Tag: Honnavara

  • ಭಾಷಣದ ವೇಳೆ ಮೋದಿ ಘೋಷ – ಅರ್ಧಕ್ಕೆ ಭಾಷಣ ಮೊಟಕುಗೊಳಿಸಿದ ರಾಹುಲ್

    ಭಾಷಣದ ವೇಳೆ ಮೋದಿ ಘೋಷ – ಅರ್ಧಕ್ಕೆ ಭಾಷಣ ಮೊಟಕುಗೊಳಿಸಿದ ರಾಹುಲ್

    ಹೊನ್ನವಾರ: ರಾಜ್ಯ ವಿಧಾನಸಭಾ ಚುನಾವಣೆಗೆ ಕ್ಷಣ ಗಣನೆ ಆರಂಭವಾಗುತ್ತಿದಂತೆ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಆಗಮಿಸಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮೊದಲ ದಿನವೇ ಮುಜುಗರ ಅನುಭವಿಸಿದ್ದಾರೆ.

    ಪ್ರಚಾರಕ್ಕಾಗಿ ಇಂದು ಹೊನ್ನಾವರಕ್ಕೆ ಆಗಮಿಸಿದ್ದ ರಾಹುಲ್ ಗಾಂಧಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ನಗರದ ಶರಾವತಿ ಸರ್ಕಲ್ ಬಳಿ ಭಾಷಣ ಮಾಡುತ್ತಿದ್ದರು. ಈ ವೇಳೆ ಅಲ್ಲಿದ್ದ ಸ್ಥಳೀಯರು “ಮೋದಿ ಮೋದಿ” ಎಂದು ಪ್ರಧಾನಿಗಳ ಪರ ಘೋಷಣೆ ಕೂಗಿದರು.

    ಈ ಸಂದರ್ಭದಲ್ಲಿ ಅಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು ರಾಹುಲ್ ಪರ ಘೋಷಣೆ ಕೂಗಿದರು. ತಮ್ಮ ಭಾಷಣಕ್ಕೆ ಅಡ್ಡಿಯಾಗುತ್ತಿದಂತೆ ರಾಹುಲ್ ಅರ್ಧಕ್ಕೆ ತಮ್ಮ ಮಾತು ನಿಲ್ಲಿಸಿ ಸ್ಥಳದಿಂದ ನಿರ್ಗಮಿಸಿದರು.

    ತಮ್ಮ ಭಾಷಣ ವೇಳೆ ಪ್ರಧಾನಿಗಳ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಮೋದಿ ಭ್ರಷ್ಟಾಚಾರದ ವಿರುದ್ಧ ಮಾತನಾಡುತ್ತಾರೆ. ಆದರೆ 9 ಸಾವಿರ ಕೋಟಿ ದೋಚಿ ಹೋದ ನೀರವ್ ಮೋದಿ ಬಗ್ಗೆ ಏನೂ ಹೇಳಲ್ಲ. ಬಿಜೆಪಿಯವರು ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಯಡಿಯೂರಪ್ಪ ಜೈಲಿಗೆ ಹೋಗಿದ್ದರು. ಅವರ ಬೆಂಬಲಿಗರೂ ಹೋಗಿದ್ದಾರೆ. ಇಂತಹವರ ಜೊತೆ ಮೋದಿ ವೇದಿಕೆ ಹಂಚಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.

  • ಪರೇಶ್ ಮೇಸ್ತಾ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ

    ಪರೇಶ್ ಮೇಸ್ತಾ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ

    ಕಾರವಾರ: ಹೊನ್ನಾವರದ ಪರೇಶ್ ಮೇಸ್ತಾ ಸಾವು ಇನ್ನೂ ನಿಗೂಢವಾಗಿರುವ ನಡುವೆಯೇ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಮೇಸ್ತಾ ಕುಟುಂಬಕ್ಕೆ 5 ಲಕ್ಷ ರೂ. ಮಂಜೂರು ಮಾಡಲಾಗಿದೆ. ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಯವರ ಜಂಟಿ ಕಾರ್ಯದರ್ಶಿ ಪಿ.ಎ.ಗೋಪಾಲ್ ಪತ್ರ ಬರೆದು ತಿಳಿಸಿದ್ದಾರೆ.

    ಕಳೆದ ಡಿಸೆಂಬರ್ 7ರಂದು ಹೊನ್ನಾವರದಲ್ಲಿ ನಡೆದ ಎರಡು ಗುಂಪುಗಳ ನಡುವಿನ ಘರ್ಷಣೆ ವೇಳೆ ಪರೇಶ್ ಮೇಸ್ತಾ ಕಾಣೆಯಾಗಿ ನಂತರ ಪಟ್ಟಣದ ಶಟ್ಟಿಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದ. ಈತನ ಸಾವು ಸಹಜ ಸಾವಲ್ಲ, ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿತ್ತು. ಈ ಸಂಬಂಧ ಜಿಲ್ಲೆಯಾದ್ಯಾಂತ ಪ್ರತಿಭಟನೆ ನೆಡೆದು ಗಲಭೆ ಕೂಡ ನಡೆದು ನೂರಾರು ಜನರ ಬಂಧನ ಸಹ ಮಾಡಲಾಗಿತ್ತು.

    ಈ ಮಧ್ಯೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ ದೇಶಪಾಂಡೆ ಮೇಸ್ತಾ ಮನೆಗೆ ತೆರಳಿ 1 ಲಕ್ಷ ರೂ. ಹಣ ನೀಡಿದ್ದು, ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರಿ ಉದ್ಯೋಗದ ಭರವಸೆ ನೀಡಿದ್ದರು. ಆದರೇ ಮರುದಿನ ಈ ಹಣವನ್ನು ಸಚಿವರಿಗೆ ಮರಳಿಸಿ ಸರ್ಕಾರಿ ಉದ್ಯೋಗವೂ ಬೇಡ ಎಂದಿದ್ದರು. ಸರ್ಕಾರದಿಂದ ಪರಿಹಾರ ನೀಡಬೇಕೆಂದು ಬಿಜೆಪಿ ಪಟ್ಟು ಹಿಡಿದು ಪ್ರತಿಭಟನೆ ನೆಡೆಸಿತ್ತು . ಈ ಹಿನ್ನಲೆಯಲ್ಲಿ ಡಿಸೆಂಬರ್ 12ರಂದು ಜಿಲ್ಲಾಧಿಕಾರಿ ಎಸ್.ಎಸ್ ನಕುಲ್ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು, ಹಣ ಮಂಜೂರು ಮಾಡಲಾಗಿದೆ.

    ಈ ಬಗ್ಗೆ ಪಬ್ಲಿಕ್ ಟಿ.ವಿ ದೂರವಾಣಿ ಮೂಲಕ ಕುಟುಂಬವನ್ನು ಸಂಪರ್ಕಿಸಿದ್ದು ಸರ್ಕಾರದಿಂದ ಪರಿಹಾರ ಹಣ ಸ್ವೀಕರಿಸುವ ಬಗ್ಗೆ ಇದುವರೆಗೂ ಯಾವುದೇ ತೀರ್ಮಾನ ಮಾಡಿಲ್ಲ. ನಮ್ಮ ಸಮಾಜದವರ ಜೊತೆಗೆ ಮಾತುಕತೆ ನೆಡೆಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಪ್ರಕರಣವನ್ನು ಸಿಬಿಐ ಗೆ ವಹಿಸಲಾಗಿದೆ. ಆದರೆ ಈವರೆಗೂ ನಮ್ಮನ್ನು ಸಂಪರ್ಕಿಸಿಲ್ಲ. ಮರಣೋತ್ತರ ಪರಿಕ್ಷೆಯ ವರದಿ ಕೂಡ ತಡವಾಗುತ್ತಿದೆ. ಇದಕ್ಕಾಗಿ ಕಾಯುತ್ತಿದ್ದೇವೆ ಎಂದಿದ್ದಾರೆ.

    https://www.youtube.com/watch?v=5XVX-SyTRAI

    https://www.youtube.com/watch?v=FusuDEDmVe0

  • ರಾಜಕೀಯ ಪಕ್ಷದ ಪ್ರಕಟಣೆಯಿಂದ ಈ ಸ್ಥಿತಿ – ಪಬ್ಲಿಕ್ ಟಿವಿಗೆ ಐಜಿಪಿ ಹೇಮಂತ್ ನಿಂಬಾಳ್ಕರ್ ಸ್ಪಷ್ಟನೆ

    ರಾಜಕೀಯ ಪಕ್ಷದ ಪ್ರಕಟಣೆಯಿಂದ ಈ ಸ್ಥಿತಿ – ಪಬ್ಲಿಕ್ ಟಿವಿಗೆ ಐಜಿಪಿ ಹೇಮಂತ್ ನಿಂಬಾಳ್ಕರ್ ಸ್ಪಷ್ಟನೆ

    ಕಾರವಾರ: ಹೊನ್ನಾವರದ ಯುವಕ ಪರೇಶ ಮೇಸ್ತ ಸಾವಿನ ಪ್ರಕರಣದ ಬಗ್ಗೆ ರಾಜಕೀಯ ಪಕ್ಷವೊಂದು ಡಿಸೆಂಬರ್ 9ರಂದು ನೀಡಿದ್ದ ಪತ್ರಿಕಾ ಪ್ರಕಟಣೆ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳು ಅಪ್ಪಟ ಸುಳ್ಳು ಎಂದು ಪಶ್ಚಿಮ ವಲಯದ ಐಜಿಪಿ ಹೇಮಂತ್ ನಿಂಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ವೈಯಕ್ತಿಕ ಹಿತಾಸಕ್ತಿಗಾಗಿ ಧರ್ಮದ ಆಧಾರದಲ್ಲಿ ಸಮಾಜದ ಸ್ವಾಸ್ಥ್ಯ ಕೆಡಿಸುವ ಹಾಗೂ ಕೋಮು ಭಾವನೆಗಳನ್ನು ಕೆರಳಿಸುವ ಷಡ್ಯಂತ್ರವನ್ನು ಮಾಡಲಾಗುತ್ತಿದೆ. ರಾಜಕೀಯ ಪಕ್ಷದ ಪತ್ರಿಕಾ ಪ್ರಕಟಣೆ ಮತ್ತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವದಂತಿಗಳಿಂದ ಈ ಸ್ಥಿತಿ ನಿರ್ಮಾಣವಾಗಿದ್ದು, ಸಮಾಜವನ್ನು ಒಡೆಯುವ ಕೆಲಸ ನಡೆಸುತ್ತಿದ್ದು, ಇದರ ದುರುದ್ದೇಶವಿದೆ ಎಂದು ದೂರಿದ್ದಾರೆ. ಇದನ್ನೂ ಓದಿ: ಸಿಎಂ ಹೋದ ಜಿಲ್ಲೆಯಲ್ಲೊಂದು ಹಿಂದೂ ಕಾರ್ಯಕರ್ತನ ಹೆಣ ಬೀಳತ್ತೆ- ಶೋಭಾ ಕಿಡಿ

    ಸಭೆ, ಸಮಾರಂಭ ಅಥವಾ ರಾಜಕೀಯ ರ್ಯಾಲಿಯೇ ಆಗಲಿ ಯಾವುದೂ ನಡೆಯದಂತೆ ಬಂದ್ ಮಾಡಲಾಗಿತ್ತು. ಸೆಕ್ಷನ್ 35 ಆ್ಯಕ್ಟ್ ಪ್ರಕಾರ ಕಾರವಾರ ಜಿಲ್ಲಾಧಿಕಾರಗಳು ಆದೇಶ ಹೊರಡಿಸಿದ್ದರು. ಆದ್ರೂ ಅಲ್ಲಿ ಜನ ಸೇರಿ ನಮಗೆ ಮೆರವಣಿಗೆ ಬೇಕು ಅಂತ ಹೇಳುವುದು ಇದೊಂದು ಪ್ಲಾನ್ ಮಾಡಿಕೊಂಡಿರೋ ಆಕ್ರೋಶ ಅಂತ ಸ್ಪಷ್ಟವಾಗಿ ತಿಳಿದುಬರುತ್ತದೆ ಅಂತ ಅವರು ಹೇಳಿದ್ರು. ಇದನ್ನೂ ಓದಿ: ಕುಮಟಾದಲ್ಲಿ ಭುಗಿಲೆದ್ದ ಹಿಂಸಾಚಾರ – ಐಜಿ ನಿಂಬಾಳ್ಕರ್ ಕಾರ್ ಗೆ ಬೆಂಕಿ, ಲಾಠಿಚಾರ್ಜ್

    ಇನ್ನು ಪತ್ರಿಕಾ ಪ್ರಕಟಣೆಯಲ್ಲಿದ್ದಂತಹ ಹೇಳಿಕೆ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವಂತಹ ವಿಷಯಗಳನ್ನೆಲ್ಲಾ ಒಳಪಡಿಸಿ ನಾವು ಒಂದು ಪ್ರಶ್ನೆಯನ್ನು ರೆಡಿ ಮಾಡಿ, ವೈದ್ಯರಿಗೆ ಆ ಪ್ರಶ್ನೆಗಳನ್ನು ಕೊಟ್ಟಿದ್ದೇವೆ. ಅವರು ಕೊಟ್ಟ ಉತ್ತರವನ್ನು ಈಗಾಗಲೇ ನಾವು ತಂದಿದ್ದೇವೆ ಅಂದ್ರು.

    ಈ ರೀತಿ ಸುಳ್ಳು ಪ್ರಚಾರ ಮಾಡಿ ಎರಡು ಸಮುದಾಯಗಳ ಮಧ್ಯೆ ಬಿರುಕು ಮೂಡಿಸುವಂತಹ ಸಂಚು ಕಾಣ್ತಾ ಇದೆ. ಈ ಸುಳ್ಳು ಮಾಹಿತಿಗಳಿಗೆ ಉತ್ತರ ಅಂತ ನಿನ್ನೆ ನಾವು ಪ್ರಕಟಣೆ ಕೊಟ್ಟಿದ್ದೇವೆ. ಅಲ್ಲದೇ ಸುಳ್ಳು ಮಾಹಿತಿ ಹರಡುತ್ತಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಓರ್ವ ಪ್ರಾಥಮಿಕ ಶಿಕ್ಷಕನನ್ನು ಬಂಧಿಸಿದ್ದೇವೆ ಅಂದ್ರು.

    ಇನ್ನು ಸಾಮಾಜಿ ಜಾಲತಾಣದಲ್ಲಿ ಸುಳ್ಳು ಮೆಸೇಜ್ ಗಳು ಹರಡುತ್ತಿರುವುದರ ಕುರಿತು ಕೂಡ ನಿಗಾ ಇರಿಸಿದ್ದು, ಈ ಮೆಸೇಜ್ ಗಳು ಎಲ್ಲಿಂದ ಉದ್ಭವವಾಗುತ್ತಿವೆ ಎಂಬುದರ ಬಗ್ಗೆ ತನಿಖೆ ನಡೆಸುತ್ತಾ ಇದ್ದೇವೆ ಅಂತ ಅವರು ವಿವರಿಸಿದ್ರು. ಸ್ವಂತ ಲಾಭಕ್ಕಾಗಿ ಗಲಭೆ ನಡೆಸಿ ಸಮಾಜದ ಸ್ವಾಸ್ಥ್ಯವನ್ನು ಕಿಡಿಗೇಡಿಗಳು ಕೆಡಿಸಲು ಪ್ರಯತ್ನಿಸುತ್ತಿದ್ದಾರೆ. ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಅಂತ ಅವರು ಎಚ್ಚರಿಸಿದ್ರು.

    https://www.youtube.com/watch?v=6gDTIt2kztg

    https://www.youtube.com/watch?v=FusuDEDmVe0

    https://www.youtube.com/watch?v=9GHFyRsVyyQ

    https://www.youtube.com/watch?v=mLbtbTysyQg

     

     

     

     

     

  • ರಾಜ್ಯದಲ್ಲಿ ಮತ್ತೋರ್ವ ಹಿಂದೂ ಕಾರ್ಯಕರ್ತನ ಕೊಲೆ

    ರಾಜ್ಯದಲ್ಲಿ ಮತ್ತೋರ್ವ ಹಿಂದೂ ಕಾರ್ಯಕರ್ತನ ಕೊಲೆ

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಬುಧವಾರದಂದು ಕ್ಷುಲ್ಲಕ ಕಾರಣಕ್ಕೆ ಕೋಮ ಗಲಭೆ ನೆಡೆದಾಗ ಘಟನಾ ಸ್ಥಳದಿಂದ ಕಾಣೆಯಾಗಿದ್ದ ಯುವಕ ಇಂದು ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

    ಹೊನ್ನಾವರ ನಿವಾಸಿ 19 ವರ್ಷದ ಪರೇಶ್ ಮೇಸ್ತ ಸಾವನ್ನಪ್ಪಿದ ಯುವಕ. ಪಟ್ಟಣದಲ್ಲಿ ಬುಧವಾರ ಕೋಮುಗಲಭೆ ಉಂಟಾಗಿತ್ತು. ಈ ವೇಳೆ ಪರೇಶ್ ಘಟನಾ ಸ್ಥಳದಿಂದ ನಾಪತ್ತೆಯಾಗಿದ್ದರು. ಇಂದು ಗಲಭೆ ನಡೆದ ಶನಿ ದೇವಸ್ಥಾನದ ಬಳಿ ಇರುವ ಶಟ್ಟಿ ಕೆರೆಯಲ್ಲಿ ಪರೇಶ್ ಶವ ಪತ್ತೆಯಾಗಿದೆ.

    ದುಷ್ಕರ್ಮಿಗಳು ಕೈಕಟ್ಟಿ ಹಲ್ಲೆ ಮಾಡಿ ಕೊಲೆ ಮಾಡಿ ನಂತರ ಶವವನ್ನು ಕೆರೆಗೆ ಎಸೆದು ಹೋಗಿದ್ದಾರೆ ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಹೊನ್ನಾವರ ಪೊಲೀಸರು ಆಗಮಿಸಿ ಶವವನ್ನು ಮೇಲಕ್ಕೆತಿದ್ದು ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಈ ಸಂಬಂಧ ಸಂಬಂಧ ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    https://twitter.com/ShobhaBJP/status/938988228819877889

    https://twitter.com/ShobhaBJP/status/938984145786507264