Tag: Hindu-Muslim

  • ಮದರಸಾಗಳಲ್ಲಿ ಓದಿದವರು ಹಿಂದೂ ವಿರೋಧಿ, ಭಯೋತ್ಪಾದಕರಾಗಿ ಬರ್ತಾರೆ – ಮುತಾಲಿಕ್ ಕಿಡಿ

    ಮದರಸಾಗಳಲ್ಲಿ ಓದಿದವರು ಹಿಂದೂ ವಿರೋಧಿ, ಭಯೋತ್ಪಾದಕರಾಗಿ ಬರ್ತಾರೆ – ಮುತಾಲಿಕ್ ಕಿಡಿ

    ಧಾರವಾಡ: ಇಡೀ ದೇಶದಲ್ಲಿ 3 ಲಕ್ಷ ಮದರಸಾಗಳಿದ್ದು, ಅಲ್ಲಿ ಹಿಂದೂ ವಿರೋಧಿ ವಿಚಾರಗಳನ್ನು ಅರೆದು ಕುಡಿಸಲಾಗುತ್ತಿದೆ. ಇದರಿಂದ ಮದರಸಾಗಳಲ್ಲಿ ತಯಾರಾಗುವ ವಿದ್ಯಾರ್ಥಿಗಳು ಹಿಂದೂ ವಿರೋಧಿಗಳು, ದೇಶ ವಿರೋಧಿ ಹಾಗೂ ಭಯೋತ್ಪಾದಕರಾಗಿ ಹೊರ ಬರ್ತಾರೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್‌  ಮುತಾಲಿಕ್ ಹೇಳಿದ್ದಾರೆ.

    Pramod Muthali

    ಧಾರವಾಡದಲ್ಲಿ ಅವರಿಂದು ಮಾತನಾಡಿ, ದೇಶದಲ್ಲಿ ಕುರಾನ್ ಮತ್ತು ಶರಿಯಾ ಮುಸ್ಲಿಂ ಶಿಕ್ಷಣ ಕೊಡುವ ವಿಚಾರವಾಗಿ ಮದರಸಾ ತೆರೆಯಲಾಗಿದೆ. ಆದರೆ ಇಲ್ಲಿ ಹಿಂದೂ ವಿರೋಧಿ ವಿಚಾರಗಳನ್ನು ಅರೆದು ಕುಡಿಸಲಾಗುತ್ತಿದೆ. ಇದರಿಂದ ಅವರು ಮುಂದೆ ಭಯೋತ್ಪಾದಕರಾಗಿ ಹೊರ ಬರ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಹಿಂದೂಗಳಿಗೆ ಬಿಟ್ಟು ಕೊಡುವಂತೆ ಆಗ್ರಹ

    pramod muthalik

    ಪಾಕಿಸ್ತಾನದಲ್ಲೂ ಮದರಸಾ ಬಂದ್: ಮದರಾಗಳಲ್ಲಿ ಓದಿದ ಎಷ್ಟೋ ಮಂದಿ ದೇಶದಲ್ಲಿ ಭಯೋತ್ಪಾದನಾ ಚಟುವಟಿಕೆಗಳಲ್ಲಿ ತೊಡಗಿ ರೆಡ್‌ಹ್ಯಾಂಡ್ ಆಗಿ ಸಿಕ್ಕಿದ್ದಾರೆ. ಪಾಕಿಸ್ತಾನದಲ್ಲೂ ಈಗಾಗಲೇ ಮದರಸಾಗಳನ್ನು ಬಂದ್ ಮಾಡಲಾಗುತ್ತಿದೆ. ಮದರಸಾ ಯಾವ ರೀತಿ ಶಿಕ್ಷಣ ನೀಡುತ್ತಿದೆ ಎನ್ನುವುದಕ್ಕೆ ಇದೇ ಜ್ವಲಂತ ಉದಾಹರಣೆಯಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಆರೋಪಿ ನಾಗೇಶ್ ಬಂಧಿಸಿದ ಪೊಲೀಸರಿಗೆ ಆರಗ ಜ್ಞಾನೇಂದ್ರ ಧನ್ಯವಾದ

    ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಮದರಸಾಗಳನ್ನು ಬ್ಯಾನ್ ಮಾಡಬೇಕು. ಜೊತೆಗೆ ಹಿಂದೂಗಳ ತೆರಿಗೆ ಹಣದಲ್ಲಿ ಸರ್ಕಾರದಿಂದ ಅನುದಾನ ಪಡೆದು ಬೋಗಸ್ ಆಗಿ ನಡೆಸುತ್ತಿರುವ ಮದರಸಾಗಳ ವಿರುದ್ಧ ತನಿಖೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

  • ಶಿಕ್ಷಕಿ ಮೇಲೆ ಮುಸ್ಲಿಂ ಯುವಕನಿಂದ ಅತ್ಯಾಚಾರ – ಮತಾಂತರವಾಗಿ ಮದ್ವೆಯಾಗುವಂತೆ ಒತ್ತಾಯ

    ಲಕ್ನೋ: ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ 28 ವರ್ಷದ ಶಾಲಾ ಶಿಕ್ಷಕಿಯ ಮೇಲೆ ಅತ್ಯಾಚಾರ ಎಸಗಿದ ಯುವಕನೊಬ್ಬ ಅದರ ವೀಡಿಯೋ ಚಿತ್ರೀಕರಣ ಮಾಡಿದ್ದು, ಮತಾಂತರವಾಗಿ ತನ್ನನ್ನೇ ಮದುವೆಯಾಗುವಂತೆ ಒತ್ತಾಯಿಸಿದ್ದಾನೆ.

    crime

    ಆರೋಪಿ ಅಮೀರ್ ಸೇರಿದಂತೆ ಐವರ ವಿರುದ್ಧ ಉತ್ತರ ಪ್ರದೇಶದ ಕಾನೂನು ಬಾಹಿರ ಮತಾಂತರ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಎಫ್‌ಆರ್‌ನಲ್ಲಿ ಆರೋಪಿಯ ತಾಯಿ, ಸಹೋದರಿ, ಸಹೋದರ ಮತ್ತು ಮತ್ತೊಬ್ಬ ಸಂಬಂಧಿಯ ಹೆಸರನ್ನು ಸೇರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಹಿಂದೂಗಳಿಗೆ ಬಿಟ್ಟು ಕೊಡುವಂತೆ ಆಗ್ರಹ

    CRIME (1)

    ನಡೆದಿದ್ದೇನು?: ಮೇ 4 ರಂದು ಮಹಿಳೆ ಶಾಲೆ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದಾಗ ಅದೇ ಗ್ರಾಮದ ಅಮೀರ್, ಡ್ರಾಪ್ ಮಾಡುವುದಾಗಿ ಕರೆದೊಯ್ದಿದ್ದಾನೆ. ಬಳಿಕ ಮೂಗಿಗೆ ಮತ್ತಿನ ಔಷಧವನ್ನಿಟ್ಟು ಪ್ರಜ್ಞೆ ತಪ್ಪುವಂತೆ ಮಾಡಿ ಅತ್ಯಾಚಾರ ಎಸಗಿದ್ದಾನೆ. ಅಮೀರ್ ಕುಟುಂಬ ಸದಸ್ಯರೂ ಸಹ ಮತಾತಂತರವಾಗಿ ಆತನನ್ನೇ ಮದುವೆಯಾಗುವಂತೆ ಒತ್ತಾಯಿಸಿದ್ದರೆಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾಳೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಕುಮಾರ್ ತಿಳಿಸಿದ್ದಾರೆ. ಸಂತ್ರಸ್ತ ಮಹಿಳೆಯನ್ನು ವೈದ್ಯಕೀಯ ತಪಾಸಣೆಗೆ ಕಳುಹಿಸಲಾಗಿದೆ.

  • ನಾನೂ ಹಿಂದೂ ಇದೀನಿ ಅಂತ ಕೊಲೆ ಮಾಡಬೇಕನ್ನೋದು ಯಾವ ನ್ಯಾಯ – ಸಚಿವ ಶಂಕರ ಪಾಟೀಲ್

    ನಾನೂ ಹಿಂದೂ ಇದೀನಿ ಅಂತ ಕೊಲೆ ಮಾಡಬೇಕನ್ನೋದು ಯಾವ ನ್ಯಾಯ – ಸಚಿವ ಶಂಕರ ಪಾಟೀಲ್

    ಬೆಳಗಾವಿ: ದೇಶದಲ್ಲಿ ಹಿಂದೂ ಮುಸ್ಲಿಂ ಯಾರೇ ಇರಬಹುದು ಅಣ್ಣ-ತಮ್ಮಂದಿರ ಹಾಗೆ ಬದುಕಬೇಕು. ಅದನ್ನು ಬಿಟ್ಟು ನಾನೂ ಹಿಂದೂ ಇದೀನಿ ಅಂತ ಕೊಲೆ ಮಾಡಬೇಕೆಂಬುದು ಯಾವ ನ್ಯಾಯ? ಎಂದು ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಪ್ರಶ್ನಿಸಿದ್ದಾರೆ.

    shankar patil munenakoppa

    ಬೆಂಗಳೂರಿನ ಸಾರಾಯಿಪಾಳ್ಯದಲ್ಲಿ ಹಿಂದೂ ಮುಖಂಡರ ಹತ್ಯೆಗೆ ಸ್ಕೆಚ್‌ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಹಿಂದೂ ಎಂಬ ಒಂದೇ ಕಾರಣಕ್ಕೆ ಅವನ ಹತ್ಯೆ ಮಾಡಬೇಕು ಎಂಬುದು ಸರಿಯಲ್ಲ. ಯಾವುದೇ ಸಮಾಜ ಇದ್ದರೂ ಆ ಸಮಾಜ ತಿದ್ದುಕೊಳ್ಳಬೇಕು. ನಾನು ಹಿಂದೂ ಇದೀನಿ ಅಂತಾ ಕೊಲೆ ಮಾಡಬೇಕೆಂಬುದು ಯಾವ ನ್ಯಾಯ, ಇದು ಸರಿಯಾದುದಲ್ಲ ಎಂದು ತಿಳಿವಳಿಕೆ ನೀಡಿದ್ದಾರೆ. ಇದನ್ನೂ ಓದಿ: ಸಚಿವ ಸ್ಥಾನಕ್ಕಾಗಿ ಯಾರಿಗೂ ಅರ್ಧ ಕಪ್ ಚಹಾ ಸಹ ಕುಡಿಸಿಲ್ಲ: ಮುನೇನಕೊಪ್ಪ

    shankar patil munenakoppa

    ಇಂದಿನ ರಾಜಕೀಯ ವ್ಯವಸ್ಥೆಯಲ್ಲಿ ಹಿಂದೂ ಇರಬಹುದು, ಮುಸ್ಲಿಂ ಇರಬಹುದು ಈ ದೇಶದಲ್ಲಿ ವಾಸಿಸುವವ ಪ್ರತಿಯೊಬ್ಬರೂ ಅಣ್ಣತಮ್ಮಂದಿರ ರೀತಿ ಬದುಕಬೇಕು. ಧರ್ಮ ಗುರುಗಳಿಂದ ಸಮಾಜ ಪರಿವರ್ತನೆಯ ಕೆಲಸಗಳಾಗಬೇಕು. ಸಾಮರಸ್ಯದಿಂದ ಬದುಕುವಂತೆ ಸಮಾಜ ಕಟ್ಟಬೇಕು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಸಂಪುಟ ವಿಸ್ತರಣೆ ಕಸರತ್ತು: ನಾಳೆ ದೆಹಲಿಗೆ ಸಿಎಂ

    ಈ ರೀತಿ ಒಂದು ಸಮಾಜ ಗುರಿಯಾಗಿಸುವುದನ್ನು ಯಾರೂ ಸಹಿಸೋದಿಲ್ಲ. ಸರ್ಕಾರ ಸಹ ಕಾನೂನಿನ ಕ್ರಮಗಳು ಏನಿದೆ? ನೋಡಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

  • ಮಸೀದಿಗಳಲ್ಲಿ ಧ್ವನಿವರ್ಧಕ ಅಳವಡಿಸುವುದು ಮೂಲಭೂತ ಹಕ್ಕಲ್ಲ: ಅರ್ಜಿ ವಜಾ

    ಮಸೀದಿಗಳಲ್ಲಿ ಧ್ವನಿವರ್ಧಕ ಅಳವಡಿಸುವುದು ಮೂಲಭೂತ ಹಕ್ಕಲ್ಲ: ಅರ್ಜಿ ವಜಾ

    ಲಕ್ನೋ: ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವುದು ಮೂಲಭೂತ ಹಕ್ಕಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.

    2021ರ ಡಿಸೆಂಬರ್ 3ರಂದು ಬದೌನ್ ಜಿಲ್ಲೆಯ ಬಿಸೌಲಿ ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌ (SDM) ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿದ್ದ ಮುಸ್ಲಿಂ ಮುಖಂಡ ಇರ್ಫಾನ್ ಆಜಾನ್‌ಗಾಗಿ ಧೋರನ್‌ಪುರ ಗ್ರಾಮದ ನೂರಿ ಮಸೀದಿಯಲ್ಲಿ ಧ್ವನಿವರ್ಧಕಗಳನ್ನು ಅಳವಡಿಸಲು ಅನುಮತಿ ಕೋರಿದ್ದರು. ಇದನ್ನೂ ಓದಿ: ಮೋದಿ ಏನೇ ಮಾಡಿದರೂ, ವಿಜ್ಞಾನ ಸುಳ್ಳು ಹೇಳುವುದಿಲ್ಲ: ರಾಹುಲ್ ಗಾಂಧಿ 

    LOUDSPEAKER (1)

    ನ್ಯಾಯಮೂರ್ತಿ ವಿವೇಕ್‌ಕುಮಾರ್ ಬಿರ್ಲಾ ಹಾಗೂ ನ್ಯಾಯಮೂರ್ತಿ ವಿಕಾಸ್ ಅವರಿದ್ದ ನ್ಯಾಯಪೀಠವು, ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವುದು ಸಾಂವಿಧಾನಿಕ ಹಕ್ಕಲ್ಲ ಎಂದು ಕಾನೂನು ಹೇಳುತ್ತದೆ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿದೆ.

    ಅರ್ಜಿದಾರರು ತಮ್ಮ ಮನವಿಯಲ್ಲಿ, ಎಸ್‌ಡಿಎಂನ ಆದೇಶವು ಕಾನೂನುಬಾಹಿರ. ಇದು ಮೂಲಭೂತ ಮತ್ತು ಕಾನೂನು ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಉಲ್ಲೇಖಿಸಿದ್ದರು. ಇದನ್ನೂ ಓದಿ: ದೆಹಲಿಯಲ್ಲಿ ಕೊರೊನಾ ಆರ್ಭಟ – GRPA ಆ್ಯಕ್ಷನ್ ಪ್ಲಾನ್‌ನಂತೆ ರೆಡ್‌ಅಲರ್ಟ್ ಘೋಷಣೆ

    mosque-loudspeakers
    ಸಾಂದರ್ಭಿಕ ಚಿತ್ರ

    ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಯ ವಿಚಾರವಾಗಿ ಈಗಾಗಲೇ ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಕೊಂಡಿದೆ. ಈಚೆಗಷ್ಟೇ ಉತ್ತರ ಪ್ರದೇಶದಲ್ಲೂ ಸಹ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ ರಾಜ್ಯದ 17,000 ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಪ್ರಮಾಣವನ್ನು ಮಿತಗೊಳಿಸುವಂತೆ ಸೂಚನೆ ನೀಡಿತ್ತು. ಇದನ್ನೂ ಓದಿ: ಭಾರತದಲ್ಲಿ ಕೋವಿಡ್‌ನಿಂದ 47 ಲಕ್ಷ ಮಂದಿ ಸಾವು – WHO ವರದಿ

    ಅನುಮತಿ ಪಡೆದ ಧ್ವನಿವರ್ಧಕಗಳನ್ನು ಮಾತ್ರವೇ ನಿಯಮಿತ ಶಬ್ಧದೊಂದಿಗೆ ಬಳಸುವಂತೆ ಸೂಚನೆ ನೀಡಿತ್ತು. ಇದರಿಂದ ಹಿಂದೂ-ಮುಸ್ಲಿಂ ದೇವಾಯಗಳಲ್ಲೂ ಪ್ರಸಾರವಾಗುತ್ತಿದ್ದ ಧಾರ್ಮಿಕ ಕೈಂಕರ್ಯಗಳು ಆವರಣಕ್ಕೆ ಮಾತ್ರ ಸೀಮಿತವಾಗಿತ್ತು.

  • ಸಹೃದಯದಿಂದ ಬದುಕುವವರಿಗೇಕೆ `ಧರ್ಮ’ಸಂಕಟ? – ಆಂಜನೇಯನ ಪೂಜಿಸುವ ಮುಸ್ಲಿಂ ಬಂಧು ಹೇಳಿದ್ದಿಷ್ಟು

    ಸಹೃದಯದಿಂದ ಬದುಕುವವರಿಗೇಕೆ `ಧರ್ಮ’ಸಂಕಟ? – ಆಂಜನೇಯನ ಪೂಜಿಸುವ ಮುಸ್ಲಿಂ ಬಂಧು ಹೇಳಿದ್ದಿಷ್ಟು

    ಕೊಪ್ಪಳ: ಹಲಾಲ್ ಕಟ್, ಝಟ್ಕಾ ಕಟ್, ಆಜ್ಹಾನ್, ಹಿಜಬ್ ಮೊದಲಾದ ವಿವಾದ ನಡುವೆ ತನ್ನ ಮನೆಯಲ್ಲಿ ಸದಾ ಹಿಂದೂ ದೇವರನ್ನೇ ಪೂಜಿಸಿ, ಆರಾಧಿಸುತ್ತಿರುವ ವ್ಯಕ್ತಿಯೊಬ್ಬರು ಸಮಾಜಕ್ಕೆ ಮಾದರಿಯಾಗಿದ್ದಾರೆ. ಕಳೆದ 20 ವರ್ಷಗಳಿಂದಲೂ ಹಿಂದೂ ದೇವರನ್ನೇ ಪೂಜಿಸುತ್ತಾ ಏಕತೆ ಬೆಸೆಯುವುದಕ್ಕೆ ಮುಂದಾಗಿದ್ದಾರೆ.

    ಆಟೋ ಚಾಲಕನಾಗಿರುವ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ತಳಕಲ್ ನಿವಾಸಿ ಸಂಶುದ್ದೀನ್ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಿಮೆಂಟ್ ದೇಣಿಗೆ ನೀಡಿದ್ದರು. ಇದೀಗ ತನ್ನ ಮನೆಯಲ್ಲಿ ಆಂಜನೇಯ, ಗವಿಸಿದ್ಧೇಶ್ವರ ಸೇರಿದಂತೆ ಮೊದಲಾದ ಹಿಂದೂ ದೇವತೆಗಳನ್ನು ಪೂಜೆ ಮಾಡುತ್ತಿದ್ದು, ಹಿಂದೂ ಹಬ್ಬಗಳನ್ನೂ ಆಚರಣೆ ಮಾಡುತ್ತಾ ಸೌಹಾರ್ಧತೆಯ ಸಂದೇಶ ಸಾರಿದ್ದಾರೆ. ಇದನ್ನೂ ಓದಿ: ಕೋಮುದ್ವೇಷ ಕಕ್ಕುವುದು, ನನ್ನ ಹೆಸರು ಎಳೆದು ತರುವುದು ಸಿಟಿ ರವಿಗೆ ಮಾನಸಿಕ ರೋಗವಾಗಿದೆ: ಸಿದ್ದರಾಮಯ್ಯ

    hanuman

    ಈ ಕುರಿತು ಮಾತನಾಡಿರುವ ಅವರು, ಯಾರೋ ನಾಲ್ಕು ಜನ ಮಾಡುವ ಕೆಲಸದಿಂದ ಸಮಾಜಕ್ಕೆ ಕೆಟ್ಟ ಹೆಸರು ಬರುತ್ತದೆ. ನಾವೆಲ್ಲರೂ ಹಿಂದೂ- ಮುಸ್ಲಿಮರು ಅಣ್ಣ ತಮ್ಮ ಎನ್ನುವಂತೆ ಬದುಕುತ್ತಿದ್ದೇವೆ. ನಮ್ಮ ಮನೆಯಲ್ಲೂ ಹಿಂದೂ ಹಬ್ಬಗಳನ್ನು ಆಚರಿಸುತ್ತೇವೆ. ನಮ್ಮ ಹಬ್ಬಕ್ಕೆ ಅವರು ಬರುತ್ತಾರೆ, ನಾವು ಅವರ ಹಬ್ಬಗಳಿಗೆ ಹೋಗಿ ಸಿಹಿ ತಿಂದು ಬರುತ್ತೇವೆ. ಆದರೆ ಇಂದಿನ ಸ್ಥಿತಿಯನ್ನು ಕಂಡು ಮನಸ್ಸಿಗೆ ನೋವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮೋದಿ ನೇತೃತ್ವದಲ್ಲಿ ಬಿಜೆಪಿಯು ಬಡವರ, ದಲಿತರ ಪಕ್ಷವಾಗಿ ಮಾರ್ಪಟ್ಟಿದೆ: ಜೆಪಿ ನಡ್ಡಾ

    ನಾವು ಆಂಜನೇಯನನ್ನು ಜನ್ಮಕೊಟ್ಟ ದೇವರೆಂದು ಆರಾಧಿಸುತ್ತೇವೆ. ಕುಲದೇವರಿಗಿಂತಲೂ ಆಂಜನೇಯ ಶ್ರೇಷ್ಠ ಎಂದು ಹೇಳುತ್ತೇವೆ. ಆದರಿಂದು ಸಣ್ಣ-ಸಣ್ಣ ಮಕ್ಕಳೂ ಧರ್ಮ ಸಂಕಟಕ್ಕೆ ಸಿಲುಕುತ್ತಿದ್ದಾರೆ. ಅವರ ಮನಸ್ಸಿನಲ್ಲೂ ಅದೇ ಚಿಂತನೆಗಳು ಬೆಳೆಯುತ್ತಿದ್ದು, ಇದು ಮುಂದೆ ದೇಶಕ್ಕೆ ಮಾರಕವಾಗಲಿದೆ. ಸಹೃದಯದಿಂದ ಬದುಕುವವರಿಗೆ `ಧರ್ಮ’ಸಂಕಟ ಏಕೆ ಬೇಕು? ಇದೆಲ್ಲವನ್ನೂ ಇಲ್ಲಿಗೆ ನಿಲ್ಲಿಸೋಣ ಎಂದು ಮನವಿ ಮಾಡಿದ್ದಾರೆ.

  • ಹೇಳಿಕೆ ಖಂಡಿಸದಿದ್ದರೆ ವಿದ್ಯಾರ್ಥಿಗಳೂ ಆಲ್‌ಖೈದಾ ಪಟ್ಟಿಗೆ: ರಘುಪತಿ ಭಟ್

    ಹೇಳಿಕೆ ಖಂಡಿಸದಿದ್ದರೆ ವಿದ್ಯಾರ್ಥಿಗಳೂ ಆಲ್‌ಖೈದಾ ಪಟ್ಟಿಗೆ: ರಘುಪತಿ ಭಟ್

    ಉಡುಪಿ: ನೈಜ ಭಾರತೀಯರಾದರೆ ಹಿಜಬ್ ಹೋರಾಟದಲ್ಲಿ ತೊಡಗಿರುವ ಮುಸ್ಲಿಂ ವಿದ್ಯಾರ್ಥಿಗಳು ಆಲ್‌ಖೈದಾ, ತಾಲಿಬಾನ್ ಬೆಂಬಲವನ್ನು ಖಂಡಿಸಬೇಕು. ಇಲ್ಲದಿದ್ದರೆ ಅವರೂ ಆಲ್‌ಖೈದಾ ಅಥವಾ ದೇಶದ್ರೋಹ ಸಂಪರ್ಕಿತರ ಪಟ್ಟಿಯಲ್ಲಿ ಸೇರುತ್ತಾರೆ. ತಮ್ಮ ಮೇಲಿನ ವಿಶ್ವಾಸವನ್ನೂ ಕಳೆದುಕೊಳ್ಳುತ್ತಾರೆ ಎಂದು ಉಡುಪಿ ಶಾಸಕ ರಘುಪತಿ ಭಟ್ ಎಚ್ಚರಿಸಿದ್ದಾರೆ.

    Raghupati Bhat

    ಉಡುಪಿಯಲ್ಲಿ ಇಂದು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿರುವ ಅವರು, ಹಿಜಬ್‌ಗೆ ಸಂಬಂಧಿಸಿದ ಘಟನೆ ಮೊದಲು ಪಾಕಿಸ್ತಾನದ ವಾಹಿನಿಯೊಂದರಲ್ಲಿ ಪ್ರಸಾರವಾಯಿತು. ಘಟನೆ ನಡೆದಾಗ ಮುಸ್ಕಾನ್ ವಿದ್ಯಾರ್ಥಿನಿ ಘೋಷಣೆಗೆ ತಾಲಿಬಾನ್ ಮೊದಲು ಬೆಂಬಲ ಸೂಚಿಸಿತ್ತು. ಇದೀಗ ಆಲ್‌ಖೈದಾ ಬೆಂಬಲ ಸೂಚಿಸಿರುವುದು ಸಿಎಫ್‌ಐ, ಪಿಎಫ್‌ಐ, ಎಸ್‌ಡಿಪಿಐ ಸಂಘಟನೆಗಳೂ ಆಲ್‌ಖೈದಾ ಭಯೋತ್ಪಾದಕ ಸಂಘಟನೆಯೊಂದಿಗೆ ನೇರವಾಗಿ ಸಂಪರ್ಕದಲ್ಲಿದೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಚಂದ್ರು ಕೊಲೆಗಾರರಿಗೆ ಶರಿಯತ್ ಕಾನೂನು ಜಾರಿಯಾಗಬೇಕಾ: ರಘುಪತಿ ಭಟ್ ಪ್ರಶ್ನೆ

    ಹಿಜಬ್ ಹೋರಾಟದಲ್ಲಿ 6 ಹೆಣ್ಣುಮಕ್ಕಳು ಗಟ್ಟಿಯಾಗಿ ನಿಂತದ್ದರಿಂದಲೇ ಇಂದು ವಿವಾದ ದೊಡ್ಡದಾಗಿದೆ. ಇವರಿಗೆ ದೊಡ್ಡಮಟ್ಟದಲ್ಲಿ ಹಣಕಾಸು ಹರಿದು ಬಂದಿದೆ. ಹಾಗಾಗಿ ಸಿಎಫ್‌ಐ(CFI), ಪಿಎಫ್‌ಐ (PFI), ಎಸ್‌ಡಿಪಿಐ(SDPI) ಸಂಘಟನೆಗಳಲ್ಲಿ ದೇಶದ್ರೋಹ ಮಾತನಾಡುವವರನ್ನು ಎನ್‌ಐಎ (NIA) ತನಿಖೆಗೆ ಒಳಪಡಿಸಿದರೆ ವಿದೇಶಿ ಸಂಘನೆಗಳ ಕೈವಾಡ ಏನಿದೆ ಎಂಬುದು ತಿಳಿಯುತ್ತದೆ ಎಂದು ಹೇಳಿದರು.

    muskhan

    ಮುಸ್ಲಿಂ ವಿದ್ಯಾರ್ಥಿನಿಯರಿಗೆ ಆಲ್‌ಖೈದಾ ಜೊತೆಗೆ ಸಂಪರ್ಕವಿದೆ ಎಂದು ಹೇಳುತ್ತಿಲ್ಲ. ಆದರೆ, ಮಕ್ಕಳನ್ನು ಕಂಟ್ರೋಲ್ ಮಾಡುತ್ತಿರುವ ಸಿಎಫ್‌ಐ ಭಯೋತ್ಪಾದಕ ಸಂಘಟನೆಗಳಿಗೆ ಬೆಂಬಲ ನೀಡುತ್ತಿದೆ. ವಿದ್ಯಾರ್ಥಿಗಳು ಭಾರತದ ಪ್ರಜೆಗಳು ಇಲ್ಲಿನ ಎಲ್ಲ ಸವಲತ್ತು ಪಡೆಯುತ್ತಿದ್ದಾರೆ. ಅವರು ನಿಜವಾದ ದೇಶಭಕ್ತರಾದರೆ, ಆಲ್‌ಖೈದಾ, ತಾಲಿಬಾನಿಗಳ ಹೇಳಿಕೆ ಖಂಡಿಸಬೇಕು. ನಿಮ್ಮ ಸಹಕಾರ ನಮಗೆ ಬೇಡ. ನಮಗೆ ಸಂವಿಧಾನ ನ್ಯಾಯಾಲಯದ ಮೇಲೆ ವಿಶ್ವಾಸವಿದೆ ಎನ್ನುವಂತಹ ಹೇಳಿಕೆ ಕೊಡಬೇಕು. ಇಲ್ಲದಿದ್ದರೆ ಅವರನ್ನೂ ದೇಶಹದ್ರೋಹ ಸಂಪರ್ಕಿರತರ ಪಟ್ಟಿಗೆ ಸೇರಿಸಬೇಕಾಗುತ್ತದೆ, ಮಕ್ಕಳ ಮೇಲೂ ವಿಶ್ವಾಸ ಹೋಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಚಂದ್ರು ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಕೊಟ್ಟ ಜಮೀರ್‌

    ಒಂದು ಸಂಘಟನೆಯನ್ನು ಬ್ಯಾನ್ ಮಾಡಿದರೆ, ಮತ್ತೊಂದು ಹೆಸರಿನಲ್ಲಿ ಸಂಘಟನೆ ಹುಟ್ಟಿಕೊಳ್ಳುತ್ತದೆ. ಆದ್ದರಿಂದ ದೇಶದ್ರೋಹಿಗಳಿಗಾಗಿ ಸಂಘಟನೆ ಮಾಡುವವರನ್ನೇ ಬಹಿಷ್ಕರಿಸಬೇಕು. ಮುಖ್ಯವಾಗಿ ಮುಸ್ಲಿಂ ಸಮುದಾಯದಲ್ಲಿ ಇದು ಆಗಬೇಕು. ಬೆರಳೆಣಿಕೆ ಮಂದಿ ಮಾಡುವ ಇಂತಹ ಕೆಲಸಗಳಿಂದ ಬಹುಪಾಲು ಸಂಖ್ಯೆ ಮುಸ್ಲಿಮರಿಗೂ ಕೆಟ್ಟ ಹೆಸರು ಬರುತ್ತದೆ. ಆದ್ದರಿಂದ ಪ್ರಜ್ಞಾವಂತ ಮುಸ್ಲಿಮರು ಜಾಗೃತರಾಗಬೇಕು. ದೇಶದ್ರೋಹಿಗಳನ್ನು ಸಾಮೂಹಿಕವಾಗಿ ಬಹಿಷ್ಕರಿಸಬೇಕು ಎಂದು ಕೆರೆ ನೀಡಿದ್ದಾರೆ.

  • ಗೃಹ ಸಚಿವರು ವಿಲನ್ ರೋಲ್ ಮಾಡ್ತಿದ್ದಾರೋ, ಕಾಮಿಡಿ ರೋಲ್ ಮಾಡ್ತಿದ್ದಾರೋ ಗೊತ್ತಿಲ್ಲ: ಹೆಚ್‌ಡಿಕೆ

    ಗೃಹ ಸಚಿವರು ವಿಲನ್ ರೋಲ್ ಮಾಡ್ತಿದ್ದಾರೋ, ಕಾಮಿಡಿ ರೋಲ್ ಮಾಡ್ತಿದ್ದಾರೋ ಗೊತ್ತಿಲ್ಲ: ಹೆಚ್‌ಡಿಕೆ

    ಮೈಸೂರು: ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಮಿಷಕ್ಕೊಂದು ಹೇಳಿಕೆ ನೀಡುತ್ತಿರುವ ಅರಗ ಜ್ಞಾನೇಂದ್ರ ಅವರು ಕಾಮಿಡಿ ರೋಲ್ ಮಾಡಲು ಗೃಹ ಸಚಿವರಾಗಿದ್ದಾರಾ? ಅಥವಾ ವಿಲನ್ ರೋಲ್ ಮಾಡುತ್ತೀದ್ದಿರಾ? ಗೊತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದ್ದಾರೆ.

    KUMARASWAMY

    ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊಲೆಯಾದ ಚಂದ್ರು ದಲಿತ ಸಮಾಜದ ಯುವಕ ಅಂತಾ ಗೃಹ ಸಚಿವರು ಹೇಳಿದ್ದಾರೆ. ಆದರೆ, ಇಂದು ನೀಡುತ್ತಿರುವ ಹೇಳಿಕೆಗಳು ಅವರ ಸಣ್ಣತನವನ್ನು ತೋರಿಸುತ್ತದೆ. ಸಮಾಜದ ಶಾಂತಿ ಕದಡುವ ವೇಳೆ, ಗೃಹ ಸಚಿವರಿಗೆ ತಮ್ಮ ಸ್ಥಾನದ ಜವಾಬ್ದಾರಿ ಅರಿವಿಲ್ಲದಂತಾಗಿದೆ. ಇದರಲ್ಲಿ ಯಾವುದು ಸತ್ಯ ಎಂಬುದು ತಿಳಿಯದೇ ಮಂತ್ರಿಯೇ ತನಿಖೆಗೆ ಮುನ್ನ ತೀರ್ಪು ಕೊಟ್ಟಿದ್ದಾರೆ. ಹಿಂದೂ ಮುಸ್ಲಿಂ ಮಧ್ಯೆ ಕಂದಕ ತರುವ ಕೆಲಸ ಬಿಜೆಪಿ ಮಾಡುತ್ತಿದೆ ಎಂದು ದೂರಿದ್ದಾರೆ. ಇದನ್ನೂಓದಿ: ಉರ್ದು ಮಾತನಾಡಲು ಬರದಕ್ಕೆ ಚಂದ್ರು ಕೊಲೆ: ಆರಗ

    ಮೌನ ಮುರಿಯಲಿ ಸಿಎಂ: ಮುಖ್ಯಮಂತ್ರಿಗಳ ಮೌನ ರಾಜ್ಯದಲ್ಲಿ ಅನಾಹುತ ಮಾಡುತ್ತದೆ. ಇಂತಹ ಘಟನೆಗಳನ್ನು ಸರ್ಕಾರ ಪ್ರಾರಂಭಿಕ ಹಂತದಿಂದಲೇ ಸರಿಪಡಿಸಬೇಕು. ಗೃಹಸಚಿವರ ಹೇಳಿಕೆಯಿಂದ ಹಿಂದೂ ಮುಸ್ಲಿಮರ ನಡುವೆ ಸಾಮರಸ್ಯ ಹಾಳಾಗುತ್ತಿದೆ. ಇದರಲ್ಲಿ ನಾನು ಯಾವುದೇ ಸಮಾಜದ ಓಲೈಕೆ ಮಾಡುತ್ತಿಲ್ಲ. ರಾಜ್ಯದ ಎಲ್ಲ ಜನರೂ ನನಗೆ ಮುಖ್ಯ. ಆದ್ದರಿಂದ ಮುಖ್ಯಮಂತ್ರಿಗಳು ಎಚ್ಚೆತ್ತುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಚಿಕನ್ ಖರೀದಿ ಮಾಡುವಾಗ ಗಲಾಟೆ – ಯುವಕ ಬರ್ಬರ ಹತ್ಯೆ 

    HDK

    ಸಿನಿಮಾಗಳೇ ಕೃತ್ಯಗಳಿಗೆ ಪ್ರೇರಣೆ: ಇತ್ತೀಚಿನ ದಿನಗಳಲ್ಲಿ ಸಿನಿಮಾಗಳೇ ಹುಡುಗರಿಗೆ ಈ ರೀತಿಯ ಕೃತ್ಯ ಎಸಗಲು ಪ್ರೇರಣೆ ನೀಡುತ್ತಿವೆ. ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದ್ದು, ಇಂತಹ ಸಿನಿಮಾಗಳನ್ನು ಮಾಡಂದತೆ ನಿರ್ದೇಶಕರಿಗೂ ಎಚ್ಚರ ವಹಿಸಬೇಕು. ಈ ಪ್ರಕರಣದಲ್ಲಿ ಮುಸ್ಲಿಂ ಯುವಕರು ಎಂದು ಕನಿಕರ ತೋರದೇ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಬೇರೆ ಬೇರೆ ವಿಚಾರಕ್ಕೆ ಕೊಲೆಯಾದವು, ಆದರೆ, ಕೊಲೆ ವಿಚಾರದಲ್ಲಿ ಬಿಜೆಪಿ ಸೆಲೆಕ್ಟಿವ್ ಆಗಿ ಕಾರ್ಯ ಪ್ರವೃತವಾಗುತ್ತದೆ ಇದು ಸರಿಯಲ್ಲ ಎಂದು ಕುಟುಕಿದರು.

    ಇದೇ ವೇಳೆ ಸಮಾಜ ಹಾಳು ಮಾಡಿ, ಕುಟುಂಬಗಳ ಬೀದಿಗೆ ತಂದು ಮತ್ತೆ ಸಿಎಂ ಆಗುವ ಆಸೆ ನನಗೆ ಇಲ್ಲ. ನಾನು ಎರಡು ರಾಜಕೀಯ ಪಕ್ಷಗಳನ್ನು ಈ ರಾಜ್ಯದಿಂದ ಕಿತ್ತಾಕುವ ಸುಪಾರಿಯನ್ನು ಜನರಿಂದ ಪಡೆದಿದ್ದೇನೆ. ನಾನು ಯಾವ ಸಮಾಜದ ಓಲೈಕೆಗೂ ರಾಜಕಾರಣ ಮಾಡುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

  • ಶಿವಮೊಗ್ಗದಲ್ಲಿ ಭುಗಿಲೆದ್ದ ಹಿಜಬ್-ಕೇಸರಿ ವಿವಾದ- ರಾಷ್ಟ್ರಧ್ವಜ ಹಾರಿಸುವಲ್ಲಿ ಭಗವಾನ್ ಧ್ವಜ ಹಾರಿಸಿದ ವಿದ್ಯಾರ್ಥಿಗಳು

    ಶಿವಮೊಗ್ಗದಲ್ಲಿ ಭುಗಿಲೆದ್ದ ಹಿಜಬ್-ಕೇಸರಿ ವಿವಾದ- ರಾಷ್ಟ್ರಧ್ವಜ ಹಾರಿಸುವಲ್ಲಿ ಭಗವಾನ್ ಧ್ವಜ ಹಾರಿಸಿದ ವಿದ್ಯಾರ್ಥಿಗಳು

    ಶಿವಮೊಗ್ಗ: ಇಂದು ಹೈಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಡೆಯಲಿದ್ದು, ಈ ಮಧ್ಯೆಯೇ ರಾಜ್ಯಾದ್ಯಂತ ಕಾಲೇಜುಗಳಲ್ಲಿ ಹಿಜಬ್- ಕೇಸರಿ ಶಾಕು ಸಂಘರ್ಷ ತಾರಕಕ್ಕೇರಿದೆ. ಅಂತೆಯೇ ಶಿವಮೊಗ್ಗದ ಕಾಲೇಜೊಂದರಲ್ಲಿ ವಿದ್ಯಾರ್ಥಿಗಳು ರಾಷ್ಟ್ರಧ್ವಜ ಹಾರಿಸುವ ಸ್ಥಳದಲ್ಲಿ ಭಗವಾನ್ ಧ್ವಜ ಹಾರಿಸಿದ್ದಾರೆ.

    ಶಿವಮೊಗ್ಗದ ಬಹುತೇಕ ಕಾಲೇಜುಗಳಲ್ಲಿ ಹಿಜಬ್, ಕೇಸರಿ ಶಾಲು ವಿವಾದ ಭುಗಿಲೆದಿದೆ. ಸಹ್ಯಾದ್ರಿ ಕಾಲೇಜ್, ಸರಕಾರಿ ಪದವಿ ಕಾಲೇಜ್ ಹಾಗು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸರಕಾರಿ ಪದವಿ ಕಾಲೇಜಿನಲ್ಲಿ ಕಲ್ಲು ತೂರಾಟ ನಡೆಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಜಾರ್ಜ್ ಮಾಡಿದ್ದಾರೆ.

    ಶಿವಮೊಗ್ಗದ ಬಿ.ಎಚ್.ರಸ್ತೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳು ಜೈ ಶ್ರೀರಾಮ್ ಎಮದು ಘೋಷಣೆ ಕೂಗಿದ್ದಾರೆ. ಸ್ಥಳಕ್ಕೆ ಎಸ್‍ಪಿ ಲಕ್ಷ್ಮಿ ಪ್ರಸಾದ್ ದೌಡಾಯಿಸಿದ್ದಾರೆ. ಇದನ್ನೂ ಓದಿ: ಕೇಸರಿ ಪೇಟ, ಕೇಸರಿ ಶಾಲಿನೊಂದಿಗೆ ಕಾಲೇಜಿಗೆ ಬಂದ ಎಂಜಿಎಂ ವಿದ್ಯಾರ್ಥಿಗಳು!

    ಒಟ್ಟನಲ್ಲಿ ಹೈಕೋರ್ಟ್ ವಿಚಾರಣೆ ನಡುವೆಯೇ ರಾಜ್ಯಾದ್ಯಂತ ಹಿಜಬ್- ಕೇಸರಿ ಶಾಲು ಸಂಘರ್ಷ ವಿಕೋಪಕ್ಕೆ ತಿರುಗುತ್ತಿದೆ. ರಾಜ್ಯದ ಹಲವಡೆ ಕಲ್ಲುತೂರಾಟ ನಡೆಯುತ್ತಿದೆ. ಪರಿಸ್ಥಿತಿ ನಿಯಂತ್ರಿಸಲು ಆಯಾ ಕಾಲೇಜಿನ ಆಡಳಿತ ಮಂಡಳಿಗಳು ಹಾಗೂ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಇದನ್ನೂ ಓದಿ: ಧಮ್ ಇದ್ರೆ ಮಸೀದಿಗೆ ಮುಸ್ಲಿಂ ಮಹಿಳೆಗೆ ಪ್ರವೇಶ ಕೊಡಿಸಿ- ಶಾಸಕಿಗೆ ಈಶ್ವರಪ್ಪ ಸವಾಲು

  • ಅವನು ದಡ್ಡನಲ್ಲ, ಕಿಲಾಡಿ – ಜಮೀರ್‌ನನ್ನು ಹಾಡಿಹೊಗಳಿದ ಸೋಮಣ್ಣ

    ಅವನು ದಡ್ಡನಲ್ಲ, ಕಿಲಾಡಿ – ಜಮೀರ್‌ನನ್ನು ಹಾಡಿಹೊಗಳಿದ ಸೋಮಣ್ಣ

    – ಎಲ್ಲ ಮುಸ್ಲಿಮರು ಕೆಟ್ಟವರಲ್ಲ, ಎಲ್ಲ ಹಿಂದೂಗಳು ಒಳ್ಳೆಯವರಲ್ಲ

    ಬೆಂಗಳೂರು: ಎಲ್ಲ ಮುಸ್ಲಿಮರು ಕೆಟ್ಟವರಲ್ಲ, ಎಲ್ಲ ಹಿಂದೂಗಳು ಒಳ್ಳೆಯವರಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

    ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ನಾಗರಭಾವಿ ವಾರ್ಡ್‍ನಲ್ಲಿ ಈದ್ಗಾ ಮೈದಾನ ಕಾಂಪೌಂಡ್ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಸೋಮಣ್ಣ, ಈ ಕಾಂಪೌಂಡ್ ಅನ್ನು ಆರು ತಿಂಗಳಿನಲ್ಲಿ ಕಟ್ಟಿಕೊಡುತ್ತೇನೆ. ಎಲ್ಲ ಜಾತಿ ಧರ್ಮಗಳಲ್ಲೂ ಒಳ್ಳೆಯವರು ಇರುತ್ತಾರೆ, ಕೆಟ್ಟವರು ಇರುತ್ತಾರೆ. ದೇವರು ಇದ್ದಾನೆ ಅಂದರೆ ಅಲ್ಲಿ ದೆವ್ವ-ಸೈತಾನ್‍ಗಳು ಇದ್ದೇ ಇರುತ್ತವೆ ಎಂದು ತಿಳಿಸಿದ್ದಾರೆ.

    ಇದೇ ವೇಳೆ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಅವರನ್ನು ಹಾಡಿಹೊಗಳಿದ ಸೋಮಣ್ಣ, ಈ ಕಾರ್ಯಕ್ರಮಕ್ಕೆ ನಾನು ಜಮೀರ್ ನನ್ನು ಕರೆದುಕೊಂಡು ಬರಬೇಕು ಎಂದುಕೊಂಡಿದ್ದೆ. ಆದರೆ ಅವನು ಬರಲಿಲ್ಲ. ಅವನು ನನ್ನ ಆತ್ಮೀಯ, ಅವನು ದಡ್ಡ ಅಲ್ಲ, ಕಿಲಾಡಿ ಎಂದು ಹಾಡಿ ಹೊಗಳಿದರು. ಜಮೀರ್ ಕೇವಲ ಮುಸಲ್ಮಾರ ಎಂಎಲ್‍ಎ ಅಲ್ಲ, ಎಲ್ಲಾ ವರ್ಗದವರ ಎಂಎಲ್‍ಎ ಎಂದು ಹೇಳಿದರು.

    ನನಗೆ ಜಮೀರ್ ಸಿಗಲಿಲ್ಲ. ಅವನನ್ನು ಹಿಡಿದುಕೊಂಡು ಬರೋಣ ಅಂದುಕೊಂಡೆ. ಇಲ್ಲಿ ಬಂದು ನಮ್ಮ ಕೆಲಸದ ಬಗ್ಗೆ ಮಾತಾಡು, ಏನೇನೋ ಹೇಳಿಬಿಟ್ಟು ಬೆಂಕಿ ಇಟ್ಟು ಓಡಿ ಹೋಗಬೇಡ ಎಂದು ಅವನಿಗೆ ಹೇಳೋಣ ಅಂದುಕೊಂಡಿದ್ದೆ ಎಂದು ಸೋಮಣ್ಣ ಹಾಸ್ಯ ಚಟಾಕಿ ಹಾಕಿದರು.

  • ಹಿಂದೂ, ಮುಸ್ಲಿಮರಿಂದ ಉತ್ಸವ ಆಚರಣೆ- ಮಲಗಿ ಹರಕೆ ತೀರಿಸುವ ಭಕ್ತರು

    ಹಿಂದೂ, ಮುಸ್ಲಿಮರಿಂದ ಉತ್ಸವ ಆಚರಣೆ- ಮಲಗಿ ಹರಕೆ ತೀರಿಸುವ ಭಕ್ತರು

    ತುಮಕೂರು: ಹಿಂದೂ ಮತ್ತು ಮುಸ್ಲಿಂ ಸಮುದಾಯದವರು ಜೊತೆಯಾಗಿ ಆಚರಿಸುವ ಬಾಬಯ್ಯನ ಉತ್ಸವದಲ್ಲಿ ಆಚರಣೆಯೊಂದನ್ನು ತುಮಕೂರಿನ ಹೆಗ್ಗೆರೆಯಲ್ಲಿ ನಡೆಸಿಕೊಂಡು ಬರಲಾಗಿದೆ.

    ಬಾಬಯ್ಯನ ಉತ್ಸವ ಸಾಗುವಾಗ ಉತ್ಸವದ ಕೆಳಗೆ ಮಲಗಿ ಹರಕೆ ತೀರಿಸುವ ಪದ್ಧತಿ ಇದೆ. ಮಕ್ಕಳು ಸೇರಿದಂತೆ ಹಿರಿಯರು ಕೂಡ ಈ ಉತ್ಸವದ ಕೆಳಗಡೆ ಮಲಗಿ ಹರಕೆ ತೀರಿಸುತ್ತಾರೆ. ಈ ಆಚರಣೆಯಲ್ಲಿ ಉತ್ಸವ ಹೊತ್ತವರು ಕೆಳಗೆ ಮಲಗಿದ್ದವರನ್ನು ದಾಟಿ ಹೋಗುತ್ತಾರೆ. ಆಗ ಭಕ್ತರ ಹರಕೆ ತೀರಿದಂತೆ ಆಗುತ್ತದೆ ಎಂಬ ನಂಬಿಕೆ ಇದೆ. ಆದರೆ ಈ ಆಚರಣೆಯಿಂದ ಪುಟ್ಟಪುಟ್ಟ ಮಕ್ಕಳ ಜೀವಕ್ಕೆ ಕುತ್ತು ಬರುವ ಸಾಧ್ಯತೆ ಹೆಚ್ಚಾಗಿದೆ.

    ಹಿಂದೂ, ಮುಸ್ಲಿಂ ಎಂಬ ಧರ್ಮ ಬೇಧವಿಲ್ಲದೆ ಎರಡೂ ಧರ್ಮದವರು ಒಂದಾಗಿ ಈ ಉತ್ಸವ ಆಚರಿಸೋದು ವಿಶೇಷ. ಈ ಉತ್ಸವದಲ್ಲಿ ಸಾವಿರಾರು ಮಂದಿ ಸೇರುತ್ತಾರೆ. ಹೀಗಾಗಿ ನೂಕು ನುಗ್ಗಲು, ತಳ್ಳಾಟ ಇರುತ್ತದೆ. ಪರಿಣಾಮ ಕೆಳಗೆ ಮಲಗಿದವರ ಮೇಲೆ ಯಾವುದೇ ಕ್ಷಣದಲ್ಲೂ ಕಾಲ್ತುಳಿತ ನಡೆಯಬಹುದು. ಆದರೂ ಯಾವುದೇ ಮುನ್ನೆಚ್ಚರಿಕಾ ಕ್ರಮವನ್ನು ತೆಗೆದುಕೊಳ್ಳದೇ ಈ ಅಪಯಕಾರಿ ಆಚರಣೆ ನಡೆಯುತ್ತಿದೆ. ಇದನ್ನು ಕಂಡೂ ಕಾಣದಂತೆ ಪೊಲೀಸರು ಮೂಕ ಪ್ರೇಕ್ಷಕರಾಗಿದ್ದಾರೆ.

    ಈ ರೀತಿ ಆಚರಣೆ ಮಾಡುವುದು ಭಕ್ತರ ಪದ್ಧತಿ, ಸಂಪ್ರದಾಯವೇ ಇರಬಹುದು. ಆದರೆ ಸಾವಿರಾರು ಜನ ಸೇರುವ ಉತ್ಸವದಲ್ಲಿ ಹೀಗೆ ನೆಲದ ಮೇಲೆ ಮಲಗಿ ಹರಕೆ ತೀರುಸುವಾಗ ಸಾವು, ನೋವುಗಳಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಆದ್ದರಿಂದ ಈ ರೀತಿ ಆಚರಣೆ ಮಾಡುವಾಗ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.