Tag: horse trading

  • ಮಧ್ಯಪ್ರದೇಶದ ಬೆನ್ನಲ್ಲೇ ಗುಜರಾತ್‍ನಲ್ಲಿ ಇಕ್ಕಟ್ಟಿಗೆ ಸಿಲುಕಿದ ಕಾಂಗ್ರೆಸ್

    ಮಧ್ಯಪ್ರದೇಶದ ಬೆನ್ನಲ್ಲೇ ಗುಜರಾತ್‍ನಲ್ಲಿ ಇಕ್ಕಟ್ಟಿಗೆ ಸಿಲುಕಿದ ಕಾಂಗ್ರೆಸ್

    – ರಾಜ್ಯಸಭೆ ಚುನಾವಣೆಗೂ ಮುನ್ನ 5 ಶಾಸಕರು ರಾಜೀನಾಮೆ
    – ಶಾಸಕರನ್ನು ಉಳಿಸಿಕೊಳ್ಳಲು ರೆಸಾರ್ಟ್ ಮೊರೆ

    ಗಾಂಧಿನಗರ: ಮಧ್ಯಪ್ರದೇಶದ ಸಿಎಂ ಕಮಲ್‍ನಾಥ್ ಸರ್ಕಾರವನ್ನು ಅತಂತ್ರಕ್ಕೆ ಸಿಲುಕಿದ ಬೆನ್ನಲ್ಲೇ ಗುಜರಾತ್‍ನಲ್ಲಿ ಕಾಂಗ್ರೆಸ್ ಶಾಸಕರ ಹೈಜಾಕ್‍ಗೆ ‘ಕಮಲ ಪಡೆ’ ಸರ್ವಪ್ರಯತ್ನ ನಡೆಸಿದೆ.

    ರಾಜ್ಯಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಗುಜರಾತ್‍ನ 5 ಜನ ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದಾರೆ. ಶಾಸಕರ ನಡೆಯಿಂದ ಕಾಂಗ್ರೆಸ್ ಹೈಕಮಾಂಡ್ ಕಂಗೆಟ್ಟು ಹೋಗಿದ್ದು, ಉಳಿದ ಶಾಸಕರನ್ನು ಪಕ್ಷದಲ್ಲೇ ಇರಿಸಿಕೊಳ್ಳಲು ರೆಸಾರ್ಟ್ ಮೊರೆ ಹೋಗಿದೆ. ಇದನ್ನೂ ಓದಿ:  ನಾಳೆ ಬೆಳಗ್ಗೆಯೇ ಬಹುಮತ ಸಾಬೀತುಪಡಿಸಿ- ಕೈ ಸರ್ಕಾರಕ್ಕೆ ಎಂಪಿ ರಾಜ್ಯಪಾಲ ಆದೇಶ

    ಗುಜರಾತ್‍ನ 4 ರಾಜ್ಯಸಭಾ ಸ್ಥಾನಗಳಿಗೆ ಮಾರ್ಚ್ 26ರಂದು ಚುನಾವಣೆ ನಡೆಯಲಿದೆ. ಈ ಮಧ್ಯೆ ಕಾಂಗ್ರೆಸ್ ಶಾಸಕರಾದ ಪ್ರವೀಣ್ ಮಾರು, ಮಂಗಲ್ ಗವಿತ್, ಸೋಮಭಾಯ್ ಪಟೇಲ್, ಜೆ.ವಿ.ಕಾಕಾಡಿಯಾ ಹಾಗೂ ಪ್ರದ್ಯುಮನ್ ಜಡೇಜಾ ಭಾನುವಾರ ರಾಜೀನಾಮೆ ನೀಡಿದ್ದಾರೆ.

    ಇದಕ್ಕೂ ಮೊದಲು ಆಪರೇಷನ್ ಕಮಲದ ಭಯದಿಂದ ಕಾಂಗ್ರೆಸ್ ತನ್ನ 14 ಶಾಸಕರನ್ನು ಜೈಪುರಕ್ಕೆ ಕಳುಹಿಸಿತ್ತು. ಜೊತೆಗೆ 36 ಶಾಸಕರನ್ನು ರಾಜಸ್ಥಾನಕ್ಕೆ ಕಳುಹಿಸಲಾಗಿದೆ. ಈ ಮೂಲಕ ಎಲ್ಲ ಶಾಸಕರನ್ನು ರೆಸಾರ್ಟಿಗೆ ಕರೆದೊಯ್ಯಲಾಗಿದೆ. ಮೊಬೈಲ್ ಬಳಸದಂತೆ ಹಾಗೂ ತಮ್ಮ ಬಳಿ ಇಟ್ಟುಕೊಳ್ಳದಂತೆ ಶಾಸಕರಿಗೆ ಕಾಂಗ್ರೆಸ್ ನಾಯಕರು ಸೂಚನೆ ನೀಡಿದ್ದಾರೆ. ಒಂದು ರೀತಿ ಬಂಧನಕ್ಕೆ ಒಳಗಾಗಿರುವ ಶಾಸಕರು ಕುಟುಂಬ ಅಥವಾ ಪರಿಚಯಸ್ಥರನ್ನು ಭೇಟಿಯಾಗಲು ಸಹ ಸಾಧ್ಯವಾಗುತ್ತಿಲ್ಲ. ರಾಜಸ್ಥಾನದ ಅಶೋಕ್ ಗೆಹ್ಲೋಟ್ ಸರ್ಕಾರವು ಕಾಂಗ್ರೆಸ್ ಹೈಕಮಾಂಡ್ ಆದೇಶದಂತೆ ಗುಜರಾತ್‍ನ ‘ಕೈ’ ಶಾಸಕರಿಗೆ ರಕ್ಷಣೆ ಒದಗಿಸಿದೆ ಎಂದು ವರದಿಯಾಗಿದೆ.

    14 ಶಾಸಕರನ್ನು ಜೈಪುರಕ್ಕೆ ಕಳುಹಿಸಲಾಗಿದೆ. 36 ಶಾಸಕರನ್ನು ರಾಜಸ್ಥಾನಕ್ಕೆ ಕಳುಹಿಸಲಾಗಿದ್ದು, ಅವರನ್ನು ಉದಯಪುರಕ್ಕೆ ಸ್ಥಳಾಂತರಿಸುವ ಸಾಧ್ಯತೆಯಿದೆ. ಉಳಿದ 5 ಶಾಸಕರನ್ನು ಗುಜರಾತ್‍ನ ರೆಸಾರ್ಟಿಗೆ ಕರೆದೊಯ್ಯಲು ಕಾಂಗ್ರೆಸ್ ನಿರ್ಧರಿಸಿದೆಯಂತೆ.

    ಅಂಕಿ ಅಂಶ:
    * ಗುಜರಾತ್ ವಿಧಾನಸಭೆಯಲ್ಲಿ ಒಟ್ಟು ಸ್ಥಾನಗಳು- 180
    * ಕಾಂಗ್ರೆಸ್ 5 ಶಾಸಕರ ರಾಜೀನಾಮೆಯಿಂದ 175ಕ್ಕೆ ಕುಸಿತ
    * ಬಿಜೆಪಿಯ ಬಲ 106 (ಬಿಜೆಪಿ ಶಾಸಕರು 103, ಎನ್‍ಸಿಪಿ 1, ಭಾರತೀಯ ಬುಡಕಟ್ಟು ಪಕ್ಷ2 )
    * ಕಾಂಗ್ರೆಸ್‍ನ ಬಲ 69 (ಕಾಂಗ್ರೆಸ್ 68, ಪಕ್ಷೇತರ ಶಾಸಕ ಜಿಗ್ನೇಶ್ ಮೇವಾನಿ 1)
    * ಗುಜರಾತ್‍ನಲ್ಲಿ ರಾಜ್ಯಸಭೆಯ ಎಷ್ಟು ಸ್ಥಾನಗಳಲ್ಲಿ ಚುನಾವಣೆ – 4

    ಅಭಯ್ ಭಾರದ್ವಾಜ್, ರಾಮಿವಾ ಬೆನ್ ಬಾರಾ ಮತ್ತು ನರ್ಹಾರಿ ಅಮೀನ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಶಕ್ತಿ ಸಿಂಗ್ ಗೋಹಿಲ್ ಮತ್ತು ಭಾರತ್ ಸಿಂಗ್ ಸೋಲಂಕಿ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.

    ಸದ್ಯದ ಪರಿಸ್ಥಿಯ ಪ್ರಕಾರ ಬಿಜೆಪಿ 2 ಮತ್ತು ಕಾಂಗ್ರೆಸ್ 1 ಸುಲಭವಾಗಿ ಸ್ಥಾನವನ್ನು ಗೆಲ್ಲುತ್ತವೆ. ಆದರೆ ಕಾಂಗ್ರೆಸ್‍ನ ಇಬ್ಬರು ಶಾಸಕರು ಅಡ್ಡ ಮತ ಚಲಾಯಿಸಿದರೆ ಬಿಜೆಪಿ 3 ಸ್ಥಾನಗಳನ್ನು ಗೆಲ್ಲುತ್ತದೆ. ಬಿಜೆಪಿಯಲ್ಲಿ 106 ಶಾಸಕರು ಇದ್ದಾರೆ. ಈ ಮೂಲಕ 3 ರಾಜ್ಯಸಭಾ ಸ್ಥಾನಗಳನ್ನು ಗೆಲ್ಲಲು ಅವರಿಗೆ ಇನ್ನೂ 2 ಮತಗಳು ಬೇಕಾಗುತ್ತವೆ. ಹೀಗಾಗಿ ಕಾಂಗ್ರೆಸ್‍ನ ಇಬ್ಬರು ಶಾಸಕರ ಅಡ್ಡ ಮತದಾನ ಬಿಜೆಪಿಗೆ ಅಗತ್ಯವಿದೆ.

    2017ರಲ್ಲಿ ಗುಜರಾತ್‍ನ 3 ರಾಜ್ಯಸಭಾ ಸ್ಥಾನಗಳ ಚುನಾವಣೆಯ ಸಂದರ್ಭದಲ್ಲಿ ಇದೇ ರೀತಿಯ ಪರಿಸ್ಥಿತಿ ಸೃಷ್ಟಿಯಾಗಿತ್ತು. ಅಹ್ಮದ್ ಪಟೇಲ್ ಅವರ ವಿಜಯವನ್ನು ನಿರ್ಧರಿಸಲು ಕಾಂಗ್ರೆಸ್ ತನ್ನ ಶಾಸಕರನ್ನು ಕರ್ನಾಟಕಕ್ಕೆ ಕಳುಹಿಸಿತ್ತು. ಕೆಲವು ಶಾಸಕರು ಸಹ ಅಡ್ಡ ಮತದಾನ ಮಾಡಿದರು. ಆದರೆ ಅಹ್ಮದ್ ಪಟೇಲ್ ಮೇಲುಗೈ ಸಾಧಿಸಿದ್ದರು.

  • ಸೋಲಿನ ಭೀತಿಯಿಂದ ನಕಲಿ ಆಡಿಯೋ ರಿಲೀಸ್- ಜನಾರ್ದನ ರೆಡ್ಡಿ

    ಸೋಲಿನ ಭೀತಿಯಿಂದ ನಕಲಿ ಆಡಿಯೋ ರಿಲೀಸ್- ಜನಾರ್ದನ ರೆಡ್ಡಿ

    ಬೆಂಗಳೂರು: ಕಾಂಗ್ರೆಸ್ ನಾಯಕರು ಸತ್ಯ ಹರಿಶ್ಚಂದ್ರನ ವಂಶಸ್ಥರು ಎಂಬಂತೆ ನಾಟಕ ಮಾಡುತ್ತಿದ್ದಾರೆ ಮಾಜಿ ಸಚಿವ ಜನಾರ್ದನ ರೆಡ್ಡಿ ವ್ಯಂಗ್ಯವಾಡಿದ್ದಾರೆ.

    100 ಕೋಟಿ ರೂ. ಆಫರ್ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಫೇಸ್‍ಬುಕ್ ನಲ್ಲಿ ಸ್ಟೇಟಸ್ ಅಪ್‍ಡೇಟ್ ಮಾಡಿರುವ ಜನಾರ್ದನ ರೆಡ್ಡಿ, ಕಳೆದ 6 ದಶಕಗಳಿಂದ ಇವರು ಸಂವಿಧಾನವನ್ನು ಎಷ್ಟು ಬಾರಿ ದುರುಪಯೊಗ ಮಾಡಿಕೊಂಡಿದ್ದಾರೆ ಎಂಬುದು ದೇಶದ ಜನತೆಗೆ ಗೊತ್ತಿದೆ. ಈಗಲೂ ಅದೇ ಹಾದಿಯಲ್ಲಿ ಜನರನ್ನು ದಿಕ್ಕು ತಪ್ಪಿಸುವ ಯತ್ನ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

    ನಾಳೆ ನಡೆಯುವ ವಿಶ್ವಾಸ ಮತ ಯಾಚನೆಯಲ್ಲಿ ಸೋಲಿನ ಭೀತಿಯಿಂದ ಅನಾವಶ್ಯಕವಾಗಿ ನನ್ನ ಹೆಸರಿನ ನಕಲಿ ಆಡಿಯೋ ಒಂದನ್ನು ಬಿಡುಗಡೆ ಮಾಡಿ ನನಗೆ ಮತ್ತು ಭಾರತೀಯ ಜನತಾ ಪಕ್ಷಕ್ಕೆ ಕೆಟ್ಟ ಹೆಸರು ತರುವ ಷಡ್ಯಂತ್ರ ಇದಾಗಿದೆ ಎಂದು ದೂರಿದ್ದಾರೆ.

    ನಾಡಿನ ಜನತೆಗೆ ಗೊತ್ತಿದೆ ಇವರ ಬಣ್ಣ ಆಡಿಯೋದಲ್ಲಿ ಇರುವ ಧ್ವನಿಯನ್ನು ನನ್ನ ಹಾಗೆ ಮಾತನಾಡುವ ರೀತಿ ಆಧುನಿಕ ತಂತ್ರಗಾನ ದಿಂದ ಸಿದ್ಧಪಡಿಸಿಕೊಂಡು ನಕಲಿ ಆಡಿಯೋ ಬಿಡುಗಡೆ ಯಾವುದೇ ಸಂಭಂಧ ಇರುವುದಿಲ್ಲ ಎಂದು ಜನಾರ್ದನ ರೆಡ್ಡಿ ಬರೆದುಕೊಂಡಿದ್ದಾರೆ.

    ಕಾಂಗ್ರೆಸ್ ನಾಯಕರಾದ ವಿಎಸ್ ಉಗ್ರಪ್ಪ ಮತ್ತು ಪ್ರೊ ರಾಜೀವ್ ಗೌಡ ಜಂಟಿ ಸುದ್ದಿಗೋಷ್ಠಿ ನಡೆಸಿ ಜನಾರ್ದನ ರೆಡ್ಡಿ ರಾಯಚೂರು ಗ್ರಾಮಾಂತರ ಶಾಸಕ ಬಸನಗೌಡ ಅವರಿಗೆ ಕರೆ ಮಾಡಿ ಆಫರ್ ನೀಡಿರುವ ಆಡಿಯೋವನ್ನು ಬಿಡುಗಡೆ ಮಾಡಿದ್ದರು.

    ಕಾಂಗ್ರೆಸ್, ಜೆಡಿಎಸ್ ಶಾಸಕರನ್ನು ಸೆಳೆಯಲು ನೂರು, ನೂರೈವತ್ತು ಕೋಟಿ ರೂ. ಆಮಿಷವೊಡ್ಡುತ್ತಿದ್ದಾರೆ. ಅಮಿತ್ ಶಾ ಕೂಡ ಆಮಿಷವೊಡ್ಡಿದ್ದಾರೆ. ನೂರು ಕೋಟಿ ರೂ. ಜೊತೆಗೆ ಕ್ಯಾಬಿನೆಟ್ ಸಚಿವ ಸ್ಥಾನದ ಆಮಿಷ ನೀಡಿದ್ದಾರೆ. ನಮ್ಮ ಶಾಸಕರ ಕುಟುಂಬದವರನ್ನ ಸಂಪರ್ಕಿಸಿ ಹಣ ನೀಡುವ ಕೆಲಸ ಮಾಡಿ, ಶಾಸಕರ ಮೇಲೆ ಒತ್ತಡ ತರುತ್ತಿದ್ದಾರೆ ಎಂದು ಉಗ್ರಪ್ಪ ಆರೋಪಿಸಿದ್ದರು.