Tag: Hooghly

  • ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಬಾಂಬ್ ಸ್ಫೋಟ- ಅಪ್ರಾಪ್ತ ಸಾವು, ಇಬ್ಬರು ಗಂಭೀರ

    ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಬಾಂಬ್ ಸ್ಫೋಟ- ಅಪ್ರಾಪ್ತ ಸಾವು, ಇಬ್ಬರು ಗಂಭೀರ

    ಕೋಲ್ಕತ್ತಾ: ಬಾಂಬ್ ಸ್ಫೋಟಗೊಂಡು (Bomb Blast) ಓರ್ವ ಅಪ್ರಾಪ್ತ ಮೃತಪಟ್ಟಿದ್ದು, ಇಬ್ಬರು ಅಪ್ರಾಪ್ತರು ಗಂಭೀರ ಗಾಯಗೊಂಡ ಘಟನೆ ಪಶ್ಚಿಮ ಬಂಗಾಳದ (West Bengal) ಹೂಗ್ಲಿ (Hooghly) ಜಿಲ್ಲೆಯಲ್ಲಿ ನಡೆದಿದೆ.

    ಪಾಂಡುವಾ (Panduva) ನೇತಾಜಿಪಲ್ಲಿ ಕಾಲೋನಿಯ ಕೊಳದ ಪಕ್ಕದಲ್ಲಿ ಮಕ್ಕಳು ಆಟವಾಡುತ್ತಿದ್ದ ಸಂದರ್ಭ ಸ್ಫೋಟ ಸಂಭವಿಸಿದೆ. ಏಕಾಏಕಿ ಆ ಪ್ರದೇಶದಲ್ಲಿ ಭಾರೀ ಶಬ್ದ ಕೇಳಿಬಂದಿದೆ. ತಕ್ಷಣವೇ ಸ್ಥಳೀಯರು ಘಟನಾ ಸ್ಥಳಕ್ಕೆ ಧಾವಿಸಿ ನೋಡಿದಾಗ ಮಕ್ಕಳು ಪ್ರಜ್ಞಾಹೀನ ಸ್ಥಿತಿಯಲ್ಲಿರುವುದು ಗಮನಿಸಿದ್ದಾರೆ. ಬಾಂಬ್ ಸ್ಫೋಟದಲ್ಲಿ ಮೃತಪಟ್ಟ ಬಾಲಕನನ್ನು ರಾಜ್ ಬಿಸ್ವಾಸ್ ಎಂದು ಗುರುತಿಸಲಾಗಿದ್ದು, ರೂಪಮ್ ಬಲ್ಲವ್ (13) ಮತ್ತು ಸೌರವ್ ಚೌಧರಿ (8) ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಮಹಿಳೆ ಕಿಡ್ನಾಪ್ ಕೇಸ್- ಎ2 ಆರೋಪಿ ಸತೀಶ್ ಬಾಬು 8 ದಿನ ಎಸ್‍ಐಟಿ ಕಸ್ಟಡಿಗೆ

    ಸ್ಫೋಟ ಸಂಭವಿಸಿದ ವೇಳೆ ಮೂವರು ಬಾಲಕರನ್ನು ಪಾಂಡುವಾ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅಷ್ಟುಹೊತ್ತಿಗಾಗಲೇ ರಾಜ್ ಬಿಸ್ವಾಸ್ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಚುಂಚೂರ ಇಮಾಂಬರ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಹೂಗ್ಲಿ ಗ್ರಾಮಾಂತರ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದಾಗ ಹೃದಯಾಘಾತ- ಶಿಕ್ಷಕ ದುರ್ಮರಣ

  • ನಾಪತ್ತೆಯಾಗಿದ್ದ ಬಿಜೆಪಿ ಕಾರ್ಯಕರ್ತ ಶವವಾಗಿ ಪತ್ತೆ: ಟಿಎಂಸಿ ಕೈವಾಡದ ಆರೋಪ

    ನಾಪತ್ತೆಯಾಗಿದ್ದ ಬಿಜೆಪಿ ಕಾರ್ಯಕರ್ತ ಶವವಾಗಿ ಪತ್ತೆ: ಟಿಎಂಸಿ ಕೈವಾಡದ ಆರೋಪ

    ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಕೊಲೆ ಪ್ರಕರಣದ ಆರೋಪಿಯಾಗಿದ್ದ ಬಿಜೆಪಿ ಕಾರ್ಯಕರ್ತ ಶವವಾಗಿ ಪತ್ತೆಯಾದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.

    ಕಾಶೀನಾಥ್ ಘೋಷ್ (45) ಕೊಲೆಯಾದ ಬಿಜೆಪಿ ಕಾರ್ಯಕರ್ತ. ಕಾಶೀನಾಥ್ ಟಿಎಂಸಿ ಕಾರ್ಯಕರ್ತ ಲಾಲ್‍ಚಂದ್ ಬಾಗ್ ಹತ್ಯೆ ಪ್ರಕರಣದ ಆರೋಪಿಯಾಗಿದ್ದ. ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಕಾಶೀನಾಥ್ ಇಂದು ಹೂಗ್ಲಿ ಜಿಲ್ಲೆಯ ಗೋಘಾಟ್ ಪ್ರದೇಶದ ಕಾಲುವೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

    ನಕುಂದಾ ಎಂಬ ಪ್ರದೇಶದಲ್ಲಿ ಜುಲೈ 22ರಂದು ಲಾಲ್‍ಚಂದ್ ಕೊಲೆಯಾಗಿದ್ದ. ಈ ಪ್ರಕರಣದಲ್ಲಿ ಕಾಶೀನಾಥ್ ಭಾಗಿಯಾಗಿದ್ದ ಎಂದು ಟಿಎಂಸಿ ಗಂಭೀರವಾಗಿ ಆರೋಪಿಸಿತ್ತು. ಆದರೆ ಬಿಜೆಪಿ ನಾಯಕರು ಆರೋಪವನ್ನು ತಳ್ಳಿ ಹಾಕಿ, ನಿಜವಾದ ಹಂತಕರನ್ನು ರಕ್ಷಿಸಲು ಟಿಎಂಸಿ ನಾಯಕರು ಹೀಗೆ ಆರೋಪಿಸುತ್ತಿದ್ದಾರೆ ಎಂದು ಹೇಳಿದ್ದರು. ಆದರೆ ಈಗ ಕಾಶೀನಾಥ್ ಶವವಾಗಿ ಪತ್ತೆಯಾಗಿದ್ದು, ಅನೇಕ ಅನುಮಾನಗಳಿಗೆ ಕಾರಣವಾಗಿದೆ.

    ಈ ಕುರಿತು ಟ್ವೀಟ್ ಮಾಡಿರುವ ಬಂಗಾಳ ಬಿಜೆಪಿಯು, ಅರಂಬಾಗ್‍ನ ಬಿಜೆಪಿ ಬೂತ್ ಅಧ್ಯಕ್ಷ ಕಾಶೀನಾಥ್ ಘೋಷ್ ಅವರನ್ನು ಟಿಎಂಸಿ ಗೂಂಡಾಗಳು ಕ್ರೂರವಾಗಿ ಹತ್ಯೆ ಮಾಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಶೇ.44ರಷ್ಟು ಮತ ಗಳಿಸಿದೆ. ಬಿಜೆಪಿ ನಾಯಕರ ಪಟ್ಟಿ ಸಿದ್ಧಪಡಿಸಿರುವ ಟಿಎಂಸಿ ಈ ಕೃತ್ಯ ಎಸಗಿದೆ. 2021ರ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪರ ಬರುವ ಫಲಿತಾಂಶ ತಡೆಯಲು ಸಾಧ್ಯವಿಲ್ಲ. ಹುತಾತ್ಮ ಸಂಖ್ಯೆ 74 ಎಂದು ಬರೆದುಕೊಂಡಿದೆ.

    ಕಾಶೀನಾಥ್ ದೇಹದ ಮೇಲೆ ಗಾಯಗಳು ಕಂಡು ಬಂದಿದ್ದು, ಪ್ರಾಥಮಿಕ ವದಿಯ ಪ್ರಕಾರ ಇದೊಂದು ಹತ್ಯೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಈ ಸಂಬಂಧ ತನಿಖೆ ನಡೆಸಲಾಗುತ್ತದೆ ಎಂದು ಗೋಘಾಟ್ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿ ಸಮೀರ್ ಡೇ ತಿಳಿಸಿದ್ದಾರೆ.