Tag: Honagal

  • ಪತ್ನಿಗೆ ಟಿಕೆಟ್ ಗಿಟ್ಟಿಸಿಕೊಳ್ಳಲು ತೆರೆಮರೆಯ ಕಸರತ್ತು- ಬೆಂಗಳೂರಲ್ಲೇ ಬೀಡುಬಿಟ್ಟ ಶಿವಕುಮಾರ ಉದಾಸಿ

    ಪತ್ನಿಗೆ ಟಿಕೆಟ್ ಗಿಟ್ಟಿಸಿಕೊಳ್ಳಲು ತೆರೆಮರೆಯ ಕಸರತ್ತು- ಬೆಂಗಳೂರಲ್ಲೇ ಬೀಡುಬಿಟ್ಟ ಶಿವಕುಮಾರ ಉದಾಸಿ

    ಹಾವೇರಿ: ಹಾನಗಲ್ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ತಮ್ಮದೆಯಾದ ಕಸರತ್ತು ನಡೆಸಿದ್ದಾರೆ. ಬಿಜೆಪಿ ಪಕ್ಷದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

    ಸಂಸದ ಶಿವಕುಮಾರ್ ಉದಾಸಿಯವರು ತಮ್ಮ ಪತ್ನಿ ರೇವತಿ ಉದಾಸಿಯವರಿಗೆ ಟಿಕೆಟ್ ಕೊಡಿಸಲು ಇನ್ನಿಲ್ಲದ ಪ್ರಯತ್ನ ನಡೆಸಿದ್ದು, ಬೆಂಗಳೂರಿನಲ್ಲೇ ಬೀಡು ಬಿಟ್ಟಿದ್ದಾರೆ. ಈ ಮೂಲಕ ತೆರೆಮರೆಯ ಕಸರತ್ತು ನಡೆಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯನವರಿಗೆ ಕೋವಿಡ್ ಬಂದ ಮೇಲೆ ಏನೇನೋ ಮಾತಾಡ್ತಿದ್ದಾರೆ: ಸೋಮಶೇಖರ್

    ಸಂಸದ ಶಿವಕುಮಾರ ಉದಾಸಿ ಪತ್ನಿ ರೇವತಿ ಉದಾಸಿ, ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ, ಕೃಷ್ಣ ಈಳಗೇರ, ಮಾಜಿ ಶಾಸಕ ಶಿವರಾಜ ಸಜ್ಜನ ಸೇರಿದಂತೆ ಹಲವು ಆಕಾಂಕ್ಷಿಗಳು ತಮ್ಮದೆ ಪಯತ್ನ ನಡೆಸಿದ್ದಾರೆ. ಇವತ್ತು ಆಕಾಂಕ್ಷಿಗಳ ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಸಭೆ ನಡೆಸಲಿದ್ದಾರೆ.

    ಸಂಜೆ ಐದು ಗಂಟೆಗೆ ಹಾನಗಲ್ ಪಟ್ಟಣದ ಉದಾಸಿ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಸಭೆಯಲ್ಲಿ ಆಕಾಂಕ್ಷಿಗಳ ಜೊತೆ ಮಾತುಕತೆ ಮತ್ತು ಆಕಾಂಕ್ಷಿಗಳಿಂದ ಮನವಿ ಸ್ವೀಕರಿಸಲಿದ್ದಾರೆ. ಜಿಲ್ಲಾ ಮತ್ತು ರಾಜ್ಯ ಮಟ್ಟದ ಕೋರ್ ಕಮಿಟಿ ಸಭೆ ನಂತರ ರಾಜ್ಯ ಘಟಕದಿಂದ ಅಭ್ಯರ್ಥಿ ಹೆಸರು ಅಂತಿಮಯಾಗಲಿದೆ. ಅದರೆ ಉಪಚುನಾವಣೆ ಘೋಷಣೆ ನಂತರ ಶಿವಕುಮಾರ ಉದಾಸಿ ಬೆಂಗಳೂರಿನಲ್ಲೇ ಬೀಡುಬಿಟ್ಟು ಪತ್ನಿ ರೇವತಿ ಉದಾಸಿಗೆ ಟಿಕೆಟ್ ಗಿಟ್ಟಿಸಿಕೊಳ್ಳಲು ತೆರೆಮರೆಯ ಕಸರತ್ತು ನಡೆಸಿದ್ದಾರೆ ಎನ್ನಲಾಗಿದೆ.

  • ಎಕ್ಸ್‌ರೇ ಟೆಕ್ನಿಷಿಯನ್‌ನಿಂದ ಗುತ್ತಿಗೆ ಸಿಬ್ಬಂದಿಗೆ  ಲೈಂಗಿಕ ಕಿರುಕುಳ

    ಎಕ್ಸ್‌ರೇ ಟೆಕ್ನಿಷಿಯನ್‌ನಿಂದ ಗುತ್ತಿಗೆ ಸಿಬ್ಬಂದಿಗೆ ಲೈಂಗಿಕ ಕಿರುಕುಳ

    ಹಾವೇರಿ: ಹಾನಗಲ್ ತಾಲೂಕಿನ ಅಕ್ಕಿಆಲೂರಿನ ಸಮುದಾಯದ ಆರೋಗ್ಯ ಕೇಂದ್ರದಲ್ಲಿ ಗುತ್ತಿಗೆ ಮಹಿಳಾ ಸಿಬ್ಬಂದಿಗೆ ಎಕ್ಸ್‌ರೇ ಟೆಕ್ನಿಷಿಯನ್ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.

    ಕಳೆದ 2 ವರ್ಷಗಳಿಂದ ಗುತ್ತಿಗೆ ಸಿಬ್ಬಂದಿ ಮಾಡುತ್ತಿರುವ 33 ವರ್ಷದ ಮಹಿಳೆ ಎಕ್ಸ್‌ರೇ ಟೆಕ್ನಿಷಿಯನ್ ಆಗಿರುವ ಕುಬೇರ ಸಾವಂತ ನನಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಎಕ್ಸ್‌ರೇ ಟೆಕ್ನಿಷಿಯನ್ ವಿರುದ್ಧ ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಆಸ್ಪತ್ರೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಮೈ ಕೈ ಮುಟ್ಟುವುದು, ಮಂಚಕ್ಕೆ ಬಾ ಅಂತಾ ಕರೆದು ಕಿರುಕುಳ ನೀಡುತ್ತಿದ್ದಾನೆ ಎಂದು ಮಹಿಳೆ ಆರೋಪಿಸುತ್ತಿದ್ದಾರೆ.

    ಕಿರುಕುಳ ನೀಡುತ್ತಿರುವ ಬಗ್ಗೆ ಮೊಬೈಲ್‍ನಲ್ಲಿ ಧ್ವನಿ ರೆಕಾರ್ಡ್ ಮಾಡಿಕೊಂಡು ಗುತ್ತಿಗೆ ನೌಕರ ಮಹಿಳೆ ವೈದ್ಯರಿಗೆ ಹಾಗೂ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

    ಬೇರೆ ಯಾವ ಮಹಿಳೆಯರಿಗೂ ಈ ರೀತಿಯ ದೌರ್ಜನ್ಯ ನಡೆಯಬಾರದು. ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಆತನನ್ನು ಕೆಲಸದಿಂದ ವಜಾ ಮಾಡಬೇಕು. ಕಿರುಕುಳ ನೀಡಿದ ವ್ಯಕ್ತಿ ಕಳೆದ ಮೂರು ದಿನಗಳಿಂದ ಕೆಲಸಕ್ಕೆ ಬಂದಿಲ್ಲ. ಕೂಡಲೇ ಪತ್ತೆ ಮಾಡಿ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ನೊಂದ ಮಹಿಳೆ ಹಾಗೂ ಸ್ಥಳೀಯರು ಒತ್ತಾಯಿಸಿದ್ದಾರೆ.