Tag: Honorary

  • ಗೋಕರ್ಣ ದೇವಸ್ಥಾನದಲ್ಲಿ ಸೈನಿಕರಿಗುಂಟು ವಿಶೇಷ ಪ್ರಾಶಸ್ತ್ಯ!

    ಗೋಕರ್ಣ ದೇವಸ್ಥಾನದಲ್ಲಿ ಸೈನಿಕರಿಗುಂಟು ವಿಶೇಷ ಪ್ರಾಶಸ್ತ್ಯ!

    ಕಾರವಾರ: ಕಾಶ್ಮೀರದಲ್ಲಿ ಸೈನಿಕರ ಮೇಲೆ ದಾಳಿ ನಡೆದ ನಂತರ ಇಡೀ ದೇಶ ನಮ್ಮ ಸೈನಿಕರ ನೋವಿಗೆ ಸ್ಪಂದಿಸಿದೆ. ಸೈನಿಕರಿಗಾಗಿ ದೇಶದ ಹಲವು ಜನರು ಸಹಾಯ ಮಾಡುವ ಜೊತೆ ಬೆಂಬಲ ಕೂಡ ನೀಡಿದ್ದಾರೆ. ಆದರೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ಸೈನಿಕರಿಗೆ ವಿಶೇಷವಾದ ಪ್ರಾಧಾನ್ಯತೆ ನೀಡುವ ಮೂಲಕ ಗೌರವ ಸೂಚಿಸುತ್ತಿದೆ.

    ಹೌದು. ಪುರಾಣ ಪ್ರಸಿದ್ದ ಮಹಾಬಲೇಶ್ವರ ದೇವಾಲಯದಲ್ಲಿ ದೇವರ ದರ್ಶನಕ್ಕೆ ಬರುವ ನಿವೃತ್ತ ಮತ್ತು ಸೇವೆಯಲ್ಲಿರುವ ಭಾರತೀಯ ಸೈನಿಕರಿಗೆ ವಿಶೇಷ ಪ್ರಾಶಸ್ತ್ಯವನ್ನು ದೇವಾಲಯದ ಆಡಳಿತ ಮಂಡಳಿ ಕಲ್ಪಿಸಿದೆ.

    ಪ್ರವೇಶ ದ್ವಾರದಲ್ಲಿ ನಾಮಫಲಕವನ್ನು ಅಳವಡಿಸಿದ್ದು, ಕರ್ತವ್ಯ ನಿರ್ವಹಿಸುತ್ತಿರುವ ಅಥವಾ ನಿವೃತ್ತ ಹೊಂದಿದ ವೀರಯೋಧರು ದೇವಾಲಯದ ಕಾರ್ಯಾಲಯವನ್ನು ಸಂಪರ್ಕಿಸಿದರೆ, ಶ್ರೀ ದೇವರ ಶೀಘ್ರ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ತಿಳಿಸಿದೆ.

    ರಾಮಚಂದ್ರಾಪುರ ಮಠ ದೇವಾಲಯದ ಆಡಳಿತವನ್ನು ವಹಿಸಿಕೊಂಡಾಗಿನಿಂದ ಭಕ್ತರಿಗೆ ವಿವಿಧ ಅನುಕೂಲತೆಗಳನ್ನು ಕಲ್ಪಿಸಿದೆ. ಈಗ ನಮ್ಮ ಹೆಮ್ಮೆಯ ಸೈನಿಕರಿಗೂ ಶೀಘ್ರವೇ ದರ್ಶನಕ್ಕೆ ವ್ಯವಸ್ಥೆ ಮಾಡಿಕೊಟ್ಟಿದ್ದು, ಈ ಮೂಲಕ ಗೌರವ ಸೂಚಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಯದುವಂಶದ ಗೌರವಧನ ವಿಚಾರದಲ್ಲಿ ಮತ್ತೆ ವಿವಾದ – ಸರ್ಕಾರ ಹಣ ನೀಡಬಾರದೆಂದು ಆಗ್ರಹ

    ಯದುವಂಶದ ಗೌರವಧನ ವಿಚಾರದಲ್ಲಿ ಮತ್ತೆ ವಿವಾದ – ಸರ್ಕಾರ ಹಣ ನೀಡಬಾರದೆಂದು ಆಗ್ರಹ

    ಮೈಸೂರು: ದಸರಾ ಹಿನ್ನೆಲೆಯಲ್ಲಿ ಮೈಸೂರಿನ ರಾಜ ಮನೆತನಕ್ಕೆ ಸರ್ಕಾರ ನೀಡುತ್ತಾ ಬಂದಿರುವ ಗೌರವಧನದ ಕುರಿತು ಈ ವರ್ಷವು ವಿವಾದಕ್ಕೀಡಾಗಿದೆ.

    ಇತಿಹಾಸ ತಜ್ಞ ಪ್ರೋ.ನಂಜರಾಜೇ ಅರಸ್ ಈ ಬಗ್ಗೆ ಆಕ್ಷೇಪ ಎತ್ತಿದ್ದು, ಯದುವಂಶದ ರಾಜಮಾತೆ ಪ್ರಮೋದೇವಿ ಅವರಿಗೆ ಸರ್ಕಾರ ನೀಡುವ 36 ಲಕ್ಷ ರೂ. ಹಣವನ್ನು ಈ ವರ್ಷವಾದರೂ ರದ್ದು ಪಡಿಸಿ, ಅದನ್ನು ಕೊಡಗಿಗೆ ನೀಡುವಂತೆ ಮನವಿ ಮಾಡಿದ್ದಾರೆ.

    ಇತಿಹಾಸ ತಜ್ಞ ನಂಜರಾಜ ಅರಸ್ ಹಲವು ವರ್ಷಗಳಿಂದ ಮೈಸೂರು ರಾಜಮನೆತನಕ್ಕೆ ಸರ್ಕಾರ ದಸರಾ ಸಂದರ್ಭದಲ್ಲಿ ನೀಡುವ ಗೌರವಧನ ರದ್ದುಗೊಳಿಸಬೇಕೆಂದು ಆಗ್ರಹಿಸುತ್ತಲೇ ಬರುತ್ತಿದ್ದಾರೆ. ಈ ಬಾರಿಯೂ ಗೌರವ ಧನ ನೀಡಬೇಡಿ ಎಂದು ಒತ್ತಾಯಿಸಿರುವ ನಂಜರಾಜ ಅರಸ್ ಯಾಕಾಗಿ ರಾಜಮನೆತನಕ್ಕೆ ಸರ್ಕಾರ ತಲೆ ಬಾಗುತ್ತಿದೆ ಎಂದು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೇ ಮಾಹಿತಿ ಹಕ್ಕು ಕಾಯ್ದೆಯಡಿ ಜಿಲ್ಲಾಡಳಿತವನ್ನು 2012 ರಿಂದ 2016-17ರವರೆಗೆ ಎಷ್ಟು ಹಣವನ್ನು ಗೌರವಧನ ರೂಪದಲ್ಲಿ ನೀಡಿದ್ದೀರಿ ಎಂದು ಕೇಳಿದ್ದಾರೆ. ಇದಕ್ಕೆ ಉತ್ತರ ನೀಡಿರುವ ಜಿಲ್ಲಾಡಳಿತ 1 ಕೋಟಿ 36 ಲಕ್ಷ ರೂಪಾಯಿ ನೀಡಿದ್ದೇವೆ ಎಂದು ಹೇಳಿದೆ.

    ಸರ್ಕಾರ ನೀಡುವ ಹಣ ಹಾಗೂ ರಾಜಮನೆತನದವರು ತೆಗೆದುಕೊಳ್ಳುವ ಹಣ ಸಾರ್ವಜನಿಕ ಹಣವಾಗಿದೆ. ಆದ್ದರಿಂದ ಈ ಬಾರಿಯಾದರೂ ಸರ್ಕಾರ ಆ ಹಣವನ್ನು ಕೊಡಗಿಗೆ ನೀಡಬೇಕು. ಇಲ್ಲವಾದಲ್ಲಿ ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರಾದರೂ ಸ್ವಇಚ್ಛೆಯಿಂದ ಹಣ ಬೇಡವೆಂದೋ ಅಥವಾ ಅವರೇ ವೈಯಕ್ತಿಕವಾಗಿ ಗೌರವಧನವನ್ನು ಕೊಡಗಿಗೆ ನೀಡಬೇಕು ಅಂತ ಕನ್ನಡ ವೇದಿಕೆ ಅಧ್ಯಕ್ಷ ಬಾಲು ಅವರು ಹೇಳಿದ್ದಾರೆ.

    ಪ್ರತಿ ಬಾರಿ ಗೌರವಧನ ನೀಡುವ ಬಗ್ಗೆ ಗೊಂದಲ ಉಂಟಾಗುತ್ತಿದ್ದು, ಈ ಬಾರಿ ಕೊಡಗಿನ ಸಂತ್ರಸ್ತರು ಈ ಹಣದ ಉಪಯೋಗ ಪಡೆಯಲಿ ಅನ್ನೋ ಕೂಗು ಕೇಳಿಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • SSLC ಯಲ್ಲಿ ರಾಜ್ಯಕ್ಕೆ 2ನೇ ಸ್ಥಾನ ಪಡೆದಿದ್ದ ವಿದ್ಯಾರ್ಥಿಗೆ ಸನ್ಮಾನ

    SSLC ಯಲ್ಲಿ ರಾಜ್ಯಕ್ಕೆ 2ನೇ ಸ್ಥಾನ ಪಡೆದಿದ್ದ ವಿದ್ಯಾರ್ಥಿಗೆ ಸನ್ಮಾನ

    ಬೆಂಗಳೂರು: ಈ ವರ್ಷದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 2ನೇ ಸ್ಥಾನ ಪಡೆದುಕೊಂಡಿದ್ದ ವಿದ್ಯಾರ್ಥಿಗೆ ಶಾಲಾ ಆಡಳಿತ ಮಂಡಳಿಯವರು ಸನ್ಮಾನ ಮಾಡಿ ಗೌರವಿಸಿ ಪುರಸ್ಕರಿಸಿದರು.

    ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಥಾಮಸ್ ಮೆಮೋರಿಯಲ್ ಆಂಗ್ಲ ಶಾಲೆಯ ವಿದ್ಯಾರ್ಥಿ ಶ್ರೀನಿವಾಸ್ 624 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ಎರಡನೇ ಸ್ಥಾನಗಳಿಸಿದ್ದನು. ಈ ಮೂಲಕ ಶಾಲೆಯ ಕೀರ್ತಿಯನ್ನು ರಾಜ್ಯಮಟ್ಟಕ್ಕೆ ತಲುಪಿಸಿದ ವಿದ್ಯಾರ್ಥಿಗೆ ಸನ್ಮಾನ ಮಾಡಿದ್ದಾರೆ.

    ಅಷ್ಟೇ ಅಲ್ಲದೇ ಉಡುಗೊರೆಯಾಗಿ ಲ್ಯಾಪ್‍ಟಾಪ್ ನೀಡಿ ಗೌರವದಿಂದ ಪುರಸ್ಕರಿಸಿದ್ದಾರೆ. ಬಡ ಕುಟುಂಬದಲ್ಲಿ ಜನಿಸಿದ ಶ್ರೀನಿವಾಸ್ ಸಾಧನೆಯನ್ನು ಆಡಳಿತ ಮಂಡಳಿ ಪ್ರಶಂಸಿತು.

  • ಜನರೇ ಟೋಪಿ ಹಾಕಿದ್ರು, ನೀನ್ಯಾಕೆ ಹಾಕ್ತೀಯಾ-ಪೇಟಾ ತೊಡಿಸಲು ಬಂದ ಅಭಿಮಾನಿಗೆ ಮಾಜಿ ಸಿಎಂ ಟಾಂಗ್

    ಜನರೇ ಟೋಪಿ ಹಾಕಿದ್ರು, ನೀನ್ಯಾಕೆ ಹಾಕ್ತೀಯಾ-ಪೇಟಾ ತೊಡಿಸಲು ಬಂದ ಅಭಿಮಾನಿಗೆ ಮಾಜಿ ಸಿಎಂ ಟಾಂಗ್

    ಮೈಸೂರು: ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿಗೆ ಆಗಮಿಸಿದ್ದು, ಪೇಟಾ ತೊಡಿಸಲು ಬಂದ ಅಭಿಮಾನಿಗೆ ಜನರೇ ಟೋಪಿ ಹಾಕಿದ್ರು ನಿನ್ಯಾಕೇ ಹಾಕ್ತಿಯಪ್ಪ ಎಂದು ಸಿದ್ದರಾಮಯ್ಯ ಡೈಲಾಗ್ ಹೊಡೆದಿದ್ದಾರೆ.

    ಸಿದ್ದರಾಮಯ್ಯ ಅವರು ಮೈಸೂರಿನ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ವೇಳೆ ಅಭಿಮಾನಿ ಚಂದನ್ ಸಿದ್ದರಾಮಯ್ಯಗೆ ಸನ್ಮಾನ ಮಾಡಲು ಬಂದಿದ್ದಾರೆ. ಆಗ ಶಾಲು ಮತ್ತು ಹಾರ ಹಾಕಿದ್ದು, ಮೈಸೂರು ಪೇಟಾ ತೋಡಿಸಲು ಹೋದಾಗ, ಹೇ ಇದೇಲ್ಲ ಯಾಕಪ್ಪ ಎಂದು ಸಿದ್ದರಾಮಯ್ಯ ಎಂದಿದ್ದಾರೆ. ಆದರೂ ಚಂದನ್ ಪೇಟಾ ತೋಡಿಸುತ್ತಿದ್ದಾಗ “ಜನರೇ ಟೋಪಿ ಹಾಕಿದ್ರು ನೀನ್ಯಾಕೇ ಹಾಕ್ತೀಯಪ್ಪ” ಎಂದು ನಗುತ್ತಲೇ ಮೈಸೂರು ಪೇಟಾ ತೆಗೆದು ಇಟ್ಟು ತಮ್ಮ ಸೋಲಿನ ಕುರಿತು ತಾವೇ ವ್ಯಂಗ್ಯ ಮಾಡಿಕೊಂಡು ಆಪ್ತರೊಂದಿಗೆ ಮಾತನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಬುಡಸಮೇತ ಮರ ಕಿತ್ತು ಹಾಕಿದ್ದೀರಾ, ಈಗ ಸಚಿವ ಸ್ಥಾನ ಕೇಳಲು ಬಂದಿದ್ದೀರಾ- ಕಾರ್ಯಕರ್ತನಿಗೆ ಪರಂ ಪ್ರಶ್ನೆ

    ವಿಧಾನಸಭೆ ಚುನಾವಣೆಯ ಫಲಿತಾಂಶದ ಹಿಂದಿನ ದಿನ ಮೈಸೂರಿಗೆ ಆಗಮಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಸೋಲಿನ ಬಳಿಕ ಇತ್ತ ಮುಖ ಮಾಡಿರಲಿಲ್ಲ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ 36 ಸಾವಿರ ಮತಗಳ ಅಂತರದಿಂದ ಸೋತು ಮುಜುಗರಕ್ಕೆ ಒಳಗಾಗಿದ್ದ ಸಿದ್ದರಾಮಯ್ಯ ಮೈಸೂರಿಗೆ ಬರಲು ಮುಂದಾಗಿರಲಿಲ್ಲ.

    ಇಂದು ಮೈಸೂರಿನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ತಂಗಲಿದ್ದು, ನಾಳೆ ಬೆಳಗ್ಗೆ ಸುಮಾರು 9.30 ಕ್ಕೆ ಖಾಸಗಿ ಹೋಟೆಲ್ ನಲ್ಲಿ ಮೈಸೂರು – ಚಾಮರಾಜನಗರ ಜಿಲ್ಲೆಯ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳ ಜೊತೆ ಸಭೆ ನಡೆಸಲಿದ್ದಾರೆ. ಗೆದ್ದವರು ಮತ್ತು ಸೋತವರು ಜೊತೆ ಆತ್ಮಾವಲೋಕನ ಮಾಡಲಿದ್ದು, ಚಾಮುಂಡೇಶ್ವರಿ ಕ್ಷೇತ್ರದ ತಮ್ಮ ಸೋಲಿನ ಬಗ್ಗೆಯೂ ನಾಳೆಯೇ ಚರ್ಚೆ ನಡೆಯಲಿದೆ.

  • ಬಂಗಾರದ ಕಿರೀಟ ತೊಡಿಸಿ, ಬೆಳ್ಳಿ ಖಡ್ಗ ನೀಡಿ ಸಿಎಂ ಗೆ ಸನ್ಮಾನ

    ಬಂಗಾರದ ಕಿರೀಟ ತೊಡಿಸಿ, ಬೆಳ್ಳಿ ಖಡ್ಗ ನೀಡಿ ಸಿಎಂ ಗೆ ಸನ್ಮಾನ

    ಕಲಬುರಗಿ: ಜಿಲ್ಲೆಯ ಅಫಜಲಪುರದಲ್ಲಿ ನಡೆಯುತ್ತಿರುವ ರಾಜ್ಯ ಸರ್ಕಾರದ ಸಾಧನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಂಗಾರದ ಕಿರೀಟ ತೊಡಿಸಿ, ಬೆಳ್ಳಿ ಖಡ್ಗ ನೀಡಿ ಸನ್ಮಾನಿಸಲಾಗಿದೆ.

    ನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಸಾಧನಾ ಸಮಾವೇಶದಲ್ಲಿ ಅಫಜಲಪುರ ಶಾಸಕ ಮಾಲಿಕಯ್ಯ ಗುತ್ತೇದಾರ್ ಸಿಎಂ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಿದರು. ಈ ಹಿಂದೆ ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಲಾಗಿದ್ದ ಹೂಬ್ಲೋಟ್ ವಾಚ್ ಪ್ರಕರಣದ ಬಳಿಕ, ಸಿಎಂ ಉಡುಗೊರೆ ಸ್ವೀಕರಿಸಲು ಹಿಂದು ಮುಂದು ನೋಡುತ್ತಿದ್ದರು. ಆದರೆ ಇಂದು ಮಾತ್ರ ಸಂತೋಷವಾಗಿಯೇ ಚಿನ್ನದ ಕಿರೀಟವನ್ನು ಧರಿಸಿದ್ದಾರೆ.

    ಸಮಾರಂಭದ ಮುನ್ನ ಕಲಬುರಗಿಯ ಅಫಜಲಪುರದ ಅಡಿಗಲ್ಲು ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯ 117 ಕೋಟಿಯ 24 ವಿವಿಧ ಕಾಮಗಾರಿಗೆ ಚಾಲನೆ ನೀಡಿದರು.

    ನಂತರ ಸಾಧನಾ ಸಮಾವೇಶದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಯಡಿಯೂರಪ್ಪ ಇಲ್ಲಿಯವರೆಗೆ ಸತ್ಯವೇ ಹೇಳಿಲ್ಲ. ಬರಿ ಪುಂಗಿ ಬಿಡುತ್ತಾರೆ. ಆದರೆ ಅವರ ಬುಟ್ಟಿಯಲ್ಲಿ ಹಾವು ಇಲ್ಲ, ಬರಿ ಪುಂಗಿ ಬಿಡುವ ಕೆಲಸ ಮಾಡುತ್ತಾರೆ. ಪದೇ ಪದೇ ಸಿಎಂ ಭ್ರಷ್ಟಾಚಾರದ ದಾಖಲೆ ಬಿಡುಗಡೆ ಮಾಡುವುದಾಗಿ ಹೇಳುತ್ತಾರೆ. ಅವರ ಬಳಿ ದಾಖಲೆ ಇದ್ದರೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.

    ರಾಜ್ಯದ ಹಲವೆಡೆ ಬಿಜೆಪಿಯವರು ಕೋಮು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಕೇಂದ್ರ ಸಚಿವರಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರು ಸಿದ್ರಾಮಯ್ಯ ನಿಮಗೆ ತಪರಾಕಿ ಬೇಕಾ? ಸಾಕಾ? ಎನ್ನುತ್ತಾರೆ. ಇದು ಕೇಂದ್ರ ಸಚಿವರಾಗಿ ಮಾತನಾಡುವ ಶೈಲಿಯಾ ಇದು? ಉತ್ತರ ಕನ್ನಡದಲ್ಲಿ ಬೆಂಕಿ ಹಚ್ಚಿದ್ದು ಬಿಜೆಪಿಯವರೇ ಅನ್ನುವುದಕ್ಕೆ ಇಷ್ಟು ಸಾಕು ಅಲ್ವಾ ಎಂದು ಪ್ರಶ್ನಿಸಿದರು.

    ಬಿಜೆಪಿ ನಾಯಕರ ಬಹಿರಂಗ ಚರ್ಚೆ ವಿಚಾರವಾಗಿ ಪ್ರತಿಕ್ರಿಯಸಿದ ಅವರು, ನಾವು ಅಭಿವೃದ್ಧಿ ವಿಚಾರವಾಗಿ ಎಲ್ಲಿಗೆ ಕರೆದರೂ ಬಂದು ಚರ್ಚೆ ನಡೆಸಲು ಸಿದ್ಧವಿರುವುದಾಗಿ ತಿಳಿಸಿದರು. ಮತ್ತೊಮ್ಮೆ ಚುನಾವಣೆಯಲ್ಲಿ ಇವಿಎಂ ಬಳಕೆ ಕುರಿತು ಮಾತನಾಡಿದ ಅವರು, ಮತದಾನ ಯಂತ್ರದ ಮೇಲೆ ನಮಗೆ ವಿಶ್ವಾಸವಿಲ್ಲ. ಹೀಗಾಗಿ ಬ್ಯಾಲೆಟ್ ಪೇಪರ್ ಬಳಕೆ ಉತ್ತಮ. ಹೀಗಾಗಿ ಐಟಿ-ಬಿಟಿ ಇಲಾಖೆಯಿಂದ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವುದಾಗಿ ತಿಳಿಸಿದರು.