Tag: Hindu nation

  • ನಮ್ಮ ದೇಶ ಹಿಂದೂ ರಾಷ್ಟ್ರವಾದರೆ ದೇಶಕ್ಕೇ ತೊಂದರೆ: ಯತೀಂದ್ರ ಸಿದ್ದರಾಮಯ್ಯ

    ನಮ್ಮ ದೇಶ ಹಿಂದೂ ರಾಷ್ಟ್ರವಾದರೆ ದೇಶಕ್ಕೇ ತೊಂದರೆ: ಯತೀಂದ್ರ ಸಿದ್ದರಾಮಯ್ಯ

    ದಾವಣಗೆರೆ: ನಮ್ಮ ದೇಶ ಹಿಂದೂ ರಾಷ್ಟ್ರ (Hindu Nation) ಆಗಬಾರದು. ಹಿಂದೂ ರಾಷ್ಟ್ರವಾದರೆ ಅದಕ್ಕಿಂತ ದೊಡ್ಡ ಅಪಾಯ ಮತ್ತೊಂದಿಲ್ಲ. ಇದನ್ನು ಅಂಬೇಡ್ಕರ್ (Dr B.R Ambedkar) ಅವರೇ ಹೇಳಿದ್ದಾರೆ. ನಮ್ಮ ದೇಶ ಹಿಂದೂ ರಾಷ್ಟ್ರವಾದರೆ ದೇಶಕ್ಕೇ ತೊಂದರೆ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

    ದಾವಣಗೆರೆಯ (Davanagere) ರುದ್ರನಕಟ್ಟೆ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ದೇಶ ಹಿಂದೂ ರಾಷ್ಟ್ರವಾದರೆ ಪಾಕಿಸ್ತಾನ, ಅಫ್ಘಾನಿಸ್ತಾನ ಥರನೇ ಆಗುತ್ತದೆ. ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ಧರ್ಮದ ಹೆಸರಲ್ಲಿ ಸರ್ವಾಧಿಕಾರ ಮಾಡಿ ದಿವಾಳಿಯಾಗಿವೆ. ದೇಶ ಜಾತ್ಯಾತೀತ ತತ್ವ ಬಿಟ್ಟು ಧರ್ಮದ ಹಿಂದೆ ಹೋದರೆ ಅಭಿವೃದ್ಧಿ ಕಾಣಲ್ಲ ಎಂದರು. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆ ನಂತರ ಕೋಟ್ಯಂತರ ಭಕ್ತರಿಗೆ ಅವಕಾಶ: ಪೇಜಾವರ ಶ್ರೀ

    ಇವತ್ತು ಜಾತ್ಯಾತೀತ ತತ್ವಕ್ಕೆ ಅಪಾಯ ಬಂದಿದೆ. ಬಿಜೆಪಿ (BJP) ಹಾಗೂ ಮಾತೃ ಸಂಸ್ಥೆ ಆರ್‌ಎಸ್‌ಎಸ್‌ನಿಂದ ಅಪಾಯ ಶುರುವಾಗಿದೆ. ಬಿಜೆಪಿಯ ಅಂಗ ಸಂಘಟನೆಗಳು ಹಿಂದೂ ದೇಶ ಮಾಡೋಕೆ ಹೊರಟಿದ್ದಾರೆ. ಇದಕ್ಕೆ ಅವಕಾಶ ಮಾಡಿಕೊಟ್ಟರೆ ನಮ್ಮ ದೇಶ ಕೂಡ ಪಾಕಿಸ್ತಾನ ಅಪ್ಘಾನಿಸ್ತಾನ ಆಗುತ್ತದೆ. ಧರ್ಮದ ಮೇಲೆ ರಾಜಕೀಯ ಮಾಡುವ ಪಕ್ಷಗಳ ಬಗ್ಗೆ ನಾವು ಹುಷಾರಾಗಿರಬೇಕು. ಧರ್ಮದಿಂದ ಹಿಂದುಳಿದವರು ಮೇಲೇಳೋಕೆ ಸಾಧ್ಯವಾಗುತ್ತಿಲ್ಲ. ಇತಿಹಾಸವನ್ನು ನೋಡಿ ನಾವು ಪಾಠ ಕಲಿಯಬೇಕು. ಇತಿಹಾಸ ನೋಡಿ ನಾವು ದೇಶವನ್ನು ಕಟ್ಟಬೇಕು. ದೇಶಕ್ಕೆ ಉಜ್ವಲ ಭವಿಷ್ಯವಿದೆ ಎಂದು ಹೇಳಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ತುಘಲಕ್ ಸರ್ಕಾರ ನಡೆಯುತ್ತಿದೆ: ರೇಣುಕಾಚಾರ್ಯ ಕಿಡಿ

    ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್‌ನಲ್ಲಿ ಯಾರು ಹಿಂದುಳಿದವರು, ಅಲ್ಪ ಸಂಖ್ಯಾತ ಜಡ್ಜ್‌ಗಳು ಎಷ್ಟು ಜನರಿದ್ದಾರೆ. ಮೇಲ್ವರ್ಗದವರೇ ಸಮಾಜವನ್ನು ನಿಯಂತ್ರಣ ಮಾಡುತ್ತಿದ್ದಾರೆ. ಜನಸಂಖ್ಯೆಗೆ ಅನುಗುಣವಾಗಿ ನಮಗೂ ಕೂಡ ಸಮಾಜದಲ್ಲಿ ಉನ್ನತ ಸ್ಥಾನಗಳು ಸಿಗಬೇಕು. ಧರ್ಮಕ್ಕಾಗಿ ಇನ್ನೊಬ್ಬರ ಜೊತೆ ಹೋರಾಟ ಮಾಡಲು ಹೋದರೆ ನಮ್ಮ ಹಕ್ಕು ಕಳೆದುಕೊಳ್ಳಬೇಕಾಗುತ್ತದೆ. ಇದಕ್ಕಾಗಿ ನಾವು ಬದಲಾಗಬೇಕು ಎಂದು ನುಡಿದರು. ಇದನ್ನೂ ಓದಿ: ಬಿ.ಕೆ ಹರಿಪ್ರಸಾದ್ ಹಿಂದೂವೇ ಅಲ್ಲ, ದೇಶದ್ರೋಹಿ: ಯಶ್‌ಪಾಲ್ ಸುವರ್ಣ

  • ಭಾರತ ಹಿಂದೂ ರಾಷ್ಟ್ರವಲ್ಲ, ಆಗಿರಲೂ ಇಲ್ಲ: RSS ವಿರುದ್ಧ ಎಸ್‌ಪಿ ನಾಯಕ ಕಿಡಿ

    ಭಾರತ ಹಿಂದೂ ರಾಷ್ಟ್ರವಲ್ಲ, ಆಗಿರಲೂ ಇಲ್ಲ: RSS ವಿರುದ್ಧ ಎಸ್‌ಪಿ ನಾಯಕ ಕಿಡಿ

    ನವದೆಹಲಿ: ಭಾರತ ಎಂದಿಗೂ ಹಿಂದೂ ರಾಷ್ಟ್ರವಲ್ಲ, ಹಿಂದೂ ರಾಷ್ಟ್ರ ಆಗಿರಲೂ ಇಲ್ಲ ಎಂದು ಸಮಾಜವಾದಿ ಪಕ್ಷದ (SP) ನಾಯಕ ಸ್ವಾಮಿ ಪ್ರಸಾದ್ ಮೌರ್ಯ (Swami Prasad Maurya), ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧ ಕಿಡಿ ಕಾರಿದ್ದಾರೆ.

    ಭಾರತವು ಹಿಂದೂ ರಾಷ್ಟ್ರ ಎಂದು ಹೇಳಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ವಿರುದ್ಧ ವಾಗ್ದಾಳಿ ನಡೆಸಿರುವ ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಟ್ವೀಟ್‌ ಮೂಲಕವೇ ತಿರುಗೇಟು ಕೊಟ್ಟಿದ್ದಾರೆ.

    ಭಾರತ ಹಿಂದೂ ರಾಷ್ಟ್ರ ಅಲ್ಲ, ಅದು ಎಂದಿಗೂ ಹಿಂದೂ ರಾಷ್ಟ್ರ ಆಗಿರಲಿಲ್ಲ. ಭಾರತವು ಅಂತರ್ಗತವಾಗಿ ಒಂದು ಬಹುತ್ವದ ದೇಶವಾಗಿದೆ. ನಮ್ಮ ಸಂವಿಧಾನವು ಜಾತ್ಯತೀತ ರಾಷ್ಟ್ರದ ಪರಿಕಲ್ಪನೆ ಆಧಾರದಲ್ಲಿ ರಚನೆಯಾಗಿದೆ. ಭಾರತದಲ್ಲಿ ಇರುವ ಎಲ್ಲಾ ಜನರೂ ಭಾರತೀಯರೇ. ನಮ್ಮ ಭಾರತೀಯ ಸಂವಿಧಾನವು ಎಲ್ಲಾ ಧರ್ಮ, ನಂಬಿಕೆಗಳು, ಪಂಥ ಹಾಗೂ ಸಂಸ್ಕೃತಿಗಳ ಪ್ರಾತಿನಿಧಿತ್ವ ಪ್ರತಿನಿಧಿಸುತ್ತದೆ ಎಂದು ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿದ್ದಾರೆ.

    ಮೋಹನ್‌ ಭಾಗವತ್ ಹೇಳಿದ್ದೇನು?
    ನಾಗಪುರದಲ್ಲಿ ಮಧುಕರ ಭವನ ಉದ್ಘಾಟಿಸಿ ಮಾತನಾಡಿದ್ದ ಮೋಹನ್ ಭಾಗವತ್, ಭಾರತವು ಒಂದು ಹಿಂದೂ ರಾಷ್ಟ್ರ. ಎಲ್ಲಾ ಭಾರತೀಯರೂ ಹಿಂದೂಗಳು ಮತ್ತು ಹಿಂದೂಗಳು ಎಲ್ಲಾ ಭಾರತೀಯರನ್ನ ಪ್ರತಿನಿಧಿಸುತ್ತಾರೆ. ಇದನ್ನೂ ಓದಿ: ಪಾಕಿಸ್ತಾನಕ್ಕೆ ಸಪೋರ್ಟ್‌ ಮಾಡ್ತಿದ್ದಾರೆ ʻಐರಾವತʼಬೆಡಗಿ – ಊರ್ವಶಿ ರೌಟೇಲಾ ಕಾಲೆಳೆದ ಟ್ರೋಲ್‌ ಗೆಳೆಯರು

    ಹಿಂದೂಸ್ತಾನವು ಒಂದು ಹಿಂದೂ ದೇಶ ಮತ್ತು ಇದು ವಾಸ್ತವ. ಸೈದ್ಧಾಂತಿಕವಾಗಿ, ಎಲ್ಲಾ ಭಾರತೀಯರೂ ಹಿಂದೂಗಳು ಮತ್ತು ಹಿಂದೂಗಳು ಎಂದರೆ ಭಾರತೀಯರು. ಭಾರತದಲ್ಲಿ ಇಂದು ಇರುವವರೆಲ್ಲರೂ ಹಿಂದೂ ಸಂಸ್ಕೃತಿಗೆ, ಹಿಂದೂ ಪೂರ್ವಜರಿಗೆ ಮತ್ತು ಹಿಂದೂ ಭೂಮಿಗೆ ಸಂಬಂಧಿಸಿದವರು. ಇದಕ್ಕಿಂತ ಬೇರೇನೂ ಅಲ್ಲ ಎಂದು ತಿಳಿಸಿದ್ದರು.

    ಅಸ್ಸಾಂನ ಗುವಾಹಟಿಯಲ್ಲಿನ ಮತ್ತೊಂದು ಕಾರ್ಯಕ್ರಮದಲ್ಲಿ ಮಾತನಾಡಿದ್ದ ಭಾಗವತ್, ಇಂಡಿಯಾ ಹೆಸರಿನ ಬದಲು ದೇಶವನ್ನ ಭಾರತ ಎಂಬ ಹೆಸರಿನಿಂದ ಕರೆಯಬೇಕು. ಏಕೆಂದರೆ ಭಾರತ ಎನ್ನುವುದು ಬಹಳ ಪುರಾತನ ಕಾಲದಿಂದ ಇದೆ ಅಂತ ಹೇಳಿದ್ದರು. ಇದನ್ನೂ ಓದಿ: Asia Cup 2023: ಕೈಕೊಟ್ಟ ಕೊಹ್ಲಿ, ರೋಹಿತ್‌, ಗಿಲ್‌ – ಪಾಕಿಸ್ತಾನಕ್ಕೆ 267 ರನ್‌ ಗುರಿ ನೀಡಿದ ಭಾರತ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಮ್ಮ ನಾಯಕರು ಸೀತೆಯಂತೆ ಅಪವಾದ ಗೆದ್ದು ಬಂದರು: ಬಿ.ಎಲ್.ಸಂತೋಷ್

    ನಮ್ಮ ನಾಯಕರು ಸೀತೆಯಂತೆ ಅಪವಾದ ಗೆದ್ದು ಬಂದರು: ಬಿ.ಎಲ್.ಸಂತೋಷ್

    – ನಮ್ಮ ದೇಶ ಹಿಂದೂ ರಾಷ್ಟ್ರ ಅಲ್ಲ, ನಮ್ಮ ದೇಶ ಜಾತ್ಯತೀತ ರಾಷ್ಟ್ರ

    ಮೈಸೂರು: ನಮ್ಮ ಪ್ರಧಾನಮಂತ್ರಿಗೆ, ನಮ್ಮ ಗೃಹ ಮಂತ್ರಿಗೆ ಹಾಗೂ ನಮ್ಮ ಸಿಎಂಗೆ ಒಂದೊಂದು ಕಾಲದಲ್ಲಿ ಒಂದೊಂದು ಕಳಂಕ ಅಂಟಿಸುವ ಕೆಲಸ ಮಾಡಿದರು. ಆದರೆ ನಮ್ಮ ನಾಯಕರು ಸೀತೆಯಂತೆ ಅಪವಾದ ಗೆದ್ದು ಬಂದರು. ಈಗ ಪೌರತ್ವ ಕಾಯ್ದೆ ವಿಚಾರದಲ್ಲೂ ಕಳಂಕ ಅಂಟಿಸಲು ವಿಪಕ್ಷಗಳು ಸಂಕಲ್ಪ ಮಾಡಿವೆ. ಇದನ್ನು ನಾವೆಲ್ಲಾ ಸೇರಿ ತಪ್ಪಿಸಬೇಕು. ಜನರಿಗೆ ವಾಸ್ತವ ತಿಳಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿದ್ದಾರೆ.

    ಇಂದು ಮೈಸೂರಿನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ 2019 ಒಂದು ವಿಮರ್ಶೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ದೇಶದ ಎಲ್ಲಾ ಕಡೆ ಮಸೀದಿಗಳಿವೆ. ಎಲ್ಲೂ ಅವರಿಗೆ ಅವಕಾಶ ನಿರಾಕರಿಸಿಲ್ಲ. ಮುಸ್ಲಿಮರು ಈ ದೇಶದಲ್ಲಿ ಏರಬೇಕಾದ ಎಲ್ಲಾ ಉನ್ನತ ಸ್ಥಾನ ಏರಿದ್ದಾರೆ. ಇದಕ್ಕೆ ಯಾರು ಅಡ್ಡಿ ಬಂದಿಲ್ಲ. ಈ ದೇಶದಲ್ಲಿ ಮುಸ್ಲಿಮರು, ಕ್ರಿಶ್ಚಿಯನ್‍ರಿಗೆ ಯಾವತ್ತೂ ತೊಂದರೆ ಆಗಿಲ್ಲ. ಮುಸ್ಲಿಮರು ಕ್ರಿಶ್ಚಿಯನ್ ದೊಡ್ಡ ಮಟ್ಟದಲ್ಲಿ ಬೆಳೆದಿದ್ದಾರೆ. ಆದರೆ ಬೇರೆ ದೇಶದಲ್ಲಿ ಹಿಂದೂಗಳ ಸ್ಥಿತಿ ಏನಾಗಿದೆ ನೋಡಿ ಎಂದರು.

    ಭಾರತದಲ್ಲಿ ಸದಾ ಕಾಲಕ್ಕೂ ಮುಸ್ಲಿಮರು ಸುಶಿಕ್ಷಿತರಾಗಿರುತ್ತಾರೆ. ದೇಶದಲ್ಲಿನ ಎಲ್ಲಾ ಅಲ್ಪಸಂಖ್ಯಾತ ಜನರು ಇಲ್ಲಿ ಸದಾ ಸುರಶಿಕ್ಷಿತರಾಗಿರುತ್ತಾರೆ ಅನುಮಾನಗಳೇ ಬೇಡ. ನಮ್ಮ ದೇಶ ಹಿಂದೂ ರಾಷ್ಟ್ರ ಅಲ್ಲ, ನಮ್ಮ ದೇಶ ಜಾತ್ಯತೀತ ರಾಷ್ಟ್ರ. ಆದರೆ ನಮ್ಮ ಪಕ್ಕದ ದೇಶಗಳು ಧರ್ಮದ ದೇಶಗಳಾಗಿವೆ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಬೇರೆ ದೇಶದಿಂದ ನಮ್ಮ ದೇಶಕ್ಕೆ ಬಂದಿರುವ ಜನರಲ್ಲಿ ಶೇಕಡಾ 68 ಜನರು ದಲಿತರು, ಅವರಿಗೆ ಪೌರತ್ವ ಕೊಡೋದು ತಪ್ಪಾ? ಅವರಿಗೆ ನಾವು ಪೌರತ್ವ ಕೊಡೋದೆ ಇನ್ಯಾರಿಗೆ ಕೊಡಬೇಕು? ಇದು ದಲಿತರ ವಿರೋಧಿ ಕಾಯ್ದೆ ಎಂದು ಅಪ್ರಚಾರ ಮಾಡ್ತಿರಾ? ಎಂದು ಪ್ರಶ್ನಿಸಿದರು.

    ಪೌರತ್ವ ಕಾಯ್ದೆ ಹೋರಾಟದಿಂದ ಕಾಂಗ್ರೆಸ್‍ನ ಕೆಲ ನಾಯಕರೆ ಹಿಂದೆ ಸರಿಯುತ್ತಿದ್ದಾರೆ. ಅವರಿಗೆ ಇದು ರಾಜಕೀಯವಾಗಿ ತಮಗೆ ತೊಡಕಾಗುತ್ತಿದೆ ಎಂಬುದು ಗೊತ್ತಾಗುತ್ತಿದೆ. ನಿಧಾನವಾಗಿ ಮುಸ್ಲಿಮರು ಕೂಡ ಈ ಹೋರಾಟದಿಂದ ಹಿಂದೆ ಸರಿಯುತ್ತಿದ್ದಾರೆ. ಕೆಲ ನಗರ ನಕ್ಸಲರು, ಕೆಲ ವಿಚಾರವಾದಿಗಳು, ಕೆಲ ಮುಸ್ಲಿಂ ಮುಖಂಡರು, ಕೆಲ ನಿರುದ್ಯೋಗಿ ರಾಜಕಾರಣಿಗಳಷ್ಟೇ ಇದರ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

  • ಧರ್ಮದ ಹೆಸರಿನಲ್ಲಿ ವಿಭಜನೆಯಾದ ಭಾರತ ಹಿಂದೂ ರಾಷ್ಟ್ರವಾಗಬೇಕಿತ್ತು : ಹೈಕೋರ್ಟ್ ಜಡ್ಜ್

    ಧರ್ಮದ ಹೆಸರಿನಲ್ಲಿ ವಿಭಜನೆಯಾದ ಭಾರತ ಹಿಂದೂ ರಾಷ್ಟ್ರವಾಗಬೇಕಿತ್ತು : ಹೈಕೋರ್ಟ್ ಜಡ್ಜ್

    ಶಿಲ್ಲಾಂಗ್: ಧರ್ಮದ ಹೆಸರಿನಲ್ಲಿ ದೇಶ ವಿಭಜನೆಯಾದ ಬಳಿಕ ಪಾಕಿಸ್ತಾನ ತನ್ನನ್ನು ಮುಸ್ಲಿಂ ರಾಷ್ಟ್ರ ಎಂದು ಕರೆದುಕೊಂಡಿದೆ. ಆದರೆ ಭಾರತ ಮಾತ್ರ ಜ್ಯಾತ್ಯಾತೀತ ರಾಷ್ಟ್ರ ಎಂದು ಕರೆದುಕೊಳ್ಳುತ್ತಿದೆ. ಆದರೆ ಭಾರತವನ್ನ ಹಿಂದೂ ರಾಷ್ಟ್ರ ಎಂದು ಕರೆಯಬೇಕೆಂದು ಮೇಘಾಲಯ ಹೈಕೋರ್ಟ್ ನ್ಯಾಯಮೂರ್ತಿ ಎಸ್ ಆರ್ ಸೇನ್ ಅಭಿಪ್ರಾಯ ಪಟ್ಟಿದ್ದಾರೆ.

    ರಾಣಾ ಎಂಬುವವರಿಗೆ ರಾಜ್ಯ ಸರ್ಕಾರ ನಿವಾಸ ಪ್ರಮಾಣ ಪತ್ರ ನಿರಾಕರಿಸಿದ ಪ್ರಕರಣದ ತೀರ್ಪು ನೀಡಿದ ಸಂದರ್ಭದಲ್ಲಿ ನ್ಯಾ. ಸೇನ್ ಅವರು ಈ ರೀತಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಜಗತ್ತಿನ ಅಥವಾ ಭಾರತದಲ್ಲಿ ಪ್ರಳಯ ಸಂಭವಿಸಿದ ಹೊರತು ಯಾರು ಭಾರತವನ್ನು ಮತ್ತೊಂದು ಮುಸ್ಲಿಂ ರಾಷ್ಟ್ರವನ್ನಾಗಿ ಮಾಡಲು ಪ್ರಯತ್ನಿಸಬೇಡಿ. ಇಂದಿಗೂ ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನದಲ್ಲಿ ಉಳಿದಿರುವ ಹಿಂದೂ, ಸಿಖ್, ಜೈನ್, ಬೌದ್ದ, ಕ್ರೈಸ್ತ, ಪಾರ್ಸಿ ಸೇರಿದಂತೆ ವಿವಿಧ ಧರ್ಮದ ಜನರಿಗೆ ಅಲ್ಲಿ ಚಿತ್ರ ಹಿಂಸೆ ನೀಡಲಾಗುತ್ತಿದೆ. ಅಲ್ಲದೇ ವಿಭಜನೆಯ ವೇಳೆ ಪಾಕಿಸ್ತಾನ ತೊರೆದು ಬಂದ ಹಿಂದೂಗಳಿಗೆ ಇಲ್ಲಿ ವಿದೇಶಿಯರಂತೆ ನೋಡಲಾಗುತ್ತಿದೆ. ಇದು ನನ್ನ ಪ್ರಕಾರ ನೈಸರ್ಗಿಕ ನ್ಯಾಯಾಂಗ ತತ್ವಕ್ಕೆ ವಿರುದ್ಧವಾಗಿದೆ ಎಂದಿದ್ದಾರೆ.

    ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನದಿಂದ ಬಂದ ಹಿಂದೂಗಳು,  ಸಿಖ್, ಬೌದ್ಧರು, ಪಾರ್ಸಿಗಳು ಯಾವುದೇ ದಾಖಲೆ ನೀಡದೇ ಇದ್ದರೂ ಅವರಿಗೆ ಭಾರತದ ಪೌರತ್ವ ನೀಡಬೇಕು ಎಂದು ನ್ಯಾ.ಸೇನ್ ಅವರು ಪ್ರಧಾನಿ ಮೋದಿಗೆ ಆದೇಶ ರೂಪದ ಮನವಿಯನ್ನು ಮಾಡಿದ್ದಾರೆ. ಅಷ್ಟೇ ಅಲ್ಲದೇ ಇದನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮಾತ್ರ ಆರ್ಥ ಮಾಡಿಕೊಳ್ಳಲು ಸಾಧ್ಯ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

    ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಬೇಕು. ಭಾರತದ ಕಾನೂನು ಮತ್ತು ಸಂವಿಧಾನವನ್ನ ಗೌರವಿಸದ ಯಾರೇ ಆಗಲಿ ಅವರನ್ನು ಭಾರತದ ನಾಗರಿಕ ಎಂದು ಗುರುತಿಸಬಾರದು ಎಂದು ತಮ್ಮ 37 ಪುಟಗಳ ಆದೇಶಲ್ಲಿ ಉಲ್ಲೇಖಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv