Tag: hiv

  • ಚಿತ್ರದುರ್ಗ | ಸಹೋದರನಿಗೆ HIV – ಕುಟುಂಬದ ಮರ್ಯಾದೆಗೆ ಅಂಜಿ ತಮ್ಮನನ್ನೇ ಕೊಲೆಗೈದ ಅಕ್ಕ

    ಚಿತ್ರದುರ್ಗ | ಸಹೋದರನಿಗೆ HIV – ಕುಟುಂಬದ ಮರ್ಯಾದೆಗೆ ಅಂಜಿ ತಮ್ಮನನ್ನೇ ಕೊಲೆಗೈದ ಅಕ್ಕ

    ಚಿತ್ರದುರ್ಗ: ಹೆಚ್‌ಐವಿ (HIV) ಪೀಡಿತನೆಂಬ ಕಾರಣಕ್ಕೆ ಸ್ವಂತ ತಮ್ಮನನ್ನೇ ಅಕ್ಕ ತನ್ನ ಗಂಡನೊಂದಿಗೆ ಸೇರಿ ಕೊಲೆಗೈದಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಹೊಳಲ್ಕೆರೆ ತಾಲೂಕಿನ ದುಮ್ಮಿ ಗ್ರಾಮದಲ್ಲಿ ನಡೆದಿದೆ.

    ಮಲ್ಲಿಕಾರ್ಜುನ್ (23) ಕೊಲೆಯಾದ ಸಹೋದರ, ಅಕ್ಕ ನಿಶಾ ಹಾಗೂ ಆಕೆಯ ಪತಿ ಮಂಜುನಾಥ್ ಕೊಲೆ ಆರೋಪಿ. ದುಮ್ಮಿ ಗ್ರಾಮದ ನಾಗರಾಜ್‌ ಎನ್ನುವವರ ಪುತ್ರ ಮಲ್ಲಿಕಾರ್ಜುನ್‌ ಬೆಂಗಳೂರಿನ (Bengaluru) ಗಾರ್ಮೆಂರ್ಟ್‌ನಲ್ಲಿ ಕೆಲಸ ಮಾಡಿಕೊಂಡಿದ್ದ. ಇದೇ ಜುಲೈ 23ರಂದು ತನ್ನ ಸ್ವಗ್ರಾಮವಾದ ದುಮ್ಮಿಗೆ ಕಾರಲ್ಲಿ ಸ್ನೇಹಿತರೊಂದಿಗೆ ಬರುತ್ತಿದ್ದ‌. ಆಗ ಹಿರಿಯೂರು ತಾಲ್ಲೂಕಿನ ಐಮಂಗಲ ಬಳಿ ಆದ ಕಾರಿನ ಅಪಘಾತದಲ್ಲಿ ಆತನ ಕಾಲು ಮುರಿವಾಗಿ ದಾವಣಗೆರೆ ಆಸ್ಪತ್ರೆಗೆ ದಾಖಲಾಗಿದ್ದ. ಇದನ್ನೂ ಓದಿ: ಧಾರವಾಡ‌ | ಬಿಜೆಪಿ ಮಹಿಳಾ ಮೋರ್ಚಾ ಮುಖಂಡೆಯ ಪತಿ ನೇಣಿಗೆ ಶರಣು‌

    ಅಪಘಾತಗೊಂಡಿದ್ದ ವೇಳೆ ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ ನೀಡಲಾಗಿತ್ತು. ರಕ್ತ ಪರೀಕ್ಷೆ ವೇಳೆ ಮಲ್ಲಿಕಾರ್ಜುನ್‌ಗೆ ಹೆಚ್‌ಐವಿ ಕಾಯಿಲೆ ಇದೆ ಅನ್ನೋದು ಗೊತ್ತಾಯಿತು. ಜುಲೈ 25ರಂದು ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆಯಿಂದ‌ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯುವ ನೆಪದಲ್ಲಿ ಅಂಬುಲೆನ್ಸ್‌ನಲ್ಲೇ ಮಲ್ಲಿಕಾರ್ಜುನನ್ನ ಅಕ್ಕನೇ ಕೊಲೆಗೈದಿದ್ದಾಳೆ. ಅಕ್ಕ ನಿಶಾ ಹಾಗೂ ಆಕೆಯ ಪತಿ ಮಂಜುನಾಥ್ ಸೇರಿ ಕೊಲೆಗೈದಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಹುಬ್ಬಳ್ಳಿ | ಸಿಲಿಂಡರ್ ದುರಂತ – ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕಿ ಸಾವು

    ಗೊತ್ತಾಗಿದ್ದು ಹೇಗೆ?
    ಅಂತ್ಯಕ್ರಿಯೆ ವೇಳೆ ಮಲ್ಲಿಕಾರ್ಜುನ್‌ನ ಕುತ್ತಿಗೆ ಮೇಲಿದ್ದ ಮಾರ್ಕ್‌ ಕಂಡು ಸಂಬಂಧಿಕರು ಹಾಗು ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದರು. ಬಳಿಕ ಮೃತನ ತಂದೆ ನಾಗರಾಜ್‌ ಹೊಳಲ್ಕೆರೆ ಪೊಲೀಸ್ ಠಾಣೆಗೆ ದೂರು ನೀಡಿರು. ತನಿಖೆ ವೇಳೆ ಮಲ್ಲಿಕಾರ್ಜುನ HIV ಪೀಡಿತ ಎಂಬ ಕಾರಣಕ್ಕೆ ಮರ್ಯಾದೆಗೆ ಅಂಜಿ ಸಹೋದರಿಯೇ ಹತ್ಯೆಗೈದಿರುವ ಸತ್ಯ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಸವಾರರ ದಾರುಣ ಸಾವು

    ಅಂತರ್ಜಾತಿ ವಿವಾಹವಾಗಿದ್ದ ಮೃತನ ಸಹೋದರಿ ನಿಶಾ ಆಸ್ತಿ ಆಸೆಗೆ ಕೊಲೆಗೈದಿರುವ ಆರೋಪ ಕೂಡ ಕೇಳಿಬಂದಿದೆ. ಈ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರಿಂದ ಆಗ್ರಹ ಕೇಳಿಬಂದಿದೆ. ಈಸಂಬಂಧ ಹೊಳಲ್ಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿಶಾಳನ್ನ ಬಂಧಿಸಿರುವ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಒಂದೇ ಶತಕ, ಹಲವು ದಾಖಲೆ – ಡಾನ್‌ ಬ್ರಾಡ್ಮನ್, ಗವಾಸ್ಕರ್‌ ದಾಖಲೆ ಸರಿಗಟ್ಟಿದ ಗಿಲ್‌

  • ತಾಯಿ-ಮಗ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್; ಮಗನಿಗಿತ್ತು ಹೆಚ್‌ಐವಿ ಸೋಂಕು

    ತಾಯಿ-ಮಗ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್; ಮಗನಿಗಿತ್ತು ಹೆಚ್‌ಐವಿ ಸೋಂಕು

    – ಪತ್ನಿ ಕುಟುಂಬಸ್ಥರಿಂದಲೇ ಸ್ಫೋಟಕ ಮಾಹಿತಿ ಬಹಿರಂಗ

    ಹಾಸನ: ಕೌಟುಂಬಿಕ ಕಲಹ (Family Feud) ಹಿನ್ನೆಲೆ ಹಾಸನ (Hassan) ಜಿಲ್ಲೆಯ ಚನ್ನರಾಯಪಟ್ಟಣ (Channarayapatna) ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಇವರಿಬ್ಬರ ಸಾವಿಗೆ ಅತ್ತೆ-ಸೊಸೆ ನಡುವಿನ ಹೊಂದಾಣಿಕೆ ಕಾರಣ ಅಲ್ಲ ಎಂಬ ಸ್ಫೋಟಕ ಸತ್ಯ ಹೊರಬಿದ್ದಿದೆ.

    ಮೃತ ಭರತ್ ಹೆಚ್‌ಐವಿ ಸೋಂಕಿತನಾಗಿದ್ದ ಎಂಬ ಸತ್ಯವನ್ನು ಆತನ ಪತ್ನಿ ಕುಟುಂಬದವರು ಇದೀಗ ಬಹಿರಂಗಪಡಿಸಿದ್ದಾರೆ. ಪತ್ನಿ ಕುಟುಂಬಸ್ಥರು ಭರತ್‌ಗೆ 8 ತಿಂಗಳ ಹಿಂದೆ ನಾಲ್ಕು ಲಕ್ಷ ಹಣ, 100 ಗ್ರಾಂ ಚಿನ್ನ ನೀಡಿ ಮಗಳನ್ನು ಮದುವೆ ಮಾಡಿಕೊಟ್ಟಿದ್ದರು. ಆದರೆ ಭರತ್ ಮೂರು ವರ್ಷಗಳ ಹಿಂದಿನಿಂದಲೇ ಹೆಚ್‌ಐವಿ ಸೋಂಕಿತನಾಗಿದ್ದ. ಮಾರಣಾಂತಿಕ ಕಾಯಿಲೆ ಸೋಂಕು ತಗುಲಿರುವುದನ್ನು ಮುಚ್ಚಿಟ್ಟು ಮದುವೆಯಾಗಿದ್ದ ಭರತ್, ಮದುವೆಯಾದ ಹದಿನೈದು ದಿನ ಮಾತ್ರ ಪತ್ನಿ ಜೊತೆ ಸಂಸಾರ ಮಾಡಿದ್ದ. ಬಳಿಕ ಪತ್ನಿಯಿಂದ ಅಂತರ ಕಾಯ್ದುಕೊಂಡಿದ್ದ. ಅಲ್ಲದೇ ಈ ವಿಚಾರವನ್ನು ಪತ್ನಿಯಿಂದ ಮುಚ್ಚಿಟ್ಟು ಕಾಯಿಲೆಗೆ ಮಾತ್ರೆ ತೆಗೆದುಕೊಳ್ಳುತ್ತಿದ್ದ. ಇದನ್ನೂ ಓದಿ: ಬೆಸ್ಟ್‌ ಆಕ್ಟಿಂಗ್‌ ಆಸ್ಕರ್‌ ಅವಾರ್ಡ್‌ ಯಾರಿಗೆ ಹೋಗುತ್ತೆ ಅಂದ್ರೆ.. – ದರ್ಶನ್ ಅನ್‌ಫಾಲೋ ಮಾಡಿದ ಬೆನ್ನಲ್ಲೇ ಸುಮಲತಾ ಪೋಸ್ಟ್

    ತನ್ನ ಹುಳುಕು ಮುಚ್ಚಿಕೊಳ್ಳಲು ಪಂಚಾಯ್ತಿ ಸೇರಿಸಿ ನನ್ನ ಪತ್ನಿ ಹೆಣ್ಣೇ ಅಲ್ಲ, ಮದ್ಯಪಾನ ಮಾಡುತ್ತಾಳೆ, ಮಾದಕ ವಸ್ತು ತೆಗೆದುಕೊಳ್ಳುತ್ತಾಳೆ ಎಂದು ಭರತ್ ಸುಳ್ಳು ಆರೋಪ ಮಾಡಿದ್ದ. ಕೆಲವು ದಿನಗಳ ಕಾಲ ಸಂಬಂಧಿಕರ ಮನೆಯಲ್ಲಿ ಕೂಡ ಪತ್ನಿಯನ್ನು ಉಳಿಸಿದ್ದ. ಭರತ್ ವಂಚನೆ ತಿಳಿಯದೇ ಮತ್ತೊಂದು ಪಂಚಾಯ್ತಿ ನಡೆಸಿ ಪತ್ನಿ ಕುಟುಂಬಸ್ಥರು ಆಕೆಗೆ ಬುದ್ಧಿವಾದ ಹೇಳಿ ಗಂಡನ ಮನೆಗೆ ಕಳುಹಿಸಿದ್ದರು. ಆದರೆ ಭರತ್ ತನ್ನ ಪತ್ನಿ ತಪ್ಪು ಮಾಡದೇ ಇದ್ದರೂ ಮತ್ತೆ ತವರು ಮನೆಗೆ ಕಳುಹಿಸಿದ್ದ. ಇದನ್ನೂ ಓದಿ: ಪ್ರಧಾನಿ ಮೋದಿ ನನ್ನ ನೆಚ್ಚಿನ ನಟ: ಹೇಳಿಕೆ ನೀಡಿ ಪೇಚಿಗೆ ಸಿಲುಕಿದ ರಾಜಸ್ಥಾನ ಸಿಎಂ

    ಭರತ್ ಹೆಚ್‌ಐವಿ ರೋಗಕ್ಕೆ ತೆಗೆದುಕೊಳ್ಳುವ ಮಾತ್ರೆ ಡಬ್ಬಿಯನ್ನು ಸದಾ ಕೊರಳಿಗೆ ಕಟ್ಟಿಕೊಂಡು ತಿರುಗುತ್ತಿದ್ದ. ತನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡಿದ್ದು ಹಾಗೂ ಮಾತ್ರೆ ತೆಗೆದುಕೊಳ್ಳುವ ಬಗ್ಗೆ ಅನುಮಾನ ಪಟ್ಟ ಪತ್ನಿ, ಭರತ್ ಸ್ನಾನಕ್ಕೆ ಹೋಗಿದ್ದಾಗ ಮಾತ್ರೆಯ ಫೋಟೋ ತೆಗೆದು ತನ್ನ ಅಕ್ಕನಿಗೆ ಕಳುಹಿಸಿದ್ದಳು. ಆಕೆಯ ಸಹೋದರಿ ಮಾತ್ರೆಯ ಫೋಟೋಗಳನ್ನು ತನಗೆ ಪರಿಚಯ ಇರುವ ನರ್ಸ್‌ಗೆ ಕಳುಹಿಸಿದ್ದರು. ಇದನ್ನು ಪರಿಶೀಲಿಸಿದ ನರ್ಸ್ ಇದು ಹೆಚ್‌ಐವಿ ಸೋಂಕಿತರು ತೆಗೆದುಕೊಳ್ಳುವ ಮಾತ್ರೆ ಎಂದು ತಿಳಿಸಿದ್ದಾರೆ. ಇದರಿಂದ ಭರತ್ ಹೆಚ್‌ಐವಿ ಸೋಂಕಿತ ಎಂದು ಪತ್ನಿ ಕುಟುಂಬಸ್ಥರು ಅನುಮಾನಗೊಂಡಿದ್ದಾರೆ. ಇದನ್ನೂ ಓದಿ: ಬಸ್, ಮೆಟ್ರೋ ಬಳಿಕ ಪ್ರಯಾಣಿಕರಿಗೆ ಮತ್ತೊಂದು ಶಾಕ್ – ಇಂದೇ ಫೈನಲ್ ಆಗುತ್ತಾ ಆಟೋ ದರ ಏರಿಕೆ?

    ಬಳಿಕ ಎರಡೂ ಕಡೆಯ ಕುಟುಂಬಸ್ಥರಿಂದ ಮತ್ತೊಂದು ರಾಜಿ ಪಂಚಾಯ್ತಿ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಭರತ್ ಆಧಾರ್ ಕಾರ್ಡ್ ತರಬೇಕು. ಇಬ್ಬರೂ ಮೆಡಿಕಲ್ ಟೆಸ್ಟ್‌ಗೆ ಒಳಪಡಬೇಕು ಎಂದು ನಿರ್ಧಾರ ಮಾಡಿ ಸೋಮವಾರ ಮೆಡಿಕಲ್ ಟೆಸ್ಟ್‌ಗೆ ದಿನಾಂಕ ನಿಗದಿ ಮಾಡಲಾಗಿತ್ತು. ಆದರೆ ಭರತ್ ಆಧಾರ್ ಕಾರ್ಡ್ ಕೊಡದೇ ಸತಾಯಿಸಿದ್ದ. ಪಂಚಾಯ್ತಿ ನಡೆದರೆ ತಾನು ಮುಚಿಟ್ಟಿದ್ದ ಎಲ್ಲಾ ಸತ್ಯ ಬಯಲಾಗಲಿದೆ ಎಂಭ ಭಯದಿಂದ ಭರತ್ ಮಾ.9 ರಂದು ರಾತ್ರಿ ಬೆಂಗಳೂರಿನಿಂದ ತಾಯಿ ಜೊತೆ ದಿಡಿಗದ ಸಂಬಂಧಿಕರ ಮನೆಗೆ ಬಂದಿದ್ದ. ಬಳಿಕ ಸಂಬಂಧಿಕರಿಂದ ಬೈಕ್ ಪಡೆದು ಕಬ್ಬಳಿ ಮನೆಗೆ ಬಂದು ಅಲ್ಲಿಂದ ನೆರಲೆಕೆರೆ ಗ್ರಾಮದಲ್ಲಿರುವ ಅಜ್ಜಿ ಮನೆಗೆ ತಾಯಿ ಮಗ ತೆರಳಿದ್ದರು. 100 ಗ್ರಾಂ ಒಡವೆ, 30 ಗ್ರಾಂ ಚೈನು ಎಲ್ಲವನ್ನೂ ಅಜ್ಜಿಗೆ ಕೊಟ್ಟು ಅವರ ಆಶೀರ್ವಾದ ಪಡೆದು ಭರತ್ ಹಾಗೂ ತಾಯಿ ಮರಳಿ ಗ್ರಾಮಕ್ಕೆ ಬಂದಿದ್ದರು. ಮಾ.10ರ ಮುಂಜಾನೆ 3:15 ರಿಂದ 4 ಗಂಟೆ ನಡುವೆ ಗ್ರಾಮದ ನೀರಿನ ಕಟ್ಟೆಗೆ ಬಿದ್ದು ತಾಯಿ-ಮಗ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ಭರತ್ ತಾಯಿ ಜಯಂತಿ ಗ್ರಾಮದ ದೇವರಿಗೆ ಕೈಮುಗಿದು ಹೋಗಿದ್ದರು. ಇದನ್ನೂ ಓದಿ: ಕೆಂಪು ಮೆಣಸಿನಕಾಯಿಗೆ ಬೆಂಬಲ ಬೆಲೆ – ಕರ್ನಾಟಕಕ್ಕೂ ವಿಸ್ತರಿಸಲು ಸಚಿವ ಪ್ರಹ್ಲಾದ್ ಜೋಶಿ ಒತ್ತಾಯ

    ಭರತ್ ತಾಯಿ ಜಯಂತಿ ಅವರಿಗೆ ಸೇರಿದ್ದ 150 ತೆಂಗಿನ ಮರ, 2 ಎಕರೆ ಹೊಲ ಮತ್ತು 1 ಮನೆ ಮತ್ತು ಆಸ್ತಿ ಲಪಟಾಯಿಸಲು ಜಯಂತಿ ಸಂಬಂಧಿಕರಿಂದ ಭರತ್ ಪತ್ನಿ ಮೇಲೆ ಇಲ್ಲಸಲ್ಲದ ಆರೋಪ ಮಾಡಿದ್ದಾರೆ ಎಂದು ಪತ್ನಿ ಕುಟುಂಬಸ್ಥರು ತಿಳಿಸಿದ್ದು, ಭರತ್‌ನಿಂದ ಮಗಳ ಬಾಳು ಹಾಳಾಗಿದೆ ಎಂದು ಕಣ್ಣೀರಿಡುತ್ತಿದ್ದಾರೆ. ಸದ್ಯ ಭರತ್ ಪತ್ನಿಯನ್ನು ಆಕೆಯ ಕುಟುಂಬಸ್ಥರು ಹೆಚ್‌ಐವಿ ಪರೀಕ್ಷೆಗೆ ಒಳಪಡಿಸಿದ್ದು, ನೆಗೆಟಿವ್ ರಿಪೋರ್ಟ್ ಬಂದಿದೆ. ಆದರೆ ಭರತ್ ಪತ್ನಿಯ ಮಾನಸಿಕ ಕಿರುಕುಳ, ಹಠಮಾರಿತನದಿಂದ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಾಯಿ ಜಯಂತಿ ಸಂಬಂಧಿಕರು ಬಿಂಬಿಸಿದ್ದಾರೆ. ತಾಯಿ-ಮಗನ ಸಾವಿಗೆ ನಮ್ಮ ಮಗಳು ಕಾರಣಳಲ್ಲ ಎಂದು ಕುಟುಂಬಸ್ಥರು ಸ್ಪಷ್ಟನೆ ನೀಡಿದ್ದಾರೆ. ಸದ್ಯ ತಾಯಿ-ಮಗನ ಮೃತದೇಹ ನೋಡಲು ಭರತ್ ಸಂಬಂಧಿಕರು ಆತನ ಪತ್ನಿ ಹಾಗೂ ಕುಟುಂಬಸ್ಥರಿಗೆ ಅವಕಾಶ ನೀಡಿಲ್ಲ. ಇದನ್ನೂ ಓದಿ: EXCLUSIVE |ರನ್ಯಾ ಬಳಿ ಇದೆ ದುಬೈ ರೆಸಿಡೆಂಟ್ ವೀಸಾ – ಜಾಮೀನು ಸಿಕ್ರೆ ದೇಶ ಬಿಟ್ಟು ಹೋಗ್ತಾರಾ?

  • ತ್ರಿಪುರಾದಲ್ಲಿ 800ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ HIV ಪತ್ತೆ; ಶ್ರೀಮಂತರ ಮಕ್ಕಳಲ್ಲಿ ವೈರಸ್‌ ಕಂಡುಬಂದಿದ್ದು ಹೇಗೆ?

    ತ್ರಿಪುರಾದಲ್ಲಿ 800ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ HIV ಪತ್ತೆ; ಶ್ರೀಮಂತರ ಮಕ್ಕಳಲ್ಲಿ ವೈರಸ್‌ ಕಂಡುಬಂದಿದ್ದು ಹೇಗೆ?

    ಗಿನ ಮಕ್ಕಳು ಹಾಗೂ ವಿದ್ಯಾರ್ಥಿಗಳ ಪೈಕಿ ಅನೇಕರು ಮಾದಕ ವ್ಯಸನದ ದಾಸರಾಗುತ್ತಿದ್ದಾರೆ. ಈ ಕುರಿತು ಪ್ರತಿನಿತ್ಯ ಮಾಧ್ಯಮಗಳು, ಪತ್ರಿಕೆಗಳು ವರದಿ ಮಾಡುತ್ತಲೇ ಇರುತ್ತವೆ. ಆದರೂ ಕ್ಯಾರೇ ಎನ್ನದೇ ವಿದ್ಯಾರ್ಥಿಗಳು ತಮ್ಮ ಪಾಡಿಗೆ ತಾವು ಮಾದಕ ವಸ್ತುಗಳ ಮೊರೆಹೋಗುತ್ತಿದ್ದಾರೆ. ಅದರಲ್ಲೂ ಶ್ರೀಮಂತರ ಮಕ್ಕಳು ದುಡ್ಡಿದೆ ಎಂದು ಸ್ಟೈಲ್‌ ಮಾಡಲು ಹೋಗಿ ಕೆಟ್ಟ ಚಟಗಳಿಗೆ ಬಲಿಯಾಗುತ್ತಿದ್ದಾರೆ. ಇತ್ತೀಚಿಗೆ ತ್ರಿಪುರಾ ಜರ್ನಲಿಸ್ಟ್ ಯೂನಿಯನ್, ವೆಬ್ ಮೀಡಿಯಾ ಫೋರಮ್ ಮತ್ತು ಟಿಎಸ್‌ಎಸಿಎಸ್ (TSACS) ಜಂಟಿಯಾಗಿ ಆಯೋಜಿಸಿದ್ದ ಮಾಧ್ಯಮ ಕಾರ್ಯಾಗಾರದಲ್ಲಿ ಆತಂಕಕಾರಿ ವಿಷಯವೊಂದು ಹೊರಬಿದ್ದಿದೆ. ತ್ರಿಪುರಾದಲ್ಲಿ 800ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ HIV ವೈರಸ್‌ ಪತ್ತೆಯಾಗಿದ್ದು, 47 ಮಂದಿ ವಿದ್ಯಾರ್ಥಿಗಳು ಏಡ್ಸ್‌ಗೆ ಬಲಿಯಾಗಿದ್ದಾರೆ ಎಂದು ತ್ರಿಪುರಾ (Tripura) ರಾಜ್ಯದ ಏಡ್ಸ್ ನಿಯಂತ್ರಣ ಸೊಸೈಟಿಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಇದಕ್ಕೆ ಕಾರಣವೇನು? ವಿದ್ಯಾರ್ಥಿಗಳಲ್ಲಿ HIV ಸೋಂಕು ಹೇಗೆ ಬಂತು ಎಂಬ ಕುರಿತು ಇಲ್ಲಿ ವಿವರಿಸಲಾಗಿದೆ. 

    HIV ಎಂದರೇನು?
    HIV (ಹ್ಯೂಮನ್ ಇಮ್ಯುನೊ ಡಿಫಿಷಿಯನ್ಸಿ ವೈರಸ್) ಒಂದು ರೀತಿಯ ವೈರಸ್ ಆಗಿದೆ. ಅದು ದೇಹವನ್ನು ಪ್ರವೇಶಿಸಿದಾಗ ಅದನ್ನು HIV ಸೋಂಕು ಎಂದು ಕರೆಯಲಾಗುತ್ತದೆ. ಸಮಯಕ್ಕೆ ಸರಿಯಾಗಿ ರೋಗನಿರ್ಣಯ ಮಾಡದಿದ್ದರೆ ಅಥವಾ ಚಿಕಿತ್ಸೆಯನ್ನು ಪ್ರಾರಂಭಿಸದಿದ್ದರೆ, ರೋಗವು ಕ್ರಮೇಣ ಹೆಚ್ಚಾಗಲು ಪ್ರಾರಂಭಿಸುತ್ತದೆ ಮತ್ತು ಸೋಂಕಿನ ವಿರುದ್ಧ ಹೋರಾಡುವ ದೇಹದ ಸಾಮರ್ಥ್ಯವು ಕಡಿಮೆಯಾಗುತ್ತಾ ಹೋಗುತ್ತದೆ. ಇದರಿಂದಾಗಿ ಏಡ್ಸ್‌ ರೋಗ ಉಂಟಾಗುತ್ತದೆ.

    ತ್ರಿಪುರಾದ ವಿದ್ಯಾರ್ಥಿಗಳಲ್ಲಿ HIV ಕಂಡುಬಂದಿದ್ದು ಹೇಗೆ?
    ತ್ರಿಪುರಾ ರಾಜ್ಯದ 220 ಶಾಲೆಗಳು ಹಾಗೂ 24 ಕಾಲೇಜು ಮತ್ತು ವಿವಿಗಳಲ್ಲಿ ವಿದ್ಯಾರ್ಥಿಗಳು ಇಂಜೆಕ್ಷನ್ ಮೂಲಕ ಮಾದಕ ವಸ್ತುಗಳನ್ನು ತೆಗೆದುಕೊಳ್ಳುವುದು ಪತ್ತೆಯಾಗಿದೆ ಎಂದಿರುವ ತ್ರಿಪುರಾ ಏಡ್ಸ್ ನಿಯಂತ್ರಣ ಸೊಸೈಟಿ, HIV ಸೋಂಕು ಹರಡಲು ಇದೂ ಕಾರಣ ಆಗಿರಬಹುದು ಎಂದು ಊಹಿಸಿದೆ.

    ಈ ಸಂಬಂಧ ತ್ರಿಪುರಾ ರಾಜ್ಯಾದ್ಯಂತ ಸುಮಾರು 164 ಆರೋಗ್ಯ ಸಂಸ್ಥೆಗಳಿಂದ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದು, ಸಮಗ್ರ ತನಿಖೆ ಬಳಿಕ ಹೆಚ್ಚಿನ ಮಾಹಿತಿ ಹೊರ ಬೀಳಲಿದೆ. ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಪ್ರತಿದಿನ ಐದರಿಂದ ಏಳು ಹೊಸ HIV ಪ್ರಕರಣಗಳು ಪತ್ತೆಯಾಗುತ್ತಿವೆ ಎಂದು ಟಿಎಸ್‌ಎಸಿಎಸ್ ಅಧಿಕಾರಿಗಳು ತಿಳಿಸಿದ್ದಾರೆ. 

    ಮೇ 2024ರ ವೇಳೆಗೆ ತ್ರಿಪುರಾದ ART (ಆಂಟಿರೆಟ್ರೋವೈರಲ್ ಥೆರಪಿ) ಕೇಂದ್ರ ಒಟ್ಟು 8,729 HIV ಸೋಂಕಿತ ವ್ಯಕ್ತಿಗಳನ್ನು ನೋಂದಾಯಿಸಿವೆ. ಅದರಲ್ಲಿ 4,570 ಪುರುಷರು, 1,103 ಮಹಿಳೆಯರು ಮತ್ತು ಒಬ್ಬರು ಮಂಗಳಮುಖಿ ಒಳಗೊಂಡಿದ್ದಾರೆ. HIV ಸೋಂಕಿತರ ಪೈಕಿ 5,674 ಜನರು ಜೀವಂತವಾಗಿದ್ದಾರೆ ಎಂದು TSACS ಅಧಿಕಾರಿ ಬಹಿರಂಗಪಡಿಸಿದ್ದಾರೆ.

    ಎಲ್ಲರೂ ಶ್ರೀಮಂತರ ಮನೆ ಮಕ್ಕಳು:
    ಏಡ್ಸ್ ಸೋಂಕಿಗೆ ತುತ್ತಾಗಿರುವ ವಿದ್ಯಾರ್ಥಿಗಳ ಪೈಕಿ ಬಹುತೇಕರು ಶ್ರೀಮಂತರ ಮನೆ ಮಕ್ಕಳು. ಈ ವಿದ್ಯಾರ್ಥಿಗಳ ಪೋಷಕರು ಸ್ಥಿತಿವಂತರು. ಸಾಕಷ್ಟು ಮನೆಗಳಲ್ಲಿ ತಂದೆ – ತಾಯಿ ಇಬ್ಬರಿಗೂ ಸರ್ಕಾರಿ ನೌಕರಿ ಇದೆ. ಪೋಷಕರು ತಮ್ಮ ಮಕ್ಕಳಿಗೆ ಸಾಕಷ್ಟು ಹಣ ನೀಡುತ್ತಾರೆ. ಮಕ್ಕಳ ಎಲ್ಲ ಬೇಕು, ಬೇಡಗಳನ್ನೂ ಈಡೇರಿಸುತ್ತಾರೆ. ಹೀಗಾಗಿ, ಮಕ್ಕಳ ಕೈನಲ್ಲಿ ಸಾಕಷ್ಟು ಹಣ ಓಡಾಡುವ ಕಾರಣ ಅವರು ಮಾದಕ ವಸ್ತುಗಳ ದಾಸರಾಗುತ್ತಿದ್ದಾರೆ.

    ಈ ವಿದ್ಯಾರ್ಥಿಗಳು ಮಾದಕ ವಸ್ತುಗಳನ್ನ ತಮ್ಮ ರಕ್ತನಾಳಗಳಿಗೆ ಚುಚ್ಚುಮದ್ದಿನ ಮೂಲಕ ತೆಗೆದುಕೊಳ್ಳುತ್ತಾರೆ. ಒಬ್ಬರು ಬಳಸುವ ಇಂಜೆಕ್ಷನ್ ನೀಡಲ್‌ ಅನ್ನೇ ಬಹುತೇಕರು ಬಳಕೆ ಮಾಡುತ್ತಿದ್ದ ಕಾರಣ ಸುಲಭವಾಗಿ ಎಚ್‌ಐವಿ ಏಡ್ಸ್ ರೋಗಾಣು ಹರಡಿದೆ ಎಂದು ವೈದ್ಯರು ವಿವರಿಸಿದ್ದಾರೆ.

    ಉನ್ನತ ಹುದ್ದೆ ಹೊಂದಿರುವ ಶ್ರೀಮಂತ ಪೋಷಕರು ತಮ್ಮ ಮಕ್ಕಳ ಬೇಡಿಕೆಯನ್ನು ಪೂರೈಸುವ ಸಲುವಾಗಿ ಅವರ ಕೈಗೆ ಹೆಚ್ಚೆಚ್ಚು ಹಣ ನೀಡುತ್ತಾರೆ. ಆದರೆ ಮಕ್ಕಳು ಅದನ್ನು ಒಳ್ಳೆಯ ವಿಷಯಕ್ಕೆ ಬಳಸಿಕೊಳ್ಳದೇ ಈ ರೀತಿಯ ಚಟಗಳನ್ನು ಕಲಿತು ತಮ್ಮ ಅಮೂಲ್ಯ ಜೀವನವನ್ನು ಹಾಳುಮಾಡಿಕೊಳ್ಳುತ್ತಾರೆ. ಪೋಷಕರು ತಮ್ಮ ಮಕ್ಕಳು ಕೆಟ್ಟ ಚಟಗಳ ದಾಸರಾಗಿದ್ದಾರೆ ಎಂದು ತಿಳಿದುಕೊಳ್ಳುವ ಹೊತ್ತಿಗಾಗಲೇ ಕಾಲ ಮೀರಿರುತ್ತದೆ. ಇದರಿಂದಾಗಿ ಪೋಷಕರು ತಮ್ಮ ಮಕ್ಕಳನ್ನು ಕಳೆದುಕೊಳ್ಳಬೇಕಾದ ಪರಿಸ್ಥಿತಿಯೂ ಬರಬಹುದು.

    HIV ಹರಡುವುದು ಹೇಗೆ?
    ಲೈಂಗಿಕ ಸಂಪರ್ಕ, ರಕ್ತ ವರ್ಗಾವಣೆ,ಸೂಜಿಗಳು ಅಥವಾ ಸಿರಿಂಜಿಗಳನ್ನು ಹಂಚಿಕೊಳ್ಳುವುದು, ಗರ್ಭಾವಸ್ಥೆಯಲ್ಲಿ, ಹೆರಿಗೆಯ ಸಮಯದಲ್ಲಿ ಅಥವಾ ಹಾಲುಣಿಸುವ ಸಮಯದಲ್ಲಿ ತಾಯಿಯಿಂದ ಮಗುವಿಗೆ HIV ಹರಡುವ ಸಾಧ್ಯತೆಗಳು ಹೆಚ್ಚು.

    ರೋಗಲಕ್ಷಣಗಳೇನು?
    ಚಳಿ, ಗಂಟಲು ಕೆರತ, ಹುಣ್ಣುಗಳು, ದೇಹದ ನೋವು, ಸ್ನಾಯು ನೋವು, ಸುಸ್ತು ಈ ರೋಗದ ಪ್ರಮುಖ ಲಕ್ಷಣಗಳಾಗಿವೆ. ಈ ರೋಗಲಕ್ಷಣಗಳು ಒಂದೂವರೆ ತಿಂಗಳವರೆಗೆ ಇರುತ್ತದೆ. ಏಡ್ಸ್ ಸಂಭವಿಸಿದಾಗ, ಎಲ್ಲಾ ರೀತಿಯ ಸೋಂಕುಗಳು ರೋಗಿಯ ಮೇಲೆ ಪರಿಣಾಮ ಬೀರಲು ಪ್ರಾರಂಭಿಸುತ್ತವೆ ಮತ್ತು ಈ ಹಂತದಲ್ಲಿ ಅಸಂಖ್ಯಾತ ರೋಗಲಕ್ಷಣಗಳನ್ನು ಕಾಣಬಹುದು.

    ಏಡ್ಸ್ HIV ಸೋಂಕಿನ ಅಂತಿಮ ಮತ್ತು ಅತ್ಯಂತ ಗಂಭೀರ ಹಂತವಾಗಿದೆ. ಏಡ್ಸ್ ಹೊಂದಿರುವ ಜನರು ಕೆಲವು ಬಿಳಿ ರಕ್ತ ಕಣಗಳ ಕಡಿಮೆ ಎಣಿಕೆಗಳನ್ನು ಹೊಂದಿರುತ್ತಾರೆ ಮತ್ತು ತೀವ್ರವಾಗಿ ಹಾನಿಗೊಳಗಾದ ಪ್ರತಿರಕ್ಷಣಾ ವ್ಯವಸ್ಥೆಗಳನ್ನು ಹೊಂದಿರುತ್ತಾರೆ.

    ಏಡ್ಸ್ ತೂಕ ನಷ್ಟ, ತೀವ್ರ ಸುಸ್ತು, ಬಾಯಿ ಅಥವಾ ಜನನಾಂಗದ ಹುಣ್ಣುಗಳು, ಜ್ವರ, ರಾತ್ರಿ ಬೆವರುವಿಕೆ ಮತ್ತು ಚರ್ಮದ ಬಣ್ಣದಲ್ಲಿ ವ್ಯತ್ಯಾಸ ಆಗಲು ಕಾರಣವಾಗಬಹುದು.

    ಚುಂಬನ ಮತ್ತು ತಬ್ಬಿಕೊಳ್ಳುವುದರಿಂದ HIV ಬರುತ್ತಾ?
    ಪರಸ್ಪರ ಚುಂಬಿಸುವುದು ಮತ್ತು ತಬ್ಬಿಕೊಳ್ಳುವುದರಿಂದ HIV ಬರುವುದಿಲ್ಲ. ಆದರೆ ನಿಮ್ಮ ಬಾಯಲ್ಲಿ ಹುಣ್ಣು ಅಥವಾ ಒಸಡುಗಳಲ್ಲಿ ರಕ್ತಸ್ರಾವ ಆಗಿದ್ದು, ನೀವು ಬಾಯಿಗೆ ಬಾಯಿ ಕೊಟ್ಟು ಚುಂಬಿಸುವುದರಿಂದ HIV ಸೋಂಕು ಉಂಟಾಗುವ ಸಾಧ್ಯತೆಗಳಿವೆ. 

    ಇನ್ನು HIV/AIDS ಹೊಂದಿರುವ ವ್ಯಕ್ತಿಯನ್ನು ಸ್ಪರ್ಶಿಸುವುದು ಅಥವಾ ತಬ್ಬಿಕೊಳ್ಳುವುದು, ಸಾರ್ವಜನಿಕ ಸ್ನಾನಗೃಹಗಳು ಅಥವಾ ಈಜುಕೊಳಗಳನ್ನು ಬಳಸುವುದು, HIV/AIDS ಹೊಂದಿರುವ ಯಾರೊಂದಿಗಾದರೂ ಕಪ್‌, ಪಾತ್ರೆಗಳನ್ನು ಹಂಚಿಕೊಳ್ಳುವುದರಿಂದರಿಂದಲೂ ಯಾವುದೇ ರೀತಿಯ ಸೋಂಕು ತಗುಲುವುದಿಲ್ಲ.

    ಚಿಕಿತ್ಸೆ ಏನು?
    ಡಾ.ಉಮಂಗ್ ಅಗರ್ವಾಲ್ ಪ್ರಕಾರ, ಏಡ್ಸ್‌ಗೆ ಯಾವುದೇ ಚಿಕಿತ್ಸೆ ಇಲ್ಲ ಎಂಬುದು ಸುಳ್ಳು. ವಾಸ್ತವವಾಗಿ, ನಿರಂತರವಾಗಿ ಎಚ್ಐವಿ ಚಿಕಿತ್ಸೆಯನ್ನು ತೆಗೆದುಕೊಳ್ಳುವುದರಿಂದ, ಈ ವೈರಸ್ ಅನ್ನು ನಿಯಂತ್ರಣದಲ್ಲಿ ಇರಿಸಬಹುದು. ಅದರ ಚಿಕಿತ್ಸೆಯನ್ನು ಮುಂದುವರಿಸುವ ಮೂಲಕ, ಏಡ್ಸ್ ಅನ್ನು ತಪ್ಪಿಸಬಹುದು.

    HIV ಯ ಚಿಕಿತ್ಸೆಯನ್ನು ಆಂಟಿರೆಟ್ರೋವೈರಲ್ ಥೆರಪಿ (ART) ಎಂದು ಕರೆಯಲಾಗುತ್ತದೆ. HIV ಹೊಂದಿರುವ ಪ್ರತಿಯೊಬ್ಬರಿಗೂ ART ಅನ್ನು ಶಿಫಾರಸು ಮಾಡುತ್ತಾರೆ. HIV ಇರುವವರು ಆದಷ್ಟು ಬೇಗ  ಔಷಧಿಗಳನ್ನು ತೆಗೆದುಕೊಳ್ಳಬೇಕು. ಆಂಟಿರೆಟ್ರೋವೈರಲ್ ಥೆರಪಿ HIV ಅನ್ನು ಗುಣಪಡಿಸಲು ಸಾಧ್ಯವಿಲ್ಲ. ಆದರೆ  HIV ಯೊಂದಿಗಿನ ಜನರು ದೀರ್ಘ, ಆರೋಗ್ಯಕರ ಜೀವನವನ್ನು ನಡೆಸಲು ಸಹಾಯ ಮಾಡುತ್ತದೆ. ಅಲ್ಲದೇ HIV ಪ್ರಸರಣದ ಅಪಾಯವನ್ನು ಸಹ ಕಡಿಮೆ ಮಾಡುತ್ತದೆ.

    ಚಿಕಿತ್ಸೆಯನ್ನು ಮಧ್ಯದಲ್ಲಿ ಬಿಡುವುದರಿಂದ ಏಡ್ಸ್ ಮರುಕಳಿಸುವಿಕೆಗೆ ಕಾರಣವಾಗಬಹುದು. ಎಚ್ಐವಿ ಚಿಕಿತ್ಸೆಯನ್ನು ಸಮಯಕ್ಕೆ ಪ್ರಾರಂಭಿಸಿದರೆ, ಇತ್ತೀಚಿನ ದಿನಗಳಲ್ಲಿ ಹಲವಾರು ಔಷಧಿಗಳಿವೆ. ಇದು ರೋಗಿಯನ್ನು ಏಡ್ಸ್‌ಗೆ ಬಲಿಯಾಗದಂತೆ ತಡೆಯುತ್ತದೆ.

  • ಮದುವೆಯಾಗಿ ಹಣ, ಚಿನ್ನದೊಂದಿಗೆ ಎಸ್ಕೇಪ್‌ ಆಗ್ತಿದ್ದ ಮಹಿಳೆಗೆ ಹೆಚ್‌ಐವಿ – ಆಕೆ ದೈಹಿಕ ಸಂಪರ್ಕಕ್ಕೆ ಬಂದ ಪುರುಷರಿಗಾಗಿ ಹುಡುಕಾಟ

    ಮದುವೆಯಾಗಿ ಹಣ, ಚಿನ್ನದೊಂದಿಗೆ ಎಸ್ಕೇಪ್‌ ಆಗ್ತಿದ್ದ ಮಹಿಳೆಗೆ ಹೆಚ್‌ಐವಿ – ಆಕೆ ದೈಹಿಕ ಸಂಪರ್ಕಕ್ಕೆ ಬಂದ ಪುರುಷರಿಗಾಗಿ ಹುಡುಕಾಟ

    ಡೆಹ್ರಾಡೂನ್: ಮದುವೆಯಾಗಿ ನಗದು, ಬೆಲೆಬಾಳುವ ವಸ್ತುಗಳೊಂದಿಗೆ ಪರಾರಿಯಾಗಿ ಅನೇಕ ಪುರುಷರನ್ನು ಯಾಮಾರಿಸಿದ್ದ ಮಹಿಳೆ ಈಗ ಪೊಲೀಸರ ಬಲೆಗೆ ಬಿದ್ದಿದ್ದಾಳೆ. ವೈದ್ಯಕೀಯ ತಪಾಸಣೆ ವೇಳೆ ಆಕೆಗೆ ಹೆಚ್‌ಐವಿ ಪಾಸಿಟಿವ್‌ ಬಂದಿರುವುದು ಪೊಲೀಸರಿಗೆ ಶಾಕ್‌ ನೀಡಿದೆ.

    ಮದುವೆ ಹೆಸರಿನಲ್ಲಿ ಅನೇಕ ಪುರುಷರನ್ನು ವಂಚಿಸಿದ್ದ ಮಹಿಳೆಯರು ಮೇ 6 ರಂದು ಉತ್ತರಪ್ರದೇಶದ ಪೊಲೀಸರು ಬಂಧಿಸಿದ್ದರು. ಯುಪಿ ಮತ್ತು ಉತ್ತರಾಖಂಡದ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆಕೆಯ ಗ್ಯಾಂಗ್‌ನ 6 ಸದಸ್ಯರನ್ನೂ ಬಂಧಿಸಿದ್ದು, ಪುಜಾಫರ್‌ನಗರ ಜೈಲಿಗೆ ಕಳುಹಿಸಲಾಗಿದೆ.

    ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಆಕೆಗೆ ಹೆಚ್‌ಐವಿ ಸೋಂಕು ಇರುವುದು ಪತ್ತೆಯಾಗಿದೆ. ಬಂಧಿತ ಮಹಿಳೆ ಈಗ ಆಂಟಿರೆಟ್ರೋವೈರಲ್ ಥೆರಪಿ (ಎಆರ್‌ಟಿ)ಗೆ ಒಳಗಾಗುತ್ತಿದ್ದಾಳೆ ಎಂದು ಜೈಲು ಅಧೀಕ್ಷಕ ಸೀತಾರಾಮ್ ಶರ್ಮಾ ಹೇಳಿದ್ದಾರೆ.

    ಮಹಿಳೆಗೆ ಹೆಚ್‌ಐವಿ ಇರುವುದು ದೃಢಪಟ್ಟಿರುವುದು ಎರಡೂ ರಾಜ್ಯಗಳ ಆರೋಗ್ಯ ಇಲಾಖೆ ಅಧಿಕಾರಿಗಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಈಗ ಅವಳ ಜೊತೆ ಮದುವೆಯಾಗಿ ಯಾಮಾರಿದ್ದ ಪುರುಷರಿಗಾಗಿ ತೀವ್ರ ಹುಡುಕಾಟ ನಡೆಸಲಾಗಿದೆ.

    ಉತ್ತರಾಖಂಡದ ಆರೋಗ್ಯ ಇಲಾಖೆಯು, ರಾಜ್ಯದೊಳಗೆ ಆಕೆ ದೈಹಿಕ ಸಂಪರ್ಕಕ್ಕೆ ಬಂದ ಮೂವರು ಪುರುಷರು ಈಗ ಹೆಚ್ಐವಿ ಪಾಸಿಟಿವ್ ಎಂದು ದೃಢಪಡಿಸಿದ್ದಾರೆ. ಉಧಮ್ ಸಿಂಗ್ ನಗರದ ಆರೋಗ್ಯ ಇಲಾಖೆಯು ಎನ್‌ಜಿಒ ಸಹಯೋಗದೊಂದಿಗೆ ಈ ಪುರುಷರಲ್ಲಿ ಪರೀಕ್ಷೆಗಳನ್ನು ನಡೆಸಿ ART ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತ ಪುರುಷರ ಕುಟುಂಬದ ಇತರೆ ಸದಸ್ಯರನ್ನೂ ಪರೀಕ್ಷಿಸುವ ಪ್ರಕ್ರಿಯೆ ನಡೆಯುತ್ತಿದೆ.

    ಇದುವರೆಗೆ ಆರೋಪಿ ಮಹಿಳೆ ಐದು ಮದುವೆಯಾಗಿರುವುದಾಗಿ ತಿಳಿಸಿದ್ದಾಳೆ. ಐವರ ಪೈಕಿ ಮೂವರು ಪುರುಷರು ಉತ್ತರಾಖಂಡ ರಾಜ್ಯದವರೇ ಆಗಿದ್ದಾರೆ. ಆದರೆ ಆಕೆ ಇನ್ನೂ ಹೆಚ್ಚಿನ ಮಂದಿಗೆ ಮದುವೆಯಾಗಿ ವಂಚಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

  • ಜಗತ್ತನ್ನೇ ಬೆಚ್ಚಿ ಬೀಳಿಸಿದ ಸೋಂಕಿತ ರಕ್ತ ಹಗರಣ – ಯುಕೆಯಲ್ಲಿ ಡೆಡ್ಲಿ ಚಿಕಿತ್ಸೆ ತಂದ ವಿಪತ್ತು; ಏನಿದು ಹಗರಣ?

    ಜಗತ್ತನ್ನೇ ಬೆಚ್ಚಿ ಬೀಳಿಸಿದ ಸೋಂಕಿತ ರಕ್ತ ಹಗರಣ – ಯುಕೆಯಲ್ಲಿ ಡೆಡ್ಲಿ ಚಿಕಿತ್ಸೆ ತಂದ ವಿಪತ್ತು; ಏನಿದು ಹಗರಣ?

    ಲಂಡನ್‌ನಲ್ಲಾದ (London) ಸೋಂಕಿತರ ರಕ್ತದ ಹಗರಣಕ್ಕೆ ಇಡೀ ಜಗತ್ತೇ ಬೆಚ್ಚಿಬಿದ್ದಿದೆ. ಈ ಹಗರಣಕ್ಕೆ ಬಲಿಯಾದವರು ಒಬ್ಬರು ಇಬ್ಬರಲ್ಲ. ಬರೋಬ್ಬರಿ 3,000 ಮಂದಿ. ವೈದ್ಯಕೀಯ ಲೋಕದ ನಿರ್ಲಕ್ಷ್ಯಕ್ಕೆ ಸಾವಿರಾರು ಜನರ ಬದುಕು ಬರಡಾಯಿತು. ಇನ್ನೂ ಬಾಳಬೇಕಿದ್ದ ನೂರಾರು ಮಕ್ಕಳ ಬದುಕು ಕಮರಿತು. ಹೌದು, 70-80 ರ ದಶಕದಲ್ಲಿ ಲಂಡನ್‌ನಲ್ಲಾದ ಈ ಹಗರಣವು ಈಗ ಬೆಳಕಿಗೆ ಬಂದಿದೆ. ಈ ಹಗರಣದಿಂದ ವೈದ್ಯಲೋಕದ ವೈಫಲ್ಯ ಜಗಜ್ಜಾಹೀರಾಗಿದೆ.

    ತನಿಖಾ ವರದಿಯಲ್ಲೇನಿದೆ?
    ಮೇ 20 ರಂದು ಯುನೈಟೆಡ್ ಕಿಂಗ್‌ಡಮ್‌ನ (United Kingdom) ಸೋಂಕಿತ ರಕ್ತದ ಹಗರಣದ ತನಿಖಾ ವರದಿ ಬಿಡುಗಡೆಯಾಯಿತು. ಸಾವಿರಾರು ಜನರು ಹೆಚ್‌ಐವಿ (HIV) ಅಥವಾ ಹೆಪಟೈಟಿಸ್‌ಗೆ (Hepatitis C) ತುತ್ತಾಗಲು ಕಾರಣವಾದ ಹಗರಣ ಇದು ಎಂಬುದು ಬಯಲಾಯಿತು. ಈ ಹಗರಣವು ರಾಜ್ಯ-ನಿಧಿಯ ರಾಷ್ಟ್ರೀಯ ಆರೋಗ್ಯ ಸೇವೆಯ (NHS) ಇತಿಹಾಸದಲ್ಲಿ ಮಾರಣಾಂತಿಕ ಚಿಕಿತ್ಸಾ ವಿಪತ್ತುಗಳಲ್ಲಿ ಒಂದು ಎಂಬ ಕೆಟ್ಟ ದಾಖಲೆ ಬರೆಯಿತು. ಬ್ರಿಯಾನ್ ಲ್ಯಾಂಗ್‌ಸ್ಟಾಫ್ ನೇತೃತ್ವದಲ್ಲಿ ತನಿಖೆ ನಡೆಯಿತು. ಹಗರಣವು 30,000 ಮಂದಿ ಆರೋಗ್ಯ ಸಮಸ್ಯೆ ಹಾಗೂ 3,000 ಮಂದಿ ಸಾವಿಗೆ ಕಾರಣವಾಯಿತು ಎಂಬುದನ್ನು ವರದಿ ಬಹಿರಂಗಪಡಿಸಿದೆ. ಇಂತಹ ದೊಡ್ಡ ದುರಂತವನ್ನು ಮುಚ್ಚಿಡಲು ಸರ್ಕಾರ ಪ್ರಯತ್ನಿಸಿತು ಎಂದು ಸಹ ದೂರಲಾಗಿದೆ. ‘ಸತ್ಯವನ್ನು ಮರೆಮಾಚುವುದು ಸಂಯೋಜಿತ ಪಿತೂರಿಗಿಂತ ಹೆಚ್ಚು ಅಪಾಯಕಾರಿ’ ಎಂದು ಬ್ರಿಯಾನ್ ತಿಳಿಸಿದ್ದಾರೆ. ಇದನ್ನೂ ಓದಿ: ಚಂದ್ರನ ಮೇಲೆ ನಾಸಾ ರೈಲು – ಏನಿದು ಹೊಸ ಪ್ರಯೋಗ?

    ಏನಿದು ಸೋಂಕಿತ ರಕ್ತ ಹಗರಣ?
    1970 ಮತ್ತು 1980 ರ ದಶಕಗಳಲ್ಲಿ ಬ್ರಿಟನ್‌ನಲ್ಲಿ ಸೋಂಕಿತ ರಕ್ತ ವರ್ಗಾವಣೆ ಹಗರಣ (Infected Blood Scandal) ನಡೆಯಿತು. ಆಗಿನ ಸಂದರ್ಭದಲ್ಲಿ ರಕ್ತ ಹೆಪ್ಪುಗಟ್ಟುವ ಹಿಮೋಫಿಲಿಯಾ ಸಮಸ್ಯೆ ಬ್ರಿಟನ್‌ನಾದ್ಯಂತ ಜನರನ್ನು ಭಾದಿಸಿತು. ಈ ಸಮಸ್ಯೆ ವೈದ್ಯಲೋಕವನ್ನು ಕಂಗೆಡಿಸಿತು. ಆಗ ಬ್ರಿಟನ್‌ನ ಆರೋಗ್ಯ ಸಂಸ್ಥೆ (ಎನ್‌ಹೆಚ್‌ಎಸ್) ‘ಫ್ಯಾಕ್ಟರ್ 8’ ಎಂಬ ಎಂಬ ವಿಧಾನದ ಮೂಲಕ ಚಿಕಿತ್ಸೆ ನೀಡಲು ಮುಂದಾಯಿತು. ಚಿಕಿತ್ಸೆ ಪ್ರಕಾರ, ಹತ್ತಾರು ದಾನಿಗಳಿಂದ ಪ್ಲಾಸ್ಮಾಗಳನ್ನು ಒಟ್ಟುಗೂಡಿಸಿ ರೋಗಿಗೆ ನಿಡಲಾಗುತ್ತಿತ್ತು. ಹಿಂದಿನ ಚಿಕಿತ್ಸೆಗಳಿಗಿಂತ ಇದು ಹೆಚ್ಚು ಪರಿಣಾಮಕಾರಿಯಾಗಿದೆ. ಹಾಗಾಗಿ, ಇದನ್ನ ‘ವಂಡರ್ ಡ್ರಗ್’ ಚಿಕಿತ್ಸೆ ಎಂದು ಬ್ರಿಟನ್ ವೈದ್ಯರು ಕರೆದರು.

    ಏನಿದು ಹಿಮೋಫೀಲಿಯಾ?
    ಇದೊಂದು ಅಪರೂಪದ ಆನುವಂಶಿಕ ಸಮಸ್ಯೆ. ಹಿಮೋಫೀಲಿಯಾಗೆ ಒಳಗಾದವರಲ್ಲಿ ರಕ್ತ ಹೆಪ್ಪುಗಟ್ಟಲು ಕಷ್ಟವಾಗುತ್ತದೆ. ರಕ್ತ ತೆಳುವಾಗುವ ಸಮಸ್ಯೆ ಇರುತ್ತದೆ. ಹಿಮೋಫೀಲಿಯಾದಲ್ಲಿ ಎರಡು ರೀತಿ ಇದೆ. ಹಿಮೋಫೀಲಿಯಾ-ಎ ಹೊಂದಿರುವವರ ರಕ್ತದಲ್ಲಿ ಹೆಪ್ಪುಗಟ್ಟುವ ಅಂಶವಾದ ಫ್ಯಾಕ್ಟರ್-8 ರ ಕೊರತೆ ಇರುತ್ತದೆ. ಹಿಮೋಫೀಲಿಯಾ-ಬಿ ಸಮಸ್ಯೆ ಇರುವವರಿಗೆ ಫ್ಯಾಕ್ಟರ್-9 ರ ಕೊರತೆ ಇರುತ್ತದೆ. ಇದನ್ನೂ ಓದಿ: ನಿಮ್ಮ ಡಿಜಿಟಲ್‌ ಆರೋಗ್ಯ ಹೇಗಿದೆ? – ಮಿತಿಮೀರಿದ ಎಐ ಬಳಕೆ ತಂದೊಡ್ಡುವ ಅಪಾಯಗಳೇನು? – ತಂತ್ರಜ್ಞರ ಕಳವಳ ಏನು?

    ರೋಗಿಗಳಿಗೆ ಫ್ಯಾಕ್ಟರ್-8 ಚಿಕಿತ್ಸೆ ನೀಡಲು ಸಾಕಷ್ಟು ಪ್ರಮಾಣದ ರಕ್ತದ ಅಗತ್ಯವಿತ್ತು. ಆಗ ಅಮೆರಿಕದಿಂದ ಬ್ರಿಟನ್ ರಕ್ತ ತರಿಸಿಕೊಳ್ಳಲು ಮುಂದಾಯಿತು. ದಾನ ಮಾಡಿದ್ದರಲ್ಲಿ ಮಾದಕ ವ್ಯಸನಿಗಳು, ಕೈದಿಗಳು, ಅಪಾಯಕಾರಿ ಸೋಂಕು ಹೊಂದಿದ ವ್ಯಕ್ತಿಗಳ ರಕ್ತವೇ ಹೆಚ್ಚಿನ ಪ್ರಮಾಣದಲ್ಲಿತ್ತು. ಪರೀಕ್ಷೆ ಮಾಡದೇ ಇದೇ ರಕ್ತವನ್ನು ಬಳಸಿ ಜನರಿಗೆ ಚಿಕಿತ್ಸೆ ನೀಡಲಾಯಿತು. ಒಬ್ಬ ದಾನಿ ನೀಡಿದ ರಕ್ತದಲ್ಲಿ ಸೋಂಕು ಇದ್ದರೆ, ಅದು ಇಡೀ ಬ್ಯಾಚ್ ಅನ್ನು ಕಲುಷಿತಗೊಳಿಸುವ ಅಪಾಯವಿತ್ತು. ಇಂತಹ ರಕ್ತ ಪಡೆದ ಸಾವಿರಾರು ಮಂದಿ ಸೋಂಕಿಗೆ ತುತ್ತಾದರು.

    ಸೋಂಕಿತ ರಕ್ತ ಪಡೆದವರಿಗೆ ಹೆಚ್‌ಐವಿ, ಹೆಪಟೈಟಿಸ್
    ತನಿಖಾ ವರದಿಯ ಪ್ರಕಾರ 30,000 ಜನರು ಹೆಚ್‌ಐವಿ, ಹೆಪಟೈಟಿಸ್ ಸಿ ಗೆ ತುತ್ತಾದರು. ರಕ್ತ ದಾನ ಮಾಡಿದವರಲ್ಲಿ ಹೆಚ್ಚಾಗಿ ಹೆಪಟೈಟಿಸ್ ಸಿ ಸೋಂಕು ಇತ್ತು. 380 ಮಕ್ಕಳು ಹೆಚ್‌ಐವಿ ಸೋಂಕಿಗೆ ತುತ್ತಾಗಿದ್ದಾರೆ. ಹೆರಿಗೆ ಅಥವಾ ಶಸ್ತ್ರಚಿಕಿತ್ಸೆಗಾಗಿ ರಕ್ತದ ಅಗತ್ಯವಿರುವ ಜನರಿಗೂ ಸೋಂಕಿತ ರಕ್ತವನ್ನೇ ನೀಡಲಾಗಿತ್ತು.

    ಹೆಚ್‌ಐವಿ ಸೋಂಕಿಗೆ ಒಳಗಾದವರಲ್ಲಿ ಸುಮಾರು ಮೂರನೇ ಎರಡರಷ್ಟು ಜನರು ಏಡ್ಸ್ ಸಂಬಂಧಿತ ಕಾಯಿಲೆಗಳಿಂದ ಮರಣ ಹೊಂದಿದರು. ಬದುಕಿದ್ದಾಗ ಇವರ ಸಂಪರ್ಕ ಹೊಂದಿದವರಿಗೂ ಸೋಂಕು ವರ್ಗಾವಣೆಯಾಗಿದೆ. ಆ ಸಂಖ್ಯೆ ಎಷ್ಟು ಎಂಬುದು ನಿಖರವಾಗಿ ತಿಳಿದುಬಂದಿಲ್ಲ. ಇದನ್ನೂ ಓದಿ: ಫಸ್ಟ್‌ ಟೈಂ ಸೌದಿಯಲ್ಲಿ ನಡೆಯಿತು ಸ್ವಿಮ್‌ ಸೂಟ್‌ ಫ್ಯಾಶನ್‌ ಶೋ!

    ಬ್ರಿಟನ್ ದೇಶವನ್ನೇ ಹೆಚ್ಚು ಕಾಡಿದ್ದೇಕೆ?
    70 ರ ದಶಕದಲ್ಲಿ ಹಿಮೋಫೀಲಿಯಾ ಬ್ರಿಟನ್ ದೇಶವನ್ನು ಹೆಚ್ಚು ಕಾಡಿತ್ತು. ಜಪಾನ್, ಸ್ಪೇನ್ ದೇಶಗಳಲ್ಲೂ ಈ ಸಮಸ್ಯೆ ಕಾಣಿಸಿಕೊಂಡರೂ, ಸೋಂಕು ತಗುಲುವ ಪ್ರಮಾಣ ಕಡಿಮೆಯಿತ್ತು. ಅಲ್ಲದೇ ಬ್ರಿಟನ್ ಫ್ಯಾಕ್ಟರ್-8 ಎಂಬ ಹೊಸ ಚಿಕಿತ್ಸಾ ವಿಧಾನವನ್ನು ಪರಿಚಯಿಸಿದ್ದು, ದೊಡ್ಡ ದುರಂತಕ್ಕೆ ಕಾರಣವಾಯಿತು. ಆದರೆ ಜಪಾನ್, ಸ್ಪೇನ್ ದೇಶಗಳು ಹಳೆ ಚಿಕಿತ್ಸಾ ವಿಧಾನವನ್ನೇ ಮುಂದುವರಿಸಿದ್ದರಿಂದ ಹೆಚ್ಚಿನ ಸಮಸ್ಯೆ ಆಗಲಿಲ್ಲ. 90 ರ ದಶಕಕದವರೆಗೂ ಬ್ರಿಟನ್‌ನಲ್ಲಿ ಹೆಪಟೈಟಿಸ್-ಸಿ ಪತ್ತೆಗಾಗಿ ಸೋಂಕಿಗೆ ಸ್ಕ್ರೀನಿಂಗ್ ಪರೀಕ್ಷೆ ಕೂಡ ಲಭ್ಯವಿರಲಿಲ್ಲ. ಇದು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕು ಹರಡಲು ಕಾರಣವಾಗಿತ್ತು.

    ಸರ್ಕಾರದ ಪ್ರತಿಕ್ರಿಯೆ ಏನು?
    ಯುಕೆನಲ್ಲಿ ದೊಡ್ಡ ದುರಂತಕ್ಕೆ ಕಾರಣವಾದ ಹಗರಣದ ವಿಚಾರವಾಗಿ ಬ್ರಿಟನ್‌ನ ಪ್ರಧಾನಿ ರಿಷಿ ಸುನಾಕ್ ದೇಶದ ಜನತೆಯಲ್ಲಿ ಕ್ಷಮೆಯಾಚಿಸಿದ್ದಾರೆ. ವೈದ್ಯಕೀಯ ಲೋಕದ ಅತಿ ದೊಡ್ಡ ಹಗರಣ ಇದಾಗಿದ್ದು, ಬ್ರಿಟನ್ ಸರ್ಕಾರ ಇದರಿಂದ ತಲೆ ತಗ್ಗಿಸುವಂತಾಗಿದೆ. ಈ ಘಟನೆಗೆ ನಾನು ಪೂರ್ಣ ಹೃದಯದಿಂದ ನಿಸ್ಸಂದಿಗ್ಧವಾಗಿ ಕ್ಷಮೆಯಾಚಿಸಲು ಬಯಸುತ್ತೇನೆ ಎಂದಿದ್ದಾರೆ.

    ಅಂದಿನಿಂದ ಇಲ್ಲಿವರೆಗೆ ಏನಾಗಿದೆ?
    1980 ರ ದಶಕದ ಉತ್ತರಾರ್ಧದಲ್ಲಿ ಸಂತ್ರಸ್ತರು ಮತ್ತು ಅವರ ಕುಟುಂಬಗಳು ವೈದ್ಯಕೀಯ ನಿರ್ಲಕ್ಷ್ಯದ ಆಧಾರದ ಮೇಲೆ ಪರಿಹಾರ ನೀಡಬೇಕು ಎಂದು ಬ್ರಿಟನ್‌ನಾದ್ಯಂತ ರಸ್ತೆಗಿಳಿದು ಪ್ರತಿಭಟನೆ ನಡೆಸಿದರು. 1990 ರ ದಶಕದ ಆರಂಭದಲ್ಲಿ ಹೆಚ್‌ಐವಿ ಸೋಂಕಿತರಿಗೆ ಏಕಕಾಲದಲ್ಲಿ ಪರಿಹಾರ ನೀಡಲು ಸರ್ಕಾರವು ಚಾರಿಟಿಯನ್ನು ಸ್ಥಾಪಿಸಿತು. ಆದರೆ ಸಮಸ್ಯೆ ಅಲ್ಲಿಗೆ ಬಗೆಹರಿಯಲಿಲ್ಲ. ಸರ್ಕಾರದ ವಿರುದ್ಧ ಅಭಿಯಾನಗಳು ಪ್ರಾರಂಭವಾದವು.

    ಪ್ರಕರಣ ಸಂಸತ್ ಮೆಟ್ಟಿಲೇರಿ ತನಿಖೆಯ ಒತ್ತಾಯ ಕೇಳಿಬಂತು. ಕೊನೆಗೆ 2018 ರ ಫೆಬ್ರವರಿಯಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರಾದ ಸರ್ ಬ್ರಿಯಾನ್ ಲ್ಯಾಂಗ್‌ಸ್ಟಾಫ್ ಅವರ ಅಧ್ಯಕ್ಷತೆಯಲ್ಲಿ ತನಿಖಾ ತಂಡ ರಚಿಸಲಾಯಿತು. 2018 ರ ಜುಲೈ ತಿಂಗಳಿಂದ ತನಿಖೆ ಪ್ರಾರಂಭವಾಯಿತು. 2019 ರ ಏಪ್ರಿಲ್‌ನಿಂದ 2022 ರ ಡಿಸೆಂಬರ್ ವರೆಗೆ ಸೋಂಕಿತ ಮತ್ತು ಬಾಧಿತರಿಂದ ಸಾರ್ವಜನಿಕ ಸಾಕ್ಷ್ಯವನ್ನು ತನಿಖಾ ತಂಡ ಸಂಗ್ರಹಿಸಿತು. 2023 ರ ಫೆಬ್ರವರಿ 3 ರಲ್ಲಿ ಮೌಖಿಕವಾಗಿ ವರದಿ ಒಪ್ಪಿಸಲಾಯಿತು.

  • ಮತ್ತೊಂದು ವಿವಾದ – ಸನಾತನ ಧರ್ಮವನ್ನ HIV, ಕುಷ್ಠರೋಗಕ್ಕೆ ಹೋಲಿಸಿದ ಸಂಸದ ಎ. ರಾಜಾ

    ಮತ್ತೊಂದು ವಿವಾದ – ಸನಾತನ ಧರ್ಮವನ್ನ HIV, ಕುಷ್ಠರೋಗಕ್ಕೆ ಹೋಲಿಸಿದ ಸಂಸದ ಎ. ರಾಜಾ

    ಚೆನ್ನೈ: ಸನಾತನ ಧರ್ಮವು (Sanatana dharma) ಡೆಂಗ್ಯೂ, ಮಲೇರಿಯಾ ಇದ್ದಂತೆ ಎಂದು ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್‌ ಹೇಳಿಕೆ ಬೆನ್ನಲ್ಲೇ ಡಿಎಂಕೆ ಪಕ್ಷದ ಸಂಸದ ಎ.ರಾಜಾ (R Raja) ಹೆಚ್‌ಐವಿ (HIV), ಕುಷ್ಠರೋಗಕ್ಕೆ ಸನಾತನ ಧರ್ಮವನ್ನ ಹೋಲಿಸಿ ವಿವಾದವನ್ನ ಮೈಮೇಲೆ ಎಳೆದುಕೊಂಡಿದ್ದಾರೆ.

    ಸಾರ್ವಜನಿಕ ಸಮಾರಂಭವೊಂದರಲ್ಲಿ ಮಾತನಾಡಿದ ಅವರು, ಸನಾತನ ಧರ್ಮವನ್ನ ಹೆಚ್‌ಐವಿ ಮತ್ತು ಕುಷ್ಠರೋಗದಂತಹ (leprosy) ಸಾಮಾಜಿಕ ಕಳಂಕ ಹೊಂದಿರುವ ರೋಗಗಳಿಗೆ ಹೋಲಿಸಬೇಕು. ಸನಾತನ ಧರ್ಮ ಹಾಗೂ ವಿಶ್ವಕರ್ಮ ಯೋಜನೆಗಳು ಬೇರೆ-ಬೇರೆ ಇಲ್ಲ, ಅವೆರಡೂ ಒಂದೇ. ಉದಯನಿಧಿ ಸ್ಟಾಲಿನ್‌ (Udhayanidhi Stalin) ಅವರು ಸ್ವಲ್ಪ ಮೃದು ಧೋರಣೆಯಿಂದ ಮಾತನಾಡಿದ್ದಾರೆ ಎಂದು ಹೇಳಿದ್ದಾರೆ.

    ಡೆಂಗ್ಯೂ ಹಾಗೂ ಮಲೇರಿಯಾ ರೋಗಗಳು ಸಮಾಜಿಕ ಕಳಂಕ ಹೊಂದಿಲ್ಲ. ಆದ್ರೆ ಕುಷ್ಠ ಮತ್ತು ಹೆಚ್‌ಐವಿ ರೋಗಗಳು ಸಮಾಜದಿಂದ ಕಳಂಕಿತವಾಗಿವೆ. ಹಾಗಾಗಿ ಸನಾತನ ಧರ್ಮವನ್ನ ಹೆಚ್‌ಐವಿ ಮತ್ತು ಕುಷ್ಠರೋಗದಂತ ಕಾಯಿಲೆಯಾಗಿ ನೋಡಬೇಕಾಗಿದೆ ಎಂದು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ಉದಯನಿಧಿ ಸ್ಟಾಲಿನ್‌ ತಲೆ ತಂದವರಿಗೆ 10 ಕೋಟಿ ಬಹುಮಾನ; ಅಯೋಧ್ಯೆಯ ಹಿಂದೂ ಧರ್ಮದರ್ಶಿ ಘೋಷಣೆ

    ಯಾರು ಯಾರನ್ನಾದರೂ ಕರೆದುಕೊಂಡು ಬರಲಿ, ಸನಾತನ ಧರ್ಮದ ಬಗ್ಗೆ ಚರ್ಚೆ ಮಾಡೋಕೆ ನಾನು ಸಿದ್ಧ. ಅವರು ಯಾವುದೇ ಆಯುಧಗಳನ್ನ ಬೇಕಾದ್ರೆ ತೆಗೆದುಕೊಂಡು ಬರಲಿ. ಪ್ರಧಾನಿ ಮೋದಿ ಕ್ಯಾಬಿನೆಟ್‌ನಲ್ಲಿ ಸಭೆ ಕರೆದು ನನಗೆ ಅನುಮತಿ ಕೊಟ್ಟರೆ, ಅಲ್ಲಿಯೂ ಸನಾತನ ಧರ್ಮದ ಬಗ್ಗೆ ಉತ್ತರ ಕೊಡಲು ನಾನು ಸಿದ್ಧ ಎಂದು ಸವಾಲ್‌ ಹಾಕಿದ್ದಾರೆ.

    ಏನಿದು ವಿವಾದ?
    ಲೇಖಕರ ಸಮಾವೇಶವೊಂದರಲ್ಲಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್, ಸನಾತನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು. ಈ ಪರಿಕಲ್ಪನೆಯು ಅಂತರ್ಗತವಾಗಿ ಹಿಂದುಳಿದಿದೆ. ಇದು ಜಾತಿ ಮತ್ತು ಆಧಾರದ ಮೇಲೆ ಜನರನ್ನು ವಿಭಜಿಸುತ್ತದೆ. ಮೂಲಭೂತವಾಗಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತದೆ ಎಂದು ಹೇಳಿದ್ದರು. ಈ ಹೇಳಿಕೆ ನಂತರ ವಿವಾದ ಭುಗಿಲೆದ್ದಿದೆ.

    ಈ ನಡುವೆ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ಕುರಿತಾಗಿ ದ್ವೇಷಪೂರಿತ ಭಾಷಣ ಮಾಡಿದ್ದಕ್ಕಾಗಿ ಕಾನೂನು ಹಕ್ಕುಗಳ ವೀಕ್ಷಣಾಲಯ ಸ್ವಯಂ ಪ್ರೇರಿತ ಎಫ್‌ಐಆರ್ ದಾಖಲಿಸಿಕೊಳ್ಳುವಂತೆ ಸೋಮವಾರ ಚೆನ್ನೈನ ಪೊಲೀಸ್ ಕಮಿಷನರ್‌ಗೆ ಲೀಗಲ್ ನೋಟಿಸ್ ಕಳುಹಿಸಿದೆ. ಸೆಪ್ಟೆಂಬರ್‌ 7 ರಂದು ಹುಬ್ಬಳ್ಳಿಯಲ್ಲೂ ಉದಯನಿಧಿ ಸ್ಟಾಲಿನ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇದನ್ನೂ ಓದಿ: ಬದಲಾಗುತ್ತಾ ದೇಶದ ಹೆಸರು – ‘ಇಂಡಿಯಾ’ ಬದಲಿಗೆ ‘ರಿಪಬ್ಲಿಕ್‌ ಆಫ್‌ ಭಾರತ್‌’ ಅಂತ ಮರುನಾಮಕರಣ?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಳ್ಳತನಕ್ಕಿಳಿದು ಸಿಕ್ಕಿಬಿದ್ದ ಸೈಕಲ್‍ನಲ್ಲೇ ದೇಶ ಸುತ್ತಿ HIV ಬಗ್ಗೆ ಜಾಗೃತಿ ಮೂಡಿಸ್ತಿದ್ದ ವ್ಯಕ್ತಿ

    ಕಳ್ಳತನಕ್ಕಿಳಿದು ಸಿಕ್ಕಿಬಿದ್ದ ಸೈಕಲ್‍ನಲ್ಲೇ ದೇಶ ಸುತ್ತಿ HIV ಬಗ್ಗೆ ಜಾಗೃತಿ ಮೂಡಿಸ್ತಿದ್ದ ವ್ಯಕ್ತಿ

    ಬೆಂಗಳೂರು: ಸೈಕಲ್‍ನಲ್ಲೇ ದೇಶ ಸುತ್ತಿ ಹೆಚ್‍ಐವಿ (HIV Awareness) ಬಗ್ಗೆ ಜಾಗೃತಿ ಮೂಡಿಸ್ತಾ ಇದ್ದ ವ್ಯಕ್ತಿ ಈಗ ಕಳ್ಳತನದ ಹಾದಿ ಹಿಡಿದಿದ್ದು, ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

    ಹೌದು ಒಂದು ಕಾಲದಲ್ಲಿ ಗಿನ್ನೀಸ್ ದಾಖಲೆಯ ವೀರ ಕಳ್ಳತನ ಕೇಸ್‍ನಲ್ಲಿ ಅಂದರ್ ಆಗಿದ್ದಾನೆ. ವಿವಿ ಪುರಂ ಪೊಲೀಸರು (VV Puram Police) ವಾಸವಿ ದೇವಸ್ಥಾನದ ವಿಗ್ರಹ ಕಳವು ಆರೋಪದಲ್ಲಿ ರವಿ ಎಂಬಾತನ ಬಂಧಿಸಿದ್ದು, ಈತ 2000 ದಿಂದ 2006ರವೆರಗೂ ಸೈಕಲ್‍ನಲ್ಲೇ ದೇಶ ಸುತ್ತಿ ಹೆಚ್‍ಐವಿ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದ. ಇದಕ್ಕೆ ಪ್ರತಿಯಾಗಿ 2016ರಲ್ಲಿ ಮಹಾರಾಷ್ಟ್ರ (Maharastra Govt)  ಸರ್ಕಾರ ಈತನಿಗೆ ಬೈಕೊಂದನ್ನು ಗಿಫ್ಟ್ ಆಗಿ ನೀಡಿತ್ತು.

    ಒಟ್ಟು 33 ರಾಜ್ಯಗಳನ್ನು ಸುತ್ತಿ ಗಿನ್ನೀಸ್ ದಾಖಲೆ ಮಾಡಿದ್ದ ರವಿ ಈಗ ಕಳ್ಳತನದ ಕೇಸ್‍ನಲ್ಲಿ ಅಂದರ್ ಆಗಿದ್ದಾನೆ. ದೇವರ ಬೆಳ್ಳಿ ವಿಗ್ರಹ ಕದ್ದು ಮಾರಾಟಕ್ಕೆ ಯತ್ನಿಸಿದ್ದಾನೆ. ದೇವಸ್ಥಾನದಲ್ಲಿ ವಿಗ್ರಹ ಕದಿಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸುಮಾರು 100ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆ ಬಳಿಕ ರವಿ ಅರೆಸ್ಟ್ ಆಗಿದ್ದಾನೆ. ಇದನ್ನೂ ಓದಿ: ಅನ್ನಭಾಗ್ಯದ ಹಣ ವರ್ಗಾವಣೆ – ಷರತ್ತು ವಿಧಿಸಿದ ಸರ್ಕಾರ

    ಕಳವು ಸಂಬಂಧ ದೇವಸ್ಥಾನದ ಆಡಳಿತ ಮಂಡಳಿ ವಿವಿಪುರಂ ಪೊಲೀಸ್ ಠಾಣೆಯಲ್ಲಿ (VV Puram Police Station) ಕೇಸ್ ದಾಖಲಿಸಿದ್ದರು. ಈ ಸಂಬಂಧ ಪೊಲೀಸರು ತೀವ್ರ ಶೋಧ ನಡೆಸಿ ರವಿಯನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಜೀವನ ನಡೆಸಲು ಕಷ್ಟ ಅಂತ ವಿಗ್ರಹ ಕದ್ದೆ ಎಂದಿದ್ದಾನೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉತ್ತರಾಖಂಡ್ ಒಂದೇ ಜೈಲಿನ 44 ಕೈದಿಗಳಿಗೆ ಹೆಚ್‍ಐವಿ ಪಾಸಿಟಿವ್

    ಉತ್ತರಾಖಂಡ್ ಒಂದೇ ಜೈಲಿನ 44 ಕೈದಿಗಳಿಗೆ ಹೆಚ್‍ಐವಿ ಪಾಸಿಟಿವ್

    ಡೆಹ್ರಡೂನ್: ಉತ್ತರಾಖಂಡ್‍ನ ಹಲ್ದ್ವಾನಿಯ (Haldwani) ಜೈಲಿನಲ್ಲಿ 44 ಕೈದಿಗಳಿಗೆ (Prisoners) ಹೆಚ್‍ಐವಿ (HIV) ಇರುವುದು ಪತ್ತೆಯಾಗಿದೆ. ಒಬ್ಬ ಮಹಿಳಾ ಖೈದಿ ಕೂಡ ಹೆಚ್‍ಐವಿ ಸೋಂಕಿಗೆ ಒಳಗಾಗಿದ್ದಾರೆ ಎಂದು ಸುಶೀಲಾ ತಿವಾರಿ ಆಸ್ಪತ್ರೆಯ ಎಆರ್‌ಟಿ ಸೆಂಟರ್‌ನ (ART Center) ಡಾ.ಪರಮ್‍ಜಿತ್ ಸಿಂಗ್ ತಿಳಿಸಿದ್ದಾರೆ.

    ಜೈಲಿನಲ್ಲಿ ಹೆಚ್‍ಐವಿ ಪಾಸಿಟಿವ್ ಕೈದಿಗಳ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಇದು ಜೈಲು ಆಡಳಿತದಲ್ಲಿ ಸಂಚಲನ ಮೂಡಿಸಿದೆ ಎಂದು ಸಿಂಗ್ ಹೇಳಿದ್ದಾರೆ. ಇದನ್ನೂ ಓದಿ: 1,100 ಕೋಳಿಗಳನ್ನು ಹೆದರಿಸಿ ಕೊಂದಿದ್ದ ವ್ಯಕ್ತಿಗೆ ಜೈಲು

    ಹೆಚ್‍ಐವಿ ರೋಗಿಗಳಿಗೆ ಎಆರ್‌ಟಿ ಕೇಂದ್ರವನ್ನು ಸ್ಥಾಪಿಸಲಾಗಿದೆ. ಅಲ್ಲಿ ಸೋಂಕಿತ ರೋಗಿಗಳಿಗೆ ಚಿಕಿತ್ಸೆ (Treatment) ನೀಡಲಾಗುತ್ತದೆ. ವೈದ್ಯರ ತಂಡ ಜೈಲಿನಲ್ಲಿರುವ ಕೈದಿಗಳನ್ನು ನಿರಂತರವಾಗಿ ಪರೀಕ್ಷಿಸುತ್ತಿದೆ ಎಂದು ಸಿಂಗ್ ಹೇಳಿದ್ದಾರೆ.

    ಹೆಚ್‍ಐವಿ ಸೋಂಕಿಗೆ ಒಳಗಾಗಿರುವ ರೋಗಿಗಳಿಗೆ ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯ (NACO) ಮಾರ್ಗಸೂಚಿಗಳ ಆಧಾರದ ಮೇಲೆ ಉಚಿತ ಚಿಕಿತ್ಸೆ ಮತ್ತು ಔಷಧಗಳನ್ನು ನೀಡಲಾಗುತ್ತದೆ. ಪ್ರಸ್ತುತ 1,629 ಪುರುಷ ಮತ್ತು 70 ಮಹಿಳಾ ಕೈದಿಗಳಿದ್ದಾರೆ. ಇಷ್ಟು ದೊಡ್ಡ ಸಂಖ್ಯೆಯಲ್ಲಿ ಕೈದಿಗಳು ಹೆಚ್‍ಐವಿ ಪಾಸಿಟಿವ್‍ಗೆ ತುತ್ತಾದ ಬಳಿಕ ಜೈಲು ಆಡಳಿತ ದಿನನಿತ್ಯ ತಪಾಸಣೆ ನಡೆಸುತ್ತಿದೆ. ಇದರಿಂದ ಹೆಚ್‍ಐವಿ ಸೋಂಕಿತ ರೋಗಿಗಳಿಗೆ ಸಕಾಲದಲ್ಲಿ ಚಿಕಿತ್ಸೆ ನೀಡಲು ಸಹಕಾರಿಯಾಗಲಿದೆ ಎಂದು ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ಯುರೋಪ್ ರಾಷ್ಟ್ರಗಳು ಅಮೆರಿಕ ಅವಲಂಬನೆ ಬಿಡಬೇಕು : ಫ್ರಾನ್ಸ್ ಅಧ್ಯಕ್ಷ

  • ಹೆಚ್‌ಐವಿ ಸೋಂಕು – ಮನನೊಂದು ರೋಗಿ ಆತ್ಮಹತ್ಯೆ

    ಹೆಚ್‌ಐವಿ ಸೋಂಕು – ಮನನೊಂದು ರೋಗಿ ಆತ್ಮಹತ್ಯೆ

    ಬೀದರ್: ಹೆಚ್‌ಐವಿ (HIV) ಸೋಂಕಿಗೆ ಮನನೊಂದು ರೋಗಿ ನೇಣು ಬಿಗಿದು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಬೀದರ್ (Bidar) ಜಿಲ್ಲೆಯಲ್ಲಿ ನಡೆದಿದೆ.

    ಬೀದರ್ ಜಿಲ್ಲೆಯ ಬಸವಕಲ್ಯಾಣ ಪಟ್ಟಣದ ತ್ರಿಪುರಾಂತದಲ್ಲಿ ಈ ಘಟನೆ ನಡೆದಿದ್ದು, ರಮೇಶ್ ಮಡಿವಾಳ (35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಲವು ವರ್ಷಗಳಿಂದ ಹೆಚ್‌ಐವಿ ರೋಗಕ್ಕೆ ತುತ್ತಾಗಿದ್ದ ರಮೇಶ್ ಮನನೊಂದು ಬುಧವಾರ ಯಾರೂ ಇಲ್ಲದ ವೇಳೆ ಮನೆಯ ಮೇಲ್ಛಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ: ಸತತ 2ನೇ ಬಾರಿಗೆ ತ್ರಿಪುರ ಸಿಎಂ ಆಗಿ ಮಣಿಕ್ ಸಹಾ ಪ್ರಮಾಣ ವಚನ ಸ್ವೀಕಾರ

    ಈ ಕುರಿತು ಬಸವಕಲ್ಯಾಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ನಗರ ಠಾಣೆಯ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ನೌಕಾಸೇನೆಯ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ; ಮೂವರು ಪೈಲೆಟ್‌ಗಳ ರಕ್ಷಣೆ

  • ಕೂಡಿಬಾಳಲು ಒಪ್ಪಿಕೊಳ್ಳದ ಮಾಜಿ ಪತ್ನಿಗೆ HIV ರೋಗಿಯ ರಕ್ತ ಇಂಜೆಕ್ಟ್ ಮಾಡಿದ ಭೂಪ

    ಕೂಡಿಬಾಳಲು ಒಪ್ಪಿಕೊಳ್ಳದ ಮಾಜಿ ಪತ್ನಿಗೆ HIV ರೋಗಿಯ ರಕ್ತ ಇಂಜೆಕ್ಟ್ ಮಾಡಿದ ಭೂಪ

    – ಕ್ರೈಂ ಥ್ರಿಲರ್ ಟಿವಿ ಶೋ ನಿಂದ ಪ್ರೇರಣೆ
    – ತನಿಖೆ ವೇಳೆ ರೋಚಕ ರಹಸ್ಯ ಬಯಲು

    ನವದೆಹಲಿ: ಪ್ರತಿಷ್ಠಿತ ಟಿ.ವಿ ಕಾರ್ಯಕ್ರಮವೊಂದರಿಂದ (TV Show) ಪ್ರೇರಣೆ ಪಡೆದ ವ್ಯಕ್ತಿಯೊಬ್ಬ ತನ್ನೊಂದಿಗೆ ಕೂಡಿಬಾಳಲು ಒಪ್ಪಿಕೊಳ್ಳದ ಮಾಜಿ ಪತ್ನಿಗೆ ಹೆಚ್‌ಐವಿ ರೋಗಿಯ ರಕ್ತವನ್ನು ಇಂಜೆಕ್ಟ್ ಮಾಡಿರುವ ಘಟನೆ ಗುಜರಾತ್‌ನ (Gujarat) ಸೂರತ್‌ನಲ್ಲಿ  ನಡೆದಿದೆ.

    ಸಂತ್ರಸ್ತ ಮಹಿಳೆ ನೀಡಿದ ದೂರಿನ ಮೇರೆಗೆ ಆರೋಪಿಯನ್ನ ಸೂರತ್ ಪೊಲೀಸರು (Surat Police) ಬಂಧಿಸಿದ್ದಾರೆ. ಬಳಿಕ ತನಿಖೆಯಲ್ಲಿ ಆತ ಕ್ರೈಂ (Crime) ಥ್ರಿಲ್ಲಿಂಗ್ ಟಿವಿ ಶೋ ನಿಂದ ಪ್ರೇರಿತನಾಗಿದ್ದಾನೆ ಎಂಬುದು ತಿಳಿದುಬಂದಿದೆ. ಇದನ್ನೂ ಓದಿ: ಪೆರೋಲ್ ಪಡೆದು ಪರಾರಿಯಾದಾತ ತನ್ನದೇ ಸಾವಿನ ಕತೆ ಕಟ್ಟಿದ – 15 ವರ್ಷಗಳ ಬಳಿಕ ಮತ್ತೆ ಅಂದರ್

    ಸಂತ್ರಸ್ತ ಮಹಿಳೆ ಹಾಗೂ ಆರೋಪಿ (Accused) ಕಳೆದ 15 ವರ್ಷಗಳ ಹಿಂದೆ ಮದುವೆಯಾಗಿದ್ದರು. ಎಲ್ಲವೂ ಚೆನ್ನಾಗಿಯೇ ಇತ್ತು. ಆದ್ರೆ ಕಳೆದ 2 ತಿಂಗಳಿನಿಂದ ನಿರಂತರ ಜಗಳದಿಂದಾಗಿ ವಿಚ್ಛೇದನ ಪಡೆದು ಇಬ್ಬರೂ ದೂರವಾಗಿದ್ದರು. ಒಂಟಿ ಜೀವನದಿಂದ ಬೇಸತ್ತಿದ್ದ ಆರೋಪಿ ಪತಿ ಮತ್ತೆ ತನ್ನ ಸಂಗಾತಿಯೊಂದಿಗೆ ಕೂಡಿಬಾಳಲು ನಿರ್ಧರಿಸಿದ್ದನು. ಆದ್ರೆ ಇದಕ್ಕೆ ಮಹಿಳೆ ಒಪ್ಪಿಕೊಳ್ಳಲಿಲ್ಲ. ಹಾಗಾಗಿ ಆಕೆ ವಿರುದ್ಧ ಸೇಡು ತೀರಿಸಿಕೊಳ್ಳಲು ಕಳೆದ ಒಂದು ತಿಂಗಳಿನಿಂದ ಸ್ಕೆಚ್ ಹಾಕಿ ಭೇಟಿಯಾಗಲು ಕಾಯುತ್ತಿದ್ದನು. ಇದನ್ನೂ ಓದಿ: ರಚನಾ ದಶರಥ್ ಜೊತೆ ಎಂಗೇಜ್‌ಮೆಂಟ್ ಮಾಡಿಕೊಂಡ ಲೋಕೇಶ್ ಬಸವಟ್ಟಿ

    ಬಹುದಿನಗಳ ನಂತರ ಭಾನುವಾರ (ಡಿ.25) ಇಬ್ಬರೂ ಭೇಟಿಯಾಗಿದ್ದರು. ಇಬ್ಬರೂ ರೆಸ್ಟೋರೆಂಟ್ ಹೋಗಿ ಊಟ ಮಾಡಿ, ಶಾಪಿಂಗ್ ಸಹ ಮುಗಿಸಿದ್ದರು. ಸಂಜೆ ಸ್ವಲ್ಪ ಖಾಸಗಿ ಸಮಯ ಕಳೆಯೋದಕ್ಕಾಗಿ ಮೋರಾ ಭಾಗಲ್ ಪ್ರದೇಶದಲ್ಲಿ ಪ್ರತ್ಯೇಕ ಸ್ಥಳಕ್ಕೆ ತೆರಳಿದ್ದರು. ಈ ಸಮಯದಲ್ಲಿ ಮಾಜಿ ಪತಿ ಆಕೆಯ ಮನವೊಲಿಸಲು ಶತಾಯಗತಾಯ ಪ್ರಯತ್ನಿಸಿದ್ದಾನೆ. ಆದರೂ ಆಕೆ ಒಪ್ಪಿಕೊಳ್ಳದ ಮೇಲೆ, ತಬ್ಬಿಕೊಳ್ಳುವ ನೆಪದಲ್ಲಿ ಪೃಷ್ಠ ಭಾಗಕ್ಕೆ (ಹಿಂಬದಿಯ ಪಕ್ಕೆಯಿಂದ ಕೆಳಭಾಗ) ಹೆಚ್‌ಐವಿ ರೋಗಿಯ ರಕ್ತವನ್ನು ಇಂಜೆಕ್ಟ್ ಮಾಡಿದ್ದಾನೆ. ಸ್ವಲ್ಪ ಸಮಯದಲ್ಲೇ ಮಹಿಳೆ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾಳೆ. ಮರಳಿ ಪ್ರಜ್ಞೆ ಬಂದೊಡನೆ ವೈದ್ಯರಿಂದ ಮಾಹಿತಿ ಪಡೆದು ನಂತರ ಪೊಲೀಸರಿಗೆ ದೂರು ನೀಡಿದ್ದಾಳೆ. ಆರೋಪಿಯನ್ನು ಬಂಧಿಸಿ ತನಿಖೆಗೆ ಒಳಪಡಿಸಿದಾಗ ಆತನ ಪ್ಯಾಂಟ್ ಜೇಬಿನಲ್ಲಿ ರಕ್ತದ ಕಲೆ ಪತ್ತೆಯಾಗಿದೆ.

    ಥ್ರಿಲ್ಲರ್ ಟಿವಿ ಶೋ ಪ್ರೇರಣೆ: ಮಹಿಳೆಗೆ ಇಂಜೆಕ್ಟ್ ಮಾಡಲು ಒಂದು ತಿಂಗಳ ಹಿಂದೆಯೇ ಯೋಜಿಸಿದ್ದನು. ಒಂದು ಟಿವಿ ಶೋನಿಂದ ಪ್ರೇರಣೆ ಪಡೆದಿದ್ದನು. ಆ ಟಿವಿ ಶೋನಲ್ಲಿ `ವ್ಯಕ್ತಿಯೊಬ್ಬ ಹೆಣ್ಣು ನಾಯಿಗೆ ರಕ್ತವನ್ನು ಇಂಜೆಕ್ಟ್ ಮಾಡುತ್ತಾನೆ’ ಅದನ್ನು ನಾನೂ ನೋಡಿದ್ದೆ ಎಂದು ಆರೋಪಿ ಒಪ್ಪಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸದ್ಯ ರಕ್ತ ಹೇಗೆ ಪಡೆದುಕೊಂಡನು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]