Tag: Holalkere

  • ಸಂಚಾರ ನಿಯಮ ಉಲ್ಲಂಘಿಸಿ ನಾಪತ್ತೆಯಾಗಿದ್ದ ಚಾಲಕ ಕೊಳೆತ ಶವವಾಗಿ ಪತ್ತೆ

    ಸಂಚಾರ ನಿಯಮ ಉಲ್ಲಂಘಿಸಿ ನಾಪತ್ತೆಯಾಗಿದ್ದ ಚಾಲಕ ಕೊಳೆತ ಶವವಾಗಿ ಪತ್ತೆ

    ಚಿತ್ರದುರ್ಗ: ಸಂಚಾರ ನಿಯಮ ಉಲ್ಲಂಘಿಸಿ ಹಣ ಕಟ್ಟಲಾಗದೇ ಪೊಲೀಸ್ ಠಾಣೆಯಿಂದ ನಾಪತ್ತೆಯಾಗಿದ್ದ ಚಾಲಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಪ್ರಕರಣ ಹೊಳಲ್ಕೆರೆ (Holalkere) ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ದಾವಣಗೆರೆಯ (Davanagere) ಜಗಳೂರಿನ ಬಸವಂತ್ ಕುಮಾರ್ (37) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ. ಇತ್ತೀಚೆಗೆ ಈತ ಹೊಳಲ್ಕೆರೆಯ ಕಣಿವೆ ಬಳಿ ಸಂಚಾರ ನಿಯಮ ಉಲ್ಲಂಘನೆ ಮಾಡಿದ್ದ ಎಂಬ ಆರೋಪದಡಿ ಲಾರಿಯನ್ನು ಪೊಲೀಸರು ತಡೆದಿದ್ದರು. ಬಳಿಕ ದಂಡ ಕಟ್ಟಲು ಹಣ ಇಲ್ಲದ ಕಾರಣ ಪೊಲೀಸರು ಲಾರಿಯನ್ನು ಠಾಣೆಗೆ ತಂದಿದ್ದರು. ಹಣ ಕಟ್ಟಲಾಗದೆ ಚಾಲಕ ರಾತ್ರಿ ಪೂರ್ತಿ ಠಾಣೆಯ ಮುಂಭಾಗದಲ್ಲಿ ಕಳೆದಿದ್ದ. ಇದನ್ನೂ ಓದಿ: ಜಿಹಾದಿ ಮನಸ್ಥಿತಿಗಳು ನಮ್ಮ ಮನೆಗೆ ಬಂದ್ರೆ, ಕೋವಿ ಹೊರಬರುತ್ತೆ ಎಂದಿದ್ದ VHP ಮುಖಂಡನ ವಿರುದ್ಧ ಕೇಸ್

    ಮರುದಿನ ಬೆಳಗ್ಗೆ ಬಸವಂತ್ ಕುಮಾರ್ ಲಾರಿಯನ್ನು ಅಲ್ಲಿಯೇ ಬಿಟ್ಟು ತೆರಳಿದ್ದ. ಬಳಿಕ 25 ದಿನಗಳಿಂದ ನಾಪತ್ತೆಯಾಗಿದ್ದ. ಈ ಬಗ್ಗೆ ಆತನ ಪೋಷಕರು ಪೊಲೀಸ್ ಠಾಣೆ ಹಾಗೂ ಎಸ್ಪಿ ಕಚೇರಿ ಬಳಿ ಆತನನ್ನು ಹುಡುಕಿಕೊಡುವಂತೆ ಪ್ರತಿಭಟಿಸಿದ್ದರು. ಅಲ್ಲದೇ ಪೊಲೀಸರನ್ನೇ ಅನುಮಾನಿಸಿದ್ದರು. ಈಗ ಹೊಳೆಲ್ಕೆರೆ ಸ್ಮಶಾನದ ಬಳಿ ಆತನ ಮೃತದೇಹ ನೇಣು ಬಿಗಿದು, ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

    ತೀವ್ರ ಮದ್ಯಪಾನದಿಂದಾಗಿ ಆತನ ಲಿವರ್ ಡ್ಯಾಮೇಜ್ ಆಗಿದ್ದು, ಅನಾರೋಗ್ಯಕ್ಕೊಳಗಾಗಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಒಡಿಶಾ ರೈಲು ದುರಂತ – ಸಿಗ್ನಲಿಂಗ್, ಟ್ರಾಫಿಕ್ ಕಂಟ್ರೋಲ್ ವಿಭಾಗಗಳೇ ಹೊಣೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹೊಳಲ್ಕೆರೆ ಅಖಾಡ ಹೇಗಿದೆ? ಬಿಜೆಪಿ, ಕಾಂಗ್ರೆಸ್ ಮಧ್ಯೆ ನೇರ ಸ್ಪರ್ಧೆ

    ಹೊಳಲ್ಕೆರೆ ಅಖಾಡ ಹೇಗಿದೆ? ಬಿಜೆಪಿ, ಕಾಂಗ್ರೆಸ್ ಮಧ್ಯೆ ನೇರ ಸ್ಪರ್ಧೆ

    ಚಿತ್ರದುರ್ಗ: ಹೊಳಲ್ಕೆರೆ (Holalkere) ವಿಧಾನಸಭಾ ಕ್ಷೇತ್ರವು ಪರಿಶಿಷ್ಟ ಜಾತಿ (SC) ಮೀಸಲು ಕ್ಷೇತ್ರವಾಗಿದೆ. ಈ ಬಾರಿ ಚುನಾವಣೆಗೆ ಹೊಳಲ್ಕೆರೆ ಕ್ಷೇತ್ರದಿಂದ ಕಾಂಗ್ರೆಸ್ (Congress) ಅಭ್ಯರ್ಥಿಯಾಗಿ ಮಾಜಿ ಸಚಿವ ಆಂಜನೇಯ (Anjaneya), ಬಿಜೆಪಿಯಿಂದ (BJP) ಎಂ.ಚಂದ್ರಪ್ಪ (M.Chandrappa), ಜೆಡಿಎಸ್ (JDS) ಪಕ್ಷದಿಂದ ಇಂದ್ರಜಿತ್ ನಾಯ್ಕ್ (Indrajith Naik) ಹಾಗೂ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಟಿಹೆಚ್‌ಒ ಡಾ.ಜಯಸಿಂಹ (Dr.Jayasimha) ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.

    ಆಂಜನೇಯ:
    ಮಾಜಿ ಸಚಿವ ಆಂಜನೇಯ ಕಳೆದ ಬಾರಿ ಕಾಂಗ್ರೆಸ್ ಸರ್ಕಾರದಲ್ಲಿ ಪ್ರಭಾವಿ ಸಚಿವರಾಗಿ ಸಾಕಷ್ಟು ಅಭಿವೃದ್ಧಿ ಮಾಡಿದ್ದರು. ಆದರೆ ಸಚಿವರಾಗಿದ್ದ ಸಮಯದಲ್ಲಿ ಜನರ ಕೈಗೆ ಸಿಗಲಿಲ್ಲವೆಂಬ ಕಾರಣಕ್ಕೆ ಹೊಳಲ್ಕೆರೆ ಮತದಾರರು ಅವರನ್ನು ಸೋಲಿಸಿದ್ದರು.

    ಎಂ.ಚಂದ್ರಪ್ಪ:
    ಬಿಎಸ್‌ವೈ ಬೆಂಬಲಿಗರು ಆಂಜನೇಯ ಅವರ ವಿರುದ್ಧ ಎಂ.ಚಂದ್ರಪ್ಪ ಅವರನ್ನು ಗೆಲ್ಲಿಸಿದ್ದರು. ಆದರೆ ಈ ಬಾರಿ ಚಂದ್ರಪ್ಪ ವಿರುದ್ಧ ವಿರೋಧಿ ಅಲೆಯಿದೆ. ಸರ್ಕಾರದಲ್ಲಿ ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷರಾಗಿ ಗೂಟದ ಕಾರಲ್ಲಿ ಓಡಾಡಿದ ಚಂದ್ರಪ್ಪ, ಕ್ಷೇತ್ರದಲ್ಲಿ ದ್ವೇಷದ ರಾಜಕಾರಣ ಮಾಡಿದ್ದಾರೆ ಎಂಬ ಆರೋಪವಿದೆ.

    ಕಳೆದ ಬಾರಿ ಸೋತರೂ ಸಹ ಕ್ಷೇತ್ರದಲ್ಲಿ ನಿರಂತರ ಸಂಪರ್ಕದಲ್ಲಿರುವ ಕಾಂಗ್ರೆಸ್ ಅಭ್ಯರ್ಥಿ ಆಂಜನೇಯ ಅವರ ಪರ ಜನರಿಗೆ ಸ್ವಲ್ಪ ಅನುಕಂಪವಿದೆ. ಹಾಗೆಯೇ ಇದು ನನ್ನ ಕೊನೆಯ ಚುನಾವಣೆ ಎಂದು ಘೋಷಿಸಿರುವ ಆಂಜನೇಯ ಅವರ ಸರಳತೆ ಹಾಗೂ ಸೌಜನ್ಯತೆ ಹೊಳಲ್ಕೆರೆಯಲ್ಲಿ ವರ್ಕೌಟ್ ಆಗುತ್ತಾ ಎನ್ನುವುದು ಸದ್ಯದ ಕುತುಹೂಲ.

    ಈ ಕ್ಷೇತ್ರದಲ್ಲಿ ಸಿರಿಗೆರೆ ಮಠ ಹಾಗೂ ಸಾದರ ಲಿಂಗಾಯತ ಸಮುದಾಯದ ಮತಗಳು ನಿರ್ಣಾಯಕ ಪಾತ್ರ ವಹಿಸಲಿದ್ದು, ಸಿರಿಗೆರೆ ಮಠಾಧಿಪತಿಯ ಕೃಪಾಕಟಾಕ್ಷ ಪಡೆದವರ ಗೆಲುವು ಸುಲಭವೆಂಬ ಚರ್ಚೆ ನಡೆಯುತ್ತಿದೆ. ಇವರಿಬ್ಬರ ಮಧ್ಯೆ ಬಿಜೆಪಿ ಬಂಡಾಯ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಡಾ.ಜಯಸಿಂಹ ಕ್ಷೇತ್ರದಲ್ಲಿ ಹೊಸಮುಖವಾಗಿದೆ.

    ಡಾ.ಜಯಸಿಂಹ:
    ಡಾ.ಜಯಸಿಂಹ ಸರಳ ಮತ್ತು ಮೃದು ಸ್ವಭಾವದವರಾಗಿದ್ದಾರೆ. ಅಲ್ಲದೇ ಇವರು ಲಂಬಾಣಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಇವರ ಪರ ಕ್ಷೇತ್ರದ ಜನರ ಒಲವಿದೆ. ಬಿಜೆಪಿ, ಕಾಂಗ್ರೆಸ್ ಮಧ್ಯೆ ಮೂರನೆಯವರಾದ ಜಯಸಿಂಹ ಅವರಿಗೆ ಮತದಾರರು ಮಣೆ ಹಾಕಿದರೂ ಅಚ್ಚರಿ ಪಡುವಂತಿಲ್ಲ. ಅಲ್ಲದೇ ಲಂಬಾಣಿ ಸಮುದಾಯ ಸಹ ಒಳಮೀಸಲಾತಿ ವರ್ಗೀಕರಣ ವಿಚಾರದಲ್ಲಿ ಬಿಜೆಪಿ ವಿರುದ್ಧ ಮತ ಚಲಾಯಿಸುವ ಅಭಿಯಾನ ನಡೆಸುತ್ತಿದ್ದು, ಈ ನಡೆ ಜಯಸಿಂಹ ಅವರಿಗೆ ವರವಾಗಬಹುದು.

    ಜೆಡಿಎಸ್‌ನಿಂದ ಸ್ಪರ್ಧಿಸಿರುವ ಇಂದ್ರಜಿತ್ ನಾಯ್ಕ್ ಸಹ ಲಂಬಾಣಿ ಸಮುದಾಯದವರಾದರೂ ಕ್ಷೇತ್ರದಲ್ಲಿ ಅಷ್ಟು ಪರಿಚಯವಿಲ್ಲ. ಹೀಗಾಗಿ ಹೊಳಲ್ಕೆರೆಯಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಬಿಜೆಪಿಯ ಬಂಡಾಯ ಕಾಂಗ್ರೆಸ್ ಅಭ್ಯರ್ಥಿ ಆಂಜನೇಯ ಅವರಿಗೆ ಸಹಕಾರಿಯಾಗಿ ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ. ಇದನ್ನೂ ಓದಿ: ಹಾಲಿ, ಮಾಜಿ ಶಾಸಕರ ಮಧ್ಯೆ ಜನಮನ ಗೆದ್ದವರ್ಯಾರು? ಹೇಗಿದೆ ಮೊಳಕಾಲ್ಮೂರು ಅಖಾಡ?

    ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಜಾತಿವಾರು ಲೆಕ್ಕಾಚಾರ:
    ಒಟ್ಟು ಮತದಾರರು: 1,97,248
    ಪುರುಷರು: 1,17,885
    ಮಹಿಳೆಯರು: 1,17,079

    ಯಾರ ವೋಟು ಎಷ್ಟು?
    ಲಿಂಗಾಯತ: 82,000
    ಎಸ್ಸಿ: 44,000
    ಭೋವಿ: 17,000
    ಗೊಲ್ಲ: 15,000
    ನಾಯ್ಕ್‌: 17,000
    ಮುಸ್ಲಿಂ: 6,000
    ದೇವಾಂಗ: 5,000
    ಉಪ್ಪಾರ: 4,000
    ಇತರೆ: 7,000