Tag: Home Owners

  • ಲಾಕ್‍ಡೌನ್ ವೇಳೆಯ 3 ತಿಂಗ್ಳ ಬಾಡಿಗೆ ಕೇಳಿದ್ರೆ ಮಾಲೀಕರ ಮೇಲೆ ಕೇಸ್ – ನ್ಯಾಯಾಧೀಶರಿಂದ ಖಡಕ್ ವಾರ್ನಿಂಗ್

    ಲಾಕ್‍ಡೌನ್ ವೇಳೆಯ 3 ತಿಂಗ್ಳ ಬಾಡಿಗೆ ಕೇಳಿದ್ರೆ ಮಾಲೀಕರ ಮೇಲೆ ಕೇಸ್ – ನ್ಯಾಯಾಧೀಶರಿಂದ ಖಡಕ್ ವಾರ್ನಿಂಗ್

    ಯಾದಗಿರಿ: ಕೊರೊನಾ ಲಾಕ್‍ಡೌನ್ ಇನ್ನೂ ಮೂರು ದಿನಗಳಲ್ಲಿ ಮುಗಿಯಲಿದೆ. ಈಗಾಗಲೇ ಸರ್ಕಾರ ಅನೇಕ ರಿಯಾಯಿತಿಗಳನ್ನು ಘೋಷಿಸಿದೆ. ಇದೀಗ ಲಾಕ್‍ಡೌನ್ ವೇಳೆಯಲ್ಲಿ ಮೂರು ತಿಂಗಳ ಬಾಡಿಗೆ ಕೇಳಬೇಡಿ ಎಂದು ಯಾದಗಿರಿ ಜಿಲ್ಲಾ ನ್ಯಾಯಾಧೀಶರು ವಾರ್ನಿಂಗ್ ನೀಡಿದ್ದಾರೆ.

    ಲಾಕ್‍ಡೌನ್ ವೇಳೆಯಲ್ಲಿ ಮೂರು ತಿಂಗಳ ಬಾಡಿಗೆ ಕೇಳಬೇಡಿ ಅಂತ ಸ್ವತಃ ರಾಜ್ಯ ಸರ್ಕಾರ ಮನವಿ ಮಾಡಿದೆ. ಹೀಗಿದ್ದರೂ ಯಾದಗಿರಿಯಲ್ಲಿ ಬಾಡಿಗೆ ಮನೆ ಮಾಲೀಕರು ಬಾಡಿಗೆದಾರರ ಮೇಲೆ ಒತ್ತಡ ಹಾಕುತ್ತಿದ್ದಾರೆ. ಇದರಿಂದ ಅಸಮಾಧಾನಗೊಂಡಿರುವ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶ ಪ್ರಕಾಶ್ ಅರ್ಜುನ್ ಬನಸುಡೆ ಸ್ವತಃ ತಾವೇ ಫೀಲ್ಡ್ ಗಿಳಿದಿದ್ದಾರೆ.

    ದಬ್ಬಾಳಿಕೆ ಮಾಡುವ ಮಾಲೀಕರ ಮನೆಗೆ ತೆರಳಿ ವಾರ್ನಿಂಗ್ ನೀಡುವ ಕಾರ್ಯಕ್ಕೆ ಮುಂದಾಗಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿರುವ ನ್ಯಾಯಾಧೀಶರು, ಯಾರು ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಾರೋ ಅವರ ಬಳಿ ಮೂರು ತಿಂಗಳವರೆಗೂ ಬಾಡಿಗೆ ಕೇಳುವಂತಿಲ್ಲ. ಅವರಿಗೆ ಬಾಡಿಗೆ ಕಟ್ಟುವಂತೆ ಒತ್ತಾಯ ಮಾಡುವಂತಿಲ್ಲ. ಅಲ್ಲದೇ ಅವರನ್ನು ಮನೆಯಿಂದ ಹೊರಗೆ ಕೂಡ ಹಾಕುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಒಂದು ವೇಳೆ ಮನೆ ಮಾಲೀಕರು ನಿಯಮ ಮೀರಿ ಬಾಡಿಗೆ ಕೇಳಿದ್ರೆ, ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವ ಅವಕಾಶವೂ ಇದೆ ಎಂದು ತಿಳಿಸಿದರು.

  • ಕೊರೊನಾ ಎಫೆಕ್ಟ್- ಮನೆ ಖಾಲಿ ಮಾಡುವಂತೆ ಡಾಕ್ಟರ್, ನರ್ಸ್‍ಗಳ ಮೇಲೆ ಮಾಲೀಕರ ಒತ್ತಡ

    ಕೊರೊನಾ ಎಫೆಕ್ಟ್- ಮನೆ ಖಾಲಿ ಮಾಡುವಂತೆ ಡಾಕ್ಟರ್, ನರ್ಸ್‍ಗಳ ಮೇಲೆ ಮಾಲೀಕರ ಒತ್ತಡ

    ನವದೆಹಲಿ: ಜನತಾ ಕರ್ಫ್ಯೂ ದಿನದಂದು ಮನೆಗಳ ಬಾಲ್ಕನಿಯಲ್ಲಿ ನಿಂತು ಕೊರೊನಾ ವೈರಸ್ ವಿರುದ್ಧ ಹೋರಾಟ ನಡೆಸುತ್ತಿರುವ ವೈದ್ಯರಿಗೆ ಕೃತ್ಯಜ್ಞತೆ ಸಲ್ಲಿಸಿದ್ದ ಜನರು, ಈಗ ವೈದ್ಯರು ವಿರುದ್ಧವೇ ಮುಗಿ ಬಿದ್ದಿದ್ದಾರೆ. ಮನೆ ಬಾಡಿಗೆ ನೀಡಿದ್ದ ಮಾಲೀಕರ ಕೂಡಲೇ ಮನೆ ಖಾಲಿ ಮಾಡುವಂತೆ ಒತ್ತಡ ಹಾಕಿದ್ದಾರೆ.

    ನವದೆಹಲಿಯಲ್ಲಿ ಈ ಘಟನೆ ನಡೆದಿದ್ದು, ಏಮ್ಸ್ ಆಸ್ಪತ್ರೆ ವೈದ್ಯರು ಮತ್ತು ನರ್ಸ್ ಗಳಿಗೆ ಮನೆ ಖಾಲಿ ಮಾಡುವಂತೆ ಒತ್ತಡ ಹಾಕುತ್ತಿದ್ದಾರೆ. ಕೊರೊನಾ ವೈರಸ್ ಶಂಕಿತರಿಗೆ ಏಮ್ಸ್ ಆಸ್ಪತ್ರೆಯಲ್ಲೂ ಚಿಕಿತ್ಸೆ ನೀಡಲಾಗುತ್ತಿದ್ದು, ಚಿಕಿತ್ಸೆ ನೀಡುತ್ತಿರುವ ವೈದ್ಯರ ಮೂಲಕ ಸೋಂಕು ಹರಡುವ ಭೀತಿಯಲ್ಲಿ ಮನೆ ಮಾಲೀಕರಿದ್ದಾರೆ.

    ಪ್ರತಿನಿತ್ಯ ಸೋಂಕಿತರ ಮಧ್ಯೆಯೇ ವೈದ್ಯರು ಸೇವೆ ಸಲ್ಲಿಸುತ್ತಾರೆ. ಇವರು ಮನೆಗಳಿಗೆ ಬಂದಂತ ವೇಳೆ ಇವರ ಮೂಲಕ ಇತರರಿಗೂ ಕೊರೊನಾ ಸೋಂಕು ಹರಡಬಹುದು ಎಂಬುದು ಮನೆ ಮಾಲೀಕರು ಹಾಗೂ ಸ್ಥಳೀಯ ನಿವಾಸಿಗಳ ವಾದವಾಗಿದೆ. ನೆರೆ ಹೊರೆಯವರ ಒತ್ತಡದ ಹಿನ್ನೆಲೆ ವೈದ್ಯರು ಮತ್ತು ನರ್ಸ್ ಗಳ ಮೇಲೆ ಮನೆ ಮಾಲೀಕರ ಒತ್ತಡ ಹಾಕಿದ್ದು, ಮನೆ ಖಾಲಿ ಮಾಡಲು ಸೂಚಿಸಿದ್ದರು. ಇದರಿಂದ ರೋಸಿ ಹೋಗಿದ್ದು ವೈದ್ಯರು ಗೃಹ ಸಚಿವ ಅಮಿತ್ ಶಾ ಗೆ ಪತ್ರ ಬರೆದು ತಮ್ಮ ಅಳಲು ತೋಡಿಕೊಂಡಿದ್ದರು.

    ವೈದ್ಯರು ಪತ್ರಕ್ಕೆ ಸ್ಪಂದಿಸಿರುವ ಗೃಹ ಸಚಿವ ಅಮಿತ್ ಶಾ, ಮನೆ ಮಾಲೀಕರ ವಿರುದ್ಧ ಕ್ರಮಕ್ಕೆ ದೆಹಲಿ ಪೊಲೀಸ್ ಕಮಿಷನರ್ ಗೆ ಸೂಚಿಸಿದ್ದಾರೆ. ಯಾವುದೇ ಕಾರಣಕ್ಕೂ ಮನೆ ಖಾಲಿ ಮಾಡುವಂತೆ ವೈದ್ಯರ ಮೇಲೆ ಒತ್ತಡ ಹಾಕಬಾರದು. ಒಂದು ವೇಳೆ ಒತ್ತಡ ಹಾಕಿದ್ದಲ್ಲಿ ಡಾಕ್ಟರ್ ಗಳ ದೂರು ಆಧರಿಸಿ ಮನೆ ಮಾಲೀಕರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಅಮಿತ್ ಶಾ ಸೂಚಿಸಿದ್ದಾರೆ.