Tag: Hostel Hudugaru

  • ಸಾಲು ಸಾಲು ಸಿನಿಮಾ ಸಂಭ್ರಮದಲ್ಲಿ ನಟಿ ಅರ್ಚನಾ ಕೊಟ್ಟಿಗೆ

    ಸಾಲು ಸಾಲು ಸಿನಿಮಾ ಸಂಭ್ರಮದಲ್ಲಿ ನಟಿ ಅರ್ಚನಾ ಕೊಟ್ಟಿಗೆ

    ಟಿ ಅರ್ಚನಾ ಕೊಟ್ಟಿಗೆ (Archana Kottige) ಸಿನಿಮಾ ರಂಗದಲ್ಲಿ ತಮ್ಮದೇ ಆದ ಹೆಸರು ಮಾಡಿದ್ದಾರೆ. ವಿಭಿನ್ನ ಪಾತ್ರಗಳ ಮೂಲಕ ಗುರುತಿಸಿಕೊಳ್ಳುತ್ತಿದ್ದಾರೆ. ಕನ್ನಡ ಚಿತ್ರರಂಗದ (Sandalwood) ಮಟ್ಟಿಗೆ ಇವರು ಭಿನ್ನ ಆಲೋಚನೆಯ ನಟಿ ಅನ್ನೋದರಲ್ಲಿ ಎರಡು ಮಾತಿಲ್ಲ. ಯಾಕೆಂದರೆ, ಅವರಿಗೆ ನಾಯಕಿಯಾಗಿಯೇ ಫೇಮಸ್ ಆಗಬೇಕೆಂಬ ಉದ್ದೇಶವಿಲ್ಲವಂತೆ.

    ಪಾತ್ರ ಯಾವುದಾದರೂ ಅದು ಸವಾಲಿನದ್ದಾಗಿರಬೇಕು, ಪ್ರೇಕ್ಷಕರ ಮನಸಲ್ಲಿ ಅಚ್ಚಳಿಯದೇ ಛಾಪು ಮೂಡಿಸಬೇಕು ಅಂತಾರೆ ಅರ್ಚನಾ. ತಮ್ಮ ಆಲೋಚನೆಯಂತೆಯೇ ಈಗಾಗಲೇ ಸಾಕಷ್ಟು ಅವಕಾಶಗಳು ಸಿಕ್ಕಿದ್ದು, ಇನ್ನೇನು ಅವರು ಅಭಿನಯಿಸಿರುವ ಚಿತ್ರಗಳೆಲ್ಲ ಸಾಲು ಸಾಲಾಗಿ ಬಿಡುಗಡೆಯ ಸರತಿಯಲ್ಲಿವೆ. ಇದನ್ನೂ ಓದಿ:ಮಗಳೊಂದಿಗಿನ ಕ್ಯೂಟ್ ಸೆಲ್ಫಿ ಹಂಚಿಕೊಂಡ ರಾಧಿಕಾ ಪಂಡಿತ್

    ಇತ್ತೀಚೆಗೆ ಹೇಗಾಗಿದೆಯೆಂದರೆ, ಬಿಡುಗಡೆಯಾಗೋ ಸಿನಿಮಾಗಳಲ್ಲೆಲ್ಲ ಅರ್ಚನಾ ಇರುವಿಕೆಯೇ ದಟ್ಟವಾಗಿ ಕಾಣಿಸುತ್ತಿದೆ. ವಾರಗಳ ಹಿಂದೆಯಷ್ಟೇ ಬಿಡುಗಡೆಗೊಂಡು, ಇದೀಗ ರಾಜ್ಯಾದ್ಯಂತ ಯಶಸ್ವೀ ಪ್ರದರ್ಶನ ಕಾಣುತ್ತಿರುವ ಚಿತ್ರ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ (Hostel Hudugaru). ಅದರಲ್ಲಿಯೂ ಅರ್ಚನಾ ಕೊಟ್ಟಿಗೆ ಒಂದೊಳ್ಳೆ ಪಾತ್ರಕ್ಕೆ ಜೀವ ತುಂಬಿದ್ದಾರೆ. ಅದಕ್ಕೆ ಪ್ರೇಕ್ಷಕರ ಕಡೆಯಿಂದ ಮೆಚ್ಚುಗೆ ಕೂಡ ಕೇಳಿ ಬರುತ್ತಿವೆ. ಇದರ ಬೆನ್ನಲ್ಲಿಯೇ ಅರ್ಚನಾ ನಟಿಸಿರುವ ಮತ್ತೊಂದಷ್ಟು ಚಿತ್ರಗಳು ಬಿಡುಗಡೆಗೆ ಸಜ್ಜಾಗಿವೆ.

    ಬಯಲು ಸೀಮೆ, ಎಲ್ಲರ ಕಾಲೆಳೆಯುತ್ತೆ ಕಾಲ, ಜುಗಲ್ಬಂದಿ ಮುಂತಾದ ಚಿತ್ರಗಳೀಗ ಬಿಡುಗಡೆಯ ಹೊಸ್ತಿಲಿನಲ್ಲಿವೆ. ಈ ಎಲ್ಲ ಚಿತ್ರಗಳಲ್ಲಿ ಒಂದಕ್ಕಿಂತ ಒಂದು ವಿಶೇಷ ಪಾತ್ರಗಳಲ್ಲಿ ಅರ್ಚನಾ ನಟಿಸಿದ್ದಾರಂತೆ. ಜುಗಲ್ಬಂದಿ ಚಿತ್ರದಲ್ಲಿ ಅರ್ಚನಾ ನೆಗೆಟಿವ್ ಶೇಡ್ ಪಾತ್ರದಲ್ಲಿ ನಟಿಸಿದ್ದರೆ, ಬಯಲು ಸೀಮೆ ಚಿತ್ರದಲ್ಲಿ ಕಾಲೇಜು ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ. ಎಲ್ಲರ ಕಾಲೆಳೆಯುತ್ತೆ ಕಾಲ ಸಿನಿಮಾದಲ್ಲಿ ಚಂದನ್ ಶೆಟ್ಟಿಗೆ ಜೋಡಿಯಾಗಿ ನಟಿಸಿದ್ದಾರೆ. ಇಲ್ಲಿ ಅರ್ಚನಾ ಹಳ್ಳಿ ಸೀಮೆಯ ಬಜಾರಿಯಾಗಿ ಕಾಣಿಸಿಕೊಂಡಿದ್ದಾರೆ. ಈ ಎಲ್ಲ ಚಿತ್ರಗಳೂ ಸಾಲು ಸಾಲಾಗಿ ಬಿಡುಗಡೆಗೊಳ್ಳಲು ಸಜ್ಜಾಗಿವೆ.

    2018ರಲ್ಲಿ ‘ಅರಣ್ಯಕಾಂಡ’ ಚಿತ್ರದ ಮೂಲಕ ನಟಿಯಾಗಿ ಎಂಟ್ರಿ ಕೊಟ್ಟವರು ಅರ್ಚನಾ ಕೊಟ್ಟಿಗೆ. ಆ ನಂತರ ವಾಸು ನಾನ್ ಪಕ್ಕಾ ಕಮರ್ಷಿಯಲ್, ಮೇಡ್ ಇನ್ ಬೆಂಗಳೂರು, ಡಿಯರ್ ಸತ್ಯಾ, ಕಟಿಂಗ್ ಶಾಪ್, ಹೊಂದಿಸಿ ಬರೆಯಿರಿ, ಪ್ಯಾನ್ ಇಂಡಿಯಾ ಚಿತ್ರವಾದ ವಿಜಯಾನಂದ ಮುಂತಾದವುಗಳಲ್ಲಿ ನಟಿಸಿ ಸೈ ಅನ್ನಿಸಿಕೊಂಡಿದ್ದಾರೆ.

     

    ಹೀಗೆ ಅತ್ಯಂತ ಕಡಿಮೆ ಅವಧಿಯಲ್ಲಿ ಹೆಚ್ಚಿನ ಸಿನಿಮಾಗಳಲ್ಲಿ ನಟಿಸಿರುವ ಅರ್ಚನಾಗೆ ಒಳ್ಳೆ ನಟಿ ಅನ್ನಿಸಿಕೊಳ್ಳುವ ಹೆಬ್ಬಯಕೆ ಇದೆ. ಇದೀಗ ಮತ್ತೊಂದಷ್ಟು ಅವಕಾಶಗಳೂ ಅವರನ್ನರಸಿ ಬರುತ್ತಿವೆ. ಸದ್ಯ ಒಂದು ಸಿನಿಮಾದಲ್ಲಿ ಬ್ಯುಸಿಯಾಗಿರೋ ಅರ್ಚನಾ, ಆ ಬಗೆಗಿನ ಮಾಹಿತಿಗಳನ್ನು ಸದ್ಯದಲ್ಲಿಯೇ ಪ್ರೇಕ್ಷಕರ ಮುಂದಿಡಲಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವೀಕೆಂಡ್ ನಿಂದ ವಿದೇಶದಲ್ಲಿಯೂ ‘ಹಾಸ್ಟೆಲ್ ಬಾಯ್ಸ್’ ಹಂಗಾಮ

    ವೀಕೆಂಡ್ ನಿಂದ ವಿದೇಶದಲ್ಲಿಯೂ ‘ಹಾಸ್ಟೆಲ್ ಬಾಯ್ಸ್’ ಹಂಗಾಮ

    ಳ್ಳೆಯ ಸಿನಿಮಾಗಳಿಲ್ಲದೇ ಸೊರಗಿದ್ದ ಸ್ಯಾಂಡಲ್ ವುಡ್ ಇಂಡಸ್ಟ್ರೀಗೆ ಹಾಸ್ಟೆಲ್ ಹುಡುಗರು (Hostel Hudugaru) ಬೇಕಾಗಿದ್ದಾರೆ ಚಿತ್ರ ಹೊಸ ಚೈತನ್ಯ ತಂದು ಕೊಟ್ಟಿದೆ. ತುಂಗಾ ಬಾಯ್ಸ್ ಹಾಸ್ಟೆಲ್ ಹುಡುಗರ ಕ್ವಾಟ್ಲೆಗೆ ಪ್ರೇಕ್ಷಕ ಹೊಟ್ಟೆ ಹುಣ್ಣಾಗುವಂತೆ ನಕ್ಕುತ್ತಿದ್ದಾರೆ. ಭರಪೂರ ಮನರಂಜನೆ ಉಣಬಡಿಸಿರುವ ಈ ಸಿನಿಮಾಗೆ ರಾಜ್ಯಾದ್ಯಂತ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ. ಬರೀ ರಾಜ್ಯ ಮಾತ್ರವಲ್ಲ ಹೊರರಾಜ್ಯಗಳಿಗೂ ಹಾಸ್ಟೆಲ್ ಹುಡುಗರ  ಹಾವಳಿ ಹಬ್ಬಿದೆ. ಈಗ ವಿದೇಶದಲ್ಲಿಯೂ ಧಮಾಕ ಎಬ್ಬಿಸಲು ಬಾಯ್ಸ್ ರೆಡಿಯಾಗಿದ್ದಾರೆ.

    ಹಾಸ್ಟೆಲ್ ಹುಡುಗರ ಬೇಕಾಗಿದ್ದಾರೆ ಸಿನಿಮಾ ವಿದೇಶದಲ್ಲಿಯೂ (Abroad) ಬಿಡುಗಡೆಯಾಗುತ್ತಿದೆ. ಕೆನಡಾ, ಸೌತ್ ಆಫ್ರಿಕಾ, ಆಸ್ಟ್ರೇಲಿಯಾ, ಯುಕೆ ಮತ್ತು ಯೂರೋಪ್ ದೇಶಗಳಲ್ಲಿ ಇದೇ ವೀಕೆಂಡ್ ನಿಂದ ತುಂಗಾ ಹಾಸ್ಟೆಲ್ ಬಾಯ್ಸ್ ಕ್ವಾಟ್ಲೆ ಶುರುವಾಗಲಿದೆ. ಆರಂಭದಿಂದಲೂ ತಮ್ಮ ಚಿತ್ರವನ್ನು ಅತ್ಯಂತ ಕೆಟ್ಟ ಚಿತ್ರ ಎನ್ನುತ್ತಲೇ ಅತ್ಯುತ್ತಮ ಸಿನಿಮಾ ಎಂದು ಪ್ರೇಕ್ಷಕರಿಂದ ಬೆನ್ನು ತಟ್ಟಿಸಿಕೊಂಡಿರುವ ಚಿತ್ರತಂಡ ವಿಶ್ವಾದ್ಯಂತ ತಮ್ಮ ಸಿನಿಮಾವನ್ನು ಸಂಭ್ರಮಿಸುವ ತವಕದಲ್ಲಿದೆ. ಇದನ್ನೂ ಓದಿ:ಮದುವೆ ದಿನ ಹತ್ತಿರ ಬರುತ್ತಿದ್ದಂತೆ ಬಾಲಿಗೆ ಹಾರಿದ ಹರ್ಷಿಕಾ ಪೂಣಚ್ಚ

    ಹೈದರಾಬಾದ್, ಚೆನ್ನೈ, ಕೊಚ್ಚಿ ಸೇರಿದಂತೆ ಹಲವರು ರಾಜ್ಯಗಳಲ್ಲಿ ನಿತಿನ್ ಕೃಷ್ಣಮೂರ್ತಿ (Nitin Krishnamurthy) ಚೊಚ್ಚಲ ಕನಸ್ಸಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬಂದಿದೆ. ವರುಣ್ ಗೌಡ (Varun Gowda), ನಿತಿನ್ ಕೃಷ್ಣಮೂರ್ತಿ, ಪ್ರಜ್ವಲ್ ಬಿ.ಪಿ, ಅರವಿಂದ್ ಎಸ್ ಕಶ್ಯಪ್ ಸಿನಿಮಾಗೆ ಬಂಡವಾಳ ಹೂಡಿದ್ದು, ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ತಮ್ಮದೇ ಪರಂವಃ ಪಿಕ್ಚರ್ಸ್ ನಡಿ ಪ್ರೆಸೆಂಟ್ ಮಾಡಿದ್ದಾರೆ. ರಂಗಭೂಮಿ ಹಿನ್ನೆಲೆ ಹೊಂದಿರುವ ಪ್ರತಿಭಾನ್ವಿತ ತಂಡಕ್ಕೆ ರಿಷಬ್ ಶೆಟ್ಟಿ, ರಮ್ಯಾ, ಪವನ್ ಕುಮಾರ್, ಶೈನ್ ಶೆಟ್ಟಿ ಹಾಗೂ ದಿಗಂತ್ ಕೂಡ ಸಾಥ್ ಕೊಟ್ಟಿದ್ದಾರೆ.

     

    ಇಡೀ ಸ್ಯಾಂಡಲ್ ವುಡ್ ಬೆಂಬಲವಾಗಿ ನಿಂತಿರುವ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಕನ್ನಡ ಸಿನಿಮಾ ಇಂಡಸ್ಟ್ರೀಗೆ ಹೊಸ ಹುರುಪು ತಂದುಕೊಟ್ಟಿದೆ. ಅಜನೀಶ್ ಲೋಕನಾಥ್ ಸಂಗೀತ, ಅರವಿಂದ್ ಕಶ್ಯಪ್ ಛಾಯಾಗ್ರಹಣ ಚಿತ್ರಕ್ಕಿದೆ. ಕಳೆದ ಶುರುವಾರ ರಾಜ್ಯಾದ್ಯಂತ ತೆರೆಕಂಡ ಸಿನಿಮಾ ಎಲ್ಲೆಡೆ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು, ಪ್ರೇಕ್ಷಕಪ್ರಭುವಿಗೆ ಮನರಂಜನೆ ರಸದೌತಣ ನೀಡುವಲ್ಲಿ ಹೊಸಬರ ತಂಡ ಯಶಸ್ವಿಯಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಾಸ್ಟೆಲ್ ಹುಡುಗರ ಆಟ, ರಮ್ಯಾ ಮೇಡಂ ಪಾಠ: ಟ್ರೈಲರ್ ಸಖತ್

    ಹಾಸ್ಟೆಲ್ ಹುಡುಗರ ಆಟ, ರಮ್ಯಾ ಮೇಡಂ ಪಾಠ: ಟ್ರೈಲರ್ ಸಖತ್

    ಸೆಟ್ಟೇರಿದ ದಿನದಿಂದಲೂ ಭಾರೀ ಕುತೂಹಲ ಹೆಚ್ಚಿಸಿರುವ ಹಾಸ್ಟೆಲ್ ಹುಡುಗರು (Hostel Hudugaru) ಸಿನಿಮಾದ ಮೊದಲ ನೋಟ ಬಿಡುಗಡೆಯಾಗಿದೆ. ಬೆಂಗಳೂರಿನ ನಂದಿ ಲಿಂಕ್ಸ್ ಗ್ರೌಂಡ್ ನಲ್ಲಿ ಅದ್ಧೂರಿಯಾಗಿ ಟ್ರೈಲರ್ (Trailer) ಲಾಂಚ್ ಮಾಡಲಾಯಿತು. ಅಶ್ವಿನಿ ಪುನೀತ್ ರಾಜ್‌ಕುಮಾರ್, ರಿಷಬ್ ಶೆಟ್ಟಿ, ರಕ್ಷಿತ್‌ ಶೆಟ್ಟಿ, ಧ್ರುವ ಸರ್ಜಾ, ಪ್ರಮೋದ್ ಶೆಟ್ಟಿ ಸೇರಿದಂತೆ ಸ್ಯಾಂಡಲ್‌ವುಡ್ ತಾರೆಯರು ಕಾರ್ಯಕ್ರಮಕ್ಕೆ ಆಗಮಿಸಿ ತಂಡಕ್ಕೆ ಶುಭ ಹಾರೈಸಿದ್ದರು.

    ರಿಷಬ್ ಶೆಟ್ಟಿ (Rishabh Shetty) ಮಾತನಾಡಿ, ‘ನನ್ನ ಶಿಷ್ಯದಿಂದರೇ ಮಾಡಿರುವ ಸಿನಿಮಾ. ಅರವಿಂದ್, ಪ್ರಜ್ವಲ್ ಇವರೆಲ್ಲರನ್ನೂ ಲೂಸಿಯಾ ಸಮಯದಿಂದಲೂ ನೋಡಿಕೊಂಡು ಬರುತ್ತಿದ್ದೇನೆ. ತುಂಬಾ ಅದ್ಭುತ ಟೆಕ್ನಿಷಿಯನ್ಸ್. ಒಂದು ಸಿನಿಮಾದ ಕಥೆ ಇದೆ ಗೆಸ್ಟ್ ಅಪಿಯರೆನ್ಸ್ ಮಾಡ್ತೀರಾ ಅಂತಾ ಕೇಳಿದರು. ಕಥೆ ಏನೂ ಕೇಳಿಲ್ಲ. ಒಂದು ರಾತ್ರಿಯಷ್ಟೇ ಪಾತ್ರವನ್ನು ಚಿತ್ರೀಕರಿಸಲಾಯಿತು. ಪವನ್ ಇದ್ದರು. ಶೈನ್ ಇದ್ದರು, ಬಹಳ ಅದ್ಭುತವಾಗಿ ಶೂಟಿಂಗ್ ಅನುಭವ. ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಒಂದು ಅದ್ಭುತ ತಂಡ. ಬೆಳೆಯುತ್ತಾ ಬೆಳೆಯುತ್ತಾ ಸಿನಿಮಾ ದೊಡ್ಡ ಸ್ಕೆಲ್ ಆಯ್ತು. 500 ಜನ ಕಲಾವಿದರನ್ನು ಕಂಪ್ಲೀಟ್ ನೈಟ್ ಸೀಕ್ವೆಲ್ ನಲ್ಲಿ ಶೂಟ್ ಮಾಡುವುದು ತುಂಬಾ ಚಾಲೆಂಜಿಂಗ್. ಇದೇ 21ಕ್ಕೆ ಸಿನಿಮಾ ಬರ್ತಿದೆ, ಥಿಯೇಟರ್ ಗೆ ಬಂದು ಸಿನಿಮಾ ನೋಡಿ. ನೀವು ಖಂಡಿತ ಎಂಜಾಯ್ ಮಾಡ್ತೀರ. ಅದ್ಭುತ ಸಿನಿಮಾ ಮಾಡಿದ್ದಾರೆ ‘ಎಂದರು.

    ಧ್ರುವ ಸರ್ಜಾ (Dhruv Sarja) ಮಾತನಾಡಿ, ‘ಒಬ್ಬ ಪ್ರೇಕ್ಷಕನಾಗಿ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ನೋಡಿದ್ದೇನೆ. ಈ ಸಿನಿಮಾ ನೋಡಿದಾಗ ನಾನು ನನ್ನ ಅಣ್ಣನನ್ನು ಮಿಸ್ ಮಾಡಿಕೊಂಡೆ. ಏಳೆಂಟು ವರ್ಷ ನಾವು ಹಾಸ್ಟೆಲ್ ನಲ್ಲಿ ಇದ್ದೆವು. ಅದನ್ನು ನೋಡಿದ ತಕ್ಷಣ ನಾವು ಹೀಗೆ ಇದ್ವಲ್ಲಾ ಅನಿಸಿತು. ನಿತಿನ್ ಅವರು ತುಂಬಾ ಚೆನ್ನಾಗಿ ಸಿನಿಮಾ ಶೂಟ್ ಮಾಡಿದ್ದಾರೆ. ನಾನು ನೋಡಿದಾಗ ರೀ ರೆಕಾರ್ಡಿಂಗ್ ಆಗಿರಲಿಲ್ಲ. ರೀ ರೆಕಾರ್ಡಿಂಗ್ ಆದ್ಮೇಲೆ ನೋಡಬೇಕೆಂಬ ಕುತೂಹಲವಿದೆ. ನಾನು ಪ್ರೀಮಿಯರ್ ಶೋ ನೋಡಲ್ಲ. ನಾನು ಫಸ್ಟ್ ಡೇ ಫಸ್ಟ್ ಶೋ ಸಿನಿಮಾವನ್ನು ಥಿಯೇಟರ್ ನಲ್ಲಿ ನೋಡುತ್ತೇನೆ. ಕಿರಿಕ್ ಪಾರ್ಟಿಯಂತೆ ಈ ಸಿನಿಮಾ ಕೂಡ ಸೂಪರ್ ಹಿಟ್ ಆಗಲಿ’ ಎಂದು ಶುಭ ಹಾರೈಸಿದರು.

    ರಕ್ಷಿತ್ ಶೆಟ್ಟಿ (Rakshit Shetty) ಮಾತನಾಡಿ, ‘ನಾನು ಈ ಪ್ರೋಗ್ರಾಂಗೆ ಗೆಸ್ಟ್ ಆಗಿ ಬಂದಿಲ್ಲ. ಯಾಕೆಂದ್ರೆ ನಾನು ಈ ಸಿನಿಮಾವನ್ನು ಪ್ರೆಸೆಂಟ್ ಮಾಡುತ್ತಿದ್ದೇನೆ. ಅಪ್ಪು ಸರ್ ಏನೇ ಶುರು ಮಾಡಿದರು.  ಅದ್ಭುತ ರಿಸ್ಟಲ್ ಕೊಡುತ್ತದೆ ಎಂಬ ನಂಬಿಕೆ. ನಮ್ಮ ಪರವಃ ಸ್ಟುಡಿಯೋಸ್ ನಮ್ಮ ಆಫೀಸ್ ಅನ್ನು ಅವರೇ ಉದ್ಘಾಟಿಸಿದ್ದರು. ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾದ ಫಸ್ಟ್ ಪೋಸ್ಟರ್ ಅವರೇ ಲಾಂಚ್ ಮಾಡಿದ್ದರು. ಈ ಸಿನಿಮಾವನ್ನು ನಾನು ಪ್ರೆಸೆಂಟ್ ಮಾಡಲು ತುಂಬಾ ಕಾರಣವಿದೆ. ನಾನು ಈ ಚಿತ್ರವನ್ನು ಎರಡು ಬಾರಿ ನೋಡಿದ್ದೇನೆ. 2 ಸಲ ನೋಡುವಾಗಲೂ ಅಷ್ಟೇ ಎಂಜಾಯ್ ಮಾಡಿದ್ದೇನೆ. ಸಿನಿಮಾವನ್ನು ಹಾಲಿವುಡ್ ರೇಂಜ್ ಗೆ ಶೂಟ್ ಮಾಡಲಾಗಿದೆ’ ಎಂದರು.

    ನಿರ್ದೇಶಕ ನಿತಿನ್ ಕೃಷ್ಣಮೂರ್ತಿ ಮಾತನಾಡಿ, ‘ಅಪ್ಪು ಸರ್ ಪೋಸ್ಟರ್ ಲಾಂಚ್ ಮಾಡಿಕೊಟ್ಟಿದ್ದರು. ಅಲ್ಲಿಂದಲೇ ಜರ್ನಿ ಶುರುವಾಗಿದ್ದು, ಈ ವೇದಿಕೆ ಹತ್ತಿದ್ದೇನೆ. ಆದ್ರೆ ಕೆಲಸ ಮಾಡಲು. ನಾನು ಟಿವಿ ಮಾಧ್ಯಮದಲ್ಲಿ ಕೆಲಸ ಮಾಡಿದವನು. ಈ ಚಿತ್ರ ಮಾಡಲು ಎರಡು ವರ್ಷ ಬೇಕಾಯ್ತು. ಮಳೆ, ಲಾಕ್ ಡೌನ್ ನಿಂದ ಸ್ವಲ್ಪ ಲೇಟ್ ಆಯ್ತು. ಇಷ್ಟು ದಿನ ಪ್ರೋಮೋ ಬಿಟ್ಟಿದ್ದೇವೆ. ಈಗ ಟ್ರೇಲರ್ ಬಂದಿದೆ. ಈ ಮೂವೀಗೆ 1000 ಜನ ರಂಗಭೂಮಿ ಕಲಾವಿದರನ್ನು ಬಿಟ್ಟು ಸ್ಯಾಂಡಲ್ ವುಡ್ ಇಂಡಸ್ಟ್ರೀ ಸಾಥ್ ಕೊಟ್ಟಿದೆ’ ಎಂದು ಸಂತಸ ಹಂಚಿಕೊಂಡರು.

    ನಿರ್ಮಾಪಕ ವರುಣ್ ಗೌಡ (Varun) ಮಾತನಾಡಿ, ಜುಲೈ 21ಕ್ಕೆ ಸಿನಿಮಾ ರಿಲೀಸ್ ಆಗುತ್ತಿದೆ. ದಯವಿಟ್ಟು ಎಲ್ಲರೂ ಸಪೋರ್ಟ್ ಮಾಡಿ. ಇಷ್ಟು ದಿನ ಬೆಂಬಲ ಕೊಟ್ಟ ರೀತಿ ಮುಂದೆಯೂ ನಿಮ್ಮ ಬೆಂಬಲವಿರಲಿ ಎಂದರು. ಕಿರಿಕ್‌ ಮಾಡುವ ವಾರ್ಡನ್‌ ಕಾಟದಿಂದ ತಪ್ಪಿಸಿಕೊಳ್ಳಲು ಹಾಸ್ಟೆಲ್‌ ಹುಡುಗರು ಏನೆಲ್ಲಾ ಮಾಡುತ್ತಾರೆ. ಅದರಿಂದ ಮುಂದೆ ಏನು ಸಮಸ್ಯೆ ಅನುಭವಿಸುತ್ತಾರೆ ಎಂಬುದನ್ನು ಚಿತ್ರದಲ್ಲಿ ತೋರಿಸಲಾಗಿದೆ.

    ಮೋಹಕತಾರೆ ರಮ್ಯಾ ಲೆಕ್ಚರರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಿಷಬ್ ಶೆಟ್ಟಿ, ಪವನ್ ಕುಮಾರ್, ಶೈನ್ ಶೆಟ್ಟಿ ಹಾಗೂ ದಿಗಂತ್ ಕೂಡ ಸ್ಪೆಷಲ್ ರೋಲ್ ನಲ್ಲಿ ನಟಿಸಿದ್ದಾರೆ. ಪುನೀತ್ ರಾಜ್ ಕುಮಾರ್, ರಕ್ಷಿತ್ ಶೆಟ್ಟಿ, ಸುದೀಪ್ ಸಾಥ್ ಕೊಟ್ಟಿರುವ ಈ ಸಿನಿಮಾಗೆ ನಿತಿನ್ ಕೃಷ್ಣಮೂರ್ತಿ ಆಕ್ಷನ್ ಕಟ್ ಹೇಳಿದ್ದಾರೆ. ಪ್ರಜ್ವಲ್ ಬಿಪಿ, ವರುಣ್ ಕುಮಾರ್ ಗೌಡ, ನಿತಿನ್ ಕೃಷ್ಣಮೂರ್ತಿ, ಅರವಿಂದ್ ಕಶ್ಯಪ್ ಹಾಗೂ ಇನ್ನಿತರರು ಜೊತೆಗೆ ಸೇರಿ ಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆ ಸಿನಿಮಾವನ್ನು ನಿರ್ಮಿಸಿದ್ದಾರೆ. ಚಿತ್ರದ ಹಾಡುಗಳಿಗೆ ಅಜನೀಶ್‌ ಲೋಕನಾಥ್‌ ಸಂಗೀತ ನೀಡಿದ್ದಾರೆ. ರಕ್ಷಿತ್ ಶೆಟ್ಟಿ ತಮ್ಮದೇ ಪರವಃ ಪಿಕ್ಚರ್ಸ್ ಮೂಲಕ ಪ್ರಸ್ತುತಪಡಿಸುತ್ತಿದ್ದು, ಇದೇ 21 ಕ್ಕೆ ಸಿನಿಮಾ ರಾಜ್ಯಾದ್ಯಂತ ತೆರೆ ಕಾಣುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಹಾಸ್ಟೆಲ್ ಹುಡುಗರ’ ಜೊತೆಯಲ್ಲಿ ಮೋಹಕ ತಾರೆ ರಮ್ಯಾ:  ಟೀಸರ್ ರಿಲೀಸ್

    ‘ಹಾಸ್ಟೆಲ್ ಹುಡುಗರ’ ಜೊತೆಯಲ್ಲಿ ಮೋಹಕ ತಾರೆ ರಮ್ಯಾ: ಟೀಸರ್ ರಿಲೀಸ್

    ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ (Hostel Hudugaru Bekagiddare) ಈ ಸಿನಿಮಾ ಹೆಸರು ನೀವು ಕೇಳಿರ್ತೀರಾ. ಸೋಶಿಯಲ್ ಮೀಡಿಯಾದಲ್ಲಿ ಒಂದಷ್ಟು ಸಖತ್ ಕ್ರಿಯೇಟಿವ್ ಆಗಿರೋ ಸಿನಿಮಾ ಪ್ರಮೋಷನಲ್ ವೀಡಿಯೋಗಳು ನಿಮ್ಮನ್ನು ಸೆಳೆದಿರುತ್ತೆ. ಅದಕ್ಕೂ ಮಿಗಿಲಾಗಿ ಎಲ್ಲರ ಪ್ರೀತಿಯ ಅಪ್ಪು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಚಿತ್ರದ ಪೋಸ್ಟರ್ ಲಾಂಚ್ ಮಾಡಿದ್ದ ವೀಡಿಯೋನಂತೂ ಕಣ್ತುಂಬಿಕೊಂಡಿರ್ತಿರಾ.ಹೀಗೆ ಸ್ಟಾರ್ ನಟರ ಮೂಲಕ ಸಿನಿಮಾದ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿರೋ ಈ ಚಿತ್ರತಂಡ ಇದೀಗ  ಸ್ಯಾಂಡಲ್ ವುಡ್ ಕ್ವೀನ್ ಮೋಹಕ ತಾರೆ ರಮ್ಯಾ  (Ramya) ಅವರನ್ನು ಚಿತ್ರದ ಪ್ರಚಾರ ಕಾರ್ಯಕ್ಕೆ ಕರೆತಂದಿದೆ.

    ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ, ಕಿಚ್ಚ ಸುದೀಪ ಅವರಿಂದ ಸಿನಿಮಾ ಪ್ರಮೋಷನಲ್ ಕಟೆಂಟ್ ಮಾಡಿಸಿ ಗಮನ ಸೆಳೆದಿತ್ತು ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಟೀಂ. ಸ್ಟಾರ್ ನಟರ ಮೂಲಕ ಸಿನಿಮಾ ಪ್ರಚಾರ ಒಂದು ಕಡೆಯಾದ್ರೆ ಇಂಟ್ರಸ್ಟಿಂಗ್ ಪ್ರಮೋಷನಲ್ ಕಂಟೆಂಟ್ ಕೂಡ ಸಾಮಾಜಿಕ ಜಾಲತಾಣದಲ್ಲಿ ಎಲ್ಲರನ್ನು ಸಖತ್ ಇಂಪ್ರೆಸ್ ಮಾಡಿತ್ತು. ಹೀಗೆ ವಿಭಿನ್ನವಾಗಿ ಸಿನಿಮಾ ಪ್ರಚಾರ ಮಾಡುತ್ತಾ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ ಚಿತ್ರತಂಡ. ಈ ಬಾರಿ ಮೋಹಕ ತಾರೆ ರಮ್ಯಾ ಅವರನ್ನು ಚಿತ್ರದ ಪ್ರಚಾರ ಕಾರ್ಯಕ್ಕಾಗಿ ಕರೆತಂದಿದೆ. ರಮ್ಯಾ ಕೂಡ ಚಿತ್ರತಂಡಕ್ಕೆ ಸಾಥ್ ನೀಡಲು ಒಪ್ಪಿದ್ದು, ಬಹಳ ಖುಷಿಯಿಂದಲೇ ಚಿತ್ರದ ಪ್ರಮೋಷನಲ್ ಕಂಟೆಂಟ್ ವೀಡಿಯೋ ನಲ್ಲಿ ಭಾಗಿಯಾಗಿದ್ದಾರೆ. ಇಂದು ಸಂಜೆ ಆರು ಗಂಟೆಗೆ ಮೋಹಕ ತಾರೆ ಭಾಗಿಯಾಗಿರುವ ಚಿತ್ರದ ಪ್ರಮೋಷನಲ್ ಟೀಸರ್ ಬಿಡುಗಡೆ ಮಾಡುತ್ತಿದೆ ಚಿತ್ರತಂಡ. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ ರಾಕೇಶ್ ಅಡಿಗ ಸ್ಮಾರ್ಟ್ ಗೇಮ್ ಆಡ್ತಿದ್ದಾರೆ: ನೇಹಾ ಗೌಡ

    ವರುಣ್ ಸ್ಟುಡಿಯೋಸ್ ಹಾಗೂ ಪ್ರಜ್ವಲ್ ಬಿ ಪಿ ಅವರ ಗುಲ್ ಮೋಹರ್ ಫಿಲಂಸ್ ಬ್ಯಾನರ್ ನಡಿ ನಿರ್ಮಾಣವಾಗಿರುವ ಮೊದಲ ಸಿನಿಮಾ ಇದಾಗಿದೆ. ಈ ಚಿತ್ರದ ಕಥೆ ಮೊದಲು ಕೇಳಿದವರು ಮತ್ತದೇ ನಮ್ಮೆಲ್ಲರ ಪ್ರೀತಿಯ ರಾಜರತ್ನ ಪುನೀತ್ ರಾಜ್ ಕುಮಾರ್. ಚಿತ್ರತಂಡ ಈ ಸಿನಿಮಾ ಚಿತ್ರೀಕರಣಕ್ಕೂ ಮೊದಲು ಅಪ್ಪು ಅವರ ಬಳಿ ಹೋಗಿ ಸಿನಿಮಾ ಬಗ್ಗೆ ಮಾತುಕತೆ ನಡೆಸಿದೆ. ಕಥೆ ಕೇಳಿ ಸಖತ್ ಇಂಪ್ರೆಸ್ ಆದ ಅಪ್ಪು ಸಿನಿಮಾ ಮಾಡಿ ಎಂದು ಇಡೀ ತಂಡಕ್ಕೆ ಬೆನ್ನುತಟ್ಟಿ ಪ್ರೋತ್ಸಾಹ ನೀಡಿದ್ರಂತೆ. ಅವರ ಆರ್ಶೀವಾದದೊಂದಿಗೆ ಸಿನಿಮಾ ಚಿತ್ರೀಕರಣ ಆರಂಭಿಸಿದ್ವಿ ಎಂದು ನಿರ್ಮಾಪಕ ವರುಣ್ ಕುಮಾರ್ ಹಾಗೂ ಪ್ರಜ್ವಲ್ ಬಿಪಿ ತಿಳಿಸಿದ್ದಾರೆ.

    ಯೂತ್ ಸಬ್ಜೆಕ್ಟ್ ಒಳಗೊಂಡ  ಚಿತ್ರವನ್ನು ನಿತಿನ್ ಕೃಷ್ಣಮೂರ್ತಿ (Nitin Krishnamurthy) ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಹಲವು ರಂಗಭೂಮಿ ಪ್ರತಿಭೆಗಳು ಈ ಚಿತ್ರದಲ್ಲಿ ನಟಿಸಿದ್ದಾರೆ. ಇವರ ಜೊತೆಗೆ ಸ್ಯಾಂಡಲ್ ವುಡ್ ಸ್ಟಾರ್ ನಟರ ಗೆಸ್ಟ್ ಅಪಿಯರೆನ್ಸ್ ಕೂಡ ಚಿತ್ರದಲ್ಲಿರಲಿದೆ. ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ನಿರತವಾಗಿದ್ದು, ಜನವರಿಯಲ್ಲಿ ಸಿನಿಮಾ ತೆರೆಗೆ ತರುವ ಪ್ಲ್ಯಾನ್ ನಲ್ಲಿದೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಅರವಿಂದ್ ಕಶ್ಯಪ್ ಛಾಯಾಗ್ರಹಣ, ಸುರೇಶ್ ಸಂಕಲನ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]