

    400 ವರ್ಷಗಳ ಹಿಂದೆಯೇ ಹಿಂದೂ ಶಬ್ದದ ಉಲ್ಲೇಖವಿದೆ. ಹಿಂದೂ ಧರ್ಮ ಒಡೆಯುವ, ಹಿಂದು ಧರ್ಮವನ್ನು ಕೆಟ್ಟದಾಗಿ ಬಿಂಬಿಸುವ ಜಾರಕಿಹೊಳಿ ಒಬ್ಬ ನಾಸ್ತಿಕ. ದೇವರು, ಧರ್ಮ ಇವರಿಗೆ ಬೇಕಿಲ್ಲ. ಕೇವಲ ಮತಗಳು ಮಾತ್ರ ಬೇಕಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಜ್ಞಾನವಾಪಿ ಕೇಸ್ – ಮೇ 28, 29ಕ್ಕೆ 5 ಸಾವಿರ ಮುಸ್ಲಿಂ ಸಂಘಟನೆಗಳಿಂದ ಬೃಹತ್ ಸಭೆ

    ಜ್ಞಾನವಾಪಿ ಕೇಸ್ – ಮೇ 28, 29ಕ್ಕೆ 5 ಸಾವಿರ ಮುಸ್ಲಿಂ ಸಂಘಟನೆಗಳಿಂದ ಬೃಹತ್ ಸಭೆ

    ಲಕ್ನೋ: ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 26 ರಿಂದ ಮಸೀದಿ ಪರ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಲಾಗುವುದು ಎಂದು ಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ಜಾಮಿಯತ್ ಉಲಮಾ-ಇ-ಹಿಂದ್ ಮುಸ್ಲಿಂ ಸಂಘಟನೆಯು ಮೇ 28, 29ರಂದು ಬೃಹತ್ ಸಮಾವೇಶಕ್ಕೆ ಕರೆ ನೀಡಿದೆ.

    ಉತ್ತರಪ್ರದೇಶದ ದೇವಬಂದ್‌ನಲ್ಲಿ ಬೃಹತ್ ಸಭೆ ನಡೆಯಲಿದ್ದು, ಸುಮಾರು 5 ಸಾವಿರ ಮುಸ್ಲಿಂ ಸಂಘಟನೆಗಳು ಭಾಗವಹಿಸಲಿವೆ. ಈ ಸಭೆಯಲ್ಲಿ ಜ್ಞಾನವಾಪಿ, ಮಥುರಾ ಹಾಗೂ ಕುತುಬ್ ಮಿನಾರ್‌ನಂತಹ ಸ್ಮಾರಕಗಳ ಸುತ್ತಮುತ್ತಲಿನ ಸಮಸ್ಯೆಗಳನ್ನು ಚರ್ಚಿಸಲು ಉದ್ದೇಶಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಕುತುಬ್‌ ಮಿನಾರ್‌ ಬಳಿ ಹಿಂದೂ ಮೂರ್ತಿಗಳ ಪುನರ್‌ಸ್ಥಾಪನೆಗೆ ಮನವಿ – ತೀರ್ಪು ಕಾಯ್ದಿರಿಸಿದ ಕೋರ್ಟ್‌

    Gyanvapi mosque, 

    ಜಮಿಯತ್-ಉಲೇಮಾ-ಇ-ಹಿಂದ್ ಸಂಘಟನೆ ಮುಖ್ಯಸ್ಥ ಮೌಲಾನಾ ಮಹಮೂದ್ ಅಸಾದ್ ಮದನಿ ಅವರು ಈ ಹಿಂದೆ ಜ್ಞಾನವಾಪಿ ಪ್ರಕರಣದಲ್ಲಿ ಮಧ್ಯಪ್ರವೇಶಿಸದಂತೆ ಸಂಘಟನೆಗಳನ್ನು ಒತ್ತಾಯಿಸಿದ್ದರು. ಆದರೆ ಈಗ ಮಂದಿರ ಮಸೀದಿಗಳ ಚರ್ಚೆಯ ವಿರುದ್ಧ ಹಲವು ನಿರ್ಣಯಗಳನ್ನು ಅಂಗೀಕರಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಇದನ್ನೂ ಓದಿ: ಮೇ 26 ರಿಂದ ಮಸೀದಿ ಪರ ಅರ್ಜಿ ವಿಚಾರಣೆ, ಯಥಾಸ್ಥಿತಿ ಕಾಯ್ದುಕೊಳ್ಳಿ: ಕೋರ್ಟ್ ಆದೇಶ

    ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕ ಧರಂವೀರ್ ಶರ್ಮಾ ಅವರು ಕುತುಬ್ ಮಿನಾರ್ ಅನ್ನು ಕುತುಬ್ ಉದ್‌ದಿನ್ ಐಬಕ್ ನಿರ್ಮಿಸಿದ್ದಲ್ಲ. ರಾಜಾ ವಿಕ್ರಮಾದಿತ್ಯ ನಿರ್ಮಿಸಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಆ ನಂತರವೇ ವಿವಾದ ಭುಗಿಲೆದ್ದಿದೆ ಎಂದು ಸಂಘಟನೆಗಳು ಆರೋಪಿಸಿವೆ.

    Qutub Minar

    ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ವಕ್ತಾರ ವಿನೋದ್ ಬನ್ಸಾಲ್ ಸಹ, ಕುತುಬ್ ಮಿನಾರ್ ವಾಸ್ತವವಾಗಿ `ವಿಷ್ಣು ಸ್ತಂಭ’ ಮತ್ತು 27 ಹಿಂದೂ-ಜೈನ ದೇವಾಲಯಗಳನ್ನು ಕೆಡವಿ, ಅದರಿಂದ ಪಡೆದ ವಸ್ತುಗಳಿಂದ ಈ ಸ್ತಂಭವನ್ನು ನಿರ್ಮಿಸಲಾಗಿದೆ ಎಂದು ಹೇಳಿದ್ದರು.