Tag: Honey Singh

  • ಹನಿ ಸಿಂಗ್‌ ಕಾನ್ಸರ್ಟ್‌ನಲ್ಲಿ ರಾಕಿಂಗ್‌ ಸ್ಟಾರ್-‌ ಕನ್ನಡದಲ್ಲಿ ಹಾಡುವಂತೆ ಯಶ್‌ ಕಂಡೀಷನ್‌

    ಹನಿ ಸಿಂಗ್‌ ಕಾನ್ಸರ್ಟ್‌ನಲ್ಲಿ ರಾಕಿಂಗ್‌ ಸ್ಟಾರ್-‌ ಕನ್ನಡದಲ್ಲಿ ಹಾಡುವಂತೆ ಯಶ್‌ ಕಂಡೀಷನ್‌

    ಬಾಲಿವುಡ್‌ನ ಖ್ಯಾತ ಗಾಯಕ, ರ‍್ಯಾಪರ್ ಹನಿ ಸಿಂಗ್ (Honey Singh) ನಿನ್ನೆ (ಮಾ.22) ಬೆಂಗಳೂರಿಗೆ ಆಗಮಿಸಿ ಅದ್ಧೂರಿಯಾಗಿ ಲೈವ್ ಕಾನ್ಸರ್ಟ್ (ಸಂಗೀತ ಕಾರ್ಯಕ್ರಮ) ಮಾಡಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಕಿಂಗ್ ಸ್ಟಾರ್ ಯಶ್ (Yash) ಅವರು ಸಾಥ್ ನೀಡಿದ್ದಾರೆ. ಅದಲ್ಲದೇ, ಹನಿ ಸಿಂಗ್‌ಗೆ ಮುಂದಿನ ದಿನಗಳಲ್ಲಿ ಕನ್ನಡದಲ್ಲಿಯೂ ಹಾಡಬೇಕು ಎಂದು ಯಶ್ ಬೇಡಿಕೆಯಿಟ್ಟಿದ್ದಾರೆ. ಈ ಕುರಿತ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಇದನ್ನೂ ಓದಿ:ಟಾಕ್ಸಿಕ್‌ ಸಿನಿಮಾ ಮುಂದಿನ ವರ್ಷ ರಿಲೀಸ್‌ – ದಿನಾಂಕ ಘೋಷಿಸಿದ ಯಶ್‌

    ನಿನ್ನೆ ಸಂಜೆ ಬೆಂಗಳೂರಿನಲ್ಲಿ ಹನಿ ಸಿಂಗ್ ಆಗಮಿಸಿ ತಮ್ಮ ಗಾಯನದ ಮೂಲಕ ರಂಜಿಸಿದ್ದಾರೆ. ಈ ವೇಳೆ, ಯಶ್ ಕೂಡ ವೇದಿಕೆಗೆ ಆಗಮಿಸಿ ಕನ್ನಡದಲ್ಲಿಯೇ ಹನಿ ಸಿಂಗ್‌ಗೆ ‘ಬೆಂಗಳೂರಿಗೆ ಸ್ವಾಗತ’ ಎಂದಿದ್ದಾರೆ. ನಮಸ್ಕಾರ ಎಲ್ಲರೂ ಹೇಗಿದ್ದೀರಿ. ತುಂಬಾ ಖುಷಿ ಆಗುತ್ತಿದೆ ನಿಮ್ಮೆಲ್ಲರನ್ನೂ ನೋಡಿ. ನಮ್ಮ ಊರಿಗೆ ಬಂದ ಇವರಿಗೆ ಸ್ವಾಗತಿಸೋಣ, ವೆಲ್ ಕಮ್ ಬ್ರದರ್. ವಿ ಲವ್ ಯೂ ಎಂದು ಹೇಳಿದ್ದಾರೆ.

    ಕಾರ್ಯಕ್ರಮದಲ್ಲಿ ಹನಿ ಸಿಂಗ್‌ಗೆ ನೀವು ಮುಂದಿನ ದಿನಗಳಲ್ಲಿ ಕನ್ನಡದಲ್ಲಿಯೂ ಹಾಡಬೇಕು ಎಂದು ಯಶ್ ಹೇಳಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿದ ಗಾಯಕ, ಖಂಡಿತ ನಿಮಗಾಗಿ ಕನ್ನಡದಲ್ಲಿ ಹಾಡು ಹಾಡುತ್ತೇನೆ ಎಂದಿದ್ದಾರೆ. ಯಶ್‌ ಕಾರ್ಯಕ್ರಮಕ್ಕೆ ಬಂದು ಸಾಥ್‌ ಕೊಟ್ಟಿದಕ್ಕೆ ಗಾಯಕ ಧನ್ಯವಾದ ಹೇಳಿದ್ದಾರೆ. ಇನ್ನೂ ಹಿಂದಿ ಹಾಡುಗಳ ಕಾನ್ಸರ್ಟ್‌ನಲ್ಲಿ ಕನ್ನಡದಲ್ಲಿ ಯಶ್ ಮಾತನಾಡಿರೋದು ಫ್ಯಾನ್ಸ್‌ಗೆ ಖುಷಿ ಕೊಟ್ಟಿದೆ. ಜೊತೆಗೆ ಕನ್ನಡದ ಹಾಡುಗಳನ್ನು ಹಾಡಿ ಎಂದು ಒತ್ತಾಯಿಸಿರೋದು ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.

     

    View this post on Instagram

     

    A post shared by Yo Yo Honey Singh (@yoyohoneysingh)

    ಇನ್ನೂ ಯಶ್ ಕೂಡ ಆಗಮಿಸಿ ನೆರೆದಿದ್ದ ಜನರಿಗೆ ಅಚ್ಚರಿ ಮೂಡಿಸಿದ್ದಾರೆ. ಮುಂಚೆಯೇ ಹನಿ ಸಿಂಗ್ ಕಾನ್ಸರ್ಟ್‌ನಲ್ಲಿ ಯಶ್ ಭಾಗಿಯಾಗ್ತಾರೆ ಎಂಬ ಯಾವುದೇ ಮುನ್ಸೂಚನೆ ಇರಲಿಲ್ಲ. ಇದನ್ನೂ ಓದಿ:ಕನ್ನಡದಲ್ಲಿ ಸಿನಿಮಾ ಮಾಡಲಿದ್ದಾರೆ ತಮಿಳಿನ ಖ್ಯಾತ ನಿರ್ದೇಶಕ ಗೌತಮ್

    ಅಂದಹಾಗೆ, ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಮುಂದಿನ ವರ್ಷ ರಿಲೀಸ್ ಮಾಡೋದಾಗಿ ಗುಡ್ ನ್ಯೂಸ್ ನೀಡಿದ್ದಾರೆ. 2026ರ ಮಾ.19ರಂದು ರಿಲೀಸ್ ಮಾಡೋದಾಗಿ ಯಶ್ ಘೋಷಿಸಿದ್ದಾರೆ. ಈ ಚಿತ್ರವನ್ನು ಮಲಯಾಳಂ ನಿರ್ದೇಶಕಿ ಗೀತು ಮೋಹನ್ ದಾಸ್ ನಿರ್ದೇಶನ ಮಾಡುತ್ತಿದ್ದಾರೆ.

  • ಗಾಯಕ ಹನಿ ಸಿಂಗ್ 13 ವರ್ಷಗಳ ದಾಂಪತ್ಯ ಜೀವನ ಅಂತ್ಯ

    ಗಾಯಕ ಹನಿ ಸಿಂಗ್ 13 ವರ್ಷಗಳ ದಾಂಪತ್ಯ ಜೀವನ ಅಂತ್ಯ

    ಬಾಲಿವುಡ್ ಖ್ಯಾತ ಗಾಯಕ (Singer) ಹನಿ ಸಿಂಗ್ ತಮ್ಮ ಹದಿಮೂರು ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯವಾಡಿದ್ದಾರೆ. ಪತ್ನಿ ಶಾಲಿನಿ ತಲ್ವಾರ್ ಮತ್ತು ಹನಿ ಸಿಂಗ್ (Honey Singh) ಅಧಿಕೃತವಾಗಿ ಬೇರೆಯಾಗಿದ್ದಾರೆ. ನಿನ್ನೆ ದೆಹಲಿ ಫ್ಯಾಮಿಲಿ ಕೋರ್ಟ್ ಈ ಜೋಡಿಗೆ ವಿಚ್ಛೇದನ ನೀಡಿದೆ. ಹನಿ ಸಿಂಗ್ ಮತ್ತು ಶಾಲಿನಿ 2011ರ ಜನವರಿಯಲ್ಲಿ ಹೊಸ ಜೀವನಕ್ಕೆ ಕಾಲಿಟ್ಟಿದ್ದರು.

    ಪಂಜಾಬಿ (Punjabi)ಖ್ಯಾತ ಗಾಯಕ, ಬಾಲಿವುಡ್ ನಲ್ಲೂ ತಮ್ಮದೇ ಆದ ಛಾಪು ಮೂಡಿಸಿರುವ ಹನಿ ಸಿಂಗ್ (Honey Singh) ಕೊನೆಗೂ ತಮ್ಮ ಪತ್ನಿ ಶಾಲಿನಿ ತಲ್ವಾರ್ ಅವರಿಗೆ ವಿಚ್ಛೇದನ ನೀಡಿದ್ದಾರೆ. ಕಳೆದ ವರ್ಷವಷ್ಟೇ ಹನಿ ಸಿಂಗ್ ಮೇಲೆ ಅವರ ಪತ್ನಿ ದೈಹಿಕ ಹಿಂಸಾಚಾರದ ಆರೋಪ ಮಾಡಿದ್ದರು. ಪತಿಯಿಂದ ತಮಗೆ ತುಂಬಾ ಹಿಂಸೆ ಆಗುತ್ತಿದೆ ಎಂದು ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಇದರ ಬೆನ್ನಲ್ಲೆ ಹನಿ ಸಿಂಗ್ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು.

    ದೆಹಲಿ (Delhi) ಕೋರ್ಟ್ ನಲ್ಲಿ ಡಿವೋರ್ಸ್ ಗೆ ಅರ್ಜಿ ಸಲ್ಲಿಸಿದ್ದ ಹನಿ ಸಿಂಗ್ ಮತ್ತು ಅವರ ಪತ್ನಿ ಶಾಲಿನಿ (Shalini)ಯು ನ್ಯಾಯಾಧೀಶರ ಎದುರು ಸೆಟಲ್ ಮೆಂಟ್ ಮಾಡಿಕೊಂಡು, ಪತ್ನಿಗೆ ಜೀವನಾಂಶವಾಗಿ ಒಂದು ಕೋಟಿ ರೂಪಾಯಿ ನೀಡಿದ್ದಾರೆ. ಅದು ಚೆಕ್ ಮೂಲಕ ನೀಡಿದ್ದಾರೆ. 2001ರಲ್ಲಿ ಈ ಜೋಡಿ ವಿವಾಹವಾಗಿದ್ದು, ಆ ನಂತರ ಮನಸ್ತಾಪಗಳು ಬಂದಿದ್ದವು. ಕಳೆದ ವರ್ಷವಂತೂ ಇಬ್ಬರೂ ಸೋಷಿಯಲ್ ಮೀಡಿಯಾದಲ್ಲಿ ಒಬ್ಬರ ಮೇಲೆ ಮತ್ತೊಬ್ಬರು ಆರೋಪ ಮಾಡಿದ್ದರು.

     

    ತಮ್ಮ ಮೇಲೆ ಪತಿ ದೈಹಿಕವಾಗಿ ಹಿಂಸೆ ಮಾಡಿದ್ದಾನೆ ಎಂದು ಶಾಲಿನಿ ಬಹಿರಂಗವಾಗಿಯೇ ಸೋಷಿಯಲ್ ಮೀಡಿಯಾದಲ್ಲಿ ಪತ್ರವನ್ನು ಬರೆದಿದ್ದರು. ಹನಿ ಸಿಂಗ್ ಕುಟುಂಬದ ಬಗ್ಗೆಯೂ ಆರೋಪಗಳನ್ನು ಮಾಡಿದ್ದರು. ಆನಂತರ ಹನಿ ಸಿಂಗ್ ಕೂಡ ಮಾಧ್ಯಮಗಳ ಮುಂದೆ ಬಂದು ಎಲ್ಲ ಆರೋಪಗಳನ್ನು ನಿರಾಕರಿಸಿದ್ದರು. ಅಲ್ಲದೇ, ಶಾಲಿನಿಯಿಂದ  ದೂರ ಹೋಗುವುದಾಗಿಯೂ ಹೇಳಿಕೊಂಡಿದ್ದರು. ಈ ಮೂಲಕ ಅವರು ಡಿವೋರ್ಸ್ ಗೆ (Divorce) ಅರ್ಜಿ ಸಲ್ಲಿಸಿದ್ದರು.

  • ಸಿಧು ಮೂಸೆವಾಲಾ ಮಾದರಿಯಲ್ಲೇ ಹತ್ಯೆ ಮಾಡುವುದಾಗಿ ಹನಿ ಸಿಂಗ್‌ಗೆ ಕೊಲೆ ಬೆದರಿಕೆ

    ಸಿಧು ಮೂಸೆವಾಲಾ ಮಾದರಿಯಲ್ಲೇ ಹತ್ಯೆ ಮಾಡುವುದಾಗಿ ಹನಿ ಸಿಂಗ್‌ಗೆ ಕೊಲೆ ಬೆದರಿಕೆ

    ಪಂಜಾಬಿ ಗಾಯಕ ಯೋ ಯೋ ಹನಿ ಸಿಂಗ್‌ಗೆ(Honey Singh) ಸಂಕಷ್ಟವೊಂದು ಎದುರಾಗಿದೆ. ಕುಖ್ಯಾತ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್ ಎಂದು ಹೇಳಿಕೊಂಡು ಗಾಯಕ ಹನಿ ಸಿಂಗ್‌ಗೆ ಬೆದರಿಕೆ ಹಾಕಿದ್ದಾನೆ. ರಕ್ಷಣೆಗಾಗಿ ಹನಿ ಸಿಂಗ್, ದೆಹಲಿ ಪೊಲೀಸ್ ಠಾಣೆ ಮೆಟ್ಟಿಲು ಏರಿದ್ದಾನೆ. ಇದನ್ನೂ ಓದಿ:‘ಕಾಂತಾರ’ 2ಗಾಗಿ ಕುದುರೆ ಸವಾರಿ, ಕಳರಿ ಪಯಟ್ಟು ಕಲಿಕೆಯಲ್ಲಿ ರಿಷಬ್ ಶೆಟ್ಟಿ ಬ್ಯುಸಿ

    ಬಾಲಿವುಡ್‌ನಲ್ಲಿ (Bollywood) ಸಾಕಷ್ಟು ಆಲ್ಬಂ ಸಾಂಗ್‌ಗಳಲ್ಲಿ ಹನಿ ಸಿಂಗ್ ಮಿಂಚಿದ್ದಾರೆ. ತಮ್ಮ ಕಂಪೋಸ್‌ನಲ್ಲಿ ಬಿಗ್ ಸ್ಟಾರ್‌ಗಳಿಗೆ ಧ್ವನಿ ನೀಡಿದ್ದಾರೆ. ಮ್ಯೂಸಿಕ್ ಕ್ಷೇತ್ರದಲ್ಲಿ ಒಂದಲ್ಲಾ ಒಂದು ರೀತಿಯಲ್ಲಿ ಸಾಧನೆ ಮಾಡಿರುವ ಹನಿ ಸಿಂಗ್‌ಗೆ ಕೊಲೆ ಬೆದರಿಕೆ ಎದುರಾಗಿದೆ. ಗೋಲ್ಡಿ ಬ್ರಾರ್ ಕುಖ್ಯಾತ ಗ್ಯಾಂಗ್‌ಸ್ಟರ್‌ 2022ರ ಖ್ಯಾತ ಪಂಜಾಬ್ ಗಾಯಕ ಸಿಧು ಮೂಸೆವಾಲಾ ಹತ್ಯೆಯ ಪ್ರಮುಖ ರೂವಾರಿಯಾಗಿದ್ದಾರೆ.

    ಕೆನಡಾದಲ್ಲಿ ಇದ್ದುಕೊಂಡೆ ಯೋಜನೆಗಳನ್ನ ಗೋಲ್ಡಿ ಬ್ರಾರ್ ಪ್ಲ್ಯಾನ್ ಮಾಡುತ್ತಾರೆ. ಈಗ ಸಿಧು ಮೂಸೆವಾಲಾ ಹತ್ಯೆ ಮಾದರಿಯಲ್ಲೇ ಕೊಲೆ ಮಾಡೋದಾಗಿ ಬೆದರಿಕೆ ಹಾಕಿದ್ದಾನೆ ಎಂದು ವರದಿಯಾಗಿದೆ. ಗೋಲ್ಡಿ ಬ್ರಾರ್ (Goldy Brar) ಎಂದು ಹೇಳಿಕೊಂಡು ಕರೆ ಮಾಡಿದ ವ್ಯಕ್ತಿ ನೇರವಾಗಿ ಹನಿ ಸಿಂಗ್‌ಗೆ ಕರೆ ಮಾಡಲಿಲ್ಲ. ಬದಲಾಗಿ ಹನಿ ಸಿಂಗ್ ಮ್ಯಾನೇಜರ್‌ಗೆ 50 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾನೆ. ಪದೇ ಪದೇ ಮ್ಯಾನೇಜರ್‌ಗೆ ಕರೆ, ಮೆಸೇಜ್ ಬಂದ ಕಾರಣ ಇದೀಗ ಕೊಲೆ ಬೆದರಿಕೆ ಬಗ್ಗೆ ದೆಹಲಿ ಪೊಲೀಸ್ ಠಾಣೆಗೆ ದೂರ ದಾಖಲಿಸಿದ್ದಾರೆ.‌

    ದೂರಿನ ಬಳಿಕ ಮಾಧ್ಯಮಕ್ಕೆ ಹನಿ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಎಲ್ಲೇ ಹೋಗಲಿ ಜನರಿಂದ ಬರೀ ಪ್ರೀತಿಯನ್ನೇ ಪಡೆದಿದ್ದೇನೆ. ನನಗೆ ಯಾರೊಂದಿಗೂ ಶತ್ರುತ್ವವಿಲ್ಲ. ಇದೇ ಮೊದಲ ಬಾರಿಗೆ ಕೊಲೆ ಬೆದರಿಕೆ ಬಂದಿದೆ ಎಂದು ಹನಿ ಸಿಂಗ್ ಮಾತನಾಡಿದ್ದಾರೆ.

  • ದೇಶದ ಹುಡುಗಿಯರು ಉರ್ಫಿ ಜಾವೇದ್ ನೋಡಿ ಕಲಿಯಿರಿ : ಯೋ ಯೋ ಹನಿ ಸಿಂಗ್

    ದೇಶದ ಹುಡುಗಿಯರು ಉರ್ಫಿ ಜಾವೇದ್ ನೋಡಿ ಕಲಿಯಿರಿ : ಯೋ ಯೋ ಹನಿ ಸಿಂಗ್

    ನ್ನ ವಿಚಿತ್ರ ಕಾಸ್ಟ್ಯೂಮ್ ಮೂಲಕ ಬಾಲಿವುಡ್ ಸಿನಿ ರಂಗದಲ್ಲಿ ಹೆಚ್ಚು ಸದ್ದು ಮಾಡುತ್ತಿರುವ ಉರ್ಫಿ ಜಾವೇದ್ ಮೇಲೆ ಉರಿದುಕೊಂಡವರೇ ಹೆಚ್ಚು. ಅವಳು ಧರಿಸುವ ಅರೆಬರೆ ಬಟ್ಟೆಯ ಬಗ್ಗೆ ಸಾಕಷ್ಟು ದೂರುಗಳು ಇವೆ. ಈ ವಿಚಾರವಾಗಿ ಅವಳು ಪೊಲೀಸ್ ಸ್ಟೇಶನ್ ಮೆಟ್ಟಿಲೂ ಹತ್ತಿದ್ದಾರೆ. ದುಬೈನಲ್ಲಿ ಪೊಲೀಸ್ ವಿಚಾರಣೆಗೂ ಒಳಗಾಗಿದ್ದಾರೆ. ಸದಾ ವಿವಾದವನ್ನೇ ಬೆನ್ನತ್ತಿ ಹೋಗುವ ಉರ್ಫಿ ಬಗ್ಗೆ ಮೊದಲ ಬಾರಿಗೆ ವ್ಯಕ್ತಿಯೊಬ್ಬರು ಹೆಮ್ಮೆಯಿಂದ ಮಾತನಾಡಿದ್ದಾರೆ. ಅವರನ್ನು ಮಾದರಿಯಾಗಿ ತಗೆದುಕೊಳ್ಳುವಂತೆ ಕರೆಕೊಟ್ಟಿದ್ದಾರೆ.

    ಬಾಲಿವುಡ್ ಸಿಂಗರ್ ಯೋ ಯೋ ಹನಿ ಸಿಂಗ್, ಸದ್ಯ ತಮ್ಮ ಆಲ್ಬಂವೊಂದರ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ‘ಉರ್ಫಿ ಜಾವೇದ್ ಬಗ್ಗೆ ಹಾಡಿಹೊಗಳಿದ್ದಾರೆ. ಉರ್ಫಿ ತನ್ನಿಷ್ಟದಂತೆ ಬದುಕುತ್ತಿರುವ ನಟಿ. ತುಂಬಾ ಧೈರ್ಯವಂತೆ. ಯಾರಿಗೂ ಹೆದರದೇ ತನ್ನ ಬದುಕನ್ನು ಕಟ್ಟಿಕೊಂಡಿದ್ದಾಳೆ. ಹಾಗಾಗಿ ದೇಶದ ಹುಡುಗಿಯರು ಅವಳನ್ನು ನೋಡಿ ಕಲಿತುಕೊಳ್ಳಬೇಕು’ ಎಂದು ಅಚ್ಚರಿಯ ಹೇಳಿಕೆಯನ್ನು ಕೊಟ್ಟಿದ್ದಾರೆ. ಇದನ್ನೂ ಓದಿ: ನೋರಾ ಫತೇಹಿ ಜೊತೆಗಿನ ಡೇಟಿಂಗ್ ವದಂತಿ ಬೆನ್ನಲ್ಲೇ ಪಾಕಿಸ್ತಾನ ನಟಿಯ ಜೊತೆ ಆರ್ಯನ್ ಖಾನ್ ಪಾರ್ಟಿ

    ಹನಿ ಸಿಂಗ್ ಇಂಥದ್ದೊಂದು ಮಾತು ಹೇಳುತ್ತಿದ್ದಂತೆಯೇ ಬಾಲಿವುಡ್ ನ ಅನೇಕರು ಗರಂ ಆಗಿದ್ದಾರೆ. ದೇಶದ ಹೆಣ್ಣು ಮಕ್ಕಳು ಯಾರನ್ನು ಮಾದರಿಯಾಗಿ ತಗೆದುಕೊಳ್ಳಬೇಕು ಎಂದು ಗೊತ್ತಿದೆ. ಹನಿ ಸಿಂಗ್ ಬೇಕಾದರೆ ಉರ್ಫಿಯನ್ನು ಮಾದರಿಯಾಗಿ ತಗೆದುಕೊಳ್ಳಲಿ ಎನ್ನುವ ಮಾತುಗಳನ್ನು ಆಡಿದ್ದಾರೆ. ಉರ್ಫಿ ಒಬ್ಬ ಮಾನಸಿಕ ಖಾಯಿಲೆ ಇರುವ ಹುಡುಗಿ. ಆಕೆ ಬದುಕು ಯಾವತ್ತಿಗೂ ಮಾದರಿ ಆಗುವಂಥದ್ದು ಅಲ್ಲ ಎಂದಿದ್ದಾರೆ.

    ಅಶ್ಲೀಲ ರೀತಿಯ ಬಟ್ಟೆಗಳನ್ನು ಉರ್ಫಿ ಹಾಕುತ್ತಾರೆ ಎನ್ನುವ ಕಾರಣಕ್ಕಾಗಿ ಮುಂಬೈ ಸೇರಿದಂತೆ ಹಲವು ಕಡೆ ದೂರುಗಳು ದಾಖಲಾಗಿವೆ. ಈ ಕುರಿತು ಉರ್ಫಿ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಮೇಲೆ ಎಷ್ಟೇ ದೂರುಗಳು ಬಂದರೂ, ನನ್ನನ್ನು ಬದಲಿಸಲು ಆಗುವುದಿಲ್ಲ. ನಾನು ಹೇಗಿರಬೇಕೋ ಹಾಗೆಯೇ ಇರುವೆ. ಅದು ನನ್ನ ಸ್ವಾತಂತ್ರ್ಯ. ಯಾವ ದೂರಿಗೂ ನಾನು ಹೆದರುವುದಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಡಿವೋರ್ಸ್ ಪಡೆಯಲು ಪತ್ನಿಗೆ ಒಂದು ಕೋಟಿ ಜೀವನಾಂಶ ನೀಡಿದ ಗಾಯಕ ಹನಿ ಸಿಂಗ್

    ಡಿವೋರ್ಸ್ ಪಡೆಯಲು ಪತ್ನಿಗೆ ಒಂದು ಕೋಟಿ ಜೀವನಾಂಶ ನೀಡಿದ ಗಾಯಕ ಹನಿ ಸಿಂಗ್

    ಪಂಜಾಬಿ (Punjabi)ಖ್ಯಾತ ಗಾಯಕ, ಬಾಲಿವುಡ್ ನಲ್ಲೂ ತಮ್ಮದೇ ಆದ ಛಾಪು ಮೂಡಿಸಿರುವ ಹನಿ ಸಿಂಗ್ (Honey Singh) ಕೊನೆಗೂ ತಮ್ಮ ಪತ್ನಿ ಶಾಲಿನಿ ತಲ್ವಾರ್ ಅವರಿಗೆ ವಿಚ್ಛೇದನ ನೀಡಿದ್ದಾರೆ. ಕಳೆದ ವರ್ಷವಷ್ಟೇ ಹನಿ ಸಿಂಗ್ ಮೇಲೆ ಅವರ ಪತ್ನಿ ದೈಹಿಕ ಹಿಂಸಾಚಾರದ ಆರೋಪ ಮಾಡಿದ್ದರು. ಪತಿಯಿಂದ ತಮಗೆ ತುಂಬಾ ಹಿಂಸೆ ಆಗುತ್ತಿದೆ ಎಂದು ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಇದರ ಬೆನ್ನಲ್ಲೆ ಹನಿ ಸಿಂಗ್ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು.

    ದೆಹಲಿ (Delhi) ಕೋರ್ಟ್ ನಲ್ಲಿ ಡಿವೋರ್ಸ್ ಗೆ ಅರ್ಜಿ ಸಲ್ಲಿಸಿದ್ದ ಹನಿ ಸಿಂಗ್ ಮತ್ತು ಅವರ ಪತ್ನಿ ಶಾಲಿನಿ (Shalini)ಯು ನ್ಯಾಯಾಧೀಶರ ಎದುರು ಸೆಟಲ್ ಮೆಂಟ್ ಮಾಡಿಕೊಂಡು, ಪತ್ನಿಗೆ ಜೀವನಾಂಶವಾಗಿ ಒಂದು ಕೋಟಿ ರೂಪಾಯಿ ನೀಡಿದ್ದಾರೆ. ಅದು ಚೆಕ್ ಮೂಲಕ ನೀಡಿದ್ದಾರೆ. 2001ರಲ್ಲಿ ಈ ಜೋಡಿ ವಿವಾಹವಾಗಿದ್ದು, ಆ ನಂತರ ಮನಸ್ತಾಪಗಳು ಬಂದಿದ್ದವು. ಕಳೆದ ವರ್ಷವಂತೂ ಇಬ್ಬರೂ ಸೋಷಿಯಲ್ ಮೀಡಿಯಾದಲ್ಲಿ ಒಬ್ಬರ ಮೇಲೆ ಮತ್ತೊಬ್ಬರು ಆರೋಪ ಮಾಡಿದ್ದರು.  ಇದನ್ನೂ ಓದಿ: ರಾಕೇಶ್ ಸ್ಮಾರ್ಟ್ ಗೇಮ್ ಆಡುತ್ತಿದ್ದಾನೆ- ಸಾನ್ಯಾ ಕೆಂಡಾಮಂಡಲ

    ತಮ್ಮ ಮೇಲೆ ಪತಿ ದೈಹಿಕವಾಗಿ ಹಿಂಸೆ ಮಾಡಿದ್ದಾನೆ ಎಂದು ಶಾಲಿನಿ ಬಹಿರಂಗವಾಗಿಯೇ ಸೋಷಿಯಲ್ ಮೀಡಿಯಾದಲ್ಲಿ ಪತ್ರವನ್ನು ಬರೆದಿದ್ದರು. ಹನಿ ಸಿಂಗ್ ಕುಟುಂಬದ ಬಗ್ಗೆಯೂ ಆರೋಪಗಳನ್ನು ಮಾಡಿದ್ದರು. ಆನಂತರ ಹನಿ ಸಿಂಗ್ ಕೂಡ ಮಾಧ್ಯಮಗಳ ಮುಂದೆ ಬಂದು ಎಲ್ಲ ಆರೋಪಗಳನ್ನು ನಿರಾಕರಿಸಿದ್ದರು. ಅಲ್ಲದೇ, ಶಾಲಿನಿಯಿಂದ  ದೂರ ಹೋಗುವುದಾಗಿಯೂ ಹೇಳಿಕೊಂಡಿದ್ದರು. ಈ ಮೂಲಕ ಅವರು ಡಿವೋರ್ಸ್ ಗೆ (Divorce) ಅರ್ಜಿ ಸಲ್ಲಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಕ್ಲಬ್‍ನಲ್ಲಿ ಬಾಲಿವುಡ್ ಗಾಯಕ ಹನಿ ಸಿಂಗ್ ಮೇಲೆ ಹಲ್ಲೆಗೆ ಯತ್ನ

    ಕ್ಲಬ್‍ನಲ್ಲಿ ಬಾಲಿವುಡ್ ಗಾಯಕ ಹನಿ ಸಿಂಗ್ ಮೇಲೆ ಹಲ್ಲೆಗೆ ಯತ್ನ

    ಗರದ ಕ್ಲಬ್‍ವೊಂದರಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಗಾಯಕ ಹಿರ್ದೇಶ್ ಸಿಂಗ್ ನನ್ನ ಜೊತೆ ಅಮಾನುಷವಾಗಿ ವರ್ತಿಸಿದ್ದಲ್ಲದೇ ಜೀವ ಬೆದರಿಕೆ ಹಾಕಿದ್ದಾರೆ ಎಂದು ಬಾಲಿವುಡ್ ಜನಪ್ರಿಯ ಗಾಯಕ ಯೋ ಯೋ ಹನಿ ಸಿಂಗ್ ದೂರು ದಾಖಲಿಸಿದ್ದಾರೆ.

    ಮಾರ್ಚ್ 27 ರಂದು ದಕ್ಷಿಣ ದೆಹಲಿಯ ಹೌಜ್ ಖಾಸ್ ಪ್ರದೇಶದ ಕ್ಲಬ್‍ವೊಂದರಲ್ಲಿ ನಡೆದ ಸಂಗೀತ ಕಾರ್ಯಕ್ರಮದ ವೇಳೆ ಬಾಲಿವುಡ್ ಗಾಯಕ ಹಿರ್ದೇಶ್ ಸಿಂಗ್, ನನ್ನೊಂದಿಗೆ ಅನುಚಿತವಾಗಿ ನಡೆದುಕೊಂಡರು ಎಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದನ್ನೂ ಓದಿ: RGV ನಿರ್ದೇಶನದ ಲೆಸ್ಬಿಯನ್ ಸಿನಿಮಾ ಬಿಡುಗಡೆ ಮುಂದೂಡಿಕೆ

    ಅಂದು ರಾತ್ರಿ ಹೊಸ ದೆಹಲಿಯ ಸೌತ್ ಎಕ್ಸ್-11 ನಲ್ಲಿರುವ ಕ್ಲಬ್‍ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮ ನಡೆಯುತ್ತಿದ್ದಾಗ ಏಕಾಏಕಿ ಐದರಿಂದ ಆರು ಮಂದಿ ಅಪರಿಚಿತರು ಬಲವಂತವಾಗಿ ವೇದಿಕೆ ಮೇಲೆ ಬಂದು ಅಸಭ್ಯವಾಗಿ ವರ್ತಿಸಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದರು ಎಂದು ಹನಿ ಸಿಂಗ್ ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ನನ್ನ ಹತ್ತಿರ ಡೇಂಜರ್ಸ್ ಹುಡುಗೀರು ಇದ್ದಾರೆ- ರಾಜಮೌಳಿಗೆ ರಾಮ್ ಗೋಪಾಲ್ ವರ್ಮಾ ಹೀಗಂದಿದ್ಯಾಕೆ..?

    ಕೆಲ ವ್ಯಕ್ತಿಗಳು ಬಿಯರ್ ಬಾಟಲಿಗಳನ್ನು ಹಿಡಿದುಕೊಂಡು ಕಲಾವಿದರನ್ನು ವೇದಿಕೆಯಿಂದ ತಳ್ಳಿದ್ದಾರೆ. ಅವರಲ್ಲಿ ಒಬ್ಬರು ನನ್ನ ಕೈ ಹಿಡಿದು ವೇದಿಕೆಯ ಮುಂಭಾಗಕ್ಕೆ ಎಳೆದು ತರಲು ಮುಂದಾದರು ಎಂದು ಆರೋಪಿಸಿದ್ದಾರೆ.

    ಈ ವೇಳೆ ನನಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಹನಿ ಸಿಂಗ್ ದೂರಿದ್ದಾರೆ. ಗಾಯಕನಿಂದ ದೂರನ್ನು ಸ್ವೀಕರಿಸಿದ ನಂತರ ವಿವಿಧ ಸೆಕ್ಷನ್‍ಗಳಡಿ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಈಗಾಗಲೇ ಕ್ಲಬ್‍ನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗಿದ್ದು, ಸಾಕ್ಷಿಗಳ ಹೇಳಿಕೆಯ ಆಧಾರದ ಮೇಲೆ ಐವರು ಆರೋಪಿಗಳನ್ನು ಗುರುತಿಸಲಾಗಿದೆ. ಇನ್ನಷ್ಟು ಪ್ರಮುಖ ಸಾಕ್ಷ್ಯಗಳನ್ನು ಸಂಗ್ರಹಿಸಬೇಕಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

  • ಹಾಡಿನ ಸಾಹಿತ್ಯದಲ್ಲಿ ಮಹಿಳೆಯರಿಗೆ ಅಗೌರವ-ಸಂಕಷ್ಟದಲ್ಲಿ ಹನಿಸಿಂಗ್

    ಹಾಡಿನ ಸಾಹಿತ್ಯದಲ್ಲಿ ಮಹಿಳೆಯರಿಗೆ ಅಗೌರವ-ಸಂಕಷ್ಟದಲ್ಲಿ ಹನಿಸಿಂಗ್

    ಮುಂಬೈ: ರ‍್ಯಾಪರ್ ಹನಿಸಿಂಗ್ ವಿರುದ್ಧ ಪಂಜಾಬ್ ಮಹಿಳಾ ಆಯೋಗ ಕಾನೂನು ಕ್ರಮಕ್ಕೆ ಮುಂದಾಗಿದೆ. ಇತ್ತೀಚೆಗೆ ಹನಿಸಿಂಗ್ ರಚಿತ ‘ಮಖ್ನಾ’ ಹಾಡಿನ ಸಾಹಿತ್ಯ ಮಹಿಳೆಯರಿಗೆ ಅಗೌರವ ತೋರುತ್ತಿದೆ ಎಂದು ಆಯೋಗ ಆರೋಪಿಸಿದೆ.

    ಈ ಕುರಿತು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ಪಂಜಾಬ್ ಮಹಿಳಾ ಆಯೋಗ ಕ್ರಿಮಿನಲ್ ಪ್ರಕರಣದಡಿ ಕೇಸ್ ದಾಖಲಿಸಿಕೊಳ್ಳಬೇಕೆಂದು ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಮಹಿಳಾ ಆಯೋಗದ ಅಧ್ಯಕ್ಷೆ ಮನಿಶಾ ಗುಲಾಟಿ, ಹಾಡಿನ ಸಾಹಿತ್ಯ ಅಶ್ಲೀಲತೆಯಿಂದ ಕೂಡಿದೆ. ಈ ಸಂಬಂಧ ಕಾನೂನಿನ ಅಡಿಯಲ್ಲಿ ಪೊಲೀಸ್ ತನಿಖೆ ನಡೆಯಬೇಕಿದೆ. ಹನಿಸಿಂಗ್ ಜೊತೆ ಗಾಯಕಿ ನೇಹಾ ಕಕ್ಕರ್ ಹಾಡಿಗೆ ಧ್ವನಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

    ಪೊಲೀಸರು ಜುಲೈ 12ರೊಳಗೆ ಈ ಕುರಿತ ವರದಿಯನ್ನು ನೀಡಬೇಕೆಂದು ಮಹಿಳಾ ಆಯೋಗ ಕೇಳಿದೆ. ಈ ಹಾಡು ಬ್ಯಾನ್ ಮಾಡಬೇಕು. ಈ ರೀತಿಯ ಹಾಡುಗಳು ಸ್ವಾಸ್ಥ ಸಮಾಜಕ್ಕೆ ಕಪ್ಪು ಚುಕ್ಕೆ ಮತ್ತು ಅವಮಾನಕರವಾಗಿದೆ. ಈ ಸಾಹಿತ್ಯ ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂದು ಮನಿಶಾ ಗುಲಾಟಿ ಆತಂಕ ವ್ಯಕ್ತಪಡಿಸಿದ್ದಾರೆ.

    2013ರಲ್ಲಿ ಹನಿಸಿಂಗ್ ರಚಿತ ‘ಮೈಂ ಹೂಂ ಬಲತ್ಕಾರಿ’ (ನಾನೋರ್ವ ಅತ್ಯಾಚಾರಿ) ಹಾಡು ಭಾರೀ ವಿವಾದಕ್ಕೊಳಗಾಗಿತ್ತು. ಈ ಹಾಡಿನ ಕುರಿತು ವಿಚಾರಣೆ ನಡೆಸಿದ್ದ ಹರ್ಯಾಣ ಮತ್ತು ಪಂಜಾಬ್ ಹೈ ಕೋರ್ಟ್, ಹನಿಸಿಂಗ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕೆಂದು ಪಂಜಾಬ್ ಸರ್ಕಾರಕ್ಕೆ ಆದೇಶಿಸಿತ್ತು.

    https://www.youtube.com/watch?v=kt4FDwUws28