Tag: honour

  • ವಿದೇಶದಲ್ಲಿ ಗೆಳೆಯರಾದ ದರ್ಶನ್- ಸೃಜನ್‍ಗೆ ಸನ್ಮಾನ

    ವಿದೇಶದಲ್ಲಿ ಗೆಳೆಯರಾದ ದರ್ಶನ್- ಸೃಜನ್‍ಗೆ ಸನ್ಮಾನ

    ಬೆಂಗಳೂರು: 63ನೇ ಕನ್ನಡ ರಾಜ್ಯೋತ್ಸವದಂದು ಗೆಳೆಯರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಅವರನ್ನು ವಿದೇಶದಲ್ಲಿ ಗೌರವಿಸಲಾಗಿದೆ.

    ಇತ್ತೀಚೆಗೆ ಕತಾರ್ ದೇಶದಲ್ಲಿ 63ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಈ ವೇಳೆ ಆ ದೇಶದ ಕನ್ನಡ ಸಂಘವೊಂದು ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಿತ್ತು. ಈ ಕಾರ್ಯಕ್ರಮಕ್ಕೆ ದರ್ಶನ್ ಹಾಗೂ ಸೃಜನ್ ಲೋಕೇಶ್ ಅತಿಥಿಯಾಗಿ ಭಾಗವಹಿಸಿದ್ದರು.

    ಅಲ್ಲಿನ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದರ್ಶನ್ ಹಾಗೂ ಸೃಜನ್ ಅವರನ್ನು ಅಲ್ಲಿನ ಸಂಘ ಗೌರವಿಸಿದೆ. ಕತಾರ್ ನಲ್ಲಿದ್ದ ಕನ್ನಡಿಗರು ತಮ್ಮ ನೆಚ್ಚಿನ ನಟ ದರ್ಶನ್ ಹಾಗೂ ಸೃಜನ್ ಅವರನ್ನು ನೋಡಿ ಸಂತೋಷಪಟ್ಟಿದ್ದಾರೆ.

    ಸದ್ಯ ದರ್ಶನ್ ಹಾಗೂ ಸೃಜನ್ ಅವರನ್ನು ಸನ್ಮಾನ ಮಾಡುತ್ತಿರುವ ಫೋಟೋವನ್ನು ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ತಮ್ಮ ನೆಚ್ಚಿನ ನಟನನ್ನು ಸನ್ಮಾನ ಮಾಡಿರುವುದು ಅಭಿಮಾನಿಗಳಲ್ಲಿ ಖುಷಿ ತಂದಿದೆ.

    ಕಳೆದ ವರ್ಷ ದರ್ಶನ್ ಅವರು ಬ್ರಿಟಿಷ್ ಪಾರ್ಲಿಮೆಂಟ್‍ನಲ್ಲಿ ಯುಕೆ ಸರ್ಕಾರ ನೀಡಿದ್ದ ಗ್ಲೋಬಲ್ ಡೈವರ್ಸಿಟಿ ಪ್ರಶಸ್ತಿಯನ್ನು ಸ್ವೀಕರಿಸಿದ್ದರು. ಈ ಮೂಲಕ ಪ್ರಶಸ್ತಿಗೆ ಭಾಜನಾಗಿರುವ ದಕ್ಷಿಣ ಭಾರತ ಹಾಗೂ ಕನ್ನಡ ಮೊದಲ ಎಂಬ ಹೆಗ್ಗಳಿಕೆಗೆ ದರ್ಶನ್ ಅವರು ಪಾತ್ರರಾಗಿದ್ದರು.

    ಲಂಡನ್ ಸರ್ಕಾರದಿಂದ ಪ್ರತಿ ವರ್ಷ ವಿವಿಧ ವಲಯಗಳಲ್ಲಿ ಸೇವೆ ಸಲ್ಲಿಸಿರುವ ಸಾಧಕರಿಗೆ ಸನ್ಮಾನಿಸಲಾಗುತ್ತದೆ. ಭಾರತ ಮೂಲದ ವಿರೇಂದ್ರ ಶರ್ಮಾ ಲಂಡನ್ ಪಾರ್ಲಿಮೆಂಟ್‍ನಲ್ಲಿ ಸಂಸದರಾಗಿದ್ದು, ಈ ಹಿಂದೆ ಸಲ್ಮಾನ್ ಖಾನ್, ಅಮಿತಾಬ್ ಬಚ್ಚನ್ ಸೇರಿದಂತೆ ಹಲವರಿಗೆ ಗೌರವ ಪ್ರಶಸ್ತಿ ನೀಡಿ ಸನ್ಮಾನಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಬೆಳ್ಳಿ ಖಡ್ಗ, ಹಾರ, ಪೇಟ ತೊಡಿಸಿ ಮಾಜಿ ಸಿಎಂಗೆ ಮುಸ್ಲಿಂ ಧರ್ಮಗುರು ಸನ್ಮಾನ

    ಬೆಳ್ಳಿ ಖಡ್ಗ, ಹಾರ, ಪೇಟ ತೊಡಿಸಿ ಮಾಜಿ ಸಿಎಂಗೆ ಮುಸ್ಲಿಂ ಧರ್ಮಗುರು ಸನ್ಮಾನ

    ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಾವೇರಿ ನಿವಾಸದಲ್ಲಿ ಮುಸ್ಲಿಂ ಧರ್ಮಗುರು ಸನ್ಮಾನ ಮಾಡಿದ್ದಾರೆ. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಮೀರ್ ಅಹಮ್ಮದ್ ನೇತೃತ್ವದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸನ್ಮಾನ ಮಾಡಲಾಯಿತು.

    ಬೆಳ್ಳಿ ಖಡ್ಗ, ಬೆಳ್ಳಿ ಹಾರ, ಪೇಟ ತೊಡಿಸಿ ಮುಸ್ಲಿಂ ಧರ್ಮಗುರು ಮಾಜಿ ಸಿಎಂಗೆ ಸನ್ಮಾನ ಮಾಡಿದರು. ಸನ್ಮಾನದ ಬಳಿಕ ಸಿದ್ದರಾಮಯ್ಯ ಮಾತನಾಡಿ, ರಾಜಕೀಯ ಕಾರಣಗಳಿಗೆ ಬಿಜೆಪಿ ಟಿಪ್ಪು ಜಯಂತಿಯನ್ನು ವಿರೋಧಿಸುತ್ತಿದೆ. ಟಿಪ್ಪು ಖಡ್ಗ ಕೈಯಲ್ಲಿ ಹಿಡಿದು ಪೇಟ ತೊಟ್ಟಾಗ ಬಿಜೆಪಿ ಮುಖಂಡರು ಯಾರೂ ವಿರೋಧ ಮಾಡಲಿಲ್ಲ. ಅಲ್ಲದೇ ಟಿಪ್ಪು ಪುಸ್ತಕಕ್ಕೆ ಜಗದೀಶ್ ಶೆಟ್ಟರ್ ಮುನ್ನುಡಿ ಬರೆದಿದ್ದಾರೆ. ಬಿಜೆಪಿ ನಾಯಕರು ಟಿಪ್ಪು ಬಗ್ಗೆ ಜನರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದರು.

    ಬಿಜೆಪಿಯವರು ಗೋಮುಖ ವ್ಯಾಘ್ರಗಳು:
    ಟಿಪ್ಪು ಸುಲ್ತಾನ್ ಕಾಲದಲ್ಲಿ ಸಾಮರಸ್ಯವಿತ್ತು. ನಮ್ಮ ಕಾಲದಲ್ಲಿ 13 ಜಯಂತಿಗಳನ್ನು ಮಾಡಿದ್ದೇವೆ. ಕಿತ್ತೂರು ರಾಣಿ ಚೆನ್ನಮ್ಮ, ಹೇಮರೆಡ್ಡಿ ಮಲ್ಲಮ್ಮ, ವಾಲ್ಮೀಕಿ ಸೇರಿದಂತೆ 13 ಜನರ ಜಯಂತಿ ಮಾಡಿದ್ದೇವೆ. ಅದರಲ್ಲಿ ಟಿಪ್ಪು ಜಯಂತಿ ಕೂಡ ಒಂದು. ಬಿಜೆಪಿಯವರು ದುರುದ್ದೇಶದಿಂದ ರಾಜಕೀಯಕ್ಕಾಗಿ ವಿರೋಧ ಮಾಡುತ್ತಿದ್ದು, ಅವರು ಗೋಮುಖ ವ್ಯಾಘ್ರಗಳು. ಟಿಪ್ಪು ಹಿಂದು ವಿರೋಧಿ ಎಂಬುದು ಸುಳ್ಳು. ಅವರ ಕಾಲದಲ್ಲಿ ಹಲವು ಹಿಂದುಗಳು ಪ್ರಮುಖ ಹುದ್ದೆಯಲ್ಲಿದ್ದರು ಎಂದು ಹೇಳುತ್ತಾ ಮಾಜಿ ಸಿಎಂ ರಾಜ್ಯದ ಜನರಿಗೆ ಟಿಪ್ಪು ಜಯಂತಿಯ ಶುಭಾಶಯ ತಿಳಿಸಿದರು.

    ಸಿಎಂ, ಡಿಸಿಎಂ ಗೈರಿಗೆ ಸ್ಪಷ್ಟನೆ:
    ಸಿಎಂ ಕುಮಾರಸ್ವಾಮಿ ಹಾಗೂ ಡಿಸಿಎಂ ಪರಮೇಶ್ವರ್ ಅವರು ಟಿಪ್ಪು ಕಾರ್ಯಕ್ರಮಕ್ಕೆ ಗೈರಾದ ಬಗ್ಗೆ ಮಾತನಾಡಿದ ಅವರು, ಸಿಎಂ ಆರೋಗ್ಯದ ದೃಷ್ಟಿಯಿಂದ ಕಾರ್ಯಕ್ರಮಕ್ಕೆ ಬರುತ್ತಿಲ್ಲ ಎಂಬ ವಿಷಯವನ್ನು ಕೇಳಿದೆ. ಸಿಎಂ ಹಾಗೂ ಡಿಸಿಎಂ ಅವರು ಕಾರಣಾಂತರಗಳಿಂದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ. ಅವರ ಪರವಾಗಿ ಸರ್ಕಾರದ ವತಿಯಿಂದ ಸಚಿವರಾದ ಜಮೀರ್ ಅಹಮ್ಮದ್, ಜಯಮಾಲಾ, ಶಾಸಕ ರೋಷನ್ ಬೇಗ್ ಹಾಗೂ ಹ್ಯಾರಿಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

    ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಸಿಎಂ, ಡಿಸಿಎಂ ಗೈರಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮ್ಮದ್ ಪ್ರತಿಕ್ರಿಯಿಸಿದ್ದಾರೆ. ಸಿಎಂ ಕುಮಾರಸ್ವಾಮಿ ಅವರ ಆರೋಗ್ಯ ಸರಿಯಿಲ್ಲ. ಅದೇ ಕಾರಣಕ್ಕೆ ಕುಮಾರಸ್ವಾಮಿ ಹಾಜರಾಗುತ್ತಿಲ್ಲ. ಇದನ್ನ ಅವರೇ ಈಗಾಗಲೇ ಹೇಳಿದ್ದಾರೆ. ಮಾಜಿ ಸಚಿವ ಚೆನ್ನಿಗಪ್ಪ ಆರೋಗ್ಯ ವಿಚಾರಿಸಲು ಪರಮೇಶ್ವರ್ ತೆರಳಿದ್ದಾರೆ. ಚೆನ್ನಿಗಪ್ಪ ಅವರ ಅರೋಗ್ಯ ತೀವ್ರ ಹದಗೆಟ್ಟಿದೆ. ಸಿಂಗಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗಾಗಿ ಚೆನ್ನಿಗಪ್ಪರನ್ನ ನೋಡಲು ವಿದೇಶಕ್ಕೆ ತೆರಳಿದ್ದಾರೆ. ಸಂಜೆ 3 ಗಂಟೆಗೆ ಪರಮೇಶ್ವರ್ ವಾಪಸ್ಸಾಗುತ್ತಿದ್ದಾರೆ ಎಂದರು.

    ಈ ಮೊದಲು ಸಂಜೆ 6.30ಕ್ಕೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ ಈಗ ಕಾರ್ಯಕ್ರಮದ ಸಮಯದಲ್ಲಿ ಬದಲಾವಣೆಯಾಗಿದೆ. ಹಾಗಾಗಿ ಪರಮೇಶ್ವರ್ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಮೊದಲಿನಿಂದಲೂ ಬಿಜೆಪಿಯವರು ವಿರೋಧ ಮಾಡುತ್ತಿದ್ದಾರೆ. ಇದು ನಾಲ್ಕನೇ ಟಿಪ್ಪು ಜಯಂತಿ ಆಚರಣೆಯಾಗಿದ್ದು, ಕೇವಲ ರಾಜಕೀಯ ಲಾಭಕ್ಕಾಗಿ ವಿರೋಧ ಮಾಡುತ್ತಿದ್ದಾರೆ ಅಷ್ಟೇ ಎಂದು ಸಚಿವ ಜಮೀರ್ ಅಹಮ್ಮದ್ ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಕಾಳಾ ಸಿನಿಮಾ ನೋಡಿದವರನ್ನು ಸನ್ಮಾನಿಸಿದ ಕನ್ನಡ ಪರ ಹೋರಾಟಗಾರರು

    ಕಾಳಾ ಸಿನಿಮಾ ನೋಡಿದವರನ್ನು ಸನ್ಮಾನಿಸಿದ ಕನ್ನಡ ಪರ ಹೋರಾಟಗಾರರು

    ಬೆಂಗಳೂರು: ನಗರದ ಜಾಲಹಳ್ಳಿಯ ಭಾರತಿ ಚಿತ್ರಮಂದಿರದಲ್ಲಿ ಕಾಳಾ ಸಿನಿಮಾ ನೋಡಿದ ಕೆಲವರಿಗೆ ಕನ್ನಡ ಪರ ಹೋರಾಟಗಾರರು ಸನ್ಮಾನ ಮಾಡಿ ಅಣಕು ಪ್ರದರ್ಶನ ಮಾಡಿದ್ದಾರೆ.

    ಕನ್ನಡಪರ ಸಂಘಟನೆಗಳ ಸಾಕಷ್ಟು ವಿರೋಧದ ನಡುವೆಯು ಕೆಲವು ಚಿತ್ರ ಮಂದಿರಗಳಲ್ಲಿ ರಜಿನಿಕಾಂತ್ ಅಭಿನಯದ ಕಾಳಾ ಚಿತ್ರ ಪ್ರದರ್ಶನಗೊಂಡಿದೆ. ಪ್ರತಿಭಟನೆ ಮಾಡಿದರೆ ಪೊಲೀಸರು ಬಂಧಿಸುತ್ತಾರೆ ಎಂದು ಚಿತ್ರ ನೋಡಿ ಹೊರ ಬಂದ ಕೆಲವರಿಗೆ ಮೈಸೂರು ಪೇಟಾ, ಶಾಲು, ಹೂವಿನ ಹಾರ ಹಾಕಿ ಕನ್ನಡ ಪರ ಹೋರಾಟಗಾರರು ಸನ್ಮಾನ ಮಾಡಿ ಅಣಕವಾಡಿದ್ದಾರೆ.

    ಸನ್ಮಾನ ಮಾಡಿದ ನಂತರ ಮಾತನಾಡಿದ ಹೋರಾಟಗಾರರು, ಕನ್ನಡ ದ್ರೋಹಿಗಳನ್ನು ಹುಡುಕುತ್ತಾ ಇದ್ದೀವಿ, ಅದು ನೀವೆ ಅಂತಾ ಸನ್ಮಾನ ಮಾಡಿದ್ದೇವೆ, ಸ್ವಾಭಿಮಾನಕ್ಕಿಂತ ಸಿನಿಮಾನೇ ಜಾಸ್ತಿ ಆಯಿತಾ ಅಂತಾ ಪ್ರಶ್ನಿಸಿದ್ದೇವೆ. ಸನ್ಮಾನ ಸ್ವೀಕರಿಸಿದ ಕೆಲ ಪ್ರೇಕ್ಷಕರು ಕ್ಷಮೆಯಾಚಿಸಿದರು. ಪೊಲೀಸರು ಸನ್ಮಾನ ಮಾಡುತ್ತಾರೆ ಎಂದು ಹೋರಾಟಗಾರರಿಗೆ ಅನುವು ಮಾಡಿಕೊಟ್ಟರು ಅಂತಾ ಹೇಳಿದರು.

    ಜ್ಯುರಾಸಿಕ್ ವಲ್ರ್ಡ್ ಹಾಲಿವುಡ್ ಸಿನಿಮಾ ಟಿಕೆಟ್ ನೀಡಿ ಕಾಳಾ ಚಿತ್ರವನ್ನು ನಗರದ ಊರ್ವಶಿ ಚಿತ್ರಮಂದಿರದಲ್ಲಿ ನಿನ್ನೆ ಪ್ರದರ್ಶನ ಮಾಡಿದ್ದು ಪ್ರೇಕ್ಷಕರ ಆಕ್ರೋಶಕ್ಕೆ ಗುರಿಯಾಗಿತ್ತು. ಇದನ್ನೂ ಓದಿ:ಜ್ಯುರಾಸಿಕ್ ವರ್ಲ್ಡ್ ಟಿಕೆಟ್ ನೀಡಿ ಕಾಲಾ ಚಿತ್ರ ಪ್ರದರ್ಶನ: ರೊಚ್ಚಿಗೆದ್ದ ಪ್ರೇಕ್ಷಕರಿಂದ ಥಿಯೇಟರ್ ಗೆ ಮುತ್ತಿಗೆ

  • ದೇಶಕ್ಕಾಗಿ ಹುತಾತ್ಮರಾದ ಸೈನಿಕರಿಗೆ ಸರ್ಕಾರದಿಂದ ವಿಶೇಷ ಗೌರವ: ಏನಿದು ಹೊಸ ವೆಬ್‍ಸೈಟ್? ಮಾಹಿತಿ ಪಡೆಯೋದು ಹೇಗೆ?

    ದೇಶಕ್ಕಾಗಿ ಹುತಾತ್ಮರಾದ ಸೈನಿಕರಿಗೆ ಸರ್ಕಾರದಿಂದ ವಿಶೇಷ ಗೌರವ: ಏನಿದು ಹೊಸ ವೆಬ್‍ಸೈಟ್? ಮಾಹಿತಿ ಪಡೆಯೋದು ಹೇಗೆ?

    ನವದೆಹಲಿ: ಇದೂವರೆಗೂ ಎಷ್ಟು ಮಂದಿಗೆ ಭಾರತ ಸರ್ಕಾರ ಪರಮವೀರ ಚಕ್ರ ಗೌರವ ನೀಡಿದೆ? ಪರಮವೀರ ಚಕ್ರ ಪಡೆದ ಸೈನಿಕರ ಸಾಹಸ ಏನು? ಈ ಪ್ರಶ್ನೆಗಳಿಗೆ ಇಲ್ಲಿಯವರೆಗೆ ಸುಲಭವಾಗಿ ಬೇಗನೆ ಉತ್ತರ ಸಿಗುತ್ತಿರಲಿಲ್ಲ. ಆದರೆ ಇನ್ನು ಮುಂದೆ ನೀವು ಬೆರಳ ತುದಿಯಲ್ಲಿ ಪರಮವೀರ ಚಕ್ರ, ಮಹಾವೀರ ಚಕ್ರ ಸೇರಿದಂತೆ ಶೌರ್ಯ ಗೌರವಕ್ಕೆ ಪಾತ್ರರಾದ ಸೈನಿಕರ ಮಾಹಿತಿಯನ್ನು ಪಡೆಯಬಹುದು.

    ದೇಶಕ್ಕಾಗಿ ಮಡಿದ ಸೈನಿಕರಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರಾಷ್ಟ್ರಪತಿಗಳ ಗೌರವ ಪದಕ ಪಡೆದ ಸೈನಿಕರ ಮಾಹಿತಿ ತಿಳಿಸುವ ಸಂಬಂಧ ಹೊಸ ವೆಬ್‍ಸೈಟನ್ನು ಆರಂಭಿಸಿದೆ. 71ನೇ ಸ್ವಾತಂತ್ರ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ http://gallantryawards.gov.in/ ವೆಬ್‍ಸೈಟನ್ನು ಲೋಕಾರ್ಪಣೆ ಮಾಡಿದ್ದಾರೆ.

    ವೆಬ್ ಸೈಟ್ ಲೋಕಾರ್ಪಣೆ ಮಾಡಿ ಟ್ವೀಟ್ ಮಾಡಿದ ಮೋದಿ, ದೇಶಕ್ಕಾಗಿ ಶೌರ್ಯ ತೋರಿದ ಸೈನಿಕರು, ನಾಗರಿಕರ ಬಗ್ಗೆ ಜನರಿಗೆ ಮಾಹಿತಿ ನೀಡಲು ಈ ವೆಬ್‍ಸೈಟನ್ನು ತೆರೆಯಲಾಗಿದೆ. ಈ ವೆಬ್‍ಸೈಟ್ ನಲ್ಲಿ ಪ್ರಕಟವಾಗಿರುವ ವ್ಯಕ್ತಿಗೆ ಸಂಬಂಧಿಸಿದ ಮಾಹಿತಿ, ಫೋಟೋಗಳು ಇದ್ದರೆ ಕಳುಹಿಸಿಕೊಡಿ. ಈ ವೆಬ್‍ಸೈಟ್ ಮತ್ತಷ್ಟು ಸುಧಾರಣೆ ಮಾಡಲು ನೀವು ಸಲಹೆ, ಪ್ರತಿಕ್ರಿಯೆಗಳನ್ನು ನೀಡಬಹುದು ಎಂದು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

    ವೆಬ್‍ಸೈಟ್ ನಲ್ಲಿ ಏನಿದೆ?
    ಪರಮ ವೀರ ಚಕ್ರ, ಮಹಾ ವೀರ ಚಕ್ರ, ವಿರ ಚಕ್ರ, ಅಶೋಕ ಚಕ್ರ, ಕೀರ್ತಿ ಚಕ್ರ, ಶೌರ್ಯ ಚಕ್ರ ಪಡೆದವರ ಫೋಟೋ ಮತ್ತು ವಿವರಗಳನ್ನು ನೀಡಲಾಗಿದೆ. 1950 ರಿಂದ ಪ್ರಾರಂಭವಾಗಿ 2017ರ ವರೆಗೆ ಈ ಗೌರವ ಪಡೆದ ವ್ಯಕ್ತಿಗಳ ವಿವರ ಈ ತಾಣದಲ್ಲಿ ಇದೆ.

    ಈ ಪದಕವನ್ನು ಯಾಕೆ ನೀಡಲಾಗುತ್ತದೆ? ಈ ಪದಕದಲ್ಲಿರುವ ವಿಶೇಷತೆ ಏನು? ಈ ಗೌರವ ಪಡೆಯಲು ಬೇಕಾಗಿರುವ ಮಾನದಂಡಗಳು ಏನು ಎನ್ನುವುದನ್ನು ವಿವರಿಸಲಾಗಿದೆ. 2006 ನೇ ಇಸ್ವಿಯಿಂದ ರಾಷ್ಟ್ರಪತಿಗಳು ಚಕ್ರ ಪ್ರಶಸ್ತಿಯನ್ನು ಪ್ರದಾನ ಮಾಡುತ್ತಿರುವ ಫೋಟೋ/ ವಿಡಿಯೋಗಳು ಈ ತಾಣದಲ್ಲಿ ಸಿಗುತ್ತದೆ.

    ಮಾಹಿತಿ ಪಡೆಯುವುದು ಹೇಗೆ?
    ಹೋಮ್ ಪೇಜ್ ನಲ್ಲಿರುವ awardees ವಿಭಾಗಕ್ಕೆ ಹೋದರೆ ಪರಮ ವೀರ ಚಕ್ರ, ಮಹಾ ವೀರ ಚಕ್ರ, ವಿರ ಚಕ್ರ, ಅಶೋಕ ಚಕ್ರ, ಕೀರ್ತಿ ಚಕ್ರ, ಶೌರ್ಯ ಚಕ್ರದ ಫೋಟೋ ಕಾಣುತ್ತದೆ. ನೀವು ಆ ಫೋಟೋದ ಮೇಲೆ ಕ್ಲಿಕ್ ಮಾಡಿದರೆ ಇದೂವರೆಗೂ ಆ ಗೌರವಕ್ಕೆ ಪಾತ್ರರಾದವರ ಫೋಟೋಗಳು ಕಾಣುತ್ತದೆ. ಈ ಫೋಟೋದ ಮೇಲೆ ಕ್ಲಿಕ್ ಮಾಡಿದರೆ ಆ ವ್ಯಕ್ತಿಗೆ ಸಂಬಂಧಿಸಿದ ವಿವರ ಇರುವ ಹೊಸ ಪೇಜ್ ಓಪನ್ ಆಗುತ್ತದೆ.