Tag: Home minister

  • ಕಾಂಗ್ರೆಸ್ಸಿನವರು ನನ್ನ ರೇಪ್ ಮಾಡಲು ಯತ್ನಿಸುತ್ತಿದ್ದಾರೆ: ಅರಗ ಜ್ಞಾನೇಂದ್ರ

    ಕಾಂಗ್ರೆಸ್ಸಿನವರು ನನ್ನ ರೇಪ್ ಮಾಡಲು ಯತ್ನಿಸುತ್ತಿದ್ದಾರೆ: ಅರಗ ಜ್ಞಾನೇಂದ್ರ

    ಬೆಂಗಳೂರು: ರೇಪ್ ಆಗಿರುವುದು ಮೈಸೂರಿನಲ್ಲಿ. ಆದರೆ ಈ ಕಾಂಗ್ರೆಸ್ಸಿನವರು ನನ್ನ ರೇಪ್ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಬೇಜಾವಾಬ್ದಾರಿ ಹೇಳಿಕೆ ನೀಡಿ ಇದೀಗ ವಿವಾದಕ್ಕೀಡಾಗಿದ್ದಾರೆ.

    ಮೈಸೂರು ಗ್ಯಾಂಗ್ ರೇಪ್ ಪ್ರಕರಣ ಕುರಿತು ಕಾಂಗ್ರೆಸ್ ನಿಂದ ಗೃಹ ಸಚಿವರ ರಾಜೀನಾಮೆ ಒತ್ತಾಯ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ಸಿನವರು ಗೃಹ ಸಚಿವರು ಅಂದರೆ ನನ್ನನ್ನ ರೇಪ್ ಮಾಡ್ತಿದ್ದಾರೆ. ನನ್ನ ರೇಪ್ ಮಾಡುವ ಪ್ರಯತ್ನ ಮಾಡ್ತಿದ್ದಾರೆ. ಇಂತಹ ವಿಚಾರದಲ್ಲಿ ಹೀಗೆ ಮಾಡೋದಕ್ಕೆ ಹೋಗಬಾರದು. ಈ ಪ್ರಕರಣದಲ್ಲೂ ರಾಜಕೀಯ ಮಾಡಲು ಹೋಗಬಾರದು ಎಂದು ಹೇಳಿದ್ದಾರೆ.

    ಯುವಕ, ಯುವತಿ 7.30 ಕ್ಕೆ ನಿರ್ಜನ ಪ್ರದೇಶಕ್ಕೆ ಹೋಗಿದ್ದಾರೆ. ಅಷ್ಟೊತ್ತಿಗೆ ಅಲ್ಲಿ ಹೋಗಬಾರದಿತ್ತು. ಆದರೆ ಹೋಗಬೇಡಿ ಅಂತಾ ತಡೆಯೋದಕ್ಕೂ ಆಗೋದಿಲ್ಲ. ಸದ್ಯಕ್ಕೆ ಯುವಕ, ಯುವತಿ ಶಾಕ್ ನಲ್ಲಿ ಇದ್ದಾರೆ. ಅವರ ಸಂಪೂರ್ಣ ಸ್ಟೇಟ್ ಮೆಂಟ್ ಪಡೆಯಲು ಆಗಿಲ್ಲ. ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಗಂಡು ಮಗುವಿಗೆ ಜನ್ಮ ನೀಡಿದ ಸಂಸದೆ ನುಸ್ರತ್ ಜಹಾನ್

    ಮೊನ್ನೆ ಸಂಜೆ 7.30- 8 ಗಂಟೆ ಸಮಯದಲ್ಲಿ ಘಟನೆ ನಡೆದಿದೆ. ಘಟನೆ ನಡೆದ 12 ಗಂಟೆ ಒಳಗೆ ಎಫ್‍ಐಆರ್ ದಾಖಲು ಮಾಡಲಾಗಿದೆ. ಸಂತ್ರಸ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ನೀಡಲಾಗ್ತಿದೆ. ಸಂತ್ರಸ್ತೆ ಶಾಕ್ ನಲ್ಲಿ ಇದ್ದಾರೆ. ಹೀಗಾಗಿ ಸಂಪೂರ್ಣ ಹೇಳಿಕೆ ಪಡೆಯಲು ಆಗ್ತಿಲ್ಲ. ಆದರೂ ನಮ್ಮ ಪೋಲೀಸರು ಕೇಸ್ ದಾಖಲು ಮಾಡಿಕೊಂಡು ತನಿಖೆ ಮಾಡ್ತಿದ್ದಾರೆ. ಪ್ರಕರಣ ಟ್ರೇಸ್ ಮಾಡಲು ನಮ್ಮ ಅಧಿಕಾರಿಗಳು ಕೆಲಸ ಮಾಡ್ತಿದ್ದಾರೆ. ಬೆಂಗಳೂರಿನಿಂದ ಹಿರಿಯ ಅಧಿಕಾರಿ ಪ್ರತಾಪ್ ರೆಡ್ಡಿಯನ್ನ ಕಳಿಸಲಾಗಿದೆ. ಪ್ರಕರಣ ಭೇದಿಸಲು ಇಲಾಖೆ ಅಧಿಕಾರಿಗಳು ಕೆಲಸ ಮಾಡ್ತಿದ್ದಾರೆ. ಮೈಸೂರು ಆಯುಕ್ತರು, ಪೊಲೀಸರು ಬೇರೆ ಬೇರೆ ತಂಡ ರಚನೆ ಮಾಡಿಕೊಂಡು ಗಂಭೀರ ತನಿಖೆ ಮಾಡ್ತಿದ್ದಾರೆ ಎಂದರು.

    ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ. ಯಾರೇ ಆದರೂ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದ್ದೇನೆ. ನಾನು ಕೂಡಾ ಇಂದು ಮೈಸೂರಿಗೆ ತೆರಳಿ ಅಧಿಕಾರಿಗಳ ಸಭೆ ಮಾಡ್ತೀನಿ. ಇದುವರೆಗೂ ಯಾವುದೇ ಬಂಧನ ಆಗಿಲ್ಲ. ಈ ಬಗ್ಗೆ ನನಗೆ ಇನ್ನೂ ಮಾಹಿತಿ ಬಂದಿಲ್ಲ ಎಂದು ತಿಳಿಸಿದರು.

    ಮೈಸೂರು ಪ್ರವಾಸ ತಾಣ. ಸಾವಿರಾರು ಜನ ನಿತ್ಯ ಇಲ್ಲಿಗೆ ಬರ್ತಾರೆ. ಇದೊಂದು ದುರಾದೃಷ್ಟಕರ ಘಟನೆ. ನಾವೆಲ್ಲರು ತಲೆ ತಗ್ಗಿಸುವಂತಹ ಘಟನೆ. ಪೊಲೀಸ್ ಗಸ್ತು ಸರಿಯಾಗಿ ಆಗುತ್ತಿಲ್ಲ ಎಂಬ ಆರೋಪ ಸೇರಿದಂತೆ ಎಲ್ಲಾ ವಿಚಾರವಾಗಿ ಇಂದು ಮೈಸೂರಿಗೆ ಹೋಗಿ ಸಭೆ ಮಾಡ್ತೀನಿ. ನಾಳೆಯೂ ಕೂಡಾ ಇಡೀ ದಿನ ಸಭೆ ಮಾಡಿ ಎಲ್ಲಾ ಮಾಹಿತಿ ಪಡೆಯುತ್ತೇನೆ ಎಂದರು.

  • ಯಡಿಯೂರಪ್ಪನವರ ಆಶೀರ್ವಾದದಿಂದ ಗೃಹಸಚಿವನಾಗಿದ್ದೇನೆ: ಅರಗ ಜ್ಞಾನೇಂದ್ರ

    ಯಡಿಯೂರಪ್ಪನವರ ಆಶೀರ್ವಾದದಿಂದ ಗೃಹಸಚಿವನಾಗಿದ್ದೇನೆ: ಅರಗ ಜ್ಞಾನೇಂದ್ರ

    ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಆಶೀರ್ವಾದಿಂದ ನಾನು ಗೃಹಸಚಿವನಾಗಿದ್ದೇನೆ ಎಂದು ಅರಗ ಜ್ಞಾನೇಂದ್ರ ಹೇಳಿದ್ದಾರೆ.

    ಸಂಸದ ಬಿ.ವೈ ರಾಘವೇಂದ್ರ ಅವರ ಹುಟ್ಟುಹಬ್ಬದ ದಿನದಂದೇ ಗೃಹ ಸಚಿವ ಅರಗ ಜ್ಞಾನೇಂದ್ರರಿಗೆ ಪೌರ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಸಂಸದ ಬಿ.ವೈ ರಾಘವೇಂದ್ರರನ್ನು ಗೃಹ ಸಚಿವರು ಹಾಡಿ ಹೊಗಳಿದ್ದಾರೆ.

    ಜಿಲ್ಲೆಯ ಶಿಕಾರಿಪುರದಲ್ಲಿ ಇಂದು ಪುರಸಭೆ ವತಿಯಿಂದ ನೀಡಲಾದ ಪೌರ ಸನ್ಮಾನ ಸ್ವೀಕರಿಸಿ ಮಾತನಾಡಿದ ಗೃಹ ಸಚಿವರು, ಯಡಿಯೂರಪ್ಪ ಕುಟುಂಬದೊಂದಿಗೆ ಹಿಂದಿನಿಂದಲೂ ನನಗೆ ಅವಿನಾಭಾವ ಸಂಬಂಧವಿದೆ. 1983ರಲ್ಲಿ ಯಡಿಯೂರಪ್ಪ ಶಿಕಾರಿಪುರದಿಂದ, ನಾನು ತೀರ್ಥಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಿದ್ದೆ. ಅಂದಿನ ಚುನಾವಣೆಯಲ್ಲಿ ನಾನು ರಿವರ್ಸ್ ಗೇರ್ ಇಲ್ಲದ ಕಾರಿನಲ್ಲಿ ಪ್ರಚಾರ ಮಾಡಿ ಎರಡು ಸಾವಿರ ಮತಗಳಿಂದ ಸೋತಿದ್ದೆ. ಅಂದು ಸ್ವಲ್ಪ ಪ್ರಯತ್ನಿಸಿದ್ದರೆ, ಯಡಿಯೂರಪ್ಪ ಅವರೊಂದಿಗೆ ನಾನು ಶಾಸಕನಾಗುತ್ತಿದ್ದೆ. 9 ಸಾರಿ ಚುನಾವಣೆಗೆ ಸ್ಪರ್ಧಿಸಿ, ನಾಲ್ಕು ಬಾರಿ ಗೆದ್ದಿದ್ದೇನೆ ಎಂದರು. ಇದನ್ನೂ ಓದಿ:
     ಸಿದ್ದರಾಮಯ್ಯನವರು ಕನಸಿನ ಲೋಕದಲ್ಲಿದ್ದಾರೆ: ಬಿ.ಸಿ ಪಾಟೀಲ್

    ಯಡಿಯೂರಪ್ಪನವರ ಆಶೀರ್ವಾದ, ಬೊಮ್ಮಾಯಿ ಅವರ ಸಹಕಾರದಿಂದ ಹಾಗೂ ಪಕ್ಷದ ಹಿರಿಯರ ಆಶೀರ್ವಾದದಿಂದ ಸರ್ಕಾರದಲ್ಲಿ ಅತ್ಯಂತ ಮಹತ್ವದ ಹುದ್ದೆಯಾದ ಗೃಹ ಸಚಿವನಾಗಿದ್ದೇನೆ ಎಂದು ಅರಗ ಹೇಳಿದ್ದಾರೆ. ಅಲ್ಲದೇ ಮುಂದಿನ ದಿನಗಳಲ್ಲಿ ರಾಜ್ಯ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ನಿರಂತರವಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.

  • ನೆರೆ ವೀಕ್ಷಣೆಗೆ ತೆರಳಿದ ಗೃಹ ಸಚಿವ ಪ್ರವಾಹದಲ್ಲಿ ಸಿಲುಕಿ ಪರದಾಟ- ಏರ್‌ಲಿಫ್ಟ್‌ನಿಂದ ರಕ್ಷಣೆ

    ನೆರೆ ವೀಕ್ಷಣೆಗೆ ತೆರಳಿದ ಗೃಹ ಸಚಿವ ಪ್ರವಾಹದಲ್ಲಿ ಸಿಲುಕಿ ಪರದಾಟ- ಏರ್‌ಲಿಫ್ಟ್‌ನಿಂದ ರಕ್ಷಣೆ

    ಭೋಪಾಲ್: ಪ್ರವಾಹದಲ್ಲಿ ಸಿಲುಕಿದ್ದ ಮಧ್ಯಪ್ರದೇಶದ ಗೃಹ ಸಚಿವ ನಾರೋತ್ತಮ್ ಮಿಶ್ರಾ ಅವರನ್ನು ಭಾರತೀಯ ವಾಯು ಸೇನೆಯವರು ಹೆಲಿಕಾಪ್ಟರ್ ಮೂಲಕ ಏರ್‌ಲಿಫ್ಟ್‌ ಮಾಡಿ ರಕ್ಷಿಸಿದ್ದಾರೆ.

    ಮಧ್ಯ ಪ್ರದೇಶದ ದಟಿಯಾ ಜಿಲ್ಲೆಯ ಕೊಟ್ರಾ ಗ್ರಾಮದಲ್ಲಿ ಘಟನೆ ನಡೆದಿದ್ದು, ಪ್ರವಾಹ ವೀಕ್ಷಣೆಗೆಂದು ಸಚಿವ ಮಿಶ್ರಾ ಅವರು ಎಸ್‍ಡಿಆರ್‍ಎಫ್ ನ ಮೋಟರ್ ಬೋಟ್‍ನಲ್ಲಿ ತೆರಳಿದ್ದರು. ಈ ವೇಳೆ ಬೋಟ್ ಬೃಹತ್ ಮರದಲ್ಲಿ ಸಿಲುಕಿದೆ. ಬಳಿಕ ಸಚಿವರು ಎಸ್‍ಡಿಆರ್‍ಎಫ್ ರಕ್ಷಣಾ ತಂಡದ ನಾಲ್ವರು ಮಹಿಳೆಯರೂ ಸೇರಿ 9 ಮಂದಿ ಜೊತೆ ಪಂಚಾಯಿತಿ ಕಟ್ಟಡಕ್ಕೆ ತೆರಳಿದ್ದಾರೆ.

    ಹೆಲಿಕಾಪ್ಟರ್ ಮೂಲಕ ಮೊದಲು ಪಂಚಾಯಿತಿ ಸಿಬ್ಬಂದಿಯನ್ನು ರಕ್ಷಣೆ ಮಾಡಲಾಗಿದ್ದು, ಬಳಿಕ ಮಿಶ್ರಾ ಅವರನ್ನು ರಕ್ಷಣೆ ಮಾಡಿ, ಸುರಕ್ಷಿತವಾಗಿ ದಟಿಯಾದಲ್ಲಿರುವ ಅವರ ಮನೆಗೆ ತಲುಪಿಸಲಾಗಿದೆ. ಈ ಮೂಲಕ ನೆರೆ ವೀಕ್ಷಣೆಗೆ ತೆರಳಿದ ಸಚಿವರೇ ಪ್ರವಾಹದಲ್ಲಿ ಸಿಲುಕಿ ಪರದಾಡಿರುವ ಘಟನೆ ನಡೆದಿದೆ.

  • ಸ್ಫೋಟದಲ್ಲಿ ಡೈನಾಮೈಟ್ ಬಳಕೆ ಬಯಲು: ಬಸವರಾಜ್ ಬೊಮ್ಮಾಯಿ

    ಸ್ಫೋಟದಲ್ಲಿ ಡೈನಾಮೈಟ್ ಬಳಕೆ ಬಯಲು: ಬಸವರಾಜ್ ಬೊಮ್ಮಾಯಿ

    ಬೆಂಗಳೂರು: ಶಿವಮೊಗ್ಗ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದಲ್ಲಿ ದೊಡ್ಡ ಪ್ರಮಾಣದ ಡೈನಾಮೈಟ್ ಬಳಕೆ ಆಗಿರುವ ವಿಚಾರ ತಿಳಿದು ಬಂದಿದೆ. ಹೀಗಾಗಿ ಈ ಕುರಿತಂತೆ ತನಿಖೆ ನಡೆಸಿ ಗಂಭೀರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

    ಶಿವಮೊಗ್ಗದಲ್ಲಿ ಜಿಲೆಟಿನ್ ಸ್ಫೋಟ ಪ್ರಕರಣ ಸಂಬಂಧಿಸಿದಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಯಲ್ಲಿ ದೊಡ್ಡ ಪ್ರಮಾಣದ ಡೈನಾಮೈಟ್ ಬಳಕೆ ಆಗಿರುವುದು ತಿಳಿದುಬಂದಿದೆ. ನಾಲ್ಕು ಜಿಲ್ಲೆಗೆ ಅದರ ಪರಿಣಾಮ ಆಗಿದೆ. ಹಿಂದೆ ಎಂದೂ ಇಂತಹ ಸ್ಫೋಟ ಸಂಭವಿಸಿರಲಿಲ್ಲ. ಎಂಪಿ, ಎಂಎಲ್‍ಎಗಳು ಘಟನಾ ಸ್ಥಳದಲ್ಲಿಯೇ ಇದ್ದಾರೆ. ಅವರೆಲ್ಲರಿಂದ ಮಾಹಿತಿಗಳನ್ನು ಪಡೆಯುತ್ತಿದ್ದೇನೆ. ಪ್ರಕರಣ ಕುರಿತಂತೆ ಸಮಗ್ರ ತನಿಖೆ ಮಾಡಿಸಿ, ಯಾರೇ ತಪ್ಪಿತಸ್ಥರಾಗಿದ್ದರು ಕೂಡ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು.

    ಲಾರಿಗಳಲ್ಲಿ ಇಂತಹ ಸ್ಫೋಟಕಗಳ ಸಾಗಣೆ ಇರುವ ನಿಯಮಗಳ ಬಗ್ಗೆ ಮರು ಚರ್ಚೆ ಆಗಬೇಕು. ಈ ಕುರಿತು ಗಣಿ ಇಲಾಖೆ ಅಧಿಕಾರಿಗಳ ಜೊತೆ ಮಾತನಾಡಿ, ನಿಯಮ ಸಡಿಲಿಕೆ ಇರುವ ಬಗೆಗೆ ಮರು ಚಿಂತನೆ ನಡೆಸುತ್ತೇನೆ. ಘಟನೆ ವಿಚಾರವಾಗಿ ಉನ್ನತ ಮಟ್ಟದ ತನಿಖೆಗೆ ಈಗಾಗಲೇ ಸಿಎಂ ಸೂಚನೆ ನೀಡಿದ್ದಾರೆ. ಪ್ರಾಥಮಿಕ ತನಿಖಾ ವರದಿ ಇಂದು ಸಂಜೆ ಬರಲಿದ್ದು, ಯಾರ ಕೈನಿಂದ ತನಿಖೆ ಮಾಡಿಸಬೇಕು ಎಂದು ಪ್ರಾಥಮಿಕ ವರದಿ ಬಂದ ನಂತರ ತಿಳಿಸುವುದಾಗಿ ಹೇಳಿದರು.

    ಸದ್ಯ ಕ್ವಾರಿ ಓನರ್ ಮತ್ತು ಸ್ಫೋಟಕ ಸಪ್ಲೈ ಮಾಡಿದವರ ವಿಚಾರವಾಗಿ ತನಿಖೆ ನಡೆಸಲಾಗುತ್ತಿದ್ದು, ಕ್ವಾರಿಗೆ ಅನುಮತಿ ಇತ್ತಾ? ಅಥವಾ ಅದರ ಅವಧಿ ಮುಕ್ತಾಯ ಆಗಿದೆಯಾ? ಸ್ಫೋಟಕ ಸಪ್ಲೈಯನ್ನು ನಿಯಮಾನುಸಾರ ಮಾಡಿದ್ದಾರಾ? ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ. ಸಂಪೂರ್ಣ ವಿಚಾರಣೆ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಬೊಮ್ಮಾಯಿ ಹೇಳಿದರು.

  • ಆಡಳಿತ ಪಕ್ಷದ ಶಾಸಕನಿಗೆ ಮಾಸ್ಕ್ ದಂಡ – ಗರಂ ಆಗಿ ಬೊಮ್ಮಾಯಿಗೆ ಪತ್ರ

    ಆಡಳಿತ ಪಕ್ಷದ ಶಾಸಕನಿಗೆ ಮಾಸ್ಕ್ ದಂಡ – ಗರಂ ಆಗಿ ಬೊಮ್ಮಾಯಿಗೆ ಪತ್ರ

    ಬೆಂಗಳೂರು: ಮೂಡಿಗೆರೆಯ ಶಾಸಕ ಎಂಪಿ ಕುಮಾರಸ್ವಾಮಿ ಅವರಿಗೆ ಬೆಂಗಳೂರಿನ ಪೊಲೀಸರು ಮಾಸ್ಕ್ ದಂಡ ವಿಧಿಸಿದ್ದಾರೆ.

    ಮೂಡಿಗೆರೆ ಬಿಜೆಪಿ ಶಾಸಕ ಎಂಪಿ ಕುಮಾರಸ್ವಾಮಿ ಅವರಿಗೆ ಮಾಸ್ಕ್ ದಂಡವನ್ನು ಶೇಷಾದ್ರಿಪುರಂ ಸಂಚಾರಿ ಪೊಲೀಸರು ಹಾಕಿದ್ದರು. ಇದರಿಂದ ಕೆರಳಿದ ಶಾಸಕರು ಗೃಹ ಸಚಿವರಿಗೆ ದೂರು ನೀಡಿದ್ದಾರೆ.

    ಪೊಲೀಸರು ವಿನಾಕಾರಣ ಮಾಸ್ಕ್ ಧರಿಸಿ ಕಾರಿನಲ್ಲಿದ್ದಾಗ ಕಾರಿನ ಟಿಂಟ್ ಗ್ಲಾಸ್ ಇಳಿಸುವಂತೆ ಒತ್ತಡ ಹಾಕಿ 250 ರೂ ದಂಡ ಕಟ್ಟಿಸಿಕೊಂಡಿದ್ದಾರೆ. ಹಾಗಾಗಿ ಪೊಲೀಸರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ.

    ಪತ್ರದಲ್ಲಿ ಏನಿದೆ?
    ನಾನು ಬಾಡಿಗೆ ಕಾರಿನಲ್ಲಿ ಶೇಷಾದ್ರಿಪುರಂ ಕಡೆಯಿಂದ ಶಾಸಕರ ಭವನಕ್ಕೆ ತೆರಳುತ್ತಿದ್ದಾಗ ವಿನಾ ಕಾರಣ ಕಾರು ನಿಲ್ಲಿಸಿ ಕಾರಿನ ಟಿಂಟ್ ಗ್ಲಾಸ್ ಇಳಿಸಿ ಮಾಸ್ಕ್ ಹಾಕಿದ್ದರೂ 250 ರೂ ದಂಡ ವಿಧಿಸಿದ್ದಾರೆ. ಆ ಸಂದರ್ಭ ನಾನು ಜವಾಬ್ದಾರಿಯುತ ವ್ಯಕ್ತಿಯಾಗಿ ಮರು ಮಾತನಾಡದೆ ದಂಡ ಕಟ್ಟಿರುತ್ತೇನೆ. ಆದರೆ ವಿನಾ ಕಾರಣ ಕಟ್ಟಿಸಿಕೊಂಡಿರುವುದು ಆಕ್ಷೇಪಾರ್ಹ. ಹೀಗಾಗಿ ಪೊಲೀಸರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಲ್ಲಿ ಪತ್ರದ ಮುಖಾಂತರ ದೂರು ನೀಡಿದ್ದಾರೆ.

  • ಬೈಕ್ ಕಳ್ಳತನಕ್ಕೆ ಬಂದು ಮಹಿಳೆಯರ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

    ಬೈಕ್ ಕಳ್ಳತನಕ್ಕೆ ಬಂದು ಮಹಿಳೆಯರ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

    – ಗೃಹ ಸಚಿವರ ತವರಲ್ಲೇ ಘಟನೆ

    ಹುಬ್ಬಳ್ಳಿ: ಗೃಹ ಸಚಿವರ ತವರಿನಲ್ಲಿಯೇ ಕ್ರೈಂಗಳಿಗೆ ಕಡಿವಾಣ ಇಲ್ಲದಂತಾಗಿದೆ. ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಪುಂಡರ ಹಾವಳಿ ಹೆಚ್ಚಾಗಿದೆ. ಮುಸ್ಸಂಜೆ ಹೊತ್ತಿನಲ್ಲಿ ಮನೆಯಲ್ಲಿ ಇರಲು ಕೂಡ ಆತಂಕಪಡುವ ಸ್ಥಿತಿ ಎದುರಾಗಿದೆ.

    ಮನೆಯೊಂದಕ್ಕೆ 10 ಮಂದಿ ಪುಂಡರ ತಂಡ ದಾಳಿ ನಡೆಸಿ ಬೈಕಿಗೆ ಬೆಂಕಿ ಹಚ್ಚಿದೆ. ಅಲ್ಲದೆ ಮನೆಯಲ್ಲಿನ ಹೆಣ್ಣು ಮಕ್ಕಳ ಮೇಲೆ ದಾಳಿ ನಡೆಸಿದ ಘಟನೆ ಹುಬ್ಬಳ್ಳಿ ಗೋಕುಲ ರಸ್ತೆಯ ಗಿರಿ ನಗರದಲ್ಲಿ ನಡೆದಿದೆ.

    ವಿನಯ ದೇಸಾಯಿ ಅವರಿಗೆ ಸೇರಿದ ಮನೆಯಾಗಿದ್ದು, ಮೋಟಾರ್ ಕಳ್ಳತನಕ್ಕೆ ಬಂದವರಿಂದ ದಾಂಧಲೆ ನಡೆದಿದೆ ಎಂದು ಶಂಕೆ ವ್ಯಕ್ತವಾಗಿದೆ. ಕಳವು ಮಾಡುತ್ತಿರುವ ಶಬ್ದ ಕೇಳಿ ಹೊರಬಂದ ವಿನಯ್ ಮೇಲೆ ಕಲ್ಲು, ದೊಣ್ಣೆಯಿಂದ ಹಲ್ಲೆ ನಡೆಸಿದ ದುಷ್ಕರ್ಮಿಗಳು ಮನೆಯ ಹೆಣ್ಣು ಮಕ್ಕಳ ಮೇಲೆ ಕೂಡ ಹಲ್ಲೆ ನಡೆಸಿದ್ದಾರೆ.

    ಪುಂಡರ ಹಾವಳಿಯಿಂದ ವಿನಯ ಹಾಗೂ ಅವರ ಅಕ್ಕನಿಗೆ ಗಂಭೀರ ಗಾಯವಾಗಿದ್ದು,ವಿನಯ್ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಮಣಿಪಾಲ ಆಯ್ತಾ ಗಾಂಜಾ ಅಡ್ಡೆ- ಗೃಹ ಸಚಿವರೇ ನಿಮ್ಮ ಜಿಲ್ಲೆಯಲ್ಲಿ ಇದೇನಿದು ಅಕ್ರಮ ಚಟುವಟಿಕೆ?

    ಮಣಿಪಾಲ ಆಯ್ತಾ ಗಾಂಜಾ ಅಡ್ಡೆ- ಗೃಹ ಸಚಿವರೇ ನಿಮ್ಮ ಜಿಲ್ಲೆಯಲ್ಲಿ ಇದೇನಿದು ಅಕ್ರಮ ಚಟುವಟಿಕೆ?

    ಉಡುಪಿ: ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಉಸ್ತುವಾರಿ ವಹಿಸಿಕೊಂಡ ಉಡುಪಿ ಜಿಲ್ಲೆ ಮಾದಕ ಪದಾರ್ಥಗಳ ಅಡ್ಡೆಯಾಗಿದೆಯೇ ಎಂಬ ಅನುಮಾನ ಮೂಡತೊಡಗಿದೆ. ಇದಕ್ಕೆ ಸಾಕ್ಷಿ ಕೆಲವೇ ದಿನಗಳ ಅಂತರದಲ್ಲಿ ಪೊಲೀಸರಿಗೆ ಸೆರೆಸಿಕ್ಕ 32 ಕೆಜಿ ಗಾಂಜಾ.

    ಮಣಿಪಾಲ ವ್ಯಾಪ್ತಿಯಲ್ಲಿ ಅಘಾದ ಪ್ರಮಾಣದಲ್ಲಿ ಗಾಂಜಾ ವಶವಾಗಿದೆ. ಉಡುಪಿಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಮಾದಕ ಪದಾರ್ಥಗಳ ಬಳಕೆಯ ಮೇಲೆ ಜಿಲ್ಲೆಯ ಹಲವೆಡೆಗಳಲ್ಲಿ ಪೊಲೀಸರು ವ್ಯಾಪಕ ಕಾರ್ಯಾಚರಣೆ ನಡೆಸಿ ಅಮಲು ಪದಾರ್ಥಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಕಳೆದ ಕೆಲವು ದಿನಗಳ ಅಂತರದಲ್ಲಿ ವಶಪಡಿಸಿಕೊಂಡ 32 ಕೆಜಿ ಗಾಂಜಾ ನಾಶ ಮಾಡಲಾಗಿದೆ.

    ನಂದಿಕೂರು ಇಂಡಸ್ಟ್ರಿಯಲ್ ವ್ಯಾಪ್ತಿಯಲ್ಲಿ ಪೊಲೀಸರು 32.883 ಕೆಜಿ ಗಾಂಜಾಕ್ಕೆ ಬೆಂಕಿ ಹಚ್ಚಿ ನಾಶ ಪಡಿಸಿದ್ದಾರೆ. ಹೆರಾಯಿನ್, ಮಾಫಿನ್, ಚರಾಸ್‍ಗಳು ಇದರಲ್ಲಿ ಸೇರಿದೆ. ಗಾಂಜಾ ನಾಶ ಸಂದರ್ಭ ವಿಷಯುಕ್ತ ಅನಿಲ ಬಿಡುಗಡೆಯಾಗುವುದರಿಂದ ಪೊಲೀಸರ ಮುನ್ನೆಚ್ಚರಿಕಾ ಕ್ರಮ ಅನುಸರಿಸಿದ್ದಾರೆ. ಉಡುಪಿ ಎಸ್‍ಪಿ ವಿಷ್ಣುವರ್ಧನ್ ಅವರ ನೇತೃತ್ವದಲ್ಲಿ ಅಮಲು ಪದಾರ್ಥಗಳ ನಾಶ ಮಾಡಲಾಯಿತು. ಜಿಲ್ಲೆಯಲ್ಲಿ ಮಣಿಪಾಲದಲ್ಲೇ ಅತೀ ಹೆಚ್ಚು ಗಾಂಜಾ ಪ್ರಕರಣಗಳು ದಾಖಲಾಗಿದ್ದು, ಆ ವ್ಯಾಪ್ತಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಎಸ್‍ಪಿ ವಿಷ್ಣುವರ್ಧನ್ ಮಾಹಿತಿ ನೀಡಿದ್ದಾರೆ.

    ಎಎಸ್‍ಪಿ ಕುಮಾರಚಂದ್ರ ಮಾಧ್ಯಮಗಳ ಜೊತೆ ಮಾತನಾಡಿ, ಗಾಂಜಾ ಮತ್ತು ಅಫೀಮು ಸೇವನೆ ಮಾಡುವ ವಿದೇಶಿ ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ನಿಗಾ ಇಟ್ಟಿದ್ದೇವೆ. ಕಾಲೇಜು ಕ್ಯಾಂಪಸ್‍ಗಳಲ್ಲೂ ಗೂಢಚಾರ್ಯ ಮಾಡಿ ದುಶ್ಚಟ ದಾಸರಿಗೆ ಕಾನೂನು ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದೇವೆ. ಸಾರ್ವಜನಿಕ ಮಾಹಿತಿ ಮತ್ತು ಸಹಕಾರ ಅಗತ್ಯವಿದೆ ಎಂದು ಹೇಳಿದರು. ಗೃಹ ಸಚಿವರ ಉಸ್ತುವಾರಿ ಜಿಲ್ಲೆಯಲ್ಲಿ ಅಕ್ರಮ ಚಟುವಟಿಕರಗೆ ಲಗಾಮು ಹಾಕುವ ಕಾರ್ಯ ಆಗಬೇಕು ಎಂಬೂದು ಪ್ರಜ್ಞಾವಂತರ ಒತ್ತಾಯ.

  • ನಾವು ಅನ್ಯಾಯ ಸಹಿಸುವುದಿಲ್ಲ- ದೀದಿ ನೆಲದಲ್ಲಿ ವಿಪಕ್ಷಗಳ ವಿರುದ್ಧ ಶಾ ಗುಡುಗು

    ನಾವು ಅನ್ಯಾಯ ಸಹಿಸುವುದಿಲ್ಲ- ದೀದಿ ನೆಲದಲ್ಲಿ ವಿಪಕ್ಷಗಳ ವಿರುದ್ಧ ಶಾ ಗುಡುಗು

    – ದೇಶದ್ರೋಹಿಗಳಿಗೆ ಗುಂಡಿಕ್ಕಿ: ಸಮಾವೇಶದಲ್ಲಿ ಕೇಳಿಬಂದ  ಕೂಗು

    ಕೋಲ್ಕತ್ತಾ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವುದನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರೋಧಿಸಿದರು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ.

    ಕೋಲ್ಕತ್ತಾದಲ್ಲಿ ‘ನಾವು ಅನ್ಯಾಯವನ್ನು ಸಹಿಸುವುದಿಲ್ಲ’ ಎಂಬ ಅಭಿಯಾನವನ್ನು ಇಂದು ಪ್ರಾರಂಭಿಸಿ ಮಾತನಾಡಿದ ಅವರು, ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್, ಎಸ್‍ಪಿ, ಬಿಎಸ್‍ಪಿ, ಎಡಪಂಥೀಯರೊಂದಿಗೆ ಸೇರಿ ರಾಮ್ ಮಂದಿರ ನಿರ್ಮಾಣವನ್ನು ವಿರೋಧಿಸಿದರು. ಅಷ್ಟೇ ಅಲ್ಲದೆ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ್ದಕ್ಕೆ ವಿರೋಧ ವ್ಯಕ್ತಪಡಿಸಿದರು ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಅಲ್ಪಸಂಖ್ಯಾತರನ್ನು ಎತ್ತಿ ಹಿಡಿದರು ಎಂದು ದೂರಿದರು.

    ‘ಲೋಕಸಭಾ ಚುನಾವಣೆಯ ಸಮಯದಲ್ಲಿ ನೀವು ನಮ್ಮನ್ನು ತಡೆಯಲು ಶ್ರಮಿಸಿದ್ದೀರಿ. ಹೆಲಿಕಾಪ್ಟರ್ ಇಳಿಸಲು ಅವಕಾಶ ನೀಡಲಿಲ್ಲ. ಸಮಾವೇಶಗಳಿಗೆ ಅವಕಾಶ ನೀಡಲಿಲ್ಲ. ಬಿಜೆಪಿ ಕಾರ್ಯಕರ್ತರ ಮೇಲೆ ಗುಂಡು ಹಾರಿಸಲಾಗಿತ್ತು. ಬಂಗಾಳದಲ್ಲಿ ಗಲಭೆಗಳು ನಡೆದವು, ರೈಲುಗಳು ಸುಟ್ಟುಹೋದವು, ಅಮಾಯಕರು ಕೊಲ್ಲಲ್ಪಟ್ಟರು. ನಮ್ಮ 40ಕ್ಕೂ ಹೆಚ್ಚು ಕಾರ್ಯಕರ್ತರು ಕೊಲೆಯಾದರು ಎಂದು ಮಮತಾ ಬ್ಯಾನರ್ಜಿ ಅವರ ವಿರುದ್ಧ ವಾಗ್ದಾಳಿ ನಡೆಸಿದರು.

    ನೀವು ತೃಣಮೂಲ ಮತ್ತು ಎಡಪಂಥೀಯರಿಗೆ ಇಷ್ಟು ವರ್ಷಗಳ ಕಾಲ ಅವಕಾಶ ಕೊಟ್ಟಿದ್ದೀರಿ. ನಮಗೆ ಐದು ವರ್ಷಗಳ ಕಾಲ ಆಡಳಿತ ನಡೆಸಲು ಅವಕಾಶ ಕೊಡಿ. ನಾವು ಪಶ್ಚಿಮ ಬಂಗಾಳನ್ನು ಅಭಿವೃದ್ಧಿಗೊಳಿಸುತ್ತೇವೆ ಎಂದು ಶಾ ಮತದಾರರಲ್ಲಿ ಮನವಿ ಮಾಡಿಕೊಂಡರು.

    ಬಂಗಾಳದ ಅಭಿವೃದ್ಧಿಗೆ ದೀದಿಯಿಂದ ಫುಲ್ ಸ್ಟಾಪ್:
    ಪಶ್ಚಿಮ ಬಂಗಾಳವನ್ನು ಟಿಎಂಸಿ ಮತ್ತು ಎಡಪಂಥೀಯರು ಸಾಲಕ್ಕೆ ಮುಳುಗಿಸಿದ್ದಾರೆ. ದೀದಿ ನೇತೃತ್ವದ ಸರ್ಕಾರವು ಮೂರು ಲಕ್ಷ ಕೋಟಿ ರೂ. ಸಾಲ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಯೋಜನೆಗಳು ಪಶ್ಚಿಮ ಬಂಗಾಳದಲ್ಲಿ ಜಾರಿಗೆ ತರಲು ಮಮತಾ ಬ್ಯಾನರ್ಜಿ ಅನುಮತಿ ನೀಡುತ್ತಿಲ್ಲ. ಅವರು ಬಂಗಾಳದ ಅಭಿವೃದ್ಧಿಯನ್ನು ನಿಲ್ಲಿಸಿದ್ದಾರೆ. ರೈತರಿಗಾಗಿ ಪ್ರಾರಂಭಿಸಲಾದ ಪ್ರಧಾನಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಜಾರಿಗೆ ತರಲಿಲ್ಲ. ರೈತರು ಸಾಲದಲ್ಲಿದ್ದಾರೆ. ಆದರೆ ಮಮತಾ ಬ್ಯಾನರ್ಜಿ ದುರಹಂಕಾರದಲ್ಲಿದ್ದಾರೆ. ಬಂಗಾಳದಲ್ಲಿ ಭ್ರಷ್ಟಾಚಾರ ಚಾಲ್ತಿಯಲ್ಲಿದೆ. ಸಿಂಡಿಕೇಟ್ ಸರ್ಕಾರದ ಆಶ್ರಯದಲ್ಲಿ ನಡೆಯುತ್ತಿದೆ. ಬಿಜೆಪಿ ಸರ್ಕಾರ ರಚನೆಯಾದ ನಂತರ ಅಂತಹವರನ್ನು ಜೈಲಿಗೆ ಕಳುಹಿಸಲಾಗುತ್ತದೆ ಎಂದು ಭರವಸೆ ನೀಡಿದರು.

    ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದಲ್ಲಿ ದುರ್ಗಾ ಪೂಜೆಯನ್ನು ನಿಷೇಧಿಸಿದ್ದಾರೆ. ಜನರು ಪೂಜಿ ಸಲ್ಲಿಸುವುದಕ್ಕೂ ಹೈಕೋರ್ಟಿಗೆ ಹೋಗಬೇಕಾಗಿತ್ತು. ರಾಮನವಮಿಯನ್ನು ಪಾಲಿಸಲು ದೀದಿ ಅನುಮತಿಸುವುದಿಲ್ಲ. ಸರಸ್ವತಿ ಪೂಜೆಯನ್ನು ಶಾಲೆಗಳಲ್ಲಿ ತಡೆಯಲಾಗಿದೆ ಎಂದು ದೂರಿದರು.

    ರಾಜ್ಯದಲ್ಲಿ ಅನ್ಯಾಯ, ಭ್ರಷ್ಟಾಚಾರ, ಗಲಭೆ, ನಿರುದ್ಯೋಗ ಹೆಚ್ಚಾಗುತ್ತದೆ ಎಂದು ಗುಡುಗಿದರು. ಆಗ ಕೆಲ ಕಾರ್ಯಕರ್ತರು ‘ದೇಶದ್ರೋಹಿಗಳನ್ನು ಶೂಟ್ ಮಾಡಿ’ ಎಂಬ ಘೋಷಣೆ ಕೂಗಿದರು.

    ಇದಕ್ಕೂ ಮುನ್ನ ಅಮಿತ್ ಶಾ ಅವರು ಕೋಲ್ಕತ್ತಾ ತಲುಪಿದಾಗ ತೃಣಮೂಲ ಕಾಂಗ್ರೆಸ್ ಮತ್ತು ಎಐವೈಎಲ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಅಷ್ಟೇ ಅಲ್ಲದೆ ಕಪ್ಪು ಧ್ವಜಗಳನ್ನು ತೋರಿಸಿ ಶಾ ಗೋ ಬ್ಯಾಕ್ ಎಂದು ಘೋಷಣೆ ಕೂಗಿದ್ದರು. ಮತ್ತೊಂದೆಡೆ ಬಿಜೆಪಿ ಕಾರ್ಯಕರ್ತರು ಕೋಲ್ಕತ್ತಾದ ಅನೇಕ ಸ್ಥಳಗಳಲ್ಲಿ ತೃಣಮೂಲ ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿದರು.

  • ಗೃಹಮಂತ್ರಿಗಳೇ ಪೊಲೀಸ್ರನ್ನು ಸೈಟ್ ಮಾರಿ ದುಡ್ಡು ಮಾಡಲು ಬಿಟ್ಟಿದ್ದೀರಾ: ರೇವಣ್ಣ

    ಗೃಹಮಂತ್ರಿಗಳೇ ಪೊಲೀಸ್ರನ್ನು ಸೈಟ್ ಮಾರಿ ದುಡ್ಡು ಮಾಡಲು ಬಿಟ್ಟಿದ್ದೀರಾ: ರೇವಣ್ಣ

    – ದೊರೆಸ್ವಾಮಿಯವರಲ್ಲಿ ಯತ್ನಾಳ್ ಕ್ಷಮೆ ಕೇಳಬೇಕು

    ಹಾಸನ: ರಾಜ್ಯದ ಗೃಹ ಮಂತ್ರಿಗಳೇ ಪೊಲೀಸರನ್ನು ಸೈಟ್ ಮಾರಿ ದುಡ್ಡು ಮಾಡಲು ಬಿಟ್ಟಿದ್ದೀರಾ ಎಂದು ಮಾಜಿ ಸಚಿವ ರೇವಣ್ಣ ಆಕ್ರೋಶ ಹೊರಹಾಕಿದ್ದಾರೆ.

    ಹಾಸನದಲ್ಲಿ ಸೈಟ್ ದಂಧೆ ನಡೆಯುತ್ತಿರುವ ಬಗ್ಗೆ ಅಸಮಾಧಾನ ಹೊರಹಾಕಿದ ರೇವಣ್ಣ, ಹಾಸನ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ರೈತರು 700 ಎಕರೆ ಜಮೀನು ಕೊಟ್ಟಿದ್ದಾರೆ. ಇದರಿಂದ ಸುಮಾರು 12 ಸಾವಿರ ನಿವೇಶನ ಆಗಲಿದೆ. ಜನರಿಗೂ ಕೂಡ ಕಡಿಮೆ ದರಕ್ಕೆ ಸೈಟ್ ಸಿಗುತ್ತೆ. ಜಮೀನು ಕೊಟ್ಟ ರೈತರಿಗೂ ಶೇ.50ರಷ್ಟು ಹಣ ದೊರೆಯಲಿದೆ. ಆದರೆ ಹಾಸನದಲ್ಲಿ ಹೌಸಿಂಗ್ ಬೋರ್ಡ್, ಪ್ರಾಧಿಕಾರಗಳಿಂದ ಕೆಲಸ ಆಗುತ್ತಿಲ್ಲ ಎಂದು ಕಿಡಿಕಾರಿದರು.

    ಖಾಸಗಿಯವರ ಸೈಟ್ ದಂಧೆ ಹೆಚ್ಚಾಗುತ್ತಿದೆ. ಅಷ್ಟೇ ಅಲ್ಲದೆ ಈಗ ಪೊಲೀಸರು ಕೂಡ ಸೈಟ್ ಮಾಡಲು ಹೊರಟಿದ್ದಾರೆ. ರಾಜ್ಯದ ಗೃಹ ಮಂತ್ರಿಗಳೇ ಪೊಲೀಸರನ್ನು ಸೈಟ್ ಮಾರಿ ದುಡ್ಡು ಮಾಡಲು ಬಿಟ್ಟಿದ್ದೀರಾ ಎಂದು ರೇವಣ್ಣ ಗರಂ ಆಗಿದ್ದಾರೆ.

    ಈ ಬಗ್ಗೆ ಡಿಸಿಯವರ ಗಮನಕ್ಕೆ ತಂದಿದ್ದೇನೆ. ನಗರ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಯೂ ಸರಿಯಾಗಿ ಕೆಲಸ ಮಾಡುತ್ತಿಲ್ಲ. ನಾನೇನಾದರೂ ಸಚಿವನಾಗಿದ್ರೆ ಅವನನ್ನು ಒದ್ದು ಒಳಗೆ ಹಾಕಿಸುತ್ತಿದ್ದೆ. ಪಿಡಿಓಗಳು ಕೂಡ ದುಡ್ಡು ಕೊಟ್ಟರೆ ಯಾವುದಕ್ಕೆ ಬೇಕಾದ್ರು ನಿರಾಪೇಕ್ಷಣಾ ಪತ್ರ(ಎನ್‍ಓಸಿ) ಕೊಡ್ತಿದ್ದಾರೆ. ಹಾಸನದಲ್ಲಿ ಸೈಟ್ ದಂಧೆ ನಡೆಯುತ್ತಿದ್ದು, ಹಾಸನ ನಗರ ನಾಶ ಆಗುತ್ತಿದೆ. ಆದರೆ ಹೇಳೋರು ಕೇಳೋರು ಯಾರೂ ಇಲ್ಲ. ರೌಡಿಗಳು ಚಾಕು ತೋರಿಸಿ ಹೆದರಿಸುತ್ತಿದ್ದಾರೆ. ಸರ್ಕಾರ ಖಾಸಗಿಯವರ ಜೊತೆ ಶಾಮೀಲಾದಂತೆ ಕಾಣುತ್ತಿದೆ ಎಂದು ರೇವಣ್ಣ ಅಸಮಾಧಾನ ಹೊರಹಾಕಿದ್ದಾರೆ.

    ಯತ್ನಾಳ್ ಕ್ಷಮೆ ಕೇಳಬೇಕು:
    ಇದೇ ವೇಳೆ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಬಗ್ಗೆ ಮಾತನಾಡಿದ ಬಿಜೆಪಿ ಸಚಿವ ಯತ್ನಾಳ್ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಹೋರಾಟ ಮಾಡಬೇಕಾಗುತ್ತದೆ ಎಂದು ರೇವಣ್ಣ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ದೊರೆಸ್ವಾಮಿ ಪಾಕ್ ಏಜೆಂಟ್, ದೇಶದ್ರೋಹದ ಪೋಸ್ಟ್ ಹಾಕಿದ್ರೆ ಬೀಳುತ್ತೆ ಗುಂಡೇಟು: ಯತ್ನಾಳ್ ವಾರ್ನಿಂಗ್

    ದೊರೆಸ್ವಾಮಿ ಬಗ್ಗೆ ಅತೀ ಹೆಚ್ಚಿನ ಗೌರವ ತೋರಿಸಬೇಕು. ಅವರು ಯಾವುದೇ ಪಕ್ಷಕ್ಕೆ ಸೇರಿದವರಲ್ಲ. ಎಲ್ಲಿಯೇ ಅನ್ಯಾಯ ಆದರೂ ಹೋರಾಡುತ್ತಾರೆ. ಯತ್ನಾಳ್ ಬಗ್ಗೆ ಗೌರವ ಇದೆ. ಅವರ ಬಾಯಲ್ಲಿ ಈ ರೀತಿ ಮಾತು ಬರಬಾರದಿತ್ತು. ಇದನ್ನು ನಾನು ಖಂಡಿಸುತ್ತೇನೆ. ಈ ಬಗ್ಗೆ ಯತ್ನಾಳ್ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಹೋರಾಟ ಮಾಡಬೇಕಾಗುತ್ತದೆ ಎಂದು ರೇವಣ್ಣ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಯುವಕರಿಗೆ ದಾರಿದೀಪವಾಗಿರುವ ದೊರೆಸ್ವಾಮಿಯನ್ನು ನಿಂದಿಸಿದ ಯತ್ನಾಳ್‍ರನ್ನು ಜೈಲಿಗೆ ಹಾಕಿ – ಜಾಲತಾಣಗಳಲ್ಲಿ ಪೋಸ್ಟ್

  • ದೇಶದ್ರೋಹಿಗಳನ್ನ ಮಟ್ಟಹಾಕಲು ಯತ್ನಾಳ್‍ಗೆ ಗೃಹ ಖಾತೆ ಕೊಡಿ- ಅಭಿಯಾನ

    ದೇಶದ್ರೋಹಿಗಳನ್ನ ಮಟ್ಟಹಾಕಲು ಯತ್ನಾಳ್‍ಗೆ ಗೃಹ ಖಾತೆ ಕೊಡಿ- ಅಭಿಯಾನ

    ವಿಜಯಪುರ: ರಾಜ್ಯದಲ್ಲಿ ಪಾಕ್ ಪರ ಘೋಷಣೆ, ದೇಶದ್ರೋಹಿ ಚಟುವಟಿಕೆ ಹೆಚ್ಚಿದ ಹಿನ್ನೆಲೆ ಫೈರ್ ಬ್ರಾಂಡ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‍ಗೆ ಗೃಹ ಸಚಿವ ಸ್ಥಾನ ನೀಡುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಶುರುವಾಗಿದೆ.

    ಟಿಕ್‍ಟಾಕ್, ಫೇಸ್ ಬುಕ್‍ನಂತಹ ಸಾಮಾಜಿಕ ಜಾಲತಾಣದ ಮೂಲಕ ಅಭಿಯಾನ ಶುರುವಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಯತ್ನಾಳರನ್ನು ಗೃಹ ಸಚಿವರನ್ನಾಗಿ ಮಾಡುವಂತೆ ಪೋಸ್ಟ್ ಗಳು ಹರಿದಾಡುತ್ತಿವೆ. ವಾಟ್ಸಪ್ ಗಳಲ್ಲಿ ಸಂದೇಶಗಳನ್ನು ಕಳುಹಿಸಲಾಗುತ್ತಿದೆ. ದೇಶದ್ರೋಹಿಗಳನ್ನು ಹುಟ್ಟಡಗಿಸಲು ಯತ್ನಾಳ್ ಅವರೇ ಸರಿ ಅವರಿಗೆ ಗೃಹ ಖಾತೆ ನೀಡಿ ಎಂದು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರಿಗೆ ಮನವಿ ಮಾಡಲಾಗಿದೆ.

    ದೇಶದ್ರೋಹಿಗಳನ್ನ ಮಟ್ಟಹಾಕಲು ಯತ್ನಾಳ್‍ಗೆ ಗೃಹ ಖಾತೆ ನೀಡಲು ಪೋಸ್ಟ್ ಗಳಲ್ಲಿ ಒತ್ತಾಯ ಮಾಡಲಾಗಿದ್ದು, ಕರ್ನಾಟಕದ ಗೃಹ ಸಚಿವರನ್ನಾಗಿ ಯತ್ನಾಳರನ್ನು ನೇಮಿಸಲು ಆಗ್ರಹಿಸಲಾಗಿದೆ. ದೇಶದ್ರೋಹಿಗಳ ಮಣಿಸಲು ಯತ್ನಾಳರೇ ಸೂಕ್ತ ಅವರನ್ನು ಗೃಹ ಮಂತ್ರಿ ಮಾಡಿ ಅಮೇಲೆ ನೋಡಿ ರಾಜ್ಯದಲ್ಲಿ ದೇಶದ್ರೋಹಿಗಳು ಕಾಣುವುದಿಲ್ಲ ಎಂದು ಅಭಿಯಾನದಲ್ಲಿ ಬರೆದು ಪೋಸ್ಟ್ ಮಾಡಲಾಗಿದೆ.