Tag: Hindu Vigilance Committee

  • ಹೊಸ ವರ್ಷ ಆಚರಣೆ ನಿರ್ಬಂಧಕ್ಕೆ ಆಗ್ರಹಿಸಿ ಕಮಿಷನರ್‌ಗೆ  ದೂರು

    ಹೊಸ ವರ್ಷ ಆಚರಣೆ ನಿರ್ಬಂಧಕ್ಕೆ ಆಗ್ರಹಿಸಿ ಕಮಿಷನರ್‌ಗೆ ದೂರು

    ಬೆಂಗಳೂರು: ಬ್ರಿಗೇಡ್ ರೋಡ್, ಎಂಜಿ ರಸ್ತೆಯಲ್ಲಿ ನಡೆಯುವ ಹೊಸ ವರ್ಷ ಆಚರಣೆಗೆ ಅವಕಾಶ ಕೊಡಬಾರದೆಂದು ಆಗ್ರಹಿಸಿ ಹಿಂದೂ ಜಾಗೃತಿ ಸಮಿತಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್‍ಗೆ ದೂರು ನೀಡಿದೆ.

    ಬ್ರಿಗೇಡ್ ರಸ್ತೆಯಲ್ಲಿ ನಡೆಯುವ ಹೊಸ ವರ್ಷ ಆಚರಣೆ ದುರುಪಯೋಗವಾಗುತ್ತಿದೆ. ಹಿಂದೂಗಳ ಹೊಸ ವರ್ಷ ಯುಗಾದಿಯಾಗಿದ್ದು ಡಿಸೆಂಬರ್ 31 ರಂದು ಹೊಸ ವರ್ಷ ಕೇವಲ ಮೋಜು ಮಸ್ತಿಗೆ ಮಾಡಿಕೊಳ್ಳುವ ಪಾರ್ಟಿಯಾಗಿದೆ. ಪೊಲೀಸರು ಪಾರ್ಟಿ ವ್ಯವಸ್ಥೆಯನ್ನ ಗಂಭೀರವಾಗಿ ಪರಿಗಣಿಸಿ ಹೊಸ ವರ್ಷ ಆಚರಣೆಗೆ ಅವಕಾಶ ಕೊಡಬಾರದೆಂದು ಹಿಂದೂ ಜಾಗೃತಿ ಸಮಿತಿಯ ಕಾರ್ಯಧ್ಯಕ್ಷ ಮೋಹನ್ ಕುಮಾರ್ ಆಗ್ರಹಿಸಿದ್ದಾರೆ.

    ಹೊಸ ವರ್ಷ ಆಚರಣೆಯ ಪಾರ್ಟಿ ವೇಳೆ ಗಾಂಜಾ, ಮದ್ಯಪಾನ ಮಾಡಿ ಗಲಾಟೆ ಮಾಡುತ್ತಾರೆ. ಅಹಿತಕರ ಘಟನೆಗೆ ಕಾರಣರಾಗುತ್ತಾರೆ. ಅಷ್ಟೇ ಅಲ್ಲದೇ ಬೆಂಗಳೂರಿನ ಮರ್ಯಾದೆ ರಾಷ್ಟ್ರ ಮಟ್ಟದಲ್ಲಿ ಹರಾಜು ಹಾಕುವ ಕೇಲಸವಾಗುತ್ತಿದೆ. ಆದ್ದರಿಂದ ಬ್ರಿಗೇಡ್ ರಸ್ತೆ ಹಾಗೂ ಎಂಜಿ ರಸ್ತೆಯಲ್ಲಿ ಡಿಸೆಂಬರ್ 31ರ ಮಧ್ಯರಾತ್ರಿ ನಡೆಯುವ ಹೊಸ ಹೊರ್ಷ ಸಂಭ್ರಮಾಚರಣೆಗೆ ಅವಕಾಶ ಕೊಡಬಾರದೆಂದು ಆಗ್ರಹಿಸಿದ್ದಾರೆ.