Tag: Hotel

  • ಸೆಕ್ಸ್ ರ‍್ಯಾಕೆಟ್: ಇಬ್ಬರು ನಟಿಯರು ಸೇರಿ ಐವರ ಬಂಧನ-ಕಾಂಡೋಮ್, ಹಣ ಪತ್ತೆ

    ಸೆಕ್ಸ್ ರ‍್ಯಾಕೆಟ್: ಇಬ್ಬರು ನಟಿಯರು ಸೇರಿ ಐವರ ಬಂಧನ-ಕಾಂಡೋಮ್, ಹಣ ಪತ್ತೆ

    ಹೈದರಾಬಾದ್: ಎರಡು ದಿನಗಳ ಹಿಂದೆ ನಗರದಲ್ಲಿ ಪೊಲೀಸರು ಹೈ ಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದ್ದು, ಇಬ್ಬರೂ ನಟಿಯರು ಸೇರಿದಂತೆ ಐವರನ್ನು ಬಂಧಿಸಿದ್ದಾರೆ.

    ರಿಚಾ ಸೆಕ್ಸೆನಾ ಮತ್ತು ಶುಭ್ರಾ ಚಟರ್ಜಿ ಸೆಕ್ಸ್ ದಂಧೆಯಲ್ಲಿಯಲ್ಲಿ ಬಂಧಿತರಾದ ನಟಿಯರು. ಇಬ್ಬರೂ ತೆಲಗು ಮತ್ತು ಬಂಗಾಳಿ ಸಿನಿಮಾಗಳ ನಟಿಯರಾಗಿದ್ದು, ಹೈದರಾಬಾದ್ ನ ತಾಜ್ ಡೆಕ್ಕನ್ ಹೋಟೆಲ್ ನಲ್ಲಿ ರೂಮ್ ಬಾಡಿಗೆಗೆ ಪಡೆದುಕೊಂಡು ವೇಶ್ಯಾವಾಟಿಕೆಯಲ್ಲಿ ತೊಡಗಿಕೊಂಡಿದ್ದರು. ಪಿಂಪ್ (ದಲ್ಲಾಳಿ) ಒಬ್ಬ ಆನ್‍ಲೈನ್ ಮೂಲಕ ಗಿರಾಕಿಗಳನ್ನು ಬುಕ್ ಮಾಡಿ ಇವರತ್ತ ಕಳುಹಿಸುತ್ತಿದ್ದನು. ಪೊಲೀಸರು ಐಪಿ ಅಡ್ರೆಸ್ ಮೂಲಕ ಪಿಂಪ್ ವಿಳಾಸವನ್ನು ಪತ್ತೆ ಹಚ್ಚಿ, ಸಿವಿಲ್ ಡ್ರೆಸ್ ನಲ್ಲಿ ಬಂದು ನಟಿಯರನ್ನು ಬಂಧಿಸಿದ್ದಾರೆ.

    ದಾಳಿ ವೇಳೆ ಪೊಲೀಸರಿಗೆ ಹೋಟೆಲ್ ನಲ್ಲಿ 50 ಸಾವಿರ ನಗದು, ಮೊಬೈಲ್ ಫೋನ್ ಮತ್ತು ಕೆಲವು ಕಾಂಡೋಮ್ ಗಳು ಸಿಕ್ಕಿವೆ. ಬಂಧಿತರಲ್ಲಿ ಇಬ್ಬರು ನಟಿಯರಾದ್ರೆ, ದಂಧೆಯ ಸಂಘಟಕ, ಮತ್ತೊಬ್ಬ ಬಾಲಿವುಡ್ ಸಿನಿಮಾ ನಿರ್ದೇಶಕ ಮೊನಿಶಾ ಕಾಡಕೈ, ಇನ್ನೊಬ್ಬ ಆಂಧ್ರ ಪ್ರದೇಶದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ವೆಂಕಟ್ ರಾವ್ ಎಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೋಟೆಲ್ ನ ಇಬ್ಬರೂ ಮ್ಯಾನೇಜರ್ ಗಳನ್ನು ಸಹ ಬಂಧಿಸಿದ್ದಾರೆ. ನಟಿಯರ ರೂಮಿಗೆ ಪುರುಷರನ್ನು ಕಳುಹಿಸುತ್ತಿದ್ದ ಪಿಂಪ್ ನಾಪತ್ತೆಯಾಗಿದ್ದಾನೆ.

    ಇಬ್ಬರೂ ನಟಿಯರು ಹೋಟೆಲ್ ನ ಎರಡು ಬೇರೆ ರೂಮಿನಲ್ಲಿದ್ದಾಗ ಪೊಲೀಸರು ಬಂಧಿಸಿದ್ದಾರೆ. ಮುಂಬೈ ಮೂಲದ ಇಬ್ಬರೂ ನಟಿಯರನ್ನು ಪೊಲೀಸರು ಬಂಧಿಸಿದ್ದು, ಮೊಬೈಲ್ ಫೋನ್, ಹಣ, ಅಶ್ಲೀಲ ಫೋಟೋಗಳು, ನಟಿಯರ ಫೋನ್ ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

    ಈ ಸೆಕ್ಸ್ ರ‍್ಯಾಕೆಟ್ ಪಿಂಪ್ ಗಳು ನಗರದ ಶ್ರೀಮಂತ ವ್ಯಕ್ತಿಗಳಿಗೆ ಬಲೆಯನ್ನು ಬೀಸುತ್ತಿದ್ದರು. ಒಂದು ರಾತ್ರಿಗೆ ಒಂದು ಲಕ್ಷ ರೂ. ರೇಟ್ ಫಿಕ್ಸ್ ಮಾಡಿದ್ದರು. ಆದರೆ ವೇಶ್ಯಾವಾಟಿಕೆಯ ಮುಖ್ಯಸ್ಥ ಮಾತ್ರ ಗಿರಾಕಿಗಳಿಂದ ಭಾರೀ ಮೊತ್ತದ ಹಣವನ್ನು ಪಡೆದುಕೊಂಡು, ನಟಿಯರಿಗೆ ಕಡಿಮೆ ಹಣವನ್ನು ನೀಡುತ್ತಿದ್ದ ಎಂದು ತಿಳಿದು ಬಂದಿದೆ. ಪಿಂಪ್ ಗಳು ನಟಿಯರಿಗೆ ಸಿನಿಮಾದಲ್ಲಿ ಇದಕ್ಕೂ ಹೆಚ್ಚಿನ ಹಣವನ್ನು ಗಳಿಸಬಹುದು ಎಂದು ನಂಬಿಸಿದ್ದರು.

  • ಹೋಟೆಲ್‍ಗಳಲ್ಲಿ MRPಗಿಂತ ಹೆಚ್ಚಿನ ಬೆಲೆಗೆ ನೀರಿನ ಬಾಟಲಿ ಮಾರಲು ಸುಪ್ರೀಂ ಅನುಮತಿ

    ಹೋಟೆಲ್‍ಗಳಲ್ಲಿ MRPಗಿಂತ ಹೆಚ್ಚಿನ ಬೆಲೆಗೆ ನೀರಿನ ಬಾಟಲಿ ಮಾರಲು ಸುಪ್ರೀಂ ಅನುಮತಿ

    ನವದೆಹಲಿ: ರೆಸ್ಟೊರೆಂಟ್ ಮತ್ತು ಹೋಟೆಲ್ ಗಳು ಎಂಆರ್ ಪಿ ಗಿಂತ ಹೆಚ್ಚಿನ ಬೆಲೆಗೆ ಪ್ಯಾಕೇಜ್ಡ್ ನೀರಿನ ಬಾಟಲಿಗಳನ್ನು ಮಾರಾಟ ಮಾಡಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

    ಫೆಡರೇಷನ್ ಆಫ್ ಹೋಟೆಲ್ ಅಂಡ್ ರೆಸ್ಟೊರೆಂಟ್ ಅಸೋಸಿಯೇಷನ್ಸ್ ಆಫ್ ಇಂಡಿಯಾ(FHRAI) ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಹೋಟೆಲ್ ಮತ್ತು ರೆಸ್ಟೊರೆಂಟ್ ಗಳು ಲೀಗಲ್ ಮೆಟ್ರೋಲಜಿ ಕಾಯ್ದೆಯ ವ್ಯಾಪ್ತಿಯ ಅಡಿಯಲ್ಲಿ ಬಾರದೇ ಇದ್ದ ಕಾರಣ ನೀರಿನ ಬಾಟಲಿಗಳನ್ನು ಎಂಆರ್ ಪಿ  ಗಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಲು ಅವಕಾಶವಿದೆ ಎಂದು ಹೇಳಿದೆ.

    ಕೇಂದ್ರದ ವಾದವನ್ನು ತಿರಸ್ಕರಿಸಿ ನ್ಯಾ. ಎಫ್ ನಾರಿಮನ್ ಪೀಠ, ಹೋಟೆಲ್, ರೆಸ್ಟೊರೆಂಟ್ ಗೆ ಯಾರೂ ಕುಡಿಯವ ಸಲುವಾಗಿ ನೀರನ್ನು ಖರೀದಿಸಲು ಹೋಗುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ.

    ಈ ಪ್ರಕರಣದ ವಿಚಾರಣೆ ವೇಳೆ ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯ, ಎಂಆರ್ ಪಿ ಗಿಂತ ಹೆಚ್ಚಿನ ಬೆಲೆಯಲ್ಲಿ ಯಾರೇ ನೀರಿನ ಬಾಟಲಿಗಳನ್ನು ಮಾರಾಟ ಮಾಡಿದರೆ ಅವರು ದಂಡ ತೆರಬೇಕಾಗುತ್ತದೆ ಅಥವಾ ಜೈಲು ಶಿಕ್ಷೆ ಎದುರಿಸಬೇಕು ಎಂದು ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿತ್ತು. ಎಂಆರ್ ಪಿ ಗಿಂತ ಹೆಚ್ಚಿನ ಬೆಲೆಗೆ ಪ್ಯಾಕೇಜ್ಡ್ ನೀರಿನ ಬಾಟಲಿ ಮಾರಾಟ ಮಾಡುವುದು ತೆರಿಗೆ ವಂಚನೆಗೆ ಎಡೆ ಮಾಡಿಕೊಡುತ್ತದೆ ಎಂದು ವಾದಿಸಿತ್ತು.

    ಹೋಟೆಲ್‍ನವರು ನಿರ್ದಿಷ್ಟ ದರಕ್ಕೆ ನೀರಿನ ಬಾಟಲಿ ಖರೀದಿಸಿರುತ್ತಾರೆ. ಅದನ್ನ ಎಂಆರ್ ಪಿ ಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದ್ರೆ ಸೇವಾ ತೆರಿಗೆ, ಅಬಕಾರಿ ಸುಂಕ ರೂಪದಲ್ಲಿ ಸರ್ಕಾರಕ್ಕೆ ಬರಬೇಕಾದ ಹೆಚ್ಚುವರಿ ಆದಾಯಕ್ಕೆ ನಷ್ಟ ಉಂಟಾಗುತ್ತದೆ ಎಂದು ಸರ್ಕಾರ ಕೋರ್ಟ್‍ಗೆ ತಿಳಿಸಿತ್ತು.

    2009ರ ಕಾಯ್ದೆಯಡಿ ನೀರಿನ ಬಾಟಲಿಗಳನ್ನ ಹೆಚ್ಚಿನ ಬೆಲೆಗೆ ಮಾರಾಟ ಮಾಡೋ ರೆಸ್ಟೊರೆಂಟ್ ಹಾಗೂ ಹೋಟೆಲ್ ವಿರುದ್ಧ ಕ್ರಮ ಕೈಗೊಳ್ಳುವ ಸರ್ಕಾರದ ಅಧಿಕಾರವನ್ನು ದೆಹಲಿ ಹೈ ಕೋರ್ಟ್ 2015ರ ಆಗಸ್ಟ್ ನಲ್ಲಿ ಎತ್ತಿ ಹಿಡಿದಿತ್ತು. ಈ ಆದೇಶಕ್ಕೆ ಪ್ರಶ್ನಿಸಿ ಎಫ್‍ಹೆಚ್‍ಆರ್ ಎಐ ಮರುಪರಿಶೀಲನಾ ಅರ್ಜಿ ಸಲ್ಲಿಸಿತ್ತು. ಆದ್ರೆ ಅದು ತಿರಸ್ಕೃತವಾದ  ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಲೇರಿತ್ತು.

    ಲಿಗಲ್ ಮೆಟ್ರೋಲಜಿ ಕಾಯ್ದೆ ಏನು ಹೇಳುತ್ತೆ?
    ಪ್ಯಾಕೇಜ್ಡ್ ಉತ್ಪನ್ನಗಳನ್ನ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಲೀಗಲ್ ಮೆಟ್ರೋಲಜಿ ಕಾಯ್ದೆ ಪ್ರಕಾರ ಅಪರಾಧ. ಯಾವುದೇ ವಸ್ತುವನ್ನು ಪೇಪರ್ ನಲ್ಲಿ  ಪ್ಯಾಕ್ ಮಾಡಿದ್ದರೂ ಕಾಯ್ದೆ ವ್ಯಾಪ್ತಿಗೆ ಒಳಪಡುತ್ತದೆ. ಕಡ್ಡಾಯವಾಗಿ ಪೊಟ್ಟಣ ಸಾಮಗ್ರಿ ನಿಯಮಾವಳಿಗಳನ್ನು ಪಾಲಿಸಿರಬೇಕು. ವಸ್ತುಗಳ ದರ ಹಾಗೂ ವಿಳಾಸವನ್ನು ಕಡ್ಡಾಯವಾಗಿ ನಮೂದಿಸಬೇಕಾಗುತ್ತದೆ. ಇದನ್ನು ಉಲ್ಲಂಘಿಸಿದರೆ ಮಾರಾಟಗಾರರ ಮೇಲೆ ಸ್ಥಳದಲ್ಲೇ ದಂಡ ವಿಧಿಸಲು ಅವಕಾಶವಿದೆ. ಕಾನೂನು ಮಾಪನಶಾಸ್ತ್ರ ಇಲಾಖೆ ವ್ಯಾಪ್ತಿಗೆ ಎಲ್ಲ ಅಂಗಡಿಗಳು, ಪೆಟ್ರೋಲ್ ಬಂಕ್, ಸೀಮೆಎಣ್ಣೆ ಮಾರಾಟಗಾರರು, ಬಟ್ಟೆ ಅಂಗಡಿಗಳು, ಪೊಟ್ಟಣ ತಯಾರಿಕಾ ಉದ್ಯಮಗಳು ಒಳಪಡುತ್ತದೆ.

    ದಂಡ ಎಷ್ಟು?
    ಯಾವುದೇ ಪ್ರೀ ಪ್ಯಾಕೇಜ್ಡ್ ಉತ್ಪನ್ನದ ಮೇಲೆ ನಮೂದಿಸಿರುವುದಕ್ಕೆ ಬದ್ಧವಾಗಿರದೆ ಅದನ್ನ ಮಾರಾಟ, ವಿತರಣೆ ಅಥವಾ ಡೆಲಿವರಿ ಮಾಡುವಾಗ ಸಿಕ್ಕಿಬಿದ್ದರೆ ಮೊದಲನೇ ಅಪರಾಧಕ್ಕಾಗಿ 25 ಸಾವಿರ ರೂ. ದಂಡ ಹಾಕುವ ಮೂಲಕ ಶಿಕ್ಷಿಸಲಾಗುತ್ತದೆ ಎಂದು ಲೀಗಲ್ ಮೆಟ್ರೊಲಜಿ ಕಾಯ್ದೆಯ ಸೆಕ್ಷನ್ 36 ಹೇಳುತ್ತದೆ. ಎರಡನೇ ಅಪರಾಧಕ್ಕೆ 50 ಸಾವಿರ ರೂ. ಹಾಗೂ ನಂತರದ ಅಪರಾಧಗಳಿಗೆ 1 ಲಕ್ಷ ರೂ ದಂಡ ಅಥವಾ 1 ವರ್ಷ ಜೈಲು ಶಿಕ್ಷೆ ಅಥವಾ ಎರಡೂ ಶಿಕ್ಷೆ ವಿಧಿಸಲಾಗುತ್ತದೆ.

    ಮಲ್ಟಿಪ್ಲೆಕ್ಸ್ ಹಾಗೂ ವಿಮಾನ ನಿಲ್ದಾಣ ಸೇರಿದಂತೆ ಇನ್ನಿತರ ಸ್ಥಳಗಳಲ್ಲಿ ಪ್ಯಾಕೇಜ್ಡ್ ನೀರಿನ ಬಾಟಲಿ ಹಾಗೂ ತಂಪು ಪಾನೀಯವನ್ನು ನಿಗದಿತ ಬೆಲೆಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಿದ್ರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಕಳೆದ ವರ್ಷ ಅಕ್ಟೋಬರ್ ನಲ್ಲಿ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ರಾಮ್ ವಿಲಾಸ್ ಪಾಸ್ವಾನ್ ಈ ಹಿಂದೆ ಟ್ವೀಟ್ ಮಾಡಿದ್ದರು.

     

  • ಎಸ್ ಆರ್ ಹಿರೇಮಠ್ ಹೇಳಿಕೆಗೆ ಕೆಪಿಜೆಪಿ ಸ್ಥಾಪಕ ಉಪೇಂದ್ರ ತಿರುಗೇಟು!

    ಎಸ್ ಆರ್ ಹಿರೇಮಠ್ ಹೇಳಿಕೆಗೆ ಕೆಪಿಜೆಪಿ ಸ್ಥಾಪಕ ಉಪೇಂದ್ರ ತಿರುಗೇಟು!

    ಬೆಳಗಾವಿ: ನಾನು ನನ್ನ ಅಣ್ಣ ಸೇರಿ ಒಂದು ರೆಸಾರ್ಟ್ ಖರೀದಿ ಮಾಡಿದ್ದೀವಿ. ಇದರ ಹಿಂದುಗಡೆ ನಮ್ಮ ಜಮೀನಿದೆ. ಹಿರೇಮಠ್ ಕಡೆಯವರು ಯಾರೋ ಬಂದು ರೇಸಾರ್ಟ್ ನೋಡ್ಬಿಟ್ಟು ಕೃಷಿ ಭೂಮಿಯಲ್ಲಿ ರೆಸಾರ್ಟ್ ಕಟ್ಟಿದ್ದಾರೆ ಅಂತ ಹೇಳಿದ್ದಾರೆ ಅಂತ ನಟ ಹಾಗೂ ಕೆಪಿಜೆಪಿ ಸ್ಥಾಪಕ ಉಪೇಂದ್ರ ತಿರುಗೇಟು ನೀಡಿದ್ದಾರೆ.

    ನಗರದಲ್ಲಿ ಕೆಪಿಜೆಪಿ ಪಕ್ಷದ ಪ್ರಚಾರಕ್ಕೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೃಷಿ ಭೂಮಿಯಲ್ಲಿ ರೆಸಾರ್ಟ್ ಮಾಡಲು ಸಾಧ್ಯವೇ ಇಲ್ಲ. ಕೃಷಿ ಭೂಮಿಯನ್ನು ಕೃಷಿಗಾಗಿಯೇ ಬಳಸಬೇಕು. ಇಂದಿಗೂ ನಾವು ಅಲ್ಲಿ ವ್ಯವಸಾಯ ಮಾಡ್ತಾ ಇದ್ದೀವಿ. ಬೆಳೆ ಬೆಳೆಯುತ್ತಾ ಇದ್ದೀವಿ. ಒಟ್ಟಿನಲ್ಲಿ ಅವರಿಗೆ ಈ ಗೊಂದಲ ಉಂಟಾಗಲು ಕಾರಣ ಅವರು ರೆಸಾರ್ಟ್ ಮುಂದುಗಡೆ ಬಂದಿದ್ದಾರೆ. ಹೀಗಾಗಿ ಅವರು ಹಿಂದುಗಡೆ ನೋಡಿಲ್ಲ. ಹೀಗಾಗಿ ಮಂದುಗಡೆ ಬಂದು ಈ ಜಮೀನಿನಲ್ಲಿ ಹೊಟೇಲ್ ಮಾಡ್ಕೊಂಡಿದ್ದಾರೆ ಅಂತ ಅವರು ಹೇಳಿದ್ದಾರೆ.

    ನಾವು ಹೊಟೇಲನ್ನು ಕೆಸ್‍ಇಡಿಸಿ (ಕರ್ನಾಟಕ ಸ್ಟೇಟ್ ಇಂಡಸ್ಟ್ರಿಯಲ್ ಡೆವೆಲಪ್ ಮೆಂಟ್ ಕಾರ್ಪೋರೇಶನ್) ಯಿಂದ ತೆಗೆದುಕೊಂಡಿದ್ದೇವೆ. ಅದರ ಸಂಪೂರ್ಣ ದಾಖಲೆಗಳಿವೆ. ಅದನ್ನೆಲ್ಲಾ ನೋಡಿಯೇ ಕೋರ್ಟ್ ನಮ್ಮ ಪರ ತೀರ್ಪು ನೀಡಿದೆ. ಹೀಗಾಗಿ ಕೋರ್ಟ್ ನಿರ್ಧಾರ ತೆಗೆದುಕೊಂಡ ಮೇಲೂ ಒಬ್ಬ ವ್ಯಕ್ತಿ ಅದರ ಬಗ್ಗೆ ಮಾತನಾಡುತ್ತಾರೆ ಅಂದ್ರೆ ನನಗೆ ಅದರ ಬಗ್ಗೆ ಅರ್ಥನೇ ಆಗಲ್ಲ. ಕೋರ್ಟ್ ಗಿಂತಲೂ ಇವರು ದೊಡ್ಡವರಾಗಿಬಿಟ್ಟರಾ ಅಂತ ಅವರು ಹೇಳಿದ್ರು. ಇದನ್ನೂ ಓದಿ: ನಟ, ಕೆಪಿಜೆಪಿ ಸ್ಥಾಪಕ ಉಪೇಂದ್ರಗೆ ಎಸ್.ಆರ್. ಹಿರೇಮಠ ಕಿವಿಮಾತು!

    ಇದೇ ವೇಳೆ ಪಕ್ಷದ ಪರ ಪ್ರಚಾರ ಮಾಡಿದ ಅವರು, ಜನ ಈಗಿರುವ ರಾಜಕೀಯ ವ್ಯವಸ್ಥೆಗೆ ಬೇಸತ್ತು ಹೋಗಿದ್ದಾರೆ. ವಿಷಯಾಧಾರಿತ ರಾಜಕೀಯ ನಡೆಯುತ್ತಿದೆ. ಹೊಸ ರಾಜಕಾರಣಕ್ಕೆ ವೇದಿಕೆ ರೂಪಿಸಿದ್ದೇನೆ. ಸಾಕಷ್ಟು ಜನರು ನನ್ನ ಕೈಜೋಡಿಸುತ್ತಿದ್ದಾರೆ. ಕೇವಲ 20 ರಷ್ಟು ಜನರ ಕೈಯಲ್ಲಿ ಅಧಿಕಾರವಿದೆ. ಶೇ.80 ಜನರು ಸುಮ್ಮನಿದ್ದೇವೆ. ಅಕೌಂಟೆಬಿಲಿಟಿ ನಮಗೆ ಬೇಕಾಗಿದೆ. ಹಿಂದೆ ರಾಜರ ಆಡಳಿತ ಕಾಲವಿತ್ತು. ಈಗ ರಾಜಕಾರಣವಾಗಿದೆ ರಾಜಕೀಯ ವ್ಯವಸ್ಥೆ ಅಂದ್ರು.

    ವಿಚಾರ ಇರೋರು ರಾಜಕಾರಣಕ್ಕೆ ಬರದಂತೆ ಹೆದರಿಸುತ್ತಾರೆ. ನಮ್ಮ ಮೈಂಡ್ ಸೆಟ್ ಹೇಗಾಗಿದೆ ಅಂದ್ರೆ ಹಣವಿದ್ರೆ ಮಾತ್ರ ರಾಜಕಾರಣ ಅಂತಾ ಆಗಿ ಹೋಗಿದೆ. ರಾಜ್ಯ ಮಟ್ಟದ ಪ್ಲಾನಿಂಗ್ ನಮ್ಮ ಪ್ರಣಾಳಿಕೆಯಲ್ಲಿದೆ. ಜನವರಿ ಅಂತ್ಯದವರೆಗೂ ಕೆಪಿಜೆಪಿ ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡುವ ಉದ್ದೇಶ ಇದೆ. ಅರ್ಹತೆ ಇರುವ ಅಭ್ಯರ್ಥಿಗಳನ್ನ ಸಂದರ್ಶನ ಮಾಡಿ ಆಯ್ಕೆ ಮಾಡ್ತಿವಿ ಅಂತ ಅವರು ವಿವರಿಸಿದ್ರು.

    https://www.youtube.com/watch?v=7C5QPHui87Y

     

  • ಮಧ್ಯರಾತ್ರಿ ಧಗಧಗನೆ ಹೊತ್ತಿ ಉರಿದ ಹೊಟೇಲ್, ಕೂಲ್ ಡ್ರಿಂಕ್ಸ್ ಅಂಗಡಿ, ಪಾನ್ ಶಾಪ್

    ಮಧ್ಯರಾತ್ರಿ ಧಗಧಗನೆ ಹೊತ್ತಿ ಉರಿದ ಹೊಟೇಲ್, ಕೂಲ್ ಡ್ರಿಂಕ್ಸ್ ಅಂಗಡಿ, ಪಾನ್ ಶಾಪ್

    ಗದಗ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮೂರು ಅಂಗಡಿಗಳು ಧಗಧಗನೆ ಹೊತ್ತಿ ಉರಿದ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಹೊಳೆ ಆಲೂರ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಆಲೂರ ವೆಂಕರಾವ್ ಸರ್ಕಲ್ ಬಳಿ ಇರುವ ಹೊಟೇಲ್, ಕೂಲ್ ಡ್ರಿಂಕ್ಸ್ ಅಂಗಡಿ ಹಾಗೂ ಪಾನ್ ಶಾಪ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಸ್ಥಳೀಯ ನಿವಾಸಿಯೊಬ್ಬರಿಗೆ ಸೇರಿದ ಈ ಹೊಟೇಲ್‍ ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ನಂತರ ಪಕ್ಕದ ಪವಾರ್ ಎಂಬವರ ಕೋಲ್ ಡ್ರಿಂಕ್ಸ್ ಅಂಗಡಿಗೆ ತಗುಲಿದೆ.

    ಕೂಲ್ ಡ್ರಿಂಕ್ಸ್ ಅಂಗಡಿಯಲ್ಲಿದ್ದ ಮೂರು ಸಿಲಿಂಡರ್ ಗಳಲ್ಲಿ ಒಂದು ಸಿಲಿಂಡರ್ ಸ್ಫೋಟಗೊಂಡಿದೆ. ಇನ್ನೆರಡು ಸಿಲಿಂಡರ್ ಸ್ಫೋಟಗೊಳ್ಳುತ್ತವೆ ಎಂದು ಭಯಗೊಂಡು ಸಾರ್ವಜನಿಕರು ಬೆಂಕಿ ನಂದಿಸಲು ಮುಂದಾಗಲಿಲ್ಲ. ಇದರ ಪರಿಣಾಮ ಅಕ್ಕಪಕ್ಕದ ಅಂಗಡಿಗೂ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಹಾನಿ ಸಂಭವಿಸಿದೆ.

    ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಈ ಕುರಿತು ಗದಗ ಜಿಲ್ಲೆಯ ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಅರಮನೆ ನಗರಿಯಲ್ಲಿ ಪ್ಲಾಸ್ಟಿಕ್ ಸಕ್ಕರೆ ಪತ್ತೆ

    ಅರಮನೆ ನಗರಿಯಲ್ಲಿ ಪ್ಲಾಸ್ಟಿಕ್ ಸಕ್ಕರೆ ಪತ್ತೆ

    ಮೈಸೂರು: ಜನರೇ ಎಚ್ಚರ, ಮೈಸೂರಿನಲ್ಲಿ ಪ್ಲಾಸ್ಟಿಕ್ ಸಕ್ಕರೆ ಸರಬರಾಜಾಗುತ್ತಿದೆ. ಒಂದು ಕ್ಷಣ ಯಾಮಾರಿದರೂ ಪ್ಲಾಸ್ಟಿಕ್ ಸಕ್ಕರೆ ನಿಮ್ಮ ಹೊಟ್ಟೆ ಸೇರುತ್ತದೆ.

    ಮೈಸೂರು ಹೋಟೆಲೊಂದರ ಮಾಲೀಕ ಖರೀದಿಸಿದ್ದ ಸಕ್ಕರೆಯಲ್ಲಿ ಪ್ಲಾಸ್ಟಿಕ್ ಸಕ್ಕರೆ ಪತ್ತೆಯಾಗಿದೆ. ಖಿಲ್ಲೆ ಮೊಹಲ್ಲಾದಲ್ಲಿರುವ ಅನ್ನಪೂರ್ಣೇಶ್ವರಿ ಫುಡ್ ಪಾಯಿಂಟ್ ನ ಮಾಲೀಕ ಪ್ರಭುಸ್ವಾಮಿ ಸಂತೇಪೇಟೆಯ ಅಂಗಡಿಯಲ್ಲಿ ಖರೀದಿಸಿದ್ದ ಸಕ್ಕರೆಯಲ್ಲಿ ಪ್ಲಾಸ್ಟಿಕ್ ಸಕ್ಕರೆ ದೊರೆತಿದೆ.

    ಹೋಟೆಲ್ ನಲ್ಲಿ ಎಂದಿನಂತೆ ಇಂದು ಕೂಡ ಟೀ ತಯಾರಿಸಲು ಪ್ರಭುಸ್ವಾಮಿ ಮುಂದಾದಾಗ ಎಷ್ಟೇ ಕುದಿಸಿದರೂ ಸಕ್ಕರೆ ಕರಗಲಿಲ್ಲ. ಇದನ್ನ ಕಂಡು ಕೂಲಂಕುಷವಾಗಿ ಪರಿಶೀಲಿಸಿದಾಗ ಇದು ಪ್ಲಾಸ್ಟಿಕ್ ಸಕ್ಕರೆ ಎಂಬ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ.

  • ಎಸಿಪಿ ಹಲ್ಲೆ ಪ್ರಕರಣ- ಹೋಟೆಲ್ ಮಾಲೀಕನಿಗೆ ಭೂಗತಪಾತಕಿ ಬೆದರಿಕೆ

    ಎಸಿಪಿ ಹಲ್ಲೆ ಪ್ರಕರಣ- ಹೋಟೆಲ್ ಮಾಲೀಕನಿಗೆ ಭೂಗತಪಾತಕಿ ಬೆದರಿಕೆ

    ಬೆಂಗಳೂರು: ಹೋಟೆಲ್ ಮಾಲೀಕನ ಮೇಲೆ ಎಸಿಪಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಸ್ಟ್ ಸಿಕ್ಕಿದೆ.

    ಹಲ್ಲೆಗೆ ಒಳಗಾಗಿದ್ದ ಹೋಟೆಲ್ ಮಾಲೀಕ ರಾಜೀವ್ ಶೆಟ್ಟಿಗೆ ಭೂಗತ ಪಾತಕಿಯ ಹೆಸರಲ್ಲಿ ಧಮ್ಕಿ ಬಂದಿದೆ. ಅಂಡರ್‍ವಲ್ರ್ಡ್ ಡಾನ್ ರವಿ ಪೂಜಾರಿ ಹೆಸರಲ್ಲಿ ಶೆಟ್ಟಿ ಲಂಚ್ ಹೋಮ್ ಮಾಲೀಕನಿಗೆ ಬೆದರಿಕೆ ಕರೆ ಬಂದಿದೆ.

    ನಾನು ಆಸ್ಟ್ರೇಲಿಯಾದಿಂದ ರವಿ ಪೂಜಾರಿ ಮಾತನಾಡ್ತಾ ಇದ್ದೀನಿ. ಇನ್ನು ಅರ್ಧ ಗಂಟೆಯಲ್ಲಿ ಹೋಟೆಲ್ ಬಾಗಿಲು ಬಂದ್ ಮಾಡ್ಬೇಕು. ಇಲ್ದೇ ಇದ್ರೆ ನೀನು ಕೊಲೆಯಾಗಿ ಹೋಗ್ತೀಯಾ. ನಾನ್ಯಾರು ಅಂತ ಗೊತ್ತು ಅಲ್ವಾ. ಗೋಲಿ ಹೊಡಿಬೇಕಾ ನಿಂಗೆ ಎಂದು ಕರೆ ಮಾಡಿ ಧಮ್ಕಿ ಹಾಕಿದ್ದಾನೆ ಎನ್ನಲಾಗಿದೆ.

    ಹಲ್ಲೆ ನಡೆಸಿದ ಎಸಿಪಿ ಮಂಜುನಾಥ್ ಬಾಬು ವಿರುದ್ಧ ದೂರು ನೀಡಿದ ಬೆನ್ನಲ್ಲೇ ರವಿ ಪೂಜಾರಿಯಿಂದ ಬೆದರಿಕೆ ಬಂದಿದೆ. ಎಸಿಪಿ ಮಂಜುನಾಥ್ ಬಾಬುಗೂ ರವಿ ಪೂಜಾರಿಗೂ ಲಿಂಕ್ ಏನಾದ್ರು ಇದ್ಯಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

    ಏನಿದು ಪ್ರಕರಣ?: ಇದೇ ತಿಂಗಳ 9ರಂದು ಆರ್.ಟಿ.ನಗರ ಪೊಲೀಸ್ ಠಾಣೆಯ ಎಸಿಪಿ ಮಂಜುನಾಥ ಬಾಬು, ಆರ್.ಟಿ.ನಗರದ ದಿಣ್ಣೂರ ರಸ್ತೆಯಲ್ಲಿರುವ ಶೆಟ್ಟಿ ಲಂಚ್ ಹೋಂಗೆ ನುಗ್ಗಿ ಮಾಲೀಕ ರಾಜೀವ್ ಶೆಟ್ಟಿ ಮೇಲೆ ಹಲ್ಲೆ ಮಾಡಿದ್ದರು. ಶೆಟ್ಟಿ ಲಂಚ್ ಹೋಂ ತಡರಾತ್ರಿವರೆಗೆ (ರಾತ್ರಿ 11-55ರವರೆಗೆ) ತರೆದಿದ್ದ ಮಾಲೀಕ ರಾಜೀವ್ ಶೆಟ್ಟಿ ಮೇಲೆ ಎಸಿಪಿ ಮಂಜುನಾಥ್ ಲಾಟಿಯಿಂದ ಮನಬಂದತೆ ಥಳಿಸಿದ್ದರು. ಪೊಲೀಸರ ದೌಜನ್ಯ ಕಂಡು ಲಂಚ್ ಹೋಂನಲ್ಲಿದ್ದ ಗ್ರಾಹಕರು ಭಯಭೀತಗೊಂಡು ಓಡಿ ಹೋಗಿದ್ದರು. ಆದರೂ ಬಿಡದೆ ಪೊಲೀಸರು ಲೈಟ್ ಆಫ್ ಮಾಡಿ ಹಿಗ್ಗಾ-ಮುಗ್ಗಾ ಥಳಿಸಿದರೆಂದು ಲಂಚ್ ಹೋಂ ಮಾಲೀಕ ರಾಜೀವ ಶೆಟ್ಟಿ ಆರೋಪಿಸಿದ್ದರು. ಎಸಿಪಿ ಹಲ್ಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ಬಗ್ಗೆ ಪಬ್ಲಿಕ್ ಟಿವಿ ಮೊದಲು ಸುದ್ದಿ ಪ್ರಸಾರ ಮಾಡಿತ್ತು. ವರದಿ ಬಳಿಕ ಎಸಿಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿಸಿಪಿ ಚೇತನ್ ಸಿಂಗ್ ರಾಥೋಡ್ ಪೊಲೀಸ್ ಆಯುಕ್ತರಿಗೆ ಶಿಫಾರಸ್ಸು ಮಾಡಿದ್ದಾರೆ.

  • ಲೈಟ್ ಆಫ್ ಮಾಡಿ ಹೋಟೆಲ್ ಮಾಲೀಕನಿಗೆ ಮನಬಂದಂತೆ ಥಳಿಸಿದ ಎಸಿಪಿ

    ಲೈಟ್ ಆಫ್ ಮಾಡಿ ಹೋಟೆಲ್ ಮಾಲೀಕನಿಗೆ ಮನಬಂದಂತೆ ಥಳಿಸಿದ ಎಸಿಪಿ

    ಬೆಂಗಳೂರು: ಕಾನೂನು ಸುವವ್ಯಸ್ಥೆ ಕಾಪಾಡುವ ಭರದಲ್ಲಿ ಬೆಂಗಳೂರಿನ ಪೋಲಿಸರು ಅಮಾನವೀಯತೆ ಮರೆದ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ.

    ಈ ತಿಂಗಳ 9ರಂದು ಆರ್.ಟಿ.ನಗರ ಪೊಲೀಸ್ ಠಾಣೆಯ ಎಸಿಪಿ ಮಂಜುನಾಥ ಬಾಬು, ಹೋಟೆಲ್ ಮಾಲೀಕರೊಬ್ಬರ ಮೇಲೆ ಮನಬಂದಂತೆ ಥಳಿಸಿದ್ದಾರೆ. ಆರ್.ಟಿ.ನಗರದ ದಿಣ್ಣೂರ ರಸ್ತೆಯಲ್ಲಿರುವ ಶೆಟ್ಟಿ ಲಂಚ್ ಹೋಂನಲ್ಲಿ ಈ ಘಟನೆ ನಡೆದಿದೆ.

    ಶೆಟ್ಟಿ ಲಂಚ್ ಹೋಂ ತಡರಾತ್ರಿವರೆಗೆ (ರಾತ್ರಿ 11-55ರವರೆಗೆ) ತರೆದಿದ್ದ ಮಾಲೀಕ ರಾಜೀವ್ ಶೆಟ್ಟಿ ಮೇಲೆ ಎಸಿಪಿ ಮಂಜುನಾಥ್ ಲಾಟಿಯಿಂದ ಮನಬಂದತೆ ಥಳಿಸಿದ್ದಾರೆ. ಪೊಲೀಸರ ದೌಜನ್ಯ ಕಂಡು ಲಂಚ್ ಹೋಂನಲ್ಲಿದ್ದ ಗ್ರಾಹಕರು ಭಯಭೀತಗೊಂಡು ಓಡಿ ಹೋಗಿದ್ದಾರೆ.

    ಆದರೂ ಬಿಡದೆ ಪೊಲೀಸರು ಲೈಟ್ ಆಫ್ ಮಾಡಿ ಹಿಗ್ಗಾ-ಮುಗ್ಗಾ ಥಳಿಸಿದರೆಂದು ಲಂಚ್ ಹೋಂ ಮಾಲೀಕ ರಾಜೀವ ಶೆಟ್ಟಿ ಆರೋಪಿಸಿದ್ದಾರೆ.

  • ದಾವೂದ್ ಇಬ್ರಾಹಿಂ ಒಡೆತನದಲ್ಲಿದ್ದ ಹೋಟೆಲ್ ಇನ್ನು ಸಾರ್ವಜನಿಕ ಶೌಚಾಲಯ..!

    ದಾವೂದ್ ಇಬ್ರಾಹಿಂ ಒಡೆತನದಲ್ಲಿದ್ದ ಹೋಟೆಲ್ ಇನ್ನು ಸಾರ್ವಜನಿಕ ಶೌಚಾಲಯ..!

    ಮುಂಬೈ: ಭೂಗತ ಪಾತಕಿ ಹಾಗೂ ಮುಂಬೈ ಸ್ಫೋಟದ ರುವಾರಿ ದಾವೂದ್ ಇಬ್ರಾಹಿಂ ಒಡೆತನದಲ್ಲಿದ್ದ ಮುಂಬೈನ ಹೋಟೆಲ್‍ವೊಂದು ಕೆಲವೇ ದಿನಗಳಲ್ಲಿ ಸಾರ್ವಜನಿಕ ಶೌಚಾಲಯವಾಗಿ ಪರಿವರ್ತನೆಯಾಗಲಿದೆ.

    ಈ ಹಿಂದೆ ಹಿಂದೂ ಮಹಾ ಸಭಾ ದಾವೂದ್ ಇಬ್ರಾಹಿಂ ಬಳಸುತ್ತಿದ್ದ ಕಾರನ್ನು ಹರಾಜಿನಲ್ಲಿ ಖರೀದಿಸಿ ನಂತರ ಅದನ್ನು ಸುಟ್ಟು ಹಾಕಿತ್ತು. ಈ ಬಾರಿ ನಡೆಯುವ ಹರಾಜಿನಲ್ಲಿ ದಾವೂದ್ ಒಡೆತನದಲ್ಲಿದ್ದ ಹೋಟೆಲ್ ನ್ನು ಖರೀದಿಸಿಲು ಹಿಂದೂ ಮಹಾಸಭಾ ನಿರ್ಧರಿಸಿದೆ. ನಂತರ ಈ ಕಟ್ಟಡವನ್ನು ಸಾರ್ವಜನಿಕ ಶೌಚಾಲಯವಾಗಿ ಪರಿವರ್ತಿಸಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

    ಭಾರತದಲ್ಲಿ ದಾವೂದ್ ಇಬ್ರಾಹಿಂ ನೆಲೆಸಿದ್ದ ಸಂದರ್ಭದಲ್ಲಿ ಬಳಕೆ ಮಾಡಲಾಗಿದ್ದ ಹಲವು ಬೆಲೆಬಾಳುವ ಸ್ವತ್ತುಗಳನ್ನು ಕೇಂದ್ರ ಸರ್ಕಾರ ವಶಕ್ಕೆ ಪಡೆದಿತ್ತು. ಈ ಸ್ವತ್ತುಗಳನ್ನು ನವೆಂಬರ್ 14 ರಂದು ಹರಾಜು ನಡೆಸಲು ಸರ್ಕಾರ ನಿರ್ಧರಿಸಿದೆ. ಇದರಲ್ಲಿ ಮುಂಬೈನ ಪ್ರಮುಖ ಸ್ಥಳ `ದಿಲ್ಲಿ ಝೈಕಾ’ ಎಂದು ಪ್ರಸಿದ್ಧಿ ಪಡೆದಿರುವ `ಹೋಟೆಲ್ ರೌನಕ್ ಅಫ್ರೋಜ್’ ಕಟ್ಟಡವನ್ನು ಹರಾಜು ಮಾಡಲಾಗುತ್ತಿದೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಖಿಲ ಭಾರತ ಹಿಂದೂ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಸ್ವಾಮಿ ಚಕ್ರಪಾಣಿಯವರು, ದಾವೂದ್ ಒಡೆತನದಲ್ಲಿದ್ದ ಕಟ್ಟಡವನ್ನು ಸಾರ್ವಜನಿಕ ಶೌಚಾಲವಾಗಿ ಪರಿವರ್ತನೆ ಮಾಡಿ ಸಾರ್ವಜನಿಕರಿಗೆ ಇದನ್ನು ಬಳಸಲು ಉಚಿತವಾಗಿ ನೀಡಲಾಗುತ್ತದೆ. ಈ ಮೂಲಕ ಭಾರತದಲ್ಲಿ ಭಯೋತ್ಪಾದನೆ ನಡೆಸಿದರೆ ಯಾವ ಸ್ಥಿತಿ ಬರುತ್ತದೆ ಎಂಬ ಸಂದೇಶವನ್ನು ನೀಡಲಾಗುತ್ತದೆ ಎಂದು ತಿಳಿಸಿದರು.

    ಅಲ್ಲದೇ ಕಟ್ಟಡವನ್ನು ಸಾರ್ವಜನಿಕ ಶೌಚಾಲಯವಾಗಿ ಪರವರ್ತನೆ ಮಾಡಿದ ಬಳಿಕ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಅವರಿಂದ ಇದನ್ನು ಉದ್ಘಾಟನೆ ಮಾಡಿಸಲಾಗುತ್ತದೆ ಎಂದು ಹೇಳಿದರು.

     

  • ಹೋಟೆಲ್‍ನಲ್ಲಿ ಸೀಮೆಎಣ್ಣೆ ಸ್ಟೋವ್ ಸ್ಫೋಟ- 4 ಬಾಲಕರ ಸಾವು

    ಹೋಟೆಲ್‍ನಲ್ಲಿ ಸೀಮೆಎಣ್ಣೆ ಸ್ಟೋವ್ ಸ್ಫೋಟ- 4 ಬಾಲಕರ ಸಾವು

    ಕಲಬುರಗಿ: ಹೋಟೆಲ್‍ನಲ್ಲಿದ್ದ ಸೀಮೆಎಣ್ಣೆ ಸ್ಟೋವ್ ಸ್ಫೋಟಗೊಂಡು ನಾಲ್ಕು ಬಾಲಕರು ಸಾವನ್ನಪ್ಪಿರುವ ದಾರುಣ ಘಟನೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಫತ್ತುನಾಯಕ ತಾಂಡಾದಲ್ಲಿ ನಡೆದಿದೆ.

    ಪ್ರೀತಮ್(03), ರತಿಕ್(03) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ಸಾಗಿಸುವಾಗ ಇನ್ನಿಬ್ಬರು ಬಾಲಕರಾದ ಖುತೀಶ್ ಮತ್ತು ಅಕ್ಷತಾ ಸಾವನ್ನಪ್ಪಿದ್ದಾರೆ. ಇನ್ನು ಘಟನೆಯಲ್ಲಿ ಹೋಟೆಲ್ ಮಾಲಿಕ ವೀರಶೆಟ್ಟಿ ಅವರಿಗೆ ಗಂಭೀರ ಗಾಯವಾಗಿದ್ದು, ಚಿಕಿತ್ಸೆಗಾಗಿ ಬೀದರ್ ಜಿಲ್ಲೆಯ ಹುಮನಾಬಾದ ತಾಲೂಕಿನ ಮನ್ನಾಖೇಳಿ ಪಿಎಚ್‍ಸಿಯಲ್ಲಿ ದಾಖಲಿಸಲಾಗಿದೆ.

     

    ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕಲಬುರಗಿಯ ಜಿಲ್ಲಾಧಿಕಾರಿ ಎನ್. ವೆಂಕಟೇಶಕುಮಾರ್ ತಾಂಡಾಕ್ಕೆ ಭೇಟಿ ನೀಡಿದ್ದಾರೆ. ಈ ಕುರಿತು ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

  • ಹುಡ್ಗೀರಿಗೆ ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಹೊಟೇಲ್ ಮೇಲೆ ದಾಳಿ ನಡೆಸಿದ ಮಂಡ್ಯದ ವಿದ್ಯಾರ್ಥಿಗಳು!

    ಹುಡ್ಗೀರಿಗೆ ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಹೊಟೇಲ್ ಮೇಲೆ ದಾಳಿ ನಡೆಸಿದ ಮಂಡ್ಯದ ವಿದ್ಯಾರ್ಥಿಗಳು!

    ಕಾರವಾರ: ಹುಡುಗಿಯರಿಗೆ ಚುಡಾಯಿಸಿದ್ದನ್ನು ಹೊಟೇಲ್ ಸಿಬ್ಬಂದಿ ಪ್ರಶ್ನಿಸಿ ಕಾರಣಕ್ಕೆ ಪ್ರವಾಸಕ್ಕೆ ಬಂದ ವಿದ್ಯಾರ್ಥಿಗಳ ಗುಂಪೊಂದು ಹೊಟೇಲ್ ಗ್ಲಾಸ್ ಒಡೆದು ದಾಂಧಲೆ ನೆಡೆಸಿದ ಘಟನೆ ಜಿಲ್ಲೆಯಲ್ಲಿ ತಡರಾತ್ರಿ ನಡೆದಿದೆ.

    ನಗರದ ರವೀಂದ್ರನಾಥ್ ಕಡಲತೀರದಲ್ಲಿರುವ ಗಣಪತಿ ಉಳ್ವೇಕರ್ ಮಾಲೀಕತ್ವದ ಡ್ರೈವ್ ಇನ್ ಹೊಟೇಲ್ ಮೇಲೆ ಪ್ರವಾಸಕ್ಕೆ ಬಂದ ವಿದ್ಯಾರ್ಥಿಗಳ ಗುಂಪು ಈ ದಾಂಧಲೆ ನಡೆಸಿದೆ.

    ಮಂಡ್ಯ ಜಿಲ್ಲೆಯ ಬಿಜಿಎಸ್ ಕಾಲೇಜು ವಿದ್ಯಾರ್ಥಿಗಳ ಗುಂಪು ಶನಿವಾರ ರಾತ್ರಿ ಕಾರವಾರಕ್ಕೆ ಪ್ರವಾಸಕ್ಕೆಂದು ಬಂದಿದ್ದರು. ಹೀಗಾಗಿ ರಾತ್ರಿ ಊಟಕ್ಕೆಂದು ಡ್ರೈವ್ ಇನ್ ಹೊಟೇಲ್ ಬಳಿ ನಿಂತಿದ್ದರು. ಇದೇ ಸಂದರ್ಭದಲ್ಲಿ ಅಲ್ಲಿದ್ದ ಸ್ಥಳೀಯ ಹುಡುಗಿಯರನ್ನು ಹುಡಗರ ಗುಂಪು ಚುಡಾಯಿಸಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಹೊಟೇಲ್ ಸಿಬ್ಬಂದಿ ಹುಡುಗರನ್ನು ಪ್ರಶ್ನಿಸಿಸಿದ್ದಾರೆ. ಮೊದಲೇ ಕುಡಿದ ಮತ್ತಿನಲ್ಲಿದ್ದ ಪ್ರವಾಸಿ ವಿದ್ಯಾರ್ಥಿಗಳ ಗುಂಪು ಹೊಟೇಲ್ ಗ್ಲಾಸ್ ಒಡೆದಿದ್ದಾರೆ.

    ಈ ಸಂಬಂಧ ಕಾರವಾರ ನಗರ ಪೂಲೀಸರಿಗೆ ಮಾಹಿತಿ ನೀಡಿದ್ದು, 54 ಪ್ರವಾಸಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ತನಿಖೆಗೆ ಕೈಗೊಂಡಿದ್ದಾರೆ.