Tag: Hindu organizations

  • ಪ್ರೇಮಿಗಳ ದಿನಾಚರಣೆಗೆ ಹಿಂದೂ ಸಂಘಟನೆಗಳ ಅಡ್ಡಿ ಆತಂಕ – ಬೆಂಗ್ಳೂರು ಪಾರ್ಕ್, ಮಾಲ್‌ಗಳಲ್ಲಿ ಹೈ ಅಲರ್ಟ್

    ಪ್ರೇಮಿಗಳ ದಿನಾಚರಣೆಗೆ ಹಿಂದೂ ಸಂಘಟನೆಗಳ ಅಡ್ಡಿ ಆತಂಕ – ಬೆಂಗ್ಳೂರು ಪಾರ್ಕ್, ಮಾಲ್‌ಗಳಲ್ಲಿ ಹೈ ಅಲರ್ಟ್

    ಬೆಂಗಳೂರು: ಪ್ರೇಮಿಗಳ ದಿನಾಚರಣೆ (Valentine’s Day) ಬಂತು ಅಂದ್ರೆ ಸಾಕು, ಟೀನೇಜ್ ಹುಡುಗ-ಹುಡುಗಿಯರಿಗೆ ಹಬ್ಬ. ಆದ್ರೆ ಇದು ಪಾಶ್ಚಾತ್ಯ ಸಂಸ್ಕೃತಿಯಾಗಿದ್ದು, ಅದನ್ನೇ ಪಾಲನೆ ಮಾಡೋದು ಸರಿಯಲ್ಲ ಅಂತಾ ಹಿಂದೂ ಸಂಘಟನೆಗಳು (Hindu Organizations) ಪ್ರತಿ ವರ್ಷದಂತೆ ಈ ವರ್ಷವೂ ಸಮರ ಸಾರಿವೆ. ಅದಕ್ಕೆ ಪೊಲೀಸರು (Police) ಕೂಡ ತಯಾರಿ ಮಾಡಿಕೊಂಡಿದ್ದಾರೆ.

    ಈಗಾಗಲೇ ಪ್ರೇಮಿಗಳ ದಿನಾಚರಣೆ ಮಾಡಬಾರದು. ಇದನ್ನ ತಂದೆ-ತಾಯಂದಿರ ದಿನವನ್ನಾಗಿ ಆಚರಣೆ ಮಾಡಬೇಕು ಅಂತಾ ಕರೆ ಕೊಡಲಾಗಿದೆ. ಅದಕ್ಕೂ ಮೀರಿ ಪ್ರೇಮಿಗಳ ದಿನಾಚರಣೆಗೆ ಅನುಮತಿ ನೀಡಬಾರದು ಅಂತಾ ಹಿಂದೂ ಸಂಘಟನೆಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ ಮಾಡಿವೆ. ಇದನ್ನೂ ಓದಿ: ಫೆ. 21ರಿಂದ ಕರ್ನಾಟಕ – ಭಾರತ್‌ ಗೌರವ್‌ ಕಾಶಿ ದರ್ಶನ ಯಾತ್ರೆಯ ಮೂರನೇ ಟ್ರಿಪ್‌

    ಪ್ರತಿ ವರ್ಷದಂತೆ ಈ ವರ್ಷವೂ ಈ ರೀತಿ ದಿನಾಚರಣೆಗೆ ವಿರೋಧ ವ್ಯಕ್ತವಾಗಿದ್ದು, ಪೊಲೀಸ್ ಇಲಾಖೆ (Police Department) ಎಚ್ಚೆತ್ತುಕೊಂಡಿದೆ. ನೈತಿಕ ಪೊಲೀಸ್‌ಗಿರಿ ನಡೆಯೋ ಭಯದಲ್ಲಿ ಇರೋ ಪೊಲೀಸರು ಪಾರ್ಕ್‌ಗಳಲ್ಲಿ, ಮಾಲ್‌ಗಳಲ್ಲಿ ಎಚ್ಚರಿಕೆ ವಹಿಸುವಂತೆ ಕಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: Turkey, Syria Earthquakeː ವರ್ಲ್ಡ್ ಬ್ಯಾಂಕ್‌ನಿಂದ 1.78 ಬಿಲಿಯನ್ ಡಾಲರ್ ನೆರವು ಘೋಷಣೆ

    ಪಾರ್ಕ್ಗಳಲ್ಲಿ ಪ್ರೇಮಿಗಳೇ ಎಚ್ಚರಿಕೆ ವಹಿಸಬೇಕಿದೆ. ಮಾಲ್‌ಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಮಾಲ್‌ನ ಆಡಳಿತ ಮಂಡಳಿಗೆ ಸೂಚನೆ ನೀಡಲಾಗಿದೆ. ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳುವಂತೆ ತಿಳಿಸಲಾಗಿದೆ ಎಂದು ಪೊಲೀಸ್ ಮೂಲಗಳು ಸ್ಪಷ್ಟಪಡಿಸಿವೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ದತ್ತಪೀಠ ಹೋಮ ಮಾಡೋ ಜಾಗದಲ್ಲಿ ಮತ್ತೆ ಮಾಂಸದ ಅಡುಗೆ – ಹಿಂದೂಪರ ಸಂಘಟನೆ ಆಕ್ರೋಶ

    ದತ್ತಪೀಠ ಹೋಮ ಮಾಡೋ ಜಾಗದಲ್ಲಿ ಮತ್ತೆ ಮಾಂಸದ ಅಡುಗೆ – ಹಿಂದೂಪರ ಸಂಘಟನೆ ಆಕ್ರೋಶ

    ಚಿಕ್ಕಮಗಳೂರು: ತಾಲೂಕಿನಲ್ಲಿ ಹಿಂದೂ – ಮುಸ್ಲಿಮರ (Hindu Muslims) ಧಾರ್ಮಿಕ ಭಾವೈಕ್ಯದ ಕೇಂದ್ರವಾಗಿರುವ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ದರ್ಗಾದಲ್ಲಿ (Shri Guru Dattatreya Swamy Dattapita) ಪ್ರವಾಸಿಗರು ಮತ್ತೆ ಮಾಂಸ (Meat) ಬೇಯಿಸಿರುವ ವೀಡಿಯೋ ವೈರಲ್ ಆಗಿದ್ದು, ಹಿಂದೂಪರ ಸಂಘಟನೆ (Hindu Organizations) ಕಾರ್ಯಕರ್ತರು ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ಕಳೆದ ನಾಲ್ಕೈದು ತಿಂಗಳ ಹಿಂದೆಯೂ ದತ್ತಪೀಠದಲ್ಲಿ (Dattapita) ಬಿರಿಯಾನಿ (Biriyani) ತಯಾರಿಸಿ ಸೇವಿಸಿದ್ದರು. ಆಗಲೂ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಜಿಲ್ಲಾಡಳಿತಕ್ಕೆ ದೂರು ನೀಡಿದ್ದರು. ಆಗ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿತ್ತು. ಇದೀಗ ದತ್ತಪೀಠಕ್ಕೆ ಬರುವ ಪ್ರವಾಸಿಗರು ದತ್ತ ಮಾಲಾಧಾರಣೆ ಹಾಗೂ ದತ್ತ ಜಯಂತಿಯ ವೇಳೆ ಹಿಂದೂ ಸಂಘಟನೆಗಳು ಹೋಮ-ಹವನ ನಡೆಸಲು ಸರ್ಕಾರವೇ ನಿರ್ಮಿಸಿರುವ ತಾತ್ಕಾಲಿಕ ಶೆಡ್ ನಲ್ಲಿ ಪುನಃ ಮಾಂಸವನ್ನ ಬೇಯಿಸಿದ್ದಾರೆ. ಇದೇ ಕೊನೆಯಾಗಬೇಕು. ಇನ್ಮುಂದೆ ಇಂತಹ ಘಟನೆ ನಡೆಯದಂತೆ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ನಾವೇ ಸೂಕ್ತ ತಕ್ಕ ಪಾಠ ಕಲಿಸುತ್ತೇವೆ ಎಂದು ಯುವ ಬ್ರಿಗೇಡ್ (Yuva Brigade) ಸಂಚಾಲಕ ಪ್ರವೀಣ್ ಖಾಂಡ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಕೊಡಗಿನಲ್ಲಿ 3ನೇ ಸಾಕಾನೆ ಶಿಬಿರ ಲೋಕಾರ್ಪಣೆ – ಹಾರಂಗಿ ವಿಶೇಷತೆ ಏನು?

    ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿರುವ ಹಿಂದೂ ಬ್ರಿಗೇಡ್ ಕಾರ್ಯಕರ್ತರು, ಸರ್ಕಾರ ಕೊಟ್ಟ ಮಾತನ್ನ ಉಳಿಸಿಕೊಂಡಿಲ್ಲ. ಸರ್ಕಾರದ ನಿರ್ಲಕ್ಷ್ಯದಿಂದಲೇ ಪ್ರವಾಸಿಗರು ಪುಣ್ಯಕ್ಷೇತ್ರದಲ್ಲಿ ಎಲ್ಲೆಂದರಲ್ಲಿ ಮಾಂಸ ಕಡಿದು, ಬೇಯಿಸುತ್ತಿದ್ದಾರೆ. ದತ್ತಪೀಠ ಪ್ರವಾಸಿಗರ ತಾಣವಲ್ಲ. ಪ್ರವಾಸಿ ತಾಣಗಳು ಬೇಕು ಅಂದ್ರೆ ಗಿರಿಶ್ರೇಣಿಯಲ್ಲಿ ಬೇರೆ ಸ್ಥಳಗಳಿವೆ. ಎರಡು ಕೋಮುಗಳು ಕೂಡ ದತ್ತಪೀಠವನ್ನ ಧಾರ್ಮಿಕ ಕ್ಷೇತ್ರ ಎಂದು ನಂಬಿವೆ. ಹೋಮ-ಹವನಕ್ಕೆ ಸರ್ಕಾರವೇ ತಾತ್ಕಾಲಿಕ ಶೆಡ್ ನಿರ್ಮಿಸಿಕೊಟ್ಟಿದೆ. ಅಲ್ಲಿ ಈ ರೀತಿ ಮಾಂಸ ಬೇಯಿಸಿದರೆ ಅದು ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತರಲಿದೆ. ಎಲ್ಲಿಂದಲೋ ಬರುವ ಪ್ರವಾಸಿಗರು ಯಾವುದ್ಯಾವುದೋ ಮಾಂಸವನ್ನ ತಂದು ಅಡಿಗೆ ಮಾಡಿ ಬಿಸಾಡಿ ಹೋಗುತ್ತಾರೆ. ಆದರೆ ಅಲ್ಲೇ ಇರುವ ಪೊಲೀಸರು ಏನ್ ಮಾಡುತ್ತಾರೋ ಗೊತ್ತಿಲ್ಲ ಎಂದು ಪೊಲಿಸರ ವಿರುದ್ಧವೂ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಹೊಸ ಸಮವಸ್ತ್ರ ಪರಿಚಯಿಸಿದ ಭಾರತೀಯ ವಾಯುಪಡೆ

    ಮುಸ್ಲಿಮರು (Muslims) ನಮಾಜ್ ಮಾಡುವ 200 ಮೀಟರ್ ದೂರದಲ್ಲಿ ಬಹುಸಂಖ್ಯಾತ ಹಿಂದೂಗಳು ತಿನ್ನುವ ಪದಾರ್ಥವನ್ನ ತಿನ್ನುವುದಕ್ಕೆ ಬಿಡುತ್ತಾರಾ ಹಿಂದೂ ಬ್ರಿಗೇಡ್ ಪ್ರಶ್ನಿಸಿದೆ. ವೀಡಿಯೋ ವೈರಲ್ ಆಗುತ್ತಿದ್ದಂತೆ ಜಿಲ್ಲಾಡಳಿತ ಅಲ್ಲಿ ಬ್ಯಾರಿಕೇಡ್ ಹಾಕಿ, ಶೆಡ್‌ಗೆ ಬಂದೋಬಸ್ತ್ ಮಾಡಿದೆ. ಆದರೆ ಇದು ಕಣ್ಣೋರೆಸುವ ತಂತ್ರ. ಇನ್ಮುಂದೆ ಹೀಗಾದರೆ ಉತ್ತರ ಕೊಡೋದಕ್ಕೆ ನಾವು ಸಿದ್ಧ ಎಂದು ಎಚ್ಚರಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಹುಬ್ಬಳ್ಳಿ ಈದ್ಗಾದಲ್ಲಿ ಬೆಳ್ಳಂಬೆಳಗ್ಗೆ ಗಣೇಶ ಮೂರ್ತಿ ಪ್ರತಿಷ್ಠಾಪನೆ

    ಹುಬ್ಬಳ್ಳಿ ಈದ್ಗಾದಲ್ಲಿ ಬೆಳ್ಳಂಬೆಳಗ್ಗೆ ಗಣೇಶ ಮೂರ್ತಿ ಪ್ರತಿಷ್ಠಾಪನೆ

    ಹುಬ್ಬಳ್ಳಿ: ಇಲ್ಲಿನ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹೈಕೋರ್ಟ್‌ ಮಧ್ಯರಾತ್ರಿ ಗ್ರೀನ್‌ ಸಿಗ್ನಲ್‌ ಕೊಟ್ಟ ಬೆನ್ನಲ್ಲೇ, ಹಿಂದೂಪರ ಸಂಘಟನೆಗಳು ಬುಧವಾರ ಬೆಳ್ಳಂಬೆಳಗ್ಗೆ ಈದ್ಗಾದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ.

    ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಅಂಜುಮಾನ್‌ ಇಸ್ಲಾಂ ಸಂಸ್ಥೆ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಸುಪ್ರೀಂ ವಿಚಾರಣೆಗೂ ಮುನ್ನವೇ ಹಿಂದೂ ಸಂಘಟನೆಗಳು ಗಣೇಶ ಮೂರ್ತಿ ಪ್ರತಿಷ್ಠಾಪನೆಯಲ್ಲಿ ಸಮಯ ಬದಲಾವಣೆ ಮಾಡಿಕೊಂಡಿವೆ. ಇಂದು ಮಧ್ಯಾಹ್ನ 12 ಗಂಟೆ ಬದಲಿಗೆ ಬೆಳಗ್ಗೆ 7:30ಕ್ಕೆ 4 ಅಡಿ ಇರುವ ಸಿಂಹಾಸನಾರೂಢ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿವೆ. ಉತ್ಸವ ಮೂರ್ತಿ ಬಿಟ್ಟು, ಸಣ್ಣ ಗಣಪತಿ ಮೂರ್ತಿ ಪ್ರತಿಷ್ಟಾಪಿಸಲಾಗಿದೆ. ಇದನ್ನೂ ಓದಿ: ಮಧ್ಯರಾತ್ರಿ ತುರ್ತು ವಿಚಾರಣೆ – ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ

    ಧಾರವಾಡ ಮೂಲದ ವ್ಯಕ್ತಿ ದೇಣಿಗೆ ನೀಡಿರುವ ಮೂರ್ತಿಯನ್ನು ಉತ್ಸವ ಸಮಿತಿ ಅಧ್ಯಕ್ಷ ಸಂಜೀವ್ ಬಡೆಸ್ಕರ್ ನೇತೃತ್ವದಲ್ಲಿ ಪ್ರತಿಷ್ಠಾಪಿಸಲಾಯಿತು. ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಬೆನ್ನಲ್ಲೇ ಪೊಲೀಸ್‌ ಕಮಿಷನರ್‌ ಲಾಭೂರಾಮ್‌ ಸ್ಥಳಕ್ಕೆ ಧಾವಿಸಿದ್ದಾರೆ. ಯಾವುದೇ ಅಹಿತಕರ ಘಟನೆಗಳು ಜರುಗದಂತೆ ನೋಡಿಕೊಳ್ಳಲು ಬಿಗಿ ಪೊಲೀಸ್‌ ಬಂದೋಬಸ್ತ್‌ ಕಲ್ಪಿಸಿದ್ದಾರೆ.

    ಪೂಜೆಯಲ್ಲಿ ಉತ್ಸವ ಸಮಿತಿ ಅಧ್ಯಕ್ಷ ಸಂಜೀವ್ ಬಡೆಸ್ಕರ್, ಪಾಲಿಕೆ ಸದಸನ ಸಮಿತಿ ಅಧ್ಯಕ್ಷ ಸಂತೋಷ ಚೌಹ್ವಾಣ್ ಸೇರಿ ಹಿಂದೂ ಸಂಘಟನೆಗಳ ಹಲವರು ಮುಖಂಡರು ಭಾಗಿಯಾಗಿದ್ದಾರೆ. ಇದನ್ನೂ ಓದಿ: ಶೀತಲ ಸಮರವನ್ನು ಕೊನೆಗೊಳಿಸಿದ್ದ ಸೋವಿಯತ್ ನಾಯಕ ಮಿಖಾಯಿಲ್ ಗೋರ್ಬಚೇವ್ ನಿಧನ

    Live Tv
    [brid partner=56869869 player=32851 video=960834 autoplay=true]

  • ಕೊಡಗಿನಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ

    ಕೊಡಗಿನಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ

    ಮಡಿಕೇರಿ: ಕೊಡಗು ಜಿಲ್ಲೆಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. `ಕೊಡಗಿನ ವಿರೋಧಿ, ಕೊಡವರ ವಿರೋಧಿ ಸಿದ್ದರಾಮಯ್ಯ’ ಎಂಬಿತ್ಯಾದಿ ಘೋಷಣೆಗಳ ಮೂಲಕ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಇಲ್ಲಿನ ತಿಮ್ಮಯ್ಯ ವೃತ್ತದಲ್ಲಿ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರು ಮುಖಾಮುಖಿಯಾಗಿದ್ದು ವಾತಾವರಣ ಉದ್ವಿಗ್ನಗೊಂಡಿದೆ. ಇದೇ ವೇಳೇ ಹಿಂದೂಪರ ಸಂಘಟನೆ ಕಾರ್ಯಕರ್ತರು ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದಾರೆ. ಇದನ್ನೂ ಓದಿ: ಕೊಡಗಿನಲ್ಲಿ ಸಿದ್ದರಾಮಯ್ಯಗೆ ಘೇರಾವ್ – `ಗೋ ಬ್ಯಾಕ್ ಸಿದ್ದುಖಾನ್’ ಎಂದು ಆಕ್ರೋಶ

    ಸಿದ್ದರಾಮಯ್ಯ ಶಾಂತಿ ಪ್ರಿಯ ಕೊಡಗಿಗೆ ಬರೋದು ಬೇಡ, ಶಾಂತಿಪ್ರಿಯ ನಾಡಿನಲ್ಲಿ ಕೋಮುಗಲಭೆ ಬೆಳೆಸಿದ್ದಾರೆ. ಕೊಡವರು ದನದ ಮಾಂಸ ತಿನ್ನುತ್ತಾರೆ ಎಂದು ಹೇಳಿದ್ದಾರೆ. 7 ವರ್ಷಗಳ ಹಿಂದೆ ಟಿಪ್ಪು ಜಯಂತಿಯನ್ನು ಬಲವಂತವಾಗಿ ಆಚರಿಸಿದ್ದರು. ಇದರಿಂದ ಜಿಲ್ಲೆಯಲ್ಲಿ ಎರಡು ಜನರ ಪ್ರಾಣ ಹೋದವು. ಅಂತಹವರು ಕೊಡಗಿಗೆ ಬರೋದು ಬೇಡ ಎಂದು ಬಿಜೆಪಿ ನಗರ ಘಟಕದ ಉಪಾಧ್ಯಕ್ಷ ಜಗದೀಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಬೆಳಿಗ್ಗೆ ಕೊಡಗು ಜಿಲ್ಲೆಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದ ವೇಳೆ ಇಲ್ಲಿನ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಘೇರಾವ್ ಮಾಡಿಕೊಂಡಿದ್ದಾರೆ.

    ಕೊಡಗಿನ ಗಡಿ ಭಾಗದ ಪೋನ್ನಂಪೇಟೆ ತಾಲೂಕಿನ ತಿತಿಮತಿಯಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ ನೇತೃತ್ವದಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರು ಪ್ರತಿಭಟಿಸಿದ್ದರು. ಇದನ್ನೂ ಓದಿ: ಸುಳ್ಳು ಮತ್ತು ದೇಶದ್ರೋಹ ಸುದ್ದಿಗಳ ಪ್ರಕಟ – 8 ಯೂಟ್ಯೂಬ್ ಚಾನಲ್‍ಗಳು ನಿಷೇಧ

    ಸಿದ್ದರಾಮಯ್ಯ ಅವರಿದ್ದ ಕಾರನ್ನು ಅಡ್ಡಗಟ್ಟಿ ಸಾವರ್ಕರ್ ಭಾವಚಿತ್ರವನ್ನು ಕಾರಿನೊಳಕ್ಕೆ ಹಾಕಿದಲ್ಲದೇ ಕಪ್ಪು ಬಾವುಟ ಪ್ರದರ್ಶಿಸಿ `ಗೋ ಬ್ಯಾಕ್ ಸಿದ್ದುಖಾನ್, ಗೋ ಬ್ಯಾಕ್ ಸಿದ್ದರಾಮಯ್ಯ’ ಘೋಷಣೆ ಕೂಗಿದ್ದರು.

    ರಾಜ್ಯದಲ್ಲಿ ಮತಾಂಧ ಟಿಪ್ಪುವಿನ ಜಯಂತಿ ಆಚರಣೆ ಜಾರಿಗೆ ತಂದು ಅಮಾಯಕರ ಕೊಲೆಗೆ ಕಾರಣರಾದ ಟಿಪ್ಪು ಭಕ್ತ ಸಿದ್ದರಾಮಯ್ಯ ಕೊಡಗಿಗೆ ಕಾಲಿಡುವುದರಿಂದ ಮತ್ತೆ ಕೊಡಗಿನ ಶಾಂತಿ ಭಂಗವಾಗಲಿದೆ. ಅಷ್ಟೇ ಅಲ್ಲದೇ ಕೊಡವರನ್ನು ಗೋಮಾಂಸ ಭಕ್ಷಕರೆಂದು ಬಿಂಬಿಸಿದ್ದಾರೆ. ಹಿಂದೂ ವಿರೋಧಿ ಸಿದ್ದರಾಮಯ್ಯ ಕೊಡಗಿಗೆ ಕಾಲಿಡಲು ಅಯೋಗ್ಯರಾಗಿದ್ದಾರೆ ಎಂದು ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ ಆಕ್ರೋಶ ವ್ಯಕ್ತಪಡಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • 1,100 ಎನ್‌ಕೌಂಟರ್ ಪೊಲೀಸರಿಂದಲೇ ಮಾಡಿಸ್ತೇವೆ – ಹಿಂದೂ ಸಮಾಜದ ಮುಖಂಡ

    1,100 ಎನ್‌ಕೌಂಟರ್ ಪೊಲೀಸರಿಂದಲೇ ಮಾಡಿಸ್ತೇವೆ – ಹಿಂದೂ ಸಮಾಜದ ಮುಖಂಡ

    ಶಿವಮೊಗ್ಗ: ಪೊಲೀಸರು ಈಗ ಮಾಡಿದ್ರೆ 2 ಎನ್‌ಕೌಂಟರ್, 5 ವರ್ಷದ ಬಳಿಕ ಮಾಡಿದ್ರೆ 1,100 ಎನ್‌ಕೌಂಟರ್ ಅದನ್ನೂ ನಿಮ್ಮ ಕೈಯಲ್ಲೇ ಮಾಡಿಸುತ್ತೇವೆ ಎಂದು ಹಿಂದೂ ಸಮಾಜದ ಮುಖಂಡ ಯಾದವಕೃಷ್ಣ ಬಿಜೆಪಿ ಮುಖಂಡರ ಎದುರೇ ಮಾರ್ಮಿಕವಾಗಿ ಎಚ್ಚರಿಕೆ ನೀಡಿದ್ದಾರೆ.

    ಪ್ರವೀಣ್ ನೆಟ್ಟಾರು ಹತ್ಯೆ ವಿರೋಧಿಸಿ, ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ನಗರದ ಗೋಪಿ ವೃತ್ತದಲ್ಲಿ ಹಿಂದೂಪರ ಸಂಘಟನೆಗಳಿಂದ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಯಾದವಕೃಷ್ಣ, ಇನ್ನೂ ನಾವು ಬಿಜೆಪಿ ನಾಯಕರ ಮೇಲೆ ನಂಬಿಕೆ ಇಟ್ಟುಕೊಂಡಿದ್ದೇವೆ. ಅದನ್ನು ಅವರು ಉಳಿಸಿಕೊಳ್ಳಬೇಕು. ಪೊಲೀಸರು ಈಗ ಎನ್‌ಕೌಂಟರ್ ಮಾಡಿದ್ರೆ 2, 5 ವರ್ಷದ ಬಳಿಕ ಎನ್‌ಕೌಂಟರ್ ಮಾಡಿದರೆ 1,100 ಮಾಡಬೇಕಾಗುತ್ತದೆ. ಅದನ್ನೂ ನಿಮ್ಮ ಕೈಯಲ್ಲೇ ಮಾಡಿಸುತ್ತೇವೆ. ಈಗಲೇ 2 ಮಾಡಿ ಮುಗಿಸಿಬಿಡಿ ಎಂದು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ.

    ಭಾರತದ ಮುಸ್ಲಿಮರು ಒಂದು ಕ್ಷಣ ಯೋಚಿಸಬೇಕಾದ ಅಗತ್ಯ ಮತ್ತು ಅನಿವಾರ್ಯತೆ ಇದೆ. ಮುಸ್ಲಿಂ ಮುಖಂಡರು ತಮ್ಮ ಸಮಾಜದಲ್ಲಿರುವ ಕೆಟ್ಟವರಿಗೆ ಬುದ್ಧಿ ಹೇಳಿ ತಿದ್ದಬೇಕು. ಅವರು ಹೆಬ್ಬಾವನ್ನು ಸಾಕುತ್ತಿದ್ದಾರೆ. ಕೊನೆಗೊಂದು ದಿನ ಹೆಬ್ಬಾವೇ ಅವರನ್ನು ನುಂಗುತ್ತದೆ, ಅದಕ್ಕೂ ಮುನ್ನವೇ ಎಚ್ಚೆತ್ತುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

    ಗೆಲ್ಲಿಸಿರೋದು ಕಾರಲ್ಲಿ ಓಡಾಡೋಕಲ್ಲ: ಹಿಂದೂ ಸಮಾಜ, ಬಿಜೆಪಿಯನ್ನು ಗೆಲ್ಲಿಸಿರುವುದು ಪಕ್ಷದ ನಾಯಕರನ್ನು ಕಾರಿನಲ್ಲಿ ಓಡಾಡಿಸಲು ಅಲ್ಲ. ಹಿಂದೂ ಯುವಕರ ಹತ್ಯೆಯಾಗುತ್ತಿದ್ದರೂ ಮೂಕ ಪ್ರೇಕ್ಷಕರಾಗುತ್ತಿದ್ದೇವೆ. ಕರಾವಳಿ ಭಾಗದಲ್ಲಿ ಬಿಜೆಪಿಯೇ ಗೆದ್ದಿದೆ. 6 ಬಾರಿ ಗೆದ್ದು ಶಾಸಕರಾದವರು ಅಲ್ಲಿದ್ದಾರೆ. ಹಿಂದೂ ಸಮಾಜ ಬಿಜೆಪಿ ನಾಯಕರನ್ನು ಗೆಲ್ಲಿಸಿರುವುದು ಇವರನ್ನು ಕಾರಿನಲ್ಲಿ ಓಡಾಡಿ ಟೈರ್ ಸವೆಸಲು ಅಲ್ಲ. ಹಿಂದೂ ಸಮಾಜವನ್ನು ರಕ್ಷಣೆ ಮಾಡಬೇಕಾದವರು ಅದನ್ನು ಮರೆಯುತ್ತಿದ್ದಾರೆ. ಇದು ಹೀಗೆ ಮುಂದುವರೆಯಬಾರದು ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಭಿವೃದ್ಧಿ ಯಾರು ಬೇಕಾದ್ರು ಮಾಡ್ತಾರೆ, ಹಿಂದೂ ಸಮಾಜ ಉಳಿಸೋದ್ಯಾರು- ಸರ್ಕಾರಕ್ಕೆ ಬಜರಂಗದಳ ಪ್ರಶ್ನೆ

    ಅಭಿವೃದ್ಧಿ ಯಾರು ಬೇಕಾದ್ರು ಮಾಡ್ತಾರೆ, ಹಿಂದೂ ಸಮಾಜ ಉಳಿಸೋದ್ಯಾರು- ಸರ್ಕಾರಕ್ಕೆ ಬಜರಂಗದಳ ಪ್ರಶ್ನೆ

    ಚಿಕ್ಕಮಗಳೂರು: ಮಂಗಳೂರಿನ ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆಗೆ ಮಲೆನಾಡಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಒಂದೆಡೆ ಸರ್ಕಾರದ ಬೇಜಾವಾಬ್ದಾರಿ ವಿರುದ್ಧ ಯುವಮೋರ್ಚಾ ಕಾರ್ಯಕರ್ತರು ರಾಜೀನಾಮೆ ನೀಡುತ್ತಿದ್ದರೆ, ಮತ್ತೊಂದೆಡೆ ಪಟ್ಟಣಗಳನ್ನ ಬಂದ್ ಮಾಡುತ್ತಾ ಸೂಕ್ತ ನ್ಯಾಯಕ್ಕೆ ಆಗ್ರಹಿಸಿದ್ದಾರೆ.

    ನಿನ್ನೆಯಷ್ಟೇ ಕೊಪ್ಪ ಪಟ್ಟಣವನ್ನ ಬಂದ್ ಮಾಡಿದ್ದ ಹಿಂದೂ ಸಂಘಟನೆ ಕಾರ್ಯಕರ್ತರು, ಇಂದು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಪಟ್ಟಣವನ್ನ ಬಂದ್ ಮಾಡಿ ಸರ್ಕಾರದ ವಿರುದ್ಧ ಆಸಮಾಧಾನ ಹೊರಹಾಕಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ಸಂಜೆವರೆಗೂ ಬಾಳೆಹೊನ್ನೂರು ಪಟ್ಟಣ ಸಂಪೂರ್ಣ ಸ್ಥಬ್ಧವಾಗಿತ್ತು. ಅಗತ್ಯ ವಸ್ತುಗಳನ್ನ ಹೊರತುಪಡಿಸಿ ಅಂಗಡಿ-ಮುಂಗಟ್ಟುಗಳ ಬಾಗಿಲು ಬಂದ್‌ಮಾಡಿ ವರ್ತಕರು ಕೂಡ ಬಂದ್‌ಗೆ ಬೆಂಬಲ ಸೂಚಿಸಿದ್ದರು. ಇದನ್ನೂ ಓದಿ: ನಟಿ ಅರ್ಪಿತಾ ಮುಖರ್ಜಿ ಮನೆ ಮೇಲೆ ಇಡಿ ದಾಳಿ: ‘ಸೆಕ್ಸ್ ಆಟಿಕೆ’ ಕಂಡು ಅಧಿಕಾರಿಗಳು ಗಾಬರಿ

    ಖಾಸಗಿ ಬಸ್ ಹಾಗೂ ಆಟೋಗಳೂ ರಸ್ತೆಗಿಳಿದಿರಲಿಲ್ಲ. ಬಾಳೆಹೊನ್ನೂರು ಪಟ್ಟಣದ ಮುಖ್ಯ ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ಜೆಸಿ ಸರ್ಕಲ್‌ನಲ್ಲಿ ಮಾನವ ಸರಪಳಿ ನಿರ್ಮಿಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಪ್ರವೀಣ್ ಹತ್ಯೆಗೈದ ಆರೋಪಿಗಳನ್ನ ಕೂಡಲೇ ಬಂಧಿಸುವಂತೆ ಆಗ್ರಹಿಸಿದರು. ಇದನ್ನೂ ಓದಿ: ಅಕ್ರಮ ಬಾರ್ ಆರೋಪ- ಸ್ಮೃತಿ ಪುತ್ರಿ ವಿರುದ್ಧದ ಟ್ವೀಟ್‌ಗಳನ್ನು 24 ಗಂಟೆಯೊಳಗೆ ಅಳಿಸಲು ನ್ಯಾಯಾಲಯ ಆದೇಶ

    ಪ್ರತಿಭಟನೆ ವೇಳೆ ಕಾರ್ಯಕರ್ತರನ್ನ ಉದ್ದೇಶಿಸಿ ಮಾತನಾಡಿದ ಬಜರಂಗದಳ ಸಂಚಾಲಕ ಶಶಾಂಕ್ ಹೇರೂರು, ಹಿಂದೂಗಳು ಒಗ್ಗೂಡದಿದ್ದರೆ ಮುಂದಿನ ದಿನಗಳಲ್ಲಿ ಉಳಿಗಾಲವಿಲ್ಲ. ಬಿಜೆಪಿ ಆಡಳಿತದಲ್ಲೇ ಪಕ್ಷದ ಕಾರ್ಯಕರ್ತರಿಗೆ ಈ ಗತಿ ಬಂದಿದೆ. ಜಿಹಾದಿಗಳ ಮನಸ್ಥಿತಿಯಿಂದ ಹಿಂದೂಗಳ ಸರಣಿ ಹತ್ಯೆಯಾಗುತ್ತಿದೆ. ಅಭಿವೃದ್ಧಿಯನ್ನು ಯಾರು ಬೇಕಾದರೂ ಮಾಡುತ್ತಾರೆ. ಆದರೆ ಹಿಂದೂಗಳನ್ನ ರಕ್ಷಣೆ ಮಾಡೋರು ಯಾರು ಎಂದು ಪ್ರಶ್ನಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಈದ್ಗಾ ಮೈದಾನ ವಿವಾದ- ಇಕ್ಕಟ್ಟಿಗೆ ಸಿಲುಕಿದ ಚಾಮರಾಜಪೇಟೆ ಪೊಲೀಸರು

    ಈದ್ಗಾ ಮೈದಾನ ವಿವಾದ- ಇಕ್ಕಟ್ಟಿಗೆ ಸಿಲುಕಿದ ಚಾಮರಾಜಪೇಟೆ ಪೊಲೀಸರು

    ಬೆಂಗಳೂರು: ಈದ್ಗಾ ಮೈದಾನ ವಿವಾದ ವಿಚಾರವಾಗಿ ಸಾಲು ಸಾಲು ಸಂಘಟನೆಗಳಿಂದ ಇಂದು ಅರ್ಜಿ ಹಾಕಲು ಸಿದ್ಧತೆ ಮಾಡಿಕೊಂಡಿದೆ. ಇದರಿಂದಾಗಿ ಚಾಮರಾಜಪೇಟೆ ಪೊಲೀಸರು ಇಕ್ಕಟ್ಟಿಗೆ ಸಿಲುಕಿದಂತೆ ಆಗಿದೆ.

    ಈಗಾಗಲೇ ಈದ್ಗಾ ಮೈದಾನ ಬಿಬಿಎಂಪಿಯ ಆಟದ ಮೈದಾನವಾಗಿದೆ. ಆದರೆ ಇಲ್ಲಿ ಸಾರ್ವಜನಿಕ ಚಟುವಟಿಕೆಗೆ ನಿಷೇಧ ಹೇರಿ, ಒಂದು ಸಮೂದಾಯಕ್ಕೆ ಮಾತ್ರ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಲಾಗುತ್ತಿದೆ ಎಂದು ಕೆಲ ಹಿಂದೂಪರ ಸಂಘಟನೆಗಳು ಧ್ವನಿ ಎತ್ತಿದ್ದವು.

    ಈ ವಿಚಾರ ದೊಡ್ಡದಾಗುತ್ತಿದ್ದಂತೆ ಸೋಮವಾರ ಬಿಬಿಎಂಪಿ ವಿಶೇಷ ಆಯುಕ್ತ ಹರೀಶ್ ಕುಮಾರ್, ಚಾಮರಾಜಪೇಟೆ ಈದ್ಗಾ ಮೈದಾನವು ಆಟದ ಮೈದಾನವಾಗಿದ್ದು, ಬಿಬಿಎಂಪಿ ಆಸ್ತಿ ಆಗಿದೆ. ಕೋರ್ಟ್ ನಿರ್ದೇಶನದ ಪ್ರಕಾರ ವರ್ಷದಲ್ಲಿ 2 ಬಾರಿ ಪ್ರಾರ್ಥನೆಗೆ ಅವಕಾಶ ಕೊಡಲಾಗುತ್ತಿದೆ. ಕೋರ್ಟ್ ನೀಡಿರುವ 2 ಅವಧಿ ಬಿಟ್ಟು ಅವಕಾಶ ಕೇಳಿದ್ದರೆ ಬೇರೆ ಚಟುವಟಿಕೆಗೆ ಅವಕಾಶ ಕೊಡಲಾಗುತ್ತದೆ. ಆದರೆ ಕೋಮು ಸೌಹರ್ದತೆ ಹಾಳಾಗುವ ವಿಚಾರ ಹಾಗೂ ಕಾನೂನು ವಿಚಾರ ತೊಂದರೆ ಆದರೆ ಕೂಡಲೇ ಪೊಲೀಸ್ ಮೊರೆ ಹೋಗುತ್ತೇವೆ ಎಂದು ಸ್ಪಷ್ಟನೆ ನೀಡಿದ್ದರು.

    ಬಿಬಿಎಂಪಿಯಿಂದ ಈ ಹೇಳಿಕೆ ಬರುತ್ತಿದ್ದಂತೆ ಧಾರ್ಮಿಕ, ರಾಷ್ಟ್ರೀಯ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಕುರಿತು ಹಲವು ಹಿಂದೂ ಸಂಘಟನೆಗಳು ಹಾಗೂ ಕನ್ನಡ ಪರ ಸಂಘಟನೆಗಳು ಅರ್ಜಿ ಸಲ್ಲಿಸಲಿದೆ.

    ಇಕ್ಕಟ್ಟಿನಲ್ಲಿ ಪೊಲೀಸರು: ಬಿಬಿಎಂಪಿಯಿಂದ ಅನುಮತಿ ಕೊಟ್ಟರೆ, ಪೊಲೀಸ್ ಠಾಣೆಯಿಂದ ಅನುಮತಿ ಕೊಡುವುದಾ ಬೇಡ್ವಾ ಎಂಬುದರ ಬಗ್ಗೆ ಗೊಂದಲ ಇದೀಗ ಉಂಟಾಗಿದ್ದು, ಇದರಿಂದಾಗಿ ಚಾಮರಾಜಪೇಟೆ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದಾರೆ. ಈ ಬಗ್ಗೆ ಅಲ್ಲಿನ ಪೊಲೀಸರು ವಲಯದ ಡಿಸಿಪಿ ಹಾಗೂ ಪೊಲೀಸ್ ಕಮಿಷನರ್ ಜೊತೆ ಚರ್ಚೆ ಮಾಡಲಿದ್ದಾರೆ.

    ವಿವಾದದ ಬೆನ್ನಲ್ಲೇ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆಯಾಗಿ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮೈದಾನದಲ್ಲಿ ಪೊಲೀಸರು ಬೀಡು ಬಿಟ್ಟಿದ್ದು, ಮೈದಾನದ ಸುತ್ತಮುತ್ತ ಪೊಲೀಸ್ ವಾಹನಗಳನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ಈದ್ಗಾ ಮೈದಾನ ಆಟದ ಮೈದಾನ, ಬಿಬಿಎಂಪಿ ಆಸ್ತಿ: ಹರೀಶ್ ಕುಮಾರ್

    ಈಗಾಗಲೇ ಈದ್ಗಾ ಮೈದಾನದಲ್ಲಿ ಹಿಂದೂ ಧಾರ್ಮಿಕ ಆಚರಣೆಗಳಿಗೆ ಅವಕಾಶ ಕೊಡದಿದ್ದರೆ, ಈದ್ಗಾ ಮೈದಾನವನ್ನು ನೆಲಸಮ ಮಾಡುತ್ತೇವೆ ಎಂದು ವಿಶ್ವ ಸನಾತನ ಪರಿಷತ್ ಸಂಘದ ಅಧ್ಯಕ್ಷ ಎಸ್. ಭಾಸ್ಕರನ್ ಎಚ್ಚರಿಸಿದ್ದರು. ಕೋರ್ಟ್ ಆದೇಶವಿದ್ದರೂ ಧಾರ್ಮಿಕ ಆಚರಣೆಗೆ ಪೊಲೀಸರು ಅವಕಾಶ ಕೊಡುತ್ತಿಲ್ಲ. ಮುಸ್ಲಿಂ ಸಮುದಾಯದವರು ಹಿಂದೂಗಳ ಧಾರ್ಮಿಕ ಆಚರಣೆಗೆ ವಿರೋಧಿಸುತ್ತಿಲ್ಲ. ಆದರೆ, ಕ್ಷೇತ್ರದ ಶಾಸಕರು ಪೊಲೀಸರ ಮೂಲಕ ಅಡ್ಡಿ ಪಡಿಸುತ್ತಿದ್ದಾರೆ ಎಂದು ಪರೋಕ್ಷವಾಗಿ ಜಮೀರ್ ವಿರುದ್ಧ ಕಿಡಿಕಾರಿದ್ದರು. ಇದನ್ನೂ ಓದಿ: ಮಸೀದಿ ಆಯ್ತು ಈಗ ಈದ್ಗಾ ಮೈದಾನ – ಏನಿದು ವಿವಾದ? ಹಿಂದೂಗಳ ವಾದವೇನು? ಬಿಬಿಎಂಪಿ ದಾಖಲೆಯಲ್ಲಿ ಏನಿದೆ?

    ಜೊತೆಗೆ ಕೋರ್ಟ್‍ನಿಂದ ಆದೇಶ ಬಂದರೂ, ಈ ಜಾಗದಲ್ಲಿ ರಾಷ್ಟ್ರಧ್ವಜವನ್ನಾಗಲಿ, ನಾಡಧ್ವಜವನ್ನಾಗಿ ಹಾರಿಸಲು ಪೆÇಲೀಸರು ಬಿಟ್ಟಿಲ್ಲ. ಮುಸ್ಲಿಂ ಸಮುದಾಯಕ್ಕೆ ಹಾಗೂ ಈ ಮೈದಾನಕ್ಕೆ ಯಾವುದೇ ಸಂಬಂಧವಿಲ್ಲ ಎಂದು ನ್ಯಾಯಲಯ ಹೇಳಿದರೂ, ಕ್ಷೇತ್ರದ ಶಾಸಕ ಜಮೀರ್ ಅಹ್ಮದ್ ಪಾಲಿಕೆಯ ಕಂದಾಯ ಅಧಿಕಾರಿಗಳನ್ನು ಹೆದರಿಸಿ, ಈದ್ಗಾ ಮೈದಾನವನ್ನು ಖಾತೆ ಮಾಡಿಸಿದ್ದಾರೆ ಅಂತ ಹಿಂದೂ ಸಂಘಟನೆಯ ಕೆಲವರು ಆರೋಪಿಸಿದ್ದರು.

  • ಇಂದು ಹಿಂದೂ ಸಂಘಟನೆಗಳಿಂದ ಶ್ರೀರಂಗಪಟ್ಟಣ ಚಲೋ – 144 ಸೆಕ್ಷನ್ ಜಾರಿ

    ಇಂದು ಹಿಂದೂ ಸಂಘಟನೆಗಳಿಂದ ಶ್ರೀರಂಗಪಟ್ಟಣ ಚಲೋ – 144 ಸೆಕ್ಷನ್ ಜಾರಿ

    ಮಂಡ್ಯ: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಅಲ್ಲ, ಹನುಮಾನ್ ಮಂದಿರ ಅಂತ ಪಟ್ಟು ಹಿಡಿದಿರುವ ಹಿಂದೂ ಸಂಘಟನೆಗಳು ಇಂದು `ಶ್ರೀರಂಗಪಟ್ಟಣ ಚಲೋ’ ಹಮ್ಮಿಕೊಂಡಿವೆ.

    ಬೆಳಗ್ಗೆ 10:30ಕ್ಕೆ ಶ್ರೀರಂಗಪಟ್ಟಣದ ಕುವೆಂಪು ಪ್ರತಿಮೆಯಿಂದ ಜಾಮಿಯಾ ಮಸೀದಿವರಗೆ ಶಾಂತಿಯುತವಾಗಿ ಮೆರವಣಿಗೆ ನಡೆಸ್ತೇವೆ. ಮಸೀದಿಯ ಒಳಭಾಗಕ್ಕೆ ಹನುಮ ಭಕ್ತರು ಹೋಗಿ ಆಂಜನೇಯಸ್ವಾಮಿಯ ಪೂಜೆ ಮಾಡ್ತೇವೆ ಎಂದು ಹಿಂದೂ ಸಂಘಟನೆ ನಾಯಕರು ಹೇಳ್ತಿದ್ದಾರೆ. ಒಂದೊಮ್ಮೆ, ಮೆರವಣಿಗೆ ಮಾಡಲು ಪೊಲೀಸರು ಅವಕಾಶ ನೀಡದಿದ್ದಲ್ಲಿ ಕುವೆಂಪು ಪ್ರತಿಮೆಯ ಬಳಿ ಕೂತು ಹನುಮಾನ್ ಚಾಲಿಸ್ ಪಠಣೆ ಮಾಡುವುದಾಗಿಯೂ ನಿರ್ಧಾರ ಮಾಡಿವೆ.

    ಈ ಹೋರಾಟದಲ್ಲಿ ಮಂಡ್ಯ, ಮೈಸೂರು ಭಾಗದಿಂದ ಸಾವಿರಾರು ಹನುಮ ಭಕ್ತರು ಮಾಲೆ ಧರಿಸಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸಬಾರದೆಂದು ಜಿಲ್ಲಾಡಳಿತ ಶ್ರೀರಂಗಪಟ್ಟಣದಾದ್ಯಂತ 144 ಸೆಕ್ಷನ್ ಜಾರಿ ಮಾಡಿದೆ. ಭಾರೀ ಪ್ರಮಾಣದಲ್ಲಿ ಪೊಲೀಸ್ ನಿಯೋಜನೆ ಮಾಡಲಾಗಿದೆ. ದಕ್ಷಿಣ ವಲಯ ಐಜಿಪಿ ಪ್ರವೀಣ್ ಮಧುಕರ್ ಪವರ್ ತಡರಾತ್ರಿ ಶ್ರೀರಂಗಪಟ್ಟಣಕ್ಕೆ ಭೇಟಿ ಕೊಟ್ಟು, ಎಸ್‍ಪಿ ಯತೀಶ್‍ರಿಂದ ಭದ್ರತಾ ವ್ಯವಸ್ಥೆಯ ಮಾಹಿತಿ ಪಡೆದರು. ಇದನ್ನೂ ಓದಿ: ಶ್ರೀರಂಗಪಟ್ಟಣದಲ್ಲಿ ಹೈ ಅಲರ್ಟ್ – ಜಾಮೀಯಾ ಮಸೀದಿ ಸುತ್ತ 144 ನಿಷೇಧಾಜ್ಞೆ ಜಾರಿ

    ಸದ್ಯ ಶ್ರೀರಂಗಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ವಿಎಚ್‍ಪಿಯಿಂದ ಪ್ರತಿಭಟನಾ ಮೆರವಣಿಗೆ ವಿಫಲಗೊಳಿಸಲು ಪೊಲೀಸರ ಸನ್ನದ್ದ ಮಾಡಿಕೊಂಡಿದ್ದಾರೆ. ಎಸ್‍ಪಿ, ಇಬ್ಬರು ಡಿವೈಎಸ್‍ಪಿ, 5 ಸಿಪಿಐ, 10 ಪಿಎಸ್‍ಐ ಸೇರಿದಂತೆ 300 ಮಂದಿ ಪೊಲೀಸ್ ಪೇದೆ, 2 ಕೆಎಸ್‍ಆರ್‍ಪಿ, 4 ಡಿಆರ್ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ. ನಿಷೇದಾಜ್ಞೆ ನಡುವೆಯು ಶ್ರೀರಂಗಪಟ್ಟಣ ಚಲೋ ಮಾಡೇ ಮಾಡ್ತೀವಿ ಎಂದು ಹೇಳ್ತಿರುವ ವಿಎಚ್‍ಪಿ ಮುಖಂಡರು ಪಟ್ಟುಹಿಡಿದಿದ್ದಾರೆ.

    ಹಿಂದೂ ಕಾರ್ಯಕರ್ತರು ಈಗಾಗಲೇ ಹಳ್ಳಿ ಹಳ್ಳಿಗಳಲ್ಲಿ ಕರ ಪತ್ರ ಹಂಚಿದ್ದಾರೆ. 144 ಸೆಕ್ಷನ್ ಜಾರಿ ಹಿನ್ನೆಲೆ, ಒಂದೆಡೆ ಹಿಂದೂ ಕಾರ್ಯಕರ್ತರು ಸೇರಿದರೆ ಬಂಧಿಸುವ ಸಾಧ್ಯತೆ ಇದೆ. ಪ್ರತಿಭಟನೆಗೆ ಮುಂದಾದ್ರೆ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಮಂಡ್ಯ ಎಸ್‍ಪಿ ಎಚ್ಚರಿಕೆ ನೀಡಿದ್ದಾರೆ.

  • ತಾಂಬೂಲ ಪ್ರಶ್ನೆ ಅಂತಾ ಬರೋರನ್ನು ಒದ್ದು ಒಳಗೆ ಹಾಕ್ಬೇಕು: ಅಬ್ದುಲ್ ವಾಜೀದ್ ವಿವಾದಾತ್ಮಕ ಹೇಳಿಕೆ

    ತಾಂಬೂಲ ಪ್ರಶ್ನೆ ಅಂತಾ ಬರೋರನ್ನು ಒದ್ದು ಒಳಗೆ ಹಾಕ್ಬೇಕು: ಅಬ್ದುಲ್ ವಾಜೀದ್ ವಿವಾದಾತ್ಮಕ ಹೇಳಿಕೆ

    ಮಂಗಳೂರು: ಎಸ್‍ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ವಾಜೀದ್ ಅವರು ತಾಂಬೂಲ ಪ್ರಶ್ನೆ ಅಂತಾ ಬರೋರನ್ನು ಒದ್ದು ಒಳಗೆ ಹಾಕಬೇಕು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಮಳಲಿ ಮಸೀದಿಯಲ್ಲಿ ಹಿಂದೂ ದೇವರ ಕುರುಹು ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಕಣ್ಣೂರಿನಲ್ಲಿ ನಡೆದ ಎಸ್‍ಡಿಪಿಐ ಜನಾಧಿಕಾರ ಸಮಾವೇಶದಲ್ಲಿ ಮಾತನಾಡಿದ ಅವರು, ಮಳಲಿ ಮಸೀದಿಯ ಒಂದು ಹಿಡಿ ಮರಳು ಕೊಡಲಾರೆವು. ಮಸೀದಿ ಬಿಟ್ಟುಕೊಡುತ್ತಾರೆ ಅನ್ನೋ ಕನಸು ಕಾಣಬೇಡಿ. ಈ ದೇಶ ನಮ್ಮದು, ಇದಕ್ಕಾಗಿ ರಕ್ತ ಹರಿಸಿದ್ದೇವೆ ಎಂದು ಹೇಳಿದ್ದಾರೆ.

    ತಾಂಬೂಲ ಪ್ರಶ್ನೆ ಎಂದು ಬರುವವರನ್ನು ಪೊಲೀಸರು ಒದ್ದು ಒಳಗೆ ಹಾಕಬೇಕು. ‘ಪೂಜಾ ಸ್ಥಳ ಕಾಯ್ದೆ 1991’ ಪ್ರಕಾರ ಮೂರು ವರ್ಷ ಜೈಲಿಗೆ ಹಾಕಬೇಕು. ಈ ಆಕ್ಟ್ ಅನ್ನು ಪೊಲೀಸರು ಓದಿಲ್ವೇ?. 2006ರಲ್ಲಿ ಸಂಡೂರಿನ ಸುಗ್ಗುಲಮ್ಮ ದೇವಾಲಯ ಒಡೆದು ಹಾಕಿದ್ದರಲ್ಲ. ಸಂಘಪರಿವಾರದ ಕಾರ್ಯಕರ್ತರು ತಾಕತ್ತಿದ್ದರೆ ಅದರ ಬಗ್ಗೆ ತಾಂಬೂಲ ಪ್ರಶ್ನೆ ಇಡಲಿ ಎಂದು ಕಿಡಿಕಾರಿದ್ದಾರೆ. ಇದೇ ವೇಳೆ ಮಾಜಿ ಸಚಿವ ಜನಾರ್ದನ ರೆಡ್ಡಿ, ಸಚಿವ ಶ್ರೀರಾಮುಲು ಧ್ವಂಸಗೊಳಿಸಿದ್ದರಲ್ಲ. ತಾಕತ್ತಿದ್ದರೆ ಜನಾರ್ದನ ರೆಡ್ಡಿ ಮನೆಗೆ ಮಾರ್ಚ್ ಮಾಡಲಿ ಎಂದು ಸವಾಲೆಸೆದರು.

    ಇದೀಗ ವಾಜೀದ್ ಹೇಳಿಕೆ ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ. ಅಬ್ದುಲ್ ವಾಜೀದ್ ಅವರು ಕೋಮು ಭಾವನೆಯನ್ನು ಕೆರಳಿಸುವಂತೆ ಭಾಷಣ ಮಾಡಿದ್ದಾರೆ. ಮಳಲಿ ಮಸೀದಿ ಬಗ್ಗೆ ಪೂರ್ಣ ಪ್ರಕ್ರಿಯೆ ನಡೆಯಬೇಕಿದೆ ಇಂತಹ ಸಂದರ್ಭದಲ್ಲಿ ಪ್ರಚೋದನಕಾರಿ ಭಾಷಣ ಸರಿಯಲ್ಲ. ಈಗಾಗಲೇ ನಗರದಲ್ಲಿ 144 ಸೆಕ್ಷನ್ ಜಾರಿ ಇದೆ ಕೋಮು ಗಲಭೆ ಸೃಷ್ಟಿಸುವಂತಹ ಹೇಳಿಕೆ ಕೂಡ ನೀಡೋ ಹಾಗಿಲ್ಲ. ಆದರೆ ಅವರ ಭಾಷಣ ಹಿಂದೂಗಳನ್ನು ಪ್ರಚೋದಿಸಿದಂತೆ ಇದೆ.

    ಅವರ ಪ್ರಚೋದನಾಕಾರಿ ಭಾಷಣಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರು ಖಂಡಿಸಿದ್ದಾರೆ. ಹಿಂದೂಗಳ ಆಚಾರ, ವಿಚಾರ ಪೂಜೆ ಪುನಸ್ಕಾರಗಳನ್ನು ಕೆದಕಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಹಿಂದೂಗಳ ನಂಬಿಕೆಗೆ ಧಕ್ಕೆ ಬರುವ ಹಾಗೇ ಭಾಷಣ ಮಾಡಿದ್ದಾರೆ. ತಾಂಬೂಲ ಪ್ರಶ್ನೆ ಅಂತಾ ಬರುವವರನ್ನ ಒದ್ದು ಒಳಗಾಗಬೇಕು ಎನ್ನುವ ಅವರ ವಿವಾದಾತ್ಮಕ ಹೇಳಿಕೆಗೆ ಕಾನೂನು ಹೋರಾಟ ಮಾಡಿ ಇವರಿಗೆ ಪಾಠ ಕಲಿಸಬೇಕು.

    ಮಳಲಿ ಮಸೀದಿಯಲ್ಲಿ ಕೂರುಹು ಪತ್ತೆಯ ಬಗ್ಗೆ ಉತ್ಖನನ ಪ್ರಕ್ರಿಯೆ ನಡೆಯುತ್ತಾ ಇದೆ. ಈ ಸಂದರ್ಭದಲ್ಲಿ ಅವರು ಈ ರೀತಿಯ ಭಾಷಣ ಮಾಡಿರುವುದು ಸರಿಯಲ್ಲ ಎಂದು ಹಿಂದೂ ಸಂಘಟನೆಯವರು ಕಿಡಿಕಾರಿದ್ದಾರೆ.

  • ಪ್ರಯಾಣಿಕರೇ ನಮಗೆ ದೇವರು.. ಈ ಧರ್ಮ-ಜಾತಿ ಯುದ್ಧ ಬೇಕಾಗಿಲ್ಲ: ಬಸ್ ಚಾಲಕರು

    ಪ್ರಯಾಣಿಕರೇ ನಮಗೆ ದೇವರು.. ಈ ಧರ್ಮ-ಜಾತಿ ಯುದ್ಧ ಬೇಕಾಗಿಲ್ಲ: ಬಸ್ ಚಾಲಕರು

    ಬೆಂಗಳೂರು: ರಾಜ್ಯದಲ್ಲಿ ಹಿಂದೂ ಮುಸ್ಲಿಂ ನಡುವಿನ ಧರ್ಮದ ವಾರ್ ಒಂದಿಲ್ಲೊಂದು ರೂಪ ಪಡೆದುಕೊಳ್ಳುತ್ತಿದೆ. ಹಿಜಬ್‍ನಿಂದ ಶುರುವಾದ ಈ ಧರ್ಮದ ದಂಗಲ್ ಈಗ ವ್ಯಾಪಾರ ವಹಿವಾಟಗಳ ಮೇಲೆ ಪ್ರಭಾವ ಬೀರುವುದಕ್ಕೆ ಶುರು ಮಾಡಿದೆ. ಹಿಂದೂ ಸಂಘಟನೆಗಳು ಒಂದೊಂದೇ ಅಭಿಯಾನಕ್ಕೆ ಕೈಹಾಕುತ್ತಿವೆ. ಈಗ ಖಾಸಗಿ ಬಸ್ ಪ್ರಯಾಣದ ಮೇಲೆ ಅಭಿಯಾನ ಶುರುವಾಗಿದೆ.

    ನಿನ್ನೆಯಿಂದ ಹಿಂದೂ ಸಂಘಟನೆಗಳು ಹೊಸ ಆಂದೋಲನ ಶುರು ಮಾಡಿವೆ. ಹಿಂದೂಗಳು ತಾವೂ ಧಾರ್ಮಿಕ ಕ್ಷೇತ್ರಗಳಿಗೆ ಪ್ರವಾಸ ಮಾಡುವಾಗ ಮುಸ್ಲಿಂ ಚಾಲಕರ ಮತ್ತು ಮುಸ್ಲಿಂ ಮಾಲೀಕರ ವಾಹನಗಳನ್ನ ಬಳಸಬೇಡಿ ಅಂತಾ ಅಭಿಯಾನ ಶುರು ಮಾಡಿದ್ದಾರೆ. ಅನ್ಯಧರ್ಮೀಯರು ನಮ್ಮ ಧರ್ಮವನ್ನ ನಂಬುವುದಿಲ್ಲ. ಅವರ ಜೊತೆಗೆ ಪ್ರಯಾಣ ಮಾಡುವ ಬದಲು ಹಿಂದೂ ಚಾಲಕರ ಮತ್ತು ಹಿಂದೂ ಮಾಲೀಕರ ವಾಹನಗಳನ್ನೇ ಬಳಸಿ ಅಂತಾ ಹೊಸ ವಾದವನ್ನು ಸೃಷ್ಟಿ ಮಾಡಿದ್ದಾರೆ. ಇದನ್ನೂ ಓದಿ: ಲವ್ ಜಿಹಾದ್‍ಗೆ ಮುಂದಾದವರ ಮನೆ ಹೊಕ್ಕು ಹೊಡೆಯಬೇಕು: EX MLC ನಾರಾಯಣಸಾ ಭಾಂಡಗೆ

    ಇದಕ್ಕೆ ಚಾಲಕರ ವರ್ಗದಲ್ಲಿ ಭಾರೀ ವಿರೋಧ ಶುರುವಾಗಿದೆ. ನಮಗೆ ಪ್ರಯಾಣಿಕರೇ ದೇವರು, ಅವರ ಜಾತಿ, ಧರ್ಮ ಯಾವುದಾದರೇ ನಮಗೇನು. ನಮ್ಮ ಬಸ್ ಹತ್ತುವ ಪ್ರಯಾಣಿಕರನ್ನು ಅವರ ಸ್ಥಳಕ್ಕೆ ಬಿಡುವ ಕಾರ್ಯ ಮಾಡುವವರು ನಾವು. ನಮ್ಮಲ್ಲಿ ಎಲ್ಲ ಜಾತಿಯ ಎಲ್ಲ ಧರ್ಮದವರು ಇದ್ದಾರೆ. ನಾವೂ ಕೆಲಸ ಮಾಡುವ ಜಾಗದಲ್ಲಿ ಧರ್ಮವನ್ನು ತರುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಮುಕ್ತ ಭಾರತ ಮಾಡೋಕೆ ಯಾರಪ್ಪನ ಕೈಯಲ್ಲೂ ಆಗಲ್ಲ: ನಲಪಾಡ್

    ಇದು ಕೆಲಸಕ್ಕೆ ಬಾರದವರು ಮಾಡುತ್ತಿರುವ ಕುತಂತ್ರ. ರಾಜ್ಯದಲ್ಲಿ ಏನ್ ಆಗುತ್ತಿದೆ. ಎಲ್ಲ ಬೆಲೆಗಳು ಗಗನಕ್ಕೆ ಏರಿಕೆಯಾಗುತ್ತಿವೆ. ಜನ ಜೀವನ ಮಾಡುವುದೇ ಕಷ್ಟಕರವಾಗಿದೆ. ಪೆಟ್ರೋಲ್, ಡಿಸೇಲ್, ಗ್ಯಾಸ್ ಬೆಲೆ ಏರಿಕೆಯಾಗುತ್ತಿದೆ. ಇತಂಹ ಸಮಯದಲ್ಲಿ ಬೇಡದ ವಿಚಾರವನ್ನು ತಂದು ಜನರ ದಿಕ್ಕು ತಪ್ಪಿಸೋ ಕೆಲಸ ಆಗುತ್ತಿದೆ. ನಾವೆಲ್ಲ ಒಂದೇ ಭಾವನೆಯಿಂದ ಕೆಲಸ ಮಾಡುವ ಜನ. ನಮಗೆ ಕಷ್ಟ ಬಂದಾಗ ಹಿಂದೂಗಳು ಬರ್ತಾರೆ. ನಾವೂ ಅವ್ರ ಕಷ್ಟಕ್ಕೆ ಹೋಗ್ತೀವಿ. ಇಲ್ಲಿ ಧರ್ಮದ ಹೆಸರಿನಲ್ಲಿ ನಮ್ಮ ನಡುವೆ ಬಿರುಕು ತರುವ ಕೆಲಸ ನಡೆಯುತ್ತಿದೆ ಎಂದು ಚಾಲಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    BRIBE

    ಒಟ್ಟಿನಲ್ಲಿ ರಾಜ್ಯದ ಶಾಂತಿಯನ್ನು ಕೆಡಿಸುವ ಕೆಲಸಕ್ಕೆ ಕೆಲವರು ರಾಜಕೀಯ ಮಾಡುತ್ತಿದ್ದಾರೆ. ಹಿಂದೂ, ಮುಸ್ಲಿಂ ಅನ್ನುವ ವಿಷ ಬೀಜ ಭಿತ್ತನೆ ಮಾಡಿ ಅದರ ಲಾಭ ಮಾಡಿಕೊಳ್ಳಲು ಒಂದಿಲ್ಲೊಂದು ತಂತ್ರಗಳನ್ನು ಕೆಲವರು ಮಾಡುತ್ತಿದ್ದಾರೆ. ಜನ ಮಾತ್ರ ಇದೆಲ್ಲ ಬೇಕಾ ಅಂತ ತಮ್ಮ ಪಾಡಿಗೆ ತಾವು ಕೆಲಸಗಳನ್ನು ಮಾಡಿಕೊಂಡು ಹೋಗುತ್ತಿದ್ದಾರೆ. ಇನ್ನಾದರೂ ಈ ಅಭಿಯಾನಗಳು ಕೊನೆಯಾಗಿ ಜನ ನೆಮ್ಮದಿಯಿಂದ ಸಹಬಾಳ್ವೆ ಮಾಡುವಂತೆ ಆಗಲಿ.