Tag: Hotel

  • ಲೈಂಗಿಕ ಕಿರುಕುಳ ಕೇಸ್‌ | ನನ್ಗೆ ಪ್ರಧಾನಿ ಗೊತ್ತು – ಪೊಲೀಸರಿಗೇ ಬೆದರಿಕೆ ಹಾಕಿದ ಸ್ವಾಮಿ ಚೈತನ್ಯಾನಂದ ಸರಸ್ವತಿ

    ಲೈಂಗಿಕ ಕಿರುಕುಳ ಕೇಸ್‌ | ನನ್ಗೆ ಪ್ರಧಾನಿ ಗೊತ್ತು – ಪೊಲೀಸರಿಗೇ ಬೆದರಿಕೆ ಹಾಕಿದ ಸ್ವಾಮಿ ಚೈತನ್ಯಾನಂದ ಸರಸ್ವತಿ

    – 40 ದಿನಗಳಲ್ಲಿ 13 ಹೋಟೇಲ್‌ ಬಲಿಸಿದ್ದ ಕಾಮಿಸ್ವಾಮಿ

    ನವದೆಹಲಿ: 17 ವಿದ್ಯಾರ್ಥಿನಿಯರಿಗೆ (Students) ಲೈಗಿಂಕ ಕಿರುಕುಳ ಆರೋಪ ಹೊತ್ತಿರುವ ಸ್ವಯಂ ಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಸರಸ್ವತಿ (Chaitanyananda Saraswati) ಪೊಲೀಸರ ಬಂಧನದಿಂದ ತಪ್ಪಿಸಿಕೊಳ್ಳಲು ಕಳೆದ 40 ದಿನಗಳಲ್ಲಿ 13 ಹೋಟೇಲ್‌ಗಳನ್ನು ಬದಲಿಸಿದ್ದ ಎಂದು ಮೂಲಗಳು ಹೇಳಿವೆ. ಸಾಮಾನ್ಯ ಟ್ಯಾಕ್ಸಿಯಲ್ಲಿ ಪ್ರಯಾಣಿಸುತ್ತಿದ್ದ ಸ್ವಾಮೀಜಿ ಸಣ್ಣ ಸಣ್ಣ ಹೋಟೇಲ್‌ಗಳಲ್ಲಿ ಉಳಿದುಕೊಳ್ಳುತ್ತಿದ್ದ ಅನ್ನೋದು ಪೊಲೀಸರ ತನಿಖೆ ವೇಳೆ ತಿಳಿದುಬಂದಿದೆ.

    Swami Chaitanyananda Saraswati

    ಸದ್ಯ ಪೊಲೀಸ್ ಕಸ್ಟಡಿಯಲ್ಲಿರುವ ಸ್ವಾಮಿ ಚೈತನ್ಯಾನಂದ ಸರಸ್ವತಿ ತನಿಖೆಗೆ ಸಹಕರಿಸುತ್ತಿಲ್ಲ, ಯಾವುದೇ ಪ್ರಶ್ನೆ ಕೇಳಿದ್ರೂ ಗೊತ್ತಿಲ್ಲ, ಇಲ್ಲ ಎಂದು ಉತ್ತರ ಹೇಳುತ್ತಿದ್ದಾರೆ. ವಿಚಾರಣೆ ವೇಳೆ ನನಗೆ ಪ್ರಧಾನಿ ನರೇಂದ್ರ ಮೋದಿ ಗೊತ್ತು, ಪ್ರಧಾನಿ ಕಚೇರಿ ಜೊತೆಗೆ ನೇರ ಸಂಪರ್ಕ ಹೊಂದಿದ್ದೇನೆ ಎಂದು ಬೆದರಿಸುವ ಪ್ರಯತ್ನ ಮಾಡಿದ್ದಾರೆ. ಇದನ್ನೂ ಓದಿ: Vijay Rally Stampede | ದುರಂತದ ಬೆನ್ನಲ್ಲೇ ನಟ ವಿಜಯ್‌ ನಿವಾಸಕ್ಕೆ ಬಾಂಬ್‌ ಬೆದರಿಕೆ – ಬಿಗಿ ಭದ್ರತೆ

    ಮೋದಿ, ಟ್ರಂಪ್‌ ಜೊತೆಗಿನ AI ಫೋಟೋಗಳು ಪತ್ತೆ
    ತನಿಖೆಯ ವೇಳೆ ಆರೋಪಿಯ ಕೋಣೆಯಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೊತೆಗೆ ಛಾಯಾಚಿತ್ರಗಳು ಕಂಡುಬಂದಿವೆ, ಪ್ರಾಥಮಿಕ ತನಿಖೆಯಲ್ಲಿ ಈ ಚಿತ್ರಗಳನ್ನು AI ಬಳಸಿ ರಚಿಸಲಾಗಿದೆ ಅನ್ನೋದು ಗೊತ್ತಾಗಿದೆ. ನಕಲಿ ವಿಸಿಟಿಂಗ್ ಕಾರ್ಡ್‌ಗಳನ್ನು ಸಹ ಪತ್ತೆಹಚ್ಚಿದ್ದು, ಅದು ವಿಶ್ವಸಂಸ್ಥೆ ಮತ್ತು ಬ್ರಿಕ್ಸ್ ಜೊತೆಗಿನ ಆತನ ಸಂಬಂಧ ತೋರಿಸುತ್ತದೆ. ಅವುಗಳನ್ನು ವಶಪಡಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ಕ್ರೀಡಾ ಮೈದಾನದಲ್ಲಿ `ಆಪರೇಷನ್‌ ಸಿಂಧೂರ’ – ಫಲಿತಾಂಶ ಒಂದೇ, ಭಾರತಕ್ಕೆ ಜಯ: ಮೋದಿ ಬಣ್ಣನೆ

    Chaitanyananda Saraswati Swamiji

    ಸ್ವಾಮೀಜಿ ಬಳಿಯಿದ್ದ ಒಂದು ಐಪ್ಯಾಡ್ ಮತ್ತು ಮೂರು ಮೊಬೈಲ್ ಫೋನ್‌ಗಳನ್ನ ವಶಪಡಿಸಿಕೊಳ್ಳಲಾಗಿದೆ. ಒಂದು ಫೋನ್‌ನಲ್ಲಿ ಹಾಸ್ಟೆಲ್‌ನ ಸಿಸಿಟಿವಿ ವಿಡಿಯೋಗಳು ಪತ್ತೆಯಾಗಿದೆ. ಮೂಬೈಲ್ ಮೂಲಕ ಹಾಸ್ಟೆಲ್ ಮೇಲೆ ನಿಗಾ ವಹಿಸುತ್ತಿದ್ದರು ಎನ್ನಲಾಗಿದೆ. ಸದ್ಯ ಸರಸ್ವತಿಗೆ ಸಂಬಂಧಿಸಿದ ಬಹು ಬ್ಯಾಂಕ್ ಖಾತೆಗಳು ಮತ್ತು ಸ್ಥಿರ ಠೇವಣಿಗಳಲ್ಲಿ ಇರಿಸಲಾಗಿದ್ದ 8 ಕೋಟಿ ರೂ.ಗಳನ್ನು ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದಾರೆ.  ಇದನ್ನೂ ಓದಿ: ವಿಜಯ್‌ ಅವರದ್ದು ಏನೂ ತಪ್ಪಿಲ್ಲ, ಪೊಲೀಸ್‌ ಇಂಟೆಲಿಜೆನ್ಸ್‌ ವಿಫಲವಾಗಿದೆ: ಅಣ್ಣಾಮಲೈ ಆರೋಪ

  • ಹೋಟೆಲ್, ಪಬ್, ಬಾರ್, ರೆಸ್ಟೋರೆಂಟ್‌ಗಳಿಗೆ ಶಾಕ್ – ಸ್ಮೋಕಿಂಗ್ ಝೋನ್ ಇರದಿದ್ರೆ ಲೈಸನ್ಸ್ ರದ್ದು

    ಹೋಟೆಲ್, ಪಬ್, ಬಾರ್, ರೆಸ್ಟೋರೆಂಟ್‌ಗಳಿಗೆ ಶಾಕ್ – ಸ್ಮೋಕಿಂಗ್ ಝೋನ್ ಇರದಿದ್ರೆ ಲೈಸನ್ಸ್ ರದ್ದು

    – ಮೊದಲು ನೋಟಿಸ್, ಆಮೇಲೆ ದಂಡಂ ದಶಗುಣಂ

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಪಬ್, ಕ್ಲಬ್, ಹೋಟೆಲ್, ಬಾರ್‌ಗಳಿಗೆ ಬಿಬಿಎಂಪಿ (BBMP) ಬಿಗ್‌ಶಾಕ್ ನೀಡಿದೆ. ಬಿಬಿಎಂಪಿ ನೋಟಿಸ್ ಜಾರಿ ಮಾಡಿದರೂ ಪ್ರತಿಕ್ರಿಯಿಸದ ಹೋಟೆಲ್‌ಗಳು, ಪಬ್, ಕ್ಲಬ್, ರೆಸ್ಟೋರೆಂಟ್ ಪರವಾನಗಿ (Licence) ರದ್ದು ಮಾಡಲು ಬಿಬಿಎಂಪಿ ಮುಂದಾಗಿದೆ.

    ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಳೆದ 15 ದಿನಗಳ ಹಿಂದೆ ಸುಮಾರು 300ಕ್ಕೂ ಹೆಚ್ಚು ಪಬ್, ಬಾರ್, ರೆಸ್ಟೋರೆಂಟ್, ಹೋಟೆಲ್‌ಗಳಿಗೆ ನೋಟಿಸ್ ಜಾರಿ ಮಾಡಿತ್ತು. ಸ್ಮೋಕಿಂಗ್ ಝೋನ್  (Smoking Zone) ನಿರ್ಮಾಣ ಮಾಡಿಲ್ಲ ಅಂತಾ ನೋಟಿಸ್ ನೀಡಿ ಎಚ್ಚರಿಸಿತ್ತು. ನೋಟಿಸ್ ಜಾರಿ ಮಾಡಿದರೂ ಹೋಟೆಲ್, ಪಬ್, ಬಾರ್, ರೆಸ್ಟೋರೆಂಟ್‌ಗಳು ಸರಿಪಡಿಸಿಕೊಂಡಿಲ್ಲ ಎಂಬ ಮಾಹಿತಿ ಬಿಬಿಎಂಪಿ ಪರಿಶೀಲನೆ ವೇಳೆ ಗೊತ್ತಾಗಿದೆ. ಹೀಗಾಗಿ ಅಂತಹ ಪಬ್, ಬಾರ್, ರೆಸ್ಟೋರೆಂಟ್, ಹೋಟೆಲ್‌ಗಳಿಗೆ ಬಿಸಿ ಮುಟ್ಟಿಸಲು ಪಾಲಿಕೆ ಮುಂದಾಗಿದೆ. ಇದನ್ನೂ ಓದಿ: ಪ್ರವಾಸಿಗರಿಗೆ ಹುಡುಗಿಯರು ಮತ್ತು ಮಹಿಳೆಯರು ಲಭ್ಯವಿದ್ದಾರೆ – ಸಾಮಾಜಿಕ ಜಾಲತಾಣದಲ್ಲಿ ಕೊಡಗಿನ ಬಗ್ಗೆ ಅಪಪ್ರಚಾರ

    ಇನ್ನೂ ಬಿಬಿಎಂಪಿ ಮುಂದಿನ ವಾರ ನೋಟಿಸ್ ನೀಡಿದ್ದ ಸ್ಥಳಗಳನ್ನು ಪರಿಶೀಲನೆ ನಡೆಸಲಿದೆ. ಪರಿಶೀಲನೆ ನಡೆಸಿ ನೋಟಿಸ್ ಕೊಟ್ಟ ಮೇಲೂ ಸ್ಮೋಕಿಂಗ್ ಝೋನ್ ಅಳವಡಿಸಿಕೊಂಡಿಲ್ಲ ಎಂಬುದು ಕಂಡು ಬಂದರೆ ಪರವಾನಗಿ ರದ್ದು ಮಾಡಲಿದ್ದಾರೆ. ಇದನ್ನೂ ಓದಿ:ಬುರುಡೆ ಗ್ಯಾಂಗ್‌ ಹೇಳಿದಂತೆ ನಾನು ಮಾಡಿದ್ದೇನೆ – ಎಸ್‌ಐಟಿ ಪ್ರಶ್ನೆಗಳಿಗೆ ಸುಜಾತ ಥಂಡಾ

    ಬೆಂಗಳೂರಿನಲ್ಲಿರುವ ಎಲ್ಲಾ ಹೋಟೆಲ್, ಪಬ್, ಬಾರ್, ರೆಸ್ಟೋರೆಂಟ್‌ಗಳು ನಿಯಮಾನುಸಾರ ಕ್ರಮವಹಿಸಬೇಕು. ಸ್ಮೋಕಿಂಗ್ ಝೋನ್ ಕಡ್ಡಾಯ ಇರಲೇಬೇಕು. ಇಲ್ಲದೇ ಹೋದರೆ ಕೇಸ್ ಹಾಕಿ ಪರವಾನಗಿ ರದ್ದು ಮಾಡಲು ಬಿಬಿಎಂಪಿ ಮುಂದಾಗಿದೆ. ಇದನ್ನೂ ಓದಿ: ಚಾಮುಂಡೇಶ್ವರಿ ದೇವಸ್ಥಾನ ಹಿಂದೂ ದೇಗುಲವಲ್ಲದೇ ಇದ್ದಿದ್ರೆ ಮುಜರಾಯಿ ವ್ಯಾಪ್ತಿಗೆ ತರುತ್ತಿರಲಿಲ್ಲ – ಪ್ರಮೋದಾ ದೇವಿ ಒಡೆಯರ್‌

  • ಎಣ್ಣೆಯಲ್ಲಿ ಫ್ಯಾಟ್ ಚೆಕಿಂಗ್‌ಗೆ ಮುಂದಾದ ಹೋಟೆಲ್‌ ಮಾಲೀಕರು – ಡಿವೈಸ್ ಬೆಲೆ ಕೇಳಿ ಸುಸ್ತು!

    ಎಣ್ಣೆಯಲ್ಲಿ ಫ್ಯಾಟ್ ಚೆಕಿಂಗ್‌ಗೆ ಮುಂದಾದ ಹೋಟೆಲ್‌ ಮಾಲೀಕರು – ಡಿವೈಸ್ ಬೆಲೆ ಕೇಳಿ ಸುಸ್ತು!

    ಬೆಂಗಳೂರು: ಅಡುಗೆ ಎಣ್ಣೆ ಮೇಲೆ ಆಹಾರ ಮತ್ತು ಸುರಕ್ಷತಾ ಇಲಾಖೆ ಮೆಗಾ ಅಪರೇಷನ್ ಮಾಡಿದೆ. ಬೇಕರಿ, ಹೋಟೆಲ್‌ನಲ್ಲಿ ಎಣ್ಣೆ ಮರುಬಳಕೆ ಮಾಡುವಂತಿಲ್ಲ ಅಂತಾ ಈಗಾಗಲೇ ಇಲಾಖೆ ಆದೇಶ ಮಾಡಿದೆ. ಇದ್ರ ಬೆನ್ನಲ್ಲೇ ಈಗ ಹೋಟೆಲ್‌ನವರು ಅಡುಗೆ ಎಣ್ಣೆಯ ಫ್ಯಾಟ್ ಚೆಕ್ಕಿಂಗ್‌ಗೆ ಮುಂದಾಗಿದ್ದಾರೆ. ಹೀಗಾಗಿ ಡಿವೈಸ್ ಖರೀದಿ ಮಾಡಲು ಮುಂದಾಗಿದ್ದು ಈ ಡಿವೈಸ್ ಮೂಲಕ ಅಡುಗೆ ಎಣ್ಣೆಯ ಗುಣಮಟ್ಟ ಪರೀಕ್ಷಿಸಬಹುದಾಗಿದೆ.

    ಆದ್ರೆ ಈ ಡಿವೈಸ್ ಬೆಲೆ ಬರೋಬ್ಬರಿ 50 ಸಾವಿರ ರೂ. ಇದೆ. ಆದ್ದರಿಂದ ಮಾಲೀಕರು ಕಳವಳಕ್ಕೀಡಾಗಿದ್ದಾರೆ. ಸದ್ಯ ಆಹಾರ ಇಲಾಖೆ ಜೊತೆ ಈ ಬಗ್ಗೆ ಮಾತುಕತೆ ನಡೆಸಲು ನಿರ್ಧರಿಸಿದ್ದು ಕಾರ್ಯಾಗಾರ ನಡೆಸುವಂತೆಯೂ ಮನವಿ ಮಾಡಿದ್ದಾರೆ. ಜೊತೆಗೆ ಕಡಿಮೆ ದರದಲ್ಲಿ ಡಿವೈಸ್ ಖರೀದಿ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಲು ತಯಾರಾಗಿದ್ದಾರೆ. ಇದನ್ನೂ ಓದಿ: ಚೀನಾ ಉದ್ಯಮಿಯಿಂದ 100 ಕೋಟಿ ರೂ. ಬಂಡವಾಳ ಹೂಡಿಕೆ

    ಇನ್ನೂ ಇಲಾಖೆಯ ಆದೇಶವನ್ನ ಪಾಲಿಸೋದು ಜನರ ಆರೋಗ್ಯದ ದೃಷ್ಟಿಯಿಂದ ಉತ್ತಮ. ಆದ್ರೆ ಕೆಲ ಗೊಂದಲವಿದ್ದು ಇದನ್ನು ಬಗೆಹರಿಸಿಕೊಳ್ಳುತ್ತೇವೆ. ಗ್ರಾಹಕರಿಗೆ ಗುಣಮಟ್ಟದ ಆಹಾರ ನೀಡೋದೇ ನಮ್ಮ ಉದ್ದೇಶ ಅಂದಿದ್ದಾರೆ. ಇದನ್ನೂ ಓದಿ: ಹಿರಿಯ ಐಪಿಎಸ್‌ ಅಧಿಕಾರಿ ಬಿ.ದಯಾನಂದ್‌, ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ಗೆ ರಾಷ್ಟ್ರಪತಿ ಪದಕ

    ಸರ್ಕಾರವೇನೂ ಆದೇಶ ಮಾಡಿದೆ. ಇದ್ರ ಅನುಷ್ಟಾನ ಸಮರ್ಪಕವಾಗಿ ಆಗುತ್ತಿದ್ಯಾ ಏನು ಅನ್ನೋದ್ರ ಬಗ್ಗೆಯೂ ಇಲಾಖೆ ಗಮನ ಹರಿಸಬೇಕಿದೆ. ಇದನ್ನೂ ಓದಿ: ದೇಶದಲ್ಲಿ ಕರ್ನಾಟಕವೊಂದು ಆರ್ಥಿಕ‌ ದೇಶ: ಬ್ರಿಡ್ಜ್ ಟು ಬೆಂಗಳೂರು ಕಾರ್ಯಕ್ರಮದಲ್ಲಿ ಸಿಎಂ ಅಭಿಪ್ರಾಯ

  • Hassan | ಹೋಟೆಲ್‌ನಲ್ಲಿ ಊಟ ಮಾಡಿ ಕೈತೊಳೆಯುವಾಗ ಪ್ರಾಣಬಿಟ್ಟ ಯುವಕ

    Hassan | ಹೋಟೆಲ್‌ನಲ್ಲಿ ಊಟ ಮಾಡಿ ಕೈತೊಳೆಯುವಾಗ ಪ್ರಾಣಬಿಟ್ಟ ಯುವಕ

    ಹಾಸನ: ಹೋಟೆಲ್‌ನಲ್ಲಿ (Hotel) ಊಟ ಮಾಡಿ ಕೈತೊಳೆಯುವಾಗ ಕುಸಿದು ಬಿದ್ದು ಯುವಕ (Youth) ಸಾವನ್ನಪ್ಪಿದ ಘಟನೆ ಹಾಸನ (Hassan) ನಗರದ ಬಸಟ್ಟಿಕೊಪ್ಪಲಿನಲ್ಲಿ ನಡೆದಿದೆ.

    ಬಾಲರಾಜ್ ಬಹದ್ದೂರ್ (26) ಮೃತ ಯುವಕ. ಹಾಸನದ ಖಾಸಗಿ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ಬಾಲರಾಜ್ ಮಂಗಳವಾರ ರಾತ್ರಿ ಸ್ನೇಹಿತರೊಂದಿಗೆ ಹೋಟೆಲ್‌ನಲ್ಲಿ ನಾನ್‌ವೆಜ್ ಊಟ ಮಾಡಿದ್ದ. ಊಟ ಮಾಡಿ ಕೈತೊಳೆಯುವಾಗ ವಾಂತಿ ಮಾಡಿಕೊಂಡು ಕುಸಿದು ಬಿದ್ದು ಹಠಾತ್ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಬದಲಾಗಲಿದೆ ಯುಪಿಐನ ಕೆಲ ನಿಯಮಗಳು – ಆ.1ರಿಂದ ಹೊಸ ನಿಯಮ ಜಾರಿ

    ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ರಷ್ಯಾದ ಕರಾವಳಿಯಲ್ಲಿ 8.7 ತೀವ್ರತೆಯ ಭಾರೀ ಭೂಕಂಪ – ಅಮೆರಿಕ, ಜಪಾನ್‌ಗೆ ಸುನಾಮಿ ಎಚ್ಚರಿಕೆ

  • ಪಹಲ್ಗಾಮ್‌ ದಾಳಿಗೂ ಮೊದಲೇ ಉಗ್ರರ ದಾಳಿ ಬಗ್ಗೆ ಎಚ್ಚರಿಸಿದ್ದ ಗುಪ್ತಚರ ಇಲಾಖೆ

    ಪಹಲ್ಗಾಮ್‌ ದಾಳಿಗೂ ಮೊದಲೇ ಉಗ್ರರ ದಾಳಿ ಬಗ್ಗೆ ಎಚ್ಚರಿಸಿದ್ದ ಗುಪ್ತಚರ ಇಲಾಖೆ

    ನವದೆಹಲಿ: ಪಹಲ್ಗಾಮ್‌ನಲ್ಲಿ ನರಮೇಧ (Pahalgam Attack) ಮಾಡುವ ಮೊದಲೇ ಉಗ್ರರು ಕಣವೆ ರಾಜ್ಯದಲ್ಲಿ ದಾಳಿ ನಡೆಸಬಹುದು ಎಂದು ಗುಪ್ತಚರ ಇಲಾಖೆ (Intelligence Report) ಎಚ್ಚರಿಕೆ ನೀಡಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ.

    ಹೌದು.ಶ್ರೀನಗರ (Srinagara) ಮತ್ತು ಸುತ್ತಮುತ್ತಲಿನ ಹೋಟೆಲ್‌ಗಳಲ್ಲಿ (Hotel) ತಂಗಿದ್ದ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಭದ್ರತಾ ಪಡೆ ಮತ್ತು ಸರ್ಕಾರಕ್ಕೆ ಗುಪ್ತಚರ ಮಾಹಿತಿ ನೀಡಲಾಗಿತ್ತು ಎಂದು ಅಧಿಕಾರಿಯೊಬ್ಬರು ಹೇಳಿರುವುದಾಗಿ ಮಾಧ್ಯಮವೊಂದು ಸುದ್ದಿ ಪ್ರಕಟಿಸಿದೆ.

    ಕಾತ್ರಾದಿಂದ ಶ್ರೀನಗರವನ್ನು ಸಂಪರ್ಕಿಸುವ ಮೊದಲ ರೈಲಿಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಏ.19 ರಂದು ಚಾಲನೆ ನೀಡಬೇಕಿತ್ತು. ಈ ದಿನವೇ ಉಗ್ರರು ಕೃತ್ಯ ಎಸಗಿಸಲು ಸಂಚು ರೂಪಿಸಿದ್ದರು ಎಂಬ ಮಾಹಿತಿ ಸಿಕ್ಕಿತ್ತು. ಆದರೆ ಕೆಟ್ಟ ಹವಾಮಾನದಿಂದಾಗಿ ನಿಗದಿಯಾಗಿದ್ದ ಈ ಕಾರ್ಯಕ್ರಮ ರದ್ದಾಗಿತ್ತು.  ಇದನ್ನೂ ಓದಿ: ಭಾರತ-ಪಾಕ್‌ ಉದ್ವಿಗ್ನತೆ ನಡುವೆ ಪಾಕ್‌ ರೇಂಜರ್‌ನನ್ನ ಬಂಧಿಸಿದ ಬಿಎಸ್‌ಎಫ್‌

     

    ದಾಳಿಯ ಬೆದರಿಕೆಯನ್ನು ಪರಿಗಣಿಸಿ ಶ್ರೀನಗರದ ದಾಲ್ ಸರೋವರ ಮತ್ತು ಮೊಘಲ್ ಉದ್ಯಾನವನದ ಮೇಲಿರುವ ಜಬರ್ವಾನ್ ಶ್ರೇಣಿಯ ತಪ್ಪಲಿನಲ್ಲಿ ಹೆಚ್ಚಿನ ಭದ್ರತಾ ವ್ಯವಸ್ಥೆಯನ್ನು ಕೈಗೊಳ್ಳಲಾಗಿತ್ತು.

    ಪೊಲೀಸ್ ಮಹಾನಿರ್ದೇಶಕರು ಸೇರಿದಂತೆ ಪೊಲೀಸ್ ಅಧಿಕಾರಿಗಳು ದಾಳಿಗೆ ಕೆಲವು ದಿನಗಳ ಮೊದಲು ಕಣಿವೆಯಲ್ಲಿ ಬೀಡುಬಿಟ್ಟಿದ್ದರು ಎಂದು ಹೆಸರು ಹೇಳಲು ಇಚ್ಛಿಸದ ಉನ್ನತ ಅಧಿಕಾರಿಯೊಬ್ಬರು ಹೇಳಿದರು.

    ಪೊಲೀಸರು ಮತ್ತು ಭದ್ರತಾ ಸಂಸ್ಥೆಗಳಿಗೆ ಗುಪ್ತಚರ ಮಾಹಿತಿ ಸಿಕ್ಕಿತ್ತು. ಈ ಮಾಹಿತಿ ಅನ್ವಯ ಪಹಲ್ಗಾಮ್ ದಾಳಿಗೆ 10-15 ದಿನಗಳ ಮೊದಲು ಶ್ರೀನಗರದ ಹೊರವಲಯದಲ್ಲಿರುವ ಡಚಿಗಾಮ್, ನಿಶಾತ್ ಮತ್ತು ಪಕ್ಕದ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆಗಳನ್ನು ಕೈಗೊಳ್ಳಲಾಗಿತ್ತು. ಆದರೆ ಯಾವುದೇ ಫಲಿತಾಂಶ ಸಿಗದ ಕಾರಣ ಏ. 22ರಂದು ಶೋಧ ಕಾರ್ಯಾಚರಣೆ ನಿಲ್ಲಿಸಲಾಯಿತು. ಅದೇ ದಿನ ಉಗ್ರರು ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ದಾಳಿ ನಡೆಸಿದ್ದರು.

  • ಅಜ್ಮೀರ್ ಹೋಟೆಲ್‌ನಲ್ಲಿ ಅಗ್ನಿ ಅವಘಡ – ಮಗುವನ್ನು ರಕ್ಷಿಸಲು 3ನೇ ಮಹಡಿಯಿಂದ ಎಸೆದ ತಾಯಿ

    ಅಜ್ಮೀರ್ ಹೋಟೆಲ್‌ನಲ್ಲಿ ಅಗ್ನಿ ಅವಘಡ – ಮಗುವನ್ನು ರಕ್ಷಿಸಲು 3ನೇ ಮಹಡಿಯಿಂದ ಎಸೆದ ತಾಯಿ

    • ನಾಲ್ವರು ಸಾವು, 8 ಮಂದಿಗೆ ಗಾಯ – ರಕ್ಷಣಾ ಕಾರ್ಯಾಚರಣೆ ವೇಳೆ ಮೂರ್ಛೆ ಹೋದ ಪೊಲೀಸರು!

    ಜೈಪುರ್‌: ಅಜ್ಮೀರ್‌ನ ಹೋಟೆಲ್ ಒಂದರಲ್ಲಿ ಸಂಭವಿಸಿದ ಅಗ್ನಿ ಅವಘಡದ ವೇಳೆ ಮಹಿಳೆಯೊಬ್ಬರು ತಮ್ಮ ಮಗುವನ್ನು ರಕ್ಷಿಸಲು 3ನೇ ಮಹಡಿಯಿಂದ ಎಸೆದಿದ್ದಾರೆ. ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಅವಘಡದಲ್ಲಿ ಹಲವರು ಗಾಯಗೊಂಡಿದ್ದಾರೆ. ಬೆಂಕಿಯಿಂದ ತಪ್ಪಿಸಿಕೊಳ್ಳಲು ಜನ ಒಟ್ಟಾಗಿ ಓಡಿದ್ದರಿಂದ ನೂಕುನುಗ್ಗಲು ಸಂಭವಿಸಿತ್ತು. ಹೋಟೆಲ್‌ ಕಿರಿದಾದ ಓಣಿಯಲ್ಲಿದ್ದು, ಸಿಲುಕಿರುವ ಜನರನ್ನು ರಕ್ಷಿಸಲು ಪ್ರಯತ್ನಿಸುವಾಗ ಅನೇಕ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಮೂರ್ಛೆ ಹೋಗಿದ್ದರು ಎಂದು ವರದಿಯಾಗಿದೆ. ಇದನ್ನೂ ಓದಿ: ರಾಜ್ಯ ಸರ್ಕಾರಗಳಿಗೆ ಜಾತಿ ಜನಗಣತಿ ಮಾಡುವ ಅಧಿಕಾರ ಇಲ್ಲ: ವಿಜಯೇಂದ್ರ

    ಅವಘಡದಲ್ಲಿ ಎಂಟು ಜನ ಗಾಯಗೊಂಡಿದ್ದಾರೆ. ಅವರನ್ನು ಜೆಎಲ್‌ಎನ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ರಕ್ಷಣಾ ಕಾರ್ಯಾಚರಣೆ ಈಗ ಮುಗಿದಿದೆ. ಬೆಂಕಿಯನ್ನು ನಂದಿಸಲಾಗಿದೆ ಎಂದು ನಗರ ಎಡಿಎಂ ಗಜೇಂದ್ರ ಸಿಂಗ್ ರಾಥೋಡ್ ದೃಢಪಡಿಸಿದ್ದಾರೆ. ಇನ್ನೂ, ವಿದ್ಯುತ್ ಫಲಕದಿಂದ ಬೆಂಕಿ ಹೊತ್ತಿಕೊಂಡಿತು. ಅದು ಸ್ವಲ್ಪ ಸಮಯದಲ್ಲೇ ಭಾರೀ ಅಗ್ನಿ ಅವಘಡಕ್ಕೆ ಕಾರಣವಾಯಿತು ಎಂದು ಹೋಟೆಲ್ ವ್ಯವಸ್ಥಾಪಕರು ಹೇಳಿದ್ದಾರೆ. ಇದನ್ನೂ ಓದಿ:‌ ಅಫ್ಘಾನ್‍ನಿಂದ ಭಾರತಕ್ಕೆ ಸರಕು ಸಾಗಾಟ – ಪಾಕ್‍ನಿಂದ ಅನುಮತಿ

  • Belagavi | ಕ್ಷುಲ್ಲಕ ಕಾರಣಕ್ಕೆ ಒಂದೇ ಕೋಮಿನ 2 ಗುಂಪುಗಳ ನಡುವೆ ಘರ್ಷಣೆ – ಸೋಡಾ, ನೀರಿನ ಬಾಟಲಿಯಿಂದ ಹೊಡೆದಾಟ

    Belagavi | ಕ್ಷುಲ್ಲಕ ಕಾರಣಕ್ಕೆ ಒಂದೇ ಕೋಮಿನ 2 ಗುಂಪುಗಳ ನಡುವೆ ಘರ್ಷಣೆ – ಸೋಡಾ, ನೀರಿನ ಬಾಟಲಿಯಿಂದ ಹೊಡೆದಾಟ

    ಬೆಳಗಾವಿ: ಪ್ರಾರ್ಥನೆ ಮುಗಿಸಿ ಉಪಹಾರ ಸೇವಿಸಲು ಹೋಟೆಲ್‌ಗೆ (Hotel) ಬಂದಾಗ ಒಂದೇ ಕೋಮಿನ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದ್ದು, ಸೋಡಾ ಬಾಟಲಿ ಹಾಗೂ ನೀರಿನ ಬಾಟಲಿಯಿಂದ ಪರಸ್ಪರ ಹೊಡೆದಾಡಿಕೊಂಡ ಘಟನೆ ಬೆಳಗಾವಿ (Belagavi) ನಗರದಲ್ಲಿ ನಡೆದಿದೆ.

    ಎರಡು ಗುಂಪುಗಳ ಯುವಕರು ಪರಸ್ಪರ ಹೊಡೆದಾಡುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯಿಂದ ಕೆಲಕಾಲ ತ್ವೇಷಮಯ ವಾತಾವರಣ ಉಂಟಾಗಿತ್ತು. ಏಕಾಏಕಿ ಘರ್ಷಣೆ ಉಂಟಾದ ಹಿನ್ನೆಲೆ ಸಿಬ್ಬಂದಿ ಹೋಟೆಲ್‌ನ ಬಾಗಿಲು ಮುಚ್ಚಿದ್ದಾರೆ. ಇದನ್ನೂ ಓದಿ: ರಾಜ್ಯದ ಮೊಟ್ಟ ಮೊದಲ ಮೇಕೆ ಹಾಲು ಉತ್ಪಾದನಾ ಘಟಕ ಕಾಡುಪಾಲು

    ಬೆಳಗಾವಿಯ ಕೃಷ್ಣ ದೇವರಾಯ ಸರ್ಕಲ್ ಬಳಿಯಿರುವ ಸಾಯಿ ಹೋಟೆಲ್‌ನಲ್ಲಿ ಘಟನೆ ನಡೆದಿದೆ. ಮಾಳ ಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ: ಮೊದಲ ಮಗುವಿಗೆ 45 ವರ್ಷ – ಈಗ 66ನೇ ವಯಸ್ಸಿನಲ್ಲಿ 10ನೇ ಮಗು!

  • ಹೋಟೆಲ್‌ಗಳಿಗೆ ಬರೆ – ತಿಂಗಳಿಗೆ 30 ಸಾವಿರ ಕಸದ ಸೆಸ್!

    ಹೋಟೆಲ್‌ಗಳಿಗೆ ಬರೆ – ತಿಂಗಳಿಗೆ 30 ಸಾವಿರ ಕಸದ ಸೆಸ್!

    – ಬೆಂಗಳೂರು ಹೋಟೆಲ್ ಮಾಲೀಕರ ಕಿಡಿ

    ಬೆಂಗಳೂರು: ಮೆಟ್ರೋ ದರ, ಬಸ್ ದರ, ವಿದ್ಯುತ್ ದರ ಏರಿಕೆಯಾಯ್ತ. ಈಗ ಏಪ್ರಿಲ್ 1ರಿಂದ ಕಸದ ಸೆಸ್ ಬರೆ ಶುರುವಾಗಲಿದೆ. ಬೆಂಗಳೂರಿನ (Bengaluru) ಹೋಟೆಲ್‌ಗಳಿಗೆ ಕಸದ ಸೆಸ್ (Garbage Cess) ಬರೆಯ ಬಿಸಿ ತಟ್ಟಿದ್ದು, ಈ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ದರ ಏರಿಕೆಯ ಹೊರೆ ಜನರ ಪಾಲಿಗೆ ಬಿಸಿ ತುಪ್ಪದಂತಾಗಿದೆ. ಇದರ ಮಧ್ಯೆ ಈಗ ಏಪ್ರಿಲ್‌ನಿಂದ ಕಸದ ಸೆಸ್ ಬರೆ ಬೀಳಲಿದೆ. ಕಸದ ಸೆಸ್‌ಗೆ ಈಗ ಬೆಂಗಳೂರು ಹೋಟೆಲ್ ಅಸೋಸಿಯೇಷನ್ (Hotel Association) ಕಿಡಿಕಾರಿದೆ. ಒಂದು ಕೆಜಿಗೆ 12 ರೂ. ಫಿಕ್ಸ್ ಮಾಡಿದ್ದು, ಈ ಹಿಂದೆ ತಿಂಗಳಿಗೆ 5 ಸಾವಿರ ಕಸದ ಸೆಸ್ ಕಟ್ಟಲಾಗುತ್ತಿತ್ತು. ಆದರೆ ಈಗ ಬರೋಬ್ಬರಿ 30 ಸಾವಿರ ರೂ. ಕಸದ ಸೆಸ್ ಕಟ್ಟಬೇಕಾಗುತ್ತದೆ. ಇದನ್ನೂ ಓದಿ: ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ – ರನ್ಯಾ ರಾವ್‌ ಜಾಮೀನು ಅರ್ಜಿ ಆದೇಶ ಇಂದು

    ಸಾಮಾನ್ಯವಾಗಿ ದರ್ಶಿನಿ ಹೋಟೆಲ್‌ನಲ್ಲಿ, ದಿನಕ್ಕೆ 60-100 ಕೆಜಿಯಷ್ಟು ಕಸ ಉತ್ಪಾದನೆಯಾಗಲಿದೆ. ಮೊದಲೆಲ್ಲ ಪ್ರತಿ ತಿಂಗಳು ಕಸದ ಸೆಸ್ ಅಂತ ಬಿಬಿಎಂಪಿಗೆ ಕಟ್ಟಲಾಗುತ್ತಿತ್ತು. ಆದರೆ ಈಗ ಏಕಾಏಕಿ ಕಸದ ಸೆಸ್ 30 ಸಾವಿರಕ್ಕೆ ಏರಿಕೆ ಮಾಡಿರೋದು ಸರಿಯಲ್ಲ. ಇದು ಅವೈಜ್ಞಾನಿಕ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಐಎಎಸ್ ಅಧಿಕಾರಿ ಅಂತ ಹೇಳ್ಕೊಂಡು ದೇಶ್ಯಾದ್ಯಂತ 20ಕ್ಕೂ ಅಧಿಕ ಮಹಿಳೆಯರಿಗೆ ವಂಚನೆ

    ಒಟ್ಟಾರೆ, ದರ ಏರಿಕೆಯ ಭಾರವನ್ನು ಹೊರಲಾರದೇ ಜನ ಹೈರಾಣಾಗಿದ್ದಾರೆ. ಅದರ ಮಧ್ಯೆ ದಿನಕ್ಕೊಂದು ದರ ಏರಿಕೆ ಬಿಸಿಗೆ ಜನ ಹಿಡಿಶಾಪ ಹಾಕುವ ಪರಿಸ್ಥಿತಿ ಉದ್ಭವವಾಗಿದೆ. ಇದನ್ನೂ ಓದಿ: ಚಾಮರಾಜನಗರ| ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ – 18 ಅಡಿ ಉದ್ದದ ಸರಳಲ್ಲಿ ಬಾಯಿ ಬೀಗ

  • ಬಿರಿಯಾನಿ ತಿಂದು 500 ರೂ. ನಕಲಿ ನೋಟು ಚಲಾವಣೆ – ಇಬ್ಬರು ಆರೋಪಿಗಳ ಬಂಧನ

    ಬಿರಿಯಾನಿ ತಿಂದು 500 ರೂ. ನಕಲಿ ನೋಟು ಚಲಾವಣೆ – ಇಬ್ಬರು ಆರೋಪಿಗಳ ಬಂಧನ

    ರಾಯಚೂರು: ಹೋಟೆಲ್‌ನಲ್ಲಿ ಬಿರಿಯಾನಿ ತಿಂದು ನಕಲಿ 500 ರೂ. ನೋಟು ಚಲಾವಣೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    500 ರೂ. ಮುಖಬೆಲೆಯ ನಕಲಿ ನೋಟು ಚಲಾವಣೆಗೆ ಮುಂದಾಗಿದ್ದ ಮಂಜುನಾಥ ಹಾಗೂ ರಮೇಶ್ ಬಂಧಿತ ಆರೋಪಿಗಳು. ಇದನ್ನೂ ಓದಿ: ನಡು ರಸ್ತೆಯಲ್ಲಿ ಅಡ್ಡಗಟ್ಟಿ ರೌಡಿಶೀಟರ್‌ ಬರ್ಬರ ಹತ್ಯೆ

    ಆರೋಪಿಗಳು ರಾಯಚೂರು (Raichur) ನಗರದ ಬಿರಿಯಾನಿ ಹೋಟೆಲ್‌ನಲ್ಲಿ ಚಿಕನ್ ಬಿರಿಯಾನಿ ತಿಂದು 500 ರೂ. ಬಿಲ್ ಪಾವತಿಸಿದ್ದರು. ಸ್ವಲ್ಪ ಹೊತ್ತಿನ ಬಳಿಕ ಅನುಮಾನ ಬಂದು ಹೋಟೆಲ್ ಮಾಲೀಕ ನೋಟು ಪರಿಶೀಲಿಸಿದಾಗ ಅಸಲಿಯತ್ತು ಬಯಲಾಗಿದೆ. ಇದನ್ನೂ ಓದಿ: ಛತ್ರಿಗಳು ಎಂದ ಡಿಕೆಶಿ ವಿರುದ್ಧ ಸಿಡಿದೆದ್ದ ಮಂಡ್ಯದ ಜನ!

    ಮನೋರಂಜನೆಗಾಗಿ ಬಳಸುವ ಚಿಲ್ಡ್ರನ್‌ ಬ್ಯಾಂಕ್ ಆಫ್ ಇಂಡಿಯಾ ಎಂದು ನಮೂದಿಸಿದ್ದ ನಕಲಿ ನೋಟನ್ನ ಆರೋಪಿಗಳು ಬಿಲ್ ಪಾವತಿಗೆ ಬಳಸಿದ್ದರು. ಹೋಟೆಲ್ ಮಾಲೀಕ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇಬ್ಬರು ಆರೋಪಿಗಳನ್ನ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಬೆಳೆ ಹಾಳು ಮಾಡಿದ್ದಕ್ಕೆ ದಾಯಾದಿಗಳ ನಡುವೆ ಗಲಾಟೆ – ಕೊಲೆಯಲ್ಲಿ ಅಂತ್ಯ

    ಖೋಟಾ ನೋಟು ಜಾಲ ಪತ್ತೆ ಬೆನ್ನಲ್ಲೆ ಮತ್ತೊಂದು ಪ್ರಕರಣ ದಾಖಲಾಗಿದೆ. ನಕಲಿ ನೋಟು ದಂಧೆಗೆ ಮುಂದಾಗಿದ್ದ ನಾಲ್ವರನ್ನ ಪೊಲೀಸರು ಇತ್ತೀಚಿಗಷ್ಟೆ ಬಂಧಿಸಿದ್ದರು. ಜಿಲ್ಲೆಯಲ್ಲಿ ಖೋಟಾ ನೋಟು ಹಾವಳಿ ಹೆಚ್ಚಾಗಿರುವುದು ಪೊಲೀಸರಿಗೆ ತಲೆನೋವಾಗಿದೆ.

  • ಬಾಯಿ ಸುಡಲಿದೆ ಕಾಫಿ – ತಿಂಗಳಾಂತ್ಯಕ್ಕೆ ಕಪ್ ಕಾಫಿ ಬೆಲೆ 3 ರೂ. ಏರಿಕೆ ಸಾಧ್ಯತೆ

    ಬಾಯಿ ಸುಡಲಿದೆ ಕಾಫಿ – ತಿಂಗಳಾಂತ್ಯಕ್ಕೆ ಕಪ್ ಕಾಫಿ ಬೆಲೆ 3 ರೂ. ಏರಿಕೆ ಸಾಧ್ಯತೆ

    ಬೆಂಗಳೂರು: ಈಗಾಗಲೇ ಬಸ್, ಮೆಟ್ರೋ, ಅಡುಗೆ ಎಣ್ಣೆ ಬೆಲೆ ಏರಿಕೆಯಿಂದ ಕಂಗೆಟ್ಟ ಜನರಿಗೆ, ಇನ್ಮುಂದೇ ಕಾಫಿ (Coffee) ದರ ಏರಿಕೆಯ ಬಿಸಿ ತಟ್ಟಲಿದೆ. ತಿಂಗಳಾಂತ್ಯಕ್ಕೆ 1 ಕಪ್ ಕಾಫಿ ಬೆಲೆ 2ರಿಂದ 3 ರೂ. ಏರಿಕೆಯಾಗುವ ಸಾಧ್ಯತೆಯಿದೆ.

    ಕಾಫಿ ಬೆಲೆ ಇನ್ನೂ 2 ರಿಂದ 3 ರೂ. ಹೆಚ್ಚಳವಾಗುವ ಸಾಧ್ಯತೆಯಿದೆ. ಕಳೆದ ತಿಂಗಳಷ್ಟೇ ಶೇಕಡಾ 15ರಷ್ಟು ಕಾಫಿ ಬೆಲೆ ಹೆಚ್ಚಾಗಿತ್ತು. ಸದ್ಯ ಹೊಟೇಲ್‌ಗಳಲ್ಲಿ 1 ಕಪ್ ಕಾಫಿಗೆ 15 ರಿಂದ 17 ರೂ. ಇದೆ. ಈ ತಿಂಗಳಾಂತ್ಯಕ್ಕೆ 20 ರೂ. ಆಗುವ ಸಾಧ್ಯತೆಯಿದೆ. ಹಾಲಿನ ಬೆಲೆಕ್ಕಿಂತ ಕಾಫಿಗೆ ಹಾಕುವ ಡಿಕಾಕ್ಷನ್ ಬೆಲೆಯೇ ಹೆಚ್ಚಾಗಲಿದೆ ಎಂದು ಕರ್ನಾಟಕ ಹೊಟೇಲ್ ಅಸೋಸಿಯೇಷನ್ ಉಪಾಧ್ಯಕ್ಷ ಮಧುಕರ್ ಶೆಟ್ಟಿ ತಿಳಿಸಿದ್ದಾರೆ. ಇದನ್ನೂ ಓದಿ: ಚುನಾವಣೆ ಬಂದರೆ ಮಾತ್ರ ಗ್ಯಾರಂಟಿ ಹಣ ಹಾಕ್ತಾರೆ – ಸುರೇಶ್ ಬಾಬು ಕಿಡಿ

    ಕಳೆದ ತಿಂಗಳು 1 ಕೆಜಿ ಕಾಫಿ ಪುಡಿಗೆ 100 ರೂ. ಹೆಚ್ಚಳವಾಗಿತ್ತು. ಇದೀಗ ಮಾ. 1ರಿಂದ ಮತ್ತೆ 1 ಕೆ.ಜಿ ಕಾಫಿ ಪುಡಿಗೆ 100 ರೂ. ಹೆಚ್ಚಾಗಿದೆ. ಹೀಗಾಗಿ 1 ಕೆ.ಜಿ ಪ್ರೀಮಿಯಮ್ ಕಾಫಿ ಪುಡಿಗೆ 900 ರಿಂದ 1000 ರೂ. ಆಗಿದೆ. ಈ ತಿಂಗಳ ಅಂತ್ಯಕ್ಕೂ ಮುನ್ನ 100 ರೂ. ಹೆಚ್ಚಳವಾಗುವ ಸಾಧ್ಯತೆಯಿದೆ. ಈ ಪೈಕಿ ಅರೇಬಿಕಾ ಕಾಫಿ ಬೆಲೆ ಹೆಚ್ಚಾಗಿದೆ. ಈ ಬಗ್ಗೆ ಇಂಡಿಯನ್ ಕಾಫಿ ರೋಸ್ಟರ್ಸ್ ಅಸೋಸಿಯೇಷನ್ ಅಧ್ಯಕ್ಷ ಪೆರಿಕಲ್ ಎಂ.ಸುಂದರ್ ಬೆಲೆ ಏರಿಕೆಯ ಆತಂಕ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ ಬೊಜ್ಜು ಹೆಚ್ಚಾಗಲು ಕಾರಣವೇನು? ನಿಯಂತ್ರಣ ಹೇಗೆ?

    ಕಾಫಿ ಪುಡಿ ಬೆಲೆ ಏರಿಕೆಗೆ ಕಾರಣಗಳನ್ನ ನೋಡೋದಾದ್ರೆ… ಹವಾಮಾನ ವೈಪರೀತ್ಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾಫಿ ಬೆಳೆ ಶೇ.20ರಷ್ಟು ಕುಸಿತವಾಗಿರುವುದು. ಅತೀ ಹೆಚ್ಚು ಕಾಫಿ ಬೆಳೆಯುವ ದೇಶಗಳಾದ ವಿಯ್ನೆಟಾಂ, ಬ್ರೆಜಿಲ್‌ನಲ್ಲಿ ಅತಿವೃಷ್ಟಿಯಿಂದಾಗಿ ಕಾಫಿ ಬೆಳೆ ನಾಶವಾಗಿರುವುದು. ಕರ್ನಾಟಕದಲ್ಲಿ ಬೆಳೆದ ಕಾಫಿಗೆ ವಿದೇಶಗಳಲ್ಲಿ ಬೇಡಿಕೆ ಹೆಚ್ಚಾಗಿರುವುದು ಮತ್ತು ವಿದೇಶಗಳಿಗೆ ಶೇ.60ರಷ್ಟು ಕಾಫಿ ರಫ್ತಾಗುತ್ತಿರುವುದು ಕಾಫಿ ಬೆಲೆ ಏರಿಕೆಗೆ ಮುಖ್ಯ ಕಾರಣಗಳು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ತರುಣ್ ಸುಧೀರ್ ನಿರ್ಮಾಣದ ಹೊಸ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎಂಟ್ರಿ