ಕೌಲಾಲಂಪುರ: ಮಸೀದಿ ನಿರ್ಮಾಣಕ್ಕಾಗಿ ಕೌಲಾಲಂಪುರ ಹೃದಯಭಾಗದಲ್ಲಿರುವ 131 ವರ್ಷ ಹಳೆಯ ಹಿಂದೂ ದೇವಾಲಯವನ್ನು ಸ್ಥಳಾಂತರಿಸಲು ಮಲೇಷ್ಯಾ ಸರ್ಕಾರ ಮುಂದಾಗಿದೆ.
ಮಲಯ್ ಮೇಲ್ ವರದಿಯ ಪ್ರಕಾರ, ದೇವಿ ಶ್ರೀ ಪತ್ರಕಾಳಿಯಮ್ಮನ್ ದೇವಾಲಯವನ್ನು ಸ್ಥಳಾಂತರಿಸಲು ಸ್ಥಳವನ್ನು ಗುರುತಿಸಲಾಗಿದೆ ಎನ್ನಲಾಗಿದೆ. ಆದರೆ, ನಿಖರವಾದ ಸ್ಥಳವನ್ನು ಬಹಿರಂಗಪಡಿಸಲಾಗಿಲ್ಲ.
ಫೆಡರಲ್ ಸಂವಿಧಾನವು ಖಾತರಿಪಡಿಸುವ ಧಾರ್ಮಿಕ ಸ್ವಾತಂತ್ರ್ಯದ ತತ್ವಕ್ಕೆ ಅನುಗುಣವಾಗಿ ಕ್ರಮವಹಿಸಲಾಗುವುದು. ಸ್ಥಳಾಂತರ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ದೇವಾಲಯವನ್ನು ಕೆಡವಲಾಗುವುದಿಲ್ಲ ಎಂದು ದೃಢಪಡಿಸಲಾಗಿದೆ.
ಮಲೇಷಿಯನ್ನರ ಹಕ್ಕುಗಳ ಯುನೈಟೆಡ್ ಪಾರ್ಟಿ (URIMAI) ಅಧ್ಯಕ್ಷ ಪ್ರೊಫೆಸರ್ ರಾಮಸಾಮಿ ಪಳನಿಸಾಮಿ, ಈ ದೇವಾಲಯವು ಮಲೇಷ್ಯಾದ ಸ್ವಾತಂತ್ರ್ಯಕ್ಕೂ ಮುಂಚಿನ ಮಹತ್ವದ ಮತ್ತು ಧಾರ್ಮಿಕ ಹೆಗ್ಗುರುತಾಗಿದೆ. ದೇವಾಲಯವು ಸ್ಥಳಾಂತರಗೊಳ್ಳದಂತೆ ನೋಡಿಕೊಳ್ಳಲು DBKL ಮಧ್ಯಪ್ರವೇಶಿಸುವಂತೆ ಒತ್ತಾಯಿಸಿದ್ದಾರೆ.
ಬಹು-ಜನಾಂಗೀಯ ಮತ್ತು ಬಹು-ಧರ್ಮೀಯ ಎಂದು ಹೆಮ್ಮೆಪಡುವ ರಾಷ್ಟ್ರದಲ್ಲಿ, ಬೇರೆ ಯಾವುದೇ ಉದ್ದೇಶಕ್ಕಾಗಿ ದೀರ್ಘಕಾಲದಿಂದ ಸ್ಥಾಪಿತವಾದ ಹಿಂದೂ ದೇವಾಲಯವನ್ನು ತೆಗೆದುಹಾಕುವುದು ಸ್ವೀಕಾರಾರ್ಹವಲ್ಲ ಎಂದು ಪೆನಾಂಗ್ನ ಮಾಜಿ ಉಪಮುಖ್ಯಮಂತ್ರಿ ತಿಳಿಸಿದ್ದಾರೆ.
ವಾಷಿಂಗ್ಟನ್: ದಕ್ಷಿಣ ಕ್ಯಾಲಿಫೋರ್ನಿಯಾದ ಅತಿದೊಡ್ಡ ಹಿಂದೂ ದೇವಾಲಯಗಳಲ್ಲಿ ಒಂದಾದ ಬಿಎಪಿಎಸ್ ಶ್ರೀ ಸ್ವಾಮಿನಾರಾಯಣ್ ಮಂದಿರವನ್ನು ವಿರೂಪಗೊಳಿಸಲಾಗಿದೆ.
ಭಾರತ ವಿರೋಧಿ ಸಂದೇಶಗಳೊಂದಿಗೆ ದೇವಾಲಯವನ್ನು ಅಪವಿತ್ರಗೊಳಿಸಲಾಯಿತು. ಕಳೆದ ಕೆಲವು ತಿಂಗಳುಗಳಲ್ಲಿ ಯುಎಸ್ನಲ್ಲಿ ಇಂತಹ ಮತ್ತೊಂದು ಘಟನೆ ನಡೆದಿದೆ.
ಕ್ಯಾಲಿಫೋರ್ನಿಯಾದ ಚಿನೋ ಹಿಲ್ಸ್ನಲ್ಲಿರುವ ದೇವಾಲಯವನ್ನು, ಹಿಂದೂ ಸಮುದಾಯದ ವಿರುದ್ಧ ದ್ವೇಷದ ಬರಹದೊಂದಿಗೆ ಅಪವಿತ್ರಗೊಳಿಸಲಾಗಿದೆ ಎಂದು ಬಿಎಪಿಎಸ್ ತಿಳಿಸಿವೆ. ಸಮುದಾಯವು ದ್ವೇಷವನ್ನು ಬೇರೂರಲು ಎಂದಿಗೂ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಈ ಘಟನೆಯ ಬಗ್ಗೆ ಚಿನೋ ಹಿಲ್ಸ್ ಪೊಲೀಸ್ ಇಲಾಖೆ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೊದಲ್ಲಿ ನಡೆದ ಬಿಎಪಿಎಸ್ ಶ್ರೀ ಸ್ವಾಮಿನಾರಾಯಣ್ ಮಂದಿರವನ್ನು ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಧ್ವಂಸಗೊಳಿಸಲಾಗಿತ್ತು. ದ್ವೇಷದ ಸಂದೇಶಗಳನ್ನು ದೇವಾಲಯದ ಚಿಹ್ನೆಯ ಮೇಲೆ ಬರೆಯಲಾಗಿದೆ.
ಸ್ಯಾಕ್ರಮೆಂಟೊ ಘಟನೆಗೆ ಸುಮಾರು 10 ದಿನಗಳ ಮೊದಲು, ನ್ಯೂಯಾರ್ಕ್ನ ಮೆಲ್ವಿಲ್ಲೆಯಲ್ಲಿರುವ ಮತ್ತೊಂದು ಬಿಎಪಿಎಸ್ ಶ್ರೀ ಸ್ವಾಮಿನಾರಾಯಣ್ ಮಂದಿರವನ್ನು ದ್ವೇಷದ ಸಂದೇಶಗಳಿಂದ ವಿರೂಪಗೊಳಿಸಲಾಗಿತ್ತು.
ನ್ಯೂಯಾರ್ಕ್ನ ಭಾರತದ ಕಾನ್ಸುಲೇಟ್ ಜನರಲ್ ಈ ಘಟನೆಯನ್ನು ಬಲವಾಗಿ ಖಂಡಿಸಿದ್ದಾರೆ. ಇದು ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ.
ಢಾಕಾ: ನೆರೆಯ ಬಾಂಗ್ಲಾದೇಶದಲ್ಲಿ (Bangladesh) ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದಾಳಿ ಮುದುವರೆದಿದೆ. ಢಾಕಾದಲ್ಲಿರುವ ಇಸ್ಕಾನ್ (Iskcon) ಕೇಂದ್ರಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಅದರಲ್ಲಿದ್ದ 2 ದೇವಸ್ಥಾನ ಹಾಗೂ ದೇವರ ಮೂರ್ತಿಗಳು ಭಾಗಶಃ ಸುಟ್ಟು ಕರಕಲಾಗಿವೆ.
ಈ ಕುರಿತು ಕೋಲ್ಕತಾ ಇಸ್ಕಾನ್ನ ಉಪಾಧ್ಯಕ್ಷ ರಾಧಾರಮಣ ದಾಸ್ ಹಾಗೂ ಬಾಂಗ್ಲಾ ಇಸ್ಕಾನ್ ಪ್ರಧಾನ ಕಾರ್ಯದರ್ಶಿ ಚಾರು ಚಂದ್ರದಾಸ ಬ್ರಹ್ಮಚಾರಿ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಬಾಂಗ್ಲಾದ ಢಾಕಾ ಜಿಲ್ಲೆಯಲ್ಲಿರುವ ನಮ್ಮಟ್ಟಾ ಇಸ್ಕಾನ್ ಕೇಂದ್ರಕ್ಕೆ ಬೆಂಕಿ ಹಚ್ಚಲಾಗಿದೆ. ಪರಿಣಾಮ ಅಲ್ಲಿದ್ದ ರಾಧಾ ಕೃಷ್ಣ ದೇವಸ್ಥಾನ ಹಾಗೂ ಮಹಾಭಾಗ್ಯ ಲಕ್ಷ್ಮೀ ನಾರಾಯಣ ದೇವಸ್ಥಾನಗಳು ಬೆಂಕಿಗೆ ಆಹುತಿಯಾಗಿವೆ. ಬೆಳಗಿನ ಜಾವ 2 – 3 ಗಂಟೆಯ ವೇಳೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಇದರಿಂದ ಲಕ್ಷ್ಮೀ ನಾರಾಯಣಮೂರ್ತಿ ಸೇರಿದಂತೆ ಕೆಲವು ಮೂರ್ತಿಗಳು ಸುಟ್ಟು ಹೋಗಿವೆ. ಬಳಿಕ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ಆರಿಸಿದ್ದಾರೆ ಎಂದು ವರದಿಯಾಗಿದೆ.
ಇಂತಹ ಘಟನೆಗಳನ್ನು ಮಧ್ಯಂತರ ಸರ್ಕಾರದ ಗಮನಕ್ಕೆ ತರಲಾಗಿದೆ. ಆದರೂ ಸಹ ಪೊಲೀಸರು ಹಾಗೂ ಸರ್ಕಾರದ ಕಡೆಯಿಂದ ಸಕಾರಾತ್ಮಕ ಪ್ರತಿಕ್ರಿಯೆ ಲಭಿಸುತ್ತಿಲ್ಲ ಎಂದು ಚಾರು ಚಂದ್ರದಾಸ ಬ್ರಹ್ಮಚಾರಿ ಆರೋಪಿಸಿದ್ದಾರೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಪೊಲೀಸರು, ದುಷ್ಕರ್ಮಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಕಳೆದ ವಾರವೂ 3 ದೇಗುಲಗಳ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದರು. ಈ ವೇಳೆ ದಾಳಿಯಿಂದ ತಪ್ಪಿಸಿಕೊಳ್ಳಲು ತಿಲಕ ಧರಿಸದಂತೆ ಇಸ್ಕಾನ್ ಸನ್ಯಾಸಿಗಳು ಹಾಗೂ ಅನುಯಾಯಿಗಳಿಗೆ ಅವರು ಕರೆ ನೀಡಿದ್ದರು.
ಚಿಕ್ಕಬಳ್ಳಾಪುರ: ಜಿಲ್ಲೆಯ ನಂದಿ ಗ್ರಾಮದಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಭೋಗನಂಧೀಶ್ವರನ ಶ್ರೀ ಭೋಗ ನಂದೀಶ್ವರ ದೇವಾಲಯಕ್ಕೆ (Bhoga Nandishwara Gudi) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಹುರುಳಗುರ್ಕಿ ಗ್ರಾಮದ ವೆಂಕಟೇಗೌಡ ಹಾಗೂ ಕುಟುಂಬಸ್ಥರು ಬರೋಬ್ಬರಿ 2 ಕೋಟಿಗೂ ಅಧಿಕ ಮೊತ್ತದ ಹಣ ಖರ್ಚು ಮಾಡಿ ಭವ್ಯವಾದ ರಥ (Chariot) ಮಾಡಿಸಿ ಅರ್ಪಿಸಿದ್ದಾರೆ.
ಅಂದಹಾಗೆ ಮಹಾಶಿವರಾತ್ರಿ ಹಬ್ಬದ ಮರುದಿನ ಶ್ರೀ ಭೋಗನಂದೀಶ್ವರ ಸ್ವಾಮಿ ಹಾಗೂ ಅರುಣಾಚಲೇಶ್ವರ ಸ್ವಾಮಿಯ ಜೋಡಿ ಬ್ರಹ್ಮರಥೋತ್ಸವ ಪ್ರತಿ ವರ್ಷವೂ ವಿಜೃಂಭಣೆಯಿಂದ ನೆರವೇರುತ್ತದೆ. ಆದ್ರೆ ಪುರಾತನ ಕಾಲದ ಹಳೆಯ ಕಾಲದ ರಥ ಬಳಕೆಗೆ ಯೋಗ್ಯವಾಗಿರಲಿಲ್ಲ. ರಥೋತ್ಸವದ ವೇಳೆ ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿತ್ತು. ಇನ್ನೂ ಕಳೆದ ಬಾರಿ ರಥದ ಅಚ್ಚು ಮುರಿದು ರಥ ಕದಲೇ ಇಲ್ಲ. ಇದ್ರಿಂದ ಭಕ್ತರಿಗೆ ಸಾಕಷ್ಟು ಬೇಸರ ಸಹ ಆಗಿತ್ತು. ಹಾಗಾಗಿ ಶಿವನ ಭಕ್ತನೂ ಆಗಿರುವ ಉದ್ಯಮಿ ವೆಂಕಟೇಗೌಡ ಎಂಬುವವರು ಈಗ ಕುಂದಾಪುರ ಕುಂಭಾಶಿಯ ವಿಶ್ವಕರ್ಮ ಕರಕುಶಲ ಕೇಂದ್ರದಲ್ಲಿ ಸಾಗುವಾನಿ ಹಾಗೂ ಭೋಗಿ ಮರ ಬಳಸಿ ಭವ್ಯವಾದ ರಥ ನಿರ್ಮಾಣ ಮಾಡಿಸಿದ್ದಾರೆ. ಇದನ್ನೂ ಓದಿ: ಉಪಚುನಾವಣೆ ಮೂಲಕ ಬಿಜೆಪಿಯವರಿಗೆ ಜನ ಮಂಗಳಾರತಿ ಮಾಡಿದ್ದಾರೆ- ಹೆಚ್.ಕೆ ಪಾಟೀಲ್
ರಥ ನೋಡಲು ಬಲು ಅಕರ್ಷಕವಾಗಿದ್ದು, ಭಕ್ತರ ಕಣ್ಮನ ಸೆಳೆಯುತ್ತಿದೆ. ನೂತನ ರಥವನ್ನ ಇದೇ ಕಾರ್ತಿಕ ಸೋಮವಾರದಂದು ಅಧಿಕೃತವಾಗಿ ಬ್ರಹ್ಮರಥೋತ್ಸವ ಮಾಡುವ ಮೂಲಕ ಚಾಲನೆ ಕೊಡಲಾಗುತ್ತಿದೆ. ಇದಕ್ಕೂ ಮುನ್ನ ಭಾನುವಾರದಂದು ಹೋಮ ಹವನ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಲಿವೆ. ಈ ಬಗ್ಗೆ ದೇವಾಲಯದ ಆವರಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡ ರಥದಾನಿ ವೆಂಕಟೇಗೌಡ, ನಾನು ನಂದಿ ಗ್ರಾಮದಲ್ಲೇ ಓದಿದವನಾಗಿದ್ದು ಬಹಳಷ್ಟು ವರ್ಷಗಳಿಂದ ಜಾತ್ರೆ ಹಾಗೂ ರಥೋತ್ಸವವನ್ನ ಕಣ್ತುಂಬಿಕೊಂಡಿದ್ದೇನೆ. ನಾನು ಶಿವರಾತ್ರಿ ಸಮಯದಲ್ಲೂ ಈ ದೇವಾಲಯಕ್ಕೆ ಬಂದು ಹೋಗುತ್ತಿದ್ದೆ, ದೇವಾಲಯಕ್ಕೆ ಬಂದಾಗ ಭಗವಂತ ನನಗೆ ಶಕ್ತಿ ಕೊಡು ಅಂತ ಬೇಡಿಕೊಂಡಿದ್ದೆ. ಹಾಗೆಯೇ ಧರ್ಮಸ್ಥಳ ಮಂಜುನಾಥಸ್ವಾಮಿ ದೇವರ ದರ್ಶನ ಪಡೆದು ಶ್ರೀ ಭೋಗ ನಂದೀಶ್ವರ ರಥ ಮಾಡಿಸುವ ಶಕ್ತಿ ಕೊಡಪ್ಪ ಅಂತ ಕೈ ಮುಗಿದು ಬೇಡಿಕೊಂಡಿದ್ದೆ. ಆ ದೇವರ ಪ್ರೇರಣೆ ಎಂಬಂತೆ ಈಗ ರಥ ನಿರ್ಮಾಣವಾಗಿದೆ ಎಂದು ಸ್ಮರಿಸಿದ್ದಾರೆ.
ಸೋಮವಾರ (ನ.25) ವಿಜೃಂಭಣೆಯಿಂದ ಬ್ರಹ್ಮರಥೋತ್ಸವ ನಡೆಯಲಿದ್ದು ಭಕ್ತಾದಿಗಳು ಭಾಗವಹಿಸುವಂತೆ ರಥದಾನಿ ವೆಂಕಟೇಗೌಡ ಮನವಿ ಮಾಡಿಕೊಂಡಿದ್ದಾರೆ. ಇನ್ನೂ ಈ ಬಗ್ಗೆ ಮಾತನಾಡಿದ ರಥ ಶಿಲ್ಪಿ ರಾಜಗೋಪಾಲ್ ಆಚಾರ್. ವೆಂಕಟೇಗೌಡರು ರಥ ಮಾಡಿಸಲು ನಮ್ಮ ಬಳಿ ಬಂದಾಗ ಬಹಳಷ್ಟು ರಥಧ ಮಾದರಿಗಳನ್ನ ತೋರಿಸಿದ್ದೆವು. ಆಗ ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿನ ರಥ ಕಂಡ ವೆಂಕಟೇಗೌಡರು ಅದೇ ಮಾದರಿಯ ರಥ ಬೇಕು ಅಂತ ತಿಳಿಸಿದರು. ಈಗ ಅದೇ ಮಾದರಿಯಲ್ಲೇ ರಥ ಸುಂದರವಾಗಿ ಮೂಡಿ ಬಂದಿದೆ.
ಇದು ಶೈವಾಗಮ ಶೈಲಿಯಲ್ಲಿದ್ದು, ಶಿವನಿಗೆ ಸಂಬಂಧಪಟ್ಟ ಕಥಾ ಪ್ರಾಕಾರಗಳನ್ನ ಕೆತ್ತನೆ ಮಾಡಲಾಗಿದೆ. ರಥದ ಚಕ್ರಗಳು 8 ಅಡಿ ಎತ್ತರವಿದೆ, ರಥದ ಜಿಡ್ಡೆ ಭಾಗ 15 ಅಡಿ ಇದ್ದು, ದೇವರ ಪೀಠ 3 ಅಡಿ ಎತ್ತರವಿದೆ. 5 ಅಡಿಯ ಕಳಶ ಹೊಂದಿದೆ. ಒಟ್ಟು 54 ಅಡಿ ಎತ್ತರ ಇರಲಿದೆ. 6 ಚಕ್ರ ಹೊಂದಿರುವ ರಥವನ್ನ ಬ್ರಹ್ಮರಥ ಎಂದು ಕರೆಯಲಾಗುತ್ತದೆ. ಇದನ್ನೂ ಓದಿ: ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದಿದೆ: ಮಹಾರಾಷ್ಟ್ರದಲ್ಲಿ ಮಹಾಯುತಿ ಗೆಲುವಿಗೆ ಮೋದಿ ಕೃತಜ್ಞತೆ
ಭಾನುವಾರ ವಿಶೇಷ ಪೂಜೆ ಹೋಮ-ಹವನ ನಡೆಸಿದ ನಂತರ ಧರ್ಮಸ್ಥಳದ ಪ್ರಧಾನ ಅರ್ಚಕರು ತಮ್ಮ ತಂಡದೊಂದಿಗೆ ದೇವಾಲಯಕ್ಕೆ ರಥ ಸಮರ್ಪಣೆ ಮಾಡಲಿದ್ದಾರೆ. ಸೋಮವಾರ ಬೆಳಗ್ಗೆ 11 ಗಂಟೆಗೆ ರಥಕ್ಕೆ ಚಾಲನೆ ನೀಡಲಾಗುತ್ತದೆ. ಕಾರ್ತಿಕ ಸೋಮವಾರದಂದು ಆಗಮಿಸುವ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ವ್ಯವಸ್ಥೆ ಸಹ ಮಾಡಲಾಗಿದೆ. ಇದನ್ನೂ ಓದಿ: ಮಂಗಳೂರು | ಎದುರಾಳಿ ವಿರುದ್ಧ ಸಂಚು ಮಾಡ್ತಿದ್ದಾಗ್ಲೇ ನಟೋರಿಯಸ್ ರೌಡಿಶೀಟರ್ ಅರೆಸ್ಟ್!
ಒಟ್ಟೋವಾ: ಖಲಿಸ್ತಾನ್ ಪರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕೆನಡಾದ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.
ಬ್ರಾಂಪ್ಟನ್ನಲ್ಲಿರುವ ಹಿಂದೂ ದೇವಾಲಯದ ಹೊರಗೆ ಪೊಲೀಸ್ ಅಧಿಕಾರಿ, ಖಲಿಸ್ತಾನ್ ಪರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಇದರ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ಅದರ ಬೆನ್ನಲ್ಲೇ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.
ಅಮಾನತುಗೊಂಡ ಪೀಲ್ ಪ್ರಾದೇಶಿಕ ಪೊಲೀಸ್ ಅಧಿಕಾರಿ ಹರಿಂದರ್ ಸೋಹಿ ಎಂದು ಗುರುತಿಸಲಾಗಿದ್ದು, ಈತ ಖಲಿಸ್ತಾನ್ ಧ್ವಜವನ್ನು ಹಿಡಿದಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪ್ರತಿಭಟನೆಯಲ್ಲಿ ಇತರರು ಭಾರತ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ.
ಸೋಹಿ ಪೀಲ್ ಪ್ರಾದೇಶಿಕ ಪೊಲೀಸ್ನ ಸಾರ್ಜೆಂಟ್ ಆಗಿದ್ದರು. ‘ಸಮುದಾಯ ಸುರಕ್ಷತೆ ಮತ್ತು ಪೊಲೀಸ್ ಕಾಯಿದೆಯ ಪ್ರಕಾರ ಈ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ’ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ವೀಡಿಯೋದಲ್ಲಿ ಚಿತ್ರಿಸಲಾದ ಸಂದರ್ಭಗಳನ್ನು ನಾವು ತನಿಖೆ ಮಾಡುತ್ತಿದ್ದೇವೆ. ಈ ತನಿಖೆ ಪೂರ್ಣಗೊಳ್ಳುವವರೆಗೆ ಹೆಚ್ಚಿನ ಮಾಹಿತಿಯನ್ನು ಒದಗಿಸಲು ಸಾಧ್ಯವಾಗುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ನವದೆಹಲಿ: ಕೆನಡಾದ (Canada) ಹಿಂದೂ ದೇವಾಲಯದ (Hindu Temple) ಮೇಲೆ ಉದ್ದೇಶಪೂರ್ವಕ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಖಂಡಿಸಿದ್ದಾರೆ. ಕಳೆದ ವಾರ ಒಂಟಾರಿಯೊದ ಬ್ರಾಂಪ್ಟನ್ನಲ್ಲಿ ಹಿಂದೂ ದೇವಾಲಯದ ಮೇಲೆ ಕೆಲವರು ದಾಳಿ ನಡೆಸಿದ್ದರು.
ಆ ದೇಶದಲ್ಲಿನ ಭಾರತೀಯ ರಾಜತಾಂತ್ರಿಕರನ್ನು ಬೆದರಿಸುವ ಹೇಡಿತನದ ಪ್ರಯತ್ನಗಳು ನಡೆಯುತ್ತಿವೆ ಎಂದು ಪ್ರಧಾನಿ ಟೀಕಿಸಿದ್ದಾರೆ. ಇಂತಹ ಹಿಂಸಾಚಾರಗಳು ಭಾರತದ ಸಂಕಲ್ಪವನ್ನು ಎಂದಿಗೂ ದುರ್ಬಲಗೊಳಿಸುವುದಿಲ್ಲ. ಕೆನಡಾದ ಸರ್ಕಾರವು ನ್ಯಾಯವನ್ನು ಖಚಿತಪಡಿಸುತ್ತದೆ ಮತ್ತು ಕಾನೂನಿನ ನಿಯಮವನ್ನು ಎತ್ತಿಹಿಡಿಯುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉತ್ತರಾಖಂಡ ಬಸ್ ಅಪಘಾತಕ್ಕೆ ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ, ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ
ಭಾರತ ಸರ್ಕಾರವು, ಉಗ್ರವಾದಿಗಳು ಮತ್ತು ಪ್ರತ್ಯೇಕತಾವಾದಿಗಳು ನಡೆಸಿದ ಹಿಂಸಾಚಾರದ ಕೃತ್ಯಗಳನ್ನು ಖಂಡಿಸುತ್ತದೆ ಎಂದು ವಿದೇಶಾಂಗ ಸಚಿವಾಲಯವು ಟೀಕಿಸಿತ್ತು. ಅದರ ಬೆನ್ನಲ್ಲೇ, ಪ್ರಧಾನಿಯವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ. ಎಲ್ಲಾ ಪೂಜಾ ಸ್ಥಳಗಳನ್ನು ಸಮರ್ಪಕವಾಗಿ ರಕ್ಷಿಸಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಕೆನಡಾ ಆಡಳಿತ ವ್ಯವಸ್ಥೆಗೆ ಒತ್ತಾಯಿಸಿದ್ದಾರೆ.
ಇಂತಹ ಹಿಂಸಾಚಾರದಲ್ಲಿ ತೊಡಗಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸುವುದನ್ನು ನಾವು ನಿರೀಕ್ಷಿಸುತ್ತೇವೆ ಎಂದು ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ. ಕೆನಡಾದಲ್ಲಿರುವ ತನ್ನ ನಾಗರಿಕರ ಮತ್ತು ಭದ್ರತೆಯ ಬಗ್ಗೆ ಭಾರತ ಸರ್ಕಾರವು ಆಳವಾದ ಕಾಳಜಿ ಹೊಂದಿದೆ ಎಂದು ಜೈಸ್ವಾಲ್ ತಿಳಿಸಿದ್ದಾರೆ. ಇದನ್ನೂ ಓದಿ: Jammu Kashmir | 6 ವರ್ಷದ ನಂತರ ನಡೆದ ಅಧಿವೇಶನದ ಮೊದಲ ದಿನವೇ ಗದ್ದಲ
ಒಟ್ಟಾವಾ: ಭಾರತ-ಕೆನಡಾ ರಾಜಕೀಯ ಬಿಕ್ಕಟ್ಟಿನ ನಡುವೆ ಹಿಂದೂಗಳ ಮೇಲೆ ಹಿಂಸಾಚಾರ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಕೆನಡಾದ ಬ್ರಾಂಪ್ಟನ್ನಲ್ಲಿರುವ ಹಿಂದೂ ದೇವಾಲಯದಲ್ಲಿ (Hindu Temple) ಭಕ್ತರ ಮೇಲೆ ಖಲಿಸ್ತಾನಿ ಉಗ್ರರು (Khalistani supporters) ಎನ್ನಲಾದ ಗುಂಪೊಂದು ದಾಳಿ ನಡೆಸಿದೆ.
The acts of violence at the Hindu Sabha Mandir in Brampton today are unacceptable. Every Canadian has the right to practice their faith freely and safely.
Thank you to the Peel Regional Police for swiftly responding to protect the community and investigate this incident.
ಹಿಂಸಾಚಾರದ ವಿಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ, ಪ್ರಧಾನಿ ಜಸ್ಟಿನ್ ಟ್ರುಡೋ (Justin Trudeau) ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಇಂತಹ ಹಿಂಸಾಚಾರ ಕೃತ್ಯಗಳು ಸ್ವೀಕಾರಾರ್ಹವಲ್ಲ. ಪ್ರತಿಯೊಬ್ಬ ಕೆನಡಿಯನ್ನರು ತಮ್ಮ ನಂಬಿಕೆಯನ್ನು ಮುಕ್ತವಾಗಿ ಮತ್ತು ಸುರಕ್ಷಿತವಾಗಿ ಆಚರಿಸುವ ಹಕ್ಕನ್ನು ಹೊಂದಿದ್ದಾರೆ ಎಂದರಲ್ಲದೇ, ಸಮುದಾಯವನ್ನು ರಕ್ಷಿಸಲು ತತ್ವರಿತವಾಗಿ ಸ್ಪಂಧಿಸಿದ ಪೊಲೀಸರಿಗೆ ಧನ್ಯವಾದ ಹೇಳಿದ್ದಾರೆ.
ಸ್ಥಳೀಯ ಮಾಧ್ಯಮಗಳ ವರದಿ ಪ್ರಕಾರ, ಖಲಿಸ್ತಾನಿ ಬೆಂಬಲಿಗರ ಗುಂಪು ದಾಳಿ ನಡೆಯುವ ಮೊದಲು 1984ರ ಸಿಖ್ ವಿರೋಧಿ ದಂಗೆಯನ್ನು ಸ್ಮರಿಸಲು ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ವೇಳೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ, ಭಕ್ತರ ಮೇಲೆ ಹಲ್ಲೆ ನಡೆಸಿದೆ. ಇದನ್ನೂ ಓದಿ: ಮತ್ತೆ ಕ್ಯಾತೆ – ಭಾರತವನ್ನು ಸೈಬರ್ ಬೆದರಿಕೆ ಪಟ್ಟಿಗೆ ಸೇರಿಸಿದ ಕೆನಡಾ
ಇನ್ನೂ ಇತ್ತೀಚೆಗೆ ಕೆನಡಾದ ರಾಷ್ಟ್ರೀಯ ಸೈಬರ್ ಬೆದರಿಕೆ ಮೌಲ್ಯಮಾಪನ (NCTA) 2025-26 ವರದಿ ಬಿಡುಗಡೆಯಾಗಿತ್ತು. ಕೆನಡಾದ ಸೈಬರ್ ಭದ್ರತೆಯ ತಾಂತ್ರಿಕ ಪ್ರಾಧಿಕಾರ ʻಸೈಬರ್ ಸೆಕ್ಯುರಿಟಿ ಕೇಂದ್ರʼ ಅಕ್ಟೋಬರ್ 30 ರಂದು ಈ ವರದಿ ಬಿಡುಗಡೆ ಮಾಡಿತು. ಈ ವರದಿಯಲ್ಲಿ ಭಾರತವನ್ನು ಸೈಬರ್ ದಾಳಿಯ ಪಟ್ಟಿಗೆ ಕೆನಡಾ ಸರ್ಕಾರ ಸೇರಿಸಿರುವುದಾಗಿ ಉಲ್ಲೇಖವಾಗಿತ್ತು.
ಮಂಡ್ಯ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ವಕ್ಫ್ ಆಸ್ತಿ ವಿವಾದ (Waqf Property Controversy) ಇದೀಗ ಸಕ್ಕರೆ ನಾಡು ಮಂಡ್ಯ (Mandya) ಜಿಲ್ಲೆಗೂ ಕಾಲಿಟ್ಟಿದೆ.
ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಎಂಬ ಗ್ರಾಮದಲ್ಲಿ 6 ಗುಂಟೆ ವ್ಯಾಪ್ತಿಯಲ್ಲಿ ಚಿಕ್ಕಮ್ಮ ದೇವಿ ಎಂಬ ದೇವಸ್ಥಾನ ಇದೆ. ಹಲವು ವರ್ಷಗಳ ಹಿಂದೆಯೇ ಈ ದೇವಸ್ಥಾನ ಕಟ್ಟಿಸಿ ಈ ಗ್ರಾಮದ ಜನರು ಚಿಕ್ಕಮ್ಮ ದೇವಿಯನ್ನು ಪೂಜಿಸುತ್ತಾ ಬರುತ್ತಿದ್ದಾರೆ. 2023 ಜುಲೈ 17ರ ವರೆಗೆ ಈ ದೇವಸ್ಥಾನದ 6 ಗುಂಟೆ ಜಾಗದ ಆರ್ಟಿಸಿಯಲ್ಲಿ ಬಂಜರು ಎಂದು ಉಲ್ಲೇಖವಾಗಿದೆ, ಅಂದರೆ ಇದು ಸರ್ಕಾರಿ ಜಮೀನು ಎಂದರ್ಥ. ಇನ್ನೊಂದೆಡೆ ಸಾಗುವಳಿ ಕಾಲಂನಲ್ಲಿ ಚಿಕ್ಕಮ್ಮನ ದೇವಸ್ಥಾನ ಎಂದು ಹೆಸರಿತ್ತು. ಆದರೆ ಇದೀಗ ಈ ದೇವಸ್ಥಾನ ಹಾಗೂ ಜಾಗವನ್ನು ವಕ್ಫ್ ಆಸ್ತಿ ಎಂದು ಮಾಡಲಾಗಿದೆ.
2023 ಜುಲೈ 17ರಲ್ಲಿ ಕೋರ್ಟ್ ಆದೇಶ ಎಂದು ಪಾಂಡವಪುರ ಉಪವಿಭಾಗ ಅಧಿಕಾರಿ ದೇವಸ್ಥಾನದ ಜಾಗವನ್ನು ವಕ್ಛ್ ಆಸ್ತಿ ಎಂದು ಮ್ಯುಟೇಶನ್ ಮಾಡಿದ್ದಾರೆ. ಇದೀಗ ಈ ಗ್ರಾಮಸ್ಥರು ರಾಜ್ಯದಲ್ಲಿ ನಡೆಯುತ್ತಿರುವ ವಕ್ಫ್ ಆಸ್ತಿಯ ವಿವಾದದ ನಂತರ ದೇವಸ್ಥಾನದ ಸರ್ವೇ ನಂಬರ್ನಲ್ಲಿ ಆರ್ಟಿಸಿ ನೋಡಿದಾಗ ಇದು ಬೆಳಕಿಗೆ ಬಂದಿದೆ. ಗ್ರಾಮಸ್ಥರ ಗಮನಕ್ಕೆ ಬಾರದೇ ಹಿಂದೂ ದೇವಸ್ಥಾನವನ್ನು ವಕ್ಫ್ ಆಸ್ತಿಯನ್ನಾಗಿ ಮಾಡಿರೋದು ಜನರಲ್ಲಿ ಆಕ್ರೋಶಕ್ಕೆ ಕಾರಣವಾಗುತ್ತಿದೆ. ಇದನ್ನೂ ಓದಿ: ಬೆಳಗಾವಿಗೂ ಕಾಲಿಟ್ಟ ವಕ್ಫ್ ಆಸ್ತಿ ವಿವಾದ – 30 ರೈತರ ಪಹಣಿಯಲ್ಲಿ ವಕ್ಫ್ ಹೆಸರು ನಮೂದು!
ಢಾಕಾ: ಪ್ರಧಾನಿ ಶೇಖ್ ಹಸೀನಾ (Sheikh Hasina)ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ನಂತರ ಪುಂಡರು ಬಾಂಗ್ಲಾದೇಶದಲ್ಲಿರುವ (Bangladesh) ಹಿಂದೂ ದೇವಸ್ಥಾನಗಳ (Hindu Temple) ಮೇಲೆ ದಾಳಿ ನಡೆಸಿ ವಿಕೃತಿ ಮೆರೆದಿದ್ದಾರೆ. ಅಷ್ಟೇ ಅಲ್ಲದೇ ಭಾರತೀಯ ಸಾಂಸ್ಕೃತಿಕ ಕೇಂದ್ರವನ್ನು (Indian Cultural Centre) ಧ್ವಂಸಗೊಳಿಸಿದ್ದಾರೆ.
ಸೋಮವಾರ ನಡೆದ ಹಿಂಸಾಚಾರದಲ್ಲಿ 4 ಹಿಂದೂ ದೇವಸ್ಥಾನಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಮತ್ತು ಸಮುದಾಯದ ಮುಖಂಡರೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಹಿಂದೂ, ಬೌದ್ಧ, ಕ್ರಿಶ್ಚಿಯನ್ ಯೂನಿಟಿ ಕೌನ್ಸಿಲ್ ನಾಯಕಿ ಕಾಜೋಲ್ ದೇಬನಾಥ್ ಮಾತನಾಡಿ, ದೇಶಾದ್ಯಂತ ಕನಿಷ್ಠ 4 ಹಿಂದೂ ದೇವಾಲಯಗಳಿಗೆ ಹಾನಿಯಾಗಿದೆ ಎಂಬ ವರದಿಗಳು ಬಂದಿವೆ. ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ನಂತರ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕೆಲವು ಹಿಂದೂ ಸಮಾಜದ ಮುಖಂಡರು ಭಯಭೀತರಾಗಿದ್ದಾರೆ ಎಂದು ಹೇಳಿದರು.
ಪ್ರತ್ಯಕ್ಷದರ್ಶಿಗಳ ಪ್ರಕಾರ, ಢಾಕಾದ ಧನ್ಮಂಡಿ ಪ್ರದೇಶದಲ್ಲಿರುವ ಇಂದಿರಾಗಾಂಧಿ ಸಾಂಸ್ಕೃತಿಕ ಕೇಂದ್ರವನ್ನು ಪುಂಡರು ಧ್ವಂಸ ಮಾಡಿದ್ದಾರೆ.
ಪ್ರತಿಭಟನಾಕಾರರು ಬಂಗಬಂಧು ಮೆಮೋರಿಯಲ್ ಮ್ಯೂಸಿಯಂ ಸೇರಿದಂತೆ ಢಾಕಾದ ಹಲವಾರು ಪ್ರಮುಖ ಸ್ಥಳಗಳಿಗೆ ಬೆಂಕಿ ಹಚ್ಚಿದ್ದಾರೆ. 1975 ರಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವಾಗ ಹತ್ಯೆಗೀಡಾದ ಹಸೀನಾ ಅವರ ತಂದೆ ಶೇಖ್ ಮುಜಿಬುರ್ ರೆಹಮಾನ್ ಅವರಿಗೆ ಈ ವಸ್ತುಸಂಗ್ರಹಾಲಯವನ್ನು ಸಮರ್ಪಿಸಲಾಗಿದೆ.
ಅಬುಧಾಬಿ: ಇದೇ ವರ್ಷ ಫೆಬ್ರವರಿ 14 ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಉದ್ಘಾಟಿಸಿದ UAEಯ ಮೊದಲ ಹಿಂದೂ ದೇವಾಲಯವನ್ನು ಶುಕ್ರವಾರ ಭಕ್ತರು ಮತ್ತು ಸಾರ್ವಜನಿಕರಿಗೆ ತೆರೆಯಲಾಗಿದೆ. ಆದರೆ ಭಕ್ತರಿಗೆ ಡ್ರೆಸ್ ಕೋಡ್ (Dress Code) ಮಾಡಲಾಗಿದ್ದು, ದರ್ಶನಕ್ಕೆ ಸಮಯ ಕೂಡ ನಿಗದಿಪಡಿಸಲಾಗಿದೆ.
The wait is over!#AbuDhabiMandir is now open for all visitors and worshipers.
ಈ ಸಂಬಂಧ BAPS ಹಿಂದೂ ಮಂದಿರದ ಎಕ್ಸ್ ಖಾತೆಯಲ್ಲಿ ವಿವರ ನೀಡಲಾಗಿದೆ. ಬಹಳ ದಿನಗಳ ಕಾಯುವಿಕೆ ಮುಗಿದಿದೆ. ಅಬುಧಾಬಿ ಮಂದಿರ ಈಗ ಸಾರ್ವಜನಿಕರ ದರ್ಶನಕ್ಕೆ ತೆರೆದಿರುತ್ತದೆ ಎಂಬ ಪೋಸ್ಟ್ ಜೊತೆಗೆ ಭವ್ಯ ದೇಗುಲದ ಅದ್ಭುತ ವೀಡಿಯೋವನ್ನು ಸಹ ಹಂಚಿಕೊಂಡಿದೆ. ಸೋಮವಾರ ಹೊರತುಪಡಿಸಿ ಎಲ್ಲಾ ದಿನಗಳಲ್ಲಿ ದೇವಾಲಯವು ಬೆಳಗ್ಗೆ 9 ರಿಂದ ರಾತ್ರಿ 8 ರವರೆಗೆ ತೆರೆದಿರುತ್ತದೆ ಎಂದು ಪೋಸ್ಟ್ ನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ:ಅಬುಧಾಬಿಯಲ್ಲಿ ಮೊದಲ ಹಿಂದೂ ದೇವಾಲಯ ಉದ್ಘಾಟಿಸಿದ ಪ್ರಧಾನಿ ಮೋದಿ
ನಿಯಮಗಳ ವಿವರ: ಅಬುಧಾಬಿ ದೇವಸ್ಥಾನಕ್ಕೆ (Abu Dhabi Hindu Temple) ಭೇಟಿ ನೀಡಲು ಡ್ರೆಸ್ ಕೋಡ್ ಮಾಡಲಾಗಿದೆ. ದೇವಾಲಯದ ವೆಬ್ಸೈಟ್ನಲ್ಲಿ ಭಕ್ತರು ಯಾವ ರೀತಿಯ ಬಟ್ಟೆಗೆ ಆದ್ಯತೆ ನೀಡಬೇಕು ಮತ್ತು ಯಾವುದನ್ನು ನಿಷೇಧಿಸಲಾಗಿದೆ. ಹಾಗೆಯೇ ಫೋಟೋಗ್ರಫಿ ನಿಯಮಗಳು ಇತ್ಯಾದಿಗಳ ಬಗ್ಗೆ ಸವಿವರವಾಗಿ ಉಲ್ಲೇಖಿಸಲಾಗಿದೆ.
ಡ್ರೆಸ್ ಕೋಡ್ ಏನು..?
* ಭಕ್ತರು ಕುತ್ತಿಗೆ, ಮೊಣಕೈ ಮತ್ತು ಮೊಣಕಾಲುಗಳು ಕಾಣುವಂತೆ ಬಟ್ಟೆ ಧರಿಸಬಾರದು.
* ಕ್ಯಾಪ್ಸ್, ಟೀ ಶರ್ಟ್ಗಳು ಮತ್ತು ಆಕ್ಷೇಪಾರ್ಹ ವಿನ್ಯಾಸಗಳನ್ನು ಹೊಂದಿರುವ ಇತರ ಉಡುಪುಗಳನ್ನು ಅನುಮತಿಸಲಾಗುವುದಿಲ್ಲ.
* ಅರೆಬರೆ ಬಟ್ಟೆ ಅಥವಾ ಬಿಗಿಯಾದ ಬಟ್ಟೆಗಳಿಗೆ ಅವಕಾಶ ಇಲ್ಲ.
* ತಬ್ಬಿಬ್ಬುಗೊಳಿಸುವ ಶಬ್ದಗಳು ಹಾಗೂ ಶೈನಿಂಗ್ ಬಟ್ಟೆಗಳಿಗೂ ನಿಷೇಧ.
ಈ ಮಾರ್ಗಸೂಚಿಗಳನ್ನು ಅನುಸರಿಸದ ಅಥವಾ ನಮ್ಮ ಸಿಬ್ಬಂದಿಯಿಂದ ಸೂಕ್ತವಲ್ಲವೆಂದು ಪರಿಗಣಿಸಲ್ಪಟ್ಟಿರುವ ಭಕ್ತರಿಗೆ ದೇಗುಲದೊಳಗೆ ಪ್ರವೇಶವನ್ನು ನಿರಾಕರಿಸಲಾಗುವುದು. ಒಟ್ಟಿನಲ್ಲಿ ಪ್ರಶಾಂತ ವಾತಾವರಣವನ್ನು ಕಾಪಾಡಲು ಮತ್ತು ನಮ್ಮ ಆವರಣದ ಕ್ರಮಬದ್ಧ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಈ ಮಾರ್ಗಸೂಚಿಗಳನ್ನು ಅನುಸರಿಸುವುದು ಅವಶ್ಯಕ ಎಂದು ದೇವಸ್ಥಾನದ ಅಧಿಕಾರಿಗಳು ಹೇಳಿದ್ದಾರೆ.
ಸುಮಾರು 700 ಕೋಟಿ ರೂಪಾಯಿ ವೆಚ್ಚದಲ್ಲಿ ದುಬೈ-ಅಬುಧಾಬಿ ಶೇಖ್ ಜಾಯೆದ್ ಹೆದ್ದಾರಿಯ ಅಲ್ ರಹ್ಬಾ ಬಳಿಯ ಅಬು ಮುರೇಖಾದಲ್ಲಿ 27 ಎಕರೆ ಪ್ರದೇಶದಲ್ಲಿ ಬೋಚಸನ್ವಾಸಿ ಶ್ರೀ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆ (BAPS) ಈ ದೇವಾಲಯವನ್ನು ನಿರ್ಮಿಸಿದೆ. ದೇವಾಲಯದ ಭೂಮಿಯನ್ನು ಯುಎಇ ಸರ್ಕಾರ ದಾನ ಮಾಡಿದೆ.