Tag: Hotel

  • ಮೊದಲೇ ನಷ್ಟದಲ್ಲಿದ್ದೇವೆ, ಬಜೆಟ್‍ನಲ್ಲಿ ಯಾವುದೇ ಪ್ಯಾಕೇಜ್ ಇಲ್ಲ – ಹೋಟೆಲ್ ಉದ್ಯಮಿಗಳ ಅಸಮಾಧಾನ

    ಮೊದಲೇ ನಷ್ಟದಲ್ಲಿದ್ದೇವೆ, ಬಜೆಟ್‍ನಲ್ಲಿ ಯಾವುದೇ ಪ್ಯಾಕೇಜ್ ಇಲ್ಲ – ಹೋಟೆಲ್ ಉದ್ಯಮಿಗಳ ಅಸಮಾಧಾನ

    ಬೆಂಗಳೂರು: ಕೇಂದ್ರ ಬಜೆಟ್‍ಗೆ ಜನಸಾಮಾನ್ಯರ ಮಿಶ್ರ ಅಭಿಪ್ರಾಯಕ್ಕೆ ಕಾರಣವಾಗಿದೆ. ಆಟೋ, ಟ್ಯಾಕ್ಸಿ, ಎಲೆಕ್ಟ್ರಾನಿಕ್ ವಸ್ತುಗಳ ಮಾರಾಟಗಾರರು, ಸಾರಿಗೆ ತಜ್ಞರು, ಹೋಟೆಲ್ ಉದ್ಯಮದವರಿಗೆ ಸಾಕಷ್ಟು ನಿರಾಸೆ ಮೂಡಿಸಿದೆ.

    ತೈಲಗಳ ಬೆಲೆಯಲ್ಲಿ ಇಳಿಕೆ ಕಂಡಿಲ್ಲ, ಆಟೋ ಬಿಡಿಭಾಗಗಳ ದುಬಾರಿ ಎಂಬ ವಿಚಾರ ಆಟೋ ಚಾಲಕರು ಹಾಗೂ ದ್ವಿಚಕ್ರ, ಕಾರು ಚಾಲಕರ ಜೀಬಿಗೆ ಕತ್ತರಿ ಬೀಳಿಸಿದೆ. ಸದ್ಯ ಕೊರೋನಾ ಕಾರಣಕ್ಕೆ ಸಾಕಷ್ಟು ಸಬ್ಸಿಡಿ ಕೊಡಿಸಿ ತೈಲ ಬೆಲೆ ಇಳಿಸುತ್ತಾರೆ ಎಂಬ ನಂಬಿಕೆ ಇತ್ತು ಎಂದು ಚಾಲಕರು ಬೇಸರ ಹೊರಹಾಕಿದ್ದಾರೆ.

    ಹೋಟೆಲ್ ಉದ್ಯಮದಲ್ಲಿರುವ ಮಾಲೀಕರಂತೂ ಕೊರೋನಾದಿಂದ ನಷ್ಟ ಉಂಟಾಗಿದೆ. ಹೋಟೆಲ್ ಉದ್ಯಮಕ್ಕೆ ಉತ್ತಮ ಪ್ಯಾಕೇಜ್ ಕೊಡುತ್ತಾರೆ ಎಂಬ ನಂಬಿಕೆ ಇಟ್ಟುಕೊಂಡಿದ್ದೇವು. ಆದರೆ ಯಾವುದೇ ಪ್ಯಾಕೇಜ್ ಸಿಗದೇ ಇರುವುದರ ಕುರಿತಾಗಿ ಹೋಟೆಲ್ ಮಾಲೀಕರ ಸಂಘ ಪಿ ಸಿ ರಾವ್ ಅಸಮಾಧಾನ ಹೊರ ಹಾಕಿದ್ದಾರೆ.

    ಮೂಲಭೂತ ಸೌಕರ್ಯಕ್ಕೆ ಬೆಂಬಲ ವಿಚಾರದಲ್ಲಂತೂ ಕಡೆಗಣಿಸಲಾಗಿದೆ. ಆದರೆ ದೇಶದ ಆರ್ಥಿಕ ಸ್ಥಿತಿ ಕುಸಿದಿದೆ. ಹೀಗಾಗಿ ಮೆಟ್ರೋ ವಿಚಾರವಾಗಿ ಹಣ ಎತ್ತಿಟ್ಟಿರುವುದು ಬಿಟ್ಟು ಉಳಿದೆಲ್ಲ ಬೇಸರ ತಂದಿದೆ. ಆದರೂ ದೇಶದ ಹಿತಕ್ಕೆ ಎಲ್ಲವನ್ನು ಸರಿದೂಗಿಸಿಕೊಂಡು ಹೋಗಬೇಕಾಗಿದೆ ಎಂದು ಸಾರಿಗೆ ತಜ್ಞ ಶ್ರೀಹರಿ ಹೇಳಿದ್ದಾರೆ.

  • ತಟ್ಟೆಯಲ್ಲಿರುವ ಊಟ ಖಾಲಿ ಮಾಡಿದ್ರೆ ಸಿಗುತ್ತೆ ರಾಯಲ್ ಎನ್‍ಫೀಲ್ಡ್ ಬೈಕ್

    ತಟ್ಟೆಯಲ್ಲಿರುವ ಊಟ ಖಾಲಿ ಮಾಡಿದ್ರೆ ಸಿಗುತ್ತೆ ರಾಯಲ್ ಎನ್‍ಫೀಲ್ಡ್ ಬೈಕ್

    – ಹೋಟೆಲಿನಿಂದ ಹೊಸ ಆಫರ್, ಕಂಡೀಷನ್ಸ್ ಅಪ್ಲೈ

    ಮುಂಬೈ: ಹೋಟೆಲ್ ಗಳು ಗ್ರಾಹಕರನ್ನ ಸೆಳೆಯಲು ನಾನಾ ಮಾರುಕಟ್ಟೆ ತಂತ್ರಗಳನ್ನ ಪ್ರಯೋಗಿಸುತ್ತವೆ. ಇದೀಗ ಪುಣೆಯ ಶಿವರಾಜ್ ಹೋಟೆಲ್ ಗ್ರಾಹಕರಿಗೆ ವಿಶೇಷ ಆಫರ್ ನೀಡಿದೆ. ಹೋಟೆಲ್ ಪ್ರಕಟಿಸಿರುವ ಜಾಹೀರಾತಿನ ಪೋಸ್ಟರ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

    ಭರ್ಜರಿ ಊಟಕ್ಕಾಗಿ ಕೆಲ ಹೋಟೆಲ್ ಗಳು ಮಹಾರಾಜ ಥಾಲಿ, ಬಾಹುಬಲಿ ಥಾಲಿ ಹೆಸರಿನ ಆಫರ್ ಗಳನ್ನ ಗ್ರಾಹಕರಿಗೆ ನೀಡುತ್ತವೆ. ಶಿವರಾಜ್ ಹೋಟೆಲ್ ಬುಲೆಟ್ ಥಾಲಿ ಪರಿಚಯಿಸಿದ್ದು, ಇದರಲ್ಲಿ ನೀಡುವ ಎಲ್ಲ ಖಾದ್ಯಗಳು ಒಂದು ಗಂಟೆಯೊಳಗೆ ತಿನ್ನುವ ಗ್ರಾಹಕರಿಗೆ ರಾಯಲ್ ಎನ್ ಫೀಲ್ಡ್ ಬೈಕ್ ಉಚಿತವಾಗಿ ನೀಡಲಾಗುತ್ತದೆ. ಈ ಬುಲೆಟ್ ಥಾಲಿ ಮಾಂಸಾಹಾರ ಸಹ ಒಳಗೊಂಡಿರುತ್ತದೆ. ಈ ಥಾಲಿ ಸಿದ್ಧಪಡಿಸಲು 55 ಬಾಣಸಿಗರು ಕೆಲಸ ಮಾಡುತ್ತಾರೆ.

    ಬುಲೆಟ್ ಥಾಲಿಯಲ್ಲಿ ಏನೆಲ್ಲ ಇರುತ್ತೆ?:
    ನಾಲ್ಕು ಕೆಜಿ ಮಟನ್, ಕರಿದ ಮೀನು, 12 ತರಹದ ವಿವಿಧ ಆಹಾರ ಇರಲಿದೆ. ಇದರಲ್ಲಿ ಪೊಮ್‍ಫ್ರೆಟ್ ಎಂಟು ಪೀಸ್, ಸುರ್ಮಾಯಿ ಎಂಟು ಪೀಸ್, ಚಿಕನ್ ಲೆಗ್ ಪೀಸ್ 8, ಕಿಲ್ಲಾಂಬಿ ಕರ್ರಿ, ಒಂದು ಮಟನ್ ಮಸಲಾ, ಕರಿದ ಹುಂಜ, ಕೋಲಂಬಿ ಬಿರಿಯಾನಿ, ಎಂಟು ರೊಟ್ಟಿ, ಎಂಟು ಚಪಾತಿ, ಒಂದು ಸುಕ್ಕಾ, ಕೋಲಂಬಿ ಕೋಲಿವಾಡಾ, ನೀರಿನ ನಾಲ್ಕು ಬಾಟಲ್, ರಾಯತಾ, ಎಂಟು ಸೋಲ್ಕಡಿ, ಎಂಟು ಹಪ್ಪಳ ಮತ್ತು ಎಂಟು ಮಟನ್ ಅಲಾನಿ ಸೂಪ್

    ಎರಡು ಆಯ್ಕೆಗಳಿವೆ: ಈ ಆಫರ್ ಕುರಿತು ಮಾತನಾಡಿರುವ ಹೋಟೆಲ್ ಮಾಲೀಕ ಅತುಲ್ ವಾಯಕರ್, ಗ್ರಾಹಕರಿಗೆ ಎರಡು ರೀತಿಯ ಆಫರ್ ಗಳನ್ನ ನೀಡಲಾಗುತ್ತದೆ. ಮೊದಲನೆಯದ್ದು 4 ಸಾವಿರ 444 ರೂ.ಬೆಲೆಯ ಬುಲೆಟ್ ಥಾಲಿಯನ್ನ ಇಬ್ಬರು ಜೊತೆಯಾಗಿ ಒಂದು ಗಂಟೆಯೊಳಗೆ ತಿಂದು ಮುಗಿಸಬೇಕು. ಎರಡನೇ ಆಯ್ಕೆ 2 ಸಾವಿರದ ಐದು ನೂರು ಬೆಲೆಯ ಒಂದು ಮಿನಿ ಬುಲೆಟ್ ಥಾಲಿಯನ್ನ ಓರ್ವ ಗಂಟೆಯಲ್ಲಿ ತಿನ್ನಬೇಕು. ಯಾರಾದ್ರೂ ಒಂದು ಗಂಟೆಯೊಳಗೆ ಬುಲೆಟ್ ಥಾಲಿ ಸೇವಿಸಿದ್ರೆ ರಾಯಲ್ ಎನ್‍ಫೀಲ್ಡ್ ಬುಲೆಟ್ ನೀಡಲಾಗುವುದು ಎಂದು ಹೇಳಿದ್ದಾರೆ.

    ಹೋಟೆಲ್ ಮುಂಭಾಗಲ್ಲಿ ಆರು ಬುಲೆಟ್ ಬೈಕ್ ಗಳನ್ನ ನಿಲ್ಲಿಸಲಾಗಿದೆ. ಇದರ ಜೊತೆಗೆ ಹೋಟೆಲ್ ನಲ್ಲಿ ಆರು ಬಗೆಯ ಬುಲೆಟ್ ಥಾಲಿಗಳು ಗ್ರಾಹಕರಿಗೆ ಸಿಗಲಿದೆ. ರಾವಣ್ ಥಾಲಿ, ಬುಲೆಟ್ ಥಾಲಿ, ಮಲ್ವಾನಿ ಮಚಲಿ ಥಾಲಿ, ಪೈಲ್ವಾನ್ ಮಟನ್ ಥಾಲಿ, ಬಕಾಸುರ ಚಿಕನ್ ಥಾಲಿ ಮತ್ತು ಸರ್ಕಾರ್ ಮಟನ್ ಥಾಲಿ ಸಿಗಲಿದೆ. ಸೋಲಾಪುರ ಜಿಲ್ಲೆಯ ಸೋಮನಾಥ್ ಕುಟುಂಬದ ಒಬ್ಬರು ಮಾತ್ರ ಬುಲೆಟ್ ಬೈಕ್ ತಮ್ಮದಾಗಿಸಿಕೊಂಡಿದ್ದಾರೆ.

    ಒಟ್ಟಿನಲ್ಲಿ ಕಡಿಮೆ ಖರ್ಚಿನಲ್ಲಿ ಮಾಲೀಕನ ಈ ಆಫರ್ ಸೂಪರ್ ಹಿಟ್ ಆಗಿ ಹೋಟೆಲ್ ಫುಲ್ ಫೇಮಸ್ ಆಗಿದೆ.

  • ಒಟಿಟಿಯಲ್ಲಿ ರಿಲೀಸ್‌ ಮಾಡಿದ್ರೆ ಲಾಭವಾಗುತ್ತಾ – ಸಭೆ ನಡೆಸಿದ ಕನ್ನಡ ಬಿಗ್‌ ಬಜೆಟ್‌ ನಿರ್ಮಾಪಕರು

    ಒಟಿಟಿಯಲ್ಲಿ ರಿಲೀಸ್‌ ಮಾಡಿದ್ರೆ ಲಾಭವಾಗುತ್ತಾ – ಸಭೆ ನಡೆಸಿದ ಕನ್ನಡ ಬಿಗ್‌ ಬಜೆಟ್‌ ನಿರ್ಮಾಪಕರು

    – ಸಿನಿಮಾ ಮಂದಿರಕ್ಕೆ ಬರುತ್ತಿಲ್ಲ ಜನ
    – ಖಾಸಗಿ ಹೋಟೆಲ್‌ನಲ್ಲಿ ನಿರ್ಮಾಪಕರ ಸಭೆ

    ಬೆಂಗಳೂರು: ಕೋವಿಡ್‌ 19 ಬಂದ ನಂತರ ಚಿತ್ರೋದ್ಯಮಕ್ಕೆ ಬಲವಾದ ಪೆಟ್ಟು ಬಿದ್ದಿದೆ. ನಿಧಾನವಾಗಿ ಸ್ಥಗಿತಗೊಂಡಿದ್ದ ಆರ್ಥಿಕ ಚಟುವಟಿಕೆಗಳು ಆರಂಭಗೊಂಡಿದ್ದರೂ ಚಲನ ಚಿತ್ರ ಮಂದಿರಕ್ಕೆ ಜನ ಬರುತ್ತಿಲ್ಲ. ಈ ನಿಟ್ಟಿನಲ್ಲಿ ಮುಂದೆ ಚಿತ್ರಗಳನ್ನು ಮಂದಿರಗಳಲ್ಲಿ ರಿಲೀಸ್‌ ಮಾಡಬೇಕೇ? ಬೇಡವೇ ಎಂಬುದರ ಬಗ್ಗೆ ಚರ್ಚೆ ನಡೆಸಲು ಸ್ಯಾಂಡಲ್‌ವುಡ್‌ ಚಿತ್ರ ನಿರ್ಮಾಪಕರು ಇಂದು ಸಭೆ ನಡೆಸಿದ್ದಾರೆ.

    ಕೊರೊನಾದಿಂದಾಗಿ ಬಿಡುಗಡೆಯಾಗಬೇಕಿದ್ದ ಬಿಗ್‌ ಬಜೆಟ್‌ ಸಿನಿಮಾಗಳು ಈ ವರ್ಷಕ್ಕೆ ಮುಂದೂಡಿಕೆಯಾಗಿವೆ. ಈ ನಡುವೆ ಸಿನಿಮಾ ಮಂದಿರಗಳಲ್ಲಿ ಶೇ.50 ರಷ್ಟು ಆಸನ ಭರ್ತಿಗೆ ಮಾತ್ರ ಅವಕಾಶ ನೀಡಲಾಗಿದೆ. ಕೋವಿಡ್‌ 19 ನಿಂದಾಗಿ ಜನ ಸಿನಿಮಾ ಮಂದಿರದತ್ತ ಬರುವುದು ಕಡಿಮೆಯಾಗಿದೆ. ಈಗ ಶೇ.50 ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಿದ್ದು ನಿರ್ಮಾಪಕರಿಗೆ ಸಂಕಷ್ಟ ತಂದಿದೆ. ಈ ಕಾರಣಕ್ಕೆ ಮುಂದೆ ಸಿನಿಮಾವನ್ನು ಹೇಗೆ ಬಿಡುಗಡೆ ಮಾಡಬೇಕು? ಒಟಿಟಿಯಲ್ಲಿ ಬಿಡುಗಡೆ ಮಾಡಿದರೆ ಹೇಗೆ? ಈ ಎಲ್ಲ ಪ್ರಶ್ನೆಗಳನ್ನು ಮುಂದಿಟ್ಟುಕೊಂಡು ಬಿಗ್‌ ಬಜೆಟ್‌ ಸಿನಿಮಾ ನಿರ್ಮಾಪಕರು ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ.

    ತಮಿಳುನಾಡು ಸರ್ಕಾರ ನಟ ವಿಜಯ್‌ ಮನವಿಗೆ ಸಿನಿಮಾಗಳಲ್ಲಿ ಫುಲ್‌ ಹೌಸ್‌ ಆಸನ ಭರ್ತಿಗೆ ಅವಕಾಶ ನೀಡಿತ್ತು. ಜ.14ರಿಂದ ಎಲ್ಲ ಚಿತ್ರಮಂದಿರಗಳಲ್ಲಿ ಶೇ.100 ರಷ್ಟು ಪ್ರೇಕ್ಷಕರಿಗೆ ಅನುಮತಿ ನೀಡವುದಾಗಿ ತಮಿಳುನಾಡು ಸರ್ಕಾರ ಹೇಳಿತ್ತು. ಆದರೆ ಇಂದು ಕೇಂದ್ರ ಗೃಹ ಇಲಾಖೆ ಯಾವುದೇ ಕಾರಣಕ್ಕೂ ಕೋವಿಡ್‌ 19 ಮಾರ್ಗಸೂಚಿಯನ್ನು ಬದಲಾಯಿಸಬಾರದು. ಶೇ.50ರಷ್ಟು ಆಸನ ಭರ್ತಿಗೆ ಮಾತ್ರ ಅವಕಾಶ ನೀಡಬೇಕು. ಕೂಡಲೇ ಈ ಹಿಂದೆ ಹೊರಡಿಸಲಾದ ಆದೇಶವನ್ನು ಬದಲಾಯಿಸಬೇಕು ಎಂದು ಸೂಚಿಸಿದೆ.

    ಕೇಂದ್ರ ಸರ್ಕಾರ ತಮಿಳುನಾಡು ಸರ್ಕಾರಕ್ಕೆ ಸೂಚಿಸದೇ ಇದ್ದಲ್ಲಿ ಕರ್ನಾಟಕದಲ್ಲೂ ಫುಲ್‌ ಹೌಸ್‌ ಪ್ರದರ್ಶನಕ್ಕೆ ಅನುಮತಿ ನೀಡುವಂತೆ ನಿರ್ಮಾಪಕರ ಸಂಘ ಒತ್ತಾಯ ಮಾಡುತ್ತಿತ್ತು. ಆದರೆ ಈಗ ಕೇಂದ್ರ ಸರ್ಕಾರ ಈ ಹಿಂದಿನ ಕೋವಿಡ್‌ 19 ಮಾರ್ಗಸೂಚಿಯಲ್ಲೇ ಸಿನಿಮಾ ಮಂದಿರಗಳ ತೆರೆಯಬೇಕು ಎಂದು ಸೂಚಿಸಿದ ಹಿನ್ನೆಲೆಯಲ್ಲಿ ನಿರ್ಮಾಪಕರು ಮುಂದೆ ಸಿನಿಮಾಗಳನ್ನು ಯಾವ ರೀತಿ ಬಿಡುಗಡೆ ಮಾಡಬೇಕು ಎಂಬುದರ ಬಗ್ಗೆ ಮಾತುಕತೆ ನಡೆಸಿದ್ದಾರೆ.

    ಸಭೆಯಲ್ಲಿ ಕೆಜಿಎಫ್, ಯುವರತ್ನ ನಿರ್ಮಾಪಕ ವಿಜಯ್ ಕಿರಗಂದೂರು, ವಿತರಕ ಕಾರ್ತಿಕ್ ಗೌಡ, ಕೋಟಿಗೊಬ್ಬ 3 ನಿರ್ಮಾಪಕ ಸೂರಪ್ಪ ಬಾಬು, ರಾಬರ್ಟ್ ನಿರ್ಮಾಪಕ ಉಮಾಪತಿ , ಸಲಗ ನಿರ್ಮಾಪಕ ಕೆಪಿ ಶ್ರೀಕಾಂತ್ ಸೇರಿದಂತೆ ಹತ್ತಕ್ಕೂ ಹೆಚ್ಚು ನಿರ್ಮಾಪಕರು ಭಾಗವಹಿಸಿದ್ದರು.

    ಏನು ಚರ್ಚೆಯಾಗಿದೆ?
    ಒಂದು ಕಡೆ ಕೊರೊನಾ ಎರಡನೇ ಅಲೆಯ ಆತಂಕ ಇನ್ನೊಂದು ಕಡೆ ಬ್ರಿಟನ್‌ ಸೋಂಕು ಮತ್ತೊಂದು ಕಡೆ ವಿದೇಶಗಳಲ್ಲಿ ಲಾಕ್‌ಡೌನ್‌ ಜಾರಿ ಪರಿಸ್ಥಿತಿ ಹೀಗಿರುವಾಗ ಶೇ.100 ರಷ್ಟು ಆಸನ ಭರ್ತಿಗೆ ಅವಕಾಶ ಬಹಳ ಕಡಿಮೆ. ಶೀಘ್ರವೇ ಭಾರತದಲ್ಲಿ ಪರಿಸ್ಥಿತಿ ಬದಲಾಗುತ್ತದೆ ಎಂದು ಹೇಳಲು ಬರುವುದಿಲ್ಲ. ದಿನ ಹೋಗುತ್ತಿದ್ದಂತೆ ಬಿಡುಗಡೆಯಾಗಬೇಕಿರುವ ಸಿನಿಮಾಗಳ ಸಂಖ್ಯೆಗಳ ಸಂಖ್ಯೆ ಹೆಚ್ಚಾಗುತ್ತದೆ. ಹೀಗಾಗಿ ಎಲ್ಲ ಸಿನಿಮಾಗಳಿಗೆ ಥಿಯೇಟರ್‌ನಲ್ಲಿ ಅವಕಾಶ ಸಿಗುತ್ತದೆ ಎಂದು ಹೇಳಲು ಆಗುವುದಿಲ್ಲ. ಸಿನಿಮಾ ರಿಲೀಸ್‌ ಆದರೂ ಜನ ಮೊದಲಿನಂತೆ ಬರುತ್ತಾರೆ ಎಂದು ಊಹಿಸುವುದು ಕಷ್ಟ. ಹೀಗಾಗಿ ಒಟಿಟಿಯಲ್ಲಿ ರಿಲೀಸ್‌ ಮಾಡಿದರೆ ಹೇಗೆ? ಒಟಿಟಿಯಲ್ಲಿ ರಿಲೀಸ್‌ ಮಾಡಿದರೆ ಸಿನಿಮಾಗೆ ಹೂಡಿದ ಬಂಡವಾಳ ಬರುತ್ತಾ? ನಮ್ಮನ್ನೇ ನಂಬಿಕೊಂಡಿರುವ ಸಿನಿಮಾ ಮಂದಿರಗಳ ಮಾಲೀಕರ ಕಷ್ಟ ಏನು? ಸಿನಿಮಾ ರಿಲೀಸ್‌ ಮಾಡಿದರೆ ಥಿಯೇಟರ್‌ಗಳ ಬಾಡಿಗೆ ಲೆಕ್ಕಾಚಾರ ಎಷ್ಟು ನೀಡಬೇಕು? ನಷ್ಟವಾದರೆ ಭರ್ತಿ ಹೇಗೆ ಮಾಡಬೇಕು? ಕಲಾವಿದರ ಪಾಡು ಏನು? ಹೊಸ ಸಿನಿಮಾಗಳಿಗೆ ಆಗಿರುವ ಸಂಕಷ್ಟ ಏನು? ಈ ಎಲ್ಲ ಪ್ರಶ್ನೆಗಳನ್ನು ಇಟ್ಟುಕೊಂಡು ಚರ್ಚೆ ಮಾಡಿದ್ದಾರೆ.

    ಹಲವು ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದರೂ ಅಂತಿಮವಾಗಿ ಯಾವುದೇ ತೀರ್ಮಾನಕ್ಕೆ ಬಂದಿಲ್ಲ. ಮುಂದಿನ ಎರಡು ಮೂರು ದಿನದಲ್ಲಿ ನಿರ್ಮಾಪಕರು ಸಿನಿಮಾ ಬಿಡುಗಡೆ  ಸಂಬಂಧ ಅಂತಿಮ ನಿರ್ಧಾರನ್ನು ಪ್ರಕಟಿಸುವ ಸಾಧ್ಯತೆಯಿದೆ.

  • ಸ್ಟಾರ್ ಹೋಟೆಲ್‍ನಲ್ಲಿ ಸೆಕ್ಸ್ ವರ್ಕರ್ ಇಲ್ಲದ್ದಕ್ಕೆ ಸಿಬ್ಬಂದಿ ಮೇಲೆ ಗ್ಯಾಂಗ್ ರೇಪ್

    ಸ್ಟಾರ್ ಹೋಟೆಲ್‍ನಲ್ಲಿ ಸೆಕ್ಸ್ ವರ್ಕರ್ ಇಲ್ಲದ್ದಕ್ಕೆ ಸಿಬ್ಬಂದಿ ಮೇಲೆ ಗ್ಯಾಂಗ್ ರೇಪ್

    – ಪಿಸ್ತೂಲು ತೋರಿಸಿ ಅತ್ಯಾಚಾರ

    ಜೈಪುರ್ : ಸ್ಟಾರ್ ಹೋಟೆಲ್‍ವೊಂದರಲ್ಲಿ ತಂಗಿದ್ದ ಐವರು ಹೋಟೆಲ್ ಮಹಿಳಾ ಸಿಬ್ಬಂದಿಯ ಮೇಲೆ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ರಾಜಸ್ಥಾನದ ನೀಮ್ರಾನಾದಲ್ಲಿ ನಡೆದಿದೆ.

    ಆರೋಪಿಗಳನ್ನು ನರೇಶ್ ಗುಜ್ಜರ್, ಲೋಕೇಶ್, ರಾಹುಲ್, ದನ್ವೀರ್ ಮತ್ತು ಪ್ರಿನ್ಸ್ ತಿವಾರಿ ಎಂದು ಗುರುತಿಸಲಾಗಿದೆ. ಐವರು ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಭಯಾನಕ ಸತ್ಯವನ್ನು ಆರೋಪಿಗಳು ಪೊಲೀಸರ ಎದುರು ಬಾಯಿಬಿಟ್ಟಿದ್ದಾರೆ.

    ಈ ಐವರು ಆರೋಪಿಗಳು ತ್ರಿಸ್ಟಾರ್ ಹೋಟೆಲ್‍ವೊಂದಕ್ಕೆ ಬಂದು ಉಳಿದಿದ್ದಾರೆ. ರೂಮ್ ಕೀಯನ್ನು ತೆಗೆದುಕೊಂಡು ರೂಂಗೆ ಹೋಗಿದ್ದಾರೆ. ಕೆಲವೇ ಕ್ಷಣದಲ್ಲಿ ಮತ್ತೆ ಬಂದು ಸೆಕ್ಸ್ ವರ್ಕರ್‍ಗಳನ್ನು ರೂಮ್‍ಗೆ ಕಳುಹಿಸುವಂತೆ ಹೇಳಿದ್ದಾರೆ. ಇದಕ್ಕೆ ಹೋಟೆಲ್ ಸಿಬ್ಬಂದಿ ನಿರಾಕರಿಸಿದ್ದಾರೆ.

    ಸಿಟ್ಟಿಗೆದ್ದ ಆರೋಪಿಗಳು ಮಹಿಳಾ ಸಿಬ್ಬಂದಿ ಮಲಗಿದ್ದ ಕೋಣೆ ಕಡೆಗೆ ಹೋಗಿದ್ದಾರೆ. ಇಬ್ಬರು ಒಳಗೆ ಹೋಗಿದ್ದಾರೆ. ಮೂವರು ಹೊರಗೆ ಕಾವಲು ಕಾಯಲು ನಿಂತಿದ್ದಾರೆ. ಒಳಗೆ ಹೋದ ಆರೋಪಿಗಳು ಮಹಿಳಾ ಸಿಬ್ಬಂದಿಗೆ ಪಿಸ್ತೂಲು ತೋರಿಸಿ, ಇಬ್ಬರ ಮೇಲೆ ಅತ್ಯಾಚಾರವೆಸಗಿದ್ದಾರೆ.

    ಕೂಡಲೇ ಎಚ್ಚೆತ್ತ ಹೋಟೆಲ್ ಮ್ಯಾನೇಜರ್ ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ. ಪೊಲೀಸರ ವಿಶೇಷ ತಂಡ ಸ್ಥಳಕ್ಕೆ ಬಂದು ಮಹಿಳಾ ಸಿಬ್ಬಂದಿಯನ್ನು ರಕ್ಷಿಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

    ಈ ಐವರು ಒಬ್ಬ ಬಿಸಿನೆಸ್‍ಮ್ಯಾನ್‍ನನ್ನು ಕೊಲೆ ಮಾಡುವ ಉದ್ದೇಶದಿಂದ ಹೋಟೆಲ್‍ಗೆ ಬಂದು ಉಳಿದುಕೊಂಡಿದ್ದರು. ಇವರ ಟಾರ್ಗೆಟ್‍ನಲ್ಲಿರುವ ಬಿಸಿನೆಸ್ ಮ್ಯಾನ್‍ಗೆ 20 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಕೊಡದಿದ್ದರೆ ಕೊಲೆ ಮಾಡುವವರಾಗಿದ್ದರು ಎಂದು ತಿಳಿದು ಬಂದಿದೆ. ಈ ಐವರು ಆರೋಪಿಗಳಲ್ಲಿ ಒಬ್ಬನಾದ ನರೇಶ್ ಈಗಾಗಲೇ ಒಂದು ಕೊಲೆ ಆರೋಪವನ್ನು ಹೊತ್ತಿದ್ದು, ಪೆರೋಲ್ ಮೇಲೆ ಜೈಲಿನಿಂದ ಹೊರಗಡೆ ಬಂದಿದ್ದ.

  • ಹೋಟೆಲಿನಲ್ಲಿ ಗ್ಯಾಂಗ್‍ರೇಪ್ – ಮಹಿಳೆ ಜೊತೆ ಮಗಳನ್ನ ಚಲಿಸ್ತಿದ್ದ ಕಾರಿನಿಂದ ಎಸೆದ್ರು

    ಹೋಟೆಲಿನಲ್ಲಿ ಗ್ಯಾಂಗ್‍ರೇಪ್ – ಮಹಿಳೆ ಜೊತೆ ಮಗಳನ್ನ ಚಲಿಸ್ತಿದ್ದ ಕಾರಿನಿಂದ ಎಸೆದ್ರು

    – ಫೋನಿನಲ್ಲಿ ಹೇಳಿದ್ದನ್ನ ನಂಬಿ ಹೋಗಿದ್ದೆ ತಪ್ಪಾಯ್ತು

    ಚಂಡೀಗಢ: ಮಹಿಳೆಯೊಬ್ಬರ ಮೇಲೆ ಹೋಟೆಲಿನಲ್ಲಿ ಮೂವರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಪಂಜಾಬ್‍ನ ಅಮೃತಸರ ಜಿಲ್ಲೆಯಲ್ಲಿ ನಡೆದಿದೆ.

    ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದೇ ಸಂತ್ರಸ್ತೆ ಮತ್ತು ಆಕೆಯ 10 ವರ್ಷದ ಮಗಳನ್ನು ಚಲಿಸುತ್ತಿದ್ದ ಕಾರಿನಿಂದ ಹೊರಗೆ ಎಸೆದು ಆರೋಪಿಗಳು ಪರಾರಿಯಾಗಿದ್ದಾರೆ. ಸೆಪ್ಟೆಂಬರ್ 6 ರಂದು ಅಪರಿಚಿತ ವ್ಯಕ್ತಿಯೊಬ್ಬ ಸಂತ್ರಸ್ತೆಗೆ ಫೋನ್ ಮಾಡಿದ್ದು, ನಿಮ್ಮ ಸಹೋದ್ಯೋಗಿಗೆ ಅಪಘಾತವಾಗಿದೆ ಎಂದು ತಿಳಿಸಿದ್ದಾನೆ. ಇದರಿಂದ ಗಾಬರಿಗೊಂಡು ಸಂತ್ರಸ್ತೆ ಬಸ್ ಮೂಲಕ ಅಮೃತಸರಕ್ಕೆ ಹೋಗಿದ್ದಾರೆ.

    ಅಮೃತಸರವನ್ನು ತಲುಪಿದ ನಂತರ ಫೋನ್ ಮಾಡಿದ್ದ ಅಪರಿಚಿತ ವ್ಯಕ್ತಿ ನನ್ನನ್ನು ಭೇಟಿಯಾದನು. ಈ ವೇಳೆ ನನಗೆ ಮತ್ತು ಬರುವ ಔಷಧಿ ಮಿಕ್ಸ್ ಮಾಡಿದ್ದ ಪಾನೀಯವನ್ನು ಕೊಟ್ಟಿದ್ದಾನೆ. ಅದನ್ನು ಕುಡಿದ ನಂತರ ನಾನು ಪ್ರಜ್ಞಾಹೀನ ಕಳೆದುಕೊಂಡೆ. ಆಗ ನನ್ನ ಮಗಳೊಂದಿಗೆ ಕಾರಿನಲ್ಲಿ ಹೋಟೆಲ್‍ಗೆ ಕರೆದುಕೊಂಡು ಹೋಗಿದ್ದಾನೆ. ಕಾರಿನಲ್ಲಿ ಇಬ್ಬರು ಪುರುಷರಿದ್ದರು ಎಂದು ಸಂತ್ರಸ್ತೆ ಹೇಳಿದ್ದಾರೆ.

    ಹೋಟೆಲಿನಲ್ಲಿ ಸಂತ್ರಸ್ತೆಯ ಮೇಲೆ ಮೂವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ನಂತರ ಆರೋಪಿಗಳು ಸಂತ್ರಸ್ತೆ ಮತ್ತು ಆಕೆಯ ಮಗಳನ್ನು ಚಲಿಸುವ ಕಾರಿನಿಂದ ಹೊರಗೆ ಎಸೆದು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಯಲ್ಲಿ ನನಗೆ ಮತ್ತು ತನ್ನ ಮಗಳಿಗೆ ಗಾಯಗಳಾಗಿವೆ. ಅಂದು ನಾನು ಭಯದಿಂದ ಈ ವಿಚಾರವನ್ನು ಯಾರಿಗೂ ಹೇಳಿಲ್ಲ ಎಂದು ಮಹಿಳೆ ತಿಳಿಸಿದ್ದಾರೆ.

    ಇದೀಗ ಸಂತ್ರಸ್ತೆ ಧೈರ್ಯ ಮಾಡಿಕೊಂಡು ಬಂದು ಪೊಲೀಸರಿಗೆ ದೂರು ನೀಡಿದ್ದಾರೆ. ಅಲ್ಲದೇ ಆರೋಪಿಗಳಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಸದ್ಯಕ್ಕೆ ಈ ಕುರಿತು ಪ್ರಕರಣ ದಾಖಲಿಸಿಕೊಂಡು ಸಂತ್ರಸ್ತೆಯನ್ನು ಕರೆದುಕೊಂಡು ಹೋದ ಮತ್ತು ಅತ್ಯಾಚಾರ ಮಾಡಿದ ಹೋಟೆಲ್ ದಾಖಲೆಗಳು ಹಾಗೂ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

  • ತೀವ್ರ ಸಂಕಷ್ಟಗೊಳಗಾಗಿ ಕಣ್ಣೀರಿಟ್ಟ ವೃದ್ಧ ದಂಪತಿಗೆ ಬೆನ್ನೆಲುಬಾದ ನೆಟ್ಟಿಗರು!

    ತೀವ್ರ ಸಂಕಷ್ಟಗೊಳಗಾಗಿ ಕಣ್ಣೀರಿಟ್ಟ ವೃದ್ಧ ದಂಪತಿಗೆ ಬೆನ್ನೆಲುಬಾದ ನೆಟ್ಟಿಗರು!

    – ಟ್ವಿಟ್ಟರ್ ಟ್ರೆಂಡಿಂಗ್‍ನಲ್ಲಿದೆ ‘ಬಾಬಾ ಕಾ ಡಾಬಾ’
    – ವೃದ್ಧ ದಂಪತಿಯ ಕಣ್ಣೀರಿಗೆ ಕರಗಿದ ಮಂದಿ

    ನವದೆಹಲಿ: ಕೊರೊನಾ ಮಹಾಮಾರಿಯಿಂದಾಗಿ ಬೀದಿ ಬದಿ ವ್ಯಾಪಾರಿಗಳು ಸಂಕಷ್ಟ ಎದುರಿಸುತ್ತಿರುವುದು ತಿಳಿದೇ ಇದೆ. 80 ವರ್ಷದ ದಂಪತಿ ಸಹ ಇದೇ ಪರಿಸ್ಥಿತಿ ಎದುರಿಸುತ್ತಿದ್ದು, ತೀವ್ರ ಸಂಕಷ್ಟದಲ್ಲಿದ್ದಾರೆ. ನೆಟ್ಟಿಗರು ಇವರ ಸಹಾಯಕ್ಕೆ ನಿಂತಿದ್ದು, ಟ್ವಿಟ್ಟರ್ ನಲ್ಲಿ ಟ್ರೆಂಡಿಂಗ್‍ನಲ್ಲಿದೆ.

    ಹಿರಿಯ ಜೀವಗಳು ದೆಹಲಿಯ ಮಾಳ್ವಿಯಾ ನಗರದಲ್ಲಿ ‘ಬಾಬಾ ಕಾ ಡಾಬಾ’ ಹೆಸರಿನ ಹೋಟೆಲ್ ನಡೆಸುತ್ತಿದ್ದಾರೆ. ಆದರೆ ಲಾಕ್‍ಡೌನ್ ಬಳಿಕ ಅವರಿಗೆ ಸರಿಯಾಗಿ ವ್ಯಾಪಾರವಾಗುತ್ತಿಲ್ಲ. ಇದನ್ನು ಮನಗಂಡ ನೆಟ್ಟಿಗರು ಇಲ್ಲಿನ ಸುತ್ತಲಿನವರು ದಯವಿಟ್ಟು ಇವರ ಹೋಟೆಲ್‍ನಲ್ಲಿ ಊಟ ಮಾಡಿ ಅವರಿಗೂ ಬದುಕಲು ಅವಕಾಶ ಮಾಡಿಕೊಡಿ ಎಂದು ವಿಡಿಯೋ ಮೂಲಕ ಮನವಿ ಮಾಡಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದ್ದು, ಟ್ವಿಟ್ಟರ್ ನಲ್ಲಿ ಟ್ರೆಂಡಿಂಗ್‍ನಲ್ಲಿದೆ.

    ಇತ್ತೀಚೆಗೆ ಅವರ ಹೋಟೆಲ್‍ಗೆ ಊಟಕ್ಕೆ ಬರುವವರ ಸಂಖ್ಯೆ ತೀರಾ ವಿರಳವಾಗಿದ್ದು, ಹೀಗಾಗಿ ವೃದ್ಧ ದಂಪತಿ ಕಣ್ಣೀರಿಡುತ್ತಿದ್ದಾರೆ. ಇದನ್ನು ಕಂಡ ಸ್ಥಳೀಯರು ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ. ದಯವಿಟ್ಟು ಸ್ಥಳೀಯ ವ್ಯಾಪಾರಿಗಳನ್ನು ಉಳಿಸಿ ಎಂದು ವಸುಂಧರ ತಂಖಾ ಶರ್ಮಾ ಟ್ವೀಟ್ ಮಾಡಿದ್ದಾರೆ. ಈ ವಿಡಿಯೋ ನೋಡಿದ ನಂತರ ನನ್ನ ಹೃದವೇ ಒಡೆದಂತಾಯಿತು. ದೆಹಲಿಯ ಜನ ಅವಕಾಶ ಸಿಕ್ಕರೆ ದಯವಿಟ್ಟು ಅವರ ಬಾಬಾ ಕಾ ಡಾಬಾಗೆ ಹೋಗಿ ಊಟ ಮಾಡಿ ಎಂದು ಮನವಿ ಮಾಡಿದ್ದಾರೆ.

    ಈ ವಿಡಿಯೋವನ್ನು ಮೊದಲು ಸ್ವಾದ್ ಅಫೀಶೀಯಲ್ ಎಂಬ ಫೇಸ್ಬುಕ್ ಖಾತೆಯಿಂದ ಹಂಚಿಕೊಳ್ಳಲಾಗಿದೆ. 80 ವರ್ಷದ ವೃದ್ಧ ದಂಪತಿ ಮಟರ್ ಪನೀರ್ ಸೇರಿದಂತೆ ವಿವಿಧ ಖಾದ್ಯಗಳನ್ನು ತಮ್ಮ ಡಾಬಾದಲ್ಲಿ ಮಾರಾಟ ಮಾಡುತ್ತಿದ್ದಾರೆ. ವಿಡಿಯೋದಲ್ಲಿ ದಂಪತಿ ಅಳುತ್ತಿರುವುದನ್ನು ಕಾಣಬಹುದಾಗಿದ್ದು, ಅವರಿಗೆ ಗೊತ್ತಾಗದಂತೆ ವಿಡಿಯೋ ಮಾಡಲಾಗಿದೆ. 1988 ರಿಂದಲೂ ಈ ದಂಪತಿ ಡಾಬಾದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದರೆ ಇದೀಗ ಅವರಿಗೆ ತಮ್ಮ ಆಹಾರ ಪದಾರ್ಥಗಳನ್ನು ಮಾರಾಟ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ವಿಡಿಯೋ ಮಾಡುತ್ತಲೇ, ಆಹಾರ ಪದಾರ್ಥ ಚೆನ್ನಾಗಿರುತ್ತದೆ ಎಂಬುದನ್ನು ವಿಡಿಯೋದಲ್ಲಿ ತೋರಿಸಲಾಗಿದೆ. ಅಲ್ಲದೆ ವಿಳಾಸವನ್ನು ಹೇಳಿದ್ದಾರೆ.

    ವಿಡಿಯೋ ಪೋಸ್ಟ್ ಮಾಡುತ್ತಿದ್ದಂತೆ ಸಖತ್ ವೈರಲ್ ಆಗಿದ್ದು, ಬಾಲಿವುಡ್ ನಟ, ನಟಿಯರು ಸಹ ವಿಡಿಯೋ ಶೇರ್ ಮಾಡಿದ್ದಾರೆ. ಇವರ ಹೋಟೆಲ್‍ನಲ್ಲಿ ಊಟ ಮಾಡುವುದರಿಂದ ನೀವು ಕೇವಲ ಆ ವೃದ್ಧ ದಂಪತಿಯನ್ನು ಉಳಿಸಿದಂತೆ ಆಗುವುದಿಲ್ಲ. ಸ್ಥಳೀಯ ವ್ಯಾಪಾರವನ್ನು ಉಳಿಸಿದಂತಾಗುತ್ತದೆ ಎಂದು ಹಲವು ಬೇಡಿಕೊಂಡಿದ್ದಾರೆ.

    ಬಾಲಿವುಡ್ ನಟರಾದ ರಣದೀಪ್ ಹೂಡಾ, ರವೀನಾ ಟಂಡನ್ ಹಾಗೂ ಸುನೀಲ್ ಶೆಟ್ಟಿ ಅವರು ವಿಟಿಯೋ ಟ್ವೀಟ್ ಮಾಡಿದ್ದಾರೆ. ಈ ಕುರಿತು ಸುದ್ದಿ ಹರಿದಾಡುತ್ತಿದ್ದಂತೆ ಮತ್ತೊಬ್ಬ ಟ್ವಿಟ್ಟರ್ ಬಳಕೆದಾರ ಸಂತಸದ ವಿಚಾರವನ್ನು ಹಂಚಿಕೊಂಡಿದ್ದು, ದಂಪತಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಎಪಿ ಶಾಸಕ ಸೋಮನಾಥ್ ಭಾರ್ತಿ ಆಗಮಿಸಿದ್ದಾರೆ. ಅಲ್ಲದೆ ಹೆಚ್ಚು ಜನ ಊಟಕ್ಕೆ ಆಗಮಿಸುತ್ತಿದ್ದಾರೆ. ಇದೀಗ ಅವರ ಮೊಗದಲ್ಲಿ ಸಂತಸ ಮೂಡಿದೆ ಎಂದು ತಿಳಿಸಿದ್ದಾರೆ.

  • ಮದ್ವೆ ನಂತ್ರ ಪ್ರಿಯಕರನ ಜೊತೆ ಎಸ್ಕೇಪ್ – ರಾಜಿಯಾದ ಮೇಲೂ ಮತ್ತೆ ಹೋಟೆಲ್‍ನಲ್ಲಿ ಸಿಕ್ಕಿಬಿದ್ಳು

    ಮದ್ವೆ ನಂತ್ರ ಪ್ರಿಯಕರನ ಜೊತೆ ಎಸ್ಕೇಪ್ – ರಾಜಿಯಾದ ಮೇಲೂ ಮತ್ತೆ ಹೋಟೆಲ್‍ನಲ್ಲಿ ಸಿಕ್ಕಿಬಿದ್ಳು

    ಚಂಡೀಗಢ: ಮಹಿಳೆಯೊಬ್ಬಳು ತನ್ನ ಪ್ರಿಯಕರನ ಜೊತೆ ಇದ್ದಾಗಲೇ ಪತಿಯ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದು, ಇಬ್ಬರಿಗೂ ವ್ಯಕ್ತಿ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಹರಿಯಾಣದ ಫರಿದಾಬಾದ್‍ನ ಹೋಟೆಲ್‍ವೊಂದರಲ್ಲಿ ನಡೆದಿದೆ.

    ಪತಿ ಮತ್ತು ಆತನ ಕಿರಿಯ ಸಹೋದರ ಅವರು ಇರುವ ಸ್ಥಳವನ್ನು ತಿಳಿದುಕೊಂಡು ಹೋಗಿ ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ. ನಂತರ ಇಬ್ಬರಿಗೂ ಸಾರ್ವಜನಿಕವಾಗಿಯೇ ಥಳಿಸಿದ್ದಾರೆ. ಇದರಿಂದ ಜನರು ಸ್ಥಳದಲ್ಲಿ ಜಮಾಯಿಸಿದ್ದರು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಆಗ ವ್ಯಕ್ತಿ ತನ್ನ ಹೆಂಡತಿ ಮತ್ತು ಆಕೆಯ ಪ್ರಿಯಕರನನ್ನು ಪೊಲೀಸರಿಗೆ ಒಪ್ಪಿಸಿದ್ದಾನೆ.

    ಏನಿದು ಪ್ರಕರಣ?
    ದಂಪತಿ ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದಾರೆ. ಪತಿ ಪಾಲ್ವಾಲ್‍ನ ಅಸಾವತಿ ಗ್ರಾಮದ ನಿವಾಸಿಯಾಗಿದ್ದರೆ, ಪತ್ನಿ ಫಿರೋಜ್‍ಪುರ್ ಕಲಾನ್ ಗ್ರಾಮದವಳು. ಮಹಿಳೆ ಮದುವೆಗೂ ಮುನ್ನ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದಳು. ಇದೇ ವಿಚಾರಕ್ಕೆ ಮದುವೆಯ ನಂತರ ದಂಪತಿಯ ನಡುವೆ ಆಗಾಗ ಜಗಳವಾಗುತ್ತಿತ್ತು ಎಂದು ತಿಳಿದು ಬಂದಿದೆ.

    ಮದುವೆಯಾದ ನಂತರ ನನ್ನ ಪತ್ನಿ ಪ್ರಿಯಕರನ ಜೊತೆ ಸಿಕ್ಕಿಬಿದ್ದಿರುವುದು ಇದೇ ಮೊದಲಲ್ಲ ಎಂದು ಪತಿ ಆರೋಪಿಸಿದ್ದಾನೆ. ಈ ಹಿಂದೆಯೂ ಕೂಡ ವಿವಾಹವಾದ ನಂತರ ತನ್ನ ಪ್ರಿಯಕರನ ಜೊತೆ ಮಹಿಳೆ ಓಡಿಹೋಗಿದ್ದಳು. ಆಗ ವಾಪಸ್ ಬಂದ ಪತ್ನಿಯನ್ನು ಪತಿ ಸ್ವೀಕರಿಸಲು ನಿರಾಕರಿಸಿದ್ದನು. ಆದರೆ ಎರಡು ಕುಟುಂಬದವರು ಮಾತನಾಡಿ ರಾಜೀ ಮಾಡಿಸಿದ್ದರು.

    ಮೂರು ದಿನಗಳ ಹಿಂದೆ ಮಹಿಳೆ ತನ್ನ ತಂದೆ ಕಾಲಿಗೆ ಪೆಟ್ಟಾಗಿದೆ ಎಂದು ತಾಯಿಯ ಮನೆಗೆ ಹೋಗಿದ್ದಳು. ಇತ್ತ ಪತಿ ತನ್ನ ಬಾಮೈದನನ್ನು ಕರೆದು ಮಾವನ ಆರೋಗ್ಯದ ಬಗ್ಗೆ ವಿಚಾರಿಸಿದ್ದಾನೆ. ಇದೇ ವೇಳೆ ತನ್ನ ಹೆಂಡತಿಯ ಬಗ್ಗೆಯೂ ಕೇಳಿದ್ದಾನೆ. ಆಗ ಬಾಮೈದ ತಾಯಿಯೊಂದಿಗೆ ಬಲ್ಲಭಗಢ್‍ಗೆ ಶಾಪಿಂಗ್ ಮಾಡಲು ಹೋಗಿದ್ದಾಳೆ ಎಂದು ತಿಳಿಸಿದ್ದನು. ಕಾಕತಾಳೀಯವಾಗಿ ಬಲ್ಲಭಗಢ್‍ನಲ್ಲಿರುವ ಪತಿಯ ಸಂಬಂಧಿ ಸ್ವಲ್ಪ ಸಮಯದ ನಂತರ ಫೋನ್ ಮಾಡಿ, ನಿನ್ನ ಹೆಂಡತಿ ಯಾರೊಂದಿಗೋ ಸುತ್ತಾಡುತ್ತಿರುವುದನ್ನು ನೋಡಿದೆನೆಂದು ತಿಳಿಸಿದ್ದಾನೆ.

    ಪತಿ ತಕ್ಷಣ ಅನುಮಾನಗೊಂಡು ಹೆಂಡತಿಯನ್ನು ಹುಡುಕಲು ಬಲ್ಲಭಗಢ್‍ಗೆ ಹೋಗಿದ್ದಾನೆ. ಪತ್ನಿ ಮತ್ತು ಆತನ ಸಹೋದರ ಆ ಪ್ರದೇಶದಲ್ಲಿ ಹುಡುಕಿದ್ದಾರೆ, ಸುತ್ತಮುತ್ತಲಿನ ಜನರನ್ನು ಕೇಳಿದ್ದಾರೆ. ಕೊನೆಗೆ ಅವರಿಬ್ಬರನ್ನು ಹೋಟೆಲ್‍ನಲ್ಲಿ ಪತ್ತೆ ಮಾಡಿದ್ದಾರೆ. ಈ ವೇಳೆ ಕೋಪಗೊಂಡ ಪತಿ ಸಾರ್ವಜನಿಕವಾಗಿಯೇ ಇಬ್ಬರನ್ನು ಥಳಿಸಿದ್ದಾನೆ.

    ಸದ್ಯಕ್ಕೆ ಸ್ಥಳೀಯ ಪೊಲೀಸರು ಮಹಿಳೆ ಮತ್ತು ಆತನ ಪ್ರಿಯಕರನನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಜೊತೆಗೆ ಅವರ ಕುಟುಂಬ ಸದಸ್ಯರನ್ನು ಠಾಣೆಗೆ ಕರೆಸಿದ್ದಾರೆ. ಈ ಬಗ್ಗೆ ದೂರು ಬಂದರೆ ತನಿಖೆ ಆರಂಭಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

  • ನಾಳೆ ಹೋಟೆಲ್ ಓಪನ್ ಮಾಡಿದ್ರೆ, ಊಟ ತಿಂದು ಬಿಲ್ ಕೊಡ್ಬೇಡಿ: ವಾಟಾಳ್ ನಾಗರಾಜ್

    ನಾಳೆ ಹೋಟೆಲ್ ಓಪನ್ ಮಾಡಿದ್ರೆ, ಊಟ ತಿಂದು ಬಿಲ್ ಕೊಡ್ಬೇಡಿ: ವಾಟಾಳ್ ನಾಗರಾಜ್

    ಹಾಸನ: ನಾಳೆ ಹೋಟೆಲ್ ಓಪನ್ ಮಾಡಿದರೆ, ಊಟ ತಿಂದು ಬಿಲ್ ಕೊಡಬೇಡಿ ಎಂದು ಹೋರಾಟಗಾರರಿಗೆ ವಾಟಾಳ್ ನಾಗರಾಜ್ ಹೇಳಿದ್ದಾರೆ.

    ಇಂದು ಹಾಸನದಲ್ಲಿ ಮಾತನಾಡಿದ ಅವರು, ಸುಮಾರು 3 ಸಾವಿರ ಕನ್ನಡಪರ ಸಂಘಟನೆಗಳು ಮತ್ತು ರೈತರು ಒಂದಾಗಿ ಬಂದ್‍ಗೆ ಬೆಂಬಲವನ್ನು ಕೊಟ್ಟಿದೆ. ಕನ್ನಡ ಒಕ್ಕೂಟದ ಮುಖಂಡರುಗಳಾದ ಸಾ.ರಾ. ಗೋವಿಂದ್, ಶಿವರಾಮೇಗೌಡ, ನಾರಾಯಣಗೌಡ, ಪ್ರವೀಣ್ ಶೆಟ್ಟಿ, ಕೆ.ಆರ್ ಕುಮಾರ್, ಮಂಜುನಾಥ್ ದೇವ್, ಗಿರೀಶ್ ಗೌಡ ಸೇರಿದಂತೆ ಅನೇಕ ಸಂಘಟನೆಗಳು ಬಂದ್‍ಗೆ ಕೈಜೋಡಿಸಿದೆ ಎಂದು ತಿಳಿಸಿದರು.

    ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಅಧಿಕಾರಕ್ಕೆ ಬಂದಿದ್ದು ರೈತರ ಹೆಸರಿನಲ್ಲಿ ಹೊರತು ಬಿಜೆಪಿ ಹೆಸರಿನಲ್ಲಿಯಲ್ಲ. ಹಸಿರು ಶಾಲು ಹಾಕಿಕೊಂಡು ಕೈಬೀಸುತ್ತಿದ್ದವರು ಈಗ ರೈತರನ್ನು ತುಳಿಯಲು ಹೊರಟಿದ್ದಾರೆ. ರೈತರುಗಳೆಲ್ಲಾ ಇವರ ಗುಲಾಮರಲ್ಲ ಎಂದು ಕಿಡಿಕಾರಿದರು. ರೈತರನ್ನು ಕೊಲ್ಲುವ ಎರಡು ಮಸೂದೆಗಳನ್ನು ಯಡಿಯೂರಪ್ಪನವರ ಸರ್ಕಾರವು ಹಿಂಪಡೆಯಲೇಬೇಕು. ರೈತರ ಜಮೀನನ್ನು ದೊಡ್ಡ ದೊಡ್ಡ ಕಾರ್ಖಾನೆ ಮಾಲೀಕರು, ಶ್ರೀಮಂತರು ಸೇರಿದಂತೆ ಯಾರು ಬೇಕಾದರೂ ಕೊಂಡುಕೊಳ್ಳಬಹುದಾದ ಮಸೂದೆ ರೈತರ ಮರಣ ಶಾಸನವಾಗಿದೆ. ಭೂ ಶಾಸನ ಜಾರಿಗೆ ತರಬಾರದಿತ್ತು ಎಂದು ಕಿಡಿಕಾರಿದರು.

    ನಾಳೆ ವಿನೂತನವಾದ ಚಳುವಳಿ ನಡೆಯಲಿದೆ. ಪೊಲೀಸರು ಈ ಬಂದ್‍ನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಕಮಿಷನರ್ ಮತ್ತು ಡಿಜಿಗೆ ಪೂರ್ಣ ಅಧಿಕಾರ ನೀಡಿದ್ದಾರೆ. ಕಮಿಷನರ್ ಮತ್ತು ಡಿಜಿ ಇಬ್ಬರೂ ಕನ್ನಡಿಗರಲ್ಲ. ಬೆಂಗಳೂರು ಮಹಾನಾಗರಿಕಾ ಪಾಲಿಕೆ ಆಡಳಿತಾಧಿಕಾರಿ ಗೌರವ್ ಗುಪ್ತಾ ಮಾರವಾಡಿಯಾಗಿದ್ದು, ಸಿಎಂ ಯಡಿಯೂರಪ್ಪನವರು ಎಲ್ಲಾ ಕಡೆ ಪರಭಾಷೆಯವರನ್ನು ಹಾಕುತ್ತಿದ್ದಾರೆ ಎಂದು ದೂರಿದರು. ಬಂದ್ ಹೋರಾಟದ ವೇಳೆ ಏನಾದರೂ ದಬ್ಬಾಳಿಕೆ ಮಾಡಿದರೆ ಭಾರಿ ಹೋರಾಟ ಮಾಡಬೇಕಾದ ಅನಿವಾರ್ಯ ಬರುತ್ತದೆ ಎಂದು ಕಿಡಿಕಾರಿದರು.

  • ಮೊದಲು ಕೋಳಿ ಫಾರ್ಮ್, ನಂತ್ರ ಹೋಟೆಲಿನಲ್ಲಿ 2 ಬಾರಿ ಮಹಿಳೆಯ ಮೇಲೆ ಗ್ಯಾಂಗ್‍ರೇಪ್

    ಮೊದಲು ಕೋಳಿ ಫಾರ್ಮ್, ನಂತ್ರ ಹೋಟೆಲಿನಲ್ಲಿ 2 ಬಾರಿ ಮಹಿಳೆಯ ಮೇಲೆ ಗ್ಯಾಂಗ್‍ರೇಪ್

    – ಡ್ರಾಪ್ ಕೊಡುವುದಾಗಿ ಸಾಮೂಹಿಕ ಅತ್ಯಾಚಾರ

    ಶಿಮ್ಲಾ: ಡ್ರಾಪ್ ಕೊಡುವ ನೆಪದಲ್ಲಿ ಮಹಿಳೆಯ ಮೇಲೆ ಎರಡು ಬಾರಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಆರೋಪಿಗಳನ್ನು ಬಂಧಿಸಿರುವ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದೆ.

    ಹಿಮಾಚಲ ಪ್ರದೇಶದ ಕಂಗ್ರಾ ಎಂಬಲ್ಲಿ ಈ ಘಟನೆ ನಡೆದಿದೆ. 32 ವರ್ಷದ ಮಹಿಳೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

    ಕಂಗ್ರಾದ ಬನೋಯಿ ಪ್ರದೇಶದಲ್ಲಿರುವ ಬಸ್ ನಿಲ್ದಾಣದಲ್ಲಿ 32 ವರ್ಷದ ಮಹಿಳೆ ಬಸ್ಸಿಗಾಗಿ ಕಾಯುತ್ತಿದ್ದರು. ಆಗ ಆರೋಪಿಗಳು ತಮ್ಮ ಗ್ರಾಮಕ್ಕೆ ಡ್ರಾಪ್ ಮಾಡುವುದಾಗಿ ವಾಹನ ಹತ್ತಿಸಿಕೊಂಡಿದ್ದಾರೆ. ನಂತರ ಆರೋಪಿಗಳು ಸಂತ್ರಸ್ತೆಯನ್ನು ಸಲೋಲ್ ಪ್ರದೇಶದಲ್ಲಿದ್ದ ಕೋಳಿ ಫಾರ್ಮ್‍ಗೆ ಕರೆದುಕೊಂಡು ಹೋಗಿದ್ದು, ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

    ಅಲ್ಲಿಂದ ಮೆಕ್ಲಿಯೋಡ್ ‌ಗಂಜ್‍ನಲ್ಲಿರುವ ಹೋಟೆಲ್‍ಗೆ ಕರೆದುಕೊಂಡು ಹೋಗಿದ್ದು, ಮತ್ತೆ ಮಹಿಳೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆಗೆ ವಿವಾಹಿವಾಗಿದ್ದು, ಮೂರು ಮಕ್ಕಳ ತಾಯಿ. ಕಳೆದ ಐದು ವರ್ಷಗಳಿಂದ ಆಕೆ ಪತಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಸದ್ಯಕ್ಕೆ ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ಮೆಕ್ಲಿಯೋಡ್ ‌ಗಂಜ್‍ನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹೋಟೆಲ್ ಮಾಲೀಕನನ್ನೂ ಪೊಲೀಸರು ಬಂಧಿಸಿದ್ದಾರೆ.

  • ಹೋಟೆಲ್‍ನಲ್ಲಿ ಅಗ್ನಿ ಅವಘಡ- ಮೃತರ ಕುಟುಂಬಕ್ಕೆ ತಲಾ 50 ಲಕ್ಷ ಪರಿಹಾರ ಘೋಷಣೆ

    ಹೋಟೆಲ್‍ನಲ್ಲಿ ಅಗ್ನಿ ಅವಘಡ- ಮೃತರ ಕುಟುಂಬಕ್ಕೆ ತಲಾ 50 ಲಕ್ಷ ಪರಿಹಾರ ಘೋಷಣೆ

    ಹೈದರಾಬಾದ್: ಕೋವಿಡ್ 19 ರೋಗಿಗಳಿದ್ದ ಹೋಟೆಲ್ ನಲ್ಲಿ ನಡೆದ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಆಂಧ್ರ ಸರ್ಕಾರ ತಲಾ 50 ಲಕ್ಷ ಪರಿಹಾರ ಘೋಷಣೆ ಮಾಡಿದೆ.

    ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಕೋವಿಡ್ 19 ಸೌಲಭ್ಯವಿದ್ದ ಹೋಟೆಲ್ ನಲ್ಲಿ ಅನಾಹುತ ಸಂಭವಿಸಿದೆ. ಘಟನೆಯಲ್ಲಿ 7 ಮಂದಿ ಸಜೀವ ದಹನವಾಗಿದ್ದಾರೆ. ಘಟನೆ ನಡೆದ ಕೂಡಲೇ ಅಗ್ನಿಶಾಮಕ ದಳ, ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

    ಈ ಸಂಬಂಧ ಮಾತನಾಡಿದ್ದ, ಕೃಷ್ಣ ಡಿಸಿ ಮೊಹಮ್ಮದ್ ಇಮ್ತಿಯಾಜ್, ಈ ಘಟನೆ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ನಡೆದಿದೆ. ಸುಮಾರು 22 ಮಂದಿ ಕೊರೊನಾ ರೋಗಿಗಳು ಇಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸದ್ಯ ಕಟ್ಟಡದಲ್ಲಿದ್ದ ಎಲ್ಲರನ್ನೂ ಸ್ಥಳಾಂತರಿಸಿದ್ದೇವೆ. ಶಾರ್ಟ್ ಸರ್ಕ್ಯೂಟ್ ನಿಂದ ಈ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯ ವೇಳೆ ಬೆಳಕಿಗೆ ಬಂದಿದ್ದು, ಘಟನೆಗೆ ನಿಖರ ಕಾರಣವೇನೆಂದು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

    ಹೋಟೇಲ್ ನಲ್ಲಿದ್ದ ಸುಮಾರು 30 ಮಂದಿಯನ್ನು ರಕ್ಷಿಸಲಾಗಿದೆ. ಈ ವಿಚಾರ ಸುದ್ದಿಯಾಗುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಅಮಿತ್ ಶಾ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಅಲ್ಲದೆ ಪ್ರಧಾನಿಯವರು ಸಿಎಂ ಜಗನ್ ಮೋಹನ್ ರೆಡ್ಡಿ ಅವರಿಗೆ ಕರೆ ಮಾಡಿ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.