Tag: Hosa Cinema

  • ಗ್ಲೋಬಲ್ ಚಿತ್ರಕ್ಕಾಗಿ ಒಂದಾದ ಸುದೀಪ್, ಆರ್.ಚಂದ್ರು ಮತ್ತು ರಾಜಮೌಳಿ ತಂದೆ

    ಗ್ಲೋಬಲ್ ಚಿತ್ರಕ್ಕಾಗಿ ಒಂದಾದ ಸುದೀಪ್, ಆರ್.ಚಂದ್ರು ಮತ್ತು ರಾಜಮೌಳಿ ತಂದೆ

    ಖ್ಯಾತ ನಿರ್ದೇಶಕ ಆರ್.ಚಂದ್ರು (R. Chandru) ಅಭಿಮಾನಿಗಳಿಗೆ ಅಚ್ಚರಿಯ ಸುದ್ದಿಯೊಂದನ್ನು ನೀಡಿದ್ದಾರೆ. ಸ್ಕ್ರಿಪ್ಟ್ ಗಾಗಿ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ರಾಜಮೌಳಿ ತಂದೆ ವಿಜಯ್ ಪ್ರಸಾದ್ (Vijayendra Prasad) ಮತ್ತು ಪ್ಯಾನ್ ಇಂಡಿಯಾ ಸ್ಟಾರ್ ಸುದೀಪ್ (Kiccha Sudeep) ಅವರನ್ನು ಒಟ್ಟಾಗಿಸಿ ಸಿನಿಮಾವೊಂದನ್ನು ಮಾಡುತ್ತಿದ್ದಾರೆ. ಈ ಸಿನಿಮಾದ ಮೂಲಕ ಚಂದ್ರ ಮತ್ತೊಂದು ಹಂತವನ್ನು ದಾಟುತ್ತಿದ್ದಾರೆ.

    ಮಗಧೀರ, ಬಾಹುಬಲಿ, ಆರ್ ಆರ್ ಆರ್ ದಂತಹ ಹಿಟ್ ಚಿತ್ರಗಳ ಕಥೆಗಾರ ವಿ .ವಿಜಯೇಂದ್ರ ಪ್ರಸಾದ್, ಪ್ಯಾನ್ ಇಂಡಿಯಾ ಎಂಬ ಪರಿಕಲ್ಪನೆ ಹುಟ್ಟುಹಾಕಿದ ಎಸ್ .ಎಸ್. ರಾಜಮೌಳಿಯ ಎಲ್ಲಾ ಚಿತ್ರಗಳಿಗೆ ಸ್ಕ್ರಿಪ್ಟ್ ರೈಟರ್ ಆದವರು. ಇದೀಗ ವಿಜಯೇಂದ್ರ ಪ್ರಸಾದ್ ಅವರು ಕನ್ನಡದ ಪ್ರತಿಷ್ಠಿತ ಆರ್.ಸಿ ಸ್ಟುಡಿಯೋಸ್ ಸಂಸ್ಥೆಯ ಚೊಚ್ಚಲ ಚಿತ್ರಕ್ಕೆ ಸ್ಕ್ರಿಪ್ಟ್ ಸೂಪರ್ ವೈಸ್ ಮಾಡಿದ್ದು, ಈ ಚಿತ್ರದಲ್ಲಿ ಪ್ಯಾನ್ ಇಂಡಿಯಾ ಸ್ಟಾರ್ ಕಿಚ್ಚ ಸುದೀಪ್ ಅವರು ನಟಿಸುತ್ತಿದ್ದಾರೆ. ಆರ್.ಚಂದ್ರು ಅವರು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ.

    ಈ ಮೂವರು ದಿಗ್ಗಜರು ಒಂದಾಗಿ ಮಾಡುತ್ತಿರುವ ಈ ಚಿತ್ರಕ್ಕೆ ಇಡೀ ಭಾರತವೇ ಕಾತುರದಿಂದ ಎದುರು ನೋಡುತ್ತಿದ್ದು, ಈ ವರ್ಷದ ಮೆಗಾ ಹಿಟ್ ಚಿತ್ರವಾಗಲಿದೆ.  ಆರ್ .ಸಿ  ಸ್ಟುಡಿಯೋಸ್ (RC Studios) ಕರ್ನಾಟಕದ ಪ್ರತಿಷ್ಠಿತ ಸಂಸ್ಥೆಯಾಗಿದ್ದು, 5 ದೊಡ್ಡ ದೊಡ್ಡ ಚಿತ್ರಗಳಿಗೆ ಈ ವರ್ಷ ಚಾಲನೆ ದೊರೆಯಲಿದೆ. ಆರ್.ಚಂದ್ರು ಅವರು ಏನೇ ಮಾಡಿದರು ವಿಶೇಷವಾಗಿರಲಿದ್ದು ಈ ಚಿತ್ರವೂ ಕೂಡ ಹಲವು ವಿಶೇಷತೆಗಳಿಂದ ಕೂಡಿರಲಿದೆ. ಆ ವಿಶೇಷತೆಗಳಿಗೆ ಚಿತ್ರರಂಗ ಕಾಯುತ್ತಿದೆ.

    ಆರ್.ಸಿ ಸ್ಟುಡಿಯೋಸ್ ಈ ಚಿತ್ರದ ಶೀರ್ಷಿಕೆ ಬಿಡುಗಡೆಗೊಳಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಕಿಚ್ಚನ ಹುಟ್ಟುಹಬ್ಬವಾದ ಸೆಪ್ಟೆಂಬರ್ 2 ರಂದು ಅಧಿಕೃತವಾಗಿ ಘೋಷಣೆಯಾಗಲಿದೆ. ವಿಜಯೇಂದ್ರ ಪ್ರಸಾದ್ ಸ್ಕ್ರಿಪ್ಟ್ ಸೂಪರ್ ವೈಸಿಂಗ್, ಕಿಚ್ಚ ಸುದೀಪ್ ಅವರ ನಟನೆ ಮತ್ತು ಆರ್.ಚಂದ್ರು ಅವರ ನಿರ್ದೇಶನಕ್ಕೆ ಇಡೀ ಚಿತ್ರರಂಗವೇ ಕಾಯುತ್ತಿದ್ದು, ಭಾರತೀಯ ಚಿತ್ರರಂಗದ ಮೋಸ್ಟ್ ಎಕ್ಸಪೆಕ್ಟೆಡ್ ಚಿತ್ರವಾಗಿದೆ.

    ವಿಜಯೇಂದ್ರ ಪ್ರಸಾದ್ ಅವರು 25ಕ್ಕೂ ಹೆಚ್ಚು ಚಿತ್ರಗಳಿಗೆ ಕಥೆ ಬರೆದಿದ್ದು, ಎಲ್ಲಾ ಚಿತ್ರಗಳು ಕೂಡ ಕಮರ್ಷಿಯಲ್ ಸಕ್ಸಸ್ ಕಂಡಿವೆ. ಆಂಧ್ರದ ಪ್ರತಿಷ್ಠಿತ ನಂದಿ ಮತ್ತು ಫಿಲಂ ಫೇರ್ ಪ್ರಶಸ್ತಿಗೂ ಭಾಜನರಾಗಿದ್ದಾರೆ.  ಆರ್ .ಸಿ ಸ್ಟುಡಿಯೋಸ್ ಸಂಸ್ಥೆಯು ಬಹುಕೋಟಿ ವೆಚ್ಚದಲ್ಲಿ ಈ ಚಿತ್ರಕ್ಕೆ ಬಂಡವಾಳ ಹೂಡಲಿದ್ದು, ಪ್ಯಾನ್ ಇಂಡಿಯಾ ಕಾನ್ಸೆಪ್ಟ್ ಮುರಿದು ಗ್ಲೋಬಲ್ ಮೂವಿ ಕಾನ್ಸೆಪ್ಟ್ ನೊಂದಿಗೆ ಇಂಡಿಯನ್ ಹ್ಯೂಜ್ ಬಜೆಟ್ ಚಿತ್ರವಾಗಲಿದೆ.

    ಈ ಮೂಲಕ ಆರ್ ಸಿ ಸ್ಟುಡಿಯೋಸ್ ಸಂಸ್ಥೆ ಕೂಡ ಗ್ಲೋಬಲ್ ಸಂಸ್ಥೆಯಾಗಿ ಯುವ, ಪ್ರತಿಭಾವಂತ ಮತ್ತು ಉದಯೋನ್ಮುಖ ಅವಕಾಶ ಕಲ್ಪಿಸಲಾಗುತ್ತಿದೆ. ಈ ಮೂವರು ದಿಗ್ಗಜರ ಸಮಾಗಮವು ಮುಂದಿನ ಚಿತ್ರರಂಗದ ಬೆಳವಣಿಗೆಗೆ ಸಹಕಾರಿಯಾಗಲಿದೆ.  ಕಿಚ್ಚನ ಹುಟ್ಟುಹಬ್ಬಕ್ಕೆ ಆರ್ ಸಿ ಸ್ಟುಡಿಯೋಸ್ ಸಿನಿಮಾ ನಿರ್ಮಾಣ ಮಾಡುತ್ತಿರುವುದು ಪಕ್ಕಾ ಆಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಂಜನಗೂಡು ನಂಜುಂಡೇಶ್ವರನ ಬಳಿ ಯಶ್ ಕೇಳಿದ್ದೇನು?

    ನಂಜನಗೂಡು ನಂಜುಂಡೇಶ್ವರನ ಬಳಿ ಯಶ್ ಕೇಳಿದ್ದೇನು?

    ಶ್ (Yash) ನಯಾ ಯುದ್ಧಕ್ಕೆ ಸಜ್ಜಾಗಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಹೊಸ ಸಿನಿಮಾದ ಮಾಹಿತಿ ಜಗತ್ತಿನ ಮುಂದೆ ಇಡಲಿದ್ದಾರೆ. ಅಖಾಡ ಸಿದ್ಧವಾಗಿದೆ. ಕುದುರೆ ಏರುವುದೊಂದೇ ಬಾಕಿ. ಅದಕ್ಕೂ ಮುನ್ನ ಮನೆ ದೇವರು ನಂಜುಂಡೇಶ್ವರನ (Nanjundeshwar) ಪಾದಕ್ಕೆ ಶರಣಾಗಿದ್ದಾರೆ. ಮಹಾ ಗೆಲುವಿಗಾಗಿ ಬೇಡಿಕೊಂಡಿದ್ದಾರೆ. ಇನ್ನೇನು ಕೋರಿಕೊಂಡರು ರಾಕಿಭಾಯ್? ನಯಾ ಸಿನಿಮಾ ಘೋಷಣೆ ಯಾವಾಗಂತೆ? ಬಾಲಿವುಡ್‌ಗೆ ಹೋಗಲಿದ್ದಾರಾ ರಾಮಾಚಾರಿ? ಇಂತಹ ಪ್ರಶ್ನೆಗಳು ಸಹಜವಾಗಿಯೇ ಅಭಿಮಾನಿಗಳಲ್ಲಿ ಮೂಡಿವೆ.

    ರಾಕಿಭಾಯ್ ಚಿತ್ತ. ಹೊಸ ಸಿನಿಮಾದತ್ತ. ಈ ಹಿಂದೆ ಮಾಡಿದ ಸಿನಿಮಾಗಳದ್ದು ಒಂದು ತೂಕವಾದರೆ. ಈಗ ಮಾಡಲಿರುವ ಚಿತ್ರದ್ದು ಭೂಮಿ ತೂಕ. ಅದಕ್ಕಾಗಿಯೇ ಕಳೆದ ಎರಡು ಮೂರು ವರ್ಷಗಳಿಂದ ಹುಡುಕಿ ಹುಡುಕಿ ಕತೆ ಮಾಡಿಸಿದ್ದಾರೆ. ಈಗಾಗಲೇ ಚಿತ್ರಕತೆ ಒಂದು ಹಂತಕ್ಕೆ ಬಂದಿದೆ. ತಿದ್ದುವಿಕೆ ನಡೆಯುತ್ತಲೇ ಇರುತ್ತದೆ. ಮಲಯಾಳಂ ನಿರ್ದೇಶಕಿ ಗೀತು ಮೋಹನ್‌ದಾಸ್ ಡೈರೆಕ್ಟರ್ ಪಟ್ಟದಲ್ಲಿ ಕುಳಿತಿದ್ದಾರೆ. ಒಂದೊಂದು ವಿಭಾಗವೂ ಹಗಲು ರಾತ್ರಿ ಬೆವರು ಸುರಿಸುತ್ತಿದೆ. ಈ ಸಮಯದಲ್ಲಿಯೇ ರಾಕಿಭಾಯ್ ಮನೆ ದೇವರು ನಂಜನಗೂಡು (Nanjangudu) ನಂಜುಂಡೇಶ್ವರನ ಪಾದಕ್ಕೆ ಅಡ್ಡ ಬಿದ್ದಿದ್ದಾರೆ. ದಿವ್ಯ ಗೆಲುವನ್ನು ನೀಡು ಎಂದು ಕೈಮುಗಿದಿದ್ದಾರೆ.

    ಯಶ್ ಬಾಲ್ಯದಿಂದಲೇ ಓಡಾಡಿ ಬೆಳೆದ ಜಾಗ ಈ ನಂಜುಂಡೇಶ್ವರನ ಸನ್ನಿಧಿ. ಮೈಸೂರಿನಿಂದ ಹಬ್ಬ ಹರಿದಿನಗಳಲ್ಲಿ ಅಪ್ಪ ಅಮ್ಮ ಹಾಗೂ ಇಬ್ಬರು ಮಕ್ಕಳು ಈ ದೈವ ದರ್ಶನಕ್ಕೆ ಹೋಗುತ್ತಿದ್ದರು. ಮನೆಯಲ್ಲಿ ಎಷ್ಟೇ ಕಷ್ಟ ಇದ್ದರೂ ಅದನ್ನು ನಿವಾರಿಸು ಭಗವಂತ ಎಂದು ಕೋರುತ್ತಿದ್ದರು. ಡ್ರೈವರ್ ಆಗಿದ್ದ ಅಪ್ಪ. ಮನೆ ಒಡತಿಯಾಗಿದ್ದ ಅಮ್ಮ. ಇಬ್ಬರೂ ಮಕ್ಕಳಿಗೆ ಏನೇನು ಬೇಕೊ ಎಲ್ಲವನ್ನೂ ಕೊಟ್ಟು ಭಾವುಕರಾಗುತ್ತಿದ್ದರು. ಅದೇ ದೇವರ ಮೆಟ್ಟಿಲ ಮೇಲೆ ಇಂದು ಯಶ್ ಮೀಸೆ ತಿರುವುತ್ತಾ ನಿಂತಿದ್ದಾರೆ. ನಂಜುಂಡೇಶ್ವರನ ಅನುಗ್ರಹದಿಂದಲೇ ಈಗ ನ್ಯಾಶನಲ್ ಸ್ಟಾರ್ ಪಟ್ಟದಲ್ಲಿ ಕುಳಿತಿದ್ದಾರೆ.

    ಅದೊಂದು ಕಾಲದಲ್ಲಿ ಅಪ್ಪ ಅಮ್ಮನ ಜೊತೆ ಈ ಸನ್ನಿಧಿಗೆ ಹೋಗುತ್ತಿದ್ದ ಯಶ್ ಈಗ ಪತ್ನಿ ರಾಧಿಕಾ ಹಾಗೂ ಇಬ್ಬರು ಮಕ್ಕಳ ಸಮೇತ ಹೋಗುವ ಸಮಯ ಬಂದಿದೆ. ಅಂದು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ರಾಕಿ ಈಗ ಕೋಟಿ ಕೋಟಿ ಬೆಲೆ ಬಾಳು ಐಷಾರಾಮಿ ಕಾರಿನಲ್ಲಿ ಹೋಗಿದ್ದಾರೆ. ಇವರಿಗಾಗಿ ವಿಶೇಷ ಪೂಜೆ ಕೂಡ ಮಾಡಲಾಯಿತು. ಕೆಜಿಎಫ್ ಮುಗಿದ ಮೇಲೆ ಯಶ್ ಎಲ್ಲೇ ಸಿಗಲಿ ಎಲ್ಲರೂ ಕೇಳುವುದು ಒಂದೇ ಪ್ರಶ್ನೆ. `ಯಾವಾಗ ಹೊಸ ಸಿನಿಮಾ ಅನೌನ್ಸ್ಮೆಂಟ್ ?’ ಅದಕ್ಕೆ ಸಿದ್ಧರಾಗಿಯೇ ಬಂದಂತಿದ್ದ ಯಶ್ ಮತ್ತೆ ಅದೇ ಮಾತನ್ನು ರಿಪೀಟ್ ಮಾಡಿದರು. ಸದ್ಯದಲ್ಲೇ ಎಲ್ಲವನ್ನೂ ತಿಳಿಸುತ್ತೇನೆ ಎಂದರು. ಇದನ್ನೂ ಓದಿ:ಅನಿಮಲ್ ಶೂಟಿಂಗ್ ಮುಗಿಸಿದ ರಶ್ಮಿಕಾ ಮಂದಣ್ಣ

    ಕಾಸು ಕೊಟ್ಟು ನೋಡುವ ಪ್ರೇಕ್ಷಕರಿಗೆ ಯಾವುದೇ ರೀತಿ ಬೇಸರ ಆಗಬಾರದು. ಅಂಥ ಸಿನಿಮಾಕ್ಕಾಗಿಯೇ ಒಂದು ನಿಮಿಷ ವ್ಯರ್ಥ ಮಾಡದೇ ದುಡಿಯುತ್ತಿದ್ದೇನೆ ಎಂದು ಹೇಳಿ ಇನ್ನಷ್ಟು ಕುತೂಹಲ ಮೂಡಿಸಿದರು. ಈ ನಡುವೆ ತೂರಿ ಬಂದ ಪ್ರಶ್ನೆ ಒನ್ಸ್ ಅಗೇನ್ ಅದೇ. ಬಾಲಿವುಡ್‌ನ ರಾಮಾಯಣ ಸಿನಿಮಾದಲ್ಲಿ ಯಶ್ ರಾವಣನ ಪಾತ್ರ ಮಾಡಲಿದ್ದಾರಂತೆ. ಈಗಾಗಲೇ ರಾಮಾಯಣ ತಂಡ ಸಂಪರ್ಕ ಮಾಡಿದೆಯಂತೆ. ಇದೇ ಕೆಲವು ದಿನಗಳಿಂದ ಗಿರಕಿ ಹೊಡೆಯುತ್ತಿತ್ತು. ಹಾಗೆಯೇ ರಜನಿ ಜೊತೆ ಯಶ್ ನಟಿಸಲಿದ್ದಾರೆ ಎನ್ನುವ ಮಾತೂ ಕೇಳಿ ಬಂದಿತ್ತು. ಅದಕ್ಕೆಲ್ಲ ಖಡಕ್ ಉತ್ತರ ಕೊಟ್ಟು ನಕ್ಕರು.

    ಈಗಾಗಲೇ ಯಶ್ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಕೆಜಿಎಫ್ (KGF) ಗೆಲುವು ಸುಮ್ಮನೆ ಬಂದಿಲ್ಲ ಎನ್ನುವುದನ್ನು ಅವರು ಸಾಬೀತು ಪಡಿಸಬೇಕಿದೆ. ಕಾರಣ ಕಣ್ಣ ಮುಂದಿದೆ. ಬಾಹುಬಲಿ ನಂತರ ಟಾಲಿವುಡ್ ಸ್ಟಾರ್ ಪ್ರಭಾಸ್ ಒಂದೇ ಒಂದು ಹಿಟ್ ಕೊಟ್ಟಿಲ್ಲ. ಎಲ್ಲವೂ ಅಟ್ಟರ್ ಫ್ಲಾಪ್. ರಾಜಮೌಳಿ ಇದ್ದಿದ್ದಕ್ಕೇ ಬಾಹುಬಲಿ ಗೆದ್ದಿತು ಎನ್ನುವ ಮಾತು ಶುರುವಾಗಿದೆ. ಅದೇ ರೀತಿ ಪ್ರಶಾಂತ್ ನೀಲ್ ಮಾತ್ರ ಗೆಲುವಿಗೆ ಕಾರಣ ಎನ್ನುವಂತೆ ಆಗಬಾರದಲ್ಲವೆ? ಅದಕ್ಕಾಗಿ ಹೊಸ ಸಿನಿಮಾ ಜಗತ್ತಿನ ತುಂಬಾ ಮೆರವಣಿಗೆ ಹೊರಡಬೇಕಿದೆ. ಅದೆಲ್ಲ ಲೆಕ್ಕಾಚಾರ ತಲೆಯಲ್ಲಿ ಇಟ್ಟುಕೊಂಡು ಯಶ್ ಯಾಗಕ್ಕೆ ಮೊದಲ ಹೆಜ್ಜೆ ಇಡಲಿದ್ದಾರೆ.

  • ನರ್ತನ್ ನಿರ್ದೇಶನದಲ್ಲಿ ಯಶ್ ನಟಿಸ್ತಾರಾ ಅಥವಾ ಇಲ್ಲವಾ? : ಒಂದು ವಾರ ಡೆಡ್ ಲೈನ್

    ನರ್ತನ್ ನಿರ್ದೇಶನದಲ್ಲಿ ಯಶ್ ನಟಿಸ್ತಾರಾ ಅಥವಾ ಇಲ್ಲವಾ? : ಒಂದು ವಾರ ಡೆಡ್ ಲೈನ್

    ಕೆಜಿಎಫ್ 2 ಸಿನಿಮಾದ ನಂತರ ಯಶ್ ಬೇಡಿಕೆ ತುಂಬಾ ಹೆಚ್ಚಿದೆ. ಕನ್ನಡವೂ ಸೇರಿದಂತೆ ಹಲವು ಭಾಷೆಯ ಸಿನಿಮಾ ನಿರ್ಮಾಪಕರು, ನಿರ್ದೇಶಕರು ಯಶ್ ಹಿಂದೆ ಬಿದ್ದಿದ್ದಾರೆ. ಇಷ್ಟೊಂದು ಬೇಡಿಕೆ ಇರುವಾಗ ಯಶ್ ಮೌನವಹಿಸಿದ್ದಾರೆ. ತಮಿಳು, ತೆಲುಗು,  ಕನ್ನಡ ಸಿನಿಮಾಗಳ ಬಗ್ಗೆ ಸುದ್ದಿ ಆಗುತ್ತಿದ್ದರೂ, ಯಾವುದಕ್ಕೂ ಪ್ರತಿಕ್ರಿಯಿಸದೆ ಬರುತ್ತಿರುವ ಸುದ್ದಿಗಳನ್ನು ಓದಿಕೊಂಡು ಸುಮ್ಮನಾಗಿದ್ದಾರೆ. ಆದರೂ, ಸುದ್ದಿಗಳು ಮಾತ್ರ ನಿಲ್ಲುತ್ತಿಲ್ಲ.

    ಈವರೆಗೂ ನರ್ತನ್ ನಿರ್ದೇಶನದ ಸಿನಿಮಾದಲ್ಲಿ ಯಶ್ ನಟಿಸಲಿದ್ದಾರೆ ಎಂದು ಸುದ್ದಿ ಆಗಿತ್ತು. ಆ ಸಿನಿಮಾಗಾಗಿಯೇ ಯಶ್ ತಯಾರಿ ಆಗುತ್ತಿದ್ದಾರೆ ಎಂದೂ ಹೇಳಲಾಗಿತ್ತು. ಯಶ್ ಆಪ್ತರು ಕೂಡ ಈ ಸುದ್ದಿಯನ್ನು ಖಚಿತ ಪಡಿಸಿದ್ದರು. ಆದರೆ, ಒಂದು ವಾರದಿಂದ ನರ್ತನ್ ಸಿನಿಮಾದಲ್ಲಿ ಯಶ್ ನಟಿಸುತ್ತಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ನರ್ತನ್ ಸಿನಿಮಾಗೂ ಮುಂಚೆ, ಮತ್ತೊಂದು ಭಾರೀ ಬಜೆಟ್ ಸಿನಿಮಾದಲ್ಲಿ ಅವರು ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ : ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಡೇಟಿಂಗ್ ಮಾಡುತ್ತಿದ್ದರು : ಸಾರಾ ಅಲಿ ಖಾನ್

    ಈ ನಡುವೆ ನರ್ತನ್ ಮಾಧ್ಯಮವೊಂದರ ಜೊತೆ ಮಾತನಾಡಿ, ಸಿನಿಮಾ ರಂಗ ಅಂದರೆ, ಅಲ್ಲಿ ವದಂತಿಗಳು, ಗಾಸಿಪ್ ಗಳು ಇರಲೇಬೇಕು. ಯಶ್ ಯಾವ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನುವುದು ಒಂದು ವಾರದೊಳಗೆ ಗೊತ್ತಾಗಲಿದೆ. ಬಹುಶಃ ಒಂದು ವಾರದಲ್ಲಿ ಸಿನಿಮಾ ಬಗ್ಗೆ ಕ್ಲ್ಯಾರಿಟಿ ಸಿಗಬಹುದು ಎಂದು ಹೇಳಿದ್ದಾರೆ. ಅಲ್ಲಿಗೆ ಒಂದು ವಾರದಲ್ಲಿ ಯಶ್ ಅವರ ಹೊಸ ಸಿನಿಮಾದ ಅಪ್ ಡೇಟ್ ಏನಾದರೂ ಸಿಗಬಹುದಾ ಕಾದುನೋಡಬೇಕು.

    Live Tv
    [brid partner=56869869 player=32851 video=960834 autoplay=true]