Tag: Home Owner

  • ಬ್ಯಾಂಕ್ ಮಹಿಳಾ ಉದ್ಯೋಗಿಗಳಿಗೆ ಕೊರೊನಾ – ಮಾಲೀಕನಿಂದ ಮನೆ ಖಾಲಿ ಮಾಡುವಂತೆ ಕಿರುಕುಳ

    ಬ್ಯಾಂಕ್ ಮಹಿಳಾ ಉದ್ಯೋಗಿಗಳಿಗೆ ಕೊರೊನಾ – ಮಾಲೀಕನಿಂದ ಮನೆ ಖಾಲಿ ಮಾಡುವಂತೆ ಕಿರುಕುಳ

    – ನಾವು ಸಾಮಾಜಕ್ಕಾಗಿ ಕೆಲಸ ಮಾಡುತ್ತಿದ್ದೇವೆಂದು ಸೋಂಕಿತೆ ಕಣ್ಣೀರು
    – ಸೋಂಕಿತರಿಗೆ ಔಷಧಿ ನೀಡಲು ಮನೆಗೆ ಬೀಡದ ಮಾಲೀಕನ ಪತ್ನಿ

    ಪಾಟ್ನಾ: ಬ್ಯಾಂಕ್ ಮಹಿಳಾ ಉದ್ಯೋಗಿಗಳಿಬ್ಬರಿಗೆ ಕೊರೊನಾ ಸೋಂಕು ತಗುಲಿದ್ದು, ಇದನ್ನು ತಿಳಿದ ಮನೆಯ ಮಾಲೀಕ ಮನೆ ಖಾಲಿ ಮಾಡುವಂತೆ ಕಿರುಕುಳ ನೀಡಿರುವ ಘಟನೆ ಬಿಹಾರದ ಸಿಯೋಹಾರ್ ಜಿಲ್ಲೆಯ ಭೈರ್ವಿ ನಗರದಲ್ಲಿ ನಡೆದಿದೆ.

    ಭೈರ್ವಿ ನರದಲ್ಲಿ ಇರುವ ಬ್ಯಾಂಕ್‍ವೊಂದರಲ್ಲಿ ಕೆಲಸ ಮಾಡುತ್ತಿದ್ದ ಸೋಂಕಿತೆಯರು ಒಟ್ಟಿಗೆ ಒಂದೇ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಇತ್ತೀಚೆಗೆ ಅವರು ಕೊರೊನಾ ಟೆಸ್ಟ್ ಮಾಡಿಸಿದ್ದು, ವರದಿಯಲ್ಲಿ ಇಬ್ಬರಿಗೂ ಕೊರೊನಾ ಇರುವುದು ದೃಢಪಟ್ಟಿದೆ. ಆಗ ಮಹಿಳೆಯರು ಹೋಗಿ ಮನೆ ಮಾಲೀಕ ಶೈಲೇಂದ್ರ ವರ್ಮಾಗೆ ಕೊರೊನಾ ಪಾಸಿಟಿವ್ ಬಂದಿರುವ ವಿಚಾರ ತಿಳಿಸಿದ್ದಾರೆ.

    ಕೊರೊನಾ ಪಾಸಿಟಿವ್ ಬಂದಿದೆ ಎಂದು ಹೇಳಿದಾಗ ಸುಮ್ಮನಿದ್ದ ಮಾಲೀಕ ಮತ್ತು ಆತನ ಪತ್ನಿ, ಮರುದಿನ ಮಹಿಳೆಯರಿಗೆ ಖಾಲಿ ಮಾಡುವಂತೆ ಹೇಳಿದ್ದಾರೆ. ಜೊತೆಗೆ ತಕ್ಷಣ ನೀವು ಮನೆ ಖಾಲಿ ಮಾಡಿ ಎಂದು ಕಿರುಕುಳ ನೀಡಿದ್ದಾರೆ. ಈ ವಿಚಾರದ ಬಗ್ಗೆ ನೋವಿನಿಂದ ಮಾತನಾಡಿರುವ ಸೋಂಕಿತ ಮಹಿಳೆಯೊಬ್ಬರು, ನಾವು ಜನ ಸೇವೆ ಮಾಡಲು ಬ್ಯಾಂಕ್‍ನಲ್ಲಿ ಕೆಲಸ ಮಾಡುತ್ತೇವೆ. ಸಾಮಾಜಕ್ಕಾಗಿ ಕೆಲಸ ಮಾಡುವ ನಮಗೆ ಈ ರೀತಿಯ ಪರಿಸ್ಥಿತಿಯಲ್ಲಿ ಜನರು ನಮ್ಮ ಬೆಂಬಲಕ್ಕೆ ಬರಬೇಕು. ಅದನ್ನು ಬಿಟ್ಟು ಈ ರೀತಿ ಕಿರುಕುಳ ನೀಡಬಾರದು ಎಂದು ಹೇಳಿದ್ದಾರೆ.

    ಮಾಲೀಕನ ವಿರುದ್ಧ ದೂರು ನೀಡಿರುವ ಬ್ಯಾಂಕ್ ಮ್ಯಾನೇಜರ್ ಭಾಸ್ಕರ್ ಜಾ ಮಾತನಾಡಿ, ಕೊರೊನಾ ಪಾಸಿಟಿವ್ ಬಂದ ನಮ್ಮ ಇಬ್ಬರು ಉದ್ಯೋಗಿಗಳಿಗೆ ಅವರು ವಾಸವಿದ್ದ ಮನೆಯ ಮಾಲೀಕ ಶೈಲೇಂದ್ರ ವರ್ಮಾ ಮತ್ತು ಆತನ ಪತ್ನಿ ಮಾನಸಿಕ ಹಿಂಸೆ ನೀಡಿದ್ದಾರೆ. ಮನೆ ಖಾಲಿ ಮಾಡುವಂತೆ ಒತ್ತಡ ಹೇರಿದ್ದಾರೆ. ಜೊತೆಗೆ ನಮ್ಮ ಬ್ಯಾಂಕಿನ ಇತರೆ ಉದ್ಯೋಗಿಗಳು ಅವರಿಗೆ ಔಷಧಿ ಕೊಡಲು ಹೋದರೆ ಅದಕ್ಕೂ ಮಾಲೀಕ ಪತ್ನಿ ಅನುಮತಿ ನೀಡಿಲ್ಲ. ನಮ್ಮ ಉದ್ಯೋಗಿಗಳು ಹಾಲು ಮತ್ತು ನೂಡಲ್ಸ್ ತಿಂದುಕೊಂಡು ಜೀವನ ಮಾಡುತ್ತಿದ್ದಾರೆ ಎಂದಿದ್ದಾರೆ.

    ಆದರೆ ಮಹಿಳಾ ಉದ್ಯೋಗಿಗಳು ಮತ್ತು ಬ್ಯಾಂಕ್ ಮ್ಯಾನೇಜರ್ ಮಾಡಿರುವ ಆರೋಪವನ್ನು ತಳ್ಳಿ ಹಾಕಿರುವ ಮನೆಯ ಮಾಲೀಕ, ನಾನು ಅವರಿಗೆ ಕಿರುಕುಳ ನೀಡಿಲ್ಲ. ಬದಲಿಗೆ ನಿಮ್ಮ ಊರಿಗೆ ಹೋಗಿ ಎಂದು ಮನವಿ ಮಾಡಿಕೊಂಡಿದ್ದೇನೆ. ಇಲ್ಲಿನ ಬೇರೆ ಮನೆಯವರಿಗೆ ತೊಂದರೆಯಾಗಬಾರದು ಎಂಬ ದೃಷ್ಟಿಯಿಂದ ಈ ರೀತಿ ಹೇಳಿದ್ದೇನೆ ಎಂದು ಹೇಳಿದ್ದಾರೆ.

  • ಮಗನಿಗೆ ಕೊರೊನಾ ಸೋಂಕು – ಪೋಷಕರಿಗೆ ಮನೆ ನೀಡದ ಮಾಲೀಕ

    ಮಗನಿಗೆ ಕೊರೊನಾ ಸೋಂಕು – ಪೋಷಕರಿಗೆ ಮನೆ ನೀಡದ ಮಾಲೀಕ

    – ರಸ್ತೆಯಲ್ಲೇ ಪ್ರತಿಭಟನೆಗೆ ಕುಳಿತ ದಂಪತಿ
    – ಮಗನಿಗೆ ಸೋಂಕು ಬಂದರೆ ನಮ್ಮ ತಪ್ಪು ಏನು?

    ಕೋಲ್ಕತ್ತಾ: ಮಗನಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಸೋಂಕಿತನ ತಂದೆ-ತಾಯಿಯನ್ನು ಮನೆ ಮಾಲೀಕನೋರ್ವ ಬಾಡಿಗೆ ಮನೆ ನೀಡದ ಘಟನೆ ಪಶ್ಚಿಮ ಬಂಗಾಳದ ಹೌರ ಜಿಲ್ಲೆಯಲ್ಲಿ ನಡೆದಿದೆ.

    ಹೌರದ ಡೆಮ್ಜೂರ್ ಪ್ರದೇಶದಲ್ಲಿ ವಾಸವಿದ್ದ ಕುಟುಂಬದಲ್ಲಿ ಆತನ ಮಗನಿಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ವೇಳೆ ಆತನನ್ನು ಕರೆದುಕೊಂಡು ಹೋಗಲು ಮನೆಯ ಬಳಿ ಅಂಬುಲೆನ್ಸ್ ಬಂದಿದೆ. ಈ ವೇಳೆ ಈ ದಂಪತಿಯೂ ಕೂಡ ಮಗ ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಗೆ ಹೋಗಿದ್ದಾರೆ. ಆತನ ಮಗನನ್ನು ಸಂಜೀವಿನಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

    ಆಸ್ಪತ್ರೆಯಿಂದ ವಾಪಸ್ ಮನೆಗೆ ಬಂದ ದಂಪತಿಯನ್ನು ಮನೆಯ ಮಾಲೀಕ ತಡೆದಿದ್ದಾನೆ. ಜೊತೆಗೆ ನೀವು ನಮ್ಮ ಮನೆಯಲ್ಲಿ ಇರಬೇಡಿ, ನಿಮ್ಮನ್ನು ಇರಲು ನಾವು ಬಿಡುವುದಿಲ್ಲ ಎಂದು ಹೇಳಿದ್ದಾನೆ. ಈ ವಿಚಾರದಲ್ಲಿ ದಂಪತಿಯ ಪರ ನಿಲ್ಲಬೇಕಾದ ಸ್ಥಳೀಯರು ಮತ್ತು ನೆರೆಹೊರೆಯವರು ವೈರಸ್ ನಮಗೂ ಹರಡುತ್ತೆ ಎಂಬ ಭಯದಿಂದ ಮಾಲೀಕನ ಮಾತಿಗೆ ಧನಿಗೂಡಿಸಿದ್ದಾರೆ. ಇದರಿಂದ ದಂಪತಿ ಇನ್ನೂ ಭಯಭೀತರಾಗಿದ್ದಾರೆ.

    ಇದಾದ ನಂತರ ದಂಪತಿ ಪೊಲೀಸರ ಮೊರೆ ಹೋಗಿದ್ದಾರೆ. ಆಗ ಸ್ಥಳಕ್ಕೆ ಬಂದ ಪೊಲೀಸರು ಅವರಿಗೇ ಕೊರೊನಾ ಲಕ್ಷಣ ಇಲ್ಲದೇ ಇದ್ದರೂ, ಕೊರೊನಾ ಪರೀಕ್ಷೆ ಮಾಡಿಸುವಂತೆ ಸಲಾಪ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಳುಹಿಸಿದ್ದಾರೆ. ಪರೀಕ್ಷೆ ಮಾಡಿಸಿಕೊಂಡು ಬಂದರೂ ಮಾಲೀಕ ಮನೆಯಲ್ಲಿ ಉಳಿಯಲು ಅನುಮತಿ ಕೊಟ್ಟಿಲ್ಲ. ಇದರಿಂದ ನೊಂದು ದಂಪತಿ ಮುಖ್ಯ ರಸ್ತೆಯಲ್ಲಿ ಕುಳಿತು ವಾಹನ ತಡೆದು ಪ್ರತಿಭಟನೆ ಮಾಡಿದ್ದಾರೆ.

    ನಮ್ಮ ಮಗನಿಗೆ ಕೊರೊನಾ ಸೋಂಕು ಬಂದರೆ ಅದರಲ್ಲಿ ನಮ್ಮ ತಪ್ಪು ಏನಿದೆ? ನಮ್ಮ ಮಗನಿಗೆ ಸೋಂಕು ತಗುಲಿದರೆ ಅದೂ ನಮ್ಮ ತಪ್ಪಾ? ಮನೆಯ ಮಾಲೀಕ ಒತ್ತಡ ಹಾಕುತ್ತಿದ್ದಾರೆ. ಜೊತೆಗೆ ನೀವು ಇಲ್ಲಯೇ ಇದ್ದರೆ ಸೋಂಕು ಹರಡುತ್ತದೆ ಎಂದು ಹೇಳುತ್ತಿದ್ದಾರೆ. ಅದಕ್ಕೆ ನಾವು ನಡು ರಸ್ತೆಯಲ್ಲಿ ಕುಳಿತಿದ್ದೇವೆ. ನಮಗೆ ಬೇರೆ ಕಡೆ ಹೋಗಲು ಎಲ್ಲೂ ಜಾಗವಿಲ್ಲ ಎಂದು ಸೋಂಕಿತ ತಂದೆ ಬಸುಡೆಬ್ ಚಟರ್ಜಿ ನೋವನ್ನು ಹೊರಹಾಕಿದ್ದಾರೆ.

    ಇದಾದ ನಂತರ ಸ್ಥಳಕ್ಕೆ ಪೊಲೀಸ್ ಮತ್ತು ಬಿಡಿಒ ಅಧಿಕಾರಿಗಳು ಬಂದು ದಂಪತಿಯನ್ನು ಮನವೊಲಿಸಿ ಕ್ವಾರಂಟೈನ್ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದಾರೆ. ದಂಪತಿಗಳು ಚೆನ್ನಾಗಿದ್ದಾರೆ. ನಾವು ಅವರನ್ನು ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಿದ್ದೇವೆ. ಅವರನ್ನು ನಾವು ನೋಡಿಕೊಳ್ಳುತ್ತೇವೆ ಎಂದು ಬಿಡಿಒ ರಾಜಾ ಭೂಮಿಕ್ ತಿಳಿಸಿದ್ದಾರೆ.

  • ಮನೆಗೆ ನುಗ್ಗಿದ ಕಳ್ಳನನ್ನು ನಿದ್ದೆ ಮಾಡುವಂತೆ ಮಾಡಿದ ತುಳುನಾಡ ದೈವ!

    ಮನೆಗೆ ನುಗ್ಗಿದ ಕಳ್ಳನನ್ನು ನಿದ್ದೆ ಮಾಡುವಂತೆ ಮಾಡಿದ ತುಳುನಾಡ ದೈವ!

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ಕಳ್ಳನೊಬ್ಬ ಮನೆಗೆ ನುಗ್ಗಿ ಅಲ್ಲಿಯೇ ಮಲಗಿ ನಿದ್ರಿಸಿದ್ದು ಚರ್ಚೆಗೆ ಗ್ರಾಸವಾಗಿದೆ. ಬಿಹಾರ ಮೂಲದ ಕಳ್ಳ ಅನಿಲ್ ಸಹಾನಿ, ಕಪಾಟಿನ ಬೀಗದ ಕೈಯನ್ನು ತೆಗೆದುಕೊಂಡಿದ್ದರೂ ಕಳ್ಳತನ ಮಾಡದೇ, ಅದೇ ಮನೆಯ ಸೋಫಾದಲ್ಲಿ ಮಲಗಿದ್ದನು. ಇದಕ್ಕೆ ಕಾರಣ ಆ ಮನೆಯಲ್ಲಿದ್ದ ದೈವದ ಶಕ್ತಿ ಎಂಬ ಮಾತುಗಳು ಕೇಳಿಬಂದಿದೆ.

    ಕಳ್ಳ ಕಪಾಟಿನಲ್ಲಿದ್ದ ಚಿನ್ನದ ಒಡವೆಗಳನ್ನು ಕದ್ದು ನಿರಾಯಾಸವಾಗಿ ಪರಾರಿ ಆಗಬಹುದಿತ್ತು. ಆದರೆ ಬೀಗದ ಕೈಯನ್ನು ಜೊತೆಗಿರಿಸಿಕೊಂಡೇ ಮಲಗಿದ್ದಲ್ಲದೆ, ಬೆಳಗ್ಗೆವರೆಗೂ ನಿದ್ರಿಸಿ ಮನೆ ಮಾಲೀಕನ ಕೈಗೆ ಸಿಕ್ಕಿಬಿದ್ದಿದ್ದ. ಹೀಗೆ ಕಳ್ಳತನಕ್ಕೆಂದು ಬಂದು ಕಳ್ಳ ಮನೆಯಲ್ಲೇ ಮಲಗಿ ನಿದ್ದೆಗೆ ಜಾರಲು ಮನೆಯಲ್ಲಿದ್ದ ದೈವ ಶಕ್ತಿಯೇ ಕಾರಣ ಎನ್ನಲಾಗುತ್ತಿದೆ.

    ಮನೆಯ ಮಾಲೀಕ ಸುದರ್ಶನ್ ಪೂರ್ವಜರ ಕಾಲದಿಂದಲೂ ಮನೆಯಲ್ಲಿ ಕಲ್ಲುರ್ಟಿ ಮತ್ತು ಗುಳಿಗ ದೈವದ ಆರಾಧನೆ ಮಾಡುತ್ತಾ ಬಂದಿದ್ದರು. ಇದೇ ದೈವದ ಶಕ್ತಿ ಕಳ್ಳನನ್ನು ತಡೆದಿದ್ದು, ಆತ ಮನೆಯಲ್ಲೇ ಮಲಗಿ ಸಿಕ್ಕಿಬೀಳುವಂತೆ ಮಾಡಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ.

    ಈ ಬಿಹಾರದ ಕಳ್ಳ ಸಿಕ್ಕಿಬೀಳುವ ಹತ್ತು ದಿನಗಳ ಹಿಂದೆ ಇದೇ ರೀತಿಯ ಘಟನೆ ನಡೆದಿತ್ತು. ಮನೆಯ ಹೊರಗಿನ ದೈವದ ಗುಡಿಗೆ ನುಗ್ಗಿದ ಕಳ್ಳನೊಬ್ಬ ಕಾಣಿಗೆ ಡಬ್ಬಿ ಎಗರಿಸಲು ಯತ್ನಿಸಿದ್ದ. ಆದರೆ ಗುಡಿಗೆ ನುಗ್ಗಿದ್ದ ಕಳ್ಳ ಹೊರಗೆ ಬರಲಾಗದೇ ಸಿಕ್ಕಿಬಿದ್ದಿದ್ದ. ಇದು ಕೂಡ ದೈವದ ಪವಾಡ ಎನ್ನುವ ಮಾತು ಕೇಳಿಬಂದಿತ್ತು. ಅಂದು ಕೂಡ ಕಳ್ಳನನ್ನು ಮನೆಯವರೇ ಹಿಡಿದು ಉಪ್ಪಿನಂಗಡಿ ಪೊಲೀಸರಿಗೆ ಒಪ್ಪಿಸಿದ್ದರು.

    ಈಗ ಮತ್ತೊಬ್ಬ ಕಳ್ಳ ಮನೆಗೆ ನುಗ್ಗಿ ಮನೆಯಲ್ಲೇ ನಿದ್ರಿಸಿ ಸಿಕ್ಕಿಬಿದ್ದಿದ್ದಾನೆ. ಮನೆಯ ಹಂಚು ತೆಗೆದು ಒಳನುಗ್ಗಿ, ಬೀಗದ ಕೈಯನ್ನು ಎಗರಿಸಿದ್ದರೂ ಕಳವು ಮಾಡದೇ ಸುಮ್ಮನೆ ಮಲಗಿದ್ದು ದೈವಿ ಶಕ್ತಿಯ ಪವಾಡ ಎನ್ನುವ ಮಾತು ಕೇಳಿಬಂದಿದೆ. ಮನೆಯ ಯಜಮಾನ ಸುದರ್ಶನ್ ಕೂಡ ಇದೇ ಮಾತನ್ನು ಹೇಳುತ್ತಿದ್ದಾರೆ.

  • ಅಜ್ಜಿ ಎಂದಿದ್ದಕ್ಕೆ ಬೈದ ವೃದ್ಧೆ- ಸಿಟ್ಟಿಗೆದ್ದು ಕತ್ತು ಹಿಸುಕಿ ಕೊಂದ ಮನೆ ಮಾಲೀಕ

    ಅಜ್ಜಿ ಎಂದಿದ್ದಕ್ಕೆ ಬೈದ ವೃದ್ಧೆ- ಸಿಟ್ಟಿಗೆದ್ದು ಕತ್ತು ಹಿಸುಕಿ ಕೊಂದ ಮನೆ ಮಾಲೀಕ

    ಚೆನ್ನೈ: ಮನೆ ಮಾಲೀಕನೊಬ್ಬನು ತನ್ನ ಮನೆಯಲ್ಲಿ ಬಾಡಿಗೆಗೆ ಇದ್ದ ವೃದ್ಧೆಯೊಬ್ಬರಿಗೆ ಅಜ್ಜಿ ಎಂದು ಕರೆದಿದ್ದಕ್ಕೆ ಅವರು ಬೈದಿದ್ದರು. ತನ್ನ ಮನೆಯಲ್ಲಿದ್ದುಕೊಂಡು ತನಗೇ ಬೈದರಲ್ಲ ಎಂಬ ಸಿಟ್ಟಿಗೆ ಕತ್ತು ಹಿಸುಕಿ ವೃದ್ಧೆಯನ್ನು ಮನೆ ಮಾಲೀಕ ಕೊಲೆ ಮಾಡಿದ್ದಾನೆ.

    ಸೆಪ್ಟೆಂಬರ್ 14ರಂದು ಈ ಘಟನೆ ನಡೆದಿದ್ದು, ಆರೋಪಿ ಬಗ್ಗೆ ತಡವಾಗಿ ಬೆಳಕಿಗೆ ಬಂದಿದೆ. ಚೆನ್ನೈನ ಕೊಡುಂಗೈಯ್ಯೂರ್ ನ ನಿವಾಸಿಯಾಗಿದ್ದ ವಿಮಲಾ ಗೋವಿಂದರಾಜ್(68) ಮೃತ ದುರ್ದೈವಿ. ಮನೆ ಮಾಲೀಕ ಸುಧಾಕರ್(35) ಕೊಲೆ ಮಾಡಿದ ಆರೋಪಿ. ಮಹಾನಗರ ಸಾರಿಗೆ ನಿಗಮದಲ್ಲಿ(ಎಂಟಿಸಿ) ತಪಾಸಣಾಧಿಕಾರಿಯಾಗಿದ್ದ ವೃದ್ಧೆಯ ಪತಿ ಗೋವಿಂದರಾಜು ಅವರು ಕೆಲವು ವರ್ಷಗಳ ಹಿಂದೆ ಸಾವನ್ನಪ್ಪಿದ್ದರು. ಸುಧಾಕರ್ ಮನೆಯಲ್ಲಿ ಕೆಲ ವರ್ಷದಿಂದ ವೃದ್ಧೆಯೊಬ್ಬರೆ ಬಾಡಿಗೆಗೆ ಇದ್ದರು. ವೃದ್ಧೆಗೆ ಇಬ್ಬರು ಗಂಡು ಮತ್ತು ಇಬ್ಬರು ಹೆಣ್ಣು ಮಕ್ಕಳಿದ್ದು, ಎಲ್ಲರೂ ಮದುವೆಯಾಗಿ ತಮ್ಮ ಕುಟುಂಬದೊಂದಿಗೆ ಪ್ರತ್ಯೇಕವಾಗಿ ವಾಸಿಸುತ್ತಿದ್ದರು ಎಂದು ತಿಳಿದು ಬಂದಿದೆ. ಇದನ್ನೂ ಓದಿ:ಡೇಟಿಂಗ್ ಆ್ಯಪ್ ಮೂಲಕ ಗೆಳೆಯನ ಹುಡುಕಾಟದಲ್ಲಿದ್ದಾರೆ 83ರ ವೃದ್ಧೆ

    ಸೆ. 14ರಂದು ವೃದ್ಧೆ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಬಳಿಕ ಕುಟುಂಬಸ್ಥರು ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದರು. ವೃದ್ಧೆ ಮೆದುಳು ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಹೀಗಾಗಿ ಅದರಿಂದಲೇ ಏಕಾಏಕಿ ವೃದ್ಧೆ ಸಾವನ್ನಪ್ಪಿರಬಹುದು ಎಂದು ಕುಟುಂಬಸ್ಥರು ಉಹಿಸಿದ್ದರು. ಆದ್ದರಿಂದ ಪೊಲೀಸರು ಪ್ರಕರಣವನ್ನು ಅಷ್ಟೇನು ಗಂಭಿರವಾಗಿ ತೆಗೆದುಕೊಂಡಿರಲಿಲ್ಲ.

    ಆದರೆ ಮರುದಿನ ಮರಣೋತ್ತರ ಪರೀಕ್ಷೆ ವರದಿಯಲ್ಲಿ ವೃದ್ಧೆಯನ್ನು ಉಸಿರುಗಟ್ಟಿಸಿ ಸಾಯಿಸಲಾಗಿದೆ ಎಂಬುದು ಬೆಳಕಿಗೆ ಬಂತು. ಆಗ ಈ ಬಗ್ಗೆ ತನಿಖೆ ನಡೆಸಲು ಪೊಲೀಸರ ವಿಶೇಷ ತಂಡವನ್ನು ನೇಮಿಸಲಾಯಿತು. ಈ ಸಂಬಂಧ ಪೊಲೀಸರು ವೃದ್ಧೆಯ ಕುಟುಂಬಸ್ಥರು, ನೆರೆಹೊರೆಯ ಮನೆಯವರು ಹಾಗೂ ಆರೋಪಿಯನ್ನು ವಿಚಾರಣೆ ನಡೆಸಿದ ಬಳಿಕ ಸತ್ಯಾಂಶ ಹೊರಬಿದ್ದಿದೆ.

    ವೃದ್ಧೆ ತನ್ನ ಸೌಂದರ್ಯದ ಬಗ್ಗೆ ಅತೀವ ಕಾಳಜಿ ವಹಿಸುತ್ತಿದ್ದರು. ಹೀಗಾಗಿ ಅವರು ತುಸು ಜೋರಾಗಿಯೇ ಶೃಂಗಾರ, ಅಲಂಕಾರವನ್ನು ಮಾಡಿಕೊಳ್ಳುತ್ತಿದ್ದರು. ವೃದ್ಧೆ ಕೊಲೆಯಾಗುವ ಕೆಲ ದಿನಗಳ ಹಿಂದೆ ಶೃಂಗಾರ ಮಾಡಿಕೊಂಡು ಮನೆ ಬಳಿ ಹೋಗುತ್ತಿದ್ದ ವೇಳೆ ಮನೆ ಮಾಲೀಕ ವೃದ್ಧೆಯನ್ನು ಅಜ್ಜಿ ಎಂದು ಕರೆದಿದ್ದನು. ಅದಕ್ಕೆ ಕೋಪಗೊಂಡ ವೃದ್ಧೆ ಆತನಿಗೆ ಬಾಯಿಗೆ ಬಂದ ಹಾಗೆ ಬೈದಿದ್ದರು ಎಂದು ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ತಿಳಿಸಿದರು.

    ಇದೇ ಮಾಹಿತಿಯನ್ನು ಇಟ್ಟುಕೊಂಡು ಪೊಲೀಸರು ಸುಧಾಕರ್ ನನ್ನು ವಿಚಾರಣೆಗೆ ಒಳಪಡಿಸಿದಾಗ ಆರೋಪಿ ಕೃತ್ಯದ ಬಗ್ಗೆ ಬಾಯಿಬಿಟ್ಟಿದ್ದಾನೆ. ವೃದ್ಧೆ ಬೈದಿದ್ದನ್ನು ಮನಸ್ಸಲ್ಲಿಟ್ಟುಕೊಂಡು ವಿಷಕಾರುತ್ತಿದ್ದ ಸುಧಾಕರ್ ಸೆ. 14ರಂದು ಕುಡಿದ ಮತ್ತಿನಲ್ಲಿ ಈ ಕೃತ್ಯ ವೆಸೆಗಿದ್ದಾನೆ. ವೃದ್ಧೆಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂದು ತಪ್ಪೊಪ್ಪಿಕೊಂಡಿದ್ದಾನೆ.