Tag: hindu women

  • ಧಾರವಾಡ | ನಕಲಿ ದಾಖಲೆ ಸೃಷ್ಟಿಸಿ ಹಿಂದೂ ಯುವತಿ ಜೊತೆ ಮದ್ವೆ – ಯುಟ್ಯೂಬರ್‌ ಮುಕಳೆಪ್ಪ ವಿರುದ್ಧ ದೂರು

    ಧಾರವಾಡ | ನಕಲಿ ದಾಖಲೆ ಸೃಷ್ಟಿಸಿ ಹಿಂದೂ ಯುವತಿ ಜೊತೆ ಮದ್ವೆ – ಯುಟ್ಯೂಬರ್‌ ಮುಕಳೆಪ್ಪ ವಿರುದ್ಧ ದೂರು

    – ಲವ್‌ ಜಿಹಾದ್ ಆರೋಪದ ಮೇಲೆ ದೂರು

    ಧಾರವಾಡ: ಕನ್ನಡದ ಜಯಪ್ರಿಯ ಯೂಟ್ಯೂಬರ್ ಕ್ವಾಜಾ aಬಂದೇನ್‌ವಾಜಾ ಮಹಮದ್ ಹನೀಫ್‌ ಶಿರಹಟ್ಟಿ ಅಲಿಯಾಸ್ ಮುಕಳೆಪ್ಪ (Youtuber Mukaleppa) ವಿರುದ್ಧ ಬಜರಂಗದಳ ಕಾರ್ಯಕರ್ತರು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಲವ್‌ ಜಿಹಾದ್ ಆರೋಪ ಮಾಡಿರುವ ಕಾರ್ಯಕರ್ತರು, ಮುಕಳೆಪ್ಪ ಸುಳ್ಳು ದಾಖಲೆ ನೀಡಿ ಹಿಂದೂ ಯುವತಿಯನ್ನ ಮದುವೆಯಾಗಿದ್ದಾನೆ ಎಂದು ಆರೋಪಿಸಿದ್ದಾರೆ.

    ಮುಕಳೆಪ್ಪ ಮೂಲತಃ ಇಸ್ಲಾಂ (Islam) ಧರ್ಮಕ್ಕೆ ಸೇರಿದವನಾಗಿದ್ದು, ನಕಲಿ ದಾಖಲೆ ಕೊಟ್ಟು ಹಿಂದೂ ಯುವತಿಯನ್ನ ವಿವಾಹವಾಗಿದ್ದಾನೆ. ಈ ಬಗ್ಗೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ರಿಜಿಸ್ಟರ್ ಮಾಡಿಕೊಳ್ಳುವ ಮೂಲಕ ಮುಕಳೆಪ್ಪ ವಿವಾಹವಾಗಿದ್ದಾನೆ ಎಂದು ದೂರಿನಲ್ಲಿ ಬಜರಂಗದಳ ಕಾರ್ಯಕರ್ತರು (Bajrang Dal Workers) ಆರೋಪಿಸಿದ್ದಾರೆ. ಇದನ್ನೂ ಓದಿ: ಪತ್ನಿಗೆ ಅಕ್ರಮ ಸಂಬಂಧ ಶಂಕೆ – ಊಟಕ್ಕೆ ವಿಷ ಹಾಕಿ ಕೊಂದು ನಾಪತ್ತೆಯಾಗಿದ್ದಾಳೆಂದು ದೂರು ಕೊಟ್ಟ ಪತಿ

    ಹಿಂದೂ ಯುವತಿಯರನ್ನೇ ಟಾರ್ಗೆಟ್‌ ಮಾಡಿ ವಿಡಿಯೋ
    ಮುಕಳೆಪ್ಪ ಹಿಂದೂ ಯುವತಿಯರನ್ನೇ ಟಾರ್ಗೆಟ್ ಮಾಡಿ ಅವರ ಜೊತೆ ವೀಡಿಯೋ ಮಾಡುತ್ತಾನೆ. ಶಾರ್ಟ್ ವೀಡಿಯೋದಲ್ಲಿ ಹಿಂದೂ ಯುವತಿಯರು ಹಾಗೂ ಧರ್ಮಕ್ಕೆ ಅವಮಾನ ಮಾಡುವ ರೀತಿಯಲ್ಲಿ ವೀಡಿಯೋ ಮಾಡುತ್ತಾನೆ. ಕಳೆದ ಜೂನ್ 5 ರಂದು ಖೊಟ್ಟಿ ದಾಖಲೆ ಕೊಟ್ಟು ಹಿಂದೂ ಯುವತಿಯನ್ನ ಈತ ವಿವಾಹವಾಗಿದ್ದು, ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಧಾರವಾಡ ಗ್ರಾಮೀಣ ಠಾಣೆಗೆ (Dharwad Rural Police Station) ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಧಾರವಾಡ ಎಸ್ಪಿ ಗುಂಜನ್ ಆರ್ಯ, ಮೇಲ್ನೋಟಕ್ಕೆ ಯಾವುದೇ ನಕಲಿ ದಾಖಲೆ ಕೊಟ್ಟು ಮದುವೆಯಾದ ಬಗ್ಗೆ ತಿಳಿದು ಬಂದಿಲ್ಲ. ಮದುವೆಯಾದ ಯುವತಿಯನ್ನ ವಿಚಾರಣೆ ಮಾಡುತಿದ್ದು, ಪೊಲೀಸ್ ಅಧಿಕಾರಿ ಒಬ್ಬರನ್ನ ನೇಮಿಸಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ:  ಪ್ರಿಂಟಿಂಗ್ ಮಷಿನ್ ಕಾಸ್ಟ್ಯೂಮ್ ಧರಿಸಿ ಬಂದ ಉರ್ಫಿ – ನನಗೊಂದು ಪ್ರಿಂಟ್‌ ಕೊಡಿ ಅಂದ್ರು ನೆಟ್ಟಿಗರು

    ಸದ್ಯಕ್ಕಂತೂ ಮುಕಳೆಪ್ಪನ ವಿರುದ್ಧ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಬಜರಂಗದಳ ಕಾರ್ಯಕರ್ತರು ದೂರು ಕೊಟ್ಟಿದ್ದು, ಇನ್ನೂ ಎಫ್ಐಆರ್ ದಾಖಲಾಗಿಲ್ಲ. ಪೊಲೀಸರು ಈ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಹಿಂದೂ ಯುವತಿಯರನ್ನೇ ವೀಡಿಯೋದಲ್ಲಿ ಹಾಕಿಕೊಂಡು ಹಿಂದೂ ಧರ್ಮದ ಹಾಗೂ ಹಿಂದೂ ಆಚರಣೆಗಳನ್ನೇ ಟಾರ್ಗೆಟ್ ಮಾಡಿ ಮುಕಳೆಪ್ಪ ವೀಡಿಯೋಗಳನ್ನು ಮಾಡುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಜರಂಗದಳ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಕ್ಯಾಬಿನೆಟ್‌ನಲ್ಲಿ ಗೆರಿಲ್ಲಾ ಮಾದರಿ ಪೊಲಿಟಿಕಲ್ ಆಟ್ಯಾಕ್ – ಸಿಎಂ ಸೇರಿ ಹಲವರಿಗೆ ಶಾಕ್ ಕೊಟ್ಟ ಸಚಿವರ ಗುಂಪು

  • ಲವ್ ಜಿಹಾದ್‌ಗೆ 1,000 ಮುಸ್ಲಿಂ ಯುವಕರನ್ನು ನೇಮಿಸಿದ್ದ ಛಂಗೂರ್ ಬಾಬಾ!

    ಲವ್ ಜಿಹಾದ್‌ಗೆ 1,000 ಮುಸ್ಲಿಂ ಯುವಕರನ್ನು ನೇಮಿಸಿದ್ದ ಛಂಗೂರ್ ಬಾಬಾ!

    – ಬಡವರು, ವಿಧವೆಯರು, ದುರ್ಬಲ ಮನಸ್ಥಿತಿಯ ಯುವತಿಯರೇ ಟಾರ್ಗೆಟ್
    – ಮುಸ್ಲಿಂ ರಾಷ್ಟ್ರಗಳಿಂದ 500 ಕೋಟಿ ರೂ. ಫಂಡಿಂಗ್

    ಲಕ್ನೋ: ಉತ್ತರ ಪ್ರದೇಶದ ಸ್ವಯಂ ಘೋಷಿತ ದೇವಮಾನವ ಜಮಾಲುದ್ದೀನ್ ಅಲಿಯಾಸ್ ಛಂಗೂರ್ ಬಾಬಾ (Chhangur Baba), ಹಿಂದೂ ಯುವತಿಯರಿಗೆ ಬಲೆ ಬೀಸಿ ಲವ್ ಜಿಹಾದ್ (Love Jihad) ನಡೆಸಲು 1,000 ಮುಸ್ಲಿಂ ಯುವಕರನ್ನು ನೇಮಿಸಿದ್ದ ಸ್ಫೋಟಕ ವಿಷಯ ತನಿಖೆ ವೇಳೆ ಬೆಳಕಿಗೆ ಬಂದಿದೆ.

    ಬಡವರು, ವಿಧವೆಯರು ಮತ್ತು ದುರ್ಬಲ ಮನಸ್ಥಿತಿಯ ಮಹಿಳೆಯರನ್ನು ಗುರಿಯಾಗಿರಿಸಿಕೊಂಡು ಮತಾಂತರ ನಡೆಸಲಾಗುತ್ತಿತ್ತು. ಇದಕ್ಕೆ ಕಳೆದ ಮೂರು ವರ್ಷದಲ್ಲಿ ಮುಸ್ಲಿಂ ರಾಷ್ಟ್ರಗಳಿಂದ ಸುಮಾರು 500 ಕೋಟಿ ರೂ. ಪಡೆದಿದ್ದ. ಯುವಕರನ್ನು ಬಳಸಿಕೊಂಡು ಬಡ ಕುಟುಂಬದ ಯುವತಿಯರಿಗೆ, ವಿಧವೆಯರಿಗೆ ಪ್ರೇಮ, ವಿವಾಹ, ಮನೆ ಎಂಬ ಆಸೆಗಳನ್ನು ಒಡ್ಡಿ ಮತಾಂತರಿಸಲಾಗುತ್ತಿತ್ತು. ಇದನ್ನೂ ಓದಿ: ಮಾದಕದ್ರವ್ಯ ಮಾರಾಟ – ಪ್ರಿಯಾಂಕ್‌ ಖರ್ಗೆ ಆಪ್ತ ಅರೆಸ್ಟ್‌

    ಇನ್ನು ಹಿಂದೂ ಯುವತಿಯರನ್ನು ಮತಾಂತರಿಸಿದ್ದಕ್ಕಾಗಿ ಛಂಗೂರ್ ಬಾಬಾ ಭಾರತ-ನೇಪಾಳ ಗಡಿಯಲ್ಲಿ ಉತ್ತರ ಪ್ರದೇಶದ ಏಳು ಜಿಲ್ಲೆಗಳ ಮುಸ್ಲಿಂ ಪುರುಷರಿಗೆ ಹಣ ಪಾವತಿಯನ್ನೂ ಮಾಡಿದ್ದಾನೆ. ಛಂಗೂರ್ ಬಾಬಾ ಜೊತೆಗೆ ಆತನ ಸಹಚರ ನೀತು ಅಲಿಯಾಸ್ ನಸ್ರೀನ್‌ನನ್ನು ಸಹ ಬಂಧಿಸಿ ಏಳು ದಿನಗಳ ಎಟಿಎಸ್ ಕಸ್ಟಡಿಗೆ ಕಳುಹಿಸಲಾಗಿದೆ. ವಿದೇಶದಿಂದ ಬಂದ ಹಣವನ್ನು ನೀತು ನಸ್ರೀನ್ ನಿರ್ವಹಿಸುತ್ತಿದ್ದ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: 60 ವರ್ಷಗಳ ಕನಸು ನನಸು | ಇಂದು ಸಿಗಂದೂರು ಸೇತುವೆ ಲೋಕಾರ್ಪಣೆ – ಬ್ರಿಡ್ಜ್‌ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

    ವಿದೇಶಿ ಫಂಡಿಂಗ್ ಪತ್ತೆಹಚ್ಚಲು ಮತ್ತು ಹೆಚ್ಚಿನ ಸಂಪರ್ಕಗಳನ್ನು ಪತ್ತೆಹಚ್ಚುವ ಸಲುವಾಗಿ ಗುಪ್ತಚರ ಬ್ಯೂರೋ (IB) ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಇಬ್ಬರನ್ನೂ ವಿಚಾರಣೆಗೆ ಒಳಪಡಿಸಲಿದ್ದಾರೆ ಎಂದು ವರದಿಗಳು ತಿಳಿಸಿವೆ. ನವೀನ್ ಅಲಿಯಾಸ್ ಜಮಾಲುದ್ದೀನ್ ಮತ್ತು ಛಂಗೂರ್ ಬಾಬಾ ಮಗ ಮೆಹಬೂಬ್‌ನನ್ನು ಈಗಾಗಲೇ ಬಂಧಿಸಲಾಗಿದ್ದು, ಲಕ್ನೋ ಜಿಲ್ಲಾ ಜೈಲಿನಲ್ಲಿದ್ದಾರೆ. ಇದನ್ನೂ ಓದಿ: ಬಾಹ್ಯಾಕಾಶದಲ್ಲಿ ಮಲ, ಮೂತ್ರ ವಿಸರ್ಜನೆ ಮಾಡಿದರೆ ಏನಾಗುತ್ತೆ?

    ಐಎಸ್‌ಐ ಜೊತೆ ನಂಟಿಗೆ ಯತ್ನ:
    ಲವ್ ಜಿಹಾದ್ ಮೂಲಕ ಹಿಂದೂ ಯುವತಿಯರ ಮತಾಂತರ ಮಾತ್ರವಲ್ಲದೇ ಛಂಗೂರ್ ಬಾಬಾ ನೇಪಾಳಕ್ಕೆ ತೆರಳಿದ್ದು, ಪಾಕ್ ಜೊತೆಗಿನ ಸಂಬಂಧವನ್ನು ಬಲಪಡಿಸಲು ಅಲ್ಲಿನ ಪಾಕ್ ರಾಯಭಾರ ಕಚೇರಿಯಲ್ಲಿ ಸಭೆ ನಡೆಸಿ ಐಎಸ್‌ಐ ಅಧಿಕಾರಿಗಳನ್ನು ಭೇಟಿ ಮಾಡಲು ಯತ್ನಿಸಿದ್ದ ಎಂದು ತನಿಖೆ ವೇಳೆ ತಿಳಿದು ಬಂದಿದೆ. ಇದನ್ನೂ ಓದಿ: ಬಿಹಾರ; ನಡುರಸ್ತೆಯಲ್ಲೇ ವಕೀಲನಿಗೆ ಗುಂಡಿಕ್ಕಿ ಹತ್ಯೆ

    ಮತಾಂತರಕ್ಕೆ ಕೋಡ್‌ವರ್ಡ್ ಬಳಕೆ:
    ಛಂಗೂರ್ ಬಾಬಾ ತಾನು ಮಾಡುತ್ತಿರುವ ಕೃತ್ಯ ಯಾರಿಗೂ ತಿಳಿಯಬಾರದೆಂಬ ಕಾರಣಕ್ಕೆ ಪ್ರತ್ಯೇಕ ಕೋಡ್‌ವರ್ಡ್‌ಗಳನ್ನು ಬಳಸುತ್ತಿದ್ದ. ಪ್ರಾಜೆಕ್ಟ್, ಮಿಟ್ಟಿ ಪಲಟ್ನಾ, ಕಾಜಲ್ ಲಗಾನಾ ಹಾಗೂ ದರ್ಶನ್ ಎಂಬ ಕೋಡ್‌ವರ್ಡ್‌ಗಳ ಮೂಲಕ ಯುವತಿಯರ ಮತಾಂತರ ನಡೆಯುತ್ತಿತ್ತು. ಇದನ್ನೂ ಓದಿ: ದೆಹಲಿಯಲ್ಲಿ ಕಾಣೆಯಾಗಿದ್ದ ಯುವತಿಯ ಮೃತದೇಹ ಯಮುನಾ ನದಿಯಲ್ಲಿ ಪತ್ತೆ

  • ಕಿಡ್ನ್ಯಾಪ್‌ ಮಾಡಿ ಇಸ್ಲಾಂಗೆ ಮತಾಂತರವಾಗುವಂತೆ ಒತ್ತಾಯ – ನಿರಾಕರಿಸಿದ ಹಿಂದೂ ವಿವಾಹಿತೆ ಮೇಲೆ ಅತ್ಯಾಚಾರ

    ಕಿಡ್ನ್ಯಾಪ್‌ ಮಾಡಿ ಇಸ್ಲಾಂಗೆ ಮತಾಂತರವಾಗುವಂತೆ ಒತ್ತಾಯ – ನಿರಾಕರಿಸಿದ ಹಿಂದೂ ವಿವಾಹಿತೆ ಮೇಲೆ ಅತ್ಯಾಚಾರ

    ಇಸ್ಲಾಮಾಬಾದ್: ವಿವಾಹಿತ ಹಿಂದೂ ಮಹಿಳೆಯೊಬ್ಬರನ್ನು (Hindu Women) ಅಪಹರಿಸಿ, ಆಕೆ ಇಸ್ಲಾಂಗೆ (Islam) ಮತಾಂತರಗೊಳ್ಳಲು (Conversion) ನಿರಾಕರಿಸಿದ್ದಕ್ಕೆ ಸತತ ಮೂರು ದಿನಗಳ ಕಾಲ ಅತ್ಯಾಚಾರ ಎಸಗಿರುವ ಘಟನೆ ಪಾಕಿಸ್ತಾನದ ದಕ್ಷಿಣ ಸಿಂಧ್ ಪ್ರಾಂತ್ಯದಲ್ಲಿ ನಡೆದಿದೆ.

    ಅಪಹರಣಕಾರರು ಇಸ್ಲಾಂಗೆ ಮತಾಂತರಗೊಳ್ಳುವಂತೆ ಮಹಿಳೆಯನ್ನ ಬೆದರಿಸಿದ್ದಾರೆ. ಆಕೆ ತನ್ನ ಧರ್ಮ ಬದಲಾಯಿಸಲು ನಿರಾಕರಿಸಿದ್ದರಿಂದ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಮೊದಲು ಕ್ಷೇತ್ರ ಹುಡುಕಿಕೊಳ್ಳಲಿ, ಆಮೇಲೆ JDS ಬಗ್ಗೆ ಮಾತಾಡಲಿ – ಸಿ.ಎಂ ಇಬ್ರಾಹಿಂ

    ಪಾಕಿಸ್ತಾನದ (Pakistan) ಉಮರ್‌ಕೋಟ್ ಜಿಲ್ಲೆಯ ಸಮರೋ ಪಟ್ಟಣದಲ್ಲಿ ತನ್ನ ಮೇಲೆ ಅತ್ಯಾಚಾರವೆಸಗಲಾಗಿದೆ ಎಂದು ಸಂತ್ರಸ್ತ ಮಹಿಳೆ ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡಿರುವ ವೀಡಿಯೋನಲ್ಲಿ ಹೇಳಿಕೊಂಡಿದ್ದಾರೆ. ಸಂತ್ರಸ್ತೆ ದೂರು ನೀಡಿದ್ದರೂ ಮಿರ್‌ಪುರ್ಖಾಸ್‌ನ ಪೊಲೀಸರು ಆರೋಪಿಗಳನ್ನು ಬಂಧಿಸಿ ಕ್ರಮ ತೆಗೆದುಕೊಳ್ಳಲು ಹಿಂದೇಟು ಹಾಕಿದ್ದಾರೆ. ಸದ್ಯ ಸಂತ್ರಸ್ತ ಮಹಿಳೆ ಹಾಗೂ ಕುಟುಂಬಸ್ಥರು ಪೊಲೀಸ್ ಠಾಣೆಯ ಮುಂದೆಯೇ ಧರಣಿ ಕುಳಿತಿದ್ದು, ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದ್ದಾರೆ.

    ಸಂತ್ರಸ್ತೆ ಹೇಳಿದ ವೀಡಿಯೋನಲ್ಲಿ ಏನಿದೆ?
    ಇಬ್ರಾಹಿಂ ಮ್ಯಾಂಗ್ರಿಯೋ, ಪುನ್ಹೋ ಮ್ಯಾಂಗ್ರಿಯೋ ಮತ್ತವರ ಸಹಚರರು ನನ್ನನ್ನ ಅಪಹರಿಸಿದ್ದರು. ಅಲ್ಲದೇ ಇಸ್ಲಾಂಗೆ ಮತಾಂತರಗೊಳ್ಳುವಂತೆ ಬೆದರಿಕೆಯೊಡ್ಡಿದ್ದರು. ಮತಾಂತರಗೊಳ್ಳಲು ನಿರಾಕರಿಸಿದಾಗ ಸತತ ಮೂರು ದಿನಗಳ ಕಾಲ ಅತ್ಯಾಚಾರ ಎಸಗಿದ್ದಾರೆ. ನಂತರ ಅಲ್ಲಿಂದ ಹೇಗೋ ತಪ್ಪಿಸಿಕೊಂಡು ಮನೆಗೆ ಮರಳಿದೆ ಎಂದು ಸಂತ್ರಸ್ತೆ ವೀಡಿಯೋನಲ್ಲಿ ನೋವು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಸಾರಿಗೆ ಬಸ್‌ನಲ್ಲಿ ಡ್ರೈವರ್‌ಗೆ ಚಾಕು ತೋರಿಸಿ, ಪ್ರಯಾಣಿಕನ ಹಣ ದರೋಡೆ

    ಹೆಚ್ಚಿನ ಹಿಂದೂಗಳು ನೆಲೆಸಿರುವ ಪಾಕಿಸ್ತಾನದ ಥಾರ್, ಉಮರ್‌ಕೋಟ್, ಮಿರ್‌ಪುರ್ಖಾಸ್, ಘೋಟ್ಕಿ ಮತ್ತು ಖೈರ್‌ಪುರ್ ಪ್ರದೇಶಗಳಲ್ಲಿ ಹೆಣ್ಣುಮಕ್ಕಳ ಅಪಹರಣ, ಬಲವಂತದ ಮತಾಂತರ ಬಹುದೊಡ್ಡ ಸಮಸ್ಯೆಯಾಗಿದೆ. ಕಳೆದ ವರ್ಷವೂ ಹಿಂದೂ ಅಪ್ರಾಪ್ತೆ, ಇಲ್ಲಿನ ನ್ಯಾಯಾಲಯದಲ್ಲಿ ಬಲವಂತದಿಂದ ಇಸ್ಲಾಂಗೆ ಮತಾಂತರಗೊಂಡು ನಂತರ ಮುಸ್ಲಿಂ ವ್ಯಕ್ತಿಯೊಂದಿಗೆ ಮದುವೆಯಾಗಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪಾಕಿಸ್ತಾನದಲ್ಲಿ ಹಿಂದೂ ಮಹಿಳೆ, ಬಾಲಕಿಯರ ಕಿಡ್ನಾಪ್- ಬಲವಂತವಾಗಿ ಇಸ್ಲಾಂಗೆ ಮತಾಂತರಿಸಿ ಮದುವೆ

    ಪಾಕಿಸ್ತಾನದಲ್ಲಿ ಹಿಂದೂ ಮಹಿಳೆ, ಬಾಲಕಿಯರ ಕಿಡ್ನಾಪ್- ಬಲವಂತವಾಗಿ ಇಸ್ಲಾಂಗೆ ಮತಾಂತರಿಸಿ ಮದುವೆ

    ಇಸ್ಲಾಮಾಬಾದ್: ಅಲ್ಪಸಂಖ್ಯಾತ ಹಿಂದೂಗಳ (Hindu Community) ಮೇಲೆ ಪಾಕಿಸ್ತಾನದಲ್ಲಿ (Pakistan) ನಿರಂತರ ದೌರ್ಜನ್ಯ ಮುಂದುವರಿದಿದೆ. ಇದಕ್ಕೆ ಸಾಕ್ಷಿ ಎನ್ನುವಂತೆ ಮತ್ತೊಂದು ಘಟನೆ ನಡೆದಿದೆ.

    ಸಿಂಧ್ ಪ್ರಾಂತ್ಯದಲ್ಲಿ ಹಿಂದೂ ಮಹಿಳೆ (Hindu Women) ಮತ್ತು ಇಬ್ಬರು ಬಾಲಕಿಯರನ್ನು ಕಿಡ್ನ್ಯಾಪ್‌ (Kidnap) ಮಾಡಲಾಗಿದ್ದು, ಅವರಲ್ಲಿ ಇಬ್ಬರನ್ನು ಬಲವಂತವಾಗಿ ಇಸ್ಲಾಂಗೆ (Islam) ಮತಾಂತರಿಸಿ, ಮದುವೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಊಹಾಪೋಹಗಳಿಗೆ ಕಿವಿಗೊಡದಂತೆ SMK ನಿವಾಸದಿಂದ ಸಂದೇಶ

    ಮೀನಾ ಮೇಘವಾರ್ (14) ಎಂಬ ಹಿಂದೂ ಬಾಲಕಿಯನ್ನು ನಾಸರ್‌ಪುರ ಪ್ರದೇಶದಿಂದ ಅಪಹರಿಸಲಾಗಿದೆ. ಮೀರ್‌ಪುರ್‌ಖಾಸ್ ಪಟ್ಟಣದ ಮಾರುಕಟ್ಟೆಯಿಂದ ಮನೆಗೆ ಹಿಂದಿರುಗುತ್ತಿದ್ದ ಮತ್ತೊಬ್ಬ ಬಾಲಕಿಯನ್ನೂ ಅಪಹರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಫ್ರೆಂಡ್ಸ್ ಜೊತೆ ಪಾರ್ಟಿಗೆ ಬಂದಿದ್ದ ಮಹಿಳೆ ಬಟ್ಟೆ ಹರಿದು ಬೌನ್ಸರ್ಸ್‍ನಿಂದ ಹಲ್ಲೆ

    ಮತ್ತೊಂದೆಡೆ ವಿವಾಹಿತ ಹಿಂದೂ ಮಹಿಳೆಯೊಬ್ಬರು ಮೀರ್‌ಪುರ್‌ಖಾಸ್‌ನಿಂದ ಕಾಣೆಯಾಗಿದ್ದು, ಇಸ್ಲಾಂಗೆ ಮತಾಂತರಗೊಂಡಿದ್ದಾರೆ. ನಂತರ ಅವರು ಮುಸ್ಲಿಂ (Muslim) ವ್ಯಕ್ತಿಯನ್ನು ವಿವಾಹವಾಗಿದ್ದಾರೆ. ಮಹಿಳೆಗೆ ಮೂರು ಮಕ್ಕಳಿದ್ದಾರೆ ಎಂದು ಹೇಳಲಾಗಿದೆ. ಈ ಸಂಬಂಧ ಮಹಿಳೆಯ ಪತಿ ರವಿ ಕುರ್ಮಿ ಅವರು ದೂರು ನೀಡಿದ್ದು, ಎಫ್‌ಐಆರ್ (FIR) ದಾಖಲಿಸಲು ಪೊಲೀಸರು (Police) ನಿರಾಕರಿಸಿದ್ದಾರೆ ಎನ್ನಲಾಗಿದೆ. ನೆರೆಯ ಅಹ್ಮದ್ ಚಾಂಡಿಯೊ ಎಂಬಾತ ತನ್ನ ಪತ್ನಿಗೆ ಹಿಂಸೆ ನೀಡುತ್ತಿದ್ದ. ಬಲವಂತವಾಗಿ ಅಪಹರಿಸಿ ಇಸ್ಲಾಂಗೆ ಮತಾಂತರಿಸಿದ್ದಾನೆ ಎಂದು ರವಿ ಆರೋಪಿಸಿದ್ದಾರೆ.

    ಆದರೆ ವಿವಾಹಿತ ಮಹಿಳೆ ರಾಖಿ ತನ್ನ ಸ್ವಂತ ಇಚ್ಛೆಯ ಮೇರೆಗೆ ಮತಾಂತರಗೊಂಡಿರುವುದಾಗಿಯೂ, ಮುಸ್ಲಿಂ ಪುರುಷನನ್ನು ಮದುವೆಯಾಗಿರುವುದಾಗಿಯೂ ಹೇಳಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

    ಮೂರೂ ಪ್ರಕರಣಗಳನ್ನೂ ತನಿಖೆ ಮಾಡಲಾಗುತ್ತಿದೆ ಎಂದು ಮೀರ್‌ಪುರ್‌ಖಾಸ್ ಪೊಲೀಸರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಲ್ಪಸಂಖ್ಯಾತರ ಮೇಲಿನ ದಾಳಿ ವಿರೋಧಿಸಿ ಬಾಂಗ್ಲಾದಲ್ಲಿ ಪ್ರತಿಭಟನೆ

    ಅಲ್ಪಸಂಖ್ಯಾತರ ಮೇಲಿನ ದಾಳಿ ವಿರೋಧಿಸಿ ಬಾಂಗ್ಲಾದಲ್ಲಿ ಪ್ರತಿಭಟನೆ

    ಢಾಕಾ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂ ಸಮುದಾಯದ ಮೇಲಿನ ದಾಳಿಯನ್ನು ವಿರೋಧಿಸಿ ವಿವಿಧ ಸಂಘಟನೆಗಳು ದೇಶದಾದ್ಯಂತ ಪ್ರತಿಭಟನೆ ನಡೆಸಿದವು.

    ಹಿಂದೂ ಸಮುದಾಯದ ಮೇಲಿನ ದಾಳಿ ಮತ್ತು ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂ ಶಿಕ್ಷಕರ ಹತ್ಯೆ ಮತ್ತು ಹಿಂದೂ ಮಹಿಳೆಯರ ಅತ್ಯಾಚಾರದ ವಿರುದ್ಧ ಚಿತ್ತಗಾಂಗ್‍ನಲ್ಲಿ ಪ್ರತಿಭಟನೆ ನಡೆಸಿದರು.

    ಈ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ಗೃಹ ಸಚಿವ ಅಸಾದುಝಮಾನ್ ಖಾನ್ ಅವರು ದೇಶದಲ್ಲಿ ಕೋಮು ಸೌಹಾರ್ದತೆಯನ್ನು ಕದಡುವ ಜನರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದರು. ಇದನ್ನೂ ಓದಿ: ಭೀಕರ ಅಪಘಾತದಲ್ಲಿ ಪೊಲೀಸ್ ಸಿಬ್ಬಂದಿ ದುರ್ಮರಣ- ಗೃಹ ಸಚಿವರು ಕಂಬನಿ

    ನರೈಲ್‍ನ ಲೋಹಗರದ ಸಹಪಾರ ಪ್ರದೇಶದಲ್ಲಿ ಜುಲೈ 15ರಂದು ಹಿಂದೂ ಅಲ್ಪಸಂಖ್ಯಾತರ ಮನೆಗಳಿಗೆ ಬೆಂಕಿ ಹಚ್ಚಲಾಗಿತ್ತು. 18 ವರ್ಷದ ಯುವಕನೊಬ್ಬ ಫೇಸ್‍ಬುಕ್‍ನಲ್ಲಿ ತಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾನೆ ಎಂದು ಗುಂಪೊಂದುದ ಕ್ರೋದಗೊಂಡು ಬೆಂಕಿ ಹಚ್ಚಿತ್ತು. ಇದನ್ನೂ ಓದಿ: ಕೊಪ್ಪಳದಲ್ಲಿ ಭೀಕರ ರಸ್ತೆ ಅಪಘಾತ – ಐವರು ದುರ್ಮರಣ

    Live Tv
    [brid partner=56869869 player=32851 video=960834 autoplay=true]

  • ಹಿಂದೂ ಮಹಿಳೆ, ಮುಸ್ಲಿಂ ವ್ಯಕ್ತಿ ರೈಲಿನಲ್ಲಿ ಪ್ರಯಾಣ – ಲವ್ ಜಿಹಾದ್ ಅಂತ ಠಾಣೆಗೆ ಎಳೆದೊಯ್ದ ಭಜರಂಗದಳ ಸದಸ್ಯರು

    ಹಿಂದೂ ಮಹಿಳೆ, ಮುಸ್ಲಿಂ ವ್ಯಕ್ತಿ ರೈಲಿನಲ್ಲಿ ಪ್ರಯಾಣ – ಲವ್ ಜಿಹಾದ್ ಅಂತ ಠಾಣೆಗೆ ಎಳೆದೊಯ್ದ ಭಜರಂಗದಳ ಸದಸ್ಯರು

    ಭೋಪಾಲ್: ರೈಲಿನಲ್ಲಿ ಒಟ್ಟಿಗೆ ಪ್ರಯಾಣಿಸುತ್ತಿದ್ದ ಎಂಬ ಕಾರಣಕ್ಕೆ ಮುಸ್ಲಿಂ ವ್ಯಕ್ತಿ ಹಾಗೂ ಹಿಂದೂ ವಿವಾಹಿತೆಯನ್ನು ಬಲವಂತವಾಗಿ ಕೆಳಗಿಳಿಸಿ ಬಜರಂಗದಳದ ಸದಸ್ಯರು ಉಜ್ಜಯಿನಿ ರೈಲ್ವೆ ಪೊಲೀಸ್ ಠಾಣೆಗೆ ಎಳೆದೊಯ್ದಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

    ಮುಸ್ಲಿಂ ವ್ಯಕ್ತಿ ಮತ್ತು ಹಿಂದೂ ಮಹಿಳೆ ರೈಲಿನಲ್ಲಿ ಜೊತೆಯಾಗಿ ಪ್ರಯಾಣಿಸಿದ್ದಾರೆ. ಇದು ಲವ್ ಜಿಹಾದ್ ಎಂದು ಭಜರಂಗದಳದ ಸದಸ್ಯರು ಆರೋಪಿಸಿದ್ದಾರೆ. ನಂತರ ಮುಸ್ಲಿಂ ವ್ಯಕ್ತಿಯನ್ನು ರೈಲಿನಿಂದ ಕೆಳಗಿಳಿಸಿ ಹಲ್ಲೆ ನಡೆಸಿ ಪೊಲೀಸ್ ಠಾಣೆಗೆ ಬಲವಂತವಾಗಿ ಎಳೆದುಕೊಂಡು ಹೋಗಿರುವ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ಸ್ನಾನದ ವೀಡಿಯೋ ಚಿತ್ರೀಕರಿಸಿ ಬ್ಲ್ಯಾಕ್‍ಮೇಲ್ ಮಾಡುತ್ತಾ ಅತ್ತಿಗೆಯನ್ನೇ ರೇಪ್ ಮಾಡ್ದ!

    train

    ಇಂದೋರ್‌ನ ಈ ಇಬ್ಬರು ಪ್ರಯಾಣಿಕರು ಮತ್ತು ಕುಟುಂಬದ ಸ್ನೇಹಿತರನ್ನು ಸರ್ಕಾರಿ ರೈಲ್ವೆ ಪೊಲೀಸರು ವಿಚಾರಣೆಗೆ ಒಳಪಡಿಸಿದರು. ಇವರಿಬ್ಬರ ಪೋಷಕರು ಬರುವವರೆಗೂ ಪೊಲೀಸ್ ಠಾಣೆಯಲ್ಲಿ ಕುಳಿತುಕೊಳ್ಳುವಂತೆ ಮಾಡಿದರು. ನಂತರ ಅವರ ಹೇಳಿಕೆಗಳನ್ನು ದಾಖಲಿಸಿ ಬಿಡುಗಡೆ ಮಾಡಿ ಕಳುಹಿಸಿದರು.

    https://twitter.com/AshrafFem/status/1483308207116533760

    ಈ ಘಟನೆ ಜ.14ರಂದು ನಡೆದಿದೆ. ಮುಸ್ಲಿಂ ವ್ಯಕ್ತಿ ಆಸಿಫ್ ಶೇಖ್ ಎಂದು ಗುರುತಿಸಲಾಗಿದ್ದು, ಈತ ಎಲೆಕ್ಟ್ರಾನಿಕ್ ಅಂಗಡಿಯೊಂದರ ಮಾಲೀಕ. ಮಹಿಳೆ ಖಾಸಗಿ ಶಾಲೆಯೊಂದರ ಶಿಕ್ಷಕಿಯಾಗಿದ್ದಾರೆ. ಇದನ್ನೂ ಓದಿ: ನಾಪತ್ತೆಯಾಗಿದ್ದ ಬಾಂಗ್ಲಾ ನಟಿ ಶವವಾಗಿ ಗೋಣಿಚೀಲದಲ್ಲಿ ಪತ್ತೆ

    ನಾವು ಭಜರಂಗದಳದವರು ಎಂದು ಪರಿಚಯಿಸಿಕೊಂಡಿರುವ ಮೂವರು ಸದಸ್ಯರು ಮುಸ್ಲಿಂ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ್ದಾರೆ. ಆತನನ್ನು ರೈಲ್ವೆ ಪೊಲೀಸ್ ಠಾಣೆಗೆ ಎಳೆದೊಯ್ಯುತ್ತಿದ್ದಾಗ, ಮಹಿಳೆಯೂ ಅವರ ಹಿಂದೆ ಸಾಗುತ್ತಿರುವ ದೃಶ್ಯದ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

    POLICE JEEP

    ಮತ್ತೊಂದು ವೀಡಿಯೋದಲ್ಲಿ, ನಿಮ್ಮ ತಪ್ಪು ತಿಳಿವಳಿಕೆಯಿಂದ ನನ್ನ ಜೀವನವೇ ಹಾಳಾಯಿತು. ನಾನು ವಯಸ್ಕಳು, ಶಾಲೆಯಲ್ಲಿ ಶಿಕ್ಷಕಿಯಾಗಿ ಮಕ್ಕಳಿಗೆ ಬೋಧನೆ ಮಾಡುತ್ತಿದ್ದೇನೆ’ ಎಂದು ಭಜರಂಗದಳದ ಸದಸ್ಯನೊಬ್ಬನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದಳದ ಸದಸ್ಯನೊಬ್ಬ ಪಿಂಟು ಕೌಶಲ್ ಎಂದು ಗುರುತಿಸಲಾಗಿದ್ದು, ನಿನ್ನೊಂದಿಗೆ ನಾನು ಮಾತನಾಡುವುದಿಲ್ಲ ಎಂದು ಮಹಿಳೆಗೆ ಪ್ರತಿಕ್ರಿಯಿಸುತ್ತಿರುವುದು ಕಂಡುಬಂದಿದೆ.

    ಘಟನೆ ಸಂಬಂಧ ಪೊಲೀಸ್ ವರಿಷ್ಠಾಧಿಕಾರಿ ನಿವೇದಿತಾ ಗುಪ್ತ ಮಾತನಾಡಿ, ಶೇಖ್ ಮತ್ತು ಮಹಿಳೆ ತಮ್ಮ ಕುಟುಂಬದವರಿಂದ ಪರಸ್ಪರ ಪರಿಚಿತರು ಮತ್ತು ಸ್ನೇಹಿತರು. ಇದು ಲವ್ ಜಿಹಾದ್ ಎಂದು ಆರೋಪಿಸಿ ಭಜರಂಗದಳದವರು ಇಬ್ಬರನ್ನೂ ಠಾಣೆಗೆ ಕರೆತಂದಿದ್ದರು. ನಾವು ಅವರ ಹೇಳಿಕೆಗಳನ್ನು ದಾಖಲಿಸಿದ್ದೇವೆ. ಇಬ್ಬರೂ ವಯಸ್ಕರು, ಯಾವುದೇ ಅಪರಾಧವಿಲ್ಲದ ಕಾರಣ ಬಿಟ್ಟು ಕಳುಹಿಸಿದ್ದೇವೆ. ಭಜರಂಗದಳದವರ ವಿರುದ್ಧವೂ ಯಾವುದೇ ದೂರು ಕೇಳಿಬರದ ಕಾರಣ ಯಾವುದೇ ಪ್ರಕರಣ ದಾಖಲಿಸಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ನಿಧನ

    ಭಜರಂಗದಳದ ವಿದ್ಯಾರ್ಥಿಗಳ ವಿಭಾಗ ವಿಎಚ್‌ಪಿಯ ಮಾಳವ ಪ್ರಾಂತದ ಪ್ರಚಾರ ಪ್ರಮುಖ್ ಕುಂದನ್ ಚಂದ್ರಾವತ್ ಪ್ರತಿಕ್ರಿಯಿಸಿ, ಹಿಂದೂ ಮಹಿಳೆಯನ್ನು ಮುಸ್ಲಿಂ ವ್ಯಕ್ತಿಯೊಬ್ಬ ದಾರಿ ತಪ್ಪಿಸಿ ತನ್ನೊಂದಿಗೆ ಕರೆದೊಯ್ಯುತ್ತಿದ್ದಾನೆ ಎಂಬ ಮಾಹಿತಿ ಬಲ್ಲ ಮೂಲಗಳಿಂದ ತಿಳಿದು ಬಂದಿತ್ತು. ಹಿಂದೂ ಸಹೋದರಿಯರ ರಕ್ಷಣೆಗಾಗಿ ನಮ್ಮ ಕಾರ್ಯಕರ್ತರು ಮಧ್ಯಪ್ರವೇಶಿಸಿ ಪೊಲೀಸ್ ಠಾಣೆಗೆ ಕರೆದೊಯ್ದರು. ಈ ಪ್ರಕ್ರಿಯೆಯಲ್ಲಿ ವ್ಯಕ್ತಿ ಮತ್ತು ನಮ್ಮ ಸದಸ್ಯರೊಂದಿಗೆ ಸಣ್ಣ ಜಗಳವಾಗಿದೆ ಅಷ್ಟೇ. ಯಾವುದೇ ಹಲ್ಲೆ ಘಟನೆ ನಡೆದಿಲ್ಲ. ನಂತರ ಅವರನ್ನು ಪೊಲೀಸರು ಬಿಟ್ಟು ಕಳುಹಿಸಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.