Tag: Horticulture University

  • ಬಾಗಲಕೋಟೆಯ ತೋಟಗಾರಿಕೆ ವಿವಿ ಮುಚ್ಚೋದಿಲ್ಲ- ಚೆಲುವರಾಯಸ್ವಾಮಿ

    ಬಾಗಲಕೋಟೆಯ ತೋಟಗಾರಿಕೆ ವಿವಿ ಮುಚ್ಚೋದಿಲ್ಲ- ಚೆಲುವರಾಯಸ್ವಾಮಿ

    ಬೆಂಗಳೂರು : ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯವನ್ನು (Bagalkote Horticulture University) ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ (Chaluvaraya Swamy) ಸ್ಪಷ್ಟಪಡಿಸಿದರು.

    ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಹನುಮಂತ ನಿರಾಣಿ ಪ್ರಶ್ನೆ ಕೇಳಿದ್ರು. ಸರ್ಕಾರ ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯವನ್ನ ಸಮಗ್ರ ವಿವಿ ಮಾಡಲು ಸರ್ಕಾರ ಹೊರಟಿದೆ .ಮಂಡ್ಯದಲ್ಲಿ ಸಮಗ್ರ ವಿವಿ ಮಾಡಲು ಸರ್ಕಾರ ಹೊರಟಿದೆ. ಈ ಮೂಲಕ ಬಾಗಲಕೋಟೆ ವಿವಿ ಮುಚ್ಚುವ ಹುನ್ನಾರ ಮಾಡುತ್ತಿದೆ. ಯಾವುದೇ ಕಾರಣಕ್ಕೂ ಬಾಗಲಕೋಟೆ ತೋಟಗಾರಿಕೆ ವಿವಿಯನ್ನು ಮುಚ್ಚಬಾರದು, ಮಂಡ್ಯಗೆ ಬದಲಾವಣೆ ಮಾಡಬಾರದು ಅಂತ ಒತ್ತಾಯ ಮಾಡಿದರು.  ಇದನ್ನೂ ಓದಿ: ಧರ್ಮಸ್ಥಳ ಬುರುಡೆ ಕೇಸ್‌| ಯಾರದ್ದೋ ಫೋಟೋ ತೋರಿಸಿ ಪುತ್ರಿ ಎಂದು ಸುಳ್ಳು ಹೇಳಿದ ಸುಜಾತ ಭಟ್‌!

     

    ಇದಕ್ಕೆ ಸಚಿವ ಚೆಲುವರಾಯಸ್ವಾಮಿ ಉತ್ತರ ನೀಡಿ, ಸಮಗ್ರ ವಿವಿ ಮಾಡುವ ಹಿನ್ನೆಲೆಯಲ್ಲಿ ವಿಜಯ್ ಭಾಸ್ಕರ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ‌. ಇನ್ನು ವರದಿ ಬಂದಿಲ್ಲ. ವರದಿ ಬಂದ ಮೇಲೆ ಚರ್ಚೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ. ಯಾವುದೇ ಕಾರಣಕ್ಕೂ ಬಾಗಲಕೋಟೆ ತೋಟಗಾರಿಕೆ ವಿವಿಯನ್ನ ಮುಚ್ಚುವುದಿಲ್ಲ ಮತ್ತು ವಿಲೀನ ಮಾಡುವುದಿಲ್ಲ. ಯಾವುದೇ ಕಡೆ ಶಿಫ್ಟ್ ಕೊಡೋದು ಇಲ್ಲ ಎಂದು ಹೇಳಿದರು.

  • ವರ್ಗಾವಣೆ ವಿಚಾರದಲ್ಲಿ ಸಚಿವರ ಹಸ್ತಕ್ಷೇಪ- ತೋಟಗಾರಿಕಾ ವಿವಿ ಸಿಬ್ಬಂದಿ ಆಕ್ರೋಶ

    ವರ್ಗಾವಣೆ ವಿಚಾರದಲ್ಲಿ ಸಚಿವರ ಹಸ್ತಕ್ಷೇಪ- ತೋಟಗಾರಿಕಾ ವಿವಿ ಸಿಬ್ಬಂದಿ ಆಕ್ರೋಶ

    ಬಾಗಲಕೋಟೆ: ತೋಟಗಾರಿಕಾ ವಿಶ್ವವಿದ್ಯಾಲಯ ಅಧೀನ ಸಿಬ್ಬಂದಿಯ ವರ್ಗಾವಣೆ ವಿಚಾರದಲ್ಲಿ ತೋಟಗಾರಿಕಾ ಇಲಾಖೆಯ ಸಚಿವ ಎಂ.ಸಿ ಮನಗೂಳಿ ಮೂಗು ತೂರಿಸಿದ್ದಾರೆ. ವರ್ಗಾವಣೆಯ ಬಗ್ಗೆ ತೋಟಗಾರಿಕಾ ಇಲಾಖೆ ಕಾರ್ಯದರ್ಶಿಗಳಿಗೆ ಪತ್ರ ಬರೆದು ಸಚಿವರು ಹಸ್ತಕ್ಷೇಪ ಮಾಡಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.

    ನನ್ನ ಗಮನಕ್ಕೆ ಬಾರದೆ ವರ್ಗಾವಣೆ ಮಾಡಬಾರದೆಂದು ಎಂದು ಮನಗೂಳಿ ಅವರು ತೋಟಗಾರಿಕಾ ಇಲಾಖೆ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಸಚಿವರ ಪತ್ರದ ಪ್ರತಿಯನ್ನು ತೋಟಗಾರಿಕೆ ವಿವಿ ಪ್ರಭಾರಿ ಉಪಕುಲಪತಿಗಳಿಗೆ ಕಾರ್ಯದರ್ಶಿಗಳು ಕಳುಹಿಸಿದ್ದಾರೆ. ಈ ಮೂಲಕ ವರ್ಗಾವಣೆ ಆದೇಶಕ್ಕೆ ತಡೆ ನೀಡುವಂತೆ ಸೂಚನೆ ನೀಡಲಾಗಿದೆ. ಹೀಗಾಗಿ ಕಾರ್ಯದರ್ಶಿಗಳ ಆದೇಶದ ಪ್ರಕಾರ ವರ್ಗಾವಣೆ ವಿಚಾರವನ್ನು ವಿವಿ ಆಡಳಿತ ಮಂಡಳಿ ತಡೆಹಿಡಿದಿದ್ದಾರೆ.

    ತೋಟಗಾರಿಕಾ ವಿವಿ ನಿಯಮಾವಳಿ ಪ್ರಕಾರ ಸಚಿವರು ವರ್ಗಾವಣೆಯಲ್ಲಿ ಹಸ್ತಕ್ಷೇಪ ಮಾಡುವಂತಿಲ್ಲ. ಆದರೆ ಮನಗೂಳಿಯವರು ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂದು ತೋಟಗಾರಿಕಾ ವಿಶ್ವವಿದ್ಯಾಲಯಗಳ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘ ಆರೋಪಿಸಿದೆ.

    ಸಚಿವರು ಈ ಕಾರ್ಯದಿಂದ ಹಿಂದೆ ಸರಿಯಬೇಕು. ಇಲ್ಲದಿದ್ದರೆ ಸಚಿವರ ವಿರುದ್ಧ ಪ್ರತಿಭಟನೆಗೆ ಇಳಿಯೋದಾಗಿ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘ ಎಚ್ಚರಿಕೆ ನೀಡಿದೆ. ಕೆ.ಎಂ ಇಂದಿರೇಶ್ ಬಾಗಲಕೋಟೆ ತೋಟಗಾರಿಕೆ ವಿವಿ ಪ್ರಭಾರ ಉಪಕುಲಪತಿ ಜೂನ್ 6ರಂದು ಸಿಬ್ಬಂದಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದರು. ಆದರೆ ಜೂನ್ 7ರಂದು ತಡೆ ನೀಡುವಂತೆ ತೋಟಗಾರಿಕಾ ಇಲಾಖೆ ಕಾರ್ಯದರ್ಶಿಗಳಿಂದ ಆದೇಶ ಬಂದಿದೆ.

    ಜನರಲ್ ವರ್ಗಾವಣೆ, ಮುಚ್ಯುವಲ್ ವರ್ಗಾವಣೆ, ರಿಕ್ವೆಸ್ಟ್ ವರ್ಗಾವಣೆ ಅಡಿಯಲ್ಲಿ 45 ಸಿಬ್ಬಂದಿ ವರ್ಗಾವಣೆ ಆದೇಶ ಹೊರಡಿಸಲಾಗುತ್ತು. ಹಾಗೆಯೇ ವಿವಿಯ ಇಬ್ಬರು ಡೀನ್, ಒಬ್ಬರು ರೆಜಿಸ್ಟ್ರಾರ್, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗಾವಣೆಗೆ ಆದೇಶಿಸಲಾಗಿತ್ತು. ಆದರೆ ಈ ವಿಚಾರದಲ್ಲಿ ಸಚಿವರು ಹಸ್ತಕ್ಷೇಪ ಮಾಡಿರುವುದು ಸರಿಯಲ್ಲ ಎಂದು ಸಿಬ್ಬಂದಿ ಕಿಡಿಕಾರುತ್ತಿದ್ದಾರೆ.

  • ಕನಸಿನ ಬೆನ್ನೇರಿ ಬಂದಿದ್ದ ವಿದ್ಯಾರ್ಥಿನಿಗೆ ಸಿಕ್ಕಿದ್ದು ಬರೋಬ್ಬರಿ 17 ಚಿನ್ನದ ಪದಕ

    ಕನಸಿನ ಬೆನ್ನೇರಿ ಬಂದಿದ್ದ ವಿದ್ಯಾರ್ಥಿನಿಗೆ ಸಿಕ್ಕಿದ್ದು ಬರೋಬ್ಬರಿ 17 ಚಿನ್ನದ ಪದಕ

    -ಬಾಗಲಕೋಟೆ ತೋಟಗಾರಿಕಾ ವಿವಿ ಘಟಿಕೋತ್ಸವ

    ಬಾಗಲಕೋಟೆ: ಅವಿರತ ಶ್ರಮಪಟ್ಟು, ಶ್ರದ್ಧೆಯಿಟ್ಟು ಅಭ್ಯಾಸ ಮಾಡಿದ್ರೆ ಎಂತಹ ಕನಸೂ ನನಸಾಗುತ್ತದೆ. ಕಂಡ ಕನಸು ಕಾಣುವುದು ಅದನ್ನ ಸಾಕಾರಗೊಳಿಸುವುದು ಅವರವರ ಕೈಯಲ್ಲಿಯೇ ಇದೆ. ಇಂತಹ ಅದ್ಭುತ ಕನಸನ್ನ ಸಾಕಾರಗೊಳಿಸಿರುವ ವಿದ್ಯಾರ್ಥಿನಿ ಇಂದು ಚಿನ್ನದ ಹುಡುಗಿಯಾಗಿದ್ದಾಳೆ. ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ ಅತಿ ಹೆಚ್ಚು ಚಿನ್ನದ ಪದಕಗಳನ್ನ ಬಾಚಿಕೊಂಡು ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕಬ್ಬೆ ಗ್ರಾಮದ ಸೀಮಾ ಹೆಗ್ಗಡೆ ಸಾಧನೆಯ ನಗು ಬೀರಿದ್ದಾರೆ.

    ಬುಧವಾರ ಬಾಗಲಕೋಟೆ ತೋಟಗಾರಿಕಾ ವಿವಿಯಲ್ಲಿ ಎಂಟನೇ ಘಟಿಕೋತ್ಸವ ಕಾರ್ಯಕ್ರಮ ನಡೆಯಿತು. ನೂರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪದಕ ಪಡೆದು ಸಂಭ್ರಮಿಸಿದರು. ಬಾಗಲಕೋಟೆಯ ತೋಟಗಾರಿಕಾ ವಿವಿಯಲ್ಲಿಯೇ ಪದವಿ ಮುಗಿಸಿರುವ ಸೀಮಾ ಹೆಗ್ಗಡೆ 17 ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. 2018ರಲ್ಲಿ ಪದವಿ ಮುಗಿಸಿರುವ ಸೀಮಾ ಹೆಗ್ಗಡೆ ಸದ್ಯ ಬೆಂಗಳೂರು ಸಸ್ಯ ಜೈವಿಕ ತಂತ್ರಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿದ್ದಾರೆ.

    ಮಧ್ಯಮ ವರ್ಗದ ಕುಟುಂಬದಲ್ಲಿ ಜನಿಸಿದ ಗೀತಾ ಹೆಗ್ಗಡೆ ಚಿಕ್ಕಂದಿನಿಂದಲೇ ತಾನೊಬ್ಬಳು ಅತ್ಯುತ್ತಮ ಕೃಷಿಕಳಾಗಬೇಕೆಂಬ ಮಹಾದಾಸೆಯನ್ನ ಹೊಂದಿದ್ದಳು. ಈಕೆ ಮೂಲತಃ ಕೃಷಿ ಕುಟುಂಬದವಳಾಗಿದ್ದು, ತಾತ ಮುತ್ತಜ್ಜರ ಕಾಲದಿಂದಲೂ ಹೊಲದಲ್ಲಿ ತೆಂಗು, ಅಡಿಕೆ ಕೃಷಿ ಮಾಡುತ್ತಾ ಬಂದಿದ್ದಾರೆ. ಇದೇ ಕಾರಣಕ್ಕೆ ಸೀಮಾ ಹೆಗ್ಗಡೆ ತೋಟಗಾರಿಕಾ ವಿಜ್ಞಾನಗಳ ಅಧ್ಯಯನವನ್ನು ಆಯ್ಕೆ ಮಾಡಿಕೊಂಡಿದ್ದು ಎಂಬುದು ವಿಶೇಷ. ವಿಶ್ವವಿದ್ಯಾಲಯದಲ್ಲಿ ಏನಾದ್ರೂ ಸಾಧನೆ ಮಾಡಬೇಕೆಂದು ಕನಸು ಕಂಡ ಸೀಮಾ ಪಿಯುಸಿ ಮುಗಿದ ತಕ್ಷಣ ರಾಜ್ಯದ ಏಕೈಕ ತೋಟಗಾರಿಕಾ ವಿಶ್ವವಿದ್ಯಾಲಯ ಬಾಗಲಕೋಟೆಯಲ್ಲಿ ಸೀಟು ಗಿಟ್ಟಿಸಿಕೊಂಡಿದ್ದರು.

    ಸತತ ಪರಿಶ್ರಮ ಪ್ರತಿ ಫಲವಾಗಿಯೇ ಇಂದು ಪದವಿಯಲ್ಲಿ ಶೇ.92.30 ಅಂಕ ಪಡೆದು ಎಲ್ಲಾ ವಿಷಯಗಳಲ್ಲೂ ಅತ್ಯಧಿಕ ಅಂಕಗಳನ್ನ ಗಳಿಸಿ ಬಾಗಲಕೋಟೆ ವಿಶ್ವವಿದ್ಯಾಲಯದ ಚಿನ್ನದ ವಿದ್ಯಾರ್ಥಿನಿ ಎಂದೇ ಬಿರುದು ಪಡೆದಿದ್ದಾರೆ. ಒಂದಲ್ಲ ಎರಡಲ್ಲ ಒಟ್ಟು 17 ಚಿನ್ನದ ಪದಕಗಳನ್ನ ಪಡೆಯುವ ಮೂಲಕ ದೊಡ್ಡ ಸಾಧನೆಯನ್ನ ಮಾಡಿದ್ದಾರೆ. ಈ ಸಂಭ್ರಮದಲ್ಲಿ ಅವರ ತಂದೆ ತಾಯಿ ಕೂಡಾ ಭಾಗಿಯಾಗಿದ್ರು. ನಮ್ಮ ಮಗಳು ಮೊದಲಿನಿಂದಲೂ ಕೃಷಿ ಮೇಲೆ ಆಸಕ್ತಿ ಹೊಂದಿದ್ದಾಳೆ. ಕೃಷಿಯಲ್ಲೇ ಸಂಶೋಧನೆ ಸಾಧನೆ ಮಾಡಬೇಕೆಂಬ ಗುರಿ ಹೊಂದಿದ್ದಾಳೆ. ಆಕೆ ಪುನಃ ಊರಿಗೆ ಬಂದು ಕೃಷಿ ಮಾಡಲು ಬಯಸಿದ್ದಾಳೆ ಆಕೆಗೆ ನಮ್ಮೆಲ್ಲರ ಸಂಪೂರ್ಣ ಸಹಕಾರವಿದೆ ಎಂದು ಪೋಷಕರು ಬೆನ್ನು ತಟ್ಟಿದ್ದಾರೆ.

    ಸಾಮಾನ್ಯವಾಗಿ ಇಂತಹ ಸಾಧನೆ ಮಾಡಿದವರು ಉತ್ತಮ ಸರ್ಕಾರಿ ನೌಕರಿ ಬಯಸುತ್ತಾರೆ. ಆದರೆ ಇಷ್ಟೆಲ್ಲಾ ಸಾಧನೆ ಮಾಡಿದ ಈ ಚಿನ್ನದ ಹುಡುಗಿ ಮುಂದೆ ತಮ್ಮೂರಿಗೆ ಹೋಗಿ ಕೃಷಿ ಮಾಡುವ ಕನಸನ್ನು ಕಟ್ಟಿಕೊಂಡಿದ್ದಾರೆ ಜೊತೆಗೆ ಸಂಶೋಧನೆಯಲ್ಲಿ ತೊಡಗಬೇಕೆಂಬ ಗುರಿ ಹೊಂದಿದ್ದಾರೆ. ಕಲಿಯುವ, ಸಾಧಿಸುವ ಛಲವಿದ್ದವರಿಗೆ ಯಾವುದು ಕಷ್ಟವಲ್ಲ ಅನ್ನೋದಕ್ಕೆ ಚಿನ್ನದ ಹುಡುಗಿ ಸೀಮಾ ಸಾಧನೆ ಮಾದರಿಯಾಗಿದೆ. ಛಲವೊಂದಿದ್ದರೆ ಗುರಿ ಮುಟ್ಟೋಕೆ ಅಡ್ಡಿಯಾಗಲ್ಲ ಅನ್ನೋದಕ್ಕೆ ಸೀಮಾ ತಾಜಾ ನಿದರ್ಶನವಾಗಿದ್ದಾರೆ ಈ ಚಿನ್ನದ ಹುಡುಗಿ ಮತ್ತಷ್ಟು ಸಾಧನೆ ಮಾಡುವಂತಾಗಲಿ ಅನ್ನೋದು ತೋಟಗಾರಿಕಾ ವಿವಿಯ ಎಲ್ಲ ಸಿಬ್ಬಂದಿ ಆಶಯವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv