Tag: horn

  • ವನ್ಯಜೀವಿಗಳ ವಸ್ತುಗಳನ್ನಿಟ್ಟುಕೊಂಡವರು 2-3 ತಿಂಗಳಲ್ಲಿ ವಾಪಸ್ ಮಾಡಬೇಕು: ಡೆಡ್‌ಲೈನ್ ನೀಡಿದ ಖಂಡ್ರೆ

    ವನ್ಯಜೀವಿಗಳ ವಸ್ತುಗಳನ್ನಿಟ್ಟುಕೊಂಡವರು 2-3 ತಿಂಗಳಲ್ಲಿ ವಾಪಸ್ ಮಾಡಬೇಕು: ಡೆಡ್‌ಲೈನ್ ನೀಡಿದ ಖಂಡ್ರೆ

    ಬೀದರ್: ವನ್ಯಜೀವಿಗಳ ಹಲ್ಲು, ಉಗುರು, ಅಂಗಾಂಗಗಳು, ಚರ್ಮ ಹಾಗೂ ಕೊಂಬುಗಳನ್ನು ಇಟ್ಟುಕೊಂಡವರು 2 ರಿಂದ 3 ತಿಂಗಲ್ಲಿ ವಾಪಸ್ ಮಾಡಬೇಕು ಎಂಬ ತೀರ್ಮಾನ ಮಾಡಿದ್ದೇವೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ (Eshwara Khandre) ಹೇಳಿಕೆ ನೀಡಿದ್ದಾರೆ.

    ಹಲವು ವರ್ಷಗಳಿಂದ ವನ್ಯಜೀವಿಗಳ (Wild Animal) ಉತ್ಪನ್ನಗಳನ್ನಿಟ್ಟುಕೊಂಡವರಿಗೆ ಬೀದರ್‌ನಲ್ಲಿ ಅರಣ್ಯ ಸಚಿವರು ಡೆಡ್‌ಲೈನ್ ನೀಡಿದ್ದಾರೆ. ಈಗಾಗಲೇ ಎಲ್ಲಾ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಸಭೆ ಮಾಡಿದ್ದು ಡೆಡ್‌ಲೈನ್ ಬಗ್ಗೆ ಕರಡು ಪ್ರತಿ ರೆಡಿ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

    ಜನರಿಗೆ ಈ ಬಗ್ಗೆ ಅರಿವು ಇಲ್ಲ. ಹೀಗಾಗಿ ಅವುಗಳನ್ನು ತಮ್ಮಲ್ಲಿಯೇ ಇರಿಸಿಕೊಂಡಿದ್ದು, ಅವುಗಳನ್ನು ಅರಣ್ಯ ಇಲಾಖೆಗೆ ವಾಪಸ್ ಕೊಡಲು ಒಂದು ಅವಕಾಶ ನೀಡುತ್ತಿದ್ದೇವೆ. ಸಿಎಂ ಜೊತೆ ಚರ್ಚೆ ಮಾಡಿ ತಿರ್ಮಾನ ಮಾಡಿದ್ದು, ನವೆಂಬರ್ 9ಕ್ಕೆ ಸಚಿವ ಸಂಪುಟದ ಸಭೆಯಲ್ಲಿ ಮಂಡನೆ ಮಾಡಿ ಜಾರಿಗೆ ತರುತ್ತೇವೆ ಎಂದರು. ಇದನ್ನೂ ಓದಿ: ದರ್ಶನ್ ವಿರುದ್ಧ ದೂರು ದಾಖಲಿಸಿದ್ದ ಮಹಿಳೆಗೆ ಪೊಲೀಸರಿಂದ ನೋಟಿಸ್

    ಕಳ್ಳಬೇಟೆ ಮಾಡೋದು ಅಪರಾಧವಿದೆ. ಅದನ್ನು ನಮ್ಮ ಇಲಾಖೆ ತಡೆಯುತ್ತದೆ ಎಂದು ಬೀದರ್‌ನಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ವನ್ಯಜೀವಿಗಳ ಉತ್ಪನ್ನ ಬಳಸುತ್ತಿರುವವರಿಗೆ ಶಾಕ್ ನೀಡಿದ್ದಾರೆ. ಇದನ್ನೂ ಓದಿ: ಡಿಕೆಶಿ ನಿಷ್ಠಾವಂತರು, ಸಿಎಂ ಆಗಲು ಅರ್ಹರಿದ್ದಾರೆ – ಸಚಿವ ಕೆ.ಎನ್ ರಾಜಣ್ಣ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಾರ್ನ್ ಹಾಕುವುದನ್ನು ಕಮ್ಮಿ ಮಾಡಿ – 32 ವರ್ಷಗಳಿಂದ ಸಂದೇಶ ಸಾರ್ತಿದ್ದಾರೆ ಸೈಲೆಂಟ್ ಕ್ರುಸೇಡರ್

    ಕೋಲ್ಕತ್ತಾ: ನಮ್ಮಲ್ಲಿ ಟ್ರಾಫಿಕ್ ಇದ್ದಾಗ ಯಾರಿಗೆ ತಾನೇ ತಾಳ್ಮೆ ಇರುತ್ತೆ? ಅರ್ಜೆಂಟ್ ಇಲ್ಲ ಅಂದ್ರೂ ಹಾರ್ನ್ ಹಾಕಿ ಗದ್ದಲ ಮಾಡಿ ಇತರ ಪ್ರಯಾಣಿಕರಿಗೂ ಕಿರಿಕಿರಿ ಮಾಡುವ ಚಟ ನಮ್ಮಲ್ಲಿ ಹೆಚ್ಚಿನವರಿಗೆ ಇದೆ. ಇಲ್ಲೊಬ್ಬ ವ್ಯಕ್ತಿ ಹಾರ್ನ್ ಹಾಕುವುದನ್ನು ಕಡಿಮೆ ಮಾಡಿ ಎಂಬ ಸಂದೇಶದೊಂದಿಗೆ ಓಡಾಡುತ್ತಿದ್ದು ಗಮನ ಸೆಳೆದಿದ್ದಾರೆ.

    ಅನವಶ್ಯಕ ಹಾರ್ನ್ ಮಾಡುವುದನ್ನು ನಿಲ್ಲಿಸಿ ಎಂಬ ಸಂದೇಶದೊಂದಿಗೆ ಓಡಾಡುತ್ತಿರುವ ಕೋಲ್ಕತ್ತಾದ ಉದ್ಯಮಿ ಕೈಲಾಶ್ ಮೆಹ್ತಾ ಕಳೆದ 32 ವರ್ಷಗಳಿಂದ ಸಂದೇಶವನ್ನು ಸಾರುತ್ತಿದ್ದಾರೆ. ಮೆಹ್ತಾ ತನ್ನನ್ನು ತಾನು ಸೈಲೆಂಟ್ ಕ್ರುಸೇಡರ್ ಎಂದು ಕರೆದಿದ್ದಾರೆ.

    ಕಳೆದ ನಾಲ್ಕು ವರ್ಷಗಳಿಂದ ಕೈಲಾಶ್ ಹಾರ್ನ್ ಮಾಡದೇ ಸ್ಕೂಟರ್ ಅನ್ನು ಓಡಿಸುತ್ತಿದು, ಹಾರ್ನ್ ಹಾಕುವುದನ್ನು ಕಡಿಮೆ ಮಾಡಿ ಎಂಬ ಪೋಸ್ಟರ್ ಕೂಡಾ ಬೆನ್ನಿಗೆ ಹಾಕಿಕೊಂಡು ಓಡಾಡುತ್ತಿದ್ದಾರೆ. ತಮ್ಮ ದ್ವಿಚಕ್ರ ವಾಹನವನ್ನು ನೋ ಹಾಂಕಿಂಗ್ ಟ್ಯಾಬ್ಲೋ ಆಗಿ ಪರಿವರ್ತಿಸಿದ್ದಾರೆ. ಇದನ್ನೂ ಓದಿ: ಪ್ರಧಾನಿ ಭದ್ರತೆಗಾಗಿ 12 ಕೋಟಿಯ ದುಬಾರಿ ಕಾರು- ವಿಶೇಷತೆ ಏನು..?

    ಹಾರ್ನ್ ಮಾಡುವುದರಿಂದ ಟ್ರಾಫಿಕ್ ಕಡಿಮೆಯಾಗುತ್ತದೆಯೇ? ಇಲ್ಲ. ನಿಯಮಗಳನ್ನು ಅನುಸರಿಸಿದರೆ ಟ್ರಾಫಿಕ್ ಅನ್ನು ಪರಿಹರಿಸಬಹುದು. ಹಾರ್ನ್ ಮಾಡಬೇಡಿ. ಆದರೆ ಬ್ರೇಕ್ ಹಾಕಿ ಎಂದು ಮೆಹ್ತಾ ಹೇಳುತ್ತಾರೆ.

    ವಾಹನ ಚಾಲಕರು ಹಾರ್ನ್ ಮಾಡುವುದನ್ನು ಕಡಿಮೆ ಮಾಡಿದರೆ ನಗರ ಹೆಚ್ಚು ನಾಗರಿಕ ಹಾಗೂ ವಾಸಯೋಗ್ಯವಾಗುತ್ತದೆ. ಅತಿಯಾದ ಹಾರ್ನ್ ಶಬ್ಧದಿಂದ ಜನರಲ್ಲಿ ಒತ್ತಡ ಹೆಚ್ಚುತ್ತದೆ. ಹೃದಯದ ಸಮಸ್ಯೆಗೂ ಕಾರಣವಾಗುತ್ತದೆ. ಹೀಗೆ ಹಾರ್ನ್ ಮಾಡುವುದರ ದುಷ್ಪರಿಣಾಮಗಳ ಬಗ್ಗೆ ನಾಗರಿಕರಿಗೆ ತಿಳುವಳಿಕೆ ನೀಡುವ ಉದ್ದೇಶದಿಂದ ಇಂತಹ ಪ್ರಯತ್ನ ಮಾಡುತ್ತಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಕಛೇರಿಯಲ್ಲಿ ಶೇ.50, ಮದುವೆಗೆ 20 ಜನ ಮಾತ್ರ ಅವಕಾಶ – ಹೊಸ ನಿಯಮ ಜಾರಿಗೊಳಿಸಿದ ದೆಹಲಿ ಸರ್ಕಾರ

    ನಾನು ಅಮೆರಿಕಾದಲ್ಲಿ ವಾಸಮಾಡಿದ್ದೆ. ಅತ್ಯಂತ ಹೆಚ್ಚು ಜನಸಂಖ್ಯೆ ಇರುವ ಚೀನಾಗೂ ಪ್ರಯಾಣಿಸಿ ಓಡಾಡಿದ್ದೇನೆ. ಅವರು ಅನಗತ್ಯ ಹಾರ್ನ್ ಮಾಡುವುದಿಲ್ಲ. ಅಂತಹ ದೇಶದವರಿಗೆ ಸಾಧ್ಯವಿದ್ದರೆ, ನಮ್ಮ ದೇಶದಲ್ಲಿ ಏಕೆ ಸಾಧ್ಯವಿಲ್ಲ ಎಂದು ಮೆಹ್ತಾ ಸವಾಲು ಹಾಕಿದ್ದಾರೆ.

  • ಶವಯಾತ್ರೆ ವೇಳೆ ಹಾರ್ನ್ – ಖಾಸಗಿ ಬಸ್ ಚಾಲಕನಿಗೆ ಸಂಬಂಧಿಗಳಿಂದ ಗೂಸಾ

    ಶವಯಾತ್ರೆ ವೇಳೆ ಹಾರ್ನ್ – ಖಾಸಗಿ ಬಸ್ ಚಾಲಕನಿಗೆ ಸಂಬಂಧಿಗಳಿಂದ ಗೂಸಾ

    ಚಿತ್ರದುರ್ಗ: ಶವಯಾತ್ರೆ ವೇಳೆ ಹಾರ್ನ್ ಮಾಡಿದ ಎಂಬ ಕಾರಣಕ್ಕೆ ಚಾಲಕನಿಗೆ ಮೃತರ ಸಂಬಂಧಿಗಳು ಗೂಸಾ ಕೊಟ್ಟಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

    ಜಿಲ್ಲೆಯ ಮೇದೇಹಳ್ಳಿ ರಸ್ತೆಯಲ್ಲಿರುವ ಖಾಸಗಿ ಬಸ್ ನಿಲ್ದಾಣದ ಮುಂದೆ ಮುಸ್ಲಿಂ ಸಮುದಾಯದ ವ್ಯಕ್ತಿಯ ಶವಯಾತ್ರೆ ನಡೆಯುತ್ತಿತು. ಈ ವೇಳೆ ಹಾರ್ನ್ ಮಾಡಿದ ಎಂಬ ಕಾರಣಕ್ಕೆ ಖಾಸಗಿ ಬಸ್ ಚಾಲಕ ರಾಕೇಶ್ ಎಂಬುವವರ ಮೇಲೆ ಮೃತ ಸಂಬಂಧಿಕರು ಹಲ್ಲೆ ಮಾಡಿದ್ದಾರೆ.

    ಬಸ್ ನಿಲ್ದಾಣದ ಮುಂದೆ ಮುಸ್ಲಿಂ ಸಮುದಾಯದ ಖಬರುಸ್ತಾನ್ ಬಳಿ ಶವಯಾತ್ರೆ ತೆರಳುತಿತ್ತು. ಆಗ ಬಸ್ ನಿಲ್ದಾಣಕ್ಕೆ ತಿರುವು ಪಡೆಯಲು ಚಾಲಕ ರಾಕೇಶ್ ಹಾರ್ನ್ ಮಾಡಿದ್ದಾರೆ. ಇದಕ್ಕೆ ಆಕ್ರೋಶಗೊಂಡ ಮೃತರ ಸಂಬಂಧಿಕರು ಆತನ ಮೇಲೆ ಹಲ್ಲೆ ಮಾಡಿದ್ದಾರೆ.

    ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ರಾಕೇಶ್ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಯಿಂದ ಕ್ಷಣಕಾಲ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಘಟನಾ ಸ್ಥಳಕ್ಕೆ ಡಿವೈಎಸ್ಪಿ ಸಂತೋಷ ಭೇಟಿ ನೀಡಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

    ಈ ಸಂಬಂಧ ಚಿತ್ರದುರ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಗ್ರಾಹಕರಂತೆ ವೇಷಹಾಕಿ ವನ್ಯಜೀವಿಗಳ ಬೇಟೆಗಾರರ ಬಂಧನ: 16.5 ಕೆ.ಜಿ. ಜಿಂಕೆಗಳ ಕೊಂಬು ವಶ

    ಗ್ರಾಹಕರಂತೆ ವೇಷಹಾಕಿ ವನ್ಯಜೀವಿಗಳ ಬೇಟೆಗಾರರ ಬಂಧನ: 16.5 ಕೆ.ಜಿ. ಜಿಂಕೆಗಳ ಕೊಂಬು ವಶ

    ಚಿಕ್ಕಮಗಳೂರು: ಸಿನಿಮೀಯ ರೀತಿಯಲ್ಲಿ ಗ್ರಾಹಕರಂತೆ ಹೋಗಿ, ಕಾಡು ಪ್ರಾಣಿಗಳನ್ನು ಬೇಟಿ ಆಡುತ್ತಿದ್ದ ಆರು ಜನರ ತಂಡವನ್ನು ತರೀಕೆರೆ ತಾಲೂಕಿನ ಲಕ್ಕವಳ್ಳಿ ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ.

    ಭಾನುವಾರ ಮಾಹಿತಿ ದೊರೆತಿದ್ದು, ಶಿವಮೊಗ್ಗದ ಸತೀಶ್, ಗಾಜನೂರಿನ, ತರೀಕೆರೆ ತಾಲೂಕಿನ ಉಪ್ಪಾರ ಬಸವಣ ಹಳ್ಳಿಯ ಸಹೋದರರಾದ ರವಿ ಹಾಗೂ ಲಕ್ಷ್ಮಣ ಬಂಧಿತ ಆರೋಪಿಗಳಾಗಿದ್ದು, ಉಳಿದ ಇಬ್ಬರ ಬಗ್ಗೆ ಇನ್ನು ಮಾಹಿತಿ ದೊರೆತಿಲ್ಲ ಎಂದು ವಲಯ ಅರಣ್ಯಾಧಿಕಾರಿ ಕಾಂತರಾಜು ತಿಳಿಸಿದ್ದಾರೆ.

    ಸುಮಾರು ದಿನಗಳಿಂದ ಆರೋಪಿಗಳು ಜಾಲದ ಬಗ್ಗೆ ಮಾಹಿತಿ ದೊರೆತಿತ್ತು. ಆದರೆ ಬಂಧಿಸಲು ಸಾಧ್ಯವಾಗಿರಲಿಲ್ಲ. ಭಾನುವಾರ ಖಚಿತ ಮಾಹಿತಿ ದೊರೆಯಿತು. ಹೀಗಾಗಿ ಗ್ರಾಹಕರಂತೆ ಮಾರುವೇಷ ಹಾಕಿಕೊಂಡು ಅರಣ್ಯ ಇಲಾಖೆ ಪೊಲೀಸ್ ಸಿಬ್ಬಂದಿ ತಂಡ ದಾಳಿ ಮಾಡಿದ ಪರಿಣಾಮ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ ಎಂದು ಹೇಳಿದರು.

    ಬಂಧಿತ ಆರೋಪಿಗಳಿಂದ 4 ಕೆ.ಜಿ. ಆನೆದಂತ, 11 ಕೆ.ಜಿ. ಚಿಪ್ಪು ಹಂದಿಯ ಚಿಪ್ಪು, 16.5 ಕೆ.ಜಿ. ಜಿಂಕೆಗಳ ಕೊಂಬು ಹಾಗೂ 4.5 ಕೆ.ಜಿ. ಕಾಡು ಕೋಣಗಳ ಕೊಂಬುಗಳನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ಹಿಂದೆ ದೊಡ್ಡ ಜಾಲವಿದೆ ಎನ್ನುವ ಶಂಕೆ ವ್ಯಕ್ತವಾಗಿದೆ.

    ಬಂಧಿತರು ಕಾಡು ಪ್ರಾಣಿಗಳ ದೇಹದ ಬೆಲೆಬಾಳುವ ವಸ್ತುಗಳನ್ನು ವಿದೇಶಕ್ಕೆ ಮಾರಾಟ ಮಾಡುತ್ತಿದ್ದರು. ಹೀಗಾಗಿ ಭದ್ರಾ ಹುಲಿ ಅಭಯಾರಣ್ಯ ಸೇರಿದಂತೆ ಮಲೆನಾಡು ಭಾಗದ ಕಾಡುಗಳಲ್ಲಿ ವನ್ಯಜೀವಿಗಳನ್ನ ಭೇಟಿಯಾಡುತ್ತಿದ್ದರು. ಅಲ್ಲದೇ ಅವರ ಬಳಿ ಇನ್ನು ಹೆಚ್ಚಿನ ಪ್ರಾಣಿಗಳ ಚರ್ಮ, ಕೊಂಬು, ಮೂಳೆ, ದಂತಗಳಿವೆ ಎನ್ನುವ ಸಂದೇಹ ವ್ಯಕ್ತವಾಗಿದ್ದು, ತನಿಖೆ ಪ್ರಾರಂಭಿಸಿದ್ದಾರೆ.

    ಆನೆ ದಂತಗಳನ್ನು ಏನು ಮಾಡುತ್ತಾರೆ?
    ಆನೆ ದಂತಗಳನ್ನು ಹಣ ಪಡೆದು ಮಾರಾಟ ಮಾಡುವುದುನ್ನು ಕಾನೂನಿನಲ್ಲಿ ನಿಷೇಧಿಸಲಾಗಿದೆ. ಹೀಗಾಗಿ ಅರಣ್ಯ ಇಲಾಖೆ ದಾಳಿ ವೇಳೆ ಸಿಕ್ಕಿದ ಆನೆ ದಂತಗಳನ್ನು ರಕ್ಷಣಾ ಇಲಾಖೆಗೆ ನೀಡುತ್ತದೆ. ಕೆಲವು ದಂತಗಳನ್ನು ಸಂಶೋಧನೆ ಮಾಡಲು ಶಿಕ್ಷಣ ಸಂಸ್ಥೆಗಳಿಗೆ ನೀಡುತ್ತದೆ. ಯಾರಿಗೂ ಮಾರಾಟ ಮಾಡಲು ಅನುಮತಿ ಇಲ್ಲದ ಕಾರಣ ದಂತಗಳನ್ನು ಸುಡಲಾಗುತ್ತದೆ.

  • ಇನ್ಮುಂದೆ ಆಂಬುಲೆನ್ಸ್ ಗಳಲ್ಲಿ ರೋಗಿಗಳ ಕಂಡೀಷನ್‍ಗೆ ತಕ್ಕಂತೆ ಹಾರ್ನ್, ಲೈಟ್ ಕಲರ್!-  ಎಲೆಕ್ಷನ್ ಅಕ್ರಮ ತಡೆಗೆ ಪ್ಲ್ಯಾನ್?

    ಇನ್ಮುಂದೆ ಆಂಬುಲೆನ್ಸ್ ಗಳಲ್ಲಿ ರೋಗಿಗಳ ಕಂಡೀಷನ್‍ಗೆ ತಕ್ಕಂತೆ ಹಾರ್ನ್, ಲೈಟ್ ಕಲರ್!-  ಎಲೆಕ್ಷನ್ ಅಕ್ರಮ ತಡೆಗೆ ಪ್ಲ್ಯಾನ್?

    ಬೆಂಗಳೂರು: ಎಲೆಕ್ಷನ್‍ ನಲ್ಲಿ ವಾಮಮಾರ್ಗದಿಂದ ಅಕ್ರಮ ದುಡ್ಡು ಸಾಗಾಟ ಮಾಡೋ ಕುಳಗಳಿಗೆ ಐಪಿಎಸ್ ರೂಪಾ ಶಾಕ್ ನೀಡೋಕೆ ಮಾಸ್ಟರ್ ಪ್ಲ್ಯಾನ್ ಮಾಡಿದ್ದಾರೆ. ಆಂಬುಲೆನ್ಸ್ ಗಳಿಗೆ ಭರ್ಜರಿ ಮೇಜರ್ ಸರ್ಜರಿ ಮಾಡಲು ಸಜ್ಜಾಗಿದ್ದಾರೆ. ಆಂಬುಲೆನ್ಸ್ ಗೂ ಎಲೆಕ್ಷನ್‍ಗೂ ಏನ್ ಕನೆಕ್ಷನ್ ಅಂತಾ ತಲೆಕೆಡಿಸಿಕೊಂಡ್ರಾ? ಈ ಸುದ್ದಿ ಓದಿ.

    ಕರ್ನಾಟಕ ಎಲೆಕ್ಷನ್ ಮೂಡ್‍ನಲ್ಲಿದೆ. ಎಲೆಕ್ಷನ್ ಬೆನ್ನಲ್ಲೆ ಅಕ್ರಮ ಹಣದ ಸಾಗಾಟ ಭರ್ಜರಿಯಾಗಿ ನಡೆಯಲಿದೆ. ಇದಕ್ಕಾಗಿ ರಾಜಕೀಯ ಕುಳಗಳು ವಾಮ ಮಾರ್ಗದ ಮೂಲಕ ದುಡ್ಡು ಸಾಗಿಸೋದು ಎಲ್ಲರಿಗೂ ಗೊತ್ತಿರೋ ವಿಚಾರ. ಆಂಬುಲೆನ್ಸ್ ನಲ್ಲಿ ಕೂಡ ದುಡ್ಡು ಸಾಗಿಸೋ ಸಾಧ್ಯತೆ ಇರೋದ್ರಿಂದ ಈಗ ಇದಕ್ಕೆ ಬ್ರೇಕ್ ಹಾಕೋದಕ್ಕೆ ರಸ್ತೆ ಸಾರಿಗೆ ಮತ್ತು ಸುರಕ್ಷತಾ ಅಯುಕ್ತೆ ರೂಪಾ ಮುಂದಾಗಿದ್ದಾರೆ.

    ಎಮರ್ಜೆನ್ಸಿ ಕೇಸ್‍ಗಳಿಗೆ ರೆಡ್‍ ಲೈಟ್ ಮತ್ತು ಲಾಂಗ್ ಸೈರನ್ ಇದ್ರೆ, ನಾರ್ಮಲ್ ಕೇಸ್‍ಗಳಾದ್ರೆ ನೀಲಿ ಬಣ್ಣದ ಲೈಟ್ ಹಾಗೂ ಸಪರೇಟ್ ಸೈರನ್ ನೀಡಲು ಚಿಂತನೆ ಮಾಡಿದ್ದಾರೆ. ಆಂಬುಲೆನ್ಸ್ ಗಳನ್ನ ಕೆಲವು ಸಂದರ್ಭದಲ್ಲಿ ಚೆಕ್ ಮಾಡುವಂತೆ ಟ್ರಾಫಿಕ್ ಪೊಲೀಸರಿಗೂ ಸೂಚನೆ ನೀಡಿದ್ದಾರೆ. ಆದ್ರೆ ನೇರವಾಗಿ ಇದನ್ನು ಒಪ್ಪಿಕೊಳ್ಳದ ರೂಪಾ, ಟ್ರಾಫಿಕ್‍ನಲ್ಲಿ ತುರ್ತು ಸಮಯದಲ್ಲಿ ಪ್ರಾಣ ಹೋಗುವುದನ್ನು ತಡೆಯಲು ಹಾಗೂ ಆಂಬುಲೆನ್ಸ್ ಮಿಸ್ ಯೂಸ್ ಆಗದಂತೆ ತಡೆಯಲು ಈ ನಿರ್ಧಾರ ಮಾಡಿರೋದಾಗಿ ಹೇಳಿದ್ರು.

     

  • ಧಾರವಾಡದಲ್ಲೊಂದು ಅಚ್ಚರಿ: ಹಸುವಿನ ಮೂಗಿನಲ್ಲಿ ಬೆಳೆಯುತ್ತಿದೆ ಕೋಡು!

    ಧಾರವಾಡದಲ್ಲೊಂದು ಅಚ್ಚರಿ: ಹಸುವಿನ ಮೂಗಿನಲ್ಲಿ ಬೆಳೆಯುತ್ತಿದೆ ಕೋಡು!

    ಧಾರವಾಡ: ಆಕಳು, ಎಮ್ಮೆ ಇವುಗಳ ತಲೆ ಮೇಲೆ ಸಹಜವಾಗಿ ಕೋಡು ಬೆಳೆಯುತ್ತದೆ. ಆದ್ರೆ ಧಾರವಾಡ ತಾಲೂಕಿನ ಮರೇವಾಡ ಗ್ರಾಮದ ರಾಜಶೇಖರ ಚೌಡಿಮನಿ ಎಂಬುವವರ ಜರ್ಸಿ ಆಕಳ ಮೂಗಿನಲ್ಲಿ ಕೋಡು ಬೆಳೆಯುತ್ತಿದ್ದು, ಅಚ್ಚರಿಗೆ ಕಾರಣವಾಗಿದೆ.

    ಕಳೆದ ಎರಡು ವರ್ಷಗಳಿಂದ ಈ ಆಕಳಿನ ಮೂಗಿನಲ್ಲಿ ಕೋಡು ಬೆಳೆಯುತ್ತಿದೆ. ಆದರೆ ರಾಜಶೇಖರ ಕುಟುಂಬವರು ಮಾತ್ರ ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡಿರಲಿಲ್ಲ. ಇತ್ತೀಚೆಗೆ ಅವು ಸ್ವಲ್ಪ ದೊಡ್ಡದಾಗಿ ಬೆಳೆದಿದ್ದರಿಂದ ಜನರ ಕಣ್ಣಿಗೆ ಬಿದ್ದಿದೆ. ಇದೊಂದು ಪವಾಡ ಎಂದು ತಿಳಿದ ಚೌಡಿಮನಿ ಕುಟುಂಬದವರು, ಆಕಳಿಗೆ ಪೂಜೆ ಮಾಡಲು ಆರಂಭಿಸಿದ್ದಾರೆ. ಗ್ರಾಮದ ಜನರಲ್ಲಿ ಕೂಡಾ ಇದು ಅಚ್ಚರಿ ಮೂಡಿಸಿದೆ. ಕಳೆದ 6 ವರ್ಷಗಳ ಹಿಂದೆ ಖರೀದಿ ಮಾಡಿ ತಂದಿದ್ದ ರಾಜಶೇಖರ ಅವರ ಈ ಆಕಳು ಪ್ರತಿ ದಿನ 16 ಲಿಟರ್ ಹಾಲನ್ನ ಕೂಡಾ ಕೊಡುತ್ತಿದೆ.

    ಸದ್ಯ ಈ ಆಕಳನ್ನ ಪರೀಕ್ಷೆಗೆ ಒಳಪಡಿಸಲಾಗಿದೆ. ಪಶು ವೈದ್ಯ ಡಾ. ಸಂತಿ ಕೂಡಾ ಇದು ವಿಶೇಷ ಅಂತಾರೆ. ಅನುವಂಶಿಕವಾಗಿ ವಂಶವಾಹಿನಿಯಲ್ಲಿ ಇದು ಅಡಗಿರುತ್ತೆ. ಆದರೆ ಸದ್ಯ ಇದು ಬೆಳೆಯುತ್ತಿದ್ದು, ಈ ಹಸುವಿನ ರಕ್ತ ಮಾದರಿಯನ್ನ ಬೆಂಗಳೂರಿನ ಪಶು ವೈದ್ಯಕೀಯ ಮಹಾವಿದ್ಯಾಲಯಕ್ಕೆ ಕಳಿಸಿಕೊಡಲು ಮುಂದಾಗಿದ್ದಾರೆ. ಈ ಕೊಡುಗಳು ಮೂಗಿನಲ್ಲಿ ಬೆಳೆಯುವುದರಿಂದ ಹಸುಗೆ ಯಾವುದೇ ರೀತಿಯ ತೊಂದರೆಗಳಾಗಲ್ಲ ಅಂತಾ ವೈದ್ಯರು ಹೇಳಿದ್ದಾರೆ.

    ಒಟ್ಟಿನಲ್ಲಿ ವೈಜ್ಞಾನಿಕವಾಗಿ ಇದನ್ನ ನೋಡಬೇಕೋ ಅಥವಾ ಪವಾಡದ ರೀತಿಯಲ್ಲಿ ನೋಡಬೇಕೊ ಗೊತ್ತಿಲ್ಲ. ಸದ್ಯ ಆಕಳ ಮಾಲೀಕರು ಇದಕ್ಕೆ ಪವಾಡ ಅಂತಾರೆ, ಆದರೆ ವೈದ್ಯರು ಇದು ಸಹಜ ಅಂತಾರೆ. ಏನೇ ಇರಲಿ, ಇಂಥದೊಂದು ಅಚ್ಚರಿಯ ಆಕಳು ನೋಡೊಕೆ ಜನರಂತು ಮುಗಿ ಬೀಳುತ್ತಿದ್ದಾರೆ.

  • ಚಿಕ್ಕಮಗಳೂರು: ನಾಯಿ ದಾಳಿಗೆ ಕಡವೆ ಬಲಿ- ಕೊಂಬನ್ನು ಕದ್ದೊಯ್ದ ಕಿಡಿಗೇಡಿಗಳು

    ಚಿಕ್ಕಮಗಳೂರು: ನಾಯಿ ದಾಳಿಗೆ ಕಡವೆ ಬಲಿ- ಕೊಂಬನ್ನು ಕದ್ದೊಯ್ದ ಕಿಡಿಗೇಡಿಗಳು

    ಚಿಕ್ಕಮಗಳೂರು: ನೀರು ಹುಡುಕಿಕೊಂಡು ನಾಡಿಗೆ ಬಂದಿದ್ದ ಕಡವೆಯೊಂದು ನಾಯಿ ದಾಳಿಗೆ ಸಿಲುಕಿ ಸಾವನ್ನಪ್ಪಿರೋ ಘಟನೆ ಚಿಕ್ಕಮಗಳೂರು ತಾಲೂಕಿನ ಲಕ್ಷ್ಮಿಪುರ ಗ್ರಾಮದಲ್ಲಿ ನಡೆದಿದೆ.

    ಶುಕ್ರವಾರ ಮಧ್ಯಾಹ್ನ ಚಿಕ್ಕಮಗಳೂರು ಸಮೀಪದ ಚುರ್ಚೆಗುಡ್ಡದಿಂದ ಬಂದಿದ್ದ ಕಡವೆ ಮೇಲೆ ನಾಯಿಗಳು ದಾಳಿ ಮಾಡಿದ್ರಿಂದ ಕಡವೆ ತೀವ್ರವಾಗಿ ಅಸ್ವಸ್ಥಗೊಂಡಿತ್ತು. ಕೂಡಲೇ ಸ್ಥಳಿಯರು ಅರಣ್ಯ ಇಲಾಖೆಗೆ ವಿಷಯ ಮುಟ್ಟಿಸಿದ್ರು. ಸ್ಥಳಕ್ಕೆ ಬಂದ ಅಧಿಕಾರಿಗಳು ಕಡವೆಗೆ ಚಿಕಿತ್ಸೆ ಕೊಡಿಸಿ, ಜಿಂಕೆವನದಲ್ಲಿ ಬಿಟ್ಟಿದ್ರು.

    ಆದ್ರೆ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಕಡವೆ ಮಧ್ಯರಾತ್ರಿ ವೇಳೆ ಸಾವನ್ನಪ್ಪಿದೆ. ಕಿಡಿಗೇಡಿಗಳು ಸತ್ತ ಕಡವೆಯ ಕೊಂಬನ್ನು ಕಿತ್ತುಕೊಂಡು ಹೋಗಿದ್ದಾರೆ.