Tag: Horror Thriller

  • ಒಂದ್ ಕಥೆ ಹೇಳ್ಲಾ: ಬಿಡುಗಡೆಯಾಯ್ತು ಐದು ಹಾರರ್ ಕಥೆಗಳ ಟ್ರೈಲರ್!

    ಒಂದ್ ಕಥೆ ಹೇಳ್ಲಾ: ಬಿಡುಗಡೆಯಾಯ್ತು ಐದು ಹಾರರ್ ಕಥೆಗಳ ಟ್ರೈಲರ್!

    ಬೆಂಗಳೂರು: ಜೋಡಿಹಕ್ಕಿ ಸೀರಿಯಲ್ ಮೂಲಕ ರಾಮಣ್ಣ ಎಂದೇ ಖ್ಯಾತರಾಗಿರುವವರು ತಾಂಡವ್. ಅವರೀಗ ಒಂದು ಕಥೆ ಹೇಳ್ಲಾ ಎಂಬ ವಿನೂತನ ಪ್ರಯೋಗದ ಹಾರರ್ ಚಿತ್ರವೊಂದರ ಪ್ರಧಾನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಹೊಸ ಥರದ ಪೋಸ್ಟರ್ ಸೇರಿದಂತೆ ನಾನಾ ರೀತಿಯಲ್ಲಿ ಈ ಸಿನಿಮಾ ಸುದ್ದಿ ಕೇಂದ್ರದಲ್ಲಿದೆ. ಇದೀಗ ಇದರ ಟ್ರೈಲರ್ ಹೊರ ಬಂದಿದೆ. ಇದುವೇ ಕ್ಷಣ ಕ್ಷಣವೂ ಬೆಚ್ಚಿ ಬೆರಗಾಗಿಸುವಂಥಾ ಡಿಫರೆಂಟಾದ ಕಂಟೆಂಟು ಈ ಚಿತ್ರದಲ್ಲಿದೆ ಎಂಬಂಥಾ ಸುಳಿವನ್ನೂ ಬಿಟ್ಟುಕೊಟ್ಟಿದೆ.

    ಕ್ರೌಡ್ ಫಂಡಿಂಗ್ ಮೂಲಕ ನಿರ್ಮಾಣಗೊಂಡಿರೋ ಈ ಚಿತ್ರವನ್ನು ಗಿರೀಶ್ ನಿರ್ದೇಶನ ಮಾಡಿದ್ದಾರೆ. ಈಗ ಹೊರ ಬಂದಿರೋ ಟ್ರೈಲರ್ ಅಂತೂ ಬಹು ಬೇಗನೆ ಪ್ರತೀ ವರ್ಗದ ಪ್ರೇಕ್ಷಕರನ್ನೂ ಕೂಡಾ ತನ್ನತ್ತ ಸೆಳೆದುಕೊಂಡಿದೆ. ಅದ್ಭುತವಾದ ಕಥೆಯೊಂದು ಒಂದು ಕಥೆ ಹೇಳ್ಲಾ ಚಿತ್ರದಲ್ಲಿ ಅಡಕವಾಗಿದೆ ಎಂಬ ವಿಚಾರವನ್ನಂತೂ ಈ ಟ್ರೈಲರ್ ರವಾನಿಸಿದೆ.

    ಇದು ಹಾರರ್ ಚಿತ್ರ. ಹಾಗೆಂದಾಕ್ಷಣ ಮಾಮೂಲಿ ಮೆಥಡ್ಡಿನ ಸಿನಿಮಾ ಎಂದು ಖಂಡಿತಾ ಅಂದುಕೊಳ್ಳುವಂತಿಲ್ಲ. ಇದು ತಾಜಾತನದಿಂದ, ಸಾಕಷ್ಟು ನವೀನ ಪ್ರಯೋಗಗಳಿಂದಲೇ ರೂಪುಗೊಂಡಿದೆ. ಇಲ್ಲಿರೋದು ಒಂದು ಕಥೆಯಲ್ಲ. ಬದಲಾಗಿ ಒಂದೇ ಚಿತ್ರದಲ್ಲಿ ಐದು ಬೇರೆ ಬೇರೆ ಹಾರರ್ ಕಥೆಗಳನ್ನು ಹೇಳೋ ಸಾಹಸಕ್ಕೆ ನಿರ್ದೇಶಕರು ಕೈ ಹಾಕಿದ್ದಾರೆ. ಈ ಐದೂ ಕಥೆಗಳ ದಿಕ್ಕೂ ಬೇರೆ ಬೇರೆ. ಅದರಲ್ಲೊಂದಷ್ಟು ಸತ್ಯ ಘಟನೆಗಳನ್ನ ಆಧರಿಸಿದವುಗಳಂತೆ. ಆದರೆ ಇವೆಲ್ಲವೂ ಕ್ಲೈಮ್ಯಾಕ್ಸ್ ಹೊತ್ತಿಗೆ ಒಂದಕ್ಕೊಂದು ಕನೆಕ್ಟ್ ಆಗುತ್ತವಂತೆ.

    ಬಹುತೇಕ ಹೊಸಬರೇ ಸೇರಿಕೊಂಡು ಈ ಚಿತ್ರವನ್ನ ರೂಪಿಸಿದ್ದಾರೆ. ಈಗಾಗಲೇ ಈ ಸಿನಿಮಾ ಪೋಸ್ಟರ್‍ಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಟ್ರೈಲರ್ ಮೂಲಕ ಆ ಬಿಸಿ ಮತ್ತಷ್ಟು ಏರಿಕೊಂಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಪಾರ್ವತಮ್ಮನ ತಂಗಿ ಮಗನ ಹಾರರ್ ಗೂಗ್ಲಿ!

    ಪಾರ್ವತಮ್ಮನ ತಂಗಿ ಮಗನ ಹಾರರ್ ಗೂಗ್ಲಿ!

    ಬೆಂಗಳೂರು: ಈ ಹಿಂದೆ ಬಿಂದಾಸ್ ಗೂಗ್ಲಿ ಎಂಬ ಚಿತ್ರ ನಿರ್ದೇಶನ ಮಾಡಿದ್ದವರು ಸಂತೋಷ್ ಕುಮಾರ್. ಕಾಲೇಜ್ ಕಾರಿಡಾರಿನಲ್ಲಿ ನಡೆಯುವ ಯೂಥ್‍ಫುಲ್ ಕಥೆ ಹೇಳಿದ್ದ ಅವರೀಗ ಪಕ್ಕಾ ಹಾರರ್ ಥ್ರಿಲ್ಲರ್ ಕಥೆಯೊಂದನ್ನು ಎರಡೆರಡು ಭಾಷೆಗಳಲ್ಲಿ ನಿರ್ದೇಶನ ಮಾಡಲು ಮುಂದಾಗಿದ್ದಾರೆ.

    ಪಾರ್ವತಮ್ಮನವರ ತಂಗಿ ಮಗ ಈ ಸಂತೋಷ್ ಕುಮಾರ್. ಏಕಕಾಲದಲ್ಲಿಯೇ ಹಿಂದಿ ಮತ್ತು ಕನ್ನಡದಲ್ಲಿ ನಿರ್ದೇಶನ ಮಾಡಲು ಮುಂದಾಗಿರೋ ಹೊಸ ಚಿತ್ರಕ್ಕೆ ಮೃತ್ಯುಲಿಪಿ ಪುರಾಣಂ ಎಂಬ ಶೀರ್ಷಿಕೆಯನ್ನಿಟ್ಟಿದ್ದಾರೆ.

    ಈ ಚಿತ್ರದಲ್ಲಿ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ಸದ್ದು ಮಾಡಿರೋ ತಂತ್ರಜ್ಞರೇ ಕಾರ್ಯ ನಿರ್ವಹಿಸಲಿದ್ದಾರಂತೆ. ಬಾಲಿವುಡ್ ನ ನಟ ನಟಿಯರೇ ಮುಖ್ಯ ಪಾತ್ರವನ್ನೂ ನಿರ್ವಹಿಸಲಿದ್ದಾರಂತೆ. ಇದೀಗ ತಾರಾಗಣದ ಆಯ್ಕೆ ಕಾರ್ಯ ಭರದಿಂದ ಸಾಗುತ್ತಿದೆ.

    ಇದು ಇಡೀ ವಿಶ್ವವನ್ನು ಬೆಚ್ಚಿಬೀಳಿಸುತ್ತಲೇ ಕಗ್ಗಂಟಾಗುಳಿದಿರುವ ಬರ್ಮುಡಾ ಟ್ರಯಾಂಗಲ್ ನಿಂದ ಸ್ಫೂರ್ತಿಗೊಂಡು ರಚಿಸಲ್ಪಟ್ಟಿರೋ ಕಥೆಯನ್ನು ಹೊಂದಿದೆ. ಮೀಡಿಯಾದಲ್ಲಿ ಕೆಲಸ ಮಾಡೋ ಹುಡುಗರು ಅಸೈನ್‍ಮೆಂಟ್ ಕಾರಣದಿಂದ ಒಂದು ಪ್ರದೇಶಕ್ಕೆ ತೆರಳುತ್ತಾರೆ. ಅದು ಹೋದವರನ್ನೆಲ್ಲ ಕಣ್ಮರೆ ಮಾಡುವ ವಿಚಿತ್ರ ಪ್ರದೇಶ. ಇಂಥಲ್ಲಿಗೆ ಈ ಹುಡುಗರ ಟೀಮು ಹೋದ ನಂತರ ಆಗೋ ಕಥನ ಹಾರರ್ ಮತ್ತು ಥ್ರಿಲ್ಲರ್ ಶೈಲಿಯಲ್ಲಿ ಬಿಚ್ಚಿಕೊಳ್ಳುತ್ತದೆಯಂತೆ.

    ಇದೀಗ ಈ ಚಿತ್ರಕ್ಕಾಗಿ ತಯಾರಿ ನಡೆಸಿಕೊಳ್ಳುತ್ತಿರೋ ಸಂತೋಷ್ ಬೇಗನೆ ಚಿತ್ರೀಕರಣ ಮುಗಿಸಿಕೊಂಡು ವಿಶ್ವಾಧ್ಯಂತ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv