Tag: Hotel

  • ನನಗೇನು ಗೊತ್ತಿಲ್ಲ, ಈಗಲೇ ಗೊತ್ತಾಗಿದ್ದು: ಸಂದೇಶ್ ನಾಗರಾಜ್

    ನನಗೇನು ಗೊತ್ತಿಲ್ಲ, ಈಗಲೇ ಗೊತ್ತಾಗಿದ್ದು: ಸಂದೇಶ್ ನಾಗರಾಜ್

    ಬೆಂಗಳೂರು: ನನಗೇನು ಗೊತ್ತಿಲ್ಲ, ನನಗೆ ಈ ಬಗ್ಗೆ ಕೇಳಬೇಡಿ ಎಂದು ಮೈಸೂರಿನ ಸಂದೇಶ್ ಪ್ರಿನ್ಸ್ ಹೋಟೆಲ್ ಮಾಲೀಕ ಸಂದೇಶ ನಾಗರಾಜ್ ಹೇಳಿದ್ದಾರೆ.

    ದರ್ಶನ್ ಮತ್ತು ಸ್ನೇಹಿತರು ದಲಿತ ವೇಟರ್‍ರೊಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ನಿರ್ಮಾಪಕ ಇಂದ್ರಜಿತ್ ಲಂಕೇಶ್ ಅವರ ಆರೋಪಕ್ಕೆ ನಿರ್ಮಾಪಕ ಸಂದೇಶ್ ನಾಗರಾಜ್ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ್ದಾರೆ.

    ನನಗೇನು ಗೊತ್ತಿಲ್ಲ. ನನಗೆ ಈ ಬಗ್ಗೆ ಕೇಳಬೇಡಿ. ಈ ಬಗ್ಗೆ ಇವತ್ತೇ ಟಿವಿಯಲ್ಲಿ ನೋಡುತ್ತಿದ್ದೇನೆ. ನಾನು ಹೋಟೆಲ್‍ನಲ್ಲಿ ಅಂದು ಇರಲಿಲ್ಲ. ಪ್ರಕರಣ ನಡೆದಿದೆ ಎಂದು ಹೋಟೆಲ್‍ನವರು ಅಥವಾ ಹೋಟೆಲ್‍ನಲ್ಲಿ ಹೊಡೆಸಿಕೊಂಡವರಾದರು ಹೇಳಬೇಕು. ಆದರೆ ಇಬ್ಬರೂ ಕೂಡ ಆ ಬಗ್ಗೆ ಹೇಳಿಲ್ಲ. ಇಂದ್ರಜಿತ್ ಲಂಕೇಶ್‍ರವರು ಮಾಡುತ್ತಿರುವ ಆರೋಪದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ತಿಳಿಸಿದರು.

    ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಇಂದ್ರಜಿತ್ ಲಂಕೇಶ್, ಮೈಸೂರಿನ ಸಂದೇಶ್ ಪ್ರಿನ್ಸ್ ಹೋಟೆಲಿನಲ್ಲಿ ದಲಿತ ವೇಟರ್ ಮೇಲೆ ದರ್ಶನ್ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ವೇಟರ್ ಕಣ್ಣುಗಳಿಗೆ ಹಾನಿಯಾಗಿದೆ. ಈ ಘಟನೆಯ ಸಂದರ್ಭದಲ್ಲಿ ದರ್ಶನ್, ರಾಕೇಶ್, ಹರ್ಷ ಮೇಲಾಂಟ, ಮತ್ತು ಪವಿತ್ರ ಗೌಡ ಇರುತ್ತಾರೆ. ಘಟನೆಯ ಬಳಿಕ 50 ಸಾವಿರ ರೂ. ನೀಡಿ ರಾಜಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಇದನ್ನೂ ಓದಿ:ಇಂದ್ರಜಿತ್ ಮನವಿಯಂತೆ ತನಿಖೆ ನಡೆಸುವಂತೆ ಮೈಸೂರು ಎಸ್‍ಪಿಗೆ ಸೂಚನೆ: ಬೊಮ್ಮಾಯಿ

  • ಇಂದ್ರಜಿತ್ ಮನವಿಯಂತೆ ತನಿಖೆಗೆ ಮೈಸೂರು ಪೊಲೀಸ್ ಆಯುಕ್ತರಿಗೆ ಸೂಚನೆ: ಬೊಮ್ಮಾಯಿ

    ಇಂದ್ರಜಿತ್ ಮನವಿಯಂತೆ ತನಿಖೆಗೆ ಮೈಸೂರು ಪೊಲೀಸ್ ಆಯುಕ್ತರಿಗೆ ಸೂಚನೆ: ಬೊಮ್ಮಾಯಿ

    ಬೆಂಗಳೂರು: ನಿರ್ಮಾಪಕ ಇಂದ್ರಜಿತ್ ಲಂಕೇಶ್ ಅವರ ಮನವಿಯಂತೆ ಪ್ರಕರಣ ಸಂಬಂಧ ತನಿಖೆ ನಡೆಸುವಂತೆ ಮೈಸೂರು ಪೊಲೀಸ್ ಆಯುಕ್ತರಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದ್ರಜಿತ್ ಲಂಕೇಶ್ ನನಗೆ ಮನವಿ ಪತ್ರ ನೀಡಿದ್ದಾರೆ. ಮನವಿ ಪತ್ರದ ಆಧಾರದ ಮೇಲೆ ತನಿಖೆ ಮಾಡುವಂತೆ ಮೈಸೂರು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ಎಂದರು.

    ಇಂದ್ರಜಿತ್ ಆರೋಪದ ಬಗ್ಗೆ ನನಗೆ ಮಾಹಿತಿ ಇಲ್ಲ. ಅವರ ಮನವಿ ಪತ್ರದ ಮೇಲೆ ತನಿಖೆ ಮಾಡಲು ಸೂಚನೆ ನೀಡಿದ್ದೇನೆ. ಮನವಿ ಪತ್ರದಲ್ಲಿ ಸ್ಪಷ್ಟವಾಗಿ ಏನೂ ಹೇಳಿಲ್ಲ. ಯಾವುದೇ ಸಾಕ್ಷಿಗಳನ್ನು ಅವರು ನಮಗೆ ನೀಡಿಲ್ಲ. ಇಂದ್ರಜಿತ್ ಏನಾದರೂ ಆರೋಪ ಮಾಡೋದಾದ್ರೆ ದೂರು ಕೊಟ್ಟು ಆರೋಪಗಳನ್ನ ಮಾಡಲಿ. ನನಗೆ ಕೊಟ್ಟ ಮನವಿ ಮೇಲೆ ತನಿಖೆಗೆ ಸೂಚಿಸಿದ್ದೇನೆ ಎಂದರು. ಇದನ್ನೂ ಓದಿ: ದಲಿತ ವೇಟರ್ ಮೇಲೆ ದರ್ಶನ್, ಸ್ನೇಹಿತರಿಂದ ಹಲ್ಲೆ – ಇಂದ್ರಜಿತ್ ಆರೋಪ

    ಇಂದ್ರಜಿತ್ ಆರೋಪವೇನು..?
    ಮೈಸೂರಿನ ಸಂದೇಶ್ ಪ್ರಿನ್ಸ್ ಹೋಟೆಲಿನಲ್ಲಿ ದಲಿತ ವೇಟರ್ ಮೇಲೆ ದರ್ಶನ್ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ವೇಟರ್ ಕಣ್ಣುಗಳಿಗೆ ಹಾನಿಯಾಗಿದೆ. ಈ ಘಟನೆಯ ಸಂದರ್ಭದಲ್ಲಿ ದರ್ಶನ್, ರಾಕೇಶ್, ಹರ್ಷ ಮೆಲಾಂಟ, ಮತ್ತು ಪವಿತ್ರ ಗೌಡ ಇರುತ್ತಾರೆ. ಘಟನೆಯ ಬಳಿಕ 50 ಸಾವಿರ ರೂ. ನೀಡಿ ರಾಜಿ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

    ಈ ಘಟನೆ ಹೊರಗಡೆ ಬರಬಾರದು ಎಂಬ ಕಾರಣಕ್ಕೆ ಸಿಸಿಟಿವಿ ದೃಶ್ಯಗಳನ್ನು ಡಿಲೀಟ್ ಮಾಡಿಸಿದ್ದಾರೆ. ಮೈಸೂರು ಪೊಲೀಸರು ಬಳೆ ತೊಟ್ಟಿದ್ದಾರಾ ಈ ಎಲ್ಲ ಘಟನೆಗಳ ಬಗ್ಗೆ ತನಿಖೆ ನಡೆಸಲಿ ಎಂದು ಆಗ್ರಹಿಸಿದರು. ಇದೇ ವೇಳೆ ಆರೋಪಕ್ಕೆ ಮಾಧ್ಯಮಗಳು ಸಾಕ್ಷ್ಯ ನೀಡುವಂತೆ ಕೇಳಿದ್ದಕ್ಕೆ, ಈಗ ನಾನು ಬೊಮ್ಮಾಯಿ ಅವರಲ್ಲಿ ದೂರು ನೀಡಿದ್ದೇನೆ. ಪೊಲೀಸರು ತನಿಖೆ ನಡೆಸಲಿ. ಮುಂದೆ ನೋಡೋಣ ಎಂದು ಉತ್ತರಿಸಿದರು.

  • ಪಾರ್ಸಲ್ ಕೊಡೋದು ತಡವಾಗಿದ್ದಕ್ಕೆ ಹೋಟೆಲ್‍ಗೆ ನುಗ್ಗಿ ದಾಂಧಲೆ

    ಪಾರ್ಸಲ್ ಕೊಡೋದು ತಡವಾಗಿದ್ದಕ್ಕೆ ಹೋಟೆಲ್‍ಗೆ ನುಗ್ಗಿ ದಾಂಧಲೆ

    ಬೆಂಗಳೂರು: ಹೋಟೆಲ್ ನಲ್ಲಿ ಊಟ ಪಾರ್ಸಲ್ ಕೊಡೋದು ತಡವಾಯಿತೆಂದು ಸಿಬ್ಬಂದಿ ಜೊತೆ ಗಲಾಟೆ ಮಾಡಿ, ದಾಂಧಲೆ ನಡೆಸಿರುವ ಘಟನೆ ನಗರದ ಅಮೃತಹಳ್ಳಿಯ ಭುವನೇಶ್ವರಿ ನಗರದಲ್ಲಿರುವ ಸೆವೆನ್ ಸ್ಟಾರ್ ಹೋಟೆಲ್ ನಲ್ಲಿ ನಡೆದಿದೆ.

    ದಾಂಧಲೆಯ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಜುಲೈ 4ರಂದು ಸ್ಥಳೀಯ ಯುವಕನೊಬ್ಬ ಹೋಟೆಲ್‍ಗೆ ಬಂದು ಊಟ ಪಾರ್ಸಲ್ ಹೇಳಿದ್ದ. ಈ ವೇಳೆ ಹೋಟೆಲ್ ಸಿಬ್ಬಂದಿ ಪಾರ್ಸಲ್ ಕೊಡುವುದು ತಡವಾಗಿದೆ. ಇದೇ ವಿಚಾರಕ್ಕೆ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಈ ಗಲಾಟೆ ವೇಳೆ ಸ್ಥಳೀಯ ಯುವಕ ನಾನು ಲೋಕಲ್, ನಮಗೇ ಅವಾಜ್ ಹಾಕ್ತೀಯಾ ಎಂದು ಸಿಬ್ಬಂದಿಗೆ ಬೈದಿದ್ದ. ಈ ವೇಳೆ ಹೋಟೆಲ್ ಸಿಬ್ಬಂದಿ ನೀನು ಯಾರಾದ್ರೆ ನಂಗೇನು ಎಂದು ಬೆದರಿಸಿ ಕಳುಹಿಸಿದ್ದ.

    ಇದರಿಂದ ಕೋಪಗೊಂಡ ಯುವಕ, ಇದೀಗ ಹತ್ತಕ್ಕೂ ಹೆಚ್ಚು ತನ್ನ ಸ್ನೇಹಿತರನ್ನು ಕರೆಸಿ ಹೋಟೆಲ್‍ಗೆ ನುಗ್ಗಿಸಿ ದಾಂಧಲೆ ಮಾಡಿದ್ದಾರೆ. ಹೋಟೆಲ್ ಮಾಲೀಕ ಅಂಜನೇಯ ಅವರು ತಡೆಯಲು ಹೋದ ವೇಳೆ ಅವರಿಗೂ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಒಳಗೆ ನುಗ್ಗಿ ಚೇರ್, ಗ್ಲಾಸ್, ಸೇರಿದಂತೆ ಹೊಟೇಲ್‍ನಲ್ಲಿದ್ದ ಎಲ್ಲ ವಸ್ತುಗಳನ್ನು ಪೀಸ್ ಪೀಸ್ ಮಾಡಿ ದರ್ಪ ಮರೆದಿದ್ದಾರೆ.

    ತೀವ್ರವಾಗಿ ಗಾಯಗೊಂಡ ಮಾಲೀಕ, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಅಮೃತಹಳ್ಳಿ ಪೊಲೀಸರು, ಐದಕ್ಕೂ ಹೆಚ್ಚು ಜನರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

  • ಕೋವಿಡ್ ರೂಲ್ಸ್ ಬ್ರೇಕ್ ಮಾಡಿ ಪಾರ್ಟಿ – 37 ಮಂದಿ ಬಂಧನ

    ಕೋವಿಡ್ ರೂಲ್ಸ್ ಬ್ರೇಕ್ ಮಾಡಿ ಪಾರ್ಟಿ – 37 ಮಂದಿ ಬಂಧನ

    ಕೋಲ್ಕತ್ತಾ: ಕೋವಿಡ್ ನಿಯಮವನ್ನು ಉಲ್ಲಂಘಿಸಿ ನಗರದ ಫೈ ಸ್ಟಾರ್ ಹೋಟೆಲ್‍ನಲ್ಲಿ ಪಾರ್ಟಿ ಮಾಡುತ್ತಿದ್ದ 37 ಮಂದಿಯನ್ನು ಕೋಲ್ಕತಾ ಪೊಲೀಸರು ಬಂಧಿಸಿದ್ದಾರೆ.

    ಆರೋಪಿಗಳು ಕೋವಿಡ್ ನಿಯಮವನ್ನು ಮರೆತು ಹೋಟೆಲ್‍ನ ಎರಡನೇ ಹಾಗೂ ಮೂರನೇ ಮಹಡಿಯಲ್ಲಿ ತಡರಾತ್ರಿ 1.15ಕ್ಕೆ ಪಾರ್ಟಿ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ಮಾಡಿದ್ದಾರೆ.

    ಈ ವೇಳೆ ಪೊಲೀಸರು ಆರೋಪಿಗಳಿಂದ ಎರಡು ಕಾರು, ಗಾಂಜಾ, ಮದ್ಯದ ಬಾಟಲ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೇ ಘಟನೆ ವೇಳೆ ವ್ಯಕ್ತಿಯೋರ್ವ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸದ್ಯ ಘಟನೆ ಸಂಬಂಧ ಭಾರತೀಯ ದಂಡ ಸಂಹಿತೆ ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯ ಸೆಕ್ಷನ್‍ಗಳ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

    ಪಶ್ಚಿಮ ಬಂಗಾಳ ಸರ್ಕಾರವು ರಾಜ್ಯವ್ಯಾಪ್ತಿ ಜುಲೈ 15ರವರೆಗೆ ಕೋವಿಡ್ ನಿರ್ಬಂಧಗಳನ್ನು ವಿಸ್ತರಿಸಿದ್ದು, ರಾತ್ರಿ 9ರಿಂದ ಬೆಳಗ್ಗೆ 5ರವರೆಗೂ ಕರ್ಫ್ಯೂ ವಿಧಿಸಿದೆ. ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಯಾವುದೇ ಚಟುವಟಿಕೆಗಳಿಗೆ ಅನುಮತಿ ನೀಡಲು ಆಗುತ್ತಿಲ್ಲ ಎಂದು ಸೂಚಿಸಿದೆ. ಇದನ್ನೂ ಓದಿ: ಫೇಸ್‍ಬುಕ್ ನಲ್ಲಿ ಪರಿಚಯ – 2.50 ಲಕ್ಷ ರೂ. ಯುವಕನಿಗೆ ಪಂಗನಾಮ

  • ದೆಹಲಿ ಸರ್ಕಾರದಿಂದ ಹೊಸ ಅಬಕಾರಿ ನೀತಿ – ಬೆಳಗಿನ ಜಾವ 3ರವರೆಗೆ ಬಾರ್ ಓಪನ್

    ದೆಹಲಿ ಸರ್ಕಾರದಿಂದ ಹೊಸ ಅಬಕಾರಿ ನೀತಿ – ಬೆಳಗಿನ ಜಾವ 3ರವರೆಗೆ ಬಾರ್ ಓಪನ್

    ನವದೆಹಲಿ: ನಗರದಲ್ಲಿ ಆದಾಯ ಹೆಚ್ಚಿಸಲು ಹಾಗೂ ಮದ್ಯ ಮಾಫಿಯಾವನ್ನು ತಡೆಗಟ್ಟುವ ಉದ್ದೇಶದಿಂದಾಗಿ ದೆಹಲಿ ಸರ್ಕಾರ 2021-20221ರ ಹೊಸ ಅಬಕಾರಿ ನೀತಿಯನ್ನು ಪ್ರಕಟಿಸಿದೆ.

    ರಾಷ್ಟ್ರ ರಾಜಧಾನಿಯಲ್ಲಿ ಮದ್ಯದಂಗಡಿ ಪರವಾನಗಿ ಪಡೆದ ಪರವಾನಗಿದಾರರು ಹೋಟೆಲ್, ಕ್ಲಬ್ ಮತ್ತು ರೆಸ್ಟೋರೆಂಟ್, ಬಾರ್‌ಗಳಲ್ಲಿ ಬೆಳಗಿನ ಜಾವ 3ಗಂಟೆವರೆಗೆ ಕಾರ್ಯನಿರ್ವಹಿಸಲು ಅನುಮತಿ ನೀಡಿದೆ.

    ದೆಹಲಿ ಸರ್ಕಾರವು ನಗರದಲ್ಲಿ ವಿಂಗಡಿಸಿರುವ 32 ವಲಯಗಳಲ್ಲಿ ಎಲ್-7ವಿ(ಭಾರತೀಯ ಮತ್ತು ವಿದೇಶಿ ಮದ್ಯ)ಪರವಾನಗಿಗಳಿಗೆ ಟೆಂಡರ್ ನೀಡಿದೆ. ಜೊತೆಗೆ ಮದ್ಯವನ್ನು ಡೋರ್ ಡೆಲಿವರಿ ಕೂಡ ಒದಗಿಸಲಾಗುತ್ತಿದ್ದು, ಈ ಕುರಿತ ಮಾಹಿತಿ ವೆಬ್‍ಸೈಟ್‍ಗಳಲ್ಲಿ ಸಿಗಲಿದೆ.

    ಅಬಕಾರಿಯ ಈ ಹೊಸ ನೀತಿಯನ್ನು ಜನರಿಗಾಗಿ ಜಾರಿಗೊಳಿಸಲಾಗಿದ್ದು, ಎಲ್-7ವಿ(ಭಾರತೀಯ ಮತ್ತು ವಿದೇಶಿ ಮದ್ಯ) ರೂಪದಲ್ಲಿ ಚಿಲ್ಲರೆ ಮಾರಾಟವನ್ನು ಯಾವುದೇ ಮಾರುಕಟ್ಟೆ, ಮಾಲ್, ಕಮರ್ಷಿಯಲ್ ರೋಡ್ ಮತ್ತು ಏರಿಯಾ, ಸ್ಥಳೀಯ ಶಾಪಿಂಗ್ ಕಾಂಪ್ಲೆಕ್ಸ್ ಮತ್ತು ಇನ್ನಿತರ ರಸ್ತೆಗಳಲ್ಲಿ ತೆರೆಯಬಹುದಾಗಿದೆ. ಇದನ್ನೂ ಓದಿ: ಐಸಿಯುನಲ್ಲಿ ಐಸ್‍ಕ್ರೀಂ ತಿಂದ ಮಹಿಳೆ ಸಾವು

  • ಕೊರೋನಾ ವಿರುದ್ಧ ಊರಿಗೆ ಊರೇ ಫೈಟ್- ಕಷಾಯ ಕುಡಿದ್ರಷ್ಟೇ ಹೋಟೆಲ್‍ನಲ್ಲಿ ಟಿಫನ್..!

    ಕೊರೋನಾ ವಿರುದ್ಧ ಊರಿಗೆ ಊರೇ ಫೈಟ್- ಕಷಾಯ ಕುಡಿದ್ರಷ್ಟೇ ಹೋಟೆಲ್‍ನಲ್ಲಿ ಟಿಫನ್..!

    ಗದಗ: ಇಲ್ಲಿನ ಗ್ರಾಮವೊಂದರಲ್ಲಿ ಯಾವುದೇ ಹೋಟೆಲ್‍ಗೆ ಹೋದರೂ ಒಂದು ಲೋಟ ಕಷಾಯ ಕೊಡ್ತಾರೆ. ಬೇಡಪ್ಪ ಕಷಾಯ ಕುಡಿಯೋಕ್ಕಾಗಲ್ಲ ಅಂದ್ರೆ ಅಲ್ಲಿಂದ ಜಾಗ ಖಾಲಿ ಮಾಡು ಅಂತಾರೆ. ಇಡೀ ಊರೇ ರೋಗ ನಿರೋಧಕ ಶಕ್ತಿ ಇದ್ದವನೇ ಮಹಾಶೂರ ಅಂತಿದೆ.

    ಹೌದು. ಗದಗ ಜಿಲ್ಲೆ ರೋಣ ತಾಲೂಕಿನ ಅಬ್ಬಿಗೇರಿ ಗ್ರಾಮದಲ್ಲಿ ಇಡೀ ಊರಿಗೆ ಊರೇ ಕೊರೋನಾ ವಿರುದ್ಧ ಟೊಂಕಕಟ್ಟಿ ನಿಂತಿದೆ. ಹೆಮ್ಮಾರಿ ಕೊರೋನಾ ಹಿಮ್ಮೆಟ್ಟಿಸಲು ಗ್ರಾಮ ಪಂಚಾಯ್ತಿ ಮಾಡಿರೋ ಮಾಸ್ಟರ್ ಪ್ಲಾನ್‍ನಿಂದಾಗಿ ಗ್ರಾಮಸ್ಥರು ಆರೋಗ್ಯವೇ ಭಾಗ್ಯ ಅಂತಿದ್ದಾರೆ.

    ಗ್ರಾಮದಲ್ಲಿ ಯಾವುದೇ ಹೋಟೆಲ್‍ಗೆ ಹೋದ್ರೂ ಮೊದ್ಲು ಒಂದು ಲೋಟ ಕಷಾಯ ಕೊಡ್ತಾರೆ. ಆಮೇಲೆ ಊಟ, ತಿಂಡಿ ಏನ್ ಬೇಕು ಅಂತ ಕೇಳ್ತಾರೆ. ಕಷಾಯಕ್ಕೆ ಆಯುರ್ವೇದಲ್ಲಿ ವಿಶೇಷ ಸ್ಥಾನ ಇದೆ. ಗಂಟಲಿನಲ್ಲಿನ ವೈಸರ್‍ಗಳನ್ನು ಕೊಲ್ಲಬಲ್ಲ, ರೋಗನಿರೋಧಕ ಶಕ್ತಿಯನ್ನ ಹೆಚ್ವಿಸುವಲ್ಲೂ ಕಷಾಯ ಸಹಕಾರಿ. ಹೀಗಾಗಿ ಅಬ್ಬಿಗೇರಿ ಗ್ರಾಮ ಪಂಚಾಯ್ತಿ ಗ್ರಾಮದ ಪ್ರತಿ ಹೋಟೆಲ್‍ಗಳಲ್ಲಿ ಕಷಾಯ ನೀಡುವಂತೆ ಮನವಿ ಮಾಡಿದೆ. ಟೀ ಅಂಗಡಿಗೆ ಹೋದ್ರೂ ಅಲ್ಲೂ ಮೊದಲಿಗೆ ಒಂದು ಕಪ್ ಕಷಾಯ ಕೊಡ್ತಾರೆ. ಹೋಟೆಲ್‍ಗಳಲ್ಲಿ ಒಂದು ವೇಳೆ ಕಷಾಯ ಬೇಡಪ್ಪ ಅಂದ್ರೆ ಎದ್ದು ಮುಂದಕ್ಕೆ ಹೋಗಯ್ಯ ಅಂತಾರೆ.. ಇನ್ನು ಎಲ್ಲೇ ಕಷಾಯ ಕುಡಿದ್ರೂ ಹಣ ಪಡೆಯಲ್ಲ.

    ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಅಧಿಕಾರಿಗಳ ಮನವಿಯಂತೆ ಸದ್ಯ ಹೋಟೆಲ್‍ನವರೇ ಉಚಿತವಾಗಿ ಕಷಾಯ ಕೊಡ್ತಿದ್ದಾರೆ. ಕೆಲ ದಿನದಲ್ಲೇ ಗ್ರಾಮ ಪಂಚಾಯ್ತಿ ವತಿಯಿಂದ ಕಷಾಯ ಪೌಡರ್, ಬೆಲ್ಲ, ಇತರೆ ಸಾಮಗ್ರಿಯನ್ನು ಪೂರೈಸಲಿದೆ.  ಇದನ್ನೂ ಓದಿ:ಆನ್‍ಲೈನ್ ಕ್ಲಾಸ್‍ಗಾಗಿ 2 ಕಿ.ಮೀ ದೂರದಲ್ಲಿ ತಾವೇ ಕ್ಲಾಸ್ ರೂಂ ರೆಡಿ ಮಾಡಿದ ವಿದ್ಯಾರ್ಥಿಗಳು..!

    ಒಟ್ಟಿನಲ್ಲಿ ಕೊರೋನಾ ಸಂದಿಗ್ಧ ಸ್ಥಿತಿಯಲ್ಲಿ ಆರೋಗ್ಯದ ಬಗ್ಗೆ ಜನತೆ ಕಾಳಜಿ ವಹಿಸಲು ಅಬ್ಬಿಗೇರಿ ಗ್ರಾಮ ಪಂಚಾಯ್ತಿ ಕೈಗೊಂಡಿರೋ ಕ್ರಮ ಇತರರಿಗೆ ಮಾದರಿಯೇ ಸರಿ.

  • ನಾಳೆಯಿಂದ ಹೋಟೆಲ್‍ನಲ್ಲಿ ಟೇಬಲ್ ಸರ್ವಿಸ್

    ನಾಳೆಯಿಂದ ಹೋಟೆಲ್‍ನಲ್ಲಿ ಟೇಬಲ್ ಸರ್ವಿಸ್

    ಬೆಂಗಳೂರು: ಕೊರೊನಾ ಸಕಂಷ್ಟದಿಂದಾಗಿ ಇಷ್ಟು ದಿನ ಬರೀ ಪಾರ್ಸೆಲ್‍ಗೆ ಅವಕಾಶವಿದ್ದ ಹೋಟೆಲ್‍ನಲ್ಲಿ ನಾಳೆಯಿಂದ ಕೂತು ತಿನ್ನುವ ಅವಕಾಶಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

    ಕೊರೊನಾ ಎರಡನೇ ಅಲೆಯ ಹೊಡೆತಕ್ಕೆ ಸಿಲುಕ್ಕಿದ್ದ ರಾಜ್ಯ ನಿಧಾನವಾಗಿ ಸಹಜ ಸ್ಥಿತಿಗೆ ಬರುತ್ತಿದೆ. ಲಾಕ್‍ಡೌನ್ ಬಳಿಕ ರಾಜ್ಯ ಸರ್ಕಾರ ಮತ್ತೆ ಅನ್ಲಾಕ್ ಪ್ರಕ್ರಿಯೆ 2.0ಗೆ ಹೊಸ ಮಾರ್ಗಸೂಚಿಯನ್ನ ಬಿಡುಗಡೆ ಮಾಡಿದೆ. ಇದನ್ನೂ ಓದಿ:  ಭಾನುವಾರದ ಬಾಡೂಟಕ್ಕೆ ಮಾಡಿ ಪೋರ್ಕ್ ಫ್ರೈ

    ಸರ್ಕಾರ ಶೇ.50 ರಷ್ಟು ಮಾತ್ರ ಟೇಬಲ್ ಸರ್ವಿಸ್‍ಗೆ ಅವಕಾಶ ನೀಡಿದೆ. ನಾಳೆಯಿಂದ ಟೇಬಲ್ ಸರ್ವಿಸ್ ನೀಡಲು ಹೋಟಲ್‍ಗಳು ಸಜ್ಜಾಗುತ್ತವೆ. ಹೋಟಲ್ ಮಾಲೀಕರು ಮತ್ತು ಸಿಬ್ಬಂದಿ ಹೋಟೆಲ್‍ನಲ್ಲಿ ಸಾಮಾಜಿಕ ಅಂತರಕ್ಕೆ ಟೇಬಲ್ ಹಾಕಿ ಶೇ 50 ರಷ್ಟು ಮಾತ್ರ ಚೇರ್ ವ್ಯವಸ್ಥೆ ಮಾಡುತ್ತಿದ್ದಾರೆ. ಇದನ್ನೂ ಓದಿ:  16 ಜಿಲ್ಲೆಗಳಲ್ಲಿ ಸಂಜೆ 5ರವರೆಗೆ ಅನ್‍ಲಾಕ್- ನಿಯಮಗಳೇನು?

    ಸರ್ಕಾರದ ನಿರ್ಧಾರದಿಂದ ಸಂತಸಗೊಂಡಿರೋ ಹೋಟಲ್ ಮಾಲೀಕರು ಸರ್ಕಾರದ ಗೈಡ್ ಲೈನ್ ಪ್ರಕಾರ ಸರ್ವಿಸ್ ನೀಡಲು ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ. ನಾಳೆಯಿಂದ ಹೋಟೆಲ್‍ನಲ್ಲಿಯೇ ಕುಳಿತು ಆಹಾರವನ್ನು ಸವಿಯಬಹುದಾಗಿದೆ.

  • ಪ್ರವಾಸಿ ಮಾರ್ಗದರ್ಶಿಗಳಿಗೆ 5 ಸಾವಿರ ರೂ. ಕೋವಿಡ್ ಪರಿಹಾರ – ಯೋಗೇಶ್ವರ್

    ಪ್ರವಾಸಿ ಮಾರ್ಗದರ್ಶಿಗಳಿಗೆ 5 ಸಾವಿರ ರೂ. ಕೋವಿಡ್ ಪರಿಹಾರ – ಯೋಗೇಶ್ವರ್

    ಬೆಂಗಳೂರು: ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಾಯಿತವಾಗಿರುವ ಪ್ರವಾಸಿ ಮಾರ್ಗದರ್ಶಿಗಳಿಗೆ ಕೋವಿಡ್ ಸಂಕಷ್ಟದ ಪರಿಹಾರವಾಗಿ 5 ಸಾವಿರ ರೂ. ನೀಡಲು ಪ್ರವಾಸೋದ್ಯಮ ಸಚಿವರಾದ ಸಿ.ಪಿ.ಯೋಗೇಶ್ವರ್ ಮುಂದಾಗಿದ್ದಾರೆ.

    ಪ್ರವಾಸೋದ್ಯಮ ಇಲಾಖೆಯಲ್ಲಿ 384 ನೋಂದಾಯಿತ ಪ್ರವಾಸಿ ಗೈಡ್‍ಗಳಿದ್ದು, ಅವರೆಲ್ಲರಿಗೂ ಕೋವಿಡ್ ಸಂಕಷ್ಟದ ಸಮಯದಲ್ಲಿ ನೆರವಾಗಲು ನಿರ್ಧರಿಸಿದ್ದು, ಪ್ರತಿಯೊಬ್ಬರಿಗೂ ತಲಾ 5 ಸಾವಿರ ರೂಗಳನ್ನು ಬಿಡುಗಡೆ ಮಾಡಲು ಆದೇಶಿಸಿದ್ದು, ಹೋಟೆಲ್ ಕಾರ್ಮಿಕರಿಗೆ ಕೋವಿಡ್ ಪರಿಹಾರ ಪ್ಯಾಕೇಜ್ ಯೋಜನೆಯಡಿ 3 ಸಾವಿರ ರೂಗಳನ್ನು ನೀಡಲು ಸಹ ಆರ್ಥಿಕ ಇಲಾಖೆಯಲ್ಲಿ ಚರ್ಚೆ ನಡೆಯುತ್ತಿದೆ. ಅತೀ ಶೀಘ್ರದಲ್ಲಿ ಸರ್ಕಾರಿ ಆದೇಶ ಹೊರಡಲಿದೆ ಎಂದು ಸಚಿವರು ಅಭಿಪ್ರಯಾಪಟ್ಟರು. ಇದನ್ನೂ ಓದಿ: ಹಂಪಿ ಪ್ರವಾಸಿ ಗೈಡ್‍ಗಳಿಗೆ ನೆರವಿನ ಹಸ್ತಚಾಚಿದ ಸುಧಾಮೂರ್ತಿ

    ಬೆಂಗಳೂರಿನ ಖನಿಜ ಭವನದಲ್ಲಿರುವ ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ಸಂಸ್ಥೆ ಕಛೇರಿಯಲ್ಲಿ ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಕೋವಿಡ್ ಲಾಕ್‍ಡೌನ್‍ನಿಂದ ಪ್ರವಾಸೋದ್ಯಮ ಕ್ಷೇತ್ರದ ಮೇಲಾಗಿರುವ ಪರಿಣಾಮಗಳ ಬಗ್ಗೆ ಮಾಹಿತಿ ಪಡೆದರು. ಬಳಿಕ ಕರ್ನಾಟಕ ಪ್ರವಾಸೋದ್ಯಮ ಸೊಸೈಟಿಯ ಪದಾಧಿಕಾರಿಗಳ ಜೊತೆ ಸಹ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಸೊಸೈಟಿಯ ಪದಾಧಿಕಾರಿಗಳು ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವವರ ಸಂಕಷ್ಟಗಳನ್ನು ವಿವರಿಸಿ ಪರಿಹಾರ ನೀಡುವಂತೆ ಮನವಿ ಮಾಡಿದರು. ಇದನ್ನೂ ಓದಿ: ಸರ್ಕಾರ ರಚನೆಯಾಗೋದಕ್ಕೆ ನನ್ನದೂ ಅಳಿಲು ಸೇವೆ ಇದೆ : ಸಿ.ಪಿ.ಯೋಗೇಶ್ವರ್

    ಆಸ್ತಿ ತೆರಿಗೆಯನ್ನು ಮನ್ನಾ ಮಾಡಬೇಕು. ಮದ್ಯ ಪರವಾನಗಿ ಶುಲ್ಕವನ್ನು ಶೇ.50 ರಷ್ಟು ಮನ್ನಾ ಮಾಡಿ ಉಳಿದ ಶೇ.50 ರಷ್ಟು ಶುಲ್ಕವನ್ನು ಕಟ್ಟಲು ಈ ವರ್ಷದ ಡಿಸೆಂಬರ್ ಅಂತ್ಯದವರೆಗೆ ಸಮಯ ವಿಸ್ತರಿಸಬೇಕು ಹಾಗೂ ವಿದ್ಯುತ್‍ಚ್ಛಕ್ತಿ ದರದಲ್ಲಿ ರಿಯಾಯಿತಿ ನೀಡಬೇಕು. ಪ್ರವಾಸೋದ್ಯಮ ವಾಹನಗಳ ತೆರಿಗೆಯನ್ನು ಆರು ತಿಂಗಳ ಅವಧಿಗೆ ಮನ್ನಾ ಮಾಡಬೇಕು. ಪ್ರವಾಸಿ ವಾಹನಗಳನ್ನು ಚಲಾಯಿಸುತ್ತಿರುವ ಚಾಲಕರಿಗೆ 2 ಸಾವಿರ ರೂಗಳ ಕೋವಿಡ್ ಪರಿಹಾರ ಹಣವಾಗಿ ನೀಡಬೇಕು. ರಾಜ್ಯದಲ್ಲಿ ಓಲಾ, ಉಬರ್ ಸೇರಿದಂತೆ ಒಟ್ಟು 3 ಲಕ್ಷ 30 ಸಾವಿರ ಪ್ರವಾಸಿ ವಾಹನ ಚಾಲಕರಿದ್ದು, ಅವರೆಲ್ಲರಿಗೂ ಕೋವಿಡ್ ಪ್ಯಾಕೇಜ್ ಹಣ ನೀಡಬೇಕೆಂದು ಒತ್ತಾಯಿಸಿದರು. ಇದೇ ತಿಂಗಳ 21 ರಿಂದ ಹೋಟೆಲ್ ಹಾಗೂ ರೆಸ್ಟೋರೆಂಟ್‍ಗಳನ್ನು ತೆಗೆಯಲು ಅವಕಾಶ ನೀಡಬೇಕು. ಟೂರ್ ಆಪರೇಟರ್ಸ್ ನೋಂದಣಿ ದಿನಾಂಕವನ್ನು ವಿಸ್ತರಣೆ ಮಾಡಬೇಕೆಂದು ಸಹ ಮನವಿ ಮಾಡಿದರು. ಪ್ರವಾಸೋದ್ಯಮ ಕ್ಷೇತ್ರಕ್ಕೆ ಕೆ.ಎಸ್.ಎಫ್.ಸಿ.ಯಿಂದ ತೆಗೆದುಕೊಂಡಿರುವ ಸಾಲದ ಮೇಲಿನ ಬಡ್ಡಿಗೆ ರಿಯಾಯಿತಿ ಕೊಡಿಸಬೇಕು ಎಂದು ಸಹ ಕೋರಿದರು.

    ರಾಜ್ಯದಲ್ಲಿರುವ ಎಲ್ಲಾ ಹೋಟೆಲ್‍ಗಳಿಗೂ, ಸ್ಟಾರ್ ಹೋಟೆಲ್‍ಗಳಿಗೆ ನೀಡಿರುವ ಕೈಗಾರಿಕಾ ಸ್ಥಾನಮಾನ ವಿಸ್ತರಿಸಬೇಕೆಂದು ಕರ್ನಾಟಕ ಪ್ರವಾಸೋದ್ಯಮ ಸೊಸೈಟಿಯ ಅಧ್ಯಕ್ಷ ಕೆ.ಶ್ಯಾಮರಾಜ್, ಉಪಾಧ್ಯಕ್ಷ ವಿನಿತ್ ವರ್ಮಾ, ಕಾರ್ಯದರ್ಶಿ ಮಹಾಲಿಂಗಯ್ಯ ಇವರು ಸಚಿವರಿಗೆ ಮನವಿ ಪತ್ರ ನೀಡಿ, ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿದರು.

    ಜೂನ್ ತಿಂಗಳ ಅಂತ್ಯಕ್ಕೆ ವಿಜಯಪುರ, ಹಂಪಿ, ಬಾದಾಮಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ತ್ರೀ ಸ್ಟಾರ್ ಹೋಟೆಲ್‍ಗಳಿಗೆ ಶಿಲಾನ್ಯಾಸ ಮಾಡಲು ಸಭೆಯಲ್ಲಿ ನಿರ್ಧರಿಸಲಾಯಿತು. ಈ ತಿಂಗಳ ಅಂತ್ಯಕ್ಕೆ ಪ್ರವಾಸೋದ್ಯಮ ನೀತಿಗೆ ಮಾರ್ಗಸೂಚಿಗಳನ್ನು ಅಳವಡಿಸಿ, ಸರ್ಕಾರಿ ಆದೇಶ ಹೊರಡಿಸಲು ಹಾಗೂ ಸ್ಟಾರ್ ಹೋಟೆಲ್‍ಗಳಿಗೆ ಕೈಗಾರಿಕಾ ಸ್ಥಾನಮಾನ ನೀಡಿರುವ ಬಗ್ಗೆ ಸಹ ಮಾರ್ಗಸೂಚಿಗಳನ್ನು ಹೊರಡಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದರು. ಇದನ್ನೂ ಓದಿ: ಗುಡುಗು ಯತ್ನಾಳ್, ಮಿಂಚು ಯೋಗೇಶ್ವರ್ ಮಳೆ ಬಂದ್ಮೇಲೆ ತಣ್ಣಗಾಗ್ತಾರೆ: ಕೋಟ ವ್ಯಾಖ್ಯಾನ

    ಹೆಲಿಟೂರಿಸಂ, ಸಿ-ಪ್ಲೈನ್ ಹಾಗೂ ರಾಜ್ಯದ ಎಲ್ಲಾ ಜಲಾಶಯಗಳಲ್ಲಿ ವಾಟರ್ ಸ್ಪೋಟ್ರ್ಸ್ ಆರಂಭಿಸುವುದು, ನಂದಿಬೆಟ್ಟ ಹಾಗೂ ಇತರ ಕಡೆ ರೋಪ್-ವೇಗಳನ್ನು ನಿರ್ಮಾಣ ಮಾಡುವ ಯೋಜನೆಗಳಿಗೆ ವೇಗ ನೀಡುವಂತೆ ಇದೇ ವೇಳೆ ಅಧಿಕಾರಿಗಳಿಗೆ ಆದೇಶಿಸಿದರು. ಕರಾವಳಿ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಗಳಲ್ಲಿ ಜಾರಿಗೊಳಿಸಲು ಉದ್ದೇಶಿಸಿರುವ ಪ್ರವಾಸೋದ್ಯಮ ಯೋಜನೆಗಳಿಗೆ ಆದ್ಯತೆ ಮೇಲೆ ಕ್ರಮ ಕೈಗೊಂಡು ನಿಗಧಿತ ಸಮಯದಲ್ಲಿ ಯೋಜನೆ ಪೂರ್ಣಗೊಳಿಸುವಂತೆ ಸೂಚಿಸಿದರು.

    ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಪಂಕಜ ಕುಮಾರ್ ಪಾಂಡೆ, ನಿರ್ದೇಶಕಿ ಸಿಂಧು ಬಿ.ರೂಪೇಶ್, ಕೆ.ಎಸ್.ಟಿ.ಡಿ.ಸಿ ವ್ಯವಸ್ಥಾಪಕ ನಿರ್ದೇಶಕ ವಿಜಯ ಶರ್ಮಾ ಹಾಗೂ ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರಾದ ಕುಮಾರ್ ಪುಷ್ಕರ್ ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

    ಪ್ರಗತಿ ಪರಿಶೀಲನೆ ಸಭೆಯ ನಂತರ ಸಚಿವ ಯೋಗೇಶ್ವರರವರು ಚಿತ್ರಕಲಾ ಪರಿಷತ್‍ನಲ್ಲಿ ಕರ್ನಾಟಕ ಪ್ರವಾಸೋದ್ಯಮ ಸೊಸೈಟಿಯಿಂದ ಟೂರ್ ಆಪರೇಟರ್ಸ್ ಹಾಗೂ ಚಾಲಕರಿಗೆ ಆಯೋಜಿಸಿದ್ದ ಕೋವಿಡ್ ಲಸಿಕೆ ಅಭಿಯಾನದಲ್ಲಿ ಭಾಗವಹಿಸಿ, ಸಚಿವರು ಚಾಲನೆ ನೀಡಿದರು. ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲರಿಗೂ ಪ್ರಥಮ ಆದ್ಯತೆಯಾಗಿ ಕೋವಿಡ್ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳುವುದಾಗಿ ಇದೇ ವೇಳೆ ಸಚಿವರು ತಿಳಿಸಿದರು.

  • ಲಾಕ್‍ಡೌನ್ ಸಡಿಲಿಕೆ ಸರ್ಕಾರದ ನಿರ್ಧಾರಕ್ಕೆ ವಿವಿಧ ವಲಯಗಳಿಂದ ಅಸಮಾಧಾನ

    ಲಾಕ್‍ಡೌನ್ ಸಡಿಲಿಕೆ ಸರ್ಕಾರದ ನಿರ್ಧಾರಕ್ಕೆ ವಿವಿಧ ವಲಯಗಳಿಂದ ಅಸಮಾಧಾನ

    ಬೆಂಗಳೂರು: ಜೂನ್ 14 ರಿಂದ ರಾಜ್ಯದಲ್ಲಿ ಲಾಕ್‍ಡೌನ್ ಸಡಿಲಿಕೆಗೆ ಸಂಬಂಧಪಟ್ಟಂತೆ ಕೈಗಾರಿಕಾ ವಲಯವನ್ನು ಹೊರತುಪಡಿಸಿ ವಿವಿಧ ವಲಯಗಳಿಂದ ಅಸಮಾಧಾನ ವ್ಯಕ್ತವಾಗಿದೆ. ಕೆಲ ವಲಯಗಳನ್ನು ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

    ಕೈಗಾರಿಕೆಗಳಿಗೆ 50% ಹಾಜರಾತಿಯಲ್ಲಿ ಅನುಮತಿ ಮಾಡಿದ್ದು ಸ್ವಾಗತಾರ್ಹ. ಪೀಣ್ಯಾ ಕೈಗಾರಿಕಾ ಪ್ರದೇಶದಲ್ಲಿ 8,500 ಸಣ್ಣ, ಮಧ್ಯಮ ಕೈಗಾರಿಕೆಗಳಿವೆ. ಜೂನ್ 14 ರಿಂದ ಎಂದಿನಂತೆ ಕಾರ್ಖಾನೆಗಳು ಪ್ರಾರಂಭವಾಗುತ್ತವೆ. ಈಗಾಗಲೇ ಲಾಕ್‍ಡೌನ್‍ನಿಂದ ತುಂಬಾ ನಷ್ಟ ಅನುಭವಿಸಿದ್ದೇವೆ. ಸಿಎಂ ಕೈಗಾರಿಕೆಗಳಿಗೆ ಅನುಮತಿ ಕೊಟ್ಟಿದ್ದು ಖುಷಿ ಕೊಟ್ಟಿದೆ ಎಂದು ಪೀಣ್ಯಾ ಕೈಗಾರಿಕೆಗಳ ಸಂಘದ ಅಧ್ಯಕ್ಷ ಶ್ರೀನಿವಾಸ್ ಅಭಿಪ್ರಾಯ ವ್ಯಕ್ತಪಡಿಸಿದರು. ಇದನ್ನೂ ಓದಿ: 11 ಜಿಲ್ಲೆಗಳು ಲಾಕ್ – ನೈಟ್ ಕರ್ಫ್ಯೂ ಜೊತೆಯಲ್ಲಿ ವೀಕೆಂಡ್ ಲಾಕ್‍ಡೌನ್

    ಹೋಟೆಲ್ ಗಳಲ್ಲಿ ಕೇವಲ ಪಾರ್ಸೆಲ್ ಮಾತ್ರ ಅವಕಾಶ ಎಂದ ಸರ್ಕಾರದ ಆದೇಶಕ್ಕೆ ಬೇಸರ ವ್ಯಕ್ತಪಡಿಸಿದ ಹೋಟೆಲ್ ಅಸೋಸಿಯೇಷನ್ ನ ಪಿಸಿ ರಾವ್ ಅವರು, ಸರ್ಕಾರ ಹೋಟೆಲ್ ಉದ್ಯಮವನ್ನು ಮುಳುಗಿಸುವ ಕೆಲಸ ಮಾಡುತ್ತಿದೆ. ಕಳೆದ ಒಂದೂವರೆ ವರ್ಷದಿಂದ ಹೋಟೆಲ್ ಉದ್ಯಮ ನಷ್ಟದಲ್ಲಿದೆ. ಹೋಟೆಲ್ ಓಪನ್ ಆದೇಶದ ನಿರೀಕ್ಷೆಯಲ್ಲಿ ಹೋಟೆಲ್ ಉದ್ಯಮವಿತ್ತು. ಆದರೆ ಸರ್ಕಾರ ಹೋಟೆಲ್ ಮಾಲೀಕರು ಹಾಗೂ ಕೆಲಸಗಾರರನ್ನು ಮುಳುಗಿಸುವಂತೆ ಮಾಡಿದೆ. ನಮ್ಮ ಬಗ್ಗೆ ಕಿಂಚಿತ್ತು ಯೋಚಿಸದೇ ನಮ್ಮನ್ನು ನಿರ್ಲಕ್ಷ್ಯ ಮಾಡಿದ್ದಾರೆ. ಸಿಎಂ ಹೀಗೆ ಮಾಡ್ತಾರೆ ಎಂದುಕೊಂಡಿರಲಿಲ್ಲ. ನಮಗೆ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಲಾಕ್‍ಡೌನ್ ವೇಳೆ ಹೇಗಿದೆ ಕಾಡು- ಡ್ರೋನ್ ವೀಡಿಯೋ

    ಬೀದಿಬದಿ ವ್ಯಾಪಾರಿ ಸಂಘದ ಅಧ್ಯಕ್ಷರಾದ ರಂಗಪ್ಪ ಮಾತಾನಾಡಿ, ಮುಖ್ಯಮಂತ್ರಿಗಳೇ ಬೀದಿಬದಿ ವ್ಯಾಪಾರಿಗಳನ್ನು ಮೂಲೆಗುಂಪು ಮಾಡ್ತೀದ್ದೀರಿ. 6 ಗಂಟೆಯಿಂದ 2ಗಂಟೆ ವರೆಗೆ ಅನುಮತಿ ಕೊಟ್ಟಿರೋದು ಸ್ವಾಗತಾರ್ಹ. ಆದರೆ ಸಂಜೆ ವೇಳೆಯ ಫಾಸ್ಟ್ ಫುಡ್ ಅಂಗಡಿಗಳಿಗೆ ತೊಂದರೆಯಾಗುತ್ತದೆ. ಫಾಸ್ಟ್ ಫುಡ್ ವ್ಯಾಪಾರಿಗಳು ಲಾಕ್ಡೌನ್ ಆದಾಗಿಂದಲೂ ವ್ಯಾಪಾರ ಮಾಡಿಲ್ಲ. ಈಗ ಹೋಟೆಲ್ ಗಳಿಗೆ ಪಾರ್ಸಲ್ ಅವಕಾಶ ಮುಂದುವರೆಸಿದ ಜೊತೆಗೆ ಬೀದಿ ಬದಿಯ ಫಾಸ್ಟ್ ಫುಡ್ ಅಂಗಡಿಗಳಿಗೆ ಪಾರ್ಸಲ್‍ಗೆ ಅವಕಾಶ ಮಾಡಿಕೊಡಿ ಎಂದು ಸರ್ಕಾರವನ್ನು ಒತ್ತಾಯಿಸಿದರು.

    ಪಿಜಿ ಮಾಲೀಕರ ಸಂಘದ ಅಧ್ಯಕ್ಷ ಅರುಣ್ ಕುಮಾರ್ ಮಾತನಾಡಿ, ಲಾಕ್‍ಡೌನ್ ನಿಂದ ಪಿಜಿ ಉದ್ಯಮ ನಷ್ಟದಲ್ಲಿದೆ. ಸಾರಿಗೆ ಸಂಚಾರ ಪ್ರಾರಂಭ ಮಾಡಿದರೆ ಪಿಜಿ ಉದ್ಯಮಕ್ಕೆ ಅನುಕೂಲವಾಗುತ್ತಿತ್ತು. ಲಾಕ್‍ಡೌನ್ ಆದ ನಂತರ ಎಲ್ಲರೂ ತಮ್ಮೂರುಗಳಿಗೆ ಹೋಗಿದ್ದಾರೆ. ಈಗ ಬಸ್‍ಗಳು ಇಲ್ಲ ಹಾಗಾಗಿ ಅವರೆಲ್ಲ ಬರುವುದಕ್ಕೆ ಆಗುತ್ತಿಲ್ಲ. ಇದರಿಂದ ನಮ್ಮ ಸಂಕಷ್ಟ ಮುಂದುವರೆಯುತ್ತೆ. ಸರ್ಕಾರ ಪಿಜಿ ಮಾಲೀಕರ ಕಷ್ಟವನ್ನು ಗಮನದಲ್ಲಿ ಇಟ್ಟುಕೊಂಡಿಲ್ಲ. ನಮ್ಮ ಸಂಕಷ್ಟಕ್ಕೆ ಪರಿಹಾರವಿಲ್ಲದಂತಾಗಿದೆ. ಬಸ್‍ಗಳಿಲ್ಲ ಎಂದರೆ ನಮಗೆ ಗ್ರಾಹಕರೇ ಇರಲ್ಲ. ಎಂದು ಸರ್ಕಾರದ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

  • ಬೆಂಗಳೂರಿನಲ್ಲಿ ಮನೆ ಪಕ್ಕದಲ್ಲೇ ಕೋವಿಡ್‌ ಕೇರ್; ಓಯೋ ಆರೈಕೆ ಕೇಂದ್ರ ಉದ್ಘಾಟಿಸಿದ ಡಿಸಿಎಂ

    ಬೆಂಗಳೂರಿನಲ್ಲಿ ಮನೆ ಪಕ್ಕದಲ್ಲೇ ಕೋವಿಡ್‌ ಕೇರ್; ಓಯೋ ಆರೈಕೆ ಕೇಂದ್ರ ಉದ್ಘಾಟಿಸಿದ ಡಿಸಿಎಂ

    ಗಿವ್‌ ಇಂಡಿಯಾ, ಅಜೀಂ ಪ್ರೇಂ ಜೀ ಪ್ರತಿಷ್ಠಾನದ ಡಾಕ್ಸರ್ಸ್‌ ಫಾರ್‌ ಯು ಸಹಯೋಗ

    ಬೆಂಗಳೂರು: ನಗರದ ತಮ್ಮ ಮನೆಯ ಅಕ್ಕಪಕ್ಕದಲ್ಲೇ ಕೋವಿಡ್‌ ಸೋಂಕಿತರಿಗೆ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಲು ಹೋಟೆಲ್ ನಲ್ಲಿ  ಆರಂಭಿಸಲಾಗಿರುವ ʼಓಯೋ ಕೋವಿಡ್‌ ಕೇರ್‌ ಸೆಂಟರ್‌ʼಗೆ ರಾಜ್ಯ ಕೋವಿಡ್‌ ಕಾರ್ಯಪಡೆ ಮುಖ್ಯಸ್ಥರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಮಂಗಳವಾರ  ಉದ್ಘಾಟನೆ ಮಾಡಿದರು.

    ಬಳಿಕ ಮಾತನಾಡಿದ ಡಿಸಿಎಂ ಅವರು, “ಗಿವ್‌ ಇಂಡಿಯಾ, ಅಜೀಂ ಪ್ರೇಂ ಜೀ ಪ್ರತಿಷ್ಠಾನದ ಡಾಕ್ಸರ್ಸ್‌ ಫಾರ್‌ ಯುವರ್ಸ್‌ ಮತ್ತು ಒಯೋ ಹೋಟೆಲ್ಸ್‌ನವರು ಸೇರಿ ಸಂಯುಕ್ತವಾಗಿ ಮಾಡಿರುವ ಈ ವ್ಯವಸ್ಥೆಯೂ ಪ್ರಾಯೋಗಿಕವಾಗಿ ನಗರದ ಕಲ್ಯಾಣನಗರದಲ್ಲಿ ಆರಂಭವಾಗಿದ್ದು, ಇದು ಯಶಸ್ವಿಯಾದರೆ ಓಯೋ ಹೋಟೆಲ್ಸ್‌ನವರ ಜತೆ ಒಡಂಬಡಿಕೆ ಮಾಡಿಕೊಂಡು ಅವರು ಎಲ್ಲೆಲ್ಲಿ ಹೋಟೆಲ್‌ ಚೈನ್‌ ಹೊಂದಿದ್ದಾರೆಯೋ ಅಲ್ಲೆಲ್ಲ ಕೋವಿಡ್‌ ಕೇಂದ್ರಗಳನ್ನು ತೆರೆಯಲಾಗುವುದು. ಗ್ರಾಮೀಣ ಭಾಗದ ಹೋಟೆಲ್ ಗಳಲ್ಲಿ ಯೂ ಈ ರೀತಿಯ ಕೇಂದ್ರಗಳನ್ನು ತೆರೆಯಲಾಗುವುದು” ಎಂದರು.

     

    ಹೋಟೆಲ್ ಅನ್ನು ಓಯೋನವರು ಕೊಟ್ಟರೆ, ಕೋವಿಡ್‌ ಕೇರ್‌ಗೆ ಅಗತ್ಯ ಆರ್ಥಿಕ ಸಂಪನ್ಮೂಲವನ್ನು ಗಿವ್‌ ಇಂಡಿಯಾ ಒದಗಿಸುತ್ತದೆ. ಉಳಿದಂತೆ ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿಯನ್ನು ಅಜೀಂ ಪ್ರೇಂ ಜೀ ಪ್ರತಿಷ್ಠಾನದ ಡಾಕ್ಸರ್ಸ್‌ ಫಾರ್‌ ಯು ಒದಗಿಸುತ್ತದೆ. ಒಂದು ಖಾಸಗಿ ವ್ಯವಸ್ಥೆ ಅದೆಷ್ಟು ಪರಿಣಾಮಕಾರಿಯಾಗಿ ಸೋಂಕಿನ ವಿರುದ್ಧ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂಬುದಕ್ಕೆ ಇದೊಂದು ಉತ್ತಮ ಉದಾಹರಣೆ ಎಂದು ಡಾ.ಅಶ್ವತ್ಥನಾರಾಯಣ ಮೆಚ್ಚುಗೆ ವ್ಯಕ್ತಪಡಿಸಿದರು.

    ಸದ್ಯಕ್ಕೆ ಕಲ್ಯಾಣನಗರದ  ಕೋವಿಡ್‌ ಕೇರ್‌ನಲ್ಲಿ 20 ಬೆಡ್‌ಗಳಿದ್ದು, ಅಕ್ಕಪಕ್ಕದಲ್ಲಿ ಯಾರಾದರೂ ಸೋಂಕಿತರಿದ್ದರೆ ಇಲ್ಲಿ ಬಂದು ಚಿಕಿತ್ಸೆ ಪಡೆಯಬಹುದು. ಇದು ಒಂದು ರೀತಿ ಹೋಮ್ ಹೈಸೋಲೇಷನ್ ರೀತಿ ಇರುತ್ತದೆ. ಇಲ್ಲಿ ಉತ್ತಮ ಗುಣಮಟ್ಟದ ಚಿಕಿತ್ಸೆ, ಆರೈಕೆ ಹಾಗೂ ಊಟೋಪಚಾರವೂ ಇರುತ್ತದೆ. ಕೊಠಡಿಗಳು ಸ್ಟಾರ್ ಹೋಟೆಲ್ ಕೊಠಡಿಗಳ ಹಾಗೆ ಇವೆ. ಅಕ್ಸಿಜನ್‌ ಒದಗಿಸಲು ಆಮ್ಲಜನಕ ಸಾಂದ್ರಕಗಳ ಸೌಲಭ್ಯ ಕೂಡ ಇದೆ ಎಂದು ಅವರು‌ ಹೇಳಿದರು.

    ಈ ಸಂದರ್ಭದಲ್ಲಿ ರಾಜ್ಯ ಕರಕುಶಲ ನಿಗಮದ ಅಧ್ಯಕ್ಷ ರಾಘವೇಂದ್ರ ಬೇಲೂರು, ಗಿವ್‌ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ವಿನೋದ್‌, ಸರ್ಕಾರಕ್ಕೆ ಸಿಎಸ್ ಆರ್ ನಿಧಿ ಬಗ್ಗೆ ಸಲಹೆ‌  ನೀಡುವ‌ ಕೆ.ವಿ.ಮಹೇಶ, ಡಾಕ್ಟರ್ಸ್ ಫಾರ್ ಯು ಸಂಸ್ಥೆಯ ಆರೋಗ್ಯ ಮತ್ತು ಪೌಷ್ಟಿಕ ವಿಭಾಗದ ನಿರ್ದೇಶಕಿ ಡಾ.ವೈಶಾಲಿ ವೇಣು ಇದ್ದರು.