ಚಿಕ್ಕಬಳ್ಳಾಪುರ: ಕ್ರೈಸ್ತ ಧರ್ಮಕ್ಕೆ (Christianity) ಮತಾಂತರವಾಗಿದ್ದ 15 ಕುಟುಂಬಗಳ 50ಕ್ಕೂ ಹೆಚ್ಚು ಮಂದಿಯನ್ನ ಮರಳಿ ಹಿಂದೂ ಧರ್ಮಕ್ಕೆ ಮರು ಮತಾಂತರ ಮಾಡಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಿದುರಾಶ್ವತ್ಥ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಅಂದಹಾಗೆ ಗೌರಿಬಿದನೂರು ತಾಲೂಕಿನ ನಾಗಸಂದ್ರ, ಗಾಂಧಿನಗರ, ಕದಿರೇನಹಳ್ಳಿ ಸೇರಿದಂತೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಗ್ರಾಮದ 15 ಕುಟುಂಬಗಳ 50ಕ್ಕೂ ಹೆಚ್ಚು ಮಂದಿ ಕ್ರಿಶ್ಚಿಯನ್ ಧರ್ಮದ ಆಚಾರಗಳನ್ನ ಪಾಲನೆ ಮಾಡುತ್ತಿದ್ದರು. ದೇವಾಲಯಗಳಿಗೆ ಹೋಗೋದನ್ನೇ ಮರೆತಿದ್ದ ಜನರ ಮನ ಪರಿವರ್ತನೆ ಮಾಡಿದ ಬಿಜೆಪಿ ಮುಖಂಡ ರವಿನಾರಾಯಣರೆಡ್ಡಿ ಎಲ್ಲರನೂ ಮರಳಿ ಘರ್ ವಾಪಾಸಿ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ‘ಲೋಕಾ’ ಶಾಕ್ – ಬೀದರ್, ಮೈಸೂರು ಸೇರಿ ಹಲವೆಡೆ ದಾಳಿ
ಲಕ್ನೋ: ಮಥುರಾದ (Mathura) ಜಮುನಾಪರ್ ಪ್ರದೇಶದ ಮುಸ್ಲಿಂ ಕುಟುಂಬದ (Muslim Family) ಎಂಟು ಸದಸ್ಯರು ವೃಂದಾವನದ ಆಶ್ರಮದಲ್ಲಿ ನಡೆದ ಧಾರ್ಮಿಕ ಸಮಾರಂಭದಲ್ಲಿ ಹಿಂದೂ ಧರ್ಮಕ್ಕೆ (Hinduism) ಮತಾಂತರ ಆಗಿದ್ದಾರೆ.
ಕುಟುಂಬದ ಯಜಮಾನ ಜಾಕೀರ್ ಎಂಬಾತ ಜಗದೀಶ್ ಎಂದು ಹೆಸರು ಬದಲಾಯಿಸಿಕೊಂಡರು. ‘ತಮ್ಮ ಮೂಲ ಗುರುತು ಹಿಂದೂ ಎಂಬ ನಂಬಿಕೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ನಮ್ಮ ಪೂರ್ವಜರು ಮೊಘಲರ ಯುಗದವರೆಗೂ ಹಿಂದೂಗಳಾಗಿದ್ದರು. ಬಳಿಕ ಒತ್ತಡದಿಂದಾಗಿ ಇಸ್ಲಾಂಗೆ ಮತಾಂತರಗೊಂಡರು. ನಾನು ಕಾಳಿ ದೇವಿಯನ್ನು ಪೂಜಿಸುತ್ತೇನೆ ಎಂದು ತಿಳಿಸಿದ್ದಾರೆ.
ಹಿಂದೂ ಧರ್ಮಕ್ಕೆ ಮರಳುವ ಆಲೋಚನೆ ಕಳೆದ ಮೂರು ವರ್ಷಗಳಿಂದ ಕುಟುಂಬದ ಮನಸ್ಸಿನಲ್ಲಿತ್ತು. ‘ಹಿಂದೂ ಧರ್ಮಕ್ಕೆ ಮತಾಂತರಗೊಳ್ಳುವಂತೆ ನಮಗೆ ಯಾರೂ ಒತ್ತಡ ಹಾಕಿಲ್ಲ. ಯಾರ ಪ್ರಚೋದನೆಯೂ ಇಲ್ಲ. ಹಿಂದೂ ಧರ್ಮದ ನಂಬಿಕೆಯೊಂದಿಗೆ ಈ ಹೆಜ್ಜೆ ಇಟ್ಟಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸೋನಿಯಾ, ರಾಹುಲ್ ಗಾಂಧಿಗೆ ದೆಹಲಿ ಕೋರ್ಟ್ ನೋಟಿಸ್
ವೃಂದಾವನದ ಶ್ರೀ ಜಿ ವಾಟಿಕಾ ಕಾಲೋನಿಯಲ್ಲಿರುವ ಭಾಗವತ್ ಧಾಮ ಆಶ್ರಮದಲ್ಲಿ ಮತಾಂತರ ನಡೆಯಿತು. ಬಲಪಂಥೀಯ ಹಿಂದೂ ಸಂಘಟನೆಯಾದ ಹಿಂದೂ ಯುವ ವಾಹಿನಿ ಇದಕ್ಕೆ ನೆರವು ನೀಡಿತು. ಜಗದೀಶ್ ಜೊತೆಗೆ, ಅವರ ಪತ್ನಿ, ಪುತ್ರರು, ಸೊಸೆಯಂದಿರು ಮತ್ತು ಮೊಮ್ಮಕ್ಕಳು ಎಲ್ಲರೂ ಸಮಾರಂಭದಲ್ಲಿ ಭಾಗವಹಿಸಿದ್ದರು.
ನವದೆಹಲಿ: ಹಿಂದೂ, ಮುಸ್ಲಿಂ, ಕ್ರೈಸ್ತ ಸೇರಿದಂತೆ ವಿವಿಧ ಧರ್ಮಗಳಲ್ಲಿರುವ ಮಹಾಪುರುಷರೆಲ್ಲರೂ ಹೆದರಬೇಡಿ, ಹೆದರಿಸಿಬೇಡಿ ಎನ್ನುವ ಮೂಲಕ ಅಹಿಂಸೆ ಮತ್ತು ಭಯವನ್ನು ಮುಗಿಸುವ ಬಗ್ಗೆ ಮಾತನಾಡಿದ್ದಾರೆ. ಆದರೆ ತಮ್ಮನ್ನು ತಾವು ಹಿಂದೂ (Hindu) ಎಂದು ಕರೆದುಕೊಳ್ಳುವ ಬಿಜೆಪಿ ನಾಯಕರು ಹಿಂಸೆ, ದ್ವೇಷ ಹರಡುತ್ತಿದ್ದಾರೆ. ಅಸತ್ಯದ ಬಗ್ಗೆ ಮಾತ್ರ ಮಾತನಾಡುತ್ತಾರೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಆಕ್ರೋಶ ಹೊರ ಹಾಕಿದ್ದಾರೆ.
ರಾಷ್ಟ್ರಪತಿಗಳ (President Of India) ಭಾಷಣದ ವಂದನಾ ನಿರ್ಣಯದ ಮೇಲೆ ಮಾತನಾಡಿದ ಅವರು, ಧಾರ್ಮಿಕ ಗುರುಗಳ ಫೋಟೋ ಪ್ರದರ್ಶಿಸಿ ಅವರ ತತ್ವಗಳನ್ನು ಪ್ರಸ್ತಾಪಿಸಿದರು. ನರೇಂದ್ರ ಮೋದಿ (Narendra Modi) ಪೂರ್ಣ ಹಿಂದೂ ಸಮಾಜ ಅಲ್ಲ, ಆರ್ಎಸ್ಎಸ್, ಬಿಜೆಪಿ ದೇಶದ ಸಂಪೂರ್ಣ ಹಿಂದೂಗಳ ಪ್ರತಿನಿಧಿಯಲ್ಲ ಎಂದು ಗುಡುಗಿದರಿ. ಈ ವೇಳೆ ಸದನದಲ್ಲಿ ಕೋಲಾಹಲ ಏರ್ಪಟ್ಟಿತು. ವಿಪಕ್ಷ ನಾಯಕರಾಗಿ ಮೊದಲ ಬಾರಿಗೆ ಮಾತನಾಡುತ್ತಿದ್ದಾರೆ ಎನ್ನುವ ಕಾರಣಕ್ಕೆ ನಿಯಮಗಳನ್ನು ಮೀರಿ ಮಾತನಾಡುವಂತಿಲ್ಲ ಎಂದು ಅಮಿತ್ ಶಾ (Amit Shah) ಆಕ್ಷೇಪ ವ್ಯಕ್ತಪಡಿಸಿದರು. ಧಾರ್ಮಿಕ ವಿಚಾರಗಳನ್ನು ಮಾತನಾಡುವಾಗ ಎಚ್ಚರಿಕೆ ವಹಿಸಿ ಎಂದು ಪ್ರಧಾನಿ ಮೋದಿ ಸಲಹೆ ನೀಡಿದರು. ಈ ನಡುವೆ ದೊಡ್ಡ ಮಟ್ಟದಲ್ಲಿ ಗದ್ದಲ ಏರ್ಪಟ್ಟಿತು.
ಇದಕ್ಕೂ ಮುನ್ನ ಮಾತನಾಡಿದ ರಾಹುಲ್ ಗಾಂಧಿ, ನಾವು ನೀಟ್ ಕುರಿತು ಒಂದು ದಿನದ ಚರ್ಚೆಯನ್ನು ಬಯಸಿದ್ದೇವೆ. ಇದು ಪ್ರಮುಖ ವಿಷಯವಾಗಿದೆ ಎರಡು ಕೋಟಿಗೂ ಹೆಚ್ಚು ವಿದ್ಯಾರ್ಥಿಗಳು ತೊಂದರೆಗೀಡಾಗಿದ್ದಾರೆ. 7 ವರ್ಷದಲ್ಲಿ 70 ಬಾರಿ ಪೇಪರ್ ಸೋರಿಕೆಯಾಗಿದೆ. ನೀವು ಈ ವಿಷಯದ ಬಗ್ಗೆ ಪ್ರತ್ಯೇಕ ಚರ್ಚೆಗೆ ಅವಕಾಶ ನೀಡಿದರೆ ನಾವು ಸಂತೋಷಪಡುತ್ತೇವೆ ಎಂದು ಮನವಿ ಮಾಡಿದರು.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸದನದ ನಿಯಮಗಳು ಮತ್ತು ಕಾರ್ಯವಿಧಾನಗಳನ್ನು ಉಲ್ಲೇಖಿಸಿ ಚರ್ಚೆಗೆ ಅವಕಾಶ ನಿರಾಕರಿಸಿದರು. ಸಂಸತ್ ಸದಸ್ಯನಾಗಿ ದಶಕಗಳ ಕಾಲ ನನ್ನ ಅಧಿಕಾರಾವಧಿಯಲ್ಲಿ, ರಾಷ್ಟ್ರಪತಿಗಳ ಭಾಷಣದ ಮೇಲಿನ ಧನ್ಯವಾದ ನಿರ್ಣಯದ ಸಂದರ್ಭದಲ್ಲಿ ಬೇರೆ ಯಾವುದೇ ವಿಷಯವನ್ನು ಎಂದಿಗೂ ಚರ್ಚೆಗೆ ತೆಗೆದುಕೊಂಡಿಲ್ಲ. ಧನ್ಯವಾದ ನಿರ್ಣಯವನ್ನು ಅಂಗೀಕರಿಸಿದ ನಂತರ ಇತರ ವಿಷಯಗಳನ್ನು ಪ್ರಸ್ತಾಪಿಸಬಹುದು ಹೇಳಿದರು. ಸ್ಪೀಕರ್ ಓಂ ಬಿರ್ಲಾ ಅವರು ಸಿಂಗ್ ಅವರು ನಿಲುವನ್ನು ಬೆಂಬಲಿಸಿದರು ಮತ್ತು ಪ್ರತಿಪಕ್ಷಗಳ ಮನವಿಯನ್ನು ತಿರಸ್ಕರಿಸಿದರು.
ಮುಂದುವರಿದು ಮಾತನಾಡಿದ ರಾಹುಲ್ ಗಾಂಧಿ, ನಾನು ಅಯೋಧ್ಯೆ ಬಗ್ಗೆ ಮಾತನಾಡುವಾಗ ಮೈಕ್ ಬಂದ್ ಮಾಡಲಾಗುತ್ತದೆ ಎಂದು ಆರೋಪಿಸಿದರು. ಭಗವಾನ್ ರಾಮ ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ. ಅಯೋಧ್ಯೆಯಲ್ಲಿ ಸೋಲಿಸುವ ಮೂಲಕ ಈ ಎಚ್ಚರಿಕೆ ನೀಡಿದ್ದಾರೆ. ಅಯೋಧ್ಯೆಯಲ್ಲಿ ಬಿಜೆಪಿ ಹೇಗೆ ಸೋತಿತು ಎಂದು ಕೇಳಿದೆ. ಅಯೋಧ್ಯೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಿದ್ದಾರೆ, ಆದರೆ ಭೂಮಿ ಕಳೆದುಕೊಂಡ ರೈತರಿಗೆ ಸರಿಯಾಗಿ ಪರಿಹಾರ ನೀಡಿಲ್ಲ. ಸಣ್ಣ ಪುಟ್ಟ ಅಂಗಡಿ, ಮನೆಗಳನ್ನ ಧ್ವಂಸ ಮಾಡಿದೆ, ಪರಿಹಾರ ನೀಡಿಲ್ಲ, ಅಯೋಧ್ಯೆ ದೇವಸ್ಥಾನದ ಉದ್ಘಾಟನೆಗೆ ಅಂಬಾನಿ-ಅದಾನಿ ಕರೆಯಲಾಯಿತು ಸ್ಥಳೀಯರನ್ನು ಕೈಬಿಡಲಾಯಿತು. ಅಯೋಧ್ಯೆ ಉದ್ಘಾಟನೆ ಸಂದರ್ಭದಲ್ಲಿ ಅಲ್ಲಿನ ಜನರು ದುಃಖದಲ್ಲಿದ್ದರು ಎಂದು ಹೇಳಿದರು.
ನರೇಂದ್ರ ಮೋದಿ ಅವರು ಅಯೋಧ್ಯೆಯಿಂದ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದ್ದರು, ಸರ್ವೆ ಮಾಡುವ ಏಜೆನ್ಸಿಗಳು ಬೇಡ ಎಂದು ಸಲಹೆ ನೀಡಿದವು ಹೀಗಾಗೀ ಸ್ಪರ್ಧಿಸಲಿಲ್ಲ. ವಾರಣಾಸಿಯಿಂದ ಸ್ಪರ್ಧಿಸಿ, ಸ್ವಲ್ವದರಲ್ಲೇ ಉಳಿದುಕೊಂಡರು ಎಂದು ವ್ಯಂಗ್ಯವಾಡಿದರು. ರೈತರನ್ನು ಭಯೋತ್ಪಾದಕರು ಎಂದು ಬಿಜೆಪಿಯವರು ಕರೆದಿದ್ದಾರೆ, ಅವರನ್ನು ಬೆದರಿಸಲು ಮೂರು ಕೃಷಿ ಕಾನೂನು ಜಾರಿ ಮಾಡಲಾಯಿತು. ಅಂಬಾನಿ, ಅದಾನಿಗೆ ಅನುಕೂಲವಾಗುವ ಕಾನೂನು ಜಾರಿ ಮಾಡಲಾಯಿತು ರೈತರ ಪ್ರತಿಭಟನೆ ನಡೆಸಿದರು, ಪ್ರತಿಭಟನೆ ನಡೆಸಿದ ರೈತರನ್ನು ಭಯೋತ್ಪಾದಕರು ಎನ್ನಲಾಯಿತು ಎಂದು ಹೇಳಿದರು.
ರಾಹುಲ್ ಗಾಂಧಿ ಮಾತಿಗೆ ಅಮಿತ್ ಶಾ ಆಕ್ಷೇಪ ವ್ಯಕ್ತಪಡಿಸಿದರು. ಮೊದಲ ವಿಪಕ್ಷ ನಾಯಕನಾಗಿ ಮಾತನಾಡುತ್ತಿದ್ದಾರೆ ಎಂದು ಹೆಚ್ಚು ಹೆಚ್ಚು ರಿಯಾಯಿತಿ ನೀಡಲಾಗುತ್ತಿದೆ ಅವರು ಎಲ್ಲ ನಿಯಮ ಉಲ್ಲಂಘಿಸಿ ಮಾತನಾಡುತ್ತಿದ್ದಾರೆ ನಾವು ರೈತರನ್ನು ಯಾವಗ ಭಯೋತ್ಪಾದಕರು ಎಂದು ಹೇಳಿದ್ದೇವೆ? ಸದನಕ್ಕೆ ತಪ್ಪು ಮಾಹಿತಿ ನೀಡಲಾಗುತ್ತಿದೆ ಎಂದು ಆಕ್ರೋಶ ಹೊರ ಹಾಕಿದ್ದರು. ತಮ್ಮ ಅಸಬ್ಬಂದ್ಧ ಹೇಳಿಕೆಗೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿ ಭಾರತ ಮೂಲದ ವಿವೇಕ್ ರಾಮಸ್ವಾಮಿ (Vivek Ramaswamy) ಹಿಂದೂ ಧರ್ಮದ ಸಾರ್ವತ್ರಿಕ ಮೌಲ್ಯಗಳ ಬಗ್ಗೆ ಮಾತನಾಡಿದ್ದಾರೆ.
ಅಮೆರಿಕದ ಸಿಎನ್ಎನ್ ಟೌನ್ ಹಾಲ್ನಲ್ಲಿ ವಿವೇಕ್ ಮಾತನಾಡುತ್ತಿದ್ದಾಗ, ಅಮೆರಿಕ (America) ಹಿಂದೂ ಅಧ್ಯಕ್ಷರನ್ನು ಒಪ್ಪಿಕೊಳ್ಳಬಹುದೇ ಎಂಬ ಪ್ರಶ್ನೆ ಕೇಳಿಬಂತು. ಅದಕ್ಕೆ ವಿವೇಕ್ ಪ್ರತಿಕ್ರಿಯಿಸಿ, ನನ್ನದು ‘ನಕಲಿ ಮತಾಂತರ’ ಅಲ್ಲ, ನಾನು ಹಿಂದೂ (Hinduism). ರಾಜಕೀಯ ವೃತ್ತಿಜೀವನವನ್ನು ಹೆಚ್ಚಿಸಲು ಸುಳ್ಳು ಹೇಳುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಅಲ್ಲದೇ, ಹಿಂದೂ ಧರ್ಮ ಮತ್ತು ಕ್ರಿಶ್ಚಿಯನ್ ಧರ್ಮ ಒಂದೇ ಸಮಾನ ಮೌಲ್ಯವನ್ನು ಹೇಳುತ್ತವೆ ಎಂದು ಪ್ರತಿಪಾದಿಸಿದ್ದಾರೆ. ಇದನ್ನೂ ಓದಿ: ಹಮಾಸ್ ಉಗ್ರರು ಅವಿತುಕೊಳ್ಳುತ್ತಿದ್ದ ಸುರಂಗಗಳಿಗೆ ಸಮುದ್ರದ ನೀರು ಹರಿಸಿದ ಇಸ್ರೇಲ್
ನಾನು ನಕಲಿ ಮತಾಂತರ ಆಗಬಹುದು. ಆದರೆ ಅದನ್ನು ನಾನು ಮಾಡುವುದಿಲ್ಲ. ನನ್ನ ನಂಬಿಕೆಯ ಬಗ್ಗೆ ನಿಮಗೆ ಹೇಳುತ್ತೇನೆ. ನನ್ನ ಪಾಲನೆ ಸಾಕಷ್ಟು ಸಾಂಪ್ರದಾಯಿಕವಾಗಿತ್ತು. ಮದುವೆಗಳು ಪವಿತ್ರವೆಂದು ನನ್ನ ಪೋಷಕರು ನನಗೆ ಹೇಳುತ್ತಿದ್ದರು. ಕುಟುಂಬಗಳು ಸಮಾಜದ ಮೂಲಾಧಾರವಾಗಿದೆ ಎಂದು ತಿಳಿಸಿದ್ದಾರೆ.
ದೇವರು ಎಂಬುದು ಸತ್ಯ. ದೇವರ ಹೆಸರನ್ನು ವ್ಯರ್ಥವಾಗಿ ತೆಗೆದುಕೊಳ್ಳಬೇಡಿ. ನಿಮ್ಮ ಹೆತ್ತವರನ್ನು ಗೌರವಿಸಿ. ಕೊಲ್ಲಬೇಡಿ, ಸುಳ್ಳು ಹೇಳಬೇಡಿ, ಮೋಸ ಮಾಡಬೇಡಿ, ಕದಿಯಬೇಡಿ. ವ್ಯಭಿಚಾರ ಮಾಡಬೇಡಿ, ಆಸೆಪಡಬೇಡ. ನಾವು ಒಂದೇ ಮೌಲ್ಯವನ್ನು ಸಾಮಾನ್ಯವಾಗಿ ಹಂಚಿಕೊಳ್ಳುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಪಾಕ್ ಠಾಣೆ ಮೇಲೆಯೇ ಉಗ್ರರ ದಾಳಿ – 23 ಪೊಲೀಸರ ದುರ್ಮರಣ
ನನ್ನ ಧಾರ್ಮಿಕ ನಂಬಿಕೆಗಳ ಆಧಾರದ ಮೇಲೆ, ಪ್ರತಿಯೊಬ್ಬ ವ್ಯಕ್ತಿಯು ಒಂದು ಕಾರಣಕ್ಕಾಗಿ ಇಲ್ಲಿದ್ದಾನೆ ಎಂದು ನಾನು ಅರ್ಥಮಾಡಿಕೊಂಡಿದ್ದೇನೆ. ದೇವರು ಪ್ರತಿಯೊಬ್ಬರೊಳಗೂ ಇದ್ದಾನೆ. ದೇವರು ನಮ್ಮ ಮೂಲಕ ವಿವಿಧ ರೀತಿಯಲ್ಲಿ ಕೆಲಸ ಮಾಡಿದರೂ, ನಾವು ಎಲ್ಲರೂ ಸಮಾನರು ಎಂದು ಹೇಳಿದ್ದಾರೆ.
ಅಕ್ರಮ ವಲಸಿಗರಿಗೆ ಜನ್ಮಸಿದ್ಧ ಪೌರತ್ವವನ್ನು ನಿಷೇಧಿಸುವ ಕರೆಯನ್ನು ರಾಮಸ್ವಾಮಿ ಪುನರುಚ್ಚರಿಸಿದ್ದಾರೆ. ಕಾನೂನು ಉಲ್ಲಂಘಿಸುವವರಿಗೆ ನಾವು ಬಹುಮಾನ ನೀಡಬಾರದು ಎಂದು ಪ್ರತಿಪಾದಿಸಿದ್ದಾರೆ. ಇದೇ 2024 ರಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ವಿವೇಕ್ ರಾಮಸ್ವಾಮಿ ಸ್ಪರ್ಧಿಸಲಿದ್ದಾರೆ. ಇದನ್ನೂ ಓದಿ: ಮೋದಿಯನ್ನ ಹೆಸರಿಸಬಹುದು ಅಂತ ಊಹಿಸೋಕು ಸಾಧ್ಯವಿಲ್ಲ – ಹಾಡಿ ಹೊಗಳಿದ ಪುಟಿನ್
1985ರ ಆಗಸ್ಟ್ 9 ರಂದು ಜನಿಸಿದ್ದ ವಿವೇಕ್ ರಾಮಸ್ವಾಮಿ ನೈಋತ್ಯ ಓಹಿಯೋದ ಮೂಲದವರು. ಅವರ ತಾಯಿ ಜೆರಿಯಾಟ್ರಿಕ್ ಮನೋವೈದ್ಯರಾಗಿದ್ದರು. ಅವರ ತಂದೆ ಜನರಲ್ ಎಲೆಕ್ಟ್ರಿಕ್ನಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಅವರ ಪೋಷಕರು ಕೇರಳದಿಂದ ಅಮೆರಿಕಗೆ ವಲಸೆ ಹೋಗಿದ್ದರು.
ಕೊಪ್ಪಳ: ಭಾರತೀಯ ಸಂಸ್ಕೃತಿಯನ್ನು (Indian Culture) ಮೆಚ್ಚಿ ರಷ್ಯಾ (Russia) ಮೂಲದ ಪ್ರಜೆಗಳು ಹಿಂದೂ ಧರ್ಮಕ್ಕೆ (Hinduism) ಸೇರ್ಪಡೆಗೊಂಡಿದ್ದಾರೆ. ಮಾತ್ರವಲ್ಲದೇ ಹಿಂದೂ ಧರ್ಮದ ಹೆಸರಿಟ್ಟುಕೊಂಡು ಹನುಮನ ನಾಡು ಕೊಪ್ಪಳಕ್ಕೆ (Koppal) ಭೇಟಿ ನೀಡಿದ್ದಾರೆ.
ರಷ್ಯನ್ ಪ್ರಜೆಗಳಾದ ಮೀನಾಕ್ಷಿಗಿರಿ, ಗಂಗಾ ಹಾಗೂ ಸರಸ್ವತಿ ಹಿಂದೂ ಧರ್ಮಕ್ಕೆ ಸೇರ್ಪಡೆಯಾದ ಪ್ರಜೆಗಳು. ಈ ಮೂವರು ಖಾವಿ ಧರಿಸಿ ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ. ಅದೇ ರೀತಿ ಕೊಪ್ಪಳ ಜಿಲ್ಲೆಯ ಹನುಮನ ಜನ್ಮ ಸ್ಥಳ ಅಂಜನಾದ್ರಿಗೆ (Anjanadri) ಬಂದು ದರ್ಶನ ಪಡೆದಿದ್ದಾರೆ. ಇವರು ಹಂಪಿ-ಆನೆಗೊಂದಿ, ಅಂಜನಾದ್ರಿ ಸೇರಿದಂತೆ ದೇಶದ ವಿವಿಧ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿದ್ದಾರೆ. ಇದನ್ನೂ ಓದಿ: ನಿರ್ಮಾಣ ಹಂತದಲ್ಲಿದ್ದ ಸೇತುವೆ ಉದ್ಘಾಟಿಸಿದ ಆದಿತ್ಯ ಠಾಕ್ರೆ ವಿರುದ್ಧ ದೂರು
ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿದ ಸಂದರ್ಭ ಪುರಾಣ ಪವಿತ್ರ ಸ್ಥಳದಲ್ಲಿ ದೀಪ ಹಚ್ಚಲು ಆಗಲ್ವಾ ಎಂದು ಕರ್ನಾಟಕ ಸರ್ಕಾರದ ಮೇಲೆ ವಿದೇಶಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಿಂದೂ ಧರ್ಮ ಸ್ವೀಕರಿಸಿ ಕೊಪ್ಪಳದ ಅಂಜನಾದ್ರಿ ಪರ್ವತಕ್ಕೆ ಬಂದ ರಷ್ಯನ್ ಪ್ರಜೆಗಳು ದೇಶದಲ್ಲಿ ಎಲ್ಲಾ ಕಡೆ ದೀಪಾವಳಿ (Deepavali) ನಡೆಯುತ್ತಿದೆ. ಪುಣ್ಯಭೂಮಿಯಲ್ಲಿ ಬೆಳಕಿಲ್ಲ. ಹನುಮನ ಜನ್ಮ ಸ್ಥಳದಲ್ಲಿ ದೀಪಾವಳಿ ಆಚರಣೆ ಇಲ್ಲವೆಂದು ಅಸಮಾಧಾನಗೊಂಡಿದ್ದಾರೆ. ಇದನ್ನೂ ಓದಿ: ಶಮಿ ತವರಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾದ ಯೋಗಿ ಸರ್ಕಾರ
ನವದೆಹಲಿ: ಭಾರತದಲ್ಲಿ ಹಿಂದೂ ಧರ್ಮದ ‘ರಕ್ಷಣೆ’ಗಾಗಿ (Hinduism) ಮಾರ್ಗಸೂಚಿಗಳನ್ನು ಮಾಡಲು ನಿರ್ದೇಶನವನ್ನು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ವಜಾಗೊಳಿಸಿದೆ.
ಹಿಂದೂ ಧರ್ಮದ ರಕ್ಷಣೆಗೆ ನಿರ್ದೇಶನ ಕೋರಿ ಅರ್ಜಿ ಸುಪ್ರೀಂ ಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಸ್.ಕೆ. ಕೌಲ್ ನೇತೃತ್ವದ ತ್ರಿಸದಸ್ಯ ಪೀಠವು ಅರ್ಜಿಯನ್ನು ವಜಾ ಮಾಡಿದೆ. ಇದನ್ನೂ ಓದಿ: ಎಂಪಿ, ಎಂಎಎಲ್ಎಗಳ ಬಾಕಿ ಪ್ರಕರಣಗಳ ತ್ವರಿತ ವಿಲೇವಾರಿಗೆ ಸುಪ್ರೀಂ ಸೂಚನೆ
ಶೈಕ್ಷಣಿಕ ಪಠ್ಯಕ್ರಮವು ನಿಮಗೆ ಬೇಕಾದುದನ್ನು ಸೇರಿಸಬೇಕೆಂದು ನೀವು ಬಯಸುತ್ತೀರಿ. ಇದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹೇಗಾಗುತ್ತದೆ? ನೀವು ಸರ್ಕಾರವನ್ನು ಸಂಪರ್ಕಿಸಬಹುದು. ಶೈಕ್ಷಣಿಕ ಪಠ್ಯಕ್ರಮ ಸೇರ್ಪಡೆ ನ್ಯಾಯಾಲಯದ ಜವಾಬ್ದಾರಿಯಲ್ಲ, ಅದು ಸರ್ಕಾರದ ಕೆಲಸ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
ಹಿಂದೂ ಧರ್ಮದ ರಕ್ಷಣೆಗಾಗಿ ಅಧಿಕಾರಿಗಳಿಗೆ ನಿರ್ದೇಶನಗಳನ್ನು ಕೇಳುತ್ತಿದ್ದೀರಿ. ಭಾರತದಲ್ಲಿ ಇಸ್ಲಾಂ ಧರ್ಮವನ್ನು ರಕ್ಷಿಸಿ, ಕ್ರಿಶ್ಚಿಯನ್ ಧರ್ಮವನ್ನು ರಕ್ಷಿಸಿ ಎಂದು ಯಾರಾದರೂ ಹೇಳುತ್ತಾರೆ. ಹೀಗಾಗಿ ಈ ಅರ್ಜಿಗೆ ಯಾವುದೇ ಅರ್ಹತೆ ಇಲ್ಲ ಎಂದು ವಿಚಾರಣೆ ವೇಳೆ ನ್ಯಾ. ಸಂಜಯ್ ಕಿಷನ್ ಕೌಲ್ ತಿಳಿಸಿದ್ದಾರೆ. ಇದನ್ನೂ ಓದಿ: ಅಪಘಾತವೆಸಗಿ ತಪ್ಪಿಸಿಕೊಳ್ಳುವ ಯತ್ನದಲ್ಲಿ ಕಾರುಗಳಿಗೆ ಡಿಕ್ಕಿ – ಮೂವರು ಸಾವು
ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು (ಶುಕ್ರವಾರ) ನಡೆಯಿತು. ಪ್ರಕರಣದಲ್ಲಿ ವಾದ ಮಂಡಿಸಲು ಅರ್ಜಿದಾರರು ಖುದ್ದು ಹಾಜರಾಗಿದ್ದರು. ಅರ್ಜಿದಾರರು ಶೈಕ್ಷಣಿಕ ಪಠ್ಯಕ್ರಮವನ್ನು ಉಲ್ಲೇಖಿಸಿದಾಗ, ಪಠ್ಯಕ್ರಮವನ್ನು ರೂಪಿಸುವುದು ಸರ್ಕಾರಕ್ಕೆ ಎಂದು ಪೀಠ ತಿಳಿಸಿತು.
ಅರ್ಜಿದಾರರು ತನಗೆ ಬೇಕಾದುದನ್ನು ಇತರರು ಮಾಡಬೇಕೆಂದು ಹೇಳಲು ಸಾಧ್ಯವಿಲ್ಲ. ನೀವು ಏನನ್ನಾದರೂ ಮಾಡಿದ್ದೀರಿ ಎಂದಾದರೆ, ನೀವು ಅದನ್ನು ಪ್ರಚಾರ ಮಾಡಬಹುದು. ಯಾರೂ ನಿಮ್ಮನ್ನು ತಡೆಯುವುದಿಲ್ಲ. ಆದರೆ ಎಲ್ಲರೂ ಅದನ್ನು ಮಾಡಬೇಕು ಎಂದು ನೀವು ಹೇಳಲು ಸಾಧ್ಯವಿಲ್ಲ ಎಂದು ಹೇಳಿ ಸುಪ್ರೀಂ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿದೆ.
ಬರ್ರೆನ್: ನಿತ್ಯಾನಂದನಿಗೆ (Nithyananda) ಭಾರತದಿಂದ ಕಿರುಕುಳ ನೀಡುತ್ತಿಲ್ಲ. ಆದ್ರೆ ಭಾರತದಲ್ಲಿರುವ ಕೆಲವು ಹಿಂದೂ ವಿರೋಧಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಕೈಲಾಸ ಯುನೈಟೆಡ್ ಸ್ಟೇಟ್ಸ್ನ (United States Of Kailasa) ಶಾಶ್ವತ ರಾಯಭಾರಿ ವಿಜಯಾಪ್ರಿಯಾ ನಿತ್ಯಾನಂದ (Vijayapriya Nithyananda) ಸ್ಪಷ್ಟನೆ ನೀಡಿದ್ದಾರೆ.
USK at UN Geneva: Inputs on the Achievement of Sustainability
Participation of the United States of KAILASA in a discussion on the General Comment on Economic, Social and Cultural Rights and Sustainable Development at the United Nations in Geneva
ಇತ್ತೀಚೆಗೆ ಜಿನಿವಾದಲ್ಲಿ ನಡೆದ ವಿಶ್ವಸಂಸ್ಥೆಯ (UN) ಆರ್ಥಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಹಕ್ಕುಗಳ (CRSR) ಮಹಾಸಭೆಯಲ್ಲಿ ಸ್ವಯಂಘೋಷಿತ ದೇವಮಾನವ ಹಾಗೂ ಕೈಲಾಸ ದೇಶದ ಸಂಸ್ಥಾಪಕ ಸ್ವಾಮಿ ನಿತ್ಯಾನಂದನ ಶಿಷ್ಯೆ ಭಾಗವಹಿಸಿದ್ದರು ಎಂದು ಹೇಳಲಾಗಿತ್ತು. ಈ ಸಭೆಯಲ್ಲಿ ನಿತ್ಯಾನಂದಗೆ ತನ್ನ ಜನ್ಮಸ್ಥಳದಿಂದ ಕಿರುಕುಳ ನೀಡಲಾಗುತ್ತಿದೆ ಎಂದು ಹೇಳಿದ್ದರು. ಈ ಕುರಿತು ಸ್ಪಷ್ಟನೆ ನೀಡಿರುವ ನಿತ್ಯಾನಂದನ ಶಿಷ್ಯೆ, ಹಿಂದೂ ವಿರೋಧಿಗಳ ವಿರುದ್ಧ ಕ್ರಮಕ್ಕೆ ಅಗ್ರಹಿಸಿದ್ದಾರೆ.
ಫೆಬ್ರವರಿ 24 ರಂದು ನಡೆದ ಮಹಾಸಭೆಯಲ್ಲಿ ನೀಡಿದ್ದ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ನಿತ್ಯಾನಂದ ತಮ್ಮ ಜನ್ಮಸ್ಥಳದಲ್ಲಿ ಕೆಲವು ಹಿಂದೂ ವಿರೋಧಿಗಳಿಂದ ಕಿರುಕುಳಕ್ಕೆ ಒಳಗಾಗಿದ್ದಾರೆ ಎಂದು ನಾನು ಹೇಳಿದ್ದೆ. ಕೈಲಾಸ ಯುನೈಟೆಡ್ ಸ್ಟೇಟ್ಸ್ ಭಾರತವನ್ನು ಉನ್ನತ ಗೌರವದಿಂದಲೇ ಕಾಣುತ್ತದೆ. ಈಗಲೂ ಭಾರತವನ್ನು ಗುರುಪೀಠವೆಂದೇ ಗೌರವಿಸುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಸ್ ನಿಲ್ದಾಣಕ್ಕೆ ಕಾರು ಡಿಕ್ಕಿ – ಭಾರತೀಯ ಮೂಲದ ವಿದ್ಯಾರ್ಥಿನಿ ಸಾವು
ನಮ್ಮ ಕಳಕಳಿ ಏನಿದ್ದರೂ ಹಿಂದೂ ವಿರೋಧಿ ಅಂಶಗಳ ಕಡೆಗೆ ಮಾತ್ರ ಕೇಂದ್ರೀಕೃತವಾಗಿದೆ. ಹಿಂದೂ ಧರ್ಮ ಮತ್ತು ಕೈಲಾಸದ ಪರಮೋಚ್ಚ ಮಠಾಧೀಶರ ವಿರುದ್ಧ ಹಿಂಸಾಚಾರ ಮುಂದುವರೆಸುವ ಇಂತಹ ಅಂಶಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ನಾವು ಭಾರತ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ತಿಳಿಸಿದ್ದಾರೆ.
ನಿತ್ಯಾನಂದನ ಶಿಷ್ಯೆ ಹೇಳಿದ್ದೇನು?: ಜಿನಿವಾದಲ್ಲಿ ಈಚೆಗೆ ನಡೆದ ವಿಶ್ವಸಂಸ್ಥೆಯ ಆರ್ಥಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಹಕ್ಕುಗಳ (ಸಿಇಎಸ್ಆರ್) ಮಹಾಸಭೆಯಲ್ಲಿ ವಿಶ್ವಸಂಸ್ಥೆಯ ಖಾಯಂ ರಾಯಭಾರಿ ಎಂದು ಹೇಳಿರುವ ವಿಜಯಪ್ರಿಯಾ, ನಿತ್ಯಾನಂದ ತನ್ನ ಜನ್ಮಸ್ಥಳವಾದ ಭಾರತ ದೇಶದಿಂದ ಹಿಂಸೆಗೆ ಒಳಗಾಗುತ್ತಿದ್ದಾರೆ. ಹಾಗಾಗಿ ಹಿಂದೂ ಧರ್ಮದ ಸರ್ವೋಚ್ಛ ಮಠಾಧೀಶರಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದ್ದರು. ಇದನ್ನೂ ಓದಿ: `ಕೈಲಾಸ’ ಹಿಂದೂ ಧರ್ಮದ ಮೊದಲ ಸಾರ್ವಭೌಮ ರಾಜ್ಯ- UN ಮಹಾಸಭೆಯಲ್ಲಿ ನಿತ್ಯಾನಂದ ಶಿಷ್ಯೆ ಪ್ರತಿಪಾದನೆ
ಕೈಲಾಸ ಹಿಂದೂ ಧರ್ಮದ ಮೊದಲ ಸಾರ್ವಭೌಮ ರಾಜ್ಯ. ಅದನ್ನು ಹಿಂದೂ ಧರ್ಮದ ಸರ್ವೋಚ್ಛ ಮಠಾಧೀಶ (ಸುಪ್ರೀಂ ಪಾಂಟಿಫ್ ಆಫ್ ಹಿಂದೂಯಿಸಂ – ಎಸ್ಪಿಹೆಚ್) ನಿತ್ಯಾನಂದ ಪರಮಶಿವಂ ಸ್ಥಾಪಿಸಿದ್ದಾರೆ. ಅವರು ಪ್ರಬುದ್ಧ ಹಿಂದೂ ನಾಗರಿಕತೆ ಮತ್ತು ಆದಿಶೈವ, ಸ್ಥಳೀಯ ಬುಡಕಟ್ಟು ಸೇರಿ ಹಿಂದೂ ಧರ್ಮದ 10 ಸಾವಿರ ಸಂಪ್ರದಾಯಗಳನ್ನ ಪುನರುಜ್ಜೀವನಗೊಳಿಸಿದ್ದಾರೆ. ಕೈಲಾಸ ಸುಸ್ಥಿರ ಅಭಿವೃದ್ಧಿಯೊಂದಿಗೆ ಯಶಸ್ವಿಯಾಗಿದೆ ಎಂದು ಪ್ರತಿಪಾದಿಸಿದ್ದರು.
ನಾನಾ ದೇಶಗಳಲ್ಲಿ ಮಹಿಳೆಯರು ಅನುಭವಿಸುತ್ತಿರುವ ಹಿಂಸೆಗಳು, ಪುರುಷ ಪ್ರಧಾನ ಸಮಾಜಗಳಲ್ಲಿ ಒಳಗಾಗುತ್ತಿರುವ ಅಪಮಾನಗಳ ಬಗ್ಗೆ ಪ್ರತಿಪಾದಿಸಿದ್ದಾರೆ. ಜಗತ್ತಿನಲ್ಲಿ ಶೇ.82ರಷ್ಟು ಮಹಿಳೆಯರು ಪದೇ ಪದೇ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ಪುರುಷ ಪ್ರಧಾನ ವ್ಯವಸ್ಥೆಯನ್ನು ಪ್ರಶ್ನಿಸಿದ್ದಕ್ಕಾಗಿ ಶೇ. 42ರಷ್ಟು ಮಹಿಳೆಯರು, ಅತ್ಯಾಚಾರ ಸೇರಿದಂತೆ ಅನೇಕ ದೌರ್ಜನ್ಯಗಳಿಗೆ ಒಳಗಾಗುತ್ತಿದ್ದಾರೆ ಎಂದು ಹೇಳಿದ್ದರು.
ಬರ್ರೆನ್: ಜಿನಿವಾದಲ್ಲಿ ಈಚೆಗೆ ನಡೆದ ವಿಶ್ವಸಂಸ್ಥೆಯ ಆರ್ಥಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಹಕ್ಕುಗಳ (CESR) ಮಹಾಸಭೆಯಲ್ಲಿ ಸ್ವಯಂಘೋಷಿತ ದೇವಮಾನವ ಹಾಗೂ ಕೈಲಾಸ ದೇಶದ ಸಂಸ್ಥಾಪಕ ಸ್ವಾಮಿ ನಿತ್ಯಾನಂದನ (Swamy Nithyananda) ಶಿಷ್ಯೆ ಭಾಗವಹಿಸಿದ್ದರು ಎಂದು ಹೇಳಲಾಗಿದೆ.
USK at UN Geneva: Inputs on the Achievement of Sustainability
Participation of the United States of KAILASA in a discussion on the General Comment on Economic, Social and Cultural Rights and Sustainable Development at the United Nations in Geneva
ವಿಶ್ವಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ ಮಹಾಸಭೆಯಲ್ಲಿ (United Nations Meeting) ಅಮೆರಿಕ, ಯುಕೆ, ಸ್ಲೊವೇನಿಯಾ, ಫ್ರಾನ್ಸ್ ಮುಂತಾದ ಕಡೆಗಳಲ್ಲಿ ನಿತ್ಯಾನಂದ ಆಶ್ರಮಗಳನ್ನು ನಡೆಸುತ್ತಿರುವ ಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸದ (United States of Kailasa) ಮಹಿಳಾ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಅಲ್ಲಿ ಸಾಮಾಜಿಕ, ಆರ್ಥಿಕ ವಿಚಾರಗಳನ್ನು ಚರ್ಚಿಸಲಾಯಿತು ಎಂದು ಕೈಲಾಸ ಎಸ್ಪಿಹೆಚ್ ನಿತ್ಯಾನಂದ ಹೆಸರಿನ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಸಹ ಹಂಚಿಕೊಳ್ಳಲಾಗಿದೆ.
ಇದೇ ಸಭೆಯಲ್ಲಿ ವಿಶ್ವಸಂಸ್ಥೆಯ ಖಾಯಂ ರಾಯಭಾರಿ ಎಂದು ಹೇಳಿರುವ ವಿಜಯಪ್ರಿಯಾ (Vijayapriya Nithyananda) ಸಹ ಭಾಗವಹಿಸಿದ್ದರು. ಅಲ್ಲಿ ನಿತ್ಯಾನಂದ ತನ್ನ ಜನ್ಮಸ್ಥಳವಾದ ಭಾರತ ದೇಶದಿಂದ ಹಿಂಸೆಗೆ ಒಳಗಾಗುತ್ತಿದ್ದಾರೆ. ಹಾಗಾಗಿ ಹಿಂದೂ ಧರ್ಮದ ಸರ್ವೋಚ್ಛ ಮಠಾಧೀಶರಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಪಾಕ್, ಚೀನಾದಲ್ಲಿ ತರಬೇತಿ ಪಡೆದ ಡೇಂಜರಸ್ ವ್ಯಕ್ತಿ ಭಾರತಕ್ಕೆ ಎಂಟ್ರಿ – NIA ಅಲರ್ಟ್
ಕೈಲಾಸ ಹಿಂದೂ ಧರ್ಮದ (Hinduism) ಮೊದಲ ಸಾರ್ವಭೌಮ ರಾಜ್ಯ. ಅದನ್ನು ಹಿಂದೂ ಧರ್ಮದ ಸರ್ವೋಚ್ಛ ಮಠಾಧೀಶ (ಸುಪ್ರೀಂ ಪಾಂಟಿಫ್ ಆಫ್ ಹಿಂದೂಯಿಸಂ – SPH) ನಿತ್ಯಾನಂದ ಪರಮಶಿವಂ ಸ್ಥಾಪಿಸಿದ್ದಾರೆ. ಅವರು ಪ್ರಬುದ್ಧ ಹಿಂದೂ ನಾಗರಿಕತೆ ಮತ್ತು ಆದಿಶೈವ, ಸ್ಥಳೀಯ ಬುಡಕಟ್ಟು ಸೇರಿ ಹಿಂದೂ ಧರ್ಮದ 10 ಸಾವಿರ ಸಂಪ್ರದಾಯಗಳನ್ನ ಪುನರುಜ್ಜೀವನಗೊಳಿಸಿದ್ದಾರೆ. ಕೈಲಾಸ ಸುಸ್ಥಿರ ಅಭಿವೃದ್ಧಿಯೊಂದಿಗೆ ಯಶಸ್ವಿಯಾಗಿದೆ ಎಂದು ಪ್ರತಿಪಾದಿಸಿದರು. ಇದನ್ನೂ ಓದಿ: ಉಗ್ರನನ್ನು ಹತ್ಯೆಗೈದ ಭದ್ರತಾ ಪಡೆ
ಇತರ ಪ್ರತಿನಿಧಿಗಳು ಮಾತನಾಡಿ, ನಾನಾ ದೇಶಗಳಲ್ಲಿ ಮಹಿಳೆಯರು ಅನುಭವಿಸುತ್ತಿರುವ ಹಿಂಸೆಗಳು, ಪುರುಷ ಪ್ರಧಾನ ಸಮಾಜಗಳಲ್ಲಿ ಒಳಗಾಗುತ್ತಿರುವ ಅಪಮಾನಗಳ ಬಗ್ಗೆ ಪ್ರತಿಪಾದಿಸಿದ್ದಾರೆ. ಜಗತ್ತಿನಲ್ಲಿ ಶೇ.82ರಷ್ಟು ಮಹಿಳೆಯರು ಪದೇ ಪದೇ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ಪುರುಷ ಪ್ರಧಾನ ವ್ಯವಸ್ಥೆಯನ್ನು ಪ್ರಶ್ನಿಸಿದ್ದಕ್ಕಾಗಿ ಶೇ. 42ರಷ್ಟು ಮಹಿಳೆಯರು, ಅತ್ಯಾಚಾರ ಸೇರಿದಂತೆ ಅನೇಕ ದೌರ್ಜನ್ಯಗಳಿಗೆ ಒಳಗಾಗುತ್ತಿದ್ದಾರೆ ಎಂದು ಹೇಳಿದರು.
ಅಜ್ಞಾನ ಸ್ಥಳದಲ್ಲಿ ಕೈಲಾಸ ದೇಶ ಸ್ಥಾಪಿಸಿರುವುದಾಗಿ ಹೇಳಿಕೊಂಡಿದ್ದಾರೆ. ಆದರೆ ಈ ದೇಶವನ್ನು ವಿಶ್ವಸಂಸ್ಥೆ ಗುರುತಿಸಿದೆಯೇ ಎಂಬುದು ಅಸ್ಪಷ್ಟವಾಗಿದೆ.
ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಘೋಷಿತ ದೇವಮಾನವ ನಿತ್ಯಾನಂದ ವಿರುದ್ಧ 2010ರಲ್ಲಿ ಕರ್ನಾಟಕ ಸೆಷನ್ಸ್ ಕೋರ್ಟ್ ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು. ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಗುಜರಾತ್ ಆಶ್ರಮದಲ್ಲಿಯೂ ಚಿತ್ರಹಿಂಸೆ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಗಳು ಕೇಳಿ ಬಂದಿತು. ಈ ಕುರಿತು ತನಿಖೆ ನಡೆಸಿದ ಗುಜರಾತ್ ಪೊಲೀಸರು, ನಿತ್ಯಾನಂದ ದೇಶದಿಂದಲೇ ತಲೆ ಮರೆಸಿಕೊಂಡಿರುವುದಾಗಿ ವರದಿ ಮಾಡಿದ್ದರು.
ಗಾಂಧಿನಗರ: ತನ್ನನ್ನು ತಾನೇ ಮದುವೆಯಾಗುತ್ತೇನೆ ಎಂದು ಹೇಳಿ ಸೋಶಿಯಲ್ ಮೀಡಿಯಾ ಸೇರಿದಂತೆ ಎಲ್ಲಕಡೆ ಭಾರೀ ಸುದ್ದಿಯಾಗುತ್ತಿರುವ ಕ್ಷಮಾಗೆ ಸಂಕಷ್ಟ ಎದುರಾಗಿದೆ. ಕ್ಷಮಾ ಮದುವೆ ವಿರೋಧಿಸಿ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ.
ವಡೋದರದ 24 ವರ್ಷದ ಕ್ಷಮಾ ಜೂನ್ 11 ರಂದು ಗೋತ್ರಿಯ ದೇವಸ್ಥಾನದಲ್ಲಿ ಐದು ವ್ರತಗಳನ್ನು ಮಾಡುವ ಮೂಲಕ ವಿವಾಹ ಮಾಡಿಕೊಳ್ಳುವುದಾಗಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ತಿಳಿಸಿದ್ದಳು. ದೇವಸ್ಥಾನದಲ್ಲಿ ಮದುವೆ ಆಗುತ್ತಿರುವ ವಿಚಾರಕ್ಕೆ ಬಿಜೆಪಿ ನಗರ ಘಟಕದ ಉಪ ಮುಖ್ಯಸ್ಥೆ ಸುನೀತಾ ಶುಕ್ಲಾ ತೀವ್ರವಾಗಿ ವಿರೋಧ ವ್ಯಕ್ತಪಡಿದ್ದಾರೆ. ಇದನ್ನೂ ಓದಿ: ತನ್ನನ್ನು ತಾನೇ ಮದುವೆಯಾಗುತ್ತಿದ್ದಾಳೆ ಭಾರತದ ಮೊದಲ ಯುವತಿ – ಗೋವಾದಲ್ಲಿ ಹನಿಮೂನ್
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇವಸ್ಥಾನದಲ್ಲಿ ಈ ರೀತಿಯ ಮದುವೆಗಳಿಗೆ ನಾವು ಅನುಮತಿ ನೀಡುವುದಿಲ್ಲ. ಇಂತಹ ವಿವಾಹಗಳು ಹಿಂದೂ ಧರ್ಮಕ್ಕೆ ವಿರುದ್ಧವಾಗಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ರೀತಿಯ ಮದುವೆ ಹಿಂದೂ ಸಂಪ್ರದಾಯಕ್ಕೆ ವಿರುದ್ಧವಾಗಿದೆ. ಇದರಿಂದ ಹಿಂದೂಗಳ ಜನಸಂಖ್ಯೆ ಕಡಿಮೆಯಾಗುತ್ತದೆ. ಕ್ಷಮಾ ಮಾನಸಿಕ ಅಸ್ವಸ್ಥೆ ಎಂದು ಟೀಕಿಸಿದರು. ಹಿಂದೂ ಸಂಸ್ಕøತಿಯಲ್ಲಿ ಎಲ್ಲಿಯೂ ಹುಡುಗ ಹುಡುಗನನ್ನು ಮದುವೆಯಾಗಬಹುದು ಅಥವಾ ಹುಡುಗಿ ಹುಡುಗಿಯನ್ನು ಮದುವೆಯಾಗಬಹುದು ಎಂದು ಬರೆಯಲಾಗಿಲ್ಲ. ನಾನು ಆಕೆ ಮದುವೆಯಾಗಲು ಆಯ್ಕೆ ಮಾಡಿಕೊಂಡಿರುವ ಜಾಗವನ್ನು ಮಾತ್ರ ವಿರೋಧಿಸುತ್ತೇನೆ ಎಂದರು.
ಆಕೆಯನ್ನು ಯಾವುದೇ ದೇವಸ್ಥಾನದಲ್ಲಿ ಮದುವೆಯಾಗಲು ನಾವು ಅನುಮತಿಸುವುದಿಲ್ಲ. ಧರ್ಮಕ್ಕೆ ವಿರುದ್ಧವಾಗಿ ಏನಾದರೂ ನಡೆದರೆ, ಯಾವುದೇ ಕಾನೂನು ಜಾರಿಯಾಗುವುದಿಲ್ಲ ಎಂದು ಕಿಡಿಕಾರಿದರು.
Gujarat | I'm against the choice of venue, she'll not be allowed to marry herself in any temple. Such marriages are against Hinduism. This will reduce the population of Hindus. If anything goes against religion then no law will prevail: BJP leader Sunita Shukla (03.06) https://t.co/Jf0y13WOiEpic.twitter.com/3Cus9JMwsR
ಹೆಚ್ಚಿನ ಹುಡುಗಿಯರು ತಮ್ಮನ್ನು ಮದುವೆಯಾಗಬೇಕು ಎನ್ನುವ ಹುಡುಗನ ಬಗ್ಗೆ ನಾನಾ ರೀತಿಯಲ್ಲಿ ಕನಸು ಕಾಣುತ್ತಾರೆ. ಆದರೆ ಕ್ಷಮಾ ತನ್ನ ವರನನ್ನು ತನ್ನೊಳಗೆ ಕಂಡುಕೊಂಡಳು. ಆಕೆ ತನ್ನನ್ನು ತಾನೇ ತುಂಬಾ ಇಷ್ಟಪಡುತ್ತಾಳೆ. ಈ ಹಿನ್ನೆಲೆ ಕ್ಷಮಾ ಬೇರೆಯವರನ್ನು ಮದುವೆಯಾಗಲು ಬಯಸಿಲ್ಲ. ಆದ್ದರಿಂದ ಅವಳು ಸ್ವಯಂ ವಿವಾಹ ಮಾಡಿಕೊಳ್ಳಲು ನಿರ್ಧರಿಸಿದ್ದಾಳೆ.
ಬೆಳಗಾವಿ: ಕರ್ನಾಟಕದಲ್ಲಿ 2,500 ಸಾವಿರ ವರ್ಷಗಳಿಂದ ಕನ್ನಡ ನಾಡಿನಲ್ಲಿ, ಕನ್ನಡ ಉಳಿಸುವ ಬೆಳೆಸುವ ಕೆಲಸ ಅನೇಕ ಮಹನೀಯರು ಮಾಡಿದ್ದಾರೆ. ಸೂರ್ಯ-ಚಂದ್ರ ಇರುವವರೆಗೂ ಕನ್ನಡ ಭಾಷೆ ಇರುತ್ತದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭೂಮಿ ಮೇಲೆ ಜನರು ಇರೋವರೆಗೂ ಕನ್ನಡ ಭಾಷೆ ಇರುತ್ತದೆ. ನಮ್ಮನ್ನು ಪರಕೀಯರು 600 ವರ್ಷಗಳ ಕಾಲ ಆಳಿದ್ದಾರೆ. ಕನ್ನಡ ಭಾಷೆಗೆ ಯಾರ ಜಟಾಪಟಿನೂ ಅಗತ್ಯತೆ ಇಲ್ಲ. ದೇಶದಲ್ಲಿ ಆಯಾ ಪ್ರದೇಶ, ರಾಜ್ಯಗಳಲ್ಲಿ ಮಾತೃಭಾಷೆಗಳಿರುತ್ತವೆ. ಅದೇ ರೀತಿ ಕರ್ನಾಟಕದಲ್ಲೂ ಕನ್ನಡ ಮಾತೃಭಾಷೆ ಇದೆ ಎಂದರು. ಇದನ್ನೂ ಓದಿ: 90 ವರ್ಷದ ಬುದ್ಧಿಮಾಂದ್ಯ ತಾಯಿ, ಮಗನನ್ನು ಗುರುತಿಸುವ ಭಾವನಾತ್ಮಕ ವೀಡಿಯೋ ವೈರಲ್
ಕನ್ನಡ ಭಾಷೆ ನಮಗೆ ತಾಯಿ ಸಮಾನವಾಗಿದೆ. ಹೀಗಾಗಿ 2,500 ಸಾವಿರ ವರ್ಷದಿಂದ ಈ ನಾಡಿನಲ್ಲಿ ಕನ್ನಡ ಉಳಿಸುವ ಬೆಳೆಸುವ ಕೆಲಸ ಅನೇಕರು ಮಾಡಿದ್ದಾರೆ. ಸೂರ್ಯ-ಚಂದ್ರ ಇರುವವರೆಗೂ ಕನ್ನಡ ಭಾಷೆ ಇರುತ್ತದೆ. ಭೂಮಿ ಮೇಲೆ ಜನರು ಇರೋವರೆಗೂ ಕನ್ನಡ ಭಾಷೆ ಇರುತ್ತದೆ ಎಂದು ತಿಳಿಸಿದರು.