Tag: Homeguard

  • ಮುಖ್ಯಪೇದೆಯಿಂದ್ಲೇ ಮಹಿಳಾ ಹೋಮ್ ಗಾರ್ಡ್ ಮೇಲೆ ಅತ್ಯಾಚಾರ

    ಮುಖ್ಯಪೇದೆಯಿಂದ್ಲೇ ಮಹಿಳಾ ಹೋಮ್ ಗಾರ್ಡ್ ಮೇಲೆ ಅತ್ಯಾಚಾರ

    -ರವಿ ಚನ್ನಣ್ಣನವರ್ ನಿಂದ ರಿವಾರ್ಡ್ ಪಡೆದಿದ್ದ ಪೇದೆಯಿಂದ ಕೃತ್ಯ

    ಬೆಂಗಳೂರು: ಖಡಕ್ ಪೊಲೀಸ್ ಅಧಿಕಾರಿ ರವಿ ಚನ್ನಣ್ಣನವರ್ ಅವರಿಂದ ರಿವಾರ್ಡ್ ಪಡೆದಿದ್ದ ಮುಖ್ಯಪೇದೆಯೊಬ್ಬ ಮಹಿಳಾ ಹೋಮ್ ಗಾರ್ಡ್ ಮೇಲೆ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ನಗರದ ನಂದಿನಿ ಲೇಔಟ್ ಠಾಣೆಯಲ್ಲಿ ನಡೆದಿದೆ.

    ಜ್ಞಾನ ಭಾರತಿ ಪೊಲೀಸ್ ಠಾಣೆಯ ಚಂದ್ರಶೇಖರ್ ಅತ್ಯಾಚಾರ ಎಸಗಿದ ಮುಖ್ಯಪೇದೆ. ಅತ್ಯಾಚಾರಕ್ಕೆ ಒಳಗಾದ ಮಹಿಳೆಯು ಜ್ಞಾನ ಭಾರತಿ ವಿಶ್ವವಿದ್ಯಾಲಯಲ್ಲಿ ಹೋಮ್ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದಳು. ಆರೋಪಿ ಚಂದ್ರಶೇಖರ್ ಸೋಮವಾರ ಮನೆಗೆ ನುಗ್ಗಿ ಮಹಿಳೆಯ ಅತ್ಯಾಚಾರ ಎಸಗಿದ್ದಾನೆ. ಹಳೇ ವೈಷಮ್ಯಕ್ಕಾಗಿ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    ಏನಿದು ಪ್ರಕರಣ?:
    ಕುಖ್ಯಾತ ಸರಗಳ್ಳ ಅಚ್ಯುತ್ ಗಣಿಯನ್ನು ಮುಖ್ಯಪೇದೆ ಚಂದ್ರಶೇಖರ್ ಹಿಡಿದಿದ್ದನು. ಹೀಗಾಗಿ ಡಿಸಿಪಿ ರವಿ ಚನ್ನಣ್ಣನವರ ಅವರಿಂದ ರಿವಾರ್ಡ್ ಪಡೆದಿದ್ದ. ಆದರೆ ನಾನು ಕಾರ್ಯನಿರ್ವಹಿಸುತ್ತಿದ್ದ ಠಾಣೆ ವ್ಯಾಪ್ತಿಯ ಜ್ಞಾನ ಭಾರತಿ ವಿಶ್ವವಿದ್ಯಾಲಯದ ಮಹಿಳಾ ಹೋಮ್ ಗಾರ್ಡ್ ಗೆ ಡ್ರಾಪ್ ಕೊಡುವ ನೆಪದಲ್ಲಿ ಚಂದ್ರಶೇಖರ್ ಪರಿಚಯವಾಗಿದ್ದ. ಕೆಲ ದಿನಗಳ ನಂತರ ಕೆಲಸದ ನೆಪದಲ್ಲಿ ಆಕೆಗೆ ಅನೇಕ ಬಾರಿ ಲೈಂಗಿಕ ಕಿರುಕಳ ನೀಡಿದ್ದನು.

    ಅಷ್ಟಕ್ಕೆ ಸುಮ್ಮನಾಗದ ಚಂದ್ರಶೇಖರ್ ಡ್ಯೂಟಿ ಮೇಲಿದ್ದ ಮಹಿಳೆಯನ್ನು ನವೆಂಬರ್ 16ರಂದು ತಬ್ಬಿಕೊಂಡು, ಸೊಂಟದ ಮೇಲೆ ಕೈ ಹಾಕಿದ್ದನು. ಚಂದ್ರಶೇಖರ್ ವರ್ತನೆಯಿಂದ ಎಚ್ಚೆತ್ತುಕೊಂಡ ಮಹಿಳೆ, ಉಸ್ತುವಾರಿ ಅಧಿಕಾರಿ ಹರೀಶ್ ಎಂಬವರ ಗಮನಕ್ಕೆ ತಂದಿದ್ದದು. ಈ ಕರಿತು ಮಾಹಿತಿ ತಿಳಿಯುತ್ತಿದ್ದಂತೆ ಜ್ಞಾನ ಭಾರತಿ ಪೊಲೀಸ್ ಠಾಣಾ ಅಧಿಕಾರಿಗಳು ಚಂದ್ರಶೇಖರ್ ನನ್ನು ಕರೆಸಿಕೊಂಡು, ಫುಲ್ ಕ್ಲಾಸ್ ತೆಗೆದುಕೊಂಡಿದ್ದರು.

    ಇದಾದ ಬಳಿಕ ಮಹಿಳೆಯ ವಿರುದ್ಧ ವೈಷಮ್ಯ ಸಾಧಿಸುತ್ತಿದ್ದ ಚಂದ್ರಶೇಖರ್ ಆಕೆಯ ಮನೆಯಲ್ಲಿ ಯಾರು ಇಲ್ಲದಿರುವುದನ್ನು ಖಚಿತಪಡಿಸಿಕೊಂಡು ನುಗ್ಗಿದ್ದಾನೆ. ಈ ವೇಳೆ ಮಹಿಳೆ ಸ್ನಾನ ಮಾಡುತ್ತಿದ್ದು, ಬಾಗಿಲು ಬಡಿದ ಶಬ್ಧ ಕೇಳಿ ಪತಿ ಬಂದಿದ್ದಾನೆ ಎಂದು ಭಾವಿಸಿ ಬಾಗಿಲು ತೆರೆದಿದ್ದಾಳೆ. ಆಕೆಯನ್ನು ಒಳಗೆ ದೂಡಿದ ಚಂದ್ರಶೇಖರ್ ಬಾಗಿಲು ಹಾಕಿ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.

    ಈ ಕುರಿತು ಸಂತ್ರಸ್ತ ಮಹಿಳೆ ದೂರು ನೀಡುತ್ತಿದ್ದಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ವಿಚಾರಣೆ ನಡೆಸಿ ಕೋರ್ಟ್‍ಗೆ ಹಾಜರುಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಹುಡುಗನನ್ನು ಕಿಡ್ನ್ಯಾಪ್ ಮಾಡಿ ಕೊಲೆಗೆ ಯತ್ನಿಸಿದ್ದ ‘ಪೇದೆ’ ಅರೆಸ್ಟ್!

    ಹುಡುಗನನ್ನು ಕಿಡ್ನ್ಯಾಪ್ ಮಾಡಿ ಕೊಲೆಗೆ ಯತ್ನಿಸಿದ್ದ ‘ಪೇದೆ’ ಅರೆಸ್ಟ್!

    ಬೀದರ್: ಹೋಮ್ ಗಾರ್ಡ್ ಒಬ್ಬ ನಾನು ಪೊಲೀಸ್ ಕಾನ್ ಸ್ಟೇಬಲ್ ಎಂದು ಹುಡುಗನನ್ನು ಕಿಡ್ನ್ಯಾಪ್ ಮಾಡಿ ಒಂದು ರೂಮ್ ನಲ್ಲಿ ಕೂಡಿ ಹಾಕಿ ಹಣಕ್ಕೆ ಬೇಡಿಕೆ ಇಟ್ಟಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

    ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಖೇಡ್ ಗ್ರಾಮದ ಸೂರ್ಯಕಾಂತ್ ಎಂಬ ಹೋಮ್ ಗಾರ್ಡ್ ಫೈನಾನ್ಸ್ ಮಾಡಿಕೊಂಡಿದ್ದ ಹುಡುಗನನ್ನು ಕಿಡ್ನ್ಯಾಪ್ ಮಾಡಿ ಹಣಕ್ಕಾಗಿ ಬೇಡಿಕೆ ಇಟ್ಟು ಲಾಡ್ಜ್ ನ ರೂಮ್‍ ನಲ್ಲಿ ಕೂಡಿ ಹಾಕಿದ್ದನು. ನಂತರ ಫೈನಾನ್ಸ್ ವ್ಯಕ್ತಿಯಿಂದ 50 ಸಾವಿರ ರೂ. ಪಡೆದು ರೈಲ್ವೆ ಟ್ರಾಕ್ ಮೇಲೆ ಹಗ್ಗದಿಂದ ಕಟ್ಟಿ ಹಾಕಿ ಕೊಲೆ ಮಾಡಲು ಯತ್ನಿಸಿದ್ದಾನೆ.

    ಆರೋಪಿಯಿಂದ ತಪ್ಪಿಸಿಕೊಂಡು ಬಂದ ವ್ಯಕ್ತಿ ಮಾರ್ಕೆಟ್ ಪೊಲೀಸರಿಗೆ ವಿಷಯ ತಿಳಿಸಿ ದೂರು ದಾಖಲಿಸಿದ್ದಾನೆ. ದೂರು ದಾಖಲಾಗುತ್ತಿದ್ದಂತೆ ಎಸ್‍ಪಿ ದೇವರಾಜ್ ಡಿ ಮಾರ್ಗದರ್ಶನದಲ್ಲಿ ಬೀದರ್ ಪೊಲೀಸರು ಮಿಂಚಿನ ಕಾರ್ಯಚರಣೆ ಮಾಡಿ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.

    ಹೋಮ್ ಗಾರ್ಡ್ ಆಗಿದ್ದ ಸೂರ್ಯಕಾಂತ್ ನಾನು ಪೊಲೀಸ್ ಕಾನ್ ಸ್ಟೇಬಲ್ ಎಂದು ಹೇಳಿಕೊಂಡು ಹಲವು ವ್ಯಕ್ತಿಗಳನ್ನು ಇದೆ ರೀತಿ ವಂಚಿಸಿದ್ದಾನೆ ಎನ್ನುವ ಮಾಹಿತಿ ಈಗ ಲಭ್ಯವಾಗಿದೆ.