Tag: hivamogga

  • ಬಿರುಬೇಸಿಗೆಯಲ್ಲೂ ಜೋಗ ಜಲಪಾತದಲ್ಲಿ ಧುಮ್ಮಿಕ್ಕಿ ಹರಿಯುತ್ತಿದೆ ಶರಾವತಿ ಜಲಧಾರೆ

    ಬಿರುಬೇಸಿಗೆಯಲ್ಲೂ ಜೋಗ ಜಲಪಾತದಲ್ಲಿ ಧುಮ್ಮಿಕ್ಕಿ ಹರಿಯುತ್ತಿದೆ ಶರಾವತಿ ಜಲಧಾರೆ

    ಶಿವಮೊಗ್ಗ: ಬಿರುಬೇಸಿಗೆಯಲ್ಲೂ ಮಳೆಗಾಲದಂತೆ ಧುಮ್ಮಿಕ್ಕಿ ಹರಿಯುತ್ತಿರುವ ಶರಾವತಿ ಜಲಧಾರೆಯನ್ನು ಕಂಡು ಪ್ರವಾಸಿಗರು ಇದೀಗ ಫುಲ್ ಶಾಕ್ ಆಗಿದ್ದಾರೆ.

    ಕೇವಲ ಮಳೆಗಾಲದ ನಾಲ್ಕು ತಿಂಗಳುಗಳ ಕಾಲ ಧುಮ್ಮಿಕ್ಕಿ ಭೋರ್ಗರೆಯುತ್ತಿದ್ದ ವಿಶ್ವ ವಿಖ್ಯಾತ ಜೋಗ ಜಲಪಾತ (Jog Falls) ಇದೀಗ ಬೇಸಿಗೆಯಲ್ಲೂ ನಳನಳಿಸುತ್ತಿದೆ. ಆಶ್ಚರ್ಯವಾದರೂ ಇದು ಸತ್ಯ. ಕಡಿದಾದ ಬಂಡೆಗಳ ನಡುವೆ ಶರಾವತಿಯ ನರ್ತನ ಬಿರುಬೇಸಿಗೆಯಲ್ಲೂ ಕಾಣಸಿಗುತ್ತಿದೆ.

    ಜೋಗವು ಭಾರತದ ಎರಡನೇ ಹಾಗೂ ವಿಶ್ವದ ಐದನೇ ಅತೀ ಎತ್ತರದ ಜಲಪಾತವಾಗಿದ್ದು, ಸುಮಾರು 900 ಅಡಿ ಎತ್ತರದಿಂದ ಈ ಜಲಪಾತದ ಕಣಿವೆಗಳಲ್ಲಿ ಹಾಲ್ನೊರೆಯಂತೆ ಶರಾವತಿ ಭೋರ್ಗರೆಯುತ್ತಾಳೆ. ಕೇವಲ ಮುಂಗಾರು ಮಳೆ ಸಂದರ್ಭದಲ್ಲಿ ಮಾತ್ರ ಕಣ್ಮನ ಸೆಳೆಯುವ ಜೋಗ ಜಲಪಾತದಲ್ಲಿ ಇದೀಗ ಬೇಸಿಗೆ ಸಮಯದಲ್ಲೂ ನಯನ ಮನೋಹರವಾಗಿ ಜಲಧಾರೆ ಧುಮ್ಮಿಕ್ಕಿ ಹರಿಯತ್ತಿದೆ.

    ಈ ಸುಂದರ ರಮಣೀಯ ದೃಶ್ಯವನ್ನು ಕಣ್ತುಂಬಿಸಿಕೊಳ್ಳಲು ಸ್ಥಳೀಯರು ಸೇರಿದಂತೆ, ರಾಜ್ಯ, ದೇಶ, ವಿದೇಶಗಳಿಂದಲೂ ಪ್ರವಾಸಿಗರು ಬರುತಿದ್ದಾರೆ. ಕಡಿದಾದ ಬಂಡೆ ಕಣಿವೆಗಳ ಮೂಲಕ ಶರಾವತಿ ಹರಿಯುವುದನ್ನ ನೋಡುವುದೇ ಒಂದು ಸೊಬಗು. ಅದರಲ್ಲೂ ನಿಸರ್ಗಕ್ಕೆ ಅತ್ಯಂತ ಆಪ್ತ ಸ್ಥಳವಾಗಿರುವ ಜೋಗದಲ್ಲಿ, ಇದೀಗ ಬಿರು ಬಿಸಿಲ ಝಳದ ನಡುವೆ ರಾಜ, ರಾಣಿ, ರೋರರ್, ರಾಕೆಟ್ ಕಣಿವೆಗಳಲ್ಲಿ ಜಲಧಾರೆ ಹರಿಯುತ್ತಿದ್ದು, ಎಲ್ಲರೂ ಆಶ್ಚರ್ಯಗೊಳ್ಳುವಂತಾಗಿದೆ. ಇದನ್ನೂ ಓದಿ: ಕುಂಕುಮ ಎಂದರೆ ಬೆಚ್ಚಿ ಬೀಳುತ್ತಿದ್ದ ಸಿದ್ದರಾಮಯ್ಯ ಇಂದು ದೇವಸ್ಥಾನ ಬಿಟ್ಟು ಬದುಕುತ್ತಿಲ್ಲ: ಈಶ್ವರಪ್ಪ

    ಇಲ್ಲಿನ ಮಹಾತ್ಮ ಗಾಂಧಿ ಪವರ್ ಸ್ಟೇಷನ್ ಗೆ ನೀರು ಹರಿಸುವ ಚೈನಾ ಗೇಟ್ ನಲ್ಲಿ ಸಾಕಷ್ಟು ಪ್ರಮಾಣದ ನೀರು ಸೋರಿಕೆಯಾಗುತ್ತಿದ್ದು, ಈ ನೀರು ನೇರವಾಗಿ ನದಿ ಮೂಲಕ ಜಲಪಾತಕ್ಕೆ ಹರಿದು ಬರುತ್ತಿದೆ. ಪವರ್ ಚಾನಲ್‍ಗಳಲ್ಲೂ ಸಾಕಷ್ಟು ನೀರು ಸೋರಿಕೆಯಾಗುತ್ತಿದ್ದು, ಅದು ಕೂಡ ಜಲಪಾತಕ್ಕೆ ನೀರು ಹರಿಯಲು ಕಾರಣವಾಗಿದ್ದು ಇದರಿಂದ ಜಲಪಾತದಲ್ಲಿ ನಿರಂತರವಾಗಿ ಜಲಧಾರೆ ಸೃಷ್ಟಿಯಾಗಲು ಕಾರಣವಾಗಿದೆ.

    ಹಾಲ್ನೊರೆಯಂತೆ ಉಕ್ಕಿ ಹರಿಯುವ ನೀರು ನೋಡುವುದೇ ಒಂದು ದೃಶ್ಯ ಕಾವ್ಯ. ಅದರಲ್ಲೂ ಬಿರು ಬೇಸಿಗೆಯಲ್ಲಿ ಕೂಡ ಅಚಾನಕ್ಕಾಗಿ ಹರಿದು ಬಂದ ನೀರು ಜಲಪಾತದ ವರ್ಣನೆಗೆ ಪದಗಳೇ ಸಾಲದು. ಅಚಾನಕ್ಕಾಗಿ ಜೋಗಕ್ಕೆ ಭೇಟಿ ನೀಡಿದ ಪ್ರವಾಸಿಗರು ಮತ್ತು ಸ್ಥಳಿಯರು ಇದೀಗ ಮನಮೋಹಕ ದೃಶ್ಯವನ್ನು ಕಂಡು ಸಂಭ್ರಮಿಸುವಂತಾಗಿದೆ.

  • ಶಿವಮೊಗ್ಗ ಹರ್ಷ ಕೊಲೆ ಸಂಚು ಬಹಿರಂಗ- ಹಿಂದೂ ಸಂಘಟನೆಗಳ ಸದ್ದಡಗಿಸಲು ಮರ್ಡರ್

    ಶಿವಮೊಗ್ಗ ಹರ್ಷ ಕೊಲೆ ಸಂಚು ಬಹಿರಂಗ- ಹಿಂದೂ ಸಂಘಟನೆಗಳ ಸದ್ದಡಗಿಸಲು ಮರ್ಡರ್

    – ಸಾವಿರ ಪುಟಗಳ ಚಾರ್ಜ್‍ಶೀಟ್‍ನಲ್ಲಿ ಅಚ್ಚರಿ ಸಂಗತಿ

    ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಹತ್ಯೆ ಹಿಂದಿನ ಸ್ಫೋಟಕ ರಹಸ್ಯ ಬಟಾಬಯಲಾಗಿದೆ. ಕೊಲೆ ಸಂಬಂಧ ತನಿಖೆ ನಡೆಸಿದ ಎನ್‍ಐಎ 10 ಆರೋಪಿಗಳ ಮೇಲೆ ಕೋರ್ಟ್‍ಗೆ ಚಾರ್ಜ್‍ಶೀಟ್ ಸಲ್ಲಿಕೆ ಮಾಡಿದೆ. ಸಾವಿರ ಪುಟದ ಚಾರ್ಜ್‍ಶೀಟ್‍ನಲ್ಲಿ ಹತ್ಯೆ ಹಿಂದಿನ ಒಳಸಂಚು ಬಯಲಾಗಿದೆ.

    ಹೌದು, ಹರ್ಷ ಹತ್ಯೆ ಹಂತಕರ ಉದ್ದೇಶ ಹಿಂದೂ ಸಂಘಟನೆಯ ಒಬ್ಬರನ್ನ ಹತ್ಯೆ ಮಾಡಿ ಹಿಂದೂ ಸಂಘಟನೆಗಳನ್ನು ಬೆದರಿಸುವುದು. ಹಿಂದೂ ಸಂಘಟನೆಗಳ ಉಪಟಳಕ್ಕೆ ಬ್ರೇಕ್ ಹಾಕಬೇಕು ಅನ್ನೋ ಕಾರಣಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತನ ಹತ್ಯೆ ಮಾಡೋದು ಉದ್ದೇಶ ಆಗಿತ್ತಂತೆ. ಆಗ ಹತ್ಯೆಗೆ ಸ್ಕೆಚ್ ಹಾಕಿದ್ದಾಗ ಕಣ್ಣಿಗೆ ಬಿದ್ದದ್ದು ಹರ್ಷ. ಇದನ್ನೂ ಓದಿ: ಖ್ಯಾತ ವೈದ್ಯ, ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ಗುರುರಾಜ್ ಹೆಬ್ಬಾರ್ ನಿಧನ

    ಹಳೆಯ ದ್ವೇಷ ಇಟ್ಟುಕೊಂಡಿದ್ದ ಹರ್ಷನನ್ನ ಮುಗಿಸೋಕೆ ಪ್ಲಾನ್ ಮಾಡಿಕೊಂಡಿದ್ದ ಹಂತಕರು, 15 ದಿನಗಳ ಕಾಲ ಹೊಂಚು ಹಾಕಿ ಕೂತಿದ್ರು. ಹರ್ಷನ ಹಿಂದೆ ಹಿಂದೆ ಸುತ್ತಿ ಕೊನೆಗೆ ಹತ್ಯೆ ಮಾಡಿಮುಗಿಸಿದ್ದಾರೆಂದು ಎನ್‍ಐಎ ನ್ಯಾಯಾಲಯಕ್ಕೆ ಸಲ್ಲಿಸಿರೋ ದೋಷಾರೋಪ ಪಟ್ಟಿ ನಮೂದಿಸಲಾಗಿದೆ. ಹರ್ಷ ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ. ಹೀಗಾಗಿ ಹರ್ಷನನ್ನು ಕೊಲೆ ಮಾಡಿದ್ರೆ ಹಿಂದೂ ಸಂಘಟನೆಯವರೆಲ್ಲಾ ಹೆದರಿ ತಣ್ಣಗಾಗ್ತಾರೆ ಅನ್ನೋದು ಹಂತಕರ ಉದ್ದೇಶ ಅಂತ ತನಿಖೆ ವೇಳೆ ಬೆಳಕಿಗೆ ಬಂದಿದೆ.

    ಮಾಜಿ ಸಚಿವ ಈಶ್ವರಪ್ಪ ಮಾತನಾಡಿ, ಹೇಡಿ ಕೊಲೆಗಾರರು ಹಿಂದೂ ಹುಲಿಗಳ ಕೊಂದರೆ ಹಿಂದುತ್ವ ನಾಶ ಆಗಲ್ಲ. ಇದೇ ಆಟ ಮುಂದುವರಿಸಿದರೆ ಅದಕ್ಕೆ ಸರಿಯಾದ ಬೆಲೆ ತೆತ್ತಬೇಕು ಅಂತ ಎಚ್ಚರಿಕೆ ಕೊಟ್ಟಿದ್ದಾರೆ. ಸದ್ಯ ಎನ್‍ಐಎ ಅಧಿಕಾರಿಗಳು ಎನ್‍ಐಎ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. 10 ಆರೋಪಿಗಳ ಹೇಳಿಕೆ ತಾಂತ್ರಿಕ ಸಾಕ್ಷ್ಯಗಳ ಜೊತೆಗೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಶಿವಮೊಗ್ಗದಲ್ಲಿ ಹಿಂಸಾಚಾರ, ಶಾಲಾ- ಕಾಲೇಜುಗಳಿಗೆ ರಜೆ: ಸೋಮವಾರ ನಡೆದಿದ್ದು ಏನು?

    ಶಿವಮೊಗ್ಗದಲ್ಲಿ ಹಿಂಸಾಚಾರ, ಶಾಲಾ- ಕಾಲೇಜುಗಳಿಗೆ ರಜೆ: ಸೋಮವಾರ ನಡೆದಿದ್ದು ಏನು?

    ಶಿವಮೊಗ್ಗ: ಹಿಜಬ್ ವಿಚಾರದಲ್ಲಿ ರಾಜ್ಯದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣ ಆಗಿರುವ ಸಂದರ್ಭದಲ್ಲೇ ಉರಿವ ಬೆಂಕಿಗೆ ಪೆಟ್ರೋಲ್ ಸುರಿಯುವಂತಹ ಘಟನೆ ಕೋಮು ಸೂಕ್ಷ್ಮ ಶಿವಮೊಗ್ಗದಲ್ಲಿ ನಡೆದಿದೆ. ಭಾನುವಾರ ರಾತ್ರಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತ ಹರ್ಷ ಕೊಲೆಯಿಂದ ಶಿವಮೊಗ್ಗ ನಗರ ಇವತ್ತು ಇಡೀ ಕೋಮು ದಳ್ಳುರಿಯಲ್ಲಿ ಬೆಂದಿದೆ.

    ಜಿಲ್ಲಾಡಳಿತ ವಿಧಿಸಿದ್ದ ನಿಷೇಧಾಜ್ಞೆ ಲೆಕ್ಕಿಸದೇ ಮೃತನ ಮೆರವಣಿಗೆ ನಡೆಸಿದ ಉದ್ರಿಕ್ತರು, ಮಾರ್ಗಮಧ್ಯೆ ಪ್ರಚೋದನೆಗೆ ಒಳಗಾಗಿ ವಿಧ್ವಂಸಕ ಕೃತ್ಯಗಳನ್ನು ಎಸಗಿದ್ದಾರೆ. ಕೆಲವರು ಪೊಲೀಸರ ಮುಂದೆಯೇ ಮಾರಕಾಸ್ತ್ರ ಝಳಪಿಸಿದ್ದಾರೆ. ದೊಣ್ಣೆ ಎತ್ತಿ ಶೋ ತೋರಿಸಿದ್ದಾರೆ.

    ಮಚ್ಚು, ಲಾಂಗ್ ಝಳಪಿಸಿ ಪ್ರಚೋದನೆ ನೀಡಿದ್ದಾರೆ. ಇದರಿಂದ ಸಿಟ್ಟಿಗೆದ್ದ ಉದ್ರ್ರಿಕ್ತರು ಸಿಕ್ಕ ಸಿಕ್ಕ ಮನೆ, ಅಂಗಡಿಗಳಲ್ಲಿ ದಾಂಧಲೆ ನಡೆಸಿದ್ದಾರೆ. ಸಿಕ್ಕ ಸಿಕ್ಕ ವಸ್ತುಗಳಿಗೆ ಬೆಂಕಿ ಹಚ್ಚಿ, ಕಲ್ಲು ತೂರಾಟ ನಡೆಸಿದ್ದಾರೆ. ಇದನ್ನೂ ಓದಿ: ಹಿಜಬ್ ಬಗ್ಗೆ ಕೊನೆಗೂ ಮೌನ ಮುರಿದ ಅಮಿತ್ ಶಾ

    ಸಚಿವ ಈಶ್ವರಪ್ಪ ನೇತೃತ್ವ ವಹಿಸಿದ್ದ ಶವದ ಮೆರವಣಿಗೆ ವೇಳೆಯೂ, ಉದ್ರಿಕ್ತರ ಗುಂಪು ಕಲ್ಲು ತೂರಾಟ ನಡೆಸಿದೆ. ಹರ್ಷ ಅಂತ್ಯಕ್ರಿಯೆ ವೇಳೆಯೂ ಕಲ್ಲು ತೂರಾಟವಾಗಿದೆ. ಮೆರವಣಿಗೆಯುದ್ದಕ್ಕೂ ನಡೆದ ಹಿಂಸಾಚಾರಕ್ಕೆ ಪೊಲೀಸರು ಮೂಕ ಪ್ರೇಕ್ಷಕರಾಗಿದ್ದು ವಿಪರ್ಯಾಸ.

    ಪರಿಸ್ಥಿತಿ ವಿಕೋಪಕ್ಕೆ ಹೋಗುವ ಹಂತದಲ್ಲಿ ಒಮ್ಮೆ ಆಶ್ರುವಾಯು ಕೂಡ ಪ್ರಯೋಗ ಮಾಡಿದರು. ಭಾನುವಾರ ರಾತ್ರಿಯಿಂದ ಶುರುವಾದ ಗಲಭೆ, ಈವರೆಗೂ ಪೂರ್ಣ ಪ್ರಮಾಣದಲ್ಲಿ ತಹಬದಿಗೆ ಬಂದಿಲ್ಲ. ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತೆ ಇದೆ. ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗದ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಎಲ್ಲಾ ಕಡೆ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.

    ನಡೆದಿದ್ದು ಏನು?
    ಮೃತ ಯುವಕನ ಅಂತಿಮ ಮೆರವಣಿಗೆ ಸಾಗುತ್ತಿದ್ದ ಉದ್ರಿಕ್ತರಿಂದ ಕಟ್ಟಡ, ಅಂಗಡಿಗಳಿಗೆ ಕಲ್ಲುತೂರಾಟ ನಡೆದಿದೆ. ಮೆರವಣಿಗೆ ವೇಳೆ ಮುಸ್ಲಿಮ್ ಪತಾಕೆ ಹಾರಿಸಿದ್ದರಿಂದ ಯುವಕರು ಪ್ರಚೋದನೆ ಒಳಗಾಗಿ ಮೆರವಣಿಗೆ ವೇಳೆಯೇ ಹಿಂಸೆ, ಕಲ್ಲು ತೂರಾಟ ನಡೆದಿದೆ. ಇದನ್ನೂ ಓದಿ: ಹಿಜಬ್‌ ವಿವಾದ – ಶೀರೂರು ಮಠ, ಶಬರಿ ಮಲೆ, ತ್ರಿವಳಿ ತಲಾಖ್‌ ಪ್ರಕರಣ ಪ್ರಸ್ತಾಪಿಸಿ ಎಜಿ ವಾದ

    ಸಿದ್ದಯ್ಯ ರಸ್ತೆ, ಗಾಂಧಿ ಬಜಾರ್ ರಸ್ತೆಯಲ್ಲಿ ಪರಸ್ಪರ ಕಲ್ಲು ತೂರಾಟ ನಡೆದಿದ್ದು, ಉದ್ರಿಕ್ತರನ್ನು ಚದುರಿಸಲು ಆಶ್ರುವಾಯು ಪ್ರಯೋಗ ನಡೆಯಿತು.

    ಆಜಾದ್ ನಗರದಲ್ಲಿ ಬೈಕ್, ಕಾರುಗಳು ಧ್ವಂಸಗೊಂಡಿದ್ದು, ಮನೆ, ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಅಂಗಡಿಯತ್ತ ಉದ್ರಿಕ್ತರು ಕಲ್ಲು ತೂರಿದ್ದರಿಂದ ಗಾಜುಗಳು ಪುಡಿ ಪುಡಿಯಾಗಿದೆ. ಕಿಡಿಗೇಡಿಗಳ ಕೃತ್ಯಕ್ಕೆ ಬೈಕ್ ಹೊತ್ತಿ ಉರಿದಿದೆ.

    ಜಲ್ಲಿಕಲ್ಲು ತುಂಬಿದ ಲಾರಿಯಿಂದ ಉದ್ರಿಕ್ತರು ಕಲ್ಲುಗಳನ್ನು ಎಸೆದಿದ್ದಾರೆ. ಮನೆಗೆ ನುಗ್ಗಿ ಅಟ್ಟಹಾಸ, ಫ್ರಿಡ್ಜ್, ಬೀರು ಜಖಂಗೊಂಡಿದ್ದು ಕಾರುಗಳ ಗಾಜುಗಳು ಪುಡಿಪುಡಿಯಾಗಿದೆ. ಪೊಲೀಸರ ಮುಂದೆಯೇ ದೊಣ್ಣೆ ಪ್ರದರ್ಶನ ನೀಡಿದ್ದು ಮಚ್ಚು, ಲಾಂಗ್ ಹಿಡಿದು ಕೊಟ್ಟಿದ್ದಾರೆ.

    ಹಣ್ಣಿನ ತಳ್ಳುಗಾಡಿ ಧ್ವಂಸವಾಗಿದ್ದು ಕಲ್ಲುತೂರಾಟದ ವೇಳೆ ಐದಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.