Tag: Hometown

  • ತವರು ಮನೆಗೆ ವಿಶಿಷ್ಟವಾಗಿ ವಿದಾಯ ಹೇಳಿದ ವಧು!

    ತವರು ಮನೆಗೆ ವಿಶಿಷ್ಟವಾಗಿ ವಿದಾಯ ಹೇಳಿದ ವಧು!

    ನವದೆಹಲಿ: ಹೆಣ್ಣು ಮಕ್ಕಳು ಯಾವಾಗಲೂ ಅಡುಗೆ ಮನೆಗೆ ಮಾತ್ರ ಸೀಮಿತ ಎಂದು ಹೇಳುತ್ತಿದ್ದ ಮಾತು ಬದಲಾಗಿದೆ. ಇತ್ತೀಚೆಗೆ ಮದುವೆಯಾದ ಯುವತಿ ತನ್ನ ತವರು ಮನೆಯಿಂದ ಗಂಡನ ಮನೆಗೆ ಹೋಗುವ ವೇಳೆ ಕಾರಿನ ಚಾಲಕ ಸೀಟಿನಲ್ಲಿ ಕುಳಿತು ಕಾರು ಚಾಲಯಿಸಿದ್ದಾಳೆ.

    ಆಧುನಿಕ ಜಗತ್ತಿನ ಹೆಣ್ಣು ಮಕ್ಕಳು ತಮ್ಮ ಜೀವನದ ನಿರ್ಧಾರಗಳನ್ನು ತಾವೇ ತೆಗೆದುಕೊಳ್ಳುವ ಶಕ್ತಿಯನ್ನು ಹೊಂದಿದ್ದಾರೆ. ಸಾಮಾನ್ಯವಾಗಿ ಮದುವೆ ಸಮಯದಲ್ಲಿ ವಧು ನಾಚುತ್ತಾ ತಲೆ ಬಾಗಿಸಿಕೊಂಡಿರುವುದನ್ನು ನಾವು ನೋಡಿರುತ್ತೇವೆ. ಅದರಲ್ಲೂ ತವರು ಮನೆ ಬಿಟ್ಟು ಹೋಗುವಾಗ ಅಳುತ್ತಾ ಗಂಡನ ಮನೆಗೆ ಹೋಗುತ್ತಾರೆ. ಆದರೆ ಇದೀಗ ಕಾಲ ಬದಲಾಗಿದೆ ಎಂದರೇ ತಪ್ಪಾಗಲಾರದು.

    ಹೌದು ವೀಡಿಯೋಯೊಂದರಲ್ಲಿ ಆಗಷ್ಟೇ ಮದುವೆಯಾದ ಸ್ನೇಹಾ ಸಿಂಘಿ ಎಂಬ ವಧು, ತನ್ನ ತವರು ಮನೆಗೆ ವಿದಾಯ ಹೇಳಿ ಗಂಡನ ಮನೆಗೆ ಹೊರಡಲು ಕಾರಿನ ಚಾಲಕನ ಸೀಟಿನಲ್ಲಿ ಡ್ರೈವ್ ಮಾಡಲು ಕುಳಿತುಕೊಳ್ಳುತ್ತಾಳೆ. ಈ ವೇಳೆ ವರ ಡ್ರೈವ್ ಮಾಡದೇ ವಧುವಿನ ಪಕ್ಕದಲ್ಲಿ ಕುಳಿತುಕೊಂಡರೆ, ಉಳಿದವರು ಹಿಂಬದಿಯ ಸೀಟಿನಲ್ಲಿ ಕುಳಿತುಕೊಳ್ಳುತ್ತಾರೆ. ನಂತರ ಸ್ನೇಹ ಎಲ್ಲರಿಗೂ ಕೈ ಬೀಸಿ ನಗುತ್ತಾ ಬೈ ಹೇಳಿ ಕಾರು ಚಲಾಯಿಸುವ ಮೂಲಕ ವಿಶಿಷ್ಟವಾಗಿ ವಿದಾಯ ಹೇಳುತ್ತಾರೆ.

     

    View this post on Instagram

     

    A post shared by Sneha Singhi Upadhaya (@snehasinghi1)

    ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾ ಪಟ್ಟೆ ವೈರಲ್ ಆಗುತ್ತಿದ್ದು, ಈ ವರೆಗೂ 2 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆಯಾಗಿದೆ.

  • ಪತಿ ಮನೆ ಸೇರುವ ಮೊದಲೇ ಮಸಣ ಸೇರಿದ ನವವಧು!

    ಪತಿ ಮನೆ ಸೇರುವ ಮೊದಲೇ ಮಸಣ ಸೇರಿದ ನವವಧು!

    ಭುವನೇಶ್ವರ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಧು ಗಂಡನ ಮನೆಗೆ ಹೋಗುವ ವೇಳೆ ಬಿಕ್ಕಿ ಬಿಕ್ಕಿ ಅತ್ತು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಒಡಿಶಾದ ಸೋನೆಪುರದಲ್ಲಿ ನಡೆದಿದೆ.

    ರೋಸಿ ಸಾಹು ಸಾವನ್ನಪ್ಪಿರುವ ಯುವತಿಯಾಗಿದ್ದಾಳೆ. ಜುಲಂಡಾ ಗ್ರಾಮದ ನಿವಾಸಿಯಾಗಿದ್ದ ಯುವತಿ ಟೆಂಟಲು ಗ್ರಾಮದ ಬಿಸಿಕೇಶನ್ ಎಂಬ ವ್ಯಕ್ತಿಯೊಂದಿಗೆ ವಿವಾಹ ಮಾಡಿಕೊಡಲಾಗಿತ್ತು. ಯುವತಿ ಗಂಡನ ಮನೆಗೆ ಹೋಗುವ ವೇಳೆ ಸಾವನ್ನಪ್ಪಿದ್ದಾಳೆ.

    ಮದವೆಯಾಗಿರುವ ರೋಸಿಯನ್ನು ಗಂಡನ ಮನೆಗೆ ಕಳುಹಿಸುವ ಶಾಸ್ತ್ರವನ್ನು ಮಾಡಲಾಗುತ್ತಿತ್ತು. ಈ ವೇಳೆ ರೋಸಿ ತವರು ಮನೆಯಿಂದ ಪತಿಯ ಮನೆಗೆ ಹೋಗಬೇಕು ಎಂದು ಕಣ್ಣಿರು ಹಾಕಿದ್ದಾಳೆ. ಈ ವೇಳೆ ಹೃದಯಾಘಾತದಿಂದ ನಿಂತಲ್ಲೇ ಕುಸಿದು ಬಿದ್ದಿದ್ದಾಳೆ. ಕೂಡಲೇ ಅಲ್ಲಿ ಇದ್ದವರು ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಯುವತಿ ಆಸ್ಪತ್ರೆಗೆ ಕರೆತರುವ ಮೊದಲೇ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ಹೇಳಿದ್ದಾರೆ. ಮದುವೆ ಸಂಭ್ರಮದಲ್ಲಿ ಇರಬೇಕಾದ ಮನೆಯಲ್ಲಿ ಸ್ಮಶಾನ ಮೌನ ಆವರಿಸಿದೆ.

  • ಹಬ್ಬಕ್ಕೆ ತವರು ಮನೆಗೆ ಹೋದ ಪತ್ನಿ-ಪತಿಯಿಂದ ಮಚ್ಚಿನಿಂದ ಹಲ್ಲೆ

    ಹಬ್ಬಕ್ಕೆ ತವರು ಮನೆಗೆ ಹೋದ ಪತ್ನಿ-ಪತಿಯಿಂದ ಮಚ್ಚಿನಿಂದ ಹಲ್ಲೆ

    ಬೆಂಗಳೂರು: ಪತ್ನಿ ಗಣೇಶ ಹಬ್ಬಕ್ಕೆ ತವರು ಮನೆಗೆ ಹೋದಳು ಎಂಬ ಕಾರಣಕ್ಕೆ ಕೋಪಗೊಂಡ ಗಂಡ ಮಚ್ಚಿನಿಂದ ಆಕೆಯ ಕುಟುಂಬಸ್ಥರ ಮೇಲೆ ಹಲ್ಲೆ ಮಾಡಿರುವ ಘಟನೆ ನಗರದ ಎಂಇಐ ಬಡಾವಣೆಯಲ್ಲಿ ನಡೆದಿದೆ.

    ಹಲ್ಲೆ ಮಾಡಿರುವ ಪತಿಯನ್ನು ಲೋಹಿತ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಲೋಹಿತ್‍ನ ಬಾಮೈದ ಸತೀಶ್ ಹಾಗೂ ಅತ್ತೆ ಪಾರ್ವತಮ್ಮ ಅವರಿಗೆ ಗಂಭೀರ ಗಾಯಗಳಾಗಿದ್ದು, ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲೋಹಿತ್ 8 ವರ್ಷದ ಹಿಂದೆ ಭಾರತಿ (ಹೆಸರು ಬದಲಿಸಲಾಗಿದೆ) ಅವರನ್ನು ಮದುವೆಯಾಗಿದ್ದ, ಆದರೆ ಅತ್ತೆ ಮನೆಯವರನ್ನು ಕಂಡರೆ ಅವನಿಗೆ ಆಗುತ್ತಿರಲಿಲ್ಲ ಎಂದು ಹೇಳಲಾಗಿದೆ.

    ಪತಿ ತವರು ಮನೆಗೆ ಹೋಗುವುದು ಬೇಡ ಎಂದರು ಭಾರತಿ ಹಬ್ಬಕ್ಕೆ ಹೋಗಿದ್ದರು. ಇದರಿಂದ ಕೋಪಗೊಂಡ ಲೋಹಿತ್ ಮನೆಯ ಮುಂದೆ ಬಂದು ಗಲಾಟೆ ಮಾಡುತ್ತಿದ್ದನು. ಇದನ್ನು ಪ್ರಶ್ನೆ ಮಾಡಲು ಹೋದ ಸತೀಶ್ ಮತ್ತು ಅತ್ತೆ ಪಾರ್ವತಮ್ಮಗೆ ಅಲ್ಲೇ ಇದ್ದ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ಈ ವೇಳೆ ಲೋಹಿತ್‍ಗೂ ಗಾಯವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

    ಈ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.