Tag: Hindu Rashtra

  • ಸಂತರ ಹಿಂದೂ ರಾಷ್ಟ್ರ ಘೋಷಣೆಗೆ ಸಾಣೆಹಳ್ಳಿ ಶ್ರೀ ಆತಂಕ

    ಸಂತರ ಹಿಂದೂ ರಾಷ್ಟ್ರ ಘೋಷಣೆಗೆ ಸಾಣೆಹಳ್ಳಿ ಶ್ರೀ ಆತಂಕ

    ಚಿತ್ರದುರ್ಗ: ಹಿಂದೂ ರಾಷ್ಟ್ರಕ್ಕೆ (Hindu Rashtra) ಹೊಸ ಸಂವಿಧಾನ (Constitution) ತರುವ ಸಂಚು ನಮ್ಮ ದೇಶದಲ್ಲಿ ನಡೆಯುತ್ತಿದೆ. ನಾವು ಜಾಗೃತರಾಗದ್ದಿದ್ದರೆ ನಾಳೆ ನಾಡಿಗೆ ಖಂಡಿತ ಉಳಿಗಾಲವಿಲ್ಲವೆಂದು ಸಾಣೇಹಳ್ಳಿ ತರಳುಬಾಳು ಶಾಖಾ ಮಠದ ಪಂಡಿತಾರಾಧ್ಯ ಶ್ರೀಗಳು (Sanehalli Swamiji) ಆತಂಕ ವ್ಯಕ್ತಪಡಿಸಿದ್ದಾರೆ.

    ಹೊಸದುರ್ಗದ ಸಾಣೇಹಳ್ಳಿ ಗ್ರಾಮದಿಂದ ಸಂತೆಬೆನ್ನೂರಿಗೆ ನಡೆದ ನಮ್ಮ ನಡೆ ಸರ್ವೋದಯದ ಕಡೆಗೆ ಎಂಬ ಪಾದಾಯತ್ರೆಯಲ್ಲಿ ಅವರು ಮಾತನಾಡಿದರು. ಈ ವೇಳೆ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಕೊಟ್ಟ ಸಂವಿಧಾನವನ್ನು ಹಿಂದೆ ಹಾಕಿ, ಹೊಸ ಸಂವಿಧಾನ ತರುವ ಸಂಚು ನಡೆಯುತ್ತಿದೆ. ಹೀಗಾಗಿ ಆ ಸಂಚು ಜಾರಿಗೆ ಬರುವ ಮುನ್ನ ನಾವು ಜಾಗೃತರಾಗಬೇಕಿದೆ. ಒಂದು ವೇಳೆ ನಾವು ಜಾಗೃತರಾಗದಿದ್ರೆ ನಾಳೆ ನಾಡಿಗೆ ಖಂಡಿತ ಉಳಿಗಾಲ ಇಲ್ಲ ಎಂದಿದ್ದಾರೆ.

    ಹಿಂದೂ ರಾಷ್ಟ್ರಕ್ಕೆ ಸಂವಿಧಾನ ತಯಾರಾಗಿದೆ ಎಂದು ಒಂದು ಪತ್ರಿಕೆಯಲ್ಲಿ ಬರೆಯಲಾಗಿದೆ. ಹಾಗಾದ್ರೆ ಈಗಿರುವ ಸಂವಿಧಾನವನ್ನ ಏನು ಮಾಡ್ತೀರಿ? ದೇಶದಲ್ಲಿ ಹೊಸ ಸಂವಿಧಾನ ತರೋದಾದ್ರೆ, ಹಳೆ ಸಂವಿಧಾನ ಸುಟ್ಟಾಕಬೇಕಾ? ಅದನ್ನು ನಾಶ ಮಾಡಿ ಬಹಿಷ್ಕಾರ ಮಾಡಬೇಕಾ ಎಂದು ಗಂಭೀರವಾಗಿ ಯೋಚಿಸಬೇಕಿದೆ. ಹಾಗೆಯೇ ಆ ಸಂವಿಧಾನದ ಸತ್ವಗಳು ಈ ಸಂವಿಧಾನದಲ್ಲಿ ಇದ್ಯಾ ಎಂದು ನೋಡಿದ್ರೆ ಖಂಡಿತ ಇಲ್ಲ. ಸನಾತನ ಪರಂಪರೆಯನ್ನು ಉಳಿಸಬೇಕು ಎಂದು ತಿಳಿಸಲಾಗಿದೆ. ಯಾರು ವೇದವನ್ನು ಅಧ್ಯಯನ ಮಾಡ್ತಾರೋ ಅವರು ಮಾತ್ರ ಚುನಾವಣೆಗೆ ಬರಬೇಕು ಎಂದಿದೆ. ನಾವು, ನೀವು ಯಾರೂ ವೇದ ಓದಿಲ್ಲ. ಹಾಗಾದ್ರೆ ಇನ್ಮುಂದೆ ನಾವು ಯಾರು ಬರೋ ಹಾಗಿಲ್ವ ಎಂದು ಗುಡುಗಿದ್ದಾರೆ.

    ಲಿಂಗಾಯತ ಹಾಗೂ ಬಸವ ಧರ್ಮದವರು ಸನಾತನ ಪರಂಪರೆಯನ್ನೇ ವಿರೋಧ ಮಾಡಿದವರು. ಹಾಗಾದ್ರೆ ನಾವು ಯಾರೂ ಚುನಾವಣೆಯಲ್ಲಿ ಭಾಗವಹಿಸುವ ಹಾಗಿಲ್ವಾ? ಮನುಸ್ಮೃತಿಯನ್ನ ಅಂಬೇಡ್ಕರ್ ಸುಟ್ಟು ಹಾಕಿದ್ದು ನಿಮಗೂ ಗೊತ್ತಿದೆ. ಅದರಲ್ಲೂ ನಾಲ್ಕು ಪೀಠದ ಪೀಠಾಧಿಪತಿಗಳು ಒಪ್ಪಿಗೆ ನೀಡಿದ ನಂತರ ಸಂವಿಧಾನ ರಚನೆ ಎಂದು ಹೇಳಿದ್ದಾರೆಂಬ ಮಾಹಿತಿ ಇದೆ. ಹಾಗಾದ್ರೆ ಆ ನಾಲ್ಕು ಪೀಠಗಳು ಯಾರು? ನಾವು ಯಾರೂ ಪೀಠಾಧಿಪತಿಗಳೇ ಅಲ್ವಾ? ಈ ಜಗತ್ತಿನಲ್ಲಿ ಆ ನಾಲ್ಕು ಪೀಠಗಳು ಮಾತ್ರ ಇರೋದಾ? ನಾವು ಇದನ್ನು ಸರಿಯಾಗಿ ಯೋಚಿಸದಿದ್ರೆ, ನಾಳೆ ನಾವೆಲ್ಲರೂ ತಲೆ ಬೋಳಿಸಿಕೊಳ್ಳಬೇಕಾಗುತ್ತದೆ. ನಮ್ಮ ಬದುಕು ನರಕವಾಗಿ ಬಿಡುತ್ತದೆ ಎಂದಿದ್ದಾರೆ.

    ಹಿಂದೂ ರಾಷ್ಟ್ರಕ್ಕೆ ಹೊಸ ಸಂವಿಧಾನ ಸಿದ್ಧತೆ ನಡೆದಿದೆ. ಫೆ.3ರಂದು ಜಾರಿಗೊಳಿಸುವ ಪ್ಲ್ಯಾನ್ ಮಾಡಿದ್ದಾರೆ‌. ಇದನ್ನು ನಾವು ಸ್ಪಷ್ಟವಾಗಿ ಖಂಡಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

  • ಭಾರತ ಸಂಪೂರ್ಣ ಹಿಂದೂ ರಾಷ್ಟ್ರವಾಗಬೇಕು: ಗಣಪತಿಗೆ ಭಕ್ತನ ಮನವಿ

    ಭಾರತ ಸಂಪೂರ್ಣ ಹಿಂದೂ ರಾಷ್ಟ್ರವಾಗಬೇಕು: ಗಣಪತಿಗೆ ಭಕ್ತನ ಮನವಿ

    ಚಿಕ್ಕಮಗಳೂರು: ಭಾರತ (India) ಸಂಪೂರ್ಣ ಹಿಂದೂ (Hindu) ರಾಷ್ಟ್ರವಾಗಬೇಕು. 140 ಕೋಟಿ ಭಾರತೀಯರು ಹಿಂದೂಗಳಾಗಬೇಕು. ಗಣಪತಿ ಇದಕ್ಕೆ ಕೃಪೆ ತೋರು ತಂದೆ ಎಂದು ಭಕ್ತನೋರ್ವ ಗಣಪತಿ ಕಾಣಿಕೆ ಹುಂಡಿಗೆ ಕಾಣಿಕೆ ಬದಲು ಚೀಟಿ ಬರೆದು ಹಾಕಿ ಬೇಡಿಕೊಂಡಿರುವ ಘಟನೆ ಚಿಕ್ಕಮಗಳೂರಿನಲ್ಲಿ (Chikkamagaluru) ನಡೆದಿದೆ.

    ಇಷ್ಟು ದಿನಗಳ ಕಾಲ ನಾವೆಲ್ಲಾ ದೇವರೇ ಮದುವೆ ಮಾಡು. ಬೇಗ ಹುಡುಗಿ ಸಿಗಲಿ. ಪರೀಕ್ಷೆಯಲ್ಲಿ ಪಾಸ್ ಮಾಡು. ನನ್ನ ಪ್ರೀತಿ ಗೆಲ್ಲುವಂತೆ ಮಾಡು. ಸರ್ಕಾರಿ ಕೆಲಸ ಸಿಗಲಿ ಹೀಗೆ ನಾನಾ ರೀತಿಯ ಬೇಡಿಕೆಯನ್ನು ಬರೆದು ಚೀಟಿಯನ್ನ ಕಾಣಿಕೆ ಹುಂಡಿಯಲ್ಲಿ ಹಾಕಿರುವುದನ್ನು ನೋಡಿರುತ್ತೇವೆ. ಆದರೆ, ಇದೇ ಮೊದಲ ಬಾರಿಗೆ ಭಕ್ತರು ನಾನಾ ಬೇಡಿಕೆಗಳನ್ನ ಗಣಪತಿ ಮುಂದೆ ಇಟ್ಟಿದ್ದಾರೆ. ಇದನ್ನೂ ಓದಿ: ಜಾರ್ಖಂಡ್‍ನಿಂದ ನೀರು ಜಾಸ್ತಿ ಬಿಟ್ಟಿದ್ದಕ್ಕೆ ಬಂಗಾಳದಲ್ಲಿ ಪ್ರವಾಹ: ಮಮತಾ ಆಕ್ರೋಶ

    ನಗರದ ಬಸವನಹಳ್ಳಿ ಮುಖ್ಯ ರಸ್ತೆಯ ಓಂಕಾರೇಶ್ವರ ದೇಗುಲದ ಪಕ್ಕದಲ್ಲಿ ಇಟ್ಟಿದ್ದ ಹಿಂದೂ ಮಹಾ ಸಭಾ ಗಣಪತಿಯನ್ನು ಸೆ.18ರಂದು ವಿಸರ್ಜನೆ ಮಾಡಲಾಯಿತು. ವಿಸರ್ಜನೆ ಮೆರವಣಿಗೆಯಲ್ಲಿ 20 ಸಾವಿರಕ್ಕೂ ಅಧಿಕ ಭಕ್ತರು ಪಾಲ್ಗೊಂಡಿದ್ದರು. ಆ ಕಾರ್ಯಕ್ರಮದ ಕಾಣಿಕೆ ಹುಂಡಿ ಹಣ ಎಣಿಕೆಯನ್ನು ಇಂದು (ಶುಕ್ರವಾರ) ಹಮ್ಮಿಕೊಂಡಿದ್ದರು. ಹುಂಡಿಯಲ್ಲಿ ಹಣದ ಜೊತೆ ನಾನಾ ಬೇಡಿಕೆಯ ಚೀಟಿಗಳು ಪತ್ತೆಯಾಗಿವೆ. ಇದನ್ನೂ ಓದಿ: Tirupati Laddu Row| ತಮಿಳುನಾಡು ಮೂಲದ ಕಂಪನಿಯಿಂದ ಕಲಬೆರೆಕೆ ತುಪ್ಪ: ಟಿಡಿಡಿ ಇಓ

    ಚೀಟಿಗಳಯಲ್ಲಿ ಏನೆಲ್ಲಾ ಬೇಡಿಕೆ ಇತ್ತು?
    ಭಾರತ ಸಂಪೂರ್ಣ ಹಿಂದೂ ರಾಷ್ಟ್ರವಾಗಬೇಕು. ದೇಶದ 140 ಕೋಟಿ ಜನರೂ ಹಿಂದೂಗಳಾಗಬೇಕು. ಸಿ.ಟಿ ರವಿ ( C T Ravi) ಮುಂದಿನ ಸಿಎಂ ಆಗಬೇಕು. ಹಿಂದೂಗಳೆಲ್ಲಾ ಒಗ್ಗಟ್ಟಾಗಿ ಇರಬೇಕು. ದತ್ತಪೀಠ ಆದಷ್ಟು ಬೇಗ ಹಿಂದೂಗಳ ಪೀಠವಾಗಬೇಕು ಹೀಗೆ ಭಕ್ತರು ನಾನಾ ರೀತಿ ಬೇಡಿಕೊಂಡಿದ್ದಾರೆ. ಅದರಲ್ಲಿ ಓರ್ವ ಭಕ್ತ ಮಾತ್ರ ನನ್ನ ಮಗನಿಗೆ ಮದುವೆ ಮಾಡು, ಮುಂದಿನ ವರ್ಷ ನಿನ್ನ ಸೇವೆ ಮಾಡುತ್ತೇನೆ ಎಂದು ಬರೆದು ಹಾಕಿದ್ದನು. ಇದನ್ನೂ ಓದಿ: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು: ಕೆಇಎ

  • ನನಗೆ ಬೆಂಬಲ ಕೊಡಿ.. ನಾನು ನಿಮಗೆ ಹಿಂದೂ ರಾಷ್ಟ್ರ ಕೊಡುತ್ತೇನೆ – ಧೀರೇಂದ್ರ ಶಾಸ್ತ್ರಿ

    ನನಗೆ ಬೆಂಬಲ ಕೊಡಿ.. ನಾನು ನಿಮಗೆ ಹಿಂದೂ ರಾಷ್ಟ್ರ ಕೊಡುತ್ತೇನೆ – ಧೀರೇಂದ್ರ ಶಾಸ್ತ್ರಿ

    ರಾಯ್ಪುರ್‌: ನನಗೆ ಬೆಂಬಲ ಕೊಡಿ.. ನಾನು ನಿಮಗೆ ಹಿಂದೂ ರಾಷ್ಟ್ರ (Hindu Nation) ಕೊಡುತ್ತೇನೆ ಎಂದು ಬಾಗೇಶ್ವರ ಧಾಮ (Bageshwar Dham) ಮುಖ್ಯಸ್ಥ ಧೀರೇಂದ್ರ ಶಾಸ್ತ್ರಿ (Dhirendra Shastri) ಹೇಳಿದ್ದಾರೆ. ಹಿಂದೂಗಳು ಬೆಂಬಲ ನೀಡಿ ಎಂದು ಕೇಳಿಕೊಂಡಿದ್ದಾರೆ.

    ನೇತಾಜಿ ಸುಭಾಷ್ ಚಂದ್ರ ಬೋಸ್ (Netaji Subhash Chandra Bose) ಅವರು “ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ. ನೀವು ನನಗೆ ರಕ್ತ ಕೊಡಿ, ನಾನು ನಿಮಗೆ ಸ್ವಾತಂತ್ರ್ಯ ನೀಡುತ್ತೇನೆ” ಎಂಬ ಘೋಷಣೆ ನೀಡಿದ್ದರು. ಆದರೆ ಇಂದು ನಾವು ಹಿಂದೂ ರಾಷ್ಟ್ರ ಮಾಡಬೇಕಾಗಿದೆ. ಇಂದು ನಾನು ಒಂದು ಘೋಷಣೆಯನ್ನು ನೀಡುತ್ತೇನೆ. ನೀವು ನನ್ನನ್ನು ಬೆಂಬಲಿಸಿ, ನಾನು ನಿಮಗೆ ಹಿಂದೂ ರಾಷ್ಟ್ರವನ್ನು ನೀಡುತ್ತೇನೆ ಎಂದು ಶಾಸ್ತ್ರೀ ಹಿಂದೂಗಳಿಗೆ ಕರೆ ನೀಡಿದ್ದಾರೆ. ಇದನ್ನೂ ಓದಿ: ಹೈದರಾಬಾದ್ ವಿವಿ ಕ್ಯಾಂಪಸ್‌ನಲ್ಲಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ – ತನಿಖೆಗೆ ಆದೇಶ

    ಇದನ್ನು ಸಾಧಿಸಲು ಸನಾತನ ಧರ್ಮದ ಎಲ್ಲಾ ಜನರು ಒಗ್ಗೂಡಬೇಕು. ಒಟ್ಟಾಗಿ ಮುಂದೆ ಬರಬೇಕು. ಮೊದಲ ಪವಾಡವೆಂದರೆ ಇಂದು ಭಾರತದ ಹಿಂದೂಗಳು ಒಂದಾಗುತ್ತಿದ್ದಾರೆ. ಎರಡನೇ ಪವಾಡವನ್ನು ಬಾಗೇಶ್ವರ ಧಾಮದಲ್ಲಿ ನೋಡಬೇಕು. ನೀವೇ ಬಂದು ನೋಡಬೇಕು ಎಂದು ತಿಳಿಸಿದ್ದಾರೆ.

    ಮೂರನೆಯ ಪವಾಡ ಏನೆಂದರೆ, ನಿಮ್ಮಲ್ಲಿ ಸನಾತನದ ಒಂದು ತುಣುಕಾದರೂ ಇದ್ದರೆ, ನೀವು ನನ್ನನ್ನು ಬೆಂಬಲಿಸಿ. ನಾನು ನಿಮಗೆ ಹಿಂದೂ ರಾಷ್ಟ್ರವನ್ನು ನೀಡುತ್ತೇನೆ. ನಾನು ರಾಜಕಾರಣಿಯಾಗಲು ಬಯಸುವುದಿಲ್ಲ. ನಾನು ಯಾವುದೇ ಪಕ್ಷವನ್ನು ಹೊಂದುವುದಿಲ್ಲ. ನಾನು ಯಾವುದೇ ಪಕ್ಷವನ್ನು ಬೆಂಬಲಿಸುವುದಿಲ್ಲ. ನಾವು ನಮ್ಮ ಸನಾತನವಾದಿಗಳನ್ನು ಒಗ್ಗೂಡಿಸುವ ಬಗ್ಗೆ ಮಾತ್ರ ಮಾತನಾಡಬೇಕಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಗಣರಾಜ್ಯೋತ್ಸವಕ್ಕೆ ಒಂದೇ ವಾರದಲ್ಲಿ ಕರ್ನಾಟಕದ ಟ್ಯಾಬ್ಲೋ ರೆಡಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಭಾರತ ಹಿಂದೂರಾಷ್ಟ್ರ; ಇಲ್ಲಿರುವ ದೇವರು ಒಂದೇ – ಮೋಹನ್‌ ಭಾಗವತ್‌

    ಭಾರತ ಹಿಂದೂರಾಷ್ಟ್ರ; ಇಲ್ಲಿರುವ ದೇವರು ಒಂದೇ – ಮೋಹನ್‌ ಭಾಗವತ್‌

    ಚಿಕ್ಕಬಳ್ಳಾಪುರ: ಭಾರತ ಹಿಂದೂ ರಾಷ್ಟ್ರವಾಗಿದ್ದು, ಇಲ್ಲಿರುವ ದೇವರು ಒಂದೇ ಆಗಿದೆ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅಭಿಪ್ರಾಯಪಟ್ಟರು.

    ಮುದ್ದೇನಹಳ್ಳಿಯಲ್ಲಿ ಮಾತನಾಡಿದ ಅವರು, ಆಧ್ಯಾತ್ಮಿಕ ಭಾರತ ಮಾತ್ರವೇ ಪ್ರಪಂಚದ ಸರ್ವಶ್ರೇಷ್ಟ ಭಾರತ. ಭಾರತ ಹಿಂದೂ ರಾಷ್ಟವಾಗಿದ್ದು, ಇಲ್ಲಿರುವ ದೇವರು ಒಂದೇ ಆಗಿದೆ. ಕೆಲವರು ಗೊಂದಲ ಮೂಡಿಸುತ್ತಾರೆ. ಸತ್ಯ, ಕರುಣೆ, ಪ್ರೇಮ ಭಾರತದ ಆತ್ಮವಾಗಬೇಕಿದೆ. ಒಳ್ಳೆಯ ಕೆಲಸ ಮಾಡಲು ಯಾರ ಅಂಜಿಕೆ, ಅಣತಿ ಬೇಕಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಬಿಜೆಪಿಗೆ ನಾಡಿನ ಮಠಾಧೀಶರಿಗಿಂತ ಸಂಘದ ಆದೇಶವೇ ಮೇಲು: ಕಾಂಗ್ರೆಸ್‌ ಟೀಕೆ

    ಸ್ವೇಚ್ಛಾಚಾರ ವಿಶ್ವದಲ್ಲಿ ಬಹುದೊಡ್ಡ ಸಮಸ್ಯೆಯನ್ನು ಉಂಟು ಮಾಡಿದೆ. ಭಾಷೆ ಹಾಗೂ ಪೂಜೆಗಳು ಬೇರೆ ಬೇರೆ. ಆದ್ರೆ ಸಮಸ್ಯೆಗಳು ಒಂದೇ ಆಗುತ್ತವೆ. ಶಿಕ್ಷೆಯಿಂದ ಬದಲಾವಣೆ ಅಸಾದ್ಯ. ಬದುಕುವುದಕ್ಕಾಗಿ ಜೀವಿಸುವುದು ವ್ಯರ್ಥ. ಪರೋಪಕಾರಕ್ಕಾಗಿ ಬದುಕುವುದೇ ಶ್ರೇಷ್ಟ ಎಂದು ಹೇಳಿದರು.

    ವಿಜ್ಞಾನ ಮತ್ತು ಪರಂಪರೆಯನ್ನು ಒಟ್ಟಿಗೆ ಕೊಂಡೊಯ್ಯುವ ಕೆಲಸ ಆಗಬೇಕಿದೆ. ಕೆಲಸ ಮಾಡುವಾಗ ಯೋಚಿಸಿ ಮಾಡಬೇಕು. ಭೌತಿಕವಾಗಿ ಭಾರತವನ್ನು ಬಲಿಷ್ಠಗೊಳಿಸುವಂತೆ, ಮಾನಸಿಕವಾಗಿಯೂ ಸಮರ್ಥವಾಗಿ ಕಟ್ಟಬೇಕಿದೆ ಎಂದು ಆಶಯ ವ್ಯಕ್ತಪಡಿಸಿದರು. ಇದನ್ನೂ ಓದಿ: ಊಟ ಬಿಟ್ಟು ಮರವಂತೆಗೆ ಸಿಎಂ ದೌಡಾಯಿಸಿದ್ದು ಯಾಕೆ?

    Live Tv
    [brid partner=56869869 player=32851 video=960834 autoplay=true]

  • ಭಾರತವನ್ನು ಹಿಂದೂ ರಾಷ್ಟ್ರ ಮಾಡುತ್ತೇವೆ: ಹರಿಯಾಣ ಶಾಸಕ ಅಸೀಮ್‌ ಪ್ರತಿಜ್ಞೆ

    ಭಾರತವನ್ನು ಹಿಂದೂ ರಾಷ್ಟ್ರ ಮಾಡುತ್ತೇವೆ: ಹರಿಯಾಣ ಶಾಸಕ ಅಸೀಮ್‌ ಪ್ರತಿಜ್ಞೆ

    ಚಂಡೀಗಢ: ಭಾರತವನ್ನು ಹಿಂದೂ ರಾಷ್ಟ್ರ ಮಾಡಲು ಯಾವ ತ್ಯಾಗಕ್ಕೂ ಸಿದ್ಧರಿದ್ದೇವೆ ಎಂದು ಹರಿಯಾಣದ ಹಂಬಾಲ ನಗರ ಕ್ಷೇತ್ರದ ಬಿಜೆಪಿ ಶಾಸಕ ಅಸೀಮ್‌ ಗೋಯೆಲ್‌ ಪ್ರತಿಜ್ಞೆ ಮಾಡಿದ್ದಾರೆ.

    ಹಲವರೊಂದಿಗೆ ಗೋಯೆಲ್‌ ಪ್ರತಿಜ್ಞೆ ಮಾಡುತ್ತಿರುವ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ. ಇದನ್ನೂ ಓದಿ: ಬಾಬರಿ ಧ್ವಂಸ ವೇಳೆ ಶಿವಸೇನೆ ಎಲ್ಲಿತ್ತು ಎಂದು ನಿಮ್ಮ ನಾಯಕರನ್ನು ಕೇಳಿ: ಬಿಜೆಪಿಗೆ ರಾವತ್ ತಿರುಗೇಟು

    https://twitter.com/anshulsigh/status/1520809833473007616?ref_src=twsrc%5Etfw%7Ctwcamp%5Etweetembed%7Ctwterm%5E1520809833473007616%7Ctwgr%5E%7Ctwcon%5Es1_&ref_url=https%3A%2F%2Fwww.prajavani.net%2Findia-news%2Fharyana-bjp-mla-others-take-oath-to-make-india-hindu-rashtra-933430.html

    ಹಿಂದೂಸ್ತಾನವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಪ್ರತಿಜ್ಞೆ ಮಾಡುತ್ತಿದ್ದೇವೆ. ನಮ್ಮ ಪ್ರತಿಜ್ಞೆಗೆ ನಾವು ಬದ್ಧರಾಗಿದ್ದೇವೆ ಎಂದು ಶಾಸಕ ಇತರರೊಂದಿಗೆ ಪ್ರತಿಜ್ಞೆ ಮಾಡುತ್ತಿರುವ ದೃಶ್ಯ ವೀಡಿಯೋದಲ್ಲಿ ಇದೆ.

    ಯಾವುದೇ ಬೆಲೆ ತೆತ್ತಾದರೂ ದೇಶವನ್ನು ಹಿಂದೂ ರಾಷ್ಟ್ರ ಎಂದು ಘೋಷಿಸಬೇಕಾಗಿದೆ. ನಾವು ಗುರಿ ಸಾಧಿಸಲು ಪೂರ್ವಜರು ಮತ್ತು ಹಿಂದೂ ದೇವತೆಗಳು ನಮಗೆ ಶಕ್ತಿ ದಯಪಾಲಿಸಲಿ ಎಂದು ಕೇಳಿಕೊಂಡಿದ್ದಾರೆ. ಇದನ್ನೂ ಓದಿ: ಜಹಾಂಗೀರ್‌ಪುರಿ ಹಿಂಸಾಚಾರ – ಆರೋಪಿಗಳನ್ನು ಮುಗ್ದರೆಂದ ಜಮಿಯತ್ ನಿಯೋಗ

    ಈ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಗೋಯೆಲ್‌, ನಾನೊಬ್ಬ ಹಿಂದೂ ಎಂದು ಹೇಳಿಕೊಳ್ಳಲು ಹೆಮ್ಮೆ ಇದೆ. ನಾನು ಹಿಂದೂ ಆಗಿ ಪ್ರತಿಜ್ಞೆ ಮಾಡುತ್ತಿದ್ದೇನೆಯೇ ಹೊರತು ಬಿಜೆಪಿ ಶಾಸಕನಾಗಿ ಅಲ್ಲ ಎಂದು ತಿಳಿಸಿದ್ದಾರೆ.

  • ಹಿಂದೂ ರಾಷ್ಟ್ರ ಮಾಡುವುದೇ ಪೌರತ್ವ ಕಾಯ್ದೆಯ ಉದ್ದೇಶ: ಜ್ಞಾನ ಪ್ರಕಾಶ ಸ್ವಾಮೀಜಿ

    ಹಿಂದೂ ರಾಷ್ಟ್ರ ಮಾಡುವುದೇ ಪೌರತ್ವ ಕಾಯ್ದೆಯ ಉದ್ದೇಶ: ಜ್ಞಾನ ಪ್ರಕಾಶ ಸ್ವಾಮೀಜಿ

    ಚಾಮರಾಜನಗರ: ಭಾರತವನ್ನು ಸಂಪೂರ್ಣ ಹಿಂದೂ ರಾಷ್ಟ್ರ ಮಾಡುವುದೇ ಸಿಎಎ, ಎನ್.ಪಿ.ಆರ್ ಹಾಗೂ ಎನ್.ಆರ್.ಸಿ ಉದ್ದೇಶವಾಗಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಸಚಿವ ರಾಜನಾಥ್ ಸಿಂಗ್ ನನಗೆ ಕರೆ ಮಾಡಿದ್ದರು ಎಂದು ಉರಿಲಿಂಗಿಪೆದ್ದಿಮಠದ ಜ್ಞಾನ ಪ್ರಕಾಶ ಸ್ವಾಮೀಜಿ ಹೊಸ ಬಾಂಬ್ ಸಿಡಿಸಿದ್ದಾರೆ.

    ಚಾಮರಾಜನಗರದಲ್ಲಿ ಬಹುಜನ ವಾಲೆಂಟಿಯರ್ ಫೋರ್ಸ್ ಆಯೋಜಿಸಿದ್ದ, ಪೌರತ್ವ ಪರೀಕ್ಷೆ ಏನಿದರ ಮರ್ಮ ಎಂಬ ವಿಚಾರ ಸಂಕೀರಣದಲ್ಲಿ ಮಾತನಾಡಿದ ಅವರು, ಕೆಲ ದಿನಗಳ ಹಿಂದೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಕರೆ ಮಾಡಿದ್ದರು. ಮುಸ್ಲಿಮರಿಗೆ ಬೇರೆ ಬೇರೆ ದೇಶಗಳಿವೆ, ಕ್ರೈಸ್ತರಿಗೂ ಹಲವಾರು ದೇಶಗಳಿವೆ ಹಿಂದೂಗಳಿಗೂ ಒಂದು ರಾಷ್ಟ್ರ ಬೇಡವೇ ಎಂದು ಕೇಳಿದ್ದರು. ನೀವು ಯಾಕೆ ನಮ್ಮ ವಿರುದ್ಧ ಹೋರಾಟ ಮಾಡುತ್ತಿದ್ದೀರಾ? ನಮ್ಮ ಜೊತೆ ಕೈಜೋಡಿಸಿ ಎಂದು ರಾಜನಾಥ್ ಸಿಂಗ್ ಹೇಳಿದ್ದರು ಎಂದು ಬಹಿರಂಗ ಪಡಿಸಿದರು.

    ಆಗ ಮೊದಲು ಹಿಂದುಗಳು ಅಂದರೆ ಯಾರು ಪಟ್ಟಿ ಮಾಡಿ ಎಂದೆ. ಆರ್.ಎಸ್.ಎಸ್.ನ ಸಾರ್ವಕರ್ ಹಾಗೂ ಗೋರ್ವಕರ್ ಅವರ ಉದ್ದೇಶ ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುವುದಾಗಿತ್ತು. ಆರ್.ಎಸ್.ಎಸ್.ಗೆ ನೂರು ವರ್ಷ ತುಂಬುವ ಸಂದರ್ಭದಲ್ಲಿ ಭಾರತವನ್ನು ಹಿಂದೂ ರಾಷ್ಟ್ರ ಎಂದು ಘೋಷಣೆ ಮಾಡಬೇಕು ಎಂದು ಅವರು ತಮ್ಮ ಪುಸ್ತಕದಲ್ಲಿ ಬರೆದಿದ್ದಾರೆ. ಇನ್ನು ಮೂರು ವರ್ಷ ಕಳೆದರೆ ಆರ್.ಎಸ್.ಎಸ್. ಗೆ ನೂರು ವರ್ಷ ತುಂಬಲಿದೆ. ಈ ಹಿನ್ನೆಲೆಯಲ್ಲಿ ಅವರ ಉದ್ದೇಶವನ್ನು ಬಿಜೆಪಿ ಸಾಕಾರಗೊಳಿಸಲು ಹೊರಟಿದೆ ಎಂದು ಜ್ಞಾನ ಪ್ರಕಾಶ ಸ್ವಾಮೀಜಿ ಆರೋಪಿಸಿದರು.