Tag: Hindu Temple

  • ಆಸ್ಟ್ರೇಲಿಯಾದಲ್ಲಿ ಹಿಂದೂ ದೇವಾಲಯ ವಿರೂಪ – ಗೋಡೆ ಮೇಲೆ ಭಾರತ ವಿರೋಧಿ ಬರಹ

    ಆಸ್ಟ್ರೇಲಿಯಾದಲ್ಲಿ ಹಿಂದೂ ದೇವಾಲಯ ವಿರೂಪ – ಗೋಡೆ ಮೇಲೆ ಭಾರತ ವಿರೋಧಿ ಬರಹ

    ಕ್ಯಾನ್ಬೆರಾ: ಆಸ್ಟ್ರೇಲಿಯಾದಲ್ಲಿ (Australia) ಹಿಂದೂ ದೇವಾಲಯವೊಂದನ್ನು (Hindu Temple) ಖಲಿಸ್ತಾನ್ (Khalistan) ಬೆಂಬಲಿಗರು ವಿರೂಪಗೊಳಿಸಿ ಗೋಡೆಗಳ ಮೇಲೆ ಭಾರತ ವಿರೋಧಿ ಬರಹಗಳನ್ನು ಗೀಚಿರುವ ಘಟನೆ ವರದಿಯಾಗಿದೆ.

    ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿರುವ (Melbourne) ಮಿಲ್ ಪಾರ್ಕ್‌ನ ಸ್ವಾಮಿ ನಾರಾಯಣ ದೇವಾಲಯದ ಗೋಡೆಗಳ ಮೇಲೆ ಹಿಂದೂಸ್ತಾನ್ ಮುರ್ದಾಬಾದ್ ಎಂದು ಬರೆಯಲಾಗಿದೆ. ಈ ದಾಳಿಯನ್ನು ದೇವಾಲಯದ ಆಡಳಿತ ಮಂಡಳಿ ಖಂಡಿಸಿದೆ.

    ಈ ವಿಧ್ವಂಸಕ ಕೃತ್ಯಗಳಿಂದ ನಾವು ತೀವ್ರ ದುಃಖಿತರಾಗಿದ್ದೇವೆ ಹಾಗೂ ಇದನ್ನು ಖಂಡಿಸುತ್ತೇವೆ. ನಾವು ಶಾಂತಿ ಹಾಗೂ ಸೌಹಾರ್ದತೆಗೆ ಪ್ರಾರ್ಥನೆ ಮಾಡುತ್ತೇವೆ ಎಂದು ತಿಳಿಸಿದೆ. ಇದನ್ನೂ ಓದಿ: ಮೆಟ್ರೋ ಸುರಂಗ ಕಾಮಗಾರಿ – ಬೈಕಿನಲ್ಲಿ ತೆರಳುತ್ತಿದ್ದಾಗ ದಿಢೀರ್ ಕುಸಿದ ರಸ್ತೆ

    ವರದಿಗಳ ಪ್ರಕಾರ ಖಲಿಸ್ತಾನ್ ಗುಂಪು ಭಯೋತ್ಪಾದಕ ಜರ್ನೈಲ್ ಸಿಂಗ್ ಭಿಂದ್ರಾವಾಲೆಗೆ ಬೆಂಬಲ ವ್ಯಕ್ತಪಡಿಸಿದೆ. ಆತ ಪ್ರಸ್ತಾವಿತ ಸಿಖ್ ಬಹುಸಂಖ್ಯಾತ ಖಲಿಸ್ತಾನ್ ರಾಜ್ಯವನ್ನು ರಚಿಸಲು ದೊಡ್ಡಮಟ್ಟದಲ್ಲಿ ಪ್ರಯತ್ನ ಪಟ್ಟಿದ್ದ. ಆತ ಆಪರೇಷನ್ ಬ್ಲೂಸ್ಟಾರ್ ಸಮಯದಲ್ಲಿ ಸೇನೆಯಿಂದ ಕೊಲ್ಲಲ್ಪಟ್ಟಿದ್ದ.

    ದೇವಾಲಯ ವಿರೂಪಗೊಳಿಸಿರುವ ಘಟನೆ ಬಗ್ಗೆ ಮೆಲ್ಬೋರ್ನ್‌ನ ಹಿಂದೂ ಸಮುದಾಯ ಪೊಲೀಸರಿಗೆ ದೂರು ನೀಡಿದೆ. ಸಂಸದರಿಗೂ ಈ ಬಗ್ಗೆ ತಿಳಿಸಲಾಗಿದ್ದು, ಸಾಂಸ್ಕೃತಿಕ ಸಚಿವರು ಘಟನಾ ಸ್ಥಳಕ್ಕಾಗಮಿಸಿದ್ದಾರೆ. ಇದನ್ನೂ ಓದಿ: ಗನ್ ಲೈಸನ್ಸ್ ಪಡೆದ ಬಿಜೆಪಿ ಮಾಜಿ ನಾಯಕಿ ನೂಪರ್ ಶರ್ಮಾ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬ್ರಿಟನ್‌ನಲ್ಲಿ ಬುಗಿಲೆದ್ದ ಹಿಂದೂ, ಮುಸ್ಲಿಂ ಗಲಾಟೆ – ಹಿಂದೂ ದೇಗುಲಗಳ ಧ್ವಂಸಕ್ಕೆ ಭಾರತ ಖಂಡನೆ

    ಬ್ರಿಟನ್‌ನಲ್ಲಿ ಬುಗಿಲೆದ್ದ ಹಿಂದೂ, ಮುಸ್ಲಿಂ ಗಲಾಟೆ – ಹಿಂದೂ ದೇಗುಲಗಳ ಧ್ವಂಸಕ್ಕೆ ಭಾರತ ಖಂಡನೆ

    ಲಂಡನ್: ಬ್ರಿಟನ್‌ನ (UK) ಲೀಸೆಸ್ಟರ್ (Leicester) ನಗರದಲ್ಲಿ ಹಿಂದೂ ಮತ್ತು ಮುಸ್ಲಿಂ (Muslim) ಸಮುದಾಯಗಳ ನಡುವೆ ಗುಂಪು ಘರ್ಷಣೆ ಏರ್ಪಟ್ಟಿದ್ದು, ಹಿಂದೂ ದೇವಾಲಯಗಳನ್ನು (Hindu Temple) ಧ್ವಂಸಗೊಳಿಸಲಾಗಿದೆ.

    ಈ ಘಟನೆಯನ್ನು ಬಲವಾಗಿ ಖಂಡಿಸಿರುವ ಬ್ರಿಟನ್‌ನ ಭಾರತದ ಹೈಕಮಿಷನ್ (India HighCommission) ಕಚೇರಿಯು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದೆ. ಯುಕೆ ಅಧಿಕಾರಿಗಳವರೆಗೆ ಈ ವಿಷಯವನ್ನು ತೆಗೆದುಕೊಂಡು ಹೋಗಿರುವುದಾಗಿ ಹೇಳಿದೆ. ಇದನ್ನೂ ಓದಿ: ಬ್ರಿಟನ್ ರಾಣಿ ಎಲಿಜಬೆತ್ ಶಕೆ ಅಂತ್ಯ – ಲಕ್ಷಾಂತರ ಮಂದಿ ಸಮಕ್ಷಮದಲ್ಲಿ ಅಂತಿಮ ಯಾತ್ರೆ

    ಕಳೆದ ತಿಂಗಳು ಏಷ್ಯಾ ಕಪ್ (AisaCup 2022) ಕ್ರಿಕೆಟ್ ಟೂರ್ನಿಯಲ್ಲಿ (Cricket) ಭಾರತ ಹಾಗೂ ಪಾಕಿಸ್ತಾನದ (Pakistan) ನಡುವೆ ನಡೆದ ಮೊದಲ ಪಂದ್ಯದಲ್ಲಿ ಭಾರತ (Team India) ಜಯ ಸಾಧಿಸಿದ ಬಳಿಕ ಅಭಿಮಾನಿಗಳ ನಡುವೆ ಘರ್ಷಣೆ ನಡೆದಿತ್ತು. ಇದರ ಮುಂದುವರಿದ ಭಾಗವಾಗಿ ಶನಿವಾರ ಹಾಗೂ ಭಾನುವಾರ ಹಿಂಸಾಚಾರ ನಡೆದಿದೆ. ಇದನ್ನೂ ಓದಿ: ನೈತಿಕ ಪೊಲೀಸ್‍ಗಿರಿಗೆ ಯುವತಿ ಬಲಿ: ತಲೆ ಕೂದಲು ಕತ್ತರಿಸಿ, ಹಿಜಬ್ ಸುಟ್ಟು ಇರಾನಿ ಮಹಿಳೆಯರ ಆಕ್ರೋಶ

    https://twitter.com/sammijohnst/status/1567268196545171461?ref_src=twsrc%5Etfw%7Ctwcamp%5Etweetembed%7Ctwterm%5E1567268196545171461%7Ctwgr%5Eae95874ba58c726f417ea93e4be668bbf6211a6e%7Ctwcon%5Es1_&ref_url=https%3A%2F%2Fwww.opindia.com%2F2022%2F09%2Fuk-islamists-attack-hindus-desecrate-saffron-flag-in-leicester-city%2F

    ಲೀಸೆಸ್ಟರ್‌ನಲ್ಲಿ ಭಾರತೀಯ ಸಮುದಾಯದ ವಿರುದ್ಧ ನಡೆದ ಹಿಂಸಾಚಾರವನ್ನು ಬಲವಾಗಿ ಖಂಡಿಸುತ್ತೇವೆ. ಈ ವಿಚಾರವನ್ನು ಬ್ರಿಟನ್ ಅಧಿಕಾರಿಗಳ ಗಮನಕ್ಕೆ ತಂದಿದ್ದು, ದಾಳಿ ನಡೆಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಲಾಗಿದೆ. ಅಲ್ಲದೆ ಭಾರತೀಯ ಸಮುದಾಯವರಿಗೆ ರಕ್ಷಣೆ ಒದಗಿಸಲು ಮನವಿ ಮಾಡಲಾಗಿದೆ ಎಂದು ಬ್ರಿಟನ್‌ನಲ್ಲಿರುವ ಭಾರತದ ಹೈಕಮಿಷನ್ ಪ್ರಕಟಣೆಯಲ್ಲಿ ತಿಳಿಸಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿಯನ್ನು ಬಂಧಿಸಲಾಗಿದೆ ಎಂದು ಲೀಸೆಸ್ಟರ್‌ಶೈರ್ ಪೆuಟಿಜeಜಿiಟಿeಜಲೀಸರು ತಿಳಿಸಿದ್ದಾರೆ.

    ಲೀಸೆಸ್ಟರ್‌ಶೈರ್‌ನಲ್ಲಿ ಯುವಕರ ಘರ್ಷಣೆ:
    ಲೀಸೆಸ್ಟರ್ ಪೊಲೀಸರು ಹೇಳುವಂತೆ, ನಿನ್ನೆ ಲೀಸೆಸ್ಟರ್‌ಶೈರ್‌ನಲ್ಲಿ ಯುವಕರ ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದೆ. ಈ ಪ್ರಕರಣದಲ್ಲಿ ಇದುವರೆಗೆ ಕನಿಷ್ಠ 15 ಮಂದಿಯನ್ನು ಬಂಧಿಸಲಾಗಿದೆ. ಯುಕೆ ನಗರದ ಲೀಸೆಸ್ಟರ್‌ನಲ್ಲಿ ಪಾಕಿಸ್ತಾನಿ ಸಂಘಟಿತ ಗ್ಯಾಂಗ್‌ಗಳು ಹಿಂದೂಗಳನ್ನು ಹಿಂಸಿಸಿ ಅವರನ್ನು ಭಯಭೀತಗೊಳಿಸುತ್ತಿರುವುದನ್ನು ತೋರಿಸುವ ವಿವಿಧ ವೀಡಿಯೊಗಳು ಮತ್ತು ವರದಿಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಈ ಹಿಂಸಾಚಾರ ಸಂಭವಿಸಿದೆ ಎಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕೆನಡಾದಲ್ಲಿ ಹಿಂದೂ ದೇವಾಲಯ ವಿರೂಪ – ಭಾರತ ವಿರೋಧಿ ಬರಹದ ಮೂಲಕ ದ್ವೇಷ ಬಿತ್ತನೆ

    ಕೆನಡಾದಲ್ಲಿ ಹಿಂದೂ ದೇವಾಲಯ ವಿರೂಪ – ಭಾರತ ವಿರೋಧಿ ಬರಹದ ಮೂಲಕ ದ್ವೇಷ ಬಿತ್ತನೆ

    ಒಟ್ಟೋವಾ: ಕೆನಡಾದ (Canada) ಖಲಿಸ್ತಾನ ತೀವ್ರವಾದಿಗಳ ಗುಂಪೊಂದು ಟೊರೊಂಟೊದಲ್ಲಿರುವ (Toronto) ಹಿಂದೂ ದೇವಾಲಯವನ್ನು (Hindu Temple) ವಿರೂಪಗೊಳಿಸಿರುವ ಘಟನೆ ನಡೆದಿದ್ದು, ಆರೋಪಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ ಕೇಳಿಬಂದಿದೆ.

    ಟೊರೊಂಟೊದ ಬಿಎಪಿಎಸ್ ಸ್ವಾಮಿನಾರಾಯಣ ಮಂದಿರದಲ್ಲಿ ಈ ಘಟನೆ ನಡೆದಿದೆ. ಭಾರತ-ವಿರೋಧಿ ಗೀಚುಬರಹದ ಮೂಲಕ ಪ್ರಮುಖ ಹಿಂದೂ ದೇವಾಲಯವನ್ನು ವಿರೂಪಗೊಳಿಸಲಾಗಿದೆ. ಇದನ್ನು ಭಾರತೀಯ ಮಿಷನ್‌ ಖಂಡಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಎನ್‌ಕೌಂಟರ್‌; ಇಬ್ಬರು ಉಗ್ರರು ಹತ್ಯೆ

    ಭಾರತೀಯ ಹೈಕಮಿಷನ್ ಬುಧವಾರ ಟ್ವೀಟ್ ಮಾಡಿ ಖಂಡನೆ ವ್ಯಕ್ತಪಡಿಸಿದೆ. ಭಾರತ ವಿರೋಧಿ ಗೀಚುಬರಹದ ಮೂಲಕ BAPS ಸ್ವಾಮಿನಾರಾಯಣ ಮಂದಿರ ವಿರೂಪಗೊಳಿಸುವುದನ್ನು ನಾವು ಬಲವಾಗಿ ಖಂಡಿಸುತ್ತೇವೆ. ಘಟನೆಯ ಬಗ್ಗೆ ತನಿಖೆ ನಡೆಸಲು ಮತ್ತು ಅಪರಾಧಿಗಳ ಮೇಲೆ ತ್ವರಿತ ಕ್ರಮ ಕೈಗೊಳ್ಳಲು ಕೆನಡಾದ ಅಧಿಕಾರಿಗಳಿಗೆ ವಿನಂತಿಸಿದ್ದೇವೆ ಎಂದು ತಿಳಿಸಿದೆ.

    ಕೆನಡಾದ ಸಂಸತ್ ಸದಸ್ಯ ಚಂದ್ರ ಆರ್ಯ (Chandra Arya) ಟ್ವೀಟ್ ಮಾಡಿ, ಕೆನಡಾದ ಖಲಿಸ್ತಾನಿ ತೀವ್ರವಾದಿಗಳಿಂದ ಟೊರೊಂಟೊ ಬಿಎಪಿಎಸ್ ಸ್ವಾಮಿನಾರಾಯಣ ಮಂದಿರ ವಿರೂಪಗೊಳಿಸಿರುವುದನ್ನು ಎಲ್ಲರೂ ಖಂಡಿಸಬೇಕು. ಇದು ಕೇವಲ ಒಂದು ಘಟನೆಯಲ್ಲ. ಕೆನಡಾದ ಹಿಂದೂ ದೇವಾಲಯಗಳು ಇತ್ತೀಚಿನ ದಿನಗಳಲ್ಲಿ ಈ ರೀತಿಯ ದಾಳಿಗೆ ಗುರಿಯಾಗುತ್ತಿವೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಸಂಚರಿಸುತ್ತಿದ್ದ ಕಾರು ಅಪಘಾತ

    Live Tv
    [brid partner=56869869 player=32851 video=960834 autoplay=true]

  • ಅಬುಧಾಬಿಯಲ್ಲಿ ನಿರ್ಮಾಣವಾಗ್ತಿದೆ ಮೊದಲ ಹಿಂದೂ ದೇವಾಲಯ – ಜೈಶಂಕರ್‌ ಭೇಟಿ

    ಅಬುಧಾಬಿಯಲ್ಲಿ ನಿರ್ಮಾಣವಾಗ್ತಿದೆ ಮೊದಲ ಹಿಂದೂ ದೇವಾಲಯ – ಜೈಶಂಕರ್‌ ಭೇಟಿ

    ಅಬುಧಾಬಿ: ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅವರು ಅಬುಧಾಬಿಯಲ್ಲಿ ನಿರ್ಮಾಣ ಹಂತದಲ್ಲಿರುವ ಹಿಂದೂ ದೇವಾಲಯ ಸ್ಥಳಕ್ಕೆ ಭೇಟಿ ನೀಡಿದರು. ಅಬುಧಾಬಿಯಲ್ಲಿ ನಿರ್ಮಾಣವಾಗುತ್ತಿರುವ ಮೊದಲ ಹಿಂದೂ ದೇವಾಲಯ ಇದಾಗಿದೆ.

    ಗಲ್ಫ್‌ ರಾಷ್ಟ್ರಕ್ಕೆ ಮೂರು ದಿನಗಳ ಭೇಟಿಗೆ ಅರಬ್‌ ಸಂಯುಕ್ತ ಸಂಸ್ಥಾನ (ಯುಎಇ)ಕ್ಕೆ ಆಗಿಸಿರುವ ಎಸ್.ಜೈಶಂಕರ್‌ ಅವರು ದೇವಾಲಯ ನಿರ್ಮಾಣದಲ್ಲಿ ಭಾರತೀಯರ ಶ್ರಮವನ್ನು ಶ್ಲಾಘಿಸಿದರು. ʼಶಾಂತಿ, ಸಹಿಷ್ಣುತೆ ಮತ್ತು ಸಾಮರಸ್ಯದ ಸಂಕೇತ ಇದುʼ ಎಂದು ಬಣ್ಣಿಸಿದ್ದಾರೆ. ಇದನ್ನೂ ಓದಿ: ದಾವೂದ್ ಇಬ್ರಾಹಿಂನ ತಲೆಗೆ 25 ಲಕ್ಷ ನಗದನ್ನು ಘೋಷಿಸಿದ ಎನ್‍ಐಎ

    ಈ ಕುರಿತು ಟ್ವೀಟ್‌ ಮಾಡಿರುವ ಜೈಶಂಕರ್‌, ಗಣೇಶ ಚತುರ್ಥಿಯಂದು ಅಬುಧಾಬಿಯಲ್ಲಿ ನಿರ್ಮಾಣ ಹಂತದಲ್ಲಿರುವ ಹಿಂದೂ ದೇವಾಲಯಕ್ಕೆ ಭೇಟಿ ನೀಡಿದೆ. ತ್ವರಿತ ಪ್ರಗತಿಯನ್ನು ನೋಡಲು ಸಂತೋಷವಾಗಿದೆ. ದೇವಾಲಯ ನಿರ್ಮಾಣ ಜವಾಬ್ದಾರಿ ಹೊತ್ತಿರುವ BAPS ತಂಡ, ಭಕ್ತರು ಮತ್ತು ಕಾರ್ಯಕರ್ತರನ್ನು ಭೇಟಿ ಮಾಡಿ ಸಂತೋಷವಾಯಿತು ಎಂದು ಟ್ವೀಟ್ ಮಾಡಿದ್ದಾರೆ.

    ಸಚಿವ ಶೇಖ್ ನಹ್ಯಾನ್ ಬಿನ್ ಮಬಾರಕ್ ಅಲ್ ನಹ್ಯಾನ್ ಅವರನ್ನು ಜೈಶಂಕರ್ ಭೇಟಿ ಮಾಡಿದರು. ಅಲ್ಲಿರುವ ಭಾರತೀಯ ಸಮುದಾಯದ ಯೋಗ ಚಟುವಟಿಕೆಗಳು, ಕ್ರಿಕೆಟ್ ಮತ್ತು ಸಾಂಸ್ಕೃತಿಕ ಸಹಕಾರಕ್ಕಾಗಿ ಅಪಾರ ಬೆಂಬಲ ನೀಡುತ್ತಿರುವುದನ್ನು ಶ್ಲಾಘಿಸಿದರು. ಇದನ್ನೂ ಓದಿ: ಜನಮನ ಸೆಳೆಯುತ್ತಿದೆ 60 ಸಾವಿರ ಗೋಲಿಗಳಿಂದ ಮಾಡಿದ ಗಣೇಶ ಮೂರ್ತಿ!

    55,000 ಚದರ ಮೀಟರ್ ಜಾಗದಲ್ಲಿ ದೇವಾಲಯ ನಿರ್ಮಾಣವಾಗಲಿದೆ. ಈ ರಚನೆಯನ್ನು ಭಾರತೀಯ ದೇವಾಲಯದ ಕುಶಲಕರ್ಮಿಗಳ ಕೈಯಿಂದ ಕೆತ್ತನೆಯಾಗುತ್ತಿದೆ. ಇದು ಮಧ್ಯಪ್ರಾಚ್ಯದಲ್ಲಿ ಮೊದಲ ಸಾಂಪ್ರದಾಯಿಕ ಹಿಂದೂ ಕಲ್ಲಿನ ದೇವಾಲಯವಾಗಲಿದೆ.

    Live Tv
    [brid partner=56869869 player=32851 video=960834 autoplay=true]

  • ಗುರುರಾಯರ 351ನೇ ಆರಾಧನೆ – ಅದ್ಧೂರಿಯಾಗಿ ನೆರವೇರಿದ ಮಂತ್ರಾಲಯದ ಮಹಾರಥೋತ್ಸವ

    ಗುರುರಾಯರ 351ನೇ ಆರಾಧನೆ – ಅದ್ಧೂರಿಯಾಗಿ ನೆರವೇರಿದ ಮಂತ್ರಾಲಯದ ಮಹಾರಥೋತ್ಸವ

    ರಾಯಚೂರು: ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವದ ಕೊನೆಯ ಘಟ್ಟವಾದ ಉತ್ತರಾರಾಧನೆ ಅಂಗವಾಗಿ ಮಂತ್ರಾಲಯ ಮಠದ ರಾಜಬೀದಿಯಲ್ಲಿ ವಿಜೃಂಭಣೆಯ ಮಹಾರಥೋತ್ಸವ ನೆರವೇರಿತು. ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿದ ಭಕ್ತರು ರಾಯರ ಆರಾಧನಾ ಮಹೋತ್ಸವದ ವೈಭವಕ್ಕೆ ಸಾಕ್ಷಿಯಾದರು.

    ಕಲಿಯುಗ ಕಾಮಧೇನು ಗುರು ರಾಘವೇಂದ್ರ ಸಾರ್ವಭೌಮರು ವೃಂದಾವನಸ್ಥರಾದ ಮರುದಿನವನ್ನ ಮಂತ್ರಾಲಯದಲ್ಲಿ ಉತ್ತರಾರಾಧನೆಯಾಗಿ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಉತ್ತರಾರಾಧನೆ ಹಿನ್ನೆಲೆಯಲ್ಲಿ ನಡೆದ ಮಹಾರಥೋತ್ಸವ ರಾಯರ ಆರಾಧನೆಗೆ ಮೆರಗು ತಂದಿದೆ. ಈ ದಿನ ರಾಯರು ಪ್ರಹ್ಲಾದ ರಾಜರ ಉತ್ಸವ ಮೂರ್ತಿ ರೂಪದಿಂದ ಹೊರ ಪ್ರಾಕಾರದಲ್ಲಿ ಬಂದು ಭಕ್ತರಿಗೆ ರಾಜಬಿದಿಯಲ್ಲಿ ದರ್ಶನ ಕೊಡುತ್ತಾರೆ ಅನ್ನೋ ಪ್ರತೀತಿ ಈಗಲೂ ಇದೆ. ರಥೋತ್ಸವಕ್ಕೂ ಮುನ್ನ ರಾಮದೇವರು ಹಾಗೂ ಬೃಂದಾವನಗಳಿಗೂ ಗುಲಾಲ್ ಸಮರ್ಪಣೆ ಮಾಡುವ ಮೂಲಕ ಶ್ರೀಗಳು ವಸಂತೋತ್ಸವ ಆಚರಿಸಿದರು. ಇದನ್ನೂ ಓದಿ: ಮನೆ ಬಾಡಿಗೆ ವೇಳೆ `ಸೆಕ್ಸ್ ಒಪ್ಪಂದ’ಕ್ಕೆ ಸಹಿ ಹಾಕಿದ ಮಹಿಳೆ- ಮುಂದೇನಾಯ್ತು..?

    ಬಳಿಕ ಗುರುರಾಯರನ್ನ ಪ್ರಹ್ಲಾದ ರಾಜರ ರೂಪದಲ್ಲಿ ಸಂಸ್ಕೃತ ಪಾಠಶಾಲೆಗೆ ಮೆರವಣಿಗೆಯಲ್ಲಿ ಕರೆದೊಯ್ಯಲಾಯಿತು. ನಂತರ ಮಠದ ಮದ್ವದ್ವಾರ ಮೂಲಕ ರಾಜಬೀದಿಯಲ್ಲಿ ಮಹಾರಥೋತ್ಸವ ಜರುಗಿತು. ಮಹಾ ರಥೋತ್ಸವದ ಹಿನ್ನೆಲೆಯಲ್ಲಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ರಥದಲ್ಲಿ ಕುಳಿತು ಭಕ್ತರಿಗೆ ಅನುಗ್ರಹ ಸಂದೇಶ ನೀಡಿದರು. ಧರ್ಮಪಾಲನೆ ಮಾಡಿ ಉನ್ನತಿ ಪಡೆಯಿರಿ, ದೇಶ ಸಕಲ ಸಂಪದ್ಭರಿತವಾಗಲಿ, ದೇಶ ವಿಶ್ವಗುರುವಾಗಲಿ ಎಂದು ಹಾರೈಸಿದರು.

    ರಾಯರು ಪ್ರತಿನಿತ್ಯದಲ್ಲಿ ಅಂತರ್ಮುಖವಾಗಿ ಜಪತಪ ಮಾಡುತ್ತಿದ್ದರೆ ಉತ್ತರರಾಧನೆ ದಿನ, ಬಹಿರ್ಮುಖವಾಗಿ ತಮ್ಮ ದೃಷ್ಟಿಯನ್ನ ಭಕ್ತರ ಕಡೆಗೆ ಹರಿಸುತ್ತಾರೆ. ಭಕ್ತರ ಬೇಡಿಕೆ ಈಡೇರಿಸುತ್ತಾರೆ ಅನ್ನೋ ಪ್ರತೀತಿ ಇದೆ. ಹೀಗಾಗಿ ಉತ್ತರಾರಾಧನೆ ದಿನ ರಾಯರ ಅನುಗ್ರಹಕ್ಕೆ ಪಾತ್ರರಾಗಲು ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ರಾಯರ ಮಠಕ್ಕೆ ಆಗಮಿಸಿ ಮಹಾರಥೋತ್ಸವದಲ್ಲಿ ಭಾಗಿಯಾಗಿದ್ದರು. ಸಾಲುಮರದ ತಿಮ್ಮಕ್ಕ ಆರಾಧನೆಯಲ್ಲಿ ಭಾಗವಹಿಸಿ ರಾಯರ ದರ್ಶನ ಪಡೆದರು. ಇದನ್ನೂ ಓದಿ: ಪ್ರೀತಿಯ ಸುಳಿಗೆ ಸಿಕ್ಕಿಬಿದ್ದ ಬಾಲೆ – ಮದುವೆಯಾಗಲು ಪ್ರಿಯಕರ ಒಪ್ಪದ್ದಕ್ಕೆ ಆತ್ಮಹತ್ಯೆ

    ಮಹಾರಥೋತ್ಸವದ ವೇಳೆ ವಿವಿಧೆಡೆಯಿಂದ ಆಗಮಿಸಿದ್ದ ಭಜನಾ ಮಂಡಳಿಗಳು, ಕಲಾತಂಡಗಳು ರಾಜಬೀದಿಯಲ್ಲಿ ರಥೋತ್ಸವಕ್ಕೆ ಮೆರಗು ನೀಡಿದವು. ಹೆಲಿಕ್ಯಾಪ್ಟರ್ ಮೂಲಕ ಪ್ರತಿವರ್ಷದಂತೆ ರಥಕ್ಕೆ ಪುಷ್ಪವೃಷ್ಠಿಯನ್ನ ಮಾಡಲಾಯಿತು. ಈ ಮೂಲಕ ರಾಯರ ಆರಾಧನೆಯ ಮುಖ್ಯ ಮೂರುದಿನಗಳು ಇಂದಿಗೆ ಮುಕ್ತಾಯವಾದವು. ಸಪ್ತರಾತ್ರೋತ್ಸವ ಹಿನ್ನೆಲೆ ಆಗಸ್ಟ್‌ 16ರ ವರೆಗೆ ಮಠದಲ್ಲಿ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಮುಂದುವರಿಯುತ್ತವೆ.

    Live Tv
    [brid partner=56869869 player=32851 video=960834 autoplay=true]

  • ಪಾಕ್‍ನಲ್ಲಿದ್ದ 1,200 ವರ್ಷಗಳಷ್ಟು ಹಳೆ ಹಿಂದೂ ದೇವಾಲಯ ಮರುಸ್ಥಾಪಿಸಲು ಅನುಮತಿ

    ಪಾಕ್‍ನಲ್ಲಿದ್ದ 1,200 ವರ್ಷಗಳಷ್ಟು ಹಳೆ ಹಿಂದೂ ದೇವಾಲಯ ಮರುಸ್ಥಾಪಿಸಲು ಅನುಮತಿ

    ಇಸ್ಲಾಮಾಬಾದ್: ಸುದೀರ್ಘ ನ್ಯಾಯಾಲಯದ ಹೋರಾಟದಲ್ಲಿ ಅಕ್ರಮವಾಗಿ ದೇವಾಲಯ ವಶ ಪಡಿಸಿಕೊಂಡಿದ್ದವರನ್ನು ಹೊರಹಾಕಲಾಗಿದೆ. ಪರಿಣಾಮ ಪಾಕಿಸ್ತಾನದ ಲಾಹೋರ್ ನಗರದಲ್ಲಿರುವ 1,200 ವರ್ಷಗಳಷ್ಟು ಹಳೆಯದಾದ ಹಿಂದೂ ದೇವಾಲಯವನ್ನು ಪುನಃಸ್ಥಾಪಿಸಲಾಗುವುದು ಎಂದು ದೇಶದ ಅಲ್ಪಸಂಖ್ಯಾತರ ಪೂಜಾ ಸ್ಥಳಗಳ ಮೇಲ್ವಿಚಾರಣೆಯ ಫೆಡರಲ್ ಸಂಸ್ಥೆ ತಿಳಿಸಿದೆ.

    ಇವಾಕ್ಯೂ ಟ್ರಸ್ಟ್ ಪ್ರಾಪರ್ಟಿ ಬೋರ್ಡ್(ಇಟಿಪಿಬಿ) ಕಳೆದ ತಿಂಗಳು ಪ್ರಸಿದ್ಧ ಅನಾರ್ಕಲಿ ಬಜಾರ್ ಲಾಹೋರ್ ಬಳಿ ಇರುವ ವಾಲ್ಮೀಕಿ ಮಂದಿರವನ್ನು ಕ್ರಿಶ್ಚಿಯನ್ ಕುಟುಂಬದಿಂದ ಹಿಂಪಡೆದಿದೆ. ಕೃಷ್ಣ ದೇವಾಲಯದ ಜೊತೆಗೆ, ವಾಲ್ಮೀಕಿ ದೇವಾಲಯವು ಲಾಹೋರ್‌ನಲ್ಲಿರುವ ಏಕೈಕ ಕ್ರಿಯಾತ್ಮಕ ದೇವಾಲಯವಾಗಿದೆ. ಇದನ್ನೂ ಓದಿ: ಅನಿವಾಸಿ ಭಾರತೀಯರಿಗೆ ಪಂಜಾಬ್ ಸರ್ಕಾರ ಹೊಸ ನೀತಿಯನ್ನು ತರಲಿದೆ: ಕುಲದೀಪ್ ಸಿಂಗ್ 

    ಹಿಂದೂ ಧರ್ಮಕ್ಕೆ ಮತಾಂತರಗೊಂಡಿರುವುದಾಗಿ ಹೇಳಿಕೊಳ್ಳುವ ಕ್ರೈಸ್ತ ಕುಟುಂಬ ಕಳೆದ ಎರಡು ದಶಕಗಳಿಂದ ವಾಲ್ಮೀಕಿ ಜಾತಿಯ ಹಿಂದೂಗಳಿಗೆ ಮಾತ್ರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ಅನುಕೂಲ ಮಾಡಿಕೊಡುತ್ತಿತ್ತು ಎಂಬುದು ತಿಳಿದುಬಂದಿದೆ. ಅದನ್ನು ಸಾರ್ವಜನಿಕವಾಗಿಸಲು ಇಟಿಪಿಬಿ ವಶಕ್ಕೆ ಪಡೆದುಕೊಂಡಿದೆ.

    ದೇವಾಲಯವನ್ನು ಹಿಂಪಡೆದ ನಂತರ ಇಟಿಪಿಬಿ ವಕ್ತಾರ ಅಮೀರ್ ಹಶ್ಮಿ ಕುರಿತು ಮಾತನಾಡಿದ್ದು, ಮುಂದಿನ ದಿನಗಳಲ್ಲಿ ‘ಮಾಸ್ಟರ್ ಪ್ಲಾನ್’ ಪ್ರಕಾರ ವಾಲ್ಮೀಕಿ ದೇವಾಲಯವನ್ನು ಪುನಃಸ್ಥಾಪಿಸಲಾಗುವುದು. 100ಕ್ಕೂ ಹೆಚ್ಚು ಹಿಂದೂಗಳು, ಕೆಲವು ಸಿಖ್ ಮತ್ತು ಕ್ರಿಶ್ಚಿಯನ್ ನಾಯಕರು ಇಂದು ವಾಲ್ಮೀಕಿ ದೇವಸ್ಥಾನಕ್ಕೆ ಬಂದಿದ್ದರು. ಈ ವೇಳೆ ಹಿಂದೂಗಳು ತಮ್ಮ ಧಾರ್ಮಿಕ ಆಚರಣೆಗಳನ್ನು ಮಾಡಿದರು. ಇಪ್ಪತ್ತು ವರ್ಷಗಳ ಹಿಂದೆ ಕ್ರಿಶ್ಚಿಯನ್ ಕುಟುಂಬ ದೇವಾಲಯವನ್ನು ವಶಪಡಿಸಿಕೊಂಡಿತ್ತು ಎಂದು ವಿವರಿಸಿದರು.

    ದೇವಸ್ಥಾನದ ಭೂಮಿಯನ್ನು ಕಂದಾಯ ದಾಖಲೆ ಇಟಿಪಿಬಿಗೆ ವರ್ಗಾಯಿಸಲಾಗಿದೆ. ಆದರೆ ಕುಟುಂಬ, 2010-2011 ರಲ್ಲಿ ದೇವಾಲಯ ಇರುವ ಜಾಗದ ಮಾಲೀಕ ನಾವು ಎಂದು ಹೇಳಿಕೊಂಡು ಸಿವಿಲ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿತ್ತು. ಈ ಕುಟುಂಬವು ವಾಲ್ಮೀಕಿ ಹಿಂದೂಗಳಿಗೆ ಮಾತ್ರ ದೇವಾಲಯವನ್ನು ಮಾಡಿದ್ದೇವೆ ಎಂದಿದ್ದರು. ಆದರೆ ಅವರು ಕೊಟ್ಟಿರುವ ದಾಖಲೆಗಳು ನಕಲಿ ಎಂದು ತಿಳಿದು ನ್ಯಾಯಾಲಯವು ಛೀಮಾರಿ ಹಾಕಿದೆ ಎಂದು ತಿಳಿಸಿದರು. ಇದನ್ನೂ ಓದಿ:  ಯಾರಿಗೆ ಬೇಕು ‘ಚಿಕನ್ ಕಥಿ ರೋಲ್’ – ಮನೆಯಲ್ಲಿ ಟ್ರೈ ಮಾಡಿ 

    ಹಿನ್ನೆಲೆ:
    1992 ರಲ್ಲಿ, ಭಾರತದಲ್ಲಿ ಬಾಬರಿ ಮಸೀದಿ ಧ್ವಂಸದ ನಂತರ, ಕೋಪಗೊಂಡ ಜನಸಮೂಹವು ಶಸ್ತ್ರಾಸ್ತ್ರಗಳನ್ನು ಹಿಡಿದ ವಾಲ್ಮೀಕಿ ದೇವಾಲಯಕ್ಕೆ ನುಗ್ಗಿತು. ಕೃಷ್ಣ ಮತ್ತು ವಾಲ್ಮೀಕಿ ವಿಗ್ರಹಗಳನ್ನು ಒಡೆದು, ಅಡುಗೆಮನೆಯಲ್ಲಿದ್ದ ಪಾತ್ರೆಗಳು ಒಡೆದು, ಪ್ರತಿಮೆಗಳನ್ನು ಅಲಂಕರಿಸಿದ ಚಿನ್ನವನ್ನು ವಶಪಡಿಸಿಕೊಂಡರು. ದೇವಾಲಯವನ್ನು ಕೆಡವಿ, ಕಟ್ಟಡಕ್ಕೆ ಬೆಂಕಿ ಹಚ್ಚಲಾಯಿತು. ಪರಿಣಾಮ ಅಕ್ಕಪಕ್ಕದ ಅಂಗಡಿಗಳಿಗೂ ಬೆಂಕಿ ಹೊತ್ತಿಕೊಂಡಿತ್ತು.

    ವಿಭಜನೆಯ ನಂತರ ಭಾರತಕ್ಕೆ ವಲಸೆ ಬಂದ ಸಿಖ್ಖರು ಮತ್ತು ಹಿಂದೂಗಳು ಬಿಟ್ಟುಹೋದ ದೇವಾಲಯಗಳು ಮತ್ತು ಭೂಮಿಯನ್ನು ಇಟಿಪಿಬಿ ನೋಡಿಕೊಳ್ಳುತ್ತದೆ. ಇದು ಪಾಕಿಸ್ತಾನದಾದ್ಯಂತ 200 ಗುರುದ್ವಾರಗಳು ಮತ್ತು 150 ದೇವಾಲಯಗಳನ್ನು ನೋಡಿಕೊಳ್ಳುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಮೈಕ್ ಅನುಮತಿ ಪಡೆಯೋದ್ರಲ್ಲಿ ಹಿಂದೂ ದೇಗುಲಗಳ ನಿರಾಸಕ್ತಿ – ಮಸೀದಿ, ಚರ್ಚ್‌ಗಳೇ ಟಾಪ್

    ಮೈಕ್ ಅನುಮತಿ ಪಡೆಯೋದ್ರಲ್ಲಿ ಹಿಂದೂ ದೇಗುಲಗಳ ನಿರಾಸಕ್ತಿ – ಮಸೀದಿ, ಚರ್ಚ್‌ಗಳೇ ಟಾಪ್

    ಬೆಂಗಳೂರು: ರಾಜ್ಯದಲ್ಲಿ ಮೈಕ್ ದಂಗಲ್ ಬಳಿಕ ಧಾರ್ಮಿಕ ಕೇಂದ್ರಗಳಲ್ಲಿ ಮೈಕ್ ಬಳಸಲು ಪೊಲೀಸರ ಅನುಮತಿ ಕಡ್ಡಾಯ ಮಾಡಲಾಗಿದೆ. ಅದರಂತೆ, ಕೊಟ್ಟ ಗಡುವಿನಲ್ಲಿ ಧಾರ್ಮಿಕ ಕೇಂದ್ರಗಳು ಅನುಮತಿ ಪಡೆದಿವೆ.

    loudspeakers

    ವಿಶೇಷವೆಂದರೆ ಮೈಕ್ ಅನುಮತಿ ಪಡೆದ ಧಾರ್ಮಿಕ ಕೇಂದ್ರಗಳ ಪಟ್ಟಿಯಲ್ಲಿ ದೇಗುಲಗಳೇ ಅತಿ ಕಡಿಮೆ ಇವೆ. ಮೈಕ್ ಅನುಮತಿ ಪಡೆಯೋದ್ರದಲ್ಲಿ ದೇಗುಲಗಳು ಹಿಂದುಳಿದಿದ್ದು, ಮಸೀದಿ, ಚರ್ಚ್‌ಗಳು ಹೆಚ್ಚಿನ ಅರ್ಜಿ ಸಲ್ಲಿಸಿ ಅನುಮತಿ ಪಡೆದುಕೊಂಡಿವೆ. ಬೆಂಗಳೂರಲ್ಲಿ ಸಲ್ಲಿಕೆ ಆಗಿದ್ದ 1,530 ಅರ್ಜಿಗಳ ಪೈಕಿ 797 ಅರ್ಜಿಗಳು ಮಸೀದಿಗಳಿಂದಲೇ ಸಲ್ಲಿಕೆಯಾಗಿವೆ. ಒಟ್ಟು ಅರ್ಜಿಗಳ ಪೈಕಿ 10 ಅರ್ಜಿಗಳು ರದ್ದಾಗಿದ್ದು, 79 ಅರ್ಜಿಗಳು ಇನ್ನೂ ಪರಿಶೀಲನೆ ಹಂತದಲ್ಲಿದೆ. ಇದನ್ನೂ ಓದಿ: ಬರಗೂರು ಸಮಿತಿಯ ಪರಿಷ್ಕೃತ ಪಠ್ಯಪುಸ್ತಕದ ಗುಣಮಟ್ಟ ಸರಿಯಿಲ್ಲ: NCERT

    LOUDSPEAKER (1)

    ನಗರದಲ್ಲಿ ಒಟ್ಟು 308 ದೇಗುಲಗಳು ಅರ್ಜಿ ಸಲ್ಲಿಸಿದ್ದು, 295 ದೇಗುಲಗಳು ಅನುಮತಿ ಪಡೆದುಕೊಂಡಿದೆ. ಹಾಗೆಯೇ 797 ಮಸೀದಿಗಳಿಂದ ಅರ್ಜಿ ಸಲ್ಲಿಕೆಯಾಗಿದ್ದು, 762 ಮಸೀದಿಗಳು ಅನುಮತಿ ಪಡೆದಿವೆ. 358 ಚರ್ಚ್‌ಗಳಿಂದ ಅರ್ಜಿ ಸಲ್ಲಿಕೆಯಾಗಿದ್ದು, ಈ ಪೈಕಿ 320 ಚರ್ಚ್‌ಗಳಿಗೆ ಮೈಕ್‌ಗಳನ್ನು ಬಳಸಲು ಅನುಮತಿ ನೀಡಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಪಾಕಿಸ್ತಾನದ ಸಿಂಧ್‌ ಪ್ರಾಂತ್ಯದಲ್ಲಿ ಹಿಂದೂ ದೇವಾಲಯ ಧ್ವಂಸ – ವಿಗ್ರಹ ವಿರೂಪಗೊಳಿಸಿದ ದುಷ್ಕರ್ಮಿಗಳು

    ಪಾಕಿಸ್ತಾನದ ಸಿಂಧ್‌ ಪ್ರಾಂತ್ಯದಲ್ಲಿ ಹಿಂದೂ ದೇವಾಲಯ ಧ್ವಂಸ – ವಿಗ್ರಹ ವಿರೂಪಗೊಳಿಸಿದ ದುಷ್ಕರ್ಮಿಗಳು

    ಇಸ್ಲಾಮಾಬಾದ್‌: ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಕರಾಚಿಯಲ್ಲಿ ಕೆಲವು ದುಷ್ಕರ್ಮಿಗಳು ಹಿಂದೂ ದೇವಾಲಯದ ಮೇಲೆ ದಾಳಿ ನಡೆಸಿದ್ದಾರೆ. ಅಲ್ಲದೇ ದೇವಾಲಯದಲ್ಲಿದ್ದ ವಿಗ್ರಹಗಳನ್ನು ವಿರೂಪಗೊಳಿಸಿದ್ದಾರೆ.

    ಹಿಂದೂ ಅರ್ಚಕರ ನಿವಾಸವಿರುವ ಶ್ರೀ ಮಾರಿ ಮಾತಾ ಮಂದಿರದ ಮೇಲೆ ಬುಧವಾರ ತಡರಾತ್ರಿ ದಾಳಿ ನಡೆದಿದ್ದು, ಹಿಂದೂ ಸಮುದಾಯದವರಲ್ಲಿ ಭಯ ಹುಟ್ಟಿಸಿದೆ. ಇದನ್ನೂ ಓದಿ: ಯಾವುದೇ ದೇಶ ನಮಗೆ ಹಣ ನೀಡುತ್ತಿಲ್ಲ, ಆದರೆ ಭಾರತ ನೀಡುತ್ತಿದೆ: ಲಂಕಾ ಪ್ರಧಾನಿ

    ಗುಂಪೊಂದು ಅರ್ಚಕರ ಮನೆಯ ಮೇಲೆ ದಾಳಿ ಮಾಡಿ ವಿಗ್ರಹಗಳನ್ನು ಧ್ವಂಸಗೊಳಿಸಿದೆ. ಪಾಕಿಸ್ತಾನ ಪೊಲೀಸರು ಇದುವರೆಗೆ ಯಾರನ್ನೂ ಬಂಧಿಸಿಲ್ಲ. ನಿರ್ಮಾಣ ಹಂತದಲ್ಲಿರುವ ದೇವಾಲಯದಲ್ಲಿ ಪ್ರತಿಷ್ಠಾಪಿಸಲು ಕೆಲವು ದಿನಗಳ ಹಿಂದೆ ಅರ್ಚಕರು ವಿಗ್ರಹಗಳನ್ನು ತಂದಿದ್ದರು.

    ದಾಳಿ ಮಾಡಿದವರು ಯಾರು ಮತ್ತು ಯಾಕೆ ಮಾಡಿದರು ಎಂಬುದು ನಮಗೆ ಗೊತ್ತಿಲ್ಲ. ಮೋಟಾರು ಸೈಕಲ್‌ಗಳಲ್ಲಿ ಬಂದ ಆರರಿಂದ ಎಂಟು ವ್ಯಕ್ತಿಗಳು ಸಂಕೀರ್ಣದ ಮೇಲೆ ದಾಳಿ ನಡೆಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಐದರಿಂದ ಆರು ಅಪರಿಚಿತ ಶಂಕಿತರು ದೇವಸ್ಥಾನಕ್ಕೆ ನುಗ್ಗಿ ಧ್ವಂಸಗೊಳಿಸಿ ಪರಾರಿಯಾಗಿದ್ದಾರೆ ಎಂದು ಕೋರಂಗಿ ಎಸ್‌ಎಚ್‌ಒ ಫಾರೂಕ್ ಸಂಜರಾಣಿ ತಿಳಿಸಿದ್ದಾರೆ. ಇದನ್ನೂ ಓದಿ: ಶ್ರೀಲಂಕಾ ಅಧ್ಯಕ್ಷ ರಾಜಪಕ್ಸೆಯ ಸಹೋದರ ಸಂಸತ್ ಸ್ಥಾನಕ್ಕೆ ರಾಜೀನಾಮೆ

    ಪಾಕಿಸ್ತಾನದಲ್ಲಿರುವ ದೇವಾಲಯಗಳು ಸಾಮಾನ್ಯವಾಗಿ ಗುಂಪು ಹಿಂಸಾಚಾರಕ್ಕೆ ಗುರಿಯಾಗುತ್ತಿವೆ. ಕಳೆದ ಅಕ್ಟೋಬರ್‌ನಲ್ಲಿ ಸಿಂಧ್‌ನ ಕೊಟ್ರಿಯಲ್ಲಿರುವ ಐತಿಹಾಸಿಕ ದೇವಾಲಯವನ್ನು ಅಪರಿಚಿತರು ಅಪವಿತ್ರಗೊಳಿಸಿದ್ದರು. ಸಿಂಧ್‌ನಲ್ಲಿ, ಬಲವಂತದ ಮತಾಂತರ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಮೇಲಿನ ದಾಳಿಗಳು ಇನ್ನಷ್ಟು ತೀವ್ರಗೊಂಡಿವೆ ಎನ್ನಲಾಗಿದೆ.

  • ಹಿಂದೂ ದೇವಸ್ಥಾನ ಕೆಡವಿ ನಿರ್ಮಾಣವಾದ ಒಂದೇ ಒಂದು ಮಸೀದಿಯನ್ನೂ ಬಿಡೋದಿಲ್ಲ: ಈಶ್ವರಪ್ಪ

    ಹಿಂದೂ ದೇವಸ್ಥಾನ ಕೆಡವಿ ನಿರ್ಮಾಣವಾದ ಒಂದೇ ಒಂದು ಮಸೀದಿಯನ್ನೂ ಬಿಡೋದಿಲ್ಲ: ಈಶ್ವರಪ್ಪ

    ಚಿಕ್ಕೋಡಿ: ಹಿಂದೂ ದೇವಸ್ಥಾನಗಳನ್ನು ಕೆಡವಿ ಅದರ ಮೇಲೆ ಕಟ್ಟಿರುವ ಒಂದೇ ಒಂದು ಮಸೀದಿಯನ್ನೂ ಬಿಡುವುದಿಲ್ಲ ಎಂದು ಕೆ.ಎಸ್.ಈಶ್ವರಪ್ಪ ಎಚ್ಚರಿಕೆ ನೀಡಿದ್ದಾರೆ.

    KS ESHWARAPPA

    ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೆಲಸಂಗ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಳಲಿ ಮಸೀದಿ ಒಂದೇ ಅಲ್ಲ. ದೇಶದಲ್ಲಿ 36 ಸಾವಿರ ದೇವಸ್ಥಾನಗಳನ್ನ ಪುಡಿ ಮಾಡಿ ಮಸೀದಿಗಳನ್ನು ನಿರ್ಮಿಸಲಾಗಿದೆ. ದೇವಸ್ಥಾನಗಳ ಮೇಲೆ ಕಟ್ಟಿರುವ ಒಂದೇ ಒಂದು ಮಸೀದಿಯನ್ನೂ ಬಿಡುವುದಿಲ್ಲ. ಅಂತಹ ಮಸೀದಿಗಳನ್ನು ಒಡೆದು 36 ಸಾವಿರ ದೇವಸ್ಥಾನವನ್ನು ಮತ್ತೆ ಕಟ್ಟುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಹಿಜಬ್ ಧರಿಸಿ ಬಂದ ವಿದ್ಯಾರ್ಥಿನಿಯರು – ಕ್ಲಾಸ್ ಬಹಿಷ್ಕರಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

    ಈಗಾಗಲೇ ಸರ್ಕಾರದಿಂದ ಸರ್ವೆ ಕಾರ್ಯ ನಡೆಯುತ್ತಿದೆ. ಕಾಶಿಯಲ್ಲೂ ಸರ್ವೆ ಕಾರ್ಯ ಆರಂಭವಾಗಿದೆ. ಕಾನೂನು ಬದ್ಧವಾಗಿ ಕೋರ್ಟ್ ಆದೇಶ ಪಡೆದು ಎಲ್ಲವನ್ನೂ ಮಾಡುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ರಸ್ತೆ ಅಪಘಾತಕ್ಕೆ 5ರ ಮಗು ಬಲಿ – ಸಾವಿನ ಸಂಖ್ಯೆ 11ಕ್ಕೆ ಏರಿಕೆ

    ಇದೇ ವೇಳೆ ಪರಿಷತ್ ಚುನಾವಣೆ ಕುರಿತು ಮಾತನಾಡಿದ ಈಶ್ವರಪ್ಪ, ಲಕ್ಷ್ಮಣ ಸವದಿ ನನ್ನ ಆತ್ಮೀಯ ಸ್ನೇಹಿತ ಅವರು ಉಪಮುಖ್ಯಮಂತ್ರಿ ಆಗಲಿ ಎಂಬುದು ನನ್ನ ಆಸೆ. ಭಗವಂತ ಬಯಸಿದಾಗ ನಾನು ಮತ್ತೆ ಮಂತ್ರಿಯಾಗುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

  • ಮಂಗಳೂರಿನ ಮಳಲಿಯಲ್ಲಿರುವುದು ದರ್ಗಾವೋ, ದೇಗುಲವೋ? – ಇಂದು ನಡೆಯಲಿದೆ ತಾಂಬೂಲ ಪ್ರಶ್ನೆ

    ಮಂಗಳೂರಿನ ಮಳಲಿಯಲ್ಲಿರುವುದು ದರ್ಗಾವೋ, ದೇಗುಲವೋ? – ಇಂದು ನಡೆಯಲಿದೆ ತಾಂಬೂಲ ಪ್ರಶ್ನೆ

    ಮಂಗಳೂರು: ಕಾಶಿಯ ಜ್ಞಾನವಾಪಿ ಮಸೀದಿಯ ವಿವಾದದ ನಡುವೆ ಇದೀಗ ಮಂಗಳೂರಿನ‌ ಮಳಲಿ ಮದನಿ ದರ್ಗಾದ ವಿವಾದದ ಕಾವು ಹೆಚ್ಚಿದೆ. ಇಲ್ಲಿ ಹಿಂದೂ ದೇವಾಲಯ ಇತ್ತು ಅನ್ನೋ ಕುರುಹುಗಳು ಪತ್ತೆಯಾಗಿದೆ ಎಂದು ಹಿಂದೂ ಸಂಘಟನೆಗಳು ಕೋರ್ಟ್ ಮೆಟ್ಟಿಲೇರಿದ್ದು, ಸ್ಥಳ ಇತಿಹಾಸಕ್ಕೆ ತಾಂಬೂಲ ಪ್ರಶ್ನೆಗೂ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಇಂದು ತಾಂಬೂಲ ಪ್ರಶ್ನೆ ನಡೆಯಲಿದೆ.

    ಹಿಂದೂಪರ ಸಂಘಟನೆಗಳ ನೇತ್ರತ್ವದಲ್ಲಿ ವಿವಾದಿತ ‌ಮಳಲಿ ದರ್ಗಾದ ಅನತಿ ದೂರದಲ್ಲೇ ಇಂದು ಬೆಳಗ್ಗೆ 8 ಗಂಟೆಗೆ ತಾಂಬೂಲ ಪ್ರಶ್ನೆ ನಡೆಯಲಿದೆ. ಮಳಲಿಯ ರಾಮಾಂಜನೇಯ ಭಜನಾ ಮಂದಿರದಲ್ಲಿ ತಾಂಬೂಲ ಪ್ರಶ್ನೆ ನಡೆಸಲಾಗುವುದು. ಇದನ್ನೂ ಓದಿ: ಜ್ಞಾನವಾಪಿ ಕೇಸ್ – ಮೇ 28, 29ಕ್ಕೆ 5 ಸಾವಿರ ಮುಸ್ಲಿಂ ಸಂಘಟನೆಗಳಿಂದ ಬೃಹತ್ ಸಭೆ

    ತಳಿರು‌ ತೋರಣಗಳಿಂದ ಭಜನಾ ಮಂದಿರವನ್ನು ಶೃಂಗಾರಗೊಳಿಸಲಾಗಿದ್ದು, ಭಜನಾ ಮಂದಿರದ ಮುಂಭಾಗ ಶಾಮಿಯಾನ ಹಾಕಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಕೇರಳ ಮೂಲದ ಪೊದುವಾಲ್‌ರಿಂದ ತಾಂಬೂಲ ಪ್ರಶ್ನೆ ನಡೆಯಲಿದ್ದು, ಮಸೀದಿ ಸುತ್ತಮುತ್ತ ದೈವಿ ಶಕ್ತಿ ಇದ್ಯಾ ಎಂಬ ಬಗ್ಗೆ ಪ್ರಶ್ನೆ ಕೇಳಲಾಗುವುದು. ವೀಳ್ಯದೆಲೆಗಳ ಲೆಕ್ಕಾಚಾರದ ಆಧಾರದಲ್ಲಿ ಗ್ರಹಗತಿಗಳ ಚಲನೆ ಮೇಲೆ ದೈವೀ ಶಕ್ತಿ ಪತ್ತೆ ಹಚ್ಚಲಾಗುವುದು ಹಿಂದೂಪರ ಸಂಘಟನೆಗಳ ಮುಖಂಡರು ತಿಳಿಸಿದ್ದಾರೆ.

    ತಾಂಬೂಲ ಪ್ರಶ್ನೆ ನಡೆಯಲಿರುವ ಭಜನಾ ಮಂದಿರದ ಸುತ್ತ ಭಾರಿ‌ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ವಿವಾದಿತ ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಈ ಮೂಲಕ ಕ್ರಮವಹಿಸಲಾಗಿದೆ. ಡಿಸಿಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗಿದೆ. 2 ಎಸಿಪಿ, 7 ಇನ್ಸ್‌ಪೆಕ್ಟರ್, 12 ಪಿಎಸ್‌ಐ, 10 ಎಎಸ್‌ಐ, 120 ಸಿವಿಲ್ ಸ್ಟಾಪ್ ಹಾಗೂ 3 ಕೆಎಸ್‌ಆರ್‌ಪಿ ತುಕಡಿ, 3 ಸಿಎಆರ್‌ ತುಕಡಿ ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ. ವಿವಾದಿತ ದರ್ಗಾದ ಸ್ಥಳದಲ್ಲೂ ಭಾರಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದ್ದು, ದರ್ಗಾ 500 ಮೀ. ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಇದನ್ನೂ ಓದಿ: ಗಿಡ ನೆಡುವುದರ ಜೊತೆಗೆ ಸಂರಕ್ಷಿಸಿ: ರಾಜ್ಯಪಾಲರ ಕರೆ

    ಏನಿದು ವಿವಾದ?
    ಮಂಗಳೂರಿನ ಹೊರವಲಯದ ಮಳಲಿಯ ಅಸಯ್ಯಿದ್ ಅಬ್ದುಲ್ಲಾಹಿಲ್ ಮದನಿ ದರ್ಗಾದಲ್ಲಿ ಹಿಂದೂ ದೇವಸ್ಥಾನದ ಶೈಲಿ ಪತ್ತೆಯಾಗಿರೋ ಹಿನ್ನಲೆಯಲ್ಲಿ ಸಾಕಷ್ಟು ಚರ್ಚೆ ಆರಂಭಗೊಂಡಿದೆ. ಎಪ್ರಿಲ್ 21 ರಂದು ಈ ದರ್ಗಾವನ್ನು ನವೀಕರಣಗೊಳಿಸೋದಕ್ಕಾಗಿ ಎದುರಿನ‌ ಭಾಗವನ್ನು‌ ನೆಲ ಸಮಗೊಳಿಸಲಾಗಿತ್ತು. ಈ ವೇಳೆ ದರ್ಗಾದ ಒಳ ಭಾಗದಲ್ಲಿ ದೇವಸ್ಥಾನದಲ್ಲಿರುವಂತಹ ಗುಡಿಯ ಶೈಲಿ, ಕಂಬಗಳು, ತೋಮರ, ಬಾಗಿಲುಗಳು ಪತ್ತೆಯಾಗಿತ್ತು. ಹೀಗಾಗಿ ಇದು ಜೈನ ಅಥವಾ ಹಿಂದೂ ದೇವಸ್ಥಾನ ಆಗಿರೋ‌ ಸಾಧ್ಯತೆ ಇದೆ ಎಂದು ಹಿಂದೂ ಸಂಘಟನೆಗಳು ಕೋರ್ಟ್ ಮೆಟ್ಟಿಲು ಏರಿತ್ತು. ಇದರ ನಡುವೆ ವಿಹೆಚ್‌ಪಿ ಇಂದು ತಾಂಬೂಲ ಪ್ರಶ್ನೆ ಇಡುತ್ತಿದ್ದು, ಈ ಪ್ರಶ್ನೆಯಲ್ಲಿ ಸಿಕ್ಕ ಅಂಶದಂತೆ ಮುಂದುವರಿಯಲು ತೀರ್ಮಾನಿಸಿದೆ.