Tag: housewarming ceremony

  • ಏ.27ರಂದು ಪ್ರವೀಣ್ ನೆಟ್ಟಾರು ಮನೆ ಗೃಹಪ್ರವೇಶ- ಕೊಟ್ಟ ಮಾತು ಉಳಿಸಿಕೊಂಡ ಬಿಜೆಪಿಗೆ ಪ್ಲಸ್ ಆಗುತ್ತಾ?

    ಏ.27ರಂದು ಪ್ರವೀಣ್ ನೆಟ್ಟಾರು ಮನೆ ಗೃಹಪ್ರವೇಶ- ಕೊಟ್ಟ ಮಾತು ಉಳಿಸಿಕೊಂಡ ಬಿಜೆಪಿಗೆ ಪ್ಲಸ್ ಆಗುತ್ತಾ?

    ಮಂಗಳೂರು: ಚುನಾವಣೆ ಹೊತ್ತಲ್ಲಿ ಕರಾವಳಿಯಲ್ಲಿ ಬಿಜೆಪಿ (BJP) ಯಿಂದ ಮತ್ತೊಂದು ಹೊಸ ಅಸ್ತ್ರ ಪ್ರಯೋಗವಾಗಿದೆ. ಎಲೆಕ್ಷನ್ ಟೈಮಲ್ಲೇ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು (Praveen Kumar Nettaru) ಹೊಸ ಮನೆ ಗೃಹ ಪ್ರವೇಶಕ್ಕೆ ಮುಹೂರ್ತ ನಿಗದಿಯಾಗಿದೆ. ಚುನಾವಣೆ ಹೊತ್ತಲ್ಲಿ ಇದು ಬಿಜೆಪಿಗೆ ಪ್ಲಸ್ ಆಗಲಿದೆಯಾ ಎಂಬ ಪ್ರಶ್ನೆ ಮೂಡಿದೆ.

    ರಾಜ್ಯ ಬಿಜೆಪಿ ಮತ್ತು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ನೇತೃತ್ವದಲ್ಲಿ 60 ಲಕ್ಷ ವೆಚ್ಚದಲ್ಲಿ ಮನೆ ನಿರ್ಮಾಣವಾಗುತ್ತಿದ್ದು, ನಿರ್ಮಾಣ ಕಾರ್ಯ ಬಹುತೇಕ ಪೂರ್ಣಗೊಂಡಿದೆ. 2,700 ಚದರ ಅಡಿಯಲ್ಲಿ ಮುಗ್ರೋಡಿ ಕನ್ಸ್ಟ್ರಕ್ಷನ್ ಮನೆ ನಿರ್ಮಾಣ ಮಾಡುತ್ತಿದೆ. ಇದನ್ನೂ ಓದಿ: SSLC ಪರೀಕ್ಷಾ ಕೇಂದ್ರದಲ್ಲಿ ನಕಲು – ಮುಖ್ಯೋಪಾಧ್ಯಾಯ ಸೇರಿ 15 ಸಿಬ್ಬಂದಿ ಅಮಾನತು

    2022ರ ನ. 2ರಂದು ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ (Bellare) ಯ ನೆಟ್ಟಾರುವಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರು ಮನೆ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಿದ್ದರು. ಸದ್ಯ ಮನೆ ನಿರ್ಮಾಣ ಕಾರ್ಯ ವೇಗವಾಗಿ ಪೂರ್ತಿಗೊಂಡು ಏ.27 ರಂದು ಗೃಹಪ್ರವೇಶ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಮೂಲಕ ಹತ್ಯೆಯಾದ ಕಾರ್ಯಕರ್ತನ ಕುಟುಂಬದ ಪರ ನಿಂತಿದ್ದೇವೆ ಎಂಬ ಸಂದೇಶವನ್ನು ಬಿಜೆಪಿ ರವಾನಿಸಿದೆ. ಇತ್ತ ಪ್ರವೀಣ್ ಪತ್ನಿಗೆ ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸರ್ಕಾರಿ ಉದ್ಯೋಗ ನೀಡಲಾಗಿದೆ.

    2022ರ ಜುಲೈ 26 ರಂದು ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ನಡೆದಿತ್ತು. ಪ್ರವೀಣ್ ಹತ್ಯೆ ಬಳಿಕ ಬಿಜೆಪಿ ನಾಯಕರು ತೀವ್ರ ಮುಜುಗರಕ್ಕೆ ಈಡಾಗಿದ್ದರು. ಹತ್ಯೆ ವೇಳೆ ಡ್ಯಾಮೇಜ್ ಆದ್ರೂ ಕುಟುಂಬದ ಪರ ನಿಂತು ಬಿಜೆಪಿ ಡ್ಯಾಮೇಜ್ ಸರಿಪಡಿಸಿಕೊಂಡಿದೆ.

  • ಜನ್ಮದಿನದಂದೇ ಅದೃಷ್ಟದ ಮನೆಗೆ ಬಿಎಸ್‍ವೈ ಎಂಟ್ರಿ

    ಜನ್ಮದಿನದಂದೇ ಅದೃಷ್ಟದ ಮನೆಗೆ ಬಿಎಸ್‍ವೈ ಎಂಟ್ರಿ

    -ಕಾವೇರಿಯಲ್ಲಿ ಸಿಎಂ ಗೃಹ ಪ್ರವೇಶ ಪೂಜೆ

    ಬೆಂಗಳೂರು: ಸಿಎಂ ಯಡಿಯೂರಪ್ಪ ಅವರು ತಮ್ಮ 78ನೇ ಹುಟ್ಟುಹಬ್ಬದಂದೇ ಅದೃಷ್ಟದ ಮನೆಗೆ ಕಾಲಿಡುತ್ತಿದ್ದಾರೆ. ಸರ್ಕಾರಿ ಬಂಗಲೆ ತಮ್ಮ ಅದೃಷ್ಟದ ಕಾವೇರಿ ನಿವಾಸಕ್ಕೆ ಯಡಿಯೂರಪ್ಪ ಅವರು ಪೂಜೆ ಮಾಡಿದ್ದಾರೆ.

    ಯಡಿಯೂರಪ್ಪ ಅವರು ಇಂದು ಗೃಹಪ್ರವೇಶ ಪೂಜೆ ಮಾಡಿ ಕೆಲ ದಿನಗಳಲ್ಲಿ ಕಾವೇರಿ ನಿವಾಸಕ್ಕೆ ಶಿಫ್ಟ್ ಆಗಲಿದ್ದಾರೆ. ಇಂದು ಮುಂಜಾನೆಯೇ ಬಿಎಸ್‍ವೈ ಹಾಗೂ ಅವರ ಕುಟುಂಬಸ್ಥರು ಗೃಹ ಪ್ರವೇಶ ಪೂಜೆ ಮಾಡಿದ್ದಾರೆ. ಬಿಜೆಪಿ ಸರ್ಕಾರ ಬಂದರು ಕಾವೇರಿ ನಿವಾಸದಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ವಾಸವಿದ್ದರು. ಸಿದ್ದರಾಮಯ್ಯರ ಮನೆ ಖಾಲಿ ಮಾಡಿದ್ದು, ಇಂದು ಬಿಎಸ್ ವೈ ಕಾವೇರಿಗೆ ಎಂಟ್ರಿ ಕೊಟ್ಟಿದ್ದಾರೆ. ಲಕ್ಕಿ ಮನೆ ಎಂದು ಬಿಎಸ್‍ವೈ ಖುಷಿಖುಷಿಯಾಗಿ ಗೃಹ ಪ್ರವೇಶ ಪೂಜೆ ಮಾಡಿದ್ದಾರೆ.

    ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಇಂದು ಸಂಜೆ ಅರಮನೆ ಮೈದಾನದ ವೈಟ್‍ಪೆಟಲ್ಸ್ ಸಭಾಂಗಣದಲ್ಲಿ ಸಂಜೆ ಸಿಎಂಗೆ ಅಭಿನಂದನಾ ಸಮಾರಂಭ ನಡೆಯಲಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ. ಇನ್ನು ಯಾರೂ ಕೂಡ ಹಾರ-ತುರಾಯಿ, ಕಾಣಿಕೆಗಳನ್ನು ತರಬಾರದು ಎಂದು ಆಪ್ತೇಷ್ಠರಿಗೆ ಟ್ವಿಟರ್ ಮೂಲಕ ಸಿಎಂ ಮನವಿ ಮಾಡಿ, ನಿಮ್ಮ ಪ್ರೀತಿ ಸದಾ ಹೀಗೆಯೇ ಇರಲಿ ಅಭಿಮಾನಿಗಳಿಗೆ ಹೇಳಿದ್ದರು.

  • ನನ್ನ ಮನೆಯಲ್ಲ ಇದು ಬಿಜೆಪಿ ಕಾರ್ಯಕರ್ತರ ಮನೆ- ವರುಣಾದಲ್ಲಿ ಬಿಎಸ್‍ವೈ ಪುತ್ರ ವಿಜಯೇಂದ್ರ ಗೃಹ ಪ್ರವೇಶ

    ನನ್ನ ಮನೆಯಲ್ಲ ಇದು ಬಿಜೆಪಿ ಕಾರ್ಯಕರ್ತರ ಮನೆ- ವರುಣಾದಲ್ಲಿ ಬಿಎಸ್‍ವೈ ಪುತ್ರ ವಿಜಯೇಂದ್ರ ಗೃಹ ಪ್ರವೇಶ

    ಮೈಸೂರು: ವರುಣಾ ಕ್ಷೇತ್ರದಿಂದ ಬಿಜೆಪಿಯ ಸಂಭಾವ್ಯ ಅಭ್ಯರ್ಥಿ ಬಿಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ತಾಲೂಕಿನ ವರುಣಾ ಗ್ರಾಮದಲ್ಲಿ ವಾಸಕ್ಕಾಗಿ ಪಡೆದಿರುವ ಮನೆಯ ಗೃಹಪ್ರವೇಶ ಇಂದು ನೆರವೇರಿತು.

    ಕುಟುಂಬ ಸಮೇತರಾಗಿ ವಿಜಯೇಂದ್ರ ಹೋಮ ಹವನ ನಡೆಸಿ ಗೃಹಪ್ರವೇಶ ಮಾಡಿದರು. ಹೋಮಕುಂಡ ಪೂಜೆಯಲ್ಲಿ ವಿಜಯೇಂದ್ರ ಮತ್ತು ಅವರ ಪತ್ನಿ ಪ್ರೇಮ ಭಾಗಿಯಾಗಿದ್ದರು. ಗಣಹೋಮ, ವಿಜಯೀ ಹೋಮಗಳನ್ನ ನೆರವೇರಿಸಿ, ಕುಲದೇವ ಯಡಿಯೂರು ಸಿದ್ದಲಿಂಗಶ್ವೇರ, ಉಮಾಮಹೇಶ್ವರಿ, ಕ್ಷೇತ್ರದ ಅಧಿದೇವ ಬಸವೇಶ್ವರರಿಗೂ ಪೂಜೆ ಸಲ್ಲಿಸಿದರು. ತಾಯಿ ಮೈತ್ರಿದೇವಿ ಭಾವಚಿತ್ರವಿಟ್ಟು ಮಾತೃಪೂಜೆ ನೆರವೇರಿಸಿದರು.

    ಗೃಹಪ್ರವೇಶದಲ್ಲಿ ಬಿಜೆಪಿ ಮುಖಂಡರು, ನೂರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು. ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಬಿವೈ ವಿಜಯೇಂದ್ರ ಅವರು, ಇದು ನನ್ನ ಮನೆಯಲ್ಲ ಬಿಜೆಪಿ ಕಾರ್ಯಕರ್ತರ ಮನೆ. ಚುನಾವಣೆವರೆಗೂ ಇಲ್ಲಿಗೆ ಬರುತ್ತೇನೆ. ಚುನಾವಣೆ ಮುಗಿದ ಮೇಲೂ ಇಲ್ಲೆ ಇರುತ್ತೇನೆ ಎಂದರು.

    ತಮ್ಮ ಮನೆಯ ಬಾಗಿಲು ಸದಾ ಕಾಲ ಜನರ ಸೇವೆಗೆ ಸದಾ ಬಾಗಿಲು ತೆರೆದಿರುತ್ತೆ. ಯಾರು ಬೇಕಾದರು ಬರಬಹುದು ಹೋಗಬಹುದು. ದೈವಕೃಪೆ ಬೇಕು ಎನ್ನುವ ಕಾರಣಕ್ಕೆ ಕುಟುಂಬ ಸಮೇತರಾಗಿ ಪೂಜೆ ಸಲ್ಲಿಸಿದ್ದೇನೆ. ವಲಸಿಗ ಅನ್ನುವ ಆರೋಪ ಕಳೆದು ಕೊಳ್ಳಲು ಅಥವಾ ಇತರರ ತೃಪ್ತಿಗೆ ನಾನು ಇಲ್ಲಿ ಮನೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು. ಮುಂದೆ ವರುಣಾ ಕ್ಷೇತ್ರದ ಪಕ್ಷದ ಕಚೇರಿಯೂ ಇದೆ ಆಗಲಿದೆ. ಸಿದ್ದರಾಮಯ್ಯನವರು ಇಲ್ಲಿನ ವಾತವರಣ ನೋಡಿಯೇ ಬದಾಮಿಗೆ ಹೋಗಿದ್ದಾರೆ ಎಂದು ಹೇಳಿದರು.