Tag: Holehonnur

  • Shivamogga | ದೆವ್ವ ಬಿಡಿಸುತ್ತೇನೆಂದು ಚಿತ್ರಹಿಂಸೆ – ಮಹಿಳೆ ಸಾವು

    Shivamogga | ದೆವ್ವ ಬಿಡಿಸುತ್ತೇನೆಂದು ಚಿತ್ರಹಿಂಸೆ – ಮಹಿಳೆ ಸಾವು

    ಶಿವಮೊಗ್ಗ: ದೆವ್ವ (Evil) ಅಂಟಿಕೊಂಡಿದೆ, ಬಿಡಿಸುತ್ತೇನೆಂದು ಹೇಳಿ ಚಿತ್ರಹಿಂಸೆ ನೀಡಿದ ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ (Woman) ಸಾವನ್ನಪ್ಪಿದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಹೊಳೆಹೊನ್ನೂರಿನ ಜಂಬರಗಟ್ಟೆಯಲ್ಲಿ ನಡೆದಿದೆ.

    ಜಂಬರಗಟ್ಟೆ ನಿವಾಸಿ ಗೀತಮ್ಮ (50) ಸಾವನ್ನಪ್ಪಿದ ಮಹಿಳೆ. ತಾಯಿಗೆ ಹುಷಾರಿಲ್ಲದ ಹಿನ್ನೆಲೆ ಮಗನೇ ದೆವ್ವ ಬಿಡಿಸಲು ಹೊಸ ಜಂಬರಘಟ್ಟಕ್ಕೆ ಕರೆದುಕೊಂಡು ಹೋಗಿದ್ದ. ಕೆಲ ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಗೀತಮ್ಮನನ್ನು ದೆವ್ವ ಹಿಡಿದಿದೆ ಎಂದು ಕರೆದುಕೊಂಡು ಹೋಗಿದ್ದ. ಇದನ್ನೂ ಓದಿ: ನಮಗೆ ಕುಡಿಯೋಕೆ ನೀರು ಕೊಡಿ: ಸಿಎಂಗೆ ವಿದ್ಯಾರ್ಥಿನಿ ಪತ್ರ

    ಈ ವೇಳೆ ದೆವ್ವಾ ಬಿಡಿಸುತ್ತೇನೆ ಎಂದು ಶಾಂತಮ್ಮ ಎಂಬ ಮಹಿಳೆ ಗೀತಮ್ಮನಿಗೆ ಚಿತ್ರಹಿಂಸೆ ನೀಡಿದ್ದಾಳೆ. ಚಿತ್ರಹಿಂಸೆ ತಾಳಲಾರದೇ ಗೀತಮ್ಮ ಸಾವನ್ನಪ್ಪಿದ್ದಾರೆ. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ರೌಡಿಶೀಟರ್‌ನಿಂದ ದಾಂಧಲೆ – 18ಕ್ಕೂ ಹೆಚ್ಚು ವಾಹನಗಳ ಗಾಜು ಪುಡಿಪುಡಿ, ಮೂವರು ಅರೆಸ್ಟ್

  • ಹೊಳೆಹೊನ್ನೂರು ಗಾಂಧಿ ಸರ್ಕಲ್‌ನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ- ಸ್ಥಳೀಯರ ಪ್ರತಿಭಟನೆ

    ಹೊಳೆಹೊನ್ನೂರು ಗಾಂಧಿ ಸರ್ಕಲ್‌ನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ- ಸ್ಥಳೀಯರ ಪ್ರತಿಭಟನೆ

    ಶಿವಮೊಗ್ಗ: ಮಹಾತ್ಮ ಗಾಂಧಿ (Mahatma Gandhi) ಪ್ರತಿಮೆಯನ್ನು (Statue) ಕೆಡವಿ ಕಿಡಿಗೇಡಿಗಳು ಧ್ವಂಸ ಮಾಡಿದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಭದ್ರಾವತಿ (Bhadravathi) ತಾಲೂಕಿನ ಹೊಳೆಹೊನ್ನೂರಿನಲ್ಲಿ (Holehonnur) ನಡೆದಿದೆ.

    ಹೊಳೆಹೊನ್ನೂರಿನ ಸರ್ಕಲ್‌ನಲ್ಲಿ ಸುಮಾರು 18 ವರ್ಷಗಳ ಹಿಂದೆ ಈ ಗಾಂಧಿ ಪ್ರತಿಮೆ ನಿರ್ಮಿಸಲಾಗಿತ್ತು. ಪ್ರತಿಮೆ ಸುತ್ತ ಮಂಟಪ ನಿರ್ಮಿಸಿ, ವಿಶೇಷವಾದ ಗೌರವವನ್ನು ನೀಡಲಾಗುತ್ತಿತ್ತು. ಮಧ್ಯರಾತ್ರಿ ಬೈಕ್‌ನಲ್ಲಿ ಬಂದ ಇಬ್ಬರು ಕಿಡಿಗೇಡಿಗಳು ಗಾಂಧೀಜಿಯವರ ಪ್ರತಿಮೆಯನ್ನು ಕೆಡವಿದ್ದಾರೆ. ಮೂರ್ತಿಯನ್ನು ಧ್ವಂಸಗೊಳಿಸಿದ್ದಷ್ಟೇ ಅಲ್ಲದೆ, ಅದನ್ನು ಬೀಳಿಸಿ ಪುಡಿ ಮಾಡಿದ್ದಾರೆ. ಇದನ್ನೂ ಓದಿ: ಗೊಲ್ಲರದೊಡ್ಡಿ ಅಪಘಾತ ಪ್ರಕರಣ – ರಸ್ತೆಗೆ ಹಂಪ್ ಹಾಕುವಂತೆ ಮಗು ಶವ ಇಟ್ಟು ಪ್ರತಿಭಟನೆ

    ದುಷ್ಕರ್ಮಿಗಳ ಈ ದುಷ್ಕೃತ್ಯ ಸಿಸಿ ಕ್ಯಾಮರಾವೊಂದರಲ್ಲಿ ಸೆರೆಯಾಗಿದೆ ಎನ್ನಲಾಗಿದೆ. ಈ ವಿಚಾರ ತಿಳಿಯುತ್ತಲೇ ಪ್ರತಿಮೆ ಬಳಿಯಲ್ಲಿ ನೂರಾರು ಮಂದಿ ಜಮಾಯಿಸಿ, ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಮೆಯನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಹಾಗು ಹೊಳೆಹೊನ್ನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಿಡಿಗೇಡಿಗಳ ಪತ್ತೆಗೆ ಮುಂದಾಗಿದ್ದಾರೆ. ಇದನ್ನೂ ಓದಿ: ಓವರ್‌ಟೇಕ್ ಅವಾಂತರದಿಂದ ಬೈಕ್‍ಗೆ ಟ್ರಕ್ ಡಿಕ್ಕಿ – ಇಬ್ಬರ ದುರ್ಮರಣ

    ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಟ್ವೀಟ್ ಮಾಡಿದ್ದು, ಘಟನೆಯನ್ನು ಖಂಡಿಸಿದ್ದಾರೆ. ಗಾಂಧಿ ಪ್ರತಿಮೆ ಧ್ವಂಸಗೊಳಿಸಿರುವ ದೇಶ ವಿರೋಧಿ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ನೆಲದ ಸ್ವಾತಂತ್ರ‍್ಯ ಚಳುವಳಿಯ ಹಿನ್ನೆಲೆ, ಸಂವಿಧಾನ ಮತ್ತು ಕಾನೂನಿನ ಬಗ್ಗೆ ಗೌರವ ಇಲ್ಲದವರು ಮಾತ್ರ ಇಂತಹ ಹೀನ ಕೃತ್ಯ ಎಸಗಲು ಸಾಧ್ಯ. ಈ ಕೃತ್ಯದ ಹಿಂದೆ ಯಾರೇ ಇರಲಿ, ಅವರನ್ನು ಹಿಡಿದು ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಒಳಪಡಿಸುತ್ತೇವೆ. ಯಾರೊಬ್ಬರೂ ಈ ಬಗ್ಗೆ ಉದ್ವೇಗಕ್ಕೆ ಒಳಗಾಗಬಾರದು. ಕಾನೂನು ಕೈಗೆತ್ತಿಕೊಳ್ಳದೇ ಶಾಂತಿ ಸುವ್ಯವಸ್ಥೆ ಕಾಪಾಡಲು ಸಹಕರಿಸುವಂತೆ ಸಿಎಂ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕಲ್ಲು, ಚೂರಿ ಹಿಡಿದು ನಡುರಸ್ತೆಯಲ್ಲಿ ದಾಂಧಲೆ – ಸಿನಿಮೀಯ ಶೈಲಿಯಲ್ಲಿ ಲಾಕ್ ಮಾಡಿದ ಪೊಲೀಸರು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಾರ್ವಜನಿಕ ಸ್ಥಳದಲ್ಲಿ ಪೊಲೀಸರಿಂದ ಹಲ್ಲೆ – ಮನನೊಂದ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

    ಸಾರ್ವಜನಿಕ ಸ್ಥಳದಲ್ಲಿ ಪೊಲೀಸರಿಂದ ಹಲ್ಲೆ – ಮನನೊಂದ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

    ಶಿವಮೊಗ್ಗ: ಸಾರ್ವಜನಿಕ ಸ್ಥಳದಲ್ಲಿ ಪೊಲೀಸರಿಂದ (Police) ಹಲ್ಲೆಗೊಳಗಾಗಿ ಮನನೊಂದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ (Shivamogga) ನಡೆದಿದೆ.

    ಶಿವಮೊಗ್ಗ ಜಿಲ್ಲೆ, ಭದ್ರಾವತಿ ತಾಲೂಕಿನ ಹೊಳೆಹೊನ್ನೂರು (Holehonnur) ನಿವಾಸಿ ಮಂಜುನಾಥ್ (23) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಕಳೆದ 11 ದಿನಗಳ ಹಿಂದೆ ಹೊಳೆಹೊನ್ನೂರಿನ ಕೆನ್ನೆಕೊಪ್ಪದಲ್ಲಿ ಈ ಘಟನೆ ನಡೆದಿದ್ದು ಇದೀಗ ತಡವಾಗಿ ಬೆಳಕಿಗೆ ಬಂದಿದೆ.

    ಸಾರ್ವಜನಿಕ ಸ್ಥಳದಲ್ಲಿ ಪೊಲೀಸರು ಹಲ್ಲೆ ಮಾಡಿದ್ದರಿಂದ ಮನನೊಂದು ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಾವಿಗೆ ಪೊಲೀಸರೇ ಕಾರಣ ಎಂದು ಮೃತ ವ್ಯಕ್ತಿಯ ಪತ್ನಿ ಆರೋಪಿಸಿದ್ದಾರೆ. ಇದನ್ನೂ ಓದಿ: ಜಗಳ ಬಿಡಿಸಲು ಹೋದ ಪೊಲೀಸ್ ಪೇದೆ ಮೇಲೆ ಲಾಂಗ್‌ನಿಂದ ಹಲ್ಲೆ

    ಇದೀಗ ಮಂಜುನಾಥ್ ಮೇಲೆ ಹಲ್ಲೆ ನಡೆಸಿದ್ದ ಇಬ್ಬರು ಪೊಲೀಸರ ವಿರುದ್ಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ನೀಡಲಾಗಿದೆ. ಇದನ್ನೂ ಓದಿ: ಚಿಪ್ಸ್ ಕರೆಯುವ ಎಣ್ಣೆ ಬಾಣಲೆಗೆ ಬಿದ್ದಿದ್ದ 25 ರ ಯುವಕ ಸಾವು