Tag: hombale

  • ಇಂಗ್ಲಿಷಿನಲ್ಲೂ ‘ಕಾಂತಾರ’ ರಿಲೀಸ್ : ಮಾರ್ಚ್ 1ರಿಂದ ಲಭ್ಯ

    ಇಂಗ್ಲಿಷಿನಲ್ಲೂ ‘ಕಾಂತಾರ’ ರಿಲೀಸ್ : ಮಾರ್ಚ್ 1ರಿಂದ ಲಭ್ಯ

    ರಿಷಬ್ ಶೆಟ್ಟಿ ನಿರ್ದೇಶನ ಮಾಡಿ, ನಟಿಸಿರುವ ‘ಕಾಂತಾರ’ ಸಿನಿಮಾ ಇದೀಗ ಇಂಗ್ಲಿಷ್ ನಲ್ಲೂ ಸಿದ್ಧವಾಗಿದೆ. ಈಗಾಗಲೇ ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿಯಲ್ಲೂ ಈ ಸಿನಿಮಾ ರಿಲೀಸ್ ಆಗಿದ್ದು, ಈಗ ಇಂಗ್ಲಿಷ್ ನಲ್ಲೂ ಚಿತ್ರವನ್ನು ಡಬ್ ಮಾಡಲಾಗಿದೆ. ಮಾರ್ಚ್ 1 ರಿಂದ ಓಟಿಟಿಯಲ್ಲಿ ಚಿತ್ರವನ್ನು ಬಿಡುಗಡೆ ಮಾಡಲಾಗುತ್ತಿದೆ. ಮೊನ್ನೆಯಷ್ಟೇ ಸಿನಿಮಾ ಶತದಿನೋತ್ಸವ ಕಂಡಿದೆ. ಈ ವೇಳೆಯಲ್ಲಿ ಇಂಥದ್ದೊಂದು ನಿರ್ಧಾರ ಕೈಗೊಳ್ಳಲಾಗಿದೆ.

    ಕಡಿಮೆ ವೆಚ್ಚದಲ್ಲಿ ತಯಾರಾದ ಈ ಸಿನಿಮಾ ನಾಲ್ಕುನೂರಕ್ಕೂ ಅಧಿಕ ಕೋಟಿ ಹಣವನ್ನು ಗಳಿಸಿದೆ. ನೂರು ದಿನಗಳ ಪ್ರದರ್ಶನ ಕಂಡಿದೆ. ಹಲವು ಭಾಷೆಗಳಲ್ಲಿ ಡಬ್ ಆಗಿ, ಅಷ್ಟೂ ಭಾಷೆಗಳಲ್ಲೂ ಯಶಸ್ವಿ ಪ್ರದರ್ಶನ ಕಂಡಿದೆ. ಈಗ ಇಂಗ್ಲಿಷಿನವರಿಗೂ ಈ ಸಿನಿಮಾವನ್ನು ತೋರಿಸಲು ನೆಟ್ ಫ್ಲಿಕ್ಸ್ ಸಿದ್ಧತೆ ಮಾಡಿಕೊಂಡಿದೆ. ಮಾರ್ಚ್ ಮೊದಲ ವಾರದಲ್ಲೇ ನೋಡಲು ಲಭ್ಯವಿದೆ. ಇದನ್ನೂ ಓದಿ: ರಾಮ್ ಚರಣ್ ಅದೃಷ್ಟವನ್ನೇ ಬದಲಿಸಿದ ಆರ್.ಆರ್.ಆರ್ ಚಿತ್ರ

    ಕಾಂತಾರ ನಂತರ ಕಾಂತಾರ 2 ಸಿನಿಮಾ ಬರಲಿದೆ ಎಂದು ಹೇಳಲಾಗಿತ್ತು. ಆದರೆ, ರಿಷಬ್ ಶೆಟ್ಟಿ ಬೇರೆಯದ್ದೇ ಅಚ್ಚರಿಯನ್ನು ನೀಡಿದ್ದಾರೆ. ಈಗಾಗಲೇ ನೋಡಿದ್ದು ಕಾಂತಾರ 2, ಮುಂದಿನ ದಿನಗಳಲ್ಲಿ ಬರುವುದು ಕಾಂತಾರ 1 ಎಂದು ಅವರು ಹೇಳಿಕೆ ನೀಡಿದ್ದಾರೆ. ಈಗಾಗಲೇ ನೋಡಿರುವ ಕಥೆಯ ಮುಂಚಿನ ಕಥೆಯನ್ನು ಮುಂದಿನ ಕಾಂತಾರ ಚಿತ್ರದಲ್ಲಿ ನೋಡಲಿದ್ದೀರಿ ಎಂದು ರಿಷಬ್ ತಿಳಿಸಿದ್ದಾರೆ. ಈ ಮೂಲಕ ಮತ್ತಷ್ಟು ಕುತೂಹಲ ಮೂಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಯಶ್ ಜೊತೆ ಸಿನಿಮಾ ಮಾಡುತ್ತೇವೆ, ಕಾಯಬೇಕು ಎಂದ ಹೊಂಬಾಳೆ ಫಿಲ್ಮ್ಸ್

    ಯಶ್ ಜೊತೆ ಸಿನಿಮಾ ಮಾಡುತ್ತೇವೆ, ಕಾಯಬೇಕು ಎಂದ ಹೊಂಬಾಳೆ ಫಿಲ್ಮ್ಸ್

    ಮುಂದಿನ ದಿನಗಳಲ್ಲಿ ಯಶ್ ಜೊತೆ ಸಿನಿಮಾ ಮಾಡುವುದು ಪಕ್ಕಾ. ಆದರೆ, ಅದಕ್ಕಾಗಿ ಕಾಯಬೇಕು ಎಂದು ಹೊಂಬಾಳೆ ಫಿಲ್ಮ್ಸ್ ಹೇಳಿಕೊಂಡಿದೆ. ಕೆಜಿಎಫ್ 2 ಮುಗಿದ ತಕ್ಷಣವೇ ಕೆಜಿಎಫ್ 3 ಸಿನಿಮಾವನ್ನು ಹೊಂಬಾಳೆ ಫಿಲ್ಮ್ಸ್ ಕೈಗೆತ್ತಿಕೊಳ್ಳಲಿದೆ ಎಂದು ನಂಬಲಾಗಿತ್ತು. ಈ ಕುರಿತು ಹಲವು ಚರ್ಚೆಗಳೂ ನಡೆದವು. ಆದರೆ, ಸದ್ಯಕ್ಕೆ ಅದಕ್ಕೆ ಫುಲ್ ಸ್ಟಾಪ್ ಇಡಲಾಗಿದೆ. ಯಶ್ ಬೇರೊಂದು ಸಿನಿಮಾ ಮಾಡುತ್ತಿರುವುದರಿಂದ ಯಶ್ ಜೊತೆಗಿನ ಚಿತ್ರಕ್ಕಾಗಿ ಕಾಯುವುದು ಅನಿವಾರ್ಯವಾಗಿದೆ. ಈ ಕಾಯುವಿಕೆ ಇನ್ನೆಷ್ಟು ವರ್ಷ ಎನ್ನುವುದು ಸದ್ಯಕ್ಕಿರುವ ಕುತೂಹಲವೂ ಆಗಿದೆ.

    ಶ್ ಅವರ ಹೊಸ ಸಿನಿಮಾದ ಬಗ್ಗೆ ಆರೇಳು ತಿಂಗಳಿಂದ ಹೊಸ ಹೊಸ ಸುದ್ದಿಗಳು ಬರುತ್ತಲೇ ಇವೆ. ಬಂದ ವೇಗದಲ್ಲೇ ಅವರು ಹುಸಿಯಾಗುತ್ತಿವೆ. ಆದರೆ, ಇತ್ತೀಚೆಗಷ್ಟೇ ಅವರ ಹೊಸ ಸಿನಿಮಾದ ಅಚ್ಚರಿಯ ಸಂಗತಿಯೊಂದು ಹೊರ ಬಿದ್ದಿತ್ತು. ಅವರ ಮುಂದಿನ ಸಿನಿಮಾ ಬಜೆಟ್ ಬರೋಬ್ಬರಿ 400 ಕೋಟಿ ಎಂದು ಹೇಳಲಾಗಿತ್ತು. ಈ ಪ್ರಮಾಣದಲ್ಲಿ ಹಣ ಹೂಡಿಕೆ ಮಾಡುತ್ತಿರುವ ಸಂಸ್ಥೆ ಕೆವಿಎನ್ ಎಂದು ಹೇಳಲಾಗಿತ್ತು. ಅದೀಗ ನಿಜ ಎನ್ನುವಂತೆ ಸಾಕ್ಷಿಯೊಂದು ಸಿಕ್ಕಿದೆ.

    ಯಶ್ ಅವರು 19ನೇ ಸಿನಿಮಾವನ್ನು ದಕ್ಷಿಣದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ ಮಾಡಲಿದೆ ಎನ್ನುವ ವರ್ತಮಾನ ಗಾಂಧಿನಗರದಲ್ಲಿ ಬಲವಾಗಿಯೇ ಕೇಳಿ ಬರುತ್ತಿತ್ತು. ಅದು ನಿಜ ಎನ್ನುವಂತೆ ಕೆವಿಎನ್ ಪ್ರೊಡಕ್ಷನ್ ನ ವೆಂಕಟ್ ಕೋಣಂಕಿ ನಾರಾಯಣ್ ಅವರು ಯಶ್ ಜೊತೆ ಕಾಣಿಸಿಕೊಂಡಿದ್ದಾರೆ. ಹುಟ್ಟು ಹಬ್ಬದ ಪಾರ್ಟಿಯಲ್ಲಿ ವೆಂಕಟ್ ಕೂಡ ಭಾಗಿಯಾಗಿ ಶುಭ ಹಾರೈಸಿದ್ದಾರೆ. ಹಾಗಾಗಿ ಇವರೇ ಮುಂದಿನ ಸಿನಿಮಾದ ನಿರ್ಮಾಪಕರು ಎನ್ನುವುದು ನಿಕ್ಕಿಯಾದಂತಾಗಿದೆ. ಇದನ್ನೂ ಓದಿ: ಸಾನ್ಯ ಎಲಿಮಿನೇಟ್‌ ಆದಮೇಲೆ ಅವಳ ಬೆಲೆ ರೂಪೇಶ್‌ ಶೆಟ್ಟಿಗೆ ಗೊತ್ತಾಯ್ತು: ದೀಪಿಕಾ ದಾಸ್

    ಈ ಹಿಂದೆ ಯಶ್, ಗೋವಾದ ಮುಖ್ಯಮಂತ್ರಿಗಳನ್ನು ಭೇಟಿಯಾದಾಗ ಇದೇ ವೆಂಕಟ್ ಕೂಡ ಜೊತೆಗಿದ್ದರು. ಅವತ್ತೇ ಒಂದು ಸುಳಿವನ್ನೂ ಅವರು ಬಿಟ್ಟುಕೊಟ್ಟಿದ್ದರು. ಪದೇ ಪದೇ ಯಶ್ ಜೊತೆ ವೆಂಕಟ್ ಕಾಣಿಸಿಕೊಳ್ಳುತ್ತಿರುವುದು ಸುದ್ದಿಗೆ ಪುಷ್ಠಿ ನೀಡಿದಂತಾಗಿದೆ. ಸ್ವತಃ ಯಶ್ ಅವರೇ ಹೇಳಿದಂತೆ ಮುಂದಿನ ದಿನಗಳಲ್ಲಿ ದೊಡ್ಡ ಸುದ್ದಿಯನ್ನೇ ಅವರ ಅಭಿಮಾನಿಗಳಿಗೆ ಅವರು ಕೊಡಲಿದ್ದಾರೆ. ಆ ದೊಡ್ಡ ಸುದ್ದಿಯಲ್ಲಿ ವೆಂಕಟ್ ಅವರ ಹೆಸರೂ ಇರಲಿದೆ ಎನ್ನುವುದು ಸದ್ಯಕ್ಕಿರುವ ಕುತೂಹಲ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮತದಾರರ ಪಟ್ಟಿ ವಿವಾದ: ಕೆಜಿಎಫ್ ಸೇಡಿನ ಕಥೆಯೂ ಅಲ್ಲ, ಕಾಂತಾರ ದಂತಕಥೆಯೂ ಅಲ್ಲ ಎಂದ ಸಿದ್ದರಾಮಯ್ಯ

    ಮತದಾರರ ಪಟ್ಟಿ ವಿವಾದ: ಕೆಜಿಎಫ್ ಸೇಡಿನ ಕಥೆಯೂ ಅಲ್ಲ, ಕಾಂತಾರ ದಂತಕಥೆಯೂ ಅಲ್ಲ ಎಂದ ಸಿದ್ದರಾಮಯ್ಯ

    ತದಾರರ ಪಟ್ಟಿ ಪರಿಷ್ಕರಣೆ ಕುರಿತಂತೆ ಎರಡು ದಿನಗಳಿಂದ ಕರ್ನಾಟಕದಲ್ಲಿ ಭಾರೀ ಗದ್ದಲ ಎದ್ದಿದೆ. ಅದರಲ್ಲೂ ಬೆಂಗಳೂರಿನ ಮಲ್ಲೇಶ್ವರಂ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ಹೆಸರಿನಲ್ಲಿ ಮತದಾರರ ಖಾಸಗಿ ಸಂಗತಿಗಳು ಸೋರಿಕೆ ಆಗಿವೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ. ಅದರಲ್ಲೂ ಸಚಿವ ಅಶ್ವತ್ಥ್ ನಾರಾಯಣ್ ಅವರ ಬಗ್ಗೆಯೇ ಅನುಮಾನ ವ್ಯಕ್ತ ಪಡಿಸಿದೆ. ಈ ಅನುಮಾನಕ್ಕೆ ಕಾರಣ ಹೊಂಬಾಳೆ ಹೆಸರು.

    ಚಿತ್ರೋದ್ಯಮದ ಬಹುತೇಕರಿಗೆ ಗೊತ್ತಿರುವಂತೆ ಹೊಂಬಾಳೆ ಫಿಲ್ಮಸ್ ಸಂಸ್ಥೆಯು ಅಶ್ವತ್ಥ್ ನಾರಾಯಣ್ ಅವರ ಸಂಬಂಧಿ ವಿಜಯ್ ಕುಮಾರ್ ಅವರದ್ದು. ಈ ಹೊಂಬಾಳೆ ಫಿಲ್ಮಸ್ ಬ್ಯಾನರ್ ನಲ್ಲಿ ಕೆಜಿಎಫ್, ಕಾಂತಾರ ಸೇರಿದಂತೆ ಹಲವು ಚಿತ್ರಗಳು ನಿರ್ಮಾಣಗೊಂಡಿವೆ. ‘ಹೊಂಬಾಳೆ’ ಎನ್ನುವ ಹೆಸರೇ ಮತದಾರರ ಪಟ್ಟಿಯ ವಿವಾದಕ್ಕೆ ಮುನ್ನುಡಿಯಾಗಿದ್ದು, ಇದು ಚಿಲುಮೆ ಎನ್ನುವ ಹೆಸರಿನ ಸಂಸ್ಥೆಯ ಜೊತೆ ತಳುಕುಹಾಕಿಕೊಂಡಿದೆ.  ಮತದಾರರ ಪಟ್ಟಿಯ ದುರುಪಯೋಗಕ್ಕೆ ಸಂಬಂಧಿಸಿದಂತೆ ಚಿಲುಮೆ ಸಂಸ್ಥೆಯ ಹೆಸರು ಬಲವಾಗಿ ಕೇಳಿಬಂದಿದೆ. ಚಿಲುಮೆ ಸಂಸ್ಥೆಯು ಈ ಹಿಂದೆ ಹೊಂಬಾಳೆ ಹೆಸರಿನಲ್ಲಿ ಚಟುವಟಿಕೆಯಲ್ಲಿತ್ತು ಎನ್ನುವುದು ವಿವಾದಕ್ಕೆ ಕಾರಣವಾದ ಅಂಶ.

    ಹೊಂಬಾಳೆ ಹೆಸರು ಕೇಳಿ ಬರುತ್ತಿದ್ದಂತೆಯೇ ಆದ ಘಟನೆಗೂ ಅಶ್ವತ್ಥ್ ನಾರಾಯಣ್ ಅವರಿಗೆ ನೇರ ಸಂಬಂಧವಿದೆ ಎನ್ನುವುದು ಕಾಂಗ್ರೆಸ್ ಪಕ್ಷದ ಆರೋಪ. ಹಾಗಾಗಿಯೇ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೊಂಬಾಳೆ ಫಿಲ್ಮಸ್ ಸಂಸ್ಥೆಯನ್ನು ತಿವಿಯಲು ಈ ಬ್ಯಾನರ್ ನಿಂದ ನಿರ್ಮಾಣವಾದ ಎರಡು ಚಿತ್ರಗಳ ಹೆಸರನ್ನು ಉಪಯೋಗಿಸಿಕೊಂಡು, ಹೊಂಬಾಳೆ ಫಿಲ್ಮ್ಸ್ ನ ಅಶ್ವತ್ಥ್ ನಾರಾಯಣ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ:ʻಕಮಾಂಡೋʼ ಶೂಟಿಂಗ್ ವೇಳೆ ರಾಗಿಣಿ ದ್ವಿವೇದಿ ಕೈಗೆ ಪೆಟ್ಟು

    ಈ ಕುರಿತು ಸರಣಿಯ ಟ್ವಿಟ್ ಮಾಡಿರುವ ಸಿದ್ಧರಾಮಯ್ಯ, ‘ಮತದಾರರ ಪಟ್ಟಿ ಪರಿಷ್ಕರಣೆ ಎನ್ನುವುದು ಕೆಜಿಎಫ್ ಚಿತ್ರದ ರಾಕಿಭಾಯ್ ನ ಸೇಡಿನ ಕಥೆಯೂ ಅಲ್ಲ, ಕಾಂತಾರ ಚಿತ್ರದ ಗುಳಿಗ, ಪಂಜುರ್ಲಿಯ ದಂತಕಥೆಯೂ ಅಲ್ಲ. ಯಾರು ಯಾವ ಕೆಲಸ ಮಾಡಬೇಕೋ ಅದನ್ನೇ ಮಾಡಬೇಕು’ ಎಂದು ಟ್ವಿಟ್ ಮಾಡಿದ್ದಾರೆ. ಈ ಟ್ವಿಟ್ ಭಾರೀ ವೈರಲ್ ಆಗಿದೆ. ಅಲ್ಲದೇ ಅನೇಕರು ಇದಕ್ಕೆ ಸ್ಪಂದಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವಿಜಯ್ ಕಿರಗಂದೂರು ತವರಿಗೆ ಭೇಟಿ ನೀಡಿ ಹಿರಿಯರ ಆಶೀರ್ವಾದ ಪಡೆದ ಕೆಜಿಎಫ್ ಟೀಂ

    ವಿಜಯ್ ಕಿರಗಂದೂರು ತವರಿಗೆ ಭೇಟಿ ನೀಡಿ ಹಿರಿಯರ ಆಶೀರ್ವಾದ ಪಡೆದ ಕೆಜಿಎಫ್ ಟೀಂ

    ಮಂಡ್ಯ: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್-2 ಚಿತ್ರ ಇಂದು ಮಧ್ಯರಾತ್ರಿ ವಿಶ್ವಾದ್ಯಂತ ರಿಲೀಸ್ ಆಗಲಿದೆ. ಚಿತ್ರ ರಿಲೀಸ್‍ಗೂ ಮುನ್ನ ನಿರ್ಮಾಪಕ ವಿಜಯ್ ಕಿರಗಂದೂರು ತವರಿಗೆ ಕೆಜಿಎಫ್ ಟೀಂ ಭೇಟಿ ನೀಡಿ ಹಿರಿಯರ ಆಶೀರ್ವಾದ ಪಡೆದುಕೊಂಡಿದೆ.

    ಹೊಂಬಾಳೆ ತವರು ಮಂಡ್ಯದ ಕಿರಗಂದೂರಿಗೆ ಮಂಗಳವಾರ ರಾತ್ರಿ ಚಿತ್ರತಂಡ ಭೇಟಿ ಕೊಟ್ಟಿದೆ. ಈ ವೇಳೆ ಟೀಂ ಹಿರಿಯರ ಆಶೀರ್ವಾದ ಪಡೆದುಕೊಂಡಿದೆ. ರಾಕಿಂಗ್ ಸ್ಟಾರ್ ಯಶ್, ನಿರ್ದೇಶಕ ಪ್ರಶಾಂತ್ ನೀಲ್, ನಿರ್ಮಾಪಕ ವಿಜಯ ಕಿರಗಂದೂರು ತವರಿನಲ್ಲಿ ಪೂಜೆ ಸಲ್ಲಿಸಿ ಚಿತ್ರದ ಯಶಸ್ಸಿಗೆ ಕೋರಿದರು. ಇದನ್ನೂ ಓದಿ: ಗ್ರೌಂಡ್ ರಿಪೋರ್ಟ್ : ರಿಲೀಸ್ ಹಿಂದಿನ ಪಕ್ಕಾ ಲೆಕ್ಕಾಚಾರ, ಆರ್.ಆರ್.ಆರ್ ದಾಖಲೆ ಮುರಿದ ಕೆಜಿಎಫ್ 2

    ಶ್ರೀರಂಗಪಟ್ಟಣದ ನಿಮಿಷಾಂಬ ದೇವಾಲಯಕ್ಕೆ ಚಿತ್ರತಂಡ ತೆರಳಿ ಪೂಜೆ ಸಲ್ಲಿಸಿದೆ. ಹಿರಿಯರ ಮನೆಯಲ್ಲಿ ಕುಟುಂಬದವರೊಂದಿಗೆ ಬೆರೆತು ಕೆಲ ಹೊತ್ತು ಕಳೆದಿದೆ. ಅಲ್ಲದೆ ಹೊಂಬಾಳೆಗೆ ಸ್ಫೂರ್ತಿಯಾಗಿದ್ದ ಹಿರಿಯರು ಪೂರ್ವಜರ ಆಶೀರ್ವಾದವನ್ನು ಕೆಜಿಎಫ್ ಟೀಂ ಪಡೆದುಕೊಂಡಿದೆ. ಈ ವೇಳೆ ವಿಜಯ ಕಿರಗಂದೂರು ಅವರ ಹಿರಿಯ ಸಹೋದರ ಕಿರಗಂದೂರು ಮಂಜುನಾಥ್ ಚಿತ್ರತಂಡಕ್ಕೆ ಶುಭ ಕೋರಿದರು. ಇದನ್ನೂ ಓದಿ: ಯಶ್ ಅಭಿಮಾನಿಗಳಿಗಾಗಿ ಸ್ಪೆಷಲ್ ಶೋ ಡಿಮ್ಯಾಂಡ್: ರಾಕಿಭಾಯ್ ನಿರಂತರ ಪ್ರದರ್ಶನ

    ಇತ್ತೀಚೆಗಷ್ಟೇ ನಟ ಯಶ್ ಹಾಗೂ ವಿಜಯ್ ಕಿರಗಂದೂರು ಅವರು ಚಿತ್ರದ ಯಶಸ್ಸಿಗೆ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳಕ್ಕೆ ಭೇಟಿ ಕೊಟ್ಟು ದೇವರ ದರ್ಶನ ಪಡೆದುಕೊಂಡಿದ್ದರು. ಅಲ್ಲದೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಜೊತೆ ಮಾತುಕತೆ ನಡೆಸಿ, ಚಿತ್ರದ ಬಗ್ಗೆ ಮಾಹಿತಿ ನೀಡಿದ್ದರು. ಹಾಗೂ ಖಾವಂದರ ಆಶೀರ್ವಾದ ಪಡೆದುಕೊಂಡು ಬಂದಿದ್ದರು. ಇದನ್ನೂ ಓದಿ: ವಿಶ್ವದಾದ್ಯಂತ ಕೆಜಿಎಫ್ ಅಬ್ಬರಕ್ಕೆ ಮೂರೇ ದಿನ ಬಾಕಿ -ನ್ಯೂಯಾರ್ಕ್‍ನ ಎಲ್‍ಇಡಿ ಸ್ಕ್ರೀನ್‍ನಲ್ಲಿ ಯಶ್ ಟ್ರೇಲರ್

  • ಹೊಂಬಾಳೆ ಸಮೂಹದ ಎಲ್ಲ ಸಿಬ್ಬಂದಿ, ಕುಟುಂಬ ಸದಸ್ಯರಿಗೆ ಉಚಿತ ಕೋವಿಡ್‌ ಲಸಿಕೆ

    ಹೊಂಬಾಳೆ ಸಮೂಹದ ಎಲ್ಲ ಸಿಬ್ಬಂದಿ, ಕುಟುಂಬ ಸದಸ್ಯರಿಗೆ ಉಚಿತ ಕೋವಿಡ್‌ ಲಸಿಕೆ

    ಬೆಂಗಳೂರು: ಕನ್ನಡ ಚಲನಚಿತ್ರ ನಿರ್ಮಾಣ ಹಾಗೂ ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಪ್ರತಿಷ್ಠಿತ ಹೊಂಬಾಳೆ ಸಮೂಹವು ತನ್ನ ಉದ್ಯೋಗಿಗಳು, ನೌಕರರು ಹಾಗೂ ಅವರ ಅವಲಂಬಿತ ಅಂದಾಜು ಐದು ಸಾವಿರ ಮಂದಿಗೆ ಉಚಿತವಾಗಿ ಕೋವಿಡ್‌ ಲಸಿಕೆ ಹಾಕಿಸಲು ನಿರ್ಧರಿಸಿದೆ.

    ತನ್ನೊಂದಿಗೆ ಕೆಲಸ ಮಾಡುತ್ತಿರುವ ಪ್ರತಿಯೊಬ್ಬರ ಆರೋಗ್ಯದ ಬಗ್ಗೆ ಕಾಳಜಿ ಹೊಂದಿರುವ ಹೊಂಬಾಳೆ ಸಮೂಹವು ಎಲ್ಲರ ವ್ಯಾಕ್ಸಿನೇಶನ್‌ಗೆ ಆಗುವ ಪೂರ್ಣ ವೆಚ್ಚವನ್ನು ತಾನೇ ಭರಿಸಲಿದೆ.

    ಹೊಂಬಾಳೆ ಫಿಲ್ಮ್‌ ಬ್ಯಾನರ್‌ನಡಿ ಕೆಲಸ ಮಾಡುವ ಎಲ್ಲ ಸದಸ್ಯರು ಹಾಗೂ ಪೂರಕ ಸಿಬ್ಬಂದಿ ಹಾಗೂ ಅವರ ಅವಲಂಬಿತರೆಲ್ಲರಿಗೂ ವ್ಯಾಕ್ಸಿನ್‌ ನೀಡಲಾಗುವುದು. ಜತೆಗೆ ಹೊಂಬಾಳೆ ನಿರ್ಮಾಣ ಸಂಸ್ಥೆಯಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರಿಗೂ ಲಸಿಕೆ ಲಭ್ಯ ಎಂದು ಹೊಂಬಾಳೆ ಸಮೂಹದ ಪ್ರಕಟಣೆ ತಿಳಿಸಿದೆ.

    ಕೇಂದ್ರ ಸರಕಾರ ಮಾರ್ಗಸೂಚಿಯಂತೆ ಮುಂದಿನ ಹಂತದಲ್ಲಿ ಅವರವರ ವಯೋಮಿತಿ ಆಧಾರದ ಮೇಲೆ ಕೋವಿಡ್‌ ವ್ಯಾಕ್ಸಿನ್‌ ಕೊಡಿಸಲಾಗುವುದು ಮತ್ತು ನಮ್ಮವರ ಆರೋಗ್ಯದ ಜತೆಗೆ ಅವರ ಕುಟುಂಬದ ಆರೋಗ್ಯವೂ ನಮಗೆ ಮುಖ್ಯವಾಗಿದೆ ಎಂದು ಸಂಸ್ಥೆ ಹೇಳಿದೆ.

    https://twitter.com/VKiragandur/status/1374705049268482050

  • ಏಪ್ರಿಲ್ 1ರಂದು ಪುನೀತ್ ಅಭಿನಯದ ‘ಯುವರತ್ನ’ ಚಿತ್ರ ರಿಲೀಸ್

    ಏಪ್ರಿಲ್ 1ರಂದು ಪುನೀತ್ ಅಭಿನಯದ ‘ಯುವರತ್ನ’ ಚಿತ್ರ ರಿಲೀಸ್

    ಬೆಂಗಳೂರು: ಹಾಡುಗಳಿಂದ ಭಾರೀ ಸದ್ದು ಮಾಡಿರುವ ಪುನೀತ್ ರಾಜ್‍ಕುಮಾರ್ ಅಭಿನಯದ ಬಹುನಿರೀಕ್ಷಿತ ಯುವರತ್ನ ಚಿತ್ರ ತೆರೆ ಮೇಲೆ ಬರಲು ಸಿದ್ಧವಾಗಿದೆ.

    ಹೌದು. ಏಪ್ರಿಲ್ ಒಂದರಂದು ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲದಲ್ಲಿ ರಾಜ್ಯಾದ್ಯಂತ ಬಿಡುಗಡೆಗೊಳ್ಳಲಿದೆ. ಕೊರೊನಾ ಲಾಕ್‍ಡೌನ್ ನಿಂದಾಗಿ ಲಾಕ್ ಆಗಿದ್ದ ಯುವರತ್ನ ಚಿತ್ರಕ್ಕೆ ಇದೀಗ ಬಿಡುಗಡೆ ಭಾಗ್ಯ ಬಂದಿರುವುದು ಪುನೀತ್ ಅಭಿಮಾನಿಗಳಲ್ಲಿ ಸಂತಸ ತಂದಿದೆ. 2018ರಲ್ಲಿ ಚಿತ್ರ ಸೆಟ್ಟೇರಿತ್ತು. ಎಲ್ಲಾ ಅಂದುಕೊಂಡಂತೆ ನಡೆದಿದ್ದರೆ 2019ರ ಏಪ್ರಿಲ್ 24 ರಾಜ್‍ಕುಮಾರ್ ಹುಟ್ಟುಹಬ್ಬದಂದು ರಿಲೀಸ್ ಮಾಡಲು ಚಿತ್ರತಂಡ ತಯಾರಿ ನಡೆಸಿತ್ತು. ಆದರೆ ಮಹಾಮಾರಿ ಕೊರೊನಾದಿಂದಾಗಿ ರಿಲೀಸ್ ಡೇಟ್ ಮುಂದಕ್ಕೆ ಹೋಗಿತ್ತು.

    ಇದೀಗ ಚಿತ್ರತಂಡ ಬಾಕಿ ಉಳಿದಿದ್ದ 2 ಹಾಡುಗಳನ್ನು ಮುಗಿಸಿಕೊಂಡು ಪೋಸ್ಟ್ ಪ್ರೊಡೆಕ್ಷನ್ ಕೆಲಸದಲ್ಲಿ ತೊಡಗಿಕೊಂಡಿದೆ. ಇದು ಮುಗಿದ ತಕ್ಷಣ ಮುಂದಿನ ಮೂರು ತಿಂಗಳ ಅವಧಿಯಲ್ಲಿ ಪ್ರಚಾರವನ್ನು ಮುಗಿಸಿಕೊಂಡು ಏಪ್ರಿಲ್‍ನಲ್ಲಿ ಬಿಗ್‍ಸ್ಕ್ರೀನ್‍ನಲ್ಲಿ ತೋರಿಸಲು ಚಿತ್ರತಂಡ ತಯಾರಿ ಮಾಡುತ್ತಿದೆ.

    ಈ ಚಿತ್ರವನ್ನು ನಿರ್ದೇಶಿಸುವುದರೊಂದಿಗೆ ಕಥೆ, ಚಿತ್ರಕಥೆ, ಸಂಭಾಷಣೆಯನ್ನೂ ಬರೆದಿರುವ ಸಂತೋಷ್ ಆನಂದರಾಮ್ ಕುತೂಹಲ ಮೂಡಿಸಿದ್ದಾರೆ. ಪುನೀತ್ ರಾಜ್‍ಕುಮಾರ್, ಧನಂಜಯ್, ಸಹೇಷಾ ಸೆಹ್ಗಲ್, ದಿಂಗತ್, ಸೋನು ಗೌಡ, ಮುಂತಾದ ಬಹು ತಾರಾ ಬಳಗವನ್ನು ಒಳಗೊಂಡಿದ್ದು, ಹೊಂಬಾಳೆ ಫೀಲ್ಮಂಸ್‍ ನಡಿ ನಿರ್ಮಾಣಗೊಂಡಿರುವುದು ಇನ್ನೊಂದು ವಿಶೇಷ.