Tag: HomeMinister

  • ಪಾವಗಡ ಪೊಲೀಸ್ ಠಾಣೆಗೆ ಗೃಹ ಸಚಿವ ದಿಢೀರ್ ಭೇಟಿ

    ಪಾವಗಡ ಪೊಲೀಸ್ ಠಾಣೆಗೆ ಗೃಹ ಸಚಿವ ದಿಢೀರ್ ಭೇಟಿ

    ತುಮಕೂರು: ಪಾವಗಡ ಪೊಲೀಸ್ ಠಾಣೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಶನಿವಾರ ಸಂಜೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಈ ವೇಳೆ ಠಾಣೆಯಲ್ಲಿನ ವಿಸಿಟರ್ ಪುಸ್ತಕವನ್ನು ತೆರೆದು ದೂರುದಾರನೊಬ್ಬನಿಗೆ ಕರೆ ಮಾಡಿದ್ದಾರೆ. ಆತ ನೀಡಿದ ದೂರಿಗೆ ಪೊಲೀಸರ ಸ್ಪಂದನೆಯ ಬಗ್ಗೆ ವಿಚಾರಿಸಿದ್ದಾರೆ. ಬಳಿಕ ಪೊಲೀಸ್ ಠಾಣೆಯ ಕಟ್ಟಡಗಳ ಸ್ಥಿತಿಗತಿ ಕುರಿತು ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಕನಿಮೊಳಿಗೆ ಟಿಕೆಟ್ – ಕೆಲಸ ತೊರೆದ ತಮಿಳುನಾಡಿನ ಮೊದಲ ಬಸ್ ಚಾಲಕಿ

    ಪೊಲೀಸರು ಸಾರ್ವಜನಿಕರ ಸಮಸ್ಯೆಗೆ ಉತ್ತಮವಾಗಿ ಸ್ಪಂದಿಸಬೇಕು. ದೂರುದಾರರು ನೀಡಿದ ದೂರುಗಳ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ಸೂಚನೆ ನೀಡಿ ತೆರಳಿದ್ದಾರೆ. ಇದನ್ನೂ ಓದಿ: ಅನ್ನಭಾಗ್ಯಕ್ಕೆ ಮತ್ತಷ್ಟು ಸಂಕಷ್ಟ- ರಾಜ್ಯಗಳು ಹೇಳಿದ್ದೇನು?

  • NIA ದಾಳಿ: ದೇಶದಲ್ಲಿ ಟೆರರಿಸ್ಟ್‌ಗಳನ್ನ ಹುಟ್ಟುಹಾಕಿದ್ದೇ ಕಾಂಗ್ರೆಸ್ – ಆರಗ ಜ್ಞಾನೇಂದ್ರ

    NIA ದಾಳಿ: ದೇಶದಲ್ಲಿ ಟೆರರಿಸ್ಟ್‌ಗಳನ್ನ ಹುಟ್ಟುಹಾಕಿದ್ದೇ ಕಾಂಗ್ರೆಸ್ – ಆರಗ ಜ್ಞಾನೇಂದ್ರ

    ಬೆಂಗಳೂರು: ದೇಶದಲ್ಲಿ ಟೆರರಿಸ್ಟ್‌ಗಳನ್ನ (Terrorist) ಹುಟ್ಟುಹಾಕಿದ್ದೇ ಕಾಂಗ್ರೆಸ್ (Congress), ಟೆರಸ್ಸ್‌ಗಳು ತಪ್ಪಿಸಿಕೊಳ್ಳಲು ಅವಕಾಶ ಕೊಟ್ಟಿದ್ದೇ ಕಾಂಗ್ರೆಸ್ ಅವರು ದೇಶದ ದೃಷ್ಟಿಯಿಂದ ಯೋಚನೆ ಮಾಡಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra)  ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ.

    ಕರ್ನಾಟಕದ (Karnataka) ವಿವಿಧ ಜಿಲ್ಲೆಗಳು ಸೇರಿದಂತೆ ದೇಶಾದ್ಯಂತ ರಾಷ್ಟ್ರೀಯ ತನಿಖಾ ದಳ (NIA) ತನ್ನ ದಾಳಿ ಮುಂದುವರಿಸಿವೆ. ದೇಶಾದ್ಯಂತ ಇಂದು ಬೆಳ್ಳಂಬೆಳಿಗ್ಗೆಯಿಂದಲೇ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಎನ್‌ಐಎ, ಇಡಿ (ED) ದಾಳಿ ಮುಂದುವರಿಸಿದ್ದು ರಾಜ್ಯದ ಪೊಲೀಸರ (Police) ನೆರವಿನೊಂದಿಗೆ ಪಿಎಫ್‌ಐ (PFI) ಹಾಗೂ ಎಸ್‌ಡಿಪಿಐ (SDPI) ಸಂಘಟನೆಯ 100ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದಿದೆ. ಇದನ್ನೂ ಓದಿ: 50 ಪಿಯುಸಿ ಕಾಲೇಜುಗಳಿಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್- ಸಿಎಂ ತವರು ಕ್ಷೇತ್ರಕ್ಕೆ ಬಂಪರ್ ಕೊಡುಗೆ

    ಈ ಕುರಿತು ಮಾತನಾಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ(Araga Jnanendra), ಖಚಿತ ಮಾಹಿತಿ ಮೇರೆಗೆ ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಗಳ ಮೇಲೆ ಎನ್‌ಐಎ ಹಾಗೂ ಪೊಲೀಸರು ದಾಳಿ ನಡೆಸಿದ್ದಾರೆ. ಏಕತೆ, ಸಮಗ್ರತೆ ಹಾಳು ಮಾಡೋ, ಜೀವಹಾನಿ ಮಾಡುವ ಸಂಘಟನೆಗಳು ಹಲವು ಕೃತ್ಯಗಳ ಹಿಂದೆ ಇವೆ. ಆದ್ದರಿಂದ ಮಾಹಿತಿಯ ಮೇರೆಗೆ ರೇಡ್ ಆಗಿದೆ. ಸಂಘಟನೆಯ ಕೆಲ ಮುಖಂಡರನ್ನು ಈಗ ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದ್ದಾರೆ.

    ನಾನು ಶಿವಮೊಗ್ಗ ಪೊಲೀಸರಿಗೆ ಅಭಿನಂದನೆ ಸಲ್ಲಿಸ್ತೇನೆ. ಶಿವಮೊಗ್ಗ ಪ್ರಕರಣದಲ್ಲಿ ಬಾಂಬ್ (Bomb) ತಯಾರು ಮಾಡಲಾಗಿತ್ತು. ಅದನ್ನು ಟ್ರಯಲ್ ಕೂಡ ಮಾಡಿದ್ದಾರೆ. ಅವರ ಬಂಧನದಿಂದ ರಕ್ತಹಾನಿ ಜೀವಹಾನಿ ತಡೆಗಟ್ಟಲಾಗಿದೆ. ಇದನ್ನೂ ಓದಿ: ಮೊಸಳೆಯನ್ನು ಹಿಡಿದು ಕ್ಲಾಸ್‌ ರೂಮಿನಲ್ಲಿ ಕೂಡಿ ಹಾಕಿದ ಗ್ರಾಮಸ್ಥರು

    ಪಿಎಫ್‌ಐ ಕಾರ್ಯಕರ್ತರ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿ, ಇಂತಹ ಸಂದರ್ಭದಲ್ಲಿ ಪ್ರತಿಭಟನೆ ಮಾಡೋದು ಸರಿಯಲ್ಲ. ದೇಶದಲ್ಲಿ ಎಲ್ಲರೂ ಕಾನೂನು ಪಾಲಿಸಬೇಕು. ತಪ್ಪಿತಸ್ಥರು ಅಲ್ಪಸಂಖ್ಯಾತರೋ ಇಲ್ವೋ ಅಂತ ಪೊಲೀಸರು ಕೆಲಸ ಮಾಡೋಕೆ ಆಗಲ್ಲ. ಟೆರರಿಸ್ಟ್ಗಳನ್ನು ಹುಟ್ಟು ಹಾಕಿದ್ದೇ ಕಾಂಗ್ರೆಸ್, ಟೆರರಿಸ್ಟ್ಗಳನ್ನು ತಪ್ಪಿಸಿಕೊಳ್ಳಲು ಅವಕಾಶ ಕೊಟ್ಟಿದ್ದೇ ಕಾಂಗ್ರೆಸ್ ಅವರು ದೇಶದ ದೃಷ್ಟಿಯಿಂದ ಯೋಚನೆ ಮಾಡಬೇಕು ಎಂದು ಕಿಡಿ ಕಾರಿದ್ದಾರೆ.

    ಸಂಘಟನೆ ಬ್ಯಾನ್ ಆದ್ರೆ ವ್ಯಕ್ತಿಗಳ ರಾಕ್ಷಸ ಮನೋಭಾವ ಬದಲಾಗೋದಿಲ್ಲ. ಶಿವಮೊಗ್ಗದ ಶಾರಿಕ್ ಸ್ಯಾಟಲೈಟ್ ಫೋನ್‌ (Satellite Phone) ನಲ್ಲಿ ಮಾತನಾಡಿದ್ದಾನೆ. ತಲೆಮರೆಸಿಕೊಂಡಿರೋ ಆತನನ್ನು ಪತ್ತೆಮಾಡಲಾಗುತ್ತಿದೆ. ಶಿವಮೊಗ್ಗ ಪೊಲೀಸರಿಗೆ ಹೇಗೆ ಹ್ಯಾಟ್ಸ್ ಆಫ್ ಸಲ್ಲಿಸಬೇಕೋ ಗೊತ್ತಾಗ್ತಿಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಎರಡು ಕ್ವಾರ್ಟರ್ ಕುಡಿದ್ರೂ ನಶೆಯೇರುತ್ತಿಲ್ಲ- ಗೃಹ ಸಚಿವರಿಗೆ ಕುಡುಕ ದೂರು

    ಎರಡು ಕ್ವಾರ್ಟರ್ ಕುಡಿದ್ರೂ ನಶೆಯೇರುತ್ತಿಲ್ಲ- ಗೃಹ ಸಚಿವರಿಗೆ ಕುಡುಕ ದೂರು

    ಭೋಪಾಲ್: ಕುಡಕನೊಬ್ಬ ಎರಡು ಕ್ವಾರ್ಟರ್ ಕುಡಿದರೂ ನಶೆಯೇರುತ್ತಿಲ್ಲ ಎಂದು ಗೃಹ ಸಚಿವರಿಗೆ ಹಾಗೂ ಅಬಕಾರಿ ಸಚಿವರಿಗೆ ದೂರು ನೀಡಿದ ವಿಚಿತ್ರ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

    ಉಜ್ಜಯಿನಿಯ ಬಹದ್ದೂರ್ ಗಂಜ್‍ನಲ್ಲಿರುವ ಆರ್ಯ ಸಮಾಜ ಮಾರ್ಗದಲ್ಲಿ ವಾಸಿಸುವ ಲೋಕೇಂದ್ರ ಸೋಥಿಯಾ ಮದ್ಯಕ್ಕೆ ದಾಸನಾಗಿದ್ದ. ಈತ ಏಪ್ರಿಲ್ 12ರಂದು ಇಂದೋರ್‌ನಲ್ಲಿ ಸ್ಥಳೀಯ ಮದ್ಯದ ಅಂಗಡಿಯಿಂದ 4 ಕ್ವಾರ್ಟರ್ ದೇಸಿ ಮದ್ಯವನ್ನು ಖರೀದಿಸಿದ್ದ. ಎರಡು ಕ್ವಾರ್ಟರ್ ಕುಡಿದರೂ ಆತನಿಗೆ ಅಮಲು ಏರಲಿಲ್ಲವಾಗಿತ್ತು. ಇದರಿಂದಾಗಿ ಆತನಿಗೆ ಗುತ್ತಿಗೆದಾರರು ಮದ್ಯದ ಬದಲು ನೀರು ಹಾಕಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

    ಈ ಹಿನ್ನೆಲೆಯಲ್ಲಿ ಅಂಗಡಿ ಮಾಲೀಕರಿಗೆ ದೂರು ನೀಡಲು ಮದ್ಯದಂಗಡಿಗೆ ತೆರಳಿದ್ದಾನೆ. ಆಗ ಅಲ್ಲಿದ್ದ ನೌಕರರು ಆತನಿಗೆ ಬೈದು ಅಲ್ಲಿಂದ ಓಡಿಸಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಲೋಕೇಂದ್ರ ಮದ್ಯದ ಗುತ್ತಿಗೆದಾರರ ವಿರುದ್ಧ ಗೃಹ ಸಚಿವ ನರೋತ್ತಮ್ ಮಿಶ್ರಾ ಹಾಗೂ ಅಬಕಾರಿ ಇಲಾಖೆಗೆ ದೂರ ನೀಡಿದ್ದಾನೆ.

    ಪತ್ರದಲ್ಲಿ ಏನಿದೆ?: ಎರಡು ಕ್ವಾರ್ಟರ್ ಕುಡಿದರೂ ನಶೆಯೇ ಏರುತ್ತಿಲ್ಲ. ಇದರಿಂದಾಗಿ ಗುತ್ತಿಗೆದಾರರು ಮದ್ಯದಲ್ಲಿ ನೀರು ಬೇರೆಸಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ತನ್ನ ಬಳಿ ಎರಡು ಸೀಲ್ಡ್ ಕ್ವಾರ್ಟರ್‌ಗಳಿವೆ. ಇವುಗಳನ್ನು ಲ್ಯಾಬ್‍ನಲ್ಲಿ ಪರಿಶೀಲನೆ ನಡೆಸಿದರೆ ಮದ್ಯದಲ್ಲಿ ನೀರು ಬೆರೆಸಲಾಗಿದೆಯೇ ಎಂಬುದು ಗೊತ್ತಾಗಲಿದೆ. ಈ ಹಿನ್ನೆಲೆಯಲ್ಲಿ ತನಿಖೆಗೆ ಒಳಪಡಿಸುವಂತೆ ಒತ್ತಾಯಿಸಿದ್ದಾನೆ.

    ಆದರೆ, ಈ ಪ್ರಕರಣದಲ್ಲಿ ಅಬಕಾರಿ ಅಧಿಕಾರಿ ರಾಮ್ ಹನ್ಸ್ ಪಚೌರಿ ಅವರು ಇನ್ನೂ ದೂರು ಸ್ವೀಕರಿಸಿಲ್ಲ, ನಂತರ ತನಿಖೆ ನಡೆಸಲಾಗುವುದು ಎಂದು ಹೇಳಿದ್ದರು. ಆದರೆ, ಮೇ 6ರವರೆಗೆ ಅವರ ದೂರಿನ ಮೇರೆಗೆ ಏನೂ ಆಗಿಲ್ಲ, ಆದ್ದರಿಂದ ಅಸಮಾಧಾನಗೊಂಡ ಲೋಕೇಂದ್ರ ಗ್ರಾಹಕರ ವೇದಿಕೆಗೆ ಹೋಗುವುದಾಗಿ ತಿಳಿಸಿದರು. ಇದನ್ನೂ ಓದಿ: ಉಕ್ರೇನ್‌ಗೆ ಬ್ರಿಟನ್‌ನಿಂದ ಮತ್ತೆ 12 ಸಾವಿರ ಕೋಟಿ ಮಿಲಿಟರಿ ನೆರವು

    ಕುಡುಕರಿಗೆ ನ್ಯಾಯ ಬೇಕು. ನಾನು ಎರಡು ದಶಕಗಳಿಂದ ಕುಡಿಯುತ್ತಿದ್ದೇನೆ ಮತ್ತು ಮದ್ಯದಲ್ಲಿ ಕಲಬೆರಕೆ ಇದೆ ಎಂದು ನನಗೆ ಶೀಘ್ರದಲ್ಲೇ ಅರಿವಾಯಿತು ಎಂದು ಹೇಳಿದ್ದಾನೆ. ಇದನ್ನೂ ಓದಿ: ಬಿಜೆಪಿ ಮುಖಂಡ ತಜೀಂದರ್ ಪಾಲ್ ಸಿಂಗ್ ಬಗ್ಗಾಗೆ ಸದ್ಯಕ್ಕಿಲ್ಲ ಬಂಧನ

  • ಗೃಹಸಚಿವರು ಚತ್ರಿ ಆಗಬೇಕು – ಯತ್ನಾಳ್ ಕುಟುಕಿದ್ದೇಕೆ?

    ಗೃಹಸಚಿವರು ಚತ್ರಿ ಆಗಬೇಕು – ಯತ್ನಾಳ್ ಕುಟುಕಿದ್ದೇಕೆ?

    ಬಳ್ಳಾರಿ: ರಾಜ್ಯದ ಗೃಹ ಸಚಿವರು ಶಾಂತಿ ಸಮಾಧಾನದಿಂದ ಇದ್ದರೆ ಆಗುವುದಿಲ್ಲ. ಇಂತಹ ಘಟನೆಗಳನ್ನು ಹತ್ತಿಕ್ಕಬೇಕಾದರೆ, ಅವರೂ ಚತ್ರಿ ಆಗಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕುಟುಕಿದರು.

    ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಮಾಜಿ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅಧಿಕಾರದಲ್ಲಿ ಇದ್ದಿದ್ದರೆ ರಾಜ್ಯದಲ್ಲೂ ಪಾಕಿಸ್ತಾನ ಇರುತ್ತಿತ್ತು. ಇಂದು ಮತಾಂಧರಿಗೆ ಭಯ ಹುಟ್ಟಿಸುವ ಕೆಲಸವನ್ನು ಸರ್ಕಾರ ಹಾಗೂ ಗೃಹ ಸಚಿವರು ಮಾಡಬೇಕು. ಅದು ಬಿಟ್ಟು ಸಮಾಧಾನ ಹೇಳುವುದರಲ್ಲಿ ಪ್ರಯೋಜನವಿಲ್ಲ ಎಂದು ಆಡಳಿತ ಪಕ್ಷದ ವಿರುದ್ಧವೇ ಕಿಡಿಕಾರಿದರು. ಇದನ್ನೂ ಓದಿ: ಹುಬ್ಬಳ್ಳಿ ಗಲಭೆಯನ್ನು ಕೆಜಿ ಹಳ್ಳಿ, ಡಿಜೆಹಳ್ಳಿ ಘಟನೆಗೆ ಹೋಲಿಸಿದ ಗೃಹಸಚಿವ

    HBL_ POLICE

    ಕೆಲ ಮುಸ್ಲಿಮರಿಗೆ ಹಿಜಬ್, ದೇಶ ವಿರೋಧಿ ಚಟುವಟಿಕೆಗಳು ಬೇಕಾಗಿದೆಯೇ ಹೊರತು ಸಾಮರಸ್ಯ ಬೇಕಿಲ್ಲ. ಇವರನ್ನು ಹೀಗೆ ಬಿಟ್ಟರೇ ದೇಶಕ್ಕೆ ಮಾರಕವಾಗುತ್ತಾರೆ. ಕೆಜಿ ಹಳ್ಳಿ, ಡಿಜೆಹಳ್ಳಿ ಪ್ರಕರಣದಲ್ಲಿ ಸೂಕ್ತ ಕ್ರಮ ಕೈಗೊಂಡಿದ್ದರೆ ಮತ್ತೆ ಇಂತಹ ಘಟನೆ ಮರುಕಳಿಸುತ್ತಿರಲಿಲ್ಲ ಎಂದರು.

    ಉತ್ತರ ಪ್ರದೇಶದಲ್ಲಿ ರಾಮನವಮಿ ರ‍್ಯಾಲಿ ವೇಳೆ ಒಂದು ಗಲಭೆಯೂ ನಡೆದಿಲ್ಲ. ಇಲ್ಲಿನ ಘಟನೆ ನೋಡಿದರೆ, ಇದು ಬಿಜೆಪಿ ಹೆಸರು ಕೆಡಿಸಲು ಮಾಡಿರುವ ದೊಡ್ಡ ಷಡ್ಯಂತ್ರವೆಂಬುದು ಅರ್ಥವಾಗುತ್ತದೆ. ಇದಕ್ಕಾಗಿ ಸಂಬಂಧಪಟ್ಟವರಿಗೆ ವಿದೇಶಗಳಿಂದ ಹಣ ಹರಿದು ಬರುತ್ತಿದೆ. ಆದರೂ ನಮ್ಮಲ್ಲಿರುವ ಡೋಂಗಿ ಜಾತ್ಯಾತೀತರಿಗೆ ದೇಶದ ಬದಲಾಗಿ ಮುಸ್ಲಿಮರ ವೋಟು ಬೇಕಾಗಿದೆ ಎಂದು ಕುಟುಕಿದರು. ಇದನ್ನೂ ಓದಿ: ಪೊಲೀಸ್ ವಾಹನಗಳೇ ಟಾರ್ಗೆಟ್ – ದಿಡ್ಡಿ ಹನುಮಂತ ದೇಗುಲಕ್ಕೂ ಕಲ್ಲೇಟು

    HBL_ POLICE 5

    ಶಾಂತಿಮಂತ್ರದಿಂದ ಪ್ರಯೋಜನವಿಲ್ಲ: ರಾಜ್ಯದಲ್ಲಿ ಪದೇ ಪದೇ ಇಂಥ ಘಟನೆ ಆಗ್ತಿದೆ. ಇಂತಹ ಹೊತ್ತಿನಲ್ಲಿ ಸರ್ಕಾರ ಶಾಂತಿ ಮಂತ್ರ ಹೇಳ್ತಾ ಕೂತ್ರೆ ಆಗಲ್ಲ. ಕ್ರಮ ತಗೋತೀವಿ – ತಗೋತಿವಿ, ತೀವ್ರವಾಗಿ ಖಂಡಿಸ್ತೀವಿ ಅಂದ್ರೆ ಏನೂ ಆಗಲ್ಲ. ಸರ್ಕಾರದಿಂದ ಇಂತಹವರ ಮೇಲೆ ಕಠಿಣ ಕ್ರಮ ಆಗುತ್ತಿಲ್ಲ. ಏಕೆಂದರೆ ನಮ್ಮ ಸರ್ಕಾರ ಪೊಲೀಸರಿಗೂ ಫ್ರೀ ಹ್ಯಾಂಡ್ ಕೊಡ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು. ಇದನ್ನೂ ಓದಿ: ಪೊಲೀಸ್ ವಾಹನಗಳೇ ಟಾರ್ಗೆಟ್ – ದಿಡ್ಡಿ ಹನುಮಂತ ದೇಗುಲಕ್ಕೂ ಕಲ್ಲೇಟು

    POLICE

    ನಕಲಿ ಖಾತೆಗಳ ಹಾವಳಿ ನಿಲ್ಲಲಿ: ವಿವಾದಿತ ಪೋಸ್ಟ್ ಹಾಕಿದವನ ವಿರುದ್ಧ ಕ್ರಮ ಆಗಬೇಕು. ಎಷ್ಟೋ ಜನ ನಕಲೀ ಖಾತೆ ಮೂಲಕ ಶ್ರೀರಾಮನ ಬಗ್ಗೆ, ಪ್ರಧಾನಿ ಬಗ್ಗೆ ಹಗುರವಾದ ಹೇಳಿಕೆಗಳನ್ನು ಪೋಸ್ಟ್ ಮಾಡುತ್ತಾರೆ. ಹಾಗೆಯೇ ಹಿಂದೂಗಳ ಹೆಸರಿನಲ್ಲೂ ಖಾತೆ ತೆರೆದು ಪೋಸ್ಟ್ ಹಾಕುತ್ತಿದ್ದಾರೆ. ಅಲ್ಲಿ ಪ್ರಸಾದ್ ಅನ್ನೋ ಹೆಸರಿನಲ್ಲಿ ಖಾತೆ ಇದ್ದರೆ, ಪೋಸ್ಟ್ ಹಾಕೋನು ಮೆಹಬೂಬ್ ಆಗಿರ್ತಾನೆ. ಈ ಎಲ್ಲದರ ಬಗ್ಗೆಯೂ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.